ಒಟ್ಟು 4285 ಕಡೆಗಳಲ್ಲಿ , 121 ದಾಸರು , 3030 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ ಪ್ರಾಣನಾಯಕನ ತಿಳಿವುದೊಂದೆ ಜ್ಞಾನಾಭ್ಯಾಸ ಮಾಡಿ ಧ್ರುವ ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ ನೆರೆ ಇಲ್ಲದೆ ಸಾಧುಸಜ್ಜನರು ಸರ್ವಬಳಗವ್ಯಾಕೆ ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ಯಾಕೆ 1 ಪ್ರಾಣವಿಲ್ಲದ ಸುಂದರವಾದ ಶರೀರ್ಯಾಕೆ ಕಾಲ ಬದಕುವುವದ್ಯಾಕೆ ಸ್ವಾನುಭವದ ಸುಖ ನೆಲೆಯುಗೊಳ್ಳದೆ ಒಣ ಡಂಭವ್ಯಾಕೆ ತಾನಾಗಿಹ್ಯ ವಸ್ತು ದೊರಕಿಲ್ಲದೆ ನಾ ನೀನೆಂಬುದ್ಯಾಕೆ 2 ಶ್ರೀ ಹರಿಮಹಿಮೆಯ ಸೋಹ್ಯ ತಿಳಿಯದೆ ದೇಹ್ಯವ್ಯಾಕೆ ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಾಣಿ ರಂಗಯ್ಯನ ಕಾಣದೆ ನಿಲ್ಲದು ಮನ ವಾಣಿ ರಮಣನ ಪಿತನ ವೇಣದಿ ಕರೆತಾರಮ್ಮ ಪ. ಜರಿಯ ಸುತನು ತಾನು ಜಗಳಕೆ ಬಾಹೋನೆಂದು ಕರೆಸಿದ ವಿಶ್ವಕರ್ಮನ ಕರೆಸಿದ ವಿಶ್ವಕರ್ಮನ ದ್ವಾರಕಾವಿಪುರನಿರ್ಮಿಸೆಂದ ಕ್ಷಣದಾಗೆ ಜಲದೊಳು1 ತಳಿರು ತೋರಣನಿವಹ ಮೇರುವಿಗೆ ಪೊನ್ನ ಕಳಸ ಮೇರುವಿಗೆ ಪೊನ್ನ ಕಳಸ ಕನ್ನಡಿ ಮನೋಹರವಾಗಿದ್ದು ಸಟಿಯಿಲ್ಲ2 ದ್ವಾರಕಾಪುರದ ಶೃಂಗಾರ ವರ್ಣಿಸಲು ಮೂರು ಕಣ್ಣವಗೆ ವಶವಲ್ಲಮೂರು ಕಣ್ಣವಗೆ ವಶವಲ್ಲ ನಾಲ್ಕು ಮುಖದವಗೆ ಬಲುಮಿಗಿಲು3 ಹದಿನಾರು ಸಾವಿರ ಚದುರೆಯರ ಮಂದಿರ ಮದನನಯ್ಯನ ಮನೆಮಧ್ಯಮದನನಯ್ಯನ ಮನೆಮಧ್ಯ ದ್ವಾರಕೆಅದ್ಬುತವಾಗಿ ಬೆಳಗಿದೆ 4 ಶಿಶುಪಾಲ ದಂತವಕ್ತ್ರ ಮೊದಲಾದ ಮಹಾಅಸುರರನ್ನೆಲ್ಲ ಅಳುಹಿದ ಅಸುರರನ್ನೆಲ್ಲ ಅಳಿದು ದ್ವಾರಕೆಯಲ್ಲಿನಸು ನಗುತಿದ್ದ ನರಹರಿ 5 ಸತ್ಯದಿ ರುಕ್ಮಿಣಿ ಸತ್ಯಭಾಮಾದೇವಿ ವಾರಿಜ ಮುಖಿ ಷಣ್ಮಹಿಷೇರಸಹಿತಾಗಿಷಣ್ಮಹಿಷೇರ ಸಹಿತಾಗಿಕಾರುಣ್ಯಸಿಂಧು ರಾಮೇಶ ಕುಳಿತಿದ್ದ 6 ಶ್ರೀ ರಮಾರಮಣನಾದ ಶ್ರೀ ಕೃಷ್ಣನ ಅರಮನೆಗೆಸುಭಧ್ರೆ ಮುಯ್ಯ ತರುತಾಳೆಸುಭಧ್ರೆ ಮುಯ್ಯ ತರುತಾಳೆÀಹಸ್ತಿನಾವತಿಯ ಭೂಸುರರೆಲ್ಲ ಬರತಾರೆ7
--------------
ಗಲಗಲಿಅವ್ವನವರು
ಜಾನಕೀಮನೋಹರ ಪ್ರಭೋ ಜರಾಮರಣವಿದೂರ ರಾಮ ಪ ನಾನಾವತಾರ ಚಿದಾ ನಂದಾತ್ಮ ಶರೀರ ಅ.ಪ ಧರ್ಮಾತ್ಮ ಸತ್ಯಸಂಧ ದಿನಕರ ವಂಶಾಬ್ಧಿಚಂದ್ರ 1 ಶಾಶ್ವತ ತ್ರಿಜಗನ್ಮೋಹನ 2 ಶಿವಚಾಪಖಂಡನ ಆ ಶ್ರಿತಲೋಕ ಮಂಡನ 3 ರಾವಣಾದಿ ದನುಜ ಮಥನ ದೇವಪರಾತ್ಮರ ರಘುವರ 4 ತಾಮಸಗುಣ ವಿರಹಿತ ಗುರು ರಾಮವಿಠಲ ನಮೋ ನಮೋ 5
--------------
ಗುರುರಾಮವಿಠಲ
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜಿತಮನವ ನೀಡೆನಗೆ ಜಿಷ್ಣುಸಖನೆ ರತಿಪತಿಪಿತ ನಿನ್ನ ಹಿತದಿ ಭಜಿಸುವೆನೊ ಪ. ದುಷ್ಟ ಇಂದ್ರಿಯಗಳು ಕೆಟ್ಟ ವಿಷಯಗಳಲ್ಲಿ ಕಟ್ಟ್ಟೆ ಎನ್ನಯ ಮನವ ಸೆಳೆಯುತಿಹವೊ ಕೃಷ್ಣಮೂರುತಿ ನೀನೆ ದೃಷ್ಟಿಯಿಂದಲಿ ನೋಡಿ ಒಟ್ಟುಗೂಡಿಸಿ ನಿನ್ನ ಪಾದದಲ್ಲಿಡಿಸೊ 1 ಎಂಟು ಜನ ದುಷ್ಟರು ಆರು ಜನ ಕಳ್ಳರು ಕಂಟಕರಾಗಿನ್ನು ಕಾಡುತಿಹರೋ ಎಂಟುದಳಗಳಿಪ್ಪ ನೆಂಟರೆನಗಾಗರೊ ಎಂಟೆರಡು ಇಂದ್ರಿಯವ ಬಂಧನದೊಳಿರಿಸೊ 2 ಮೂರು ತಾಪಗಳಿಂದ ಮೂರು ಗುಣದೊಳು ತಿರುಗಿ ಮೂರು ಮಾರ್ಗವ ಕಾಣೆ ಮುರವೈರಿಯೆ ಮೂರು ಅವಸ್ಥೆಗಳ ವಿವರವರಿಯದ ಎನಗೆ ದಾರಿ ತೋರಿ ಸಲಹೊ ಕಾರುಣ್ಯನಿಧಿಯೆ 3 ಡಿಂಬ ಮಧ್ಯದಲಿರುವ ಅಂಬರದಲಿ ನಿನ್ನ ಬಿಂಬರೂಪವ ತೋರೊ ಶಂಭು ಸಖನೆ ಅಂಬುಜನಾಭ ಎಪ್ಪತ್ತೆರಡು ಸಾಹಸ್ರ ತುಂಬಿದ ನಾಡಿಯೊಳು ರೂಪಗಳ ತೋರೊ4 ಮನದಲ್ಲಿ ನೆಲಸಿಹನೆ ಮನುಶಬ್ದವಾಚ್ಯನೆ ಮನದಿಂದ ಭಿನ್ನನೆ ಮನಪ್ರೇರಕ ಮನವ ನಿನ್ನಲಿ ನಿಲಿಸಿ ಅನುಗಾಲ ಸಲಹುವುದು ಚಿನುಮಯನೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಜಿಹ್ವೆ ರಸವನುಂಬದೆ ತ್ವಕ್ಕಿಗೇನುಛಳಿ ಬಿಸಿಲ ಹದನೂ ಚನ್ನ 1ಕಾಲು ನಡೆಯದು ಕರವು ಪಿಡಿಯದಾಡದು ಮಾತನಾಲಗೆಯು ಉಳಿದವೆರಡೂತಾಳಲಾರವು ವಿಸರ್ಗಾನಂದ ಕೃತ್ಯವನುಜಾಳು ಪ್ರಾಣವದು ಕರಡುಗಾಳಿರೂಪಿನ ಪಾನವ್ಯಾನವು ಸಮಾನವೂಕೇಳುದಾನವದು ಬರಡೂಹಾಳೂರ ಕೊಳಕ್ಕೆ ಕಾಲ ನೀಡಿದ ತೆರದಿಬಾಳುವೀ ಜೀವ ಕುರುಡೂ ನೋಡು 2ಬರಿದೆ ವ್ಯವಹರಿಸಿದರೆ ಫಲವಿಲ್ಲ ನಿಮ್ಮೊಡನೆಸರಸಕೆ ರಸಜ್ಞರಲ್ಲಾಇರುವರೆಮ್ಮವರು ಮೂವರು ಬುದ್ಧ್ಯಹಂಕಾರನೆರೆ ಚಿತ್ರ ಸಂಜ್ಞರೆಲ್ಲಾಬರಿದೆಯಾಳೋಚಿಸುವನೊರ್ವ ಹೆಮ್ಮೆಯೊಳೊರ್ವನೆರೆಯೊಳಿಹನೊಬ್ಬ ಬಲ್ಲಾತಿರುಪತಿಯ ವೆಂಕಟನ ಚರಣವನು ಭಜಿಸುವರೆನೆರೆ ಜಾಣ ನಾನೆಯಲ್ಲದಿಲ್ಲಾ 3ಕಂ||ಮನ ನುಡಿಯಲಿಂದ್ರಿಯಂಗಳುಘನರೋಷದಿ ಜೀವ ತನುಗಳನು ನಿಲ್ಲೆನ್ನುತಮನವೆ ಬಾ ನಮ್ಮೊಳು ನುಡಿನಿವಗಧಿಕಾರವನು ಕೊಟ್ಟವವನಾವನಯ್ಯಾ
--------------
ತಿಮ್ಮಪ್ಪದಾಸರು
ಜೀವ ಕರ್ತೃತ್ವದ ಭ್ರಮೆಯ ಬಿಡಿಸೊ ಪ ಜೀವೇಶನೊಡೆಯ ಶ್ರೀ ವೇಣುಗೋಪಾಲ ಹರಿ ಅ.ಪ ಮಿಥ್ಯೆವೆಂಬುದು ಬಲ್ಲೆ ಕರ್ತೃತ್ವ ನಮಗಿಲ್ಲ ಪ್ರತ್ಯಕ್ಷಕಪವಾದದಲ್ಲಿ ಬಾಳ್ವೆ ವ್ಯರ್ಥಧಾವತಿಪಡುವೆ ಸರ್ವಕರ್ತನ ಮರೆದು ಯತ್ನಕೆ ವಶವಲ್ಲ ಮಿಥ್ಯೆ ಭಾವವು ಬಿಡಲು 1 ವಿಷಯ ವಿಷವದು ಬಲ್ಲೆ ತಲ್ಲೋಭ ಬಿಡಲರಿಯೆ ವಿಷಮಗತಿ ಪ್ರವಹದಲಿ ವಿವಶನಾಗಿ ಹುಸಿನಂಬಿ ತೆರಳುತಿಹೆ ಹರುಷ ಕಾಣದೆ ನಿಜದೆ ಕೃಶನಾದೆ ಹರಿಯೆನ್ನ ಕೈಪಿಡಿದು ಉದ್ಧರಿಸೊ 2 ಗುಣವಿಲ್ಲ ದೋಷಿಲ್ಲದೆಡೆಯಿಲ್ಲ ಎನ್ನಲ್ಲಿ ದನುಜಾರಿ ನಿನ್ನವರ ಕರುಣ ಉಂಟೊ ಪ್ರಣತಾರ್ಥಿ ಹರ ಶ್ರೀ ಜಯೇಶವಿಠಲನಲ್ಲಿ ವಿನುತ 3
--------------
ಜಯೇಶವಿಠಲ
ಜೀವ ನಿಮ್ಮದೊ ಗುರು ಭಾವ ನಿಮ್ಮದೊ ಜೀವ ಭಾವದ ಶಿವಸೂತ್ರ ನಿಮ್ಮದೊ ಧ್ರುವ ಕಾಯ ಮಾಯ ನಿಮ್ಮದು ಅಂತ್ರ ಬಾಹ್ಯ ನಿಮ್ಮದು ನಿರ್ಮಿಸಿಹ್ಯ ಇದು ಉಪಾಯ ನಿಮ್ಮದು 1 ಪೃಥ್ವಿ ಅಪ್ಪು ನಿಮ್ಮದು ತೇಜ ತತ್ತ್ವ ನಿಮ್ಮದು ವಾಯುವಾಕಾಶವೆ ತಾ ತತ್ತ್ವನಿಮ್ಮದು 2 ಪ್ರಾಣವೇ ನಿಮ್ಮದು ಪಾನವೇ ನಿಮ್ಮದು ವ್ಯಾನ ಉದಾನ ಸಮಾನ ನಿಮ್ಮದು 3 ಅಂತಃಕರಣ ನಿಮ್ಮದು ಬುದ್ದಿಮನ ನಿಮ್ಮದು ಚಿತ್ತ ಚೈತನ್ಯ ಚೇತನ ನಿಮ್ಮದು 4 ನುಡಿನೋಟ ನಿಮ್ಮದು ಆಟಕೂಟ ನಿಮ್ಮದು ಕರ್ನ ಕೇಳಿಕೆಯಾಟವು ನಿಮ್ಮದು 5 ಸ್ಥೂಲ ಸೂಕ್ಷ್ಮ ನಿಮ್ಮದು ಕಾರಣವು ನಿಮ್ಮದು ಮಹಾ ಕಾರಣವು ಆನಂದ ನಿಮ್ಮದು6 ಜಾಗ್ರತೆ ನಿಮ್ಮದು ಶೀಘ್ರತಿ ನಿಮ್ಮದು ಪ್ರವೃತ್ತಿನಿವೃತ್ತಿ ಸುವ್ಯಕ್ತಿ ನಿಮ್ಮದು 7 ಸ್ವಪ್ನಾವಸ್ಥೆ ನಿಮ್ಮದು ಸುಷಪ್ತಿ ನಿಮ್ಮದು ಸರ್ವಾವಸ್ಥೆಗಳ ಲಕ್ಷಣ ನಿಮ್ಮದು 8 ಅರಹು ಮರಹು ನಿಮ್ಮದು ಖೂನ ಕುರಹು ನಿಮ್ಮದು ಸೂತ್ರ ನಿಮ್ಮದು 9 ಇಹಪರ ನಿಮ್ಮದು ಸಾಹ್ಯ ಸರ್ವ ನಿಮ್ಮದು ಗುಹ್ಯ ಗುರುತ ದೋರುವ ಸೋಹ್ಯ ನಿಮ್ಮದು 10 ಮಹಿಪತಿ ಜೀವ ನಿರ್ಮಿತ ಙÁ್ಞತಿ ನಿಮ್ಮದು ಸದ್ಗತಿಗೈಸುವ ಖ್ಯಾತಿ ನಿಮ್ಮದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜೀವಿಸು ಜಗದಿ ಬಾಲಕನೆ | ಚಿರಂಜೀವಿಯಾಗುತ ಪ ಚಿತ್ತಸುಶಿದ್ಧಿಯಿಂದಲಿ | ನಿತ್ಯಾನುಷ್ಟಾನ ಗೈಯುತಲಿ || ಸತ್ಯಸುಶೀಲನಾಗುತ | ಅತ್ಯಾನಂದವನನುಭವಿಸು 1 ಕ್ರೋಧಾದಿ ಗುಣವ ನಿಗ್ರಹಿಸಿ | ಸಾಧುಸತ್ವಥವಲಂಬಿಸಿ ಭೂದೈವರಾರಾಧಿಸುತ ನೀ | ಸಂಪದಿಸು ಪರಮಸತ್ಕೀರ್ತಿ 2 ಶ್ರೀಮಧ್ವಮತವಲಂಬಿಸಿ | ಪಾಮರ ಮತವ ಧಿಕ್ಕರಿಸಿ | ಈ ಮಹೀಮಂಡಲದಿ ಸುಖಿಸು ಜೀವಿಸು 3
--------------
ಶಾಮಸುಂದರ ವಿಠಲ
ಜೀವಿಸು ನೀ ಸುಖಿಯಾಗು ಜಗದಿ ಪ ಬಾಲೆ ನೀ ಗುಣವಂತೆ ಸುಶೀಲಳೆಂದೆನಿಸಿ || ಬಾಲರ ಪಡೆದು ಬಾಲೆ ಸನ್ಮುದದಿ 1 ಪತಿಯ ಆರಾಧಿಸುತ ಬಲುಹಿತ ತೋರುತಲಿ 2 ಶಾಮಸುಂದರನ ನಾಮ ಸಂಕೀರ್ತನ | ಮಣಿ ನೀ 3
--------------
ಶಾಮಸುಂದರ ವಿಠಲ
ಜುೀಂದ್ರಾಜುೀಂದ್ರಾಸುಜನ ಭಜಕಮನ ಚಕೋರಚಂದ್ರಾ ಪಶೈವಾದ್ವೈತದಪ್ಪಯ್ಯ ದೀಕ್ಷಿತರ ಸದ್ದು ಅಡಗಿಸಿದ'ದ್ಯಾ - ಸಮುದ್ರು 1ಎಮ್ಮೆ ಬಸವನ ಹೆಮ್ಮೆ ಮುರಿದುಆ ಕುಂಭೇಶ್ವರನನು ಒಲಿಸಿದ ಧೀರಾ 2ವ್ಯಾಸ ಮುನಿಕುವರ 'ಷ್ಣುತೀರ್ಥ ನೀಕೃಷ್ರ್ಣಾರ್ಪಣವೆಂದರು ಶ್ರೀಮಠಕೆ 3ರಾಶಿ ರಾಶಿ ಗ್ರಂಥಗಳ 'ರಚಿಸಿದದೇಶಕಾರ್ಯ 'ದ್ವಾಂಸರ ಪ್ರೀಯಾ 4ಮೂಲ ವೇಣುಗೋಪಾಲಕೃಷ್ಣ ನಿನ್ನಮೂಲರಾಮನ ಸೇವೆಗೆ ಕಳಿಸಿದ 5ಸರ್ವಕಲೆಗಳಲಿ ಪರಿಪೂರ್ಣನು ನೀ ಸರ್ವಶಾಸ್ತ್ರ ಸಂಪನ್ನ ಪ್ರಸನ್ನ 6ಶೈವಾದ್ವೈತರ ಗೆದ್ದು ಓಡಿಸಿಕಾವೇರಿತಟ ಪಾವನ ಮಾಡಿದಿ 7ಮಧ್ವ-ಮತಾಬ್ಧಿಗೆ ಪೂರ್ಣ ಸುಚಂದ್ರಾವಾದಿತಿ'ುರಮಾರ್ತಂಡ ಪ್ರಚಂಡಾ 8ತಾಪತ್ರಯ ಪರಿಹರಿಸಿ ಕೈಪಿಡಿಯೋಭೂಪತಿ'ಠ್ಠಲನ ಭಕ್ತಿವರ್ಯಾ 9ಶ್ರೀ ರಾಘವೇಂದ್ರರ ಸ್ತುತಿಪರ ಕೀರ್ತನೆಗಳು
--------------
ಭೂಪತಿ ವಿಠಲರು
ಜೋ ಜೋ ಎನ್ನಿ ನಿರ್ವಿಕಾರಿಯಜೋ ಎಂದು ತೂಗಿರಿ ಬ್ರಹ್ಮಾಸ್ತ್ರ ದೊರೆಯ ಪ ವಾದಾತೀತಳಿಗೆ ಹೃದಯ ತೊಟ್ಟಿಲ ಮಾಡಿವೇದ ನಾಲಕು ಎಂಬ ನೇಣನೆ ಹೂಡಿಸಾಧನ ಚತುಷ್ಪಯ ಹಾಸಿಗೆ ಹಾಸಿಬೋಧಾನಂದಳನು ಭಾವದಿ ತಂದು ನೋಡಿ 1 ಶುದ್ಧದ ಚವುರಿ ಸಡಿಲಿಸಿ ಮಗ್ಗುಲಲಿ ಶಾಂತರಸ ದೀಪಗಳ ಹಚ್ಚಿಹೊಡೆಯುತಿಹ ಭೇರಿಗಳ ಘಂಟಾರವ ಹೆಚ್ಚೆಎಡೆಬಿಡದೆ ಓಂಕಾರ ಮಂತ್ರ ಘೋಷಣವು ಮುಚ್ಚಿಕಿಡಿ ನಯನೆಯಳನು ನೋಡಿ ಹರುಷ ತುಂಬೇರಿ 2 ಹಿರಿದಾ ಖಡ್ಗದ ಹಲಗೆ ಬಲ ಭಾಗದಲಿಟ್ಟುಶರಶಾಙರ್É ಬತ್ತಳಿಕೆ ಎಡಭಾಗದಲ್ಲಿಟ್ಟು ದುಷ್ಟ ಶತ್ರುಗಳ ಕಾಲದೆಸೆಗಿಟ್ಟುಪರಮಾಮೃತ ಪಾನ ಪಾತ್ರೆ ತುಂಬಿಟ್ಟು 3 ಜೋ ಜೋ ಶತ್ರು ಸ್ತಂಭಿನಿ ಎನ್ನಿರಿ ನರರೆಲ್ಲಜೋ ಜೋ ಗತಿಮತಿ ಸ್ತಂಭಿನಿ ಎನ್ನಿರಿ ಸುರರೆಲ್ಲಜೋ ಜೋ ಜಿಹ್ವಾ ಸ್ತಂಭಿನಿ ಎನ್ನಿರಿ ಹರರೆಲ್ಲಜೋ ಜೋ ಸ್ತಂಭಿನಿ ಎನ್ನಿರಿ ಧರೆಯೆಲ್ಲ 4 ಜೋ ಜೋ ಸುರಗಿರಿ ಧೈರ್ಯದಾಯಿನಿ ಜೋ ಜೋಜೋ ಜೋ ಹರಿ ಸಮ ಭಾಗ್ಯವೀವಳೆ ಜೋ ಜೋಜೋ ಜೋ ಶಿವ ಸಮ ಸತ್ವವೀವಳೆ ಜೋ ಜೋಜೋ ಜೋ ನಂಬಿದ ರಾಜ್ಯವೀವಳೆ ಜೋ ಜೋ 5 ಭಕ್ತರಭಿಮಾನಿ ಭಕ್ತಮಾತೃಕೆ ಜೋ ಜೋಭಕ್ತವತ್ಸಲೆ ಭಕ್ತ ಕರುಣಾಳು ಜೋ ಜೋಭಕ್ತ ಜೀವನಿ ಭಕ್ತ ಬಂಧುವೆ ಜೋ ಜೋಭಕ್ತ ಚಿಂತಾಮಣಿ ಭಾಗ್ಯಳೇ ಜೋ ಜೋ 6 ಯೋಗಾರೂಢಕೆ ಏಕಾಕ್ಷರಿ ಜೋ ಜೋಯೋಗಿ ಹೃದ್ವಾಸಿನಿ ಯೋಗ್ಯಳೇ ಜೋಜೋಯೋಗಿ ಬೃಹತ್ಯಾಗಿ ವಿರಾಗಿ ಜೋಜೋಯೋಗಿಗಳ ಭಂಡಾರಿ ಯೋಗೀಳೆ ಜೋಜೋ 7 ಚಿದಬಿಂದುಗಳೆಂಬ ಮಂತ್ರ ಪುಷ್ಪ ಚೆಲ್ಲಿಚೆದುರೆಯರು ಮಂಗಳಾರತಿ ಬೆಳಗುತಿಲ್ಲಿಸದಮಳೆ ನೀ ಮಲಗು ಯೋಗ ನಿದ್ರೆಯಲಿಚಿದಾನಂದ ತಾನಾದ ಬಗಳಾಂಬೆ ಸುಖದಲಿ 8
--------------
ಚಿದಾನಂದ ಅವಧೂತರು
ಜೋ ಜೋ ಜೋ ಗುಂಡ ಪರಮಪ್ರಚಂಡ ಜೋ ಜೋ ಜೋ ಗುಂಡ ಸುರಚಿರದಂಡ ಪ ಜೋ ಜೋ ಜೋ ದೊಡ್ಡ ಕರಿಯಕಲ್ಗುಂಡ ಜೋ ಜೋ ಜೋ ಮದ್ದನರೆಯಚ್ಚಗುಂಡ ಅ.ಪ ದುಂಡು ಮಲ್ಲಿಗೆಗಿಂತ ಮೃದುವಾದ ಗುಂಡಾ ಕೆಂಡ ಸಂಪಿಗೆಗಿಂತ ಚೆಲುವಾದ ಗುಂಡಾ ಪುಂಡರೀಕಕ್ಕಿಂತ ಚೆಲುವಾದ ಗುಂಡಾ ಮೊಂಡ ಮೂಕರಕಯ್ಯ ಕೋದಂಡಗುಂಡಾ 1 ಒಬ್ಬಿಟ್ಟು ಹೂರಣವರೆಯುವ ಗುಂಡಾ ತಬ್ಬಿಬ್ಬಾಡುವರನು ಕಡುಗುವಾ ಗುಂಡಾ ರುಬ್ಬಿ ರುಬ್ಬಿ ದೋಸೆ ಯೀಯುವಾ ಗುಂಡಾ ಕೊಬ್ಬಿದ ಜನವನು ದಬ್ಬುವಾ ಗುಂಡಾ 2 ಪರಿಪರಿ ಬಂಧನವರಿಯದ ಗುಂಡಾ ಉರುಳಿಸಿದಲ್ಲಿಯೇ ನಿದ್ರಿಪ ಗುಂಡಾ [ವರಭಕ್ತಾವಳಿಗೆ ಸುಖವೀವಗುಂಡಾ] 3 ನೀನಿಲ್ಲದಿರುವ ಮನೆಗಳಿಲ್ಲ ಗುಂಡಾ ನೀನಿರುವಲ್ಲಿ ತಿಂಡಿಗಳುಂಟು ಗುಂಡಾ ಕಾನನದೊಳಗಿದ್ದು ಕರಗದ ಗುಂಡಾ ಮಾನವ ಗಣಕ್ಕೆಲ್ಲಾ ಬೇಕಾದ ಗುಂಡಾ4 ಒರಳುಕಲ್ಲಿನ ಮೇಲೆ ನೇಯುವಾ ಗುಂಡಾ ತರುಣಿಯ ಕರದೊಳು ನಲಿಯುವಾ ಗುಂಡಾ ವರ ದುಕೂಲಂಗಳ ಬಯಸದ ಗುಂಡಾ ವರದ ಮಾಂಗಿರಿರಂಗನೆನಿಸುವ ಗುಂಡಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜೋ ಜೋ ಜೋ ಜಗತ್ರಾಣ ಸುತ್ರಾಣ ಜೋ ಜೋ ಜೋ ಶುಭವಾಣಿಯ ರಮಣ ಜೋ ಜೋ ವೈಷ್ಣವ ಸಿದ್ಧಾಂತಿ ಶರಣ ಮುಖ್ಯಪ್ರಾಣ ಕಲ್ಯಾಣ ಪ. ಲೋಕಾ ಲೋಕ ಪರ್ವತಗಳ ಮ್ಯಾಲೆ ಏಕಾಕಾರದಿ ಪಾದಗಳೂರಿ ವ್ಯಾಕರಣಗಳ ದಿವಾಕರನಿದಿರಕಲಿ ಸ್ವೀಕರಿಸಿದ ಕರುಣಾಕರ ಮೂರ್ತಿ ಶ್ರೀಪತಿ ಕೃಷ್ಣನ ಸೇವಾನುಸಾರದಿ 1 ಕೋಪಾಟೋಪವ ಸಮರತಿ ತೋರಿ ಪಾಡಿದುಶ್ಯಾಸನ ವಕ್ಷೋವಿಧಾರಿ ದ್ರೌಪಧಿ ಕುಚಕಂಜ ಕುಟ್ಮಲಧಾ 2 ಸ್ವಾನಂದ ಪರಿಪೂರ್ಣ ಕೃಷ್ಣನ ದಾಸ ಆನಂದತೀರ್ಥ ತೋರುವ ಮಂದಹಾಸ ಶ್ರೀನಿಧಿ ವೆಂಕಟೇಶನ ನಂಬಿದವರ ತಾನೆ ಬಂದೊದಗಿ ಪಾಲಿಪ ದೇವಪ್ರವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ರುಕ್ಷಿಣಿರಮಣ ಜೋ ಜೋ ಕಲ್ಯಾಣ ಜೋ ಜೋ ಗುಣಪರಿಪೂರ್ಣ ವೆಂಕಟರಮಣ ಪ. ರನ್ನ ಮಾಣಿಕದೊಜ್ರ ಚಿನ್ನ ಮಂಟಪದಿ ಘನ್ನ ನವರತ್ನದಿಂ ಮೆರೆವ ತೊಟ್ಟಿಲೊಳು ರನ್ನೆರಿಬ್ಬರ ಕೂಡಿ ನಲವಿಂದ ಕೃಷ್ಣ ಸನ್ನುತನಾಗಿ ಸುರರಿಂದ ಪವಡಿಸಿದ ಜೋ ಜೋ 1 ಕನಕಮಯ ಸರಪಳಿ ಥಳಥಳನೆ ಹೊಳೆಯೆ ಮಿನುಗುವಾಭರಣಗಳು ಝಗ ಝಗಿಸುತಿರಲು ಸನಕಾದಿ ಒಡೆಯನ ಫಣಿಪ ಹಿಂತೂಗೆ ಮುನಿವರನು ಮುಂದೆ ತಾ ಲಾಲಿ ಪಾಡಿದನು ಜೋ ಜೋ 2 ವೇದವನೆ ಕದ್ದವನ ಕೊಂದವನೆ ಜೋ ಜೋ ಸಾಧಿಸಿ ಸುಧೆ ಸುರರಿಗುಣಿಸಿದನೆ ಜೋ ಜೋ ಜಲಧಿ ಮೇದಿನಿ ತಂದೆ ಜೋ ಜೋ ಸಾಧಿಸಿ ಸುಧೆ ಸುರರಿಗುಣಿಸಿದನೆ ಜೋ ಜೋ 3 ಬಲಿಯನೊಂಚಿಸಿದಂಥ ತರಳನೆ ಜೋ ಜೋ ಕುಲವನೆ ಸವರಿದ ಬಲಶಾಲಿ ಜೋ ಜೋ ಲಲನೆ ಸೀತೆಯ ತಂದ ಶ್ರೀರಾಮ ಜೋ ಜೋ ಮೆಲಲು ಪಾಲು ಬೆಣೆÉ್ಣ ಕದ್ದವನೆ ಕೃಷ್ಣ ಜೋ ಜೋ4 ತ್ರಿಪುರ ಸತಿಯರ ವ್ರತವಳಿದೆ ಜೋ ಜೋ ಚಪಲತನದಿಂ ಹಯವನೇರಿದನೆ ಜೋ ಜೋ ಅಪರಿವಿತದವತಾರದಿಂ ಬಳಲಿ ಬಂದು ನಿಪುಣರೆಲ್ಲರು ಸ್ತುತಿಸೆ ಪವಡಿಸಿದೆ ಕೃಷ್ಣ ಜೋ ಜೋ 5 ಅರಸು ಜಯದೇವಿ ಸಂಕರ್ಷಣನೆ ಜೋ ಜೋ ಸಿರಿದೇವಿಪ್ರಿಯ ಶ್ರೀ ನರಹರಿಯೆ ಜೋ ಜೋ ವರರುಕ್ಮಿಣಿ ಸತ್ಯವರ ಕೃಷ್ಣ ಜೋ ಜೋ ಅರಸಿ ಪದ್ಮಾವತಿ ಸಹಿತ ವೆಂಕಟನೆ ಜೋ ಜೋ6 ನಾರದಾದಿಗಳೆಲ್ಲ ನರ್ತನದಿ ಪಾಡೆ ಊರ್ವಶಿ ಅಪ್ಸರರು ನೃತ್ಯವನು ಮಾಡೆ ತೋರೆ ಗಂಧರ್ವರು ಗಾನಗಳ ರಚನೆ ಸಾರಿಸಾರಿಗೆ ಭಕ್ತರೆಲ್ಲ ನುತಿಗೈಯೆ 7 ಭಕ್ತನಾದ ವಾಯು ಸಹಿತ ಪವಡಿಸಿದೆ ಜೊತ್ತಾದ ತೊಟ್ಲುಗಳು ಭೃತ್ಯರು ತೂಗೆ ಮತ್ತೆ ನಿವಿ್ಮೂರ್ವರಿಗೆ ನಿದ್ರೆ ಇನ್ನುಂಟೆ ಭಕ್ತರನು ಸಲಹಲು ಲೀಲೆ ಕೈಕೊಂಡೆ ಜೋ ಜೋ 8 ಶ್ರೀಪಾದಪದ್ಮಯುಗಳಕೆ ಎರಗಿ ನಮಿಪೆ ಗೋಪಾಲಕೃಷ್ಣವಿಠ್ಠಲನೆ ನೀ ಸಲಹೊ ಶ್ರೀ ಪದ್ಮಭವ ಭವರಿಂ ಸೇವೆ ಕೊಳುತ ಈ ಪಯೋಜ ಭವಾಂಡದೊಳು ಲೀಲೆ ತೋರ್ಪೆ ಜೋ ಜೋ9
--------------
ಅಂಬಾಬಾಯಿ