ಒಟ್ಟು 1487 ಕಡೆಗಳಲ್ಲಿ , 97 ದಾಸರು , 1106 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಬೇಕೆನ್ನ ಗೋಪಾಲ ಬಂದು |ಪಾಯವನರಿಯೆನು ಭಕುತರ ಪಾಲಪಹಲವು ಜನ್ಮಗಳೆತ್ತಿ ಬಂದೆ-ಮಾಯಾ-|ಮಲವೆಂಬುದರಿಯದೆ ಭವದೊಳು ನೊಂದೆ ||ಬಲು ಭಯವಾಯಿತು ಮುಂದೆ-ನೀನು-|ಸುಲಭನೆಂದುಕೇಳಿಶರಣೆಂದೆ ತಂದೆ1ವಿತ್ತದೊಳಗೆ ಮನವಿಟ್ಟು-ನಿನ್ನ-|ಉತ್ತಮ ನಾಮದ ಸ್ಮರಣೆಯ ಬಿಟ್ಟು ||ಮತ್ತನಾದೆನು ಮತಿಗೆಟ್ಟು-ಇದ-|ಚಿತ್ತದಲಿ ತಿಳಿದಿ ಬಲು ದಯವಿಟ್ಟು 2ಜರುಗಿದ ಪಾಪಂಗಳೆಲ್ಲ-ಅನ್ಯ-|ನರರೇನ ಬಲ್ಲರು ಯಮಧರ್ಮ ಬಲ್ಲ ||ನರಕಕೆ ಒಳಗಾದೆನಲ್ಲ-ಸಿರಿ-|ವರನಾರಾಯಣ ಪುರಂದರವಿಠಲ 3
--------------
ಪುರಂದರದಾಸರು
ಕೇಶವ ನಾರಾಯಣಮಾಧವ -ಹರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಸುದೇವಎನಬಾರದೆ ?ಪ.ಕೇಶವನ ನಾಮವನುಏಸುಬಾರಿ ನೆನೆದರೂ |ದೋಷಪರಿಹವಪ್ಪುದು - ಏ ಜಿಹ್ವೆ ಅಪಜಲಜನಾಭನ ನಾಮವು - ಈ ಜಗ - |ದೊಳು ಜನಭಯಹರಣ ||ಸುಲಭವೇದ್ಯನೆನಲೇಕೆ ಸುಖಕೆ ಸಾಧನವಿದು |ಬಲಿಯೆಂಬ ಭಕ್ತನು ಬಗೆದು ರಸವನುಂಡು ಹೇಜಿಹ್ವೆ1ಹೇಮಕಶ್ಯಪ ಸಂಹಾರ - ಭಕ್ತರು ನಿನ್ನ |ನಾಮವ ಸವಿದುಂಬರು ||ವಾಮನ ವಾಮನನೆಂದು ವಂದಿಸಿದವರಿಗೆ |ಶ್ರೀಮದನಂತ ಪುರಂದರವಿಠಲನುಕಾಮಿತ ಫಲವೀವನು - ಹೇಜಿಹ್ವೆ3
--------------
ಪುರಂದರದಾಸರು
ಕೇಶವ ಬಾ ನಾರಾಯಣ ಬಾ ಬಾಮಾಧವಬಾ ಮಧುಸೂದನ ಬಾಪಗೋವಿಂದ ಬಾ ಬಾ ಗೋಪಾಲ ಬಾ ಬಾಗೋವರ್ಧನ ಗಿರಿಧಾರಿಯೆ ಬಾ ಅ.ಪರಂಗನೆ ಅಂದಿಗೆ ಗೆಜ್ಜೆಯಕಟ್ಟಿಚುಂಗುಬಿಟ್ಟು ರುಮಾಲನೆ ಸುತ್ತಿಶೃಂಗಾರದ ಹಾರ ಪದಕಗಳ್ಹಾಕಿಅಂಗಳದೊಳಗಾಡಲು ಕಳುಹುವೆನು 1ಚಂಡು ಬುಗುರಿ ಗೋಲಿ ಗಜ್ಜುಗ ಹರಿಯೆಗುಂಡು ಬಿಂದಲಿನಿಟ್ಟಿ ಕರದಲಿ ಕೊಡುವೆಹಿಂಡುಗೋಪಾಲರ ಕೂಡಿಸುವೆಪುಂಡರಿಕಾಕ್ಷನೆ ಪಾಲಿಸು ದೊರೆಯೆ 2ಹಸುಳೆ ನಿನಗೆ ಹೊಸ ಬೆಣ್ಣೆಯ ನೀವೆಬಿಸಿ ಬಿಸಿ ಕಡುಬು ಕಜ್ಜಾಯವ ಕೊಡುವೆಶಶಿಮುಖಿಯರ ಕೂಡಾಡದಿರೆನುವೆಮೊಸರು ಬೆಣ್ಣೆ ಪಾಲ್ಸಕ್ಕರೆ ಕೊಡುವೆ 3ಜರದವಲ್ಲಿ ಅಲಂಕರಿಸುತ ನಲಿವೆಪರಿಪರಿ ಗೆಳೆಯರ ಕೂಡಿಸಿ ಕೊಡುವೆಮುರಳಿ ನುಡಿಸೆನ್ನುತಕರಮುಗಿವೆಪರಮಾತ್ಮನೆ ಜಗನ್ಮೋಹನ ಹರಿಯೆ 4ಕಮಲಭವೇಂದ್ರಾದ್ಯಮರರು ಪೊಗಳೆಕಮಲಪುಷ್ಪ ಮಲ್ಲಿಗೆ ಮಳೆ ಕರೆಯೆಕಮಲನಾಭ ವಿಠ್ಠಲ ಶ್ರೀಹರಿಯೆಶ್ರಮ ಪರಿಹರಿಸೆನ್ನುತ ಪ್ರಾರ್ಥಿಸುವೆ 5
--------------
ನಿಡಗುರುಕಿ ಜೀವೂಬಾಯಿ
ಕೋಳಿ ಕೊಗಿತಲ್ಲಾ - ಲಕ್ಷ್ಮೀಲೋಲನಲ್ಲದೆ ಅನ್ಯರಾರಿಲ್ಲವೆಂದು ಪ.ಮೊದಲ ಜಾವದಲಿ ಮುಕುಂದನೆಂದು ಕೂಗಿಎರಡಲಿ ಶ್ರೀ ವೆಂಕಟಾದ್ರಿಯೆಂದು ||ಉರಗಗಿರಿಯ ವಾಸ ಯಾದವ ಕುಲ ಗೊಲ್ಲಚದುರ ಚಲ್ಲಪಿಲ್ಲಿ ರಾಯನಲ್ಲದಿಲ್ಲವೆಂದು 1ಮೂರು ಜಾವದಲಿ ಮುರಾರಿಯೆಂದು ಕೂಗಿನಾಕರಲಿ ನಾರಾಯಣಯೆನಲು ||ಕ್ಷೀರಾಬ್ಧಿಯ ವಾಸ ಲಕ್ಷ್ಮೀಪತಿ ಕೋನೇರಿವಾಸ ವೆಂಕಟಕೃಷ್ಣರಾಯನೆಂದು 2ಪರಮಪುರುಷ ಮುಖ್ಯ ಆಧಾರಭೂತಕರುಣದ ಪುಂಜನು ಜಗದಾದಿ ತಾ ||ಕಮಲಸಂಭವ ಮುಖ್ಯ ಕಾರುಣ್ಯ ಮೂರುತಿವಿಮಲಕಾಪುರ ತಿಮ್ಮರಾಯನಲ್ಲದಿಲ್ಲವೆಂದು 3ರೆಕ್ಕೆಯ ಬಿಚ್ಚಿ ಪಸರಿಸಿ ಡಂಗುರ ಹೊಯ್ದಕೊಕ್ಕನು ಮೇಲೆ ನೆಗಹಿಕೊಳುತ ||ಚಕ್ಕನೆ ಕೇರಿ ಕೇರಿಯಗುಂಟ ಸಾಗುತಮುಕುಂದನಲ್ಲದೆ ಅನ್ಯರಾರಿಲ್ಲವೆಂದು 4ಐದು ಜಾವದಲಿ ಅನಂತನೆಂದು ಕೂಗಿಆರರಲ್ಲಿ ಅಳಗಾದ್ರೀಶಯೆಂದು ||ಏಳರಲ್ಲಿ ಕಾಶಿಯ ಬಿಂದುಮಾಧವಎಂಟಕೆ ಪುರಂದರವಿಠಲರಾಯನೆಂದು 5
--------------
ಪುರಂದರದಾಸರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಗಾಳಿ ಬಂದ ಕೈಯಲಿ ತೂರಿಕೊಳ್ಳಿರೊ |ನಾಲಗೆಯಿದ್ದ ಕೈಯಲಿ ನಾರಾಯಣನೆನ್ನಿರೊ ಪ.ಕದ್ದು ಹುಸಿಯನಾಡಿಅಪಾರ |ಬುದ್ದಿಯಿಂದ ಕೆಡಲು ಬೇಡಿ ||ಬುದ್ದಿವಂತರಾಗಿ - ಅನಿ |ರುದ್ಧನ ನೆನಯಿರೊ 1ನಿತ್ಯವಿಲ್ಲ ನೇಮವಿಲ್ಲ |ಮತ್ತೆ ಧಾನಧರ್ಮವಿಲ್ಲ ||ವ್ಯರ್ಥವಾಗಿ ಕೆಡದೆ - ಪುರು |ಷೋತ್ತಮನೆನ್ನಿರೊ 2ಭಕ್ತಿಕೊಡುವ ಮುಕ್ತಿಕೊಡುವ |ಮತ್ತೆ ದಾಯುಜ್ಯ ಕೊಡುವ ||ಕರ್ತೃ ಪುರಂದರವಿಠಲನ |ನಿತ್ಯನೆನೆಯಿರೊ3
--------------
ಪುರಂದರದಾಸರು
ಗೋಪಿಯ ಭಾಗ್ಯವಿದು |ಆ ಪರಮಾತ್ಮನ ಅಪ್ಪಿ ಮುದ್ದಿಡುವುದು ಪಅಂಬೆಗಾಲಿಡು ಹರಿಕುಣಿದಾಡೈ ತೋ-|ಳಂಬಲಿ ತಾ ಹೊಂಗುಬ್ಬಿಯನು ||ಅಂಬುಜನಾಭ ನೀನಾನೆಯನಾಡೆಂದು |ಸಂಭ್ರಮದಿಂದ ಮುದ್ದಾಡುವಳೊ 1ನಿತ್ಯನಿರ್ಮಲನಿಗೆ ನೀರನೆರೆದು ತಂದು |ಎತ್ತಿ ತೊಡೆಯೊಳಿಟ್ಟು ಮುದ್ದಿಸುತಾ ||ಸತ್ಯಲೋಕವನಾಳುವ ವಿಧಿಜನಕನ |ಪುತ್ರನೆಂದರಿತು ತಕ್ಕೈಸುವಳೊ 2ಪಾಲುಗಡಲು ಮನೆಯಾಗಿ ಮೂಲೋಕವ |ಪಾಲಿಸುತಿಪ್ಪ ನಾರಾಯಣನ ||ಕಾಲಮೇಲೆ ಮಲಗಿಸಿ ಬಟ್ಟಲ ತುಂಬ |ಹಾಲು ಕುಡಿಸಿ ಸಂತೈಸುವಳೊ 3ಹರಿನಿತ್ಯತೃಪ್ತನೆಂದರಿಯದೆ ಹೊನ್ನಿನ |ಹರಿವಾಣದೊಳಗೆ ಮೃಷ್ಟಾನ್ನವನು ||ನೊರೆಹಾಲು ಘೃತ-ಸಕ್ಕರೆ ಕೂಡಿಸಿ ಕರೆ-|ಕರೆದು ಉಣಿಸಿ ತೃಪ್ತಿ ಬಡಿಸುವಳೊ 4ಅಂಗಜಪಿತನಿಗೆ ಮೋಹದಿಂದ ಹೊಸ |ಅಂಗಿಯ ತೊಡಿಸಿ ಟೊಪ್ಪಿಗೆ ಇರಿಸಿ ||ಬಂಗಾರದರಳೆಲೆ ಬಿಂದುಲಿಗಳನಿಟ್ಟು |ಸಿಂಗರವನು ಮಾಡಿ ನೋಡುವಳೊ 5
--------------
ಪುರಂದರದಾಸರು
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ಚತುರ್ದಶಿಯ ದಿನ(ಹನುಮಂತನನ್ನು ಕುರಿತು)ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆ ಪ.ಇವನ್ಯಾರೆ ಮಹಾಶಿವನಂದದಿ ಮಾ-ಧವನ ಪೆಗಲೊಳಾಂತು ತವಕದಿ ಬರುವವ 1ದಾಡೆದಂತಮಸಗೀಡಿರುವದು ಮಹಾಕೋಡಗದಂತೆ ಸಗಾಢದಿ ಬರುವವ 2ಕಡಲೊಡೆಯನು ಮೃದುವಡಿಯಡರಿಸಿ ಬಿಡದಡಿಗಡಿಗಾಶ್ರೀತರೊಡಗೂಡಿ ಬರುವವ 3ಊರ್ವಶಿ : ನಾರಿ ಕೇಳೆಲೆಗೆ ವೈಯಾರಿ ನೀ ಮುದದಿನಾರಾಯಣನಿಗೀತ ಬಂಟನಾದಾದರಿದಿವೀರ ರಾಮವತಾರದಿ ಹಿಂದೆ ಹರಿಯಚಾರಕನಾಗಿ ಸೇವೆಯ ಗೈದ ಪರಿಯಕ್ರೂರ ದಶಾಸ್ಯನ ಗಾರುಗೆಡಿಸಿನೃಪವೀರನ ಪೆಗಲಿನೊಳೇರಿಸಿ ದೈತ್ಯರಭೂರಿವಧೆಗೆ ತಾ ಸಾರಥಿಯಾದವಕಾರುಣೀಕ ಮಹಾವೀರ್ಹನುಮಂತ 1ಆಮೇಲೆ ವೀರಾವೇಶದಿ ವಾರಿಧಿಯನುರಾಮನಪ್ಪಣೆಯಿಂದ ದಾಟಿದನಿವನುಭೂಮಿಜೆಗುಂಗುರ ಕೊಟ್ಟ ನಂತರದಿಕಾಮುಕರನು ಸದೆಬಡಿದನಾ ಕ್ಷಣದಿಹೇಮಖಚಿತ ಲಂಕಾಮಹಾನಗರವಹೋಮವ ಗೈದು ಸುತ್ರಾಮಾರಿಗಳ ನಿ-ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ-ಡಾಮಣಿ ತಂದ ಮಹಾಮಹಿಮನು ಇವ 2ವಾರಿಮುಖಿ ನೀ ಕೇಳಿದರಿಂದ ಬಂದವೀರ ಹನುಮಂತನನೇರಿ ಗೋವಿಂದಸ್ವಾರಿಗೆ ಪೊರಟ ಚಾತುರ್ದಶಿ ದಿವಸಆರತಿಯನು ಕೈಕೊಳ್ಳುವ ಶ್ರೀನಿವಾಸಭೇರಿಮೃದಂಗ ಮಹಾರವದಿಂದ ಸ-ರೋರುಹನಾಭ ಮುರಾರಿ ಶರಣರುದ್ಧಾರಣಗೈಯುವ ಕಾರಣದಿಂದ ಪಾ-ದಾರವಿಂದಗಳ ತೋರಿಸಿ ಕೊಡುವ 3ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿನಲವಿಂದ ವೇದಘೋಷವ ಕೇಳ್ವಶೌರಿಜಲಜಭವಾದಿ ನಿರ್ಜರರಿಗಸಾಧ್ಯಸುಲಭನಾದನು ಭಕ್ತಜನಕಿದುಚೋದ್ಯಸುಲಲಿತ ಮಂಟಪದೊಳೊ ನೆಲಸುತ ನಿ-ಶ್ಚಲಿತಾನಂದ ಮಂಗಲದ ಮಹೋತ್ಸವಗಳನೆಲ್ಲವ ಕೈಕೊಳುತಲಿ ಭಕ್ತರಸಲಹುವ ನಿರುತದಿ ಮಲಯಜಗಂಧಿನಿ 4ಶ್ರೀಕಾಂತ ಬಳಿಕ ಭಕ್ತರ ಒಡಗೂಡಿಏಕಾಂತ ಸೇವೆಯಗೊಂಡ ಕೃಪೆಮಾಡಿಸಾಕಾರವಾಗಿ ತೋರುವ ಕಾಣೆ ನಮಗೆಬೇಕಾದ ಇಷ್ಟವ ಕೊಡುವ ಭಕ್ತರಿಗೆಶ್ರೀಕರ ನಾರಾಯಣ ಶ್ರೀನಿವಾಸ ಕೃ-ಪಾಕರ ವಿಬುಧಾನೇಕಾರ್ಚಿತ ರ-ತ್ನಾಕರಶಯನ ಸುಖಾಕರ ಕೋಟಿ ವಿ-ಚಾರಕ ಭಾಸತ್ರಿಲೋಕಾಧಿಪನಿವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚಂದವೇ ಚಕ್ರವಾಹಿನಿ ಚಿದ್ರೂಪಿಣಿಸಾಂದ್ರಸರ್ವತ್ರ ಸಾಕ್ಷಿಣಿಮಂದಹಾಸ ಮುಖಾಂಬುಜ ಕೋಮಲಸುಂದರಗಾತ್ರೇಸುಮನಸಸ್ತೋತ್ರೆಪವಿಶ್ವಾತ್ಮ ವಿಶ್ವರೂಪಿಣಿ ವಿಶ್ವಂಭರಿವಿಶ್ವಪ್ರಕಾಶಮಣಿವಿಶ್ವಕರ್ತೃ ವಿಶ್ವೇಶ್ವರ ವಿನುತೇವಿಶ್ವಾತೀತೇವಿಶ್ವಭಗಿನೇ1ನಾದ ಬಿಂದು ಕಳಾತೀತೆ ನಾರಾಯಣಿವೇದ ವೇದಾಂತ ವೇದ್ಯೆಭೇದಾತೀತೆ ಯೋಗೀಶ್ವರಭರಣಿಸಾಧು ಜನರಭವಸರ್ವ ಸಂಹಾರಿಣಿ2ಭೀಮ ತೀರದಿ ನೆಲೆಸಿಹ ಸನ್ನುತಿ ಮಧ್ಯಪ್ರೇಮದಿ ನಿಂತಿಹಕಾಮಿತವೀವ ಕರುಣಾಮಯಿಸ್ವಾಮಿ ಚಿದಾನಂದ ಬಗಳ ಸ್ವರೂಪಿಣಿ3
--------------
ಚಿದಾನಂದ ಅವಧೂತರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಛೀ ಛೀ ಛೀ ಛೀಕಂಡೆಯ ಮನವೇ ಇಂಥ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನೀಚ ವೃತ್ತಿಗಳನು ಬಿಡುಕಂಡೆಯಮನವೆಪ.ಕಿವಿಗೊಟ್ಟು ಮಧುರನಾದಕೆ ಹುಲ್ಲೆಯುರವದ ಬಲೆಗೆ ಸಿಕ್ಕಿಬಿದ್ದುದನರಿಯನವಮೋಹನಾಂಗಿಯರ ಕೋಕಿಲಾಪದಸವಿ ಕೇಳದಾತನ ಕಥೆ ಕೇಳು ಮನವೇ 1ನಲಿದೆದ್ದುಕರಿ ಎಳೆಯ ತೃಣ ಸ್ಪರುಷನಕಾಗಿಕುಳಿಗೆ ಬಿದ್ದಿರುವುದ ಕಂಡು ಕಂಡರಿಯನಳಿನಾಕ್ಷಿಯರಂಗಸಂಗವ ಮೆಟ್ಟಿ ಕೆಡದೆ ಶ್ರೀಲಲನೇಶನಂಘ್ರಿಯಾನಪಿವೇಕೋ ಮನವೇ 2ಗಾಣದ ತುದಿಯ ಮಾಂಸವ ಮೆಲುವ ಮತ್ಸ್ಯವುಪ್ರಾಣವ ಬಿಡುವುದ ಕಂಡು ಕಂಡರಿಯ ?ಮಾನಿನಿಯ ಬಯಸದೆ ಶ್ರೀ ನಾರಾಯಣನಧ್ಯಾನಾಮೃತವನು ಸವಿದುಣ್ಣೋ ಮನವೆ 3ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಕಣ್ಣುಗೆಡುವುದನು ಕಂಡು ಕಂಡರಿಯ ?ಬಣ್ಣರ ಬಾಲೆಯರ ರೂಪಕೆ ಮರುಳಾಗಿಮಣ್ಣು ತಿನ್ನದೆ ಮಾರನಯ್ಯನ ನೆನೆ ಮನವೆ 4ಅಳಿ ಪರಿಮಳನಾಗಿ ಕಮಲದೊಳಗೆ ಸಿಲುಕಿಅಳಿದು ಹೋಹುದನು ಕಂಡ ಕಂಡರಿಯ ?ಬಳಲದೆ ವರಪುರಂದರ ವಿಠಲನಂಘ್ರಿಯತುಳಸಿ ನಿರ್ಮಾಲ್ಯವಾಫ್ರಾಣಿಸು ಮನವೆ 5
--------------
ಪುರಂದರದಾಸರು
ಜಗವು ನಿನ್ನಧೀನ ಖಗಪತಿವಾಹನನಿಗಮಗೋಚರ ಕೃಷ್ಣ ನಿತ್ಯತೃಪ್ತ ಮೋಹನಪ.ಇಂದ್ರಿಯ ಪ್ರೇರಕಇಂದಿರೆನಾಯಕಸಿಂಧುಶಯನ ಸದಾನಂದ ಸುಖಪ್ರದ 1ಜೀವವಿಲಕ್ಷಣ ಜೀವಸಂಪ್ರೇಕ್ಷಣಕೇವಲ ನಿರ್ಗುಣ ಕೇಶಿನಿಷೂದನ 2ವಾಯುಜನಕ ಯದುರಾಯ ರುಕ್ಮಿಣಿಸಖಪ್ರಿಯ ಶ್ರೀ ಲಕ್ಷುಮಿನಾರಾಯಣ ಪಾವನ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯ ಶ್ರೀ ಮಹಾಲಿಂಗ ಗೋಪತುರಂಗಜಯ ಜಯ ಶ್ರೀ ಮಹಾಲಿಂಗ ಪ.ಜಯರಹಿತಾಚ್ಯುತಪ್ರಿಯ ಬುಧಾರ್ಚಿತದಯಾಸಾಗರ ಭಸಿತಾಂಗನಯನತ್ರಯ ನಮಿತಾಮರಸಂಘಾ-ಮಯಹರ ಗಂಗೋತ್ತುಮಾಂಗ 1ಭೂತೇಶಭೂರಿಭೂತಹೃದಿಸ್ಥಿತಭೂಷಣೀಕೃತಭುಜಂಗಪೂತಾತ್ಮ ಪರಮಜ್ಞಾನತರಂಗಪಾತಕತಿಮಿರಪತಂಗ 2ಲಂಬೋದರಗುಹಪ್ರಮುಖಪ್ರಮಥನಿಕು-ರುಂಬಾಶ್ರಿತ ಜಿತಸಂಗಗಂಭೀರಗುಮಕದಂಬೋತ್ತುಂಗ-ಸಂಭೃತ ಹಸ್ತಕುರಂಗ 3ಸೋಮಶೇಖರ ಮಹಾಮಹಿಮ ವಿಜಿತ-ಕಾಮ ಕಲಿಕಲುಷಭಂಗರಾಮನಾಮ ಸ್ಮರಣಾಂತರಂಗವಾಮಾಂಕಾಸ್ಥಿತ ಪಿಂಗ 4ದೇವ ಲಕ್ಷ್ಮೀನಾರಾಯಣ ಪದರಾ-ಜೀವನಿರತ ವನಭೃಂಗಪಾವಂಜಾಖ್ಯ ಗಿರೀಶ ಶುಭಾಂಗಕೇವಲ ಸದಯಾಪಾಂಗ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ