ಒಟ್ಟು 2786 ಕಡೆಗಳಲ್ಲಿ , 117 ದಾಸರು , 2021 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೆ ಪದುಮಾಲಯೆ, ನೀನೇ ಗತಿ ಪ ಬಾಲಕನು ತಾನಾಗಿ ಗೋಪಿಗೆ ಲೀಲೆಯಿಂದಲಿ ನಂದ ಗೋಕುಲ- ಬಾಲೆಯರ ಮೋಹಿಸುತ ಅಸುರರ ಕಾಲನೆನಿಸಿದ ಬಾಲಕನ ಪ್ರಿಯೆ ಅಪ ಅನ್ಯರ ನೆನೆಯಲೊಲ್ಲೆ ನಿನ್ನಯ ಪಾದ- ವನ್ನು ನಂಬಿದೆ ನೀ ಬಲ್ಲೆ ತಡಮಾಡದೆ ಚಿಣ್ಣ ಕರೆಯಲು ಘನ್ನ ಮಹಿಮನು ಉನ್ನತದ ರೂಪಿನಲಿ ಗುಣಸಂ ಪನ್ನ ರಕ್ಕಸನನ್ನು ಸೀಳಿದ ಪನ್ನಗಾದ್ರಿ ನಿವಾಸೆ ಹರಿಪ್ರಿಯೆ 1 ಅರಿಯದ ತರಳನೆಂದು ಶ್ರೀಪತಿ ಸತಿ ಕರುಣದಿ ಸಲಹೆ ಬಂದು ಕರುಣಾಸಿಂಧು ಸರಸಿಜಾಸನ ರುದ್ರರೀರ್ವರ ವರದಿ ಮೂರ್ಖನು ಸುರರ ಬಾಧಿಸೆ ಹರಿವರರ ದಂಡೆತ್ತಿ ಬಹುಮುಖ ದುರುಳನ ಶಿರ ತರಿದವನ ಪ್ರಿಯೆ 2 ಅಜ ಮನಸಿಜ ಜನನಿ ಅಂಬುಜಪಾಣಿ ನಿತ್ಯ ಕಲ್ಯಾಣಿ ಕುಜನಮದರ್Àನ ವಿಜಯವಿಠ್ಠಲ ಭಜಿಸಿ ಪಾಡುವ ಭಕ್ತಕೂಟವ ನಿಜದಿ ಸಲಹುವೆನೆಂಬ ಬಿರುದುಳ್ಳವಿಜಯಸಾರಥಿ ವಿಶ್ವಂಭರ ಪ್ರಿಯೆ 3
--------------
ವಿಜಯದಾಸ
ಪಾಲಿಸೆನ್ನ ಗೋಪಾಲ ಕೃಷ್ಣ ಪ ಪಾಲಿಸೆನ್ನ ದಧಿಪಾಲ ಮುಖರ ಗೋ ಪಾಲಬಾಲ ಕೃಪಾಲಯ ಹರಿಯೇ ಅ.ಪ. ಭವ ರುಂಡಮಾಲ ಮೇ ಷಾಂಡ ಪ್ರಮುಖ ಸುರಷಂಡ ಮಂಡಿತನೆ 1 ಗೋಪಿ ಗೋಪಾಲ ವೃಷ್ಣಿಕುಲ ದೀಪ ಶ್ರೀಪಶಿವಚಾಪ ಭಂಜನಾ 2 ಅಂಡಜಾಧಿಪ ಪ್ರಕಾಂಡ ಪೀಠ ಕೋ ದಂಡಪಾಣಿ ಬ್ರಹ್ಮಾಂಡ ನಾಯಕ 3 ವ್ಯಾಪ್ತ ಗೋಪ್ತ ಜಗದಾಪ್ತ ದೋಷ ನಿ ರ್ಲಿಪ್ತ ಪ್ರಾಪ್ತಗತಸುಪ್ತ ಸುಷುಪ್ತಾ 4 ವೇದವೇದ್ಯ ಬ್ರಹ್ಮಾದಿವಂದ್ಯ ಸುಖ ಬೋಧಪೂರ್ಣ ಬ್ರಹ್ಮೋದನ ಭೋಕ್ತಾ 5 ಅಧ್ವರೇಶ ಲೊಕೋದ್ಧಾರÀ ಪಾಣಿ ಸ ರಿದ್ವರ ಪಿತಗುರು ಮಧ್ವವಲ್ಲಭಾ6 ಪೋತ ವೇಷದರ ಪೊತನಾರಿ ಪುರು ಹೂತ ಮದಹ ಜಗನ್ನಾಥ ವಿಠ್ಠಲ 7
--------------
ಜಗನ್ನಾಥದಾಸರು
ಪಾಲಿಸೆನ್ನ ಪಾಲನಶೀಲೆ ಪಾಲಿತ ಸುರನರಜಾಲ ಸುಶೀಲೆ ಪ ಕ್ಷೀರಶರಧಿ ಸುಕುಮಾರಿಣಿ ಲಕ್ಷ್ಮೀ ವಾರಿಜಮುಖಿ ಸಿತವಾರಿರುಹಾಕ್ಷಿ 1 ಅಂಬೆ ಭುವನಕುಟುಂಬೆ ರಮಾಂಬೆ ನಂಬಿ ಭಜಿಸುವದು ಡಾಂಬಿಕಮೆಂಬೆ 2 ಯುಕ್ತಿಯು ಶಕ್ತಿ ವಿರಕ್ತಿಗಳಿಲ್ಲ ಉಕ್ತಿ ಮಾತ್ರದಿಂದ ಭಕ್ತಿಕೊಡೆಲ್ಲ 3 ಜಯಕರುಣಾಲಯೆ ಜಯಮಣಿವಲಯೆ ಜಯನಿಸ್ತುಲಯೆ ಜಡಮತಿಗೊಲಿಯೆ 4 ಧರೆಯೊಳುತ್ತಮ ಪುಲಿಗಿರಿಯೊಳಿರುವನೆ ಶರಣರ ಪೊರೆಯುವ ವರದವಿಠಲನ [ರಾಣಿಯೆ] 5
--------------
ವೆಂಕಟವರದಾರ್ಯರು
ಪಾಲಿಸೆನ್ನನು ಶ್ರೀ ಲೋಲ ಸದ್ಗುಣ ವಿಶಾಲ ನೀಲ ಪ. ಶ್ರೀರಮಣನೆ ನಿನ್ನ ಚರಣ ಸದ್ಗುಣಗಣ ವಾರಿಧಿಗಣನೆ ನೀನೆಂದು ಸಿರಿದೇವಿಯಂದು ಪಾರವಿಲ್ಲದ ತವ ಚರಿತ್ರೆಯ ಸಾರಗಳನೀಕ್ಷಿಸಲು ನಯನಾಂ- ಪಾದ ಹತಮಾಂಸಾರಕೇಶವ 1 ಶ್ರುತಿ ತತಿಗಳನೈದಸುರನ ಕೊಂದ ದಿತಿಜಗೋಸುಗ ನಗಧರನ ಕೃಪಹಾರ ಹಣನ ದಿತಿಜಹರ ಸುರತತಿಗೆ ರಾಜ್ಯವನತಿ ವಿಲಾಸದೊಳಿತ್ತ ಭಾರ್ಗವ ಬಾಧ್ಯನೆ ಅತುಳಹಯನೆ 2 ಸುರರು ನಿನ್ನಯ ಪಾದ ನಿರ್ಮಲ ರಜೋದ್ಧಾರಕರ ಬಿನ್ನಪವ ಕೇಳ್ ಗಜ ಚರ್ಮ ವಸ್ತ್ರ ಸಮಧ್ವಜಾಸನ ನಿನ್ನ ದಾಸರ ದಾಸರೊ- ಷಣ್ಮುಖಾತ್ಮಜ ಜಯನ ಗಿರಿಗನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೆನ್ನಪರಿ ಪಾಲನಶೀಲೆ ಪಾಲಿತಸುರನರ ಜಾಲಸುಶೀಲೆ ಪ ಶರಧಿ ವಾರಿಜಮುಖಿಸಿತವಾರಿರುಹಾಕ್ಷಿ 1 ನಂಬಿಭಜಿಸುವುದು ಡಾಂಬಿಕಮೆಂಬೆ2 ಯುಕ್ತಿಯು ಶಕ್ತಿವಿರಕ್ತಿಗಳಿಲ್ಲ ಉಕ್ತಿಮಾತ್ರದಿಂದ ಭಕ್ತಿಕೊಡೆಲ್ಲ3 ಜಯನಿಸ್ತುಲಯೆ ಜಡಮತಿ ಗೊಲಿಯೆ 4 ಶರಣರ ಪೊರೆಯುವ ವರದ ವಿಠಲನೆ 5
--------------
ಸರಗೂರು ವೆಂಕಟವರದಾರ್ಯರು
ಪಾಲಿಸೈಯಪಾರ ಮಹಿಮ ಪತಿತ ಪಾವನ ಪ. ನೀಲ ಎನ್ನ ಅ.ಪ. ಇಂದಿರಾ ಮನೋಹರ ಆನಂದ ಮೂರುತಿಯೆ ನಿನ್ನ ವಂದಿಸಿ ಬೇಡುವ ಎನಗೆ ಸಂದರುಶನವೀಯ ರಾಯ ತಂದೆ ಮುಕುಂದ ಮನ್ನಿಸೆಲೊ ಕಂದನಾದೆನ್ನ ಮರೆಯದೆ ಬಂದು ನಿಂದು ಮುಖವ ತೋರೊ ಸುಂದರ ಅರವಿಂದನಯನ 1 ತಾತನಾಗಿ ಎನ್ನೊಳೊಂದ ಮಾತನಾಡದಿರುವರೇನೊ ನಾಥ ನೀನೇ ಕಾಯದಿರಲು ಖ್ಯಾತಿವಂತರನ್ನು ಕಾಣೆ ಪರಾಕು 2 ವಾಸುದೇವ ಕೈಯ ಬರದೆ ದೋಷವ ನಾಶಮಾಡಿ ನಿನ್ನ ದಾಸನೆಂದೆನಿಸೊ ನಿನ್ನ ಬೇಸರಿಸದೆ ಶೇಷಗಿರಿವಾಸ ವೆಂಕಟೇಶ ಪೊರೆಯೊ 3
--------------
ಸರಸ್ವತಿ ಬಾಯಿ
ಪಾಲಿಸೈಯ್ಯ ಇವಳಾ ಶ್ರೀ ಭೂತರಾಜರ ಹೃನ್ಮಂದಿರ ನಿಲಯ ಧವಳ ಗಂಗಾವಾಸಿ ಹಯಮುಖನ ತನಯ ವಾಗೀಶಗುರು ಅರ್ಚಕಾ ಪ ನಿತ್ಯ ನಿನ್ನಲ್ಲಿಶ್ರೀಹರಿಯು ಅನುಗಾಲ ಕೋಲಾಹಲದೆ ಮಾಳ್ಪ ಆನಂದ ಕ್ರೀಡೆಗಳ ಕಾರುಣ್ಯರೂಪದಲಿ 1 ಸತಿ ಭಾರತಿಯು ಪರುಶುಕ್ಲಳೊ ಸತತ ಧ್ವನ್ತದುರಾಗಮಾ ನೀನೆಂದು ಸಾರುತಿದೆ ಶೃತಿಯು ಶೃತಿವೇದ್ಯ ನೀನೈಯ್ಯ ಶೃತಿಯಿಂದ ನೀ ಗಮ್ಯ ಶೃತ್ಯರ್ಥರೂಪ ನೀನೆನಗೆ ಸತತಾ 2 ನಾ ಪಾಮರಕೆ ಪಾಮರನು ಎಂದೆಂದು ಮಮಸ್ವಾಮಿ ನಾನು ತುತಿಸಲಾಪೆನೆ ನಿನ್ನ ನಿರ್ದೋಷಗುಣರಾಶಿಯಾ ಗಾನಮಾಡಿ ವೈರಾಗ್ಯ ಶಕ್ತಿ ಭಕ್ತ ಯುಕ್ತಿ ರಾಘವ ಎಮಗಿಲ್ಲವೆನುತಾ ಬಾಗಿ ಬಗ್ಗಿ ಹಾರುವುದು ಪೀಠಕೆ ಸತತ ಶಿವಶೇಷ ಗುರುತಾದಿ ಸುರಕೋಲಿನಿಕರಾ 3 ಒಂದು ಅರಿಯದಾಕಂದ ಇಂದಿರೆಯು ನಂಬಿಹಳು ಗತಿದಾತನೆಂದು ಸತತ ಅಂತರಂಗದಿ ನಲಿವ ಮಮತೆ ನಾನಿನ್ನ ನಿಜ ದೂತನೆಂದು ಹೌದಾದರವಳ ಮನ ಸೆಳೆದು ನಿನ್ನಲ್ಲಿ ಶ್ರೀಕೃಷ್ಣನಲಿ ಬಿಡು ಅವಳ ವಾಜಿವದನಾರ್ಚಿಶ್ರೀವಾದಿರಾಜ 4 ಜಾಗರ ಭಾರತೀಶ 5
--------------
ಗುರುತಂದೆವರದಗೋಪಾಲವಿಠಲರು
ಪಾಲಿಸೊ ಶ್ರೀನಿವಾಸ ಜಗದೀಶ ಪ ಮೇಲುಗಿರೀಶ ಹೃತ್ಕುಮುದನಿವಾಸ ಸತೀಶ ನೀನೆ ಅವಿನಾಶನೆ ಅನಿಶ ಅ.ಪ ಅನಿಮಿತ್ತ ಬಂಧು ನೀ ನಿನ್ಹೊರತು ಅನ್ಯರುಂಟೇ ಅನಪೇಕ್ಷನು ನೀ ದೀನರಕ್ಷನೆ ನಾನೇನರ್ಪಿಸಬಲ್ಲೆ ನೀ ಬಲ್ಲೆ ಅನುದಿನ ಮನೋವಾಚಕಾಯದಿ ನಾನೆಸಗುವುದು ಬಲ್ಲೆ ಅಲ್ಲಲ್ಲೇ ಘನಮಹಿಮನೆ ಎನ್ನ ಮನದಲ್ಲಿ ಅನುದಿನ ನಿನ್ನ ನೆನೆಯುವುದನೆ ಇತ್ತು ಕೊನೆಗಾಣಿಸು ಇನ್ನು 1 ಸತ್ಯಸಂಕಲ್ಪ ನೀ ನಿತ್ಯನೂತನಪ್ರಭುವೇ ಅತ್ಯಧಿಕದಿ ಭಕ್ತೋತ್ತಮರು ನಿತ್ಯ ಸೇವಿಸುತಿಹರೋ ಅವರ ಭೃತ್ಯನೆನಿಪ ಸಂ- ಪತ್ತನಿತ್ತು ಆಪತ್ತು ಹರಿಸಿ ಭಕ್ತಿಯ ನೀಡಯ್ಯ ಕರ್ಮ ಬೆನ್ಹತ್ತಿ ಹತ್ತಿ ಆಸೆ ಪೊತ್ತು ಕೊನೆಗೆ ನಾ ಉನ್ಮತ್ತನಾದೆ 2 ಪ್ರಣವಸ್ತಗೆ ದೇವಾ ನೀ ಪ್ರಣತ ಕಾಮದ ಕಾವಾ ಪ್ರಣತ ಜನರ ಮುಖ್ಯಪ್ರಾಣಾಂತರ್ಗತ ಫಣಿರಾಜಶಯ್ಯ ಹೇ ಜೀಯ್ಯ ಗುಣಮಣಿ ಶ್ರೀ ವೇಂಕಟೇಶ ಕ- ರುಣಾಕರ ಇನ್ನು ನಿನಗೆಣೆಯ ದೊರೆಯೆ ಮಣಿದು ಬೇಡುವೆ ನಿನ್ನ ದಣಿಸಲಾಗದು ಇನ್ನೂ ಧಣಿಯು ನೀ ಉರಗಾದ್ರಿವಾಸ ವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಪಾಲಿಸೋ ದಾಸರಾಯ ಗುರುವೆ ನೀ ಪಾಲಿಸೋ ಗುರುವೆ ಪ ಪಾಲಿಸು ನಾಗರಾಯಾಖ್ಯ ದಾಸ ಶೀಲವರ್ಯನೆ ನೀ ಮುಖ್ಯ ||ಅಹಾ|| ಶ್ರೀಲೋಲನ ಗುಣ ಲೀಲಾಜಾಲದಿ ಆ ಬಾಲವೃದ್ಧÀ್ದರಿಗರುಹಿ ಮೆರೆದ ಗುರು ಅ.ಪ ಬಂದೆ ದಯಾಂಬುಧೆ ಎನ್ನ ಮನದ ಕುಂದು ಕೊರತೆಗಳನ್ನ ಇನ್ನು ಬಂದ ಸಂಶಯಗಳನ್ನ ಹರಿಸಿ ಇಂದು ತೋರಿದೆ ನಂದವನ್ನ ||ಅಹಾ|| ತಂದೆ ಮುದ್ದುಮೋಹನ್ನವಿಠ್ಠಲನ್ನ ಹೃದಯಾರ ವಿಂದದಿ ಮುದದಿ ನೋಡುವ ಗುರು 1 ಮಾರ್ಗ ಮಾರ್ಗವನೆ ಚರಿಸುತ್ತಾ ದು ರ್ಮಾರ್ಗರ ಎದೆ ಗೆಡಿಸುತ್ತಾ ಸ ನ್ಮಾರ್ಗಕ್ಕೆ ನೀನವರ ತರುತ್ತಾ ಸಾರ್ದೆ ದುರ್ಗದೊಳ್ ನೀ ಚರಿಸುತ್ತಾ ||ಅಹಾ|| ದುರ್ಗಮರಾದ ದುರಾಗ್ರಹ ನಿಗ್ರಹ ಭೋರ್ಗರೆದು ಸುಖ ಸಂಸರ್ಗವ ತೋರ್ದ ಗುರು 2 ಪರಮ ಕರುಣದಿ ಇಂದೆನ್ನಾ ಪೊರೆದೆ ಶ್ರೀ ವೆಂಕಟೇಶಾಭಿನ್ನಾ ಉರಗಾದ್ರಿವಾಸವಿಠ್ಠಲಾಖ್ಯನ್ನಾ ತೋರಿಕೊಟ್ಟೆ ನೀನಂಕಿತವನ್ನಾ ||ಅಹಾ|| ಗುರು ನಿನ್ನ ಕರುಣಕ್ಕೆಣೆಯುಂಟೆ ಧರೆಯೊಳು ಉರಗಾದ್ರಿವಾಸವಿಠ್ಠಲನ ನಿಜದಾಸ 3
--------------
ಉರಗಾದ್ರಿವಾಸವಿಠಲದಾಸರು
ಪಾಲಿಸೋ ರಘುರಾಯಾ ಪ ಜಾನಕಿ ಮನೋಹರಾ| ಇನಕುಲ ಶೇಖರಾ 1 ಭರತಾಗ್ರಜವರ| ಸುರಸಂಕಟ ಹರ 2 ದಶರಥ ನಂದನ| ಋಷಿಮುಖ ಪಾಲನಾ 3 ಪ್ರಮಥಾಧೀಪ ಧ್ಯೇಯ| ವಿಮಲ ಗುಣಾಲಯಾ 4 ತಂದೆ ಮಹಿಪತಿ| ನಂದನ ಸಾರಥಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು
ಪಾಹಿ ಖಳಜನ ಬಾಧ ಪಾಹಿ ಗೋವಿಂದ ಪ. ಪಾಹಿ ಗೋಪಿಯನಾಥ ಪಾಹಿ ಮನ್ಮಥ ತಾತ ಪಾಹಿ ಲಕ್ಷ್ಮೀಕಾಂತ ಪಾಹಿ ಭೂಕಾಂತ ಅ.ಪ. ಮತ್ಸ್ಯರೂಪಿಲಿ ಬಂದು ಬಲಿದ ದೈತ್ಯನ ಕೊಂದೆ ಬೆಚ್ಚರದೆ ಬಹುಗಿರಿಯ ಬೆನ್ನಲ್ಲಿ ತಾಳ್ದೆ ಬಚ್ಚಿಟ್ಟ ಧರಣಿಯನ್ನು ಬಲುಮೆಯಿಂದಲಿ ತಂದೆ ಅರ್ಚಿಸಿದ ಪ್ರಹ್ಲಾದಗೆ ಒಲಿದೆ ನರಸಿಂಹ 1 ಕುಬ್ಜರೂಪಿಲಿ ನೆಲನ ಬೇಡಿ ಬಲಿಯನು ತುಳಿದೆ ಪಿತನಾಡಿದ ಶಬ್ದವನ್ನು ಕೇಳಿ ಮಾತೆಯ ಶಿರವನಳಿದೆ ಕೊಬ್ಬಿದ್ದ ರಾವಣನ್ನ ಕಂದರವ ಖಂಡಿಸಿದೆ ಅಬ್ಜಮುಖಿ ಜಾನಕಿಯನಾಳಿದೆ ಶ್ರೀರಾಮ 2 ತುರುಹಿಂಡ ಕಾಯ್ದು ತಪವಳಿದು ಪತಿವ್ರತೆಯರ ಭರದಿ ವಾಜಿಯನೇರಿ ಚರಿಸುತ್ತ ಬಂದೆ ಕರುಣಾಳು ಶ್ರೀ ಹೆಳವನಕಟ್ಟೆ ರಂಗಯ್ಯ ಪಿಳ್ಳಂ- ಗಿರಿ ವಾಸ ಶ್ರೀ ವೆಂಕಟೇಶ 3
--------------
ಹೆಳವನಕಟ್ಟೆ ಗಿರಿಯಮ್ಮ
ಪಾಹಿ ಪದ್ಮದಳಾಯತಾಂಬಕ ಪಾಹಿ ಪದ್ಮಾರಮಣ ಪರಾತ್ಪರ ಪಾಹಿ ಪದ್ಮಾಸನ ಜನಕ ಮಾಂ ಪಾಹಿ ಪ್ರಪನ್ನ ಪಾಲಕ ಪ ವಾಸುದೇವ ಕೃತೀಶ ಶಾಂತಿಪ ಕೇಶವಾಚ್ಯುತ ವಾಮನ ಹೃಷೀಕೇಶ ಪ್ರಶ್ನಿಗರ್ಭ ಋಷಭ ನೃಕೇಸರಿ ಹಯಗ್ರೀವ ವೇದ ವ್ಯಾಸ ದತ್ತಾತ್ರಯ ಉರುಕ್ರಮಾ ವಾಸವಾನುಜ ಕಪಿಲ ಯಜ್ಞ ಮ ಹೇಶ ಧನ್ವಂತ್ರಿ ಹಂಸ ಮಹಿ ದಾಸ ನಾರಾಯಣ ಕೃಷ್ಣಹರೆ 1 ಮಾಧವ ಪ್ರದ್ಯುಮ್ನ ಶ್ರೀ ದಾಮೋದ ರಾಧೋಕ್ಷಜ ಜನಾರ್ದನ ಶ್ರೀಧರ ಶ್ರೀ ಪದ್ಮನಾಭ ವೃಕೋದರ ಪ್ರಿಯತಮ ತ್ರಿವಿಕ್ರ ವಿರಿಂಚಿ ವಿನುತ ಗದಾಧರ ಗಯಾಸುರ ವಿಮರ್ದನ ಸಾಧಿತ ಜಗತ್ರಯ ಪುರಾತನ ಪಾದ ಪರಮ ಕೃಪಾಂಬುಧೇ ಮಾಂ 2 ನಂದಗೋಪನ ಕುಮಾರ ಗೋಪಿ ವೃಂದ ಪೋಷಿತನಮಿತ ಸಂಕ್ರಂಡನ ಕೃಪಾ ಸಾಂದ್ರ ವರ ಕಾಳಿಂದಿ ತಟನಿ ವಿಹಾರ ಪಾಂಡವ ಬಂಧು ದ್ರೌಪದಿವರದ ನೃಪ ಮುಚು ಕುಂದಸ್ತುತಿ ಸಂಪ್ರೀತ ಲಕ್ಷ್ಮೀ ನಂದಮಯ ನಿಜ ಭಕ್ತವತ್ಸಲ 3 ಮೀನಕೂರ್ಮವರಾಹ ಪಂ ದಿತಿಸುತ ವಾಮನ ಕ್ಷೋಣಿಪಾರ್ವನ ಬ್ರಾಹ್ಮಣ ಪ್ರಿಯ ವನೌಕಸನಾಥ ಮುಖ್ಯ ಪ್ರಾಣಸಖ ವಸುದೇವ ದೇವಕಿ ಸೂನು ಸುಂದರಕಾಯ ಪುರಹರ ಬುದ್ಧ ಕಲ್ಕಿ ಪ್ರ ಧಾನ ಪುರುಷೇಶ್ವರ ದಯಾಕರ 4 ನಿಂತ ನಿಜಬಲ ಮಾತುಳಾಂತಕ ಶ್ವೇತವಾಹನ ಸೂತ ತ್ರಿಗುಣಾ ತೀತ ಭವನಿಧಿ ಪೋತ ಮೋಕ್ಷನಿ ಕೇತನಪ್ರದ ಭೂತಭಾವ ಧೌತ ಪಾಪ ವ್ರಾತ ತ್ರಿಜಗತಾತ ನಿರ್ಗತ ಭೀತ ಶ್ರುತಿ ವಿಖ್ಯಾತ ಭಕ್ತಿಸುವೇತನ ಪ್ರಿಯ ಭೂತಿದ ಜಗನ್ನಾಥ ವಿಠ್ಠಲ 5
--------------
ಜಗನ್ನಾಥದಾಸರು
ಪಾಹಿ ಪಾಂಡವ ಪರಿಪಾಲ ನೀನೇ ನಿತ್ಯ ಮಹದಾದಿವಂದ್ಯಾ ಸುಶೀಲಾ ಪ ದೈಹಿಕ ಮೊದಲಾದ ಕರ್ಮವ ಮಾಡಿಸಿ ಮೋಹಕ ಪಾಶವ ಓಡಿಸು ಕೇಶವಾಅ.ಪ ಇಂದ್ರತನಯಾ ಮಾನಭಂಗ ಮಾಡಿದೆ ನೀನು ಇಂದು ಉಂಡೆನೋ ಸಿರಿರಂಗಾ ಮಂದರೋದ್ಧರ ಕೋಮಲಾಂಗಾ ಕೇಳೊ ಪೊಂದಿಸು ಸುಜನರ ಸಂಗಾ ಕಂದರ್ಪಜನಕ ಆನಂದ ವಿಗ್ರಹ ಪೂರ್ಣ ಮಾತನು ಸುಂದರ ನಿಜ ಭಕ್ತ ವೃಂದ ಮಹೋದಧೇ 1 ಕಾಲಕರ್ಮ ಗುಣದಿಂದಾ ವೃಥಾಯು ವೇಳೆಯ ಕಳದೆ ಮುಕುಂದಾ ಪೇಳಾ ಲೇಸೊ ಪ್ರತಿ ಬಂಧಾ ಇನ್ನು ನಾನು ತಾಳಲಾರೆ ದು:ಖದಿಂದಾ ಆಲಸ ತಾಳದೆ ಆಲಿಸು ಮಾತನು ಆಳುಗಳೊಳಗಿಹ ಆಳಾನೆಂದು 2 ಅನಾದಿಯಿಂದಲಿ ನಿನ್ನ ಪದಗಳ ಧ್ಯಾನವ ಮಾಡುವೆ ಚನ್ನಾ ನಾನಾ ಬಗೆಯಿಂದ ಯೆನ್ನಾ ಸಾಕುತಲಿಪ್ಪ ನೀನೆ ಮುಖ್ಯನೊ ಪ್ರಸನ್ನ ಅನಂತಶಯನ ಭೋ ವಿಜಯವಿಠ್ಠಲರೇಯ ಮಾನದಲಿ ನಿಂದು ಪ್ರಾಣಪ್ರೇರಕನಾಗೊ 3
--------------
ವಿಜಯದಾಸ