ಒಟ್ಟು 21316 ಕಡೆಗಳಲ್ಲಿ , 137 ದಾಸರು , 8969 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹುಚ್ಚು ಹತ್ತಿತು ಹುಚ್ಚು ಹುಚ್ಚು ಜ್ಞಾನದ ಹುಚ್ಚುಹುಚ್ಚು ತಿಳಿವುದಲ್ಲ ಹುಚ್ಚನ ಗುರುವೇ ಬಲ್ಲಪನಿರ್ಮಳಾಂಗದ ಹುಚ್ಚುನಿಗಮಶಿರದ ಹುಚ್ಚುಕರ್ಮರಹಿತನ ಹುಚ್ಚುಕಮನೀಯಹುಚ್ಚು1ಸಜ್ಜನ ಸಂಗದ ಹುಚ್ಚು ಸಂತೋಷಪೂರಿತ ಹುಚ್ಚುವೆಚ್ಚವಿಲ್ಲದ ಹುಚ್ಚು ಎಣಿಸಬಾರದು ಹುಚ್ಚು2ಬ್ರಹ್ಮಾನಂದದ ಹುಚ್ಚು ಭೇದರಹಿತದ ಹುಚ್ಚುಹಮ್ಮನಳಿದ ಹುಚ್ಚು ಪರಿಪೂರ್ಣ ಹುಚ್ಚು3ಮತವ ಕಡಿದಾ ಹುಚ್ಚು ಮಹತ್ತೆನಿಪಾ ಹುಚ್ಚುಸತತ ಶಾಂತಹ ಹುಚ್ಚು ಸಹಜಾನಂದದ ಹುಚ್ಚು4ಲೋಕ ಸಾಕ್ಷಿಕ ಹುಚ್ಚು ಲೋಕವುತಾನಾದ ಹುಚ್ಚುಏಕವೆಂಬ ಹುಚ್ಚು ಯಮನ ಗೆಲಿದಾ ಹುಚ್ಚು5ಆರರ ಮೇಲಣ ಹುಚ್ಚು ಅನ್ಯಮನಸ್ಕದ ಹುಚ್ಚುಚಾರುತಾಮಸಹುಚ್ಚು ಚಲನೆಯಿಲ್ಲದ ಹುಚ್ಚು6ಗುರುಭಕ್ತಿಯ ಹುಚ್ಚು ಗುರೂಪದೇಶದ ಹುಚ್ಚುಸ್ಮರಣೆ ಬಲಿದ ಹುಚ್ಚು ಸಮನಿಸಿದ ಹುಚ್ಚು7ಜ್ಯೋತಿರ್ಮಯದ ಹುಚ್ಚು ಜಾತಿ ನಿರ್ಮೂಲದ ಹುಚ್ಚುಖ್ಯಾತಿಯಾಗಿಹ ಹುಚ್ಚು ಭೇದರಹಿತದ ಹುಚ್ಚು8ಚಿನ್ಮಯ ಚಿದ್ರೂಪದ ಹುಚ್ಚು ಚಿದಾನಂದನ ಹುಚ್ಚುತನ್ಮಯವಾಗಿದೆ ಹುಚ್ಚು ತಿಳಿಯಲರಿಯುವುದು ಹುಚ್ಚು9
--------------
ಚಿದಾನಂದ ಅವಧೂತರು
ಹುಚ್ಚು ಹಿಡಿದು ಕೆಟ್ಟಯೋಗಿಹುಚ್ಚು ಹಿಡಿದು ಕೆಟ್ಟನೋನಿತ್ಯನಿತ್ಯಕಾಲದಲ್ಲಿನಿಜನಾದ ಕೇಳಲಾಗಿಪಇಂದ್ರಪದವಿಯನ್ನು ಒಲ್ಲ ಈಸಪದವಿ ಮೊದಲೆ ಒಲ್ಲಹಿಂದ ಮುಂದಣ ವಿಚಾರ ಹೀನಮಾಡಿ ಮರೆತನಯ್ಯೋ1ಮಾತನಾಡೆ ಮಾತನಾಡ ಮನಕೆ ಹಿಡಿದುದನ್ನ ಬಿಡಯಾತ ಯಾತರಲ್ಲೂ ಕಿವಿಯ ನಿಡ ಯತ್ನ ಬೇರಾಯಿತಯ್ಯೋ2ಅರಿವುಮರೆವು ಆಗಿ ಇಹನು ಅರಕೆಯಿಲ್ಲದೆ ಸುಮ್ಮನಿಹನುಮರುಳು ಮರುಳು ಆಗಿ ಬುದ್ಧಿ ಮಂದನಾಗಿ ಹೋಯಿತಯ್ಯೋ3ಶರೀರ ಪರವೆಯಿಲ್ಲ ಯಾವುದರ ನಿಷೇಧವಿಲ್ಲಅರಿಯದವರು ಅದರಲ್ಲಿ ಅನ್ನ ಉಂಟೆನೆಂಬನಯ್ಯೋ4ದಯೆಯು ಇಲ್ಲ ಧರ್ಮವಿಲ್ಲ ದುಷ್ಟತನಗಳೇನು ಇಲ್ಲಬಯಲು ಚಿದಾನಂದಗುರುಬಯಲು ಕೂಡಿ ಬಯಲೆ ಆದ5
--------------
ಚಿದಾನಂದ ಅವಧೂತರು
ಹುಚ್ಚು ಹಿಡಿಸಿದೆಯಾಮಾಧವ|ನಿಚ್ಚನಿನ್ನ ಪಾದಾಂಬುಜವ ಭಜಿಪರಿಗೆ ಪಮತ್ತಗಜವೆಂಟು ಸೊಕ್ಕಿಲಿ ಕೊಲ್ವವು |ಕುತ್ತಿಗೆ ಮುರಿವರಾರು ಮಂದಿಯೂ ||ಎತ್ತ ಹೋಯಿತೋ ಬುದ್ಧಿ ಕುಳಿತುಕೊಂಡರೆ ಮೇಲೆ |ಹುತ್ತ ಬೆಳದರೆಚ್ಚರಿಕೆಯಿಲ್ಲದಂಥ 1ದಾರಾಸುತರೆನ್ನದಾರೆಂದು ನೋ |ಡರಾಗಾರ ನಮ್ಮದೆಂದು ಪೋಷಿಸರು ||ಆರಣ್ಯದಲಿ ಮುಸುಕಿಕ್ಕಿ ಧ್ಯಾನಿಸುವರು |ಶಾರೀರದ ಪರವಿಯನ್ನು ಬಿಟ್ಟಹರು 2ಬಿದ್ದು ಯದ್ದ ಕಾಳು ಆದುಕೊಂಡುಂಬರು |ಇದ್ದ ಬದುಕು ಜೋಕೆ ಮಾಡೊಲ್ಲರು ||ಪ್ರದ್ಯುಮ್ನ ಪ್ರಾಣೇಶ ವಿಠಲನೇ ಇಂಥ |ಬುದ್ಧಿಯ ಪ್ರೇರಿಸಿ ನೋಡಿ ಹಿಗ್ಗುವೆನೀ 3
--------------
ಪ್ರಾಣೇಶದಾಸರು
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ ಪಹೆಜ್ಜೆಗಳಿವೆ ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
--------------
ನಿಡಗುರುಕಿ ಜೀವೂಬಾಯಿ
ಹೆಂಡತಿ ಎಂಬ ದೇವರನು ನಂಬಿಹನಣ್ಣಹೆಂಡತಿಯೆ ದೇವರೆಂದು ಕೆಡುತಿಹನಣ್ಣಪತಲೆಗೆ ತಾನೆರೆಯುವುದೆ ಮಂಗಲ ಸ್ನಾನವಣ್ಣಬಲು ವಸ್ತ್ರವುಡಿಸುವುದೆ ಅಭಿವಸ್ತ್ರವಣ್ಣಎಲೆಗೊಪ್ಪು ಮೊದಲಾಗಿಡುವುದೇ ಆಭರಣವಣ್ಣಹಲವು ಪರಿಮಳ ಲೇಪನವೇ ಗಂಧವಣ್ಣ1ನಾನಾ ದಂಡೆಯ ಹಾರವ ಮುಡಿವುದೆ ಪುಷ್ಪವಣ್ಣನಾನಾ ಬಹುಮಾನ ಮಾಡುವುದೆ ಧೂಪವಣ್ಣನಾನಾಪರಿಉಣಿಸುವುದೆ ನೈವೇದ್ಯವಣ್ಣನಾನಾ ಸಂತಸಪಡಿಸುವುದೆ ದೀಪವಣ್ಣ2ನೆನೆದೂಳಿಗ ಮಾಡುವುದೆ ಪ್ರದಕ್ಷಿಣವಣ್ಣಮುನಿಸುವಳ ತಿಳಿಸುವುದೆ ಸಾಷ್ಟಾಂಗವಣ್ಣಇನಿತು ಪೂಜೆಯ ಮಾಡಿ ತಿರುಗೊಂದು ಭವವಣ್ಣಚಿನುಮಯ ಚಿದಾನಂದ ನಿನಗೆ ದೊರೆಯನಣ್ಣ3
--------------
ಚಿದಾನಂದ ಅವಧೂತರು
ಹೆಂಡತಿಯ ಮಾಡಿಕೊಂಡೆ ಯಾಕೋ ಕಟ್ಟಿ-ಕೊಂಡುಮಂಡೆತುರುಸುವುದ್ಯಾಕೋಪಮಕ್ಕಳಿಲ್ಲವೆಂದು ಬಳಲುವುದೇಕೋ ಎಲ್ಲಮಕ್ಕಳಳಿದರೆಂದು ಅಳುವುದೇತಕೋ1ಎಲ್ಲವ ಉಳಿದು ಹೋಹೆಯಾಕೋ ಮೋಹನವಲ್ಲಭೆಯ ಬಿಟ್ಟು ತೆರಳುವೆ ಯಾಕೋ2ಒಪ್ಪಿಸಯೋ ಸತಿಯ ಸುತರನ್ಯಾಕೋ ನೀನುಬರ್ಪಣಿಲ್ಲ ಪರಾಂಬರಿಕೆ ಯಾತಕೋ3ದುಡ್ಡನೀಗ ಕೈಲಿ ಕೊಟ್ಟೆಯಾತಕೋ ನೀನುದೊಡ್ಡ ಚೇಳು ಕಡಿಸಿಕೊಂಬೆಯಾತಕೋ4ಹೆಂಡತಿಯ ಸಂಗತಿ ಸಾಕೋಮುಂದೆ ಚೆನ್ನ ಚಿದಾನಂದನಾಗಬೇಕೋ5
--------------
ಚಿದಾನಂದ ಅವಧೂತರು
ಹೆಣಗಿದರಾಗದು ಒಣತರ್ಕದಲಿದಣಿದರೆ ಕೂಡದು ಭಕುತಿವನಜಾಕ್ಷನ ಕೃಪೆ ಮನಸ್ಸಾಕ್ಷ್ಯಾದರೆತನ ತಾನಾಹದು ಮುಕುತಿ ಪ.ಸೂಕ್ಷ್ಷ್ಮತತ್ವದಿ ದಕ್ಷನೆನಿಸದೆದೀಕ್ಷಿತ ನಾಮಿದ್ದೇನುಅಕ್ಷರಬಲದಲಿ ಲಕ್ಷವು ವೃಥಾಗುರುಶಿಕ್ಷಿಲ್ಲದ ಜನುಮೇನುಭಿಕ್ಷುಕ ಧಾನ್ಯದ ಲಕ್ಷ್ಷ್ಯದಲಿ ಪದ್ಮಾಕ್ಷನ ಪೊಗಳಿದರೇನುಕುಕ್ಷಿಯ ಲಾಭವುಅಕ್ಷಯತೋಷದಮೋಕ್ಷೋಪಾಯವದೇನು 1ದ್ರವ್ಯಾದಿವ್ರಯ ಹವ್ಯಾದಿಕ್ರಯಅವ್ಯಯಜೀವ ಸ್ವಭಾವಾಖ್ಯಕಾವ್ಯರಚನೆ ಶಬ್ದ ವ್ಯಾಕರಣದಹವ್ಯಾಸವು ಇಹ ಸೌಖ್ಯಅವ್ಯಾಕೃತ ನಾಮಾವ್ಯವಹಾರಿಲ್ಲದನವ್ಯ ಕಥಾಜನಸಖ್ಯದಿವ್ಯಮೂರುತಿ ವೇದವ್ಯಾಸಜಭವಸೇವ್ಯನ ನಿಷ್ಠೆಯೆ ಮುಖ್ಯ 2ಕಡು ಆದರದೊಳು ಕಡಲಳಿಯನ ಪದವಿಡಿಯದವನ ಶ್ರುತಿಶಾಸ್ತ್ರನಡುಹೊಳೆ ದಾಟುತ ತಡಿಯಲಿ ನಾವೆಯುಬುಡಮೇಲಾಯಿತು ವ್ಯರ್ಥದೃಢ ಪ್ರಸನ್ವೆಂಕಟ ಒಡೆಯನಾಚ್ಛಿನ್ನ ದಯಪಡೆದನುಗುರುಸುಖತೀರ್ಥನುಡಿಗಳ ಮಾಲೆಯ ತುಡುಗರ ತಮಸಕೆಬಡಿದಟ್ಟುವನು ಸಮರ್ಥ 3
--------------
ಪ್ರಸನ್ನವೆಂಕಟದಾಸರು
ಹೆಸರು ತಂದಿರ್ಯಾ ಭಿಕ್ಷಕೆ |ಹೆಸರು ತಂದಿರ್ಯಾಪಅಸಮವೀರರೆಂಬ ಹೆಸರು |ಕುಶಲಗಾರರೆಂಬ ಹೆಸರುಶಶಿಯಂತೆ ಶೋಭಿಸುವ ಶಿಶುವು |ಕುಲಕೆ ಯೋಗ್ಯನೆಂಬ ಹೆಸರು ||ಹೆಸರು||1ದಾನಶೀಲರೆಂಬ ಹೆಸರು |ಮಾನವಂತರೆಂಬ ಹೆಸರು |ಸಾನುರಾಗದಲ್ಲೂ ಆತ್ಮ |ಜ್ಞಾನಿಗಳೆಂದೆಂಬ ಹೆಸರು2ಹಿರಿಯ ಮನೆತನದ ಹೆಸರು |ಗುರುಗಳಾ ಭಕ್ತಿಯಲಿ ಹೆಸರು |ಪರಮಭಾಗವತರ ತೆರದಿ |ಹರಿಯ ಶರಣರೆಂಬ ಹೆಸರು3ಪುತ್ರವತಿಯರೆಂಬ ಹೆಸರು |ಸತ್ಯಶೀಲೆಯರೆಂಬ ಹೆಸರು |ಪತಿಯ ಸೇವೆಯಲ್ಲಿನಿರತ|ಪತಿವ್ರತೇಯರೆಂಬ ಹೆಸರು4ಸತ್ಯಸಂಧರೆಂಬ ಹೆಸರು |ತತ್ವಜÕರೆಂದೆಂಬ ಹೆಸರು |ಚಿತ್ತ ಶುದ್ಧರೆನಿಸಿ | ಗೋವಿಂದಾನ |ದಾಸರೆಂಬ ಹೆಸರು5
--------------
ಗೋವಿಂದದಾಸ
ಹೇ ದಯಾಬ್ಧೇ ಪಾಲಿಸೆನ್ನನು | ಶ್ರೀದ ಹನುಮಂತ ಪಭೂಧವಜ ನದಿಯಲ್ಲಿ ನಿಂತಾ ಕಾಳೀಕಾಂತ ವೀತಚಿಂತಾ ಅ.ಪ.ರಾವಣಾನುಜನಂತೆ ಮತ್ತಾ ಶೈಲಸುತನಂತೆ |ದೇವತೆಗಳೀಶನಂತೆ ದೇವತೆಗಳಂತೆ ||ಆವವಿಕ್ರಮಪಾರ್ಥನಂತೆ ಕಾದಿ ಬಿದ್ದಾ ಕಪಿಕುಲದಂತೆ |ತಾವರೆಯಸಖಸೂರ್ಯನಂತೆ ತತ್ಸುತ ಸುಗ್ರೀವನಂತೆ 1ಭೂವರಾಧಿಪ ಧರ್ಮನಂತೆ ದ್ರೌಪದಿಯಂತೆ |ಭೂವಿ ಬುಧಸುತನಂತೆ ರಾಕ್ಷಸಿಯಂತೆ ಫಣಿಯಂತೆ ||ಆ ವಿರಾಟರಾಯನಂತೆ ಪಾರ್ವತಿಯ ನಾಥನಂತೆ |ನೀ ವಿಜಯನಾಗಲು ಸಹಿಸದಲೆ ಕೋಪಿಸಿದ ಧೃತರಾಷ್ಟ್ರನಂತೆ ||ಮೋದದಿಂದ ನಿನ್ನ ಪಡೆದಾ ಮಧ್ಯಗೃಹನಂತೆ |ಆದರದಿ ಹರಿಪೂಜೆ ಮಾಳ್ಪಾಸೂರಿಜನರಂತೆ ||ಆ ದಿನ ಕಡಲಲ್ಲಿ ಮುಳುಗಿ ಪೋಗುತ್ತಿದ್ದಾ ನಾವೆಯಂತೆ |ಪಾದಹಿಡಿದಾ ಕಾಳೀಸರ್ಪನ ಕಾಯ್ದ ಪ್ರಾಣೇಶ ವಿಠ್ಠಲನಂತೆ 3
--------------
ಪ್ರಾಣೇಶದಾಸರು
ಹೇ ಮನವೆ ಈ ದೇಹ ಗಾಳಿದೀಪ ಪ.ನಳ ಪುರೂರವ ಹರಿಶ್ಚಂದ್ರ ಪುಣ್ಯಶ್ಲೋಕರುಇಳೆಯೊಳು ಒಯ್ಯಲಿಲ್ಲ ದಾರೂ 1ಹಂಬಲಗಡಲೊಳು ಮುಳುಗಲಿನ್ನಾವ ಸುಖಅಂಬುಜಾಕ್ಷಗೆ ಸಲ್ಲಲೀ ಲೆಕ್ಕ 2ಧರ್ಮವ ಹಳಿದು ಸತ್ಕರ್ಮವ ಜರೆದರೆನಮ್ಮ ಪ್ರಸನ್ನವೆಂಕಟ ದೂರ 3
--------------
ಪ್ರಸನ್ನವೆಂಕಟದಾಸರು
ಹೇಗಿಹನು ಹಾಗಿಹನು ಪರಿಪೂರ್ಣ ಬ್ರಹ್ಮಹೇಗಿಹನು ಹಾಗಿಹನುಹೇಗಿಹನು ಎಂತೆಂದು ಕೇಳುವರು ಯಾರುಹೀಗಿಹನು ಎಂತೆಂದು ಹೇಳುವರು ಯಾರುಪಹಸಿವೆಯಾಗಿರಲು ಹಸಿವೆಯಂತಿಹನುತೃಷೆಯು ತಾನಾಗಿರಲು ತೃಷೆಯಂತೆ ಇಹನು1ದುಃಖಿಯಾಗಿರಲು ದುಃಖಿಯಂತಿಹನುಸುಖಿಯು ತಾನಾಗಿರಲು ಸುಖಿಯಂತೆ ಇಹನು2ದುಷ್ಟ ತಾನಾಗಿರಲು ಅವ ದುಷ್ಟನಾಗಿಹನುಶಿಷ್ಟನಾಗಿರಲು ಅವ ಶಿಷ್ಟನಾಗಿಹನು3ಜೀವನಾಗಿರಲು ಅವ ಜೀವನಾಗಿಹನುಶಿವನಾಗಿರಲು ಅವ ಶಿವನಾಗಿ ಇಹನು4ಚಿತ್ತಕ್ಕೆ ಬುದ್ಧಿಗೆ ತಾನಿಹನು ದೂರಸತ್ಯ ಚಿದಾನಂದ ಗುರುವೆಂಬಾತನು5
--------------
ಚಿದಾನಂದ ಅವಧೂತರು
ಹೇಗೆ ಅರ್ಚಿಸಲಿ ಮೆಚ್ಚಿಸಲಿ ನಿನ್ನನಾಗಶಯನ ನಾರದವಂದಿತನೆ ದೇವಾ ಪಮಂಗಳಾಭಿಷೇಕಕೆಉದಕತರುವೆನೆನೆಗಂಗೆಯ ಅಂಗುಟದಿ ಪಡೆದಿಹೆಯೊ ||ಸಂಗೀತ ಕೀರ್ತನೆ ಪಾಡುವೆನೆಂದರೆಹಿಂಗದೆ ತುಂಬುರ ನಾರದರು ಪಾಡುವರೊ 1ಪುಷ್ಪವ ತಂದು ನಿನಗರ್ಪಿಸುವೆನೆಂದರೆಪುಷ್ಪ ಫುಲ್ಲಯಿಸಿದೆ ಹೊಕ್ಕುಳಲಿ ||ಮುಪ್ಪತ್ತು ಮೂರ್ಕೋಟಿ ದೇವತೆಗಳು ನಿನಗೊಪ್ಪಯಿಸೆ ನೈವೇದ್ಯ ನಿತ್ಯತೃಪ್ತನು ನೀನು 2ಕೋಟಿಸೂರ್ಯರ ಕಾಂತಿ ಮಿಗಿಲಾದವನಿಗೊಂದುಮೋಟು ದೀವಿಗೆ ಬೆಳಗೆ ಬೆಳಕಹುದೆ? ||ಸಾಟಿಗಾಣದಸಿರಿಉರದೊಳು ನೆಲಸಿರೆಪೋಟುಗಾಸನು ಎಂತು ಕಾಣಿಕೆಯಿಡಲಯ್ಯ 3ಹಾಸಿಗೆಯನು ನಿನಗೆ ಹಾಸುವೆನೆಂದರೆಶೇಷನ ಮೈಮೇಲೆ ಪವಡಿಸಿಹೆ ||ಬೀಸಣಿಕೆಯ ತಂದು ಬೀಸುವೆನೆಂದರೆಆಸಮೀರಣ ಚಾಮರವ ಬೀಸುತಿಹನೋ4ನಿತ್ಯಗುಣಾರ್ಣವ ನಿಜಸುಖ ಪರಿಪೂರ್ಣಸತ್ತು ಚಿತ್ತಾನಂದ ಸನಕಾದಿ ವಂದ್ಯ ||ಮುಕ್ತಿದಾಯಕ ನಮ್ಮಪುರಂದರವಿಠಲನುಭಕ್ತಿಪ್ರಿಯನು ಎಂದು ಭಜಿಸಿ ಕೊಂಡಾಡುವೆ 5
--------------
ಪುರಂದರದಾಸರು
ಹೇಗೆ ಉದ್ಧಾರ ಮಾಡುವನು - ಶ್ರೀಹರಿ|ಹೀಗೆ ದಿನಗಳೆದುಳಿದವನ ಪರಾಗದಿಂದಲಿ ಭಾಗವತರಿಗೆ |ಬಾಗದಲೆ ತಲೆ ಹೋಗುವಾತನ ಅ.ಪಅರುಣೋದಯಲೆದ್ದು ಹರಿಯೆನ್ನದಲೆ ಗೊಡ್ಡು |ಹರಟೆಯಲಿ ಹೊತ್ತು ಏರಿಸಿದವನ ||ಸಿರಿತುಲಸಿಗೆ ನೀರನೆರೆದು ನಿರಂತರ |ಧರಿಸದೆಮೃತ್ತಿಕೆತಿರುಗುತಲಿಪ್ಪನ ||ಗುರುಹಿರಿಯರ ಸೇವೆ ಜರೆದು ನಿರಂತರ |ಪರನಿಂದೆಯ ಮಾಡಿ ನಗುತಿಹನ ||ಪರಹೆಣ್ಣು ಪರಹೊನ್ನು ಕರಗತವಾಗಲೆಂದು |ಪರಲೋಕ ಭಯಬಿಟ್ಟು ತಿರುಗುವನ ||ತರುಣಿ ಮಕ್ಕಳನು ಇರದೆ ಪೋಷಿಸಲೆಂದು |ಪರರ ದ್ರವ್ಯ ಕಳವು ವಂಚನೆ ಮಾಳ್ಪನ2ನಡೆಯಿಲ್ಲ ನುಡಿಯಿಲ್ಲ ಪಡೆಯಲಿಲ್ಲ ಪುಣ್ಯವ |ಬಿಡವು ನಿನ್ನ ಪಾಪಕರ್ಮಗಳೆಂದಿಗು ||ಸಡಲಿದಾಯುಷ್ಯವು ಕಡೆಗೂ ಸ್ಥಿರವೆಂದು |ಕಡುಮೆಚ್ಚಿ ವಿಷಯದೊಳಿಪ್ಪನ ||ಒಡೆಯ ಶ್ರೀಪುರಂದರ ವಿಠ್ಠಲರಾಯನ |ಅಡಿಗಳ ಪಿಡಿಯದೆ ಕಡೆಗೂ ಕೆಟ್ಟವನ 3
--------------
ಪುರಂದರದಾಸರು
ಹೇಗೆ ಮಾಡಲಿ ಮಗುವಿಗೇನಾಯಿತೊ - ಇದರ - |ಆಗಮವ ಬಲ್ಲವರು ತಿಳಿದೆಲ್ಲ ಪೇಳಿ ಪ.ತೂಗಿ ಮಲಗಿಸೆ ಕಣ್ಣ ಮುಚ್ಚಲೊಲ್ಲನು, ಬೆನ್ನ - |ಮೇಗೆ ಬುಗುಟಿಯು, ಎದೆಯು ಕಲ್ಲಾಗಿದೆ |ರೋಗವನೆ ಕಾಣೆ ದಾಡೆಯಲಿ ನೀರಿಳಿಯುತಿದೆ |ಕೂಗುವ ಧ್ವನಿಯೊಮ್ಮೆ ಕುಂದಲಿಲ್ಲ 1ಖಂಡಸಕ್ಕರೆ ಹಣ್ಣ ಕೊಟ್ಟರೊಲ್ಲದೆ ಮಣ್ಣ |ಹೆಂಡೆಯನು ಬೇಡಿ ತಾ ಪಿಡಿವ ಕೊಡಲಿ ||ಮಂಡೆ ಜಡೆಗಟ್ಟಿಹುದು ಮಾಡಲಿನ್ನೇನಿದಕೆ |ಹಿಂಡುಸತಿಯರ ದೃಷ್ಟಿ ಘುನವಾಯಿತೇನೊ2ಮೊಲೆಯನುಂಬಾಗ ಮೈಯಂಬರವನೊದೆಯುತಿದೆ |ಕಲಕಿತದಲಿ ಎನ್ನ ಕೊಲುವುದೇಕೋ ||ತಿಳಿದಿದರ ನೆಲೆಯನರಿತವರನೊಬ್ಬರ ಕಾಣೆ |ಚೆಲುವಸಿರಿಪುರಂದರವಿಠಲ ತಾ ಬಲ್ಲ3
--------------
ಪುರಂದರದಾಸರು
ಹೇಗೆ ಶ್ರೀಹರಿದಯ ಮಾಡುವನೋ-ನಮಗೆ-|ಹೇಗೆ ಶ್ರೀಹರಿ ದಯ ಮಾಡುವನೊ ಪಯೋಗಿವರೋದಿತ ಭಾಗವತಾದಿ-ಸ-|ದಾಗ ಮಗಳನನುರಾಗದಲಿ ನೆನೆಯದಗೆ 1ಶಕ್ತಿಮಿರಿ ಗುರುಭಕ್ತಿಪೂರ್ವಕ ಹರಿ-|ಭಕ್ತಿ ಇಲ್ಲದ ಕುಯುಕ್ಕಿವಂತರಿಗೆ 2ದಾಸದಾಸ ಎನ್ನೀಶಗೆ ಮೊರೆಯಿಡೆ |ಲೇಸು ಕೊಡುವ ನಮ್ಮ ಪುರಂದರವಿಠಲ 3
--------------
ಪುರಂದರದಾಸರು