ಒಟ್ಟು 182 ಕಡೆಗಳಲ್ಲಿ , 42 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಲಿಮಾರು ಮಠದ ಶ್ರೀರಘುವರ್ಯರ ಕೃತಿಗಳು ಯುಗ್ಮ ಉಡುಪಿನ ಕೃಷ್ಣನೇ 1 ದ್ವಾರಕಾಪುರದಲ್ಲಿ ದೇವಕಿ ಸರಸ ಬಾಲಕ ಲೀಲೆಯಾ ತೋರು ಎನುತಲಿ ದಧಿಯ ಮಥಿಸಲು ಕರುಣಿ ಬಾಲ್ಯವ ತೋರಿದೆ2 ತೊಡೆಯನೇರಿ ಸ್ತನ್ಯಪಾನವ ಮಾಡಿ ಮೋದವ ತಾಯಿಗೆ ಕೊಡುತ ಕಡೆಗೋಲ್ ನೇಣು ಸಹಿತಲಿ ಪ್ರೌಢ ನೀನಪಹರಿಸಿದೆ 3 ಮೊಸರು ಭಾಂಡವನೊಡೆದು ಬೆಣ್ಣೆಯನಸುನಗುತಲೀ ಭಕ್ಷಿಸೀ ಶೇಷಶಯನನೆ ನೀನು ಕುಣಿಯೆ ಸಂ- ತೋಷಪಟ್ಟಳು ದೇವಕಿ4 ಸತಿ ನುಡಿದಳು 5 ವಿತತ ವೈಭವ ಈ ಪರಿಯಲಿಪ್ರತಿಮೆಯನ್ನೇ ಮಾಡಿಸಿ ಸತತ ಪೂಜೆಯ ಮಾಳ್ಪರೀ ಅತಿ ಪ್ರೀತಿಯಿಂದಲಿ ಕೊಡು ಎನಗೆ 6 ಪರಿ ಪೇಳೆ ವಿಶ್ವ-ಕರ್ಮನಿಂದಾ ಮಾಡಿಸಿ ಕಮಲನಾಭನು ಇತ್ತು(ದ್ದು) ಅದರಲಿ ವಿಮಲ ಪೂಜೆಯ ಕೊಂಡನು 7 ಶರಧಿ ತೀರದಲಿತ್ತನು8 ನಾವೆಯಲ್ಲಿ ಗೋಪಿಚಂದನ ಸಂವೃತಾರ್ಚಯು ಬರುತಿರೆ ನಾವೆಯೊಡೆಯಲು ಮಧ್ವಮುನಿಪನು ಭಾವದಿಂದಲೆ ತಂದನು 9 ಅವರರೊಡೆಯ ಶ್ರೀ ಮರುತಪತಿತತ್ ಪ್ರತಿಷ್ಠೆಯ ವಿರಚಿಸಿ ಕುಮುದ ಬಂಧು ಕ್ಷೇತ್ರದಲಿ ನಿ-ನ್ನಮಿತ ಪೂಜೆಯ ಮಾಡಿದ 10 ನನ್ನ ಹಿರಿಯರ ಪುಣ್ಯ ಫಲಿಸಲು ನಿನ್ನ ಪೂಜೆಯ ಮಾಡುತಧನ್ಯನಾದೆನು ಮುಕ್ತಿ ಕರಗತ ಎನ್ನಗಾಯಿತು ಕೃಷ್ಣನೇ 11 ಮಧ್ವಪೂಜಿತ ರಕ್ಷಿಸೆನ್ನನು ಸಾಧ್ವಸೋಝ್ಝಿತ ಸದ್ಗುಣ ಸಾಧ್ವಲಂಕೃತ ವೇಷ ಮುಕ್ತಿ ಪ-ದಾಬ್ಜನೇ ರಘುತಿಲಕನೇ 12
--------------
ಅನ್ಯದಾಸರು
ಪವಮಾನ - ಪವಮಾನ - ಪವಮಾನ ಪ ಪ್ರಧಾನ ಮರುತ ನಿ | ನ್ನಾಧೀನವು ಜಗ ನಿನ | ಗೇನು ಬೇಡೆ ಸುಜ್ಞಾನ ವೀವುದೆಂ | ದಾ ನಮಿಸುವೆನೊ |ಗಾನ ಲೋಲ ಹರಿಗಾನಕೆ ಮನ್ಮನ | ಪೋಣಿಸುತನುದಿನ | ಪಾಲಿಸು ಪ್ರಾಣಾ ಅ.ಪ. ಮಣಿ ಭವ ಸಿಂಧು ಇಂದಿರೆ ಲೋಲನಅಂದ ಪದಾಬ್ಜಾನಂದದಿ ತುತಿಪಾನಂದೈಶ್ವರ್ಯವ ಇಂದೆ ಪಾಲಿಸಿ ಪೊರಿಮಂದಜಾಸನ ಸರಿ | ವಂದೇ ಅಸುರಾರಿ 1 ವಜ್ರ ಗರ ಅಧ್ವರ ಕರಿ ಸಿರಿ ಭೃಂಗ ಸಿರಿ ರಂಗನ ತೋರಿಸು ಎಂಬೆನು ಜೀಯಾ | ನಮಿಸುವೆನು ಹರಿಪ್ರಿಯಾ 2 ಕಲಿ ಪ್ರಾಬಲ್ಯ | ದೈತ್ಯರು ಎಲ್ಲ ವೈರಂಗಳೆಲ್ಲಸಾಧಿಸೆ ಬಲ್ಲ | ಮಣಿಮನ ಸೊಲ್ಲ | ಕೇಳುತಲೆಲ್ಲ ಬರುತಿಲ್ಲೆಲ್ಲ | ದುರ್ಮತಗಳ ಬೀರುತ ಬರುತಿರಲು |ಜಗಪುಸಿ ಎನಲು | ದೇವರಿಲ್ಲೆನಲು | ಐಕ್ಯ ಪೇಳಲುಜ್ಞಾನವಳಿಯಲು | ಸಜ್ಜನ ನೋಯಲು | ಮನವು ಕರಗಲುಹರಿಯು ಪೇಳಲು | ನೀ ಬರೊಸೊಲ್ಲು | ಎಲ್ಲೆಲ್ಲು | ಎಲ್ಲೆಲ್ಲು ||ತಪವನು ಮಾಡಲು | ನಡುಮನೆ ದ್ವಿಜನುವರ ಕೊಟ್ಟನು ತಾನನಂತೇಶ್ವರನುಕಂಬದ ಮೇಲೇ ರೋರ್ವ ಪೇಳಿದನುನಿನ್ನವತಾರ ವಿಚಾರವನು |ನೀನರಿದಂದೇ | ನಿನ್ನಿಂದೇ | ನಿನ್ನಿಂದೇ ||ದ್ವಿಜನಲಿ ಬಂದೆ | ಹುರಳಿಯ ತಿಂದೆ | ತಿಂತ್ರಿಣಿಯಿಂದೆ ಋಣ ತೀರಿ ತೆಂದೆ | ಹರಿ ಪ್ರೇಕ್ಷರಿಂದೆ | ಸನ್ಯಾಸ ಪೊಂದೆ ಗಂಗೆಯ ತಂದೆ | ಎನ ತಂದೆ | ಎನ ತಂದೇ ||ವ್ಯಾಸರ ಕಂಡುಪದೇಶವಗೊಂಡೆ | ಹೇ ಸಮೀರ ದು-ರ್ಭಾಷ್ಯವ ಖಂಡಿಸಿ ಶ್ರೀಶ ಸರ್ವೋತ್ತಮಆ ಶಿವ ಮುಖ ಹರಿ | ದಾಸರೆಂದು ಮ |ತೀ ಸಮಸ್ತ ಜಗ ಲೇಸು ಸತ್ಯವೆಂದುಪದೇಶಿಸಿದೆ ಗುರುವರ್ಯ | ಗುರುವರ್ಯ ||ಇಪ್ಪತ್ತು ಒಂದೆ | ಕು ಭಾಷ್ಯವ ಜರಿದೆಮುವತ್ತಾರೊಂದೆ | ಗ್ರಂಥವ ಮಾಡ್ಡೆಶಿಷ್ಯರಿಗ್ಹೇಳ್ದೆ | ಮಾಯವ ಜರಿದೆಉಡುಪಿಗೆ ಬಂದೆ | ಗೋಪಿಯಲಿಂದೆಕೃಷ್ಣನ ತಂದೆ | ಇಲ್ಲೆ ನಿಲಿಸಿದೆಅಷ್ಟ ಯತಿಗಳಿಗೆ | ಪಟ್ಟವಗಟ್ಟುತ | ಕೃಷ್ಣನಪೂಜೆ ನಿರ್ದಿಷ್ಟದಿ ನಡೆಸಿದೆ | ದುಷ್ಟಾದ್ವೈತವಕುಟ್ಟಿ ಸುಜನರುಗ | ಳಟ್ಟುಳಿ ಕಳೆಯೆ ವ |ರಿಷ್ಟರನೆಲ್ಲರ | ಕಟ್ಟಾಳೆನಿಸಿದೆ ||ದಿಟ್ಟ ಮೂರುತಿ ಜಗಜಟ್ಟಿ ಭೀಮಆನಂದತೀರ್ಥ ಗುರು ಗೋವಿಂದ ವಿಠಲನಹೃದದಿಷ್ಟಾನದಿ ತೋರಿಸೆಂದು ತವಪಾದಾಬ್ಜಕೆ ಶಿರ ಇಟ್ಟು ಬೇಡ್ವೆ ಋಜುವರ್ಯಗುರುವರ್ಯ | ಔದಾರ್ಯ | ಔದಾರ್ಯ 3
--------------
ಗುರುಗೋವಿಂದವಿಠಲರು
ಪಾದ ತೋರೆಂದು ಪಗುರುಸರ್ವಭೌಮರ ಅಖಂಡ ಸೇವೆಯ ಮಾಡಿವರಸುಮಂತ್ರಾಲಯದಿ ವಾಸಮಾಡಿಸುರಪನಾಲಯವು ಮಂತ್ರಾಲಯವು ಎಂಬಂತೆಹರಿದಾಸರಾಶಯವ ನಿಜಮಾಡಿ ತೋರಿಸಿದ 1ಉಡುಪಿಯೊಳು ಗುರುಸಾರ್ವಭೌಮರ ವೃಂದಾವನವಚತುರತನದಿಂದ ಪ್ರತಿಷ್ಠಾಪನೆಯ ಮಾಡಿಭರತಖಂಡದ ತೀರ್ಥಕ್ಷೇತ್ರಗಳ ಸಂಚರಿಸಿಭಕುತರಿಗೆ ಶ್ರೀ ಮಠದ ಮ'ಮೆ ತೋರಿದ ಗುರು2ಶ್ರೀ ಸ'ುೀರ ಸಮಯ ಸಂವರ್ಧಿನಿ ಸಭೆಯಸಂಸ್ಥಾಪನೆಯ ಮಾಡಿ ಪಂಡಿತರಿಗೆಭೂರಿ ಸಂಭಾವನೆ ಮೃಷ್ಟಾನ್ನ ಭೋಜನದಿತ್ಟುಗೊಳಿಸುತ ದೇಶ ದಿಗ್ವಿಜಯ ಮಾಡಿದ 3ಶ್ರೀ ಮಠದ ಕೀರ್ತಿಯನು ಶಿಖರಕ್ಕೆ ಮುಟ್ಟಿಸಿಸ್ವರ್ಣಮಂಟಪರಚಿಸಿ ವೈಭವವ ಬೆಳೆಸಿಶ್ರೀಮೂಲರಾಮ ದಿಗ್ವಿಜಯ ಜಯರಾಮರನುಭಕ್ತಿುಂದ ಪೂಜಿಸಿದ ಭಾಗ್ಯಶಾಲಿ 4ಗುರುಸಾರ್ವಭೌಮರಿಗೆ ಪರಮ ಪ್ರೀತಿಯ ಕಂದವರಮಧ್ವಮತ ಸುಧಾಂಬುಧಿಗೆ ಚಂದ್ರಪರಮಾತ್ಮ ಭೂಪತಿ'ಠ್ಠಲನ ಪೂಜಿಸುವಪರಮ ಪ್ರಶಾಂತ ಧೀರೆಂದ್ರ ಸನ್ನಿಧಿವಾಸ 5
--------------
ಭೂಪತಿ ವಿಠಲರು
ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಪ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣಅ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ1 ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ ಮುದ್ದುಕೃಷ್ಣ 2 ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದುನೀ ಕೇಳಿ ಬಲ್ಲೆಯಾ ಕೃಷ್ಣಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದುಆಕೆಗಕ್ಷಯವಿತ್ತೆ ಕೃಷ್ಣನಾ ಕಾಣುವಂದದಲಿ ಉಡುಪಿಯಾದಿಕೇಶವಏಕೆ ದರಶುನವೀಯೆ ಕೃಷ್ಣ 3
--------------
ಕನಕದಾಸ
ಬಟ್ಟ ಮುತ್ತಿನ ಸರವ ಕೊರಳೊಳಿಟ್ಟು ನೋಡುತಪುಟ್ಟ ಪುಟ್ಟ ಪಾದದಿಂದ ದಟ್ಟಡಿಯನಿಕ್ಕುತಅಟ್ಟಟ್ಟು ಕರೆದರೆ ಬಾರದೆ ಅಂಬೆಗಾಲನಿಕ್ಕಿ ಕೊಡವುತತಿಗೂಳುಗುಳೆಂದು ಮುಟ್ಟಿ ನಲಿದಾಡುತ ತಟ್ಟೆಗೆ ಮುಚ್ಚಿಗೆಯೆಂದುತಟ್ಟನೆ ಕೈಯನಿಡುತ ಪುಟ್ಟಮಕ್ಕಳೊಡನೆ ಚಂಡಾಡಿನಲಿದಾಡುವ ದಿಟ್ಟರಂಗಯ್ಯ 1 ರನ್ನ ದುಂಗುರ ಪದಕ ತಾಳಿಯನ್ನು ಹಾಕುವೆಸಣ್ಣ ಮಕ್ಕಳ ಕೂಡೆಲ್ಲಾ ಚಿನ್ನಿಕೋಲನಾಡುತಕನ್ನೆವೆಣ್ಣುಗಳ ಕಂಡು ಕಣ್ಣ ಸನ್ನೆ ಮಾಡುತಕಣ್ಣಮುಚ್ಚಾಲೆ ಆಟವ ಆಡಿ ನಲಿದಾಡುತ ತಾಹೊನ್ನ ಹಿಡಿ ಹೊನ್ನಾಟವನಾಡುತ ಶ್ರೀರಂಗಧಾಮ ಪನ್ನಗಶಯನ 2 ಕಾಲಿನಂದುಗೆ ಘಲಿರೆನೆ ನಳಿತೋಳನಾಡುತಬಾಲೆಯರ ಕೂಡೆ ಬಹು ಲೀಲೆಯ ಮಾತಾಡುತಶಾಲೆಗಳ ಸೆಳದು ಮರದ ಮೇಲೆ ಕುಳಿತು ನೋಡುತಹಾಲು ಬೆಣ್ಣೆ ಕಳ್ಳನೆಂಬ ದೂರುಗಳ ಕೇಳುತಲೋಲಾಕ್ಷಿಯರೊಳನಿಂಥಾ ಜಾಲಿಗಳ ಮಾಡುವ ಬಾಲಗೋಪಾಲ3 ಕಂಡು ನಿನ್ನನು ಪ್ರೇಮದೊಳಪ್ಪಿಕೊಂಡು ನೋಡುವೆಹಿಂಡು ಬೊಗರಿಲಿತ್ತಲಿಗ್ಗೆ ಚಂಡ ಕೊಡುವೆ ಬಾರಯ್ಯಭಂಡಿಯನೊದದ ಪಾದಪದುಮವನ್ನೇ ತಾರಯ್ಯಗುಂಡುವಾನಿಟ್ಟ ನಳಿ ತೋಳನೊಮ್ಮೆ ತೋರಯ್ಯಪುಂಡಲೀಕಾಕ್ಷಿಯರು ನಿನ್ನ ಕಂಡರೆ ಸೇರರೂ ಕೃಷ್ಣ4 ಕರದ ಕಂಕಣ ಝಣರೆನಲು ಮುಂಗುರಳ ತಿದ್ದುತಕರದ ಕಂಬಾಲಿನೆಲ್ಲವ ಸುರಿದು ಸೂರೆ ಮಾಡುತತರುಣಿಯರು ನೋಡಲವರ ಪುರುಷರಂತೆ ತೋರುತಸರಸವಾಕಿನಿಂದಲವರ ಮರುಳು ಮಾಡಿ ಕರವುತಸರಿಯ ಮಕ್ಕಳೊಡನೆ ಜೊಲ್ಲು ಸುರಿಸುತ ಮಾತಾಡುವಂಥಾ ಸರಸಗೋಪಾಲ 5 ಮರುಗ ಮಲ್ಲಿಗೆ ಸಂಪಗೆಯ ಪೂಸರವ ಮುಡಿಸುವೆಕೊರಳ ಮುತ್ತಿನ ಸರವ ನಿನಗೆ ಕರದು ಕೊಡುವೆಬಾರಯ್ಯ ಅರಳೆಲೆ ಮಾಗಾಯನಿಟ್ಟ ಸಿರಿಮುಖವತೋರಯ್ಯ ಪರನಾರಿಯರೊಡನಿಂಪಾಸರ ಛಂದವೇನಯ್ಯಪುರದ ನಾರಿಯರ ಕೂಡೆ ಸರಸವನಾಡು ಉಡುಪಿಪುರದ ಶ್ರೀಕೃಷ್ಣ 6 ಅಂದುಗೆ
--------------
ಕೆಳದಿ ವೆಂಕಣ್ಣ ಕವಿ
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಣ್ಣಿಸಲಳವೆ ನಾನು ಬಣ್ಣಿಸಲಳವೆ ನಾ ಬಹುವೇಷವುಳ್ಳ ಲಾ-ವಣ್ಯದ ಕಣಿಯಾದ ಉಡುಪಿನ ಕೃಷ್ಣನ ಪ. ಕರಗುವ ಮಿಸುನಿಯ ಕಾಂತಿಯಿಂ ಗರುಡನಗರಿಗಳ ಇರವ ಧಿಕ್ಕರಿಪ ಪೀತಾಂಬರಎರಡು ಪಾಶ್ರ್ವಗಳಲ್ಲಿ ಶಿರದ ಕಿರೀಟವುಕೊರಳಹಾರದ ಜೋಡು ಇರಲು ಈ ಪರಿಯಿಂದಮರೆಯಲಬ್ಜದ ಕಂಕಣ ಭೂಮಿಗೈದುವವರ ಸೂರ್ಯನಾರಾಯಣ ಬಾಹುಗಳುಳ್ಳಮಕರಕುಂಡಲ ಬಾಹುಪುರಿಗಳಿಂದೆಸೆವನ1 ಪಾದ ಕಂಸೆಯಗಲಿ ಇಂದ್ರ ನೀಲದದಾಳ ದಿಕ್ಕುಗಳನೆಬೆಳಗುತಲೆ ಬಹಳ ಲೀಲೆಯ ತೋರ್ಪಖಳರೆದೆ ಶೂಲನ ಚೆಲುವ ಗೋಪಾಲನ 2 ಜಾತಿಮುತ್ತಿನ ಚುಂಗು ಖ್ಯಾತಿಯಿಂದೊಪ್ಪುವಚಾತುರ್ಯದಿ ವಾರೆಗೊಂಡೆಯ ಕಟ್ಟಿಆ ಜೂತದಿಂದಲಿ ಅತಿ ಮೈಜೋಡು ತೊಟ್ಟು ಈ-ರೀತಿಯಿಂದೆಡಗೈಯ ವಂಕಿ ಮಧ್ಯದೊಳಾನುಚ್ಚುತ ಖಡ್ಗದಿಂದೊಪ್ಪುವ ಭೂತಳದಿವಿಖ್ಯಾತಿ ಪಡೆದು ಮೆರೆವÀ ದುಷ್ಟಮೃಗವಘಾತಿಸಿ ಬಿಡುವ ಕಿರಾತÀ ಸ್ವರೂಪನ್ನ 3 ಮಿಸುನಿಯ ಮುಂಡಾಸು ಪೊಸರವಿಯಂತಿರೆಶಶಿಯ ಪ್ರಭೆಯಂತೆ ಪಸರಿಸಲಂಗಿಯುಹಸನಾದ ನವರಂಜು ವಶದಲ್ಲಿ ತುಂಬಿರೆಕುಸುಮನಂದದಿ ಧೋತ್ರವ ಉಟ್ಟುವೈರ್ವಸನವ ಸುತ್ತಿ ಗಾತ್ರದಿ ಕುಲಾಯಿ ಒಪ್ಪಿನಸುನಗೆಯಿಂದೊಪ್ಪುವ ನವವಿಪ್ರವೇಷನ್ನ 4 ಕಡೆದ ಬೊಗರಿಯಂತೆ ಕಡೆದು ಮಾಡಿದ ಬಾಹುದೃಢವಾದ ಕುಚಗಳು ದುರಿತದುನ್ನತವಾದಬಡನಡು ಬಳುಕಲು ಕಡೆಗಣ್ಣ ನೋಟದಿಮೃಡ ಮುಖ್ಯರ್ಮೋಹಿಸಿ ಒಡಲ ಮಾರದಿರಲುಮುಡಿಯ ನೋಡುತ ನವಿಲು ನಾಚಿ ಮೊಗಗೊಡದಡವಿಯ ಸೇರಲು ಭೂಷಣಗಳುಜಡಿವುತ್ತ ಜಗದೊಳು ಕಡುಮೋಹಿನೀ ಬಲು 5 ಕರ್ಮ ಕಿಂಕರರೊಳಗಾಗಿಟೊಂಕದಿ ಕೈಯಿಟ್ಟು ಶಂಕಿಸಲು ತನ್ನಂಘ್ರಿಪಂಕಜಂಗಳ ಬೇಡಿ ಪುರುಷಾರ್ಥ ಪಡೆಯಿರೊಶಂಕೆ ಬೇಡವೊ ಎಂದು ಲೆಂಕರಿಗೆ ಸೂಸಿಪ್ಪ-ಸಂಖ್ಯಾತ ಕರಯುಗಳದಿಂದೊಪ್ಪುವಶಂಖ ಚಕ್ರ ಆಯುಧಂಗಳ ಪಿಡಿದು ಸರ್ವಾಲಂಕಾರದಿಂ ವೆಂಕಟೇಶನ ರೂಪ6 ಈ ವಿಧ ತಪ್ಪದೆ ಏಳು ವಾರಗಳಲ್ಲಿಪಾವನಮತ ಗುರು ಬಳಿಗೆ ಬಂದವರೆಲ್ಲಶ್ರೀವರ ಹಯವದನನ ಸೇವೆಗೊಳ್ಳಿರೋ ನಿತ್ಯಆವಾವ ನಾಡಿನ ಆಶ್ರಿತ ಜನರನ್ನುಭಾವಶುದ್ಧಗಳರಿತು ಕೋರಿಕೆಗಳಈವ ಭಕ್ತರಿಗೊಲಿದು ಪಾಷಂಡಾದಿಶೈವರ ತರಿದ ಸದ್ವೈಷ್ಣವರ ದೇವÀನ್ನ7
--------------
ವಾದಿರಾಜ
ಬಂದಾ ಬಂದಾ ಉಡುಪಿಲಿ ನಿಂದ ನಿಂದಾ ಪ. ಬಂದ ಗೋಪೇರ ವೃಂದಗಳ ತಾ ನಂದು ದಣಿಸುತ ಸುಂದರಾಂಗನು ಮಂದರೋದ್ಧರ ಬೃಂದೆಯಿಂದಲಿ ಅ. ಮುದ್ದುಸುರಿಸುತ ಗೋಕುಲದೊಳಿರೆ ಕದ್ದು ಬೆಣ್ಣೆಯ ತಿಂದನೆನುತಲಿ ಸುದ್ದಿ ತಾಯಿಗೆ ಪೇಳಿ ಸತಿಯರು ಗದ್ದಲದಿ ತನ್ನ ಗಾರು ಮಾಡಲು ಮುದ್ದು ಯತಿಗಳು ಎದ್ದು ಪೂಜಿಸಿ ಮುದ್ದಿ ಬೆಣ್ಣೆ ನೇವೇದ್ಯವಿಡುತಿರೆ ಸದ್ದು ಇಲ್ಲದೆ ತಿಂದು ಸುಖದಲಿ ಇದ್ದೇನೆಂಬುವ ಬುದ್ಧಿಯಿಂದಲಿ 1 ಭಾರವಿಳುಹಲು ಕೋರೆ ಭೂಮಿಯು ನಾರದಾದ್ಯರ ನುತನು ತಾ ಬರೆ ನಾರಿಯರು ಮನ ಬಂದ ತೆರದಲಿ ಜಾರ ಚೋರನೆನುತ್ತ ಬೈಯ್ಯಲು ಧೀರ ಯತಿಗಳು ಸೇರಿ ಪರಬೊಮ್ಮ ಶ್ರೀರಮಣನೆನ್ನುತ ಸ್ತುತಿಸುವೋ ವಾರುತಿಗೆ ಮೈದೋರಿ ಭಕುತರ ಪಾರಿಗಾಣಿಪೆನೆಂಬ ನೆವದಲಿ 2 ಹಸಿದುಗೋಪರÀ ಯಜ್ಞವಾಟಕೆ ಅಶನ ಬೇಡಲು ಕಳುಹೆ ಗೊಲ್ಲರ ಪಸುಳರಿಗೆ ನೈವೇದ್ಯವಿಲ್ಲದೇ ವಶವೆ ಕೊಡಲೆಂದೆನ್ನೆ ಋಷಿಗಳು ವಸುಧಿಪತಿ ಸರ್ವೇಶನೆಂದರಿ ದಸಮಯತಿಗಳು ಕ್ಷಣ ಕ್ಷಣಕ್ಕೆ ಷ ಡ್ರಸದ ಆರೋಗಣೆಯ ಮಾಡಿಸೆ ಕುಶಲದಲಿ ಮೃಷ್ಟಾನ್ನ ಭುಜಿಸಲು 3 ಬಾಲ ಕಂದಗೆ ತೊಡಿಗೆ ತೊಡಿಸಲು ಲೀಲೆಯಿಂದಲಿ ಗೋಪಿದೇವಿಯು ಕಾಳ ಮಡುವಿಲಿ ಧುಮಿಕಿ ಎಲ್ಲವ ಕಳೆದು ಬರೆ ಆಟಗಳ ಪರೆವೆಲಿ ಶೀಲಯತಿಗಳು ವಾರ ವಾರಕೆ ಬಾಲ ತೊಡಿಗೆ ಶೃಂಗಾರಗೈಯ್ಯಲು ಆಲಯವ ಬಿಟ್ಟೆಲ್ಲಿ ಪೋಗದೆ ಓಲಗವ ಕೈಕೊಳ್ವೆನೆನ್ನುತ 4 ಗೋಪಜನ ಗೋವ್ಗಳನೆ ಕಾಯಲು ಗೋಪಿಯರು ತನ್ನ ಗುಲ್ಲು ಮಾಡಲು ಪಾಪಿ ಕಂಸ ಅಟ್ಟುಳಿಯ ಪಡಿಸಲು ಭೂಪತಿಯ ಪದವಿಲ್ಲದಿರಲು ಈ ಪರಿಯ ಬವಣೆಗಳ ತಾಳದೆ ಗೋಪ್ಯದಿಂದಿಲ್ಲಡಗಿ ನಿಂತು ಗೋಪಾಲಕೃಷ್ಣವಿಠಲ ಯತಿಗಳ ಗೌಪ್ಯಪೂಜೆಯಗೊಂಬ ವಿಭವಕೆ 5
--------------
ಅಂಬಾಬಾಯಿ
ಬಂದು ನಿಲ್ಲೋ ದಯಾನಿಧೇ ಬಂದು ನಿಲ್ಲೋ ಪ ಬಂದು ನಿಲ್ಲೋ ನಿನಗೊಂದಿಸುವೆನು ಗೋ ವಿಂದ ಗೋವಳರಾಯ ಸಂದೇಹಗೊಳಿಸದೆ ಅ.ಪ ಸದೋಷಕ ನಾನು ಸದಾ ನಿರ್ಮಲ ನೀನು ಪದೆಪದೆಗೆ ಪೇಳುವುದುಚಿತವಲ್ಲ 1 ಮನದೊಳು ಪೊಳದು ಚಿಂತನೆಗೆ ನೆಲೆಯಾಗಿ ಘನಮಹಿಮನೆ ಮಧ್ವಮುನಿ ಮನ ಮಂದಿರ 2 ಕಡೆಗೋಲು ನೇಣಪಿಡಿದ ಪರಮಾನಂದ ಉಡುಪಿಯ ಶ್ರೀ ಕೃಷ್ಣ ವಿಜಯವಿಠ್ಠಲರೇಯ3
--------------
ವಿಜಯದಾಸ
ಬಂದು ನಿಲ್ಲೋ ರಮಾಪತೆ ಬಂದು ನಿಲ್ಲೋ || ಬಂದು ನಿಲ್ಲೊ ನಿನಗೊಂದಿಸುವೆ ಗೋ | ವಿಂದ ಗೋವಳ ರಾಯ ಸಂದೇಹ ಮಾಡದೆ ಪ ಸದೋಷಿಗ ನಾನು ಸದಾ ನಿರ್ಮಲ ನೀನು || ಪಾದೋಪಾದಿಗೆ ಬೇಡಿಸುವದುಚಿತವಲ್ಲ 1 ಮನದೊಳು ಪೊಳದು ಚಿಂತನೆ ನೆಲೆಯಾಗಿ || ಘನಮಹಿಮನೆ ಮಧ್ವಮುನಿ ಮನಮಂದಿರ 2 ಕಡಗೋಲ ನೇಣ ಪಿಡಿದ ಪರಮಾನಂತ ||ಉಡುಪಿನ ಶ್ರೀಕೃಷ್ಣ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ಬಂದೆನಿಲ್ಲಿಗೆ ಸಂದರುಶನಕ್ಕೆ ಬಂದೆನಿಲ್ಲಿಗೆನ್ನ ಮನದಿ ಬಂದು ನಿಲ್ಲೆಂದು ನಿನ್ನ ವಂದಿಸ್ವರವ ಬೇಡುವೆ ನಾ ನಂದನ ಸುಂದರ ಕೃಷ್ಣ ಬಂದೆನಿಲ್ಲಿಗೆ ಪ ಪಾಲಶರಧಿ ಆಲದೆಲೆಯಲ್ಯೋಗನಿದ್ರೆ ಮಾಡಿ ನಿನ್ನ ನಾಭಿಕಮಲನಾಳದಿಂದ ಆಗ ಅಜನ ಪಡೆದ ಹರಿಯೆ 1 ಸಾಗರವ ಬಿಟ್ಟು ನಾಗಶಯನ ಶೂರಸುತನಲ್ಲುದಿಸಿ ಯೋಗಿಗಳ ಹೃದಯಕಮಲ ಆಲಯವ ಮಾಡಿದ್ದ ದೊರೆಯೆ2 ಕಂದನಾಗಿ ಬಂದು ಕಾಳಿಂದಿ ದಾಟಿ ನಂದಗೋಕುಲ ವೃಂದಾವನದಿ ಗೋವುಕಾಯ್ದ ಇಂದಿರೇಶ ಅಜನಪಿತನೆ 3 ಅಷ್ಟಮಠದ ಯತಿಗಳಿಂದ ಮುಟ್ಟಿಪೂಜೆಗೊಂಬುವಂಥ ಶ್ರೇಷ್ಠರೊಳಗೆ ಶ್ರೇಷ್ಠ ನಿನ್ನುತ್ಕøಷ್ಟಮಹಿಮೆ ನೋಡಲೀಗ4 ಧ್ವಜ ವಜ್ರಾಂಕುಶ ರೇಖವುಳ್ಳ ಪದುಮಪಾದ ನೋಡಲೀಗ5 ದೊಡ್ಡ ಮುತ್ತು ವಜ್ರದ್ಹರಳಿನಡ್ಡಿಕೆ ಉಡಿದಾರ ಹೊಳೆಯೆ ಒಡ್ಯಾಣವನೆಯಿಟ್ಟ ಜಂಘÉ ಜಾನುದ್ವಯವ ನೋಡಲೀಗ6 ಉದರದಲ್ಲೀರೇಳುಲೋಕ ಅಡಗಿಸಿದನಂತಶಯನ ಪದುಮ ಪೊಕ್ಕಳಿಂದ ಬ್ರಹ್ಮನ ಪಡೆದ ಪರಮಾತ್ಮನ್ನ ನೋಡ7 ವಂಕಿ ಬಾಹುಪುರಿಗಳಿಂದ ಕಂಕಣ ಭೂಷಣಗಳೊಪ್ಪೆ ಕರವ ನೋಡ8 ನೀಲವರಣ ನಿನ್ನ ಬೆರಳು ಸಾಲು ಮಾಣಿಕ್ಯ ಮುದ್ರಿಕಿಂದ್ಹೊಳೆಯೆ ಲೀಲೆಯಿಂದ ಗಿರಿಯೆತ್ತಿದ ಗೋಪಾಲಕೃಷ್ಣ ನಿನ್ನ ನೋಡ 9 ವೈಜಯಂತಿ ತೋರ ಮುತ್ತಿನೆಳೆÀಗಳ್ಹೊಳೆವೋ ಶ್ರೀದೇವೇರಿಗಾಶ್ರಯವಾಗಿದ್ದಿ ್ವಶಾಲ ವಕ್ಷಸ್ಥಳವ ನೋಡ10 ಪಚ್ಚೆಪದಕ ಪಾರಿಜಾತ ಅಚ್ಚ ಮಲ್ಲಿಗೆ ತುಳಸಿಮಾಲೆ ಶ್ರೀ- ಕೌಸ್ತುಭ ಶೃಂಗಾರ ಕೊರಳ ಸಿರಿಯರಸು ನಿನ್ನ ನೋಡ11 ಮಧ್ವರಾಯರು ಕೈಯ ಬೀಸೆ ಎದ್ದು ಬಂದು ಹಡಗದಿಂದಿ ಲ್ಲಿದ್ದಾನುಡುಪಿಕ್ಷೇತ್ರದಿಯೆಂದು ಮುದ್ದುಕೃಷ್ಣನ ಮುಖವ ನೋಡ12 ಕ್ರೂರಕಂಸನ(ಅ)ಪ್ಪಳಿಸಿ ದ್ವಾರಾವತಿಯಲ್ಲಿದ್ದ ಅಷ್ಟಭಾರ್ಯೇರಿಂದ್ವಿ- ಹಾರ ಮಾಡಿದ್ವಾರಿಜಾಕ್ಷನ್ವದನ ನೋಡ 13 ಚಂದ್ರನಂತೆ ಹೊಳೆವೊ ಮುಖದಿ ದುಂಡು ಮುತ್ತಿನ ಮೂಗುತಿನಿಟ್ಟು ಕುಂದಣದ್ವಜ್ರ ಬಿಗಿದ ಕರ್ಣಕುಂಡಲವನ್ನು ನೋಡಲೀಗ14 ಕೇಸರಿ ಗಂಧ ಕಸ್ತೂರಿಯ ನಾಮ ತಿಲಕ ಒಪ್ಪೋವಜ್ರದರಳೆಲೆ ದೇವಕೀಸುತನ (ನೋಡ) 15 ಬಾಲಭಾಸ್ಕರ ಕೋಟಿಲಾವಣ್ಯರೂಪಗೆಲುವ ಕಾಂತಿ ಸಾಲುದೀವಿಗೆ ಸೊಬಗು ಕಮಲದಳಾಯತಾಕ್ಷ ಹರಿಯ ನೋಡ16 ಕೆಂಪುಹರಳು ಝಗ ಝಗಿಸುವೊ ಪಂಚರತ್ನದ ಕಿರೀಟ ಚಂಚಲಾಕ್ಷ ಹರಿಯ ಶಿರದಿ ಮುಂಚೆ ನೋಡಿ ಮುಗಿವೆ ಕೈಯ17 ಅಸುರರ್ವಂಚಿಸಮೃತ ಬೀರಿ ಪಶುವಾಹನಗೆ ಮೋಹ ತೋರಿ ಮೋಸದಿಂದ ಭಸ್ಮಾಸುರನ ನಾಶಮಾಡಿದ ನಾರಿ ನೋಡ18 ಲವಣಶರಧಿತೀರ ಮಧ್ವ ಸರೋವರದಲಿ ಶುದ್ಧಸ್ನಾನ ಪರಮ ಮಂತ್ರ ಜಪಿಸೋ ನಿನ್ನ ಶರಣು ಸುಜನಜನರ ನೋಡ19 ಉತ್ತಮ ವೈಕುಂಠ ಬಿಟ್ಟೀ ಉಡುಪಿಯಲ್ಲಿ ವಾಸವಾಗಿ ಭಕ್ತಜನರಭೀಷ್ಟಕೊಡುವೋ ನಿತ್ಯಮುಕ್ತ ನಿನ್ನ ನೋಡ20 ಶ್ರೀಶನೊಲಿಸಿದ್ಹನುಮ ಭಾರತೀಶನಾದ ಮಧ್ವರಾಯರ ದಾಸರ ದಾಸತ್ವಕೊಡು ಭೀಮೇಶಕೃಷ್ಣಂದಯದಿ ನೋಡ 21
--------------
ಹರಪನಹಳ್ಳಿಭೀಮವ್ವ
ಬರಬೇಕು ಇಂದಿಲ್ಲಿಗೆ ಇಂದಿರೆರಮಣಾ ಪಬಾರಯ್ಯಾ ಶ್ರೀಹರಿ 'ಠ್ಠಲ ವೆಂಕಟರಮಣಾಉಡುಪಿಯ ಶ್ರೀಕೃಷ್ಣಾ ಬದರಿನಾರಾಯಣಾ ಅ.ಪಕರಿರಾಜ ಕರೆಯಲು ಕರುಣಸಾಗರ ನೀನುಗರುಡವಾಹನನಾಗಿ ಭರದಿಂದ ಬಂದಂತೆ 1ಭಕ್ತ ಬಾಲನ ಮಾತು ಸತ್ಯಮಾಡಲು ನೀನುತತ್ಕ್ಷಣ ಸ್ತಂಭದಿಂ ಪುಟಿದು ನೀ ಬಂದಂತೆ 2ಸಚ್ಚಿದಾನಂದಾತ್ಮ ಸರ್ವತ್ರ ಪರಿಪೂರ್ಣಭಕ್ತವತ್ಸಲ ಶ್ರೀ ಭೂಪತಿ'ಠ್ಠಲ ಸ್ವಾ'ು 3
--------------
ಭೂಪತಿ ವಿಠಲರು
ಬಾರೊ ಬೇಗ ನೀರಜಾಕ್ಷದೂರು ಇದು ಯಾತಕೊ ಪ ಮೊಸರು ಮಾರುವ ಗೊಲ್ಲತಿಯರಅಸವಳಿಸಿ ಕೈಯ ಪಿಡಿದುವಶನಾಗು ಎಂದು ಪೇಳಿನಸುನಗುತಲಿದ್ದೆಯಂತೆ 1 ಕುಸುಮಶರನ ಪೆತ್ತವನೆಬಸವನಾದೆ ಊರೊಳಗೆಶಶಿಮುಖೇರ ದೂರು ಬಹುಪಸರಿಸಿತು ಪೇಳಲಾರೆ2 ಕಂದಕೇಳು ಇಂದುಮುಖಿಯರಹೊಂದಿ ಆಡಲೇಕೆ ಈಮಂದಿರದೊಳಾಡಿ ಸಲಹೊತಂದೆ ಉಡುಪಿ ಸಿರಿಕೃಷ್ಣ 3
--------------
ವ್ಯಾಸರಾಯರು
ಬೊಮ್ಮ ಮೃಡ ಮುಖ್ಯ ಸುರರಿಗೆಡೆಯನೆನಿಪ ಮುದ್ದು ಉಡುಪಿಯ ಕೃಷ್ಣನ ಪ. ಪೊಡವಿಯೊಳಗೆ ತನ್ನ ಅಡಿಗಳ ಧೇನಿಪ-ರಡಿಗಡಿಗವರ ವಾಂಛಿತ ವÀಸ್ತುವಕಡೆದು ಕೊಡುವೆನೆಂದು ಕಡೆಗೋಲ ನೇಣನೆಪಿಡಿದಿಹ ಸಿರಿಯರಾ ದೃಢಕೆ ಮೆಚ್ಚಿದನ 1 ಹರಿಸರ್ವೋತ್ತಮನೆಂಬೊ ಪರಮಸಿದ್ಧಾಂತಕ್ಕೆ ಮ-ಚ್ಚರಿಸುವ ಕುಮತದ ಕುಜನರಭರದಿ ಬಂಧಿಸಿ ಬನ್ನಂಬಡಿದು ಶಿಕ್ಷಿಪೆನೆಂದುವರಪಾಶದಂಡಧಾರಿಯಾಗಿ ತೋರಿಪ್ಪನ 2 ಭಕ್ತವತ್ಸಲನೆಂಬೊ ಸುಲಭೋಕ್ತಿಯನು ಬಂದನಿಕರಕ್ಕೆ ಪೇಳಲು ದ್ವಾರಕಾಪುರಿಯಸುಖತೀರ್ಥಮುನಿಗೆ ಸುಖಕರನಾಗಿ ಬಂದಅಕುಟಿಲ ಕೃಷ್ಣ ಹಯವದನರಾಯನ 3
--------------
ವಾದಿರಾಜ
ಭಳಿರೆ ಮೆಚ್ಚಿದೆ ರಮಣಿ ಒಳಿತು ನಿನ್ನಯ ವಾಣಿ ಬಲುಹು ತೋರಿದೆ ತರುಣಿ ಒಲಿದೆ ರಾಣಿ ಬಳಬಳನೆ ಕಣ್ಣೀರನಿಳಿಸುತಳುತೆ ಕೋರಿದುದ ತಂದೀಯಲಾರದಿಹ ಪುರುಷರಂ ದೂರುವುದೆ ನಾರಿಯರ ಧರ್ಮವೇನು ಉಡುಪುತೊಡುವೆಂದೆನುತ ಸಡಗರದಿ ಹಿಗ್ಗುತ ಬಡಿವಾರ ತೋರುವುದೆ ನಡತೆಯೇನು ಸಜ್ಜೇಸುಖಶಯೈ ಯಿದನೆ ನಂಬಿ ಲಜ್ಜೆಯಲಿಕರ್ತವ್ಯವÀನೆ ಮರೆದು ದೌರ್ಜನ್ಯಕೀಡಾಗಬಹುದೆ ಸಾಧ್ವಿ ಸಜ್ಜನೆಯೆನಿಸು ಶೇಷಗಿರೀಶನೆಣಿಸು
--------------
ನಂಜನಗೂಡು ತಿರುಮಲಾಂಬಾ