ಒಟ್ಟು 99 ಕಡೆಗಳಲ್ಲಿ , 40 ದಾಸರು , 93 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನಾ ಕನಸಿನಲಿ ಗೋವಿಂದನ ಪಕಂಡೆನಾ ಕನಸಿನಲಿ ಕನಕರತ್ನದ ಮಣಿಯ |ನಂದನ ಕಂದ ಮುಕುಂದನ ಚರಣವ ಅ.ಪಅಂದುಗೆಕಿರುಗೆಜ್ಜೆ ಘಲಿರೆಂಬ ನಾದದಿಬಂದು ಕಾಳಿಂಗನ ಹೆಡೆಯನೇರಿ ||ಧಿಂಧಿಮಿ ಧಿಮಿಕೆಂದು ತಾಳಗಳಿಂದಾನಂದದಿ ಕುಣಿವ ಮುಕುಂದನ ಚರಣವ 1ಉಟ್ಟ ಪೀತಾಂಬರ ಉಡಿಯ ಕಾಂಚಿಯದಾಮತೊಟ್ಟ ಮುತ್ತಿನ ಹಾರ ಕೌಸ್ತುಭವು ||ಕಟ್ಟಿದವೈಜಯಂತಿತುಲಸಿಯ ವನಮಾಲೆಇಟ್ಟ ದ್ವಾದಶನಾಮ ನಿಗಮಗೋಚರನ 2ಕಿರುಬೆರಳಿನ ಮುದ್ರೆಯುಂಗುರ ಮುಂಗಡೆಕರದಲಿ ಕಂಕಣ ನಳಿತೋಳುಗಳ ||ವರಚತುರ್ಭುಜ ಶಂಖಚಕ್ರದಿ ಮೆರೆವನನಿರುತದಿ ಒಪ್ಪುವ ಕರುಣಾ ಮೂರುತಿಯ 3ಬಣ್ಣದ ತುಟಿ ಭಾವರಚನೆಯ ಸುಲಿಪಲ್ಲಸಣ್ಣ ನಗೆಯ ನುಡಿ ಸವಿಮಾತಿನ ||ಪುಣ್ಯ ಚರಿತ್ರನ ಪೊಳೆವ ಕಿರೀಟನಕಣ್ಣು ಮನ ತಣಿಯದಕಂಸಾರಿಕೃಷ್ಣನ4ಮಂಗಳ ವರತುಂಗಭದ್ರದಿ ಮೆರೆವನಅಂಗಜಪಿತಶ್ರೀ ಲಕ್ಷ್ಮೀಪತಿಯ ||ಶೃಂಗಾರ ಮೂರುತಿಪುರಂದರವಿಠಲನಕಂಗಳಿಂದಲಿ ಕಂಡೆ ಹಿಂಗಿತು ಭವಭಯ 5
--------------
ಪುರಂದರದಾಸರು
ಕಂಡೆನಾ..............ಸಾಸಿರನಾಮದಶೇಷಮಹಿಮ ವೆಂಕಟೇಶನ ಮೂರುತಿಯ ಪ.ಶೇಷಗಿರಿಗೆ ಕೈವಲ್ಯವೆನಿಪ ಸ್ವಾಮಿಪುಷ್ಕರಿಣಿಯವಾಸನಕಂಡೆನಾಅ.ಪ.ವಿಕಸಿತಸರಸಿಜ ಸಮಪದಯುಗಳನಅಖಿಳಜಗದೆರೆಯನನಖಶ್ರೇಣಿಗಳೊಳು ತರತರದಿ ಮೆರೆವಸುಖಮಣಿಗಳ ಕಂಡೆನಾ 1ಗುಲ್ಛಕೆ ನೂಪುರ ಭೂಷಿತ ವರಫಣಿತಲ್ಪನ ಮೂರುತಿಯಒಪ್ಪುವ ದ್ವಿಜದಂತಿಹ ಜಘನ ಕಂದರ್ಪನಯ್ಯನ ಕಂಡೆನಾ 2ಹೊಂಗನ್ನಡಿಗಳ ಹಳಿದೊಪ್ಪುವ ಜಾನುಂಗಳ ಚೆನ್ನಿಗನಬಂಗಾರ ಬಾಳೆಯ ಕಂಬದಂತೆಸೆವ ಬೆಡಂಗಿನ ತೊಡೆಯವನ ಕಂಡೆನಾ 3ಕಟ್ಟಿಹ ಕಟಹವನಿಟ್ಟ ಝಗ ಝಗಿಸುವ ಪೊಂಬಟ್ಟೆಯನುಟ್ಟವನಇಟ್ಟ ಕಿಂಕಿಣಿದಾಮ ಮಧ್ಯತ್ರಿವಳಿ ನಾಭಿಸೃಷ್ಟಿಯುದರದವನ ಕಂಡೆನಾ 4ಉರದಿ ಮೆರೆವ ಸಿರಿವತ್ಸಲಾಂಛನಕೇಯೂರ ಕೌಸ್ತುಭಧರನಸಿರಿತುಲಸಿ ಪದಕಹಾರ ಕಂಬುಕಂದರತಿರುವೆಂಗಳಯ್ಯನ ಕಂಡೆನಾ5ಅರಿಮಥÀನವ ಮಾಳ್ಪರಿ ಶ್ರುತಿಮಯವಾದವರಶಂಖೋಧೃತನವರಾಭಯ ನೀಡುವವರಗದೆಪದುಮದಪರಮಾಂಗನ ಕಂಡೆ ನಾ 6ಅಂಬುಜಮೊಗದೊಳು ಕಾಂತಿಯ ಬೀರುವಲಂಬಿತ ಕುಂಡಲನಪೊಂಬಣ್ಣದ ಸಂಪಿಗೆ ಸಂಪಿಗೆನಾಸಿಕಲುಳಿ ನಾಸಾಪುಟದವನ ಕಂಡೆನಾ 7ಮರಿಕೂರುಮನಂದದಿ ಕದಪುಗಳು ಅಮರುತ ಬಿಂಬಾಧರನಪೆರೆನೊಸಲಿನ ಭ್ರೂಲತೆ ಕಿರುನಗೆ ಕಸ್ತೂರಿ ತಿಲಕಾಂಕಿತನ ಕಂಡೆನಾ 8ಕೋಟಿಇನತೇಜದಮಕುಟವರಕರುಣನೋಟದ ಜಗಪಾಲನಹಾಟಕಗಿರಿಯ ಪ್ರಸನ್ನವೆಂಕಟ ಜಗನ್ನಾಟಕ ಸೂತ್ರಧಾರನ ಕಂಡೆನಾ 9
--------------
ಪ್ರಸನ್ನವೆಂಕಟದಾಸರು
ಕೃಷ್ಣ ನಿಮ್ಮೆಲ್ಲರ ಬಿಟ್ಟನೆಒಬ್ಬ ಶ್ರೇಷ್ಠ ನಾರಿಯಮೇಲೆ ಮನಸಿಟ್ಟನೆ ಪ.ಸತ್ಯ ಸುಶೀಲಳು ಅವಳಮ್ಮಜನಕೆ ತತ್ವ ಬೋಧಿಸುವಳು ಇವಳಮ್ಮ 1ಕಾಂತೆ ಕೋಮಲ ಹೃದಯದವಳಮ್ಮಬುದ್ಧಿ ಭ್ರಾಂತಿ ಗೈಸುವವಳಿವಳಮ್ಮ 2ತಪ್ಪದೆ ಸಲಹುವಳವಳಮ್ಮಜನಕೆ ಒಪ್ಪುವ ಗುಣವ ತೋರುವಳಿವಳಮ್ಮ 3ಶ್ರೀಶನ ಬಿಡದಿಹಳವಳಮ್ಮಅತಿ ಮೋಸಗಾರುತಿಯು ಇವಳಮ್ಮ 4ಉತ್ತಮಳು ರಮಾ ಅವಳಮ್ಮಅತಿ ಕೀರ್ತಿಯ ಪಡೆದಿಹಳಿವಳಮ್ಮ 5
--------------
ಗಲಗಲಿಅವ್ವನವರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀಚಪ್ಪರ ಶ್ರೀನಿವಾಸ ಪ.ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆದರ್ಪಕತಾತನೆ ತಾ ಸಜ್ಜನಪ್ರೀತ ಅ.ಪ.ಮಾಧವನಿನ್ನಯ ಮಹಿಮೆ ತಿಳಿಯದಪ-ರಾಧವ ಮಾಡಿದೆ ದಾರಿದ್ರ್ಯದಬಾಧೆಯಿಂದ ತವಪಾದದರುಶನದಗಾದಿಯ ಕಾಣದಾದೆ ನಾ ದ್ರೋಹಿಯಾದೆ 1ತ್ರಾಣವಿರುವಾಗಕಾಣಿಕೆಹಾಕಿದೆದೀನದಾರಿದ್ರ್ಯದ ಹೊತ್ತಿನಲಿಮೇಣದರಿಂದಲಿ ತೆಗೆದು ತೆಗೆದು ಪಂಚಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ 2ಮಂದವಾರದಿಕ್ಕೊಂದೂಟವ ಸತ್ತ್ವದಿಂದಿರುವಾಗ ನಾ ನೇಮಗೈದೆಮಂದಭಾಗ್ಯ ಜ್ವರದಿಂದ ಪೀಡಿತನಾದ-ರಿಂದೆರಡೂಟವನೂ ಮಾಡಿದೆ ನಾನು 3ಶನಿವಾರಕ್ಕೊಂದಾಣೆಕಾಣಿಕೆಹಾಕುತ್ತಮಿನುಗುವ ಡಬ್ಬಿಯ ನಾ ಮಾಡಿದೆಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದಹಣವೆಲ್ಲಗುಣನುಂಗಿತು ಪಾದಕೆ ಗೊತ್ತು4ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣಗುಡ್ಡೆಯ ಮೇಲಿರುವ ಮಹಾನುಭಾವ 5ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯುಮಂಡೆಯೊಳುರಿವುದು ಖಂಡಿತದಿಪುಂಡರೀಕಾಕ್ಷನೆ ಕರುಣಾಮೃತರಸಕುಂಡದೊಳ್ ಮೀಯಿಸಯ್ಯ ವೆಂಕಟರಾಯ 6ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆಕೆಡುಕು ಮಾಡುವುದೇನುಜಡಜನಾಭಕಡಲಶಯನ ಲಕ್ಷ್ಮೀನಾರಾಯಣ ನ-ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಧನ್ಯ ಧನ್ಯ ನಂದಗೋಕುಲ ಪ.ಆ ನಂದವ್ರಜದ ಪೂರ್ವಪುಣ್ಯವೇನೊಆ ನಂದನಾ ಗೋಪಿಕಂದನಾ ಕಿಶೋರಾನಂದವೇನೊಆನಂದಮುನಿವರದನಾನಂದವೇನೊ ಅ.ಪ.ಗೋವರೆಳೆಯಮ್ರ್ಯಾಳ ನಿವಹದಲ್ಲಿನಿಂತು ರಂಗ ಕೋಹುಕ್ಕಕೋಹೊಹವಳಿ ಹಂಡಿ ಕಾಳಿ ಬಾ ಕೋಹುಕ್ಕ ಕೋಹೊಧವಳಿ ಚಿಂಚಿ ಕಪಿಲೆ ಬಾ ಕೋಹುಕ್ಕ ಕೋಹೊಗೌರಿ ಮೈಲಿ ನೀಲಿ ಬಾಯೆಂದುವಿವರಿಸಿ ಕರೆದು ತೃಣದ ಕವಳವನ್ನೀಡುವಾಆವಿನ್ನಾವ ಸಂಚಿತೊ ಪಾವÀನೆಂತೊ ಪುಲ್ಲಿನಾ 1ಅಮ್ಮೆಶೋದೆ ಕಟ್ಟಿದ ನಿರ್ಮಲ ಕಲ್ಲಿಯ ಬುತ್ತಿಡೋಹಕ್ಕಡೋಹೋತÀಮ್ಮ ಬನ್ನಿರುಣ್ಣ ಬನ್ನಿ ಡೋಹಕ್ಕಡೋಹೊನಮ್ಮ ಬುತ್ತಿ ನಿಮ್ಮ ಬುತ್ತಿ ಡೋಹಕ್ಕಡೋಹೊನಮ್ಮ ನಿಮ್ಮುಪ್ಪಿನಕಾಯಿ ಡೋಹಕ್ಕಡೋಹೊಕಮ್ಮಗಿಹುದೆಂದು ಕೊಡುವ ಒಮ್ಮೆ ಸೆಳೆದು ಮೆಲ್ಲುವಾ ಉತ್ತಮ್ಮರಾವ ಜೀವರೊ ಧರ್ಮದೊದಗೆಂತುಟೊ 2ಮಾಧವಮಂಜುಳ ಶಬ್ದದೂದುವ ಸುವರ್ಣವೇಣುನಾದಸ್ವಾದ ಲುಬ್ಧರಾದರಾ ಗೋಪಕನ್ಯೇರುನಾದಸ್ವಾದ ಲುಬ್ಧವಾದವಾ ಗೋವತ್ಸವುನಾದಸ್ವಾದ ಲುಬ್ಧವಾದವಲ್ಲಿ ವೃಕ್ಷವುಆದರಿಪ ನಾರಿಯರಗಾಧ ತಪವಲ್ಲವೆಪಾದಪ ಪಶುಗಳೆಲ್ಲ ಆ ದೇವರ್ಕಳಲ್ಲವೆ 3ತುರುವ ಮೇಯಿಸಿ ವ್ರಜಕೆ ಮರಳಿಸಿಗೋಪಾಲರೇಯ ಹೈಯಿ ಹೈಯೆಂದುತರುಬಿ ತಡೆಯಿರೆನ್ನುತ ಹೈಯಿ ಹೈಯೆಂಬಸ್ವರದಿ ಕೊಳಲನೂದುತ ಹೈಯಿ ಹೈಯೆಂದುಭರದಿಚೆಂಡು ಚಿಮ್ಮುತ ಹೈಯಿಹೈಯೆಂದುಧರೆಯ ಮೇಲಿಂಬಾಡುವ ಕರದ ದಂಡಿಗೇರುವತರಳರಾವ ಭಾಗ್ಯರೊ ಧರಣಿ ಯಾವ ಮಾನ್ಯಳೊ 4ಒಪ್ಪುವ ಗೋಧೂಳಿ ಮೈಯಲಿಪ್ಪ ಪೊಂದೊಡಿಗೆ ಚೆಲ್ವಶಾಮಲಾಮಲಾಂಗಗುಪ್ಪಾರತ್ಯೆತ್ತಿದರು ಶಾಮಲಾಮಲಾಂಗಗೆಕುಪ್ಪಿರಿವ ಕರುಗಳ ಶಾಮಲಾಮಲಾಂಗದÀರ್ಪಿನಾವ ರಂಬಿಸೆ ಶಾಮಲಾಮಲಾಂಗಕ್ಷಿಪ್ರಪಾಲ್ಗರೆದು ನಂದ ಗೋಪಾಂಗನೆಯರೀವ ನಮ್ಮಪ್ಪ ಪ್ರಸನ್ನವೆಂಕಟಾಧಿಪ್ಪನೆಂದು ಕಾಂಬೆನಾ 5
--------------
ಪ್ರಸನ್ನವೆಂಕಟದಾಸರು
ನಾನೇನ ಮಾಡಿದೆನೊ-ರಂಗಯ್ಯ ರಂಗನೀನೆನ್ನ ಕಾಯಬೇಕೋ ಪಮಾನಾಭಿಮಾನವು ನಿನ್ನದು ಎನಗೇನುದೀನ ರಕ್ಷಕ ತಿರುಪತಿ ವೆಂಕಟರಮಣ ಅ.¥ರಕ್ಕಸತನುಜನಲ್ಲೇ - ಪ್ರಹ್ಲಾದನುಚಿಕ್ಕ ಪ್ರಾಯದ ಧ್ರುವನು ||ಸೊಕ್ಕಿನ ಪಾಪ ಮಾಡಿದಜಮಿಳನು ನಿನ್ನಅಕ್ಕನ ಮಗನು ಮಗನು ಏನೋ -ರಂಗಯ್ಯ 1ಕರಿರಾಜ ಕರಿಸಿದನೇ - ದ್ರೌಪದಿದೇವಿಬರದೋಲೆ ಕಳುಹಿದಳೇ ||ಕರುಣದಿಂದಲಿ ಋಷಿಪತ್ನಿಯ ಶಾಪವಪರಿಹರಿಸಿದೆಯಲ್ಲವೋ -ರಂಗಯ್ಯಒಪ್ಪಿಡಿಯವಲಕ್ಕಿಯ -ನಿನಗೆ ತಂದುಒಪ್ಪಿಸಿದವಗೊಲಿದೆ ||ಒಪ್ಪುವೆ ನಿನಗೆ ಶ್ರೀಪುರಂದರವಿಠಲವರಪ್ಪಂತೆ ಎನ್ನ ಕಾಯೋ -ರಂಗಯ್ಯ 3
--------------
ಪುರಂದರದಾಸರು
ನಿನ್ನ ನಾನೇನೆಂದೆನೆ ಬಗಳಾಮುಖಿ ನಿನ್ನ ನಾನೇನೆಂದೆನೆನಿನ್ನ ನಾನೇನೆಂದೆ ತತ್ವವ ಕೇಳುತ ಚೆನ್ನಾಗಿಎನ್ನ ಬಳಿ ಕುಳ್ಳಿರೆಂದೆನಲ್ಲದೇಪಹತ್ತಿಯನರೆ ಎಂದೆನೇ ಹಳ್ಳದ ನೀರಹೊತ್ತು ಹಾಕೆಂದೆನೆ ಮತ್ತೆ ಹರಡಿಯ ತೋರಿ ಬೀ-ಸುತ್ತೆ ಚವುರಿಯಲಿಮತ್ತೆ ಗಾಳಿಯ ನೀಗ ಬೀಸೆಂದೆನಲ್ಲದೇ1ಕುಸುಬೆಯ ಒಡೆಯೆಂದೆನೇ ಕುದುರೆಯ ಮೈ-ಹಸನಾಗಿ ತೊಳೆಯೆಂದೆನೇಹೊಸ ಪೀತಾಂಬರವನುಟ್ಟು ಹೂವಮುಡಿಯೊಳು ಇಟ್ಟುಅಸಿಯ ಹಿಡಿದು ಮುಂದೆ ನಡೆಯೆಂದೆನಲ್ಲದೆ2ಕಲ್ಲನು ಹೊರು ಎಂದೆನೆಎಲ್ಲ ಕೆಲಸವನೀಗ ಮಾಡೆಂದೆನೆಬಲ್ಲಂತೆ ಪಾರುಪತ್ಯವನು ಮಾಡುತ್ತಾ ಕಾಲ್ಗೆಜ್ಜೆಘುಲ್ಲೆನಿಸಿ ನಡೆ ಎಂದೆನಲ್ಲದೇ3ಗೋಡೆಯನು ಬಳಿ ಎಂದೆನೆರಾಗಿಯ ಹಿಟ್ಟನು ಬೀಸೆಂದೆನೆಈಡಾಗಿ ಒಪ್ಪುವಾಭರಣಗಳ ನೀ ತೊಟ್ಟುಆಡುತ್ತ ಮಠದೊಳಗೆ ಇರು ಎಂದೆನಲ್ಲದೇ4ಬಟ್ಟೆಯನು ಒಗೆ ಎಂದೆನೆದುಷ್ಟರನು ಕೂಡಿ ನಲಿಯೆಂದೆನೇಶಿಶು ಚಿದಾನಂದ ಬ್ರಹ್ಮಾಸ್ತ್ರ ದೈವ ತಾನಿಷ್ಟ ದೇವತೆಯಾಗಿ ನೆಲೆಸೆಂದೆನಲ್ಲವೆ5
--------------
ಚಿದಾನಂದ ಅವಧೂತರು
ನುಹುಡಿಯ ಹೊರಳ್ಯೇನು ಬಡಕೊಂಡರೇಕಡಲಶಯನನೊಳು ದೃಢ ಭಕ್ತಿ ಇರದೆ ಪ.ಐದು ಪಾವಕನೊಳು ಮೈ ದಹಿಸಿದರೇನುಒಯ್ದು ಶ್ವಾಸವ ನೆತ್ತಿಲಿಟ್ಟರೇನುತೊಯ್ದುಟ್ಟರಿವೆ ತುದಿಗಾಲಲಿ ನಿಂತೇನುಮೈದುನಸಖನಂಘ್ರಿ ಪೂಜಿಸದನಕ 1ತೊಪ್ಪಲ ಮೆದ್ದಗ ತಪ್ಪಲ ಸೇರೇನುಉಪ್ಪವಾಸನಿಲವ ನುಂಗಲೇಸುಒಪ್ಪುವ ಇಳೆಯ ಸುತ್ತಾಡಿ ದಣಿದರೇನುದರ್ಪಕನಯ್ಯನ ಒಲುಮಿಲ್ಲದನಕ 2ಮಧ್ವಸರೋವರ ಮೀಯದ ಜನುಮೇನುಮುದ್ದುಕೃಷ್ಣನ ನೋಡದಕ್ಷಿಯೇನುಮಧ್ವೇಶ ಪ್ರಸನ್ವೆಂಕಟೇಶನೊಪ್ಪಿರದವನಿದ್ದೇನು ಇಲ್ಲದೇನೀಧರೆಗೆ 3
--------------
ಪ್ರಸನ್ನವೆಂಕಟದಾಸರು
ಪಂಚಭೇದತಿಳಿವದು ಪ್ರತಿದಿನದಲೀ |ಮುಂಚಿನಜ ಮಧ್ವಮುನಿ ಮತವನುಸರಿಸಿದವರೂ ಪಜೀವೇಶರಿಗೆ ಭೇದ ಜೀವ ಜೀವಕೆ ಭೇದ |ದೇವರಿಗು ಜಡಕು, ಜಡಕೆ ಜಡ ಭೇದಾ ||ಆವಾಗಜೀವರಿಗೆ ಜಡಗಳಿಗೆ ಭೇದುಂಟು |ಈ ವಿವರವ ಪೇಳ್ವೆ ಯನ್ನಾಪನಿತು ಕೇಳುವದೂ 1ಈಶನಿತ್ಯಅನಾದಿಸ್ವರತಸರ್ವಗ ಸ್ವಪ್ರ- |ಕಾಶ ಸರ್ವಜÕವಿಶ್ವವಿಲಕ್ಷಣಾ ||ಮೇಶ ಅಪರಿಚ್ಛಿನ್ನಮೂರ್ತಿಪ್ರಾಣಿಗಳಿಂದ |ತಾ ಸಾಕ್ಷಿಯಾಗಿ ಬಹು ಕರ್ಮಗಳ ಮಾಡಿಸುವ 2ಶ್ರೀ ಮುಖ ಜಗತ್ಯಕುತ್ಪತ್ಯಾದಿ ಕಾರಣ ಮ- |ಹಾ ಮಹಿಮ ಸರ್ವತಂತ್ರ ಸ್ವತಂತ್ರಾ ||ಆಮಯವಿದೂರ ಜ್ಞಾನಾನಂದ ಬಲ ಪೂರ್ಣ |ಸೀಮೆಯಿಲ್ಲದ ಸುಗುಣ ಕ್ರಿಯಾತ್ಮಕ ಸ್ವರೂಪ 3ಸುಖ ದುಃಖಭೋಗಿಜೀವನು ಅಸ್ವತಂತ್ರ ಬಹು |ಕಕುಲಾತಿಉಳ್ಳವನು ದುರ್ವಿಷಯದೀ ||ಲಕುಮೀಶನಲ್ಲಿ ಭಕ್ತಿ ವಿವರ್ಜಿತನುಪ್ರತಿಕ್ಷ- |ಣಕೆ ಅನಂತ ಅಪರಾಧಿ ಜನ್ಮ ಮೃತಿ ಉಳ್ಳವನು 4ಆದಿ ವ್ಯಾಧಿಗಳಿಂದ ಪೀಡಿತನು ಅಜ್ಞಾನಿ |ಮಾಧವನ ಬಂಧಕ ಶಕುತಿಯೊಳಗಿಹ್ಯಾ ||ತಾ ಧರಿಸಿಹನುಪ್ರಾಕೃತಪ್ರಾಕೃತಾವರಣ |ಭೇದವೆ ಸಿದ್ಧ ಯಿಂಥ ಜೀವಗೂ ಹರಿಗ್ಯೂ 5ಒಂದಲ್ಲ ಸರ್ವ ಜೀವರು ಸತ್ವ ರಜ ತಮರು |ಯಂದು ಭೇದಗಳುಂಟವರ ಲಕ್ಷಣಾ ||ಮುಂದಿನ ಪದದಿ ಪೇಳ್ವೆ ಸಜ್ಜನರು ಕೇಳಿಯಾ- |ನಂದ ಬಡಲೆಂದು ವಿನಯದಲಿ ಬಿನ್ನೈಸುವೆನು 6ಛಿನ್ನ ಭಕ್ತರು ಯನಿಪರೆಲ್ಲ ದೇವತಿಗಳ |ಚ್ಛಿನ್ನ ಭಕ್ತರು ವಿಧೀರವರ್ಹೆಂಡರೂ ||ಚನ್ನಾಗಿ ಮುದದಿ ಈ ನಿರ್ಜರರ ತರತಮ್ಯ |ವನ್ನು ಕೇಳಿಕೊಬೇಕು ಜ್ಞಾನಿಗಳ ಮುಖದಿಂದ 7ವಿಧಿಮೊದಲು ತೃಣ ಜೀವಪರಿಯಂತಸಾತ್ವಿಕರು |ಇದರೊಳಗೆ ದೇವ, ಋಷಿ, ಪಿತೃಪ, ನರರೂ ||ಸುಧಿಗೆ ಯೋಗ್ಯ ರಜಾದಿಗೀರ್ವಾಣಗಂಧರ್ವ |ತುದಿಯಾಗಿ ಸಾಂಶರು ನಿರಂಶರುಳಿದವರೆಲ್ಲ 8ಇವರಿಂದ ಭಿನ್ನ ರಾಜಸರು ಗೋ ಭೂ ನರಕ |ತ್ರಿವಿಧಗತಿಉಳ್ಳವರು ಪಂಚಭೇದಾ ||ವಿವರ ತರತಮ ದೇವರ ಮಹತ್ಮಿಯನು ಅರಿಯ |ದವರು ಲಿಂಗಕಳಿಯರುಧಾಮತ್ರಯಪೊಗದವರೂ 9ಸಂಸಾರಿಗಳಿಗೆ ಭಿನ್ನರು ತಮೋಗುಣದವರು |ಕಂಸಾರಿಯಲಿ ದ್ವೇಷವರ ಸ್ವಭಾವಾ ||ಆ ಸುರಾರಿಗಳು ನಾಲ್ಕು ಪ್ರಕಾರ ದೈತ್ಯ ರಾ |ಕ್ಷಸರು, ಪಿಶಾಚರವರನುಗರು, ನರಾಧಮರು 10ಈ ನಾಲ್ಕು ಬಗೆಯ ಸುರರಿಗೆ ಅರಸು ಕಲಿಯವನಾ |ಹೀನತನವೆಷ್ಟುಚ್ಚರಿಸಲಿ ಮಿಥ್ಯಾ ||ಜ್ಞಾನಿಭೇದವನರಿಯ ಪಂಚ ಮಹಾಪಾತಕಿ ಪು- |ರಾಣ ವೇದಗಳಿಗೆ ವಿರುದ್ಧಾರ್ಥ ಕಲ್ಪಿಸುವಾ 11ಸುಜನರಾಚರಣೆ ನಡಿಯಗುಡ ದುಃಖ ಬಡಿಸುವ |ಕುಜನರಿಗನೇಕ ಬಗೆ ಸಹಯವಹನೂ ||ಪ್ರಜಗಳನ ರೋಗನಾ ವೃಷ್ಟಿಯಿಂ ದಣಿಸುವನು |ವೃಜನವನ ವಪು ತಾಯಿ ತಂಗಿಯಂಬರನರಿಯ 12ಬವರಬಂಗಾರ ದ್ಯೂತಾ ಪೇಯಅನೃತನಟ |ಯುವತಿಯೀಯಾರು ಸ್ಥಳ ನಿಲಯವವರಿಗೆ ||ನವವಿಧ ದ್ವೇಷಿಗಳಿಗಾಕಾರನೆನಿಸುವನು |ಅವನ ಸಮ ಪಾಪಿಗಳು ಮೂರು ಲೋಕದಲಿಲ್ಲ 13ಆ ನೀಚನ ಮಲಮೂತ್ರ ವಿಸರ್ಜನದಿಘೋರ|ಕಾನನದಿ ಕತ್ತಲಿಯೊಳಗೆ ಸ್ಮರಿಪುದೂ ||ಕ್ಷೋಣಿಯೊಳವನ ನಿಂದೆ ನಿರುತದಲಿ ಮಾಡುವದೆ |ಶ್ರೀನಾಥನರ್ಚನೆ ಮಹಾಯಜÕವೆನಿಸುವದು 14ಈ ವಿಧದಿ ಮೂರು ಗುಣದಿಂದ ಪರಸ್ಪರ ಜೀವ |ಜೀವರಿಗೆ ಭೇದ ಯೋಗ್ಯತಿ ಪ್ರಕಾರಾ ||ಮೂವರಿಗೆ ಪಾಪಮಿಶ್ರಿತಕರ್ಮಪುಣ್ಯ ಬಹು |ನೋವು ಸ್ವರ್ಗ ನರಕ ಸುಮೋಕ್ಷಾದಿಗತಿಉಂಟು 15ಈ ಜೀವರಿಗೆ ಉಳ್ಳನುಭವ ಜಡಗಳಿಗಿಲ್ಲ |ನೈಜವಾಯಿತು ಭೇದ ಜೀವ ಜಡಕೇ ||ಆ ಜಡ ತ್ರಿ, ನಿತ್ಯಾ ಅನಿತ್ಯನಿತ್ಯಾ,ನಿತ್ಯ|ಮಾಜದವು ಅವ್ಯಾಕೃತ ನಭಶೃತಿ ವರ್ಣಗಳೂ 16ಪ್ರಾಕೃತವಿಕೃತ ವೈಕೃತತ್ರಯ ಅಸ್ಥಿರ ಜಡವು |ಪ್ರಾಕೃತವಜಾಂಡ ಧೊರ ಆವರಣವೂ ||ಸ್ವೀಕೃತೈವತ್ತು ಕೋಟ್ಯೋಜನ ಸುವರ್ಣಾತ್ಮ |ಕಾಕ್ರಮಿಸಿಹದಜಾಂಡಕಿದು ವಿಕೃತ ಜಡವೆಂದು 17ಸರಸಿಜಭವಾಂಡದೊಳಿಹ ನೆಲಜಲಧಿಗಿರಿಗಳು |ಎರಡೇಳುಭುವನವೈಕೃತ ಜಡವಿದೂ ||ಸ್ಥಿರ ಅಸ್ಥಿರ ಜಡತ್ರಯ ವಿಧ ಪುರಾಣಗಳರ್ಥ |ಇರುತಿಹವು ಅಚಲಾಗಿ ಶಬ್ದಗಳ ನಿತ್ಯಾ 18ಮೂಲ ಪ್ರಕೃತಿಗತ ತ್ರಿವಿಧಾನಂತ ಪರಮಾಣು |ಜಾಲಕಾರಣತ ಸುಸ್ಥಿರವೆನಿಪವೂ ||ಮ್ಯಾಲೆ ಅದರಿಂದಾದ ತತ್ವಗಳನಿತ್ಯಮಹ |ಕಾಲವೆಂದಿಗ್ಯುನಿತ್ಯಅಣುಕಾಲಗಳ ನಿತ್ಯಾ19ಹೀಗೆ ಮೂರು ವಿಧ ಜಡ ಒಂದೊಂದೆ ಮೂರು ಮೂ- |ರಾಗಿರಲು ಜಡ ಜಡಕೆ ಭೇದ ಸಿದ್ಧಾ ||ಭಾಗಾರ ಮಾಡಿ ಗುಣರೂಪ ಕ್ರಯದಿ ನೋಡೆ |ನಾಗಾರಿವಹಗೆ ಜಡಗಳಿಗೆ ಭೇದವೇ ಸತ್ಯಾ20ಈ ಕಮಲಜಾಂಡವು ಅನಿತ್ಯವಿದರೊಳಗೆ ಎಂ- |ದೂ ಕೆಡದೆ ಸುಖಕಾಂತಿ ಯುಕ್ತವಾದಾ ||ಶ್ರೀಕಳತ್ರನ ತ್ರಿಧಾಮಗಳು ಕುಕಲಿಗೆ ತಕ್ಕ |ಶೋಕಪೂರಿತವಾದನಿತ್ಯನರಕಗಳಿಹವು 21ಈಪಂಚಭೇದಜ್ಞಾನಿಲ್ಲದವ ಶ್ರೀ ಮುದ್ರಿ |ಗೋಪಿಚಂದನ ಧರಿಸಿದರು ಫಲವೇನೂ ||ಈ ಪೊಡವಿಯೊಳು ವೇಷಧಾರಿಗಳು ಜೀವಿಸರೆ |ಆ ಪರಿಯ ಭಾಸ ವೈಷ್ಣವನೆಂದರಿಯಬೇಕೂ 22ಹರಿಗುರುಗಳ ದಯ ಪಡೆವರಿಗೆರುಚಿತೋರ್ವದಿತ |ರರಿಗೆ ಈ ಕೃತಿಯುಕರ್ಣಕಠೋರವೂ ||ತರಣಿಬರೆ ಸರ್ವರಿಗೆ ಘೂಕಗಾದಂತೆ ಇದು |ಬರಿಯ ಮಾತಲ್ಲ ಶಾಸ್ತ್ರಕೆ ಸಮ್ಮತಾಗಿಹದು 23ಹೀನರೊಳು ಬೆರಿಯದಲೆ ಪಂಚಭೇದವ ತಿಳಿದು |ಸಾನುರಾಗದಲಿಹರಿಸರ್ವೋತ್ತುಮಾ ||ಪ್ರಾಣದೇವರೆ ಗುರುಗಳೆಂದರಿತು ಭಜಿಸುವರು |ಕಾಣರು ಕು ಸಂಸಾರ ಧಾಮತ್ರ ವೈದುವರು 24ಇಪ್ಪತ್ತೈದು ಪದಗಳಿಂದ ಸಂಗತಿಯಾಗಿ |ಒಪ್ಪುತಿಹ ಈ ಪಂಚಭೇದವನ್ನೂ ||ತಪ್ಪದಲೆನಿತ್ಯಪಠಿಸುವರ ಪೊರವವನು ಬೊಮ್ಮ- |ನಪ್ಪ ಶ್ರೀ ಪ್ರಾಣೇಶ ವಿಠಲನಿಹಪರದಲ್ಲಿ 25
--------------
ಪ್ರಾಣೇಶದಾಸರು
ಪ್ರಸನ್ನ ಶ್ರೀಕೂರ್ಮ5ಪ್ರಥಮ ಅಧ್ಯಾಯಶ್ರೀಕೂರ್ಮಪ್ರಾದುರ್ಭಾವಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ತನು ಕೂರ್ಮರೂಪಪಾಲಾಬ್ಧಿಜಾಪತಿಅನಘಅಜಿತ ಧನ್ವಂತರಿಲೀಲಾ ಮೋಹಿನಿಅನಘಶರಣು ಮಾಂಪಾಹಿಪವೇದಾದಿ ಸಚ್ಛಾಶ್ರ(ಪ್ರ)ಮೇಯ ವೇದವತೀಶಪದುಮಜಾಂಡವ ಪಡೆದ ಜಗದೇಕಭರ್ತಾಅದ್ವಿತೀಯನು ಸ್ವಾಮಿ ಸಮರಧಿಕರಿಲ್ಲದವವೇಧಮುಕ್ಕಣ್ಣಾದಿ ಸುರಸೇವ್ಯಪಾಹಿ1ಸತ್ಯ ಜ್ಞÕನಾನಂತ ಭೂಮಾದಿ ಗುಣನಿಧಿಯೇಸತ್ಯಸೃಷ್ಟಿ ಮಾಳ್ಪಿ ಸತ್ಯನಾಮಾಪ್ರತ್ಯಕ್ಷ ಪ್ರಮಾಣ ಸಿದ್ಧವು ಈ ಜಗತ್ತುತತ್ಸøಷ್ಟಿ ಪಾಲನಾದಿಗಳೆಲ್ಲ ಸತ್ಯ 2ಸೃಷ್ಟಿ ಪ್ರವಾಹವು ಅನಾದಿಯೂ ನಿತ್ಯವೂಘಟಾದಿ ಕಾರ್ಯಗಳ ಉಪಾದಾನ ಕಾರಣಮೂಲ ಜಡಪ್ರಕೃತಿಯೂ ಅನಾದಿಯೂ ನಿತ್ಯವೂಸೃಷ್ಟ್ಯಾದಿಕರ್ತಾ ನಿನ್ನಾಧೀನವು ಎಲ್ಲಾ 3ಕಾರ್ಯಕಾರಣಾತ್ಮಕ ಜಗತ್ತು ಸರ್ವಕ್ಕೂತೋಯಜಾಕ್ಷನೇ ನೀನು ನಿಮಿತ್ತ ಕಾರಣನುನಿಯಾಮಕನು ನೀನೇವೇ ಚಿದಚಿತ್ ಅಖಿಳಕ್ಕೂಅನ್ಯರಿಗೆ ಸ್ವಾತಂತ್ರ್ಯ ಸಾಮಥ್ರ್ಯವಿಲ್ಲ 4ವಿಧಿಶಿವಾದಿ ಸರ್ವ ಸುರಾಸುರರುಗಳಿಗೆಸತ್ತಾಪ್ರತೀತಿ ಪ್ರವೃತ್ತಿಪ್ರದ ಹರಿಯೇಭೂತಭವ್ಯ ಭವತ್ಪ್ರಭುವು ವಿಷ್ಣು ನೀನೇವೇಚೇತನಾ ಚೇತನಾಧಾರ ಸರ್ವತ್ರ 5ದೂರ್ವಾಸರ ಶಾಪ ನಿಮಿತ್ತದಿ ಸ್ವರ್ಗದಐಶ್ವರ್ಯವು ಕ್ಷಿಣವು ಆಗಿ ಬಹುವಿಧದಿದೇವಶತೃಗಳ ಬಲ ಉನ್ನಾಹವಾಗಲುದೇವರಾಜನು ಬ್ರಹ್ಮನಲ್ಲಿ ಪೋದ 6ವಾಸವವರುಣಾದಿ ಸುರರ ಮೊರೆಕೇಳಿಬಿಸಜಸಂಭವ ಶಿವ ಶಕ್ರಾದಿಗಳ ಕೂಡಿಶ್ರೀಶನೇ ರಕ್ಷಕನು ಎಂದು ನಿನ್ನಲ್ಲಿ ಬಂದುಸಂಸ್ತುತಿಸಿದನುಪರಮಪೂರುಷ ನಿನ್ನನ್ನ7ಅವ್ಯಯನೇ ಸತ್ಯನೇ ಅನಂತನೇ ಅನಘನೇಶ್ರೀವರನೇ ಪೂರ್ಣೈಶ್ವರ್ಯ ಮಹಾಪುರುಷದೇವವರೇಣ್ಯ ನಿನ್ನಲ್ಲಿ ಸ್ತುತಿ ಬ್ರಹ್ಮಸುವಿನಯದಿ ಮಾಡಿದ ವೇದಾರ್ಥಸಾರ 8ಸಹಸ್ರಾರ್ಕೋದಯ ದ್ಯುತಿ ಸುಂದರರೂಪಮಹಾರ್ಹ ಭಗವಂತಹರಿಈಶ್ವರನೇ ನೀನುಬ್ರಹ್ಮಾದಿಗಳ ಸ್ತುತಿಗೆ ಪ್ರಸನ್ನನು ಆಗಿಮಹಾನುಭಾವ ನೀ ಒಲಿದಿ ಕೃಪೆಯಿಂದ 9ಪದುಮನಾಭನೇನಿರ್ವಾಣಸುಖಾರ್ಣವನೇಪದುಮಭವ ಸನ್ನಮಿಸಿ ಪೇಳಿದ್ದಕೇಳಿಸಿಂಧುವಮಥನಮಾಡಲಿಕೆ ಬೇಕು ಎಂದಿಅದರ ಬಗ್ಗೆ ಉಪಾಯವ ಅರುಹಿದಿ ವಿಭುವೇ 10ಕ್ಷೀರಾಬ್ಧಿಯಲಿ ವೀರು ತೃಣ ಲತೌಷಧಿ ಇಟ್ಟುಗಿರಿಶ್ರೇಷ್ಠ ಮಂದರವ ಕಡೆಗೋಲು ಮಾಡಿವರಸರ್ಪ ವಾಸುಕಿಯ ಹಗ್ಗ ಮಾಡಿ ಮಥಿಸಿಅಮೃತೋತ್ಪಾದನ ಯತ್ನಿಪುದು ಎಂದಿ 11ದೈತ್ಯ ದಾನವರೆಲ್ಲ ಶತೃಗಳು ಆದರೂಸಂಧಿಯ ಅವರೊಡೆ ಮಾಡಿ ಕೂಡಿಮಂದರವ ಸಿಂಧುವಲಿ ತಂದಿಟ್ಟು ಮಥಿಸುವುದುಸುಧೆಯ ಉತ್ಪಾದನಕೆ ಉಪಾಯ ಇದು ಎಂದಿ 12ದೈತ್ಯರ ಸಹಕಾರ ಬಗೆ ಯುಕ್ತಿಗಳ ಪೇಳಿಭೀತಿ ಪಡಬೇಡ ವಿಷ ಉಕ್ಕಿ ಬರುವಾಗಅದಿತಜರಿಗೇವೇ ಫಲ ಲಭಿಸುವುದು ಎಂದುದಿತಿಜರಿಗೆಕ್ಲೇಶಭವಿಸುವುದು ಎಂದಿ13ಪುರುಷೋತ್ತಮ ಜಗತಃಪತಿ ಅಜಿತನಾಮಾಸುರರಿಗೆ ಬೋಧಿಸಿದ ರೀತಿ ಅನುಸರಿಸಿಶಕ್ರಾದಿಗಳು ವೈರೋಚನಾದಿಗಳೊಡೆತ್ವರಿತ ಯತ್ನಿಸಿದರು ಕಡಲ ಮಥನಕ್ಕೆ 14ದೂರದಲ್ಲಿ ಇದ್ದ ಆ ಅತಿಭಾರ ಗಿರಿಯನ್ನಸುರರುದಾನವರೆತ್ತಿ ಸಮುದ್ರ ತಟಕೆತರಲು ಬಹು ಯತ್ನಿಸಿದರು ವ್ಯರ್ಥದಿಗಿರಿಯ ಭೂ ಮೇಲೆತ್ತೆ ಅಸಮರ್ಥರು 15ಮೇರುಗಿರಿ ಬದಿ ಇದ್ದ ಮಂದರಾಚಲವುರುದ್ರ ರುದ್ರವರ ಬಲಯುತವು ಎತ್ತಲು ಅಶಕ್ಯಸುರದಾನವರು ಬೆರಗಾಗೇ ಒಂದೇ ಕರದಿಂಗಿರಿಯ ನೀ ಎತ್ತಿ ಗರುಡನ ಮೇಲೆ ಇಟ್ಟಿ 16ಗರುಡನಿಂದ ತಮ್ಮ ಮೇಲೆ ಇರಿಸೆ ಪರಿಕ್ಷಾರ್ಥಭಾರತಾಳದೇ ಸುರಾಸುರರು ಹತರಾಗೇಕಾರುಣ್ಯ ನೋಟದಿ ಬದುಕಿಸಿದಿ ಮೃತರನ್ನತೀವ್ರ ಗಾಯಗಳನ್ನ ಸೌಖ್ಯ ಮಾಡಿದಿಯೋ 17ಲೀಲೆಯಿಂದಲಿ ಪುನಃ ಒಂದೇ ಹಸ್ತದಿ ಗಿರಿಯಮೇಲೆತ್ತಿ ಗರುಡನ ಹೆಗಲಲಿಟ್ಟು ಕುಳಿತುಪಾಲಸಾಗರದಲ್ಲಿ ಸ್ಥಾಪಿಸಿ ಮಥನಕ್ಕೆವ್ಯಾಳನ ಹಗ್ಗದಂದದಿ ಸುತ್ತಿಸಿದಿಯೋ 18ಪುಚ್ಛಭಾಗವು ಅಮಂಗಳವು ಬೇಡವೆಂದುಅಸುರರ ವಾದಾ ಮುಖಭಾಗ ಹಿಡಿಯೇವಾಸುಕಿಯ ಪುಚ್ಛಾಂಗ ದೇವತೆಗಳು ಹಿಡಿದುಶ್ರೀಶ ನೀ ಸಹಕರಿಸೆ ಮಥನವ ಮಾಡಿದರು 19ಪರಮಯತ್ನದಿ ಅಮೃತಾರ್ಥ ಪಯೋನಿಧಿಯಗಿರಿಯಿಂದ ಮಂಥನ ಸುರಾಸುರರು ಮಾಡೆಪರಮಗುರುತರಅದ್ರಿಆಧಾರವಿಲ್ಲದೆಸರಿದು ಮುಳುಗಿ ಬೇಗ ಕೆಳಗಡೆ ಹೋಯಿತು 20ಶೈಲವು ಮುಳುಗಲು ಸುಧಾಕಾಂಕ್ಷಿಗಳ ಮನವ್ಯಾಕುಲದಿ ಮುಖಕಾಂತಿ ಮ್ಲೌನವು ಆಯಿತುಎಲ್ಲಾ ಶ್ರಮವು ವ್ಯರ್ಥ ಎಂದು ಬೆರಗಾಗಿರೆಬಲು ಕೃಪೆಯಲಿ ನೀನು ಒದಗಿದಿ ಆಗ 21ಅದ್ಭುತ್ ಮಹತ್ ಕಚ್ಛಪ ರೂಪದಲಿ ನೀಅಬ್ಧಿಯಲಿ ಬೇಗನೇ ಬಂದು ಮೇಲೆಎಬ್ಬಿಸಿದಿ ಆ ಮಂದರಾಚಲಗಿರಿಯಸುಬಲ ಪೂರುಷ ನಮೋ ಚಿನ್ಮೋದಗಾತ್ರ 22ಚನ್ಮೋದಮಯ ಮಹಾಕೂರ್ಮರೂಪನೇ ನಿನ್ನಅಮಿತ ಸುಬಲ ಲಕ್ಷ ಯೋಜನ ವಿಸ್ತಾರಸುಮಹಾ ದ್ವೀಪದಂದಿರುವ ಪೃಷ್ಠದ ಮೇಲೆಆ ಮಹಾದ್ರಿಯ ಹೊತ್ತಿ ಪುನರ್ ಮಥಿಸಲೊದಗಿದಿ 23ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧೀಶಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀಪ್ರಸನ್ನ ಶ್ರೀನಿವಾಸಧನ್ವಂತರೀ ಶರಣು ಅಜಿತ ಸ್ತ್ರೀಕೂರ್ಮ24-ಇತಿ ಪ್ರಥಮಾಧ್ಯಾಯ ಸಂಪೂರ್ಣಂ-ದ್ವಿತೀಯ ಅಧ್ಯಾಯನೀಲಕಂಠವೃತ್ತಾಂತಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಸಿರಿವರಹರಿಕೂರ್ಮನ ಪೃಷ್ಠೋಪರಿನಿಂತಗಿರಿಯಿಂದ ಅಸುರರುಸುರರುಪುನರ್ಮಥಿಸೆಗಿರ್ಗಿರಿ ಗಿರಿ ಗಿರಿ ಎಂದು ಭ್ರಮಿಸಿತು ಗಿರಿಯುಪರಿಮಳ ಪೂ ಸುರಿಸಿದರು ಬ್ರಹ್ಮಾದಿಗಳು 1ವಾಸುಕಿತಾಳದೇ ಬುಸು ಬುಸು ಎಂದು ಮೇಲ್ಶ್ವಾಸದಿ ವಿಷಜ್ವಾಲೆ ಹೊರಗೆ ಬಿಡಲುಅಸುರಬಲಿಇಲ್ವಾದಿಗಳು ಬಿಸಿ ಸಹಿಸದೇಘಾಸಿಹೊಂದಿದರುದಾವಾಗ್ನಿಪೀಡಿತರ ಪÉೂೀಲ್2ದಿತಿಜರು ಅದಿತಿಜರು ಎಷ್ಟೇ ಯತ್ನಿಸಿದರೂಸುಧಾ ಇನ್ನೂ ಪುಟ್ಟದೇ ಇರುವುದ ಕಂಡುದಂತ ಶೂಕವ ಆಗ ಸ್ವಯಂ ನೀನೇ ಹಿಡಿದುಮಥನಮಾಡಿದಿ ಸ್ವಾಮಿ ಕಾರುಣ್ಯದಿಂದ3ಪೀತಾಂಬರಿ ಸುಖ ಚಿನ್ಮಾತ್ರ ಚಾರ್ವಾಂಗಸದಾ ನಮೋ ಶರಣಾದೆ ಲೋಹಿತಾಕ್ಷದಿತಿಜಾ ಅದಿತಿಜಾರೊಡೆ ನೀನು ಸಹಮಥಿಸಲುಲತಾ ಓಷಧಿ ಕಲುಕಿ ಉಕ್ಕಿತುಸಿಂಧು4ಹಾಹಾ ಭಯಂಕರವು ಇದೇನು ಲೋಕಗಳದಹಿಸುವಂದದಿ ಫೇಣ ಉಕ್ಕಿ ಬರುತಿದೆಯುಮಹಾ ವೀರ್ಯತರ ಹಾಲಾಹಲವೆಂಬ ವಿಷ ಇದುಮಹೀಭರ್ತಾ ಮಹಾದೇವ ಮಹಾದ್ರಿದೃತ್ಪಾಹಿ5ಅಸಮ ಸ್ವಾತಂತ್ರ್ಯ ನಿಜಶಕ್ತಿ ಪರಿಪೂರ್ಣವಿಶ್ವರಕ್ಷಕ ನೀ ವಿಷಭಯ ನಿವಾರಿಸೆಸ್ವಸಮರ್ಥನಾದರೂ ಭೃತ್ಯರ ಕೀರ್ತಿಯಪ್ರಸರಿಸೆ ಒದಗಿದಿ ಮಹಾದೇವ ಶಾಸ್ತ 6ಮಹತ್ ಎಂಬ ಬ್ರಹ್ಮನ ಸ್ವಾಮಿ ಆದುದರಿಂದಮಹಾದೇವ ಎಂಬುವ ನಾಮ ನಿನ್ನದೇವೇಮಹಾದೇವ ಶಿವ ಈಶ ರುದ್ರಾದಿ ಶಬ್ದಗಳುಮಹಾಮುಖ್ಯ ವೃತ್ತಿಯಲಿ ನಿನಗೇವೇ ವಾಚಕವು 7ಭಸ್ಮಧರ ದೇವನಿಗೆ ಮಹಾದೇವ ಎಂಬುವನಾಮ ಔಪಚಾರಿಕದಲ್ಲೇವೇ ರೂಢಬ್ರಹ್ಮನಾಮನು ನೀನೇ ಬ್ರಹ್ಮಾಂತರ್ಯಾಮಿಯುಬ್ರಹ್ಮನೊಳು ಇದ್ದು ನೀ ಭುವನಂಗಳ ಪಡೆವಿ 8ರುದ್ರ ನಾಮನು ನೀನೇ ರುದ್ರಾಂತರ್ಯಾಮಿಯುರುದ್ರನೊಳು ಇದ್ದು ನೀ ಸಂಹಾರವ ಮಾಡುವಿತತ್‍ತತ್ರಸ್ಥಿತೋ ವಿಷ್ಣುಃ ತತ್‍ಚ್ಛಕ್ತಿ ಪ್ರಬೋಧÀಯನ್ರುದ್ರನಿಂ ವಿಷಪಾನ ನಿನ್ನ ನಿಯಮನವೇ 9ಶಕ್ರಾದಿ ಸರ್ವರಿಗೂಗುರುಆಶ್ರಯನು ಶಂಕರನುಶಂಕರನಿಗೆ ಆಶ್ರಯನು ಗುರುಮುಖ್ಯವಾಯುಮುಖ್ಯವಾಯುಗಾಶ್ರಯ ಶ್ರೀಕಾಂತ ನೀನುಶ್ರೀಕಾಂತ ನೀನೇವೇ ಸರ್ವಾಶ್ರಯ ಅನೀಶ 10ಯಾವ ಮಹಾದೇವನೊಲಿಯದೇ ವಾಯು ಒಲಿಯಆ ವಾಯು ಒಲಿಯದೇಹರಿತಾನೂ ಒಲಿಯಆ ವಾಯು ಹರಿಒಲಿಯದಿರೆ ಬೇರೆ ಗತಿಇಲ್ಲಆ ವಾಯು ಹರಿಧಾಮ ಮಹಾದೇವ ಸ್ತುತ್ಯ 11ಸರ್ವಾಂತರ್ಯಾಮಿ ಯಾವನಲಿ ಪ್ರಸನ್ನನು ಆಗಿಯಾವನ ಮೂಲಕ ಶಕ್ರಾದಿಗಳ ಕಷ್ಟತೀವ್ರದಿ ಪೋಗುವುದೋ ಆ ಮಹಾದೇವನ ಸ್ತುತಿಸಿದರುಸುರರುಶಿವಾಂತರ್ಯಾಮಿ ಶ್ರೀಹರಿ ಮಹಿಮೆಗಳ ಕೂಡಿ 12ಕರತಲೀಕೃತ್ಯಹಾಲಾಹಲವಿಷವಶಕ್ರಾದಿ ಜನರಲ್ಲಿ ಕೃಪೆ ಮಾಡಿ ಉಂಡುಕರುಣಾಳು ಮಹಾದೇವ ಭೂತದಯಾಪರನು ಈಹರಿಭಕ್ತಾಗ್ರಣಿ ಶಿವ ಉಮೇಶನಿಗೆ ಶರಣು 13ಹರಿಬ್ರಹ್ಮ ಪಾರ್ವತಿ ಪ್ರಜೇಶ್ವರರುಹರನ ಈ ಮಹತ್ಸೇವೆ ಬಹು ಶ್ಲಾಘಿಸಿದರುಕರದಿಂದ ಕೆಳಗೆ ಪ್ರಸ್ಕನ್ನ ಗರವಾದ್ದುಸರೀಸೃಪ ವೃಶ್ಚಿಕಾದಿಗಳೊಳು ಸೇರಿತು 14ಗರವು ಭೂಷಣವಾಯಿತು ವೈರಾಗ್ಯಾಧಿಪ ಶಿವಗೆಸುಪ್ರಸಿದ್ಧನು ಆದ ನೀಲಕಂಠನೆಂದುಧೀರ ಕರುಣಾಂಬುನಿಧಿ ನಂಜುಂಡೇಶ್ವರನು ಈಗಿರಿಜೇಶನಿಗೆ ನಾ ನಮಿಪೆ ಶರಣೆಂದು 15ಈ ಕೃಪಾಕರ ನೀಲಕಂಠ ಕರತಲೀಕೃತ್ಯಆ ಕಾಲಕೂಟವಿಷ ಉಂಡ ಮಹತ್ಕಾರ್ಯಸಂಕೀರ್ತಿ ಪೇಳಿರುವುದು ಶ್ರೀ ಭಾಗವತದಿಬಾಕಿ ಬಹು ಮಹೋಲ್ಪಣ ವಿಷ ವಿಷಯ ಶೃತಿ ವೇದ್ಯ 16ಉರಗಭೂಷಣ ವಿಪ ಉರಗಪರುಗಳಿಗಿಂತನೂರುಗುಣ ಎಂಬುದಕೆ ಅತ್ಯಧಿಕ ಬಲಿಯುವರಮುಖ್ಯ ಪ್ರಾಣ ಜಗತ್ ಪ್ರಾಣಗೆ ಸಮರಿಲ್ಲನೀರಜಜಾಂಡದಿ ಎಲ್ಲೂ ಶರಣೆಂಬೆ ಇವಗೆ 17ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ18-ಇತಿ ದ್ವಿತೀಯಾಧ್ಯಾಯಂ ಸಂಪೂರ್ಣಂ -ತೃತೀಯ ಅಧ್ಯಾಯಶ್ರೀ ಇಂದಿರಾ ಆವಿರ್ಭಾವಸಾರಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಗರಪಾನವ ವೃಷಾಂಕನು ಮಾಡೆ ಇಂದ್ರಾದಿಸುರರುದಾನವರು ಪುನರ್‍ಮಥನವ ಚರಿಸೆಕ್ಷೀರಸಾಗರದಿಂದ ಉತ್ಪನ್ನವಾದವುಪರಿಪರಿ ವಸ್ತುಗಳ್ ಒಂದರ ಮೇಲೊಂದು 1ಯಜÉೂÕೀಪಯೋಗಿಗಳಪ್ರದ ಕಾಮಧೇನುಉಚ್ಛೈಶ್ರವನಾಮ ಸುಲಕ್ಷಣ ಅಶ್ವಸಚ್ಛಕ್ತಿ ಶ್ರೇಷ್ಠತರ ಐರಾವತನಾಮಗಜೇಂದ್ರ ನಾಲ್ಕು ಚಂದದಂತ ಭೂಷಿತವು 2ಸರಸಿಜೋದ್ಭವಸೇವ್ಯಶ್ರೀಶವರಾಹಹರಿನಿನ್ನ ವಕ್ಷ ಸಂಬಂಧದಿ ಹೊಳೆವಸುಶ್ರೇಷ್ಠ ಕೌಸ್ತುಭರತ್ನ ಎಂಬುವಂತಹಸುಭ್ರಾಜಮಣಿ ಬಂತು ಆ ಸಿಂಧುವಿನಿಂದ 3ಸುರಲೋಕ ವಿಭೂಷಣವು ಸರ್ವವಾಂಛಿತ ಪ್ರದವುಪಾರಿಜಾತವು ಉದ್ಭವವಾಯಿತು ತರುವಾಯಸ್ಫುರದ್ರೂಪ ರಮಣೀಯ ಸುಂದರಾಂಗಿಗಳುಹಾರವಸನಭೂಷಿತ ಅಪ್ಸರಸರು 4ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್‍ವಿದಿಕ್ಕುಗಳ ರಂಜಿಸುವರೂಪ -ದಿಂದ ಆವಿರ್ಭವಿಸಿದಳು ಸಾಕ್ಷಾತ್ ಶ್ರೀಇಂದಿರೆಅಲೌಕಿಕ ಸೌಂದರ್ಯಪೂರ್ಣೆ5ಸರ್ವದಾ ಸರ್ವವಿಧದಿ ನಿನ್ನ ಸೇವಿಸಿ ನುತಿಪಸರ್ವಜಗಜ್ಜನನಿಯೇಸಿಂಧುಕನ್ಯಾದೇವ ದೇವೋತ್ತಮ ರಾಜರಾಜೇಶ್ವರ ನಿನಗೆದೇವ ಶ್ರೀ ರಾಜರಾಜೇಶ್ವರಿನಿತ್ಯನಿಜಸತಿಯು6ಇಂದ್ರಾದಿ ದೇವತೆಗಳು ಮುನಿಜನರುಇಂದಿರೆಯನ್ನು ವಿಧಿಯುಕ್ತ ಪೂಜಿಸಿದರುಸಿಂಧುರಾಜನು ವರುಣ ಏನು ಧನ್ಯನೋ ಜಗನ್ -ಮಾತೆ ನಿರ್ದೋಷೆ ರಮಾ ಮಗಳಾಗಿ ತೋರಿಹಳು 7ಅಲೌಕಿಕ ಮುತ್ತು ನವರತ್ನದ ಮುಕುಟಒಳ್ಳೇ ಪರಿಮಳ ಹೂವು ಮುಡಿದ ತುರುಬುಪಾಲದಲಿ ಶ್ರೇಷ್ಠತಮ ಕಸ್ತೂರಿತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬಟ್ಟು 8ಅಂಬುಜಾಕ್ಷಗಳು ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯಪ್ರದ ಕೃಪಾನೋಟಕಂಬುಕಂಠದಿ ಮಂಗಳಸೂತ್ರ ಕರಯುಗದಿಅಂಬುಜಾವರಕೊಡುವ ಅಭಯಹಸ್ತಗಳು9ಕಂದರದಿ ಎಂದೂ ಬಾಡದಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟಿವಸ್ತ್ರ ರಾಜಿಸುವಂತಹ ಸ್ವರ್ಣಹಾರಗಳುಕಾಂತಿಯುಕ್ ಭಂಗಾರ ಸರ್ವಾಭರಣಗಳು 10ಆನಂದಮಯಅಜಿತನಾಮಾ ನಿನ್ನನು ಮನ-ಮಂದಿರದಿ ಪೂಜಿಸುತ ಇಂದಿರಾದೇವಿಬಂದು ಸಭೆಯಲಿ ಸಾಲು ಸಾಲಾಗಿ ಕುಳಿತಿದ್ದವೃಂದಾರಕರನ್ನ ಮಂದಹಾಸದಿ ನೋಡಿದಳು 11ಒಬ್ಬೊಬ್ಬ ದೇವತೆಯಲೂ ಗುಣವಿದ್ದರೂಅಬ್ಬಬ್ಬ ಏನೆಂಬೆ ದೋಷಗಳೂ ಉಂಟುಅದ್ಭುತ ಗುಣನಿಧಿನಿರ್ದೋಷಸರ್ವೇಶ-ಅಂಬುಜನಾಭ ನೀನೇವೇ ಎಂದು ನಮಿಸಿದಳು 12ಕ್ಷರರಿಗೂ ಅಕ್ಷರರಿಗೂ ಎಂದೆಂದೂ ಆಶ್ರಯನುಪುರುಷೋತ್ತಮಹರಿವಿಷ್ಣು ಸ್ವತಂತ್ರಸರಿ ಅಧಿಕರು ಇಲ್ಲದ ಅನಘನು ಸರ್ವಗುಣಪರಿಪೂರ್ಣನಿಗೇವೇ ಅರ್ಪಿಸಿದಳು ಮಾಲೆ 13ಉತ್ತಮ ಸುತೀರ್ಥಗಳಿಂದ ಅಘ್ರ್ಯ ಚಮನಪಾದ್ಯಾದಿ ಅರ್ಚನೆ ವಿಧಿಯುಕ್ತವಾಗಿಸುತಪೂನಿಧಿ ವಸಿಷ್ಠಾದೀಯರು ವೇದೋಕ್ತಮಂತ್ರ ಪಠಿಸೆ ವರುಣ ಹರಿಯ ಪೂಜಿಸಿದ 14ಆನಂದಪೂರ್ಣಅಜನಿತ್ಯಮುಕ್ತೆ ಮಗಳುಇಂದಿರೆಯಆನಂದಮಯಹರಿನಿನಗೆಸಿಂಧುಧಾರೆ ಎರೆದು ಮದುವೆ ಮಾಡಿಕೊಟ್ಟಆನಂದ ನಿತ್ಯದಂಪತಿ ರಮಾ ಮಾಧವರು 15ಪೀತಾಂಬರ ದಿವ್ಯ ಆಭರಣ ಪೊಳೆಯುತ್ತಮೋದಮಯ ನೀ ಸಿಂಧುಜಾ ಸಹ ದಿವ್ಯರತ್ನ ಖಚಿತ ಮಂಟಪದಲಿ ಕುಳಿತರೆಮುದದಿ ವರ್ಷಿಸಿದರು ಪೂಮಳೆಸುರರು16ಸಂಭ್ರಮದಿ ಮಂಗಳವಾದ್ಯ ಸುಧ್ವನಿಗಳುತುಂಬಿತುಅಂಬರಅಂಬುಧಿಎಲ್ಲೂಗಂಭೀರ ಸುಸ್ವರ ವೇದಘೋಷಗಳುತುಂಬರ ನಾರದಾದಿಗಳ ಗಾಯನವು 17ದೇವಗಾಯಕರುಗಳ ದಿವ್ಯ ಕೀರ್ತನೆಗಳುದೇವನರ್ತಕ ನರ್ತಕಿಯರ ನರ್ತನವುದೇವತೆಗಳ ಆಭರಣಾದಿ ಕಾಣಿಕೆಗಳದೇವಿ ರಮೆಗೂ ನಿನಗೂ ಅರ್ಪಿಸಿದರು ಮುದದಿಂ 18ವನಜಭವ ರುದ್ರಾದಿಗಳು ಮುನಿವೃಂದವುಸನ್ನುತಿಸುತ ಸರ್ವ ಕೀರ್ತನವನ್ನುಆನಂದ ಭಕ್ತಿಯಂ ಶ್ರೀ ಲಕ್ಷ್ಮೀಯನ್ನು ನೋಡಿಧನ್ಯರಾದರು ನಮೋ ವಿಷ್ಣುಗೆ ಶ್ರೀರಮೆಗೆ 19ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ20- ಇತಿ ತೃತೀಯ ಅಧ್ಯಾಯ ಪೂರ್ಣಂ -ಚತುರ್ಥ ಅಧ್ಯಾಯಶ್ರೀ ಧನ್ವಂತರಿ ಹಾಗೂ ಮೋಹಿನಿವೃತ್ತಾಂತಸಾರಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪವಿಸ್ತಾರವಾಗಿ ಫೇಣವು ವ್ಯಾಪಿಸಿರುವಆ ಸಮುದ್ರದಿಂದ ವಾರುಣಿಯು ಬರಲಾಗಅಸುರರನು ತಮಗೇವೆ ಬೇಕೆಂದು ಕೊಂಡರುಈಶ ನೀ ಅವರಿಗೆ ಅನುಮತಿ ಕೊಡಲು 1ಸುಧೆಗಾಗಿ ಸಿಂಧುವ ಮತ್ತೂ ಮಥನಮಾಡೆಉದಿಸಿದನುಪರಮಅದ್ಭುತ ಪುರುಷನುಸುಂದರ ವಿಗ್ರಹ ಕಂಬುಗ್ರೀವ ಅರುಣೇಕ್ಷಣಅಂದ ಸುದೀರ್ಘ ಪೀವರದೋರ್ದಂಡ 2ಸಗ್ನಧರ ಶ್ಯಾಮಲಸ್ತರುಣ ಸರ್ವಾಭರಣ -ದಿಂದ ಒಪ್ಪುವ ರತ್ನಖಚಿತ ಕುಂಡಲವುಪೀತವಾಸ ಮಹಾಸ್ಕಂಧ ಸುಶುಭಾಂಗನುಸ್ನಿಗ್ದ ಕುಂಚಿತ ಕೇಶ ಸಿಂಹ ವಿಕ್ರಮನು 3ಅನುಪಮಾದ್ಭುತ ಈ ಮಹಾಪುರುಷ ಸಾಕ್ಷಾತ್ವಿಷ್ಣು ನೀನೇವೆ ಮತ್ತೊಂದವತಾರಆನಂದ ಚಿನ್ಮಾತ್ರ ಹಸ್ತದಲಿ ಹಿಡಿದಿರುವಿಪೂರ್ಣವಾಗಿ ಅಮೃತ ತುಂಬಿರುವ ಕಳಸ 4ಆಯುರ್ವೇದ ಮಹಾಭಿಷಕ್ ಶ್ರೀ ಧನ್ವಂತರಿ ನೀನುಕೈಯಲ್ಲಿ ಪಿಡಿದ ಪಿಯೂಷ ಕುಂಭವನುದೈತ್ಯರು ನೋಡಿ ಬಹು ಇಚ್ಛೈಸಿ ಅಪಹರಿಸೆಶ್ರೀಯಃಪತಿಯೇಸುರರುನಿನ್ನಲ್ಲಿ ಮೊರೆಇಟ್ಟರು5ದೇವತಾವೃಂದವಿಷ್ಣಮನಸ್ಸಿಂದಲಿದೇವವರೇಣ್ಯಹರಿನಿನ್ನ ಶರಣು ಹೋಗಲುಯಾವ ಮನಖೇದವೂ ಬೇಡ ಅನುಕೂಲವನೇಮಾಡುವಿ ಎಂದು ನೀ ಅಭಯವನ್ನಿತ್ತಿ 6ಅಮೃತಕಲಶವು ಎಂದು ನೆನೆದು ಆ ಅಸುರರುನಾಮುಂಚಿ(ಚೆ) ನಾಮುಂಚಿ (ಚೆ) ನೀ ಮುಂಚಿ (ಚೆ) ಅಲಲ್ತಮ್ಮೊಳಗೆ ಈ ರೀತಿ ಪರಸ್ಪರ ಕಾದಾಡೇನೀ ಮೋಹಿನಿ ರೂಪದಲಿ ತೋರಿ ನಿಂತಿ 7ಪರಮಅದ್ಭುತ ಅನಿರ್ದೇಶ್ಯ ಸ್ತ್ರೀರೂಪವಧರಿಸಿ ನಿಂತಿಯೋ ಆ ಅಸುರರ ಮುಂದೆಅರಳಿದಮಲ್ಲಿಗೆ ಮುಡಿದ ಕುಂತಳವುವರಾನನ ಕರ್ಣಕುಂಡಲಕಪೋಲ8ಸುಗ್ರೀವ ಕಂಠಾಭರಣ ಸುಭುಜಾಂಗದಸ್ಫುರತ್ ನವ ಯೌವನಗಾತ್ರ ಸೌಂದರ್ಯಉರದಿ ಪೊಳೆಯುವ ನವರತ್ನಪದಕಗಳುಭಾರಿ ಪೀತಾಂಬರವುದಿವ್ಯಒಡ್ಯಾಣ9ಸರ್ವಅವಯವಗಳು ಅನುಪಮ ಸುಂದರವುಸರ್ವಾಭರಣ ವಿಭೂಷಿತ ಸೊಬಗುಸರ್ವಾಕರ್ಷಕ ಮಂದಗತಿ ನೋಟವುಸರ್ವ ಆ ದೈತ್ಯರೊಳು ಕಾಮ ಪುಟ್ಟಿಸಿತು 10ಅಮರರೊಳು ದೈತ್ಯರೊಳು ಗಂಧರ್ವ ನರರೊಳುಈ ಮಹಾ ಸೌಂದರ್ಯರೂಪ ಕಂಡಿಲ್ಲಸುಮೋಹಿತ ದೈತ್ಯರು ಸುಧಾ ವಿಷಯದಲಿತಮಗೂ ಸುರರಿಗೂ ನ್ಯಾಯಮಾಡೆ ಕೋರಿದರು 11ಮಾಯಾಯೋಷಿದ್ವಪುಷಅಮೃತ ವಿನಿಯೋಗನ್ಯಾಯವೋ ಸರಿಯೋ ಸರಿಯಲ್ಲವೋನೀ ಹ್ಯಾಗಾದರೂ ಮಾಡಲಿಕೆ ಒಪ್ಪಿದರುಮಾಯಾಮೋಹವೃತ ಆ ದೈತ್ಯಜನರು12ಉಪವಾಸ ಸ್ನಾನ ಹೋಮಾದಿಗಳು ಆಗಿದೀಪಾವಳಿಗಳ ಹಚ್ಚಿಟ್ಟು ಮುದದಿತಪ್ಪದೇಮುಕ್ತಆಚರಣೆ ತರುವಾಯಸುಪವಿತ್ರ ಸುಧೆಗೆ ಕಾದರು ಸುರಾಸುರರು 13ಸುಧೆಗೆ ಕಾದಿರುವ ಸುರಾಸುರರ ನೋಡಿಸುಧಾ ಕಲಶ ನಿಜವಾದ್ದನ್ನ ಹಿಡಿದಿಮಂದಗಜ ಗತಿಯಲ್ಲಿ ಶೃಂಗಾರ ಸುರಿಸುತ್ತಬಂದಳು ಮೋಹಿನಿ ಚಂದ ನವಯುವತಿ 14ಅಸುರರು ಅರಿಯರು ಯೋಷಿದ್ ವಪುಹರಿಯೇವೇಆ ಸ್ಫುರದ್ರೂಪಿಣಿ ಮೋಹಿನಿ ಎಂತಅಸುರರು ಲೋಲುಪಮರು ಸುಧಾ ಅನರ್ಹರು ಎಂದುಶ್ರೀಶ ನೀ ನಿಶ್ಚಯಿಸಿದಿ ದೇವ ದೇವ 15ದೇವತೆಗಳ ಪಂಕ್ತಿ ಒಂದು ಸಾಲು ಮತ್ತುದೇವಶತೃಗಳ ಪಂಕ್ತಿ ಮತ್ತೊಂದು ಸಾಲುದೇವತೆಗಳಿಗೇವೇ ನೀ ಸುಧ ಉಣಿಸಿದಿದೇವಶತೃಗಳಿಗೆ ಸುಧಾ ಉಣಿಸಲಿಲ್ಲ 16ಕೂರ್ಮರೂಪದಲಿ ನೀ ಮಂದರಾಗಿರಿ ಪೊತ್ತುಅಮರರ ಸಹಿತಸಿಂಧುಮಥಿಸಿದಿ ಅಜಿತಅಮೃತ ಕಲಶವ ತಂದಿ ಶ್ರೀಶ ಧನ್ವಂತರಿಸುಮನಸಸುಧಾಪ್ರದ ಮೋಹಿನಿರೂಪ17ಹರಿಪಾದಾಶ್ರಿತರಾಗಿರುವ ಸುರರಿಗೆ ಅಮೃತಹರಿಪರಾನ್ಮುಖ ದ್ವೇಷಿ ದೈತ್ಯರಿಗೆ ಇಲ್ಲಸುರಾಸುರಗಣಕೆ ಸಮ ಕರ್ಮೋಪಕರಣಗಳುಆದರೂ ಯೋಗ್ಯತೆಯಿಂದ ಫಲ ಬೇರೆ ಬೇರೆ 18ಜ್ಞಾನಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ19- ಇತಿ ಚತುರ್ಥ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬಂದು ನಿಂದಿಹ ನೋಡಿ- ಭೂತಳದಿ ವೆಂಕಟಇಂದಿರೆಯನೊಡಗೂಡಿ- ಒಪ್ಪುವ ನಿರಂತರಪೊಂದಿ ಭಜನೆಯ ಮಾಡಿ- ಆನಂದ ಬೇಡಿ ಪವಂದಿಸುತ ಮನೆದೊಳಗೆ ಇವನಡಿ-ದ್ವಂದ್ವ ಭಜಿಸಲು ಬಂದ ಭಯಹರ |ಇಂದುಧರಸುರವೃಂದನುತ ಗೋ-ವಿಂದಘನದಯಾಸಿಂಧು ಶ್ರೀಹರಿ ಅ.ಪದ್ವಾರದೆಡಬಲದಲ್ಲಿ- ಜಯವಿಜಯರಿಬ್ಬರುಸೇರಿ ಸೇವಿಪರಲ್ಲಿ- ಸನಕಾದಿನುತ ಶೃಂ-ಗಾರನಿಧಿ ಅಂಗದಲಿ- ಮುತ್ತಿನಲಿ ಶೋಭಿಪಹಾರ ಹೊಂದಿಹುದಲ್ಲಿ- ವಿಸ್ತಾರದಲ್ಲಿ ||ವಾರವಾರಕೆ ಪೂಜೆಗೊಂಬುವಹಾರ ಮುಕುಟಾಭರಣ ಕುಂಡಲ-ಧಾರಿ ಭುಜ ಕೇಯೂರ ಭೂಷಿತಮಾರಪಿತಗುಣಮೋಹನಾಂಗ ||ಚಾರುಪೀತಾಂಬರ ಕಟಿಯ ಕರ-ವೀರ ಕಲ್ಹಾರಾದಿ ಹೂವಿನಹಾರ ಕೊರಳೊಳು ಎಸೆಯುತಿರೆ ವದ-|ನಾರವಿಂದನು ನಗುತ ನಲಿಯುತ 1ಎಲ್ಲ ಭಕುತರಭೀಷ್ಟ-ಕೊಡುವುದಕೆ ತಾ ಕೈ-ವಲ್ಯ ಸ್ಥಾನವ ಬಿಟ್ಟ- ಶೇಷಾದ್ರಿ ಮಂದಿರದಲ್ಲಿ ಲೋಲುಪ ದಿಟ್ಟ-ಸೌಭಾಗ್ಯನಿಧಿಗೆದುರಿಲ್ಲ ಭುಜಬಲ ಪುಷ್ಪ-ಕಸ್ತೂರಿಯಿಟ್ಟ ||ಚೆಲ್ವ ಪಣೆಯಲಿ ಶೋಭಿಸುವ ಸಿರಿ-ವಲ್ಲಭನಗುಣಪೊಗಳದಿಹ ಜಗ-ಖುಲ್ಲರೆದೆದಲ್ಲಣ ಪರಾಕ್ರಮಮಲ್ಲಮರ್ದನಮಾತುಳಾಂತಕ||ಫಲ್ಗುಣನಸಖಪ್ರಕಟನಾಗಿಹದುರ್ಲಭನು ಅಘದೂರ ಬಹುಮಾಂಗಲ್ಯ ಹೃಯಯವ ಮಾಡಿ ಸೃಷ್ಟಿಗೆಉಲ್ಲಾಸ ಕೊಡುತಲಿ ಚೆಂದದಿಂದಲಿ 2ಪದಕ-ಕೌಸ್ತುಭದಾರ-ಸರಿಗೆಯ ಸುಕಂಧರಸುದರ್ಶನ-ದರಧಾರ-ಸುಂದರ ಮನೋಹರಪದಯುಗದಿ ನೂಪುರ-ಇಟ್ಟಿಹನು ಸನ್ಮುನಿಹೃದಯ ಸ್ಥಿತ ಗಂಭೀರ-ಬಹುದಾನ ಶೂರ ||ವಿಧಿ-ಭವಾದ್ಯರ ಪೊರೆವ ದಾತನುತುದಿ ಮೊದಲು ಮಧ್ಯವು ವಿರಹಿತನುಉದುಭವಾದಿಗಳೀವ ಕರ್ತನುತ್ರಿದಶಪೂಜೀತ ತ್ತಿಭುವನೇಶ ||ಸದುನಲಾಸದಿ ಸ್ವಾಮಿ ತೀರ್ಥದಿಉದುಸುತಿರೆಸಿರಿಮಹಿಳೆ ಸಹಿತದಿಪದುಮನಾಭಪುರಂದರವಿಠಲನುಮುದದಿ ಬ್ರಹ್ಮೋತ್ಸವದಿ ಮೆರೆಯುತ 3
--------------
ಪುರಂದರದಾಸರು
ಭೇದ ಮುಕ್ತಾವಲಿ (ಕೋಲು ಹಾಡು)ಕೋಲು ಮುಕ್ತಿಮಾರ್ಗದ ಕೋಲು ದುಷ್ಟಶಾಸನಕೋಲು ಸುಖತೀರ್ಥಯತಿರಾಯನ ಕರದಂಡುಕೋಲು ಕೋಲೆನ್ನ ಕೋಲೆ ಪ.ಶ್ರೀದೇವಹೂತಿಜಾಜನಂಘ್ರಿಗೆ ನಮಿಸುವೆಶ್ರೀದೇವಿ ಪದಕೆ ಎರಗುವೆ ಕೋಲೆಶ್ರೀದೇವಿ ಪದಕೆ ಎರಗುವೆ ಮುಖ್ಯಗುರುವಾದಜವಾಯುರೊಂದಿಪೆ ಕೋಲೆ 1ವಾಣಿ ಭಾರತಿದೇವಿ ಗರುಡ ಮಹೇಶಾನಂತಜ್ಞಾನದಾತರಿಗೆ ನಮೋ ಎಂಬೆ ಕೋಲೆಜ್ಞಾನದಾತರಿಗೆ ನಮೋ ಎಂಬೆ ಶ್ರೀವಿಷ್ಣುಮಾನುನೆರಾರ್ವರ ಶರಣೆಂಬೆ ಕೋಲೆ 2ಗರುಡನ ರಂಭೆವಾರುಣಿಗಿರಿಜೇರಿಗೊಮ್ಮೆಕರಗಳ ಮುಗಿದು ಸ್ಮರಿಸುವೆ ಕೋಲೆಕರಗಳ ಮುಗಿದು ಸ್ಮರಿಸುವೆ ಇಂದ್ರ ಕಾಮವರಪ್ರಾಣಾನಿರುದ್ಧರ ಬಲಗೊಂಬೆÉ ಕೋಲೆ3ಇಂದ್ರಾಣಿರತಿಮುಖ್ಯರಾದ ತಾರತಮ್ಯದವೃಂದಾರಕಋಷಿನೃಪರನು ಕೋಲೆವೃಂದಾರಕಋಷಿನೃಪರಮನುಷ್ಯೋತ್ತಮರಂ ಧ್ಯಾನಿಸುವೆ ಮನದಲಿ ಕೋಲೆ 4ಏನೂ ಇಲ್ಲೆಂಬನ ಹಾನಿಗೆ ಕಡೆಯಿಲ್ಲತಾನೀಶನೆಂದು ನುಡಿದವ ಕೋಲೆತಾನೀಶನೆಂದು ನುಡಿದವ ತಮಸನುತಾನುಂಬ ತನ್ನ ಬಳಗದಿ ಕೋಲೆ 5ಹರಿಯ ಗುಣಕೆ ಎಣಿಕೆನಿಟ್ಟವ ಕೆಟ್ಟವಹರಿನಿರ್ಗುಣೆಂಬ ಡಂಬರ ಕೋಲೆಹರಿನಿರ್ಗುಣೆಂಬ ಡಂಬರ ಸಂಗದಿಧರೆಯ ಸಜ್ಜನರು ಮತಿಗೆಡಲಿ ಕೋಲೆ 6ಕ್ಷೀರಾಂಬುಧಿಮನೆಯ ವಾಸುದೇವನ ಆಜ್ಞಾಧಾರಿಯೆನಿಪ ವಾಯುದೇವನು ಕೋಲೆ ಆಜ್ಞಾಧಾರಿಯೆನಿಪ ವಾಯುದೇವನು ಮೊದಲಿಗೆವೀರ ಹನುಮ ಭೀಮನಾದನು ಕೋಲೆ 7ಮೂರನೆ ಅವತಾರಿ ಮಧ್ವರಾಯನು ಮುಕ್ತಿದಾರಿಯ ತನ್ನವರಿಗೆಲ್ಲ ಕೋಲೆ ಮುಕ್ತಿದಾರಿಯ ತನ್ನವರಿಗೆಲ್ಲ ತೋರಿದುದಾರಿಯ ಪದವ ಹೊಂದಿದೆ ಕೋಲೆ 8ಗುರುಮಧ್ವ ಎನ್ನ ಮಾತೆ ಗುರುಮಧ್ವನೆನ್ನತಾತಗುರುಮಧ್ವನಾಥ ಸಖಭ್ರಾತ ಕೋಲೆಗುರುಮಧ್ವನಾಥ ಸಖಭ್ರಾತನೆಂದವರಿಗೊಲಿವನು ಗತಿಯ ಕೊಡುವನು ಕೋಲೆ 9ಸುಖತೀರ್ಥರಾಯನ ಹಿತವಾಕ್ಯಕೆಣೆಯಿಲ್ಲಶುಕತಾತ ಸಮನ ದೈವಿಲ್ಲ ಕೋಲೆಶುಕತಾತ ಸಮನ ದೈವಿಲ್ಲವೆಂದವರಭಕುತಿಯ ಬೇಡಿ ಬಯಸಿದೆ ಕೋಲೆ 10ಭಕುತ್ಯೆಂಬ ಮುಯ್ಯವ ಹರಿಪಾದಕರ್ಪಿಸಿದಅಕಳಂಕ ಮಧ್ವ ಮುನಿರಾಯ ಕೋಲೆಅಕಳಂಕ ಮಧ್ವಮುನಿರಾಯನಂಘ್ರಿಗೆಸಕಳ ಭಾರವ ಒಪ್ಪಿಸಿದೆನು ಕೋಲೆ 11ವಿಶಿಷ್ಠ ಸ್ವರೂಪಾನಂದರ್ಭಾವ ಮೋಕ್ಷ ಸುವಾಸಿನೇರೆಲ್ಲರೊಂದಾಗಿ ಕೋಲೆ ಸುವಾಸಿನೇರೆಲ್ಲರೊಂದಾಗಿ ಹೋಗುವಹೇಸಿ ನಾರೇರ ಗೆಲ್ಲುವ ಕೋಲೆ 12ನಮ್ಮ ಮುತ್ತಯ್ಯನಾದ ಮರುತರಾಯನ ಕೀರ್ತಿನಿರ್ಮಲ ಬುಧರಿಗಮೃತವು ಕೋಲೆನಿರ್ಮಲ ಬುಧರಿಗಮೃತವು ಧರೆಯೊಳುಹಮ್ಮಿನ ಖಳರಿಗೆದೆಗಿಚ್ಚು ಕೋಲೆ 13ಮುತ್ತಯ್ನಂಶದ ಒಳಗೊಬ್ಬ ಜನಿಸಿದಹೆತ್ತಯ್ನಮ್ಮ ಜಯರಾಯ ಕೋಲೆಹೆತ್ತಯ್ನಮ್ಮ ಜಯರಾಯ ತನ್ನ ಬಂಧುಮೊತ್ತದಿ ರಾಜ್ಯವಾಳಿದ ಕೋಲೆ 14ಜಯರಾಯ ಸಂತತಿಯ ಮಕ್ಕಳು ನಾವೀಗಜಯನವಭೇರಿ ಹೊಯಿಸುತ ಕೋಲೆಜಯನವಭೇರಿ ಹೊಯಿಸುತ ರವದ ಜಾಗಟೆಯ ಬಿರುದಲಿ ಬರುತೇವೆ ಕೋಲೆ 15ಬಯಲು ಮಾತಿನವ ಕಡೆಗಾಗಿ ತತ್ವವಿನಯ ವಾಕ್ಯ ನಿಮಗೆ ಸೊಗಸಲ್ಲ ಕೋಲೆ ವಿನಯವಾಕ್ಯ ನಿಮಗೆ ಸೊಗಸಲ್ಲ ಕೇಳಿದರೆಭಯಬಿಟ್ಟುಕೇಳಿಕವಿಯರು ಕೋಲೆ16ಲೌಕಿಕ ಮಾತಿನಂತಲ್ಲ ಮುಯ್ಯದ ಹಾಡುವೈಕುಂಠಪತಿಯ ಅರಮನೆಯ ಕೋಲೆವೈಕುಂಠಪತಿಯ ಅರಮನೆಯಾಸ್ಥಾನದಏಕಾಂತ ನಾರೇರೊಪ್ಪಿದ್ದು ಕೋಲೆ 17ಹಾದಿ ಬೀದಿಯ ಜನರ ಮೆಚ್ಚಿನ ಮುಯ್ಯಲ್ಲಮಾಧವನ ಶ್ವೇತದ್ವೀಪದ ಕೋಲೆಮಾಧವನ ಶ್ವೇತದ್ವೀಪದ ಮಂದಿರದಿಶ್ರೀದೇವಿಯಮ್ಮ ಕೇಳ್ವಳು ಕೋಲೆ 18ಭ್ರಾಂತಜನರಿಗೆ ವಿಶ್ರಾಂತಿದೋರದು ಮುಯ್ಯಾನಂತಾಸನದ ಅನಂತನ ಕೋಲೆ ಅನಂತಾಸನದ ಅನಂತನ ಮಡದಿ ಶ್ರೀಕಾಂತೆ ನಮ್ಮವ್ವ ಕೇಳ್ವಳು ಕೋಲೆ 19ಹಾಡುತ ಬರುತೇವೆ ಹರಸುತ ಬರುತೇವೆರೂಢಿಯ ಸಾಧುಜನರನು ಕೋಲೆರೂಢಿಯ ಸಾಧುಜನರ ಗುಣಂಗಳ ಕೊಂಡಾಡುತ ನಾವು ಬರುತೇವೆ ಕೋಲೆ 20ದರ್ಶನರಾಯರು ಮೂವತ್ತೇಳು ಮಂದಿಅರಸರು ನಮ್ಮ ಹಿರಿಯರು ಕೋಲೆಅರಸರು ನಮ್ಮ ಹಿರಿಯರ ಮಹಿಮೆ ಉಚ್ಚರಿಸುತ ನಾವು ಬರುತೇವೆ ಕೋಲೆ 21ನಮ್ಮ ತವರಿಗೆ ಕೀರ್ತಿತಂದ ಕನ್ಯೇರು ನಾವುನಮ್ಮ ನೆಳಲಿಗಂಜಿ ನಡೆದೇವು ಕೋಲೆನಮ್ಮ ನೆಳಲಿಗಂಜಿ ನಡೆದೇವು ದುರುಳೇರಉನ್ಮತ್ತನಮಗೆ ಎಣಿಕಿಲ್ಲ ಕೋಲೆ22ಜ್ಞಾನದೀವಟಿಗೆ ಬೆಳಗಲೆ ಬರುತೇವೆಜ್ಞಾನ ಕತ್ತಲೆಯ ಬೆದರಿಸಿ ಕೋಲೆ ಅಜ್ಞಾನ ಕತ್ತಲೆಯ ಬೆದರಿಸಿ ಬರುವಾಗಹೀನ ಬುಧ್ಯರು ಮೋರೆ ತೆಗೆದಾರು ಕೋಲೆ 23ನಮ್ಮಯ್ಯನಾಸ್ಥಾನ ಬಣ್ಣಿಸಲಳವಲ್ಲನಿರ್ಮಳಾತ್ಮಕರು ಸಚಿವರು ಕೋಲೆನಿರ್ಮಳಾತ್ಮಕರು ಸಚಿವರು ಪರಿವಾರಧರ್ಮಶೀಲರು ವಿರತರು ಕೋಲೆ 24ಎತ್ತ ನೋಡಲಿ ನವಭಕ್ತಿರತ್ನದ ಬೆಳಗುಚಿತ್ರ ಮಂಟಪಕೆ ಎಣಿಕಿಲ್ಲ ಕೋಲೆಚಿತ್ರ ಮಂಟಪಕೆ ಎಣಿಕಿಲ್ಲ ಶಂಖಚಕ್ರಒತ್ತಿಡಿದವು ಭಿತ್ತಿಲಿ ಕೋಲೆ 25ಬ್ರಹ್ಮಸೂತ್ರದ ವಜ್ರಕಂಬದಿ ಕುಳಿತಿಹಬ್ರಹ್ಮಜÕಪರಮ ಹಂಸವು ಕೋಲೆಬ್ರಹ್ಮಜÕ ಪರಮಹಂಸವು ಪುಣ್ಯಶ್ಲೋಕಧರ್ಮಜÕರಾಯ ಗಿಳಿವಿಂಡು ಕೋಲೆ 26ಮ್ಯಾಗೆ ಮ್ಯಾಗೊಪ್ಪುವ ಸದ್ಗ್ರಂಥದುಪ್ಪರಿಗೇಲಿಕೂಗುವ ಸಾಮಕೋಗಿಲೆ ಕೋಲೆಕೂಗುವ ಸಾಮಕೋಗಿಲೆ ನವಿಲ್ಗಳುನಾಗಪಾಲಕಗೆ ಅತಿಪ್ರೀತಿ ಕೋಲೆ 27ಕಡುಭಕ್ತಿಪತಾಕೆ ಹರಿನಿಷ್ಠೆ ಕಳಸವುಕೊಡುವಅಭಯಛತ್ರ ಸಾಲ್ಗಳು ಕೋಲೆಕೊಡುವಅಭಯಛತ್ರ ಸಾಲ್ಗಳು ಶ್ರೀ ತುಲಸಿನಡುವೆ ಪ್ರಣತ ತೋರಣಗಳು ಕೋಲೆ 28ತಪವೆಂಬ ತಪಿತದರ ಮೈಸಿರಿಯನೃಪಜಯರಾಯನೆಸೆದನು ಕೋಲೆನೃಪಜಯರಾಯನೆಸೆದಾ ಸಿಂಹಾಸನದಿಶಶಿತೇಜದಂತೆ ಹೊಳೆದನು ಕೋಲೆ29ಆನೆಗಳೆಣಿಕಿಲ್ಲ ಕುದುರೆಯ ಗಣನ್ಯಿಲ್ಲಕಾಲಾಳು ರಥಕೆ ಮಿತಿಯಿಲ್ಲ ಕೋಲೆಕಾಲಾಳು ರಥಕೆ ಮಿತಿಯಿಲ್ಲ ಅನ್ಯೋಕ್ತಿಜಾಣೆ ದಾಸೇರಿಗೆ ಕಡೆಯಿಲ್ಲ ಕೋಲೆ 30ಕುವಿದ್ಯಾರಣ್ಯವ ಸವರಿ ಬೇಟ್ಯಾಡಿದಕೋವಿದನಮ್ಮ ಹಡೆದಪ್ಪ ಕೋಲೆಕೋವಿದನಮ್ಮ ಹಡೆದಪ್ಪ ರಚಿಸಿದದೇವವನಗಳ ವರ್ಣಿಪೆ ಕೋಲೆ 31ತತ್ವಪ್ರಕಾಶದ್ದಾಳಿಂಬೆ ಸುಧಾರಸಬಿತ್ತಿದ ಕಬ್ಬಮೋಘ ಮಾವು ಕೋಲೆಬಿತ್ತಿದ ಕಬ್ಬಮೋಘ ಮಾವು ಪದ್ಯಮಾಲೆಉತ್ತತ್ತಿ ತೆಂಗು ಹಲಸನ್ನು ಕೋಲೆ 32ಹತ್ತು ಪ್ರಕರಣ ದಾಟಿತೆಂಬೊ ದ್ರಾಕ್ಷದಸುತ್ತಿದ ಬಳ್ಳಿಮಂಟಪ ಕೋಲೆಸುತ್ತಿದ ಬಳ್ಳಿಮಂಟಪದಿ ಶುದ್ಧಮತ್ಯೌನ ಕೂಡಪ್ಪ ನಲಿದನು ಕೋಲೆ 33ದೇಶ ದೇಶದೊಳಿದ್ದದುರ್ವಾದಿಪೋಕರಘಾಸಿಸಿ ಜಯಪತ್ರ ದ್ರವ್ಯವ ಕೋಲೆಘಾಸಿಸಿ ಜಯಪತ್ರ ದ್ರವ್ಯವ ತಂದು ಮಧ್ವೇಶಗರ್ಪಿಸಿದ ಮುದದಿಂದ ಕೋಲೆ 34ಬಂಧು ಸುದರ್ಶನರಾಯರ ಒಡಗೂಡಿಮಂದಿರದೊಳಗಾನಂದಿಪ ಕೋಲೆಮಂದಿರದೊಳಗಾನಂದಿಪ ಶ್ರುತವೇಷತಂದೆಯನೇನ ಹೊಗಳುವೆ ಕೋಲೆ 35ಇಪ್ಪತ್ತೈದು ತತ್ವ ನಾಣ್ಯದಿ ರಾಮನಾಮಸುಪ್ಪಾಣಿಮುದ್ರೆ ನಡೆಸುವ ಕೋಲೆಸುಪ್ಪಾಣಿಮುದ್ರೆ ನಡೆಸುವ ತನ್ನವರಿಗೆತಪ್ತ ಮುದ್ರೆ ಕುರುಹಿಟ್ಟನು ಕೋಲೆ 36ಭೇದಿಸಿ ನೋಡಿರೊ ಭೇದವ ತಿಳಿಯಿರೊಮಾಧವಜೀವ ಜಡರೊಳು ಕೋಲೆಮಾಧವಜೀವ ಜಡರೊಳು ಎನುತಲಿಬೋಧಿಸಿದನು ಹಿತಮಾರ್ಗ ಕೋಲೆ 37ತನ್ನ ಹೊಂದಿದರಿಗೆ ಪ್ರೌಢವೃತ್ತಿಯನು ಶ್ರೀಮನ್ನಾಮಾಮೃತವನುಣಿಸುವ ಕೋಲೆ ಶ್ರೀಮನ್ನಾಮಾಮೃತವನುಣಿಸುವ ಹೊರೆವನುಉನ್ನತ ಮಹಿಮ ಜಯರಾಯ ಕೋಲೆ 38ಆವಾಗಸೂತ್ರಾರ್ಥ ನಿಸ್ಸಾಳ ವ್ಯಾಖ್ಯಾನತೀವಿದ ಶ್ರುತಿಯ ಕಹಳೆಯು ಕೋಲೆತೀವಿದ ಶ್ರುತಿಯ ಕಹಳೆ ಧ್ವನಿಯುಂಟುಶ್ರೀವ್ಯಾಸ ರಾಮಾರ್ಚನೆಯುಂಟು ಕೋಲೆ 39ಅಚ್ಚ ಸಾತ್ವಿಕನಾದ ರಾಜಾಧಿರಾಜನಹೆಚ್ಚಿನಸತಿಶುದ್ಧಮತಿಯಮ್ಮ ಕೋಲೆಹೆಚ್ಚಿನಸತಿಶುದ್ಧ ಮತಿಯಮ್ಮ ನಮ್ಮಮ್ಮನಿಚ್ಚನಮ್ಮನು ಹೊರೆವಳು40ತಾಯಿ ತಂದೇರ ಹಾಡಿ ದಣಿಯದು ನಮ್ಮ ಮನಭಯವು ಅದರಲ್ಲಿರುವುದು ಕೋಲೆಭಯವು ಅದರಲ್ಲಿರುವುದು ಶುಭಗುಣಬಾಯಿ ಮಾತಿಗೆ ತೀರವು ಕೋಲೆ 41ಬಂದೆವು ಬೀಗರ ಮನೆಗಿಂದೆ ಮುಯ್ಯವತಂದೇವು ಬಾಲೇರೊಡಗೂಡಿ ಕೋಲೆತಂದೇವು ಬಾಲೇರೊಡಗೂಡಿ ಬೀಗರಅಂದವ ಹೇಳಲಳವಲ್ಲ ಕೋಲೆ 42ಬಹುಕಾಲದ್ಹಿರಿಯರು ಬಾಳಿದ ಮನೆಯಿದುವಿವರಿಸಿ ನೋಡಲರಿಯದೆ ಕೋಲೆವಿವರಿಸಿ ನೋಡಲರಿಯದೆ ಕೆಡಿಸಿದರುಧವಳಾರವೆಲ್ಲ ಮಲಿನವು ಕೋಲೆ 43ಬೀಗರಿದ್ದ ಮನೆಯನೆತ್ತೆತ್ತ ನೋಡಲುಬಾಗಿಲು ಬಯಲು ಬರೆಹುಯಿಲು ಕೋಲೆಬಾಗಿಲು ಬಯಲು ಬರೆಹುಯಿಲು ನಮ್ಮವರುಹ್ಯಾಗೆಂತು ಹೆಣ್ಣು ಕೇಳುವರು ಕೋಲೆ 44ಸಂಖ್ಯಾವಿದನೆಂಬಾತ ಮಾವನಾತನ ರಾಣಿಬಿಂಕದ ಬೌದ್ಧದೇವ್ಯತ್ತಿ ಕೋಲೆಬಿಂಕದ ಬೌದ್ಧದೇವ್ಯತ್ತಿ ಭಾಟ್ಟ ನಿ:ಶಂಕ ಚಾರ್ವಾಕಭಾವಮೈದುನರು ಕೋಲೆ45ಮಿಥ್ಯನಮ್ಮತ್ತಿಗೆಮಾಯೆನಮ್ಮ ನಾದಿನಿಸುತ್ತಿನ ಬಳಗಕೆಣಿಕಿಲ್ಲ ಕೋಲೆಸುತ್ತಿನ ಬಳಗಕೆಣಿಕಿಲ್ಲ ಕೆಣಕಿದರೆಮತ್ತೇನಾದರು ಹುರುಳಿಲ್ಲ ಕೋಲೆ 46ಇಪ್ಪತ್ತೊಂದು ಮಂದಿ ಹೆಸರಾದವರ ಕೂಡಬಹುಕಾಲ ಕಜ್ಜವು ನಮಗುಂಟು ಕೋಲೆಬಹುಕಾಲ ಕಜ್ಜವು ನಮಗುಂಟು ಹಾಲಿಗೆಹೆಪ್ಪನೆರೆದಂತೆ ಹಿತಮಾತು ಕೋಲೆ 47ಅಂಗಳದೊಳು ಬಂದು ತಿಳಿದೇವು ಅತ್ತಿಗೇರಶೃಂಗಾರಗರತಿ ಸಿರಿಯನು ಕೋಲೆಶೃಂಗಾರಗರತಿ ಸಿರಿಯನು ಕಾಣುತಹಿಂಗದೆ ನಿಂತು ನುಡಿಬೇಕು ಕೋಲೆ 48ತಂಗಳೆಂಜಲು ಎಂಬೊ ಅಂಜಿಕೆ ತಮಗಿಲ್ಲಮಂಗಳಧಾತು ಕಾಣೆವು ಕೋಲೆಮಂಗಳಧಾತು ಕಾಣೆವು ಅತ್ತಿಗೇರುತಿಂಗಳಸ್ನಾನ ಅರಿಯರು ಕೋಲೆ 49ದಾವಮೂಲೆಲಿ ಬೂದಿ ಮನೆಗಸ ನೋಡಿರೆಭಾವಿ ಅತ್ತೆಯಕೆಲಸವ ಕೋಲೆಭಾವಿ ಅತ್ತೆಯ ಕೆಲಸಕೆ ಮೆಚ್ಚಿದೆವುನಾವೇನುಡುಗೊರೆಯ ಕೊಡಬೇಕು ಕೋಲೆ 50ಮಿಥ್ಯಾವಾದದಲಿ ನಮ್ಮತ್ತಿಗೆ ಬಲುಜಾಣೆಹೆತ್ತವ್ರನೆಲ್ಲ ಹುಸಿಯೆಂದು ಕೋಲೆಹೆತ್ತವ್ರನೆಲ್ಲ ಹುಸಿಯೆಂದು ಶಿವನೊಬ್ಬಸತ್ಯ ತಾನೆಂದು ನುಡಿವಳು ಕೋಲೆ 51ಕಚ್ಚೆ ಹಾಕಿದವರಿಗೆ ವಿಪ್ರರೆಂದ್ಹೆಸರಿಟ್ಟುನಿಚ್ಚಗೆಳತೇರ ಒಡಗೂಡಿ ಕೋಲೆನಿಚ್ಚಗೆಳತೇರ ಒಡಗೂಡಿ ಗೆಳೆತನಹೆಚ್ಚಾಗಿ ನಡೆಸುತಿಹಳು ಕೋಲೆ 52ದೊಡ್ಡಾಕಿ ನಾನೆಂದು ಅಡ್ಡಡ್ಡ ನಡೆವಳುದೊಡ್ಡವರ ಕಂಡರೋಡೋಳು ಕೋಲೆದೊಡ್ಡವರ ಕಂಡರೋಡೋಳು ನಡುಮನೆದೊಡ್ಡಿಗೆ ತಾನು ಹಿರಿಯಳೆ ಕೋಲೆ 53ಮಾಯಿನ ದನಿನೋಡಿ ಮಾವನ ಕಿರಿಮಗಳುಬಾಯಿ ಬಡಕಿಯು ಬಹುಭಾಷಿ ಕೋಲೆಬಾಯಿ ಬಡಕಿಯು ಬಹುಭಾಷಿ ವೆಡ್ಡಗೊಂಡನಾಯಿಯ ತೆರದಿ ಬಲುಕೋಪಿ ಕೋಲೆ 54ತಾಯಿ ತಂದೆಯರಿಗೆ ಗುಣವಂತೆ ಮಗಳೀಕೆನೋಯಿಯ ನುಡಿವಳುಂಡುಟ್ಟು ಕೋಲೆನೋಯಿಯ ನುಡಿವಳುಂಡುಟ್ಟು ಆ ಕ್ಷಣಬಾಯಾರುವಲ್ಲಿ ಬಲ್ಲಿದಳು ಕೋಲೆ 55ಮಹಾತ್ತುಮರ ಮಟಾಮಾಯ ಮಾಡುವ ಶಕ್ತಿಮಹಾಢಾಳಿಕಿಯ ಬಲ್ಲಳು ಕೋಲೆಮಹಾಢಾಳಿಕಿಯ ಬಲ್ಲಳು ಆ ಬುಧರಮಾಯಿ ಅಭದ್ರೆಘನಕ್ಷುದ್ರೆ ಕೋಲೆ56ತನ್ನ ಬದಿಯ ತನ್ನೆರೆಹೊರೆಯವರನುತನ್ನಂತೆ ಮಾಡಿಕೊಂಡಳು ಕೋಲೆತನ್ನಂತೆ ಮಾಡಿಕೊಂಡಳು ಮನದಲಿಉನ್ಮತ್ತವೃತ್ತಿಕಲಿಸೋಳು ಕೋಲೆ57ಪ್ರಸ್ತವ ಮಾಡುವ ಮನೆಯೊಳು ಹೋಗುವಳುಅಸ್ತವ್ಯಸ್ತದಲಿ ಬಲುಬೇಗ ಕೋಲೆಅಸ್ತವ್ಯಸ್ತದಲಿ ಬಲುಬೇಗ ಷಡ್ರಸನ್ನಹಸ್ತಲಾಘವದಿ ಕೆಡಿಸುವಳು ಕೋಲೆ 58ಒಳ್ಳೆ ಶಾಲ್ಯೋದನ ಭಕ್ಷ್ಷ್ಯಭೋಜನದೊಳುಕೊಳ್ಳಿಯಿಕ್ಕಿ ಕೆಡಿಸುವಳು ಕೋಲೆಕೊಳ್ಳಿಯಿಕ್ಕಿ ಕೆಡಿಸುವಳು ಪದಾರ್ಥವನೆಲ್ಲ ಏಕಾಕಾರ ಮಾಡುವಳು ಕೋಲೆ 59ಅತ್ತಿಗೆನಾದಿನೇರ ಗೋಡೆಯ ಮೇಲಿನಚಿತ್ತಾರದ ಗೊಂಬಿ ನೋಡಿರೆ ಕೋಲೆಚಿತ್ತಾರದ ಗೊಂಬಿ ನೋಡಿರೆ ಅಖಂಡಮತ್ತೆ ಭೇದಗಳು ತಿಳಿಯವು ಕೋಲೆ 60ಕಂಬ ಬೋದುಗಳೊಂದೆ ಕೆಳಮೇಲು ಕಟ್ಟು ಒಂದೆಅಂಬುಜಮದ್ದುಗುಣಿಕೊಂದೆ ಕೋಲೆಅಂಬುಜಮದ್ದುಗುಣಿಕೊಂದೆ ತುಲಸಿ ಕದಂಬವು ಎಕ್ಕೆ ಗಿಡವೊಂದೆ ಕೋಲೆ 61ಕಾಗೆ ಕೋಗಿಲೆ ಒಂದೆ ಗೂಗೆ ನವಿಲು ಒಂದೆನಾಗನೀರೊಳ್ಳಿಯ ಹಾವು ಒಂದೆ ಕೋಲೆನಾಗನೀರೊಳ್ಳಿಯ ಹಾವು ಒಂದೆ ಚಿತ್ತರದಾ ಗಿಳಿಹಿಂಡು ತಿಳಿಯವು ಕೋಲೆ 62ಕುದುರೆ ಕತ್ತೆಯ ಬಣ್ಣ ಆನೆ ಹಂದಿಯ ಬಣ್ಣಮದಹುಲಿಗೆ ನಾಯಿ ಬಣ್ಣವು ಕೋಲೆಮದಹುಲಿಗೆ ನಾಯಿ ಬಣ್ಣ ಒರ್ಸಿಟ್ಟಿಹಚದುರೆಯ ಕೈಗೆ ಕಡಗವು ಕೋಲೆ 63ಅತ್ತಿಗೆನಾದಿನೇರ ಚಿತ್ತಾರ ಬಲುಘನಮತ್ತೆ ತೀರದ ಗುಣಗಳು ಕೋಲೆಮತ್ತೆ ತೀರದ ಗುಣಗಳುಭಾವಮೈದುನರೆತ್ತೋಡಿದರು ಸುಳುಹಿಲ್ಲ ಕೋಲೆ 64ಗುರುಗಳ ಭಯವಿಲ್ಲ ಹಿರಿಯರ ಸ್ಮರಣಿಲ್ಲಹರಿಯೆ ತಾವೆಂದು ಬೆರೆತರು ಕೋಲೆಹರಿಯೆ ತಾವೆಂದು ಬೆರೆತರು ದಿಂಡೇರಿಗೊರೆವರು ತಮ್ಮ ಬುದ್ಧಿಯ ಕೋಲೆ 65ಲಗಳಿಯ ಕೋಣಗೆ ಲಘ್ವಾದ ಕೆಲಸೆತ್ತಜಗದೀಶನೆತ್ತ ತಾವೆತ್ತ ಕೋಲೆಜಗದೀಶನೆತ್ತ ತಾವೆತ್ತ ಭಾವರನಗೆಗೇಡು ನೋಡಿ ನಗುತೇವೆ ಕೋಲೆ 66ಹೆಗಲ ಕಾವಡಿಯವಗೆ ಹಗಲು ದೀವಟಿಗೇಕೆಮಿಗಿಲಾದ ಬಿರುದು ತಮಗೇಕೆ ಕೋಲೆಮಿಗಿಲಾದ ಬಿರುದು ತಮಗೇಕೆ ಮೈದುನರಮೊಗ ನೋಡಿದರೆ ಹೊಗೆಗೆಂಡ ಕೋಲೆ 67ಪಂಚದೇವನ ಪೂಜೆ ಮಾಡುವರೊಂದಾಗಿಹಿಂಚು ಮುಂಚುಗಳ ಅರಿಯರು ಕೋಲೆಹಿಂಚು ಮುಂಚುಗಳ ಅರಿಯರು ಬರಿದೆ ಪ್ರಪಂಚವ ಬಿಟ್ಟೆವೆನಿಸುವರು ಕೋಲೆ 68ಹಿಂಡುಬಾಂಧವರು ತಮ್ಮೊಳು ತಾವೆ ಕೊಂಡಾಡಿಮಂಡಿಕೆಸೂತ್ರಹರಕೊಂಡು ಕೋಲೆಮಂಡಿಕೆಸೂತ್ರಹರಕೊಂಡು ಕೊಂಡಾಡಿಮಂಡೆಯ ಬಿಟ್ಟು ತಿರುಗೋರು ಕೋಲೆ 69ಇವರ ಲೆಕ್ಕದೊಳಗೆ ಹರಿಶಿವನೊಬ್ಬನೆರವಿಗಣನಾಥನೊಬ್ಬನೆ ಕೋಲೆರವಿಗಣನಾಥನೊಬ್ಬನೆ ಎಲ್ಲೆಲ್ಲಿದಿವಿ ದೇವರೊಳಗೆ ಬೇರಿಲ್ಲ ಕೋಲೆ 70ವಿಧಿನಿಷಿದ್ಧಗಳಿಲ್ಲಪೋಕಮತದೊಳುಉದರ ತುಂಬಿದರೆ ಸಮದೃಷ್ಟಿ ಕೋಲೆಉದರ ತುಂಬಿದರೆ ಸಮದೃಷ್ಟಿ ಹರಿವ್ರತಮೊದಲಿಗಿಂದಿಗೆ ಸೊಗಸವು ಕೋಲೆ 71ಬದನೆ ನುಗ್ಗೆಯ ಕಾಯಿ ಸಲೆ ತೊಂಡೆ ತುಪ್ಹೀರೆಮೃದು ಮೂಲಂಗಿ ಗಜ್ಜರಿಗಳು ಕೋಲೆಮೃದು ಮೂಲಂಗಿ ಗಜ್ಜರಿಗಳು ಇವರಿಗೆಮುದದೂಟ ಆತ್ಮಾರಾಮನ ತೃಪ್ತಿ ಕೋಲೆ 72ಬಸಳೆ ಸಬ್ಬಸೆ ಸೊಪ್ಪು ಹುಳಿ ಚುಕ್ಕದ ಗೂಡೆಹಸನಾದ ಪುಂಡಿ ಬಲುಪ್ರೀತಿ ಕೋಲೆಹಸನಾದ ಪುಂಡಿ ಬಲುಪ್ರೀತಿಹಸಿವಿಗೆ ದೊರೆಯ ಪರಲೋಕ ಕೋಲೆ 73ಮಡಿ ಮೈಲಿಗೆಯು ಒಂದೆ ಸ್ನಾನಪಾನಗಳೊಂದೆಹುಡುಗ ಹಿರಿಯರ ಬಳಿಕೊಂದೆ ಕೋಲೆಹುಡುಗ ಹಿರಿಯರ ಬಳಿಕೊಂದೆನುಡಿಬೇರೆ ಪೋಕರ ನಡೆಬೇರೆ ಕೋಲೆ 74ನಮ್ಮ ನಗೆಯೊಳಗೆ ಉನ್ನತ ಸುಖವುಂಟುರಮ್ಮೆಯ ರಮಣ ಕರುಣಿಪ ಕೋಲೆರಮ್ಮೆಯ ರಮಣ ಕರುಣಿಪ ಒಡಲ್ಹೊಕ್ಕುನಮ್ಮವರಾಗಿ ಸುಖಿಯಾಗಿ ಕೋಲೆ 75ನಿಮ್ಮ ಹಿರಿಯರೆಲ್ಲ ನಮ್ಮ ಮನೆಯ ಹೊಕ್ಕುಧರ್ಮಾರ್ಥ ಸೂರೆಗೊಂಡರು ಕೋಲೆಧರ್ಮಾರ್ಥ ಸೂರೆಗೊಂಡರು ಜಗವರಿಯೆನಿರ್ಮಳರಾಗಿ ಸುಖಿಯಾಗಿ 76ಮಾವನೊಳಗೆ ನಮ್ಮ ನಗೆಯಿಲ್ಲ ಬೌದ್ಧದೇವೀರ ಕೂಡ ಸರಸಿಲ್ಲ ಕೋಲೆದೇವೀರ ಕೂಡ ಸರಸಿಲ್ಲ ಹಿರಿಯರುತಾವವರ ಗೆದ್ದು ನಗುವರು ಕೋಲೆ 77ನಿಪುಣೆಂದೆನಿಸುವಿರಿ ಚಪಳೆರೆಂದೆನಿಸುವಿರಿಅಪರಾತ್ರೆ ಆಯಿತು ಬಂದೀಗ ಕೋಲೆಅಪರಾತ್ರೆ ಆಯಿತು ಬಂದೀಗ ನಮಗಿನ್ನುಉಪಚಾರವುಂಟೊ ಗತಿಯಿಲ್ಲೊ ಕೋಲೆ 78ಮೋರೆ ತೋರದಿದ್ದರೆ ಮನೆಯೊಳಗಿರಿ ನೀವುಜಾರುತೇವೆ ನಮ್ಮ ಮನೆಗೀಗೆ ಕೋಲೆಜಾರುತೇವೆ ನಮ್ಮ ಮನೆಗೀಗೆ ಬೀದಿಲಿತೂರುತೇವೆ ನಿಮ್ಮ ಕರುಳನು ಕೋಲೆ 79ಈಪರಿನಾರೇರ ಹಿತವಾದ ನಗೆಗಳಕೋಪವ ಬಿಟ್ಟು ಕೇಳುತ ಕೋಲೆಕೋಪವ ಬಿಟ್ಟು ಕೇಳುತ ಬಂದು ಸವಿi್ಞಪಕ ಕೈಯವಿಡಿದರು ಕೋಲೆ 80ರತ್ನಗಂಬಳಿ ಹಾಸಿ ಒಳ್ಳೇರ ಮಕ್ಕಳೆಂದುಉತ್ತಮಗುಣವ ಕೊಂಡಾಡಿ ಕೋಲೆಉತ್ತಮ ಗುಣವ ಕೊಂಡಾಡಿ ಕುಳ್ಳಿರಿಸಿಚಿತ್ತಕೆ ಸುಖವ ಕೊಟ್ಟರು ಕೋಲೆ 81ಶ್ರೀಕಾಂತನರಮನೆಯ ಹೊಂದಿದವರು ನೀವುಏಕಾಂತ ಭಕ್ತಿ ಬಲ್ಲವರು ಕೋಲೆಏಕಾಂತ ಭಕ್ತಿ ಬಲ್ಲವರು ನಮ್ಮ ನೀವೆ ಕೂಡಿಕೊಳ್ಳಿ ದೂರ್ಯಾಕೆ ಕೋಲೆ 82ಸುಖದೂಟಸವಿಯನು ಅರಿಯದೆ ಕೆಟ್ಟೆವುಸುಖತೀರ್ಥಗುರುವು ನಮಗಾಗಿ ಕೋಲೆಸುಖತೀರ್ಥಗುರುವು ನಮಗಾಗಿ ಪರಲೋಕಸುಖ ಸೂರೆಗೊಂಡು ಬದುಕೇವು ಕೋಲೆ 83ಐದು ಭೇದವನರಿತು ನಡೆದೇವು ನಾವಿಪ್ಪತ್ತೈದು ತತ್ವಗಳ ತಿಳಿದೇವು ಕೋಲೆ ಇಪ್ಪತ್ತೈದು ತತ್ವಗಳ ತಿಳಿದೇವು ಮೇಲೆ ಮತ್ತೈದು ಮುಕ್ತಿಯ ಪಡೆದೇವು ಕೋಲೆ 84ಮುದ್ರೆ ಇಲ್ಲದ ನಾಣ್ಯ ಶುದ್ಧಲ್ಲ ಜಗದೊಳುಮುದ್ರಾಂಕರಾಗಿ ಬದುಕೇವು ಕೋಲೆಮುದ್ರಾಂಕರಾಗಿ ಬದುಕೇವು ಮಲೆತವರಗೆದ್ದೇವು ವಾಕ್ಯ ಬಲದಲ್ಲಿ ಕೋಲೆ 85ಇಂತೆಂಬ ನುಡಿಗೇಳಿ ಅಪಾರಾನಂದದಲ್ಲಿಕಾಂತೆಯರೆಲ್ಲ ಒಂದಾಗಿ ಕೋಲೆಕಾಂತೆಯರೆಲ್ಲ ಒಂದಾಗಿ ಮನದಿ ವಿಶ್ರಾಂತರಾದರು ತಮತಮಗೆ ಕೋಲೆ 86ಗುರುಭಕ್ತಿ ಅರಿಷಿಣ ಹರಿಭಕ್ತಿ ಕುಂಕುಮಪರಮಾರ್ಥ ಜ್ಞಾನಾಂಜನವನು ಕೋಲೆಪರಮಾರ್ಥ ಜ್ಞಾನಾಂಜನವನು ಇಟ್ಟರುಹರಿನಿರ್ಮಾಲ್ಯದ ಪುಷ್ಪ ಮುಡಿದರು ಕೋಲೆ 87ಸಸ್ಯ ಸಾರಾವಳಿಯ ಸೀರೆಯ ತೆಗೆದರುಅತ್ತಿಗೆಯವರ ಮನಮೆಚ್ಚು ಕೋಲೆಅತ್ತಿಗೆಯವರ ಮನಮೆಚ್ಚಿನುಡುಗೊರೆಅರ್ಥಿಲಿ ಕೊಟ್ಟು ನಲಿದರು ಕೋಲೆ 88ಮಾಧವಪ್ರತಿಷ್ಠಾನ ಪೇಟೆಯೊಳುದಿಸಿದಮಾದಳದ ಹಣ್ಣು ಬಣ್ಣದ ಕೋಲೆಮಾದಳದ ಹಣ್ಣು ಬಣ್ಣದ ಸೀರೆಯನಾದಿನಿ ಜಾಣೆಗಿತ್ತರು ಕೋಲೆ 89ಅಚ್ಚ ಬಂಗಾರದ ಶಂಖಚಕ್ರಂಗಳಅಚ್ಚನೆತ್ತಿದ ನಯವಾದ ಕೋಲೆಅಚ್ಚನೆತ್ತಿದ ನಯವಾದ ಬೇರೆ ಬೇರೆಹಚ್ಚಡಗಳು ಬಾವರಿಗಿತ್ತು ಕೋಲೆ 90ಭೇದ ಭೇದದ ಬಣ್ಣ ಬಗೆ ಬಗೆ ಚಿತ್ರದನಾದ ಸಮುದ್ರದ ಪೇಟೆಯ ಕೋಲೆನಾದ ಸಮುದ್ರದ ಪೇಟೆಯ ವಲ್ಲಿಗಳುಮೈದುನ ಜಾಣರುಡುಗೊರೆ ಕೋಲೆ 91ಹಿರಿಯ ಕಿರಿಯರ ನೋಡಿ ಮಾನ್ಯಾಮಾನ್ಯನ ನೋಡಿತರತಮ ಭಾವದುಪಚಾರ ಕೋಲೆತರತಮ ಭಾವದುಪಚಾರ ಮಾಡಿದರುಹರಿಗುರು ಮೆಚ್ಚಿ ನಲಿವಂತೆ ಕೋಲೆ 92ಈ ಪರಿಯಲಿವರ ಮನಮುಟ್ಟಿ ಮನ್ನಿಸಿಸುಗಂಧ ಪರಿಮಳ ದ್ರವ್ಯವ ಕೋಲೆಸುಗಂಧ ಪರಿಮಳ ದ್ರವ್ಯವ ಚೆಲ್ಲಾಡಿಶ್ರೀಪತಿಗವರರ್ಪಿಸಿ ಮುದದಿಂದ ಕೋಲೆ 93ಪರಸ ಮುಟ್ಟಿದ ಮೇಲೆ ಲೋಹ ಚಿನ್ನಾಗದೆಸುರನದಿಮುಟ್ಟಿ ಸಗರರ ಕೋಲೆಸುರನದಿಮುಟ್ಟಿ ಸಗರರುದ್ಧಾರಾದಂತೆಕರಗಿತುಅವರಮನಮೈಲಿಗೆ94ಶುಭಭರಿತಾದ ತಾಂಬೂಲ ಕೈಕೊಂಡುಶುಭವಾಕ್ಯ ನುಡಿದು ನಡೆವಾಗ ಕೋಲೆಶುಭವಾಕ್ಯ ನುಡಿದು ನಡೆವಾಗ ಬೀಗರುಅಬಲೇರಿಗೆ ಕೈಯ ಮುಗಿದರು ಕೋಲೆ 95ನಾಳೆ ನಿಮ್ಮಾಜÕ ಬರೆ ಮುಯ್ಯ ತರುವೆಆಳವಾಡದಿರಮ್ಮ ನಮ್ಮನು ಕೋಲೆಆಳವಾಡದಿರಮ್ಮ ನಮ್ಮನು ನೀವೀಗಏಳಿಲ ಮಾಡದಿರಿ ಕಂಡ್ಯಾ ಕೋಲೆ &ಟಿ;, bsಠಿ; 96ಹೀಗೆಂದ ಮಾತಿಗೆ ನುಡಿದರು ಹರಿಹರಿಭಾಗವತರೆಲ್ಲ ಧರೆಯೊಳು ಕೋಲೆಭಾಗವತರೆಲ್ಲ ಧರೆಯೊಳು ನಮ್ಮವರುಶ್ರೀಗಂಧ ಕರ್ಪೂರಕೆ ಮೈತ್ರವು 97ಅಪ್ಪ ಜಯತೀರ್ಥಗೆ ಹೆತ್ತವ್ವ ಶುದ್ಧಮತಿಗೆಒಪ್ಪುವ ಬಂಧು ಬಳಗಕೆ ಕೋಲೆಒಪ್ಪುವ ಬಂಧು ಬಳಗಕೆ ನಿಮ್ಮಗುಣಒಪ್ಪಣೆ ಹೇಳೇವು ಕೋಲೆ ಗನೀವು ಬಂದಾಕ್ಷಣ ಶ್ರೀವ್ಯಾಸರಾಯರನೈವೇದ್ಯ ತೀರ್ಥವು ಲಭ್ಯವು ಕೋಲೆನೈವೇದ್ಯ ತೀರ್ಥವು ಲಭ್ಯವು ನಮ್ಮಪ್ಪನಾವ ಪರಿಯಲಿ ಒಲಿಸೇವು ಕೋಲೆ 9ಮೆಲ್ಲನೆ ಹೊರವಂಟು ಫುಲ್ಲಭವ ಕೀರ್ತಿಸೊಲ್ಲುಸೊಲ್ಲಿಗೆ ಉಗ್ಗಡಿಸುತ ಕೋಲೆಸೊಲ್ಲುಸೊಲ್ಲಿಗೆ ಉಗ್ಗಡಿಸುತ ಹಾರುವಾಗಕ್ಷುಲ್ಲರ ಮನಕೆ ದಣಿವಾಯ್ತು ಕೋಲೆ 100ಮನೆ ಮುಟ್ಟಿ ಬಂದರು ಗುರುಪಾದ ಕಂಡರುಜನನಿಗೆ ಕೈಯ ಮುಗಿದರು ಕೋಲೆಜನನಿಗೆ ಕೈಯ ಮುಗಿದರುಕೈವಲ್ಯಕ್ಕನುಮಾನವಿಲ್ಲದೆ ನಡೆವರು ಕೋಲೆ 101ಧರೆಯ ಸಜ್ಜನರಿಗೆ ಸಕ್ಕರೆ ಸವಿಗಿಂತಉರೆ ಕಾಯ್ದ ಹಾಲ ಕೆನೆಗಿಂತ ಕೋಲೆಉರೆ ಕಾಯ್ದ ಹಾಲ ಕೆನೆಗಿಂತ ಸವಿಯುಂಟುಗುರುಭಕ್ತಿ ಉಂಟು ಪರವುಂಟು ಕೋಲೆ 102ಅಲ್ಪ ಕನ್ನಡದ ನುಡಿಯೆನ್ನಲಾಗದುಫಣಿತಲ್ಪನ ಪ್ರಿಯಗುರುಮಹಿಮೆ ಕೋಲೆಫಣಿತಲ್ಪನ ಪ್ರಿಯಗುರುಮಹಿಮೆ ನೋಡುವುದುತಪ್ಪನಾರಿಸದೆ ಶಿಷ್ಟರು ಕೋಲೆ 103ಜನ್ಮ ಜನ್ಮ ಬ್ರಹ್ಮ ವಾಯೂರೆ ಗುರುಗಳುರಮ್ಮೆಯ ರಮಣ ಮನೆದೈವ ಕೋಲೆರಮ್ಮೆಯ ರಮಣ ಮನೆದೈವವಾಗಲಿಶ್ರೀಮಧ್ವಾಚಾರ್ಯರು ಕೋಲೆ 104ಪ್ರಸನ್ನವೆಂಕಟಪತಿ ನಾಮದುಚ್ಚಾರಣೇಲಿಅಶುಭಕೋಟಿಗಳು ಉಳುಹಿಲ್ಲ ಕೋಲೆಅಶುಭ ಕೋಟಿಗಳು ಉಳುಹಿಲ್ಲ ಶುಭಮಸ್ತುಕುಶಲಾಯುರಾರೋಗ್ಯವಾಹುದು ಕೋಲೆ 105
--------------
ಪ್ರಸನ್ನವೆಂಕಟದಾಸರು
ಮಂದಿಯಗೊಡವೆ ಇನ್ನೇನು ಮಗಳೆ |ಮುಂದೆ ನೋಡಿ ಹಂಜಿ ನೂಲವ್ವ............ ಪ.ಕಣ್ಣ ಮುಂದಿನ ಕಸವನು ತೆಗೆದು |ಸಣ್ಣಗೆ ನೀ ನೂಲವ್ವ............... ಅಪವಸುಧೆಯ ದೊಡ್ಡ ಮಣೆಯಮಾಡಿ |ಶಶಿರವಿಗಳೆರಡು ಕಂಬವ ಹೂಡಿ ||ಆ ಸಿರಿರಂಗರ ಎರಡು ಚಕ್ರವ ಮಾಡಿ |ದರ್ಶನವೆಂಬುವ ನುಲಿಯನು ಬಿಗಿದು 1ಪರಬ್ರಹ್ಮನಅಳವು ಮಾಡಿ |ಕುರುಡು ನಾಶಿಕ ಬೆನಕದಿ ತಿಕ್ಕಿ ||ಹರಿ ನೀನೆ ಎಂಬ ದಾರವಕಟ್ಟಿ |ವಿರತಿವಿಚಾರದ ಬೆಲ್ಲಗಳಿಕ್ಕಿ2ಜಾÕನವೆಂಬುವ ಕದರನ್ನಿಕ್ಕಿ |ಮಾನಮದವೆಂಬ ಹಂಜಿಯ ಹಿಡಿದು ||ಧ್ಯಾನವೆಂಬ ಎಳೆಯನು ತೆಗೆದು |ಮೌನದಿಂದಲಿ ನೂಲವ್ವ 3ಕಕ್ಕುಲಾತಿ ಕಾಂಕ್ಷೆಗಳೆಂಬ |ಸಿಕ್ಕುದೊಡಕುಗಳನೆ ಬಿಡಿಸಿ ||ಒಕ್ಕುಡಿತೆಯ ಮಾಡಿದ ಮನದಿ |ಕುಕ್ಕಡಿನೂಲು ಕೂಡಿ ಹಾಕಮ್ಮ 4ಇಪ್ಪತ್ತೊಂದು ಸಾವಿರದ ಮೇ -ಲಿಪ್ಪ ನೂರು ಎಳೆಯನು ಹೊಡೆದು ||ತಪ್ಪದೆ ಹುಂಜವಕಟ್ಟಿ ನೀನು |ಒಪ್ಪದಿ ಸೀಳು ಇಳುವಮ್ಮ 5ಸದ್ಯದಿ ನೀ ಜಾಡರಲ್ಲಿ |ಸಿದ್ಧಬದ್ಧ ಸೀಳುಗಳ ಹಾಕಿ ||ವಿದ್ಯೆಯೆಂಬುವ ಹಚ್ಚಡವನ್ನು |ಬುದ್ಧಿಯಿಂದಲಿ ನೇಯಿಸಮ್ಮ 6ಒಪ್ಪುವಾತ್ಮ ಪರಮಾತ್ಮನೆಂಬ |ಒಪ್ಪ ಎರಡು ಹೋಳುಗಳಹಚ್ಚಿ ||ತಪ್ಪದೆ ಪುರಂದರವಿಠಲನ ಪಾದಕೆ |ಒಪ್ಪಿಸಿ ಕಾಲವ ಕಳೆಯಮ್ಮ 7
--------------
ಪುರಂದರದಾಸರು
ಮುತ್ತೈದೆಯಾಗಿರಬೇಕು ಮುದದಿಂದಲಿ |ಹತ್ತುನೂರು ನಾಮದೊಡೆಯಹರಿನಮ್ಮ ಪತಿಯೆಂದುಪ.ಗುರುಮಧ್ವಶಾಸ್ತ್ರವನು ಓದುವುದೆ ಮಾಂಗಲ್ಯ |ವರವೈರಾಗ್ಯವೆಂಬ ಒಪ್ಪುವ ಮೂಗುತಿ ||ತಾರತಮ್ಯದರಿಮೆ ತಾಯಿತಿ ಮುತ್ತುಸರ |ಕರುಣರಸಗಳೆಉಳ್ಳಕಟ್ಟಾಣಿಕಟ್ಟಿಕೊಂಡು1ಹರಿಕಥೆಯ ಕೇಳುವುದೆ ಕಿವಿಗೆ ಮುತ್ತಿನ ಓಲೆ |ನಿರುತ ಸತ್ಕರ್ಮವೇ ನಿಜಕಾಂತಿಯು ||ಪರಮ ಭಕ್ತರ ಪಾದರಜ ಹರಳು ಬಂಗಾರ |ಗುರುಭಕುತಿಯೆಂಬಂಥ ಗಂಧ ಕುಂಕುಮ ಧರಿಸಿ 2ಪೊಡವಿಯೊಳು ಪರಹಿತದ ಪಟ್ಟವಾಳಿಯನುಟ್ಟು |ಕೊಡುವ ಧರ್ಮವೆಂಬ ಕುಪ್ಪಸವ ತೊಟ್ಟು ||ಬಿಡದೆ ಎನ್ನೊಡೆಯ ಶ್ರೀ ಪುರಂದರವಿಠಲನ |ಧೃಡ ಭಕ್ತಿಯೆಂಬಂಥ ಕಡಗ - ಬಳೆ ಇಟ್ಟುಕೊಂಡು 3
--------------
ಪುರಂದರದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು