ಒಟ್ಟು 225 ಕಡೆಗಳಲ್ಲಿ , 56 ದಾಸರು , 207 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದ ಕುಮಾರ ಇಂದುಕುಲ ತಿಲಕ ಪ ಎಂದಿಗು ನಿನ್ನಯ ಸುಂದರ ಚರಣವ ವಂದಿಸಿ ನಲಿಯುವ ನಂದವೆನಗೆ ಕೊಡೊ ಅ.ಪ ಧನಕನಕಗಳನು ದಿನ ದಿನ ಗಳಿಸುವ ಅನುರಾಗಗಳನು ಕೊನೆಗಾಣಿಸೊ ದೇವ ವನಜಸಂಭವಪಿತ ಕನಸಿನಲ್ಲಿಯೂ ನಿನ್ನ ಮನನದಿ ಹಿಗ್ಗುವ ಮನವ ಎನಗೆ ಕೊಡೆಲೊ 1 ಭಯವಿಲ್ಲದೆ ದೋಷಮಯದ ನೋಟಗಳನು ಬಯಸುವ ಮತಿಯನು ಲಯಮಾಡೋ ದೇವ ಮಾಧವ ಎನ್ನ ನಯನಗಳಿಗೆ ನಿನ್ನ ಪ್ರಿಯ ರೂಪದ ಪರಿಚಯವ ಮಾಡಿಸೊ ಸದಾ 2 ಕಾಲವ ಕಳೆಯಲು ಆಲಸವಿಲ್ಲದೆ ಪೇಳಬಾರದ ನುಡಿ ಚಾಲನು ತೊಲಗಿಸೊ ಬಾಲ ಗೋಪಾಲ ಎನ್ನ ನಾಲಿಗೆಯಲಿ ನಿನ್ನ ಲೀಲೆಗಳನು ಸದಾ ಲಾಲಿಸಿ ಪೊಗಳಿಸೊ 3 ಪರಿಪರಿ ಭೋಗಕೆ ಪರಿದಾಡುತ ಸದಾ ಪರರ ಸೇವಿಸುತಿಹ ಕರಗಳ ನಿಲ್ಲಿಸೊ ಮುರಳೀಧರ ಕೃಷ್ಣ ಕರುಣದಿಂದಲಿ ಎನ್ನ ಕರಗಳಿಗೆ ನಿನ್ನ ವರಸೇವೆಯ ನೀಡೊ 4 ಭುವಿಯಲಿ ದುರುಳರ ಸವಿನುಡಿಗಳಿಗತಿ ಕಿವಿಗೊಟ್ಟು ಕೇಳುವ ಲವಲವಿಕೆಯ ಬಿಡಿಸೊ ದಿವಿಜರೊಡೆಯ ಎನ್ನ ಕಿವಿಯೊಳಗೆ ನಿನ್ನ ನವ ನವ ಚರಿತೆಯ ಸವಿರಸ ಸುರಿಸೆಲೊ 5 ಮಾಧವನನು ಮರೆತು ಪಾದಗಳಿಂದಲಿ ಮೇದಿನಿ ತಿರುಗುವ ಮೋದವೆನಗೆ ಬೇಡ ಯಾದವಪತಿ ನಿನ್ನ ಪಾದದರುಶನದ ವಿ ನೋದಕ್ಕೆ ಸುತ್ತಲು ಆದರ ಪೊಂದಿಸೊ 6 ಭಿನ್ನ ಅಂಗಗಳಿಂದ ಎನ್ನ ಕರ್ಮಗಳನು ನಿನ್ನ ಸೇವೆಯೆಂದು ಬಿನ್ನೈಸುವೆ ದೇವ ಎನ್ನ ದುರಿತಗಳ ಭಿನ್ನ ಮಾಡುತಲಿ ಪ್ರ ಸನ್ನನಾಗಿ ಎನಗೆ ಸನ್ಮತಿ ದಯಮಾಡೊ 7
--------------
ವಿದ್ಯಾಪ್ರಸನ್ನತೀರ್ಥರು
ನನ್ನವ್ವ ಕಲ್ಲ ಬಿಡೆ ಈ ಧೋತ್ರವಚೆನ್ನಾಗಿ ಒಗೆಯಬೇಕು ಪ ಕರ್ಮ ಹೋಗುವ ಹಾಗೆಚೆನ್ನಕೇಶವನ ಪ್ರಸಾದಕ್ಕೊದಗಬೇಕು ಅ ಉಟ್ಟ ಧೋತ್ರವು ಮಾಸಿತು - ಮನದೊಳಗಿರುವದುಷ್ಟರೈವರುಗಳಿಂದ ಕಷ್ಟ ದುರಿತಗಳುಬಿಟ್ಟು ಹೋಗುವ ಹಾಗೆ ಮುಟ್ಟಿ ಜಲದೊಳುಗಟ್ಯಾಗಿ ಒಗೆಯಬೇಕು 1 ವೇದವನೋದಬೇಕು ಮನದೊಳಗಿದ್ದಭೇದವ ಕಳೆಯಬೇಕುಸಾದರಣೆಯಿಂದ ತಿಳಿದು ನಿಶ್ಚಯವಾಗಿಕ್ರೋಧಕರ್ಮಗಳೆಲ್ಲ ಬಿಟ್ಟು ಹೋಗುವ ಹಾಗೆ 2 ವೇಲಾಪುರದ ಚೆನ್ನಕೇಶವನ ಸೇವೆಗೆಆಲಸ್ಯವನು ಮಾಡದೆಕೋಲ ಹಿಡಿದು ದ್ವಾರಪಾಲಕನಾಗುವೆನೀಲ ಕುಂತಳೆ ಕಲ್ಲ ಬಿಟ್ಟು ಆ ಕಡೆ ಸಾರೆ 3
--------------
ಕನಕದಾಸ
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಾನೇ ಭ್ರಮಿಸಿದೆನೋ ವಿಷಯ ಸಂಗ ನೀನೇ ನಲಿದಿತ್ತೆಯೋ ಪ. ಗಾನಲೋಲನೆ ಕೃಷ್ಣ ಏನೆಂಬುದರಿಯೆನೊ ಮೌನಿ ಜನಪ್ರಿಯ ಧ್ಯಾನಗಮ್ಯನೆ ರಂಗ ಅ.ಪ. ನೂಕುತ ದಿನ ಕಳೆದೆ ಕಾಕು ಯುಕುತಿಯಲ್ಲಿ ವ್ಯಾಕುಲ ಮನಕಿಲ್ಲ ಶ್ರೀಕಾಂತ ನಿನ್ನಿಚ್ಛೆ ಸುಖದುಃಖ ನಿಕರವ 1 ಆಟ ಪಾಟ ನೋಟವೂ ಊಟ ಕೂಟ ಕಾಟ ಕರ್ಮಗಳೆಲ್ಲವೂ ಹಾಟಕಾಂಬರ ನಿನ್ನಾಟವÉನ್ನಲುಭವ ದಾಟಿಸುವವೊ ತೆರೆ ಏಟಿಗೆ ಕೊಡುವುವೋ 2 ನರಕಕೆ ಕಾರಣವೋ ಹೇ ಶ್ರೀನರ ಹರಿ ನಿನ್ನ ಪ್ರೀತಿ ಕರವೋ ಸಂಚಿತ ಕರ್ಮ ಹರಿಸುತ ವರ ಸುಖ ಪಾಲಿಪ ಗುರುತಿನ ಪರಿಯೋ 3 ದೇಹಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 4 ಪಾಪಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 5 ಪಾಪಕ್ಕೆ ಕಾರಣವೋ ಈ ಕರ್ಮಗಳ ಳಾಪದುದ್ಧಾರಕವೋ ಗೋಪಾಲಕೃಷ್ಣವಿಠ್ಠಲನೆ ಮದ್ಗುರು ಬಿಂಬ ವ್ಯಾಪಾರದ್ವಯ ನಿಂದು ನೀ ಪ್ರೀತನಾಗಲೊ 6
--------------
ಅಂಬಾಬಾಯಿ
ನಾನೇನು ಮಾಡಲಯ್ಯ ಎನ್ನಯ ಮನ ನಿನ್ನ ಧ್ಯಾನಿಸಲೊಲ್ಲದೂ ಪ ಶ್ರೀನಿವಾಸನ ದಯ ಕಾಣುವೋಧ್ಹ್ಯಾಂಗಿನ್ನು ನೀನೆ ದಯಮಾಡೋ ಗುರು ರಾಘವೇಂದ್ರ ಅ.ಪ ಕೀರ್ತಿಸದೆ ನಿನ್ನ ವ್ಯರ್ಥ ಚಿಂತೆಯ ಮಾಡಿ ಪಾರ್ಥಸಾರಥಿ ಮಾರ್ಗಕ್ಹೊರ್ತಾದೆ ನಾ ಮರ್ತೆ ನಿಜಸೌಖ್ಯವನು ಬೆರ್ತೆ ಅನ್ಯರ ಸತಿಯ ಸಾರ್ಥಕಾಗದೇ ಪೋಯಿತೆನ್ನ ಆಯು 1 ಮಾಂಸದಾಸೆಗೆ ಮೀನು ಹಿಂಸೆಪಡುತಿರುವಂತೆ ಕಂಸಾರಿ ಪ್ರಿಯ ಹಂಸರೊಂದಿತ ಎನ್ನ ಸಂಶಯವ ಪರಿಹರಿಸಿ ಸಂಶಾಂತ ಮತಿ ನೀಡೋ ಸಂಶಯ ದೂರನೇ 2 ಎಷ್ಟು ಪೇಳಲಿ ಎನ್ನ ದುಷ್ಟ ಕರ್ಮಗಳನ್ನು ಜೇಷ್ಟ ದೂತನೆ ಎನ್ನ ಕಷ್ಟ ಬಿಡಿಸೋ ವೃಷ್ಣಿಸಖಪ್ರಿಯ ಮನ ತೃಷ್ಣಗಳನೆ ಕಳೆದು ಶ್ರೇಷ್ಠಾ ನರಹರಿ ಚರಣಾಭೀಷ್ಟವ ನೀಡೋ 3
--------------
ಪ್ರದ್ಯುಮ್ನತೀರ್ಥರು
ನಿಂತ ಭಾವದ ಬಗೆಯನೆಂತು ಬಣ್ಣಿಪೆನುಚಿಂತಾಯಕನೆ ನೀನು ಚಿತ್ಸ್ವರೂಪದಲಿ ಪಸಕಲ ಲೋಕವ ಸೃಜಿಸಿ ಸಕಲದೊಳು ನೀ ನೆಲಸಿಸಕಲವನು ನಿನ್ನೊಳಗೆ ಸಲೆ ಸೇರಿಸಿಪ್ರಕಟಿಸಿದ ಜಗವೆಲ್ಲ ಪರಿಪರಿಯ ಕಲ್ಪದಲಿಪ್ರಕೃತಿಯಲಿ ಲಯವಾಗೆ ಪರಮ ಸದ್ರೂಪದಲಿ 1ಚಿತ್ರಕರ್ಮಗಳಿಂದ ಚರಿಸಿ ನಾನಾತ್ವದಲಿಚಿತ್ರದಂದದಿ ತೋರಿ ಚೈತನ್ಯವಾಗಿಕರ್ತೃಭೋಕ್ತøತ್ವದಲಿ ಕರಣಾದಿ ರೂಪದಲಿಚಿತ್ರರಚನೆಗೆ ಸಾಕ್ಷಿ ಚಿತ್ಸ್ವರೂಪದಲಿ 2ಹರಿ ಹರ ಬ್ರಹ್ಮ ಯಮ ಹರಿ ವರುಣ ಧನದಾದಿಸುರಮುನಿಗಳೊಳಗಿರುವ ಸುಖವೆಲ್ಲ ನಿನ್ನನಿರತಿಶಯ ಸುಖದಲ್ಲಿ ಲೇಶನೀನಿತ್ತವರವರದರವರೆಂದೆನಿಸಿ ಮೆರೆದು ಸುಖರೂಪದಲಿ 3ಈ ವಿಧದ ದೇವತೆಗಳಿರವ ನೋಡಿದರವರುದೇವ ನೀನೊಲಿದು ದಯಮಾಡಿದವರುಭಾವಿಸುತ ನಿನ್ನಂಘ್ರಿಕಮಲವನು ಭಕ್ತಿಯಲಿಭಾವ ನಿನ್ನೊಳು ನಿಲಲು ಭುವನೇಶ ನಿತ್ಯದಲಿ 4ಪರಿಪೂರ್ಣ ಪರಮೇಶ ಪರಮ ಮಂಗಳರೂಪಪರನೆನಿಸಿ ದೇಶಕಾಲಾದಿಗಳಿಗೆಗುರುಮೂರ್ತಿ ಶ್ರೀ ವಾಸುದೇವಾರ್ಯರೆಂದೆನೆಸಿತಿರುಪತಿಯ ವೆಂಕಟನೆ ಹೃದಯಕಮಲದಲಿ 5ಓಂ ಸರ್ವತೀರ್ಥಾತ್ಮಕಾಯ ನಮಃ
--------------
ತಿಮ್ಮಪ್ಪದಾಸರು
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನಿನ್ನ ಕ್ಲೇಶವ ಕೇಳೆ ಎನಗೆ ಮರುಕಪ ಎನ್ನ ಕ್ಲೇಶವ ನಿನಗೆ ತಿಳಿಸಬಹುದೆ ದೇವ ಅ.ಪ ಹದಿನಾಲ್ಕು ಲೋಕಗಳ ಹುಡುಗತನದಲಿ ಪಡೆದು ಅದಕೆಲ್ಲ ಅನ್ನವೀಯುವ ಚಿಂತೆಯು ಹದಿನಾಲ್ಕು ಲೋಕಗಳ ಸರ್ವಕರ್ಮಗಳಿಗೂ ಹಗಲಿರುಳು ಪ್ರೇರಣೆಯ ಮಾಡುವಾತಂಕ 1 ಹಿರಿಮಗನದೊಂದುಸಿರ ತರಿದರೆಂಬಾತಂಕ ಕಿರಿಮಗನ ದೇಹ ಪೊಸಕಿದ ಚಿಂತೆಯು ಹರನು ಮೊಮ್ಮಗ ಹಾಲಾಹಲವ ಕುಡಿಯುತ ಹಲ್ಲು ಕಿರಿಯುವಾತಂಕಕ್ಕೆ ಹರವು ತೆರವಿಲ್ಲ 2 ಚಂಚಲಳು ಸತಿಯೆಂದು ಹೊಂಚು ಕಾಯುವ ಚಿಂತೆ ಮಂಚದಲಿ ಘಟಸರ್ಪ ವಿಷದ ಚಿಂತೆ ಸಂಚಿತಾಗಮ ಪ್ರಾರಭ್ಧಗಳನಳಿಸುವಗೆ ವಂಚಕರು ಏನು ಮಾಡುವರೆಂಬ ಚಿಂತೆ 3 ಹಲವು ವಿಧ ವೇಷಗಳ ತಾಳಿ ಜಗಂಗಳಲಿ ನೀ ತಲೆಯ ಮರಿಸಿಕೊಂಡರೇನು ಫಲವೊ ಬಳಸಿ ಹುಡುಕಿ ಗೂಢಚಾರಿ ಯೋಗಿಯು ನಿನ್ನ ತಿಳಿದು ಬೆಳಕಿಗೆ ತರುವ ಮರೆಮಾಚಲೇಕೊ 4 ತಾಪತ್ರಯ ತಳೆಯೆ ಗೋಪನಲಿ ಪುಟ್ಟಿದರು ಗೋಪಿಯರ ಸಾಸಿರದ ಗೋಳು ನಿನಗೆ ಭೂಪ ದಶರಥನ ಮಗನಾಗಿ ಪುಟ್ಟಿದರಯ್ಯೊ ಪಾಪ ಸತಿಯಳ ಕಳೆದುಕೊಂಡ ಬಲುಚಿಂತೆ 5 ನಿನ್ನ ಬೇಡುವುದಿಲ್ಲ ನಿನ್ನ ಕಾಡುವುದಿಲ್ಲ ನಿನ್ನ ನೋಡಲು ಎನಗೆ ಬೇಸರವು ಜಗಕೆ ನಿನ್ನ ಚಿಂತೆಯು ಮನ ಪ್ರಸನ್ನತೆ ನೀಡುವುದು ಇನ್ನೇನು ನಿನಗೆ ಚಿಂತೆಯೊ ತಿಳಿಸಿ ಪೊರೆಯೊ 6
--------------
ವಿದ್ಯಾಪ್ರಸನ್ನತೀರ್ಥರು
ನಿನ್ನ ಪೂಜೆಯೊ-ರಾಮ ಪ ನಿನ್ನ ಪೂಜೆ ಹೊರತಿಲ್ಲಎನ್ನ ವ್ಯಾಪಾರವೆಲ್ಲ ಸ್ನಾನ ಸಂಧ್ಯಾವಂದನ ಹೋಮ ಮೌನ ಜಪ ಸದ್ಗ್ರಂಥ ವ್ಯಾ-ಖ್ಯಾನ ಯಜ್ಞಸಾಧನ ಸಂಪಾದನ ಅಧ್ಯಯನನಾನಾ ರಸ ನೈವೇದ್ಯ ಭೋಜನ ತಾಂಬೂಲಚರ್ವಣಮಾನಿನಿ ಮೊದಲಾದ ಸ್ಯಂದನ ಗಾನದ ಭೋಗಗಳೆಲ್ಲ1 ಸರ್ವೇಂದ್ರಿಯಗಳಲಿಹ ಶರ್ವಾದಿ ದೇವರ್ಕಳಿಗೆಸರ್ವಚೇಷ್ಟಾಪ್ರದನಾದ ಪ್ರಾಣಗೆ ನಿರ್ವಾಹಕನಾಗಿಸರ್ವ ಜೀವರ ಕೈಯಿಂದ ಸರ್ವಜ್ಞಾನ ಕರ್ಮಗಳನುಸರ್ವದಾ ಮಾಡಿಸಿ ಅವರ ಸರ್ವಶುಭಭೋಕ್ತನಹೆ 2 ಸುರರು ಕಂಗಳಲ್ಲಿ ಭಾಗ್ಯಲಕ್ಷ್ಮಿಉಂಗುಷ್ಠದಿ ಲೋಕಪಾವನೆ ಗಂಗಾದೇವಿಯುಹಿಂಗದೆ ನಿನ್ನಲ್ಲಿರಲು ತುಂಗಗುಣ ಪರಿಪೂರ್ಣರಂಗವಿಠಲ ನೆಲೆಯಾಗಿ ಮಂಗಳಾಂಗನೆ ಮನ್ನಿಸುವೆಯೊ3
--------------
ಶ್ರೀಪಾದರಾಜರು
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನೀ ಪಾಲಿಸದಿರಲು ನಾ ಪೋಗುವುದು ಎತ್ತ ನೀ ಪೇಳೊ ಪರಮ ಪುರುಷಾ ಅಗಣಿತ ನಾಮ ಸುರ ಪ್ರೇಮ ಸ್ವರ್ಣ ಗಿರಿವಾಸ ನರಕೇಶ ಭೂಷಾ ಪ ಉದರ ಚಿಂತಿಯಲಿ ಉದಯದಲಿ ಯೆದ್ದು ಅವರಿವರ ಸದನದಲ್ಲಿಗೆ ಹೋಗದೆ ಮೃದು ವಾಕ್ಯವಾಡದಲೆ ಮದ ಗರ್ವ ಬಲದಿಂದ ಎದುರಾದವರ ಜರಿದೆ ಮನಸಿನ ಕ್ಲೇಶದ ಪರಸುದತಿಯರನೀಕ್ಷಿಸಿ ವಿದಿತ ಕರ್ಮಗಳ ತೊರೆದೆ ಒದಗಿ ಬಂದ ಪುಣ್ಯ ಬರಿಗೈದು ಪಾಪದ ಹುದಲೊಳಗೆ ಬಿದ್ದು ಸಂಪದವಿಗೆ ದೂರದವನಾ1 ಉತ್ತಮರ ನಿಂದಿಸಿದೆ ಉಚಿತಾರ್ಥ ತಿಳಿಯದಲೆ ಹೆತ್ತವರನ್ನ ಜರಿದೆ ಹತ್ತೆಗರೆದು ಪರಿಪಾಲಿಸಿದ ದಾತರನು ಹೊತ್ತಾಕೆ ಪ್ರೀತಿ ಪೇಳುವೆ ಮತ್ತೆ ಧರ್ಮವೆಯಿಲ್ಲಾ ಮಹಾಕೃಪಣನಾಗಿ ಪರ ವಿತ್ತಾಶೆ ಪೋಗಿ ಮುಳವೆ ಚಿತ್ತಪಲ್ಲಟವಾಗಿ ವಿಷವೆಂಬ ಹಾವಿನ ಹುತ್ತಿನೊಳು ಬಿದ್ದು ಪುನಿತನಾಗದವನಾ 2 ಗುರು ನಿಂದಕರ ನೋಡಿ ಸರವಾಗಿ ಪೋಗಳುವೆನೊ ವೇದ ಸಮ್ಮತವೆ ಬಿಟ್ಟು ಮರೆವೆ ನಿನ್ನಯ ಸ್ಮರಣೆ ಗತಿಗೆ ಸಾಧನವೆಂದು ಅರಿದರಿದು ಬುದ್ಧಿಗೆಟ್ಟು ಹರಿವಾಸರದುಪವಾಸ ಮಾಡುವ ಜನರಿಗೆ ಮುರಳಾಡಿ ಮುಟ್ಟಿಯಲಿಟ್ಟು ಜಾಗರ ತೊರೆದು ಹಿರಿ ಪಾಮರನಾಗಿ ಹರಣ ಸ್ಥಿರವೆಂದು ಮದುಕರಿಯಂತೆ ತಿರುಗುವೆ ನಾ3 ಕಾಸಿಗೆ ಕಾಸು ಘರ್ತಿಸಿ ಗಳಿಸಿ ಬಿಡದೆ ಮೀಸಲಾ ಪದಾರ್ಥವೆಂಬೆ ದೋಷಕ್ಕೆ ಗುರಿಯಾಗಿ ದುರ್ಜನರ ಒಡಗೂಡಿ ರಾಸಿ ದುರನ್ನ ಉಂಬೆ ಆಶೆಯನು ತೊರಿಯದಲೆ ಉಪರಾಗ ಪರ್ವದಲಿ ಕಾಸು ದಾನವನು ಕೊಂಬೆ ಲೇಸಾದರೆ ಹಿಗ್ಗಿ ಹಾರೈಸುವೆನು ಇಷ್ಟು ಕ್ಲೇಶ ಬಂದರೆ ದೈವವೆಂದು ದೂಷಿಸುವೆನಾ4 ಒಂದೇ ಎರಡೇ ಎನ್ನ ಅಪರಾಧ ಪೇಳಿದರೆ ಎಂದೆಗೆಂದಿಗೆ ಸವಿಯದು ನೊಂದು ದುಶ್ಚಿತ್ತದಲಿ ನೀನೆ ಗತಿ ಎಂದು ಬಾಗಿಲ ಕಾಯಿದುದು ಬಂದು ಮಾತುರದಲ್ಲಿ ಬಲು ದಯಾಳು ಎನ್ನ ಸಂದೇಹವನು ತೊಡೆದು ಮುಂದಾದರೂ ಭವದ ಅಂಧ ಕೂಪದೊಳಿಡದೆ ಪೊಂದಿಸುವ ನಿನ್ನವರೊಳಗೆ ವಿಜಯವಿಠ್ಠಲ ಎನಗೆ 5
--------------
ವಿಜಯದಾಸ
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ನೀರಜಾಕ್ಷ ನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ದಾರಿಯ ಕಾಣದೆ ಅ.ಪ ಜನ್ಮಾಂತರ ಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧ ವಿಕರ್ಮದ ಬಳ್ಳಿಯು ಬಿಮ್ಮನೆ ಬಿಗಿವಡೆದು ಕಂಟಕ ವೆಮ್ಮನು ಕಾಲಿಡಲಮ್ಮಗೊಡವು ಹರಿ1 ದಾರಿಯೊಳಡಸಿಹುದು ರಾರು ಮಂದಿ ಮುಳಿದು ಸಾರಿ ಸಾರಿ ಬಾಯಾರಿಸುತಿರ್ಪವು 2 ಯನು ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ತನು ಸಂಬಂಧದ ಜನಗಳು ದುರ್ಮೃಗ ವನು ಪೋಲುತ ನಮ್ಮನು ಬಾಧಿಸುತಿರುವರು 3 ಕ್ಷುದ್ರವಿಷಯಗಳುಛಿದ್ರವಹುಡುಕುವ ವಧ್ರುವದೇಹದೊಳು ಕದ್ರುಸುತರವೊಲುಪದ್ರವ ಗೈವ ಭದ್ರದ ಭೀತಿಗಳೂ ಪದ್ರವ ಜರೆಯೆಂಬುದ್ರಿಕ್ತಾಂಗನೆ 4 ಸುರನರವರರೊಳು ಶರಣೋಪಾಯವರ ವರದವಿಠಲ ನಿಜ ಚರಣವ ನಂಬಿದೆ 5
--------------
ವೆಂಕಟವರದಾರ್ಯರು