ಒಟ್ಟು 166 ಕಡೆಗಳಲ್ಲಿ , 50 ದಾಸರು , 161 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಭವ ಭಸಿ- ತಾಂಗನ ನೋಡಿದೆ ಪ. ರಂಗನ ತನ್ನಂಗದೊಳಗೆ ಇಟ್ಟು ಹಿಂಗದೆ ನೆನೆಯುವ ಮಂಗಳ ಮೂರುತಿ ಅ.ಪ. ತ್ಯಕ್ಷನ ನೋಡಿದೆ | ಕರುಣಕ- ಟಾಕ್ಷನ ನೋಡಿದೆ ವೀಕ್ಷಣದಿಂದ ಶ್ರೀ ವಕ್ಷನ ಸುತನನು ಶಿಕ್ಷಿಸಿದ ಫಾಲಾಕ್ಷನ ಶಿವನ 1 ಹರನನು ನೋಡಿದೆ | ಗಂಗಾ- ಧರನನು ನೋಡಿದೆ ಗಿರಿಜೆವಲ್ಲಭ ಭಾಸುರ ವಂದಿತನಾ ಸರಿತು ತುಂಗ ಪಂಪಾಪುರವಾಸನ 2 ಶೂಲಿಯ ನೋಡಿದೆ | ರುಂಡ ಮಾಲಿಯ ನೋಡಿದೆ ಕೈಲಾಸದಿ ಉಮೆ ಲೋಲನೆನಿಸಿ ಇಲ್ಲಿ ವ್ಯಾಳಭೂಷಣನಾಗಿ ಲೀಲೆಯೊಳ್ ಮೆರೆವನ 3 ಈಶನ ನೋಡಿದೆ | ನರಹರಿ ದಾಸನ ನೋಡಿದೆ ಪಾಶುಪತಾಸ್ತ್ರವ ವಾಸವಜನಿಗಿತ್ತ ಪೋಷಿಕಿರಾತನ ವೇಷನ ಹರುಷದಿ 4 ದಿಟ್ಟನ ನೋಡಿದೆ | ವೈಷ್ಣವ ಶ್ರೇಷ್ಠನ ನೋಡಿದೆ ವೃಷ್ಣೀಶ ಗೋಪಾಲಕೃಷ್ಣವಿಠ್ಠಲನಿಗೆ ಪುಟ್ಟ ಮೊಮ್ಮಗನಾಗಿ ತುಷ್ಟಿಪಡಿಸುವನ5
--------------
ಅಂಬಾಬಾಯಿ
ಭುಜಗ ಭೂಷಣ ಪಾಹಿ ಪ ಗಜ ಅಜಿನಾಂಬರ ಅ.ಪ. ಗಿರಿಜೆಯ ಮನೋಹರ | ಸುರಪತಿ ಗುರುವರಕರುಣದಿಂದಲಿ ತವ | ಚರಣ ಸ್ಮರಣೆ ಕೊಡು 1 ಪಂಚಸುವದನನೇ | ಸಂಚಿತಪ ಕೆಡಿಪನೇಪಂಚ ಬಾಣನ ಪಿತ | ಮಂಚ ಪದಾರ್ಹನೆ 2 ತ್ರಿಶೂಲ ಡಮರುಗಾ | ಭಸುಮಾದಿ ಭೂಷಿತಾದಶ ಶಿರ ಮದಹರ | ನಿಶಿಚರ ಗುರುವರ3 ಪಕ್ಷೀಂದ್ರ ವಂದ್ಯರಾ | ಅಕ್ಷಾರಿ ಹರಿವರಾಕುಕ್ಷ್ಯುದ್ಭವ ಹರ | ದಕ್ಷಾದ್ವರ ಹರ 4 ವಿಷಧಿಯೋಳುದಿಸಿದಾ | ವಿಷಗಣ ಭುಜಿಸಿದಾವಿಷಕಂಠನೆನಿಸಿದ | ನಿಶಿಚರ ವರಪ್ರದ 5 ಗಗನೇಶಾ ಜನಕಾ | ಮೃಗಾಂಕ ಶ್ರೀ ಶುಕಾನಗಪಗೆ ಪೋಷಕ | ಷಣ್ಮುಖ ಜನಕಾ 6 ತ್ರೈರೂಪಾ ತ್ರಿನಯನಾ | ಗುರು ಗೋವಿಂದ ವಿಠಲನಾನಿರುತದಿ ಸ್ಮರಣಾ | ಭರಣ ಶೋಭನ 7
--------------
ಗುರುಗೋವಿಂದವಿಠಲರು
ಭೂರಿಜಗದುದ್ಧಾರೆ ಲೋಕವಿ-| ಸಾರೆ ಸರ್ವಾಧಾರೆ ಲೋಕವಿ-| ಚಾರೆ ನಿನ್ನಡಿದಾವರೆಗೆ ನಾ ಅ.ಪ ಚಂಡಿಕೆ ಗಿರಿಜಾತೆ || ದಿಂಡುಗೆಡಹುತ ರುಂಡಗಳ ಚೆಂ-| ಡಾಡಿ ರಕ್ತವನುಂಡ ಶಂಕರಿ1 ಕೌಮಾರಿ ಗೌರಿ ರುದ್ರಾಣಿ || ಕಾಮಹರ ಸುಪ್ರೀ(ಯೆ) ತ್ರಿಜಗ-| (ವಾಮೆ) ಪೊರೆ ಬ್ರಹ್ಮಾಂಡ ನಾಯಕಿ 2 ನಾದ ಬಿಂದು ಕಲಾದಿಮಯ(ಳೆ) ವಿ-| ಧ್ಯಾಂತರಹಿತೆ ಸದಾನಂದೋದ್ಧರೆ 3
--------------
ಸದಾನಂದರು
ಮಂಗಲಂ ಜಯಮಂಗಲಂತ್ರಿಜಗಂಗಳ ಪೊರೆವ ಶ್ರೀಮೂಕಾಂಬೆಗೆ ಪ ಗೌರಿಗೆ ಗುಹಜನನಿಗೆ ಗಿರಿಜಾತೆಗೆಧೀರಮಹಿಷ ದೈತ್ಯಮರ್ದಿನಿಗೆಕಾರುಣ್ಯನಿಧಿಗೆ ಕಾಮಿತಫಲದಾತೆಗೆನಾರದನುತೆಗೆ ನಾರಾಯಣಿಗೆ 1 ಶರದಿಂದುಮುಖಿಗೆ ಶಂಕರಿಗೆ ಶರ್ವಾಣಿಗೆದುರಿತ ದಾರಿದ್ರ್ಯಹರ್ತೆಗೆ ದುರ್ಗಿಗೆಪರಮೇಶ್ವರಿಗೆ ಪಾವನಚರಿತೆಗೆ ಶುಭಕರಿಗೆ ಸಮಸ್ತಮಂತ್ರೇಶ್ವರಿಗೆ 2 ರಾಜಶೇಖರಿಗೆ ರಾಜೀವನೇತ್ರಗೆ ರಕ್ತಬೀಜ ಶಾಸಿನಿಗೆ ಭುವನಮಾತೆಗೆತೇಜೋಮಯಿಗೆ ತರಣಿಕೋಟಿ ಭಾಷೆಗೆಶ್ರೀ ಜನಾರ್ದನನ ಸಹೋದರಿಗೆ 3 ಕಾಳಿಗೆ ಕಾಮರೂಪಿಣಿಗೆ ಕೌಮಾರಿಗೆಕಾಳರಾತ್ರಿಗೆ ಕಾತ್ಯಾಯನಿಗೆವ್ಯಾಳಭೂಷಿಣಿಗೆ ಯೋಗಿನಿಗೆ ರುದ್ರಾಣಿಗೆಭಾಳನೇತ್ರೆಗೆ ಭಯಹಾರಿಣಿಗೆ4 ಚಂಡಿಗೆ ಚಕ್ರಪಾಣಿಗೆ ಚಾತುರ್ಭುಜೆಗೆಮುಂಡಿಗೆ ಧೂಮ್ರಲೋಚನಹತ್ರ್ರೆಗೆಚಂಡಮುಂಡಾಸುರರಸುರಣರಂಗದಿದಿಂಡುದರಿಂದ ಸರ್ವಮಂಗಲೆಗೆ5
--------------
ಕೆಳದಿ ವೆಂಕಣ್ಣ ಕವಿ
ಮಂಗಳನಾಮಾ ನಮೋ ನಮೋ ಪ ಮಾಂಗಿರಿಧಾಮಾ ನಮೋ ನಮೋ ಅ.ಪ ಅಂಗಜಾತ ಪಿತ ಸುರಪತಿವಿನುತಾ ತುಂಗ ಕೃಪಾಂಬಕ ನಮೊ ನಮೋ 1 ರಂಗನಾಥ ನೀಲಾಂಗ ಮಹಾದ್ಭುತ ಸಿಂ[ಗಾನ]ನ ಹರೇ ನಮೋ ನಮೋ 2 ನಾಗಾಲಂಕೃತ ಸರೋಜ ಭೂಷಿತ ಕಮಲಭವಾನತ ನಮೋ ನಮೋ 3 ತಾರಕ ನಾಮ ನಮೋ ನಮೋ ರಘುರಾಮಾ ನಮೋ ನಮೋ 4 ಸುರಮುನಿ ನಾರದ ಗೌತಮ ಪ್ರೇಮಾ ಧರೆಗಭಿರಾವೂ ನಮೋ ನಮೋ 5 ಗಿರಿಜಾಧವನುತ ಗುಣ ಮಣಿಧಾಮಾ ರಾಕ್ಷಸ ಭೀಮಾ ನಮೋ ನಮೋ 6 ರಾಮಾ ರಘುರಾಮ ಕ್ಷೀರಾಬ್ಧಿಶಾಯಿ ಸೋಮಾ ಮಾಂಗಿರಿವರ ನಮೋ ನಮೋ7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಧುಪುರದ ವಿಘ್ನೇಶ ದೇವ ಜಗದೀಶ ಫ ಪುರುಷಪಿತನಮಿತ ಕಮಲ ಗಿರಿಜಾತೆಯಣುಗಾದಿತ್ಯ ಕೋಟಿ ಪ್ರಕಾಶ ಕರಿವದನ ಕರುಣನಿಧಿ ಸಮುದ್ರ ಬಹುಕ್ಷಿಪ್ರ 1 ಭರದಿಂದ ರಕ್ಕಸ ಪುರವನು ದಹನಮಾಡೆ ಹರ ಮೊದಲು ನಿಮ್ಮನು ಅರ್ಚಿಸಿ ಮೆಚ್ಚಿಸಿ ಹರಿ ವಿರಂಚಾದಿಗಳೆಲ್ಲ ಜಯ ಜಯವೆನಲು ವರವಿತ್ತು ಮೆರೆದೆ ಗಣನಾಥ ವಿಖ್ಯಾತ 2 ಅರರೆ ನಿಮ್ಮ ಮಹಿಮೆಯನು ಪೊಗಳಲೆನಗಳವಲ್ಲ ಧರಣಿಯ ಪೊತ್ತಿಹ ಶೇಷಗರಿದು ಹರನಸುಕುಮಾರ ಸಕಲಾಗಮಕೆ ಸಾಕಾರ ಧರೆಯೋಳ್ ಮಧುಪರ ವಿಘ್ನೇಶ 3
--------------
ಕವಿ ಪರಮದೇವದಾಸರು
ಮರೆಯೊಕ್ಕೆ ನಿನ್ನನು ಮರುಗಿ ರಕ್ಷಿಸಬೇಕು ಶಂಕರೇಶಾಗಿರಿಜೆಯಾಣ್ಮನೆದೇವ ಕೆರೆಗೋಡಿಪುರದೀಶ ಶಂಕರೇಶಾ ಪಮರಳಿ ಮರಳಿ ಗರ್ಭಕುರುಳಿ ನಾನೊಂದೆನುಪರಿಪರಿ ಕರ್ಮದ ಫಲಗಳನುಣಲಾಗಿದುರಿತ ತೊಲಗದೀವರೆಗು ನಾನೇಗೈವೆಕರುಣಾರಸ ನಿನಗೇತಕುದಿಸದಿದೆ 1ಸೂತ್ರಧಾರಕ ನೀನು ಸಕಲಜೀವರಿಗೆಲ್ಲಪಾತ್ರ ಕೃಪೆಗೆ ನಾನು ಪ್ರೇಮದಿಂ ನೋಡಿನ್ನುಗೋತ್ರಾರಾತಿ ವಂದಿತ ಪಾದಕಮಲನೆಸ್ತೋತ್ರವ ಮಾಳ್ಪುದ ಮೊದಲೆ ನಾನರಿಯೆನು2ಮರತಿ ಪುಟ್ಟದು ನಾನಾವಿಧ ಭವಸುಖದಲಿವರೆತರಿತೆನೆನಿಸಿದ ಕರ್ಮದ ಬಲುಹಿನಿಂಬೆರೆತು ಬಯಲ ಮೋಹದಲಿ ಮೋಸಹೋದೆನುಕುರಿತು ಕಾಮ್ಯವ ಭಜಿಸಿದೆನೊ ನಿನ್ನನು3ಉರಿಗಣ್ಣ ದೃಷ್ಟಿಯಿಂ ದುರಿತವ ದಹಿಸಿನ್ನುವರಶಶಿನೇತ್ರದಿಂ ನೋಡಿ ತಾಪವ ಪರಿಹರಿದಶ್ವನೇತ್ರದಿ ಜ್ಞಾನವನರುಹಿಸುಶರಣಾಗತನಪರಾಧವನೆಣಿಸದೆ 4 ಪರಾಕು ಶಂಕರೇಶಾ5
--------------
ತಿಮ್ಮಪ್ಪದಾಸರು
ಮಹಾದೇವಾ ಪ ಗಿರಿಜೆ ರಮಣ ವೃಷಬೇಂದ್ರ ವಾಹನಾ | ಸರಸಿ ಜಾರಿ ಮಿತ್ರಾನಲ ನಯನಾ 1 ಕರ್ಪುರ ಗೌರವ ಪಂಚಾನನಾ | ಸರ್ಪ ಭೂಷಣಂಗಜ ಮದಹರಣಾ 2 ಕರಿಚ - ರ್ಮಾಂಬರ ಸುರ ನದಿ ಧರಾ | ಗುರು ಮಹಿಪತಿ ಸುತ ಭಯ ಹರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೂರ್ತಿ ದೇವರ ದೇವ ಕೃಪಾಕರನ ಪಾವನ ಚರಿತ ಪುಣ್ಯೋದಯನ ಭಾವಕಿ ಗಿರಿಜೆಯ ವರಸುತನ ಚೆಲುವ ಭಾವದಿಂದೊಪ್ಪುವ ಗಜಮುಖನಾ 1 ಚಂದ್ರಗೆ ಶಾಪ ನಿತ್ತಿಹನಾ ಚಂದಿಂದೊಪ್ಪುವ ಶುಭಕರನ ಕುಂಕುಮಚಂದನ ಲೇಪಿತನ ಕೃಪೆಯಿಂದ ಸದ್ಭಕ್ತರ ಪೊರೆವವನ 2 ಸುರಮುನಿ ನಮಿತ ಸರ್ವೇಶ್ವರನ ಭರಿತ ಸಿಧ್ಧಿಯ ನೀವ ಭವಹರನ ಭಾವಜ ವಿಷಯಕೆ ಸಿಲುಕದನ ಚೆಲುವ ಭಾವದಿಂದೊಪ್ಪುವ ಶುಭಕರನ 3
--------------
ಕವಿ ಪರಮದೇವದಾಸರು
ಮೃತ್ಯುಂಜಯನೇ ಶರಣು ಶಂಕರನೆ ಶರಣು ಶರಣು ಪ ವಾಸವೇ ಕೈಲಾಸ ವಸನವೇ ದಿಕ್ಕುಗಳು ಪೂಸಿಹುದು ಸರ್ವಾಂಗವೆಲ್ಲ ಭಸ್ಮ ನೇಸರಿನ ತೇಜ ಶಶಿಜೂಟ ಗಂಗಾಧರನ ಪಾಸಟಿಯು ನಿನಗೊಬ್ಬರಿಲ್ಲ ಗೌರೀಶ 1 ಪಂಚ ವಿಂಶತಿ ತತ್ವದೂರ ವಿಶ್ವಾಧಾರ ಪಂಚ ಶರಹರ ವಿರಂಚ್ಯಾದಿ ಸಂಸ್ತುತಾ ನಿತ್ಯ ಪ್ರ ಪಂಚ ಮಯನಾದ ಗಿರಿಜೇಶ ವಿಶ್ವೇಶ 2 ಪರಮ ಪುರುಷ ಪರೇಶ ಪರಮ ಗುಣಗಣ ನಿಲಯ ಶರಣ ಜನ ಸುರಧೇನು ವಿಶ್ವವಂದ್ಯಾ ಭವ ಪೂಜ್ಯಸೂರ್ಯ ಕೋಟಿಪ್ರಕಾಶ ಉರಗ ಭೂಷಣ ವೃಷಭಾರೂಢ ಗೌರೀಶ 3 ಭೂತಪತಿ ಭುವನೇಶ ಪ್ರೇತ ನಿಲಯ ನಿವಾಸ ನೂತನದ ಗಜಚರ್ಮ ನಿನಗೆ ವಿಖ್ಯಾತ ಗೀತ ನೃತ್ಯ ವಿಲಾಸ ಮಾತುಳಾಧ್ವರನಾಶ ಭಾತಿ ಕಂಠದಿ ವಿಷವು ಗೌರೀಶ 4 ಧರೆಯೊಳಧಿಕತರ ವರದ ಮೂಲನಿವಾಸ ಕರಿವದನ ನಂದೀಶ ಶಕ್ತಿ ಉಮೆ ಸಹಿತ ಭರದಿಂದ ನೆಲಸಿ ಸೊಪ್ಪಿನ ಸುಬ್ಬಗೆವರವಿತ್ತೆ ದುರಿತವನು ಪರಿಹರಿಸೋ ಶಂಭುಲಿಂಗೇಶ 5
--------------
ಕವಿ ಪರಮದೇವದಾಸರು
ರಕ್ಷಕ ದುರ್ಜನ ಶಿಕ್ಷಕ ಸಂತತ 1 ಚಾರು ಮಾಳ್ವತಿ ಧೀರನೆ ಭಕ್ತೋದ್ಧಾರನೆ ಸಂತತ 2 ಕಂಬು ಕಂಧರ ಹೇರಂಬನಾನುಜ ಗುಹ ಅಂಬುಜೇಕ್ಷಣ ಅರಿ ಭಂಜನ ಸಂತತ 3 ಸ್ತುತ್ಯವ ಮಾಡುವ ಭೃತ್ಯನ ಸಂತತ 4 ಗಿರಿಜಾತೆಯ ಕುವರಾ | ಅಭಯಾ | ಕರುಣದಿಂದೀಕ್ಷಿಸಿ ವರವಿತ್ತು ಸಂತತ 5
--------------
ಬೆಳ್ಳೆ ದಾಸಪ್ಪಯ್ಯ
ರಕ್ಷಿಸು ಮಹಮಾಯೆ ಕರುಣ ಕ- ಟಾಕ್ಷದಿಂದಲಿ ತಾಯೆ ಪ. ದಾಕ್ಷಾಯಿಣಿ ದೈತ್ಯಾಂತಕಿ ವರ ನಿಟಿ- ಲಾಕ್ಷನ ರಾಮಿ ನಿರೀಕ್ಷಿಸು ಜನನೀಅ.ಪ. ವಾಸವಮುಖವಿನುತೆ ರವಿಸಂ- ಕಾಶೆ ಸುಗುಣಯೂಥೇ ಭಾಸುರಮಣಿಗಣಭೂಷೆ ತ್ರಿಲೋಕಾ- ಧೀಶೆ ಭಕ್ತಜನಪೋಷೆ ಪರೇಶೆ1 ಗುಹಗಣಪರಮಾತೆ ದುರಿತಾ- ಪಹೆ ದುರ್ಜನ ಘಾತೆ ಬಹುಕಾಮಿತಪ್ರದೆ ಭಜಕಜನೋರ್ಜಿತೆ ಮಹಿತೆ ಯೋಗಿಹೃದ್ಗುಹನಿವಾಸಿನಿಯೆ2 ಶುಂಭಾಸುರಮಥಿನಿ ಸುರನಿಕು- ರುಂಬಾರ್ಚಿತೆ ಸುಮನಿ ರಂಭಾದಿಸುರನಿತಂಬಿನೀ ಜನಕ- ದಂಬಸೇವಿತಪದಾಂಬುಜೆ ಗಿರಿಜೆ3 ಅಷ್ಟಾಯುಧಪಾಣಿ ಸದಾಸಂ- ತುಷ್ಟೆ ಸರಸವಾಣಿ ಸೃಷ್ಟಿಲಯೋದಯಕಾರಿಣಿ ರುದ್ರನ ಪರಾಕು ಕಲ್ಯಾಣಿ4 ನೇತ್ರಾವತಿ ತಟದ ವಟಪುರ- ಕ್ಷೇತ್ರಮಂದಿರೆ ಶುಭದಾ ಸುತ್ರಾಣಿ ಲಕ್ಷ್ಮೀನಾರಾಯಣಿ ಸ- ರ್ವತ್ರ ಭರಿತೆ ಲೋಕತ್ರಯನಾಯಕಿ5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರುದ್ರದೇವರು ಶಿವನೆ ನಾ ನಿನ್ನ ಕರೆಯುವೆ ಬಾರೊ ಪ ಗಿರಿಜಾಮನೋಹರನೆ ಶಂಕರನೆ ಅ.ಪ. ನೀಲ ಹರಳಿನಂತ್ಹೊಳೆವುದು 1 ಬಾಲಮುನಿಯು ತನ್ನ ಕೇಳಿ ಮೃತಿಯನುನೀಲ ಲೋಹಿತಾ ನಿನ್ನ ಸೇವೆಯ ಮಾಡಿದನುಕಾಲನ ಜೈಸುತ ಬಹಳ ಆಯುಷ್ಯವಿತ್ತವ್ಯಾಳಚಲಾಂತಕ ಶ್ರೀಶೈಲದಿ ನಿಂತೆ 2 ಮಂದರುಗ್ಮಿಯು ತಪದಿಂದ ಒಲಿಸಲುಬಂದು ಶಾಪವ ನೀಡಿ ತಂದಿ ಕ್ಷಿತಿಯೊಳುಇಂದಿರೇಶನ ದ್ವೇಷ ಎಂದು ಮಾಡುವಿ ಶಾಪಅಂದೇ ಬರುವದು ಮಂದಿರಕೋ ಇತಿ 3
--------------
ಇಂದಿರೇಶರು