ಒಟ್ಟು 134 ಕಡೆಗಳಲ್ಲಿ , 50 ದಾಸರು , 123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾದೀಗಳಾಗೆದ್ದು ಸಿದ್ಧಾಂತ ಸ್ಥಾಪಿಸಿ ಮುದ್ದು ಕೃಷನ ತಂದ ವೇದ ವ್ಯಾಸರ ಪ್ರಿಯ ಮಧ್ವರಾಯ ಮಧ್ವರಾಯ ಪ ಬಿದ್ದೆ ನಿಮ್ಮಯ ಚಲುವ ಪಾದಪದ್ಮಂಗಳಿಗೆ ವೇದ ಮಧ್ವರಾಯ ಮಧ್ವರಾಯ ಅ.ಪ ತಂದು ಚೂಡಾಮಣಿ ನಿಂದೆ ರಾಮನ ಮುಂದೆ ಮಧ್ವರಾಯ ಮಧ್ವರಾಯ ಕಂದನು ಎಂತೆಂದು ಮುಂದೆ ಪಾಲಿಸ ಬೇಕು ಮಧ್ವರಾಯ ಮಧ್ವರಾಯ 1 ದ್ವಾಪರ ಯುಗದಲ್ಲಿ ದ್ರೌಪದಿ ಗಂಡನೆನಿಸಿ ಪಾಪಿಗಳಾಕೊಂದು ಪತಿ ಸೇವೆ ಮಾಡ್ದೆ ಮಧ್ವರಾಯ ಮಧ್ವರಾಯ ಕೋಪವು ಮಾಡದೆ ತಾಪಗಳೋಡಿಸಿ ಗೋಪಾಲ ಕೃಷ್ಣನ ಕೃಪೆಯ ಕೊಡಿಸೈಯ ಮಧ್ವರಾಯ ಮಧ್ವರಾಯ 2 ದುರುಳ ಮಾಯಿಗಳೆಲ್ಲ ಹರಿಯ ದೂರುತ್ತಿರಲು ಸುರರ ಮಧ್ವರಾಯ ಮಧ್ವರಾಯ ಭವ ಬಿಡಿಸಿ ವೀರ ವೈಷ್ಣವ ನೆನಿಸಿ ಸಾರಿ ಸಾರಿಸ ಬೇಕು ಹರಿಯ ನಾಮವನ್ನು ಮಧ್ವರಾಯ ಮಧ್ವರಾಯ 3 ಲೋಕದಿ ಸಜ್ಜನರ ಸಾಕಬೇಕು ಎಂದು ಬೇಕೆಂದು ಯತಿಯಾದೆ ಶ್ರೀಕಾಂತ ಪಟ್ಟಪುತ್ರ ಮಧ್ವರಾಯ ಮಧ್ವರಾಯ ನೂಕೋದುರಿತ ರಾಶಿ ಲೋಕಕ್ಕೆಲ್ಲಾ ಗುರು ಮಧ್ವರಾಯ ಮಧ್ವರಾಯ 4 ಸುರರೆಲ್ಲ ಪರಿವಾರ ತಾರತಮ್ಯವ ತೋರ್ದೆ ಮಧ್ವರಾಯ ಮಧ್ವರಾಯ ಸೂರಿಗಳೊಡೆಯನೆ ಭಾರತಿ ಪ್ರಾಣಕಾಂತ ಮಧ್ವರಾಯ ಮಧ್ವರಾಯ5 ಮತ್ತೆ ಹರಿಯಮತದಂತೆ ಬರೆದೆಯೊ ಹೊಸ ಭಾಷ್ಯ ಮಧ್ವರಾಯ ಮಧ್ವರಾಯ ಪೊರೆದೆ ಹರಿಯಪ್ರಧಮಾಂಗ ವೀರ ಮಾರುತಿ ದೇವ ಮಧ್ವರಾಯ ಮಧ್ವರಾಯ 6 ಬೃಹತೀಗೆ ನೀ ಪ್ರತಿಮ ಬಹುರೂಪ ಧಾರಕ ವಹಿಸೊ ಎಮ್ಮೆಯ ಅಹಿ ಭೂಷಣ ಪ್ರಿಯ ಮಧ್ವರಾಯ ಮಧ್ವರಾಯ ದಹಿಸೋ ಸೋಹಂ ಜ್ಞಾನ ಮಹಿಯೊಳು ಅಪ್ರತಿಮ ಮಧ್ವರಾಯ ಮಧ್ವರಾಯ 7 ಜಪ ಬೇರೆ ಬೇರೆ ಮಾಡಿ ಮೂರು ಗತಿಯ ತೋರ್ಪೆ ಮಧ್ವರಾಯ ಮಧ್ವರಾಯ ಭಾರೀಶಕ್ತನು ನೀನು ಆರು ಸರಿಯು ನಿನಗೆ ಮಧ್ವರಾಯ ಮಧ್ವರಾಯ 8 ಆನಂದ ಶಾಸ್ತ್ರವ ಸಾನುರಾಗದಿ ಪೇಳ್ದೆ ಮಧ್ವರಾಯ ಮಧ್ವರಾಯ ಮಾನವ ಜ್ಞಾನಾದಿಗಳ ಕೊಟ್ಟು ಕಾಯ ಬೇಕೋ ಮಧ್ವರಾಯ ಮಧ್ವರಾಯ 9 ಜಗ ಭಾರವ ವಹಿಸಿದೆ ಮೇರೆ ಗಾಣದ ಸತ್ವ ಮಧ್ವರಾಯ ಮಧ್ವರಾಯ ಹರಿಯ ಅರಿವ ಮರ್ಮ ಕರುಣದಿ ಅರುಹೈಯ್ಯ ಮಧ್ವರಾಯ ಮಧ್ವರಾಯ 10 ಅಮರ ವೃಂದಕ್ಕೆಲ್ಲ ಹರಿಯ ತೋರಿಸಿ ಕೊಟ್ಟೆ ಮಧ್ವರಾಯ ಮಧ್ವರಾಯ ಬೊಮ್ಮದೇವಗು ಬಲವ ಕೊಟ್ಟನ್ನ ಕೊಳ್ಳುವೆ ಮಧ್ವರಾಯ ಮಧ್ವರಾಯ 11 ಬಂದು ಮೂವತ್ತೇಳು ಸುಂದರ ಗ್ರಂಥ ಮಾಡ್ದೆ ಮಧ್ವರಾಯ ಮಧ್ವರಾಯ ಶುದ್ದ ಸತ್ವಮೂರ್ತಿ ಬದ್ಧನು ನೀನಲ್ಲ ವದ್ದು ಅವಿದ್ಯೆಯ ತಿದ್ದೊ ಎಮ್ಮೆಯ ಮನ ಮಧ್ವರಾಯ ಮಧ್ವರಾಯ 12 ಅಖಿಳಾಗಮಾವೇತ್ತ ಸುಖದ ಪ್ರಾರಬ್ಧವೋ ಮಧ್ವರಾಯ ಮಧ್ವರಾಯ ಸಕಲ ಲಕ್ಷಣವಂತ ಸಕಲ ತತ್ವರಪತಿ ಮಧ್ವರಾಯ ಮಧ್ವರಾಯ 13 ತತ್ವೇಶ ರೊಳಗೆಲ್ಲ ನಿನ್ನವ್ಯಾಪಾರವು ಉತ್ತಮ ನಿನ್ನಲ್ಲಿ ಹರಿಯ ವ್ಯಾಪಾರವು ಮಧ್ವರಾಯ ಮಧ್ವರಾಯ ನಿತ್ಯ ಕೃಷ್ಣನಕಾಂಬ ಸೂತ್ರನಾಮಕದೊರೆ ಮಧ್ವರಾಯ 14 ಉತ್ತುಮೋತ್ತುಮ ವಿಷ್ಣು ನಿನ್ನ ದ್ವಾರವೆ ವಲಿವ ಮಧ್ವರಾಯ ಮಧ್ವರಾಯ ನಿತ್ಯ ತೃಪ್ತನಿಗೀವೆ ನಿಷ್ಕಾಮ ಭಕ್ತಿ ನಿಧಿ ಮಧ್ವರಾಯ ಮಧ್ವರಾಯ15 ದಿವಿಜಾನಾಯಕ ನೀನು ಪಾದ್ಯ ಹೌದಯ್ಯಮಧ್ವರಾಯ ಮಧ್ವರಾಯ ಸೇವಕರೆನಿಸುವ ಭಾಗ್ಯವಿತ್ತು ಕಾಯೋ ಮಧ್ವರಾಯ ಮಧ್ವರಾಯ 16 ನಾಗಾರಿಶಿವ ಗುರುವೆ ಭವ ಬಿಡಿಸು ಮಧ್ವರಾಯ ಮಧ್ವರಾಯ ನೀಗಿಸು ಇವರ ಬಾಧೆ ಪಂಚ ಕೋಶಗ ಪ್ರಾಣ ಮಧ್ವರಾಯ ಮಧ್ವರಾಯ17 ಶ್ರೀ ಪತಿದಯದಿಂದ ತಾಳ ಹಾಕುವ ಶಕ್ತ ಮಧ್ವರಾಯ ಮಧ್ವರಾಯ ನೀಪಾಲಿಸಿದ ರುಂಟು ಏನೆಂಬೆ ನಿಮ್ಮ ಮಹಿಮೆ ಮಧ್ವರಾಯ ಮಧ್ವರಾಯ18 ಭಾನುಸ್ಥ ಪ್ರಭು ನೀನು ಆಧ್ಯಾತ್ಮಗತನಾಗಿ | ಸಾನುರಾಗದಿ ಜಗ ಜೇಷ್ಟೆಯ ನಡಿಸುವೆ ಮಧ್ವರಾಯ ಮಧ್ವರಾಯ ಶ್ರೀನಿವಾಸನ ಪೂರ್ಣ ಕೃಪೆಗೆ ನೀ ಪಾತ್ರನು | ಪೂರ್ಣ ಭೋದ ಗುರುವೆ ದೀನರೆಮ್ಮನು ಪಿಡಿ ಮಧ್ವರಾಯ ಮಧ್ವರಾಯ19 ಅಣವು ಮಹದ್ ಘನ ಪೂರ್ಣ ಪ್ರಜ್ಞನು ನೀನು | ಅನ್ನಜೀವರು ನಿನಗೆ ಅನ್ನ ಶ್ರೀಶಗೆ ನೀನು ಮಧ್ವರಾಯ ಮಧ್ವರಾಯ ನಿನ್ನ ರೂಪಗಳಲ್ಲಿ ನ್ಯೂನವಿಲ್ಲವು ಗುಣದಿ | ಮಣಿಸದೆ ಚಿತ್ತದಲ್ಲಿ ಉಣಿಸೋ ಹರಿ ಕೀರ್ತನೆ ಮಧ್ವರಾಯ ಮಧ್ವರಾಯ 20 ಭೇದಬೊಧೆಯ ನಿತ್ತು ಉದ್ದಾರ ಮಾಡಿದೆ | ವಾದಿ ಭೀಕರಯತಿ ಶ್ರೆದ್ಧೆ ಮನೋಹರ ಮಧ್ವರಾಯ ಮಧ್ವರಾಯ ಮುದ್ದು ಕೃಷ್ಣನ ತಂದು ತಿದ್ದಿ ಪದ್ದತಿಗಳ | ಶುದ್ಧವೈಷ್ಣವರಿಗೆಲ್ಲ ವೃದ್ಧಿ ಮಾಡಿದೆ ಭಕ್ತಿ ಮಧ್ವರಾಯ ಮಧ್ವರಾಯ 21 ಗುರು ಪ್ರಾಣ ನಾಥನೆ ಹರಿಯ ಮನದಂತೆ | ಪರಿಪರಿಲೀಲೆಯ ನಿರುತ ತೋರುತಲಿಪ್ಪೆ ಮಧ್ವರಾಯ ಮಧ್ವರಾಯ ಭರತ ಪ್ರಭುವೆ ನಿನ್ನ ಚರಣವ ಸಾರಿದೆ | ಗಾರು ಸಂಸಾರದಿ ದಾರಿ ತೋರಲಿ ಬೇಕು ಮಧ್ವರಾಯ ಮಧ್ವರಾಯ 22 ಜಯ ಜಯ ಜಯ ಹನುಮ ಜಯ ಜಯ ಜಯ ಭಿಮ ಮುಖ್ಯಪ್ರಾಣ ಮರಾಮರಾ ಜಯ ಜಯತೀರ್ಥ ವ್ಯಂದ್ಯನೆ ಜಯ ಕೃಷ್ಣವಿಠಲನ ಮಧ್ವರಾಯ ಮಧ್ವರಾಯ 23
--------------
ಕೃಷ್ಣವಿಠಲದಾಸರು
ವಿಜಯದಾಸರ ಭಜನೆ ಮಾಡಿರೊ |ವಿಜಯದಾಸರ ಭಜನೆ ಮಾಡಲುಅಜನ ಜನಕ ನಿಜನಿಗೊಲಿದುಕುಜನ ಸಂಗತಿ ತ್ಯಜನ ಮಾಡಿಸಿಸುಜನರ ಪಾದಾಂಬುಜದಲ್ಲಿಡುವ ಪ ಶುದ್ಧ ಮಂದರನ್ನ ಉದ್ಧಾರಾರ್ಥವಾಗಿಮಧ್ವರಾಯರ ಮತಾಬ್ಧಿಯೊಳು ಪುಟ್ಟಿಸಿದ್ಧಾಂತ ಸ್ಥಾಪಿಸಿ ಗೆದ್ದು ವಾದಿಗಳಹೆದ್ದೈವವೇ ಅನಿರುದ್ಧನು ಯೆಂದು ||ಪದ್ಧತಿಂದ ಪೇಳಿಸಿದಿ ವೈಷ್ಣವರನ್ನಶುದ್ಧಾತ್ಮರ ಮಾಳ್ಪ ಉದ್ಯೋಗದಿಂದಲಿಹದ್ದನ್ನೇರಿ ಬಪ್ಪ ಪದ್ದುಮನಾಭನ್ನಹೃದ್ದಯದೊಳಗಿಟ್ಟ ಸದ್ಗುರುರಾಯ 1 ಭೂಸುರಾಬ್ಧಿಗೆ ತಾರೇಶನಂತೊಪ್ಪುವಸಾಸಿರ ನಾಮದ ಶೇಷಗಿರಿ ಶ್ರೀ ನಿ-ವಾಸನ ಯಾತ್ರೆಯ ಲೇಸಾಗಿ ಮಾಡ್ಯೆತಿ ಸ- |ಹಾಸ ಸಂತೋಷದಿಂದಲೆ ||ವಾಸುದೇವನ ಮಾನಸದೊಳಿಟ್ಟು ದು-ರಾಶೆಯ ತೊರೆದು ಕ್ಲೇಶವ ಪಡದಲೆಮೀಸಲ ಪುಣ್ಯದ ರಾಶಿ ಘಳಿಸಿಕೇಶವನ ನಿಜ ದಾಸನೆಂದೆನಿಪ2 ಪಾದ ನಿತ್ಯ ಸಿರಿ ಮೋಹನ್ನ ವಿಠಲನೆಪರನೆಂದರುಹು ಮಾಡಿದ ಸುರ ತರುವಾದ 3
--------------
ಮೋಹನದಾಸರು
ವೃಂದಾವನ ನೋಡಿದೆ | ಸತ್ಯ ಪ್ರೀಯರವೃಂದಾವನವ ನೋಡಿದೇ ಪ ಸತ್ಯ ಪೂರ್ಣ ಕರಜರೆನಿಸಿ | ಸುತ್ತಿಕ್ಷೇತ್ರಗಳನೆಲ್ಲಮತ್ತೆ ಬರಲು ಶ್ರೀರಂಗಕ್ಕೆ | ಫತ್ತೇಸಿಂಗ ಭೇಟಿಯಾದ 1 ಶತೃಗಳ ಗೆದ್ದು ಬಂದು | ಸತ್ಯಪ್ರಿಯರಿಗೆರಗಿ ಅವನೂ ಇತ್ತು ಊರುಗಳನೆರಡು | ನೆತ್ತಿ ಚಾಚಿ ನಮಿಸೀದ 2 ಮಾನಮಧುರಿ ಊರಿನಲ್ಲಿ | ಪ್ರಾಣೋತ್ಕ್ರಮಣ ಸಮಯದಲ್ಲಿಜ್ಞಾನಿ ರಾಮಾಚಾರ್ಯರಿಗೆ | ದಾನ ಮಾಡ್ದ ತುರ್ಯಾಶ್ರಮ 3 ಮಾಧವನ ದಯದಿಂದೆ | ಸಾಧಿಸುತ ಬದರಿ ಯಾತ್ರೆವೇದವತಿ ತೀರದಲ್ಲಿ | ಸಾಧುಗಳ ವೃಂದಾವನ 4 ವೇದ ವೇದ್ಯನಾದ ಗುರು | ಗುರುಗೋವಿಂದ ವಿಠಲನಮೋದದಿಂದ ಭಜಿಸುತ್ತ | ಆದರದಿ ಧ್ಯಾನಾಸಕ್ತ 5
--------------
ಗುರುಗೋವಿಂದವಿಠಲರು
ವ್ಯಾಸರಾಯ ನಿನ್ನ ಅನುದಿನಾ | ಸ್ಮರಿಪ ಜನಕೆತೋಷದಿಂದ ಲೀವೆ ಸಾಧನಾ |ವಾಸುದೇವ ಕೃಷ್ಣಲೀಲೆ | ರಾಶಿಗುಣವ ಬೋಧಿಸುತ್ತಶ್ರೀಶ ಪಾದಪದುಮ ಕಾಂಬ | ಲೇಸು ಮುಕ್ತಿ ಮಾರ್ಗತೋರ್ವೆ ಅ.ಪ. ಏಸೊ ಮುನಿಗಳಿದ್ದು ಮಾಡದಾ | ಶಾಸ್ತ್ರವೆಂಬ ಭೂಷಣಂಗಳ್ಹರಿಗೆ ತೊಡಿಸಿದಾ |ಕೇಶವನೆ ಸರ್ವೋತ್ತಮನು | ದೋಷದೂರನೆಂದು ತಿಳಿಸಿಮೋಸಪಡಿಪ ಮಾಯಿ ಮತವ | ಘಾಸಿಮಾಡಿ ಜಯವ ಪಡೆದೆ 1 ವಾಸುದೇವ ವಾಲೀಲೆಯಏಸೊ ವಾದಿ ಜಯದ ಪತ್ರ | ಭೂಷಣಗಳ್ ಶ್ರೀಶಗಿತ್ತೆ 2 ಶೇಷನಾವೇಶದಿಂದಲಿ | ಪುಟ್ಟಿ ನೀವುವ್ಯಾಸರಾಯರೆಂಬ ಪೆಸರಲಿ |ದೇಶ ಪತಿಗೆ ಬಂದ ಕುಹು | ದೋಷಯೋಗ ಹರಿಸುತ ಸಿಂಹಾಸನೇರಿ ಜಗದಿ ಬಹಳ | ಭಾಸುರ ಸುಕೀರ್ತಿ ಪಡೆದೆ 3 ನ್ಯಾಯ ಗ್ರಂಥವೆಂದು ಕರೆಸಿಹ | ಚಂದ್ರಿಕಾದಿನ್ಯಾಯಾ ಮೃತವು ತರ್ಕ ತಾಂಡವ |ಗೇಯದಿಂದ ತುಚ್ಛ ಭಾಷ್ಯ | ಗಾಯನ ಮಾಡ್ದದುರ್ಮತೆನ್ನ ಮಾಯಿಮತವ ಗೆದ್ದು ಮಧ್ವ | ಧೇಯ ಸಾಧಿಸೀದ ಗುರುವೆ 4 ಪರಮ ಶಿಷ್ಯರೆಂದು ಮೆರೆವರಾ | ವಿಜಯಿಂದ್ರವರ ಸುವಾದಿರಾಜರೆಂಬರಾ |ಗುರುಗಳಾಗಿ ಯತಿ ಸುರೇಂದ್ರ | ವರ ಸುಪುತ್ರ ಭಕ್ಷೆ ಬೇಡೆಪರಮ ಹರುಷದಿಂದ ವಿಜಯ | ಇಂದ್ರರನ್ನ ಕಳುಹಿ ಪೊರೆದೆ 5 ಜ್ಞಾನಿಯರಸ ವ್ಯಾಸ ಮುನಿಗಳಾ | ಮನುಜರೆಂದುಹೀನ ಜನರು ಪೇಳೆ ಆವರ್ಗಳಾ |ಭಾನುಸೂನು ನರಕ$ನೇಕ | ಕಾಣಿಸುತ್ತ ಹಿಂಸಿಸೂವಶ್ರೀನಿವಾಸ ಹರಿಯ ಮುಂದೆ | ಗಾನ ಗೈದು ಆಡುತಲಿಪ್ಪ 6 ಪರಮಹಂಸ ಮುನಿಯು ಮನದಲಿ | ಪೂಜೆಗೈದುಹರಿಯ ಕಾಂಬ ಹೃದಯ ಗುಹೆಯಲಿ |ಗುರುವರ ಬ್ರಹ್ಮಣ್ಯ ಪೂಜ್ಯ | ಗುರು ಗೋವಿಂದ ವಿಠ್ಠಲಾನಚರಣ ವನಜ ಧ್ಯಾನಾಸಕ್ತ | ವರ ಸುನವ ವೃಂದಾವನಸ್ಥ 7
--------------
ಗುರುಗೋವಿಂದವಿಠಲರು
ಶಂಭು ಸ್ವಯಂಭುಗಳ ಹೃದಂಬರಕಿಂದು-ಬಿಂಬದಂತಿಹ ಕಂಬುಧರನ ನಂಬು ಮನುಜಡಂಬ ಮತವ ಹಂಬಲಿಸದೆ ಪ. ಕೃದ್ಧ ಖಳರ ಗೆದ್ದು ವೇದವೇದ್ಯವೆನಿಪ ಶುದ್ಧಸುಧೆಯಉದ್ಧರಿಸಿದ ಮಧ್ವಮುನಿ ಪ್ರಸಿದ್ಧವರಗೆ ಊಧ್ರ್ವಹರಿಯಹೊದ್ದಿ ಬದುಕು ಊಧ್ರ್ವಪುಂಡ್ರ ಶ್ರೀಮುದ್ರೆಯನ್ನುಸದ್ವ್ರತಿಯಾಗು ವೃದ್ಧರಂಘ್ರಿಪದ್ಮಕೆರಗು ಕದ್ಯಕರಗದಾದ್ವವ (?) ಬಿಡು 1 ವಿತ್ತ ಪುತ್ರಮಿತ್ರರರ್ಥಿಗೆ ಸುತ್ತ ತಿರುಗುತಿರದೆತೀರ್ಥಕ್ಷೇತ್ರಯಾತ್ರೆಗಳನು ಹೊತ್ತು ಹೊತ್ತಲಿ ವರ್ತಿಸುತಿರುಭಕ್ತರೆ ನಿನ್ನ ಮಿತ್ರರು ಹರಿಭಕ್ತಿಯ ನಿನಗಿತ್ತು ಮತ್ತೆಮುಕ್ತಿಪಥವ ಹತ್ತುವ ಸಂಪತ್ತ ನಿನ್ನತ್ತ ಮಾಡು 2 ಕೋಪವ ಕಳೆ ತಾಪವ ತಾಳು ಪಾಪದ ಬಲು ಲೇಪಕಂಜುಭೂಪರ ಸೇವೆ ಆಪತ್ತಿಹುದು ತಾಪಸರ ಸಮೀಪವ ಸೇರುಶ್ರೀಪತಿ ಹಯವದನನ ಪದದೀಪದ ಬೆಳಕಿನಲಿ ವಿಷಯಕೂಪವ ಕಳೆದಾಪರಮನಲಿ ಪರಸೇವೆಲಾ [ಪೂ]ರನಾಗು 3
--------------
ವಾದಿರಾಜ
ಶುಭವೆನ್ನಿರೆ ಎಲ್ಲ ಶುಭವೆನ್ನಿರೆ ಪ ಅಭಯ ಹಸ್ತದಿ ಉಭಯಕುಶಲ ಕಾಯುವ ಹರಿಗೆ ಅ.ಪ ಆಲದೆಲೆಯ ಮೇಲೆ ಪವಡಿಸಿ ಬಂದ ಹಾಲುತನದ ಬದುಕ ಭೂಮಿಗೆ ತಂದ ಹಾಲುಗಲ್ಲದ ಮುದ್ದÀು ಕೃಷ್ಣನು ಬರುತಿಹ ಶುಭವೆನ್ನಿರೆ ಎಲ್ಲ ಶುಭವೆನ್ನಿರೆ 1 ನಟ್ಟನಡುರಾತ್ರಿಯಲಿ ದಿಟ್ಟ ಕಾವಲಿನಲ್ಲಿ ದಟ್ಟ ಕತ್ತಲನೆಲ್ಲ ಜಗದಿಂದ ಜಾಡಿಸುತ ಬಟ್ಟ ಬೆಳಕನು ಬೀರಿ ಮೂಡುತಿಹ ಕೃಷ್ಣಂಗೆ ಶುಭವೆನ್ನಿರೆ ಎಲ್ಲ ಶುಭವೆನ್ನಿರೆ2 ಅಷ್ಟಮಿಯ ದಿನದಂದು ರಂಗವಲ್ಲಿಯ ಮೇಲೆ ಇಷ್ಟತಿಂಡಿಗಳನಿಷ್ಟಿಷ್ಟೆ ಮೆಲ್ಲಲು ಪುಟ್ಟ ಹೆಜ್ಜೆಯನಿಟ್ಟು ಬರುತಿರುವ ಕೃಷ್ಣಂಗೆ ಶುಭವೆನ್ನಿರೆ ಎಲ್ಲ ಶುಭವೆನ್ನಿರೆ 3 ರುಕುಮಾಂಗದನ ತಂತ್ರ ಫಲಿಸದಂತಳಿಸಿ ರುಕುಮಿಣಿಯ ಮನಗೆದ್ದು ರಥದ ಮೇಲಿರಿಸಿ ಅಕ! ಅಲ್ಲಿ ಬರುತಿಹ ಮದುವಣಿಗ ಕೃಷ್ಣಂಗೆ ಶುಭವೆನ್ನಿರೆ ಎಲ್ಲ ಶುಭವೆನ್ನಿರೆ 4 ಚೆಲುವ ಚೆನ್ನಿಗ ನಮ್ಮ ಜಾಜೀಪುರೀಶಂಗೆ ಶುಭವೆನ್ನಿರೆ ಎಲ್ಲ ಶುಭವೆನ್ನಿರೆ 5
--------------
ನಾರಾಯಣಶರ್ಮರು
ಶ್ರೀ ಪ್ರಹ್ಲಾದ ಚರಿತ್ರೆ ಅಧ್ಯಾಯ ಒಂದು ಪದ ಆದಿಯಲಿ ಲಕ್ಷ್ಮೀಸಹಿತ ಪ್ರಹ್ಲಾದವರದನ ಪಾದಕೊಂದಿಸಿ ಬೋಧನಿಧಿ ಮಧ್ವಾದಿ ಗುರುಗಳ ಪಾದಕೊಂದಿಸುತಾ ಕೇಳುವರ ಮನಕಾ ಲ್ಹಾದ ಕೊಡುತಿರುವಂಥ ಶ್ರೀ ಪಹ್ಲಾದ ಚರಿತವನು 1 ಸಹಿತಾಗಿ ಪರಮಾ ನಂದದಿಂದ ವಿಹಾರ ಮಾಡುತ ಚಂದದಿಂದಿರಲು ಬಂದರಾ ಕಾಲದಲಿ ಸನಕ ಸನಂದನಾದಿಗಳಲ್ಲೆ ಬೇಡೆಂ ತೆಂದು ಆ ಜಯವಿಜಯರವನು ಹಿಂದುಕೊತ್ತಿದರು 2 ಮೂರುಜನ್ಮದೊ ಳಸುರರಾಗಿರಿ ನೀವು ಹೀಗೆಂತೆಂದು ಶಾಪಿಸಲು ಅಸುರರಾಘ್ಯುಟ್ಟಿದರು ಶಾಪದಿ ಹುಸಿಯದಾಗದು ದೊಡ್ಡವರು ಕೋಪಿಸುತ ನುಡಿದದ್ದು 3 ದಿತಿಯ ಸುತರಾಗ್ಯವರು ಮುಂದಕೆ ಪ್ರಥಿತರಾದರು ದ್ವಿತೀಯ ಹಿರಣ್ಯಾಕ್ಷಾ ಪೃಥಿವಿಯನು ಮುಣುಗಿಸಿದ ಕಾರಣ ಅತಿರಭಸದಲೆ ಕೊಂದು ಮತ್ತಾ ಪೃಥಿವಿಯನು ತಂದಾ 4 ತನ್ನ ಅನುಜನ ನಾಶವನು ಕೇಳುತಲೆ ಮನದಲಿ ಕ್ಲೇಶವನು ಪಟ್ಟು ಶ್ರೀಸುರೇಶನ ಮೇಲೆ ಬಹಳಾಕ್ರೋಶದಿಂದಲೆ ನಡೆದ ತಪಸಿಗೆ ದೋಷ ರಹಿತಾನಂತಾದ್ರೀ±ನÀ ದ್ವೇಷಿತಾನಾಗಿ5 ವಚನ ಸುರರು ಆ ಸಂಧಾನ ಯುದ್ಧವ ಮಾಡಿ ಕೊಂದುಹಾಕಿದರು ಆ ಇಂದ್ರನಾ ಕಂಡು ಒಂದು ನೋಡದೆ ಪ್ರಾಣ ಒಂದು ಉಳಿದರೆ ಸಾಕು ಯೆಂದು ಓಡಿದರು 1 ಅಡಗಿರಲು ದೇವೇಂದ್ರ ಬಂದು ನಡತೆ ಕಂಡವನ ಬಿಡು ಬೇಗ ಈಕೆಯ ನಿಮಗೆ ಕೆಡಕು ಕೊಡುತೆಲ್ಲರ ಮುಂದೆ ನುಡಿದನಾ ರಾಜನ ಮಡದಿಗೀಪರಿಯು 2 ರಾಗ ಅಂಜಿಕೆಯ ಬಿಡಿಸುವೆನಮ್ಮಾ ಪ ಪುಟ್ಟುವನಮ್ಮಾ ಸಂದರ್ಭವನು ತಿಳಿಸುವೆನಮ್ಮಾ 1 ಸ್ಮರಿಸುವನು ಹರಿಗುಣಗಳಮ್ಮಾ ಗಭಯ ಕಾಣಮ್ಮಾ 2 ಅಭಯದಾನಂತಾದ್ರೀಶನ ಭಕ್ತನಮ್ಮಾ ನಿಶ್ಚಿಂತೆಯಿಂದಲಿ ನೀನಿರಮ್ಮಾ 3 ರಾಗ ಕೇಳಿ ಅರ್ಭಾಟವು ಗರ್ಭಿಣಿಯುದರದಲಿರುವಾ ನಡೆದರು ಅರ್ಭಕನಾ ಸ್ಮರಿಸಿ 1 ಕೊಟ್ಟು ತಂದೆಯ ಪರಿ ಮುಂದಾಕೆಯು ನಾರದನ ಬೇಡಿದಳು ವಂದಿಸಿ ವರಗಳನ್ನು2 ಭೋ ಮಹಾ ಮುನಿಯೇ ಮಾತನು ಕೇಳುತಲೆ ಆ ಮಹಾ ಮುನಿ ನಾರದನು ಪ್ರೇಮದಿ ನುಡಿದನು ಕೊಟ್ಟಕಾಮಿತ ವರಗಳನ್ನು 3 ನಿನಗಿನ್ನು ಪರತತ್ವವÀ ನೀ ಕೇಳಮ್ಮಾ ಹರಿಮಹಿಮೆಯ ಹರುಷವ ಕೊಡುತಿಹುದು 4 ಪರಿ ಗರ್ಭದಲಿ ಇರುವನೆ ವರದಾನಂತಾದ್ರೀಶನ ಸ್ಮರಿಸುತ ಪರಮೇಷ್ಠಿಯ ಸುತನು 5 ವಚನ ತಪವನು ಮಾಡಿ ಮನಸಿನೊಳಗಿಟ್ಟು ಪಾದದುಂಗುಷ್ಠವನು ನೆಟ್ಟನೆ ಮೇಲೆತ್ತಿ ಘಟ್ಯಾಗಿ ನಿಂತಾ 1 ಸುಡತಲೆ ಸಕಲ ಕಣವಿದು ಮುಚ್ಚಿತು ಅವನ ಭಯದಲಿ ತಮ್ಮ ಭವನ ಅವನ ಮುಂದು ಸುರಿದರು ಅವನ ಕಥೆಯಾ ಸಕಲ ಭುವನ ಪಾಲಕರೂ 2 ರಾಗ ಮೊರೆಯ ಕೇಳೋ ನೀನುಪ ಹಿರಣ್ಯ ಕಶಿಪು ಮೂಜಗ ಸಂಹರಿಸುವನಯ್ಯ ಅ.ಪ ದಿಟ್ಟ ಕೇಳವನ ವಿಶಿಷ್ಟ ಕಥೆಯ ಪಾದಾಂಗುಷ್ಟದಿಂದಲಿ ಭೂಮಿ ಮೆಟ್ಟಿನಿಂತಿ- ಮಂದರಾದ್ರಿಯಲ್ಲಿರುವಾ 1 ಉಪವಾಸದಿಂದುಗ್ರ ತಪಸಿ ಲೋಕಗಳನೆಲ್ಲ ಸುಡುವಾ 2 ರೋಷದಿ ಮಾಡುವಾ ದ್ಷೇಷ ನಮ್ಮಲ್ಲೆ ನಿತ್ಯದಲ್ಲೆ ನಿತ್ಯದಲ್ಲೆ ಅನಂತಾದ್ರೀಶನಲ್ಲೆ 3 ವಚನ ಮಾಡುವ ಚರ್ಯಾ ಹತ್ತಿತಾ ಹಂಸವನು ಸತ್ವರದಿ ಕಂಡು ನೆತ್ತಿಯಾ ಮೇಲಗ್ನಿ ಬೆಳದಿಹದಲ್ಲೆ ಸುತ್ತಲೆ ನುಡಿದನು ಬ್ರಹ್ಮದೈತ್ಯ ಗೀಪರಿಯ 1 ರಾಗ ಹಿರಣ್ಯ ಕಶಿಪು ಏಳು ಏಳು ಏಳು ಬೇಗನೇ ಪ ಮಾತು ನಿನ್ನ ಭಾಳ ತಪಸಿಗಾಗಿ ನಾನು ಭಾಳ ಮೆಚ್ಚಿದೆನೋ ಇನ್ನು ಅ.ಪ ಹೋದುವಯ್ಯಾ ಮತ್ತು ತಪಸಿ ನಲ್ಲಿ ನೀನು ಚಿತ್ತಮಾಡಬೇಡ ಬಿಟ್ಟು 1 ಕೊಡುವೆನು ವರಗಳನ್ನು ದಾನವೇಶ ಎನ್ನ ನೋಡು ಮೌನಬಿಟ್ಟು ಮಾತನಾಡು 2 ಬಲ್ಲಿದವನೋ ನೀನು ಬೇಡಿ ದ್ದೆಲ್ಲ ನಾನು ಕೊಡುವೆ ನಿನಗೆ 3 ವಚನ ಮನ್ನಿಸಿದನಾ ದೇಹವನ್ನು ಘನ್ನದಿವ್ಯೋದಕದಿ ಚೆನ್ನಾಗಿ ಘನ್ನ ದೈತ್ಯನು ಎದ್ದು ಮುನ್ನನತಿ ಸ್ತುತಿಮಾಡಿ ಹಿರಣ್ಯ ಕಶಿಪಿಂತು 1 ರಾಗ ಮರಣ ಬೇಡಾ ಧರೆಯೊಳು ನಿನ್ನಿಂದ್ಹುಟ್ಟಿರುವ ಪ್ರಾಣಿಗಳಿಂದ ಮರಣಬೇಡಾ 1 ಮರಣ ಬೇಡ ಇಳೆ ಯೊಳೆನಗಾಕಾಶದೊಳೆನಗೆ ಮತ್ತು ಮರಣ ಬೇಡಾ 2 ಮರಣ ಬೇಡಾ ಮೃಗಗಳೊಗ್ಹೆಚ್ಚಿನ ಮೃಗಗಳಿಂದಾದದರು ಮರಣ ಬೇಡಾ 3 ಮರಣಬೇಡಾ ನರರಿಂದ ವಿಷವುಳ್ಳ ಹರಿವ ಹಾವುಗಳಿಂದ ಮರಣ ಬೇಡಾ 4 ವಿಸ್ತಾರವಾದ ದೇ ವಾಸ್ತ್ರಗಳಿಂದಲಿ ಮರಣಬೇಡಾ 5 ಮರಣಬೇಡಾ ಅಂತಕ ನಾದ ಅನಂತಾದ್ರೀಶನ ಮುಂಚೆ ಸ್ಮರಣೆ ಬೇಡಾ 6 ರಾಗ ಹಾಗೆ ಆಗಲಿ ಎಂದು ಸಾಗಿದತಾನು ಆಗೆದ್ದು ಮದವೇರಿದ ನಾಗೇಂದ್ರನಂತೆ ಬೇಗ ಮನೆಯಲಿ ಬಂದಸಾಗಿ ದೈತ್ಯೇಂದ್ರಾ 1 ತಂದು ಒಪ್ಪಿಸಿದಾತಗೆ ಚಂದಾಗಿ ಮುನಿಯು ಹಿಂದಾದುದೆಲ್ಲಾತನ ಮುಂದೆ ತಿಳಿಸಿದನು ಮುಂದಾ ಸ್ಥಳವನು ಬಿಟ್ಟು ಬಂದಾ ಸ್ವಸ್ಥಳಕೆ
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ
ಶ್ರೀ ಮಧ್ವಾಚಾರ್ಯರು ಮಧ್ವೇಶಾರ್ಪಣಮಸ್ತು ಮಹಾಪ್ರಭು ಮಧ್ವೇಶಾರ್ಪಣಮಸ್ತು ಪ ಎದ್ದು ಕೂತು ಮಲಗೆದ್ದು ಮಾಡುವ ಕರ್ಮಮಧ್ವೇಶಾರ್ಪಣಮಸ್ತು ಅ.ಪ. ಕರ್ಮ ಮಧ್ವೇಶಾರ್ಪಣಮಸ್ತುದುಷ್ಟರಾಡುತಿಹ ಕೆಟ್ಟ ನುಡಿಗಳು ಮಧ್ವೇಶಾರ್ಪಣಮಸ್ತುಮೆಟ್ಟಿ ಹೆಜ್ಜೆ ಇಟ್ಟದಾಡುವುದು ಮಧ್ವೇಶಾರ್ಪಣಮಸ್ತುಶಿಟ್ಟಿಲಿ ಜನರಿಗೆ ನಿಷ್ಠುರಾಡುವುದು ಮಧ್ವೇಶಾರ್ಪಣಮಸ್ತು 1 ಮಾಳ್ಪದು ಓಲಗ ಮಾಳ್ಪದು ಕ್ಲೇಶ ಬಡುವುದು ಮಧ್ವೇಶಾರ್ಪಣಮಸ್ತುಹೇಸಿಕೆ ವಿಷಯಗಳಾಶೆ ಮಾಡುವುದು ಮಧ್ವೇಶಾರ್ಪಣಮಸ್ತು 3 ಬಗೆ ಬಗೆ ವಸ್ತ್ರಗಳಗಲದೆ ಹೊದಿವುದು ಮಧ್ವೇಶಾರ್ಪಣಮಸ್ತುಝಗ ಝಗಿಸುವ ಹೊಸ ನಗಗಳನಿಡುವುದು ಮಧ್ವೇಶಾರ್ಪಣಮಸ್ತುಸೊಗಸಿಂದುತ್ತರಗಳ ಸೇವಿಸುವುದು ಮಧ್ವೇಶಾರ್ಪಣಮಸ್ತುಹಗಲಿರುಳಲಿ ಮಾಳ್ಪಗಣಿತ ಕರ್ಮವು ಮಧ್ವೇಶಾರ್ಪಣಮಸ್ತು 4 ರಮಣಿಯರಿಂದಲಿ ರಮಣ ಮಾಡುವುದು ಮಧ್ವೇಶಾರ್ಪಣಮಸ್ತುಕ್ರಮದಿಂ ದಶೇಂದ್ರಿಯ ಕರ್ಮಗಳೆಲ್ಲವು ಮಧ್ವೇಶಾರ್ಪಣಮಸ್ತುಭ್ರಮಿಸಿ ಗುರುಗಳ ಮನ ಸ್ತೋಷಿಸುವುದು ಮಧ್ವೇಶಾರ್ಪಣಮಸ್ತುರಮಾಪತಿ ವಿಠಲನ ಮನದಿ ಧ್ಯಾನಿಸುವುದುಮಧ್ವೇಶಾರ್ಪಣಮಸ್ತು 5
--------------
ರಮಾಪತಿವಿಠಲರು
ಶ್ರೀ ಮಹಿದೇವಿಯರು ಸತ್ಯಭಾಮಾ ರುಕ್ಮಿಣಿಯರೆಂಬ ನಾಮಗೊಂಡು ನಮ್ಮ ಕೃಷ್ಣ ಸ್ವಾಮಿಯನ್ನು ಸೇವೆ ಮಾಳ್ಪ ಕರವ ಪಿಡಿಯಲಾ ಮಹಾರುಂಧತಿಯ ಕೂಡಿ ಭಾಮೆಯರೆಲ್ಲ ನಲಿವುತ 1 ನೀಲ ಖಚಿತ ನಿರ್ಮಲಾರತಿಗಳನೆತ್ತಿ ಸಾಮಗಾನಲೋಲಗೆ ಶ್ರುತಿಗಳರ್ಥವರಿತು ಪುಣ್ಯ ನಾಮನ ಹರಿಸಿ ನುಡಿದರು 2 ವೇದ ತಂದು ಮಂದರಾಖ್ಯ ಭೂಧರವ ನೆಗಹಿ ಧರೆಯ ಕಾದು ಕುಂಭದಿಂದಲುದಿಸಿ ಸಾಧುತನದಿ ಬಲಿಯ ಗೆದ್ದು ಕ್ರೋಧದಿಂದ ಕೊಡಲಿ ಪಿಡಿದು ಕಪಿಗಳನ್ನು ಕೂಡೆ ಕುಬ್ಜೆ ನೋಡಿ ಕಾಪಾಡಿ ಒಡನಾಡಿ 3 ಮೂಢಜನರ ಮೋಹಿಸಿ ಮುಂದೋಡಿ ಮ್ಲೇಚ್ಛ ಜನರ ಮಡುಹಿ ಆಡುವ ಬಾಲಕರ ತೆರೆವ ಮಾಡಿ ಮೋದದಿಂದ ಲಕ್ಷ್ಮಿ ಕೂಡಿ ಕ್ರೀಡಿಸುತ ಸುಖಿಯಾಗು 4 ಕಲಿಯ ಕಾಲದಲ್ಲಿ ಬಹಳ ಬಳಲುವ ಸಜ್ಜನರೆಲ್ಲ ಸುಲಭದಿಂದ ಸಲಹಿ ಖ್ಯಾತಿ ಗೊಳುವೆನೆಂದು ವೆಂಕಟಾದ್ರಿ ಕುಲವೆಲ್ಲ ಕರಸಿ ಚೆಲುವೆ ಪದ್ಮಜಾತೆಯನ್ನು ಒಲಿಸಿ ನಂಬಿದವರ ಸೌಖ್ಯ ಜಲಧಿಯೊಳ್ಯೋಲಾಡಿಸುತ ಫಲವನೀವನೆಂಬ ಕೀರ್ತಿಬಲವಾಗಿ ಪಡದು ಸುಖಿಯಾಗು 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಲಕ್ಷ್ಮೀನೃಸಿಂಹ ಪ್ರಾದುರ್ಭಾವ ದಂಡಕ ಶ್ರೀರಮಾ ಮಾನಿನೀ ಮಾನಸೇಂದೀವರೋತ್ಫುಲ್ಲ ಸಂಫುಲ್ಲ ಚಂದ್ರಾ ಚಿದಾನಂದ ಸಾಂದ್ರಾ ಸದಾ ಸನ್ನುತೇಂದ್ರಾ ನಮೋಪೇಂದ್ರ ನಿಸ್ತಂದ್ರ ನೀ ಕೇಳು, ಆ ರೀತಿ ಪ್ರಹ್ಲಾದನಲ್‍ಸಜ್ಜನಾಹ್ಲಾದನಲ್ ದೈತ್ಯ ಸತ್ಪುತ್ರರಾವೇಳೆ ಶ್ರೀಕಾಂತನ ಜ್ಞಾನ ಭಕ್ತಿ ಕ್ರಿಯಾಗಾಧೆಗಳ್ ಬೋಧೆಗಳ್ ಕೇಳಿ ತಾವೆಲ್ಲರಾಮಾರ್ಗದಲ್ಲೇ ಸುನಿರ್ದಿಷ್ಟ ಸನ್ಮಾರ್ಗದಲ್ಲೇ ಪರಾಭೂತ ಷಡ್ವರ್ಗದಲ್ಲೇ ಮನಸ್ಸಿತ್ತು ಧರ್ಮಾರ್ಥ ಕಾಮಸ್ಪøಹ ಗ್ರಂಥಗಳ್ 10 ಸಿದ್ಧ ಸಂಸಾರ ಸಂಬಂಧಗಳ ಹತ್ತುವೂದಾಗದೇ ದಾನವಾಚಾರ್ಯರಾಶ್ಚರ್ಯದಿಂದಾಗ ತಾವೇಸುರೀತಿಂದಲಾಯಾಸುರೀವಿದ್ಯೆಗಳ ಗದ್ಯಗಳ್ ಪದ್ಯಗಳ್ ಪಾಠ ಪೇಳ್ತಿದ್ದರಾ ಪಾಠಗಳ್ ಒಪ್ಪದೇ ತಪ್ಪದೇನಿಂತು ಮಾರಾಟಗಳ್ ಮಾಡುತಾ ವಿಷ್ಣುಭಕ್ತಿ ಕ್ರಿಯಾಪಾಠಗಳ್ ಪಾಡುತಾ ಎಲ್ಲರೊಂದಾಗೆ ತಾವ್‍ನೋಡಿ ಅಂಜ್ಯಾಡಿ ಇನ್ನೇನು ಈಸೂನುಗಳ ದೈತ್ಯರಾಟ್ ಸೂನನಲ್ ಬುದ್ಧಿ ಭೇದೈಸಿ ದುರ್ಬೋಧಗಳ್ ಕೇಳಿ ದುಸ್ಸಾಧ್ಯರಂ 20 ಕರ್ಣ ಕಾಠೋರ್ಯ ಬಾಣಾಳಿಗಳ್ ರೀತಿ ಅಪ್ರೀತಿಯಾಸೂತಿ ದುರ್ನೀತಿ ತಾ ಸೈಸದೇ ಕೋಪಸಂದೀಪನಾವೇಶದಿಂದಲ್ ಚಲದ್ಗಾತ್ರನಾಗೆದ್ದು ಪ್ರೋದ್ಯದ್ದಯಾಪಾತ್ರನಂತಿಪ್ಪ ತತ್ಪುತ್ರ ಸಂಹಾರದಲ್ ಚಿತ್ತವಂ ಪೆತ್ತವಂ ಪಾಪÀಸಂವೃತ್ತನೇತ್ರ ಪ್ರಮಾಕ್ಷೇಕ್ಷನಾಗಲ್ ಸಮ 30 ಕ್ಷೈಸಿ ದುಷ್ಟೋಕ್ತಿಗಳ್ ಬಾಗುತಾ ಕೂಗುತಾಸಾಧು ಸಧ್ಭಕ್ತಿಯಿಂದಲ್ ಮಹದ್ಭಕ್ತಿಯಿಂದಲ್ಲಿ ತನ್ನಲ್ಲಿ ಚೆನ್ನಲ್ಲಿ ಬದ್ಧಾಂಜಲಿಯಾಗಿ ಸಿದ್ಧಾಂತ ಸದ್ಭಕ್ತಿಯಿಂದಲ್ಲಿ ನಿಂದಿದ್ದ ಪ್ರಹ್ಲಾದ ಧೀಮಂತಗೇ ನಿರ್ಮಲಸ್ವಾಂತಗಾವೇಳೆ ಪಾದಾಹತವ್ಯಾಳಿಯಂತೇ ಭುಜಶ್ವಾಸಗಳ್ ಬೇಸಿಗಳ್ ಬೀಸುತಾಕಂದಗಾ ತಂದೆ ಸುಭಾಷಿಪಂ. ಹೋಯೆಲೋ ದುರ್ವಿನೀತಾಯೆಲೋ ಮಂದಬುದ್ಧೇಯೆಲೋಇಂತು ನೀ ಸ್ತಬ್ಧನಾದೇತಕೋ ವಂಶಘಾ40 ತೀಯೆಲೋ ಪಾಪಜಾತೀಯೆ ನೀ ಹೀಗೆ ಮಚ್ಛಾಸನಾತೀನಾಗಪ್ಪೊಡೇ ನಿನ್ನ ನಿನ್ನಾ ಯಮದ್ವಾರಕೇ ಕಳುಹುವೆಂ ನೋಡೆಲಾನಾನು ಕೋಪಿಷ್ಠನಾಗಿಪ್ಪೊಡೇ ಅಂಜಿ ಮೂರ್ಲೋಕಗಳ್ ಲೋಕಪಾನೀಕಗಳ್ ಕಂಪ ಕಾಣುತ್ತವಿಂಥಾ ಬಲಿಷ್ಠನ್ನ ನೀನೆನ್ನ ಸಂಪದ್ಬಲ ಶ್ರೀಯನಾಶ್ರೈಸದೇ ಬಿಟ್ಟರಿನ್ನಾವನಲ್ ನೀಂ ಬಲಶ್ರೀಯನಾಶ್ರೈಸುವೇಯೋ ಎಲಾ ಏಕೆ ಮಚ್ಛಾಸನಾತೀತನಾಗೂವಿಯೋ ಕಂದ ಪೇಳೆಂದರೇ, ತಂದೆಗಾ 50 ತಂದೆ ಕೇಳಯ್ಯ ಬ್ರಹ್ಮಾದಿ ಆಸ್ತಂಭಪರ್ಯಂತವುಂ ಜಂಗಮಸ್ಥಾವರಾತ್ಮ ಪ್ರಪಂಚೋಚ್ಚ ನೀಚ ಪ್ರಜಾನೀಕ ಯಾವತ್ತದಾವಾತನಾಧೀನದಲ್ಲಿಪ್ಪುದೋ ಆತನೇ ಎನ್ನಗೇ ನಿನ್ನಗೇಇನ್ನು ಮಿಕ್ಕಾದ ಚೈತನ್ಯಕೆಲ್ಲಾ ಬಲಶ್ರೀಯು ತಾನಾದನೇ ಕಾದನೇ ಕಾಲರೂಪೀಶ್ವರೋರುಕ್ರಮಾಕಾರನೆಂಬಾತನೇಆತನೇ ಆತನೇ ತೇಜ ಓಜಸ್ಸಹಾಸತ್ವ ಸಂಪದ್ಬಲ ಶ್ರೀಂದ್ರಿಯಾತ್ಮನ್ ಸ್ವಯಂ60 ಸ್ವಾಂತ ನೀನಿತ್ತು ಸರ್ವತ್ರ ಸಮಚಿತ್ತನಾಗಯ್ಯ ಎನ್ನಯ್ಯನೇ ನಿನ್ನಗಾಮೇಲೆ ವಿದ್ವೇಷ ಮಾಡೂವರಾರಿಲ್ಲವಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗವೆಂಬಾ ಮಹಾವೈರಿಗಳ್ ಕಳ್ಳರಂತೆಲ್ಲರುಂ 70 ದೇಹವೆಂಬೋ ಮಹಾರಾಜಧಾನೀ ವೃಥಾಹಾನಿ ಮಾಡೂವರಂಥಾವರಂ ಗೆಲ್ಲದೇಕೆಲ್ವರೀ ದಿಕ್ಕುಗಳ್ ಸರ್ವವಂ ಗೆದ್ದವೆಂತೆಂದು ಹಿಗ್ಗೂವರಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗ ಗೆದ್ದಾತಗೇ ಜ್ಞಾನಸಂಪೂತಗೇ ಸಾಧು ಸಂಭೂತ ಸರ್ವಂಸಮಂಚೇತಗಾಮೇಲೆ ತನ್ಮೋಹ ಸಂಜಾತವೆಂತಪ್ಪುದೋ ಶಾತ್ರವವ್ರಾತವೆಲ್ಲಿಪ್ಪುದಯ್ಯಾ ಸದಯ್ಯಾತ್ಮನೇ ತಿಳಿದು ನೋಡೆಂದು ತಾನಿಂದು ಮಾತಾಡಲು, ಶತ್ರುವಂತಿಪ್ಪ ಪು 80 ಇಂದು ನಾವೊಂದು ಪೇಳುತ್ತಿರುತ್ತಿದ್ದರೊಂದಕ್ಕೆ ಹತ್ತಾಗಿ ನೀನೇವನೋ ವಿಷ್ಣುವೆಂಬಾತ ಬೇರೊಬ್ಬ ತಾನಿಪ್ಪನೆಂದೂಹಿಸೂವೇಯ ಹೋ ಹೋಯೆಲಾಸಾವಿಗೀ ಬುದ್ಧಿ ನೀ ಸಿದ್ಧ ಮಾಡೀದಿ ಎಂಬೋದಿದಂ ವ್ಯಕ್ತವಂತೆಲ್ಲ ನಾಂ ಬಲ್ಲೆ ಇಂ 90 ತಲ್ಲದೇ ನಿನ್ನಗೀರೀತಿ ದುರ್ಬುದ್ಧಿ ಪುಟ್ಟೂವುದೇ ಮೃತ್ಯುಸಿದ್ಧರ್ಗೆ ವಿಷ್ಣುತ್ವ ಸಂಭಾಷೆಯಲ್ಲಿಚ್ಛೆ ಬೇಕಾಗಿ ಹೋದಲ್ಲದೇಬಲ್ಲೆನೆಲ್ಲಾ ಎಲೋ ಮಂದನೇ ಮಂದಭಾಗ್ಯೋಕ್ತಿಗಳ್ ಏಕೆ ನೀನಾಡುವೇ ಅಕ್ಕಟಾಎನ್ನಗಿನ್ನಾ ಜಗನ್ನಾಥನಿನ್ನಾವನೋಆತನೆಲ್ಲಿಪ್ಪ, ಸರ್ವತ್ರದಲ್ಲಿಪ್ಪ ನೀನೆಂದಡೇ ಡಿಂಭಕಾಡಂಭಕಾಡೋಣಗಳ್‍ಸಾಕು ಮಾಡಿನ್ನು ಮೇಲೀ ಸಭಾಸ್ತಂಭದಲ್‍ಶೀಘ್ರ ಸಂರಂಭದಲ್ ತೋರು ನೀ ತೋರದೇ 100 ಪೋದೆಯಾ ಇನ್ನು ನೀ ಮಾರುಮಾತಾಡದ್ಹಾಗೇ ಶಿರಚ್ಛೇದ ಮಾಡೂವೆನೋ ನಿನ್ನಗೀವೇಳೆಯಲ್ ವಿಷ್ಣುವೆಂತೆಂದದಾವಾತ ತಾನಡ್ಡ ಬಂದಾನೋ ನಾ ನೋಡುವೆಂ ವಿಷ್ಣುವೇಬೇಡಬೇಕಾದ ದಿಕ್ಕಾಗಿ ನಿನಗಿಪ್ಪಡೇಬೇಡಿಕೋ ಮೂರ್ಖನೇ ಎಂದು ಕ್ರೋಧಾಗ್ನಿಯಿಂದುರ್ಪಿ ದುರ್ಭಾಷೆಯಲ್ ತನ್ನ ಪುತ್ರನ್ನ ತಾದೂರುತಾ ಹಾರುತಾ ಕೈಲಿ ಖಟ್ ಪೆಟ್ಕವಂಖಡ್ಗವಂ ಕೊಂಡು ದುಷ್ಟಂ ಮಹಾದೋರ್ಬಲಿಷ್ಠಂ ಸ್ವಯಂ ಮುಷ್ಟಿಯಿಂದಲ್ಲಿ ಪೆಟ್ಟಿತ್ತನು. 110 ಆ ಭೀಕರಧ್ವಾನ ಸಂಭಿನ್ನ ದುಷ್ಟಾಸುರೀಗರ್ಭಸಂರಂಭವುಂ ಶುಂಭದಂಭೋದ ವೀಥೀ ಸಮಾರಂಭಿತೋ ಜೃಂಭವುಂ ವೈಷ್ಣವೋತ್ಕøಷ್ಟ ವಿಶ್ರಂಭವುಂ ಶಾತಕುಂಭೊಲ್ಲಸದ್ರತ್ನಚಿತ್ರಪ್ರಭಾಗುಂಭವುಂ ತತ್ಸಭಾಸ್ತಂಭವಂ ಆಗಲೇ ಬೇಗಲೇ ಘಳಾಘಳಾರಾವ ಉದ್ಭೂತವಾಗೆದ್ದು ಬ್ರಹ್ಮಾಂಡವೆಲ್ಲಾ ಪರಿಸ್ಫೋಟವಂ ಮಾಡುವಂತೊಪ್ಪೆ ಬ್ರಹ್ಮಾದಿಗಳ್ ತಮ್ಮ ಧಾಮಕ್ಕೆ ವ್ಯಾಘಾತವೇನಾದರುಂ ಬಾಹೋದೇನೋ ಇದೇನೆಂದು ವಿ 120 ಭ್ರಾಂತ ಚೇತಸ್ಕರಾಗಿಪ್ಪರಂತೇ ದುರಂತೇಕ್ಷಣಂಗಳ ಕುವರಾಗ್ರನಲ್ ತುಂಬುತಾಕತ್ತಿ ಕೈಹತ್ತಿ ಪುತ್ರನ್ನ ತಾ ಚಿತ್ರಹಿಂಸಿತ್ತು ಕೊಲ್ಲೂವೆನೆಂದಾಗ್ರಹೋಗ್ರ ಗ್ರಹಗ್ರಸ್ತನಾಗೇನು ಮೈತಿಳಿಯದೇ ಕೂಡಿಓಡ್ಯಾಡಿ ಬಾಹೋ ಹಿರಣ್ಯಾಖ್ಯಗಾ ವೇಳೆ ಕಾಲಾಡದದ್ಹಾಗೇ ಸಭಾಸ್ತಂಭದಲ್ ತನ್ಮಹಾರಾವ ತಾನಡ್ಡಕಟ್ಟಿಪ್ಪದಂತಾ ಮಹಾಧ್ವಾನ ಕೇಳುತ್ತಲೇ ನಿಂತನಾ ಹೇತುವಂ ಕಾಣದೇ ಆಗ ಆಯಾಸುರೀ ಹಿಂಡುಗಳ್ 130 ತುಂಬಿ ಕಾಳ್ಗಿಚ್ಚುಗಳ್ ಚೆಂದದಿಂಜಂತು ಸಂಘಕ್ಕೆ ಸಂತಾಪಗೈಸೇ ಛಿಟಾಛಿಟ್ ಛಿಟಾಂಗಾರಗಳ್ ಬೀಸೆ ಇದೇವುದೋಭೂತ ಉದ್ಭೂತವಾಗೊಪ್ಪಿತೆಂದಾಗ ಮೂರ್ಲೋಕವೆಲ್ಲಾ ಸಮುಲ್ಲೋಕವಾಗಿಪ್ಪುದಾವೇಳೆ ತದ್ಭøತ್ಯವಾಕ್ ಸತ್ಯವಂ ಮಾಡಬೇ 140 ಕಾಗಿ ಸರ್ವತ್ರ ತಾನ್ ತನ್ನ ವ್ಯಾಪ್ತತ್ವವಂಪಥ್ಯವಾಗಿಪ್ಪವೋಲ್ ಅದ್ಭುತಾಕಾರ ಪೊತ್ತಂ ಜಗದ್ಭರ್ತ ತಾನೊಂದೆ ಸಿಂಹಾಕೃತೀಯಾಗದೇ ಮತ್ರ್ಯಮೂತ್ರ್ಯಲ್ಲದೇ ತತ್ಸಭಾಸ್ತಂಭದಲ್ ಡಿಂಬ ಸಂಭಾವನಕ್ಕಾಗಿ ಸಂಭೂತನಾದಂ.ದಿತೀಪುತ್ರನಾ ರೂಪವಂಕಂಡಿದೇನೋ ಮಹಾ ಚಿತ್ರವಾಗಿಪ್ಪುದೇಸಿಂಹದಂತಲ್ಲದೇ ಮತ್ರ್ಯನಂತಲ್ಲದೇಯಾವುದೀ ಭೂತವೆಂತೆಂದು ಮೀಮಾಂಸಮಾನಾತ್ಮನಾದಂ.ಜಗತ್ಸ್ಯಾಮಿ ತಾನಾಗಲೇ 150 ತಪ್ತಭಾಂಗಾರ ಶೃಂಗಾರವಲ್ಯಂತೆ ಕಂಗಳ್ ಸಮುದ್ಯತ್ಸಟಾ ಕೇಸರಂಗಳ್‍ವಿಜೃಂಭತ್ಕರಾಳಾಸ್ಪದಂ ಉಗ್ರನಾಸಾಸಮುಚ್ಚಾಸ್ವ ನಿಶ್ವಾಸಗಳ್ ಸಂಚಲದ್ವಸ್ತವ್ಯಾಳ ಕ್ಷುರಾಂತೋಗ್ರ ಜಿಹ್ವಾಗ್ರ ಲೇಲೀಹನಂಗಳ್ ಭ್ರಮದ್ಭ್ರೂಲ್ಪಲಂಗಳ್ ಹನೊರೋಷಭೀಷ್ಣಂಗಳುಂ ಊಧ್ರ್ವಕರ್ಣಂಗಳುಂ ಭೂಮಿ ಭೃ ತ್ಕಂದರಾಶ್ಚರ್ಯವವ್ಯಾತ ಘೋರಾಸ್ಯನಾಸಾಪುಟಂಗಳ್ ಅದೀರ್ಘೊನ್ನತಗ್ರೀವವುಂದೀರ್ಘದಂತೊಪ್ಪುವೋ ದೇಹವಂ ವಿಸ್ತøತೋ160 ಶುಂಡಾಲ ಶುಂಡಪ್ರಕಾಂ170 ಡ ಪ್ರಚಂಡೋಲ್ಲಸದ್ದೋಹ ಸಾಹಸ್ರ ದೀಪ್ತಾಯುಧಾಭೋ ನಖಾನೀಕವುಂ ಚಕ್ರ ಶಂಖಾದಿ ನಾನಾಯುಧ ಶ್ರೇಷ್ಠ ವಿದ್ರಾವಿತಾsಭದ್ರ ರಕ್ಷಃ ಪಿಶಾಚಾಸುರೋದ್ರೇಕವುಂಪ್ರೋನ್ನಿತಂಬೋರು ಸತ್ಸಾನು ಜಂಘಪ್ರದೇಶಾವೃತ ಪ್ರೋಲ್ಲಸತ್ಪೀತ ಕೌಶೇಯವುಂಬದ್ಧಕಾಂಚೀಕಟಿಸ್ಥಾನವುಂ ಮಂಜುಮಂಜೀರ ಸಂಚಿನ್ನನಾದಾಂಘ್ರಿಕಂಜಾತ ವಿನ್ಯಾಸವುಂ ಕೋಟಿ ಮಾರ್ತಾಂಡ ಸಂಕಾಶವುಂಪೋಲ್ವುದಂಥಾ ದುರಾಲೋಕವಂತಿಪ್ಪ ಜ್ವಾ180 ಲಾ ನೃಸಿಂಹಾಕೃತಿ ಸ್ವಾಮಿನಂ ನೋಡುತಾದೃಷ್ಟಿಗಳ್ ಬಾಗೆ ತಾ ನಿಂತು ನನ್ನ ವರಜಾರಾತಿಯಾದ ಸ್ವಯಂ ಜ್ಯೋತಿ ಈ ರೀತಿ ತಾನಿಂದಿಗೇ ನಾರಸಿಂಹಾಕೃತೀಯಾಗಿ ನಾಂಪುತ್ರಂ ಸಂಹಾರಕುದ್ಯುಕ್ತನಾಗಿಪ್ಪೊಡೇಎನ್ನ ಸಂಹಾರಕಾಗಿಲ್ಲಿಗೇ ಬಂದನೋಇನ್ನು ಮೇಲೀತನಿಂದೆನ್ನಗೇ ಮೃತ್ಯು ತಾಸಿದ್ಧವಾಂತಿಪ್ಪುದೇನೋ ಪುರಾಣ ಪ್ರಸಿದ್ಧೋಕ್ತ್ಯಭಿವ್ಯಕ್ತಿಗೈತೇನಹೋ ಎಂದು ಮಾತಾಡುತಾ ನಿಂತು ಉದ್ಯದ್ಗದಾಧಾರಿ ತ 190 ಪೂರ್ವದಲ್‍ಅಸ್ಯತೇಜೋಂಶದಿಂದಲ್ ಜಗಧ್ವಾಂತ ಯಾವತ್ತುಮಿಂ ತಾ ಸ್ವಯಂ ಪಾನಮಾಡಿಪ್ಪ ಸತ್ಯಾತ್ಮಗೀ ನಾರಸಿಂಹಾತ್ಮಗೇ ಈ ಹಿರಣ್ಯಾಸುರ ಶ್ರೇಷ್ಠ ಸಂಹಾರ ಹೆಚ್ಚಲ್ಲವಂತಾದರುಂ ಲೋಕದೃಷ್ಟ್ಯಾನುಸಾರ ಕ್ರಿಯಾಕಾರಿಯಾಗಿಪ್ಪ ನೃಸಿಂಹನುದ್ಯದ್ಗದಾಧಾರಿ ತಾನಾಗಿ ಸದ್ವಿದ್ಯುದಾಭ್ಯೋದ್ಯದು 200 ದ್ವೇಗವೇಗೋರು ಸಂಪದ್ಗದಾ ದಂಡವಂಕೊಂಡು ಯುದ್ಧಕ್ಕೆ ಬಾಹೋ ಮಹಾದೈತ್ಯವರ್ಯನ್ನ ತಾ ನೋಡಿ ರೋಷೋಜ್ವಲ ಜ್ವಾಲೆಗಳ್‍ಲೇಲಿಹಾನೋಲ್ಲ್ಲಸಜ್ಜಿಹ್ವೆಯಿಂದಲ್ ಪ್ರಕಾಶೈಸುತಾ ಚೀರುತಾಗಾಟ್ಟಹಾಸಕ್ರಮನ್ಯಾಸದಿ ಹಾರುತಾ ಕೋಟಿ ಸೂರ್ಯಪ್ರಭಾಬೀರುತಾ ಆ ಗರುತ್ಮಂತ ಕಾಳಾಹಿಂಪಿಡಿವನಂತೊಪ್ಪಿ ತಾನಾ ದಿತೀಪುತ್ರನಲ್‍ನೂಕಿದಂ ಶೀಘ್ರದಲ್ ಪಿಡಿದನಾ ದೈತ್ಯರಾಜೇಂದ್ರನಾವೇಳೆ ತದ್ಧಸ್ತದೋಳ್ ಸಿಕ್ಕದೇ 210 ಸುಕ್ಕದೇ ಘಕ್ಕನೇ ಬಿಡಿಸಿಕೊಂಡಾ ಗದಾದಂಡವಂ ಕೊಂಡು ಸನ್ನದ್ಧ ಸದ್ಯುದ್ಧವಂಮಾಡುವೋನಂತೆ ಯಾವಾಗ ನೃಸಿಂಹನಲ್‍ಸಿಕ್ಕಿ ಮತ್ತೇಬಿಡೂವಾದನಾ ವೇಳೆಯಲ್‍ಶರ್ವ ಶಕ್ರಾದಿ ದಿಕ್ಪಾಲಕಾನೀಕವುಂಸೂರ್ಯಚಂದ್ರಾದಿ ಸರ್ವಗ್ರಹಕ್ರ್ಷಾವಳೀಲೋಕವುಂ ಮೇಘಸಂತಾನದೋಳ್ ಲೀನವಾಗಿದ್ದು ಇನ್ನೇನು ಈ ದೇವತಾರಾತಿ ಈನಾರಸಿಂಹಾತ್ಮನಲ್ ಸಿಕ್ಕದೇ ದಕ್ಕದಂತಿಪ್ಪನೇ ಈತನೀ ದುಷ್ಟ ದೈತ್ಯನ್ನ ಗೆ 220 ಲ್ಲಾರನೋ ಗೆಲ್ವನೋ ಎಂದು ತದ್ವೀರ್ಯವಂತಿಳಿಯದೇ ಭ್ರಾಂತಚಿಂತಾಂತರಂಗೋದ್ಯದುದ್ವೇಗದಿಂ ಕಾಂಬಂತಿಪ್ಪುದು.ಆಮೇಲೆ ಢಾಲ್ ಕತ್ತಿ ಕೈಗೊಂಡು ಆಯಾಸದಿಂದಲ್ಲಿ ಆ ದೈತ್ಯನಾನಾರಸಿಂಹಾತ್ಮನಲ್ ಸಂಗರ ಶ್ರಾಂತಿ ಮತ್ತೇನು ತಾ ಕಾಣದೇ ದೂಕಿದಂ ತಾಕಿದಂಸೋಕಿದಂ ಅಂಘ್ರಿವಿನ್ಯಾಸಗಳ್ ಕೂಡಿ ತಾಮೇಲೆಯುಂ ಕೆಳಗೆಯುಂ ಶ್ಯೇನಪಕ್ಷಂತೆ ಸುತ್ತಾಡುತಾ ಛಿದ್ರವಂ ಕಾಣದೇ ತನ್ನನೇಪಿಡಿವುದಕ್ಕಾತನಂತೋಡುತಾ ಬಾಹೊ ಬ 230 ಲ್ಲಿಷ್ಠನಾ ಅಟ್ಟಹಾಸೈಸಿಯುಕ್ಕೇಸರಂಗಳ್ ಪ್ರಸಾದೈಸಿ ಕ್ರೂರಾಹಿತಾನಂದಘಗ್ರಾಹಿಯಂತೇ ಸ್ವಭಾ ಸಾಸಿರಂ ಸೂಸಿ ಜಂಘಾಲ ಲೀಲಾ ಸಮುಲ್ಲಂಘನಾ ಗೋಪದಿಂಹಾರಿಯಾ ನಾರಹರ್ಯಕ್ಷನಾ ದೈತ್ಯದಕ್ಷನ್ಪಿಡಿರ್ದಂ ಫಟಾಫಟ್ ತಲಾಘಾತವಂಗೈಲ್ಬಡಿರ್ದಂ ಥಟಾಥಟ್ ಪದಾಘಾತದಿಂ ದಲ್ ಹೊಡೆರ್ದಂ ಗದಾಘಾತದಿಂದಲ್ ಮಹೋರಸ್ಕಿಡಿರ್ದಂ ಸಭಾದ್ವಾರದಲ್ ಹಾಕಿ ಭಾಸ್ವನ್ನಖ ಶ್ರೇಣಿಯಿಂದಲ್ ಫಟಾಫಟ್ ಗುರು240 ತ್ಮಂತಕಾಲಾಹಿನಂ ಸೀಳುವೋ ರೀತಿ ಜಂಭಾರಿದಂಭೋಳಿಯಂತಾಗಲುಂ ಸೀಳುತಿರ್ದಾಮಹಾದೇವನ್ನಾ ಹಗಲ್ ರಾತ್ರಿಯೊಂದಲ್ಲದ್ಹಾಗೇ ದಿವಾಸಂಧಿಯಲ್ ಸೀಳಿದಂ.ಘೋರ ಸಂರಂಭ ದಂಷ್ಟ್ರೇಕ್ಷವ್ಯಾವೃತ್ಕರಾಳಾಕ್ಷನಾಗಿ ಸ್ವಜಿಹ್ಪಾಗ್ರದಿಂದಲ್ ಲಸದ್ವ್ಯಾತ್ತ ವಕ್ತ್ರಾಂತ ಶೋಣಿಯ ಮಾನಾಧರಾದ್ಯಂತವಂ ಲೇಲಿಹಾನೋಗ್ರವಂ ತೋರುತಾರಾಕ್ಷಸ ಶ್ರೇಷ್ಠನಂ ಪಿಡಿದು ವಕ್ಷೋನ್ನತಸ್ಥಾನವಂ ತೋಡಿ ಕಾಸಾರವಂ ಮಾಡುತಾ 250 ತುಂಬಿ ಶುಂಡಾಲ ಸಂಹಾರದಲ್ ಮುಂಚುವೋ ಘೋರ ಪಂಚಾನನೋದಾರ ಲೀಲೆಂಗಳಂ ಬೀರುತಾ ರಾಕ್ಷಸಾಧ್ಯಕ್ಷ ವಕ್ಷಸ್ಸಿನೋಳ್ ಕಿತ್ತುತಾ ಹಾರಗಳ್‍ಮಾಡಿಕೊಂಡೊಪ್ಪಿ ತದ್ರಕ್ತ ಸಿಕ್ತಾನನೋದ್ಯಚ್ಛಟಾ ಕೇಸರಂಗಳ್ ಪ್ರಕಾಶೈಸುತಾ 260 ದೈತ್ಯರಾಜೇಂದ್ರನಾ ಪ್ರಾಣಗಳ್‍ಗೊಂಡನಾಮೇಲೆ ಸುತ್ತಿದ್ದ ತದ್ಭಂಧು ಸಂದೋಹದಲ್ಲಿದ್ದನೇಕಾಸುರೀನೀಕವಂ ಸಾಯುಧೋದ್ರೇಕವಂ ಅಲ್ಲಕಲ್ಲೋಲವಂ ಮಾಡಿ ಚಂಚನ್ನಖಶ್ರೇಣಿಯಿಂ ಸಂಹರಂ ಮಾಡಿದಂ.ಆಗ ತದ್ಭೀಕರಾಕಾರವಂ ಕಾಂಬ ಶಕ್ತ್ಯಾವುದಂ ಕಾಣದೇ ತತ್ಸಟಾ ಕೇಸರೋದ್ಭೂತ ಸಂಘಾತಗಳ್ ಘೋರ ಜೀಮೂತಗಳ್‍ಸರ್ವವಂ ನೋಡುತಾ ಮತ್ರ್ಯಸಿಂಹೋಗ್ರದೃಷ್ಟಿಜ್ವಲಜ್ವಾಲೆಗಳ್ ಸೈಸದೇ ಸೂರ್ಯಚಂ270 ಪಾದ ಸಂಘಟ್ಟದಿಂದಲ್ ಧರಾಚಕ್ರವಲ್ಲಾಡಿತಾಘೋರ ತೇಜಸ್ಸಿಗವಕಾಶಂಗಳಾಕಾಶವೂಬಾಡಿತಾ ಶಾಕಿನೀ ಡಾಕಿನೀ ಮುಖ್ಯ ದು 280 ಷ್ಟಗ್ರಹಾನೀಕವುಂ ಭೀತಿಗೊಂಡೋಡಿತಾಮೇಲೆ ಉದ್ಯತ್ಸಭಾ ಮಧ್ಯೆ ದೈತ್ಯೇಂದ್ರ ಸಿಂಹಾಸನಸ್ಥಾನದಲ್ ನಾರಸಿಂಹಂ ಸಮಾಸೀನನಾಗಿಪ್ಪನಾ ತೇಜ ಓಜ ಪ್ರಭಾಪುಂಜರಂಜನ್ನ ಭಾಸ್ವತ್ಕರಾಳೋಗ್ರ ಜಿಹ್ವ ಸ್ಫುರದ್ದಂಷ್ಟ್ರ ವಕ್ತ್ರನ್ನ ಬಿಭ್ರಲ್ಲಸದ್ಭ್ರೂತನಂ ಆ ಮಹಾಕೋಪ ಸಂರಂಭ ಗಂಭೀರ ನೇತ್ರನ್ನ ಕಣ್ಣೆತ್ತಿ ಕಾಂಬೋದರಲ್‍ಬ್ರಹ್ಮ ರುದ್ರಾದಿಗಳ ಶಕ್ತಿಯುಂ ಸಾಲದೇದೂರದಲ್ ಪಾಶ್ರ್ವ ಭಾಗಸ್ಥರಾಗಿಪ್ಪರಂತೇ.290 ಆಗ ಮೂರ್ಲೋಕ ಸಂತಾಪಿಯಾಗಿಪ್ಪ ದೈತ್ಯನ್ನ ನಾರಾಯಣಂ ನಾರಸಿಂಹಾಕೃತೀಯಾಗಿ ಸಂಹಾರವಂ ಮಾಡಿದಂ ಎಂಬುದಾವಾರ್ತೆ ಕೇಳುತ್ತಲೇ ದೇವನಾರೀಜನಂಗಳ್ ಪ್ರಹರ್ಷಾನನೋತ್ಪುಲ್ಲರುಲ್ಲಾಸದಿಂವಾಸಿತಾಮೋದ ಮಂದಾರ ಕುಂದಾರವಿಂದಾದಿ ಸತ್ಪುಷ್ಟ ಸಂತಾನ ವರ್ಷÀಂಗಳಂವರ್ಷಿಸುತ್ತಿಪ್ಪರಾಕಾಲಾವಾಕಾಶದಲ್‍ನಿಂತು ಕಾಣೂವರಾ ದೇವದೇವೀ ಸಮೂಹಂಗಳಾಯಾವಿಮಾನಂಗಳೆಲ್ಲಾ ಮಹಾ 300 ಸಂಕುಲೀ ಭೂತವಾಗಿಪ್ಪವಾ ದೇವತಾದುಂದುಭಿಧ್ವಾನ ಇಂಬಾಗಿ ತಾ ದೇವಗಂಧರ್ವ ಸಂಗೀತ ನಾಟ್ಯಂಗಳಿಂದಪ್ಸರಾಕಾಮಿನೀ ತಾನ ಗಾನಂಗಳಿಂದಾಗ ಆಕಾಶವುಂ ತುಂಬಿತಾ ಬ್ರಹ್ಮರುದ್ರೇಂದ್ರ ಮುಖ್ಯಾಮರ ಶ್ರೇಣೀಗಳ್ ಪಿತೃಗಳ ಮನ್ವುಗಳ್‍ಸಿದ್ಧ ವಿದ್ಯಾಧರಾನೀಕಗಳ್À ಅಪ್ಸರಾ ಕಾಮಿನೇರಾ ಪ್ರಜಾಪಾಲ ಗಂಧರ್ವರಾಯಕ್ಷ ಕಿಂಪುರುಷರಾ ಚಾರಣಾನೀಕವಾಕಿನ್ನರಸ್ತೋಮ ನಂದಾ ಸುನಂದಾದಿ ತ 310 ತ್ಪಾರ್ಷದಾನೀಕವೆಲ್ಲಾ ಶಿರೋಭಾಗದಲ್‍ಪಾಣಿಗಳ್ ಜೋಡಿಸೀತೆಲ್ಲ ಮುನ್ನಾತಿ ದೂರಸ್ಥರಾಗಿದ್ದು ನಿಂತಾಮೃಗೇಂದ್ರಾಸನಾಸೀನನಾಗಿಪ್ಪ ಅತ್ಯುಗ್ರ ತೇಜಸ್ವಿನಂಮೆಲ್ಲನೇ ಬೇರೆ ಬೇರಾಗಿ ಕೊಂಡಾಡುತಾನಿಂತರಾವೇಳೆಯಲ್ ಬ್ರಹ್ಮ ತಾ ಭಾಷಿಪಂನಿನಗೆ ವಂದೀಸುವೆಂ ತಂದೆ ನೀನೆ ಅನಂತಂ ದುರಂತ್ಯೋರು ಶಕ್ತ್ಯುಳ್ಳವಂ ಲೋಕಪಾವಿತ್ರ್ಯ ಕಮ್ರ್ಯಂ ಮಹಾಶ್ಚರ್ಯ ವೀರ್ಯ ಜಗತ್ಸøಷ್ಟಿ ಸಂರಕ್ಷ ಸಂಹಾರಗಳ್ ಲೀಲೆಯಿಂ320 ದಲ್ ಸದಾ ಮಾಳ್ಪೆಯೋ ಅವ್ಯಯಾತ್ಮನ್ನೆ ನೀ ನೆಂದನು.ಈಶ ತಾ ಬಂದೆಲೋ ತಾತನೇನಿನ್ನಗೀ ಕೋಪ ಬಾಹೋದಕಿಂದಾ ಯುಗಾಂತಾಖ್ಯ ವೇಳ್ಯಲ್ಲವೋ ಕ್ಷುಲ್ಲನೀ ದೈತ್ಯನೀವೇಳೆ ನಿನ್ನಿಂದ ತಾನ್ ಮೃತ್ಯುಪಾಲಾದನಂತಿನ್ನುಮೇಲ್ ಕೋಪ ಸಂಕ್ಷೇಪ ಮಾಡಯ್ಯ ಈದೈತ್ಯ ಪುತ್ರನ್ನ ಪ್ರಹ್ಲಾದನಂ ಸರ್ವದಾನಿನ್ನ ಭಕ್ತನ್ನ ಸಂರಕ್ಷಿಸೋ ಭಕ್ತವಾತ್ಸಲ್ಯದಿಂದೆಂದನು.ಇಂದ್ರ ತಾ ನಿಂತೆಲೋ ಸ್ವಾಮಿಯೇ ಅಣ್ಣತಮ್ಮಂದ್ರ ದೀಟಾಗಿ ನೀನೇ ಸದಾ ನಮ್ಮ ಸಂ330 ರಕ್ಷಿಸೂವೇಯೊ ನಿನ್ನಿಂದಲಾ ಯಜ್ಞ ಭಾಗಂಗಳುಂ ನಮ್ಮಗೇ ಮತ್ತೆ ಉಂಟಾದವಯ್ಯಾ ಹಿರಣ್ಯಾಸುರಂಗಾದುದೀಗೆಮ್ಮ ಸುಸ್ವಾಂತಗಳ್ ನಿನ್ನಗಾವಾಸಯೋಗ್ಯತ್ವ ಪೊಂದಿಪ್ಪುವಂತೆ ವಿಕಾಸ್ಯೆಸಿತೋ ನಿನ್ನ ಶುಶ್ರೂಷೆ ಬೇಕೆಂಬ ಲೋಕಾಳಿಗೇ ಕಾಲಸಂಗ್ರಸ್ತವಂತಿಪ್ಪ ಲೋಕಾಳಿಯಲ್ ಯಾವದೂಲಕ್ಷ್ಯವಿಲ್ಲಂತೆ ಮುಕ್ತ್ಯಾದರುಂ ಹೆಚ್ಚು ನಿಶ್ಬೈಸುವಂತೇ ನೃಹರ್ಯಾತ್ಮನೇ ಮಿಕ್ಕ ಸಂಭೂತಿಯಿಂದಾಗಬೇಕಾದುದೇ ನಿಪ್ಪುದೆಂದಂ.340 ಬೊಮ್ಮ ನೀನೆಮ್ಮ ಶ್ರೇಯಸ್ಸಿಗೆ ಮುನ್ನ ನಿನ್ನ ಸ್ವತೇಜಾಂಶವನ್ನೇ ತಪೋಯೋಗವಂ ನಮ್ಮಗೇಕೊಟ್ಟೆಯೊ ಆ ತಪಸ್ಸಿಂದ ನಿನ್ನಲ್ಲಿಹೋವಿಶ್ವವೆಲ್ಲಾ ಬಹೀರಂಗ ಮಾಡೀದೆಯೋನಮ್ಮದಂಥಾ ತಪಸ್ಸಂ ಹಿರಣ್ಯಾಸುರಶ್ರೇಷ್ಠತಾ ಕದ್ದನಂತಿದ್ದನೇ ಈಗ ನೀನೀ ಜಗದ್ರಕ್ಷಣಕ್ಕಾಗಿಯೇ ಭಕ್ತ ಸಂರಕ್ಷನೇ ನಾರಹರ್ಯಕ್ಷನಾಗಿನ್ನು ರಕ್ಷೋಗಣಾಧ್ಯಕ್ಷ ವಕ್ಷಸ್ಕವಂ ಸೀಳಿ ನೀ 350 ನಮ್ಮಗೆಲ್ಲಾ ತಪೋಯೋಗವಂ ಮತ್ತೆ ತಂದಿತ್ತೆಯಂತೆಂದರು.ಪಿತೃಗಳ್ ನಿಂತೆಲೋಧರ್ಮರೂಪೀಯೆ ಇಂಥಾ ಕ್ರಿಯಾಲಾಪಗಳ್‍ಪುತ್ರರಿಂದಲ್ ತಿಲೋದಂಗಳಿಂದಲ್ ಮಹಾಪುಣ್ಯ ತೀರ್ಥಂಗಳಲ್ ಕ್ಷೇತ್ರ ಪಾತ್ರಂಗಳಲ್‍ನಮ್ಮ ನಮ್ಮಲ್ಲಿ ಇಂತಿತ್ತ ಶ್ರಾದ್ಧಂಗಳಂತನ್ನ ಪ್ರೀತ್ಯರ್ಥವೆಂತಿರ್ದನೈ ನಾಥ ಸಂಪೂರ್ಣ ಸೌಭಾಗ್ಯ ಸಂಸ್ಥಾನಿಯೋ ನೀನು ಭಾಸ್ವನ್ನಖ ಶ್ರೇಣಿಯಿಂದಲ್ ಮಹಾ ದೈತ್ಯವಕ್ಷಸ್ಕವಂ ಸೀಳಿ ಇತ್ತಾವ ಪಾಂತ್ರಾತ್ಮಿಕಾ 360 ಶ್ರಾದ್ಧ ನಮ್ಮಲ್ಲಿ ತಾ ಸೇರಿತೈ ನಾರಹರ್ಯಾತ್ಮನೇ ನಿನ್ನಗೇ ನಾವು ಸಾಷ್ಟಾಂಗ ಪ್ರಣಾಮಗಳ ಮಾಡುವೇವೆಂದರು.ಸಿದ್ದರೆಲ್ಲಾಂಜಲೀಬದ್ಧರಾಗೆದ್ದೆಲೋಅಷ್ಟಸಿದ್ಧಾತ್ಮನೇ ನಮ್ಮಲಿದ್ದಾ ಮಹಾಯೋಗ ಸಿದ್ಧಿಂಗಳೆಲ್ಲಾ ತಪೋಯೋಗಸಾಮರ್ಥ್ಯದಿಂ ಕದ್ದನೇ ಗೆದ್ದೆನೆಂತಿದ್ದ ದೈತ್ಯ ಪ್ರಬುದ್ಧನ್ನ ವಕ್ಷಸ್ಕ ಸಂಭಿನ್ನವಂಮಾಡಿಯಾ ನಮ್ಮಗಾಧಾರವಾಗಿದ್ದ ಸದ್ಯೋಗ ಸಿದ್ಧಿಂಗಳಂ ಮತ್ತೆ ನೀನಿತ್ತೆಯೋ 370 ನಾರಸಿಂಹಾತ್ಮ ನಾವೆಲ್ಲರುಂ ನಿನ್ನಗೇವಂದನಂಗಳ್À ಸಮರ್ಪೀಂಸುವೇವೆಂದರು.ಆಮೇಲೆ ವಿದ್ಯಾಧರಾನೀಕಗಳ್ ನಿಂತೆಲೋಸರ್ವ ವಿದ್ಯಾತ್ಮನೇ ನಮ್ಮಲಿದ್ದಾ ಪೃಥಕ್‍ಧಾರಣಾಯೋಗ ಸಂಪಾದ್ಯಗಳ್ ವಿದ್ಯೆಗಳ್‍ನಷ್ಟಗೈಸಿದ್ದನತ್ಯಂತ ದರ್ಪಿಷ್ಠನೀಅಜ್ಞ ದೈತ್ಯೇಂದ್ರನಾ ಯಜ್ಞದೋಳ್‍ಬದ್ಧ ಪಶ್ವಂತೆ ತಾನಿಂದು ನಿನ್ನಿಂದಲಾ ಮೃತ್ಯುಪಾಲಾದನೇ ನಮ್ಮ ಸದ್ವಿದ್ಯೆಗಳ ಮತ್ತೆ ನಮ್ಮಲ್ಲೆ ಬಂದಿಪ್ಪುದಯ್ಯಾ ನೃಹರ್ಯಾತ್ಮ ತು 380 ನಾಗರಾವೇಳೆಲೋsನಂತನೇ ನಮ್ಮಲಿದ್ದಾ ಮಹಾರತ್ನಗಳ್‍ಮಾನಿನೀ ರತ್ನಗಳ್ ತಾ ಬಲಾತ್ಕಾರದಿಂಗೊಂಡನೀ ಪಾಪಿ ದೈತ್ಯನ್ನ ವಕ್ಷಸ್ಕವಂಸೇದಿ ಈ ರತ್ನಗಳ್ ಮತ್ತೆ ನೀ ನಮ್ಮಗೇಸೇರುವಂತೇ ದಯಾಮಾಡಿದೀಯೈ ನಮಸ್ತೇ ನಮೋ ಎಂದರು.ಮನ್ವುಗಳ್‍ನಿಂತೆಲೋಧರ್ಮ ಸಂರಕ್ಷನೇ ನಾವು ನಿನ್ನಾಜ್ಞೆಯಿಂದೀ ಪ್ರಜಾನೀಕಕೇರ್ಪಾಟು ಮಾಡಿದ್ದ ಮರ್ಯಾದೆಗಳ್ ಸರ್ವವೀ ದೈತ್ಯ ತಾ ಕೆಡಿಸಿ ಕ390 ಲ್ಲೋಲವಂ ಮಾಡಿ ನಿನ್ನಿಂದಲೀ ಈಗ ಸಂಹಾರಿಸಲ್ಪಟ್ಟನೇ ಇನ್ನು ಮೇಲ್ ನಾವು ನಿಮ್ಮುಟ್ಟಕ್ತಿಗಳ್ ನಡೆಸುವೇವೆಮ್ಮಗಾಜ್ಞಾಪಿಸೋನಾವು ತ್ವದ್ದಾಸ್ಯವಂ ಬಯಸಿದೇವೆಂದರು.ಆ ಪ್ರಜೇಶ್ಯಾಳಿಗಳ್À ನಿಂತು ಕೇಳೋ ``ಪ್ರಜೇಶಾ ವಯಂ ತೇ ಪರೇಶಾಭಿಸೃಷ್ಟಾ ನ ಯೇನ ಪ್ರಜಾ ವೈ ಸೃಜಾಮೋ ನಿಷಿದ್ಧಾಃ ಸ ಯೇಷ ತ್ವಯಾ ಭಿನ್ನವÀಕ್ಷಾನು ಶೇತೇ ಜಗನ್ಮಂಗಲಂ ಸತ್ವಮೂರ್ತೇವತಾರಃ’’ ಪ್ರಭೋಎಂದರು. ಆಗ ಗಂಧರ್ವರೆಲ್ಲಾ ಎಲೋ 400 ಸ್ವಾಮಿಯೇ ನಾವು ನಿಮ್ಮ ಪ್ರಸನ್ನಾವತಾರೈಕ ಲೀಲಾ ಕಥಾಸೂಕ್ತಿಗಳ್ ನಾಟ್ಯ ಶೃಂಗಾರ ಚೇಷ್ಟಾ ಕಳಾದರ್ಶನಾದ್ಯಭಿನಯಾವ್ಯಕ್ತಿಗಳ್ ತಾನ ಗಾನಾನುಸಂಧಾನ ಸಮ್ಮೋಹಿನೀ ಶಕ್ತಿಗಳ್ ಕೂಡಿ ಆಶ್ರಾಂತವುಂನಿನ್ನ ಕೊಂಡಾಡುತಾ ಗಾಯಕಶ್ರೇಷ್ಠರಂತಿಪ್ಪೆವೇ ತನ್ನ ಸದ್ವೀರ್ಯ ತೇಜೋಬಲೋಜಸ್ಕದಿಂದಲ್ ಪ್ರಭೋ ನಮ್ಮ ಸಾಮಥ್ರ್ಯಗಳ್‍ತನ್ನಗಾಧೀನ ಮಾಡಿಟ್ಟುಕೊಂಡಿದ್ದನೀದೈತ್ಯನೀ ವೇಳೆ ನಿನ್ನಿಂದ ಪಂಚತ್ವವಂ 410 ಆ ಯಕ್ಷರೆಲ್ಲಾ ಎಲೋ- 420 ಧ್ಯಕ್ಷನೇ ತ್ವನ್ಮನೋಭಿಜ್ಞ ಕರ್ಮಂಗಳಿಂದಲ್ ಸದಾ ನಿನ್ನಗೇ ಭೃತ್ಯರಾಗಿಪ್ಪ ನಾವೆಲ್ಲರುಂ ದೈತ್ಯಗೇ ಪಾಲಕೀ ಹೊರ್ವರಂತಾದೆವೇ ನಮ್ಮ ಸಂತಾಪಗಳ್ ಬಲ್ಲ ನಿನ್ನಿಂದಲೀ ದೈತ್ಯನೀ ವೇಳೆ ಪಂಚತ್ವವಂಹೊಂದಿದಂ ನಾವು ಸಂತೋಷವಂ ಕಂಡೆವಯ್ಯಾ ನೃಪಂಚಾಸ್ಯನೇ ಪಂಚವಿಂಶಾಖ್ಯ ನೀ ನೆಂದರು. ಆಮೇಲೆ ಕಿಂಪೂರುಷಾನೀಕವುಂಬಂದೆಲೋ ಪುರುಷನೇ ನಾವು ಕಿಂಪೂರುಷರ್‍ನೀಂ ಮಹಾಪೂರುಷಂ ಈಶ್ವರಂ ನಿನ್ನ ಕೈ 430 ನಿತ್ಯ ಕೊಂಡಾಡುತಾಭೂರಿಯೂಟಂಗಳಂ ಉಣ್ಣುತಾಲಿದ್ದೆವೇತಾನಿವೆಲ್ಲಾ ಪರಿಗ್ರಾಹಿಸೀ ದೈತ್ಯ ನಿನ್ನಿಂದ ಪೆಟ್ಟಾಂತು ತಾ ಪೋದನೇ ದೈವದಿಂ440 ಕಿನ್ನರ ಪ್ರಾಣಿಗಳ್‍ಪೂರ್ವದಲ್ ನಿನ್ನ ದಾಸಾನುದಾಸರ್ಗಳಾಗಿಪ್ಪೆವೀ ದೈತ್ಯ ನಮ್ಮಿಂದ ತಾ ಬಿಟ್ಟಿಕಾರ್ಯಂಗಳೆಲ್ಲಾ ಸದಾ ಮಾಡಿಸೂವಂ ವiಹಾದು:ಖಗೋಣಿಸುವಂ ಇಂಥ ಪಾಪಿಷ್ಠ ದೈತ್ಯನ್ನ ಸಂಹಾರ ವಂ ಮಾಡಿದೀ ಇನ್ನು ನೀನಮ್ಮಗೆಲ್ಲಾ ಸಮುಲ್ಲಾಸಗಳ ಶ್ರೇಯಗಳಕೊಟ್ಟು ಸಂರಕ್ಷಿಸೋ ನಾರಹರ್ಯಕ್ಷನೇ ಎಂದರು. 450 ಅಚ್ಯುತದ್ವಾರಪಾಲಾಳುಗಳ್‍ನಿಂತೆಲೋ ಭೂಮನೇ ಕಂಡೆವೋ ಇಂದಿಗೇನಾರಹರ್ಯದ್ಭುತಾಕಾರವಂ ಲೋಕಕೆಲ್ಲಾ ಸುಖಾನಂದವಂ ನಮ್ಮಗಾಧಾರ ನೀನಲ್ಲದಿನ್ನಿಲ್ಲವೋ ಈಗ ವೈಕುಂಠದಲ್‍ನಿನ್ನ ದ್ವಾರಸ್ಥನಾಗಿಪ್ಪನಾ ವಿಪ್ರರಿಂದಲ್ ಮಹಾದೈತ್ಯಜನ್ಮಕ್ಕೆ ತಾ ಬಂದನೇ ಬಂದನಂತಿಂದಿಗೇ ವೈರಮಾರ್ಗಕ್ಕೆ ನೀನಿಂದು ಗೈದಂಥ ಈ ದೈತ್ಯಸಂಹಾರ ವ್ಯಾಪಾರವೆಮ್ಮಲ್ ಮಹಾನುಗ್ರಹಕ್ಕಾಗಿ ನೀ ಬಂದೆ ನಾವ್ 460 ಸ್ವಾಂತ ಸಂತೋಷ ಮಾಡೆಂದು ಬಿನ್ನಾಹಗಳ ಮಾಳ್ಪರು.ಆಮೇಲೆ ಆ ಬಾಲೆ ಸಾಕ್ಷಾಜ್ಜಗನ್ಮೋಹಿನೀ ಲೀಲೆಗಳ್ ಮಿಂಚುತಾ 470 ಪೂಂಚುತಾ ಬಂದು ಸಿಂಹಾಸನಸ್ಥಾನದಲ್‍ಉಗ್ರನಂತಿಪ್ಪನೃಸಿಂಹ ಮೂತ್ರ್ಯುಗ್ರವಂಕಂಡತಿವ್ಯಗ್ರಳಂತಾಗಿ ಆ ತಾಯಿ ಹಿಂದಕ್ಕೆ ತಾ ಬಂದಳಮ್ಮಮ್ಮ ಏಂ ಗುಮ್ಮನಂತಪ್ಪÀನೇ ಸ್ವಾಮಿ ಮುನ್ನಿಂತು ಆಶ್ಚರ್ಯವಂಈಸು ವಿಕ್ರಮ್ಯವಂ ಎಂದಿಗಾನೆಲ್ಲಿ ಕಂಡಿಲ್ಲವಲ್ಲಾ ಕಿವಿಲ್ಯಾದರುಂ ಕೇಳಲೇ ಇಲ್ಲವಲ್ಲಾ ಇದೇನೋ ವಿಚಿತ್ರಾಕÀೃತೀಯಂತೆ ತೋರೂವನೆಂದಂಜಿಕೇಗೊಂಡ ರೀತಿಂದ ತಾ ಹೆಜ್ಜೆ ಕಾಲ್ಗೆಜ್ಜೆಗಳ್ ಸಪ್ಪುಳಂ480 ಮಾಡದೇ ಮೆಲ್ಲನೇ ಪಾಶ್ರ್ವದಲ್ ನಿಂತಳುಆಮೇಲೆ ಪ್ರಹ್ಲಾದನಂ ಕಂಡು ಸಂಭಾಷಿಪಂಬ್ರಹ್ಮ ಬಾರೈ ಎಲೋ ವತ್ಸ ನೀನೀ ನೃಸಿಂಹಾತ್ಮನಲ್ ಮೆಲ್ಲನೇ ಸೇರಿ ನಿಮ್ಮಪ್ಪಗಾ ಗಿಂದು ನಮ್ಮಪ್ಪನಲ್ಲಿಪ್ಪ ತತ್ಕೋಪ ಸಂಕ್ಷೇಪ ಗೈಸೆನ್ನೆ ತದ್ವಾಣಿಗಳ ಕೇಳುತಾಮೆಲ್ಲನೇ ಪಿಲ್ಲೆ ಪ್ರಹ್ಲಾದನಾಹ್ಲಾದದಲ್‍ವೈಷ್ಣವಶ್ರೇಷ್ಠ ತಾನಾಗ ಬಂದಂ ಮಹಾಭಕ್ತಿಯಿಂದಲ್ ಮಹೀಮಂಡಲೀ ಮೇಲೆ ಸಾಷ್ಟಾಂಗ ಬಿದ್ದಂ ನಮೋ ಎಂದು ದಂಡಪ್ರಣಾ 490 ಮಂಗಳಂ ಮಾಡುವೋ ವೇಳೆ ತನ್ನಂಘ್ರಿಕಂಜಾತದಲ್ ಬಿದ್ದ ಬಾಲನ್ನ ಬಾಳಾ ಸುಶೀಲನ್ನ ಕಂದನ್ನ ದೃಷ್ಟಿಂದ ತಾ ಕಾಣುತಾಚಕ್ರ ಶಂಖಾಂಕಿತಾ ಶ್ರೀಲಸದ್ಬಾಹುಗಳ್‍ಚಾಚಿ ಭಕ್ತನ್ನ ತಾನೆತ್ತಿ ತನ್ಮಸ್ತಕಸ್ಥಾನದಲ್ ಪೋಕಲಾಗಿನ್ನು ಸಂಸ್ರಸ್ತ ಚೇತೋಭಯಧ್ವಸ್ಥವಂ ಸ್ವಸ್ತಿದಾನ ಕ್ರಿಯಾಭ್ಯಸ್ತವಂ ಶ್ರೀ ಸತೀ ಸ್ತಂಬಕವಿನ್ಯಸ್ತವಂಹಸ್ತವನ್ನಿತ್ತನವ್ಯಾಹತ ಸ್ಪರ್ಶದಿಂದಲ್ ವಿಧೂತಾ ಶುಭವ್ರಾತನಾಗೀಯಭಿ 500 ವ್ಯಕ್ತ ಲಕ್ಷ್ಮೀವಿಲಾಸಾತ್ಮ ಸಂದರ್ಶನೈಶ್ವರ್ಯವಂ ಕೂಡಿ ತತ್ಪಾದ ಪದ್ಮಂಗಳಂಚಿತ್ತದಿಂದಿತ್ತನಾನಂದದಿಂದಲ್ ಪ್ರಹೃಷ್ಯತ್ತನು ಕ್ಲಿನ್ನ ಚಿತ್ತಾಶ್ರುನೇತ್ರಾಬ್ಜನಾಗಿದ್ದು ಪ್ರಹ್ಲಾದನುಂ ನಾರಸಿಂಹಾತ್ಮನಲ್‍ನಿಂತು ಸಂಸ್ತೋತ್ರಗಾರಂಭಿಪಂ. ಶ್ರೀರಮಾದೇವಿ ತಾನಾಗ ಸಮ್ಮೋಹಿನೀ ಸಂಪುಗಳ್‍ಕೂಡಿ ಬಂದಾ ನೃಸಿಂಹಾಂಕದಲ್ ನಿಂತಳಾಬ್ರಹ್ಮನಾವೇಳೆಯಲ್ ನಾರಸಿಂಹಾತ್ಮನಲ್‍ಸೇರಿ ಸುಕ್ಷೀರ ನೀರಾಭಿಷೇಕಂಗಳಂ 510 ಚೀನಿ ಚೀನಾಂಬರಂಗಳ್ ಮಹಾನಘ್ರ್ಯ ರತ್ನಾವಳೀ ಭೂಷಣಂಗಳ್ ಲಸನ್ಮೌಕ್ತಿಕಾಹೀರ ಹಾರಂಗಳಂ ಗಂಧ ಕಸ್ತೂರಿಕಾಲೇಪಗಳ್ ಶ್ರೀ ತುಳಸ್ಯಾಪ್ತ ಶಾಮಂತಿಕಾ
--------------
ಶ್ರೀಪಾದರಾಜರು
ಶ್ರೀ ವಾದಿರಾಜರು ಕರುಣದಿ ನೋಡೋ ಮದ್ಗುರುವರ ವಾದಿರಾಜನಂಬಿದ ಭಕ್ತರ ಸುರತರುವೇ ಪ ಪರಿಪರಿ ಭವಸಾಗರದಲಿ ಮುಳುಗುವತರಳನ ಮರೆವುದು ಥರವೇ ಅ.ಪ. ನಿಗಮ ವಿನುತ ಹಯವದನನಬೇಗ ಒಲಿಸಿದೆ ನೀ ಮುದದಿಯೋಗ ಜಿತಾಸನನಾಗಿರುವನೆ ತಲೆಬಾಗುವೆ ಭಯವಳಿ ತ್ವರಿತ 1 ವಾದದೊಳ್ ವಾದಿಗಳನೆ ಗೆದ್ದು ಗುರುಮತಸಾಧಿಸಿದೆಯೊ ಬಲವಂತಸಾಧು ಸೇವಿತ ನಿನ್ನ ಪಾದವ ನಂಬಿದೆ ಭವಬಾಧೆ ಕಳೆಯೋ ಮಹಂತಕ್ರೋಧ ರಹಿತ ಪಂಚಭೇಧ ಸುಜ್ಞಾನವಬೋಧಿಸುವ ದಯವಂತ 2 ಅತಿ ವಿಮಲನೆ ನಿನ್ನ ಸ್ತುತಿಸಲರಿಯೆ ನಾನುಮತಿವಂತನೆ ಮಹಾದಾತಾಸತತ ಬೇಡುವೆನು ಶ್ರೀಪತಿ ಭಜನೆಗೆ ಮನಜಿತವಾಗಿ ಇರಲಯ್ಯ ತಾತಕ್ಷಿತಿಯೊಳು ಕಂಡ ದುರ್ಮತಿಗಳ ಬಿಡಿಸೋದತಿ ಅಧಿಕವೇನೋ ಅನಾಥನಾಥಪತಿತ ಪಾವನ ರಮಾಪತಿ ವಿಠಲನ ನಿರುತ ನೋಳ್ಪ ಲಾತವ್ಯಬ್ಯಾತ 3
--------------
ರಮಾಪತಿವಿಠಲರು
ಶ್ರೀ ವಾಯುದೇವರ ಸ್ತುತಿ ಶ್ರೀಮದಾನಂದ ತೀರ್ಥರೆಂಬ |ಅರ್ಥೀಯ ಪೆಸರುಳ್ಳ |ಗುರುಮಧ್ವಮುನಿರಾಯ |ಏನೆಂಬೆ ನಾನಿನ್ನ ಕರುಣಕೆ ಎಣೆಗಾಣೆ ಪ ಬ್ಯಾಸರದೆ ಸರ್ವರಲ್ಲಿ |ಶ್ವಾಸ ಜಪಗಳ ಮಾಡಿಗುಂ ||ಶ್ರೀಶಗರ್ಪಿಸುತ ಹರಿ |ದಾಸರನ್ನು ಪಾಲಿಸಿದೆ 1 ಅಂದು ಹನುಮಂತನಾಗಿಬಂದು ಸುಗ್ರೀವಗೆ ಗುರುಂ ||ಅಂದವಾದ ಪದವಿತ್ತಾ |ನಂದವನು ಬಡಿಸಿದೆ ಗುರುಂ 2 ಕುಂತಿಯ ಕುಮಾರನಾಗಿ |ಹಂತ ಕೌರವರನ ಕೊಂದಿ ಗುರುಂ ||ಅಂತು ಪುಣ್ಯವ ಶ್ರೀ |ಕಂತು ಪಿತಗರ್ಪಿಸಿದೆಯೋ 3 ಅದ್ವೈತರನು ಕಾದಿ |ಗೆದ್ದು ನಿನ ಭಕ್ತರಿಗೆ ಗುರುಮಧ್ವಮುನಿರಾಯ ||ಶುದ್ಧ ತಾತ್ಪರ್ಯ ವಾಕ್ಯ |ಪದ್ಧತಿಯ ತಿಳಿಸಿದಿ ಗುರುಂ 4 ಗುರುಪ್ರಾಣೇಶ ವಿಠಲಾಪರನೆಂದು ಡಂಗುರವ ಗುರುಂ ||ಸಾರಿಸಿ ಸಜ್ಜನರನ್ನು |ಹರಿಲೋಕ ಸೇರಿಸಿದಿ ಗುರುಂ 5
--------------
ಗುರುಪ್ರಾಣೇಶವಿಠಲರು
ಶ್ರೀ ವ್ಯಾಸರಾಜರು ಏಸು ಮಹಿಮ ನೋಡೋ | ಶ್ರೀ ವ್ಯಾಸಮುನಿಯು ತಾನೂ ಪ ದಾಸಜನರ ಹೃದ್ದೊದ್ದೋಷ ಕಳೆದು ಸಂ | ತೋಷ ಕೊಡುವ ದೊರೆ ಅ.ಪ. ರಾಮಾಚಾರ್ಯರ ಗೃಹದಿ | ಭೂಮಿ ಸೋಕದೆ ಪುಟ್ಟಿಪ್ರೇಮದಿಂದಲಿ ಪುರು | ಷೋತ್ಮ ತೀರ್ಥರ ಗುಹದಿಯಾಮ ಯಾಮಕೆ ಪಾಲು | ಆಮಹಾಮುನಿ ಕೂಡೆಸೀಮೆ ಮೀರಿದ ತೇಜ | ಕೋಮಲ ಕಾಯನು 1 ಪೂರ್ಣ ಬೋಧರ ಪೀಠ | ಬ್ರಹ್ಮಣ್ಯರಿಂಗೊಂಡುಭವಾರ್ಣ ತಾರಿಸುವಂಥ | ನ್ಯಾಯ ಗ್ರಂಥವ ಮಾಡಿಕರ್ಣ ರಹಿತನ ಸುಶಯ್ಯನ ಮಾಡಿಕೊಂಡಅರ್ಣ ಸಂಪ್ರತಿಪಾದ್ಯ | ಕೃಷ್ಣನ್ನ ಮೆರೆಸೀದ 2 ಸುಜನ ಕುಮುದ ಚಂದ್ರ | ನಿಜಭಕ್ತ ಪರಿಪಾಲ ಪರಿವ್ರಾಜಾಕಾಚಾರ್ಯ | ವಿಜಯ ನಗರಿಲಿ ನೆಲೆಸೀಅಜನನಯ್ಯನ ನಾಮ | ಭಜನೆ ಪ್ರಾಕೃತದೊಳುನಿಜಜನ ಕೊರೆಯುತ | ಅಜೇಯನೆನಿಸಿದಂಥ 3 ಮಿಥ್ಯಾಮತವಗೆದ್ದು | ತಥ್ಯಾವು ಜಗವೆಂದುಸ್ತುತ ಶ್ರೀಹರಿಯ ಸರ್ವೋತ್ತುಮನೆನುತಸತ್ಯವು ಪಂಚ ಭೇದ | ನಿತ್ಯವು ತಾರತಮ್ಯಭೃತ್ಯರು ಬ್ರಹ್ಮ ದೇವತೆಗಳೆಂದೊರೆದ 4 ಪುರಂದರ | ದಾಸರೆಂದೆನಿಸೀದ 5 ಅಹಿಪರ್ವತಾಧೀಶ | ಅಹಿತಲ್ಪನ್ನಾಸೇವೆವಿಹಿತದಿ ದ್ವಿಷಡಾಬ್ದ | ಬಹುಗೈದು ಅರಸಿನಕುಹುಯೋಗವಾರಿಸಿ | ಮಹಿಯ ಸುರರಿಗೆಲ್ಲಸಹಸ್ರಾರು ಗ್ರಾಮಗಳ್ | ಜಹಗೀರುಗಳನಿತ್ತ 6 ಛಂದದಿಂದಲಿ ನವ | ವೃಂದಾವನಕೆ ಬಂದುವೃಂದಾವನದಿ ನಿಂದು | ಇಂದೀವರಾಕ್ಷನುನಂದ ಕಂದ ಗುರು ಗೋ | ವಿಂದ ವಿಠಲನ ಹೃನ್‍ಮಂದಿರದಲಿ ನೋಡಿ | ನಂದವ ಪಡುತಿರ್ಪ7
--------------
ಗುರುಗೋವಿಂದವಿಠಲರು
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು