ಒಟ್ಟು 151 ಕಡೆಗಳಲ್ಲಿ , 43 ದಾಸರು , 126 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಲಂ ಜಯಮಂಗಲಂತ್ರಿಜಗಂಗಳ ಪೊರೆವ ಶ್ರೀಮೂಕಾಂಬೆಗೆ ಪ ಗೌರಿಗೆ ಗುಹಜನನಿಗೆ ಗಿರಿಜಾತೆಗೆಧೀರಮಹಿಷ ದೈತ್ಯಮರ್ದಿನಿಗೆಕಾರುಣ್ಯನಿಧಿಗೆ ಕಾಮಿತಫಲದಾತೆಗೆನಾರದನುತೆಗೆ ನಾರಾಯಣಿಗೆ 1 ಶರದಿಂದುಮುಖಿಗೆ ಶಂಕರಿಗೆ ಶರ್ವಾಣಿಗೆದುರಿತ ದಾರಿದ್ರ್ಯಹರ್ತೆಗೆ ದುರ್ಗಿಗೆಪರಮೇಶ್ವರಿಗೆ ಪಾವನಚರಿತೆಗೆ ಶುಭಕರಿಗೆ ಸಮಸ್ತಮಂತ್ರೇಶ್ವರಿಗೆ 2 ರಾಜಶೇಖರಿಗೆ ರಾಜೀವನೇತ್ರಗೆ ರಕ್ತಬೀಜ ಶಾಸಿನಿಗೆ ಭುವನಮಾತೆಗೆತೇಜೋಮಯಿಗೆ ತರಣಿಕೋಟಿ ಭಾಷೆಗೆಶ್ರೀ ಜನಾರ್ದನನ ಸಹೋದರಿಗೆ 3 ಕಾಳಿಗೆ ಕಾಮರೂಪಿಣಿಗೆ ಕೌಮಾರಿಗೆಕಾಳರಾತ್ರಿಗೆ ಕಾತ್ಯಾಯನಿಗೆವ್ಯಾಳಭೂಷಿಣಿಗೆ ಯೋಗಿನಿಗೆ ರುದ್ರಾಣಿಗೆಭಾಳನೇತ್ರೆಗೆ ಭಯಹಾರಿಣಿಗೆ4 ಚಂಡಿಗೆ ಚಕ್ರಪಾಣಿಗೆ ಚಾತುರ್ಭುಜೆಗೆಮುಂಡಿಗೆ ಧೂಮ್ರಲೋಚನಹತ್ರ್ರೆಗೆಚಂಡಮುಂಡಾಸುರರಸುರಣರಂಗದಿದಿಂಡುದರಿಂದ ಸರ್ವಮಂಗಲೆಗೆ5
--------------
ಕೆಳದಿ ವೆಂಕಣ್ಣ ಕವಿ
ಮನಕಧೀಶನೆನಿಪ ಗುರುವರಾ | ನಿನ್ನ ಪಾದನೆನೆವೆ ಕಳೆಯೊ ಮಲಿನ ಸತ್ವರಾ ಪ ಅನಿಲ ಸುತನು ಎನಿಸಿ ನೀನು | ಅನಿಲ ನೆನಿಸಿ ಪಾಪತೂಲಘನ ಸುಮೇರುವನ್ನೇ ದಹಿಸೊ | ಅನಲ ಈಕ್ಷಣಾನೆ ಶಿವನೆ ಅ.ಪ. ಅನುದಿನ ಪಾದ | ವನಜ ಭಜಿಪ ಶರಣರೀಗೆತೃಣವು ತೆರನು ಪಾಪ ನಿ5iÀು | ಎಣಿಸಿ ಪೊರೆವುದುಚಿತ5É್ಲ 1 ಗೌರಿಧವನೆ ವಿಷಯ ಮೋಹನ | ಕಳೆದು ವೇಗಸೂರಿ ಜನರ ಸಂಗ ಮಾಡುವ ||ಸಾರ ಮನವವಿತ್ತು ಸಲಹೊ | ಕ್ರೂರಿ ಜನರ ದೂರಮಾಡೊಘೋರಾಘೋರ ರೂಪಿ ಹರನೆ | ಮಾರಪಿತನ ಸಖನೆ ರುದ್ರ 2 ಶುಕ ವಿಭೂತಿ 3
--------------
ಗುರುಗೋವಿಂದವಿಠಲರು
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮಹಾಮಾಯೆ ಗೌರಿ ಮಾಹೇಶ್ವರಿಪ. ವiಹಾದೇವಮನೋಹಾರಿ ಶಂಕರಿ ಮಹಾಪಾಪಧ್ವಂಸಕಾರಿ ಶ್ರೀಕರಿ ಮಾಂ ಪಾಹಿ ಪಾಹಿ ಶೌರಿಸೋದರಿಅ.ಪ. ಕಾಮಕೋಟಿಸುಂದರಿ ಶುಭಕರಿ ಕರಿಕುಂಭಪಯೋಧರಿ ಕಾಮಿತಪ್ರದೆ ಕಂಬುಕಂಧರಿ ಹೇಮಾಲಂಕಾರಿ ಹೈಮವತಿ ಕುವರಿ1 ಭಾನುಕೋಟಿಭಾಸ್ಕರಿ ಭವಹರಿ ಭಜಕಾಮೃತಲಹರಿ ಸ್ಥಾಣುವಲ್ಲಭೆ ದನುಜಸಂಹಾರಿ ಜ್ಞಾನಾಗೋಚರಿ ಜಗತ್ರಯೇಶ್ವರಿ2 ಪೂರ್ವದೇವಭೀಕರಿ ಭ್ರಾಮರಿ ಪುಳಿನಾಖ್ಯ ಪುರೇಶ್ವರಿ ಸರ್ವಲಕ್ಷ್ಮೀನಾರಾಯಣೇಶ್ವರಿ ಸರ್ವಸಹಚರಿ ಶಶಾಂಕಶೇಖರಿ3
--------------
ತುಪಾಕಿ ವೆಂಕಟರಮಣಾಚಾರ್ಯ
ಮಾನವ ನೀನುವಾದಿರಾಜರ ಪೂಜಿಸೋ ಪ ಶಾರ್ವರಿ ವತ್ಸರದೀ | ಜನಿಸಿ ಗೌರಿಗರ್ಭ ಸುಧಾಂಬುಧಿಲೀ ||ಪುರಬಾಹ್ಯ ಪುಟ್ಟಿದ | ಕಾರಣದಿಂದಲಿವರಯತಿ ವಾಗೀಶ | ಕರಜನೆನಿಸಿ ಮೆರೆದ 1 ವಿನುತ ಸಿರಿ ಹರಿಯ ಪೂಜಿಸಿದ 2 ವಾಲಿ ಭಂಡಾರವನೂ | ಶೋಧಿಸೆ ಅಲ್ಲಿಶೀಲ ಇನಜಾರ್ಚಿಸಿದ ||ಲೀಲ ವಿಗ್ರಹ ರಾಮ | ವಿಠಲ ಮೂರ್ತಿಗಳನ್ನಕೋಲಾಹಲದಿ ತಂದು | ಭಾಳ ಪೂಜಿಸಿದ 3 ವ್ಯಾಸರಾಜಾರ್ಚಿತನಾ | ದೇವನವೇದವ್ಯಾಸರಿಂದಲಿ ಗಳಿಸಿದಾ |ವ್ಯಾಸಮುಷ್ಠಿಕೆಯ ವಿ | ಶ್ವಾಸದಿಂದಲಿ ಪೊಂದಿಶ್ರೀಶ ಉಡುಪಿನ ಕೃಷ್ಣ | ವಾಸ ಸ್ಥಾನಕೆ ಬಂದ 4 ಕವಿಕುಲ ಸಭೆಯೊಳಗೇ | ಪೂಣೆಯ ಪುರದಿನವರಸಲಂಕಾರದೀ ||ಕವನ ರಚಿಸಿ ರುಕ್ಮಿ | ಣೀಶ ವಿಜಯ ಗ್ರಂಥಕವಿ ಕುಲೋತ್ತಂಸ | ತಾನೆನಿಸುತ್ತ ಮೆರೆದಂಥ 5 ಪಂಢರಿ ಪುರ ಮಾರ್ಗವ | ಸವೆಸುತ ಬರೆಪುಂಡು ಸೈನಿಕರ್ ಬರಲೂ ||ಪುಂಡಲೀಕಗೆ ವರದ | ಪುಂಡರೀಕಾಕ್ಷನಹಿಂಡು ಶ್ವೇತಾಶ್ವಗಳಿಂದ ವಾರಿಸಿದಾ 6 ಹರಿವಾಣ ಪೂರಣವ ||ಹಯವದನನು ಬಂದು | ಜಯ ಘೋಷದಲಿ ಮೆದ್ದುದಯ ದೃಷ್ಟಿ ತೋರಿದ | ಭಾವಿ ಮಾರುತರ 7 ಪಾದ | ಬಿಸಜವ ಕಂಡರ 8 ಬೊಮ್ಮ ರಕ್ಕಸನಾಗೀ 9 ಸಕಲ ಶಿಷ್ಯರವೆರಸಿ | ರಾಜರು ಬರೆರಕ್ಕಸ ಕರೆದ ವಾದಕ್ಕೇ ||`ಆಕಾಮವೈ` ಕೋ ನಸ್ನಾತನೆಂದೆನೆ ಅವಕಾಕು ರಂಡೆಯ ಪುತ್ರ | ತೋಕ ನೀನೆಂದ 10 ಮೇನೆ ಪಾಲಕಿ ಹೊರುವ | ನರೆಯಣ ಭೂತಯಾನ ವಾಹಕನಾದನೂ ||ಆನೆಂತು ಬಣ್ಣಿಪೆ | ಮುನಿಕುಲ ದಿನಮಣಿವೇಣುಗಾನ ಪ್ರಿಯ | ಕೃಷ್ಣ ಸೇವಕರಾ 11 ಆ ಮಹ ನೇತ್ರಾವತಿ | ಸಂಗಮವೆನ್ನಕೌಮಾರ ನದಿ ಸನಿಯದಿ ||ಈ ಮಹಾ ಮಹಿಮರು | ಸಾಸಿರ ಲಿಂಗದನೇಮದ ಪೂಜೆಗೆ | ನಿರ್ಮಿಸಿದರು ತೀರ್ಥ 12 ಪಾದ್ಯ | ಸ್ವರ್ಣ ಗರ್ಭನ ಪಿತಪೂರ್ಣಗೆ ಸುಪ್ರೀಯ | ಗಸದಳವೇನಿದು13 ಗರಳ ಮಿಶ್ರಿತ ನೈವೇದ್ಯ | ಪಾಚಕತೆರೆಹರಿಗೆ ಸಮರ್ಪಿಸಿದಾ ||ಸಿರಿಪತಿ ಕಂಠದೋಳ್ | ಕರಿಯ ವರ್ಣವ ಕಂಡುಅರಿತು ಸೇವಿಸಿದನು | ಹರಿಯ ಪ್ರಸಾದವ 14 ಸಿರಿ ಕೃಷ್ಣ | ನಂಘ್ರಿಗರ್ಪಿಸಿದ 15 ಅರಿಯು ಮುತ್ತಲು ಪುರವ | ಸೋದಾಧಿಪಮೊರೆಯ ಹೊಕ್ಕನು ರಾಜರ ||ಭರದಿ ನಾರಾಯಣ | ವರ ಭೂತನನ ಕಳುಹಿಅರಿಭಯ ವಾರಿಸಿ | ಪೊರೆದ ನಾಯಕನಾ 16 ಸೋದೆಯಲ್ಲೋರ್ವ ಶೈವ | ಬಲುಗರ್ವದಿವಾದ ಮಾಡುತಲವನೂ ||ವೇದ ಮತವ ಬಲು | ವಿಧದಿ ದೂಷಿಸಿ ಕಡುಬಾಧೆ ಪಡಿಸುತಲಿದ್ದ | ಬುಧಜನ ವೃಂದವ 17 ಭೃತ್ಯ ಭಾವದಿ | ವಿಜಯ ಪತ್ರವನಿತ್ತುನಿಜ ಬಿರುದುಗಳವರ | ಪದಕೆ ಅರ್ಪಿಸಿದ 18 ತ್ರಿವಿಕ್ರಮಾಲಯ ಸ್ಥಾಪನೆ | ರಚಿಸಿ ಮೆರೆದ ದಿವ್ಯ ಶಾಲೀವಾಹನ್ನ ||ಸಾವಿರೈನೂರ್ನಾಲ್ಕು | ಚಿತ್ರ ಭಾನುವಿನಲ್ಲಿರವಿಯು ಮೇಷಾರ್ಧದಿ | ಚರಿಸುವ ದಿನದಿ 19 ರಥದಿಮೂರ್ತಿಯ ಸೇರಿಸಿ | ಬದರಿಯಿಂದಭೂತ ನರೆಯಣ ಬರುತಿರೆ ||ಪಥದಿ ರಕ್ಕಸ ಸೆಣೆಸೆ | ಪೃಥುಕು ಆಯುಧ ಬಿಟ್ಟುರಥದ ಗಾಲಿಯಲಿಂದ | ಹತಗೈದನವನ 20 ವೇದಾರ್ಥ ಬೃಂಹಿತದ | ಬಹು ಗ್ರಂಥಗಳ್‍ಪದ ಪದ್ಯ ಸೂಳ್ಹಾದಿಯ ||ಸೋದೆ ಮಠದಿ ನಿಂದು | ವಾದಿರಾಜರು ರಚಿಸಿಬುಧರಿಗಾನಂದವ | ಮುದದಿ ಪಾಲಿಸಿದ 21 ತ್ರಿವಿಕ್ರಮ ರಥೋತ್ಸವದಿ | ಕರೆಯಲು ಬಂದದಿವಿರಾಜ ಜನರು ಕಳುಹಿ ||ಭವ್ಯ ಸು ಪಂಚ ವೃಂದಾವನಗಳ ರಚಿಸಿದಿವಿರಾಜ ಗರುಹಿದರ್ ತಮ್ಮಯ ಬರವನು 22 ಶಾರ್ವರಿ ವತ್ಸರದೀ | ಫಾಲ್ಗುಣ ವದ್ಯಮೂರನೆ ದಿವಸದಲ್ಲೀ ||ವರ ವೃಂದಾವನ ಪೊಕ್ಕು | ಗುರು ಗೋವಿಂದ ವಿಠಲನನಿರುತ ಧ್ಯಾನದೊಳಲ್ಲಿ | ವರವ ಪಾಲಿಸುತಿಹರ 23
--------------
ಗುರುಗೋವಿಂದವಿಠಲರು
ಮಾನವ ಸಿಂಗನ ಪಾಡಿರೈ ಪ ಇಂಗಡಲಜೆಪತಿ | ಮಂಗಳ ಚರಿತ ಭು ಜಂಗಶಾಯಿ ಶುಭಾಂಗ ಅ.ಪ ಲಾಲಿಸಿ ದೇವ | ಮಹಾನುಭಾವ | ಅವತರಿಸಿದನು ಅಸುರಾಂತಕ | ಪ್ರೇಮದಲಿ ಗೋಕುಲದಲ್ಲಿ | ವಿಧಿ ಕುಲ ಜಾತ 1 ತಂದೆ ತಾಯ್ಗಳ ಬಂಧನ ಬಿಡಿಸಿದ ಧೀರ | ಭಕ್ತಮಂದಾರ | ಒಂದೆ ಬೆರಳಲಿ ಗೋವರ್ಧನ ಶೈಲವನು | ತಾ ಧರಿಸಿದನು ಮದವನು ಮುರಿದ | ಮೋದವಗರೆವ ಕರವ | ಕರುಣದಿ ಪಿಡಿವ 2 ಶ್ವೇತ ವಾಹನ ಸೂತ ಕಾಮಜನಕ ಸತ್ಯಭಾಮೆ ರಮಣ ಗೋಪಾಲ | ಸ್ವಾಮಿ ಕುಲಾಲ ಭೀಮಗೊಲಿದ ನಿಸ್ಸೀಮ ಮಹಿಮಾ ಶ್ರೀ ಗೌರಿ | ಮಾತುಳವೈರಿ ಹೇಮಾಂಬರಧರ ಶಾಮಸುಂದರ ವಿಠಲ | ಧೃತವನಮಾಲ3
--------------
ಶಾಮಸುಂದರ ವಿಠಲ
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ರಘುನಂದನ ರಘುನಂದನ ರಘುನಂದನ ರಘುನಂದನ ಪಸುಖದಾಯಕ ಸಕಲಾಗಮ ನಿರುತಖಗವಾಹನ ಮಣಿಭೂಷಣ ಕರುಣಾಕರ ಚರಿತಕೌಸಲ್ಯ ವರನಂದನ ಘನಕುಂಡಲ ಮಣಿಮಂಡಲನಾರಾಯಣ ದಾಮೋದರ ಮಧುಸೂದನ ಕೃಷ್ಣ 1ಗೋ'ಂದ ಮುಕುಂದಾಚ್ಚುತ ಕೃಷ್ಣಾಂಬುಜನಾಥಲಕ್ಷ್ಮೀಶ ಕೃಪಾಳೋ, ಜಗದೀಶವಂದ್ಯ 'ಷ್ಣುಶ್ರೀ ರಾಘವ ರಾಮಾನುಜ ಪಾ' ಮುಕುಂದಸೀತಾರಮಣ ತ್ರಿನಯನ ಗೋಪಾಲ ಗಿರೀಶ 2ಗೋಪಾಲ ಗೋಪಾಲ ಗೋಪಾಲ ಗೋಪಾಲಭಕ್ತಪ್ರಿಯ ಗೋ'ಂದ ಮುಕುಂದ ಅತಿಭೀಷಣ ಕಟುಭಾಷಣ ಯಮಕಿಂಕರ ಪಠಳಂಕೃತತಾಡನ ಪರಪೀಡನ ಮರಣಾಗಮ ಸಮಯೇ 3ಶಿವ ಶಂಕರ ಶಿವ ಶಂಕರ ಶಿವ ಶಂಕರ ಶಿವ ಶಂಕರಉಮಯಾಸಾಮಮಪೇಕ್ಷಿತ ಯಮಶಾಶ್ವತ ಶೂಲಿಂಪರಮೇಶ್ವರ ಹರಗೌರಿರಮಣ * 4
--------------
ವೆಂಕಟದಾಸರು
ರಜತಗಿರೀಶ್ವರ ಮಹಾನುಭಾವ ಗಜಚರ್ಮಾಂಬರ ನಮೋ ನಮೋ ಪ ವಿಜಯರಾಮಾರ್ಚಿತ ಪದಕಮಲ ಅಜಸುತ ಸೇವಿತ ನಮೋ ನಮೋ ಅ.ಪ ವಾರಣಾಸಿ ಸುಕ್ಷೇತ್ರ ನಿವಾಸ ಪರಮೋಲ್ಲಾಸ ನಮೋ ನಮೋ ಭೂರಿ ವೈಭವಾನಂದ ವಿಲಾಸ ರವಿಶತಭಾಸಾ ನಮೋ ನಮೋ 1 ನಾದಾಲಂಕೃತ ವರದಾತಾ ಶ್ರೀ ಗೌರಿಯುತ ನಮೋ ನಮೋ ಭಾಗೀರಥೀಪ್ರಿಯ ಲೋಕನುತ ದೇವೇಂದ್ರಾತ ನಮೋ ನಮೋ2 ಮಂಗಳದಾಯಕ ಶಶಿಶಿಖರ ಸಂಗವಿದೂರಾ ನಮೋ ನಮೋ ಮಾಂಗಿರಿ ಶೃಂಗವಿರಾಜಿತಶಂಕರ ಶರಣಶುಭಂಕರ ನಮೋ ನಮೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಲಿಂಗಾ ಎನ್ನಂತರಂಗ ಪ ಮಂಗಳಾಂಗ ಸರ್ವೋ-ತುಂಗನೆ ರಾಮ ಅ. ಪ. ಮಂದಾಕಿನೀಧರಗೆ ಗಂಗಾಂಬು ಮಜ್ಜನವೆ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೆ ಕಂದರ್ಪಜಿತಗೆ ಮಿಗಿಲಾಪೇಕ್ಷೆಯೆ ರಾಮಾ 1 ಘನವಿದ್ಯಾತುರಗೆ ಮಂತ್ರಕಲಾಪವೆ ಧನವತಿಯ ಸಖಗೆ ಕೈಕಾಣಿಕೆಯೆ ಮನೆರಜತ ಪರ್ವತಗೆ ಫಣಿಯ ಆಭರಣವೆ ಮನೋ ನಿಯಾಮಕಗೆನ್ನ ಬಿನ್ನಹವೆ ರಾಮಾ2 ವೈರಾಗ್ಯ ನಿಧಿಗೆ ಈ ವಿಷಯ ಪದಾರ್ಥವೆ ಗೌರಿಯ ರಮಣಗೆ ಈ ಸ್ತೋತ್ರವೆ ವೀರ ರಾಘವ ವಿಜಯವಿಠ್ಠಲ ನಿಜಹಸ್ತ ವಾರಿಜದಳದಿಂದುದ್ಭವಿಸಿದ ಮಹಾ 3
--------------
ವಿಜಯದಾಸ
ವಂದೇ ಶ್ರೀ ಗೌರಿನಂದನ ಸುರನರ ವೃಂದವಂದಿತಚರಣ ಗಜಾನನ ಪ. ಶಂಕರೋಲ್ಲಾಸ ಪಾಶಾಂಕುಶಧರ ಕರ ಪಂಕಜ ಸುವಿರಾಜ ರವಿತೇಜ 1 ಜಂಭಾರಿಸಂನುತ ಜಾಹ್ನವೀಧರಸುತ ಲಂಬೋದರ ಸುಂದರ ಕೃಪಾಕರ 2 ಸುಕ್ಷೇಮಧಾಮ ಶ್ರೀ ಲಕ್ಷ್ಮೀನಾರಾಯಣನ ಪಕ್ಷೈಕಪಾವನ ಸುಧೀಷಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಸುದೇವ ನಿನ್ನ ಮರ್ಮಕರ್ಮಂಗಳದೇಶದೇಶದಲ್ಲಿ ಪ್ರಕಟಿಸಲೊ ಪ ಬೇಸರದೆ ಎನ್ನ ಹೃದಯಕಮಲದಲ್ಲಿ ವಾಸವಾಗಿ ಸುಮ್ಮನಿದ್ದೀಯೊ ಅ.ಪ. ತರಳತನದಲಿದ್ದು ದುರುಳನಾಗಿ ಬಂದುಒರಳಿಗೆ ಕಟ್ಟಿಸಿಕೊಂಡುದನುತುರುವ ಕಾಯಲಿ ಹೋಗಿ ಕಲ್ಲಿಯೋಗರವನುಗೊಲ್ಲರ ಕೂಡೆ ನೀ ಉಂಡುದನುನೆರೆಮನೆ ಹೊರಮನೆಗಳ ಪೊಕ್ಕು ಬೆಣ್ಣೆಯಅರಿಯದಂತೆ ಕದ್ದು ಮೆದ್ದುದನುಕೇಳಿಸಿದೆಯಾದರೆ ಒದರುವೆ ಎಲೊ ನರ -ಹರಿ ಎನ್ನ ಬಾಯಿಗೆ ಬಂದುದನು 1 ಕಟ್ಟಿ ಕರೆವ ಏಳುದಿನದ ಮಳೆಗೆ ಪೋಗಿಬೆಟ್ಟವ ಪೊತ್ತದ್ದು ಹೇಳಲೊಅಟ್ಟಿಸಿಕೊಳ್ಳುತ ಯಾಗಶಾಲೆಗೆ ಪೋಗಿಹೊಟ್ಟೆಯ ಹೊರೆದದ್ದು ಹೇಳಲೊದುಷ್ಟ ಹಾವಿನ ಹೆಡೆಯನು ತುಳಿದಾಡಿದದುಷ್ಟತನವನು ಹೇಳಲೊನೆಟ್ಟುನೆ ಅಂಬರಕೆತ್ತಿದನ ಹೊಯ್ದುಹಿಟ್ಟುಕಟ್ಟಿಟ್ಟುದ ಹೇಳಲೊ 2 ಪಿಡಿಯವಲಿಗೆ ಮೆಚ್ಚಿ ಸಂಪದವನು ಕೊಟ್ಟಬೆಡಗತನವನಿಲ್ಲಿ ಹೇಳಲೊಹಿಡಿಯ ಬಂದ ಕಾಲಯವನಿಗಂಜಿ ಕಲ್ಲಪಡೆಯ ಹೊದ್ದುದ ಹೇಳಲೊಮಡಿದ ಮಗನ ಗುರುವಿಗೆ ಕೊಡಬೇಕೆಂಬಸಡಗರತನವಿಲ್ಲಿ ಹೇಳೆಲೊಮಡದಿ ಮಾತಿಗೆ ಪೋಗಿ ನೀ ಪಾರಿಜಾತವತಡೆಯದೆ ತಂದದ್ದು ಹೇಳಲೊ 3 ಮೌನಗೌರಿಯ ನೋಡ ಬಂದ ಹೆಂಗಳನ್ನೆಲ್ಲಮಾನವ ಕೊಂಡದ್ದು ಹೇಳಲೊತಾನಾಗಿ ಮೊಲೆಯನೂಡಿಸ ಬಂದವಳನ್ನುಪ್ರಾಣವ ಕೊಂಡದ್ದು ಹೇಳಲೊಕಾನನದೊಳು ತುರುವಿಂಡುಗಳನು ಕಾಯ್ದಹೀನತನವನಿಲ್ಲಿ ಹೇಳಲೊಮಾನಿನಿಯರ ಮನೆಗಳ ಪೊಕ್ಕು ಬೆಣ್ಣೆಯಹಾನಿಯ ಮಾಡಿದ್ದು ಹೇಳಲೊ 4 ಧರಣಿಮಗನ ಕೊಂದು ತರುಣಿಯರನುದುರುಳತನವನಿಲ್ಲಿ ಹೇಳಲೊಜರೆಯ ಮಗನಿಗಂಜಿ ಪುರವ ಬಿಟ್ಟು ಹೋಗಿಶರಧಿಯ ಪೊಕ್ಕದ್ದು ಹೇಳಲೊಧರೆಯೊಳಧಿಕ ಶ್ರೀರಂಗಪಟ್ಟಣದಲ್ಲಿಸ್ಥಿರವಾಗಿ ನಿಂತದ್ದು ಹೇಳಲೊಶರಣಾಗತರ ಕಾವ ರಂಗವಿಠಲನ್ನಪರಮ ದಯಾಳೆಂದು ಹೇಳಲೊ 5
--------------
ಶ್ರೀಪಾದರಾಜರು
ವೃಷಭಾರೂಡಗೆ ರವಿಶಶಿ ನಯನಗೆ ವೃಷಭಪಾವನತ್ರಿಯಂಬಕಗೆ || ವೃಷಭಸ್ವರೂಪದಿ ಮೆರೆವ ಆಕಾರದೇವಗೆ | ವೃಷಭ ಕನ್ನಿಕೆಯರಾರುತಿ ಎತ್ತಿರೆ ವೃಷಭಾಶಿವಗೆ ಸಂಗಮಗ ಜಗದೀಶ ಮಹೇಶ-ಗಾರುತಿಯನೆತ್ತಿರೆ ವೃಷಭ ಶಿವಗೆ ಸಂಗಮಗೆ 1 ಭಾನು ಕೋಟಿ ದಿವ್ಯ ತೇಜ ಪ್ರಕಾಶಗೆ ಆನಂದಮಯಗೆ ಚಿನ್ಮಯಗೆ | ಮಾನಸದಿಂದಲಿಮೆರೆವೆನ್ನ ದೇವಗೆ ಮಾನ ಕನ್ನಿಕೆಯರಾರುತಿ ಎತ್ತಿರೆ |ವೃಷಭ ಶಿವಗೆ ಸಂಗಮಗೆ 2 ಭಾಗೀರಥಿ ಪ್ರಿಯಗೆ ಭಾಲನೇತ್ರಗೆ ಶ್ರೀ ಗೌರಿಯ ಮನೋಹರಗೆ | ನಾಗಭೂಷಣನಾರಾಯಣ ಪ್ರಿಯಗೆ ನಾಗ ಕನ್ನಿಕೆಯರಾರುತಿ ಎತ್ತಿರೆ 3 ದೇವರ ದೇವಗೆ ದೇವ ಜಗದೀಶಗೆ | ದೇವಸನ್ಮೋಹನಸ್ವಾಮಿಗೆ | ದೇವ ಸಿಂಧಾಪುರದ ಶ್ರೀ ವಿಶ್ವನಾಥಗೆದೇವ ಕನ್ನಿಕೆಯರಾರುತಿ ಎತ್ತಿರೆ 4
--------------
ಭೀಮಾಶಂಕರ
ವೇಣುಗೋಪಾಲನಿಲಯೇ ವೀಣಾವಿನೋದವಲಯೇ ಪ ವಾಣಿ ಗೌರಿನುತೆ ತಾಯೆ | ಪ್ರಾಣತ್ರಾಣದಾತೆ ಸದಯೆ ಅ.ಪ ಬೃಂದಾವನ ವನವಾಸಿನಿ ಮಂದಾಕಿನಿ ಪ್ರಿತಮೋಹಿನಿ ಮಂದಾತ್ಮಜ ಸಹಚಾರಿಣಿ ಬೃಂದಾರಕ ಸುಖವರ್ಧಿನಿ 1 ಇಂದೀವರ ಸುಮಭೂಷಿಣಿ ವಂದೇ ಮಾಂಗಿರೀಶ ತೋಷಿಣಿ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣು ಶ್ರೀ ಪಾರ್ವತಿದೇವಿಗೆ ಶರಣು ಶಾಂಭವಿಗೌರಿಗೆ | ನಮ್ಮ ಶರ್ವಾಣಿಗೆ ಪ ಲಂಬ ಕರ್ಣನ ಬಿಂಬಛಿದ್ರನ ಸಂಭ್ರಮದಿ ಪಡೆದಮ್ಮಗೆ ಶಂಬರಾರಿಯ ಅಂಬಿಗಾಹರ ನಂಬಿದಾ ಪಟ್ಟದರಸಿಗೆ 1 ಅಮಿತ ಮಹಿಮಳೆ ಜ್ಯೋತಿ ಆದಿಶಕ್ತಿ ದುರ್ಗಾಂಬೆಗೆ ಹೇಮವರ್ಣ ಭವಾನಿಗೆ 2 ಹೊಡೆವ ಮೃಡಾಣಿಗೆ ಸ್ಮರಿಸದವರನ ಕಾಯ್ವಳೆ 3
--------------
ಹೆನ್ನೆರಂಗದಾಸರು