2. ಶ್ರೀ ವೆಂಕಟೇಶ ಸ್ತೋತ್ರ
6 ಶರಣಾಗತರ ಕಲ್ಪತರುವೆ ವೆಂಕಟ ಧರಾ
ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ
ದರುಶನವ ಈಯೊ ಎಂದೆಂದು 1
7 ಸ್ವಾಮಿ ತೀರ್ಥ ನಿವಾಸ ಸು
ಭಯಹಾರಿ ಸುರರ ಸಾರ್ವ
ಭೌಮ ನೀ ಸಲಹೆಮ್ಮೆ 2
8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ
ಕಿಂಕರನೆನಿಸೊ ಶುಭಕಾಯ 3
9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ
ದ್ಭೈತ್ಯನ್ನ ಕಾಯೊ ಕರುಣಾಳೊ 4
10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ
ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ
ತಾವಕರೊಳಿಟ್ಟು ಸಲಹಯ್ಯ 5
11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ
ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ
ತತ ನಿನ್ನ ಸ್ಮರಣೆ ಕರುಣೀಸೊ 6
12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ
ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ
ರಚನೆ ಸುಖವೀಯೊ ರುಚಿರಾಗ 7
13ಹೃದಯದಲಿ ತವರೂಪ ವದನದಲಿ ತವನಾಮ
ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ
ಪದಜಲಗಳಿರಲು ಭಯವುಂಟೆ 8
14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ
ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ
ವತರ ಸಂಗವನ್ನೇ ಕರುಣೀಸೊ 9
15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ
ಪತಿ ನಿನ್ನ
ಭಕುತ ನಾನಯ್ಯ ಎಂದೆಂದು 10
16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು
ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ
ನಿನ್ನರಿವ ಜ್ಞಾನ ಕರುಣೀಸೊ 11
17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ
ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ
ವಶಮಾಡಿಕೊಳ್ಳೊ ವನಜಾಕ್ಷ 12
18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ
ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ
ಘನತೆ ನಿನಗಲ್ಲ ಕರುಣಾಳು 13
19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ
ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ
ಬಲವಾಗಿ ಇರಲು ಭಯವುಂಟೆ 14
20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ
ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ
ಬಯಲಾಗುತಿಹವೊ ಸುಕೃತಿಯಿಂದ 15
21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ
ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ
ಚಲ ಬಿಡಿಸಿ ನೀ ಕರುಣೀಸೊ 16
22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ
ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ
ಪಾಲಿಸೊ ಎನಗೆ ಪರಮಾತ್ಮ 17
23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು
ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ
ರತಿ ಭಾಗ್ಯ ನೀನೆ ಕರುಣೀಸೊ 18
24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ
ಭೃಗುರಾಮರಘುರಾಮ
ಜಯ ಬೌದ್ಧ ಕಲಿಹರ್ತಾ 19
25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ
ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ
ಅನಿರುದ್ಧ ಪ್ರದ್ಯುಮ್ನ 20
26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ
ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21
27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ
ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ
ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22
28ಜಯ ಜಯತು ಮಹೋಲ್ಕ ಜಯತು ವೀರೋಲ್ಕ
ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ
ಜಯ ಜಯತು ಜಗನ್ನಾಥ ವಿಠಲಾರ್ಯ 23
29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ
ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ
ಆನಂದವೀವೆ ಅನುಗಾಲ 24
30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ
ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ
ಮ್ಮಪ್ಪಗಿಂತಧಿಕ ದೊರೆಯುಂಟೆ 25
31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ
ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ
ನಾನೆಂತು ತುತಿಸಿ ಹಿಗ್ಗಲಿ 26
32ಶ್ರೀನಿಧೆ ನಿನ್ನವರ ನಾನಾಪರಾಧಗಳ
ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ
ಏನೆಂಬೆ ನಿನ್ನ ಕರುಣಕ್ಕೆ 27
33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು
ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ
ಬಿನ್ನೈಪೆನಿನ್ನು ಸಲಹೆಂದು 28
34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ
ತುಚ್ಛಗೈದವರ ಸಲಹೀದೆ 29
35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ
ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ
ದನ್ಯರು ಸಾಕಲರಿಯರು 30
36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ
ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ
ಇಂದಿರಾರಾಧ್ಯ ಸಲಹೆಮ್ಮ 31
37 ಪತಿತ ನಾನಾದರೂ ಪತಿತ ಪಾವನ ನೀನು
ರತಿನಾಥ ನಗಪಾಣಿ | ನಗಪಾಣಿ ನೀನಿರಲು
ಇತರ ಚಿಂತ್ಯಾಕೊ ಎನಗಿನ್ನು 32
38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ
ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ
ಕಡೆ ಬೀಳ್ವುದೆಂತೊ ಭವದಿಂದ 33
39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ
ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು
ದಾಸೀನ ಮಾಡೋದುಚಿತಲ್ಲ 34
40ಆವ ಯೋನಿಯಲಿರಿಸು ಆವ ಲೋಕದಲಿರಿಸು
ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ
ದೇವಕೀಕಂದ ದಯದಿಂದ 35
41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ
ಜನರಿಂದ ನುಡಿಸಿದ್ದು