ಒಟ್ಟು 172 ಕಡೆಗಳಲ್ಲಿ , 57 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಡು ಬಿಡು ಮನುಜಾ ಜಡದಭಿಮಾನ ಪಡೆ ಗುರುವಿನಲಿ ಸ್ವಾತ್ಮದ ಜ್ಞಾನಾ ಪ ಈ ಸುಖದುಃಖದ ಬಡಿದಾಟದಲಿ ಗಾಸಿಯಾಗುತಲಿ ಸಾಯುವದೇ ದಿಟ ಕ್ಲೇಶವ ನೀಗುವಿ ನಿನ್ನ ನೀ ತಿಳಿವೊಡೆ 1 ಮರಳಿ ದೇಹ ಪಡೆಯದ ದಿವ್ಯ ಬೋಧ ಪರಮಶಾಂತಿ ದೊರಕಿಸುವ ಪ್ರಮೋದ ದುರುಳಸಂಸ್ಕøತಿಯ ಪಾಶದ ಛೇದ ಮರೆಯದೆ ಮಾಳ್ಪುದು ಸ್ವಾತ್ಮದ ಶೋಧ 2 ಘಟ ಮರಣಕೆ ಶಿಲುಕಿದಾದರೂ ಈ ಘಟದಲಿ ನೀ ಅಮರನೆ ಇರುವೀ ಬೇಗನೆ ಜೀವನ್ಮುಕುತಿಯ ಪಡೆಯೈ ಯೋಗಿ ಶಂಕರನ ಸದ್ಬೋಧದಲಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಮಂಗಲವಾ ಪಾಡುವೆನಾ ಮಂಗಲಾಂಗ ಗುರುದೇವಗೆ ಸಂಗರಹಿತ ಸಂಪೂರ್ಣಗೆ ಕಂಗೊಳಿಸುವ ಪರಮಾತ್ಮಗೆ ಪ ಬೋಧಿಸುತಲಿ ಪ್ರೇಮದಿಂದ ಸಾಧನೆ ಸಾಧ್ಯಗಳ ಮರ್ಮ ಛೇದಿಸುತಲಿ ಭವಜಾಲವ ಮೋದವೀವ ಘನ ಮಹಿಮಗೆ 1 ಬಲು ಶಾಸ್ತ್ರದ ತೊಡಕಿಲ್ಲದೆ ಸುಲಭದಿಂದ ಬೋಧಿಸುವಾ ತಿಳಿ ಆತ್ಮನೇ ನೀನೆನ್ನುತ ಘನ ಶಾಂತಿಯ ನೀಡಿದವಗೆ 2 ನಾರಾಯಣ ಗುರುದೇವನ ಪರಮ ಪ್ರೀತಿ ಪಾತ್ರನೀತ ಧರೆಯೊಳಗವತರಿಸಿದ ಶ್ರೀ ಗುರುಶಂಕರದೇವನಿಗೆ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮಂಗಳ ಮೂರ್ಜಗದೊಡೆಯನಿಗೇ | ಶುಭಮಂಗಳ ಸ್ಪ್ಟಷ್ಟ್ಯಾದಿ ಕರ್ತನಿಗೇ ಪ ಮಂಗಳ ರವಿಕುಲ ತಿಲಕನಿಗೇ | ಶುಭಮಂಗಳ ಹನುಮನ ಒಡೆಯನಿಗೇ ||ಮಂಗಳ ಭೀಮನ ಸಲಹಿದಗೇ | ಶುಭಮಂಗಳ ಮಧ್ವ ಹೃದಾಂಬುಜ ರವಿಗೇ 1 ಮಂಗಳ ದಶಗ್ರೀವ ಛೇದಕಗೇ | ಶುಭಮಂಗಳ ಕೌರವ ಹಂತಕಗೇಮಂಗಳ ವ್ಯಾಸರ ಸೇವಕನೆನೆ | ನಮ್ಮಮಂಗಳ ದಶಮತಿ ಪೋಷಕಗೇ 2 ಮಂಗಳ ಸೀತೆಯ ತೋಷಕಗೇ | ಶುಭಮಂಗಳ ರುಕ್ಮಿಣಿ ಅರಸನಿಗೇಮಂಗಳ ಮಧ್ವರ ಪೊರೆದವಗೇ | ಶುಭಮಂಗಳ ಗುರು ಗೋವಿಂದ ವಿಠಲಗೇ 3
--------------
ಗುರುಗೋವಿಂದವಿಠಲರು
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲಮಂಗಳಾರತಿ ಎತ್ತಿರೆಲ್ಲಸಂಗಾತೀತ ಚಿದಾನಂದಾವಧೂತಾಂಗ ಶ್ರೀಬಗಳಾಮುಖಿ ದೇವಿಗೆ ಪ ಕರದೊಳು ಚೂಡೆ ಕಂಕಣವಿಟ್ಟುಕೊರಳೊಳು ಸರಿಗೆಯ ಧರಿಸಿಶಿರದಿ ರತ್ನದ ಕಿರೀಟವಿಟ್ಟು ಸರ್ವಾಭರಣವಧರಿಸಿ ದುರುಳರ ದುಷ್ಟರ ಛೇಧಿಸಿ ಭ-ಕ್ತರ ಪಾಲಿಪ ಬಗಳಾಮುಖಿಗೆ 1 ನಿತ್ಯ ನಿರ್ಗುಣ ನಿರಾಮಯಗೆ ನಿಂದಕವಿದಾರಣೆಗೆಭಕ್ತ ವತ್ಸಲೆ ಭುವನೇಶ್ವರಿ ಮಾತೆಗೆಭಕ್ತಾಧಾರೆಗೆ ಪ್ರತ್ಯಗಾತ್ಮೆಗೆ ಪರಬ್ರಹ್ಮ ರೂಪಿಣಿಭಕ್ತ ಪ್ರಾಣಿಗೆ ಬಗಳಾಮುಖಿಗೆ 2 ಅದ್ವಯ ಆಗಮಗೋಚರಗೆ ಅಚಲಾನಂದಳಿಗೆ ಶುದ್ಧಸಂವಿಜ್ಯೋತಿರ್ಮಯಳಿಗೆಸರ್ವಸಾಕ್ಷಿಗೆ ಸದ್ಗುರು ಚಿದಾನಂದಾವಧೂತಗೆ ಸಿದ್ಧಪರ್ವತವಾಸಿ ಬಗಳಾಮುಖಿಗೆ 3
--------------
ಚಿದಾನಂದ ಅವಧೂತರು
ಮಧ್ವ ಸರೋವರದ ಸ್ನಾನವ ಮಾಡಿರೊ ಬುದ್ಧಿವಂತರು ಕೇಳಿ ಇದರ ಮಹಾತ್ಮೆಯನು ಪ ತ್ರೇತಾಯುಗದಲ್ಲಿ ವರುಣತೀರ್ಥ ಕ್ಷಿತಿಯೊಳಗೆ ದ್ವಾಪರದಿ ಚಂದ್ರ ಪುಷ್ಕರಣಿ ಉ- ನ್ನತ ಕಲಿಯುಗದಲ್ಲಿ ಮಹಾ ತೀರಿಥ 1 ಸುರನದೀ ಮಿಕ್ಕಾದ ಸ್ಥಾನದಲಿ ಸೇವೆ ವಿ- ಸ್ತರವಾಗಿ ಕೊಳುತಿಪ್ಪಳು ಉಪೇಕ್ಷದಿ ಧರೆಯೊಳಗೆ ಇಲ್ಲಿ ಗುರು ಮಧ್ವಮುನಿ ಸರ್ವಾರ್ಥ ನಿರುತದಲ್ಲಿ ತೀವ್ರಗತಿ ಕೊಡುವಳೂ2 ಸಕಲ ವೇದಶಾಸ್ತ್ರ ಓದಿದವನಾದರೂ ಶಕುತಿವಂತನಾಗಿ ಇದ್ದನಾಗೆ ಸುಖ ತೀರ್ಥ ಸರೋವರದ ಸ್ನಾನ ಮಾಡದಿರಲು ಶಕಲ ಮತಿಯಲಿ ಮಹಾನರಕ ಭುಂಜಿಸುವಾ 3 ಮಜ್ಜನ ತಂದು ಕೊಡುವದು ನರಗೆ ಮಿಂದ ಫಲವೊ ಎಂದೆಂದಿಗೆ ಇಲ್ಲಿ ಬಿಡದೆ ವಾಸವಾದ ಮಂದಿಗಳ ಪುಣ್ಯ ಪ್ರತಾಪ ಎಣಿಸುವರಾರು 4 ಛೇದಿಸುವದಕೆ ಇದೇ ಸ್ನಾನವೆನ್ನಿ ಮೋದ ಮೂರುತಿ ನಮ್ಮ ವಿಜಯವಿಠ್ಠಲ ಕೃಷ್ಣ ಭೇದಾರ್ಥ ಮತಿಕೊಟ್ಟ ಭೇದವನು ತೊಲಗಿಸುವಾ5
--------------
ವಿಜಯದಾಸ
ಮಧ್ವರಾಯರೆ ನಿಮ್ಮ ಮುದ್ದು ಪಾದಗಳಿಗೆ ಬಿದ್ದು ಬೇಡಿಕೊಂಬೆ ಮನಶುದ್ಧಿಯ ಮಾಡೊ ಪ. ಮಧ್ವ ಗೇಹದೊಳು ಜನಿಸಿ ಪಾಜಕಾ ಕ್ಷೇತ್ರದೊಳು ಮುದ್ದು ರೂಪವ ತೋರಿ ಅ. ಪ. ಪದ್ಮನಾಭನ ಭಜಿಸುತ ಇರುತ ಗುಹೆಯಲಿ ಶುದ್ಧ ತಪವನೆ ಮಾಡಿ ಪ್ರಸಿದ್ಧಿಯಿಂದಲಿ ಇದ್ದ ದೈತ್ಯನ ಕೊಂದು ಪೊರೆಯುತಲಿ 1 ವಾದಿಗಳ ಛೇದ ಭೇದವ ಮಾಡಿ ಸಾಧಿಸಿನುತವ ಬೋೀಧಿಸಿ ಸುಜನರಿಗೆ ವ್ಯಾಧಿಗಳ ಕಳೆದು ಪೊರೆವ ಮೆರೆವ 2 ಸುಜ್ಞಾನ ತೀರ್ಥರೆಂದೆನಿಸಿ ಮಹಿಯೊಳ್ ಅಜ್ಞಾನ ಪರಿಹರಿಸಿ ಪೊರೆವ ಗುರು ಸುಜ್ಞಾನವೀವ ರುಕ್ಮಿಣೀಶವಿಠಲನ ಭಜಿಪ 3
--------------
ಗುಂಡಮ್ಮ
ಮಧ್ವಾಂತರ್ಗತ ವೇದವ್ಯಾಸ ಕಾಯೊ ಶುದ್ಧ ಮೂರುತಿಯೆ ಸರ್ವೇಶ ಪ. ಶ್ರದ್ಧೆಯಿಂದಲಿ ನಿನ್ನ ಭಜಿಸುವ ಭಕ್ತರಿಗೆಬುದ್ಧ್ಯಾದಿಗಳ ಕೊಟ್ಟುದ್ಧರಿಸೊ ದೇವರದೇವಅ.ಪ. ದ್ವಾಪರದಲಿ ಒಬ್ಬ ಮುನಿಪ ತನ್ನಕೋಪದಿಂದಲಿ ಕೊಡಲು ಶಾಪಸ್ಥಾಪಿಸಲು ಜ್ಞಾನ ಲೋಪಅಪಾರ ತತ್ವಸ್ವರೂಪಶ್ರೀಪತಿಯೆ ಕಾಯೆಂದು ಮೊರೆಯಿಡೆಪಾಪ ವಿರಹಿತÀಳಾದ ಯಮುನೆಯದ್ವೀಪದಲಿ ಅಂಬಿಗರ ಹೆಣ್ಣಿನರೂಪಕ್ಕೊಲಿದವಳಲ್ಲಿ ಜನಿಸಿದೆ 1 ಸೂತ್ರ ಪುರಾಣ ರಚಿಸಿವಾದಗಳ ನಿರ್ವಾದ ಮಾಡಿಸಾಧುವಂದಿತ ಬಾದರಾಯಣ 2 ಸುಮತಿಗಳಿಗೆ ನೀ ಬೋಧಿಸಿದೆ ಮಿಕ್ಕಕುಮತಗಳನ್ನು ಛೇದಿಸಿದೆ ಕ್ರಿಮಿಯಿಂದ ರಾಜ್ಯವಾಳಿಸಿದೆ ಜಗತ್‍ಸ್ವಾಮಿ ನೀನೆಂದು ತೋರಿಸಿದೆವಿಮಲರೂಪನೆ ಕಮಲನಾಭನೆರಮೆಯ ಅರಸನೆ ರಮ್ಯ ಚರಿತನೆಮಮತೆಯಲಿ ಕೊಡು ಕಾಮಿತಾರ್ಥವನಮಿಸುವೆನು ಹಯವದನಮೂರುತಿ3
--------------
ವಾದಿರಾಜ
ಮಧ್ವಾರ್ಯ - ಮಧ್ವಾರ್ಯ ಪ ಅದ್ವೈತಾರಣ್ಯ | ಪ್ರಧ್ವಂಸಾನಲ ಅ.ಪ. ಬಡವರು ಎನಿಸಿದ | ನಡುಮನೆ ದ್ವಿಜನಲಿಸಡಗರದಲಿ ಜನ | ಮೃಡನುತ ಗುರುವೇ 1 ಬಾಲನೆ ವೃಷಭನ | ಬಾಲ ಪಿಡಿದು ದೇ ವಾಲಯ ವನದಲಿ | ಲೀಲೆಯ ತೋರ್ದೆ2ಹಸು ಕೂಸಾಗಿಯೆ | ಬಿಸಿ ಹುರುಳಿ ಮೆದ್ದೆವೃಷ ವಿಕ್ರಯಿ ಋಣ | ತಿದ್ದಿದೆ ಬೀಜದಿ 3ಅಚ್ಚ್ಯುತ ಪ್ರೇಕ್ಷರಿಂ | ತಚ್ಚತುರಾಶ್ರಮಸ್ವೇಚ್ಛೇಲಿ ಸ್ವೀಕರ | ಕೃಛ್ರಾದ್ಯಾಚರ 4 ಇಷ್ಟ ಸಿದ್ದಿಗತ | ಭ್ರಷ್ಟ ವಿಷಯಗಳಎಷ್ಟೊ ತೋರಿ ಸುವಿ | ಶಿಷ್ಟನು ಎನಿಸಿದೆ 5 ಬೋಧ ಬದರಿಯಲಿಸಾದರ ಸ್ವೀಕೃತ | $ಗಾಧ ಭಾಷ್ಯಕೃತ 6 ಮೂಲ ಮೂರು ಹತ್ತು | ಏಳು ಗ್ರಂಥಗಳುಲೀಲೆಯಿಂದ ಕೃತ | ಶೀಲ ಸುಜನರಿಗೆ 7 ನಾನೆ ದೇವನೆಂ | ದ್ಹೀನ ಮಾಯಿಗಳಗೋಣು ಮುರಿದು ಸು | ಜ್ಞಾನವನಿತ್ತೆಯೊ8 ಏಕ ವಾಕ್ಯದಿಂ | ದೈತ್ಯವನಳಿಯುತಏಕ ಮೇವ ಹರಿ | ಏಕಾತ್ಮನೆಂದೇ 9 ಬುದ್ಧ್ಯಾಬ್ಧಿಯು ಬರೆ ಗೆದ್ದು | ವಾದದಲಿಅದ್ವೈತವ ಮುರಿ | ದದ್ವಿತೀಯ ಗುರು 10 ಕುಸುಮ ಫಲ | ನಿತ್ತು ತೋರ್ದೆ ನಿಜ 11 ಗೋಪಿ ಚಂದನದಿ | ಶ್ರೀಪ ಗೋಪ ಬರೆಶ್ರೀಪತಿ ಸ್ಥಾಪಿತ | ಆಪುರಿ ಉಡುಪಲಿ 12 ಅಷ್ಟಯತಿಗಳಿಂ | ಕೃಷ್ಣ ಪೂಜೆಗಳಸುಷ್ಠು ಗೈಯ್ಯಲೇ | ರ್ಪಟ್ಟಿತು ನಿನ್ನಿಂ13 ಐತರೇಯ ಸುವಿ | ನೀತರೆನಿಪ ತವಛಾತ್ರರಿಗಾಗಿಯೆ | ಕೂತು ಪೇಳ್ದೆ ಗುರು14 ಶೇಷ ಮುಖ್ಯರಾ | ಕಾಶದಿ ನಿಂತುಪದೇಶವ ಕೇಳುತ | ತೋಷವ ಪಟ್ಟರು 15 ತಕಿಟ ತಕಿಟವೆಂ | ದುತ್ಕಟ ನಾಟ್ಯದಿಪ್ರಕಟ ಹರ್ಷ ಸ್ತ್ರೀ | ನಿಕರಾವಳಿಯಿಂ16 ದೇವ ತತಿಯು ತಮ | ದೇವ ವಾದ್ಯದಿಂಪೂವ ಮಳೆಯ ಗರೆ | ಆವೃತನದರಿಂ 17 ಕೃತ ಕಾರ್ಯನೆ ತವ | ಸ್ತುತಿಯಗೈಯ್ಯ ಸುರತತಿಯ ಬದರಿ ಪುರ | ಗತ ನೆಂದೆವಿಸಿದೆ 18 ವ್ಯಾಸಾತ್ಮನು ಗುರು | ಗೋವಿಂದ ವಿಠಲನದಾಸ ಹೃದಯದವ | ಕಾಶದಿ ಭಾಸಿಸು 19
--------------
ಗುರುಗೋವಿಂದವಿಠಲರು
ಮಾಡಿ ನೀವು ಸತ್ಸಂಗ ನೋಡಿ ಘನ ಅಂತರಂಗ ಧ್ರುವ ಸಾರಿದೂರಲಿಕ್ಕೆ ವೇದ ಅರರಿವದೆನಗಗಾಧ ದಾರಿದೋರಿಕುಡು ಬೋಧ ಗುರುಪ್ರಸಾದ 1 ಬದಿಲಿರಲಿಕ್ಕೆ ಖೂನ ಇದಕ್ಯಾಕುದ್ದರಿ ಜ್ಞಾನ ಛೇದಿಸಿ ಅನುಮಾನ ಭೇದಿಸಿರೊ ಪೂರ್ಣ 2 ಹಿಡಿಯಲಿಕ್ಕೆ ಸತ್ಸಂಗ ಓಡಿಬಾವ್ಹಾ ಶ್ರೀರಂಗ ಮಾಡಿ ಭವಭಯಭಂಗ ನೋಡುವ ಕೃಪಾಂಗ3 ಎಲ್ಲಕ್ಕೆ ಶಿಖಾಮಣಿ ಸುಲಭ ಈ ಸಾಧನಿ ಸೊಲ್ಲಿಗೆ ಮುಟ್ಟಿದ ಪ್ರಾಣಿ ಬಲ್ಲವ ಸುಜ್ಞಾನಿ 4 ಪಿಡಿದು ಸತ್ಸಂಗತಿ ಕಡಿದು ಹೋಯಿತು ಭ್ರಾಂತಿ ಪಡೆದ ಸುಖ ವಿಶ್ರಾಂತಿ ಮೂಢ ಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುಂಜಾನೆ ಎದ್ದು ಮುರಹರನ ಸ್ಮರಿಸೆಲೆ ಮನವೆ ಅಂಜುವ ಭವದುರಿತ ಹಿಂಗಿಸುವನು ಧ್ರುವ ಕ್ಲೇಶ ಪರಿಹರಿಸುವನು ಭವ ನಾರಾಯಣೆನಲು ಮೀಸಲು ಮನದಲೊಮ್ಮೊ ಮಾಧವೆಂದೆನಲು ತಾ ಭಾವಿಸುವ ಹೃದಯದೊಳು ಗೋವಿಂದನು ವಾಸನೆಯ ಪೂರಿಸುವ ವಿಷ್ಣು ಯೆಂದೆನಲು ತಾ ದೋಷ ಛೇದಿಸುವ ಮಧುಸೂದನೆನಲು ಲೇಸುಗೈಸುವ ಜನುಮ ವಾಮನೆನಲು 1 ಸಿರಿ ಸಕಲ ಪದವೀವ ಶ್ರೀಧರಂದೆನಲು ತಾ ಹರುಷಗತಿನೀವ ಹೃಷೀ ಕೇಶನೆನಲು ಪಾತಕ ದೂರ ಪದ್ಮಾನಾಭೆಂದೆನಲು ಭಂಜನ ದಾಮೋದರೆನಲು ಸುರಿಸುವ ಅಮೃತವ ಸಂಕರುಷಣೆಂದೆನಲು ಹೊರೆವ ಧರೆಯೊಳು ವಾಸುದೇವೆನಲು ಪರಿಪರಿಯ ಸಲುಹುವ ಪ್ರದ್ಯುಮ್ನನೆಂದೆನಲು ಅರಹುಗತಿನೀವ ಅನಿರುದ್ದನೆನಲು 2 ಪೂರಿಸುವ ಭಾವ ಪರುಷೋತ್ತಮೆಂದೆನಲು ತಾ ತಾರಿಸುವ ಜನುಮ ಅಧೋಕ್ಷಜೆನಲು ನರಜನ್ಮುದ್ಧರಿಸುವ ನಾರಸಿಂಹೆಂದೆನಲು ಕರುಣ ದಯ ಬೀರುವ ಅಚ್ಯುತನೆನಲು ಜರಿಸುವ ದುವ್ರ್ಯಸನ ಜನಾರ್ದನೆನಲು ಊರ್ಜಿತಾಗುವುದು ಉಪೇಂದ್ರ ಎನಲು ತರಳ ಮಹಿಪತಿ ಪ್ರಾಣದೊಡೆಯ ಶ್ರೀಹರಿಯೆನಲು ಕರುಣದಿಂದದೊಗುವ ಗುರುಕೃಷ್ಣನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುಟ್ಟಿಗಿಟ್ಟಿ ನೀ ನಮ್ಮ ಎಲೊ ಎಲೊ ಮುರಾರಿ ನೀ ನಮ್ಮ ಛೇಛುಮ್ಮ [?] ಎಲೊ ಎಲೊ ಪ ಮಡಿಯನುಟ್ಟು ಮೈತೊಳೆದು ಬಂದಿಹೆವೊ ಕೊಡಬ್ಯಾಡೆಂಜಲವ ನೀ ಬಹು ತುಂಟಾ 1 ನಿಜ ಪತಿವ್ರತೆಯರು ನಾವಲ್ಲವೇನೂ ಜಾರ ನೀ ಬಲು ಚೋರ 2 ಸೋದರತ್ತೆ ಮಗ ನೀ ನಮಗಲ್ಲ ಶ್ರೀದವಿಠಲ ಬಿಡು ಹಾದಿ ಸುಮ್ಮನೆ ಹೋದೀ 3
--------------
ಶ್ರೀದವಿಠಲರು
ಮೆರೆದೆ ಮಹಿಮೆ ಉದಾರ ನಮ್ಮಗುರು ಭೀಮಸೇನ ಸುಧೀರ ಪ. ಮಂಗಳ ಮಹಿಮ ವಿಹಾರ ಮಾಯವಾದಿಗಳಿಗತಿ ಕ್ರೂರ ಅ.ಪ. ಹರಿಯ[ನಿರೂಪ] ವ ಧರಿಸಿ ಮರುತ ಕುಂತಿಯೊಳವತರಿಸಿಹರನೊಳು ವಾದಿಸಿ ಜೈಸಿ ಹರಿಸರ್ವೋತ್ತಮನೆಂದೆನಿಸಿ 1 ಬಕ ಹಿಡಿಂಬಕ ಕೀಚಕ ಜರಾಸುತರ ಮಣಿಮಂತ ಕೀಚಕ ದುರ್ಜನರಸಕಲ ಕೌರವ ಅತಿರಥರ ಕೊಂದು ಸುಖಪಡಿಸಿದೆ ಸಹೋದರರ 2 ಜ್ಞಾನಭಕುತಿಸಂಪನ್ನ ಅಜ್ಞಾನಾರಣ್ಯಛೇದನ ಮುದ್ದುಜ್ಞಾನೇಂದ್ರ ಹಯವದನನ್ನ ಧ್ಯಾನದೊಳಿರಿಸು ಪ್ರಸನ್ನ 3
--------------
ವಾದಿರಾಜ
ಮೋಡಿಯ ಅಸಗೊಳದೈ ಪ ಮೋಡಿಯ ಅಸಗೊಳದೈ | ಕುಳಿತರು ಕೈದೆಗೆದೈ 1 ಸಿಹಿಮಾಡಲು ಬಹುದೈ | ಸೆಣಸುತ ಗೆಲಬಹುದೈ 2 ಮದದಾನೆಯ ಭೇದಿಸಬಹುದೈ | ಸಿರಸಿನ ಹೂವಿನ ಯಸಳದಿ ವಜ್ರವನೆರೆ ಛೇದಿಬಹುದೈ 3 ಮುನ್ನ ಸುತ್ತಿರಬಹುದೈ | ಹೋದರು ಜನವಹುದೈ 4 ಕರಿಕಂಬಳಿ ಬಿಳಿದಾಗುವದೆಂಬುದ ಮರಳವನಲ್ಲೈ | ನುಡಿ ಸಿದ್ದಾಂತಹುದೈ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೋದದಲಿರಬೇಕಮ್ಮ | ಸುಮ್ಮನೆ ನೀನು ಮೋದದಲಿರಬೇಕಮ್ಮ ಪ. ಮೋದ ಶ್ರೀ ಗುರುಗಳ ಚರಣ ಕಮಲವನ್ನು ಮೋದದಿಂದಾಶ್ರಯಿಸಿ ಸುಖದಲಿರಲಿಬೇಕು ಲೋಕದ ಜನಗಳ ನುಡಿಗಳ ಲೆಕ್ಕಿಸದೆ ಲೋಕವಂದ್ಯನ ಚರಣ ಕಮಲವ ಸ್ಮರಿಸುತ ಅ.ಪ. ಪರಮಾತ್ಮನ ಕೃಪೆಗೆ ಕಾರಣವಿದು ಗುರುಕರುಣದ ಬಲವು ಅರಿಯದ ಮನುಜರ ಬಿರುನುಡಿಗೆ ಮನ ಕೊರಗಿಸದಂದದಿ ಹರುಷಪಡಲಿಬೇಕು 1 ಎಚ್ಚತ್ತು ನಡಿಯಬೇಕು | ಶ್ರೀ ಗುರುಸೇವೆ ಇಚ್ಛೆಯಿಂ ಮಾಡಬೇಕು ತುಚ್ಛ ಮಾತುಗಳಿಗೆ ಮನಕೊಡದೆ ಹರಿ ಮೆಚ್ಚುವಂದದಿ ಗುರು ಇಚ್ಛೆಯನರಿತು ನಡೆದು 2 ವಂದನೆ ನಿಂದ್ಯಗಳ | ಮೋಕ್ಷಾರ್ಥಿಯು ಒಂದಾಗಿ ಭಾವಿಸುತ ಮಂದರೋದ್ಧರನ ಮಾಯಕೆ ಮನದಿ ಮೋದಿಸುತ ಮಂದರಂದದಿ ಮನುಜರಿಗೆ ತೋರುತಲಿದ್ದು 3 ಮಾನವ ಜನ್ಮ ಸಾಧನ ಜನ್ಮವಮ್ಮ ಸಾಧಾರಣವಲ್ಲ ಸಾಧು ಸಜ್ಜನಸಂಗ ಸಾಧಿಸಿ ದುಷ್ಕರ್ಮ ಛೇದಿಸಬೇಕಮ್ಮ 4 ಚಿಂತೆಯನಳಿಯಬೇಕು | ಶ್ರೀ ಗುರು ಕರುಣ ಅಂತರ ತಿಳಿಯಬೇಕು ಸಂತತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ಭಜಿಸಿ ಮುಕ್ತಿ ಸಾಧಿಸಬೇಕು 5
--------------
ಅಂಬಾಬಾಯಿ