ಒಟ್ಟು 194 ಕಡೆಗಳಲ್ಲಿ , 57 ದಾಸರು , 174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ವೈತ ಅದ್ವೈತೆಂದು ಹೊಡದಾಡದಿರೊ ಪ್ರಾಣಿ ಚೇತಿಸಿ ಬ್ಯಾರಿಹ ವಸ್ತುಗಾಣಿ ಧ್ರುವ ಅದ್ವೈತ ಅ- ದ್ವೈತ ಎನಲಿಕ್ಕೆ ಅದೆನೆ ತಾಂ ದ್ವೈತ 1 ಹಿಂದು ಮುಂದಾಗಿ ಆಡಿಸುತಿಹ್ಯ ನಿಜಖೂನ ಎಂದಿಗಾದರು ತಿಳಿಯಗುಡದು ಪೂರ್ಣ 2 ಅತಿಸೂಕ್ಷ್ಮ ತಿಳುವಾದರಲ್ಲೆ ಬಿದ್ದದ ಮಲಕು ನೇತಿ ನೇತೆಂದು ಸಾರುತಿದೆ ಶ್ರುತಿ ಇದಕೆ ತಿಳಿಕೊ 3 ದ್ವೈತ ಎಂದವನೆ ತಾಂ ಪರಮ ವೈಷ್ಣವನಲ್ಲ, ಅ ದ್ವೈತನೆಂದವನೆ ತಾಮ ಪರಮ ಸ್ಮಾರ್ತನಲ್ಲ 4 ಸ್ಮಾರ್ತ ವೈಷ್ಣವ ಮತ ಗುರು ಮಧ್ವಮುನಿಬಲ್ಲ ಅರ್ತು ಸ್ಥಾಪಿಸುವದು ಮನುಜಗಲ್ಲ 5 ಮೂರುವರಿ ಮೊಳದ ದೇಹದ ಶುದ್ಧಿ ನಿನಗಿಲ್ಲ ದೋರುವರೆ ತರ್ಕಸ್ಯಾಡುವ ಸೊಲ್ಲ 6 ದ್ವೈತ ಅದ್ವೈತಕ ಬ್ಯಾರಿಹ ಗುರುಗುಟ್ಟು ಚಿತ್ತ ಶುದ್ದಾಗಿ ಮಹಿಪತಿಯ ಮುಟ್ಟು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧನ್ಯ ಧನ್ಯವಾಯಿತು ಜನುಮಾ | ಆವಪುಣ್ಯವೋ ಅರಿಯೇ ನಮ್ಮಾ ಪ ನಾನಾ ಜನ್ಮದ ಬಲಿಯನೆ ಗೆದ್ದು ಸಲೆ | ಮಾನುಷ ದೇಹದಲಿಂದು | ಮಾನುಭಾವರ ವಂಶದಿ ಬಂದು | ಅವರ | ಸಾನಿಧ್ಯ ಸೇವೆಯ ಪಡೆದು 1 ಗುರುಕ್ಷೇತ್ರವೇ ಯನಗಿದೇ ಕಾಶೀ | ಗಂಗೆ | ಮೆರೆವುದು ಗುರುತೀರ್ಥವೆನಿಸಿ | ಗುರು ವಿಶ್ವೇಶ್ವರ ನೆನೆವಾಸೀ | ಕಂಡು | ಪೂರಿತಾಯಿತು ಮನದಾಸಿ 2 ಭವ | ಕರ್ಮ | ಪಾದ ಧರ್ಮಾ | ನಿಜ | ನಂದನ ಗಾನಂದೋಬ್ರಹ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧ್ಯಾನಿಸು ಶ್ರೀಹರಿಯ ಧ್ಯಾನಿಸು ಪ ಧ್ಯಾನಿಸು ಮನವೆ ಶ್ರೀ ಹರಿಯ ಪಾದ ಧ್ಯಾನವಂತರ್ಯಾಮಿ ಹರಿಯ, ಆಹ ಪ್ರಾಣಾಪಾನ ವ್ಯಾನೋದಾನ ಸಮಾನರ್ಗೆ ಪ್ರಾಣನಾಗಿಹ ಮುಖ್ಯ ಪ್ರಾಣಾಂತರ್ಗತನ ಅ.ಪ ಪರಮಾಣು ಪ್ರದೇಶದಲ್ಲಿ, ಪ್ರಾಣಿ ರಾಸಿ ಅನಂತವುಂಟಲ್ಲಿ ಹೀಗೆ ವರಲುತಿದೆ ವೇದದಲ್ಲಿ ದೃಷ್ಟಾಂ ತರವ ಪೇಳುವೆ ದೃಢದಲ್ಲಿ-ಆಹ ಪರಮ ಸೂಕ್ಷ್ಮ ವಟತರು ಫಲದಲ್ಲಿಹ ನಿತ್ಯ 1 ನಿರುತ ಸುವರಣ ಬ್ರಹ್ಮಾಂಡದಲ್ಲಿ ಪರಿಪೂರ್ಣವಾಗಿ ಅಖಂಡವಾಗಿ ಮೆರೆವುತಲಿಪ್ಪ ಮಾರ್ತಾಂಡ ದಿವ್ಯ ಕಿರಣದಂತಿರುವ ಪ್ರಚಂಡ-ಆಹ ಹೊರಗೆ ಒಳಗೆ ಹರಿ ಚರಿಸುವ ಪರಿಯ ನೀ ನರಿತು ಆವಾಗಲು ದೊರಕಿದ ಸ್ಥಳದಲ್ಲಿ 2 ಸಲಿಲ ಭೂಗಿರಿ ಲತೆ ನಾನಾ-ವೃಕ್ಷ ಮೃಗ ಪಕ್ಷಿ ಕಾನನ-ಮುಕ್ತ ಸ್ಥಳಗಳವ್ಯಾಕೃತ ಗಗನ, ತೃಣ- ಪಾವಕ ತರು ಪವನ-ಆಹ ಒಳಗೆ ಹೊರಗೆ ಎಲ್ಲ ಸ್ಥಳದಲ್ಲಿ ಹರಿಮಯ ನೆಲೆಯ ನೀ ನಲವಿಂದ ತಿಳಿದು ಆವಾಗಲು3 ವಿಶ್ವ ಮತ್ಸ್ಯಾದಿ, ತೇಜೊ ರಾಶಿ ಹಯಗ್ರೀವಾದಿ, ಜೀವ ರಾಶಿಯೊಳಿದ್ದು ಅನಾದಿ ಸರ್ವ ದೇಶ ಭೇದಿಸುವಂಥ ವೇದಿ-ಆಹ ಮೂರ್ತಿ ಶ್ರೀಶ ರಂಗನೆಂದು ನಿತ್ಯ 4 ಸಪ್ತಾವರಣ ದೇಹದಲ್ಲಿ, ದಶ ಸಪ್ತ ದ್ವಿಸಹಸ್ರ ನಾಡಿಯಲಿ, ದಶ ಸಪ್ತ ದ್ವಿಸಹಸ್ರ ರೂಪದಲಿ ಹರಿ ವ್ಯಾಪ್ತ ನಿರ್ಲಿಪ್ತ ಸ್ಥಾನದಲಿ-ಆಹ ಆಪ್ತನಂತಿಪ್ಪ ಸುಷುಪ್ತಿ ಜಾಗರದೊಳು ತಪ್ತ ಕಾಂಚನದಂತೆ ದೀಪ್ತಿಸುತಿಪ್ಪನ್ನ5 ಜೀವರಿಂದತ್ಯಂತ ಭೇದ, ಪ್ರತಿ ಜೀವಾಂತರದಲ್ಲಿ ಮೋದನಾಗಿ ಯಾವಾಗಲಿರುತಿಹ ವೇದ-ದಲ್ಲಿ ಪೇಳುವುದು ಸತ್ಯಂಭಿದಾ-ಆಹ ಈ ವಿಧ ವೇದಾರ್ಥ ಸಾವಧಾನದಿ ತಿಳಿದು ಶ್ರೀ ವಾಯುಮತದ ಸುಕೋವಿದರೊಡಗೂಡಿ 6 ಶ್ರೀಕೇಶವನೆ ಮೂಲರಾಶಿ, ಶ್ರುತಿ- ಏಕೋ ನಾರಾಯಣ ಆಸೀತ್ ನಾನಾ ಲೋಕ ಸೃಷ್ಟಿಪ ಧಾತನಾಸೀತ್, ಜಗ ದೇಕತಾರಕ ಉಪದೇಶೀ-ಆಹ ನೀ ಕೇಳಿ ನಿಗಮಾರ್ಥ ನೀಕರಿಸು ಸಂಶಯ ಏಕಮೇವ ದ್ವಿತಿಯ ಶ್ರೀಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉ- ತ್ತುಂಗ ಗುಣಾಂತರಂಗ, ಕಾ ಳಿಂಗ ಸರ್ಪನ ಮದಭಂಗ, ಭು ಜಂಗಶಯನ ಅಮಲಾಂಗ-ಆಹ ಮಂಗಳ ಇಡಾ ಪಿಂಗಳ ಸುಷುಮ್ನ ಸಂಗಡ ಮಧ್ಯದಿ ತಿಂಗಳಂತಿಪ್ಪನ್ನ 8 ಹೃದಯಸ್ಥಾನದಲಿದ್ದ ಮೂರ್ತಿ, ಬಲು ಅದುಭುತಾತನ ದಿವ್ಯಕೀರ್ತಿ, ಅದು ಪದುಮುಜಾಂಡದಿ ಪರಿಪೂರ್ತಿ ತರು ವುದಕೆ ಬೇಕು ವಾಯು ಸಾರಥಿ-ಅಹಾ ಅದು ಬಿಂಬಮೂರ್ತಿ ಜೀವದಾಕಾರಾವಾಗಿದ್ದ ಪದುಮಕೋಶದಲ್ಲಿ ಸದಮಲಾತ್ಮಕನನ್ನು 9 ಧರೆಯನಳೆದ ದಿವ್ಯ ಚರಣ, ಅದು ಮೆರೆವುತಿಹುದು ಕೋಟಿ ಅರುಣನಂತೆ ಪರಿಪೂರ್ಣ ಭರಿತವು ಕಿರಣ, ಸ್ಮರಿ- ಪರಿಗೆ ಮಾಡುವುದು ಕರುಣ-ಆಹ ತರಣಿಯಂಥ ನಖದಿ ಸುರನದಿಯನು ಹೆತ್ತ ಎರಡೈದು ಬೆರಳಲ್ಲಿ ಕಿರುಗೆಜ್ಜೆ ಪೆಂಡೆಯು 10 ಪೆರಡು ಜಾನು ಜಂಘೆ ಘನ್ನ ಸುರು- ಚಿರ ವಜ್ರಾಂಕುಶ ಧ್ವಜ ನಾನಾ, ದಿವ್ಯ ವರ ರೇಖೆಯಿಂದಲೊಪ್ಪುವನ, ಜಘನ ಪರಮ ಶೋಭಿತ ಸುಂದರನ-ಆಹ ಕದಳಿ ಕಂಬ ಇರುವೂರು ಶೋಭಿಸೆ ಸರಿಗಾಣೆ ಹರಿವುಟ್ಟ ವರ ಪೀತಾಂಬರವನ್ನು 11 ಗಜವೈರಿಯಂತಿಪ್ಪ ಮಧು ಬಲು ವಿಜಯ ವಡ್ಯಾಣ ಅಚ್ಛೇದ್ಯ, ಭೇದ್ಯ ನಿಜಘಂಟೆ ಘಣರೆಂಬೊ ವಾದ್ಯ, ಕು ಬುಜೆ ಡೊಂಕ ತಿದ್ದದನಾದ್ಯ-ಆಹ ಅಜ ಜನಿಸಿದ ನಾಭ್ಯಂಬುಜದಳ ಚತುರ್ದಶ ಕುಕ್ಷಿ ನಿಜಪೂರ್ಣ ಸಖನನ್ನು 12 ಉದರ ತ್ರಿವಳಿ ನಾನಾ ಹಾರ ದಿವ್ಯ ಪದಕ ಪವಳದ ವಿಸ್ತಾರ ರತ್ನ ಮುದದಿಂದ ಧರಿಸಿದ ಧೀರ ಸುಂದರ ವಾದ ಕಂಬುಕಂಧರ-ಆಹಾ ಪದುಮಜ ಭವರಿಂದ ತ್ರಿದಶರು ತಿಳಿಯುತ್ತ ಸದಾಕಾಲ ಧ್ಯಾನಿಪ ಹೃದಯಾಂಬರವನ್ನು 13 ಸಿರಿವತ್ಸ ಕೌಸ್ತುಭಹಾರ, ಮೇಲೆ ಸರಿಗೆ ನ್ಯಾವಳದ ವಿಸ್ತಾರ ಅಲ್ಲಿ ವೈಜಯಂತಿ ಮಂದಾರ, ಗುರು ತರವಾದ ಭುಜ ಚತುರ-ಆಹ ಮರಿಯಾನೆ ಸೊಂಡಿಲಂತಿರೆ ಬಾಹು ಕೇತಕಿ ಬೆರಳು ನಕ್ಷತ್ರದ ಅರಸಿನಂತೆ ನಖ14 ಕರಚತುಷ್ಟಯದಲ್ಲಿ ಶಂಖ, ಚಕ್ರ ವರಗದೆ ಪದುಮು ನಿಶ್ಶಂಕನಾಗಿ ಧರಿಸಿ ಮೆರೆವೊ ಅಕಳಂಕ, ದುರು ಳರ ದಂಡಿಸುವ ಛಲದಂಕ ಆಹ ಬೆರಳು ಮಾಣಿಕದುಂಗುರ ಕಡಗ ಕಂಕಣ ಬಿರುದಿನ ತೋಳ್ಬಂದಿ ವರ ಭುಜಕೀರ್ತಿಯ15 ಅಗರು ಚಂದನ ಗಂಧÀಲೇಪ, ಕಂಬು ಸೊಗಸಾದ ಕಂಠಪ್ರತಾಪ, ಮಾವು ಚಿಗುರಲೆ ಕೆಂದುಟಿ ಭೂಪ, ನಸು ನಗುವ ವದನ ಸಲ್ಲಾಪ-ಆಹ ಮಗನಾಗಿ ತಾನು ಗೋಪಿಗೆ ವದನದೊಳು ಅಗಣಿತ ಮಹಿಮನ್ನ 16 ಮುಗುಳು ಮಲ್ಲಿಗೆ ಮೊಗ್ಗೆ ದಂತ ಪಙÂ, ಜಗವ ಮೋಹಿಸುವ ಸುಶಾಂತ ಜಿಹ್ವೆ ನಿಗಮಕೆ ವೇದ್ಯವಾದಂಥ ಬಲು ಬಗೆಯಿಂದ ನಡೆಸುವ ಪಂಥ-ಆಹ ಪೊಗಳಲಾರದು ವೇದ ಖಗವಾಹನನ ಮಹಾ ಅಗಣಿತ ಮಹಿಮೆ ಸಂಪಿಗೆಯ ನಾಸಿಕನನ್ನು 17 ಪೊಳೆವೊ ವಿದ್ಯುತ ಕಪೋಲ, ನೀಲೋ- ತ್ಪಲದಳ ನೇತ್ರ ವಿಶಾಲ, ದಿವ್ಯ- ತಿಲಕವನಿಟ್ಟ ಸುಫಾಲ, ನೀಲಾ- ಚಲಕಾಂತಿ ತನುರುಹ ಜಾಲ-ಆಹ ಕುಂಡಲ ಕರ್ಣದೊಲುಮೆಯ ಚೆಲುವಿಕೆ ಇಳೆಯೊಳಗೆಣೆಗಾಣೆ ಇಂದಿರಾಲೋಲನ್ನ 18 ಶುಭ ನೋಟ, ಕಂಗ- ಳೆರಡ ಚೆಲುವಿಕೆ ಮಾಟಕಿನ್ನು ಅರವಿಂದ ಸರಿಯಿಲ್ಲ ದಿಟ ಅಲ್ಲಿ ತರಣಿ ಚಂದ್ರಮರ ಕೂಟ-ಆಹ ಶರಣ ಜನರ ಮನೋಹರುಷ ವಾರ್ಧಿಗೆ ಸುಧಾ ಕರ ದುಷ್ಟಜನರ ತಿಮಿರಕ್ಕೆ ಭಾಸ್ಕರನ್ನ 19 ಹೊಳೆವ ಹುಬ್ಬುದ್ವಯ ಸ್ಮರನ ಚಾಪ- ತಲೆ ತಗ್ಗಿಸುವಂಥ ರಚನ ಫಾಲ- ದಲ್ಲಿಟ್ಟು ತಿಲಕ ಸುಂದರನ ಲೋಕ- ಕಳವಳಗೊಳಿಸುವ ಸುಗುಣ-ಆಹ ನಲಿವ ವದನದಲ್ಲಿ ಅಳಿಗಳಂತೊಪ್ಪುವ ಸುಳಿಗುರುಳಿನ ಮೇಲೆ ವಲಿವಾರಳೆಲೆಯನ್ನು 20 ರೂಪ ಶೃಂಗಾರ ವಿಲಾಸ ಉಡು- ಭೂಪ ನಾಚುವ ಮುಖಹಾಸ ವಿಶ್ವ ರೂಪ ಧೃತ ಸ್ವಪ್ರಕಾಶ ಸರ್ವ ವ್ಯಾಪಕಾಖಿಳ ಜಗದೀಶ-ಆಹ ತಾಪಸರಿಗೆ ಕರುಣಾಪಯೋನಿಧಿ-ಅಣು ರೂಪಿನೋಳ್ ಪರಮಾಣು ರೂಪನಾಗಿಪ್ಪನ್ನ21 ಕೋಟಿಮಾರ್ತಾಂಡ ಸಂಕಾಶ ಕಿ ರೀಟಕ್ಕೆ ಅಸಮ ಪ್ರಕಾಶ ಎಲ್ಲು ಸಾಟಿಗಾಣೆನು ಲವಲೇಶ ಕಪಟ- ನಾಟಕ ಶ್ರೀ ಲಕುಮೀಶ-ಆಹ ನಖ ಲಲಾಟ ಪರಿಯಂತ ನೋಟದಿಂದಲೆ ಈಶ ಕೋಟಿ ಸಹಿತನಾಗಿ 22 ಕಾಮಾದಿಗಳನೆಲ್ಲ ತರಿದು ಮುಕು- ತೀ ಮಾರ್ಗವನ್ನೆ ನೀನರಿದು ಅತಿ- ಪ್ರೇಮದಿ ಗುರುಗಳ ನೆನೆದು ಹೇಮ ಭೂಮಿ ಕಾಮಿನಿಯರ ಜರಿದು-ಆಹ ಸಾಮಜ ವರದ ಶ್ರೀ ವಿಜಯವಿಠ್ಠಲನಂಘ್ರಿ ಯುಗ್ಮ ನಿತ್ಯ 23
--------------
ವಿಜಯದಾಸ
ನನ್ನಿಂದ ನಾನೇ ಜನಿಸಿ ಬಂದೆನೆ ದೇವಎನ್ನ ಸ್ವತಂತ್ರವು ಲೇಶವಿದ್ದರು ತೋರು ಪ ನಿನ್ನ ಪ್ರೇರಣೆಯಿಂದ ನಡೆದು ನುಡಿದ ಮೇಲೆನಿನ್ನದು ತಪ್ಪೋ ನನ್ನದು ತಪ್ಪೋ ಪರಮಾತ್ಮಅ ಜನನಿಯ ಜಠರದಲಿ ನವಮಾಸ ಪರಿಯಂತಘನದಿ ನೀ ಪೋಷಿಸುತಿರೆ, ನಾನುಜನಿಸಲಾರೆನು ಎನೆ ಜನಿಸೆಂದಿಕ್ಕಳದಿಂದವನಜಾಕ್ಷ ನೂಕಿದವನು ನೀನಲ್ಲವೆ 1 ಎಲವುಗಳ ಜಂತೆ ಮಾಡಿ ನರಗಳ ಹುರಿಯಿಂಹೊಲಿದು ಚರ್ಮವ ಹೊದಿಸಿ ದೇಹದೊಳುಮಲಮೂತ್ರಕೆ ಹೊರದಾರಿ ನಿರ್ಮಿಸಿ ಹೃದಯದಲಿನೆಲಸಿ ಚೇತನವನಿತ್ತವ ನೀನಲ್ಲವೆ 2 ಜನಿಸಿದಾರಭ್ಯದಿಂದ ಇಂದಿನ ಪರಿಯಂತಘನಘನ ಪಾಪ ಸುಕರ್ಮಂಗಳನುಮನಕೆ ಬೋಧಿಸಿ ಮಾಡಿಸಿ ಮುಂದೆ ಇದನೆಲ್ಲಅನುಭವಿಸುವುದು ಜೀವನೊ ನೀನೊ ದೇವ 3 ಅಂಧಕನ ಕೈಲಿ ಕೋಲಿತ್ತು ಕರೆದೊಯ್ಯುವಾಮುಂದಾಳು ತಪ್ಪಿ ಗುಂಡಿಗೆ ಕೆಡಹಲುಅಂಧಕನ ತಪ್ಪೊ ಅದು ಮುಂದಾಳಿನ ತಪ್ಪೊಹಿಂದಾಡಬೇಡ ಎನ್ನೊಳು ತಪ್ಪಿಲ್ಲವೊ 4 ಕಂದನ ತಾಯಿ ಆಡಿಸುವಾಗ ಅದು ಪೋಗಿಅಂದಿ ಬಾವಿಯ ನೋಡುವುದನು ಕಂಡುಬಂದು ಬೇಗನೆ ಬಾಚಿ ಎತ್ತಿಕೊಳ್ಳದಿದ್ದರದುಕಂದನ ತಪ್ಪೊ ಮಾತೆಯ ತಪ್ಪೊ ಪರಮಾತ್ಮ 5 ಭಾರ ನಿನ್ನದೊ ದೂರು ನಿನ್ನದೊ ಕೃಷ್ಣನಾರಿ ಮಕ್ಕಳು ತನುಮನ ನಿನ್ನದಯ್ಯಕ್ಷೀರದೊಳಗದ್ದು ನೀರೊಳಗದ್ದು ಗೋವಿಂದಹೇರನೊಪ್ಪಿಸಿದ ಮೇಲೆ ಸುಂಕವೆ ದೇವ 6 ನ್ಯಾಯವಾದರೆ ದುಡುಕು ನಿನ್ನದೊ, ರಂಗ, ಮತ್ತ-ನ್ಯಾಯವಾದರೆ ಪೇಳುವರಾರುಮಾಯಾರಹಿತ ಕಾಗಿನೆಲೆಯಾದಿಕೇಶವಕಾಯಯ್ಯ ತಪ್ಪನೆಣಿಸದೆ ದೇವ 7
--------------
ಕನಕದಾಸ
ನಂಬುವುದು ತಾನು ಎಂತು ಸತಿಯು ಸುತರು ಮಗಳನುನಂಬಿ ಕಡೆ ಹಾಯ್ದುದುಂಟೆ ಹಾದಿಕಾರರನು ಪ ದಾರಿಕಾರರಿಗೆ ವಸತಿ ಮಳಿಗೆ ಭೇಟಿಯಲ್ಲೇದಾರಿ ಹಿಡಿದ ಬಳಿಕ ತಿರುಗಿ ಭೇಟಿಯಾಗೋದೆಲ್ಲಿದಾರ ಸುತರ ಭೇಟಿಯಿದೇ ದೇಹದೊಳಗೆ ಎಂದರಿಯೋಶರೀರವು ಬಿದ್ದ ಬಳಿಕ ಭೇಟಿ ಮುಂದೆ ಮರೆಯೋ1 ಕನಸಿನವರ ತಾನು ಈಗ ನೆನಸಲಿಕ್ಕೆ ಬಹರೆಕನಸಿನಂತೆ ತೋರುವರು ನೀನು ನಚ್ಚುವರೆಮನೆಯ ಬದುಕುಭಾಗ್ಯವೆಲ್ಲ ಮನದಿ ಜರೆದು ಬಿಡುನಿನಗೆ ಗತಿಯು ಏನು ಎಂದು ನೀನು ತಿಳಿದು ನೋಡು 2 ಹೆಗ್ಗಣವು ಜಾಗಿನೊಳಗೆ ಬಿದ್ದು ಮಿಡುಕಿದಂತೆವೆಗ್ಗಳಾಗಿ ಸಂಸಾರಕೆ ಮಾಡಿವೆಯೋ ಚಿಂತೆನುಗ್ಗು ಆದೆ ಬಯಲಭ್ರಾಂತಿ ನಿನಗೆ ವ್ಯಾಪಕಾಗಿಮುಗ್ಗುವೆ ನೀನೊಣನ ತೆರದಿ ನರಕದಲ್ಲಿ ಹೋಗಿ3 ನನ್ನ ಸಂಸಾರವೆನ್ನಬೇಡ ನೀನು ಇದನು ಈಗನನ್ನ ನನ್ನದೆಂದೆ ಹೋದ ನಿಮ್ಮಪ್ಪ ಮುಕ್ತನುಇನ್ನು ನಾಶವಿದು ಒಬ್ಬರಿಲ್ಲ ಸತ್ಯನಿನ್ನದಾರೆಂದು ಮರೆಯದಡೆ ನಿತ್ಯಾ4 ಇಂದ್ರಜಾಲ ನೋಡಲಿಕ್ಕೆ ಖರೆಯದಾಗಿ ಇಹುದುಅಂದದಾ ಪರಿಯು ಸಂಸಾರವೆ ನಿತ್ಯವಿಹುದುಬಂಧನವು ನಿನಗೆ ಇಹುದು ಗುರುವಿನ ಪಾದವಹೊಂದು ಮುಂದೆ ಚಿದಾನಂದನಹೆ ನೀನೀಗ ಎಂದು 5
--------------
ಚಿದಾನಂದ ಅವಧೂತರು
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನಾನು ಎಂಬೊದೆ ದೊಡ್ಡದು ನೀನೆಲ್ಲಿಹೆಯೊ ನಾನೆಲ್ಲಿ ಕಾಣಲಿ ಪ. ನಾನೆಂಬೊ ವ್ಯಾಪಾರ ನೀನೆ ಮಾಡಿಹೆ ಗಾನಲೋಲ ಸರ್ವರಂಗಲಿ ನಾನೇ ಇಹೆನೆಂದು ಅ.ಪ. ಸರ್ವರೊಳಗೆ ನಾನೆಂಬೊದೇ ಇರಲಾಗಿ ಸಾರ್ವಜನಿಕ ನೀನೆಲ್ಲಿಹೆಯೊ ಸರ್ವಧಿಕಾರಿ ನೀನೇ ಎಂಬ ವಿಬುಧರ ಸರ್ವಕಾಲದಿ ಸರ್ವ ಸುರರ ಸಹಿತಿಹೆ ನಾನು 1 ಮಿಂಚಿದ ಪಾಪವ ಮಾಡುವ ಮನುಜರ ವಂಚಕತನದಲಿ ದೇಹದೊಳಿಹೆ ನೀನು ಸಂಚಿತಾರ್ಥದ ಪುಣ್ಯವ ಗಳಿಸಿದ ಭಕ್ತರ ಮಿಂಚಿನ ಹುಳದಂತೆ ಕಂಚಿ ವರದ ಇಹೆ 2 ರಘುಪತೆ ರಾಘವನೆನುತ ಶ್ರೀ ಶ್ರೀನಿವಾಸನ ಬಗೆ ಬಗೆ ಸ್ತುತಿಸದೆ ಅಧಮರಿಗಿಲ್ಲ ಅಘಹರ ಗೋಪಿಗೆ ಮಿಗೆಯಾಟ ತೋರಿಹೆ ನಗಧರ ಅಳಗಿರಿ ಸೊಗಸಿನ ಚೆನ್ನಿಗ ನಾನು 3
--------------
ಸರಸ್ವತಿ ಬಾಯಿ
ನಿಂದು ದರ್ಶನ ನೀಡೊ ಅರವಿಂದ ಮಧ್ಯದಲಿ ಕಂದರ್ಪಜನಕ ದೇವ ಪ. ನಂದಕಂದನೆ ನಿನ್ನ ಮಂದಮತಿ ನಾನೆಂತು ವಂದಿಸಿ ಸ್ತುತಿಪೆನಯ್ಯ | ಜೀಯ ಅ.ಪ. ಸತ್ವಗುಣವಾರಿಧಿಯೆ ತತ್ವಗಳ ತಿಳಿಸೆನಗೆ ಉತ್ತಮ ಪಥವ ತೋರೋ ನಿತ್ಯ ಸಂಸಾರದಲ್ಲಿ ಸುತ್ತಿಸದೆ ನಿನ್ನಪದ ಭೃತ್ಯಸಂಗದಲಾಡಿಸೊ | ಸತತ 1 ವಿಶ್ವತೈಜಸಪ್ರಾಜ್ಞತುರಿಯ ರೂಪಗಳಿಂದ ವಿಶ್ವೇಶ ದೇಹದೊಳಗೆ ವಿಶ್ವವ್ಯಾಪಕ ಹರಿಯೆ ಸ್ವಪ್ನ ಜಾಗ್ರತೆ ಸುಷುಪ್ತಿ ವಿಶ್ವಮಯ ಜೀವಕೀವೆ | ಕಾವೆ 2 ತತ್ವಾಧಿಪತಿಗಳೊಳು ವ್ಯಾಪ್ತನಾಗಿರುತ ನೀ ಮತ್ತೆಲ್ಲ ಕಾರ್ಯ ಮಾಳ್ಪೆ ಚಿತ್ತಾಭಿಮಾನಿ ಶ್ರೀ ಮಾರುತಾಂತರ್ಯಾಮಿ ವ್ಯಾಪ್ತನಾಗಿರುವೆ ಜಗದಿ | ಮುದದಿ 3 ಮಧ್ಯನಾಡೀ ಹೃದಯ ಮಧ್ಯಪದ್ಮದ ಮಧ್ಯೆ ಇದ್ದೆನೆಗೆ ರೂಪ ತೋರೋ ಒದ್ದಾಡುವೆನೊ ಭವದಿ ಉದ್ಧರಿಸಬೇಕಿನ್ನು ಒದ್ದು ತಾಪತ್ರಯವನು | ನೀನು 4 ಶ್ರೀನಿವಾಸನೆ ನಿನ್ನ ಧ್ಯಾನ ಅನವರತದಲಿ ಮಾನಸದಲೆನಗೆ ನೀಡೋ ಶ್ರೀನಿಧೇ ಗೋಪಾಲಕೃಷ್ಣವಿಠ್ಠಲ ಎನ್ನ ಸಾನುರಾಗದಲಿ ಸಲಹೋ ಎಲವೋ 5
--------------
ಅಂಬಾಬಾಯಿ
ನಿನ್ನ ದಾಸರ ದಾಸ ನಾನಯ್ಯ-ಹರಿ- ಯನ್ನನುಪೇಕ್ಷಿಪರೇನಯ್ಯ ಪ ಕಾಮಕ್ರೋಧಗಳಿನ್ನೂ ಬಿಡಲಿಲ್ಲ-ನಿನ್ನ- ಪ್ರೇಮವೆನ್ನೊಳುಕಾಲಿಡಲಿಲ್ಲ ತಾಮಸಬೀಜವ ಸುಡಲಿಲ್ಲ1 ಆಚಾರದಲಿ ಕಾಲಗತಿಯಿಲ್ಲ-ಬಲು-ನೀಚರ ಸಂಗಕೆ ಮಿತಿಯಿಲ್ಲ ಪ್ರಾಚೀನ ಕರ್ಮಕ್ಕೆ ಚ್ಯುತಿಯಿಲ್ಲ-ಇದ- ಗೋಚರಪಡಿಸುವ ಮತಿಯಿಲ್ಲ 2 ದೇಹದಿ ಬಲವಿಲ್ಲವಾದರೂ-ವ್ಯಾ- ಮೋಹವು ಬಿಡದಲ್ಪವಾದರೂ ಗೇಹದಿ ಸುಖವಿಲ್ಲದಿದ್ದರು-ಈ ಸೋಹಮೆಂಬುದಕಿಲ್ಲ ಬೆಸರು 3 ದಾಸರ ಸಂಗದೊಳಾಡಿಸು-ಹರಿ-ವಾಸರವ್ರತದೊಳು ಕೂಡಿಸು ವಾಸುದೇವನೆ ನಿನ್ನ ಪಾಡಿಸು-ಸಿರಿವಾಸನಾಮದ ಸವಿ ಯಾಡಿಸು4 ಶರಣವತ್ಸಲನಹುದಾದರೆ-ಘನ-ಕರುಣಾರಸನಿನಗುಳ್ಳರೆ ವಿಠಲ ನೀನೆ ನಮ್ಮದೊರೆ 5
--------------
ಸರಗೂರು ವೆಂಕಟವರದಾರ್ಯರು
ನಿನ್ನ ದಾಸರದಾಸ ನಾನಯ್ಯ ಹರಿ ಎನ್ನನುಪೇಕ್ಷಿಪರೇನಯ್ಯ ಪ ಪ್ರೇಮವೆನ್ನೊಳು ಕಾಲಿಡಲಿಲ್ಲ ಭವ ತಾಮಸ ಬೀಜವ ಸುಡಲಿಲ್ಲ 1 ನೀಚರ ಸಂಗಕೆ ಮಿತಿಯಿಲ್ಲ ಗೋಚರಪಡಿಸುವ ಮತಿಯಿಲ್ಲ 2 ದೇಹದಿ ಬಲವಿಲ್ಲವಾದರೂ ವ್ಯಾ ಮೋಹವು ಬಿಡದಲ್ಪವಾದರೂ ಸೋಹಮೆಂಬುದಕಿಲ್ಲ ಬೇಸರು3 ದಾಸರ ಸಂಗದೊಳಾಡಿಸು ಹರಿ ವಾಸರವ್ರತದೊಳು ಕೂಡಿಸು ಸಿರಿ ವಾಸನಾಮದ ಸವಿಯೂಡಿಸು 4 ಕರುಣಾರಸನಿನಗುಳ್ಳರೆ ಸಿರಿವರದವಿಠಲ ನೀನೆ ನಮ್ಮ ದೊರೆ 5
--------------
ವೆಂಕಟವರದಾರ್ಯರು
ನಿನ್ನ ನೀ ತಿಳಿದು ನೋಡೋ ಕೇಳಲೋ ಪ್ರಾಣಿ ಪ ನಿನ್ನ ನೀ ತಿಳಿದು ನೋಡೋ ಪನ್ನಗಾದ್ರೀಶನ ಕೂಡೋ ಬನ್ನ ಭವಣೆ ಈಡ್ಯಾಡೋ ಕೇಳೆಲೋ ಪ್ರಾಣಿ 1 ನಾನಾರು ತನುವಾರು ತನುವಿ ನೊಡೆಯನಾರು ನಾನೀ ನೆಂಬುದರೊಳಾರು ಕೇಳೆಲೋ ಪ್ರಾಣಿ 2 ಹಿಂದಿನ ಪುಣ್ಯಗಳಿಂದ ಬಂದು ನರ ದೇಹದಿಂದ ಬಂದೇನಾ ಘಳಿಸಿನಿಂದೇ ಕೇಳೆಲೋ ಪ್ರಾಣಿ 3 ವಿದ್ಯಾ ವಿತ್ಪತ್ತಿ ತೋರಿ ಗದ್ಯ ಪದ್ಯಗಳ ಬೀರಿ ಬಿದ್ದಿ ಗರ್ವಾರಣ್ಯದಾರೀ ಕೇಳೆಲೋ ಪ್ರಾಣಿ 4 ತಂದೆ ಮಹಿಪತಿ ದಯದಿಂದ ಪಡೆಯೋ ವಿಜಯ ಕಾಯ ಕೇಳೆಲೋ ಪ್ರಾಣಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ಹೊರತು ಅನ್ಯರನರಿಯೆನೂ ಶ್ರೀ ವಾಸುದೇವಾ ನಿನ್ನ ಹೊರತು ಅನ್ಯನರಿಯೆನೂ ನಿನ್ನ ಹೊರತು ಅನ್ಯರರಿಯೆ ಪನ್ನಗೇಂದ್ರವಾಸ ಹರಿಯೆ ಸನ್ನುತಾತ್ಮ ನಿಜವನಿತ್ತು ಪ್ರಸನ್ನ ಗುರುವರೇಂದ್ರ ದೇವಾ ಪ ಉರಗನ್ಹೆಡೆಯ ನೆರಳ ಸ್ಥಿರವೆಂದು ಕಪ್ಪೆಯು ನಿಂತ ತೆರದಿ ವಿಷಯದೊಳಗೆ ಬೆರದು ಬೆಂದೆನು ನಾ ದುರಿತ ದುಷ್ಟಗಣದಿ ಹರಿದೂ ಮೃತ್ಯುವನೆ ಮರೆದು ಅರಿವು ಮಾಯವಾಗಿರುವ ಎನ್ನಾ ಸ್ತರದ ಆತ್ಮಪ್ರಭೆಯ ಮರೆತು ಇರುವ ಎನ್ನ ಮೇಲೆ ನಿನ್ನ ಕರುಣವಿಟ್ಟು ಕಾಯ್ದ ದೇವಾ 1 ತತ್ವವಿಂಶತಿ ನಾಲ್ಕು ಕೂಡಿದಾ ಈ ದೇಹದಲಿ ಏ ಕತ್ವವಾಗಿ ಇದನೆ ನಂಬುತಾ ಮುನ್ನರಿಯದಲೆ ವಿ ಚಿತ್ರವಾಸ್ತುವನ್ನು ಮರೆತು ಸತ್ತು ಹುಟ್ಟಿತೊಳಲಿ ಬಳಲಿ ನಿತ್ಯ ನಿಜದೊಳಿಟ್ಟ ದೇವಾ 2 ಆದಿ ಮಧ್ಯ ಅಂತರಾಂತದಿ ತುಂಬಿರುವ ವಸ್ತು ನಾದ ಬಿಂದು ಸ್ವಪ್ರಕಾಶದಿ ಹೃದಯದಲಿ ತೋರ್ಪ ಭೇದಾತೀತ ನಿರ್ವಿಕಾರದಿ ಸುಬೋಧದಿ ಆದರದಿ ಶಾಂತಿ ನಿಜದಾದಿ ಸುಖವನಿತ್ತ ಗುರು ಪಾದಪದ್ಮ ನೆನೆದು ಪೂರ್ಣನಾದ ನಾರಾಯಣ ಪ್ರಭು 3
--------------
ಶಾಂತಿಬಾಯಿ