ಒಟ್ಟು 301 ಕಡೆಗಳಲ್ಲಿ , 65 ದಾಸರು , 277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಮಂಗಳಂ ಶುಭೋದಯ ಮಂಗಳಂ ಜಯ ಕಕುದ್ಗಿರಿ ಗಂಗಾಧರ ಲಿಂಗಗೆ ಪ ಜಡೆಯುಡುಪತಿಯು ಗಂಗೆಯೊಡಗೂಡ್ದ ಮಸ್ತಕಕೆ ಮಡುಹಿ ಮಾರನ ಭಸಿತದಾಳ್ದ ಪಣೆಗೆ ಪೆಡೆಯೆತ್ತಿ ಗಾನಗೈವಹಿ ಕುಂಡಲಂಗಳಿಗೆ ದೃಢಭಕತರಿಷ್ಟದಾಯಕ ಶಿವನಿಗೆ 1 ಸೋಮಸೂರ್ಯಾಗ್ನಿ ಲೋಚನೆಗೆ ವಿಷದಾಳಿ ಸುರ ಸ್ತೋಮವನು ಕಾಯ್ದ ಶೋಭನ ಕಂಠಕೆ ಭೀಮನಿಗೆ ಭಯಹರಗೆ ಪರಶುಮೃಗ ಹಸ್ತನಿಗೆ ಕಾಮಿತಾರ್ಥದ ವರಾಭಯ ಕರನಿಗೆ 2 ನಾಗಕಂಕಣಧರಗೆ ನಾಗೋತ್ತರೀಯನಿಗೆ ನಾಗಯಜ್ಞೋಪವೀತವ ತಾಳ್ದಗೆ ನಾಗಚರ್ಮಾಂಬರಗೆ ನಗರಾಜ ಚಾಪನಿಗೆ ಗಮನ ಬಾಣಗೆ ಶಿವನಿಗೆ 3 ಗಿರಿಜೆಗರ್ಧಾಂಗವನ್ನಿತ್ತ ಶುಭವಿಗ್ರಹಗೆ ವರ ವೃಷಭವನ್ನೇರಿ ಸಂಚರಿಪಗೆ ಬರೆದುಂಗುಟದಿ ಹೊಳೆದ ಚಕ್ರದಿಂ ದೈತ್ಯಕುಲ ಹರಣ ವರದಾಯಕಗೆ ಸರ್ವೆಶಗೆ 4 ತಿರುಪತಿಯ ವಾಸವನು ದೃಢಗೈದು ಕಕುದ್ಗಿರಿಯ ಪರಮ ಕ್ಷೇತ್ರದಿ ಮಹಿಮೆಗಳ ತೋರ್ಪಗೆ ವರದ ವೆಂಕಟಪತಿಗೆ ಗಂಗಾಧರೇಶ್ವರಗೆ ಶರಣಾಗತರ ಕಾಯ್ವ ಸಾಂಬಶಿವಗೆ 5
--------------
ತಿಮ್ಮಪ್ಪದಾಸರು
ಜಲಧಿ ಜಾತೆ ಬಾಲೆ ಸಾರಸಾಕ್ಷಿ ಮಂಗಳೆ ಹಾರನೂಪುರಾದಿ ಲೋಲೆ ಬಾರೆ ಕಮಲೆ ನಿರ್ಮಲೆ ಪ ರಾಜ ರಾಜ ಪೂಜಿತಾಂಘ್ರಿ ರಾಜಗೃಹ ನಿವಾಸಿನಿ ರಾಜಕಾಂತಿ ಕೋಮಲಾಂಗಿ ರಜಿಸೌ ಮಹಾತ್ಮಳೆ 1 ಮಂಗಳಾಂಗಿ ಭೃಂಗವೇಣಿ ಅಂಗನಾ ಶಿರೋಮಣಿ ಅಂಗಭವ ಸುಮಾತೆ ಪೊರೆಯೆ ಸಂಗತಾರ್ತಿಹಾರಿಣಿ 2 ದೀನನನ್ನು ನೋಡು ದಯದಿಂ ಸಾನುರಾಗದಿಂದಲಿ ಧೇನುನಗರ ಪಾಲಿನಿ ಶ್ರೀ ಮಾನಿನೀ ಹರಿಪ್ರಿಯೆ 3
--------------
ಬೇಟೆರಾಯ ದೀಕ್ಷಿತರು
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜ್ಞಾನಭ್ಯಾಸವ ಮಾಡಿ ಹೀಗೆ ತಾನೊಲಿದು ಜ್ಞಾನ ಗುರು ಖೂನಾಗುವ್ಹಾಂಗೆ ಧ್ರುವ ಮನದಲಿ ಬಾವ್ಹಾಂಗ ನೆನೆದಲಿ ಕಾಂಬ್ಹಾಂಗೆ ತನುವಿನಲಿ ನಿಜಗೊಂಡು ತಾ ನೆಲೆಯಗೊಂಬ್ಹಾಂಗೆ ಅನುದಿನನದಲ್ಯನುಭವಿಸುವ್ಹಾಂಗೆ ಕನಗರಸಿದಲಿ ಮನೋಹರ ಮಾಡುವ್ಹಾಂಗೆ 1 ಅರ್ವಿನಲಿರುವ್ಹಾಂಗೆ ಕುರುಹುದೋರುವ್ಹಾಂಗೆ ಇರುವ್ಹ ನೆಲೆಗೊಂಡು ತಾನೆವೆ ಸ್ಥಿರವಾಗುವ್ಹಾಂಗೆ ಮರವು ಮರದೀಡ್ಯಾಡುವ್ಹಾಂಗೆ ಗುರು ಚರಣ ಕಮಲವನು ಗುರುತಾಗುವ್ಹಾಂಗೆ 2 ಧ್ಯಾಸ ನೀಜ ಬಲುವ್ಹಾಂಗೆ ವಾಸನೆ ಪೂರಿಸುಹಾಂಗೆ ಭಾಸ್ಕರ ಕೋಟಿ ಪ್ರಕಾಶ ಭಾಸಿಸುವ್ಹಾಂಗೆ ಭಾಸ್ಕರ ಬಾಹ್ಯಾಂತ್ರಲಿವ್ಹಾಂಗೆ ಲೇಸಾಗಿ ಮಹಿಪತಿ ಸ್ವಾಮಿಒಲುವ್ಹಾಂಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಡಂಕವ ಸಾರಿದನೋ ಯಮ ತನ್ನ ನಗರದಿ ಘಂಟೆಯ ನುಡಿಸಿದನು ಪ ಡಂಕಸಾರಿದ ತನ್ನ ತುಂಟದೂತರಿಗ್ವೊ ಯ್ಕುಂಠನ ದಾಸರ ತಂಟೆಯು ಬೇಡೆಂದು ಅ.ಪ ಕಾಲಕಾಲದಿ ಹರಿಯಕಥೆ ಕೀರ್ತ ನಾಲಿಸುವರ ನೆರೆಯು ತಾಳದಮ್ಮಡಿ ಸಮ್ಮೇಳದೊಡನೆ ಆ ನೀಲಶ್ಯಾಮನ ಭಜಿಪರಾಳಿನಾಳನುಕಂಡು ಕಾಲನಾಲುಗಳೆಂದ್ಹೇಳದೆ ಬನ್ನಿರೆಂದು 1 ಮಂದಿರಂಗಳದಿ ವೃಂದಾವನ ದಂದ ಕಂಡಾಕ್ಷಣದಿ ಸಿಂಧುಶಯನ ಬಂಧುಭಕ್ತರ ಮಂದಿರವಿದೆಂದು ಹಿಂದಕ್ಕೆ ನೋಡದೆ ಸಂದ್ಹಿಡಿದೋಡಿ ಪುರ ಬಂದು ಸೇರಿರೆಂದು 2 ಪರರಂಗನೆಯರ ಸ್ಮರಿಸುವ ಪರಮ ನೀಚರನ್ನು ನರಹರಿ ಸ್ಮರಣೆಯ ಅರಿಯದ ಆಧಮರ ಕರುಣಿಸದೆ ತುಸುಮುರಿದು ಮುಸುಕಿಕಟ್ಟಿ ದರದರನೆಳೆತಂದು ಉರಿಯೊಳ್ಪೊಯಿರೆಂದು 3 ಪರದ್ರವ್ಯವಪಹರಿಸಿ ಲಂಚದಿಂದ ಸರುವ ತನ್ನದೆನಿಸಿ ನಿರುತ ಮಡದಿಮಕ್ಕಳೊರೆವ ದುರಾತ್ಮನರ ಗುರುತಳನೆಳತಂದು ಕರಿಗಿದಸೀಸಬಾಯೊಳ್ ವೆರಸಿ ಜನಕಕೊಂಡದುರುಳಿಸಿಬಿಡಿರೆಂದು 4 ವೇಣು ಕರದಿ ಪಿಡಿದು ಬಾಣಾರಿ ಧ್ಯಾನದೊಳಗೆ ಬರೆದು ಜಾನಕೀಶನ ಲೀಲೆ ಗಾನದಿಂ ಪಾಡುತ ಆನಂದಿಪ ಮಹಜ್ಞಾನಿಗಳನು ಕಂಡು ಕಾಣದಂತೆ ಸಿಕ್ಕ ಜಾಣ್ಣುಡಿದೋಡಿರೆಂದು 5 ಇಂದಿರೇಶನದಿನದಿ ಅನ್ನವನು ತಿಂದ ಮೂಢರ ಭರದಿ ತಂದು ಒದೆದು ಮಹಗಂಧಮದು ರ್ಗಂಧನಾರುವ ಮಲತಿಂದು ಬದುಕಿರೆಲೊ ಎಂದು ಮನೆಹೊರಗಿನ ಮಂದಿರದಿಡಿರೆಂದು 6 ವಿಮಲ ತುಳಸೀಮಣಿಯ ಧರಿಸಿ ಅಮಿತ ಮಹಿಮನ ಚರಿಯ ವಿಮಲಮನಸರಾಗಿ ಕ್ರಮದಿ ಬರುವ ಶ್ರೀ ರಾಮದಾಸರ ಪಾದಕಮಲಗಳನು ಕಂಡು ಯಮದೂತರೆನ್ನದೆ ನಮಿಸಿ ಬನ್ನಿರೆಂದು 7
--------------
ರಾಮದಾಸರು
ತದಿಗೆಯ ದಿವಸ (ಶೇಷ ದೇವರನ್ನು ಕುರಿತು) ರಂಭೆ : ನಾರೀಮಣೀ ನೀ ಕೇಳೆ ಈತ- ನ್ಯಾರೆಂಬುದನೆನಗೆ ಪೇಳೆ ಕ್ರೂರತನದಿ ತಾ ತೋರುವನೀಗ ಮ- ಹೋರಗನೆನ್ನುತ ಕೋರಿಕೆ ಬರುವದು1 ಒಂದೆರಡು ಶಿರವಲ್ಲ ಬಹು ಹೊಂದಿಹವು ಸಟೆಯಲ್ಲ ಕಂಧರದಲಿ ಕಪ್ಪಂದದಿ ತೋರ್ಪವು ಚಂದಿರಮುಖಿ ಯಾರೆಂದೆನಗರುಹೆಲೆ 2 ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ- ಸಾಮಾನ್ಯನೆ ಕಾಣೆ ಭೂಮಿಯ ಪೊತ್ತ ನಿರಾಮಯನಾದ ಸುಧೀಮನಿವನು ಜಾಣೆ 1 ವಾಸುದೇವಗೆ ಈತ ಹಾಸಿಗೆಯವ ನಿ- ರ್ದೋಷನಿವನು ಜಾಣೆ ಸಾಸಿರಮುಖದ ವಿಲಾಸನಾಗಿಹ ಮಹಾ- ಶೇಷನಿವನು ಕಾಣೆ 2 ಅದರಿಂದಲಿ ಕೇಳ್ ತದಿಗೆಯ ದಿವಸದಿ ಮಧುಸೂದನನಿವನ ಅಧಿಕಾನಂದದಿ ಒದಗಿಸಿ ಬರುವನು ಇದೆಯಿಂದಿನ ಹದನ 3 ಎಂದಿನಂತೆ ಪುರಂದರವಂದ್ಯ ಮು ಕುಂದ ಸಾನಂದದಲಿ ಅಂದಣವೇರಿ ಗೋವಿಂದ ಬರುವನೊಲ- ವಿಂದತಿ ಚಂದದಲಿ4 ಕಂಟಕಗಳು ಎಲ್ಲುಂಟೆಂಬಂತೆ ನೃಪ- ಕಂಠೀರವಗೈದ ಘಂಟಾನಾದದಿ ಮಂಟಪದೊಳು ವೈ- ಕುಂಠನು ಮಂಡಿಸಿದಾ 5 ಕಾಂತಾಮಣಿ ಕೇಳಿಂತೀಪರಿ ಶ್ರೀ- ಕಾಂತ ನತತಂಡ ಸಂತವಿಸುತ ಮಹಾಂತಮಹಿಮನೇ- ಕಾಂತಸೇವೆಯಗೊಂಡ 6 * * * ಪರಶಿವನನ್ನು ಕುರಿತು ರಂಭೆ :ಯಾರಮ್ಮಾ ಮಹಾವೀರನಂತಿರುವನು ಯಾರಮ್ಮಾ ಇವನ್ಯಾವ ಶೂರ ಯಾವ ಊರಿಂದ ಬಂದ ಪ್ರವೀರ ಆಹಾ ಮಾರಜನಕನ ವಿಸ್ತಾರಪೂಜೆಯ ವೇಳ್ಯ ಧೀರನಂದದಿ ತಾ ವಿಚಾರ ಮಾಡುವನೀತ1 ಕರದಿ ತ್ರಿಶೂಲವ ಧರಿಸಿ ಮತ್ತೆ ವರ ಕೃಷ್ಣಾಜಿನವನುಕರಿಸಿ ಹರಿ ಚರಣಸನ್ನಿಧಿಗೆ ಸತ್ಕರಿಸಿ ಆಹಾ ಜರಿಯ ದುಕೂಲವ ನಿರಿದುಟ್ಟುಕೊಂಡು ವಿ- ಸ್ತರವಾದ ತೋಷದಿ ಮೆರದು ನಲಿವ ಕಾಣೆ 2 ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ. ಈತನೀಗ ಪೂರ್ವದೊಳಗೆ ಭೂತನಾಥ ಸೇವೆಯೊಲಿದ ಓತು ವಿಷ್ಣುಭಕ್ತಿಯಿಂದ ಪೂತನಾದ ಪುಣ್ಯಪುರುಷಅ.ಪ. ತೀರವಾಯ್ತು ವೇಣು ತಾ ವಿ- ಉದಾರತನದಿ ರಾಮೇಶ್ವರಕೆ ಸಾರಗ್ರಹಿತ ಮುಕ್ತಿ ಪಥವನು ಕರುಣದಿಂದ ತೋರಿಸುವನು ವಿಷ್ಣುವೆಂದೆನುತ ಗಿರಿಯ ಪದಾರವಿಂದಸೇವೆಗೈದು ನಲಿವ ಚಾರುಚರಿತ 1 ಬರುವ ಕಾಲದಲ್ಲಿ ಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತ ಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆ ಚರಿಸುವ ತ್ರಿಕಾಲಪ್ರಜ್ಞನು ಇವನ ಗುಣವ- ಮಹತ್‍ಕಾರಣೀಕ ಕರುಣವುಳ್ಳ ವಿಷ್ಣುಭಕ್ತ 2 ಪ್ರಧಾನಿಯೆಂದು ನಡೆಸಿಕೊಡುವ ತೋಷಪಟ್ಟು ಇರುವ ಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತ ನಾನಾ ಉಪದ್ರವಗಳ ಬಿಡಿಸುವ ಧನಿಯ ಆಜ್ಞೆ ಬಂದು ಪೇಳಿ ಜನರ ಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ತುಪಾಕಿ ವೆಂಕಟರಮಣಾಚಾರ್ಯ
ತನುಮನಧವನೆಲ್ಲ ನಿನಗರ್ಪಿಸಿದೆನಿನ್ನು ಎನಗಾವುದಾಧೀನವಿನಿತಿಲ್ಲ ದೇವ ಪ ಜನಕ ನಾನು ಕ್ಷಣಕೆ ಕ್ಷಣಕೆ ಉಣವುದೆಲ್ಲವು ನಿನ್ನ ಪ್ರಸಾದ ಕನಸುಮನಸಿನೊಳಗೆ ನಾನು ಮಣಿವುದೆಲ್ಲವು ನಿನ್ನ ಚರಣ ಅ.ಪ ಮಡದಿಯಿಂ ಮಮತದಿ ಸಡಗರದಾಡ್ಯಾಡಿ ಕಡು ಆನಂದಿಪುದೆಲ್ಲ ಒಡೆಯ ನಿನ್ನಾಟ ಎಡೆಬಿಡದೆ ಅಡಿಗಡಿಗೆ ಕಡುಸಿರಿವಡೆದು ನಾ ಪೊಡವಿಯೋಳ್ಜೀವಿಪುದು ಕಡು ನಿಮ್ಮ ಪ್ರೇಮ ನುಡಿವುದೆಲ್ಲ ನಿನ್ನ ಮಂತ್ರವು ಕೊಡುವುದೆಲ್ಲವು ನಿನ್ನ ಅಧಿಕಾರ ನಡೆವುದೆಲ್ಲವು ನಾ ನಿನ್ನ ಯಾತ್ರೆಯು ಇಡುವತೊಡುವುದು ನಿನ್ನ ಬಿರುದು 1 ಗಳಿಸುವುದೆಲ್ಲ ನಾ ಚಲಿಸದ ತವಪಾದ ನಳಿನದಾಸರಸಂಗೀ ಇಳೆಯೊಳು ಪ್ರಭುವೇ ಬಳಸುವುದೆಲ್ಲ ನಾ ಅಳಕದ ತವಚರಿತ ಕಲಿಯುವುದೆಲ್ಲ ನಿಮ್ಮ ವಿಲಸಿತನಾಮಧ್ಯಾನ ಮಲಗುವುದೇ ನಿಮ್ಮ ಧ್ಯಾನ ಆನಂದ ನಲಿವುದಖಿಲ ನಿಮ್ಮ ಭಜನೆಯು ಅಳಿವುದೆಲ್ಲನುಭವದ ಗುಣಗಳು ತಿಳಿವುದೆಲ್ಲವು ನಿಮ್ಮ ಮಹಿಮೆ 2 ಅಮಿತ ತವಪ್ರೇಮವು ಗಮಿಸುವುದೆಲ್ಲ ನಾ ಸುಮನರ ಸಭೆಯು ಕ್ರಮದಿ ನಾ ಬೇಡುವುದು ವಿಮಲ ಸುಜ್ಞಾನವು ದಮೆ ದಯ ಭಕ್ತಿ ತವ ನಿರ್ಮಲಂಘ್ರಿಯ ಅರಿವು ನೇಮದಿಂ ನಾ ಬರುವುದೆಲ್ಲ ಸ್ವಾಮಿ ನಿಮ್ಮಯ ಮಹಿಮೆ ಖ್ಯಾತಿಯು ಕ್ಷೇಮನಿಧಿ ಶ್ರೀರಾಮ ನಿಮ್ಮೊಳು ಕಾಮಿಸುವುದೇ ನಾ ಮುಕ್ತಿಪದವು 3
--------------
ರಾಮದಾಸರು
ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ ಸ್ಮರಿಪ ಜನರ ಸುರ ತರು ಪಾಪಕಾಂತಾರ ನರ ಸಮ ಸಜ್ಜನ | ಶರಜನಿಚಯ ದಿನ ಪಾದ | ಸರಸಿಜ ಭಜಿಸುವ ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ - ಪರಮ ಕರುಣಿಯು ಎಂದು ನಿನ್ನಯ ಪಾದ ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ ಮೊರೆಯ ಲಾಲಿಸು ಎಂದು ಬಿನ್ನೈಸಿದೆ ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1 ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ ಶ್ರಯವಾಗಿ ಸಂತತ | ನಯದಿಂದ ನಿಜಜನ ಭಯಕರ ಭವಹರ | ಜಯ ಜಯ ಜಯದಾತ ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ - ತ್ರಿಯ ಕುಲದೊಳು ಜನಿಸಿ ಯುಧಿ ಭೀಮ - ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2 ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ - ಪಾಸನ ಮಾಡುತ | ವ್ಯಾಸಮುನಿ ಆಗಿ ಭಾರ | ತೀಶ ಪ್ರತೀಕವ ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ ವಾಸವ ಮಾಡಿ ತಾನೂ - ಪುರಂದರ ದಾಸರಾಯರಿಗೆ ಇನ್ನು - ಸುಮಂತ್ರೋಪ - ಅನುದಿನ ವಾಸಮಾಡಿದಿ ನೀನು 3 ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ - ಕ್ಷೀಣಬಲ ಙÁ್ಞನ ತಾಣ | ಗೊಡದೆ ನಿನ್ನ ಜಾಣತನದಿ ನರ | ಮಾಣವಕನಂತೆ ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ - ಶುಭ ಲ - ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4 ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ ದಿನದಿನದಲಿ ಬಹು | ವಿನಯಪೂರ್ವಕ ಪಾದ ವನಜ ಸೇವಕÀನಾಗಿ |ತನು ಮನ ಧನ ಧಾನ್ಯ ಘನ ನಿನಗರ್ಪಿಸಿ | ನಿನ ಸಂಗವಾಗಲೂ ಜನುಮ ಇಲ್ಲೆಂಬುವ | ಘನ ಙÁ್ಞನ ಭಕುತಿಯ ಮನದಲ್ಲಿ ಯೈದುತಲೆ - ತಾನು ನಿತ್ಯ ಅನುಮಾನ ಮಾಡದಲೆ - ಇರಲು ಅವನ ಘನಸುಖ ರೂಪದಲ್ಲೆ - ಇರುವಂತೆ ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5 ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ ಉತ್ತುಮ ನೀನಾಗ | ಸತ್ಯ ಸಂಕಲ್ಪವ ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ ತತ್ಕಾಲದಲಿ ತಂದು | ಉತ್ತುಮ ಭಾರ್ಯಳ ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ - ರುತ್ತುಮನಾತ್ಮಜನಾ - ಇವಾನಂತೆ ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6 ಇನತೆ ಮೊದಲಾದ | ಫನತರ ನಿನ ಮಹಿಮೆ ನಿತ್ಯ | ಅನಿಮಿಷ ಮುನಿಜನ ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು ವನುತೆ ಸುತ ಧನ | ಧಾನ್ಯ ಮೊದಲಾದ ಅನುದಿನ ಸಲಿಸುತ್ತ ಜನರ ಪಾಲಿಸೊಗೋಸುಗಾ - ಹರಿಯು ನಿನಗೆ ಜನುಮಾವನಿತ್ತನೀಗ - ಅದಕೆ ನಿನ್ನ ಅನುದಿನ ತವಪಾದ ವನಜ ನಂಬಿದೆ ವೇಗ 7 ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ - ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು - ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು ವಿಕ್ಷೀಸಿ ಙÁ್ಞನವನ್ನಾ - ಭಕುತಿ ಇತ್ತು - ರಕ್ಷಿಸು ಎಂದೆ ನಿನ್ನಾ ಇದೆ ಒಂದಾ ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8 ಕಿಟಿಜ ಸರಿದ್ವರ | ತಟ ಕೃತ ಮಂದಿರ ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು ಧಿಟನಾಗಿ ತ್ರಿಜಗದಿ - ಮೆರೆಯುತ ಶಠÀಜನರನು ತ್ವರದಿ - ಮರಿದು ಙÁ್ಞನಿ ಕಟಕ ಸುಪಾಲನದಿ ಪಟೋ ಎನಿಸಿ ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9
--------------
ಗುರುಜಗನ್ನಾಥದಾಸರು
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ
ದÁಸನಾಗುವೆನು | ಹರಿಯೇ ನಿಮ್ಮಾ ಪ ದಂಡಿಗೆವಿಡಿದು ಊಧ್ರ್ವಪೌಂಡ್ರ ತುಳಸೀ ಮಾಲೆಯಿಂದಾ | ಪುಂಡಲೀಕವರದ ಶ್ರೀ ಪಾಂಡುರಂಗ ವಿಠಲೆಂಬಾ 1 ಲಜ್ಜೆಯನಳಿದು | ನೃತ್ಯ ಹೆಜ್ಜೆಗೊಮ್ಮೆ ತೋರಿಸುತ | ಗರ್ಜೀಸುತ ಹರಿನಾಮ ಸಜ್ಜನರ ವೆಲಿಸುವಾ 2 ನಳಿನಾಂಘ್ರಿಯಾ ಪೂಜೆಮಾಡಿ | ನಲಿದು | ನವವಿಧ ಭಕ್ತಿಕಲೆಗಳಾ ತೋರಿಸುವಾ 3 ಎನ್ನ | ತನುಮನಧನವನ್ನು ನಿನಗರ್ಪಿಸುತಾ | ಅನ್ಯದಾರ | ಭಜಿಸದೆ ನಿನ್ನವೆನೆಂದೆನಿಸುವಾ 4 ಸಾರಥಿ ನಿನ್ನ | ಹೊಂದಿದ ಭಕ್ತರ | ಪುಣ್ಯ ಮಂದಿರದಿ ಜನಿಸುವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾಸನಾಗುವೆನು ಹರಿಯೇ ನಿಮ್ಮ ಪ ದಂಡಿಗೆ ಹಿಡಿದು ಊಧ್ರ್ವ| ಪೌಂಡ್ರ ತುಳಸೀಮಾಲೆಯಿಂದಾ ಪುಂಡಲೀಕ ವರದ ಶ್ರೀ| ಪಾಂಡುರಂಗ ವಿಠಲನೆಂಬಾ 1 ಲಜ್ಜೆಯಳಿದು ನೃತ್ಯ| ಹೆಜ್ಜೆಗೊಮ್ಮೆ ತೋರಿಸುತ| ಗರ್ಜಿಸುತ ಹರಿನಾಮ| ಸಜ್ಜನರ ಒಲಿಸುವಾ 2 ಹಲವು ಪುಷ್ಪ ತುಲಸಿಯಿಂದಾ| ನಳಿನಾಂಘ್ರಿಯಪೂಜೆಮಾಡಿ| ನಲಿದು ನವವಿಧ ಭಕ್ತಿ| ಕಲೆಗಳಾ ತೋರಿಸುವಾ3 ಎನ್ನ ತನುಮನಧನ- ವನ್ನು ನಿನಗರ್ಪಿಸುತ| ಅನ್ಯಯಾರ ಭಜಿಸಿದೆ| ನಿನ್ನವನೆಂದೆನಿಸುವಾ 4 ತಂದೆ ಮಹಿಪತಿ ನಿಜ| ಸಾರಥಿ ನಿನ್ನ| ಹೊಂದಿದ ಭಕ್ತರ ಪುಣ್ಯ| ಮಂದಿರದಿ ಜನಿಸುವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು
ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ದೂಡು ಧನಮಾನಗರ್ವವ ಅಭಿಮಾನವೆಲ್ಲವ ತರವಲ್ಲವೋ ಪ ಶಮೆದಮೆವೈರಾಗ್ಯ ದೃಢವಾಗಿಹ ಶೃತಿವಿದಿತಾಗಿಹ ಘನ ವಿನಯಾದಿ ಸಾಧನೆ ಪರಮಾರ್ಥಕೆ ಬೇಕು ತಿಳಿ ಜೀವನೇ 1 ಪರಿ ಪ್ರಶ್ನೆಯಾ ಮಾಡು ನಿಜ ಶೋಧವಾ ನೀಡು ಶಿರವನ್ನು ಗುರು ಶಂಕರನ ಪಾದಕೆ 2
--------------
ಶಂಕರಭಟ್ಟ ಅಗ್ನಿಹೋತ್ರಿ
ದೇವದೇವತಾಸ್ತುತಿ ಅಜಸುರಸನ್ನುತ ಸುಜನವಂದಿತ ಹರೇ ಭುಜಗ ಭೂಷಣ ಪ್ರಿಯ ಪ ಅತಿಶಯ ಕಾಮದಿ ಸತಿಯನಪಹರಿಸಿದ ಪತಿತ ರಾವಣನನು ಖತಿಯಲಿ ಕೊಂದೆ ನೀಂ 1 ಪರಿ ಪರಿಸಲು ವಾಲಿಯ ತರಿದೆಯೊ ಶರದಿಂದ 2 ದಶರಥನುದರದಿ ದಶರಥನಾಗಿಯು ಪಶುಪತಿ ಮಿತ್ರನೆ ಜನಿಸಿದೆ ಕರುಣದಿ 3 ಮಾನವ ಜಿತಾಸುರ ಮಾನವ ರೂಪನೆ ಪೊರೆ 4 ಧೇನುನಗರಪತಿ ದಾನವಖಂಡನ ಧ್ಯಾನ ಸ್ವರೂಪನೆ ಜ್ಞಾನವ ಪಾಲಿಸು 5
--------------
ಬೇಟೆರಾಯ ದೀಕ್ಷಿತರು