ಒಟ್ಟು 114 ಕಡೆಗಳಲ್ಲಿ , 38 ದಾಸರು , 92 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಮಾನ ಆರದು ಇನ್ನ್ಯಾಕೆಹರಿನಾಮದ ಬಲವೊಂದಿರಲಿಕ್ಕೆ ಪಸ್ವಾಮಿಮಾಧವನ ಪ್ರೇಮಪಡೆದು ಮಹನಾಮಮೃತದ ಸವಿಯುತಲಿರುವರ್ಗೆ ಅ.ಪರೊಚ್ಚಿಗೆದ್ದು ಮಾಡುವುದೇನೋ ಜನಸ್ವಚ್ಛದಿ ಒಡಗೂಡಿದರೇನೋಮೆಚ್ಚಿ ಕೊಡುವಫಲ ಇವರೇನೋ ಅತಿಹುಚ್ಚ ನೆಂದರಾಗುವುದೇನೋನಿಶ್ಚಲಚಿತ್ತದಿ ಅಚ್ಯುತಾನಂತನಬಚ್ಚಿಟ್ಟು ಮನದೊಳು ಉಚ್ಚರಿಸುವರಿಗೆ 1ಸತಿಸುತರಿವರಿಂದ್ಹಿತವೇನೊ ತನ್ನಪಿತಮಾತೆ ಮುನಿದರೆ ಕೊರತೇನೋಅತಿಸಂಪತ್ತಿನಿಂದ ಗತಿಯೇನೋ ಈಕ್ಷಿತಿಜನ ಮೆಚ್ಚಲು ಬಂತೇನೋರತಿಪತಿಪಿತನಂ ಅತಿ ಗೂಢತ್ವದಿಸತತದಿ ನುತಿಸುವ ಕೃತಕೃತ್ಯರಿಗೆ 2ಭೂಮಿಪ ಕೋಪಿಸಲಂಜುವರೆ ಈತಾಮಸರಿಗೆ ತಲೆ ಬಾಗುವರೇಭೂಮಿ ದೈವಗಳ ಬೇಡಿದರೆ ಮನಕಾಮಿತವನ್ನು ಪೂರೈಸುವರೇಕಾಮಿತಾರ್ಥನೀಗಿ ಮಹಾಮಹಿಮನನೇಮದಿ ಪಠಿಪ ಶ್ರೀರಾಮದಾಸರಿಗೆ 3
--------------
ರಾಮದಾಸರು
ನನ್ನಯ್ಯ ನೀನೊಬ್ಬನೆ ಮಾರುತಿವರದ ಪ.ಉನ್ಮತ್ತತಂದೆ ಕೊಲ್ಲಲು ಒಯ್ಯಲು ತಾಯಿಚಿನ್ನನ್ನುಳಿಸಿಕೊಂಡಳೆ ಬನ್ನವನುಣ್ಣುತನಿನ್ನಿಚ್ಛೆಯೆನ್ನಲು ವಹ್ನಿವಿಷಾನ್ನವ ತಣ್ಣಸವೆನ್ನಿಪೆ ತನ್ನವರಿನ್ನ್ಯಾಕೊ ನರಹರಿಯೆ 1ಉತ್ತಾನಪಾದಿ ಮುನಿದು ಅಡವಿಯ ದಾರಿಹತ್ತಿ ನಿರಾಲಂಬದಿ ಉತ್ತಮ ಮಂತ್ರನಾರದಿತ್ತರೆ ಭಕ್ತಿಂದ ಅತ್ತಿತ್ತಾಗದ ಚಿತ್ತಕೆ ಒಲಿದೆಹೆತ್ತವರೊತ್ತಾದರೆವಾಸುದೇವ2ಅಗ್ರಜಾವಜÕ ಮಾಡಲು ವಿಭೀಷಣಶೀಘ್ರ ಪಾದಾಬ್ಜಕೆರಗಲು ವ್ಯಗ್ರಪ್ಲವಗಗ್ರರು ಉಗ್ರದಿ ನಿಗ್ರಹಿಸೆ ಆಗ್ರಹಿಸಿದೆ ಭಕ್ತಾಗ್ರಣಿ ಹನುಮ ಮತಾಗ್ರದಿ ಪ್ರಸನ್ವೆಂಕಟ 3
--------------
ಪ್ರಸನ್ನವೆಂಕಟದಾಸರು
ನಿನ್ನಯ ಬಲವೊಂದಿದ್ದರೆ ಸಾಕಯ್ಯ ಸೀತಾನಾಥ ಮಿಕ್ಕಅನ್ಯರ ಬಲವಿನ್ನ್ಯಾಕೆ ಬೇಕಯ್ಯ ಸೀತಾನಾಥ ಪತನ್ನ ಮುಖವ ಕಂಡ ಜನರಿಂ ಕೇಳ್ವುದಕಿಂತ ಸೀತಾನಾಥತನು ಉನ್ನತವಾದಂಥ ಕನ್ನಡ್ಯೊಂದೇ ಸಾಕೊ ಸೀತಾನಾಥತನ್ನಿಷ್ಟಗರೆವಂಥ ಸುರಧೇನೊಂದೆ ಸಾಕೊ ಸೀತಾನಾಥ ಮತ್ತುಇನ್ನು ಬನ್ನಬಡುತಾನಂತಾಕಳ್ಯಾಕೊ ಸೀತಾನಾಥ 1ವರಹೆಣ್ಣು ಹೊನ್ನು ಮಣ್ಣಿನಕಿಂತ ಸೀತಾನಾಥಸ್ಥಿರ ಸ್ಮರಿಸಿದ್ದನ್ನೀವಂಥ ಸುರತರೊಂದೆ ಸಾಕೊ ಸೀತಾನಾಥಪರಮಚಿಂತಾಮಣಿಯ ಸಾಧ್ಯವೊಂದೆ ಸಾಕೊ ಸೀತಾನಾಥಪರಿಪರಿಮಂತ್ರ ತಂತ್ರದಿ ಸಿದ್ಧಿಗಳ್ಯಾಕೊ ಸೀತಾನಾಥ2ಪಾಮರ್ಹಲವು ಬಂಧುಬಳಗ ಬಲದಕಿಂತ ಸೀತಾನಾಥ ಮಹಾಸ್ವಾಮಿಪ್ರೇಮವೆಂಬ ಪರುಷವೊಂದೆ ಸಾಕೊ ಸೀತಾನಾಥಕಾಮಿಸ್ಹಲವು ದೈವ ಭಜಿಸಲಿನ್ಯಾತಕೊ ಸೀತಾನಾಥ ಶ್ರೀರಾಮ ನಿಮ್ಮಯ ನಿಜ ಧ್ಯಾನವೊಂದೆ ಬೇಕೊ ಸೀತಾನಾಥ 3
--------------
ರಾಮದಾಸರು
ನೀನೆಕರ್ತಎನ್ನಕರ್ತನಾ ನಿನ್ನಭೃತ್ಯಹಿತಮಾನಹಾನಿ ನಿನ್ನದಯ್ಯ ಕೊನೇರಿ ತಿಮ್ಮ ನಮ್ಮ್ಮಯ್ಯ ಪ.ತನುಧನ ನೆಚ್ಚಿಕಿಲ್ಲಮಾನಿನಿತನ್ನವಳಲ್ಲಸೂನುಬಂಧುಗಳೆಲ್ಲ ಕ್ಷಣದವರಲ್ಲನಾನಾ ಜನ್ಮದಲಿ ಎನ್ನ ಪ್ರಾಣ ಕಿತ್ತೈಯ್ಯ ಚೈತನ್ಯದಾನವಾರಾತಿ ಕೃಷ್ಣಯ್ಯ ದೀನನ ಬಿಡದಿರಯ್ಯ 1ಭವಾಂಧಕಾರದೊಳನುಭವಿಸಿ ಬೆಂಡಾಗುವೆನುವಿವರಿಸಿನಿತ್ಯಹಿತವ ಕಾಣೆನುಜಾವ ಒಂದದರೊಳರ್ಧ ದಾರಿಯಲಿ ಶ್ರೀಪಾದಭಾವಿಸಲೊಲ್ಲೆ ನೋಡಲವಗುಣಾಂಕಿತ ಮೂಢ 2ಸ್ವಾಮಿ ನಿನ್ನ ಮುದ್ರಾಂಕನ ಮಾಡಿನ್ನನುಮಾನ್ಯಾಕೆಶ್ರೀಮಂತ ಭಾಗವತರ ಪ್ರೇಮಾನ್ವಿತರಶ್ರೀ ಮಧ್ವರಾಯರ ಸಿಕ್ಷಾನೇಮರಾಚರಣಾಧ್ಯಕ್ಷಸಾಮೀಪ್ಯ ಮುಕ್ತಿಯನೀಯೊ ನನ್ನ ಪ್ರಸನ್ವೆಂಕಟಯ್ಯ 3
--------------
ಪ್ರಸನ್ನವೆಂಕಟದಾಸರು
ನೀನೆಗತಿಕೃಷ್ಣ ಎನಗೆ ನೀನೆಗತಿಕೃಷ್ಣಪ.ನೀನೆ ಗತಿಯೆಂದಾನತನಾಗಿಮಾನಾಪಮಾನವ ನಿನಗೊಪ್ಪಿಸಿದೆಜ್ಞಾನವಿಹೀನನ ಪಾವನ ಮಾಡಿಶ್ರೀನರಹರಿ ಕರುಣಿಸು ನಮ್ಮ್ಮಯ್ಯನೆ 1ತನುವಸ್ಥಿರ ಮನವತಿಚರ ಒದಗಿದಧನ ನಶ್ವರ ನಿನ್ನಯ ಪಾದಾಬ್ಜದನೆನವಿಗೆಯೊಂದನೆ ಕೊಡು ಕಡೆ ಮೊದಲಿಗೆಜನನವಸಾನದ ಬಳ್ಳಿಯ ಕಡಿಯಲು 2ಶರಣಾಗತ ಶರಣರ ಕರವಿಡಿವಬಿರುದಿನ ದೊರೆಗಿನ್ನನುಮಾನ್ಯಾಕೆಪರಮಪತಿತನ ಪೂತನ ಮಾಡ್ಯುದ್ಧರಿಸುವಸಿರಿಪ್ರಸನ್ನವೆಂಕಟಕೃಷ್ಣ3
--------------
ಪ್ರಸನ್ನವೆಂಕಟದಾಸರು
ಬಂದೆನೇಳೆ ಗೋವಿಂದ ನಾ ಇಂದುಮುಖಿ ನಿದ್ರೆ ಬಿಟ್ಟುಬಂದು ನೀ ಬಾಗಿಲ ತೆಗೆಯೆ ಗೋವಿಂದ ನೀ ಗೋವೃಂದವ ಕಾಯಲು ಹೋಗಯ್ಯ ಪ.ಸೋಮಕ ಖಳನ ಕೊಂದು ನೇಮದಿ ವೇದವ ತಂದಶ್ರೀ ಮತ್ಸ್ಯಾವತಾರ ಬಂದೆನೆ ಮತ್ಸ್ಸ್ಯನಾದರೆಆ ಮಹಾಂಬುಧಿಗೆ ಹೋಗಯ್ಯ 1ಸಿಂಧುಮಥÀನ ಕಾಲಕೆ ವೃಂದಾರಕರಿಗÉೂಲಿದಸುಂದರ ಕೂರ್ಮನು ಬಂದೆನೆ ಕೂರ್ಮನಾದರೆಮಂದರಹೊರಲು ಹೋಗಯ್ಯ2ಪ್ರಳಯಾಂಬುಗಿಳಿದೊಬ್ಬನ ಸುಲಭದಿ ಕೋರೇಲಿ ಸೀಳಿದಚೆಲುವ ವರಾಹನು ಬಂದೆನೆ ವರಾಹನಾದರೆಇಳೆಯ ಕೂಡಾಡ ಹೋಗಯ್ಯ 3ಸೊಕ್ಕಿ ಕಂಬವ ಗುದ್ದ್ದಿದ ರಕ್ಕಸನಂತರ ಮಾಲೆಯನಿಕ್ಕಿದ ನರಹರಿ ಬಂದೆನೆ ನರಹರಿಯಾದರೆಚಿಕ್ಕವನೊಳಾಡ ಹೋಗಯ್ಯ 4ಹೋಮವ ಮಾಡಿ ಮೀರಿದ ಭೂಮಿಪನುಕ್ಕ ಮುರಿದನೇಮದ ವಾಮನ ಬಂದೆನೆ ವಾಮನನಾದರೆನೇಮ ನಿಷ್ಠೆಗೆ ನೀ ಹೋಗಯ್ಯ 5ಭೂಭಾರವನಿಳುಹಿ ದ್ವಿಜರ್ಗೆ ಭಾಗ್ಯವ ಕೊಟ್ಟ ಶೌರ್ಯಶೋಭಿತಭಾರ್ಗವಬಂದೆನೆ ಭಾರ್ಗವನಾದರೆಆ ಬಾಲೇರಂಜಿಸ ಹೋಗಯ್ಯ 6ಸೀತೆಗಾಗಿ ರಾವಣನ್ನ ಘಾತಿಸಿದೆ ಕೇಳೆವಾತಜಾತ ವಂದ್ಯ ರಾಮ ಬಂದೆನೆ ರಾಮನಾದರೆ ಸರಯೂ ತೀರದಲ್ಲಿರ ಹೋಗಯ್ಯ 7ಸೋಳಸಾಸಿರ ಗೋಪೇರನಾಳುವ ಪ್ರೌಢ ಕಾಣೆ ಗೋಪಾಲ ಚೂಡಾಮಣಿ ಬಂದೆನೆ ಗೋಪಾಲನಾದರೆ ಗೋಪಾಲೇರೊಡನಾಡ ಹೋಗಯ್ಯ 8ದೃಢದಲ್ಲಿ ತಪವಿದ್ದ ಮಡದೇರ ಮನಗೆದ್ದಕಡುಮುದ್ದು ಬುದ್ಧ್ದ ಬಂದೇನೆ ಬುದ್ಧನಾದರೆ ಮಿಥ್ಯದಸಡಗರದಲ್ಲಿರ ಹೋಗಯ್ಯ 9ಪದ್ಮಗಂಧಿ ನಿನ್ನ ರತಿಗೊದಗಿದೆ ಬಿಂಕವಿನ್ನ್ಯಾಕೆಕುದುರೆಯೇರಿ ಕಲ್ಕಿ ಬಂದೆನೆ ಕಲ್ಕಿಯಾದರೆಕದನಕೆ ಜಾಣ ಹೋಗಯ್ಯ 10ವಲ್ಲಭನ ನುಡಿಕೇಳಿ ನಲ್ಲೆ ಸತ್ಯಭಾಮೆಪಾದಪಲ್ಲವಕೆರಗಿ ನಿಂತಳು ಪ್ರಸನ್ವೆಂಕಟಚೆಲುವ ನೀನೆಂದರಿಯೆನೆಂದಳು 11
--------------
ಪ್ರಸನ್ನವೆಂಕಟದಾಸರು
ಭಜಿಸಿ ಬದುಕುನಿತ್ಯವಿಜಯದಾಸರಪಾದಕಾಮಧೇನುವ ಕಂಡು ಕರೆದು ಕೊಂಡಂತೆನ್ನಕಲ್ಪವೃಕ್ಷವಕಂಡು ಬೇಡಿದ್ದು ಕೊಡುವಂತೆಹಲವು ಸಾಧನಮಾಡಿ ಬಳಲಲಿನ್ಯಾಕೆ ನೀ
--------------
ಗೋಪಾಲದಾಸರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾಕೆ ಮೂಕನಾದೆಲೋ ಗುರುವೆ ನೀ -ನ್ಯಾಕೆ ಮೂಕನಾದ್ಯೋ ಪಸಾಕುವೊರಾರಯ್ಯಾ ಶ್ರೀಕರ ರಾಘವೇಂದ್ರ ಅ.ಪಮಂದಿಯಂದಿದ ಎನ್ನ - ಮಂದನ ಮಾಡೀಗ 1ಬೇಕಾಗದಿದ್ದರೆನ್ನ - ಯಾಕೆ ಕೈಯಾ ಪಿಡಿದಿಕಾಕುಜನರೊಳೆನ್ನ- ನೂಕಿ ಬಿಟ್ಟು ಈಗ2ನಿನ್ನಂಥ ಕರುಣಿಲ್ಲ - ಎನ್ನಂಥ ಕೃಪಣಿಲ್ಲಘನ್ನ ಮಹಿಮ ನೀ - ಎನ್ನನು ಬಿಟ್ಟೀಗ 3ಇಂದುನೀ ಬಿಟ್ಟರೆನ್ನ- ಮುಂದೆ ಕಾಯುವರ್ಯಾರೋ4ಜನ್ಯಾನು - ನಾನಯ್ಯ - ಎನ್ನ ಜನಕನು ನೀನುಮನ್ನಿಸು ನೀ ನಿತ್ಯಾ - ನನ್ನ ಶರಣನಲ್ಲೆ 5ಈಗ ಪಾಲಿಸದರೆ-ಯೋಗಿಕುಲವರ್ಯರಾಘವೇಂದ್ರನೇಭವ- ಸಾಗುವಧ್ಯಾಗಯ್ಯ6ನಾಥನು ನೀನಯ್ಯಾ - ನಾಥನು ನಾನಯ್ಯಾಪಾಥೋಜ ಗುರುಜಗ -ನ್ನಾಥ ವಿಠಲ ಪ್ರೀಯ 7
--------------
ಗುರುಜಗನ್ನಾಥದಾಸರು
ರÀಂಗನ್ಯಾಕೆ ತಿರುಗಿ ಬಾರನೆ ಅಂತರÀಂಗಪೀಠದಿ ಮೊಗದೋರನೆ ಪ.ಮಂಗಳಾಂಗನೊಳು ಮಾತಾಡದೆಸತಿಕಂಗಳುದಣಿಯದೆ ನೋಡಿಅಂಗನೆಹ್ಯಾಗೆ ಜೀವಿಸಲಮ್ಮ ಎನ್ನಿಂಗಿತವಾರಿಗುಸುರಲಮ್ಮ 1ಕಲ್ಲೆದೆಯಾದೆ ಇನಿತುದಿನ ಜೀವಕೊಲ್ಲದು ಹೋಯೆಂಬ ರೋದನಫುಲ್ಲನಾಭನ ಎಂಜಲುಂಡರೆ ಕಷ್ಟವಿಲ್ಲದ ಸುಖ ಕಣ್ಣು ಕಂಡರೆ 2ಕೃಷ್ಣನ ಶುಭಗುಣ ಹೊಗಳುತ ಬಹುಕಷ್ಟ ನೀಗಿದೆ ನಕ್ಕು ತತ್ವತ:ಸೃಷ್ಟೀಶ ಪ್ರಸನ್ವೆಂಕಟೇಶನ ನೆನೆವಷ್ಟರೊಳಗೆ ಮಾಯವಾದನೆ 3
--------------
ಪ್ರಸನ್ನವೆಂಕಟದಾಸರು
ವಾದಿರಾಜಸುರರಾಜತಾನಾದರೆxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಮೇದಿನಿಯೊಳಗಿಹನ್ಯಾಕೆ ? ಪಮೇದಿನಿಸುರರಿಗೆಮೋದಕೊಡೋದಕೆಸ್ವಾದಿಯೊಳಗೆ ನಿಂತಿಹನದಕೇ ಅ.ಪಅಜನ ಪದ ತಾ ಸೇರೋದಕೆ 1ಸುರತತಿಸನ್ನುತಸರಸಿಜಭವ ಪದ-ಪರಿಪರಿ ಮಹಿಮೆಯ ತೋರಿಸಿದ 2ವೀತಭಯನು ತಾನೀತೆರ ಜಗದಿದಾತಗುರುಜಗನ್ನಾಥ ವಿಠಲಗುಣಖ್ಯಾತಿಯ ತಾಮಾಡಿದ 3
--------------
ಗುರುಜಗನ್ನಾಥದಾಸರು
ಶ್ರೀ ಕರಾರ್ಚಿತ ಜಗದೇಕಕಾರಣ ಶ್ರೀಕರಾದೇವಾ ಪಸಾಕುವನಿಗೆ ನಾನ್ಯಾಕೆ ಬಾರೆನೊ ಮನಕೆ ಅ.ಪವಸತಿಸ್ಥಳವಿಲ್ಲಾವಸುಧೆತಿರುಗುವೆನಲ್ಲಾವಸುಧೆಭಾರಾದೆನಲ್ಲಾ ಸ್ವಾಮಿವ್ಯಸನ ಬಡುತಿಹ ದ್ವಿಪದ ಪಶುವಿನ ನೋಡಿ ನಿನಗೆ 1ಜನನಿಜನಕ ತನಯಾ ವನುತೆ ಈ ದೇಹಾಮನಕೆ ಬಾರೆನೊಅವರಅನುಕೂಲವಾಗದಲೆವನದಲ್ಲಿ ಸಂಚಾರ ಇನುತೆ ಮಾಳ್ಪನ ನೋಡಿ 2ವರಣಿಸಾಲೇನಿನ್ನು ಸುಪರಣವಹÀನಭವಕರಣರಹಿತಶಾಯಿ ಕರಣ ವೈರಿಯಮಿತ್ರಕರುಣಿಸ್ಯನ್ನನು ಎಂದು ಶರಣು ಪೊಕ್ಕದು ನೋಡೀ 3ನರರ ಸೇವೆಯ ಮಾಡಿ ನರರಗುಣಕೊಂಡಾಡಿನರರ ಮಾತನೆಕೇಳಿನರರಗಾಥವಕೇಳಿಹರಿನಿನ್ನ ಚರಣಾಶ್ರಯಸಿದವನಾ ನೋಡೀ4ವಾತದೇವನತಾತಸೀತಾನಾಥನೆ ನಿನ್ನತಾತಕೇಳೀಗೆನ್ನ ಮಾತು ಮನಸಿಗೆ ತಂದುದಾತನೀನೆಂದು ನಾ ಆತುರದಿ ಬೇಡಿದೆನೊನೀತ ಗುರುಜಗನ್ನಾಥವಿಠಲ ನಿನಗೆ 5
--------------
ಗುರುಜಗನ್ನಾಥದಾಸರು
ಶ್ರೀ ಸತ್ಯಧ್ಯಾನರುನಿತ್ಯದಿತಿಜರು ಕಲಿಗೆ ದೂರುತಿಹರೋಸತ್ಯಧ್ಯಾನರ ಕಾಟ ತಾಳಲರೆವೊಯಂದು ಪನೀಕಲಿಸಿದಾಟವನು ತಾ ಕಳೆದು ಜನರ ಅಘನೂಕಿಜಗಸತ್ಯ ಶ್ರೀಹರಿಯು ಪರನುಶ್ರೀ ಕಮಲಭವರೆಲ್ಲ ದಾಸರೆಂದರು ಪಲುತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1ಭೂಸೂರರಿಗನ್ನ ಧನ ಭೂಷಣಗಳಿತ್ತುಅಭ್ಯಾಸಗೈಸಿದ ಸಕಲ ವೇದಶಾಸ್ತ್ರವೀಸುವಿದ ಯತ್ನಗಳು ನಾ ಮಾಡಿದರು ಜಯಲೇಸುಕಾಣದೆ ನಿನ್ನ ಬಳಿಗೆ ಬಂದೆವು ಎಂದು 2ಇಂತು ತಾಮಾಡಿದನು ಪಿಂತಿನಾಶ್ರಮದಿಈಗಂತು ನಮ್ಮವರಾದ ವದುಮತ್ಸರಾಕಂತುಕೋಪಾದಿಗಳಿಗಂತಕನು ಯನಿಸಿಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು3ತಾಪಸೋತ್ತಮ ಸತ್ಯಧ್ಯಾನದಿಂ ಭೂತಳದಿಪಾಪ ಸರಿದಿತು ಪುಣ್ಯವೆಗ್ಗಳಿಸಿತುಲೇಪಿಸದು ಖತಿಜನಕ ಇವರ ದಯದಿಂದೆಮ್ಮವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾಪರಹಿಂಸೆ ಧನ ಯುವತಿ ದ್ಯೂತ ತೊರದಾವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದುಅರುಹಿದನು ಭೃತ್ಯರಿಗೆಕಲಿಮನನೊಂದು 5
--------------
ಸಿರಿಗೋವಿಂದವಿಠಲ
ಸಜ್ಜನರ ನಡತಿದೊ ಶ್ರೀ |ಅರ್ಜುನ ಸಖನ ಪದಾಬ್ಜ ಭಜಿಸುವದೆ ಪಕುಹಕರ ಸಂಗವ ಮಾಡದೆಖೇಚರ|ವಹನನಾಳುಗಳ ಆಳಾಗೀ ||ಅಹರ್ನಿಶಿಯಲಿ ತತ್ವ ವಿಚಾರಿಸುತಲಿ |ಅಹಲ್ಲಾದವ ಮನದಲಿ ಬಿಡುತಿಪ್ಪುದೆ 1ನೀಚ ಸುರ ನರರ ಸೇವಿಸಿ ವರಶನ |ಯಾಚಿಸದೆ ಸ್ವಧರ್ಮವ ಬಿಡದೇ ||ಖೇಚರಜ ಮತವ ಪೊಂದಿಸು ಕರ್ಮಗ- |ಳಾಚರಿಸುತವಿಜ್ಞಾನಘಳಿಸುವದೆ 2ಪದ್ಮಜಮುಖರಿಗೆ ಕ್ಷಣ ಕ್ಷಣದಲಿ ಶಿರಿ |ಬುದ್ಧಿಯ ಪ್ರೇರಿಸುವಳು ಆರೇ ||ಪ್ರದ್ಯುಮ್ನನು ಮಾಡುವ ಲೀಲಿಯು ಬಳಿ |ಇದ್ದರು ಒಂದನು ಅರಿಯಳು ಎಂಬುದೆ 3ತತ್ವಭಿಮಾನಿಗಳೆಲ್ಲಸಮೀರಪ್ರ- |ವರ್ತಿಸಿದಂದದಿ ವರ್ತಿಪರೂ ||ಸತ್ಯವತಿ ಜಗತೊಬ್ಬನೆ ಅಚ್ಛಿನ್ |ಭೃತ್ಯಶಿವಾದ್ಯರು ಛಿನ್ನರು ಎಂಬುದೆ 4ಮೂಲದಲಿದ್ದ ಮಹತ್ಮಿ ನಿರುತ ಶ್ರೀ |ಲೋಲನ ಅವತಾರದೋಳುಂಟೂ ||ಕಾಳೀಶಗೆ ಕೊಂಡರೆ ಬರುತಿಪ್ಪುದು |ನೀಲಕಂಠ ಪ್ರಮುಖರಿಗಿಲ್ಲೆಂಬುದೆ 5ಚೇತನಚೇತನವಾದ ಜಗತ್ಯವು |ವಾತನಧೀನದೊಳಿರುತಿಹದೂ ||ಆತನು ರಮೆಯಧೀನವಳುಹರಿ|ದೂತಳೆಂದು ನಿಶ್ಚಯ ತಿಳಕೊಂಬುದೆ 6ಎಲ್ಲ ದಿವಿಜರವಲಕ್ಷಣ ಯುಕ್ತರು |ಬಲ್ಲಿದಹರಿಮಾರುತ ಮಾತ್ರಾ ||ಸಲ್ಲಕ್ಷಣರೆನುತಲಿ ತಿಳಿದು ಗಿರಿಜ |ವಲ್ಲಭಪ್ರಮುಖರಿಗೊಂದಿಸುತಿಪ್ಪುದೆ 7ಅಂಬುಜಭವ ಮೊದಲಾದವರಿಗೆ ಪೀ- |ತಾಂಬರತನ ಪೆಸರಿತ್ಯಹನೂ ||ಕಂಬಸದನ ತೊಲಿ ಜಂತಿಯು ಮಾಳಿಗಿ |ಎಂಬ ಶಬ್ದವಾಚ್ಯನುಹರಿಎಂಬುದೆ 8ಅರಸುಗಳಾದವರನುಗರ ಕೈಯಲಿ |ನರರ ಶೀಕ್ಷಿ ಮಾಡಿಸುವಂತೇ ||ಹರಿವಿಧಿಶಿವರೊಳು ತಾನಿಂತಾವಾಗ |ಮರಿಯಾದಿಗಳು ನಡಿಸುತಿಹ್ಯನೆಂಬುದೆ 9ಸೃಜಿಸುವ ಜನೊಳಿದ್ದು ಜಗವ ಪೊರವನು |ಭುಜಗಭೂಷಣನೊಳಿದ್ದು ಲಯಾ ||ದ್ವಿಜರೂಪಿಯೆ ಮಾಳ್ಪನು ಎಂತಿಳಿಯದ |ಕುಜನರು ನರಕವ ಐದುವರೆಂಬುದೆ 10ವಂದೊಂಧರಿ ನೇಮದಿ ಬಲ್ಲರು ಮರ |ಳೊಂದನರಿಯರಜಾದಿಗಳೂ ||ಮಂದರಧರಬಹು ಬಲ್ಲನು ಜೀವರ |ಬಂಧಕ ಶಕುತಿಯೊಳಿರಿಸಿಹನೆಂಬುದೆ 11ಜ್ಞಾನಾನಂದಾದಿ ಗುಣಭರಿತಹರಿ|ಹೀನತನವನೆಂದಿಗ್ಯು ಅರಿಯಾ ||ಕಾಣಿಸಿಕೊಳ್ಳನು ಎಂದಿಗು ಅಧಮರಿ- |ಗೇ ನಳಿನಾಕ್ಷನು ಎಂದುಚ್ಚರಿಪುದೆ 12ಝಷಮೊದಲಾದವತಾರವು ಮಿಥುನೀ |ದೆಶೆಯಿಂದಲಿ ಆಗಿಲ್ಲನಳಾ ||ಮಸಿಯಲು ಕಾಷ್ಠದಿ ತಾ ತೋರ್ವಂದದಿ |ವಸುದೇವಜನವ್ಯಕ್ತನು ಯಂದರಿವದೆ 13ಆಪಗ ವನಧಿಯನಳನಿಳಶಶಿರವಿ|ಈ ಪೊಡವೀವನನಿರಂತರದೀ ||ಶ್ರೀಪತಿಕಟ್ಟಲಿಯೊಳಗಿಹದೆಂದು ಪ- |ದೆ ಪದೆ ನೆನದು ಸುಖಬಡುತಲಿರುವುದೆ 14ನಿಶಿಯಲಿ ಕಂಡಿಹ ಸ್ವಪ್ನವು ನಿಶ್ಚಯ |ಅಸಮ ಸೃಜಿಸಿದ ಜಗತ್ಯವನೂ ||ಹುಸಿಎಂಬವ ಕುಲಭ್ರಷ್ಟನು ಎಂದಿಗು |ಹಸಗತಿ ಅವನಿಗೆ ಇಲ್ಲಿಲ್ಲೆಂಬುದೆ 15ಪ್ರಾಣಿಗಳೊಳಗಿದ್ದೆಲ್ಲ ಕೆಲಸವನು |ತಾನೆ ಮಾಡಿ ಮಾಡಿಸಿ ಫಲವಾ ||ಏನು ನೋಡೆ ನಿರ್ಮಲನಾಗಿಹಹರಿ|ಭಾನುಸಖ ಜಲದೊಳಿರುವಂತೆಂಬುದೆ16ತಾ ಬಂಧಿಸುತಿಹ ಸರ್ವ ಜಗತ್ಯವ |ನೂ ಬದ್ಧನು ಅಲ್ಲವು ಊರ್ಣಾ ||ನಾಭಿಯ ಜಾಲಿಯ ಹೊರಗಿರುವಂದದಿ |ಶ್ರೀ ಭಗವಂತನು ಇರುತಿಹನೆಂಬುದೆ17ಭಕ್ತಿಗೆ ಭೇದವು ಜ್ಞಾನಕೆ ಭೇದವು |ಮುಕ್ತಿಗೆ ಭೇದವು ಯಂತಿಳಿದೂ ||ಸುತ್ಪುರುಷರ ಸ್ನೇಹವ ಸಂಪಾದಿಸಿ |ಮತ್ತೊಂದೊಲ್ಲೆನು ಯಂದಿರುತಿಪ್ಪುದೆ 18ಸಾಧನತ್ರಯ ಫಲಗಳನು ವಿಚಾರಿಸಿ |ಮಾಧವನಗುಣಮಹತ್ಮಿಯನೂ ||ಸಾದರದಿಂ ಜ್ಞಾನಿಗಳ ಮುಖದಲಿ ದಿ- |ನೇ ದಿನೇಕೇಳಿವಿಜ್ಞಾನಘಳಿಸುವದೆ 19ಕಾಲಿಲ್ಲದೆ ನಡಿಯಲು ಬಲ್ಲನುಹರಿ|ಕೇಳುವ ಕಿಂವಿಯಿಲ್ಲದೆ ತನ್ನಾ ||ಲೀಲಿಯು ಹೀಂಗದೆ ಯಂದು ತಿಳಿಪುದಕೆ |ಈ ಲೋಕದಿಅಹಿಮಾಡಿಹನೆಂಬುದೆ 20ಚೇತನ ಕೃತ್ಯವ ಮಾಡುತಲಿಪ್ಪವ |ಚೇತನಗಳು ಚಿಂತಾಮಣಿ ದೇ- ||ವಾತರು ಸಂಜೀವನ ಪರ್ವತ ಶ್ರೀ-ನಾಥನ ಆಜÕವು ಯಿದು ಎಂದರಿವುದೆ 21ಸತ್ವಾದಿ ಗುಣರಹಿತ ಪರಮಾತ್ಮನು |ಚಿತ್ತು ಜ್ಞಾನಬಲ ಸುಖ ಪೂರ್ಣಾ ||ಮೃತ್ಯುಂಜಯಸಖಗುಣಶೂನ್ಯಂಬ ಪ್ರ- |ವರ್ತಕ ಹೀಗೆಂದೂ ತಿಳಿದೀಹದೆ 22ಯೇಸು ಯೇಸು ಕಲ್ಪಗಳಾದರು ಶ್ರೀ- |ವಾಸುಕಿಶಯನಗೆ ಎಂದೆಂದೂ ||ನಾಶವಿಲ್ಲ ವಿಶೋಕರು ಧರಿಯೊಳು |ಶ್ರೀಶನ ವ್ಯತಿರಿಕ್ತಾರಿಲ್ಲೆಂಬುದೆ 23ಬ್ರಹ್ಮಾದಿಗಳಿಗೆ ಜನಕನು ಶ್ರೀಪರ|ಬ್ರಹ್ಮಗೆ ಒಬ್ಬರು ಸರಿಯಿಲ್ಲಾ ||ಒಮ್ಮಿಗು ಅಧಿಕರು ಇಪ್ಪರೆ ಶೃತಿಯಲಿ |ಸಮ್ಮತವಾಗದೆ ಈ ನುಡಿಯಂಬುದೆ 24ಶತಸುಖಿ ವಿಧಿ, ಕೋಟಿ ಸುಖಿ ರಮಾ, ಪರಿ- |ಮಿತಯಿಲ್ಲದ ಸುಖಿ ಕೇಶವನೂ ||ಕ್ಷಿತಿಯೊಳು ಪರಮೇಶ್ವರನೈಶ್ವರ್ಯಕೆ |ಇತರರು ಆರುಂಟು ಸಮಾನೆಂಬುದೇ 25ತಾರಿಯು ಗಗನದೊಳೀಸವೆ ಯಂಬುದು |ಧಾರುಣಿಯೊಳಗೆಣಿಸಲಿ ಬಹುದೂ ||ನಾರಾಯಣನ ಮಹತ್ಮಿ ಗಣಣಿಯನು |ಆರಾರಿಲ್ಲವು ಬಲ್ಲವರೆಂಬುದೆ 26ವಿಶ್ವಾಸದಿ ದೂರ್ವಿಯ ದಳವಿತ್ತರೆ |ವಿಶ್ವಕುಟುಂಬಿಯು ಕೈಕೊಂಬಾ ||ಅಶ್ವಾದಿ ಮುಖದಿಂ ಪೂಜಿಸಲು ಅ |ವಿಶ್ವಾಸದವರು ಕೊಳ್ಳನು ಎಂಬುದೆ27ಗೋವಿಂದಗೆ ನಿಜ ನಾಮೆನಿಸುತಿಹವು |ಐವತ್ತೊಂದೂ ವರ್ಣಗಳೂ ||ಈ ವಿವರವು ತಿಳಿದೂ ನಿಂದಾಸ್ತುತಿಗಳು |ದೇವನ ಗುಣಕಥನಗಳೆಂದರಿವದೆ 28ದುರ್ಜನರಿಗೆ ಎಂದಿಗೂ ದಯಮಾಡನು |ನಿರ್ಜರೇಶ ಸಂತರಿಗೊಲಿವಾ ||ದುರ್ಜಯವಾದ ಮನಸು ನಿಶ್ಚೈಸುತ |ಅಬ್ಜದಳಾಕ್ಷನ ಒಲಿಸಿರೊ ಎಂಬುದೆ 29ಯಮ ನಿಯಮಾದಿಗಳಲಿ ದಾರಢ್ಯದಿ |ಕಮಲಾ ಸ್ವಸ್ತಿಕದಾಸನದೀ ||ಸಮಚಿತ್ತದಿ ರೇಚಕ ಪ್ರಮುಖದಲಿಂ |ಸಮಿರನ ಬಂಧಿಸಿ ಜಪವನು ಮಾಳ್ಪುದೆ 30ಸ್ವಾಗರ್ಭಕ ಆಗರ್ಭಕ ಎಂಬುವ |ಯೋಗದ ಲಕ್ಷಣ ತಿಳಕೊಂಡೂ ||ಮೂಗಿನ ತುದಿಯನೆ ಈಕ್ಷಿಸುತಲಿ ಶ್ರೀ |ಭಾಗೀರಥಿ ಪಿತನ ಸ್ಮರಿಸುತಿಪ್ಪುದೆ31ಅಂಗುಷ್ಠಾರಂಭಿಸಿ ಮಸ್ತಕತನ |ಕಂಗಜ ಜನಕನ ರೂಪವನೂ ||ಹಿಂಗದೆ ಧೇನಿಸಿ ಮೈರಧರುಷದಿ |ಕಂಗಳಿಂದುದಕ ಸೂಸುತಲಿಪ್ಪುದೆ 32ಈ ಕರ್ಮವ ಮಾಡಿದೆ ಯನಗೀಪರಿ|ಸಾಕಲ್ಲ್ಯೆವು ಆಯಿತು ಎಂದೂ ||ಲೋಕಕೆ ತಿಳಿಸದೆ ತನ್ನಯ ಭಾವವ |ಜೋಕಿಲಿ ಬಚ್ಚಿಟ್ಟೂಕೊಂಡಿರುವದೆ 33ಧ್ಯಾನಕೆ ಕುಳಿತರೆ ಮನ ಹರಿದೋಡಲು |ಜಾನಕಿರಮಣನ ಮೂರುತಿಯಾ ||ತಾನೀಕ್ಷಿಸುತಲಿ ಸರ್ವದ ತತ್ವದ |ರೇಣುದೊಳಗೆ ಮುಣಿ ಮುಣಿಗಿ ಯೇಳುವದೆ 34ಅಸುರರನಳಿಯಲು ಶಕ್ತನು ಶ್ರೀಹರಿ |ದಶರೂಪವ ತಾಳಿದನ್ಯಾಕೇ ||ವಸುಧಿಯೊಳಗೆ ಪಾಪಿಷ್ಠ ಜನರ ಮೋ- |ಹಿಸುವದಕೀಪರಿಲೀಲಗಳೆಂಬುದೆ 35ಅನ್ಯತ್ರದಿ ಇಂದ್ರಿಯಗಳ ಚಲಿಸದೆ |ತನ್ನೊಶದೊಳಗಿರಿಸನುದಿನದೀ ||ಪನ್ನಗಶಯನನ ಪೂಜಿಯ ಮಾಡುತ |ಧನ್ಯನು ಈ ನರನೆನಿಸುತಲಿಪ್ಪುದೆ 36ಕೋಪವ ಬಿಟ್ಟು ನಿರಂತರ ಜ್ಞಾನಿಗ- |ಳಾ ಪದ ಭಜಿಸುತ ಹರಿದಿನದೀ ||ಲೋಪವ ಮಾಡದೆ ನಿರ್ಜಲ ಜಾಗರ- |ವಾಪರಮಮುದದಿ ನಡಸುತಲಿಪ್ಪುದೆ 33ಋಣಕೆ ಕಾಳಕೂಟವ ಕುಡಿವಂತೆ ಮ- |ರಣದಂದದಿ ಸನ್ಮಾನಕ್ಕೇ ||ಕುಣುಪದಂತೆ ಪರಸ್ತ್ರೀ ನೋಡಲ್ ಭಯ |ವನು ಬಡುವನು ಬ್ರಾಹ್ಮಣನೆಂದರಿವದೆ 38ಶತಮಖನಿಗೆ ಈಶಬಲ ಅವಗೆ ಬಲ ಮ- |ರುತವಗೆ ಬಲಹರಿಅವಗೆಂದೂ ||ಇತರರ ಬಲ ಬೇಕಿಲ್ಲ ಸ್ವತಂತ್ರ |ಚ್ಯುತಸರ್ವಜÕ ಸುಗುಣ ಪೂರ್ಣೆಂಬುದೆ 39ಸಂಸಾರವ ಹೇಯಿಸಿಕೊಂಡಾವಗ |ಕಂಸಾಂತಕನೂಳಿಗವನ್ನೂ ||ಸಂಶಯವಿಲ್ಲದೆ ಮಾಡುತೊಂದಧಿಕ |ವಿಂಶತಿ ಕುಲ ಉದ್ಧಾರ ಮಾಡುವದೆ 40ಪ್ರಥಮ ವಯಸದಲಿ ವಿದ್ಯಾಭ್ಯಾಸವು |ದ್ವಿತಿಯದಲ್ಲಿ ಗೃಹಕರ್ಮವನೂ ||ತೃತಿಯದಿ ಸತ್ತೀಥ್ರ್ಯಾತ್ರಿಗಳನುಮಾ|ಡುತಲಲ್ಲೆಲ್ಲಿಹ ಮಹಿಮಿ ಕೇಳುವದು 41ಘೋರತರ ಕುಸಂಸಾರವೆಂಬ ಈ |ವಾರಿಧಿತ್ವರದಾಟುವದಕ್ಕೇ ||ಮಾರಮಣನ ನಾಮೋಚ್ಚಾರವೆ ನವ |ತಾರಕವೆಂದುಪದೇಶ ಮಾಡುವದೆ 42ಜಲದೊಳಗುದ್ಭವಿಸಿದ ಮುತ್ತುದಕ ಮ- |ರಳೆ ಹ್ಯಾಂಗಾಗದೊ ಅದರಂತೇ ||ಕಲಿಕ್ಯವತಾರನ ಶರಣರು ಎಂಬರು |ಇಳಿಯೊಳು ನರರೆಂದೆನಿಸಲು ಯಂಬುದೆ 43ದ್ವಾದಶ ನಾಮವ ಪಂಚಮುದ್ರಿಗಳು |ಆದರದಲಿ ಧರಿಸುತ ಪಂಚಾ ||ಭೇದವ ತಿಳಿದು ನಿರಂತರದಲಿ ದು- |ರ್ವಾದಿಗಳ ಮತವ ಹಳಿವುತಲಿಪ್ಪುದೆ 44ಮಧ್ವಮತದ ಸರಿ ಮತಗಳು ಸಪ್ತ ಸ- |ಮುದ್ರತನಕ ಹುಡುಕಿದರಿಲ್ಲಾ ||ಬುದ್ಧಿವಂತರೆಲ್ಲೀತನ ಸೇವಿಸಿ |ಸದ್ವೈಷ್ಣವರೆಂದೆನಿಸಿರೊ ಎಂಬುದೆ 45ಮಾತಾಪಿತೃರ ಆರಾಧನಿ ಬಲು |ಪ್ರೀತಿಲಿ ಮಾಡುತ ಭಾಸ್ಕರಗೇ ||ಪ್ರಾತರಾದಿ ಸಂಧ್ಯಾಘ್ರ್ಯವ ಕೊಡುತಲಿ |ಆ ತರುವಾಯ ಜಪಂಗಳ ಮಾಳ್ಪುದೆ 46ಗುರುಹಿರಿಯರ ಚರಣವ ವಂದಿಸುತಲಿ |ಪರರಿಗೆ ಉಪದ್ರವನು ಕೊಡದೇ ||ಮರುತಾಂತರ್ಗತನೋಲ್ಗವನಲ್ಲದೆ |ನರಸ್ತೋತ್ರವ ಸ್ವಪ್ನದಿ ಮಾಡದಿಹದೆ 47ನಡಿಯಲು ದಾರಿಯ ಮನಿಯೊಳಗಿದ್ದರು |ನುಡಿ ನುಡಿಗನಿರುದ್ಧನ ನೆನದೂ ||ಬಡವರೆ ಗೋಪಾಲನ ಹೊಂದಿದವರು |ಅಡವಿಯೊಳಿದ್ದರು ಧೊರಿಗಳೆ ಎಂಬುದೆ 48ಪರಮಾಣುಗಳೊಳು ತಾನಿಹ್ಯ ತನ್ನೊಳ- |ಗಿರಸಿಹನಗಣಿತ ಬೊಮ್ಮಾಂಡಾ ||ಶಿರಿಗೆಂದೆಂದಿಗಸದಳವು ತಿಳಿಯಲು |ಕರಿವರದಿಂಥ ಮಹತ್ಮನು ಎಂಬುದೆ 49ಹೊತ್ತರಾದಿನಿಶಿಪ್ರಹರಾಗುವನಕ |ಮೃತ್ತಿಕಿ ಶೌಚಾದಿ ಸುಕರ್ಮಾ ||ತತ್ತಲವಾಗದೆ ಶ್ರೀ ಮುದತೀರ್ಥರ |ಉಕ್ತ್ಯನುಸಾರಾಚರಿಸುತಲಿಪ್ಪುದೆ 50ಹಾನಿ ಲಾಭ ಜಯ ಅಪಜಯ ಮಾನಪ- |ಮಾನಸುಖಾಸುಖ ಸಮ ಮಾಡೀ ||ಈ ನರರಿಗೆ ತನ್ನಿಂಗಿತ ತೋರದೆ |ಪ್ರಾಣೇಶ ವಿಠಲನ ಕರುಣವ ಪಡೆವದೆ 51
--------------
ಪ್ರಾಣೇಶದಾಸರು
ಸುಳಿದನ್ಯಾರೆ ಈಗ ಸುಳಿದನ್ಯಾರೆಕೆಳದಿ ಎನ್ನುಪ್ಪರಿಗೆಯ ಮುಂದೆಹೊಳೆವ ಹೊಂಬಕ್ಕಿಯ ಮೇಲೆಥಳಥಳಿಪ ಮಿಂಚಿನಂತೆ ಪ.ಎಸೆವಮಣಿಕನಕಾಭರಣಿಟ್ಟುನಸುನಗೆ ಬೆಳಗ ವೈಸರಿಸಿಬಿಸಜಾಕ್ಷಿಯಳೋರ್ವಳ ಕೂಡಹೊಸಪರಿಸರಸವಾಡುತಲಿ1ಮುಂದುಗ್ಗಡಿಪ ಸುರಸಂದೋಹಹಿಂದಕ್ಕೆಳದಿ ಮುನಿಸಮ್ಮೋಹಅಂದದಿ ಮುಂಗಡಿರುವ ವಾದ್ಯಸಂದಣಿಯ ಸೊಬಗಿನಲ್ಲಿ 2ಎನ್ನ ಮನದಿ ನೇಹವ ಬೀರಿಇನ್ನ್ಯಾಕೆ ದೂರ ನೋಡಿದನೆಮನ್ನಿಸ್ಯವನ ತಾರೆ ಶ್ರೀ ಪ್ರಸನ್ನವೆಂಕಟವರದನ ಬೇಗ 3
--------------
ಪ್ರಸನ್ನವೆಂಕಟದಾಸರು