ಒಟ್ಟು 161 ಕಡೆಗಳಲ್ಲಿ , 55 ದಾಸರು , 142 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಘವೇಂದ್ರ ರಾಯರಡಿಗೆ ಬಾಗಿ ನಮಿಸಿರೊ ನೀಗಿ ಭವದ ಬಂಧದಿಂದ ಮುಕ್ತರಾಗಿರೊ ಪ ಶಂಕೆಯಿಲ್ಲದೆ ವರಗಳ ಕೊಟ್ಟು ಚಿಂತೆ ಹರಿಸುವರ ಕಂತುಪಿತನ ಭಕ್ತರಿಗೆ ನಿರಂತರ ಸಂತಸ ನೀಡುವರ ಪಂಕಜನಾಭನ ಕಿಂಕರರ ಭಯ ಚಿಂತೆಯ ನೀಗುವರ ಶಂಖು ಕರ್ನರಿವರೆನ್ನುತ ಅಭಯದ ಕಂಕಣ ಕಟ್ಟಿಹರ 1 ಹಾಟಕಶ್ಯಪುತ್ರನು ವಿನಯದಿ ಪ್ರಾರ್ಥಿಸಿ ಪೂಜಿಸಿದ ಮಾಟಮುಖದ ದೇವನ ಪಾದಾಂಬುಜ ಧ್ಯಾನಿಸಿ ಸೇವಿಸಿದ ಕೋಟಲೆ ಭವದೊಳು ತಾಪವ ಪಡುವರ ಆಪದ ಪರಿಹರಿಸಿ ಭ- ವಾಟವಿದಾಟಿಸಿ ಪೊರೆದ ಪ್ರಹ್ಲಾದರ ಉಲ್ಲಾಸದಿ ಭಜಿಸಿರಿ2 ವ್ಯಾಸರಾಯರೆಂದು ಜಗದಿ ಪ್ರಖ್ಯಾತಿ ಪಡೆದವರ ದೇಶ ದೇಶದ ಭಕುತರ ಉಲ್ಲಾಸ ಕೊಡುವರ ಶ್ರೀ ಸುಧೀಂದ್ರಾರ್ಯರ ಪುತ್ರರೆನಿಸಿಕೊಂಬರ ಕ್ಲೇಶಗಳನೆ ಕಳೆವರೆಂಬ ಕೀರ್ತಿಪಡೆದರ3 ಕಂಗೊಳಿಪ ಕೋರೆಯಿಂದ ಬಂದ ಭದ್ರೆಯ ತೀರದಿ ಚಂದದಿಂದ ಮೆರೆವ ರಾಘ- ವೇಂದ್ರ ರಾಯರ ಕೊಂಡಾಡಿ ಪಾಡಿರೊ ಮನಕೆ ಸಂಭ್ರಮ ನೀಡುವರು ಪೊಂದಿದ ಪಾಪಗಳೆಲ್ಲವ ನೀಗಿಸಿ ಚಂದದಿ ಸಲಹುವರು 4 ಕರುಣದಿಂದ ಭಕ್ತರನೆಲ್ಲ ಸಲಹುತಿರ್ಪರ ಕಮಲನಾಭ ವಿಠ್ಠಲನಂಘ್ರಿ ಭಜನೆ ಮಾಳ್ಪರ ಕನಕಮಯದ ಮಂಟಪದಲಿ ಮರೆಯುತಿರ್ಪರ ಕರೆದು ಪ್ರಾರ್ಥಿಸುವವರ ಮನಕೆಹರುಷ ತೋರ್ಪರ 5
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀ ಸ್ತುತಿ ಶ್ರೀವೇದನಾಯಕೀ ಆಶ್ರಿತಜನ ಪಾಲಕೀ ಶ್ರೀವೇದನಾಯಕೀ ಜಯ ಜಯಾ ಪ ನೀನೇ ಪನ್ನಗವೇಣೀ ನೀನೇ ಮಧುರವಾಣೀ 1 ನೀನೇ ಕಮಲವಾಸೇ ನೀನೇ ಸಜ್ಜನಪೋಷೇ ನೀನೇ ಭವಭಯನಾಶೇ ನೀನೇ ಹರಿಸಂತೋಷೆ 2 ನೀನೇ ಲೋಕಮಾತೆ ನೀನೇ ಜಗತ್ಪ್ರಖ್ಯಾತೇ ನೀನೇ ಕಾಮಿತದಾತೇ ನೀನೇ ರಂಗಗೆ ಸೋತೆ 3
--------------
ಯದುಗಿರಿಯಮ್ಮ
ಲಕ್ಷ್ಮೀದೇವಿ ಸ್ತೋತ್ರ ಎಂದು ಬರುವಳೋ ಗೋ-ವಿಂದನೊಲ್ಲಭೆ ಲಕ್ಷ್ಮೀ ರಂಗನ ಸನ್ನಿಧಿಗೆ ಪ ಮಂಗಳಾಂಗಿ ಸರ್ವಾಂಗ ಬಳಲಿ ಮುಖಕಂದಿ ಕಳೆಗುಂದಿದಂತೆ | ಬಲು ವ್ಯಥೆಯಂತೆ ಅ.ಪ ಶೇಷನ ಶಿಖಿ ಮ್ಯಾಲೆವಾಸುದೇವರು ಲಕ್ಷ್ಮೀ ಸಮೇತರಾಗಿರುತಿರಲುಆ ಸಮಯದಿ ಭೃಗುಮುನಿ ಬಂದು ಕೋ-ಪಿಸೆ ಸೋಕಿಸಿದನು ಪಾದವಾ | ವಕ್ಷ ಸ್ಥಳವಾ 1 ಥಟ್ಟನೆ ಇಳಿದಾಳುಸಿಟ್ಟಿನಿಂದಲಿ ಬಹು ಧಿಕ್ಕಾರ ಮಾಡಿದಳುಲಕ್ಷ್ಮೀರಮಣನೆಂಬೊ ಬಿರುದು ನಿಮಗೆ ಈಹೊತ್ತಿಗೆ ಅಲ್ಲೆಂದಾಳು | ತೆರಳಿದಳು 2 ನಿಲ್ಲದೆ ಪೊರಟಾಳುಫುಲ್ಲಾಕ್ಷಿ ಮನದೊಳು ತಲ್ಲಣಿಸುತಿರಲುವಲ್ಲಭನರಿಯದ ಸ್ಥಳವಿಲ್ಲದಿರೆ ತಾಯಿ ಕೊಲ್ಲಾಪುರಕೆ ಬಂದಾಳು | ನೆಲೆಗೊಂಡಾಳು 3 ಜಾತೆ ಬಾಮಾರನ ಮಾತೆ ಬಾ ವಾರಿಜದಳನೇತ್ರೆ ಬಾಮೂರ್ಲೋಕದೊಳಗೆ ನೀ ಪ್ರಖ್ಯಾತೆ ಬಾರೆಂದು ಶ್ರೀಮ-ನ್ನಾರಾಯಣನೆ ಕರೆಯಲು | ನಸುನಗೆಯೊಳು 4 ಜಯ ಲಕ್ಷ್ಮೀರಮಣಗೆಜಯ ಶ್ರೀನಿವಾಸಗೆ ಜಯ ಮೋಕ್ಷದಾಯಕಗೆಜಯತು ಕೊಲ್ಹಾಪುರದೊಳ್ ನೆಲಸಿದವಳಿಗೆಶ್ರೀದೇವಿಯಳಿಗೆ5 ವೆಂಕಟ ವಿಠಲವೈಕುಂಠಪತಿ ಲಕ್ಷ್ಮೀ ಶಾಂತ ಏಕಾಂತದೊಳುಶಂಖಚಕ್ರಧರ ಸರ್ವಮಂಗಳಕಾರಸಂಚಿತಾಗಮದೂರನು ಮಲಗಿರುವನು6
--------------
ವೆಂಕಟೇಶವಿಟ್ಠಲ
ವಂದ್ಯಗೆ ನಮೋ ನಮೋ ನಮೋ ನಮೋ ಪ ದೇಶಿಕವರ್ಯಗೆ ನಮೋ ನಮೋ ದೋಷವಿದೂರಿಗೆ ನಮೋ ನಮೋ ಭಾಸುರ ಚರಿತಗೆ ನಮೋ ನಮೋ 1 ವಸುಧೀಂದ್ರರ ಕರಜಾತನಿಗೆ ವಸುದಿಜೀವರ ಸಂಪ್ರೀತನಿಗೆ ದಶದಿಶೆಯೊಳು ವಿಖ್ಯಾತನಿಗೆ ಕಸವರಭಾಂಗ ಪ್ರಖ್ಯಾತನಿಗೆ 2 ಮರುತ ಮತಾಂಬುಧಿ ಸೋಮನಿಗೆ ತಿಮಿರ ತರಣಿ ನಿಭಗೆ ವರದೇಶ ವಿಠಲನ ಸ್ಮರಿಸುತ ಲಿಂಗಸು - ಗುರುಸುಕ್ಷೇತ್ರ ನಿವಾಸನಿಗೆ 3
--------------
ವರದೇಶವಿಠಲ
ವಲ್ಲೀದೇವಿಯ ವಲ್ಲಭನೆ ಬಲ್ಲಿದ ಭಕ್ತರ ಸುಲ್ಲಭನೆ ಪ. ಸಲ್ಲಲಿತ ಪಾದಪಲ್ಲವ ಭಜಿಸುವ- ರೆಲ್ಲರ ಮನಸಿನೊಳುಲ್ಲಸನೆಅ.ಪ. ವೃಂದಾರಕಮುನಿವಂದಿತನೆ ಕಂದರ್ಪಾಮಿತಸುಂದರನೆ ಸ್ಕಂದನೆ ಸಚ್ಚಿದಾನಂದನೆ ಪಾರ್ವತೀ- ನಂದನ ಸದ್ಗುಣಮಂದಿರನೆ 1 ತಾರಕದೈತ್ಯ ಸಂಹಾರಕನೆ ಸೇರಿದ ಭಕ್ತೋದ್ಧಾರಕನೆ ಮಾರಾರಿಯ ಸುಕುಮಾರನೆ ಧೀರನೆ ಚಾರು ಮಯೂರ ತುರಂಗಮನೆ2 ಲಕ್ಷುಮಿನಾರಾಯಣ ಪ್ರಿಯನೆ ರಕ್ಕಸರಿಂಗತಿದುಃಖದನೆ ಕುಕ್ಕುಟವಜ್ರಾಭಯಶಕ್ತಿಹಸ್ತನೆ ಪ್ರಖ್ಯಾತ ಪಾವಂಜಾಖ್ಯ ಪುರವರನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಣಿ ಪರಮಕಲ್ಯಾಣಿ ನಮೋ ನಮೋ ಅಜನರಾಣಿ ಪಂಕಜಪಾಣಿ ಪ. ಭಳಿರೆ ಭಳಿರೆ ಅಂಬೆ ಭಕ್ತಜನಸುಖದಂಬೆಸುಳಿದಾಡು ಶುಭನಿತಂಬೆ ಅಮ್ಮ ನಿಮ್ಮಹೊಳೆ ಹೊಳೆವ ಮುಖ ಮುಕುರ ಬಿಂಬೆಇಳೆಯೊಳಗೆ ಸರಿಗಾಣೆ ಶಾರದಾಂಬೆ ಪುತ್ಥಳಿಬೊಂಬೆ 1 ವಾಗ್ದೇವಿ 2 ಜಯಜಯತು ಜಗನ್ಮಾತೆ ಜಗದೊಳಗೆ ಪ್ರಖ್ಯಾತೆದಯಮಾಡು ಧವಳಗೀತೆ ಸತತ ಶ್ರೀಹಯವದನ ಪದಕೆ ಪ್ರೀತೆ ಇಳೆಯೊಳಗೆನಯದಿ ಗೆಲಿಸೆನ್ನ ಮಾತೆ ವಿಧಿಕಾಂತೆ 3
--------------
ವಾದಿರಾಜ
ವಾಣೀ ಪರಮ ಕಲ್ಯಾಣಿ - ವಾರಿಜೋದ್ಭವನ ರಾಣೀ ನಾರೀ ಶಿರೋಮಣಿ ಪ ಕ್ಷೋಣಿಯೊಳಗೆ ಸರಿಗಾಣೆನೆ ನಿನಗೆ ಸು- ಪ್ರಾಣಿಯೆ ಹರಿಪದರೇಣು ಧರಿಪೆ ಸದಾ ಅ. ಪ. ಸರಸ್ವತಿ ನಿತ್ಯಾಸಾವಿತ್ರಿ ದೇವಿ ಗಾಯತ್ರಿ ಸರಸಿಜದಳ ಸುನೇತ್ರಿ ನಿಕರ ಸ್ತೋತ್ರಿ - ಶೋಭನಗಾತ್ರಿ ಕರುಣಾಸಾಗರೆ ಪವಿತ್ರಿ ಚರಣದಂದಿಗೆ ಪಂಚ ಬೆರಳು ಭೂಷಣ ಧ್ವನಿ ಸರವು ಕನಕ ಗೆಜ್ಜೆ ಸರಪಳಿ ಪೊಳೆವಾಂ- ಬರಧರೆ ಸುಂದರಿ ಎರಗುವೆ ಎನ್ನನು ಎರವು ಮಾಡದೆ ತ್ರಿಕರಣ ಶುಧ್ಧನೆ ಮಾಡೆ 1 ಸರ್ವರಾತ್ಮಕೆ ಪ್ರಖ್ಯಾತೆ-ಧವಳಗೀತೆ ಸರ್ವರಿಗೆ ಮಹಾ ಪ್ರೀತೆ ನಿರ್ವಾಹವಂತೆ ಪತಿವ್ರತೆ ನಿರ್ಮಲ ಚರಿತೆ ಪೂರ್ವದೇವತೆ ಹರಿಜಾತೆ ಉರ್ವಿಯೊಳಗೆ ಮದಗರ್ವದ ಮತಿನಾ- ನೋರ್ವನಲ್ಲದೆ ಮತ್ತೋರ್ವನ ಕಾಣೆನು ಪೂರ್ವಜನ್ಮದ ಪಾಪ ಪರ್ವತದಂತಿದೆ ನಿರ್ವಾಹವನುಮಾಡೆ ದೂರ್ವಾಂಕುರದಿ 2 ನಿಗಮಾಭಿಮಾನಿ ಸುಜ್ಞಾನಿ ಅಗಣಿತ ಫಲದಾಯಿನಿ ಝಗಝಗಿಸುವ ಕರಯುಗಳ ಭೂಷಣ ಪ - ನ್ನಗವೇಣಿ ಕುಂಕುಮ ಮೃಗಮದ ವೊಪ್ಪಲು ಜಗತ್ಪತಿ ಪ್ರದ್ಯುಮ್ನ ವಿಜಯವಿಠ್ಠಲನಮಗಳೆ ಸುಖಾತ್ಮಕೆ ಜಗದಿ ಶುಶ್ರೋಣೆ 3
--------------
ವಿಜಯದಾಸ
ವಿಜಯರಾಯರ ಚರಣ ನಿಜವಾಗಿ ನಂಬಲುಅಜನ ಪಿತನು ತಾನೆ ಒಲಿವಾ ಪ ದ್ವಿಜಕೇತನ ಗುಣವ್ರಜವ ಕೊಂಡಾಡುವಾಸುಜನ ಮಂದಾರನೀತ - ಪ್ರಖ್ಯಾತ ಅ.ಪ. ವಿ ಎಂದು ನುಡಿಯಲು ವಿಷಯ ಲಂಪಟ ದೂರಜ ಎಂದು ನುಡಿಯಲು ಜನನ ಹಾನಿಯ ಎಂದು ಕೊಂಡಾಡೆ ಯಮಭಟರು ಓಡುವರುರಾಯ ಎಂದೆನಲು ಹರಿಕಾವಾ - ವರವೀವಾ 1 ಇವರ ಸ್ಮರಣೆಯೆ ಸ್ನಾನ ಇವರ ಸ್ಮರಣೆಯೆ ಧ್ಯಾನಇವರ ಸ್ಮರಣೆಯೆ ಅಮೃತಪಾನಇವರ ಸ್ಮರಣೆಯ ಮಾಡೆ ಯುವತಿಗಕ್ಷಯವಿತ್ತತ್ರಿವಿಕ್ರಮನು ಮುಂದೆ ನಲಿವಾ - ಒಲಿವಾ 2 ವಾರಣಾಸಿಯ ಯಾತ್ರೆ ಮೂರು ಬಾರಿ ಮಾಡಿಮಾರಪಿತನೊಲುಮೆಯನು ಪಡೆದುಮೂರವತಾರದಾ ಮಧ್ವಮುನಿರಾಯರಾಚಾರು ಚರಣವನು ಭಜಿಪಾ - ಮುನಿಪಾ 3 ಪುರಂದರದಾಸರಾ ಪರಮಾನುಗ್ರಹ ಪಾತ್ರಗುರು ವಿಜಯರಾಯನೀತಾಸಿರಿ ವಿಜಯ ವಿಠಲನ್ನ ಶ್ರೀನಿವಾಸಾರ್ಯರುಹರಿಯಾಜ್ಞೆಯಿಂದ ಕೊಟ್ಟರೂ - ದಿಟ್ಟರೂ 4 ದಾನಧರ್ಮದಿ ಮಹಾ ಔದಾರ್ಯಗುಣದ ಶೌರ್ಯಶ್ರೀನಿವಾಸನ ಪ್ರೇಮಕುಮಾರಾಮಾನವೀ ಸೀಮೆ ಚೀಕನಪರಿ ನಿವಾಸ ಮೋ-ಹನ ವಿಠಲನ್ನ ನಿಜದಾಸಾ - ಉಲ್ಲಾಸಾ 5
--------------
ಮೋಹನದಾಸರು
ವೆಂಕಟ ನರಸಿಂಹ ದೇವಾ ಎನ್ನ ಸಂಕಟ ಪರಿಹರಿಸುವಾ ಶಂಕೆಯಿಲ್ಲದ ಬಿರುದಾಂಕ ಮಹಿಮನಾದ ಪಂಕಜನಾಭ ಶ್ರೀ ಪರಮಾತ್ಮ ಪರಬ್ರಹ್ಮ ಪ ಸÀಕಲಲೋಕ ಕರ್ತನಾದ ಶ್ರೀಲಕುಮಿರಮಣ ವೇಣುನಾದ ಮುಕುತಿದಾಯಕ ಕೃಷ್ಣ---ಲ್ಲಾ ಮೂರ್ತಿ ಅಮಿತ ಪರಕ್ರಾಮ ಸುಜನ ರಕ್ಷಕ ಹರಿ 1 ಸಿಂಧುಶಯನ ಜಗದೀಶ ಆನಂದ ಪರಿಪೂರ್ಣ ವಿಲಾಸ ಮಂದರಧರ ಮುಕುಂದ ಅತಿಸುಂದರ ರೂಪ ಗೋವಿಂದ ಅನುದಿನ ಇಂದು ಇರುವಾ 2 ಆದಿ ಮಧ್ಯಾಂತ ರಹಿತ ಸಕಲ ವೇದಾಂತರ ಪ್ರಖ್ಯಾತ ಸಾಧು ಸಜ್ಜನರೊಡೆಯಾನೀತಾ ಅತಿ ಮೋದದಲಿರುವಂಥ ದಾತಾ ಮಾಧವ ವೈಕುಂಠ ಮನಿಯಾಗಿ ಇರುವಂಥಾ 3
--------------
ಹೆನ್ನೆರಂಗದಾಸರು
ಶರಣು ಶರಣು ಶರಣು ದೇವಾಧಿಗಳೊಂದಿತ ನಹುದು ಸ್ವಾಮಿ ಗಣನಾಥ ಶರಣು ಧ್ರುವ ಅಖಿಳ ಭವನದೊಳು ಪೂಜಿತ ಭಕುತ ಜನಕೆ ನೀ ಸಾಕ್ಷಾತ ಶಕುತನಹುದಯ್ಯ ಪ್ರಖ್ಯಾತ 1 ಶುದ್ಧ ಬುದ್ಧರ ಸಹಕಾರ ಬುದ್ಧಿನೀವ ಘನ ಉದಾರ ರಿದ್ಧಿ ಗ್ಯಾಗೀಹ್ಯ ನೀ ಆಧಾರ ಸಿದ್ಧಿದಾಯಕ ವಿಘ್ನಹರ 2 ಜನಕೆ ಮಾಡುವೆ ದೋಷನಾಶ ಅನುದಿನವೆ ಮತಿ ಪ್ರಕಾಶ ದೀನ ಮಹಿಪತಿಯ ಮನೋಭಾವಪೂರಿತಗಣಾಧೀಶ ಶರಣು ಶರಣು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶರೀರ ಜರಿಯಬೇಡಾ | ಬೆರಿಯಬೇಡಾ | ಸ್ಥಿರವಿದ್ದ ಕೈಯಲಿ ಗುರು ಶರಣವ ಹೊಕ್ಕು | ತಾರಿಸೋ ಭವದಿಂದ ನೀ ಮರಳು ಜೀವವೇ ಪ ಲೋಕದೊಳು ವಾರಿಜೋದ್ಭವ ನಿನ್ನ ಜನ್ಮ ಕೊಟ್ಟು | ನೂಕಲಾಗ ತಾಯಿ ಗರ್ಭದೊಳಾವರಿಸಿ ತಾನು ಧರಿಸಿ | ರೇಖೆ ರೂಪ ಲಾವಣ್ಯ ಅವಯವಂಗಳಿಂದ | ಸಾಕಾರವಾಗಿ ಸುಂದರೆನಿಸಿ ವರನೆನಿಸಿ | ಬೇಕಾದ ವಿದ್ಯವನು ಸರ್ವ ಸಂಪಾದಿಸಲು | ತಾ ಕಾರ್ಯವಾಗಿ ಅಭ್ಯಾಸದಿಂದಾ ಧ್ಯಾಸದಿಂದಾ | ವಾಕ್ಪಟುದಲಿ ಸಮರ್ಥನೆಂಬನಾಮ ಪಡೆದು | ಪ್ರಖ್ಯಾತವಾದೆ ಈ ಕಾಯದಿಂದ 1 ಸ್ನಾನವನು ಮಾಡಿ ತ್ರಿಕಾಲ ಸಂಧ್ಯಾನ ವಿಧಿಯನು | ಮೌನ ಜಪಗಳವನು ತಪಗಳನು | ಸ್ವಾನುಭಾವ ಸೂರ್ಯಾಡಲಾಗಿ ನೇಮವನುಷ್ಠಾನ ಮೊದಲಾದ | ಧ್ಯಾನ ಧಾರಣವನು ಕಾರವನು | ಜ್ಞಾನ ಭಕ್ತಿ ವೈರಾಗ್ಯ ಶಮದಮ ಕರುಣನು ದಿನಮಾಳ್ಪಾ | ಕರ್ಮ ನೈಮಿತ್ಯವಾದಾ ನಿತ್ಯವಾದಾ | ತಾನು ತನ್ನ ಉದ್ಧರಿಸಿಕೊಳಲಿಕ್ಕೆ ಭಾವದಿಂದಾ | ಮಾನುಭಾವg ದಯ ಪಡೆವುದರಿಂದಾ 2 ತಾನು ಕುಣಿಯಲಾರದೆ ಅಂಕಣವು ಡೊಂಕು ಎಂದು | ಹೀನೋಯಿಸಿ ನುಡಿವ ನಟ ವೇಷಿಯಂತೆ | ನೀನು ನೀಟ ನಡಿಯದ್ಹೋಗಿ ದೇಹ ಕಶ್ಮಲವೆಂದು | ಜ್ಞಾನ ರಹಿತನಾಗಿ ಹಳಿವುದು ಉಚಿತ ಇದು ಪ್ರಾಚೀತ | ಈ ನಾಲ್ಕೆರಡು ವೈರಿಗಳ ದಂಡಿಸದೇ ಬರಿದೇ | ಹೀನ ವೈರಾಗ್ಯವಾ ಶಣಸಬೇಡಾ ದಣಿಸಬೇಡಾ | ಕಾನನದ ಹುತ್ತಮ್ಯಾಲ ಬಡಿದರೇನು ವರಗಿರುವಾ | ಆ ನಾಗದರ್ಪಗುಂದದು ಕಂಡಾ 3 ಪರಿಪರಿ ಮುಮ್ಮುಳಿ ವಳಗಾಗಿ ಜೀವಿಸುವ | ತೆರನಂತೋಯಂದು ಚಿಂತಿಸಬಹುದು ಸುರಿಸಬಹುದು | ನೂರು ಭಂಡಿಗಳ ತÀುಂಬಿ ಬಂದರೇನು ತಾ | ಧರೆಯೊಳು ಸೂಲ ತಾ ಹಾವುದೊಂದೇ ನೋವುದೊಂದೇ | ಬರೆದ ಬರಹವೇ ಪಣಿಯಾಲಿದ್ದಪರಿ ತಪ್ಪದೈ | ವರ ಕೂಡಿ ಕೊಟ್ಟಡವಿ ಮಾಡುವದೇನು ನೋಡುದೇನು | ಪರಿ | ಪಡಿ ನೀನು 4 ಸಾಕ್ಷರಾವೆಂಬ ಮೂರಕ್ಷರವ ಬರೆದು ತಾ | ರಾಕ್ಷಸಾವೆಂಬುದೇ ಅರ್ಥವಹುದು ಅನರ್ಥ ವಹುದು | ಪರಿ ವಳಿತು ಹೊಲ್ಲೆ | ಪಕ್ಷದ್ವಯಕ ಬಾಹುದು ಮಾಡಿದಾಂಗ ಕೂಡಿದಾಂಗ | ರಕ್ಷಿಸೆಂದು ಮಹಿಪತಿಸುತ ಜೀವನಾದಿ ವಿಶ್ವಾ | ಭವ ಹಿಂಗು ಬ್ಯಾಗ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೇಷದೇವರು ಖಗರಾಜ ಮಹೋಜ ಸತ್ತ್ವಧಾಮ ಭಕ್ತಿಭಾವ ರವಿತೇಜ ಜಿತಕಾಮ ಪ. ನಿಗಮಾಗಮಯೋಗತತ್ತ್ವ ಪ್ರಾಜ್ಞ ಮಹಾಭಾಗ ನಾಗಾಂತಕ ಮನೋಜ್ಞ 1 ಸಾಮಗಾನಪ್ರವೀಣ ವೈನತೇಯ ಹರಿಧ್ಯಾನೈಕತಾನ ಶುಭಕಾಯ 2 ವರಲಕ್ಷ್ಮೀನಾರಾಯಣನ ವರೂಥ ಹರಿಪಕ್ಷ್ಯೆಕದೀಕ್ಷ ಪ್ರಖ್ಯಾತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶೇಷದೇವರು ಖಗರಾಜ ಮಹೋಜ ಸತ್ತ್ವಧಾಮ ಭಕ್ತಿಭಾವ ರವಿತೇಜ ಜಿತಕಾಮ ಪ. ನಿಗಮಾಗಮಯೋಗತತ್ತ್ವ ಪ್ರಾಜ್ಞ ಮಹಾಭಾಗ ನಾಗಾಂತಕ ಮನೋಜ್ಞ 1 ಸಾಮಗಾನಪ್ರವೀಣ ವೈನತೇಯ ಹರಿಧ್ಯಾನೈಕತಾನ ಶುಭಕಾಯ 2 ವರಲಕ್ಷ್ಮೀನಾರಾಯಣನ ವರೂಥ ಹರಿಪಕ್ಷ್ಯೆಕದೀಕ್ಷ ಪ್ರಖ್ಯಾತ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಗುರು ರಾಜರ ಸೇವಿಸಿರೋ---- ದಂಡ ಕಮಂಡಲ ಪಿಡಿದಿ ನಿಂದಿಹ ಹಸ್ತ ಭೂ ಮಂಡಲವೆಲ್ಲಾ ತಿರುಗಿ ಬಂದಿಹ ಹಸ್ತ ಬಿಡದೆ ಭಕುತರಾ ಸಲಹುವ ಹಸ್ತ ಪತಿ ಶ್ರೀ ರಘು ರಾಮರ ಸೇವಿಪ ಹಸ್ತಾ ಮತ್ತೆ ಭೂಸುರರಿಗೆಲ್ಲಾ ಅಭಯವೀಯುವ ಹಸ್ತ ಮುಕ್ತಿಮಾರ್ಗಕೆ ದಾರಿ ತೋರುತಿಹ ಹಸ್ತ ಚಿತ್ತಜನಯ್ಯನ ನೆನೆದು ಮನದಲ್ಲಿ ನಲಿಯುವ ಹಸ್ತಾ ಭೂತ ಪ್ರೇತಗಳನೆಲ್ಲ ಓಡಿಸುತಿಹ ಹಸ್ತ ಸಕಲವ್ಯಾಧಿಗಳ ಹರಿಸಿರಕ್ಷಿಪ ಹಸ್ತ ಸುವ ಜನರ ಉದ್ಧಾರ ಗೈಯುವ ಹಸ್ತ ಸರುವದಾ ಶಿರಿಪತಿಯ ಕೊಂಡಾಡುವ ಹಸ್ತಾ ಕನಸಿಲಿ ಬಂದು ಕಣ್ಣಪೊರೆ ತೆಗೆದಿಹ ಹಸ್ತ ಮುದದಲಿ ಮಗಿವಿಗೆ ಮಾತ ಕಲಿಸಿದ ಹಸ್ತ ಜೀವ ಕಳೆ ತುಂಬಿದ ಹಸ್ತ ಪರಮ ಪಾವನವಾದ ಶ್ರೀಗುರುರಾಜರ ಹಸ್ತಾ ಜಗವೆಲ್ಲ ನೋಡೆ ಪ್ರಖ್ಯಾತಿ ಪಡೆದಿಹ ಹಸ್ತ ನಗುತ ಮಂತ್ರಾಲಯದೊಳು ಬಂದು ನಿಂದಿಹ ಹಸ್ತ ಅಗಣಿತಮಹಿಮೆ ತೋರಿ ಮೆರೆಯುತಿಹಾ ಹಸ್ತ ಸರಿಗಾಣೆ ಧರೆಯೊಳು ಶ್ರೀರಾಘವೇಂದ್ರರ ದಿವ್ಯ ಹಸ್ತಾ.
--------------
ರಾಧಾಬಾಯಿ
ಶ್ರೀ ಜಗನ್ನಾಥದಾಸರ ಸ್ತೋತ್ರ ರಾಯರ ನೋಡಿರೈ ದಾಸರಾಯರ ಪಾಡಿರೈ |ಮಾಯ ರಮಣಪ್ರಿಯಾ |ಇವರ ಮನದೊಳಗೆ ಸುಳಿದಾ | ಶ್ರೀರಂಗವಲಿದ ಪ ಮೋದ |ಕಾಣಿಸುವದು ಜಗದೊಳಗೆ, ಇವರಿಗೆ ಕೀರುತಿಯ |ಪುಣ್ಯ ಮೂರುತಿಯು |ಧೇನಿಸಿ ಎರಡನೆ ಜನ್ಮದಿ, ಈತನೆ ಶಲ್ಯಾ |ತತ್ವವ ಬಲ್ಲಾ 1 ಮೂರನೆ ಜನ್ಮದಿ ಕೊಂಡಪ್ಪ, ರಾಜನದೂತ | ಸುಪ್ರಖ್ಯಾತಾ |ಸಾರ ಜನರ ಪ್ರಿಯ ಶ್ರಿ ಪುರಂದರದಾಸಾರ್ಯ |ಸುತ ಆಶ್ಚರ್ಯ |ತೋರುವ ಐದನೆ ಜನ್ಮದಿ ಶ್ರೀಹರಿದೂತ |ಗುರು, ಜಗನ್ನಾಥ 2 ನರಹರಿಯ ತುತಿಪ ವಂದಂಶದಿ ಸಾಂಶರೆಂದುಖಂಬದಿ ನಿಂದು |ಮೆರೆವರು ಊಧ್ರ್ವಪುಂಢವು ತುಲಸಿಯಮಾಲಾ |ಅಕ್ಷ ಸುಶೀಲಾ |ಪರಿಪರಿ ಸೇವಿಪ ಜನರಿಗಭೀಷ್ಟವ ಗೆರೆವಾ |ದುರಿತವ ತರಿವಾ 3 ದೇಶದೇಶವ ಜನರುಗಳೆಲ್ಲರು ಬಂದು |ನೋಡಲು ನಿಂದು |ಸೋಸಿಲಿ ದರುಶನಕೊಳಲವರಿಗೆ ಆನಂದ |ವಾಹುದು ಛಂದ |ಮೀಸಲಹುದು ಮನ, ಕೈಸೇರುವ ಶ್ರೀಪತಿಯೂ |ಹರ ಅಘತತಿಯು 4 ಎಷ್ಟು ಪೇಳಲಿ ಇವರ ಮಹಿಮೆ ತುತಿಸಲ್ಕೆ |ವಶವಲ್ಲ ಮನಕೆ |ನಿಷ್ಠಿಯಿಂದಿವರನು ತುತಿಸಲು ಶ್ರೀವರತುಷ್ಟಾ |ಪಾಪವು ನಷ್ಟಾ |ಸೃಷ್ಟಿಯೊಳಗೆ ಶ್ರೀಶ ಪ್ರಾಣೇಶವಿಠಲನ ದಾಸ |ದಾಸೋತ್ತಂಸ 5
--------------
ಶ್ರೀಶಪ್ರಾಣೇಶವಿಠಲರು