ಒಟ್ಟು 820 ಕಡೆಗಳಲ್ಲಿ , 84 ದಾಸರು , 645 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಒಪ್ಪಿಸಿದೆ ಒರೆದು ದೂರ ಮುಂದೆನ್ನ ತಪ್ಪನೆಣಿಸದಿರು ಧೀರ ಅಪ್ಪಳಿಸು ಕಡು ಮೂರ್ಖರ ನಿನಗೆಂದು ತಪ್ಪುವುದೆ ಭಕ್ತಭಾರ ಪ. ದುರ್ಗಾಧಿಪತಿ ಲಾಲಿಸು ಮನಸಿಜನ ಮಾರ್ಗಣಕೆ ಸಿಲುಕಿ ಮನಸು ನಿರ್ಗಮಿಸದೊಳಸರಿದು ಮುಳುಗಿ ಸ- ನ್ಮಾರ್ಗಗಾಣದೆ ಕುಂದಿತು 1 ಪಂಚಾಂಗ ಪಲುಗುತಿರಲು ಮನೆಯ ಮ್ಯಾ- ಲ್ಹಂಚುಗಳಸ್ಥಿರವಾಗಲು ಚಂಚಲದಿ ಮನ ಕೆದರಲೂ ತದಧೀನ ಪಂಚಕರಣವು ಕೆಡುವವು 2 ಹೀಗಾದ ಬಳಿಕ ನಿನ್ನ ಸೇವೆ ಚೆ- ನ್ನಾಗುವದ ಕಾಣೆ ಮುನ್ನ ಶ್ರೀ ಗುರುವೆ ತ್ವರೆಯೊಳೆನನ ಮನವ ಪದ ರಾಗಿಯಾಗಿಸು ರನ್ನ 3 ಮೂರು ಋಣಬಾಧೆಯನು ಸಹಿಸುವದ- ಕಾರಿಂದ ಶಕ್ಯವಿನ್ನು ತೋರು ತ್ವಕ್ಕರುಣವನ್ನು ದಾಸನ್ನ ದೂರ ಬಿಡಲ್ಯಾತಕಿನ್ನು 4 ಸಂದಣಿಸಿಕೊಂಡು ಬರುವ ಸರ್ವ ಪ್ರತಿ ಬಂಧಕಗಳೆಲ್ಲ ತರಿವ ಕರವ ಶಿರದಿ ಭುಜ- ಗೇಂದ್ರ ಗಿರಿನಾಥ ದೇವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಒಯ್ಯೆ ಬಾಹ ಉಳಿಯೆ ಹೋಹ ನಲ್ಲನ ತಾಹ ಉಯ್ಯಾಲೆ ಉತ್ಸಾಹ ನಮ್ಮಪ್ಪನಿವ ತಾಯಿ ತಮ್ಮ ಪ. ಚಿನ್ನದ ಸರಪಣಿಯ ಚೆಲುವ ಪೊನ್ನಮಣಿಯ ರÀನ್ನದ ನೇಣ ತುದಿಯ ರಮಣಿಯರೆಲ್ಲರರ್ಥಿಯ1 ಈ ಮೈಯಲ್ಲಿ ಮಲಗಿಪ್ಪ ಈ ಮಹಾಲಕ್ಷ್ಮಿಯ ನೋಳ್ಪ ಸನ್ಮೋದನೆನಿಪ ಶೇಷಶಯನನ ವಟತಲ್ಪ 2 ಇಂದಿರೆ ಇಷ್ಟವನೀವ ಇಂದಿರೆಗಿವನು ಧವ ಎಂದೆಂದು ಭಕ್ತರ ಕಾವ ಎಸೆÉವ ಮಂಚದ ದೇವ 3 ಬಾರಯ್ಯ ಭಕ್ತರಬಂಧು ಬಾರಯ್ಯ ಕರುಣಾಸಿಂಧು ಇಂದು ಬಾರಯ್ಯ ಮುಕುಂದನೆಂದು 4 ಕುಂಜರ ಕೂಗಲು ಬಂದೆ ಕೂಡೆ ಮಕರಿಯ ಕೊಂದೆ ಕಂಜಾಕ್ಷ ಕಾಮನ ತಂದೆ ಕಾಯೆಂದು ಪಾಡಲು ಬಂದೆ 5 ಕಾಕರ ಗಂಟಲಗಾಣ ಕಾಮಿಸದೆನ್ನಯ ಮನ ಏಕೋದೇವನೆಂಬ ಜಾಣ ಏರಿದ ಮಣಿಯ ನೇಣ 6 ಅಖಿಳ ಸುರರ ತಾತ ರುಕುಮಿಣಿ ಪ್ರಾಣನಾಥ ರೂಢಿಗತಿಯ ಪ್ರತಿ ಈತ 7 ಮಾಯದ ದೈತ್ಯರ ಕೊಂದು ಮಲಗಬೇಕೆಂದು ಬಂದು ಹಯಗ್ರೀವರಾಯ ನಿಂದು ಹರುಷವ ತಾಳ್ದನೆಂದು 8 ಮುಂದೆ ದೇವಾಂಗನೆಯರು ಮುಖಸುತ್ತ ಮುಕ್ತಿಸುರ ವೃಂದದ ಮಧ್ಯದೊಳರವಿಂದಾಕ್ಷಿ ಪೊಳವುತ್ತಿರೆ 9 ಒಪ್ಪುವ ತಾಳಗಳೊಪ್ಪೆ ಒರಗಿಪ್ಪ ದೇವನುತ 10 ಮಾನ್ಯ ಶ್ರೀ ಹಯವದನ್ನ ಮನದ ಮಧುಸೂದನ್ನ ಎನುತ ತೂಗುವ ಜನ ಎಂದೆಂದು ಭಕ್ತಮೋದನ11
--------------
ವಾದಿರಾಜ
ಓ ಎನ್ನಬಾರದೆ ಓಂಕಾರ ಪ್ರತಿಪಾದ್ಯ ಪ ಕರಿರಾಜ ಕರೆಯಲು ತ್ವರಿತದಿಂದಲಿ ಬಂದು ಪೊರೆಯಲು ನಿನಗವ ಮರಿಮಗನೇನೋ 1 ಅಂದು ಅಜಾಮಿಳ ಕಂದನ ಕರೆಯಲು ಬಂದು ಸಲಹಿದೆ ಬಂಧು ನೀನವಗೇನೋ 2 ಕರುಣಾಸಾಗರ ದೊರೆ ಶ್ರೀದವಿಠ್ಠಲ ಕರವ ಮುಗಿದು ಕೂಗೆ ಬರದಿರೆ ಘನವೇನೋ 3
--------------
ಶ್ರೀದವಿಠಲರು
ಓಂ ನಮೋ ನಾರಾಯಣಾಯ ತೇ ನಮೋ ನಮೋ ನಮೋ ಪ ಓಂ ನಮೋ ಓಂಕಾರಾದಿ ನೀ ಘನ್ನ ಮಹಿಮ ಅಷ್ಟಾಕ್ಷರಾತ್ಮಕನೆ ಅ.ಪ ಪ್ರಣವ ಪ್ರತಿಪಾದ್ಯ ನೀ ಅಷ್ಟಾಕ್ಷರದೊಳು ವಿಶ್ವತÉೈಜಸ ಪ್ರಾಜ್ಞ ತುರ್ಯಾತ್ಮ ಅಂತರಾತ್ಮ ಪರಮಾತ್ಮ ಜ್ಞಾನಾತ್ಮ ವರ್ಣಾತ್ಮಕ ನೀ ಓಂಕಾರದೊಳು ಅಉ ಮನಾದಬಿಂದು ಘೋಷ ಶಾಂತ ಅತಿಶಾಂತದೊಳು ಪ್ರತಿಪಾದ್ಯಮೂರುತಿ ಹರೆ1 ಪ್ರಣವದೊಳು ಆದಿವರ್ಣದಿಂದಭಿವ್ಮಕ್ತಿ ಕಾಲಗಳ್‍ವ್ಯಕ್ತವೊ ಪ್ರಾಣ ಲಕುಮಿಯಭಿಮಾನಿಗಳನಂತ ವೇದಗಳಿಂ ವಿಶ್ವಮೂರುತೀ ಹರೆ2 ವಯ್ಯ ಕವರ್ಗ ವರ್ಗವೈದು ಪಂಚಭೂತಗಳಂ ವರ್ಣದೊಳಭಿಮಾನಿಗಳ್ ಭೂತಕ ಗಣಪ ಪ್ರಹವವಾಯು ತೈಜಸ ಮೂರುತೇ3 ಪ್ರತಿಪಾದ್ಯನೆ ಮಕಾರ ವಾಚ್ಯ ಶ್ರೀ ಪ್ರಾಜ್ಞ ನಿನ್ನಿಂದಭಿ- ವ್ಯಕ್ತಿ ಚವರ್ಗ ಪಂಚಕ ಜ್ಞಾನೇಂದ್ರಿಯ ವೈದು ಸೂರ್ಯ ಪ್ರಾಣ ದಿಗ್ದೇ- ವತೆಗಳಿಹರು ಪ್ರತಿಗಾಣಿನೊ ಶ್ರೀ ಪ್ರಾಜ್ಞಮೂರುತಿ ಹರೆ4 ನಾದವಾಚ್ಯಪ್ರತಿಪಾದ್ಯ ತುರ್ಯನೆ ಅಭಿವ್ಯಕ್ತ ಪಂಚವರ್ಣ ಟವರ್ಗ ಕರ್ಮೇಂದ್ರಿಯಗಳ್ ಶ್ರೀ ತುರ್ಯ ಮೂರುತೆ 5 ಬಿಂದುವಾಚ್ಯ ಪ್ರತಿಪಾದ್ಯ ನೀನಾತ್ಮ ಬಿಂದುವಿಂದ ತವರ್ಗ ಪೊಂದಿಕೊಂಡಿಹುದು ತನ್ಮಾತ್ರಪಂಚಕ ಪಂಚವಾಯುಗಳಿಹರಯ್ಯ ಬಂಧ ಮೋಚಕ ನೀ ಕಾರಣ ಹರೆ 6 ಘೋಷದಿಂದಲಭಿವ್ಯಕ್ತಿ ಪಂಚಮನೋ ವೃತ್ತಿಗಳದರಭಿಮಾನಿ ಓಷಧೀಧರ ಖಗಪ ಶೇಷೇಂದ್ರ ಕಾಮರು ಪಕಾರ ಪಂಚವರ್ಣ ದೋಷರಹಿತ ಮನೋಧಾಮದಿ ನೀ ದೊರೆ 7 ಕಾರಾದಿ ಸಪ್ತವರ್ಣ ಸಪ್ತಧಾತುಗಳಲ್ಲಿ ಪರಿ ಅರಿಯೆನೊ ಹರಿಯೆ 8 ಅತಿ ಶಾಂತದೊಳು ಪ್ರತಿಪಾದ್ಯನಾಗಿಹೆ ಜ್ಞಾನಾತ್ಮ ಹಕಾರಾದಿ ತ್ರೈವರ್ಣ ಅದರಿಂದ ಗುಣಕ್ರಿಯವೊ ತತುಕ್ರಿಯ ಜಾಗೃತ ಸ್ವಪ್ನ ಸುಷುಪ್ತಿ ವಿಶ್ವಾದಿರೂಪದಿಂದ ಉರಗಾದ್ರಿವಾಸವಿಠಲ ಮೂರುತೇ 9
--------------
ಉರಗಾದ್ರಿವಾಸವಿಠಲದಾಸರು
ಓಂಕಾರ ಪ್ರತಿಪಾದ್ಯ ಶಂಖಚಕ್ರಾಭಯಕರ ಬಿಂಕದಿಂದ ಬಾಕು ಟೊಂಕದಿ ಕಟ್ಟಿ ಮೆರೆವ ದೇವ 1 ಇಷ್ಟು ಜನರ ರೋಗ ತೊಟ್ಟಿ ತೀರ್ಥದಿಂದ ಕಳೆವ ಕಷ್ಟದ ಕಂಕಣ ಕಟ್ಟಿ ಮೆರೆವ ದೇವಾ 2 ದೇಶದೇಶದಿ ಬರುವ ದಾಸ ಜನರ ಅರ್ಥಿ ಕಾಸುವೀಸಕೆ ಕೊಟ್ಟು ಲೇಸಾಗಿರುವಿಯಿಲ್ಲಿ 3 ನಾಮ ತೀರ್ಥ ಪ್ರಸಾದ ಕಾಮಿಸೆ ವಿಕ್ರಯಿಸುವ ನೇಮಗಳನೆ ಕೊಟ್ಟು ತ್ರಿಧಾಮ ನಿಲಯನೆ 4 ಮಂಗಳ ಮಹಿಮನೆ ಗಂಗಾಜನಕನೆ ಅಂಗಜನಯ್ಯನೆ ವೆಂಕಟರಮಣನೆ 5 ತಾಳ ತಂಬೂರಿ ದಮ್ಮಡಿ ಮೇಳದೊಳು ದಾಸರು ವೇಳೆ ವೇಳೆಗೆ ಸೇವಿಸೆ ಕಾಳ ದೋಷವ ಕಳೆವ 6 ರಮಾ ಸೇವಿತÀ ವಿಜಯ ರಾಮಚಂದ್ರವಿಠಲ ನಿತ್ಯ ನಿನ್ನ ನಾಮಗಳನೆ ನುಡಿಸೊ 7
--------------
ವಿಜಯ ರಾಮಚಂದ್ರವಿಠಲ
ಕಂಡು ನಮಿಸಿದೆ ಸತ್ಯಬೋಧ ಮುನಿಯ ಮಂಡೆ ಬಾಗುತ ದೇಹ ದಂಡವಿಕ್ಕುತಲಿ ಪ. ಭವ್ಯ ಬೃಂದಾವನದಿ ವೈಭವದಿ ಮೆರೆವವರ ಸವ್ಯಸಾಚಿಯ ಸಖನ ಪ್ರಿಯ ಪಾತ್ರರ ದಿವ್ಯ ಕೂರ್ಮಾಸನದಿ ಕುಳಿತು ತಪಚರಿಸುವರ ಅವ್ಯಯಾತ್ಮನ ಚರಣ ಧ್ಯಾನ ಮಾಳ್ಪವರ 1 ವಿಷವಿಡಲು ಪಾಪಿಗಳು ರಾಮಗರ್ಪಿಸಿ ಭುಜಿಸೆ ನಿಶಿಯಲ್ಲಿ ನಿದ್ರೆ ಜೈಸುತ ನಿತ್ಯದಲಿ ಹಸನಾಗಿ ದೇವತಾರ್ಚನೆ ಭೋಜನವಗೈಯೆ ದೂಷಿಸಿದ ಕುಜನರಿಗೆ ರಾತ್ರೆ ಸೂರ್ಯನ ತೋರ್ದ 2 ಕಾಶಿಗ್ಹೋಗುವೆನೆಂಬ ಆಸೆ ಪೂರೈಸುವೊಡೆ ತಾ ಸ್ವಪ್ನದಲಿ ಬಂದು ಜಾಹ್ನವಿಯು ಪೇಳೆ ರಸರಹಿತವಾದ ವೃಕ್ಷದಿ ಗಂಗೆಯನೆ ತರಿಸಿ ತಾ ಸ್ನಾನಗೈದು ಭಾಗೀರಥಿಯ ಪೂಜಿಸಿದ3 ಪೇಳಲಳವಲ್ಲದಿಹ ಬಹಳ ಕೌತುಕ ಮಹಿಮೆ ಕಾಲಕಾಲಕೆ ತೋರಿ ಭಕ್ತರನು ಕಾಯ್ದು ಮೇಲಾದ ಮಧ್ವ ಶಾಸ್ತ್ರಾರ್ಣವದಿ ಈಜುತಲಿ ಲೀಲೆಯಿಂದಲಿ ಮಾಯ್ಗಳನೆ ಗೆದ್ದ ಮಹಿಮ 4 ಪ್ರತಿವರ್ಷ ಪಾಲ್ಗುಣದಿ ದ್ವಿತೀಯ ಪಕ್ಷದಿ ದ್ವಿತೀಯ ತಿಥಿಯಲ್ಲಿ ದಿವ್ಯ ಉತ್ಸವ ಕೊಳುತ ಸತತ ಈ ಸವಣೂರು ಕ್ಷೇತ್ರದಲಿ ನೆಲಸುತಲಿ ಚ್ಯುತರಹಿತ ಗೋಪಾಲಕೃಷ್ಣವಿಠ್ಠಲನ ಭಜಿಪೆ5
--------------
ಅಂಬಾಬಾಯಿ
ಕಂಡೆ ಕಂಡೆ ಕಂಡೆವಯ್ಯ ಪಿಂಡ ಬ್ರಹ್ಮಾಂಡದೊಳು ಹಿಂಡ ದೈವದೊಡೆಯ ಪ್ರಚಂಡನ ಕಂಡೆ ಧ್ರುವ ದೀನನಾಥನ ಕಂಡೆ ದೀನೋದ್ಧಾರನ ಕಂಡೆ ಅನಾಥಜನರ ಪ್ರತಿಪಾಲನ ಕಂಡೆ 1 ಶರಣ ರಕ್ಷಕನ ಕಂಡೆ ವಾರಿಜಾಕ್ಷನ ಕಂಡೆ ವರಮುನಿ ಜನರಾ ಪ್ರತ್ಯಕ್ಷನ ಕಂಡೆ 2 ಭಕ್ತ ಪ್ರಿಯನ ಕಂಡೆ ಮುಕ್ತಿಯೀವನ ಕಂಡೆ ಪತಿತ ಪಾವನ ಗುರು ಸಂಜೀವನ ಕಂಡೆ 3 ದೇವದೇವನ ಕಂಡೆ ಕಾವ ಕರುಣನ ಕಂಡೆ ಮಹಿಪತಿ ತಾರಕ ಗುರು ಭವನಾಶನ ಕಂಡೆ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆಯಾ - ಮನವೇ - ನೀನಿಂದು - ಕಂಡೆಯಾ ಪ ಕಂಡೆಯ ಮನವೆ ನೀನಿಂದು - ತನ್ನತೊಂಡರ ಸಲಹುವ ಬಂಧು - ಆಹಮಂಡೆಯ ಬೋಳಿಸಿ | ಪುಂಡರೀಕಾಕ್ಷನೆಹಿಂಡು ದೈವಂಗಳ | ಗಂಡನೆಂದೇಳ್ವರ ಅ.ಪ. ಪಾದ ಸೊಬಗು - ವೇಗತೆರಳುತ್ತಿದ್ದರದು ಮೆಲ್ಲಗು - ನಖವರರತ್ನ ಕೆಂಪಿನ ಬೆಡಗು - ಊರುಕರಿಯ ಸೊಂಡಿಲಿನಂತೆ ಬೆಳಗು _ ಆಹ ಪರಿಶುದ್ದ ಕಟಿಯಲ್ಲಿ | ಸುರಚಿರಾಂಬರನುಟ್ಟುವರಕಂಠ ಫಣೆಯುದರ | ತ್ರಿವಳಿಯಂ ಮೆರೆವರ 1 ಮೃದುರೋಮ ಶಾಲು ಪ್ರಾವರಣ - ನೋಡಲದು ಭಾಸ ಉದಯಾರ್ಕ ವರಣ - ಪೋಲ್ವದದು ಮೇರು ಗಿರಿಯಂತೆ - ವರ್ಣ ನೋಡುಎದೆಯ ವಿಸ್ತರಾ ಭರಣ - ಆಹಸದಮಲುನ್ನತಾಂಸ | ಉರುಟು ನೀಳದ ತೋಳುಪದುಮ ರಾಗದ ಭಾಸ | ಧ್ವಜರೇಖೆ ಹಸ್ತವ 2 ಮೋದ ಪೋಲ್ವ - ಮತ್ತೆಮಂದ ದೂರನು ಅತಿ ಚೆಲ್ವಾ - ಆಹಕುಂದಾಭ ರದನವು | ಸುಂದರಾರುಣ ಓಷ್ಠಮಂದಜೇಕ್ಷಣ ನೋಟ | ದಿಂದ ಬೀರುವ ಮುದ 3 ಕಿವಿಗಳಲೊಪ್ಪುವ ತುಳಸೀ - ಮೂರುಭುವನ ಭೂತಿ ಭ್ರೂವಿಲಾಸಿ - ಮತ್ತೆಅವನೆ ಅಭೂತಿದನೆನಿಸೀ - ಚೆಲ್ವದವಡೆಯಿಂದೊಪ್ಪುವ ಶಿರಸಿ - ಆಹಅವಯವ ಲಕ್ಷಣ | ಪ್ರತಿ ಪ್ರತಿ ಜನ್ಮದಿವಿವರವೀತೆರವೆಂದು | ವಿಭುದರು ತಿಳಿದರು 4 ಈ ವಿಶ್ವವೆಲ್ಲವೂ ಸತ್ಯ - ಮತ್ತೆಸಾರ್ವ ಭೇದವು ತಾರತಮ್ಯ - ವಿಧಿಪೂರ್ವಕಲ್ವೊರೆಯುತ್ತ ದಿವ್ಯ - ತತ್ವಸಾರ್ವವ ಪೇಳುತ್ತ ಭವ್ಯ - ಆಹಕಾವ ಕೊಲ್ಲುವ ಗುರು ಗೋವಿಂದ ವಿಠಲನೆಸರ್ವೋತ್ತುಮಾನೆಂದು | ಈ ವಿಧ ಮೆರೆವರ 5
--------------
ಗುರುಗೋವಿಂದವಿಠಲರು
ಕತ್ತೆಯು ನೀನಲ್ಲ ಕರುಣಾಕರನಹೆ ಕತ್ತೆಯಾಗಬೇಡ ಕತ್ತೆಸತ್ಯ ಚಿದಾನಂದ ನೀನರೆ ಮರೆತರೆ ಕತ್ತೆನೀನಾಗುವೆ ಕತ್ತೆ ಪ ಬೊಂಬೆಗೆ ಪ್ರಾಣವನಿಟ್ಟು ದೇವರು ಎಂಬೆ ದೇವರು ಅವು ಕತ್ತೆಬೊಂಬೆಗೆ ಪ್ರಾಣ ಪ್ರತಿಷ್ಠೆಯ ಮಾಡಲು ನೀನಾರು ಹೇಳಲೋ ಕತ್ತೆಬೊಂಬೆ ಸತ್ತವಲ್ಲೊ ಪ್ರಾಣ ತೆಗೆದುಕೊಳ್ಳೆ ನೀರ ಮುಳುಗು ನೀನು ಕತ್ತೆಬೊಂಬೆ ಚೇತನ ಸಾಕ್ಷಾತ್ಕಾರವೆ ಇರೆ ದೇವ ನೀನೆಂತಲ್ಲ ಕತ್ತೆ 1 ಹಿಂದಣ ಪುರಾಣ ಹೇಳುವೆ ನೀನೀಗ ನಿನ್ನ ಪುರಾಣವೆಲ್ಲೊ ಕತ್ತೆಬಂದವನಾರೋ ಹೋಗುವನಾರೋ ಎಂಬುದು ತಿಳಿಯಲಿಲ್ಲ ಕತ್ತೆಬಂದೆಯೋ ಅವಿದ್ಯೆ ದೆಸೆಯಿಂದ ರೂಪಿಗೆ ಜೀವ ನೀನೆನಿಸಿ ಕತ್ತೆಎಂದು ಎಂದಿಗೂ ನೀ ಬ್ರಹ್ಮವೆ ಸತ್ಯವು ಯೋಚನೆ ಬಿಡು ನೀ ಕತ್ತೆ 2 ನಮಕ ಚಮಕ ಅಭಿಷೇಕ ಮಾಡುವಿ ಏನಂತ ಮಾಡುವಿ ಕತ್ತೆಸಮನಿಸಲಿಲ್ಲ ವೇದಾಂತದರ್ಥವು ನಿನಗೆ ಸುಡು ನಿನ್ನ ತಿಳಿವಿಗೆ ಕತ್ತೆಕಮಲಮುಖಿಯ ಸುತರನು ನೀನು ನಂಬುವೆ ಪ್ರಪಂಚ ಸತ್ಯವೇನೋ ಕತ್ತೆಭ್ರಮಣಕ್ಕೆ ಸಿಲುಕಿ ನಾನಾ ಭಂಗಪಡುವೆ ಭಾವಿಸಿ ತಿಳಿನೀ ಕತ್ತೆ 3 ಕನಸಿನನುಭವದಂತೆ ಪ್ರಾರಬ್ಧ ತೋರುವುದು ದೇಹದಾರಿಗಳಿಗೆ ಕತ್ತೆಚಿನುಮಯಾತ್ಮಕನಲ್ಲಿ ಪ್ರಾರಬ್ಧ ತೋರಿಯೆ ತನಗೆ ತಾನಡಗುವುದು ಕತ್ತೆನಿನಗದು ಏನಿಲ್ಲ ಮನಸಿನ ಭ್ರಾಂತಿಯೆನಲನುಭವಿಸುವೆ ಕತ್ತೆ 4 ಪಾದ ತಿಳಿ ತತ್ತ್ವಮಸಿಯನ ಕತ್ತೆಬಂಧಿಸಿ ಆಧಾರ ಚಕ್ರವನೇರು ಏರಿ ನಿಂತು ಭ್ರೂಮಧ್ಯದಿ ಕತ್ತೆಮುಂದೆ ಹರಿಯ ನೋಡು ಸಹಸ್ರಾರದ ಪೀಠ ಛಂದದಿ ಅಡರ್ಮೇಲೆ ಕತ್ತೆಸುಂದರ ಚಿದಾನಂದ ನಾಗಿಯ ಥಳಥಳ ಬೆಳಕಲ್ಲಿ ಬೆಳಕಾಗೊ ಕತ್ತೆ5
--------------
ಚಿದಾನಂದ ಅವಧೂತರು
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಕದವನಿಕ್ಕಿದ ಕಾರಣೇನೆ ಮುದದಿ ಕೇಳೆ ಮೋಹನಾಂಗಿ ಸದನಕ್ಕಾಗಿ ಬಂದೆ ನಾನು ಸರಸವ್ಯಾತಕೆ ಸುಂದರಾಗಿ ಪ ಇಂದು ನಾನು ಬಂದೆ ದ್ರೌಪದಿ ಬಂದು ಬಾಗಿಲನ್ಹಾಕುವೋದು ಚೆಂದವೇನೆ ಚಂದ್ರಮುಖಿಯೆ ಬಂದು ಬಾಗಿಲು ತೆಗೆಯೆ ನೀನು 1 ಅಂಧಕಾರ ರಾತ್ರಿಯಲಿ ಬಂದವರ್ಯಾರೆಂದು ಅರಿಯೆ ನಿಂದು ಗುರುತೇನೆಂದು ಪೇಳಲು ಬಂದು ಬಾಗಿಲು ತೆಗೆವೆ ನಾನು 2 ಕಂಡರಿಯೆ ಎನ್ನ ಪರಾಕ್ರಮ ಖಾಂಡವವನವ ದಹಿಸಿದೆನೆ ಗಾಂಡೀವಾರ್ಜುನರಾಯ ನಾನು 3 ಗಾಂಡೀವಾರ್ಜುನರಾಯನಾದರೆ ದುಂಡು ಬಳೆ ಕಂಕಣಗಳಿಟ್ಟು ಗೊಂಡ್ಯ ರಾಗಟೆ ಹೆರಳಲ್ಹಾಕಿ ನೀ ಷÀಂಡರೂಪವ ಧರಿಸ್ಹೋಗೊ 4 ಕ್ಷೀರಸಾಗರದಲ್ಲೆ ತಾ ಮಂ- ದರ ಪೊತ್ತಮೃತವನೆ ತಂದ ಧೀರ ಕೂರ್ಮಗೆ ಮೈದುನಾದಂಥ ಶೂರ ಫಲ್ಗುಣರಾಯ ನಾನೆ 5 ಫಲ್ಗುಣರಾಯನಾದರೇನೊ ಸದ್ಗುಣ ಸಂಪನ್ನ ಬಿರುದು ಭದ್ರದೇವಿಯ ಕದ್ದು ತರುವಾಗ ಬುದ್ಧಿ ದಾರಲ್ಲಿಟ್ಟೆದ್ದಿರ್ಹೇಳೊ 6 ಪರಮೇಶ್ವರನ ಒಲಿಸಿಕೊಂಡು ಪಾಶುಪತಾಸ್ತ್ರ ಪಡೆದೆ ನಾನು ಪರಮ ಆಪ್ತ ವರಾಹನ ಕರುಣಕ್ಕೆ ಪಾತ್ರನಾದಂಥ ಪಾರ್ಥರಾಯನೆ 7 ಪಾಶುಪತಾಸ್ತ್ರ ಪಡೆದರೇನು ದೇಶ- ದೇಶ್ಯಾತ್ರೆತೀರ್ಥ ಚರಿಸಿ ಆಸೆ ಬಿಡದೆ ಸನ್ಯಾಸಿಯಾದಂಥ ಮೋಸಗಾರನೆ ಮನೆಗೆ ಪೋಗು 8 ಕೋಟಿ ದೈತ್ಯರ ಕೊಂದೆ ಎನ್ನಸರಿ- ಸಾಟಿಯಾರೀ ಲೋಕದೊಳಗೆ ಆ- ರ್ಭಟದವತಾರ ನಾರಸಿಂಹನೆ ನೀಟಾದಭಕ್ತ ಕಿರೀಟಿಯಲ್ಲವೆ 9 ಕೋಟಿ ದೈತ್ಯರ ಕೊಂದು ಜೂಜಿ- ನಾಟ ಸೋತ್ವನ ತೋಟ ತಿರುಗಿ ಪಾಟುಬಟ್ಟು ವಿರಾಟನಲ್ಲೆ ನಾ(ನ?)ಟರಾಟಕೆ ನಿಂತಿರ್ಯಾಕೊ 10 ಮಾತಿಗೆ ಮಾತಾಡೋರೇನೆ ಅ- ಭೂತಳವ ಬೇಡಿದ್ವಾಮನಗೆ ದೂತ ನಾ ಶ್ವೇತೂವಾಹನನೆ 11 ಶ್ವೇತೂವಾಹನ ನಿಮ್ಮ ಸತಿಗೆ ನಾಥರಿದ್ದೂ ಅನಾಥಳಂತೆ ಅ- ಜ್ಞಾತದಲ್ಲಿ ಸುದೇಷ್ಣೆ ಸೇವೆಗೆ ದೂತಿಯಾದ ಪ್ರಖ್ಯಾತಿ ದಾರದೊ 12 ಹೆತ್ತತಾಯಿ ಶಿರವನಳಿದ ಕ್ಷತ್ರೇ- ರಂತಕ ಭಾರ್ಗವಗೆ ನಿತ್ಯದಲಿ ನಿಜಸೇವಕ ಭೀ- ಭತ್ಸುರಾಯ ನಾನಲ್ಲವೇನೆ 13 ಧೀರ ಭೀಭತ್ಸುರಾಯ ನಿನ್ನ ನಾರಿಯ ಸಭೆಗೆಳೆದು ತಂದು ಸೀರೆ ಸೆಳೆವಾಗ ಶೂರರಾದರೆ ದಾರದಾರಂತೆ ನೋಡಿರ್ಯಾಕೊ 14 ಕಾಮ ಮೋಹಗಳಿಂದ ನಿನ್ನಲ್ಲೆ ಪ್ರೇಮದಿ ನಾ ಬಂದೆನೀಗ ರಾಮರಾಜÉ್ಞಗೆ ನಿಜ ಸೇವಕ- ನಾದ ವಿಜಯರಾಯ ನಾನೆ 15 ವಿಜಯರಾಯ ನೀನ್ಹೌದೊ ತೇಜಿದಿ- ಗ್ವಿಜಯಕೆನುತದರ್ಹಿಂದೆ ಪೋಗಿ ಮಗನ ಕೈಯಿಂದ ವಧೆಯು ನೀತವೆ ಮೊದಲೆ ಪರಾಜಿತನಾದಿರ್ಯಾಕೊ 16 ಶ್ರೇಷ್ಠರೊಳು ಮಹಾಶ್ರೇಷ್ಠ ನಾನೆ ಅಸ್ತ್ರವಿದ್ಯದಲ್ಲಧಿಕನೆಂದು ಕೃಷ್ಣಮೂರುತಿ ಒಲಿಸಿಕೊಂಡಂಥ ಕೃಷ್ಣೆ ನಲ್ಲನೆ ಕೃಷ್ಣೆ ಕೇಳೆ 17 ಸಾರಥಿ ಆದ್ದರಿಂದ ಹಸ್ತಿನಾವತಿ ಪಟ್ಟಣಾಳ್ವುದು ಇಷ್ಟು ದಾರ ದಯದಿಂದ್ಹೇಳೊ 18 ಅಂಗನಾಮಣಿ ನಿನ್ನ ಅಂಗ- ಸಂಗ ಬಯಸಿ ನಾ ಬಂದೆನೀಗ ಅಂಗದ್ವಸ್ತ್ರವಬಿಟ್ಟ ಬೌದ್ಧಗೆ ಸಖನು ನಾ ಸವ್ಯಸಾಚಿ ಅಲ್ಲವೆ 19 ಭುಜ ಪರಾಕ್ರಮಿ ಸವ್ಯಸಾಚಿ ನಿನ್ನೆರಡು ಕೈದಡ್ಡಿನ್ಯಾತಕೇಳೊ ದ್ವಿಜರ ಸುತರ ತಂದುಕೊಡದೆ ಮೊದಲೆ ಮಾಡಿದ ಪ್ರತಿಜ್ಞವೇನೊ 20 ಅಂಜೋನಲ್ಲ ನಾನರಿಗಳಿಗೆ ಕಲಿ- ಭಂಜನ ಕಲ್ಕ್ಯಾವತಾರಗೆ ಕಂಜಚರಣಕ್ಕೆ ವಂದಿಸುವೆ ಧ- ನಂಜಯ ನಾನಲ್ಲವೇನೆ 21 ಸೈಯೊ ನೀ ಧನಂಜಯರೇಯ ಸುರಪತಿಗೆ ಪತ್ರವನೆ ಬರೆದು ಶರದ ಪಂಜರ ಕಟ್ಟಿ ನೀ ಕುಂ- ಜರವನಿಳಿಸಿದ ಕಾರಣೇನೊ 22 ನಿನ್ನ ಸರಿ ಮಾತಾಡುವೋರ ಧನ್ಯರ ನಾ ಕಾಣೆನೆಲ್ಲು ಳನ್ನು ಕೇಳಿದಿನ್ಯಾಕೆ ತಡೆವೆ 23 ದಶ ನಾಮಗಳ ಕೇಳಿ ದ್ರೌಪದಿ <ಈಔಓಖಿ ಜಿಚಿ
--------------
ಹರಪನಹಳ್ಳಿಭೀಮವ್ವ
ಕಪ್ಪುಗೊರಳ ಬಿಂಬ ಅಪ್ಪ ಸಲಹೋ ಪ ಕ್ಷಿಪ್ರ ಕೃಪೆ ಪುಟ್ಟಿಸೈ ಅಪ್ರತಿಮ ದಯವನಧಿ ಅ.ಪ. ದಿವಿಜ ದಾನವ ಗಣವ ತೃಣ ಮಾಡಿ ಆಳುವ ಪವನಾಂಶ ಪಾವನ್ನ ಜ್ಞಾನ ಶರಧಿ ನವವಿಧಾ ಹರಿಭಕ್ತಿ ರಸಸಿಂಧು ವೈರಾಗ್ಯ ಸೌಭಾಗ್ಯನಿಧಿ ಮನದಿ ನೆಲೆಯಾಗಿ ನಿಲ್ಲಯ್ಯ 1 ಶೌರಿ ಮೂರ್ತಿಯನು ನಿತ್ಯೋತ್ಸವದಿ ಹೃದಯ ಕಮಲದಲ್ಲಿ ಭೃತ್ಯ ಮಸ್ತಕ ಮಣಿಯೆ ಚಿತ್ತದಲಿ ಕೂತೆನ್ನ ಹರಿಯ ತೋರಿಸು ಸ್ವಾಮಿ 2 ಸಾರತಮ ಹರಿಯೆಂದು ಜಗಕೆ ತೋರಿದ ಗುರುವೆ ಭಾರ ನಿನ್ನದೊ ಸ್ವಾಮಿ ಕಾಯೊ ಎನ್ನ ಮಾರಪಿತ ಜಯೇಶವಿಠಲನ ಪೂರ್ಣೊಲಿಮೆ ವಾರಿಧಿ ವಿಹಾರ ತವ ಎಡಬಿಡದೆ ಇರಿಸೆನ್ನ 3
--------------
ಜಯೇಶವಿಠಲ
ಕರವ ಮುಗಿದು ಗುರುವಿನ ನೀ ಅರಿಯೊ ಸುಹಿತಾರ್ಥಿಯ ನೆರೆಯೊ ದೀರ್ಘದಂಡಹಾಕಿ ತರಣೋಪಾಯ ಮೂರ್ತಿಯ ಬೆರಿಯೋ ಕುರುವ್ಹ ತಿಳಿವ ಪರಮಭಕ್ತಿ ಮನೆಮೂರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 1 ಕರೆವ ಮಳೆಯು ಕರುಣಿಸಿನ್ನು ಪರಮದಯ ವೃತ್ತಿಯ ಶರಣ್ಹೋಕ್ಕಾಶ್ರೈಸೊ ನೀನು ತ್ವರಿತ ಶ್ರೀಪತಿಯ ಮರಿಯದೆ ಕೊಂಡಾಡಬೇಕು ಧರೆಯೊಳಿದೆ ಕೀರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 2 ಯರಕವಾಗಿ ಸರಕನಿನ್ನು ನೀನು ಕರಕೊ ದೃಢಭಕ್ತಿಯಾ ಅರಕಕೋಟಿ ತೇಜನಂಘ್ರಿ ಹರಿಕಿಸೊ ನೀ ಪೂರ್ತಿಯಾ ಗರಕನೆವೆ ಅರಿಕೆಮಾಡಿಕೊಂಡು ಸುಸಂಗತಿಯ ತರಕೈಸಿಕೊಳ್ಳು ಶ್ರೀಪಾದ ಪೂರ್ಣಗುರುಮೂರ್ತಿಯ 3 ಏರು ಅರು ಚಕ್ರ ನೋಡಿ ತಾರಿಸುವ ಸ್ಥಿತಿಯ ಅರವೆ ಅರವೆ ಆಗಿ ದೋರುತದೆ ಸುಜಾಗ್ರತಿಯ ಎರಗಿ ಹರುಷದಿಂದ ಪಡೆಯೊ ಪರಮ ವಿಶ್ರಾಂತಿಯ ಸ್ಮರಿಸೊಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 4 ಸುರರ ವಂದ್ಯ ಪರಮಭೇದ್ಯ ಅರಿಯಾ ಪರಗತಿಯ ಸಾರತಿಹ ಶ್ರುತಿವಾಕ್ಯ ಕೇಳೊ ಇಟ್ಟು ಪ್ರೀತಿಯ ತ್ಯರನೆ ತಿಳುಹಿಸಿಕೊಟ್ಟ ಗುರುವಿಗೆ ನಿತ್ಯಪ್ರತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 5 ಗುರುಮೂತ್ರ್ಯಾಭೇದ್ಯವೆಂಬ ಗುರುತಕೇಳೋ ಅರ್ಥಿಯ ಕುರಹು ದೋರಿಕೊಟ್ಟ ಗುರುವಿಗೆ ನೀ ಮಾಡೊ ಸ್ತುತಿಯ ಮರೆದುಬಿಡೊ ತರಳತನದ ಹರುವಾ ನಿನ್ನಭ್ರಾಂತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ6 ತರತರದಿ ಸಾಂದ್ರವಾಗಿ ದೋರುತಿಹ ದೀಪ್ತಿಯ ಪ್ರಾರ್ಥಿಸಬೇಕೊಂದೆ ಸರ್ವಕಾಲ ವಸ್ತುಗತಿಯ ಪರಿಪರಿಸುಖ ದೋರುವ ಕರುಣಾನಂದ ಯತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 7 ಸರ್ವಸುಖದೋರ್ವದೊಂದೆ ಸರ್ವಫÀಲ ಶ್ರುತಿಯ ಸರ್ವದಾವೆಂಬುವದು ನವರತ್ನಮಾಲೆ ಸ್ತುತಿಯ ಪೂರ್ವಕರ್ಮ ಹರಿಸುವ ಸದ್ಗುರು ಸಾಮಥ್ರ್ಯಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 8 ಶರಣಜನರಾಭರಣವಿದೆ ಅರಿಯಬೇಕೀವಾರ್ತೆಯ ತರಳ ಮಹಿಪತಿ ನೀ ಮಾಡೊ ಇರುಳ ಹಗಲ ಆರ್ಥಿಯ ಕರವ ಪಿಡಿದು ಪಾರಗೆಲಿಸುವ ನಿನ್ನ ಸಾರ್ಥಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು