ಒಟ್ಟು 132 ಕಡೆಗಳಲ್ಲಿ , 39 ದಾಸರು , 120 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶುಭ ಮಂಗಳ ತ್ರಯಭುವನ ವಂದ್ಯ ಸೀತಾಕಾಂತಗೆ ಪ ದಶರಥಾತ್ಮಜನಾಗಿನರಲೀಲಿ ನಟಿಸಿದಗ ಋಷಿಮುಖಕಾಯ್ದ ಹಿಲ್ಯೋದ್ದಾರಗ ಅಸಮಧನುಮುರಿದ ವನಿಜೆಯಾಮಾಲೆಧರಿಸಿದಗ ಬೀಸಜಲೋಚನ ಜನಕ ಜಾಮಾತಗ 1 ಮೂನವರನುಜರ ಕೂಡಿ ಕಲ್ಯಾಣವಿಡಿದಂಗ ದೇವಭೃಗುಪತಿ ಮನಾನಲಿಸಿದವಂಗ ಅವಿಭವಿ ಬಂದಯೋಧ್ಯಾ ಪುರವನಾಳ್ದಂಗ ಜೀವಜಾತಕಸುಖವ ಬಡಿಸಿದಂಗೆ 2 ಗುರು ಮಹೀಪತಿ ಸುತನ ಜೀವ್ಹದಲಿತಾನಿಲಿಸಿ ನಿರುಪಚಾರಿತ್ರ ನುಡಿಸಿದಂಗೆ ಧರೆಯೊಳಗ ದೀನ ಅನಾಥರನು ಪೊರೆವ ಪರಮ ಮಂಗಳ ನಾಮ ಶ್ರೀ ರಾಮಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೇಷ ಗಿರಿಯ ವಾಸಈಶ ಜಗತ್ರಯ ಪೋಷಕ ಸರ್ವೇಶ ಭಾಸುರ ಕೀರ್ತಿ ಶೇಷ ಎನ್ನ ನೀ ಪೋಷಿಸುವುದು ಈಶ ಪ ವಕ್ಷಸ್ಥಳದಲಿ ವಾಸವಾಗಿಹ ಶ್ರೀ ಪರಬ್ರಹ್ಮ ನಾ ಪಕ್ಷಿವಾಹನ ಪರಮಪರುಷ ಅಕ್ಷಯ ಫಲದಾಯಕನಾ ರಕ್ಷಕ ದೀನ ಜನರ ಸರ್ವೋತ್ತಮನ ರಾಜೀವದಳನಯನ ಈಕ್ಷಣದಲೆನ್ನ ನಿನ್ನ ಕುಕ್ಷಿಯೊಳಗೆ ಇಟ್ಟು ರಕ್ಷಿಸೊ ಸಂಪನ್ನ 1 ವೇಣುನಾದ ವಿನೋದನಾದ ಸುಗಾನಲೋಲ ಹರಿಯೆ ದಾನವಾಂತಕ ದಜನುರಕ್ಷಕ ಸುಜ್ಞಾನಿಗಳ ಧೊರಿಯೆ ಮಾನವಾಧಿ ಪ ಮದನವಿಲಾಸ ಮಾಧವ ಮುಕುಂದಾ ನೀನೆ ದಯಮಾಡಿ ಸಲಹೊ ಆನಂದಾ ನಿಜನಿತ್ಯ ಗೋವಿಂದಾ 2 ವಾರಿಧಿ ಬಂಧಿಸಿ ದೈತ್ಯರ ಬಲವನೆಲ್ಲ ಮುರಿದಾ ಬಲವಂತಾ ರಾವಣನ ಭಂಗವ ಬಡಿಸಿ ತಲೆಗಳ ಛೇದಿಸಿದಾ ಸುಲಭದಿ ಅವನನುಜಗೆ ಪಟ್ಟವನಿತ್ತು ಸತಿಯನೆ ತಂದಾ ಜಲಧಿಶಯನ ಅಹೋಬಲ 'ಹೊನ್ನವಿಠ್ಠಲ’ ಚಲುವ ಸದಾನಂದಾ 3
--------------
ಹೆನ್ನೆರಂಗದಾಸರು
ಶ್ರೀ ವಾಯುದೇವರ ಸ್ತುತಿ ಶ್ರೀಮದಾನಂದ ತೀರ್ಥರೆಂಬ |ಅರ್ಥೀಯ ಪೆಸರುಳ್ಳ |ಗುರುಮಧ್ವಮುನಿರಾಯ |ಏನೆಂಬೆ ನಾನಿನ್ನ ಕರುಣಕೆ ಎಣೆಗಾಣೆ ಪ ಬ್ಯಾಸರದೆ ಸರ್ವರಲ್ಲಿ |ಶ್ವಾಸ ಜಪಗಳ ಮಾಡಿಗುಂ ||ಶ್ರೀಶಗರ್ಪಿಸುತ ಹರಿ |ದಾಸರನ್ನು ಪಾಲಿಸಿದೆ 1 ಅಂದು ಹನುಮಂತನಾಗಿಬಂದು ಸುಗ್ರೀವಗೆ ಗುರುಂ ||ಅಂದವಾದ ಪದವಿತ್ತಾ |ನಂದವನು ಬಡಿಸಿದೆ ಗುರುಂ 2 ಕುಂತಿಯ ಕುಮಾರನಾಗಿ |ಹಂತ ಕೌರವರನ ಕೊಂದಿ ಗುರುಂ ||ಅಂತು ಪುಣ್ಯವ ಶ್ರೀ |ಕಂತು ಪಿತಗರ್ಪಿಸಿದೆಯೋ 3 ಅದ್ವೈತರನು ಕಾದಿ |ಗೆದ್ದು ನಿನ ಭಕ್ತರಿಗೆ ಗುರುಮಧ್ವಮುನಿರಾಯ ||ಶುದ್ಧ ತಾತ್ಪರ್ಯ ವಾಕ್ಯ |ಪದ್ಧತಿಯ ತಿಳಿಸಿದಿ ಗುರುಂ 4 ಗುರುಪ್ರಾಣೇಶ ವಿಠಲಾಪರನೆಂದು ಡಂಗುರವ ಗುರುಂ ||ಸಾರಿಸಿ ಸಜ್ಜನರನ್ನು |ಹರಿಲೋಕ ಸೇರಿಸಿದಿ ಗುರುಂ 5
--------------
ಗುರುಪ್ರಾಣೇಶವಿಠಲರು
ಶ್ರೀ ಸತ್ಯಪರಾಯಣರು ನೋಡು ಮನವೆ ಸತ್ಯಪರಾಯಣರ ಪದಗಳ ಬೇಡು ಬೇಡು ಬೇಡಿದಿಷ್ಟವೀವ ಯತಿಗಳ ಪ ಮಾರುತಿಯ ಬಲದಿ ದಕ್ಷಿಣ ದೇಶವ ಜೈಸಿದಾ ಸಾರಸಚ್ಛಾಸ್ತ್ರವನ್ನು ಸ್ಥಿರವಗೊಳಿಸಿದಾ ನಾರಾಯಣನ ಜಗತ್ಕಾರಣನೆನಿಸಿದಾ ಧೀರ ಸತ್ಯಸಂತುಷ್ಟ ಕುವರನೆನಿಸಿದಾ 1 ಭೀಮಸೇನ ಸನ್ಮತ ಸರಿಯಾಗಿ ನಡಿಸಿದಾ ಪ್ರೇಮದಿಂದ ರಘುಜಿಗೆ ವನಮಾಲೆ ಮುಡಿಸಿದಾ ತಾಮಸ ಮತದವರ ಮತವ ಮುರಿದು ಹಾಕಿದಾ ರಾಮನ್ನಾಮ ನುಡಿಸಿ ನುಡಿಸಿ ಹರುಷಬಡಿಸಿದಾ2 ವರ ಕದರುಂಡಲಗೀಶನ್ನೊಡೆಯ ರಾಮನ್ನ ನಿರುಪಮಾನಂದ ತೀರ್ಥ ಸುಪ್ರೇಮನ್ನ ಕರುಣದಿಂದ ಶಿಷ್ಯನಾಗಿ ಸಂದೋಹಪಾಲನ್ನ ಸ್ಮರನ ಜನಕಾ ಪಾಂಡುರಂಗನ ಸ್ಮರಿಪ ಲೋಲನ್ನ 3
--------------
ಕದರುಂಡಲಗೀಶರು
ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಶ್ರೀಶೈಲದೊಳಗಿಪ್ಪ ಸ್ವಾಮಿ ಪುಷ್ಕರಣಿ ಇತಿ ಹಾಸವ ದಿಲೀಪನೃಪ ಬೆಸಗೊಳಲು ಕೇಳಿ ದು ಕೇಳಿ ಸಂತೋಷಿಸುವುದು ಪ ಮುನಿಕುಲೋತ್ತಮ ನೆನಿಸಿ ದುರ್ವಾಸಋಷಿ ದಿಲೀ ಪನ ಸದನವೈದಿರಲು ಕೇಳಿ ಸಂತೋಷದಲಿ ಮುಗಿದು ವಿಜ್ಞಾಪಿಸಿದನು ಋಷಿಗೆ ಅನಿಮಿಷೇಶಾ ವೆಂಕಟನ ನಾಮಧೇಯ ಕುಂ ಭಿಣಿ ಯೊಳಿಪ್ಪಾಖ್ಯಾನ ತೀರ್ಥಗಳ ವೈಭವಗ ದುರ್ವಾಸ ಪೇಳೊದಗಿದಿ 1 ಕೇಳು ರಾಜೇಂದ್ರ ವೆಂಕಟ ಪರ್ವತನು ಮೇರು ಶೈಲಾತ್ಮಜನು ವಾಯು ಶೇಷರ ಸುಸಂವಾದ ಸ್ವರ್ಣ ಮುಖರೀ ತೀರದಿ ಬೀಳಲ್ಕೆ ನೊಂದು ಪ್ರಾರ್ಥಿಸಿದ ಶೇಷನು ಎನ್ನ ಮ್ಯಾಲೆ ಮಲಗಿಪ್ಪ ತೆರದಂತೆ ದಯದಿಂ ನೀನೆ ಶೇಷಾದ್ರಿಯೆನಿಸುತಿಹುದು 2 ಈ ನಗೋತ್ತಮದಾದಿ ಮಧ್ಯಾವಸಾನ ಪ್ರ ಸೂನು ಫಲ ಸಂಯುಕ್ತ ಸಾನುಗಳ ಸುರುಚಿಕೋ ಪುಷ್ಕರಣಿ ತೀರ್ಥದ ತಟದಲಿ ಶ್ರೀನಿವಾಸನು ಬಂದು ನಿಂತ ಕಾರಣವೆನಗೆ ನೀನರುಪುವುದು ಯೆಂದು ಬೆಸಗೊಳಲು ದುರ್ವಾಸ ನೃಪಗೆ ಹರುಷೋದ್ರೇಕದಿ 3 ತೀರ್ಥೋತ್ತಮತ್ವ ಸಾಪೇಕ್ಷಿಯಿಂದಲಿ ಬ್ರಹ್ಮ ಪತ್ನಿ ಪೂರ್ವದಲಿ ಬ್ರಹ್ಮಾವರ್ತ ದೇಶದೊಳ ಪುಲಸ್ತಾಖ್ಯ ಮುನಿಪ ತತ್ತೀರದಲಿ ತಪವಗೈವೆನೆಂದೆನುತ ಬರೆ ಪುತ್ರನೆಂದರಿದು ಮನ್ನಿಸದಿರಲು ಕೋಪದಲಿ ನಿಷ್ಫಲವಯೈದಲೆಂದು ನುಡಿದ 4 ನದ್ಯೋತ್ತಮತ್ವ ಜಾಹ್ನವಿಗಿರಲಿ ಗುಣಗಳಿಂ ಸ್ವರ್ಧುನಿಯು ನೀಚಳಾದರೆಯು ಸರಿ ಲೋಕ ಪ್ರ ಪಾದ ಪ್ರಸಾದದಿಂದ ವಾಗ್ದೇವಿ ನುಡಿಗಳು ಭ ವದ್ವಂಶರೆಲ್ಲ ರಾಕ್ಷಸರಾಗಿ ಬಹಳ ವಿ ಪದಕೆರಗಿ ಬಿನ್ನೈಸಿದ 5 ಅನಭಿಜ್ಞ ಲೋಕೋಪಕಾರ ತಪವೆಂದರಿಯ ದನುಚಿತೋಕ್ತಿಗಳನಾಡಿದೆ ಮಯಾಕೃತದೋಷ ಮುನಿವರನು ಸಂಪ್ರಾರ್ಥಿಸೆ ಪುನರಪಿ ವಿಶಾಪವಿತ್ತಳು ಪ್ರಸನ್ಮುಖಳಾಗಿ ಜನಿಸಲೀ ಭವದ ಪ್ರಾಂತಕ್ಕೆವರ ವಿಭೀ ಭಗವದ್ಧ್ಯಾನಪರಳಾದಳು 6 ತೀರ್ಥೋತ್ತಮತ್ವ ಸಾಪೇಕ್ಷಯಿಂ ವಾಗ್ದೇವಿ ಮತ್ತು ತಪದಿ ಪ್ರೀತಿಗೊಳಿಸಲ್ಕೆ ದೇವದೇ ಬಿನ್ನೈಸಿದಳು ವಾಂಛಿತವನು ವ್ಯರ್ಥವಾಯಿತು ತಪವು ಬಹ್ಮ ಶಾಪದಲಿ ತೀ ರ್ಥೋತ್ತಮತ್ವವು ಕರುಣಿಸೆಂದು ಕೇಳ್ದುದಕೆ ಪ್ರ ಇನಿತೆಂದು ಕಾರುಣ್ಯಸಿಂಧು 7 ನದಿಯರೂಪಕೆ ಬ್ರಹ್ಮಶಾಪ ನಿನಗಾಯಿತ ಲ್ಲದೆ ಸರೋವರಕೆ ಬ್ಯಾರಿಲ್ಲ ಪುಷ್ಕರಣಿಗಳೊ ಸ್ವಾಮಿ ಪುಷ್ಕರಣಿ ಎನಿಸಿ ವಿಧಿಪತ್ನಿ ಶೇಷನೋದ್ದೇಶ ತ್ವತ್ ಸನ್ನಿಧಾ ನದಿ ವಾಸವಾಹೆ ಸಂದೇಹವಿಲ್ಲಿದಕೆ ಸ ಸಜ್ಜನರಿಗಖಿಳಾರ್ಥವೀವೆನೆಂದ 8 ಮೂರುವರೆ ಕೋಟಿ ತೀರ್ಥಗಳು ಭುವನತ್ರಯದೊ ಳಾರಾಧಿಸಿದರೆಯೆನ್ನ ಸ್ವಸ್ವ ಪಾಪೌಘ ಪರಿ ಧನುರ್ಮಾಸ ಸಿತಪಕ್ಷದ ಈರಾರುದಿನದಲರುಣೋದಯಕೆ ತೀರ್ಥ ಪರಿ ವಾರನೈದಿರಿ ಶುದ್ಧರಾಗುವಿರಿಯೆಂದು ತ ಪ್ರೇಷ್ಯತ್ವ ವಾಣಿಗಿತ್ತ 9 ವಾಣಿದೇವಿಯು ತೀರ್ಥರೂಪಳಾಗಲು ಕೃಷ್ಣ ವೇಣಿಸಮ ಬಕುಳ ಮಾಲಿಕೆ ತೀರ್ಥ ಭೂಮಾಭಿ ಹರಿಗೆ ನೈವೇದ್ಯರಚಿಸಿ ಪಾನೀಯ ಧೀ ಭೋಗ ಪತ್ನಿ ಪೂರ್ವದಿ ಸನ್ನಿ ಧಾನದಲ್ಲಿಪ್ಪೆನೆಂದೆನುತ ಪ್ರಾರ್ಥಿಸೆ ಶೇಷ ತಾನಿತ್ತ ಕಮಲಾಕಾಂತನು 10 ಸ್ವಾಮಿ ಪುಷ್ಕರಣಿ ನವತೀರ್ಥಮಾನಿಗಳಿಗೆ ಸು ಧಾಮವೆನಿಸುವಳು ತತ್ತನ್ನಾಮಗಳು ಪೇಳ್ವೆ ಅಗ್ನಿಯನು ಋಣವಿಮೋಚನಿ ಈ ಮಹಾ ವಾಯು ತೀರ್ಥಗಳ ಸುಸ್ನಾನಲ ಕ್ಷ್ಮೀ ಮನೋಹರನ ದರುಶನ ತತ್ವ್ರಸಾದಾತ್ರ ಅಲ್ಪಾಧಿಕಾರಿಗಳಿಗೆ 11 ಕವಿಭಿರೀಡಿತ ಪೂಜ್ಯನೆನಿಸುವನು ಪದ್ಮಸಂ ಭವನು ಪೂಜಕನೆನಿಪ ನೈವೇದ್ಯಕರ್ತೃ ಭಾ ಶರ್ವಶಕ್ರಾರ್ಕ ಮುಖ್ಯ ದಿವಿಜಗಣವಿಹರೆಂದು ಚಿಂತಿಸದೆ ಮರೆದು ಮಾ ನವರೆ ವರ್ತಿಪರೆಂದು ತಿಳಿವವನು ಘೋರ ರೌರವ ಧರಾತಳದೊಳೆಂದ 12 ಮೇರುನಂದನ ವೈಕುಂಠಾದ್ರಿಶತಯೋಜನದ ಮೇರೆಯೊಳು ಪುಣ್ಯತೀರ್ಥಗಳಿಪ್ಪವಲ್ಲೆಲ್ಲ ಮುಖ್ಯಾಮುಖ್ಯ ಭೇದದಿಂದ ನೂರೆಂಟು ತೀರ್ಥಗಳು ಮುಖ್ಯವೆನಿಸುವುವಿದರೊ ಳಾರುತ್ತಮೋತ್ತಮವುಗಳ ನಾಮ ಪೇಳ್ವೆನು ಕು ತುಂಬರ ಆಕಾಶಗಂಗ 13 ವಸುರುದ್ರ ಕಾಣ್ವಗ್ನಿ ಮನ್ವಿಂದ್ರಯಮ ಸೋಮ ಬಿಸರುಹ ಪ್ರೀಯ ನವಪ್ರಜ ಆಶ್ವಿನಿಗಳು ಶುಕ ಜಗಜ್ಜಾಡ್ಯಹರ ಬಾರ್ಹಸ್ವತಿ ದಶಪ್ರಚೇತಸ ಗರುಡ ಶೇಷವಾಸುಕಿಯು ಹೈ ಬ್ಬಸುರ ನಾರದ ವೈಶ್ವದೇವ ಸ್ವಾಹಾಸ್ವಧಾ ಹಸ್ತಿ ನಾರಾಯಣಾದಿ ಪಂಚ 14 ಶಿವರೂಪಿ ದೂರ್ವಾಸ ಪೇಳ್ದನಿನಿತೆಂದು ಜಾ ಹ್ನವಿಯೊಳಬ್ದ ಸ್ನಾನಫಲ ಧನುರ್ಮಾಸದೊಳು ವಾಗ್ದೇವಿ ಶುಕ್ಲಪಕ್ಷ ದ್ವಾದಶಿ ದಿವಸದಿ ಶುಚಿರ್ಭೂತನಾಗಿ ಸಂತೋಷದಲಿ ವಿವರಾಗ್ರಜೋದಯದಿ ಸ್ನಾನವನು ಮಾಡೆ ಐ ಶಿಷ್ಯನೆಂದರಿದು ದಯದಿ 15 ನಾರದ ಮುನೀಂದ್ರನುಪದೇಶದಿಂ ದಕ್ಷನ ಕು ಮಾರಕರು ಸಾಹಸ್ರ ತಮ್ಮ ತಮ್ಮಾಶ್ರಮದ ದಾಕ್ಷಣ್ಯವೆನಿಸುತಿಹ್ಯದು ಭೈರವಾಷ್ಟ ತೀರ್ಥ ಸಿದ್ಧಿಪ್ರದಾಯಕ ಕು ಮಾರಧಾರಿಕ ಪಶ್ಚಿಮದಲಿಹವು ಎಂಟಧಿಕ ತೀರ್ಥಾದ್ರಿಯೆನಿಸುತಿಹುದು 16 ತಾ ತಿಳಿ ಪುದಿತಿಹಾಸ ಶೌನಕಾದ್ಯರಿಗೆ ವರ ಪುಷ್ಕರಣಿಮಹಿಮೆ ಪ್ರೀತಿಯಿಂದಲಿ ತಿಳಿದು ಪಠಿಸುವವರಿಗೆ ಜಗ ನ್ನಾಥ ವಿಠಲ ಮನೋವಾಂಛಿತಗಳಿತ್ತು ಪುರು ಹೂತ ಲೋಕದಲಿ ಸುಖಬಡಿಸಿ ಪ್ರಾಂತಕೆ ತನ್ನ ಪುರವನೈದಿಪ ಕೃಪಾಳು17
--------------
ಜಗನ್ನಾಥದಾಸರು
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
ಸಮೀರಜ ಹನುಮ ಎನ್ನ ಪ್ರಾಣಾಪದಕಾ ಪ ಶಿರಿಚರಣದಲಿ ಮಸ್ತಕವನಿಟ್ಟ ಹೊಂತಕಾರಿ ಸುರಪನಂದನನ ಕೊಲ್ಲಿಸಿದ ನಿರುತ ಉದಾರಿ ಪರಮ ನಿನ್ನಂಘ್ರಿಯವಾರಿ ಸತತ ಶಿರದಲಿ ಧರಿಸುವೆನು ರಿಪುನಿಕರ ಮಾರೀ1 ಉಂಗುರುವ ಕೊಂಡು ಸರ್ರನೆ ಸಾಗರ ಹಾರಿ ತುಂಗ ಮಹಿಮಳಿಗೆ ವಂದಿಸಿ ಗುರುತನೆ ತೋರಿ ಸಂಗಡಲೆ ಯಿತ್ತು ನಂದನ ಕಿತ್ತೆ ಬಲು ಮೀರಿ ಸಂಗರಕೆ ಬಂದ ವಿಕಾರಿಗಳ ನೋಡಿ ಭಂಗಬಡಿಸಿದೆ ಅವರ ಬಲವೆಲ್ಲ ತೂರಿ 2 ನಭಚರರು ಕೊಂಡಾಡೆ ಪುರವೆಲ್ಲ ದಹಿಸಿದೆ ಅಭಿವಂದಿಸಿ ಕುರುಹವರಿಯನ ಮುಂದುವರಿಸಿದೆ ಅಬುಧಿಯನು ವೇಗ ಬಂಧಿಸಿದೆ ಪರ್ವತವ ರಭಸ ಮಿಗೆ ತಂದು ಕಪಿಬಲವನೆಬ್ಬಿಸದೆ 3 ದಾತನಿಗೆ ರಥವಾಗಿ ಚಲ್ಲಿರಿದು ಬೊಬ್ಬಿರಿದೆ ಭೂತಳಕೆ ನೆಗ್ಗೊತ್ತಿ ಎದುರಾದವರ ತರಿದೆ ನೀ ತಡೆಯದೆ ಪೋಗಿ ಮೈರಾವಣನ ಮುರಿದೆ ಕೋತಿಗಳೊಳಗೆ ನೀ ಮೆರೆದೆ ವೇದ ವಿಖ್ಯಾತನೆ ರಾಮ ಸಹಭೋಜದಲಿ ನೆರೆದೆ 4 ಬಲವನು ಬೆಳಿಸಿ ವಾರಿಧಿಯ ಆಚೆಗೆ ಬಲವ ಆಲಸÀಗೈಸದಲೆ ದಾಟಿಸಿದೆ ಬಲು ಛಲವಾ ವಾಲಯದಲಿ ಮಾಡಿ ವೈರಿದಳವನು ಗೆಲುವಾ ಕಾಳಗದೊಳು ನಿನ್ನ ಬಲವ ಕೊಂಡಾಡಿದವರು ಮೂಲೋಕದೊಳಗೆ ಸವಿಯದು ಬಲು ಚೆಲುವಾ 5 ಶತಮೌಳಿಯನು ಕೊಲಿಸಿ ಸತ್ಕೀರ್ತಿಯನು ಪಡೆದೆ ಪ್ರತಿಕಕ್ಷಿ ನಿನಗಿಲ್ಲವೆಂದು ಸತ್ಯವ ನುಡಿದೆ ಸತತದಲಿ ಕಾಪಾಡು ಎನುತ ಪಾದವ ಪಿಡಿದೆ ಮತಿಯಲಿಡು ಎಂದು ಬೇಡಿದೆ ಅಭಯವ ಚತುರ ಫಲದಾಯಕನೆ ದಯಮಾಡು ಬಿಡದೆ 6 ಕಿಂಪುರುಷ ಖಂಡದಲಿ ನಿಜಮೂರುತಿಯ ಧ್ಯಾನ ಇಂಪಾಗಿ ಮಾಡುವ ಅಂಜನೆಯನಂದನಾ ಲಂಪಟವೆ ಸಾಕು ನಿನ್ನಯ ಸುರದ್ರುಮ ಚರಣ ಸಂಪಿನಲಿ ಪೊಂದಿಸನುದಿನ ಎನ್ನ ಗುರುಸಂಪತ್ತು ವಿಜಯವಿಠ್ಠಲನಲ್ಲಿ ಪ್ರಾಣಾ7
--------------
ವಿಜಯದಾಸ
ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸಾರಿ ಭಜಿಸಿರೋ | ವಿಜಯ ಗುರುಗಳೆಂಬರಾ ಪ ಚಾರು | ಚರಣ ತೊರ್ಪರಾ ಅ.ಪ. ಸತ್ರಯಾಗದೀ ಗಂಗೆ | ಕ್ಷೇತ್ರ ತೀರದಿಭ್ರಾತೃವರ್ಗವೂ ಅವರ ತುತಿಸಿ ಕಳುಹಲೂ 1 ಗಿರಿಜೆ ರಮಣನಾ ಪುರವ | ಸಾರಿ ಬೇಗನೇಮಾರ ಕೇಳಿಯಾ ನೋಡಿ | ಗಿರಿಯ ತ್ಯಜಿಸಿದಾ 2 ಚತುರವದನನಾ ದಿವ್ಯ | ಸತ್ಯಲೋಕವಾಚತುರ ಸೇರುತಾ ಅವನ | ಸ್ತುತಿಯ ಮಾಡಿದ 3 ವೇದ ಪಠಿಸುತಾ | ಬಧಿರನಂತಿರೇವದಗಿ ಸಾಗಿದಾ | ನಾರ್ದ ದೂತನೂ4 ಹರಿಯೆ ಕಾಣುವೆ ಎಂದು | ತ್ವರದಿ ಬಂದನೂಹರಿಯ ಮಾಯವಾ ಜಗದಿ | ಯಾರು ಅರಿವರು 5 ನಿದ್ರೆ ಬಂದವಾ | ನಂತೆ ಮಲಗಿಹಾಭದ್ರ ಮೂರ್ತಿಯಾ ತಾನು ಕಾಲಿಲೊದ್ದನು 6 ಪಾದ ಒತ್ತುತಾಮೋದ ಬಡಿಸಿದಾ ತಾನು | ಸಾಧು ಮುನಿಯನು 7 ಹರಿಯೆ ಪರನೆಲ್ಲಾ | ಹರಿಯ ಸರ್ವಜ್ಞಾಹರಿಗಿನ್ನಿಲ್ಲವೋ | ಸಮರು ಅಧಿಕರವಾ 8 ಎಂದು ಸ್ಥಾಪಿಸೀ | ತಾನು ಬಂದು ನಿಂತನುಛಂದದಿಂದಲಿ ಯಜ್ಞ | ಸಾಂಗಗೈಸಿದಾ 9 ಪದಸುಳ್ಹಾದಿಯಾ | ರಚಿಸಿ ಮೋದದಿಂದಲೀವೇದ ಸಾರವಾ | ಜನಕೆ ಬೋಧಿಸೀರುವಾ 10 ಪವನನಯ್ಯನಾ ಗುರು | ಗೋವಿಂದ ವಿಠಲನಾಸ್ತವನ ಮಾಡುತ ತಾನು | ಭವವ ಕಳದನಾ 11
--------------
ಗುರುಗೋವಿಂದವಿಠಲರು
ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಪ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ಗುಪಿತ ಮಹಿಮನ 1 ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ ನಾರದನು ಗಾಯನವ ಗೈಯುತ ಇನಿತು ಸೋಜಿಗ ನೋಡಿ ತನ್ನಯ ಜನಕಗರುಹಲು ನಗುತಲಾ ಮನದಿ ಕೈಕೊಂಡ ಮೂಲ ಮೂರ್ತಿಯ 2 ಪೊಡವಿಯೊಳು ನೀನವತರಿಸಿ ಆ ದೃಢü ಬಕುತನಿಗೆ ದರುಶನವೆ ಇ ತ್ತಡಿಗಡಿಗೆ ಸುಖಬಡಿಸಿ ಅಲ್ಲಲ್ಲಿ ಬಿಡದೆ ನಿಲ್ಲುವೆ ನಿಮ್ಮ ಸಹಿತಲಿ ವಿನುತ ಕಳುಹಿದ ಒಡನೆ ಸಲ್ಲಿಪೆನೆಂದ ಯಮುನಾ ತಡಿಯ ಜನಿಸಿದ ಜಗನ್ಮೋಹನಾ 3 ನಿಧಿಯ ನೋಡುವೆನೆನುತ ಗೋವುಗಳ ಮುದದಿ ಮೇಯಿಸಿಕೊಳುತ ಕಾವುತ ಒದಗಿ ಗೋವಳರೊಡನೆ ಬಂದನು ವಿಧಿ ಸಂಭವಾದ್ಯ ಭಕ್ತನ ಎದುರಲಿ ನೋಡಿದನು ಹೋ ಹೋ ಇದೇ ಸಮಯವೆಂದು ನಿಂದಾ ಹಿಂಭಾ ಗದಲಿ ಭಕ್ತಿಗೆ ಮೆಚ್ಚಿ ಬಲು ವೇಗಾ4 ತಿರುಗಿ ನೋಡದಲಿರಲು ಭಕುತನ ಮರಳೆ ಮಾತಾಡಿಸಲು ಇಟ್ಟಿಗೆ ಭರದಿ ಹಿಂದಕೆ ಒಗಿಯೆ ವಿಠ್ಠಲ ಹರುಷದಲಿ ವಶವಾಗಿ ನಿಲ್ಲಲು ಕರುಣರಸ ಸಂಪೂರ್ಣ ದೇವನ ನಿರೀಕ್ಷಿಸಿದ ಜಯವೆಂದು ಪೊಗಳಿ ವರವ ಬೇಡಿದ ಪುಂಡರೀಕನು ಗಿರಿಯನೆತ್ತಿದ ಗೋಕುಲೇಶನ 5 ಭಕುತ ಮನೋರಥ ಎನ್ನ ಪೆಸರಿಲಿ ಸಕಲ ಲೋಕದೊಳಗೆ ನೀನೆ ಮುಕುತಿ ಕೊಡುತಲಿ ಇಲ್ಲೆ ನಿಲುವದು ಅಖಿಳ ಬಗೆಯಿಂದ ಭಜನೆಗೊಳುತ ನೀ ರುಕ್ಮಿಣಿಪತಿ ಒಲಿದು ಪಾಲಿಸಿ ವ್ಯಕುತವಾದನು ಪೂರ್ವಮುಖನಾಗಿ ಸುಖವಯೋನಿಧಿ ಮೆರೆಯುತಲಿ ಇಂದೂ 6 ಕ್ರೋಶ ಯೋಜನ ಯೋಜನತ್ರಯ ದೇಶ ಪರಿಮಿತ ಕ್ಷೇತ್ರವಿಪ್ಪುದು ವಾಸ ಒಂದಿನಮಲ ಮನುಜರನ ಲೇಸು ಪುಣ್ಯಗಳೆಣಿಸಿ ಸರಸಿ ಜಾಸನನು ಬೆರಗಾಗಿ ನಿಲ್ಲುವ ದೋಷ ವರ್ಜಿತ ಹರಿಯ ನೆನೆಸುತ ಆ ಸೇತು ಮಧ್ಯದಲಿ ವಿಶೇಷವಾಗಿದ್ದ ಈ ಕ್ಷೇತ್ರ ಮೂರ್ತಿಯಾ 7 ನಂದಾ ಮಂದಾಕಿನಿ ಮಧ್ಯಾಹ್ನಕೆ ನಿಂದಿರದೆ ಬರುತಿಪ್ಪ ಪ್ರತಿದಿನ ಚಂದ್ರಭಾಗಾ ಪ್ರಸೂನುವತಿ ಅರ ಕುಂಡಲ ಚತುರ ದಿಕ್ಕಿನಲಿ ಪೊಂದಿಪ್ಪವು ಓರ್ವನಾದರು ಮಿಂದು ತೀರ್ಥದಲಿ ಆ ನಂದ ಸತ್ಕರ್ಮ ಚರಿಸಲಾಕ್ಷಣ ಇಂದಿರೇಶನು ಒಲಿವ ನಿಶ್ಚಯಾ 8 ದ್ವಾರಸ್ಥ ಜಯ ವಿಜಯ ನಾರದ ಭಾರತಿ ಪಂಚ ಕೋಟಿ ದೇವರು ಶ್ರೀರಮಣಿ ಮಿಕ್ಕಾದ ಜನರೆಲ್ಲ ಈರೆರಡು ದಿಕ್ಕಿನಲಿಯಿಹರು ಸುತ್ತಲಿ ಪಾಡುತ್ತ ಕುಣಿಯುತ್ತ ಹಾರುತಲಿ ಹಾರೈಸಿ ನಾನಾ ವಿ ಹಾರದಲಿ ಪುರಿ ಪ್ರದಕ್ಷಣಿ ವಿ ಸ್ತಾರ ಮಾಡುತಲಿಪ್ಪ ಸೊಬಗನಾ 9 ಎರಡು ವಿಂಶತಿ ಗುದ್ದು ಮೊಳವೆ ಕರಿಸಿ ಕೊಂಬೊದೊಂದೆ ನಿಷ್ಕವು ಇರದೆ ಇವು ನಾನೂರುಯಾದಡೆ ವರಧನಸ್ಸು ಪ್ರಮಾಣವೆನಿಸೊದು ಗುರುತು ತಿಳಿವದು ಇಂಥ ಧನಸ್ಸು ಅರವತ್ತು ಪರಿಮಿತಾ ಈ ಭೀಮಾ ಸರಿತೆಗಳು ಪರಿಪರಿ ತೀರ್ಥಗಳಕ್ಕು ನಿರೀಕ್ಷಿಸಿ ವಂದನೆಯ ಮಾಡುತಾ 10 ಜ್ಞಾತಿ ಗೋತುರ ಹತ್ತದೊಂದೆ ಮಾತು ಮನ್ನಿಸಿ ಕೇಳಿ ಸುಜನರು ವಾತದೇವನ ಕರುಣತನವನು ನೀತಿಯಲಿ ಪಡಕೊಂಡು ಸತ್ವದಿ ಜ್ಞಾತ ಅನುಷ್ಠಾನದಲಿ ನಡೆದು ಪು ಮಾನವ ಬಂದರಾದಡೆ ಆತುಮದೊಳು ಹರಿ ಪೊಳೆದು ಬಲು ಕೌತುಕವ ತೋರಿಸುವ ರಂಗನಾ 11 ಶಯ್ಯಾ ಹರಿ ದಿನದಲಿ ಮಾನವ ಕಾಯ ನಿರ್ಮಳನಾಗಿ ಫಂಡರಿ ರಾಯ ರಾಜೀವನೇತ್ರ ತ್ರಿಭುವನ ನಾಯಕನ ಕ್ಷೇತ್ರಕ್ಕೆ ಮನಮುಟ್ಟಿ ಗಾಯನವ ಮಾಡುತಲಿ ಬಂದ ನಿ ರ್ಮಾಯದಲಿ ಕೊಂಡಾಡಿ ದಮ್ಮಯ್ಯ ಕೈಯ ಪಿಡಿಯನೆ ಕರುಣದಿಂದ ಸಾ ಹಾಯವಾಗುವ ವಾಣಿ ಜನಕನಾ 12 ಮಕುಟ ಕುಂಚಿ ಕುಲಾಯ ಕುಂತಳ ಕುಂಡಲ ಮಣಿ ಕಿರಣ ಸ ನ್ನುಖ ಮುಕರ ಸೋಲಿಸುವ ಕಾಂತಿ ಚಂ ನಾಸಿಕ ಮುಖ ಮೃಗನಾಭಿ ಸಣ್ಣ ತಿ ಲಕ ಕೌಸ್ತುಭಗಳ ತುಲಸಿ ಮಾಲಿಕಾ ನಖ ಪದಕ ಕಟೆಕಂಬು ಕರದ್ವಯ ನಖ ಪಾದ ಭೂಷಣ ಮಾ ಣಿಕ ಇಟ್ಟಿಗೆ ಮೇಲೆ ನಿಂದ ವಿಠ್ಠಲನ 12 ಸಂಗಮ ಸುರ ಮಥನ ಕಾಳಿಂಗ ಭಂಗ ಭಾವುಕ ಭಕ್ತಜನಲೋಲ ಶೃಂಗಾರಾಂಬುಧಿ ರೋಮ ಕೋಟಿ ಕೋಟಿ ಲಿಂಗಧರ ಗೌರೀಶ ಸುರಪ ನಂಗ ಮಿಗಿಲಾದ ಮುನಿವಂದಿತಾ ಮಾ ತುಂಗ ವರದ ಗೋವಿಂದ ವರದೇಶ ಸಂಗ ನಿಃಸಂಗ ಸುಪ್ರಸನ್ನ ನೀ ಅನುದಿನ 14 ಪೇಳಲೊಶವೇ ಲೋಹದಂಡಿ ಹಿ ಯ್ಯಾಳಿ ಕ್ಷೇತ್ರದ ಮಹಿಮೆ ಸಾವಿರ ನಾಲಿಗಿಂದಲಿ ಪೊಗಳಿ ಸುಮ್ಮನೆ ವ್ಯಾಳಪತಿ ಬೆರೆಗಾಗಿ ನಿಲ್ಲುವ ಸಲಿಗೆ ನಾ ಮಾಳ್ಪರು ವಿಲಿಂಗರು ಮೇಲು ಮೇಲೀ ಭುವನದೊಳಗಿದ್ದು ಹೇಳಿ ಕೇಳಿದ ಜನರಿಗಾನಂದಾ ಬಾಲಾ ವಿಜಯವಿಠ್ಠಲರೇಯನಾ 15
--------------
ವಿಜಯದಾಸ
ಸೀಸಪದ್ಯ ಧರಣಿ ಮೊರೆಯನು ಕೇಳಿ ಸರಸಿಜಾಸನ ಸಕಲ ಸುರರ ಸಹಿತದಿ ಶರಧಿಶಯನಗÀರುಹೆ ವಸುದೇವ ದೇವಕಿ ಸುತನೆನಸಿ ಅಜನಯ್ಯ ವಸುಮತಿಯಲವತರಿಸಿ ಲೀಲೆಯಿಂದ ದುರುಳ ದೈತ್ಯರ ಸದೆದು ಪರಿಪಾಲಿಸಿದ ಸಾಧು ಸುಜನರನ್ನು ನಿಜಭಕ್ತ ಪಾಂಡವರ ನೆಂಟನೆಂದೆನಿಸಿ ಭೂ ಭುಜ ಸುಯೋಧನ ಮುಖ್ಯ ದುರುಳರನ್ನು ಸದೆಬಡಿಸಿದಾ ಬಳಿಕ ಮದದಿ ಕೊಬ್ಬಿದ ಯದು ಬಳಗವನು ವಿಪ್ರಶಾಪದಿಂದ ಕೊಲಿಸಿ ಪದುಮಸಂಭವಜನಕ ಕರಿಗಿರೀಶನು ತನ್ನ ಸದನಕ್ಕೈದಿದ ಸರ್ವವ್ಯಾಪ್ತ ಸರ್ವೇಶ
--------------
ವರಾವಾಣಿರಾಮರಾಯದಾಸರು
ಸುವ್ವಿ ಶ್ರೀ ಗುರುನಾಥ ಸುವ್ವಿ ಸದೋದಿತ ಸುವ್ವಿ ಸಾಯೋಜ್ಯದೊಡೆಯನೆ ಸಾಯೋಜ್ಯದೊಡಿಯ ಸದ್ಗುರು ನಮ್ಮಯ್ಯ ಸುವ್ವೆಂದು ಪಾಡಿ ಸಜ್ಜನರೆಲ್ಲ ಧ್ರುವ ಮನವ ಕಣಕವ ಮಾಡಿ ಗಣಪತಿಯ ಬಲಗೊಂಡು ಅನುಮಾನೆಂಬೆಳ್ಳ ಚಿಗಳಿಯ ಅನುಮಾನೆಳ್ಳ ಚಿಗಳಿ ನೆನವು ನೆನಗಡಲಿಯ ಗಣನಾಥಗಿಟ್ಟು ಬಲಗೊಂಡು 1 ಮನವೆಂಬ ಕಣಕವ ಘನವಾಗಿ ಕುಟ್ಟುತ ಜ್ಞಾನ ವೈರಾಗ್ಯದೊಡಗೂಡಿ ಒಡಗೂಡಿ ಕುಟ್ಟುತ ಪ್ರಾಣದ ಸಖಿಯರು ಅನಂದ ಘನವ ಬಲಗೊಂಡು 2 ನಿರ್ಗುಣಾನಂದನು ಸುಗುಣವ ತಾಳಿದ ಅಗಣಿತಗುಣ ಪರಿಪೂರ್ಣ ಪರಿಪೂರ್ಣವಾಗಿಹ ಅಗಮ್ಯನುಪಮ ನಿಗಮ ಗೋಚರನ ಬಲಗೊಳ್ಳಿ 3 ಉತ್ಪತ್ತಿ ಸ್ಥಿತಿ ಲಯ ವಿಸ್ತಾರದೋರಲು ಮತ್ತೆ ತ್ರಿಗುಣವ ತಾಳಿದ ತಾಳಿದ ಸತ್ವ ರಜ ತಮವು ತ್ರಿಮೂತ್ರ್ಯದ ನಿತ್ಯ ನಿರ್ಗುಣನ ಬಲಗೊಳ್ಳಿ 4 ಭಕ್ತರ ಹೊರಿಯಲು ಪೃಥ್ವಿಯೊಳಗಿನ್ನು ಹತ್ತವತಾರ ಧರಿಸಿದ ಭರಿಸಿ ಪೃಥ್ವಿಯೊಳು ಮುಕ್ತಿ ಸಾಧನವಿತ್ತು ಪತಿತಪಾವನನ ಬಲಗೊಳ್ಳಿ 5 ಅನಾಥಜನರ ದೈನ್ಯ ಹರಿಸಲಾಗಿ ಆನಂದದಿಂದ ಪುಟ್ಟಿಹ್ಯ ಪುಟ್ಟಹ್ಯಾನಂದದಿ ಘನ ಗುರುಮೂರ್ತಿಯ ಜ್ಞಾನದಲೊಮ್ಮೆ ಬಲಗೊಳ್ಳಿ 6 ಕುಸುವ ನಿಶ್ಚಯ ಒನಕಿಯ ಕುಸುವ ನಿಶ್ಚಯದ ಒನಕಿ ಹಸ್ತದಿ ಪಿಡಿದು ಹಸನಾಗಿ ಕಣಕ ಕುಟ್ಟುತ 7 ಹಸನದಿಂದ ಕುಟ್ಟಿ ನಾದಿ ಉರಳಿ ಮಾಡಿ ಮದನ ಮೋಹನಗ ಮದುವೀಗ ಮದುವಿಯ ಮನೆಯಲ್ಲಿ ಮುದದಿ ಮೂವತ್ತಾರು ಮೊದಲಾದ ಗುರಿಯ ಮುತ್ತೈದೇರು 8 ಚದುರತನದಲಿ ಒದಗಿ ಮುತ್ತೈದೇರು ಯದುಕುಲೋತ್ತಮನ ನೆನವುತ ನೆನವುತ ಹದನದಿಂದಲಿ ಮನವಿಡುತ ಆದಿ ತ್ರಿಮೂರ್ತಿ ಬಲಗೊಂಡು 9 ಅಸಿಯ ಕಲ್ಲಿ ಒನಕೆ ಉಸಲಾರಗೊಡದೆ ಹಸನಾಗಿ ಕಣಕ ಕುಟ್ಟುತ ಕುಟ್ಟುತ ಮನವೆಂಬ ಕಣಕ ಹಸನವು ಮಾಡಿ ವಿಶ್ವ ವ್ಯಾಪಕನ ಮದುವಿಗೆ 10 ಕುಟ್ಟಿದ ಕಣಕವು ಘಟ್ಟಿಸಿಹ ಮಾಡಿ ಒಟ್ಟಿ ಉನ್ಮನೆಯ ಮುದ್ರಿಯಲಿ ಮುದ್ರಿಲೆ ಒಟ್ಟಲು ದಿಟ್ಟ ಮುತ್ತೈದೇರು ಕೊಟ್ಟ ಸದ್ಗುರು ಹರುಷವ 11 ಜ್ಞಾನ ವೈರಾಗ್ಯವೆಂಬ ಅನಾದಿ ಶಕ್ತ್ಯರು ಕಣಕವ ಕುಟ್ಟಿ ದಣಿದರು ಮನವೆಂಬ ಕಣಕದ ಉರಳೆ ಉನ್ಮನಿಲಿಟ್ಟು ಮೌನ್ಯ ಮೋನದಲಿ ಮುಸುಕಿರೆ 12 ಹಸನಾದ ಕಣಕಲಿ ಹೊಸಪರಿ ಭಕ್ಷ್ಯವು ಹೆಸರಿಟ್ಟು ಏಸು ಪರಿಯಿಂದ ಪರಿಯಿಂದ ಮಾಡುತ ಬೀಸೋರಿಗಿಗಳು ವಾಸುದೇವನ ಮದುವಿಗೆ 13 ಅಡಿಗಿಯ ಮಾಡಿದ ಸಡಗರ ಪೇಳಲಿ ಪೊಡವಿಯೊಳಿನ್ನು ಅಳವಲ್ಲ ಅಳವಲ್ಲದಡಗಿಯ ಕೂಡಿ ಮುತ್ತೈದೇರು ಎಡಿಯು ಮಾಡಿದರು ತಡೆಯದೆ 14 ಒಂದೆ ಸಾಲದಲಿ ಕುಳಿತರು ಕುಳಿತು ಸಾಧು ಜನರ ಮುಂದೆ ಎಡಿ ಮಾಡಿ ಒಂದೊಂದು ಪರಿಯ ಬಡಿಸುತ 15 ಹಪ್ಪಳ ಸೊಂಡಿಗಿ ಉಪ್ಪು ಮೆಣಸುಗಳು ಒಪ್ಪದಿಂದ ಬಡಿಸುತ ಬಡಿಸುತ ತಪ್ಪದೆ ಉಪ್ಪಿನೆಸರಗಳು ಶ್ರೀಪತಿ ಪ್ರಸ್ತದೆಡಿಯಲಿ 16 ಪ್ರಸ್ತದ ಎಡಿಯಲಿ ಪತ್ರ ಶಾಖೆಗಳು ಮತ್ತೆ ಅನೇಕ ಪರಿಯಾದ ಪರಿಯಾದ ಶಾಖವು ಸುತ್ತ ಪಂಕ್ತಿಯಲಿ ಆತ್ಮದಿಂದ ಬಡಿಸುತ 17 ಪರಮಾನ್ನಗಳ ತಂದು ಹಿರಿಯ ಮುತ್ತೈದೇರು ಸರಿಯಾಗಿ ಎಡಿಯ ಬಡಿಸುತ್ತ ಬಡಿಸುತ ಅನ್ನ ಪರಮಾನ್ನ ಅನುಭವದ ಅನಂದದಿಂದ ಬಡಿಸಿದೆ 18 ಮನೋ ಅನುಮಿಷದ ಎಣ್ಣೋರಿಗಿಗಳು ಎಣಕಿಲ್ಲದಿಹ ಭಕ್ಷ್ಯವು ಭಕ್ಷ್ಯದ ಜಿನಸ ಅನೇಕ ಪರಿಯಲಿ ಘನದೊಲುವಿಂದ ಬಡಿಸುತ 1 9 ಸಖರಿ ತುಪ್ಪವು ಭಕ್ತಿಭಾವದಲಾದ ಬಡಿಸುತ ನಡೆದರು ಅಖರದಿಂದಲಿ ಏಕಶಾಂತನ ಮದುವಿಗೆ 20 ಮೊಸರು ಮಜ್ಜಿಗಿಯು ಸುವಾಸದಿಂದಾದ ಲೇಸಾಗಿ ದಣಿಯಬಡಿಸಿರೆ ಬಡಿಸಿದ ಷಡುರಸಾನ್ನವನುಂಡಿನ್ನು ಕಡುಬೇಗ ಪ್ರೇಮ ಉಕ್ಕಿತು 21 ಉಂಡುವೀಳೆಯುವ ಕೊಂಡು ಸಾಧುಸಭೆ ಮಂಡಲದೊಳು ಪೊಗಳಿತು ಪೊಗಳಿತಾ ಮಂಡಲದೊಳು ಪ್ರಚಂಡನ ಮದುವಿ ಅಖಂಡ ಹರುಷದಿ 22 ಗಂಧ ಕಸ್ತುರಿಯ ತಂದೆ ಗುರುಕೃಪೆಯ ಚಂದವಾಗಿಟ್ಟು ಮೆರೆದರು ಮೆರೆದು ಮೇದಿನಿಯೊಳು ಗುರುದಯ ಕರುಣಾದಿ ಪರಮ ಸುಪಥವ ಪಡೆದರು 23 ಮದುವಿ ಮುತ್ತೈದೇರು ಮುಕ್ತಿಸಾಧನ ಕಂಡು ಸುಖಸೂರೆಕೊಂಡಿನ್ನು ಶ್ರೀಮಂತಕರದೊಳು ಬೆರೆದು ಹರುಷವ ಪಡೆದರು24 ಸರಿ ಇಲ್ಲದ ಪ್ರಸ್ತ ಧರೆಯೊಳಗಾಯಿತು ಪರಮಾನಂದದ ಹರುಷಲಿ ಹರುಷವ ಕಂಡಿನ್ನು ಕರುಮುಗಿದು ಮಹಿಪತಿ ಹೃತ್ಕಮಲದಲ್ಲಿ ಸ್ತುತಿಸಿದ 25 ಶ್ರೀಪತಿ ಮದುವಿಯ ಸ್ತುತಿ ಪಾಡಿದವರಿಗೆ ಪಾತಕವಿಲ್ಲ ಭಯವಿಲ್ಲ ಭಯವಿಲ್ಲ ಕ್ಷಿತಿಯೊಳು ಗುರುಭಕ್ತಜನರಿಗೆ ಸಂತತ ಸುಖವ ಪಡೆವರು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುವ್ವಿಸತ್ಯಭಾವೆ ಸುವ್ವಿ ರುಕ್ಮಿಣಿದೇವಿ ಸುವ್ವಿ ಸುವ್ವಿ ಕೃಷ್ಣರಾಯ ಸುವ್ವಿ ಎಂದರು ಪಲ್ಲ ಮುಯ್ಯ ತಂದು ದ್ರೌಪದಿ ಸೈಯ ಸೈಯ ಎನ್ನಿಸಿಕೊಂಡು ಕೈಯ ಹೊಯಿದು ನಗುತ ಕೃಷ್ಣಸುವ್ವಿ ಎಂದರು1 ಮುದ್ದು ಸುಭದ್ರಾತಾನು ಗೆದ್ದು ಭಾವೆ ರುಕ್ಮಿಣಿಯರು ಬಿದ್ದು ನಗುತ ಕೈಯ ಹೊಯಿದು ಸುವ್ವಿ ಎಂದರು2 ದಿಟ್ಟೆರಿಬ್ಬರ ಗರ್ವಕುಟ್ಟಿ ಕೇರಿ ತೌಡು ತೆಗೆದು ಕೃಷ್ಣರಾಯನ ನೆನೆಸಿ ಸುವ್ವಿ ಎಂದರು3 ಚಲುವಿಭಾವೆ ರುಕ್ಮಿಣಿಯರು ಸುಲಭದಿಂದ ಗೆದ್ದುಕೊಂಡು ಹಲಧರನ ಪ್ರೀತಿ ಪಡಿಸಿ ಸುವ್ವಿ ಎಂದರು 4 ವೀತ ದೋಷ ರಾಮೇಶನ ಪ್ರೀತಿ ಬಡಿಸಿ ದ್ರೌಪತಿಯ ಮಾತಿನಿಂದ ಗೆದ್ದು ಕೊಂಡು ಸುವ್ವಿ ಎಂದರು 5
--------------
ಗಲಗಲಿಅವ್ವನವರು
ಹದಿನಾಲ್ಕು ಲೋಕವನಾಳುವ ತಂದೆಗೆ | ಮುದದಿಂದ ನಾನೊಬ್ಬ ಭಾರವಾದೆನೆ ಪ ಸುರಗಿರಿಯು ಶರಧಿಯೊಳು ಕಡೆವಾಗ ಮುಣಗಲಾ || ಭರದಿಂದ ಪೋಗಿ ಚೆನ್ನಾಂತು ಪೊತ್ತೆ || ಧರಣಿಯು ಮೊರೆಯಿಡಲು ತೆರಳಲ್ಲಿ ಬಂದು | ಭೂತರುಣಿಯನು ಸೆರೆಬಡಿಸಿ ಉಳುಹಿಕೊಳ್ಳಲಿಲ್ಲವೆ 1 ಸುರಪತಿ ಮುನಿದೇಳು ಹಗಲಿರುಳು ಮಳೆಗರೆಯೆ | ಬೆರಳಲಿ ಧರಿಸಿ ಕಾಯ್ದು ನಿಜದೆ || ವರಮುನಿ ಪಸವನು ಬೇಡಲಾಗಿ ಬೆದರಿ ನರ- | ನರಸಿ ನಿನ್ನ ಕರೆಯೆ ಕರುಣದಲಿ ಪಾಲಿಸಿದೆ 2 ಜಲಜಾಕ್ಷ ಬೆಟ್ಟವನು ಪೊತ್ತು ಬಳಲಿದಾಗ | ಸಲಹಬೇಕೆಂದು ಬೇಸರಿಸಲಿಲ್ಲಾ || ಸುಲಭದಲಿ ಶೇಷಾಚಲನಾಗಿಪ್ಪ | ಒಲಿದೆನ್ನ ಸಂರಕ್ಷಿಸೊ ವಿಜಯವಿಠ್ಠಲನೆ 3
--------------
ವಿಜಯದಾಸ