ಒಟ್ಟು 1446 ಕಡೆಗಳಲ್ಲಿ , 98 ದಾಸರು , 1132 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು ಪ ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲಅ ಶೌರಿ 1 ಬಲಿಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ-ಗಿಲ ಕಾಯ್ದನಚ್ಯುತನು ಅನುಗಾಲದಿಬಲು ಭುಜನು ಬಾಣಾಸುರನ ಗೃಹ ದ್ವಾರವನುಬಳಸಿ ಕಾಯ್ದನು ಹರನು ವರವ ತಾನಿತ್ತು 2 ಭೋಗಿಶಯನನು ಆಗಿ ಭೋಗಿಭೂಷಣನಾಗಿವಾಗೀಶನಾಗಿ ಸೃಷ್ಟಿಸ್ಥಿತಿಲಯಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆಕಾಗಿನೆಲೆಯಾದಿಕೇಶವನ ಮಹಿಮೆಯನು 3
--------------
ಕನಕದಾಸ
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆಲದೆಲಿಯ ಮ್ಯಾಲ ಮಲಗ್ಯುಂಗುಟ ಚಪ್ಪರಿವನು ನೀನಾರೈ ಮೂಲರೂಪದ ನಿಜದೋರದೆ ಬಾಲಕನಾಗಿಹ ನೀನಾರೈಧ್ರುವ ಚಲುವ ಕಂಗಳ ನೋಡದಲ್ಹೊಳವುತ ಜಲದೊಳಗಾಡುವನಾರೈ ಕಾಲುಡಿಗಿಸಿ ಬೆನ್ನಿಲೆ ಬಲು ಕಠಿಣವ ತಾಳಿದವ ನಿನಾರೈ 1 ಕೋರ್ಹಲ್ಲಿಲಿ ಬೇರನೆ ಅಗಳ್ಯಾಡುತ ದೋರುವ ನೀನಾರೈ ನರಮೃಗರೂಪದಿ ತರಳಗೊಳಿದು ಭರದಲಿ ಬಂದವನಾರೈ 2 ಒಪ್ಪಿಲಿ ಮೂರುಪಾದ ಭೂಮಿಯೊಪ್ಪಿಸಿಕೊಂಡವನಾರೈ ಚಪ್ಪಗೊಡಲಿ ಕೈಯಲಿ ಪಿಡಕೊಂಡು ಇಪ್ಪವ ನೀನಾರೈ 3 ಬಳ್ಳಿಹಿಡಿದು ಕಲ್ಲನೆ ಉದ್ಧರಿಸಿದ ಮಲ್ಲನು ನೀನಾರೈ ಗೊಲ್ಲತೆಯರ ಮೋಹಿನಿ ಎಳಿದಾಡುವ ಚಲುವನು ನೀನಾರೈ 4 ಚದುರನು ನೀನಾರೈ ಕುದುರೆಯನೇರಿ ಹದನದಿ ತಿರವ್ಯಾಡುವ ರಾವುತನಾರೈ 5 ಕುರುಹುದೋರದೆ ನರನಾರಿಯರ ರೂಪದಲ್ಯಾಡಿದವನಾರೈ ಬಡಿಸಿದವ ನೀನಾರೈ 6 ಅಗಣಿತ ಗುಣದಲಿ ಬಗೆ ಬಗೆ ಅಡುವ ಸುಗುಣ ನೀನಾರೆ ೈ ಝಗಝಗಿಸುವ ಜಗನ್ಮನೋಹರನಾಗ್ಯಾಡುವ ನೀನಾರೈ 7 ಖೂನ ಕುರುಹದೋರಿದ ಭಾನುಕೋಟಿ ತೇಜನಹುದೋ ಬಾರೈ ದೀನ ಮಹಿಪತಿ ಸನಾಥಮಾಡಿದ ದೀನೋದ್ಧಾರಹುದಹುದೈ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ಪ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ ಬಂದಿದ್ದನೋ ಏನೋ 1 ಘನ ತೀರ್ಥಯಾತ್ರೆಗೆ ಪೋಗುವಾಗ-ಲು | ವಂ ಕರ್ಮ ಮಾಡಿದ್ದೆನೊ | ಜನಪತಿಗಳ ಮಾತು ಕೇಳದೆ ಧರ್ಮಕ್ಕೆ | ಅನುಕೂಲನಾಗಿದ್ದೆನೊ | ಮನೆಗೆ ಬಂದತಿಥಿಗಳು ಜರಿದು ಪಿತ್ರಾದ್ಯರಿಗೆ | ಉಣಿಸಿ ಸುಖಪಡಿಸಿದ್ದೆನೊ | ವನಗಳನು ಕಡಿದು ದೇವಾಲಯವ ಕಟ್ಟಿಸಿ | ಕ್ಷಣ ಕ್ಷಣಕೆ ಅರ್ಚಿಸೆದೆನೋ ಏನೊ 2 ಉತ್ತಮನು ಮನೆಗೆ ಬಂದಾಗ ಮಾಡುವಂಥ | ಸತ್ಕರ್ಮ ತೊರೆದಿದ್ದೆನೋ | ಹೆತ್ತವರ ಬಾಂದವರ ಧನದಿಂದ ಕೆರೆ ಭಾವಿ | ಹತ್ತೆಂಟು ಕಟ್ಟಿಸಿದೆನೊ | ದತ್ತಾಪಹಾರವನು ಮಾಡಿ ಅದರಿಂದನಗ್ನಿ- ಹೋತ್ರವನು ಸಾಧಿಸೆದೆನೊ | ಇತ್ತ್ಯಧಿಕ ನಿರ್ಬೀಜ ಪಾಪಗಳನೆಸಗಿ | ಕೃ- ತಾರ್ಥನಾದೆನೊ ವಿಜಯವಿಠ್ಠಲನ್ನ ಕರುಣದಲಿ3
--------------
ವಿಜಯದಾಸ
ಆವ ಜನ್ಮದ ಪುಣ್ಯ ಫಲಿಸಿತೆನಗೆ | ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಪ ಭವರಾಸಿಗಳು ಹಾರಿ ಬಯಲಾದವು| ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ | ಪರಿ ಶುದ್ಧನಾದೆ ಗುರು ಕರುಣದಲೀ1 ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ | ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು | ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ 2 ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ | ಸೋಜಿಗವು ಬಲು ತೀವ್ರದಲಿ 3 ಭಕ್ಷ್ಯಗಳು ಮೆಲಲಾಗಿ ಭಕ್ತಿ ಪುಟ್ಟುವದಯ್ಯಾ | ಅಕ್ಷಯವಾಗುವದು ಇದ್ದ ಪುಣ್ಯ | ಮಾಳ್ಪ ಮನಸು ಪುಟ್ಟಿತು ನೋಡಾ4 ಓದನವು ಉದರದಲಿ ತುಂಬಲಾಕ್ಷಣದಲ್ಲಿ | ಜ್ಞಾನ ಬಂದೊದಗುವದು ಗುರು ಪೂರ್ಣ | ಬೋಧರಾ ಮತದಲ್ಲಿ ಲೋಲಾಡುವಾನಂದಾ 5 ದಧಿ ತಕ್ರ ಮೊದಲಾದ ವ್ಯಂಜನ ಉಣಲು | ಸತತ ದುರ್ವಿಷಯಕ್ಕೆ ಪೋಗದಲೆ ಆವಾಗ | ರತಿಪತಿಪಿತನ ಪದಸೇವೆಯೊಳಗಿಪ್ಪವೊ 6 ಕೃಷ್ಣ ಸಂದರುಶನ ಮೃಷ್ಟಾನ ಭೋಜನ | ಇಷ್ಟ ಸುಖ ಸೌಖ್ಯಕರ ಮತ್ತಾವÀಲ್ಲಿ ಕಾಣೆ | ಸೃಷ್ಟಿಗೊಡೆಯ ವಿಜಯವಿಠ್ಠಲನು ದಯವಾಗೆ 7
--------------
ವಿಜಯದಾಸ
ಆವ ಬಗೆಯಿಂದ ಸಲಿಗೆಯನಿತ್ತಿಯೊ ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಪ ಅಂದರೆ ಆನಂದ ಅನಂದದೇ ಅನಾನಂದ ನಿಂದದೆ ಗೋಕುಲ ನಿಲದದೆ ವ್ಯಾಕುಲ ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ ಮಂಧರಧರ ನಿನ್ನ ಮನಸು ಬಂದದ್ದೆ ಸರಿ 1 ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ 2 ದೆರಗಲು ಆಕ್ಷಣವೆ ಸಿದ್ಧ ಮಾಳ್ಪೆ ಕರುಣ ನಿಧಿಯೆ ನಮ್ಮ ವಿಜಯವಿಠ್ಠಲ ನಿನ್ನ ಸರಿಯಾದ ದೇವರನು ಕಾಣೆ ತ್ರಿಭುವನದಲ್ಲಿ3
--------------
ವಿಜಯದಾಸ
ಆವ ಸಾಧನದ ಗೋಜ್ಯಾಕೆ ನಿನ್ನ ಭಾವದೊಳಗೆ ಹರಿಯಿರಲಿಕ್ಕೆ ಪ ಜಾವಜಾವಕೆ ಗೋವಳರೊಡೆಯನ ಕೇವಲಭಕ್ತಿಯಿಂ ಕೂಗಲು ಸಾಲದೆ ಅ.ಪ ಎಷ್ಟು ಆಸನ್ಹಾಕಿದರೇನೋ ಬಲು ಕಷ್ಟದಿ ದೇಹದಂಡಿಸಲೇನೋ ಬೆಟ್ಟವೇರಿ ಕೂತರೆ ಏನೋ ಅನ್ನ ಬಿಟ್ಟು ಉಪವಾಸ ಮಲಗಿದರೇನೋ ಕಷ್ಟಹರಣ ಮಹ ಶಿಷ್ಟಪಾಲನೆಂದು ನಿಷ್ಠೆಯಿಂ ಭಜಿಸಲಿ ಸಾಕಾಗದೇನೋ 1 ತೊಪ್ಪಲ ತಿಂದು ಬಾಳಿದರೇನೋ ಮತ್ತು ತಿಪ್ಪೆಯೊಳಗೆ ಉಣಕೂತರೇನೊ ಕಪ್ಪೆಯಂತೆ ಜಲ ಮುಳುಗಿದರೇನೋ ಎಲೊ ಮುಪ್ಪಿನ್ಹದ್ದಿನಂತೆ ಮೇಲಕ್ಹೋದರೇನೋ ಅನುದಿನ ಮುಪ್ಪುರಾಂತಕನ ಗೌಪ್ಯದಿಂ ನೆನೆಯಲು ಸಾಕಾಗದೇನೊ 2 ಸೊಟ್ಟಿ ಹಾಕಿಕೊಂಡು ಪೋದರೇನೋ ಚರ್ಮ ಉಟ್ಟುಕೊಂಡು ತಿರುಗಿದರೇನೋ ಬಟ್ಟಿ ನುಂಗಿ ದೇಹ್ಯ ತೊಳೆದರೇನೋ ಬಲು ಕಷ್ಟದೆಷ್ಟು ಸಾಧಿಸಲೇನೋ ಕೆಟ್ಟಗುಣವ ಬಿಟ್ಟು ದಿಟ್ಟ ಶ್ರೀರಾಮನ ಗಟ್ಟ್ಯಾಗಿ ನಂಬಲು ಮುಕ್ತಿಕಾಣೊ 3
--------------
ರಾಮದಾಸರು
ಆವಿರ್ಭವಿಸಿದಳಾಗ ಜಗನ್ಮಾತೆ | ಅಖಿಲಾಂಡ ವಿಖ್ಯಾತೆ ಪ ದೇವದಾನವರು ತಾವೊಡಗೂಡುತ ಲಾವುದಧಿಯಮದಿಸÀುತ್ತಿರಲದರೊಳು ಅ.ಪ ಪೊಳೆವ ಬೆರಳುಂಗುರ ಶೋಭಿತಪಾದ | ಧರಿಸಿದ ಸುರುಚಿರ ರುಳಿಯು ಅಂದಿಗೆ ಗೆಜ್ಜೆಯ ನಾದ | ಕಟಿಯಲಿ ನೋಡೆ ಥಳಥಳವಾದ ಶೃಂಗಾರವಾದ | ಒಡ್ಯಾಣದ ಮೋದ ದಲಿ ತಾನಿಟ್ಟಿಹ ಚಲುವಿಕೆಯಿಂದಲಿ ಸಲೆ ಬೆಳಗುತಲಿ ನಳಿನಲೋಚನೊಳು 1 ಕರಿರಾಜನ ಕರದಂತೆ ಒಪ್ಪುವ ಕರವು | ಬೆರಳಲಿ ನೋಡೆ ಪರಿಶೋಭಿಸುತಿಹ ಮಾಣಿಕ್ಯದುಂಗುರವು | ರಾರಾಜಿಸುವ ಹರಡಿ ಕಂಕಣಗಳು ಬಲು ಸುರುಚಿರವು | ಪರಿಕಿಸೆ ಸುಂದರವು ಪರಿ ಸರಗಳು ಕೊರಳೊಳು ಶೋಭಿಸೆ ತರಣಿ ಕಾಂತಿಯನು ತಿರಸ್ಕರಿಸುತ್ತಲಿ 2 ಮಂದಸ್ಮಿತ ಪರಿಶೋಭಿತ ಶುಭವದನ | ಆನಂದಸದನ ಕುಂದಕುಟ್ಮಲದಂತಿಹ ಸಮರದನ | ಸಂತಾಪಾರ್ದನ ಬಂಧುರ ಚಂಪಕ ನಾಸಿಕದ ಹದನ | ಏಂ ಪೇಳಲಿ ಅದನ ಮಂದರಾದ್ರಿಧರ ಕರಿಗಿರೀಶನ ಎಂದೆಂದಗಲದ ಸುಂದರಾಬ್ಜಮುಖಿ3
--------------
ವರಾವಾಣಿರಾಮರಾಯದಾಸರು
ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆವೆ ಅದ ನಿಜಧನಾ ತಕ್ಕೊಂಬುದು ಬಲುಕಠಿಣ ಧ್ರುವ ಅದಕೊಂದದ ಉಪಾಯ ನೋಡಿ ಸದ್ಗುರುಪಾದಕ ಮನಗೂಡಿ ಒದಗಿ ಬಾಹುದು ತಾಂ ಕೈಗೂಡಿ ಇದೇ ಸಾಧಿಸಿ ಸುಖ ಸೂರ್ಯಾಡಿ 1 ಎಡಬಲಕ ತಾಂ ತುಂಬೇದ ದೃಢಮನಕ ತಾಂ ಸಿದ್ಧದ ಮೂಢಜನರಿಗಿದೇ ದೂರದ ನೋಡೇನೆಂದರ ಬಲು ಸಾರ್ಯದ 2 ಗುರುಪಾದಲ್ಯದ ಧನಸಮಸ್ತ ಅರಿತುಕೊಂಬುದು ಮನಮಾಡಿ ಸ್ವಸ್ಥ ತರಳಮಹಿಪತಿಗಿದೆ ಸುಪ್ರಸ್ತ ಗುರುನಾಥನೆ ತಾಂ ಸುವಸ್ತಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇಂದು ಸ್ತವನ ಮಾಡಿರೊ | ನಿತ್ಯ ಪ ವೈರಿ | ದಿನಾಂತ ವೃಷಭನೇರಿ | ಲಾಲಿಪ ಮಹಿಮ 1 ಸುರಜನತೆ ಪ್ರೀತ ಸರ್ವದ | ಅಸುರ ವೈರಿಯು ನೇಮದಿಂದ | ದಶರುದ್ರರೊಳು ಬಲು ಗುಣವಂತ 2 ದಕ್ಷ ಪ್ರಜೇಶ್ವರನಧ್ವರ | ರಕ್ಷಣೆ ಮಾಡಿದ ದಕ್ಷಮೂರ್ತಿ | ಮೋಕ್ಷಕೆ ಮನಸು ಕೊಡುವ | ನಿಟಲೇಕ್ಷವಂತ ಶಾಂತ 3 ಡಮರುಗ ಪಾಣಿ | ಶರಗದ್ದುಗೆ ಸುಮೇರುವೇದಾ | ತುರಗವಾಗಿರಲಂದು ಅಂದದಿ4 ಓಡಿಸಿ ಭಕುತಿಯಿಂದಲಿ | ಶಮೆ ದಮೆಯಿಂದ ಪೂಜಿಪ ಧೀರ 5
--------------
ವಿಜಯದಾಸ
ಇಂದು ಕಂಡೆ ಕಣ್ಣಾರೆ ನನ್ನ ಸ್ವಾಮಿಯ ಬಂದ ಜನ್ಮಸಾಫಲ್ಯವಾಯಿತೀಗ ಧ್ರುವ ಮುಂಬಿಗಾಗ್ಯಾವೆನ್ನೊಳು ಸುಉಲ್ಹಾಸ ಅಂಬುಜಾಕ್ಷನ ಕಂಡೆ ಸುಪ್ರಕಾಶ ತುಂಬಿತುಳುಕುತಲ್ಯದ ಬಲುಹರುಷ ಇಂಬುಸಾಲದು ಬ್ರಹ್ಮಾಂಡ ಆಕಾಶ 1 ಎನ್ನಹೃದಯ ಮಂದಿರದೊಳು ನೋಡಿ ತನ್ನಿಂದ ತಾಂ ಬಂದನು ದಯಮಾಡಿ ಕಣ್ಣುಪಾರಣೆಗೈಸಿದೆನ್ನ ಕೂಡಿ ಇನ್ನು ದಣಿಯದೆನ್ನಮನ ಕೊಂಡಾಡಿ 2 ಘನ ಸುಖದೋರುತದೆ ಎನಗಿಂದು ಭಾನುಕೋಟಿ ಉದಯವಾದನೆಂದು ದೀನ ಮಹಿಪತಿಸ್ವಾ,ಮಿ ಕೃಪಾಸಿಂಧು ಮನೋಹರ ಮಾಡಿದ ತಾನೆ ಬಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಯಲಿ ಆನಂದ ಬಂದ ನೋಡಿ ಮುಕುಂದ ಗುರುಕೃಪೆಯಿಂದ ಧ್ರುವ ಸದಮಲ ಸುಖಕಲ್ಲೋಳ ಬೆಳಗುದೋರುತಲ್ಯದೆ ಬಹಳ ಹೇಳಲಳವಲ್ಲದು ಬಲುಸೂಕ್ಷ್ಮ ತಿಳಿದವ ತಾ ವಿರಳ ಇಳೆಯೊಳು ನಿಜ ಆನಂದವು ದೋರಿತು ಸ್ವಾನುಭವಕ ಸುಕಾಲ 1 ಮಾಯವಗಂಡು ಧನ್ಯಧನ್ಯಗೈಯಿತು ಜೀವನ ತಾ ಸನ್ಮತ ಸುಖಸವಿಗೊಂಡು ಪುಣ್ಯರಥ ಪರಿಣಾಮದಲನುದಿನ ಮನಬೆರೆಯಿತು ನೆಲೆಗೊಂಡು ಸ್ಮರಣಿಯ ಸವಿದುಂಡು 2 ಸದ್ಗುರು ಎನ್ನೊಡೆಯ ಚಂದವಾಯಿತು ಆನಂದದ ಸುಖವಿದು ಮಹಿಪತಿಗೆಡೆಯಡಿಯ ಸಂದಹರೆವ ಜನ್ಮ ಮರಣದ ಹೇಳಿದ ತಾ ನಿಜನುಡಿಯ ಹೊಂದಿ ಹರುಷಬಡುವಾನಂದವುದೋರುತಿದೆ ಸಿಲುಕಡಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು