ಒಟ್ಟು 831 ಕಡೆಗಳಲ್ಲಿ , 88 ದಾಸರು , 704 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನೋಡುವ ಇಂದಿರಾಪತಿ ಶ್ರೀಪಾದವ ಎಂದೆಂದು ಬಿಡದೆ ಮನದಲಿ ತಂದೆ ಮುಕುಂದನ ಹೊಂದಿ ಭಜಿಸುವ ಧ್ರುವ ಭಾವಭಕುತಿಗಳ ವಿಡಿವ ಭವಬಂಧನದ ಪಾಶ ಕಡಿವ ದಿವಾರಾತ್ರಿಯಲಿ ಹರುಷಬಡುವ ಕಾವಕರುಣನ ಕೃಪೆಯ ಪಡೆವ 1 ಮನಕರಗಿ ಮೈಯ್ಯಮರೆವ ಘನಸುಖದ ಸುಸ್ಮರಣಿಯಲಿರುವ ಆನಂದಮಯಸ್ವರೂಪದಿ ಬೆರೆಯುವ ತನುಮನವು ಶ್ರೀಹರಿ ಗೊಪ್ಪಿಸುವ 2 ಎರಗಿ ಏಕವಾಗಿ ನೊಡುವ ಹರಿಚರಣದಿ ಬೆರೆದು ಕೊಡುವ ಪರಮಗತಿ ಸಾಯೋಜ್ಯಪಡುವ ಧರೆಯೊಳು ನಲಿ ನಲಿದಾಡುವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಹೊಂದಿಕೆಯಲ್ಲಾ ಭಕುತಿಗೆ ಪ ಗುರುವೆಂದಾಡುತ ನೆರೆನರನಂಬಿ | ಪರಗತಿ ಮಾರ್ಗವ ಎಂತು ನೀ ಕಾಂಬಿ 1 ಕಲ್ಲಿನೊಳಗ ಹರಿಭಾವಿಸಿ ನುಡಿವೀ | ಇಲ್ಲಿ ನೋಡೆಂದರ ಸಂಶಯ ಹಿಡಿವೀ 2 ನುಡಿಯಾಪಸಾರ ಸಂಗಡಿಯೊಳು ಬೆರೆದು | ಧೃಡಗೊಳ್ಳಲಿಲ್ಲ ವಿವೇಕದ ಸಂದು 3 ಹಮ್ಮಿಲಿ ಕೇಳದೇ ಜ್ಞಾನದ ಗುಟ್ಟು | ಧರ್ಮ ಜರಿದು ಜನ ಹೋಯಿತು ಕೆಟ್ಟು 4 ತಂದೆ ಮಹಿಪತಿ ಕರುಣಿಸದನಕಾ | ಎಂದಿಗೆ ದೊರೆಯದು ಸ್ವಾತ್ಮದ ಸುಖಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದುವೆ ಕೈವಲ್ಯವು | ಸದ್ಗುರುವೇ | ನಿಮ್ಮಿಂದೆವೆ ಕೈವಲ್ಯವು | ನಂದನ ಕಂದ ಮುಕುಂದನ | ಛಂದದಿ ನೆನೆವುತಾನಂದದಲಿಪ್ಪರಾ ಪ ಭಂಗ ಬಡುವಾ ಭವದಾ | ಚಿರಳಿಯೆನಿಸ್ಸಂಗ ಶಸ್ತ್ರವ ವಿಡಿದಾ | ಹಂಗವಳಿದು ದೇಹದಾ ಪ್ರಪಂಚದ ರಂಗನೊಳಗ ಬೆರೆದಾ | ಅನುದಿನ | ಮಂಗಳ ಹರಿಚರಿತಂಗಳ ಕೇಳುವಗಿಂದೇ 1 ಕಂತು ಪಿತನ ಧ್ಯಾಯಿಸೀ ಮನಸಿನಿಂದಾ | ಅಂತರಂಗದಿಪೂಜಿಸೀ | ಶಾಂತಿಯ ಗುಣ ಧರಿಸೀ | ತಂತು ವಿಡಿದು ನಿಶ್ಚಿಂತದಿ ಇಹಪರ ಭ್ರಾಂತಿಯಳಿದು ವಿಶ್ರಾಂತಿಯ ಪಡೆದವಗಿದೇ2 ಮುಂದಾಗುವ ಮುಕ್ತಿಯನು ಗುರುದಯದಿ | ಇಂದೇಕಾಣುತ ಧನ್ಯನು | ಸಂದೇಹ ವಳಿದನು ತುರ್ಯಾತೀತಾ | ವಂದಿಸಿ ಭಾವದಿ ತಂದೆ ಮಹೀಪತಿ | ದ್ವಂದ್ವ ಚರಣವನು ಹೊಂದಿದ ನಂದನಗಿದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಜ್ಞಾನವೊ ಇದೇ ಮಾನವೊ ಧ್ರುವ ಕೇಳಿ ಕೇಳಿ ಕೇಳಿ ಕೇಳುವ ಮಾತಿದು ಕೇಳಿದಂತೆ ನೀವು ಬಾಳಿ ಬಾಳಿದ ಮ್ಯಾಲಿನ್ನು ಹೇಳ್ಯಾಡುವ ಮಾತಿನ ಮೊಳೆ ಅಂಕುರನೆ ಸೀಳಿ ಒಳಿತಾಗಿದೆ ಪೂರ್ಣ ಕೇಳಿ ಕಳೆದ ದುಸ್ಸಂಗವು ಕೇಳುವನಾದರೆ ತಿಳಿಸಿಕೊಡುವನು ಗುರು ಹೇಳಿ 1 ಸೂಟಿ ತಿಳಿದು ನಿಜಧಾಟಿಗೆ ಬಂದರೆ ಕೋಟಿಗವನೇ ಒಬ್ಬ ಙÁ್ಞನಿ ನೀಟಾಗಿಹ್ಯ ಘನಕೂಟವು ತಿಳಿದರೆ ನೋಟದಲ್ಲವ ಬಲು ತ್ರಾಣಿ ನೋಟದಲ್ಲಿಹುದು ತ್ರಾಟಿವ ಬಲ್ಲನೆ ಬೂಟಕ ದೇಹಾಭಿಮಾನಿ ನಾಟಿ ಮನದೊಳು ಮಾಟಿಸಿಕೊಂಬುದು ಘಟಿಸಿತಿದೆ ಸಾಧನ 2 ನೆನೆಯಲಿಕ್ಕೆ ಮನ ಘನಬೆರದಾಡುವ ಖೂನಾಗುವದಿದೆ ರಾಜಯೋಗ ಅನುಭವಿಗಳಿಗೆ ಅನುಕೂಲವಾಗಿನ್ನು ಅನುವಾಗಿದೋರುದು ಬ್ಯಾಗ ಭಾನುಕೋಟಿತೇಜ ತಾನೆತಾನಾದನು ಎನ್ನ ಮನದೊಳು ಈಗ ದೀನ ಮಹಿಪತಿಗೆ ಸನಾಥಮಾಡುವ ಸ್ವಾನುಭವದ ಬ್ರಹ್ಮಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನಮ್ಮ ಶ್ರೀ ಹರಿ ಕೀರ್ತನಿ ಸಾಧು ಸಜ್ಜನರ ಮೃತಸಂಜೀವನಿ ಸದ್ಗೈಸುವ ದಿವ್ಯ ಸುಸಾಧನಿ ಸದ್ಗುರು ಸುಮೂರ್ತಿ ಪ್ರಾರ್ಥನಿ ಧ್ರುವ ಶಮದಮವೆಂಬೆರಡು ತಾಳಗೂಡಿ ಪ್ರೇಮ ಭಾವನೆ ಧ್ರುಪÀದಿಗಳ ಮಾಡಿ ಸಮರಸವೆ ಮೃದಂಗವಿದು ನೋಡಿ ಸಮದೃಷ್ಟಿಲಿವೆ ನಾಮ ಕೊಂಡಾಡಿ 1 ಸಾವಧಾನವೆಂಬ ನಿರೋಪಣಿ ನಿವಾಂತ ಕೇಳು ವಿಚಾರಣಿ ಈ ವಾಕ್ಯಬಲ್ಲ ಲಕ್ಷಕೊಬ್ಬ ಙÁ್ಞನಿ ಭಾವ ಬಲ್ಲುದೆ ಮುಖ್ಯ ಸಾಧನಿ 2 ಮನಸ್ವಸ್ತ ಮಾಡಿ ನೀವಿನ್ನು ಕೇಳಿ ಅನುಮಾನ ಬಿಟ್ಟಿ ಇಕ್ಕಿ ಚಪ್ಪಾಳಿ ಗನಗುರು ಪಾದದಲ್ಯೊಮ್ಮೆ ಹೊರಳಿ ಹಣಿಗ್ಹಚ್ಚಿಕೊಂಬಾ ಗುರುಪಾದಧೂಳಿ 3 ಚಿತ್ತ ಚಂಚಲಾಗ ಬಾರದು ನೋಡಿ ವಸ್ತು ಬಾಹುದು ಬ್ಯಾಗೆ ಕೈಗೂಡಿ ಮಿಥ್ಯಾ ಪ್ರಪಂಚ ಈಡ್ಯಾಡಿ ನಿತ್ಯ ನಿರ್ಗುಣಾನಂದ ಸ್ತುತಿಪಾಡಿ 4 ಪುಣ್ಯಕೀರ್ತನೆ ಕೇಳಿ ಸಂಭ್ರಮ ಧನ್ಯ ಧನ್ಯ ಕೇಳಿದವರ ಜನ್ಮ ಕಣ್ಣಾರೆ ಕಾಂಬುವ ನಿಜವರ್ಮ ಚಿಣ್ಣ ಮಹಿಪತಿಗಾನಂದೋ ಬ್ರಹ್ಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಬಂದದಾ ಖೂನವು | ಇದೇವೆ ಸಾರ್ಥಕ ಜನುಮವು ಪ ಹೊತ್ತು ಹೋಗದ ಬೀದಿ ಮಾತುಗಳಾಡದೆ ಚಿತ್ತಕ ಆಲೇಶ ತರಗುಡನು ಉತ್ತಮರೊಳುಕೂಡಿ ಶ್ರೀಹರಿ ಮಹಿಮೆಯಾ ನಿತ್ಯ ಕಥಾಮೃತ ಸೇವಿಪನು 1 ಹಾಲವನೆರೆದರೆ ಸರಕನೆ ಕುಡಿಯದ ಬಾಲಕನಂದದಿ ಈ ಮನವು ಕಾಲಕಾಲಕ ಸದ್ಭೋದವ ಕೇಳಿಸಿ ಮ್ಯಾಲ ಸ್ವಹಿತ ಕೊಡುವನು 2 ಉದರದ ಧಾವತಿಗನುದಿನ ಬೆರತಿರ ಇದರೊಳಗೆಚ್ಚರ ಹಿಡಿದಿಹನು ಮದಮತ್ಸರಳಿದು ಗುರುಮಹಿಪತಿ ಪದ ಪದುಮದಹಿಷ್ಠೆಯ ಜಡಿದಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದ್ರಲೋಕವ ಪೋಲ್ವ ದ್ವಾರಕೆಯಿಂದ ನಮ್ಮನು ಸಲಹಲೋಸುಗಸಿಂಧುವಿನ ಮಾರ್ಗದಲಿ ತೌಳವ ಜನರ ದೇಶಕ್ಕೆಬಂದು ಮಧ್ವಾಚಾರ್ಯರ ಕೈ-ಯಿಂದ ಪೂಜೆಯಗೊಂಬ ಕೃಷ್ಣನಮಂದಹಾಸದ ಮುದ್ದುಮೊಗ ಸೇವಿಪಗೆ ಸಂಪದವು1 ಪಾದ ಮನೋಹರೋರುದ್ವಂದ್ವ ಶ್ರೀಕೃಷ್ಣನ ಮೂರ್ತಿಯ ನೋಳ್ಪರ ನಯನ ಸುಕೃತಫಲ2 ನಿತ್ಯದಲಿ ಗೋಘೃತದ ಮಜ್ಜನಮತ್ತೆ ಸೂಕ್ತ ಸ್ನಾನ ತದನು ಪ-ವಿತ್ರ ಮಂತ್ರ ವಿಚಿತ್ರ ತರವಹ ಕಲಶದಭಿಷೇಕವಸ್ತ್ರಗಂಧ ವಿಭೂಷಣಂಗಳವಿಸ್ತರಿಪ ಶ್ರೀತುಲಸಿ ಪುಷ್ಪದಿಭಕ್ತಿಭರಿತರು ಮಾಡುವಾರಾಧನೆಯನೇನೆಂಬೆ 3 ಸುತ್ತ ಸುಪ್ತಾವರಣದರ್ಚನೆವಿಸ್ತರಿಪ ಸ್ತೋತ್ರಗಳ ಗಾನ ವಿ-ಚಿತ್ರರ ನೈವೇದ್ಯವು ಸುವೀಳೆಯ ಧೂಪ ದೀಪಗಳುರತ್ನದಾರ್ತಿಗಳ ಸಂಭ್ರಮಛತ್ರ ಚಾಮರ ನೃತ್ಯಗೀತಾ-ದ್ಯುತ್ಸವಗಳೊಪ್ಪಿಹವು ದೇವನ ಮುಂದೆ ದಿನದಿನದಿ 4 ಅಪ್ಪಮೊದಲಾದಮಲ ಭಕ್ಷ್ಯವತುಪ್ಪ ಬೆರೆಸಿದ ಪಾಯಸವ ಸವಿ-ದೊಳ್ಪ ಶಾಕಗುಡಂಗಳನು ಕಂದರ್ಪನಪ್ಪನಿಗೆಅರ್ಪಿಸುವರನುದಿನದಿ ರಸ ಕೂ-ಡಿಪ್ಪ ಪಕ್ವಫಲಾದಿಗಳು ರಮೆಯಪ್ಪಿಕೊಂಡಿಪ್ರ್ಪಚ್ಯುತಗೆ ಪೂಜಿಸುವ ಯೋಗಿಗಳು 5 ಸಿರಿ ನೆಲಸಿಹುದು ಶ್ರೀಕೃಷ್ಣನ ಮನೆ ಶೃಂಗಾರ 6 ಶುಭ ವಾಕ್ಯಗಳ ನಮಗೆನಿಷ್ಠಸುಜನರು ತಟ್ಟನೆ ಮನ-ಮುಟ್ಟಿ ನೆನೆವರಿಗಿಷ್ಟ ಅಖಿಳವಕೊಟ್ಟು ಸಲಹದೆ ಸೃಷ್ಟಿಯೊಳು ನೀಗಿಪ್ಪೊ ಗುಣಪುಷ್ಪ 7 ಏನನೆಂಬೆನು ಕೃಷ್ಣ ದೀನರ ದೊರೆಯು ನೀನೆಂದಾದ ಕಾರಣಮಾನವರ ಸುರಧೆÉೀನುತನ ನಿನಗಿಂದು ಸೇರಿತಲಹೀನತೆಯ ಪರಿಹರಿಸಿ ಭಾಗ್ಯಾಂಭೋನಿಧಿಯೆ ನಿಜರ್ಗೀವ ನಿನ್ನ ಮ-ಹಾನುಭಾವದ ಬಲುಮೆಗೆಣೆಗಾಣೆನು ಮಹಾಪ್ರಭುವೆ 8 ಭಾಪು ದಿವಿಜರ ದೇವರಾಯನೆಭಾಪು ಭಜಕರಅಭೀಷ್ಟವೀವನೆಭಾಪು ಹರಿನೀಲೋತ್ಪಲನೆ ಶ್ಯಾಮಲನೆ ಕೋಮಲನೆಭಾಪು ಹಯವದನಾಖಿಲೇಶನೆಭಾಪು ಸುಜನರ ಪಾಪ ನಾಶನೆಭಾಪು ಕೃಷ್ಣಾಲಸತ್ರೈಪಾಲಕನೆ ಬಾಲಕನೆ 9
--------------
ವಾದಿರಾಜ
ಇನಿಯಗೆನ್ನೊಡನೆ ಮುನಿಸೋ ಪ್ರೀತಿಯೋ ಪೇಳೆವನಜಾಕ್ಷಿಯವನೆಸಗಿದುದಾ ಪೇಳ್ವೆನೆ ಪ ಮೃಗಮದ ತಿಲಕವ ಪಣೆಗೆ ತಾನಿಡಲಿಲ್ಲಅಗಿಲುಗಂಧವ ಮೈಗೆ ತೀಡಲಿಲ್ಲ ಸೊಗಸು ಸಂಪಿಗೆ ಸರವಮುಡಿಸಿ ಝಗಝಗಿಪ ಮುತ್ತಿನ ಸರವಹಾಕದೆ ಎನ್ನ ಮುಗುಳು ಮೊಲೆಗೆಸೆಳ್ಳುಗುರಿಕ್ಕದಿದ್ದ ಮೇಲೆ1 ಗುರುಕುಚರ್ಚಿತ ಮೃಗಮದ ಪತ್ರವ ಸೆರಗಿನಿಂದೊರಸಿದನೆಕುಂಕುಮಗಂಧವ ಭರದಿ ಲೇಪಿಸಿದನೆ ತಾನೆತಾಂಬೂಲವ ಹರುಷದಿ ಕರದಿತ್ತನೆಆಲಿಂಗಿಸಿ ಪರಮ ಸಂತೋಷದಿ ತಿರುಗಿ ನೋಡಿದನೆ 2 ಧರಿಸಿದ ಮಿಸುನಿಯ ಆಭರಣಂಗಳ ಭರದಿಂದ ತೆಗೆದ ತಾನೆಚಿನ್ನದುಂಗುರವ ಬೆರಳಿಗೆ ನಲಿದಿಟ್ಟನೆತರುಣಿ ಬಾರೆಂದು ನಂಬುಗೆಗೊಟ್ಟನೆಶ್ರೀ ಕೆಳದಿಯ ಪುರದ ರಾಮೇಶ ಎನ್ನನೆರೆದು ಮನ್ನಿಸಿದನೆ3
--------------
ಕೆಳದಿ ವೆಂಕಣ್ಣ ಕವಿ
ಇನ್ನಾರ ಭಜಿಸಲೈಯ್ಯಾ|ಯನ್ನ ಗತಿ ಮುಕುತಿದಾಯಕ ರಂಗ ನೀನಿರಲು ಪ ಸ್ನಾನಪಾನಕಬಪ್ಪ ಸುರನದಿಯನೇ ತ್ಯಜಿಸಿ ಹೀನ ಸರಿತೆಗಳಲ್ಲಿ ಮುಣುಗುವರೇ ಏನ ಬೇಡಿದ ನೀವ ಸುರ ಭೂಜ ಇದಿರಿಡಲು ಕಾನನದ ಶಾಲ್ಮಲಿಯ ಫಲವ ನರಸುವಂತೆ 1 ಕಾಮಧೇನು ಮನಿಗೆ ಬರಲು ಕರೆ ಕೊಳ್ಳದೇ ಆ ಮೊಲದ ಹಾಲವನು ಬಯಸುವಂತೆ ಕಾಮಿತಾರ್ಥವ ನೀವ ಚಿಂತಾ ಮಣಿಯಿರಲು ಪ್ರೇಮದಿಂದಲಿ ಕಾಜು ಮಣಿಯ ನರಸುವಂತೆ2 ತಾಯ ಮಾರಿಯ ತೋತ್ತು ಕೊಂಬಂತೆ ಸಿರಿಯಸುಖ ದಾಯಕ ನಿನ್ನ ಮರದನ್ಯಕೆರಗೀ ಹೇಯ ವೃತ್ತಿಗೆ ಬೆರೆವದುಂಟೇ ನಿನ್ನವನೆನಿಸಿಕಾಯೋ ಭಕುತಿಯ ನಿತ್ತು ಗುರು ಮಹಿಪತಿ ಸ್ವಾಮಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಲ್ಲೆವೆ ನಿಧಾನವು ಶ್ರೀಗುರುವೆ ನಿಮ್ಮಲ್ಲೆವೆ ನಿಧಾನವು ಎಲ್ಲರಿಗಿದು ತಾ ದುರ್ಲಭವಾಗಿಹ್ಯ ಸುಲಭದಲಿ ಒಲಿದಿಹ್ಯ ಸದ್ಗುರು ನಮಗಿಲ್ಲೆ ನಿಧಾನವು ಧ್ರುವ ಪಾದ ಪದ್ಮವ ತಿಳಿದು ವೇದಕಗೋಚರವು ಸದ್ಗತಿ ಸುಖ ಸಾಧಿಸುವವ ಧನ್ಯನು ಶೋಧಿಸಿ ಅತ್ಮದಿ ಬೋಧೆಯಲಿ ನಿಜ ಅದಿತತ್ವದ ಗತಿ ಭೇದಿಸಿ ತಿಳಿದವಗಿಲ್ಲಿವೆ 1 ಖುಲ್ಲ ಮನುಜರಿಗಿದು ತಿಳಿಯದೆ ಇಲ್ಲದಂತಾಗಿಹುದು ಎಲ್ಲಾ ದೈವದ ಮೂಲವು ಬಲ್ಲವಗಿದು ಸೊಲ್ಲಿನೊಳಗಿಹುದು ಕಲ್ಲಿನೊಳಿಹ ದೈವಿಲ್ಲವೆ ಇಹ್ಯ ಪ್ರಾಣದೊಲ್ಲಭ ಗುರುನೆಂದಿಲ್ಲೆವೆ ತಿಳಿದುವಗಿಲ್ಲೆವೆ 2 ಸುತ್ತೇಳು ಸಾಗರದ ಪೃಥ್ವಿಲಿಹ್ಯ ನಿತ್ಯವುಳ್ಳ ದೈವೀತನು ಸುತ್ತ ಸನಕಾದಿಗಳು ಮತ್ತೆ ದೇವರು ತೆತ್ತೀಸ ಕೋಟಿಗಳು ಹತ್ತಿಲೆ ಹೊಳೆಯುತ್ತ ಚಿತ್ತದ ತುದಿಯಲಿ ಸತ್ಯಕೈಲಾಸವೆ ಇತ್ತ ವೈಕುಂಠವು ಇಲ್ಲೆವೆ 3 ಕಾಶಿ ರಾಮೇಶ್ವರವು ಸಕಲ ಕ್ಷೇತ್ರವಾಸವಾಗಿಲ್ಲಿಹವು ದೋಷನಾಶನ ಕೃಷ್ಣೆಯು ಮಿಗಿಲಾದ ಏಸು ತೀರ್ಥಗಳಿಹ್ಯವು ವಾಸವಾಗಿಹವು ಸೂಸುತ ನದಿಗಳು ಈಶನ ಚರಣದಲಿ ಭಾಸುದು ಕಂಡವಗಿಲ್ಲೆವೆ 4 ಚೆಂದುಳ್ಳ ದ್ವಾರಕೆಯು ಗೋಕುಲ ವೃಂದಾವನ ಕುರುಕ್ಷೇತ್ರವು ಒಂದೊಂದೇ ಕ್ಷೇತ್ರದಲಿ ವಾಸವಾಗಿ ನಿಂದು ಮಾಡಿದ ಪುಣ್ಯವು ಹಿಂದಿನ ಕರ್ಮವು ಹೊಂದದೆ ಗಳಿಸುವ ಮಂದಾಕಿನಿ ನದಿಯಿಂದ ಫಲಿಲ್ಲಿವೆ 5 ಬ್ರಹ್ಮಾಂಡ ನಾಯಕನು ಅದ್ವೈತ ಸುಖವು ಉಂಡವಗಿದು ಪಿಂಡ ಬ್ರಹ್ಮಾಂಡೈಕ್ಯವು ಮಂಡಲದೊಳು ಪಿಂಡಾಂಡದಿ ಕಂಡವಗಿಲ್ಲ್ಲೆವೆ 6 ಸಂದೇಹ ವೃತ್ತಿ ಹರಿದು ಸದಮಲಾನಂದ ಮುಕ್ತಿಯಲಿ ಬೆರೆದು ಒಂದು ಪಥsÀವನರಿದು ಜಗದೊಳು ದ್ವಂದ್ವಗಳನೆ ಮರೆದು ಎಂದಿಗಗಲದಂತೆ ಶ್ರೀಪಾದವನಿಂದ ಮಹಿಪತಿಗೆ ಇಲ್ಲೆವೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವನಾರೆ ಮನಸೂರೆಗೈದೋಡುವಾ ನವನೀತ ಮೆಲುವಾತ ಪರಿದೋಡುವಾ ಪ ಸವಿನೋಟ ರಸದೂಟವನೆ ಬೀರುವ ಸುವಿಲಾಸ ಪರಿಹಾಸಗಳ ತೋರುವ ಅ.ಪ ಓರೆನೋಟವ ತೋರುತ ನಲಿವ ಕ್ಷೀರವ ಕುಡಿವ ಬೆರಳಲಿ ಕರೆವ ಕೊರಳಿನ ಹಾರವ ಎಡಬಲಕೆಳೆವ ಕೊರಳನು ಕೊಂಕಿಸಿ ಪರಿಪರಿ ಕುಣಿವ 1 ನೀರಜನೇತ್ರನು ನೀರದ ಗಾತ್ರನು ನಾರಿಯತನುವನು ಬರಸೆಳೆಯುವನು ಚೋರನು ಭವಭಯಹಾರನು ಧೀರನು ಶ್ರೀರಮೆಯರಸನು ಮಾಂಗಿರಿವರನು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇವರೆವೆ ಧನ್ಯರಲ್ಲವೆ ಈ ಶರಣರು | ಈ ಶರಣರು | ಇವರೆವೆ ಧನ್ಯರಲ್ಲವೆ ಅವನಿಲಿ ಶರಣರು ಪ ಕರುಣಾನಂದವ ಪಡೆದು | ತರಣೋಪಾಯವನರಿದು | ಜರಿವನ್ಯ ಹಂಬಲವ ಬೆರೆದು | ಭಕ್ತಿರಸದೊಳು | ನಿರಪೇಕ್ಷ ವೃತ್ತಿಯಿಂದಾ | ಚರರಿಸುತಿಹ ಶರಣರು 1 ಭವ ಕಾನನವನೆ ತೊರೆವಾ | ನಿತ್ಯ ತಾನಾರೆಂಬುದು ನರಿವಾ | ಸ್ವಾನಂದಬೋಧವನು ಮಾನ | ನೀಗಿ ಶ್ರವಣದಿ | ಸಾನುರಾಗದಲಿಂದ ತಾನುಂಬ ಶರಣರು 2 ಹರಿಯಲ್ಲರೊಳಗರಿದು | ಶರೀರ ಭಾವನೆ ಮರೆದು | ಹರುಷದ ಗುಡಿಗಟ್ಟಿಬರುವ | ನಯನೋದಕದಿ | ಗುರುಮಹಿಪತಿಸ್ವಾಮಿ ಚರಣದ ಶರಣರು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಷ್ಟೇ ದಯ ಮಾಡಬಾರದೇ ಸೃಷ್ಟಿಕರ್ತಾ ಜಗದ್ರಕ್ಷಾ ವಿಶ್ವನಾಥಾ ಇಷ್ಟೇ ದಯ ಮಾಡಬಾರದೇ ಪ ದುಷ್ಟ ವಿಷಯದೊಳಗೆ ಬೆರೆತೆ ಸೃಷ್ಟೀಶ ನಿನ್ನನೆ ಮರೆತೆ ಭ್ರಷ್ಟ ಮನವನಳಿದು ನಿನ್ನಿಷ್ಟ ಭಕ್ತರೊಳಗೆ ದುಡಿಸುನಿ 1 ನಿನ್ನದೆಂಬಿ ಮರುಳು ಹಿಡಿದು ಅನ್ನಿಗರನು ಕಾಡಿ ತರಿದು ಕುನ್ನಿಮನುಜನಂತೆ ಬಾಳ್ದೆ ಘನ್ನನೆ ರಕ್ಷಿಸು ನಾ ಬೇಡ್ವೆ 2 ಕಾಲ ಕಳೆದೆ ಪರರ ಬೇಡಿ ಹೊಟ್ಟೆ ಪೊರೆದೆ ನರಸಿಂಹವಿಠ್ಠಲನರಿಯದೆ ಕರುಣಾನಿಧಿ ಬೇಡದೆ ಪೋದೆ 3
--------------
ನರಸಿಂಹವಿಠಲರು