ಒಟ್ಟು 238 ಕಡೆಗಳಲ್ಲಿ , 61 ದಾಸರು , 204 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡುವೆ ನೋಟದಲಿ ನೋಡುವೆ ನೋಟದಲಿ ಪ ಗಂಗೆ ಯಮುನೆಗಳ ಸಂಗಮದೀ ಮಿಂದು ಅಂಗ ಸಂಗ ರಹಿತಾಂಗನದೇ ಮಂಗಳಾಂಗ ದಿವ್ಯಾಂಗಪೂಜೆಯ ಮಾಡಿ ರಂಗ ಮಂಟಪ ಪಾಂಡುರಂಗನಿಗೆ 1 ಈಡೆ ಪಿಂಗಳೆಗಳ ಜೋಡುಗೂಡಿ ಮೂಡು ರವಿಶಶಿ ಸೂಡಿ ಮಧ್ಯಿರುವಾಗ್ನಿ ಗೂಡಿನೋಳಾಡುವಜೀವನ ವಿಚಾರೋನ್ಮೂರ್ತಿಗೆ 2 ಹೃದಯದಿ ಬೆರಿತು ಹಂಸನ ಭರದಿ ತಿರುಗಿತಲೆರಡೊಂದೊಂಕಾರದಿ ಎರಕವಾಗಿ ಸಸ್ವರದಿ ಮನ ಪರಮ ಪುರುಷ ದಿವ್ಯಾಂಗನಿಗೆ 3 ಒಳಹೊರಗೊಂದಾಗಿ ದೇವಾ ಸುಲಭದಿ ಭಕ್ತರ ಸುಖವೀವಾ ಬೆಳಗುವ ನಲಿನಲಿದಾಡಿ4 ಆರು ಚಕ್ರಗಳ ಮೀರಿ ಮುಂದಣ ಸಣ್ಣ ದಾರಿಹಿಡಿದು ಹಿಂದಕೆ ನಡೆದು ತೋರುವ ಪರಿಪೂರ್ಣ ತಾರಕ ಬ್ರಹ್ಮನ ಸೇರಿ ನಿರ್ಬಯಲಾ ಚಿದ್ರೂಪಗೆ 5 ಅಂತರ್ಯಾಮಿ ಪೂರ್ಣಾಂತರದಿ ಮೂರ್ತಿ ಹೃದಯಾಂತರದಿ ಸಂತ ಸಾಧು ನಿಜ ಶಾಂತಿ ಪಾಲಿಪ ಗುರು ಚಿಂತೆರಹಿತ ನಿಶ್ಚಿಂತದಲಿ 6
--------------
ಶಾಂತಿಬಾಯಿ
ಪಂಚರೂಪಾತ್ಮಕ ನೀನೇ ಈ ಪಾಂಚಭೌತಿಕ ದೇಹದಿ ಸಂಚರಿಸೂವೆ ಪ ಸ್ಥೂಲರಸವನು ಇತ್ತು ಸಲಹೂವೆ ಅ.ಪ ರಸಪಾಯುಆಪಜಿಹೆÀ್ವನಾಸಿಕ ಗಂಧ ಪೃಥುವಿ ಉಪಸ್ಥಯುಕ್ತ ಕೋಶವಹುದಯ್ಯ ಆ ಶನೈಶ್ವರ ವರುಣ ಭೂದೇವಿಯಿಂದಲಿ ಸೇವಿಪ ಸತತ ಲೇಶವಾದರು ಬಿಡದೆ ತಾ ಖಂಡಾಖಂಡ ರೂಪದಿ ದೇಶ ಕಾಲಗಳಲ್ಲಿ ನೆಲೆಸಿ ಕೋಶಕಾರ್ಯವ ಗೈವೆ ಪ್ರಾಣನಿಂ ಉಭಯಪಕ್ಷಗಳು ಧೇನಿಸುತಿಹರು ಭುಜದ್ವಯ ಶ್ರೀಶ ನಿನ್ನಯ ಮಧ್ಯದೇಶವೆ ಈ ಶರೀರದÀ ಮಧ್ಯಭಾಗವು ಪ್ರಸಿದ್ಧ ಪುರುಷನೆ ನಿನ್ನಿಂದೋಷಧಿಗಳು ಓಷಧಿಗಳಿಂದನ್ನವೆಲ್ಲವು ಪೋಷಣೆ ಎಲ್ಲ ಅನ್ನದಿಂದಲೆ ದೋಷದೂರ ನೀನನ್ನದನ್ನದಾ1 ಪಾಣಿತ್ವಗ್ವಾಯು ಸ್ಪರ್ಶ ನೇತ್ರ ತೇಜ ಪಾದರೂಪಗಳಿಂದಲಿ ಕಾಣಿಸಿಕೊಳ್ಳುವುದು ಪ್ರಾಣಮಯದ ಕೋಶವು ತಾನಲ್ಲಿಹ ಪ್ರದ್ಯುಮ್ನ ಮೂರುತಿ ಸತತ-ಗಣಪತಿ ಅಗ್ನಿ ವಾಯು ಮರೀಚಿಗಳೆಲ್ಲರೂ ಸನ್ನುತಿಪರೋ ಪ್ರಾಣಾಧಾರನಾಗಿಹೆ ತ್ರಾಣ ನಿನ್ನಿಂದ ಸ್ಥೂಲದೇಹಕೆ ಅ- ಪಾನ ನಿಂದೊಡಗೂಡಿ ನೆಲೆಸಿಹೆ ಪ್ರಾಣಪತಿ ಪ್ರದ್ಯುಮ್ನ ನಿನ್ನಯ ಶಿರದ ಸ್ಥಾನವು ಪ್ರಾಣನಲ್ಲಿಹುದೋ ದಕ್ಷಿಣೋತ್ತರಪಕ್ಷವಿರುತಿಹುದೋ ಕಾಣಿಪುದು ಮಧ್ಯದೇಶವು ಆಗಸದೊಳು ಉ- ದಾನ ವಾಯುವಿನಲ್ಲಿ ಇರುತಿಹುದೋ ಧೇನಿಪೋರು ಪೃಥುವಿಯು ಪಾದವೆಂಬುದು ಸ- ಮಾನ ವಾಯುವಿನಲಿ ಇರುತಿಹುದು ಜ್ಞಾನ ರೂಪದಿ ಈ ಪರಿಯಲಿ ರೂಪವಿರುತಿಹುದು ಪ್ರಾಣಿಗಳಿಗಾಯುಷ್ಯವಿತ್ತು ಪ್ರಾಣಪ್ರೇರಕನಾಗಿ ಪೊರೆಯುವೆ ಪ್ರಾಣಧಾರಣೆ ನಿನ್ನದಯ್ಯಾ ಪ್ರಾಣನುತ ಪ್ರದ್ಯುಮ್ನಮೂರುತೆ2 ತತ್ವಯುತವಾಕ್ಯೋಕ್ತಾಗಸ ಶಬ್ದ ಈತೆರ ಯುಕ್ತವಾದೀ ಕೋಶವು ಇದಕೆ ಖ್ಯಾತವಾದ ಮನೋಮಯ ಕೋಶದೊಳು ಸತತ ರುದ್ರೇಂದ್ರಾದಿ ಸುರರೆಲ್ಲರು ವಂದಿಸುತಿಹರು ಖ್ಯಾತ ಸಂಕÀರುಷಣನೆ ಖಂಡಾಖಂಡರೂಪದಿ ನೆಲೆಸಿ ಕೋಶದಿ ಪ್ರೀತಿಯಿಂದಲಿ ವ್ಯಾನನೊಡಗೂಡಿ ನೀನೆ ಯಜ್ಞಭುಕುವು ಯಜುರ್ವೇದವೆ ನಿನ್ನ ಶಿರವಹುದು ಶ್ರುತಿಗಳೊಳು ಭುಜದ್ವಯಂಗಳಾಗಿಹುದು ನುತಿಪ ಪಾಂಚರಾತ್ರಾಗಮ ವೆಂಬುದೆ ನಾಮಕಂಗಳೆನಿಪುದೆ ನಿನ್ನ ಪಾದದ್ವಯಂಗಳು ಖ್ಯಾತ ನಿನ್ನಯ ರೂಪ ಮಹಿಮೆಯ ತಿಳಿಯಲಸದಳವೋ ಜಾತರಹಿತ ನಿನ್ನ ವರ್ಣಿಸೆ ಮಾತು ಮನಸಿಗೆ ನಿಲುಕದಂತಿಹೆ ಖ್ಯಾತ ನೀನಹುದೊ ಮನೋಮಯ ಪ್ರೀತಿಯಿಂದಲಿ ಸಲಹೋ ಎನ್ನನು 3 ಮಹತ್ತತ್ವ ಪ್ರಾಚುರ್ಯದಿಂದಿಹ ಈ ವಿಜ್ಞಾನಮಯಕೋಶದಿ ಶ್ರೀಹರಿ ವಾಸುದೇವಾ ನೀನೆ ನೆಲೆಸಿಹೆ ಅಹರಹ ಬ್ರಹ್ಮ ವಾಯುಗಳಿಂದಲಿ ಮಹಾಪೂಜೆ ವಂದನೆಗೊಳುತಿಹೆ- ಖಂಡಾಖಂಡದಿ ತುಂಬಿಹೆ ದೇಹದೊಳು ಉದಾನನಿಂದೊಡಗೂಡಿ ಸಹಾಯನಾಗಿಹೆ ಜೀವಿಗಳಿಗೆ ಬಾಹ ದುರಿತದಿಂ ಪಾರುಗಾಣಿಸೋ ದೇಹ ದೇಹಿಯ ರೂಪ ನೀ ಸ್ವಗತಭೇದವಿವರ್ಜಿತನೆ ಶಿರವೆ ನಿನ್ನಯ ಶ್ರದ್ಧವೆಂಬೊರು ಮಹಾ ಭುಜಂಗಳೆ ಋತುಸತ್ ಎಂದೆನಿಸಿಕೊಳುತಿಹುದು ಇಹುದು ಮಧ್ಯದೇಶವೆ ಜಗಕೆ ಆಶ್ರಯವೆನಿಪ ಯೋಗಾವು ಮಹವೆಂಬುದೆ ಪಾದವೆನಿಸಿತು ಸೂರ್ಯತೇಜದೊಳು ಮಹಾ ಪ್ರಳಯದಿ ಉದರದೊಳಿಟ್ಟು ಇಹಪರದಿ ರಕ್ಷಿಸುವೆ ದೇವ4 ನಂದಮಯ ಕೋಶವು ತನ್ಮಯ ಅವ್ಯಕ್ತತತ್ವದಿಂದಲಿ ನನ್ನೀಯಿಂದ ಆನಂದಮಯ ಮೂರುತಿ ನಾರಾಯಣನೀ ಕೋಶಾಂತರ್ಗತನು ನೀನೆ ಸಮಾನನೊಡಗೂಡಿಹೆ ಅನಾದಿಲಿಂಗವ ಭಂಗಗೈಸುವಳೋ ಘನಮಹಿಮ ನಿನ್ನ ಅನುಸರಿಸಿ ತಾನಿಪ್ಪಳೋ ಛಿನ್ನ ಭಕ್ತರಿಗೊಲಿಯಳೋ ಅವಿ ಚ್ಛಿನ್ನ ಭಕ್ತರ ಜನನಿ ಎನಿಪಳೋ ಪ್ರಾಪ್ಯನು ಎಂದು ಪ್ರಿಯವೆಂದು ಘನ ದಕ್ಷಿಣೋತ್ತರ ಪಕ್ಷವೆನಿಪೋವು ತನ್ನ ಮಧ್ಯದ ಪ್ರದೇಶವೆಂಬೋದು ಜ್ಞಾನ ಸುಖ ಆನಂದ ಪಾದಗಳು ಬ್ರಹ್ಮನಾಮಕ ವಾಯುವೆಂಬುವರೋ ಆನಂದಮೂರುತಿ ಮಹಿಮೆ ಎಂತಿಹುದೋ ಭಿನ್ನನಾಮದಿ ಕರೆಸುತಲಿ ತಾ ಅ ಭಿನ್ನನಾಗಿ ಚರಿಸಿ ಕೋಶದಿ ಘನಕಾರ್ಯವ ನಡೆಸುತಿರ್ಪೆ ಪನ್ನಗಾದ್ರಿ ಶ್ರೀ ವೇಂಕಟೇಶನೆ 5
--------------
ಉರಗಾದ್ರಿವಾಸವಿಠಲದಾಸರು
ಪರಮ ಪದವಿಯೆ ಶ್ರೀರಂಗಂಪರವಾಸುದೇವರೆ ಶ್ರೀರಂಗಂ ಪ ವೇದನಾಲ್ಕು ಶೃಂಗಾರವಾದಓಂಕಾರ ವಿಮಾನವೆ ಶ್ರೀರಂಗಂಸಾಧಿಸಿ ಪೂರ್ವಾಚಾರ್ಯರು ನೆಲಸಿಹಆದಿ ವಿಮಾನವೆ ಶ್ರೀರಂಗಂ 1 ಸತ್ಯಲೋಕದಲಿ ಬ್ರಹ್ಮನು ಪೂಜಿಪವಸ್ತು ವಿಮಾನವೆ ಶ್ರೀರಂಗಂಭಕ್ತಿಗೆ ಇಕ್ಷ್ವಾಕುರಾಯಗೊಲಿದು ಬಂದಉತ್ತಮಾಯೋಧ್ಯವೆ ಶ್ರೀರಂಗಂ2 ತ್ರೇತಾಯುಗದಿ ವಿಭೀಷಣನಿಗೆ ರಘುನಾಥನು ಕೃಪೆ ಇತ್ತ ಶ್ರೀರಂಗಂಪ್ರೀತಿಸಿ ದಕ್ಷಿಣಭೂಮಿಯೊಳಗೆ ರಂಗನಾಥ ನೆಲಸಿಹ ಶ್ರೀರಂಗಂ 3 ಮುನ್ನ ಕಾವೇರಿ ಉಭಯ ಮಧ್ಯದೊಳಿನ್ನು ಶೋಭಿಪುದೆ ಶ್ರೀರಂಗಂಸನ್ನುತ ಭಕ್ತರ ಸಲಹುವ ಬಿರುದಿನೊಳಿನ್ನು ತೋರುವುದೆ ಶ್ರೀರಂಗಂ4 ಶೇಷನ ಮೇಲೆ ಪವಳಿಸಿ ಲಂಕಾದೇಶವ ನೋಡುವ ಶ್ರೀರಂಗಂಶ್ರೀಸಿರಿನಾಯಕೀ ರಮಣಕೇಶವರಾಯರ ಮಹಿಮೆಯೆ ಶ್ರೀರಂಗಂ 5
--------------
ಕನಕದಾಸ
ಪವನಾಂತರ್ಗತ ಹರಿಯ ಸ್ಮರಣೆಯಮಾಡಿ ಪ ವಿವಿಧ ಭಕುತರು ಕೂಡಿ ಹರುಷದಿ ಪ್ಲವನಾಮ ಸಂವತ್ಸರದಲಿ ಸವಿನಯದಿ ಭಜನೆಗಳ ಮಾಳ್ಪರು ಹರಿಯ ಗುಣ ಕಾರ್ಯಗಳ ಸ್ಮರಣೆಯ ಅ.ಪ ಪಕ್ಷಿವಾಹನ ಹರಿಯು ಶ್ರೀ ಲಕುಮಿದೇವಿಯ ಲೆಕ್ಕಿಸದಿಹನಂತೆ ಹೀಗಿರಲು ಬ್ರಹ್ಮನ ಪೊಕ್ಕುಳಲಿ ಪಡೆದನಂತೆ ಸೊಕ್ಕಿದ ಅಸುರರನು ಬಡಿಯಲು ಮಿಕ್ಕ ಸುರರನು ಪೊರೆಯಲೋಸುಗ ರಕ್ಕಸಾಂತಕ ಹರುಷದಿಂದಲಿ ಚೊಕ್ಕ ಸ್ತ್ರೀ ರೂಪಾದನಂತೆ 1 ಇಂದುಶೇಖರ ಕೇಳಿದ ಸ್ತ್ರೀರೂಪ ನೋಡಲು ಬಂದು ಬೇಡಿದನಂತೆ ಅದು ಕೇಳಿ ಶ್ರೀಶನು ಸುಂದರ ಸ್ತ್ರೀಯಾದನಂತೆ ನಿಂದು ನೋಡುತ ಚಂದ್ರಶೇಖರ ಮಂದಹಾಸದಿ ಪಿಡಿಪೋದನಂತೆ ಮಂದಗಮನೆಯು ಸಿಗದೆ ದೂರದಿ ನಿಂದು ಕಣ್ಮರೆಯಾದಳಂತೆ2 ವಿಸ್ಮಯವಾದನಂತೇ ಪಶುಪತಿಯ ಸಿರದಲಿ ಹಸ್ತ ನೀಡಿದನಂತೇ ಮತ್ತೆ ರಕ್ಷಕರಿಲ್ಲವೆಂದು ತತ್ತರಿಸಿ ಭಯಪಟ್ಟನಂತೆ ತಕ್ಷಣದಿ ಶ್ರೀ ಕಮಲನಾಭ ವಿಠ್ಠಲ ರಕ್ಷಿಸಿ ಪೊರೆದನಂತೆ 3
--------------
ನಿಡಗುರುಕಿ ಜೀವೂಬಾಯಿ
ಪವಮಾನ ಪಾಲಿಸೆನ್ನ ಸದ್ಗುಣಘನ್ನ ಪ ಪವಮಾನ ಪೊರಿಯೆನ್ನ ಕವಿಭಿರೀಡಿತ ನಿನ್ನ ಸ್ತವನಗೈಯುವ ಮಾನವರೊಳಧಮ ನಾನು ಪವಮಾನ ಪಾಲಿಸೆನ್ನ ಅ.ಪ ಪತಿ ಶಿವ ಮುಖ ದಿತಿಜಾರಿತತಿನುತ ಶ್ರುತಿ ಪ್ರತಿಪಾದ್ಯ ಆ ನತ ಬಂಧು ತತ್ವಾಧಿ ಪತಿಗಳೊಳುತ್ತಮ ಪ್ರಥಮಾಂಗ ಹರಿ ಪ್ರೀಯ ದ್ವಿತಿಯುಗದಲಿ ಕಪಿ - ನೀರಜ ಪತಿಯಪಾದದ್ವಯ ಅತಿಹಿತದಲಿ ಸೇವಿಸಿ ಲವಣಾರ್ಣವ ಶತಯೋಜನವ ಲಂಘಿಸಿ ರಾಕ್ಷಸಕುಲ ಹತಗೈಸಿ ಪುರದಹಿಸಿ ದೇವಿಯ ಸುವಾರುತಿಯ ತಿಳಿಸಿ ಭಾವಿದ್ರುಹಿಣನೆಂದೆನಿಸಿ 1 ಕುರುಕುಲದಲಿ ಕುಂತಿ ತರುಳನೆನಿಸೆ ಯುಧಿ ಷ್ಟರನನುಜ ವೃಕೋದರ ನಾಮದಲಿಯವ ತರಿಸಿ ಬಕಾದಿ ದುಷ್ಟರ ಶಿಕ್ಷೆಯನು ಗೈಸಿ ಹರಿಇಚ್ಛೆಯಲಿ ವನಚರಿಸಿ ಕೀಚಕನ ಸಂ ಹರಿಸಿ ದುಶ್ಯಾಸÀನಾದ್ಯರನೆಲ್ಲರಣದೊಳು ದುರುಳದುರ್ಯೋಧನನಸಾನುಜಗಣ ತ್ವರಿತಗೈಸಿ ಹನನ ವಿಜಯನಾಗಿ ಪೊರೆದೆ ಧರ್ಮಾರ್ಜುನನ ತ್ರಿಭುವನದಿ ಸರಿಗಾಣೆ ದ್ವಿಜರಿಪು ಪದುಪಂಚಾನನ 2 ಮಣಿಮಂತ ಮೊದಲಾದದನುಜರು ಹರಿದ್ವೇಷ - ವನು ಮಾಡಲೋಸುಗವನಿಯೊಳುದ್ಭವಿಸಿ ನಿ - ರ್ಗುಣರೂಪ ಕ್ರೀಯ ಬ್ರಹ್ಮನೆನುತ ಹರಿಯತಾ ನೆನಿಪ ದುರ್ಮತವನ್ನು ಘನವಾಗಿ ಪ್ರಬಲಿಸಿ ದನುಜಾರಿಯಾಙÁ್ಞದಿ ಮುನಿಮಧ್ಯ ಸತಿಯಲ್ಲಿ ಮುನಿಮಧ್ವನೆಂದೆನಿಸಿ ಜನಿಸಿ ಕುಮತವನು ಶಾಸ್ತ್ರದಿ ಖಂಡಿಸಿ ಹರಿಯೆ ಪರನೆನಿಪ ಮತವಸ್ಥಾಪಿಸಿ ಮೆರೆದೆ ಈ ಧಾರುಣಿಯೊಳು ವರದೇಶ ವಿಠಲನ ವಲಿಸೆ 3
--------------
ವರದೇಶವಿಠಲ
ಪಾಲಿಸಯ್ಯ ಪದುಮವದನ ಪಾಲಸಾಗರಶಾಯಿ ನಂಬಿದೆ ಪ ಪಾಲ ಸುಜನಶೀಲ ಸುಗುಣ ಕಾಲಕಾಲದಿ ತವ ಭಜನ ಅ.ಪ ನಾದಬ್ರಹ್ಮನಾದಿಕಾಲದ ಆದಿವಸ್ತು ಭಜಿಪೆ ಸದಾ ಮೋದದೀಯೋ ಎನಗೆ ಮುದ ಭೇದವಾದ ಗೆಲಿದ ವಿಮಲ ಸಾಧುಸುಜನರಮಿತವರ್ತನ ವೇದವೇದಾಂತದೊಳು ಗೌಪ್ಯ ವಾದ ನಿಜ ಬೀಜಮಂತ್ರ 1 ಮಾಲತುಲಸಿ ಕೌಸ್ತುಭಾಂಬರ ಮೇಲುನಿಲಯ ಕುಜನಕುಠಾರ ಶೀಲ ಸುಗುಣ ಕರುಣಾಮಂದಿರ ಕೀಳುತನದಿ ಮಾಡಿದ ಎನ್ನ ಹಾಳು ಪಾಪಗಳನು ಸುಟ್ಟು ಬಾಲನೆಂದು ಕರುಣವಿಟ್ಟು ಮೂಲತತ್ತ್ವಕಿಳಿಸು ದಯದಿ 2 ಭಾಸುರಕೋಟಿವರಪ್ರಕಾಶ ಸಾಸಿರನಾಮ ಜಗಜೀವೇಶ ದೋಷಹರಣ ಭವವಿನಾಶ ದಾಸಜನರ ಪ್ರಾಣಪ್ರಿಯ ಪೋಷಿಸೆನ್ನನುಮೇಷÀ ನಿಮ್ಮ ದಾಸರ ದಾಸನೆನಿಸಿ ಶೇಷಶಯನ ಶ್ರೀಶ ಶ್ರೀರಾಮ 3
--------------
ರಾಮದಾಸರು
ಪಾಲಿಸು ನಮ್ಮಮ್ಮ ಮುದ್ದು ಶಾರದೆ ನಮ್ಮ ನಾಲಿಗೆ ಯೊಳು ತಪ್ಪುಬಾರದೆ ನೀಲ ಕುಂತಳೆ ತಾಯೀ ನಿನ್ನ ನಂಬಿದೆ ಕಾಯೆ ಪ ಅಕ್ಷರಾಕ್ಷರ ವಿವೇಕಿಯೇ ನಿಮ್ಮ ಕುಕ್ಷಿಯೊಳೀರೇಳು ಲೋಕವೆ ಸಾಕ್ಷಾತ್ ಸ್ವರೂಪಿಣಿ ಮೋಕ್ಷದಾ ಯಕಿಯೆ ತಾಯೆ ಪಾಲಿಸಮ್ಮಮ್ಮ 1 ಸರ್ವಾಲಂಕಾರ ಮೂರ್ತಿಯ ಚರಣ ಭಜಿ ಸುವೆ ಕೀರ್ತಿಯ ಗುರುಮೂರ್ತಿ ಪರಮಾ ನಂದದೊಳ್ ಪಾಲಿಸಮ್ಮಮ್ಮ 2 ಶೃಂಗಪುರದ ನೆಲೆವಾಸಿಯೆ ನಿಮ್ಮ ಸಂಗೀತ ಶಾಸ್ತ್ರ ವಿಶಾಲಯ ಭೃಂಗ ಕುಂತಳೆ ತಾಯೆ ಭಳಿರೆ ಬ್ರಹ್ಮನರಾಣಿ ಪಾಲಿಸಮ್ಮಮ್ಮ 3
--------------
ಕವಿ ಪರಮದೇವದಾಸರು
ಪಾಲಿಸು ಶಾರದೆ ಪರಮ ಪಾವನೆಯೆ ಪಾಲಿಸು ಎನ್ನನು ಪರಬ್ರಹ್ಮನ ಸತಿಯೆ ಪ ತವಪಾದ ಕೃಪೆಯಿಂದ ಕನ್ನಡ ನುಡಿಯಲಿ ವಿವರಿಸಿ ಪೇಳುವೆ ಭಾಗ್ಯ ಸನ್ನುತಿಯ ತವಕದಿ ಬಲಿದೀಗ ಕೊಡು ಸರಸ್ವತಿಯೆ ರವಿ ಕೋಟಿ ತೇಜ ವಿರಾಜಿತಾತ್ಮಿಕೆಯ 1 ಜಲಕೆ ಕ್ಷೀರವು ಮುಟ್ಟಿದಂತೆನ್ನ ಮನದಿ ಸುಲಲಿತ ವಾಕ್ಯವ ಪಾಲಿಸು ದಯದಿ ಜಲಜ ಭವನರಾಣಿ ಕರದಿ ಪುಸ್ತಕವೇಣಿ ಕಲಕೀರ ವಾಣಿ ಕಪಿಲೆ ಸುವಾಣಿ 2 ಧರೆಯೊಳಧಿಕವೆಂಬ ಕೊಡಚಾದ್ರಿಯೊಳಗೆ ಸ್ಥಿರವಾಗಿ ನೆಲೆಸಿದ ಮೂಕಾಂಬೆ ಎನಗೆ ಕರುಣಿಸಿದದಾರನು ವರಿಸಿದರೆನಗೆ ಹರುಷದಿ ಪಾಲಿಸೆ ಪರಮ ಪಾವನೆಯೆ 3
--------------
ಕವಿ ಪರಮದೇವದಾಸರು
ಪಾಲಿಸೆ ಸರಸ್ವತಿ ಪಾಲಿಸೆ ಪಾಲಿಸೆ ನಿನ್ನಯ ಪಾರಿಗೆ ಬಂದೆನುಕಾಲಕಾಲಕೆ ನಿನ್ನಯ ಕಾಲಿಗೆರಗುವೆ ಪಾಲಿಸೆ ಪ. ಆದಿ ಬ್ರಹ್ಮನರಾಣಿಯೆ ವೇದಕ್ಕ ಭಿಮಾನಿಯೆಮೋದ ಗಾಯನ ಕುಶಲಳೆಮೋದ ಗಾಯನ ಕುಶಲಳೆ ಸರಸ್ವತಿ ನೀ ದಯಮಾಡಿ ಮತಿಯ ಕೊಡು 1 ಹೊನ್ನವರೆ ಹೊಸ ಕಪ್ಪು ಬೆನ್ನಿನ ಮ್ಯಾಲಿನ ಹೆರಳುಕಿನ್ನರಿ ನಿನ್ನ ಬಲಗೈಯಕಿನ್ನರಿ ನಿನ್ನ ಬಲಗೈಯ್ಯಲಿ ಹಿಡಕೊಂಡುಖನಿ ಬಾ ನಮ್ಮ ವಚನಕ್ಕೆ 2 ಮಿತ್ರಿ ಸರಸ್ವತಿಗೆ ಮುತ್ತಿನ ಉಡಿಯಕ್ಕಿಮತ್ತೆ ಮಲ್ಲಿಗೆಯ ನೆನೆದಂಡೆಮತ್ತೆ ಮಲ್ಲಿಗೆಯ ನೆನೆದಂಡೆ ತಂದಿದ್ದೆಪ್ರತ್ಯಕ್ಷವಾಗ ಸಭೆಯೊಳು3 ಅರಳು ಮಲ್ಲಿಗೆ ನೆನೆದಂಡೆ ತಂದಿಹೆತಡೆಯದೆ ನಮಗೆ ವರವ ಕೊಡು 4 ಗುಜ್ಜಿ ಸರಸ್ವತಿಗೆ ಗೆಜ್ಜೆ ಸರಪಳಿಯಿಟ್ಟು ವಜ್ರಮಾಣಿಕ್ಯ ದಾಭರಣವಜ್ರಮಾಣಿಕ್ಯ ದಾಭರಣ ಭೂಷಿತಳಾಗಿನಿರ್ಜರೊಳುತ್ತಮಳೆ ನಡೆ ಮುಂದೆ 5 ಹರದಿ ಸರಸ್ವತಿ ಸರಿಗೆಸರಪಳಿಯಿಟ್ಟುಜರದ ಸೀರೆಯನೆ ನಿರಿದುಟ್ಟು ಜರದ ಸೀರೆಯನೆ ನಿರಿದುಟ್ಟು ಬಾರಮ್ಮದೊರೆ ರಾಮೇಶನ ಅರಮನೆಗೆ6
--------------
ಗಲಗಲಿಅವ್ವನವರು
ಪಾಲಿಸೆನ್ನನು ಪದ್ಮಪತ್ರ ವಿಶಾಲಲೋಚನೆ ಜಾಹ್ನವಿಶೈಲಜಾತಾಭಗಿನಿಮಂಗಳೆ ಮೂಲಮಂತ್ರ ಸ್ವರೂಪಿಣಿ ಪ ಹರನ ಜಡೆಯಿಂದಿಳಿದು ಬ್ರಹ್ಮನ ಕರದ ಪಾತ್ರೆಯೊಳ್ನೆಲೆಸಿದೆಸುರರ ಸಂರಕ್ಷಿಸಲು ಭರದಿಂ ಸ್ವರ್ಗಲೋಕವ ಸಾರಿದೆಧರೆಯ ಭಾರವ ತೊಳೆಯಲಲ್ಲಿಂ ಭರದಿ ಸುರಗಿರಿಗೈದಿದೆಹರುಷದಲಿ ಹಿಮಗಿರಿಯ ಶೃಂಗದಿ ಪರಿದು ಪಾವನ ಮಾಡಿದೆ1 ವರ ಭಗೀರಥ ತರಲು ಕಾಶಿಯ ಪುರವರದಿ ನೀ ನೆಲಸಿದೆಥರಥರದ ಪ್ರಾಕಾರ ಮಣಿಗೋಪುರದ ಸಾಲೊಳಗೊಪ್ಪಿದೆನರರು ಮಾಡಿದ ಪಾಪರಾಶಿಯ ತೊಳೆದು ಪಿತೃಗಳ ಸಲಹಿದೆಹರಿಗೊಲಿದು ಮಣಿಕರ್ಣಿಕಾಖ್ಯೆಯ ಧರಿಸಿ ಜಗದೊಳು ತೋರಿದೆ 2 ಜಾಹ್ನವಿ ನಮ್ಮನುಅರ್ತಿಯಿಂ ಸಲಹೆಂಬ ಸ್ತ್ರೀಯರ ಮೊತ್ತವನು ನಾ ಕಂಡೆನು 3 ಚಾರುಮಣಿ ಕೋಟೀರಕುಂಡಲಿ ಹಾರಮಣಿಮಯ ನೂಪುರೆವೀರಮುದ್ರಿಕೆ ಕಡಗ ಕಂಕಣದಿಂದಲೊಪ್ಪುವ ಶ್ರೀಕರೆಹಾರ ಪದಕ ಸಮೂಹ ಕಾಂಚೀದಾಮ ವೈಭವ ಭಾಸುರೆಭೂರಿ ಮರಕತ ರತ್ನಮಾಲ್ಯ ಕೇಯೂರ ಭೂಷಣ ಭಾಸ್ವರೆ 4 ಆಣಿ ಮುತ್ತಿನ ಮೂಗುತಿಯು ಕಟ್ಟಾಣಿ ಗುಂಡಿನ ಸರಗಳುಮಾಣಿಕವು ಬಿಗಿದಿರ್ದ ರಾಗಟೆ ಚೌರಿ ಪೊಸ ಬಾವಲಿಗಳುಕ್ಷೋಣಿ ಗತಿಶಯವಾದ ಮುತ್ತಿನ ಮಲಕು ಮೋಹನ ಸರಗಳು ಕಲ್ಯಾಣಿ ಗಂಗಾದೇವಿಗೆಸೆದವು ಪರಿಪರಿಯ ಭೂಷಣಗಳು 5 ಕಾಲಸರಪಣಿ ಉಂಗುರವು ಅಣಿವೆಟ್ಟು ಪಿಲ್ಲಿಯ ಸಾಲ್ಗಳುಮೇಲೆನಿಪ ವೊಡ್ಯಾಣ ಕಿಂಕಿಣಿ ಗೆಜ್ಜೆಮೊಗ್ಗೆಯ ಸರಗಳುತೋಳಬಳೆ ಭುಜಕೀರ್ತಿ ಹಿಂಬಳೆ ಚಳಕೆಮಣಿದೋರೆಗಳು (?)ಮೇಲೆ ರಂಜಿಪ ನಿಮ್ಮ ನೋಡಿ ಕೃತಾರ್ಥವಾಯ್ತೀಕಂಗಳು 6 ಜಾಹ್ನವಿ ನಿರ್ಮಲೆರಂಗದುದ್ಘತರಂಗ ಶ್ರೀಕರ ಪಾವನೀಕೃತ ಭೂತಲೆಭಂಗಿತಾಮಯಸಂಘೆ ಮಂಗಲಸೂತ್ರಯುತ ಕಂಠೋಜ್ವಲೆಮಂಗಲಾತ್ಮಿಕೆ ಮಹಿತೆ ಕರುಣಾಪಾಂಗೆ ಶರದಿಂದೂಜ್ವಲೆ 7
--------------
ಕೆಳದಿ ವೆಂಕಣ್ಣ ಕವಿ
ಪಾಲಿಸೋ ಗಂಗಾಧರ ಪಾಲಿಸೋ ಪ. ಪಾಲಿಸೊ ಗಂಗಾಧರನೆ | ಮಧ್ಯ ಫಾಲದಿ ನಯನ ಉಳ್ಳವನೆ | ಆಹ ಶ್ರೀಲೋಲನ ಗುಣಜಾಲವ ಸ್ಮರಿಸುತ್ತ ಲೀಲೆಯಿಂ ಭಕ್ತರ ಪಾಲಿಸುತಿಪ್ಪನೆ ಅ.ಪ. ಬ್ರಹ್ಮನ ಭ್ರೂಮಧ್ಯೆ ಜನಿಸಿ | ಬಹು ದುರ್ಮತಿಗಳನೆ ಮೋಹಿಸಿ | ಕು ಧರ್ಮದ ಶಾಸ್ತ್ರವ ರಚಿಸಿ | ಅಂ ಧತಮ್ಮಸಿಗವರ ಕಳಿಸಿ | ಆಹ ನಿರ್ಮಲ ಮನದಲ್ಲಿ ಬೊಮ್ಮನಯ್ಯನ ಭಜಿಸಿ ನಿತ್ಯ ರಮಿಸುತಲಿಪ್ಪನೆ 1 ಕಂಜನಾಭನ ಮೊಮ್ಮಗನೆ | ಖಳರ ಭಂಜಿಸುವಂಥ ಬಲಯುತನೆ | ಮನ ರಂಜನ ರೂಪಾಕೃತನೆ | ಖಳ ಗಂಜಿ ಹರಿಯಿಂದ ರಕ್ಷಿತನೆ | ಆಹ ಅಮೃತ ಮಥಿಸುವಾಗ ನಂಜುದ್ಭವಿಸೆ ಕುಡಿದು ನಂಜುಂಡನೆನಿಸಿದೆ 2 ಕಪಿಲನದಿ ತೀರದಲ್ಲಿ | ಬಹು ತಪಸಿಗಳಿಗೆ ಒಲಿಯುತಲಿ | ಭಕ್ತ ರಪರಿಮಿತ ಬರುತಿಲ್ಲಿ | ನಿತ್ಯ ಜಪಿಸುತ್ತ ನಿನ್ನ ಸ್ತೋತ್ರದಲಿ | ಆಹ ಗುಪಿತದಿಂದ್ಹರಿ ಭಕ್ತರಪವರ್ಗದೊಡೆಯ ನಿನ್ನ ಲ್ಲಿಪ್ಪನೆಂತೆಂದು ಜಪಿಸುತ್ತಲಿಪ್ಪರೊ3 ಗಂಗಾಧರನೆನಿಸಿದನೆ | ಅಂತ ರಂಗದಿ ಹರಿಯ ತೋರುವನೆ | ಉಮೆ ಕಂಗಳಿಗಾನಂದಪ್ರದನೆ | ನಿತ್ಯ ರಂಗನಾಥನ ಪೂಜಿಸುವನೆ | ಆಹ ಜಂಗಮ ಜೀವರ ಮನದಭಿಮಾನಿಯೆ ಲಿಂಗರೂಪದಿ ಜನರ ಕಂಗಳರಂಜನೆ4 ಅಪಾರ ಮಹಿಮನ ಗುಣವ | ಬಹು ರೂಪಗಳನೆ ನೋಡುತಿರುವ | ನಿತ್ಯ ಶ್ರೀಪತಿ ನರಹರಿಯ ನೆನೆವ | ಮುಂದಿ ನಾ ಪದವಿಗೆ ಶೇಷನಾಗ್ವ | ಆಹ ಪರಿ ಪರಿ ಗೋಪಾಲಕೃಷ್ಣವಿಠ್ಠಲನ ಧ್ಯಾನವ ನೀಡೊ5
--------------
ಅಂಬಾಬಾಯಿ
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವರಾಹ ಆದಿವರಾಹ ಸಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರಧ್ಧೇಶ ವಂದ್ಯ ಬದರಶೇಖರ ಮುಖ ಸುರವಿನುತ ವಾಂಛಿತದ ಮೋದಚಿನ್ಮಯ ಭೂವರಾಹ ಯಜÉ್ಞೀಶ ಪ ಅದ್ವಿತೀಯನು ನೀನೇ ಪದುಮಜಾಂಡದ ಒಡೆಯ ಪದುಮಭವನೊಳಿದ್ದು ಭುವನಗಳ ಸೃಜಿಸಿ ಕೃತಿ ನಡೆಸುತ್ತ ಒದಗುವಿ ಸುಖಜ್ಞಾನ ಬಲಪೂರ್ಣ ಹರಿಯೇ 1 ಅಂದು ಸ್ವಾಯಂಭುವ ಮನು ವೇನಗರ್ಭನಲಿ ಬಂದು ನಮಿಸಿ ಭಿನ್ನಹವ ಮಾಡೆ ವಿಧಿ ಹೇಳಿದ ಜನಾದರ್Àನ ಯಜ್ಞಪರಮಾತ್ಮ ಶ್ರೀದ ಭದ್ರದ ಈಜ್ಯ ಪೂಜ್ಯ ನೀನೇ ಎಂದು 2 ಸ್ವಾಯಂಭುವ ಸಾಮ್ರಾಟ್ ಪೇಳಿದ ಮಹಾ ಈ ಭೂಮಿ ಇರುವುದು ಉದ್ಧರಿಸಿ ಸ್ಥಾನವ ತನ್ ಪ್ರಜೆಗಳಿಗೆ ಒದಗಿಸಬೇಕು ಎಂದ 3 ಇರುವುದಕೆ ಸ್ಥಳ ಪ್ರಜೆಗಳಿಗೆ ಒದಗಿಸಲು ಪರಮೇಷ್ಟಿರಾಯ ತನ್ನ ಹೃದ್ ವನಜದಿ ಸುಪ್ರಕಾಶಿಪ ಪರಮ ಪೂರುಷ ನಿನ್ನನ್ನು ಪರಮಾದರದಲ್ಲಿ ಧ್ಯಾನಿಸಿದನು 4 ಮಹಿಶಿರಿಕಾಂತ ನಿನ್ನನು ಧ್ಯಾನಿಸುತಲಿದ್ದ ಬ್ರಹ್ಮನ ಮೂಗಿಂದ ಹರಿ ಅನಘ ನೀನು ವರಾಹ ಮರಿ ಅಂಗುಷ್ಟ ಮಾತ್ರ ಪ್ರಮಾಣದಿ ಬಹಿರ್ಗತನು ಆದಿಯೋ ಚಿದಾನಂದರೂಪ 5 ಒಂದೇ ಕ್ಷಣದಿ ಗಜಮಾತ್ರ ವರ್ಧಿಸಿದಿಯೋ ಅದ್ಭುತ ಈ ರೂಪ ಕಂಡು ಅಲ್ಲಿ ಇದ್ದ ಮರೀಚಿ ಪ್ರಮುಖ ವಿಪ್ರರು ಮನು ಮೊದಲಾದವರು ಬಹು ಬೆರಗಾದರಾಗ 6 ಸೂಕರ ರೂಪ ಕಂಡಿಲ್ಲ ಎಲ್ಲೂನು ಇದು ಮಹಾಶ್ಚರ್ಯ ಗಂಡ ಶಿಲಾವೋಲ್ ಕ್ಷಣ ಮಾತ್ರದಲಿ ಚಂಡ ಈ ಕ್ರೋಡವು ದೊಡ್ಡದಾಗಿಹುದು 7 ಸೂಕರ ರೂಪವ ನೋಡುತ್ತ ಮುನಿಗಳು ತರ್ಕಿಸಿ ಮೀಮಾಂಸ ಮಾಡೆ ಅನಿಮಿತ್ತಬಂಧು ಹರಿ ಒಲಿದು ಬಂದಿರುವಿ ಎಂದು ವನಜಸಂಭವ ಸಂತೋಷ ಹೊಂದಿದನು 8 ಮಹಾವರಾಹ ರೂಪನೇ ವಿಭೋ ನೀನು ಮಹಾಧ್ವನಿಯಲಿ ಗರ್ಜಿಸಿದಿ ಆಗ ಆ ಹೂಂಕಾರವು ದಿಕ್ಕು ವಿದಿಕ್ಕುಗಳ ಮಹಾಂಬರವ ತುಂಬಿತು ಪ್ರತಿಧ್ವನಿಯಿಂದ9 ಅಪ್ರತಿ ಮಹಾಮಹಿಮ ಉರುಪರಾಕ್ರಮ ನೀನು0 ಅಂಬುಧಿಯೊಳು ಲೀಲೆಯಿಂದಲಿ ಪೊಕ್ಕು ಸುಪವಿತ್ರತಮ ನಿನ್ನ ದಂಷ್ಟ್ರದ ಮೇಲಿಟ್ಟುಕೊಂಡು ಕ್ಷಿಪ್ರದಲಿ ನೀರಮೇಲ್ ತಂದಿ ಭೂಮಿಯನು 10 ನೀರೊಳಗಡೆ ತಡೆದ ಆದಿದೈತ್ಯನ ಕೊಂದು ನೀರಮೇಲ್ ಇರಿಸಿದಿ ಭೂಮಿಯ ಎತ್ತಿ ಸರಸಿಜೋದ್ಭವ ಮುಖ್ಯಸುರಮುನಿ ವೃಂದವು ಕರಮುಗಿದು ಸ್ತುತಿಸಿದರÀು ಕೃತಜ್ಞ ಭಕ್ತಿಯಲಿ 11 ಎಂದು ಜಯಷೋಷವ ಮಾಡಿ ಮುದದಿ ಸುತಪೋನಿಧಿಗಳು ಸ್ತುತಿಸಿ ನಮಿಸಿದರು ವೇದವೇದ್ಯನೇ ಸೂಕರರೂಪ ನಿನ್ನನ್ನ 12 ಅಖಿಳ ಮಂತ್ರದೇವತಾ ದ್ರವ್ಯಾಯ ಸರ್ವಕೃತವೇ ಕ್ರಿಯಾತ್ಮನೇ ವೈರಾಗ್ಯ ಭಕ್ತ್ಯಾತ್ಮಜಯಾನುಭಾವಿತ ಜ್ಞಾನಾಯ ವಿದ್ಯಾ ಗುರುವೇ ನಮೋ ನಮಃ13 ಈ ರೀತಿ ಇನ್ನೂ ಬಹುವಾಗಿ ಸ್ತುತಿಸಿದರು ಹರಿ ವರಾಹನೇ ಭೂದರ ಧರೋದ್ಧಾರ ನರಸುರರು ಶುಚಿಯಿಂ ಪಠಿಸಿ ಎಲ್ಲರೂ ಕೇಳೆ ಸುಪ್ರಸನ್ನನು ಆಗಿ ಭದ್ರÀವನು ಈವಿ 14 ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 15 -ಇತಿ ಪ್ರಥಮ ಅಧ್ಯಾಯ ಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಾಕ್ಷ ಸಂಹಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರದ್ಧೇಶ ವಂದ್ಯ ಬದರಶೇಖರ ಮುಖ ಸುವಿನುತ ವಾಂಛಿತದ ಮೋದ ಚಿನ್ಮಯ ಭೂವರಾಹ ಯಜÉ್ಞೀಶ À ಜ್ಞಾನಸುಖ ಭೂಮಾದಿ ಗುಣಪೂರ್ಣ ನಿರ್ದೋಷ ಪೂರ್ಣಬಲ ಹರಿ ಯಜ್ಞಮೂರುತಿ ವರಾಹ ಹನನ ಮಾಡಿ ಆದಿದೈತ್ಯನ ನೀರಿಂದ ಕ್ಷೋಣಿಯ ನಿನ್ ದಂಷ್ಟ್ರ ಮೇಲಿಟ್ಟು ತಂದಿ 1 ಭೂಮಿ ಉದ್ಧರಿಸಲು ಮಾತ್ರವಲ್ಲದೇ ಆ ಹೇಮಾಕ್ಷ ಅಸುರನ್ನ ಸಂಹಾರ ಮಾಡೆ ನೀ ಮಹಾಕ್ರೋಡರೂಪವÀ ಪ್ರಕಟಿಸಿದಿ ವಿಭೋ ಅಪ್ರಾಕೃತ ಚಿನ್ಮಯ ವಪುಷ 2 ಏಕದಾ ಬ್ರಹ್ಮನ ಸುತರು ಸನಕಾದಿಗಳು ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೆ ತಡೆದರು ದ್ವಾರಪಾಲಕರು 3 ಜಯವಿಜಯರೆಂಬುವ ಆ ದ್ವಾರಪಾಲಕರಿಗೆ ಮಾಯೇಶ ಹರಿ ಪ್ರಿಯತರ ಮುನಿಶ್ರೇಷ್ಠರು ಈಯಲು ಶಾಪವ ಆ ವಿಷ್ಣು ಪಾರ್ಷದರು ದೈತ್ಯಜನ್ಮವ ಹೊಂದಿದರು ಪತನವಾಗಿ 4 ಪತಿ ಕಶ್ಯಪ ಮುನಿ ಅಹ್ನೀಕದಲಿ ಇರಲು ದಿತಿ ದೇವಿ ಬಂದು ಅಪತ್ಯಕಾಮದಲಿ ಸಂಧ್ಯಾಕಾಲದಿ ಇಚ್ಛಿಸಿ ನಿರ್ಬಂಧಿಸಿ ವಿಧಿ ವಿರುದ್ಧದಲಿ 5 ಸುತಪೋನಿಧಿ ಕಶ್ಯಪ ತೇಜೋಲ್ಬಣದಿ ದಿತಿದೇವಿ ಜಠರದಲಿ ವಿಷ್ಣುಪಾರ್ಶದರು ಪತಿತ ಆ ಜಯವಿಜಯರು ಪ್ರವೇಶಿಸಿದರು ಆ ಆದಿದೈತ್ಯನು ಸಹ ಮೊದಲೇ ಅಲ್ಲಿ ಹೊಕ್ಕಿದ್ದ 6 ಅಬ್ಧಿಯಿಂ ನೀ ಭೂಮಿ ಎತ್ತೆ ತಡೆದು ಹತ - ನಾದ ಆ ದೈತ್ಯನು ಅಬ್ಜದೋದ್ಭವನು ಶ್ರೀದ ನಿನ್ ಪಾರ್ಶದನು ಆವಿಷ್ಟನಾದ 7 ಆದಿ ಹೇಮಾಕ್ಷನೊಳು ವಿಷ್ಣು ದ್ವಾರಪ ವಿಜಯ ದಿತಿದೇವಿ ಅವರ ಸುತ ಹಿರಣ್ಯಾಕ್ಷನೆಂದು ಉದಿಸಿದನು ಅಣ್ಣ ಜಯ ಹಿರಣ್ಯಕಶಿಪು ಸಹ ಅತಿಪರಾಕ್ರಮಯುತನು ಲೋಕಕಂಟಕನು 8 ಗದೆ ಹಿಡಿದು ಹಿರಣ್ಯಾಕ್ಷ ದಿಗ್ವಿಜಯ ಮಾಡಿ ಭೀತಿ ಪಡಿಸಿದ ದೇವತಾ ಜನರನ್ನೆಲ್ಲ ಅತಿಬಲಯುತನಿವ ಧರೆಯ ಸೆಳಕೊಂಡು ಉದಧಿಯೊಳು ಹೊಕ್ಕನು ಆರ್ಭಟಮಾಡುತ್ತ 9 ಸುರರು ನಿನ್ನಲಿ ಮೊರೆ ಇಡಲು ವರಾಹ ಹರಿ ನೀನು ನೀರೊಳು ಲೀಲೆಯಿಂದಲಿ ಪೊಕ್ಕು ಆ ದೈತ್ಯ ಹಿರಣ್ಯಾಕ್ಷನ ಸಹ ಯುದ್ದ ಮಾಡಿದಿಯೋ 10 ಸುರವೃಂದ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಆ ದೈತ್ಯನ ಕೊಂದು ಧರೆಯನುದ್ಧರಿಸಿ ನೀ ಮೇಲೆತ್ತಿ ತಂದಿಯೋ ಉರುಪರಾಕ್ರಮ ಭಕ್ತವತ್ಸಲ ಕೃಪಾಳೋ 11 ವರಾಹ ಹರಿ ನಿನ್ನ ಕೃತಜ್ಞ ಮನದಿ ಸನ್ನಮಿಸಿ ಸ್ತುತಿಸಿದರು ಉದಾರ ವಿಕ್ರಮ ಹಿರಣ್ಯಾಕ್ಷನ್ನ ನೀನು ಕೊಂದ ನಿನ್ನಯ ಕ್ರೀಡಾ ವರ್ಣಿಸಲಶಕ್ಯ 12 ಕಮಲಾರಮಣ ಶ್ವೇತವರಾಹ ಮೂರುತಿ ನಮೋ ಶಾಮಚಾರ್ವಾಂಗ ನಮೋ ಭೂವರಾಹ ಬ್ರಹ್ಮ ಪವಮಾನರಿಂದಲಿ ಸದಾ ಪೂಜ್ಯನೇ ಸ್ವಾಮಿ ಕರುಣಾಂಬುಧಿಯೇ ಶರಣು ಮಾಂಪಾಹಿ 13 ಕೂರ್ಮ ಕ್ರೋಢ ನರಸಿಂಹ ವಾಮನ ರೇಣುಕಾದೇವಿಯ ಸುತ ರಾಮಚಂದ್ರ ಬುದ್ಧ ಕಲ್ಕಿ ವ್ಯಾಸ ಹಯಗ್ರೀವ ಆನಮಿಪೆ ಅವನೀಶ ಭೂ ಶ್ರೀಶ ಪಾಹಿ 14 ವರಾಹ ನಮೋ ಸದಾನಂದಮಯ ಜಗಜ್ಜ£್ಮÁದಿ ಕರ್ತ ನಿರ್ದೋಷ ಗುಣಪೂರ್ಣ ಅನಿಷ್ಟ ಪರಿಹರಿಸಿ ವರ್ಧಿಸುವಿ ದಯದಿ 15 ಶ್ಯಾಮ ಅರಿಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನೇ ಮನ್ಮನದಿ ಸರ್ವದಾ ಹೊಳೆಯೋ ಕರುಣಾಳು 16 ಗುರು ಗುರೋರ್ಗುರು ಗುರೋರ್ಗುರುವಿನ ಗುರು ಶ್ರೀ ರಾಘವೇಂದ್ರ ಗುರುರಾಜ ಲಾತವ್ಯ ಋಜುವರ್ಯ ಮಧ್ವ ವಾರಿಜಾಸನ ಸರ್ವಹೃದ್ವನಜ ಅಂತಸ್ಥ ವರಾಹ ನಮೋ ಶರಣು 17 ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸ ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 18 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಳಯಜಲದಲಿ ನೀನಾಲದೆಲೆಯ ಮ್ಯಾಲೆ ಹಲವು ಜೀವರು ನಿನ್ನ ಹೃದಯದೊಳಿರಲು ಕೆಲವುದಿನದಿ ಯೋಗನಿದ್ರೆಯೊಳಿರೆ ಒಲವಿಂದ ಸೃಜಿಸುವೆನೆಂದು ನೇಮಿಸುವೆ1 ಪ್ರಕೃತಿಯ ಮೂಲಕಾರಣವನು ಮಾಡಿ ಸಕಲತತ್ವಗಳ ಸಮ್ಮೋಹದಿ ಕೂಡಿ ವಿಕಳಿಸದಂತೆ ತನ್ಮಾತ್ರೆಯ ಕೂಡಿ ಅಖಿಳೇಶ ಮಹತತ್ವಗಳ ನಿರ್ಮಿಸಿದೆ 2 ಮಹತತ್ವದಿಂದಹಂಕಾರವ ಪುಟ್ಟಿಸಿ ಅಹಂಕಾರದಿಂದ ವೈಕಾರಿಕ ಮೊದಲಾದ ತ್ರಿವಿಧತತ್ವಗಳ ನಿರ್ಮಾಣವÀ ಮಾಡ್ದೆ ಮಹಮಹಿಮೆಯ ಮೆರೆದೆ ಜಗವರಿಯೆ 3 ಇಪ್ಪತ್ತುನಾಲ್ಕು ಅಯಿದಾರುತತ್ವಗಳಿಂದ ತÀಪ್ಪದೆ ಬೊಮ್ಮಾಂಡವ ನಿರ್ಮಿಸಿದೆ ಸರ್ಪಶಯನನಾಗಿ ನಾಭಿಕಮಲದಿಂದ ಅಪ್ಪಬ್ರಹ್ಮನ ಪ್ರಸವಿಸಿದೆ ನೀನೆಂದು 4 ಒಂದು ಮೂರುತಿಯಿಂದ ಸೃಷ್ಟಿಯ ಮಾಡಿ ಮತ್ತೊಂದು ಮೂರುತಿಯಿಂದ ಪಾಲನೆ ಮಾಡಿ ಒಂದು ಮೂರುತಿಯಿಂದ ಸಂಹರನೆ ಮಾಡಿ ಒಂದೊಂದು ಮಹಿಮೆಯು ಅನಂತಾದ್ಭುತವು 5 ಒಂದು ರೋಮಕೂಪದಲಿ ಬ್ರಹ್ಮಾಂಡ ಇಂದಿರೆ ಅನಂತಕೋಟಿ ನಾಮಗಳಲ್ಲಿ ಬಂದು ಗೋಕುಲದಲ್ಲಿ ಶಿಶುವಾಗಿ ತೋರಿದೆ ಆ- ಸುರರು 6 ಜನನಮರಣ ಭಯದಿಂದ ದೇವತೆಗಳು ಅನುದಿನ ನಿನ್ನ ಪೂಜೆಯ [ಮಾಡೇವೆನಲು] ಪುನರಾವೃತ್ತಿ ರಹಿತವಾದ ಫಲವೆತ್ತಿ ಮನುಜನಂತೆ ತೋರುವುದೇನುಚಿತವೊ 7 ಒಮ್ಮೆಕಾಣಲು ಸಿರಿರಮ್ಮೆ ಚೆಲುವನ ಒಮ್ಮನದಿಂದ ನೋಡೇನೆಂಬ ಭಯದಿಂದ ರಮ್ಮೆ ಮೊಗವ ತಗ್ಗಿಸಿ ನಾಚಿಸಿದಳೆ 8 ದÀಶದಿಕ್ಕು ನೋಡುತ್ತ ಭಯದಿಂದ ಕಮಲಜ ಶಶಿನಾಳದೊಳಗಿದ್ದ ದಾರಿಯ ಕಾಣದೆ ದಶಶತವರುಷ ನಿಮ್ಮನು ಧ್ಯಾನಿಸುತಿರೆ ವಸುಧೀಶ ನಿಮ್ಮ ನಿಜವ ತೋರಿದಿರಿ 9 ಆಲೋಚನೆಯಿಂದ ಸರ್ವ ವಿಷಯದಿಂದ ಲೀಲೆಯಿಂದ ಪಾಡಿ ಕಮಲಸಂಭವನ ವೋಳು ಮಾಡದಂತೆ ಒಳಿತಾಗಿ ತಲೆವಾಗೆ ಮೂಲ್ಲೋಕವ ಕೃಪೆಯಿಂದ ಪಾಲಿಸಿದೆ 10 ನಂದ ಯಶೋದೆ ವಸುದೇವ ದೇವಕಿಯರು ಸುಕೃತ ಫಲವಾಯಿತೆಂದು ಬಂದ ಬ್ರಾಹ್ಮಣರ ದ್ರವ್ಯದಿ ದಣಿಸಿದರು 11 ಜಾತಕರ್ಮವ ಮಾಡಿ ಮಧುವ ಬಾಯೊಳಗಿಟ್ಟು ಒತ್ತುಮೊರನ ಗೊಟ್ಟಿನಲಿ ಮಲಗಿದ್ದು ಸಾ- ಕ್ಷಾತ್ ಶ್ರೀ ನಾರಾಯಣನ ಅವತಾರವೆಂದು ಮಾತೆಯ ಮೊಲೆವಾಲನುಂಡ ಬೇಗದಲಿ 12 ವಾರುಣಿ ಶ- ಚಿ ರತಿ ಮೊದಲಾದ ಸತಿಯರು ನಾರಾಯಣ ಪರದೇವತೆಯೆಂದು ನಾರಿಯರೆಲ್ಲ ಪಾಡಿದರತಿ ಹರುಷದಲಿ 13 ನಾಮಕರಣ ದಿವಸ ಬ್ರಹ್ಮಾದಿ ಸುರರು ಈ ಮಹಾಶಿಶುವ ನೋಡೇವೆಂಬ ಭರದಿಂದ ಆ ಮಹಾಸ್ತೋಮವೆಲ್ಲ ಕೂಡಿಬರ- ಲೀ ಮಹಾಶಿಶುವ ನೋಡಿದರೆ ಅರ್ಥಿಯಲಿ 14 ವ್ಯಾಸ ಧೌಮ್ಯಾಚಾರ್ಯರೊಲಿದು ಮಂತ್ರಗಳಿಂದ ಸಾಸಿರಕೋಟ್ಯನಂತ ನಾಮಗಳುಳ್ಳ ವಾಸುದೇವ ಕೃಷ್ಣನೆಂಬ ನಾಮಗಳಿಟ್ಟು ಸೂಸಿದರಕ್ಷತೆ ಸುಮೂಹೂರ್ತದಲಿ 15 ಕ್ಷೀರಾಂಬುಧಿಯನ್ನೆ ತೊಟ್ಟಿಲು ಮಾಡಿ ಓರಂತೆ ನಾಲ್ಕುವೇದಗಳ ನೇಣನೆ ಮಾಡಿ ಧೀರಶೇಷನು ಬಂದು ಹಾಸಿಕೆ ಹಾಕಲು ನಾರಿಯರೊಡನೆ ಮಲಗಿದೆಯೊ ಹಯವದನ 16
--------------
ವಾದಿರಾಜ
ಪ್ರಾಣಾ - ದೇವನೇ | ಸಕಲ ಜಗ | ತ್ರಾಣ ನಾದನೇ ಪ ರೇಣು ವಂತಿರಿಸೊ ಅ.ಪ. ಪಂಚ - ರೂಪನೇ | ಪ್ರಾಣಾದಿ | ಪಂಚ ಕಾರ್ಯನೇ |ವಂಚಿಸಿ ದೈತ್ಯರ | ಸಂಚುಗೊಳಿಸಿ - ನಿ-ಷ್ಕಿಂಚಿನ ಜನಪ್ರಿಯ ಸಂಚಿಂತನೆ ಕೊಡು 1 ಹಂಸ ನಾಮವಾ | ಪ್ರತಿದಿನ | ಶಂಸಿಪೆ ಪವನಾ |ಹಂಸ ಮಂತ್ರವೇಕ | ವಿಂಶತಿ ಸಾಸಿರ ಶಂಸಿಸಿ ಷಟ್ಯತ | ಹಂಸನಿಗೀವೆ 2 ವಿಧಿ | ಪೂರ್ವಕ ಸಾಧನನಿರ್ವಹಿಸುವ ತೆರ | ತೋರ್ದನು ನೀನೇ 3 ವಿಶ್ವ-ವ್ಯಾಪಕಾ | ಹರಿಗೆ ಸಾ | ದೃಶ್ಯ ರೂಪಕಾ |ಅಶ್ವರೂಪ ಹರಿ | ವಶ್ಯನೆನಿಸಿ ಬಹುವಿಶ್ವಕಾರ್ಯ ಸ | ರ್ವಸ್ವ ಮಾಳ್ಪೆಯೊ 4 ದೇವ-ಋಷೀ-ಪಿತ | ನೃಪರು-ನರ | ರೈವರೊಳಗಿರುತಾ |ಜೀವರುಗಳ ಸ್ವ | ಭಾವ ವ್ಯಕುತಿಗೈ ದೀವಿರಿಂಚಾಂಡವ | ನೀ ವಹಿಸಿದೆಯೋ 5 ಶುದ್ಧ-ಸತ್ವಾತ್ಮದ | ದೇಹದೊ | ಳಿದ್ದರೂ ಲಿಂಗದ |ಬದ್ಧ ವಿಹೀನನೆ | ದಗ್ದ ಪಟದ ಪರಿಸಿದ್ಧ ಸಾಧನ ಅನ | ವವ್ಯ ನೆನಿಸುವೇ 6 ಹೀನ-ಸತು ಕರ್ಮವಾ | ಪವಮಾನ | ತಾನೇ ಮಾಡುವಾ |ಜ್ಞಾನದಿಂದಲೇ | ನೇನು ಮಾಳ್ಪುದನುಪ್ರಾಣಪಗೊಂಡು ಕು | ಯೋನಿಯ ಕಳೆವ 7 ಕ | ವಾಟ ಅಹಿಪವಿಪ ಲ-ಲಾಟ ನೇತ್ರಗೆ | ಸಾಟಿ ಮೀರ್ದನೇ 8 ವಾಙ್ಮನೋ-ಮಾಯನೇ | ದೇವ | ಸ್ತೋಮ ದೊಳಗಿಹನೇ |ಶ್ರೀ ಮಹಿನುತ ಶ್ರೀ | ರಾಮಚಂದ್ರ ಗುಣಸ್ತೋಮ ಪೊಗಳ ನ | ಮ್ಮಾಮಯ ಹರ9 ಮೂಲೇಶ ಪದವ | ಪಿಡಿದಿಹ | ಪ್ರಾಣನ ಚರಣಾಕಿಲಾಲಜವನು | ಓಲೈಸುತಲಿಹಕಾಲ ಕರ್ಮದಿಹ | ಕೀಳು ಜೀವನ ಪೊರೆ 10 ಭಾವಿ ಬ್ರಹ್ಮನೇ | ಜೀವರ | ಸ್ವಭಾವ - ವರಿತನೇ ಕಾವ ಕಾಲ್ಪ ಗುರು | ಗೋವಿಂದ ವಿಠಲನಪಾವನ ಚರಣವ | ಭಾವದಿ ತೋರೈ 11
--------------
ಗುರುಗೋವಿಂದವಿಠಲರು