ಒಟ್ಟು 358 ಕಡೆಗಳಲ್ಲಿ , 69 ದಾಸರು , 329 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚರಣಕಮಲಯುಗಕೆ ನಮಿಪೆ ನಿರುತವನುದಿನ | ಶ್ರೀ ರಾಘವೇಂದ್ರ ಪ ಕರುಣಾಸಾಂದ್ರ ಯತಿಕುಲೇಂದ್ರ ಅ.ಪ ವೇನಮತವಿದಾರ ಸುಂದರ ಜ್ಞಾನದಾತ ಗುರುವರ | ಶ್ರೀನಾಥನ ಪದಪಂಕಜಧ್ಯಾನನಿರತ ಸುಗುಣಭರಿತ 1 ಮಧ್ವಶಾಸ್ತ್ರಪಠಿಸಿ ಬಹುಪ್ರಸಿದ್ಧಟೀಕೆ ರಚಿಸುತ | ಸದ್ವೈಷ್ಣವ ಸಿದ್ಧಾಂತವೇ ಶುದ್ಧವೆನಿಸಿ ಮೆರೆದ ಧೀರಾ 2 ನರಹರಿ ಸಿರಿರಾಮಕೃಷ್ಣ ವರವೇದವ್ಯಾಸರು | ಇರುತಿರುವರು ನಿನ್ನೊಳು ತವ ಪರಿಜನ ಸೇವೆಗಳ ಕೊಳುತ3 ವಾರಾಹಿ ಸುಕ್ಷೇತ್ರನಿಲಯ ಚಾರುಚರಿತ ಗುಣಮಯ | ಆರಾಧಿಪ ದೀನಾಳಿಗೆ ಸಾರಸೌಖ್ಯವೀವ ಕಾವ 4 ಶ್ರೀಶಕೇಶವಾಂಘ್ರಿದೂತ ದಾಸಜನನುತ | ಲೇಸಾಗಿಹ ಭೂಸುರ ಸಹವಾಸವಿತ್ತು ಕರುಣಿಸಯ್ಯ 5
--------------
ಶ್ರೀಶ ಕೇಶವದಾಸರು
ಚಿಂತಯಾಮಿ ರಾಮಮಮಿತಮಹಿಮಂ ಶಾಂತದಾಂತ ಮಾಕಾಂತ ಧೀಮಂತ ಪ ಅಂತರಾತ್ಮಮಮಲ ಸುಗುಣ ಭರಿತಂ ಸಂತ ಹನೂಮಂತನಮಿತ ಚರಿತಂಅ.ಪ ಮೌನಿಯಾಗ ಪಾಲಮತುಳ ಶೂರಂ 1 ಮಾನಿನೀಮಣಿ ಶಾಪಭಂಗ ಚತುರಂ 2 ಜಾನಕೀ ಹೃದಯಾಪಹಾರ ಧೀರಂ 3 ಸಾನುಜ ಭರತೇಷ್ಟದಾತಮುದಾರಂ 4 ದಾನವ ಖರದೂಷಣ ಸಂಹಾರಂ 5 ಆನತ ಖಚರೇಂದ್ರ ಮೋಕ್ಷದಾತಾರಂ6 ಕಾನನ ಸತ್ಪಾವನಕರ ಸಂಚಾರಂ 7 ವಾನರಪತಿ ಸೇವಿತ ಪರಿವಾರಂ 8 ದಾನವ ರಾವಣ ಮರ್ದನ ಶೂರಂ9 ದೀನಪಾಲ ಮಾಂಗಿರಿಪತಿ ಗಂಭೀರಂ 10
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಚಿಂತಿಸುತಿರು ಮನವೇ ಸಿರಿಕಾಂತನಂಘ್ರಿಯ ಚಿಂತಿಸು ಮನವೆ ನಿರಂತರ ಶ್ರೀಮದ ನಂತಗಿರಿಯಲಿ ನಿಂತು ಭಜಕರ ಚಿಂತಿತಪ್ರದ ನಂತಶಯನನ ಅ.ಪ ಶಾಂತ್ಯಾದಿ ಗುಣಭರಿತ ಮಹಂತ ಮುನಿ ಮಾ ರ್ಕಾಂಡೇಯಗೊಲಿದು ಸತತ ಪರ್ವತದಿ ಲಕ್ಷ್ಮೀ ಕಾಂತನೆಸುರ ಸಹಿತ ಸನ್ನಿಹಿತನೆನುತ ಕಂತುಹರನುತ ನಂತ ಮಹಿಮನ ಸಂತಸದಿ ಸಂತುತಿಸುತಲಿ ತ- ದಿನಕರಾನಂತ ದೇವನ 1 ನಾರ ಶಿಂಹನದರ್ಶನ ಕೊಳ್ಳುತಿರೆ ಮುನಿ ಬಲ ದ್ವಾರದಿಂದಲಿ ಪ್ರತಿದಿನ ವಿರುತಿರೆ ಪ್ರಥಮ ದ್ವಾದಶಿಯೊಳು ಸಾಧನ ತಕ್ಷಣ ಪ್ರಸನ್ನ ಸೂರ್ಯಸುತನ ಉದಯದಲಿ ಭಾಗೀರಥಿಯು ಪು ಷ್ಕರಣಿಯೊಳು ಬರೆ ಪಾರಿಜಾತದ ಭೂರುಹಂಗಳ ಚಾರುರೂಪವ ತೋರಿದಾತನ 2 ನೀರಜಾಸನ ವಂದಿತ ಬಂಗಾರಮಕುಟ ಕೇಯೂರ ಕಂಕಣ ಭೂಷಿತ ಚಕ್ರಾದಿ ಚಿನ್ಹಿತ ಚಾರುಶಿಲೆಯೊಳು ಸನ್ನಿಹಿತ ಭಜಕರನು ಪೊರೆಯುತ ವಾರವಾರಕೆ ಭಕುತಜನ ಪರಿವಾರದಿಂ ಸೇವೆಯನು ಕೊಳ್ಳುತ ಧಾರುಣಿಯೊಳು ಮೆರೆವ ಕಾರ್ಪರ ನಾರಶಿಂಹಾತ್ಮಕ ಸ್ವರೂಪನ3
--------------
ಕಾರ್ಪರ ನರಹರಿದಾಸರು
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಜಗದಾದಿಮಾತೆಯೆ ಪ ಮೊರೆಯ ಕೇಳಮ್ಮ ಪರಮ ಪಾವನೆಯೆ ಕರುಣ ಹಸ್ತವ ಶಿರದಿ ಇಡು ದಯೆ ಭರಿತೆ ಜಗನ್ಮಯೆ ಅ.ಪ ಕಮಲಜಾತನ ಪ್ರೇಮ ಸುಂದರಿಯೆ ಅಮರ ವಿನುತೆಯೆ ಕಮಲನೇತ್ರೆ ಸಾವಿತ್ರಿ ಶಾರದೆಯೆ ವಿಮಲಚರಿತಳೆ ದಮೆ ದಯಾನ್ವಿತೆಯ ಶಮೆ ಶಾಂತಿನಿಲಯೆ ಕುಮುದಬಾಂಧವಕೋಟಿಪ್ರಭಾಮಯೆ 1 ವರ ಸುವಿದ್ಯ ಸಂಗೀತ ಶರ್ವಾಣೆ ಪರಮಕಲ್ಯಾಣೆ ಶರಣ ಜನಪ್ರಿಯೆ ವೀಣಾಧರಪಾಣಿ ಸ್ಮರಿಪ ಜನ ಮನದಿಷ್ಟ ಪರಿಪೂರ್ಣ ದುರಿತದೂರಿಣೆ ಪೊರೆದೆ ಮನುಗಳ ಜ್ಞಾನದಿಂ ವಾಣಿ 2 ಚರಣದಡಿಲೆನ್ನ ಶಿರವನಿಕ್ಕಿ ಬೇಡಿಕೊಂಬುವೆ ನಾ ಮರೆವ ಹರಿಸಿ ಭರದಿಂ ಕೊಡು ಜ್ಞಾನ ಸ್ಥಿರಮತಿಯ ಮುನ್ನ ನಿರುತದ್ಹೊಗಳುವೆ ನಿಮ್ಮ ಚರಿತವನು 3
--------------
ರಾಮದಾಸರು
ಜನನಿ ರುದ್ರಾಣಿ ರಕ್ಷಿಸು ಎನ್ನ ಜಗದೀಶನ ರಾಣಿ ಪ. ವನಜಭವಸುರಮುನಿಕುಲಾರ್ಚಿತೆ ಕನಕವರ್ಣಶರೀರೆ ಕಮಲಾ- ನನೆ ಕರುಣಾಸಾಗರೆ ನಮಜ್ಜನ- ಮನಮುದಾಕರೆ ಮಾನಿತೋದ್ಧರೆ ಅ.ಪ. ಆದಿಕೃತಾಯುಗದಿ ಪ್ರತಿಷ್ಠಿತ- ಳಾದೆ ಧರಾತಳದಿ ಆದಿತೇಯರ ಬಾಧಿಸುವ ದಿತಿ- ಜಾಧಮರ ಭೇದಿಸಿದೆ ಸಜ್ಜನ- ರಾದವರ ಮನ್ನಿಸಿದೆ ತ್ರೈಜಗ- ದಾದಿಮಾಯೆ ವಿನೋದರೂಪಿಣಿ 1 ಖಂಡ ಪರಶುಪ್ರೀತೆ ನಿಖಿಲಬ್ರ- ಹ್ಮಾಂಡೋದರಭರಿತೆ ಚಂಡಮುಂಡವೇತಂಡದಳನೋ- ದ್ದಂಡಸಿಂಹೆ ಅಖಂಡಲಾರ್ಚಿತೆ ಪಾಂಡುತನುಜ ಕೋದಂಡ ವಿತರಣೆ ಚಂಡಿಕೇ ಕರದಂಡಲೋಚನಿ2 ಸಿಂಧೂರ ಸಮಯಾನೆ ಸರಸ ಗುಣ- ವೃಂದೆ ಕೋಕಿಲಗಾನೆ ಸುಂದರಾಂಗಿ ಮೃಗೇಂದ್ರವಾಹಿನಿ ಚಂದ್ರಚೂಡಮನೋಜ್ಞೆ ಸತತಾ- ನಂದಪೂರ್ಣೆ ಮುನೀಂದ್ರನುತೆ ಸುಮ- ಗಂಧಿ ಗೌರಿ ಶಿವೇ ಭವಾನಿ 3 ಲಂಬೋದರಮಾತೆ ಲಲಿತ ಜಗ- ದಂಬಿಕೆ ಗಿರಿಜಾತೆ ಕಂಬುಕಂಠಿ ಕಾದಂಬನೀಕು- ರುಂಬಜಿತಧಮ್ಮಿಲ್ಲೆ ತವ ಪಾ- ದಾಂಬುಜವ ನಾ ನಂಬಿದೆನು ಎನ- ಗಿಂಬು ಪಾಲಿಸೆ ಶುಂಭಮರ್ದಿನಿ 4 ಘನವೇಣುಪುರವಾಸೆ ಸರ್ವಾರ್ಥದಾ- ಯಿನಿ ತ್ರೈಜಗದೀಶೆ ಸನಕನುತೆ ಶ್ರೀಲಕ್ಷುಮಿನಾರಾ- ಯಣಭಗಿನಿ ಶ್ರೀಮಹಿಷಮರ್ದಿನಿ ಮನಮಥಾಮಿತರೂಪೆ ಕಾತ್ಯಾ- ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋಜೋ ಜೋಜೋ ಜೋ ವೆಂಕಟೇಶ ಜೋಜೋ ಜೋಜೋ ಜೋ ಶ್ರೀನಿವಾಸ ಜೋಜೋ ಜೋಜೋ ಭಕ್ತರಘನಾಶ ಜೋಜೋ ಜೋಜೋ ಜೋ ಸ್ವಪ್ರಕಾಶ ಜೋಜೋ ಪ ನಂಬಿದೆ ತಂದೆ ಮುದ್ದು ಮೋಹನ್ನ ವಿಠ್ಠಲ ಸುಂದರ ಶ್ರೀ ಉರಗಾದ್ರಿವಾಸ ವಿಠ್ಠಲ ಸಿರಿ ಉರಗಾದ್ರಿವಾಸ ವಿಠ್ಠಲ ಇಂದಿರಾಪತಿ ತಂದೆ ವೆಂಕಟೇಶ ವಿಠ್ಠಲ 1 ಆನಂದಮಯ ಅಂತರಾತ್ಮವಿಠಲ ನವನೀತ ಧರ ತಾಂಡವ ಕೃಷ್ಣ ವಿಠ್ಠಲ ಜಯವೆಂದು ಪಾಡುವೆ ಜಯಾಪತಿ ವಿಠ್ಠಲ ಸರಿಯುಂಟೆ ನಿನಗಿನ್ನು ಶಾಂತೀಶ ವಿಠ್ಠಲ2 ಗಂಗಾಜನಕ ಶ್ರೀ ಗಜವರದ ವಿಠ್ಠಲ ಸಂಗರಹಿತ ಶೇಷಶಯನ ವಿಠ್ಠಲ ಹಯವನೇರುತ ಪೊರೆದೆ ಶ್ರೀಹರಿ ವಿಠ್ಠಲ ದಾನವೈರಿಯೆ ಧ್ರುವವರದ ವಿಠ್ಠಲ 3 ಗರುಡಗಮನ ಗುರುವಾಸುದೇವ ವಿಠ್ಠಲ ವರವ ಪಾಲಿಸು ವರದ ಲಕ್ಷ್ಮೀಶ ವಿಠ್ಠಲ ಪದ್ಮನಾಭನೆ ಕಾಯೊ ಪ್ರದ್ಯುಮ್ನ ವಿಠ್ಠಲ ವರಲಕ್ಷ್ಮೀರಮಣ ವರದ ವೆಂಕಟೇಶ ವಿಠ್ಠಲ4 ಸಜ್ಜನಪಾಲ ಶ್ರೀ ಸುಜ್ಞಾನ ವಿಠ್ಠಲ ಶಾಮಲಾಂಗನೆÀ ಕೃಷ್ಣ ಶ್ರೀನಾಥ ವಿಠ್ಠಲ ಭಾರತೀಶ ಪ್ರಿಯ ವಿಠ್ಠಲ ಪರಿಸರನೊಡೆಯ ಶ್ರೀವರಹ ವಿಠ್ಠಲ 5 ಜ್ಞಾನದಾಯಕ ಆನಂದಮಯ ವಿಠ್ಠಲ ಸಜ್ಜನ ಪರಿಪಾಲ ಶ್ರೀ ಪ್ರಾಜ್ಞ ವಿಠ್ಠಲ ಜಗವ ಮೋಹಿಪ ದೇವ ಜಗದ್ಭರಿತ ವಿಠ್ಠಲ ವಿಶ್ವ ವ್ಯಾಪಕ ವಿಜ್ಞಾನಮಯ ವಿಠ್ಠಲ6 ವಿಷ್ಣುಮೂರುತಿ ಕೃಷ್ಣದ್ವೈಪಾಯನ ವಿಠ್ಠಲ ಅಕ್ಷರೇಡ್ಯನೆ ಕಾಯೋ ಲಕ್ಷ್ಮೀಶ ವಿಠ್ಠಲ ಕಂಟಕ ಹರಿಸು ಶ್ರೀವೆಂಕಟೇಶ ವಿಠ್ಠಲ ಸಾರಿದೆ ಸಲಹೆನ್ನ ಶ್ರೀರಮಣ ವಿಠ್ಠಲ7 ದುರುಳರ ಮಡುಹಿದ ವರದ ವಿಠ್ಠಲ ಅಂಬುಧಿ ಶಯನಪನ್ನಂಗ ಶಯನ ವಿಠ್ಠಲ ದಾರಿ ತೋರಿಸೊ ದಾಮೋದರ ವಿಠ್ಠಲ ಕರುಣಿಸಿ ಪೊರೆ ಎನ್ನ ಕಮಲನಾಭ ವಿಠ್ಠಲ8 ಕಂಜದಳಾಕ್ಷ ಕಮಲನಾಥ ವಿಠ್ಠಲ ಮುರಮರ್ದನನೆ ಕಾಯೋ ಮುರಳೀಧರ ವಿಠ್ಠಲ ದಯದಿಂದ ಪಾಲಿಸು ದಯಾನಿಧೆ ವಿಠ್ಠಲ ಅಚ್ಚುತ ಹರಿ ಕೃಷ್ಣಕ್ಷೇತ್ರಜ್ಞವಿಠ್ಠಲ9 ಜ್ಞಾನಿಗಳರಸನೆ ಆನಂದ ವಿಠ್ಠಲ ಮೂಜಗದೊಡೆಯ ಭಾರ್ಗವೀಶ ವಿಠ್ಠಲ ಸರ್ವಕರ್ತೃ ಪುರುಷೋತ್ತಮ ವಿಠ್ಠಲ ಮಧುವೈರಿ ಪೊರೆಮಧುರನಾಥ ವಿಠ್ಠಲ10 ರಾಕ್ಷಸವೈರಿ ರಮಾಧವ ವಿಠ್ಠಲ ಕರುಣಿಗಳರಸನೆ ಕಾರುಣ್ಯ ವಿಠ್ಠಲ ಎದುರ್ಯಾರೋ ನಿನಗಿನ್ನು ಯದುಪತಿ ವಿಠ್ಠಲ ಉದ್ಧರಿಸೆನ್ನ ಉದ್ಧವವರದ ವಿಠ್ಠಲ11 ನಾಗಶಯನ ಕೃಷ್ಣಯೋಗೀಶ ವಿಠ್ಠಲ ಕುಂಭಿಣಿಪತಿ ಶ್ರೀಶ ಸಿಂಧುಶಯನ ವಿಠ್ಠಲ ಸುಜ್ಞಾನವೀವ ಪ್ರಾಜ್ಞಾನಿಧಿ ವಿಠ್ಠಲ ಸಂಕಟಹರಿಸು ಸಂಕರ್ಷಣ ವಿಠ್ಠಲ12 ಗೋಪಿಕಾಲೋಲ ಗೋಪೀನಾಥ ವಿಠ್ಠಲ ಪಾದ್ಯ ವೈಕುಂಠಪತಿ ವಿಠ್ಠಲ ಮಾತರಿಶೃಪ್ರಿಯ ಶ್ರೀಕಾಂತ ವಿಠ್ಠಲ ಧನ್ಯನಾದೆನೋ ದೇವ ಧನ್ವಂತ್ರಿ ವಿಠ್ಠಲ13 ಶ್ರೀಧರ ಪೊರೆ ವೇದವತೀಶ ವಿಠ್ಠಲ ಸಾಧುಗಳರಸನೆ ಭಕ್ತವತ್ಸಲ ಮೇದಿನಿಯೊಳು ನಿನ್ನ ಪೋಲುವರಿಲ್ಲ ಆದರದಿಂ ಕೇಳೊ ನೀ ಎನ್ನ ಸೊಲ್ಲ14 ರನ್ನ ಮಂಟಪದೊಳು ಚಿನ್ನದ ತೊಟ್ಟಿಲು ಕನ್ನೇರುತೂಗಿ ಪಾಡುವರೊ ಗೋವಿಂದ ಕರುಣಸಾಗರ ಕೃಷ್ಣ ಮಲಗಿ ನಿದ್ರೆಯ ಮಾಡೊ ಕಮಲನಾಭ ವಿಠ್ಠಲ ಪರಮದಯಾಳು 15
--------------
ನಿಡಗುರುಕಿ ಜೀವೂಬಾಯಿ
ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು
ತಾತ್ವಿಕ ಕೃತಿಗಳು ಅಂಥಾ ಕರುಣನೇ ನಮ್ಮ ರಂಗ ಅನಂತ ಶರಣನೇ ಪ ಎಂಥ ಕರುಣ ನಮ್ಮ ರಂಗ ಅಂತರಾತ್ಮ ಪಾಂಡುರಂಗ ಚಿಂತೆಗಳನು ದಹಿಪ ರಂಗ ಅಂತರಾ ಅಭ್ಯಂತರಂಗ ಅ.ಪ ಮೂಡಲಾದ್ರಿಯ ವೆಂಕಟೇಶ ಆಡಬಂದನೇ ನಾಡಿನೊಳಗೆ ಮೂಡಿ ನಿಂದನೇ ಗಾಡಿಕಾರ ರಂಗಧಾಮ ಕೇಡುಗಳನು ಬಡಿವನಾಮ ವಾಡಿಗೆಗಳಂತಿರುವ ಭಕ್ತ ಕೋಟಿಗೇ ವರವೀವ ಪ್ರೇಮ1 ಹರನ ರೂಪವತಾಳಿ ನಿಂದ ಹರಿಮಾಧವ ಒರಳಿನೊಳು ಮೆರೆಯುತಿರುವವ ಹರಿಯುಹರನು ಬೇರೆಯಲ್ಲ | ನರರನೋಡಿ ನೋಡಿ ಸೊಲ್ಲ ಬರಿದೆಭ್ರಾಂತಿ ಲೇಸದಲ್ಲ ಅರುಹುವನೆಂಬುವ ಗೊಲ್ಲ 2 ಯುಕ್ತಿಯವರನ್ಯರಿಲ್ಲ ವಿ ರಕ್ತನಾಗಿ ಗುಣವದಿಲ್ಲ ಭಕ್ತಗೊಲಿವ ಹರಿಯುಬಲ್ಲ ಯುಕ್ತಿ ಇದಕೆ ಬೇರೆ ಇಲ್ಲ 3 ತನಯನೋರ್ವನನೆ ಪಡೆಯಲೆಳಸಿವನಜನಾಭನ ಕರುಣದಿಂದ ತನಯನುದಯಿಸಲು ಧನಿಕ ಕೈಂಕರ್ಯವನು ಗೈದು ಧನವ ಗಣನೆಗೈಯಲದು ಮನದಿ ಮರುಗಿ ಕೆಳಕ್ಕೈತಂದ| ವನಿತೆಯಿತ್ತ ಪೊಂಗಲ ಸವಿದ4 ಕಾಮಜನಕನೇ ನಮ್ಮರಂಗ | ಕೋಮಲಾಂಗನೇ ಕರುಣಾಪಾಂಗ ಭೀಮವಿಕ್ರಮನೇ ಭೂಮಿಜಾತೆಯ ರಸಭರಿತ ರಾಮದಾಸವಿನುತಲೀಲ ವಾಸುದೇವನ ಹೋಲುವರಂಗ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾನೇ ತಾನು ಜಗದಂತರ್ಯಾಮಿ ವಿಶ್ವಂಭರಿತಾ ತಾನೇ ತಾನು ಹರಿಧ್ಯಾನ ಧನ ದಾನ ಮಾನ ಅಣುರೇಣುಗಳಲ್ಲಿ ಪ ವಬ್ಬಸೂರ್ಯಜಗ ಸರ್ವ ಚಕ್ಷಗಳ ಮಬ್ಬುಹಾರಿಸುವಂತೆ ಅ.ಪ ಘಟ ಮಠಾದಿಗಳ ಚದುಳ ಬ್ರಹ್ಮಘಟಿ ನೆಟಗೆ ವ್ಯಾಪ್ತ ನಿಚ್ಚಲ ಗಗನದಂತೆ 1 ಕಂಭಸೂತ್ರದ ಬೊಂಬೆಯಾಟದಲಿ ಇಂಬುಗೊಂಡ ಕುಳೆ ಬಿಂಬಿಸುವಂತೆ2 ಕಂದ ಕುಂದದಾನಂದ ಚಂದ ಘನ ತಂದೆ ಮಹಿಪತಿ ನಂದನ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತುಳಸಿ ನಿನ್ನ ಭಜಿಸುವೆ | ಬಳಸಿ ಬಳಸಿ ನಮಿಸುವೆ ಪ ಕೊಳಲಬಾಲನರಸಿಯೇ | ನಳಿನವಿಸರಗಂಧಿಯೇ ಅ.ಪ ಗಾನಕೊಲಿದು ನಲಿವಳೇ | ಜ್ಞಾನವಿತ್ತು ಕಾವಳೆ ನಿನ್ನಕರುಣೆ ಕೃಷ್ಣನೊಲವು | ನಿನ್ನಸ್ಮರಣೆ ಪಾಪಹರವು 1 ಮಂಗಳಾಂಗಿ ತುಳಸಿದೇವಿ ರಂಗಗಿರಿಯ ನೀವದೇವಿ ಮಾಂಗಿರೀಶ ದಯಿತೆ ಮಹಿತೆ ಇಂಗಿತಾರ್ಥವೀವ ಮಾತೆ 2 ಬೃಂದಾವನ ದಿವ್ಯಸದನೆ ಇಂದೀವರ ಭವ್ಯವದನೆ ಕುಂದಾವಳಿ ಸದೃಶರದನೆ ನಂದಾತ್ಮಜ ಮನಮೋಹನೆ 3 ಸರಸವಿರಸಭರಿತೆ ನಮಿತೆ ಪರಮಚತುರೆ ಸುರಸನ್ನುತೆ ಮುರಳಿಗಾನಲಸಿತೆ ಮಾತೆ ವಂದೆ ಮಾಂಗಿರೀಶಸಹಿತೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಳಸೀ ಸ್ತುತಿ ಮಾಧವ ಹೃದಯೆ ಪ ಪೀತಾಂಬರಧರ ಶ್ರೀಹರಿಜಾಯೆ ಅ.ಪ [ಸುಂದರ] ಮಣಿಮಯಸದನೆ ಪರಮಪಾವನೆ ಇಂದೀವರದಳ ಕೋಮಲನಯನೆ 1 ಪ್ರೇಮರಸಾನ್ವಿತೆ ಗುಣಭರಿತೇ ಶ್ರೀಮಾಂಗಿರಿವರ ರಂಗಮಹಿತೇ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತೊಂಡನು ಕಂಡುದ ಬಿನ್ನೈಸುವೆನುಪಾಂಡವ ಪ್ರಿಯ ಎನ್ನ ತಪ್ಪು ಕಾಯಯ್ಯ ಪ ಹರಿ ನಿನ್ನ ನಾಮ ಕಾಮಧೇನುವಿಗೆದುರಿತದೊಟ್ಟಿಲು ಮೇವು ಭವಾಂಬುಧಿಯುಅರಸಿ ಕುಡಿವ ನೀರೆರೆವಡೆನ್ನಲ್ಲಿಭರಿತವಾಗಿರೆ ಒಲಿದು ಎನ್ನೊಳ್ಯಾಕಿರಿಸೆ 1 ಮುನಿಗಳ ಮನದ ಮೊನೆಯಾದ ಕೊನೆಯಲ್ಲಿಘನಭಕ್ತಿ ಪಾಶದಿ ಸಿಲುಕಲ್ಯಾಕೆಎನ್ನ ಚಿತ್ತ ಚಂಚಲದುಯ್ಯಾಲೆಯಲಿನಿನ್ನ ಮನಬಂದಂತೆ ಓಲ್ಯಾಡಲಾಗದೆ 2 ಕರ್ಣರಂಧ್ರದಿ ಮನವನು ಪೊಕ್ಕು ಪಾಪವನಿನ್ನವರಲಿ ತಳವರಸಲ್ಯಾಕೆಎನ್ನೊಳ ಹೊರಗೆ ಪಾಪರಾಸಿಗಳಿವೆನಿನ್ನ ಮನಬಂದಂತೆ ಸೊರೆಗೊಳ್ಳೆಲೊ ಕೃಷ್ಣ3
--------------
ವ್ಯಾಸರಾಯರು