(ಮಂಗಳೂರು ಉಮಾಮಹೇಶ್ವರ ದೇವರು)
ಚಂದ್ರಚೂಡನಿವನ್ಯಾರೆ ಹೇಳಮ್ಮ
ಇಂದ್ರಾದಿವರ ಮನೋ ಮಂದಿರ ನಮ್ಮ ಪ.
ಭಾಲಲೋಚನ ಪಂಚತತ್ವ ವಿವೇಚನ
ನೀಲಕಂಧರನಿವನ್ಯಾರೆ ಹೇಳಮ್ಮ
ಸಾಲಾಗಿ ನಿಲುವ ದಿಕ್ಪಾಲ ಗಣದಿ ಕ-
ಟ್ಟಾಳುಗಳಿರವ ಸುಶೀಲ ಕಾಣಮ್ಮ 1
ಭಸ್ಮೋದ್ಧೂಳಿತ ವಿಗ್ರಹ ವಿಶದ ಮಂ-
ದಸ್ಮಿತಮುಖನಿವನ್ಯಾರೆ ಹೇಳಮ್ಮ
ವಿಸ್ಮರಣೆಗಳೆಂದಿಗೀಯದೆ ಪಾಲಿಪ
ಅಸ್ಮದ್ಗುರುವಂಬಿಕೇಶ ಕಾಣಮ್ಮ 2
ಉಮ್ಮೆಯನೊಡಗೊಂಡು ವುಛ್ರಯದೋರುತ
ನಮ್ಮಲ್ಲಿ ದಯವಾದನ್ಯಾರೆ ಹೇಳಮ್ಮ
ಬೊಮ್ಮನ ಪೆತ್ತ ಭಕ್ತಾಧೀನ ಶೇಷಾದ್ರಿ
ತಿಮ್ಮಪ್ಪರಾಜನ ಮೊಮ್ಮಕಾಣಮ್ಮ 3