ಒಟ್ಟು 646 ಕಡೆಗಳಲ್ಲಿ , 87 ದಾಸರು , 537 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಋಣವ ಮಾಡ್ದಧಮಗುಸುರಲೆುಲ್ಲ ನೀತಿಯಮನು ಮುಖ್ಯಸ್ಮøತಿಕರ್ತರೂ ಪಕಣುಗೆಟ್ಟಿನೀ ದೋಷ ಕಡಲೊಳಗೆ ಮುಳುಗಿ ಮುಂದಣ ಗತಿಯದೇನೆನಗೆ ಕರುಣಿಸೈ ಗುರುವೆ ಅ.ಪಹೇಮಾದ್ರಿ ಮಾಧ'ೀಯಾದಿ ಪ್ರಾಯಶ್ಚಿತ್ತ ನೇಮ 'ಧಿ ಕಾಂಡಗೆಗಳೊಳೂಕಾಮದಿಂದಲಿ ಮಹಾಪಾತಕಗಳನು ಮಾಡಿದೀ ಮಹಾ ತಂಡಗಳೊಳೂಭೂ'ು ಗೋ ದ್ವಿಜರಾಜ ಸ್ತ್ರೀ ದ್ರೋ'ಗಳೊಳು ಪರಭಾ'ುನೀಗಾ'ುಗಳೊಳೂತಾಮಸಾಧಮರೊಳಧರ್ಮನೆನಿಸಿಹೆನೆಂದೇ ಮರಳಿ ಮರಳಿ ಪೇಳಿಹುದಲ್ಲವೆ ಗುರುವೆ 1ಹದಿನೆಂಟು ಬಗೆ ಮಹಾ ಪೌರಾಣ ಕಥೆಗಳೊಳಗಧಮನೀ ಋಣವಂತನೆವದರುತಿವೆಯುಪಪುರಾಣಂಗಳಷ್ಟಾದಶಗಳಧಮನೀ ಋಣವಂತನೆಒದಗಿದೀ ಸಂಖ್ಯೆಯುಪಸ್ಮøತಿಗಳೊಳಗೂ ಪೇಳ್ವುದಧಮನೀ ಋಣವಂತನೆಸದಯತನ ಪುಟ್ಟದಾುತೀ ಪತಿತ 'ಷಯದಲಿಹದನೆನಂಮುಂದೆ ಮುಳುಗಿದೆನೆಲ್ಲೊ ಗುರುವೆ 2ಮೂರು ಮತ್ತೈದಾ ಭೇದ ಋಣ 'ದ್ದರೆಯು ತೀರುವರೆ ಮಾರ್ಗಗಳಿವೆತೀರದಿದ್ದರು ಜನುಮಗೊಡುವವಲ್ಲದೆ ವೃದ್ಧಿಸಿರಿ ಬೆಳೆಯದೆ ನಿಂತಿವೆಆರು ಬಗೆುಂ ಬಡ್ಡಿ ನುಡಿಯದಿದ್ದರು ದಿನವು'ುೀರಲಿದಕೊದಗುತಲಿವೆದಾರಿಯ ನನಗೀಪರಿಯ ಧನ ಋಣವ ದೈವಹೇರಿ ತಳವಳಿದೆನೈರಕ್ಷಿಸೈ ಗುರುವೆ 3ಕಾಶಿಗೈದುವರಾಗದಡ'ಯೊಳಿರುವರಾಗದೀಶ ಭಜನೆಯ ಗಣಿಸದೂುೀಷಣೆಗಳನು ಬಿಟ್ಟು ಸನ್ಯಾಸವನು ಮಾಡಲೀಸದೆ ತನವನರಸದೂದೇಶದೇಶವ ತಿರುಗೆ ತೀರ್ಥಗಳೊಳ್ಮಿಂದರೂಲೇಶ ಮಾತ್ರವು ಸವೆಯದೂಈ ಶರೀರವು ಬೀಳೆ ಕ್ರಮವಾಗಿ ತೊತ್ತು ಸತಿದಾಸಸುತ ಕತ್ತೆಭವಗೊಡುವದೈ ಗುರುವೆ 4ಋಣವು ಮಾಡಿದ ಪತಿತನುಂಬ ಪಂಕ್ತಿಯೊಳು ಜನರುಣಲಾಗದುಂಡರವನೂತನಯ ಪೌತ್ರರು ಸ'ತ ಪತಿತನಪ್ಪನು ನಿಮಂತ್ರಣಗೈಸೆ ಧನ ಋಣಿಯನೂಎಣಿಸಲಾ ಕಲ್ಪನರಕವು ಪಿತೃಗಳಿಗೆ ಕರ್ತನನುಭ'ಪ ನರಕಗಳನೂಎನುತ ಭೀಷ್ಮಾಚಾರ್ಯರುಸುರಿದರು ಧರ್ಮನಂದನಗೆ ಭಾರತ ಶಾಂತಿಪರ್ವದೊಳು ಗುರುವೆ 5ತಲೆಯೋಡ ಪಿಡಿದು ಚಂಡಾಲಗೇರಿಯಲಾದರಳುತ ಕೊಟ್ಟ ಪರಧನವಸಲಿಸದೆ ಕೆಟ್ಟು ಬಂದೆನು ಭಿಕ್ಷಗೊಡಿಯೆಂದುಹಲವು ನಿಂದ್ಯದ್ರವ್ಯವಾಅಳುಕದೆ ತಂದು ಜೀವನಗೈಯ್ದುದರಿಂದುಸಲೆಗೈದು ತಂದ ಋಣವಾಕಳಿವ ನವನರಕಗಳೆಂದು ಹರಿಶ್ಚಂದ್ರ 'ಭುತಿಳು'ದರು ದುರ್ಮನ ಬಿಡದಲ್ಲೊ ಗುರುವೆ 6ಸುತನ ಮಾರಿದ ದೋಷ ಸತಿಯ ಮಾರಿದ ದೋಷಪಿತೃ ಮಾತೃಹತ್ಯ ದೋಷಾಪತಿತನಾಗುವ ದೋಷ ಪತ್ರವನು ಬರದು ತನುಪತನವಾಗುವ 'ಶೇಷಯತನದಿಂದ ಮಾಡ್ದ ಪುಣ್ಯವು ಪೋಪದೋಷ ಪರಸುತ ಭೃತ್ಯನಪ್ಪ ದೋಷಜೊತೆಗೂಡಿ ಗಣಿಸದೆ ಸಾಲವನು ಮಾಡಿದೀಪತಿತನನು ನರಕಕಿಳುಹುವದೆಲ್ಲೊ ಗುರುವೆ 7ನಿತ್ಯಕರ್ಮವ ಮಾಡುವಧಿಕಾರ ಮೊದಲಿಲ್ಲಸತ್ತ ಸೂತಕಕಧಿಕವೂಹೆತ್ತ ತಾು ತಂದೆಗಳ ಮೃತ ದಿನದಿ ಪಿಂಡಗಳನಿತ್ತರವರನುಸಿರವೂಸತ್ತರೂ ಬಿಡದೆ ಬೆಂಬತ್ತಿ ಪೈಶಾಚದಂತೊತ್ತುವದೇಳೇಳು ಭವವೂಇತ್ತಲ್ಲದೆ ಬಡ್ಡಿಸಹ ಮೌಲ್ಯವನು ಪೋಗದೆತ್ತ ಹೋಗಲಿ ಯೇನಮಾಡಲೈ ಗುರುವೇ 8ವರುಷ ಸಾ'ರವಾದರೆಯು ಋಣದ ಮ'ಮೆಯನುಬರೆಯುವದಸಾಧ್ಯ ಗುರುವೆಪರಮ ಋಣಿಗಳು ಸ್ಮøತಿ ಪುರಾಣೇತಿಹಾಸಗಳೊಳರುಪುತಿಹರಿಂತು ಗುರುವೆಹರತು ಋಣಗತ್ತಲೆಯು ನಿನ್ನ ಪದಗಾಬಂತೆಕರುಣಿಸೈ ಬೇಗ ಗುರುವೆಮರೆಯೊಕ್ಕೆ ನಾನು ತಿಮ್ಮದಾಸ ಚಿಕ್ಕನಾಗಪುರವರನಿಲಯ ವಾಸುದೇವಾರ್ಯ ಸದ್ಗುರುವೆ 9
--------------
ತಿಮ್ಮಪ್ಪದಾಸರು
ಎಂತು ಜೀವಿಸಲಯ್ಯ ಯಾದವೇಶ ಪ ಎನ್ನಸುವಿಗಸು ನೀನು ಭಿನ್ನ ಜ್ಞಾನದಿ ಎನ್ನ ಅ.ಪ ಬನ್ನ ಬಡಿಸುವಿ ಮಾಯ ಜೈಸಲರಿಯೆ ವಿಧಿ ವಾಯು ಶಿವ ಶಕ್ರ ಸುರನಿಕರ ನಿನ್ನಲ್ಲಿ ಸುಖಿಸುವರೊ ಅನ್ನೆಲ್ಲಿ ಅಸತೆಂದು 1 ನೀರಗುಳ್ಳೆಯಂತೆ ಸಂಸೃತಿಯ ಸುಖವೆಂದು ದಾರಿತೋರ್ವವ ನೀನು ಕಣ್ಣುಕಟ್ಟೆ ಆರು ಬಿಚ್ಚುವರಯ್ಯ ಆ ಪಟಲಕಿಕ್ಕಟ್ಟು ವಾರಿಜಾಸನನಯ್ಯ ವಂಚಿಸದೆ ಮೈದೋರು 2 ಕಾಮಾದಿ ಷಡ್ವರ್ಗ ದುಷ್ಕರಣ ದುಮ್ಮಾನದ ತಾಮಸದಿ ಸಿಗಬಿದ್ದು ಪಾಮರಾದೆ ವ್ಯೋಮಕೇಶನ ಮಿತ್ರ ಜಯೇಶವಿಠಲ ನೀ ಮನಸು ಮಾಡಲು ಆತ್ಮಾಪಿ ವೈಕುಂಠ 3
--------------
ಜಯೇಶವಿಠಲ
ಎಂತು ಮೀರುವೆ ಮಾಯವಾ ಪ. ಮಾಯಾ ಕಂತು ಕಂತು ಜನಕ ಹರಿಯೆ ಸಂತತ ಗೃಹಧನ ಭ್ರಾಂತಿಗೆ ಸಿಲುಕುತಾ ತಂತ್ರವಾದೆನು ಸರ್ವತಂತ್ರ ನೀ ಕರುಣಿಸು ಅ.ಪ. ದೇಹವೆ ನಾನೆಂಬ ಮೋಹದಿ ಬಹು ವಿಧ ಮೋಹಗೊಂಡನುದಿನವು ಆಹಾರ ನಿದ್ರಾ ಮೈಥುನಗಳೆ ಗತಿ ಎಂಬ ಹಾಹಾಕಾರವು ಬಿಡದು ಇಹಪರಗಳ ಸನ್ನಾಹ ಒಂದನು ಕಾಣೆ ಗೇಹಾಂಧಕೂಪಮಹಾಹಿಮುಖದಿ ಸಿಕ್ಕಿ 1 ವೇದವಿಹಿತ ಕರ್ಮವಾದರು ಮಾಡದೆ ಸಾಧು ಮಾರ್ಗವ ಮೀರಿದೆ ಮಾದಿಗನಂತೆ ಮನಸಿನಲಿ ಬಹು ವಿಧ ಕಪಟ ತಾಳಿದೆ ವ್ಯಾಧಿ ಪೀಡಿತ ದೇಹ ಬಾಧೆಯ ಸಹಿಸದೆ ಶ್ರೀದ ನಿನ್ನಯ ಪದ್ಮ ಪಾದವೆ ಗತಿಯೆಂಬೆ 2 ಮತಿವಂತ ಜನರ ರಕ್ಷಿಪುದು ದುರ್ಘಟವೆ ಶ್ರೀ- ಪತಿ ನಿನಗುಸುರುವದೆ ಶತಕೋಟಿ ಮಿತ ಜನ್ಮಾರ್ಜಿತ ಪಾಪ ತತಿ ನೀ ಸಂ- ಸೃತನಾಗೆ ನಿಲುವುಂಟೆ ಪತಿತ ಪಾವನನೆಂಬ ಪರಮಾತ್ಮ ಶೇಷಾದ್ರಿ ಪತಿ ನೀನೆ ಗತಿಯೆಂದು ಸತತ ನಂಬಿದೆ ದೇವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂಥ ಸೂಕ್ಷ್ಮವ ನೋಡಿರಿವನ ನಮ್ಮ ಕಾಂತೆ ದ್ರೌಪತಿದೇವಿಗೆ ವರಹೀನ ಪ. ಸಣ್ಣ ಕೂಸಿದ್ದಾಗ ಇವನು ಸೂರ್ಯಗೆ ಹಣ್ಣೆಂದುಹಾರಿದ ಗಗನಕ್ಕೆ ತಾನು ಉಡ್ಡೀನ ಗೈದುನೀರಧಿಯ ದಾಟಿದನುಇವನ ಅಂಗದ ಕೋಮಲ ಬಣ್ಣ ವರ್ಣಿಸಲೇನು 1 ಗಂಧಮಾದನ ಗಿರಿ ತಂದು ನೋಡಿ ಗಿರಿ ನಿಂದಲ್ಲೆ ಹಿಂದಕ್ಕೆ ಒಗೆದ ಈಡ್ಯಾಡಿಒಂದೊಂದು ಬೆಡಗವ ನೋಡಿನಮ್ಮ ಇಂದಿರೇಶನು ನಕ್ಕ ಕೌತುಕ ಮಾಡಿ 2 ಹುಟ್ಟಿದಾಗ ಭೀಮ ಒಂದಿಷ್ಟು ಎತ್ತಿಪಟ್ಟನೆ ಬಿದ್ದು ಕೌತುಕ ಮಾಡಿದನೆಷ್ಟುಬೆಟ್ಟಗಳ ಒಡೆದು ಹಿಟ್ಟೆಟ್ಟುಇವನ ಅಂಗದ ಕೋಮಲ ವರ್ಣಿಸಲೆಷ್ಟು3 ಭಿಕ್ಷೆ ಬೇಡಿದನಂತೆ ಕಂಡು ತಾನರಿಯಳು ಕಾಂತೆ ಇಂಥ ದಿಂಡ ಪುರುಷನ ಬೆರೆದಳು ಕಾಂತೆ4 ಘನ್ನಗರಳ ಕುಡಿದನಂತೆ ಅದು ತನ್ನ ದೇಹವ ತಪಿಸುತಲಿದ್ದವರಂತೆಸನ್ಯಾಸ ಇವಗ್ಯಾಕೆ ಕಾಂತೆನಮ್ಮ ಚೆನ್ನ ರಾಮೇಶ ನೋಡಿನಕ್ಕನಂತೆ 5
--------------
ಗಲಗಲಿಅವ್ವನವರು
ಎದುರ್ಯಾರೋ ಗುರುವೇ ಸಮರ್ಯಾರೋ ಪ ವಿಧಿ ಪದ ಅರ್ಹನೆ | ಮಧುಸೂದನ ಸುತ ||ಅ. ಪ|| ಕೇಸರಿಯ ಸತಿಯಲಿ ಉದಿಸಿದ ವೀರ | ರವಿಜಗೊಲಿದಧೀರದಾಶರಥಿ - ಚರಣಕೆ ಮಣಿದ ಗಂಭೀರ | ವಾಲಿಯ ಸಂಹಾರ ||ಸಾಸಿರ ದೈವತ್ತು | ಗಾವುದ ಸಾಗರಗೋಷ್ಪದ ಗೈಯುತ | ವಸುಧಿಜೆಗೆರಗಿದ 1 ಹರಿಯ - ಸೇವಕತನ ಮಾದರಿಯ | ತೋರಿದ ಹೊಸ ಪರಿಯಅರಿಯಾ - ಲಂಕೆಯ ದಹಿಸಿದ ಪರಿಯ | ಸೇತು ಬಂಧನ ದೊರೆಯಾ ||ಅರಿ ಕುಲ ಸವರಿ ಸಂ | ಜೀವನ ಗಿರಿ ತಂದುಧುರವ ಜಯಿಸಿ ಹರಿ | ಮಡದಿಯ ತಂದಗೆ 2 ಪ್ರಥಮಾಂಗನು ಕುಂತಿಯ ಸುತನೆನಿಸೀ | ದೃಪದಾತ್ಮಜೆ ವರಿಸೀಅತಿಖ್ಯಾತ ಜರೆಸುತನನ ವಧಿಸೀ | ಕೌರವರನು ಅಳಿಸೀ ||ತತುವ ಮತವ ಸಂ | ಸ್ಥಾಪಿಸುತವನಲಿವಿತತ ಮಹಿಮ ಹರಿ | ರತಿಯನೆ ಪಡೆದಗೆ 3 ಅರಿ ಉರವನೆ ಬಗಿದೂನಾರೀಯ - ತುರಬನು ಬಿಗಿದೂ | ನರ ಮೃಗನಂತೆಸೆದೊ ||ನೀರೊಳು ಅಡಗಿದ | ಕೌರವ ಮೇಲ್ಬರೆಊರು ತಾಡನದಿಂದ | ಮಾರಕನಾದಗೆ 4 ಕಲಿಯೂ ಹೆಚ್ಚಿದ ಕಲಿಯುಗದಲ್ಲಿ | ಮಣಿಮಾನನು ಇಲ್ಲಿಮಲಿನವ ಮಾಡಲು ಬಲು ವೇದದಲೀ | ಕಲುಷಿತ ತರ್ಕದಲೀ||ಅಲವ ಬೋಧರಾಗಿ | ಹುಲುಮತವಳಿಯುತಕಲುಷಹ ಗುರು ಗೋ | ವಿಂದನೆ ಪರನೆಂದೆ 5
--------------
ಗುರುಗೋವಿಂದವಿಠಲರು
ಎದೆ ಒಡೆದು ಏಕೆ ನೀ ಹೆದರುತಿ ಮನವೆ ಪಾದ ಭಜನೆ ಹೃದಯದಲಿರೆ ಪ ಅಖಿಲ ಜನಗಳ ಪೊರೆವ ಹರಿಯು ಕರ್ತನಾಗಿರಲು ಸಕಲ ಜಗಬೋಧಗುರು ಸನ್ನಿಧಿ ಇರಲೂ ಸಕಲ ಬ್ರಹ್ಮಾದಿ ದೇವತೆ ಬಂಧು ಬಳಗಿರಲು ನಿಖಿರವಿಲ್ಲದೆ ಚಿತ್ತ ನೀನು ಈ ಪರಿಯಿಂದಾ 1 ಮುದದಿಂದ ಶ್ರೀ ಲಕ್ಷ್ಮೀ ಮಹಾತಾಯಿ ತಾ ----- -----ದಮಲ ಜ್ಞಾನಿಗಳ ಸಂಬಂಧ ವಿರಲೂ ಕುದುರೆಯಂದದಿ ಮನಸು ಕ್ರೂರರಾರ್ವರಕೂಡಿ ಒದರಿ ಪರಿಪರಿಯಲ್ಲಿ ಚಿಂತೆಯೊಳಗಾಗಿ 2 ಪರಮಾತ್ಮ ಪರಬ್ರಹ್ಮ ಪರಲೋಕ ಬಾಂಧವನು ಪರಿಪರಿಯ ಷೋಷಿಸುವ ಭಾರಕನು ಇರಲು ಅರಿತು ನೀ ಚನ್ನಾಗಿ ಹರಿ ಹೊನ್ನ ವಿಠ್ಠಲನ ಸ್ಮರಣೆಯಲಿ ನಿರುತ ಇರೆ ಸಕಲ ಸಂಭ್ರಮವು 3
--------------
ಹೆನ್ನೆರಂಗದಾಸರು
ಎಂದೊಡನಾಡುವೆ ಎಂದರ್ಥಿಬಡುವೆ ಎಂದಿಗೆ ತಕ್ರ್ಕೈಸಿ ಸಂತೋಷಬಡುವೆ ಪ ಉತ್ಸವ ಮಂಟಪದೊಳಗೆ ಕುಳಿತು ಭಕ್ತ ವತ್ಸಲನೆಂದು ನುತಿಸಿಕೊಂಬನ ಕೂಡ 1 ಸಕಲ ಭೂಷಿತನಾಗಿ ಅಜಹರ ಸುರಮುನಿ ನಿಕರ ಕೈಯಿಂದ ಸ್ತುತಿಸಿಕೊಂಬನ ಕೂಡ 2 ಆಪೋಹಿಷ್ಠಾ ಮಯೋಭುವನೆಂಬೋ ಮಂತ್ರ ಆ ಪುರೋಹಿತರಿಂದ ಕಲಿತುಕೊಂಬನ ಕೂಡ 3 ನಾಲ್ವತ್ತುಮೂರು ಪದಂಗಳು ಮಾಡೆಂದು ಹೇಳಿದ ಹೇಮಾದ್ರಿ ಶಿಖರಾಕಾರನಕೂಡೆ 4 ದಂಡಿಗೆ ಕರೆದಲ್ಲಿ ಕೊಟ್ಟು ಅಮೃತದ ಕರ ಮಂಡೆಯಲ್ಲಿಟ್ಟ ಮಹಮಹಿಮನ ಕೂಡ 5 ಪಲ್ಲಕ್ಕಿ ಏರಿ ಪವಳಿಯ ಸುತ್ತಿ ಸರ್ರಗೆ ನಿಲ್ಲದೆ ಗುಡಿಪೊಕ್ಕ ನಿರ್ಮಳನ ಕೂಡ6 ವಾರಶನಿ ಚತುರ್ದಶಿ ಕೃಷ್ಣಪುಷ್ಯದಿ ಈ ರೀತಿಯಲಿ ಕೂಡ ಇಂದಿರೇಶನ ಕೂಡ 7 ರೌದ್ರಿ ಸಂವತ್ಸರ ಅರ್ಧರಾತ್ರಿಯಲಿ ಭದ್ರ ಮೂರುತಿಯಾದ ಭವಹರ ಕೂಡ 8 ಗುರುಪುರಂದರ ಉಪದೇಶನ ಬಲದಿಂದ ಸಿರಿ ವಿಜಯವಿಠ್ಠಲನ ಚರಣ ತಕ್ರ್ಕೈಸಿ 9
--------------
ವಿಜಯದಾಸ
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎನ್ನಪಾಪವೇ ಎನ್ನ ಕಾಡುವುದು ಎನ್ನಯ್ಯ ಹರಿಯೆ ನಿನ್ನದಿದರೊಳನ್ಯವೇನಿಹ್ಯದು ಪ ಮುನ್ನಮಾಡಿದ ಪಾಪಕರ್ಮವು ಬೆನ್ನಬಿಡದೆ ಕಾಡುತಿರಲು ನಿನ್ನಗನ್ನುವುದಾವ ನ್ಯಾಯವು ಪನ್ನಂಗಶಾಯಿ ಸನ್ನುತಾಂಗ ಅ.ಪ ನಾನಾಜೀವಿಗಳ ಪ್ರಾಣಹಾರಿಸಿದೆ ಅನ್ಯರಿಗೆ ಬಿಡದೆ ಜಾಣನುಡಿ ಪೇಳಿ ಹಾನಿ ಬಯಸಿದೆ ದುಗ್ಗಾಣಿ ರಿಣಕಾ ಗೇನುಯಿಲ್ಲೆಂದಾಣೆ ಮಾಡಿದೆ ನಾ ನಿನ್ನ ಮರೆದೆ ಏನು ತಿಳಿಯದೆ ಜ್ಞಾನ ಪೇಳಿದೆ ಜ್ಞಾನವಂತರಿಗ್ಹೀನ ನುಡಿದೆ ಮಾನವಂತರ ಮಾನ ಕಳೆದೆ ಹೀನಬವಣೆಯೋಳ್ಬಿದ್ದೆನಭವ 1 ಅಂಗನೆಯರ ಸಂಗ ಬಯಸಿದೆ ದುರಿತಕ್ಕೆ ಹೇಸದೆ ಅಂಗನೆಯರ ಗರ್ಭ ಭಂಗಿಸಿದೆ ಅನ್ಯರ ಒಡವೆಗೆ ಕಂಗಳಿರೆ ಭಂಗಕೊಳಗಾದೆ ಮಂಗ ನಾನಾದೆ ನಿತ್ಯ ನೇವಹಕೆ ಅಂಗನೆನಿಸದೆ ಬಡವರ್ವಿಮಹಕೆ ನುಂಗಿ ಕೂತೆನು ಪರರ ದ್ರವ್ಯಿ ನ್ನ್ಹ್ಯಾಂಗೆ ನಿನ್ನೊಲಿಮೆನಗೆ ಅಭವ 2 ಕೊಟ್ಟ ಒಡೆಯರಿಗೆರಡನೆಯ ಬಗೆದೆ ನಂಬಿ ಎನ್ನೊ ಳಿಟ್ಟ ಗಂಟನು ಎತ್ತಿಹಾಕಿದೆ ಪಡೆದ ಮಾತೆಯ ಬಿಟ್ಟು ಬೇಸರ ಮಾಡಿನೋಡಿದೆ ಭ್ರಷ್ಟನಾನಾದೆ ದುಷ್ಟಗುಣಗಳನೊಂದುಬಿಡದೆ ಶಿಷ್ಟಪದ್ಧತಿ ಜನಕೆ ಉಸುರಿದೆ ಕೊಟ್ಟವಚನೊಂದು ನಡೆಸದಿಂದುಳಿದು ಕೃತಿ ಪೇಳೆನಭವ 3 ಒಂದೆ ಮನದವನಂತೆ ತೋರಿದೆ ಮತ್ರ್ಯದವರಿಗೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿದೆ ದೋಷವಿನಿತು ಹೊಂದದವರಿಗೆ ಕುಂದು ಹೊರೆಸಿದೆ ನಾನೇ ಅಹುದಾದೆ ಸಿಂಧುಶಯನ ಭಕ್ತರನ್ನು ಕಂ ಡೊಂದಿಸದೆ ಮುಖವೆತ್ತಿ ನಡೆದೆ ಮುಂದುಗಾಣದೆ ದೋಷ ಮಾಡಿದೆ- ನೊಂದು ಪುಣ್ಯವನರಿಯೆನಭವ 4 ಕೊಡುವ ಧರ್ಮಕೆ ಕಿಡಿಯನ್ಹಾಕಿದೆ ಕೂಡಿದ್ದವರಿಗೆ ಕೆಡಕು ಬೋಧಿಸಿ ಒಡಕು ಹುಟ್ಟಿಸಿದೆ ಅಡಿಗೆ ಬಾಗಿ ಮಿಡುಕುವವರಿಗೆ ದುಡುಕನಾಡಿದೆ ಕಡುಪಾಮರಾದೆ ಪಿಡಿದು ಕಾಯುವ ಒಡೆಯನ್ಹೆಸರಿನ ಮುಡಿಪು ನುಂಗಿ ಕಡುಪಾಪಾತ್ಮಾದೆನು ಸುಡುಸುಡೆನ್ನಯ ಜನ್ಮವ್ಯಾಕಿನ್ನು ಒಡೆಯ ಶ್ರೀರಾಮ ಸಾಕುಮಾಡೋ 5
--------------
ರಾಮದಾಸರು
ಎನ್ನಲ್ಲಿ ಅವಗುಣ ಶತಸಾವಿರವಿರೆ | ಅನ್ಯರ ಕರೆದಾನು ನಡತೆ ಇದೇನೆಂಬೆ ಪ ವೇದವನೋದಿದೆ ಪರರಿ | ಗಾದÀರಿಸಿ ಮುಕುತಿಗೆ | ಹಾದರಹಳು ನಾರಿ | ಮಾದಿಗÀನ ಪೋದಂತೆ 1 ಧನದಾಸೆಯಿಂದ ಸಾಧನವಾಗದೆಂದು | ಜನರಿಗೆ ಉಪದೇಶವನು ಮಾಡುವೆ | ತೃಣ ಹತ್ತದಿದ್ದ | ವಧನರಾಶಿ ಕದ್ದಂತೆ2 ರಸನೇಂದ್ರಿಯಗಳ ಬಂ | ಧಿಸಬೇಕೆಂದು ನಾನು | ಉಸುರುವೆ ಅಲ್ಲಲ್ಲಿ ಕುಶಲನಾಗಿ | ಅಮೃತ | ರಸವಲ್ಲೆನೆಂದಾವ ಮುಸುರಿಯ ಮೆದ್ದಂತೆ 3 ಒಡಿವೆ ವಸ್ತುಗಳು ಸಂಗಡ ಬಾರವು ಮಮತೆ | ಬಿಡು ಸಂಸಾರವಿದು ಕಡಿಗೆ ಭವದ | ಮಡವು ಸಿದ್ಧವೆಂದು ನುಡಿವೆನೊ ಪರರಿಗೆ | ಯಡಹಿಯೊ ಎಂದಾವ ಗಿಡನೇರಿ ಬಿದ್ದಂತೆ 4 ಭಕುತಿ ಕೂಡಿದ ವಿರಕುತಿ ಲೇಶವಿಲ್ಲಾ | ಯುಕುತಿ ಬಾಯಲಿ ನಾರಕಕೆ ಸಾಧನಾ | ಲಕುಮಿವಲ್ಲಭ ನಮ್ಮ ವಿಜಯವಿಠ್ಠಲ ನಿನ್ನ ಅ | ರ್ಚಕನಾಗಿ ಬದುಕತಕ್ಕದ್ದು ಮಾರ್ಗವ ತೋರೊ 5
--------------
ವಿಜಯದಾಸ
ಎನ್ನಳವೆ ಯೋಗದಭ್ಯಾಸ ಹರಿಯೇ ಎನ್ನಕೈ ನೀ ಪಿಡಿಯದಿಹುದು ಸರಿಯೇ ಪ ದಿವ್ಯಯೋಗದ ಬಗೆಯ ಪೇಳಿದೈ ಗೋಪಾಲ ಸವ್ಯಸಾಚಿಯ ಧನ್ಯನೆನಿಸಿದೈ ಶ್ರೀಲೋಲ ಭವ್ಯವಾದಾಕೃತಿಯ ತೋರ್ದೆ ಗೋಪಿಬಾಲಾ ಅವ್ಯಯಾನಂದ ಮಾಂಗಿರಿರಂಗ ವಿಠಲ 1 ನಿರ್ಮಮತೆಯೇ ಬೀಜ ಸರ್ವಸೇವೆಯೇ ಬೇರು ಕರ್ಮದೊಳಗುತ್ಸಾಹವಿರಲದೇ ಸುರಿನೀರು ಮರ್ಮವಿಲ್ಲದ ಹೃದಯವೈಶಾಲ್ಯವೇ ಕುಸುಮ ನಿರ್ಮಲತೆಯೇ ಫಲವು ಇದು ಕರ್ಮಯೋಗ 2 ಭಕ್ತಿಯೆಂಬುದೆ ಬೀಜ ಸಮ್ಮತಿಯೆ ತಾಬೇರು ಭಕ್ತಜನರ ಸೇವೆಯೇ ಮೇಲೆರೆವ ನೀರು ಏಕಾಗ್ರಚಿತ್ತವೇ ಸರಸಪರಿಮಳಪುಷ್ಪ ಮುಕ್ತಿಯೇ ಫಲಮಿದೆ ಭಕ್ತಿಯೋಗ3 ಆಸನವೇ ಬೀಜ ಪ್ರಾಣಾಯಾಮವೇ ಬೇರು ಆಸೆಯಿಂ ಗೈವ ದಿನಚರ್ಯೆಯೇ ನೀರು ಮಾಸದಿರುವಾರೋಗ್ಯ ಪುಷ್ಪತಾನೊಮ್ಮನಮೆ ಭಾಸಿಪಾ ಫಲಮಿದೆ ಹಟಯೋಗವಯ್ಯ 4 ಯಮನಿಯಮಗಳೆ ಬೀಜಧಾರಣವೆ ತಾಂಬೇರು ಕ್ರಮಮಾದಘ್ರಣಿದಾನ ಮೇಲೆರೆವ ನೀರು ವಿಮಲಮಾಗಿಹ ಧ್ಯಾನ ಪೂರ್ವಸಂಪ್ರಜ್ಞತಾ ಕ್ರಮಸಮಾಧಿಯೆ ಫಲವು ಇದು ರಾಜಯೋಗ 5 ವರವಿವೇಕ ಬೀಜ ವೈರಾಗ್ಯವೇ ಬೇರು ಗುರುಕರುಣಮೆಂಬುದೇ ಮೇಲೆರೆವ ನೀರು ಪರಬ್ರಹ್ಮ ಜ್ಞಾನವೇ ಪರಿಮಳಿಸುವ ಪುಷ್ಪ ವರಮೊಕ್ಷವೇ ಫಲವು ಇದು ಜ್ಞಾನಯೋಗ 6 ಯೋಗಮಾರ್ಗವ ತಿಳಿದು ಅನುಸಂಧಿಯಿಂ ಸಕಲ ತ್ಯಾಗ ಮಾಡುವ ನಿಯಮವೆನಗಸಾದ್ಯ ಆಗಾಗ ನಿನ್ನ ನಾಮಂಗಳನು ಪೇಳ್ವುದೇ ಯೋಗವೆಂದೆನಿಸುವ ಮಾಂಗಿರಿರಂಗ ನೀಲಾಂಗ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಎಲ್ಲಿದ್ದರು ಕಾಯ್ವ ಯದುಕುಲತಿಲಕ| ಭಕ್ತ ರೆಲ್ಲಿದ್ದರು ಕಾಯ್ವ ಯದುಕುಲತಿಲಕ ಪ ಅಡವಿಯೊಳಿರಲು ಅರಣ್ಯದೊಳಿರಲು ಮಡುವಿನೊಳಿರಲು ಮರದ ಮೇಲಿರಲು ಪೊಡವಿಗೀಶ್ವರ ತಾನು ದೃಢಭಕ್ತನಂ ಬಿಡದೆ ರಕ್ಷಿಸುವ ಯೆಂತೆಂಬೊ ಬಿರುದು 1 ತಂದೆಯ ಬಾಧೆಗೆ ಕಂದ ನಿಮ್ಮನು ಕರೆಯೆ ಬಂದು ಕಂಭದಲಿ ನೀ ಕಾಯ್ದೆ ಗೋವಿಂದಾ ಅಂದು ದ್ರೌಪದಿ ಹಾಯೆಂದು ಬದರಲು ಕೇಳಿ ಆ ನಂದದಿಂದಕ್ಷಯವನಿತ್ತ ರಂಗನು ನೀನು 2 ಭರದೆ ಭಗದತ್ತನು ಅಸ್ತ್ರ ಬಿಡಲು ಕೊರಳ ಚಾಚಿದನಾಗ ಕರುಣಾವಾರಿಧಿಯು ವರುಣಗದೆಯನಾಗ ಮರುಳತನದಿ ಬಿಡೆ ಮರಳಿ ಅವನ ಉರುಳಿಸಿತು ಶೃತಾಯುವು 3 ಸಿಂಧುರಾಜನ ಶಿರವ ಅವನ ತಂದೆ ಕೈಯಲಿ ಹಾಕಿ ಬಂದ ಭಾರವನೆಲ್ಲಾ ಕಾಯ್ದೆ ಗೋವಿಂದ ಕರ್ಣ ಅಪ್ರಮೇಯನು ಭೂಮಿ ಕ್ಷಿಪ್ರದಿಂ ಒತ್ತಿದಾ 4 ಅಂದು ಅರ್ಜುನ ತನ್ನ ಕಂದನೊಡನೆ ಕಾದೆ ಹಿಂದಿನ ವೈರದಿಂ ಶಿರವನ್ನು ಹರಿಯೆ ಬಂದು ಮುಕುಂದ ಸಂಧಿಸಿ ಶಿರವನ್ನು ಆ ಇಂದಿರೆ ರಮಣ5 ಉತ್ತರೆ ಗರ್ಭವು ಬತ್ತಿ ಬೀಳಲು ಆಗ ಉತ್ತಮ ಋಷಿಗಳೆಲ್ಲರ ನೋಡಿ ನಿತ್ಯಬ್ರಹ್ಮಚಾರಿಗಳು ಪಾದದೀ ಮೆಟ್ಟಿದರೆ ಬದುಕುವುದೆಂದನು ಕೃಷ್ಣ 6 ಸನತ್ಕುಮಾರರು ಶೌನಕರು ಮೊದಲಾಗಿ ಪರುಶುರಾಮ ಹನುಮಾದಿಗಳು ಬ್ರಹ್ಮಚರ್ಯವು ನಮಗಿಲ್ಲವೆನುತ ಬ್ರಹ್ಮಚರ್ಯಕ್ಕೆ ಆಧಾರ ನೀನೆನ್ನಲು ವಾಮಪಾದದಿ ತುಳಿದೆಬ್ಬಿಸಿದನು ಶಿಶುವ 7 ಸರಸಿರುಹನಯನಾ ಫಣಿರಾಜಶಯನ ಶರಣಾಗತದುರಿತಾಪಹರಣ ದೈತೇಯಸಂಹರಣ ಗೋವರ್ಧನೋದ್ಧರಣ ಪೀತಾಂಬರಾಭರಣ ಕೌಸ್ತುಭಾಭರಣ 8 ಅಶ್ವತಾಮನ ಅಸ್ತ್ರ ವಿಶ್ವವನು ಸುಡುತಿರೆ ವಿಶ್ವನಾಯಕ ಶಮನ ಮಾಡಿ ಕಾಯ್ದು ಅಸಮಸಾಹಸದಿ ಚಕ್ರವ ಪಿಡಿದು ಗರ್ಭದ ಶಿಶುವನ್ನು ಕಾಯ್ದ ಕುಶಲಿ ವೆಂಕಟಕೃಷ್ಣ 9
--------------
ಯದುಗಿರಿಯಮ್ಮ
ಎಷ್ಟು ದಿನದ ಪೂಜೆ ಹಿಡಿದೆಣ್ಣಾ ಸತಿಯೆಂಬ ಮಾರಿದಿ- ನ್ನೆಷ್ಟು ದಿನ ಪೂಜೆ ಮಾಡಬೇಕಣ್ಣಾ ಪ ಎಷ್ಟು ದಿನದ ಪೂಜೆ ಹಿಡಿದಿ ನ್ನೆಷ್ಟುದಿನ ಮುಂದೆ ಬಾಕಿ ಉಳಿದಿದೆ ಕಷ್ಟಕಂಜದೆ ಬಿಡದೆ ಅನುದಿನ ನಿಷ್ಠೆಯಿಂದ ಪೂಜೆ ಮಾಡುವಿ ಅ.ಪ ಒಬ್ಬರ ಮನೆ ಮುರಿದು ತರುವಿ ಅವಳಿಗೇನೆ ಹಬ್ಬಮಾಡಿ ಉಣಿಸುತಿರುವಿ ಮತ್ತು ಇನ್ನು ಒಬ್ಬರೈತರ ಬೊಬ್ಬೆ ಹೊಡೆಯುವಿ ದಬ್ಬಿ ಓಡಿಸುವಿ ಹಬ್ಬ ಹುಣ್ಣಿಮೆ ಬರಲು ವೈಭವದುಬ್ಬಿಉಬ್ಬಿವಸ್ತ್ರ ಒಡವೆ ಅಬ್ಬರದಿಂದುಡಿಸಿ ತೊಡಿಸಿ ಮಬ್ಬಿನಿಂದ ಹಿಗ್ಗುತಿರುವಿ 1 ಧನವ ತಂದು ಅವಳಿಗರ್ಪಿಸಿ ಮತ್ತು ನಿನ್ನಯ ಮನವ ಅವಳ ವಶಕೆ ಸಲ್ಲಿಸಿ ಎಂಟುಗೇಣಿನ ತನುವು ಅವಳಾಧೀನದಲ್ಲಿರಿಸಿ ಕುಣಿವಿ ಪಶುವೆನಿಸಿ ಪಾಲಿಸಿ ದಿನಗಳೆಯುವಿ ನೋಡಿಕೊಳ್ಳದೆ 2 ಬಂದಕಾರ್ಯ ಮರೆದುಬಿಟ್ಟ್ಯಲ್ಲ ಹೆಡತಲೆಮೃತ್ಯು ಹಿಂದೆ ನಿಂತು ನಲಿಯುತಾಳಲ್ಲ ಹೇ ಪಾಪಿ ನೀನು ಒಂದೂ ವಿಚಾರ ಮಾಡಿ ಅರೀಲಿಲ್ಲ ಮಂದನಾದೆಲ್ಲ ತಂದೆ ಶ್ರೀರಾಮನ್ನಂತಂಘ್ರಿಗೊಂದಿ ಭಜಿಸಿ ದಾಸನಾಗಿ ಅಂದಮಾದ ನಿತ್ಯಮುಕ್ತಿ ಪಡೆವ ಸುಸಂಧಿ ನಡುವೆ ಹೋಗುತಾದರ್ಲ3
--------------
ರಾಮದಾಸರು
ಏನು ಸೇವಿಸಿದೆ ಗುರು ಯೆಲೊ ಮಾರುತಿ | ಭಾನು ವಂಶೋತ್ತಮನೆ ನಿರುತ ಧಾರ್ಮಿಕನೆಂದು ಪ ಉದಧಿ | ಭೀತಿ ಇಲ್ಲದೆ ಹಾರಿ ಲಂಕಾಪುರವ ದಹಿಸಿ | ಸೀತೆ ವಾರ್ತೆಯ ತÀಂದು ಪೇಳಿದಕೆ ಸುಫಲಾ 1 ವನಧಿ ಭೂತಳವ ತಿರುಗಿ ಪ್ರತಾಪದಿಂದ | ಗೋತುರೋನ್ನತ ತಂದು ತಡಿಯದೆ ಪ್ರಖ್ಯಾತದಿ | ಸೇತುವಿಯ ಕಟ್ಟಿ ಕುಣಿದಾಡಿದದುಕೇನು ಫಲಾ 2 ಅಂದು ವಿಂಶತಿ ಹಸ್ತ ರಣದೊಳಗೆ ರಥವೇರಿ | ಬಂದಿರಲು ನೋಡಿ ಈ ಧನುರ್ಧಾರಿಯಾ ನಿಂದು ಚಾಲ್ವರಿದು ಬೊಬ್ಬಿರಿದದುಕ್ಕೇನು ಫಲಾ 3 ಒಂದೇ ಹಾರಿಕಿಯಲಿ ಜಿಗಿದು ಕುಪ್ಪಳಿಸಿ ನೀ | ಗಂಧಮಾದನಗಿರಿಯ ಕಿತ್ತು ತಂದು | ಅಂದದಲಿ ದೇವತತಿ ಕೊಂಡಾಡುತಿರೆ ಕಪಿ | ವೃಂದವೆಬ್ಬಿಸಿ ಖಳರ ಮಡುಹಿದದುಕ್ಕೇನು ಫಲಾ 4 ಅಪರಿಮಿತ ಉಪಕಾರ ಮಾಡಿದಲ್ಲದೆ ನಿನ್ನ | ಕೌಪೀನ ಬಿಡಿಸಲಿಲ್ಲಾ | ವನಧಿ ನಿಜವೆಂದು ತುತಿಸಿದದುಕ್ಕೇನು ಫಲಾ 5
--------------
ವಿಜಯದಾಸ