ಒಟ್ಟು 1764 ಕಡೆಗಳಲ್ಲಿ , 105 ದಾಸರು , 1296 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಭಿಮಾನವ್ಯಾಕೊ ಮಾನವಾ ಪ ಸಭಯ ದುಃಖದೊಳಗಿರುವಾ ದುರಭಿಅ.ಪ ನೀರ ಮೇಲಿನ ಗುಳ್ಳೆಯಂದದಿ ತೋರ್ಪ ಶ- ರೀರ ಭೋಗಾಪೇಕ್ಷಿಸಿ | ನಾನು ನನ್ನದೆಂದು 1 ತನ್ನನೇನು ತಾ ಬಲ್ಲದೆ | ನಾನು ನನ್ನದೆಂದು 2 ಪೈಣ ದಾರಿಗೆ ದಾರಿಯಾವುದು | ನಾನು ನನ್ನದೆಂದು3 ಇಭದಂತೆ ಮದವೇರುತಾ | ನಾನು ನನ್ನದೆಂದು4 ಇದು ಸ್ಥಿರವಿಲ್ಲ ಇನ್ನೊಂದು ತಪ್ಪುವುದದಲ್ಲ ಪದರದೆ ನೀ ಕೇಳೀಸೊಲ್ಲ | ನಾನು ನನ್ನದೆಂದು 5 ವೇದಶಾಸ್ತ್ರ ಪುರಾಣವ್ಯಾರ ಪೊಗಳುವುದು ಶೋಧನೆ ಮಾಡಿ ತಿಳಿಯದೆ | ನಾನು ನನ್ನದೆಂದು6 ಗುರುರಾಮವಿಠಲನು ಗುರುತಾಗಿರುವ ನೆಲೆ ಅರಿತುಕೊಂಡವ ಧನ್ಯ | ನಾನು ನನ್ನದೆಂದು 7
--------------
ಗುರುರಾಮವಿಠಲ
ಅಭ್ಯಾಸವಮಾಡಿ ಅಭ್ಯಂತ್ರದೊಳಗಿಹುದು ಧ್ರುವ ಕಣ್ಣು ಕಾಣುವದ್ಹಚ್ಚಿ ಚೆನ್ನಾಗಿ ಚಿತ್ಸ ್ವರೂಪವ ಭಿನ್ನವಿಲ್ಲದೆ ಭಾಸುವದು ಪುಣ್ಯಪ್ರಭೆಯು 1 ಕಿವಿಯು ಕೇಳುವದ್ಹಚ್ಚಿ ಸವಿಸವಿ ಸಾರಾಯದ ಶ್ರುತಿ ಆವಾಗ ನಿಮ್ಮೊಳಾಲಿಸಿ ಪವಿತ್ರ ಪ್ರಣವ 2 ಘ್ರಾಣ ಗ್ರಹಿಸುವದ್ಹಚ್ಚಿ ದೇಹದೊಳಾವಾಗ ಪೂರ್ಣ ಸೋಹ್ಯ ಸೂತ್ರವಿದು ಸೋಹ್ಯವೆಂಬುದಾ 3 ಜೀವಕೆ ಜೀವ್ಹಾಳಚ್ಚಿ ಸುವಿದ್ಯಸೇವೆ ಸೂತ್ರದ ಸರ್ವದಾ ಸವಿಸಾರವ ನೋಡಿ ದಿವ್ಯನಾಮದ 4 ಶಿವಸುಖವಿದುರಿಡುವಾಂಗೆ ಜೀವ ಜೀವದಾ 5 ಮನಸಿಗೆ ಮನಹಚ್ಚಿ ಮನೋನ್ಮನಮಾಡಿ ಘನಸುಖದೊಳು ಬೆರೆದಾಡಿ ಅನುಭವಿಸಿ ನೋಡಿ 6 ಗುರುವಿಗೆ ಗುರುವೆಂದರಿದು ನರದೇಹದ ಭಾವನೆಯ ಮರೆದು ಕರಕೊ ಮಹಿಪತಿ ಇರುಳ್ಹಗಲೆ ಸ್ಮರಿಸಿದಾಕ್ಷಣ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರಿತರೆ ಮನುಜ ನೀನಹುದಣ್ಣಾ ನಿಜ ದರಿವುಯಿಲ್ಲದೆ ಹ್ಯಾಂಗಹುದಣ್ಣಾ ಪ ಪರಮನಪ್ಪಣೆ ಹಿಂಗಿಹುದಣ್ಣಾ ಇದ ನರಿಯದೆ ಕೆಡುವೆ ನೀನಹುದಣ್ಣಾ ಅ.ಪ ಸಪ್ತ ಸಮುದ್ರವ ನಡೆಯಣ್ಣಾ ನಿನ ಗುಪ್ತದೆ ನಾಮವ ನುಡಿಯಣ್ಣಾ ಪ್ರಾ ಣಾಪ್ತನ ಕಂಡು ನೀ ಹಿಡಿಯಣ್ಣಾ 1 ಅಂಗಪುರೀಯೆನಬಹುದಣ್ಣಾ ಜಯ ಮಂಗಳ ನಾಯಕನಹುದಣ್ಣಾ ಜಂಗಮಗುರು ಹರಿತುಲಶಿರಾಮ ನಿಜ ಲಿಂಗನೆ ತಾನಹುದಹುದಣ್ಣ 2
--------------
ಚನ್ನಪಟ್ಟಣದ ಅಹೋಬಲದಾಸರು
ಅರ್ಥಿಯಾಗಿದೆ ಬನ್ನಿ ಅರ್ತು ನೋಡುವ ಗುರುಮೂರ್ತಿಯಿಂದ ನಿರ್ತವಾಗಿ ಪೂರ್ಣಬೆರ್ತು ಕೂಡುವಾ ಬನ್ನಿ ಗುರ್ತದಿಂದ ಧ್ರುವ ಸೂರ್ಯನಿಲ್ಲದ ಸೂಪ್ರಕಾಶ ತುಂಬೇದ ಹೇಳಲೇನ ತೂರ್ಯಾವಸ್ಥೆಯೊಳು ಬೆರೆದು ಕೂಡಿದ ಜ್ಞಾನಿಬಲ್ಲ ಖೂನ ಬರಿಯ ಮಾತನಾಡಿ ಹೊರಿಯ ಹೇಳುವದಲ್ಲ ಅರುವ್ಹೆಸ್ಥಾನ ಪರಿಯಾಯದಿಂದ ಪರಿಣಿಮಿಸಿ ನೋಡಿ ಪರಮ ಪ್ರಾಣ 1 ಚಂದ್ರನಿಲ್ಲದೆ ಬೆಳದಿಂಗಲು ಬಿದ್ದದ ಬಲು ಬಹಳ ಇಂದ್ರಾದಿಕರೆಲ್ಲ ಹರುಷದಿ ನೋಡುವರು ಸರ್ವಕಾಲ ಸುಂದ್ರವಾದ ಸುವಸ್ತುವಳಗೊಂದದೆ ಅಚಲ ಸಾಂದ್ರವಾದ ಸುಖತುಂಬಿ ತುಳುಕತದೆ ಥಳ ಥಳ 2 ಮನದ ಕೊನೆಯಲಿದ್ದ ಘನಸುಖ ನೋಡಿರೋ ನೆನೆದು ಬ್ಯಾಗ ಸ್ವಾನುಭವದಲನುಭವಿಸುವದು ಬ್ರಹ್ಮಭೋಗ ನಾ ನೀನೆಂಬುವ ಮಾತು ಏನು ತಾಳುವದಲ್ಲ ರಾಜಯೋಗ ದೀನ ಮಹಿಪತಿಗೆ ತಾನೆತಾನಾದ ಸದ್ಗುರುವೀಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಲ್ಲಲ್ಲಲ್ಲಲ್ಲಾ | ಸುಖವಿ | ನ್ನಿ ಲ್ಲಿ ಲ್ಲಿ ಲ್ಲಿ ಲ್ಲಾ ಪ ಮಾಯಾ ಭ್ರಾಂತಿಯ ಮನ | ಪೊಳ್ಳು ಇದೆಂದು ಬಲ್ಲವರಿಗೆ ನಿಜ ಅ.ಪ ರೊಕ್ಕವು ತೀರಿದ ಕಾಲಕೆ ತನ್ನನು ಮಕ್ಕಳು ಮರಿಗಳು ಲೆಕ್ಕಕ್ಕೆ ತರುವರು 1 ಅಂಗನೆ ಮಕ್ಕಳು ಆಪ್ತರು ಬಂಧುಜ- ನಂಗಳು ಒಬ್ಬರು ಸಂಗಡ ಬರುವವರ್ 2 ವಲ್ಲಭ ಶ್ರೀಗುರು ಲಕ್ಷ್ಮೀವೆಂಕಟ- ನಲ್ಲದೆ ಬೇರೊಬ್ಬರು ಬಂಧುಗಳಾರ್ 3
--------------
ಅನ್ಯದಾಸರು
ಅಷ್ಟಮಿ ನಿಶಿಯೊಳಾದರೂ ಉಷ್ಣನಲ್ಲವೆ ಕೃಷ್ಣಾ ಪ ಕೇತಕಿ ಕಂಜಜ ಪರಿವೃತನಾದರೂ ಖ್ಯಾತವಾದಾ ಮೋಹ ಬೀರುವವಲ್ಲದೆ ಪ್ರೀತವು ದೇವಗೆ 1 ಶತಪತ್ರ ಕೈವಲ ವೇಷಿತವಾದರೊ ಕ್ಷಿತಿಪತಿ ಶಿರದೊಳು ಭೂಷಣವಲ್ಲದೆ ರತಿಯು ಶ್ರೀಲಕುಮಿಗೆ 2 ನರಸಿಂಹವಿಠಲ ತಾ ಕೃಷ್ಣನಾದರು ಸುರವೈರಿ ನಿಶಿಯನು ಕುಡಿವವನಲ್ಲದೆ ಸುರತರು 3
--------------
ನರಸಿಂಹವಿಠಲರು
ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ಪ ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ಅ ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ 1 ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ2 ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ3
--------------
ಕನಕದಾಸ
ಅಹುದಹುದನಾಥ ಬಂಧು ಅಹುದಹುದನಾಥ ಬಂಧು|ಅನುಪಮ್ಯ| ಮಹಿಮೆ ಕಾರುಣ್ಯಸಿಂಧು| ಏನೆಂದು ಪೇಳೆಲೆಮ್ಮಾ|ಈ ದಯಕ| ತಾನು ಪಮೆ ಇಲ್ಲವಮ್ಮಾ| ನ್ಯೂನಾರಿಸದೆ ಬಂದನು,ಕ್ಷಮೆಯಿಂದ| ತಾನಾಗಿ ಸಲಹುತಿಹನು| ಜ್ಞಾನವಿಲ್ಲದೆ ತರಳನೆಂದಪೇಕ್ಷಿಸದೆನ್ನ| ಮನ ನೆನೆವಿನೊಳಗಿಟ್ಟು ತನ್ನ ಅಂಘ್ರಿಯದಾ 1 ಪತಿತರೊಳು ಪತಿತ ಅಧಮಾ|ಅಮೂಲ್ಯ| ಪತಿಹೀನ ಮೂಢ ಪರಮಾ| ಸುತ್ತ-ಭಕುತಿ ಮಾಡಲರಿಯೆ|ಚತೆರ ಸಂ| ಸ್ಕøತ ಮಾತನಾಡಲರಿಯೇ| ಗತಿಗೈದರೊಂದೊಂದು ವೃತದಿ ಮೊದಲಾದವರು| ಕ್ಷಿತಿಯೊಳಗೆ ಎನ್ನಂಥ ಶೂನ್ನರಾರಮ್ಮ 2 ನೆಲಿಗೆ ಮುಯ್ಯಕ ಮುಯ್ಯವು|ಈ ತೆರದಿ| ಸಲೆ ನಡೆತಿ ಉಂಟು ಕೆಲವು| ಕೊಳದೆ ಕೊಡುವವರಿಂದಿಗೆ|ಆರಿಲ್ಲಾ| ನಳಿನಜೇಂದ್ರಾದ್ಯರೊಳಗೇ ಒಲಿದು ಮಹೀಪತಿ ಸುತನ ಕರವಿಡಿದು ತನ್ನ| ದಾಸರ ದಾಸ ದಾಸನೆನಿಸಿದ ಬಿರದಿಗಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಡಿದ ನಾಟಕವ ಕಿರಾತ ಮದನಗೂಢ ಚಿದಾನಂದನನರಿಯದ ನರ ಮೃಗವ ಪ ಸ್ತ್ರೀಯ ದೇಹವು ಎಂಬ ಅಡವಿಯೊಳಗೆಸ್ತ್ರೀಯ ಹುಬ್ಬೆಂಬ ಸಿಂಗಾಡಿ ತೆಗೆದುಮುಂಗುರುಳುಗಳು ಎಂಬ ಸಿಂಜನಿಯನೆ ಬಿಗಿದುಸ್ತ್ರೀ ದೃಷ್ಟಿಯೆಂದೆಂಬ ಸಿಳೀ ಮುಖವನೆ ಪಿಡಿದು 1 ಸಿರಿತುಳುಕುವ ಅವಯವದ ಸಿಡಿಬಲೆಯನೊಡ್ಡಿಪರಿಯ ತಿಳಿಯದೆ ಬರುವ ಪುರುಷ ಮೃಗವಕರುಣವಿಲ್ಲದೆ ಮಹಾ ಕೋಪದಿಂದಲಿಎರಡು ಗಿರಿಯ ಸಂದಿಯಲಿರಿದು ಇರಿದು ಕೆಡುತಿಹ 2 ಇಂತು ಬೇಟೆಯನಾಡಿ ಎಲ್ಲ ಲೋಕವ ಕೆಡಹಿಚಿಂತೆ ಮಾಡುವ ಚಿದಾನಂದ ಭಕ್ತರ ಮುಂದೆ ಸುಳಿಯಲಿಕಂಜಿಮರೆಯದೆ ಶಿವನ ಗುರುತ ಅಂತಹುದುಇವರನೀಗ ಮುಟ್ಟಬಾರದು ಎಂದು 3
--------------
ಚಿದಾನಂದ ಅವಧೂತರು
ಆಡಿನ ಮರಿಯೆತ್ತಂಬುಧಿಯೊಳಾಡುವ ಕರಿಯೆತ್ತ ಮಾನವ ಮಾಡದಿರಚ್ಚುತ ನಾನೆಂಬ ಮನವಪ. ಯಾಡಮೂಢನೊಬ್ಬ ಎಲ್ಲಾ ಜಗದೊಳು ಗೂಢನಾಗಿ ನೋಡುತಿಹ ಸುಖಿಯೊಬ್ಬ ಗಡ ನಾಡರಿಯೆ ದುಃಖಿಯೊಬ್ಬ ಸುಖದಲ್ಲಿ ಲೋ- ಲಾಡುತಿಹ ನಿರನಿಷ್ಟನೊಬ್ಬ ಗಡ1 ಕಡಲ ಕಡೆದು ಸುಧೆಯ ನೋಡಿ ತ- ನ್ನೊಡಲ ಧಣಿಯಉಂಡವನೊಬ್ಬ ಹೆ- ಣ್ಣುಡಿಗೆಯನ್ನುಟ್ಟು ಅಸುರರ ಬಾಯ ಹೊಡೆದು ಬಡಿಸಿದವನೊಬ್ಬ ಗಡ 2 ಆಡುತಲಬ್ಧಿಯೊಳಡಗಿದದ್ರಿಯ ಕೋಡುಗಲ್ಲನೆತ್ತಿ ಹೂಡಲು ಬಲ್ಲೆಯ ಓಡುತಲೊಬ್ಬನೊರಗಿದ್ದನ ಕಣ್ಣೊಳೊಡದು ಮೂಡಿದÀಗ್ನಿಯಿಂದ ಸುಡುವೆಯ3 ಮಂದ ನೀನೊಬ್ಬನೆ ಮಾಡುವೆಯ ಲೆಕ್ಕವಿಲ್ಲದೆ ಮಕ್ಕಳ ಕೂಡಿದನ ಬಹಳ ಕೋಟಿಧನಂಗಳ ಕೂಡಿರ್ದಗೆ ಕೊಟ್ಟು ನೋಡಿ ಸುಖಿಪೆಯ 4 ದೃಢವಾಗಿ ನಿನ್ನುಂಗುಟ ನಖದಿಂ ದೊಡಲನಾದರು ಒಡೆಯಲಾಪೆಯ ಮೃಡಪ್ರಿಯ ಹಯವದನನಂತೆ ಮೂಢಜಾತಿಯಾಗಿ ವೇದ ಓದುವೆಯ 5
--------------
ವಾದಿರಾಜ
ಆತ್ಮನಿವೇದನೆ ಆವಗತಿ ಎನಗೆ ವೈಕುಂಠಪತಿಯೆ | ಕಾವ ಕರುಣಿಯೆ ಸರ್ವದೇವರ ದೇವ ಪ ಉದಯದಲಿ ಎದ್ದು ನಿನ್ನ ನಾಮವೆನ್ನದೆ | ಉದರಕಿನ್ನೇನು ಮಾಡಲಿ ಎನ್ನುತಾ | ಕÀದಗಳಾ ಸರಸುತ್ತ ಕಂಡಲ್ಲಿ ತಿರುಗಿದೆ | ಮದ ಗರ್ವದಲಿ ಬಾಳ್ವ ಮನುಜ ಶಿರೋಮಣಿಗೆ 1 ಧನವ ಘಳಿಸವ ವಾತ್ಸಲ್ಯವಲ್ಲದೆ ಸಾ | ಧನಕೆ ಒಮ್ಮೆ ಮನಸ್ಸು ಎರಗಲಿಲ್ಲಾ | ಮನುಜರೊಳಗೆ ಖ್ಯಾತಿಯಾಗುವೆನೆಂಬೊ | ವೇ | ದನೆ ಮಿಗಿಲಲ್ಲದೆ ಭಕುತಿ ಮತ್ತಿಲ್ಲ 2 ಒಬ್ಬರಕಿಂತಲಧಿಕನಾಗುವೆನೆಂದು | ಉಬ್ಬಿ ಪರರಾ ಸೇವೆಯನು ಮಾಡುವೆ | ಹಬ್ಬಿದ ಪಾಪದ ಸರವಿಗೆ ಉರುಲು ಬಿದ್ದು | ಸುಬ್ಬ್ಬಿದ ಸುಕೃತವ ಕಳಕೊಂಡೆನಯ್ಯಾ 3 ಪೂರ್ವದಲಿ ಉಂಡ ದು:ಖಗಳೆಲ್ಲ ಮರೆದು | ಸರ್ವದಾ ಗರ್ವದಲಿ ಸಜ್ಜನರ ಕೆಡನುಡಿದು | ಉರ್ವಿಯೊಳು ಬಲು ಬಲವಂತನೆನಸೀ | ಸರ್ವದಾ ಸರ್ವ ನರಕಂಗಳಲಿ ಬಿದ್ದು ಹೊರಳಿದೆನು4 ಇನ್ನಾದರೂ ದುರ್ಬುದ್ಧಿಯನ್ನು ಬಿಡಿಸಿ | ಕರವ ಬಿಡದೆ | ಪತಿ ವಿಜಯವಿಠ್ಠಲರೇಯಾ | ಎನ್ನ ಭಾವವು ನಿನ್ನದಲ್ಲವೇನಯ್ಯಾ5
--------------
ವಿಜಯದಾಸ
ಆತ್ಮನಿವೇದನೆ ಮತ್ತು ಲೋಕನೀತಿ ಎನಗ್ಯಾಕೆ ಕವಿಯೆಂಬ ಶ್ರೇಷ್ಠನಾಮಾ ಜನರೊಳಗೆ ನಾನೋರ್ವ ಮನಜಾಧಮ ಪ ಸ್ನಾನ ಜಪ ತಪ ಮೌನ ಧ್ಯಾನ ವರಮಂತ್ರಗಳ ಖೂನವಿಲ್ಲದೆ ಜ್ಞಾನ ಹೀನನಾಗಿ ಏನು ಹೇಳಲಿ ದುಷ್ಟ ಮಾನಿನಿಗೆ ಮನಸೋತು ಶ್ವಾನನಂದದಿ ದಿನವ ನಾ ನೂಕಿದವನಯ್ಯ 1 ಹತ್ತೆರಡು ಮತೈದು ಗಾತ್ರದೊಳು ಧರಿಸದಲೆ ಚಿತ್ತ ಚಂಚಲನಾಗಿ ಲೆತ್ತ ಪಗಡಿಗಳಾಡಿ ಕತ್ತೆಯಿಂದದಿ ವ್ಯರ್ಥ ಹೊತ್ತು ಕಳೆದವ ನಾನು 2 ನೇಮಪೂರ್ವಕ ಒಂದು ಯಾಮವಾದರು ಮನದಿ ಶಾಮಸುಂದರ ಧ್ಯಾನ ಮಾಡದೆ ಕಾಮಾರಿ ಷಡ್ವೈರಿ ಸ್ತೋಮಕ್ಕೆ ಭೂಮಿಯೊಳು ಜಡವಾದ ನಾಮದಲಿ ಚರಿಸುವೆನು3
--------------
ಶಾಮಸುಂದರ ವಿಠಲ
ಆತ್ಮನಿವೇದನೆಯ ಹಾಡುಗಳು ಡಂಭಕದ ಭಕುತಿಯನು ಬಿಡು ಕಂಡ್ಯ ಮನವೆ ಪ ಅಂಬುಜಾಕ್ಷನು ಒಲಿಯ ಅನಂತ ಕಾಲಕ್ಕು ಅ.ಪ. ಬಹಿರ ಅಂಗಡಿ ಹೂಡಿ ಜನರ ವಂಚಿಸಿದರೆಅಹಿಕ ಫಲವಲ್ಲದೆ ಮೋಕ್ಷವುಂಟೆ ?ವಿಹಿತಾ ವಿಹಿತವ ತಿಳಿದು ಸತ್ಕರ್ಮ ಕಿಂಚಿತು ಮಾಡೆದಹಿಸುವುದು ಅಘರಾಶಿ ಅಹಿಶಾಯಿ ಒಲಿವ 1 ವರ ವೈಷ್ಣವರು ಬಂದು ನಿಲಲು ವಂದಿಸದಲೆಹರಿ ಪೂಜೆ ಮಾಳ್ಪೆನೆಂದು ಕುಳಿತುಕೊಂಬೆಅರಿಯದ ಊರೊಳಗೆ ಅಗಸರ ಮಾಳಿಯೇಹಿರಿಯ ಮುತ್ತೈದೆಯು ಎಂದು ಕರೆಸುವಂತೆ 2 ಜಪವ ಮಾಡುವೆನೆಂದು ಮುಸುಕನಿಟ್ಟು ಕುಳಿತುತಪಿಸುವೆ ಒಳಗೆ ನೀ ಧನದಾಸೆಯಿಂದೆಕುಪಿತ ಬುದ್ಧಿಯ ಬಿಟ್ಟು ಮೋಹನ್ನ ವಿಠ್ಠಲನಗುಪಿತ ಮಾರ್ಗದಿ ಭಜಿಸಿ ಸುಪಥವನುಸರಿಸೆ 3
--------------
ಮೋಹನದಾಸರು
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆಧ್ಯಾತ್ಮ ಹೆಚ್ಚೇನು ಅವಿದ್ಯೆ ಕಡಿಮೆಯೇನುಆಧ್ಯಾತ್ಮ ವಿದ್ಯೆಯದು ಅನುಭವಿಸಲರಿಯದವಗೆ ಪ ಪುಸ್ತಕಂಗಳ ಪಿಡಿದು ಪುಸ್ತಕದೊಳಿದ್ದುದನುವಿಸ್ತಿರಿಸಿ ಎಲ್ಲರಿಗೆ ಹೇಳುತಿಹನುಪುಸ್ತಕದ ಅರ್ಥವನು ಮನಕೆ ತಾರದಲೆಪುಸ್ತಕದ ಅಕ್ಷರವ ಪೇಳುವವಗೆ1 ಜ್ಞಾನವನು ಹೇಳುತಿಹ ಜ್ಞಾನವನು ತಾನರಿಯಜ್ಞಾನಿಗಳ ನಡೆಯನು ಮೊದಲೆ ತಿಳಿಯಜ್ಞಾನಿಗಳನೇ ಕಂಡು ಜ್ಞಾನವಿಲ್ಲೆಂದೆಂಬಜ್ಞಾನಿ ತಾನೆಂತೆಂದು ಬರಿ ಬಣ್ಣಿಸುವಗೆ 2 ಸುಳಿ ಸುಳಿದಾಡುತಸಾಧಿಸದೆ ಪುಣ್ಯ ಪುರುಷರ ನೆಲೆಯ ತಿಳಿಯದಲೆದೇವ ತಾನೆಂದು ಬರಿ ಬೋಧಿಸುವವಗೆ 3 ಯೋಗೀಶ್ವರರ ಕಂಡು ಯೋಗದಿಂದೇನೆಂಬಯೋಗವಳವಟ್ಟ ತೆರನಂತೆ ನುಡಿದಯೋಗಾಮೃತದ ಪೂರ್ಣರಸವ ಸವಿದುಣ್ಣದೆಲೆಯೋಗಿ ತಾನೆಂದು ಬರಿ ತೋರುತಿರುವವಗೆ 4 ಮಾಡಿದಡೆ ಬಹದಲ್ಲ ಕೇಳಿದಡೆ ಬಹದಲ್ಲಆದರಿಸಿ ಒಬ್ಬರಿಗೆ ಹೇಳಿದಡೆ ತಾ ಬರದುಸಾಧಿಸಿಯೆ ಮನನದಭ್ಯಾಸದಿಂ ದೃಢವಾಗಿವಾದಹರ ಚಿದಾನಂದ ತಾನಾದರಲ್ಲದೆ5
--------------
ಚಿದಾನಂದ ಅವಧೂತರು