ಒಟ್ಟು 225 ಕಡೆಗಳಲ್ಲಿ , 53 ದಾಸರು , 192 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀರೇರುಹಾನಯನ | ವಾರನಿಧಿ ನಡುಶಯನತೋರೆನಗೆ ತವ ಚರಣ | ಸುಗುಣ ಗಣ ಪೂರ್ಣ ಪ ಅಮಿತ ಕ್ಲೇಶ ಗೊಳಿಸದಂತೆನೀ ಸಲಹೋ ಎನ್ನ | ಶೇಷಾದ್ರಿ ವಾಸಾ ಪರೇಶಾ1 ಭವ | ಸಂಗದೊಳಗಿರಿಸೀಭಂಗ ಪಡಿಸುವಿ ದೊರೆಯೆ | ಶೃಂಗಾರ ನಿಧಿಯೇ |ಸಂಗ ವಿಷಯದಿ ಹರಿಸಿ ನಿ | ಸ್ಸಂಗನೆಂದೆನಿಸಿಲಿಂಗಾಂಗ ಕಳೆಯೊ ಹರಿ | ರಂಗ ಭವಹಾರಿ2 ಸಾಮಸನ್ನುತ ಚರಣ | ಭೂಮಗುಣಿ ಸುಸ್ತವನಪ್ರೇಮದಲಿ ಗೈವ ಮನ | ನೇಮವೀಯೆಲೊ ವಾಮನ |ಈ ಮಹಾ ಕಲಿಯುಗದಿ | ನಾಮ ನಿಸನ್ನದೆ ಗತಿಯೆಶ್ರೀಮಹೀ ಸೇವಿತನೆ | ರಾಮ ಗುಣಧಾಮ 3 ಭವ | ರೋಗ ವೈದ್ಯನೆ ಎನ್ನರೋಗ ಹರಿಸುವುದರಿದೆ | ಇದು ನಿನ್ನ ಬಿರುದೇ4 ನಿರವದ್ಯ ಆದ್ಯಾಅರುಹಲೇನಿಹುದಿನ್ನು | ಸರ್ವಜ್ಞ ನೀನಿನ್ನು ಒರೆವೆನೆಂಬಪರಾಧ | ಮರೆದು ಪಾಲಿಸು ಶ್ರೀಶ 5
--------------
ಗುರುಗೋವಿಂದವಿಠಲರು
ನೇತ್ರಾವತಿಯ ವಾಸಾ | ಪ್ರಮಥ ಪೋಷಾಸೂತ್ರತನಯನೆ ಕಾಯೊ | ಭಕ್ತ ಜನ ಪೋಷಾ ಪ ಲೌಕಿಕ ಕುಕರ್ಮಗಳ | ನಾಚರಿಸಿ ಬಲು ವಿಧಧಿಕಾಕು ಜನರಾ ಸಂಗ | ಬಳಸಿ ಭವದೀ |ಏಕಮೇವನ ಚರಣ | ತೋಕನೆಂದೆನಿಸದಲೆನೂಕಿ ಎನ್ನಾಯುಗಳ | ವ್ಯರ್ಥ ಕಳೆವೇ 1 ಕೃತ ತ್ರೇತ ದ್ವಾಪರದಿ | ವ್ಯಕ್ತನಾಗುತ ನೀನುಚತುರದೊಳಗೇ ಮಂಜು | ನಾಥನೆನಿಸೀ |ಕೃತಿಪತಿಯ ಸಚ್ಚರಣ | ಶತಪತ್ರ ಭಜಿಪರಿಗೆಗತಿ ತೋರಿ ಸನ್ಮುಕುತಿ | ಪಥಕೆ ಕೊಂಡೊಯ್ವೇ 2 ಯತಿವಾದರಾಜರಿಂ | ಹಿತದಿ ಕದರೀಯಿಂದಪೃಥುಕು ನೃಹರಿಯ ಶಿಲೆಯು | ಸ್ಥಿತ ಧರ್ಮಸ್ಥಳದೀಕೃತವು ವೈಷ್ಣವ ಪೂಜೆ | ಚತುರಯುಗ ಮೂರುತಿಯೆವಿತತ ಮಹಿಮನ ತೋರ್ವ | ಮತಿಮಾಡೊ ಶರ್ವಾ3 ವೈಕಾರಿಕಾದಿ | ಸಾಕಾರಿ ಮಹದೇವಕೈಕೊಳುತ ಮನ್ಮಾತ | ನೋಕರಿಸದೇ |ಪ್ರಾಕ್ಕು ಕರ್ಮವ ಕಳೆದು | ನೀ ಕೊಡುವುಧ್ಹರಿ ಭಕುತಿನಾಕಪತಿ ವಂದ್ಯ ಸ | ನ್ನಾಕನದಿ ಧರನೇ 4 ಗುಣ ಪೂರ್ಣನಾದ ಗುರು | ಗೋವಿಂದ ವಿಠಲ ಪದವನಜ ಬೇಡುವೆ ಮನದಿ | ಕರುಣಾನಿಧೇ |ಅನಲಾಕ್ಷ ನಿನ್ನೊಲಿಮೆ | ಇಲ್ಲನಕ ಗತಿಯಿಲ್ಲಬೆನಕ ಪಿತ ಮನಮಾನಿ | ಎನಗೊಲಿಯೊ ಶಿವನೇ5
--------------
ಗುರುಗೋವಿಂದವಿಠಲರು
ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ ಮಂದರಧರನೇ ಬೇಲೂರ ಚೆನ್ನಿಗರಾಯ ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ ಕುಕ್ಷಿಯೊಳೀರೇಳು ಲೋಕವನು ತಾಳ್ದನೇ ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1 ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ ¨Àಕ್ತವತ್ಸಲನು ನೀನೇ ಸ್ವಾಮಿ 2 ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ [ಉರಿಸಿ]ಗೆಲಿದ ದೇವರದೇವಾ ಸ್ವಾಮಿ3 ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು ಸಂದೇಹವಿಲ್ಲದಂದದಲಿ ಪಾಲಿಸಿ ನರನಾ ಮುಂದೆ ಸಾರಥಿಯಾಗಿ ರಥವ ನಡಸಿದ ಗೋ ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4 ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು ಭೂಸ್ವರ್ಗವೆನಿಪ ವೇಲಾಪುರವಾಸಾ ಕೇಶವ ಶ್ರೀವೈಕುಂಠ ಚೆನ್ನಿಗರಾಯಾ ಶೇಷಶಯನನೇ ಕರುಣಿಸೈ ಸ್ವಾಮೀ 5
--------------
ಬೇಲೂರು ವೈಕುಂಠದಾಸರು
ನೋಡಿದೆ ಹರನಾ ನೋಡಿದೆ ಪ. ಹರನ ಕೊಂಡಾಡಿದೆ ಪಾದಪಾವನ್ನ ರೂಢಿಯೊಳಗೆ ಇಂಥಾ ಈಡಿಲ್ಲ ಶಿವನಾ ಜೋಡಿಶಿರವ ಬಾಗುವೆನಾ ಶಿರವಾ ಅ.ಪ. ಶುಕ ದೂರ್ವಾಸ ರೂಪದ ರುದ್ರಾ ನೀನು ಅವತಾರ ತಾಳಿದ್ಯೊ ವೀರಭದಾ ಮಥನವಾ ಮಾಡಲು ಸಮುದ್ರಾ ನೀನು ವಿಷಪಾನ ಮಾಡಿದ್ಯೊ ಆದ್ರ್ರಾ || ಆಹಾ|| ನೀಲಕಂಠನಾಮವು ಬಂದವು ನಿನ್ನ ನೋಡುವರ ಮನಕೆ ಆನಂದವ ಕೊಡುವುದು ಜಗಕೆ 1 ಕರದಲಿ ಡಮರು ತ್ರಿಶೂಲಗಳಿಂದಾ ನೀನು ಶೋಭಿಪಿಯೋ ಬಲುಛಂದಾ ಗಳದಲ್ಲಿ ದ್ರಾಕ್ಷಾಮಾಲೆಗಳಿಂದಾ ನಾಗಭೂಷಣಾಯಿಂದಾ || ಆಹಾ|| ಶಿರದಾ ಜಡಿಯೋಳು ಗಂಗಿಯ ಧರಿಸಿದ ಧೀರನು ಹರಿಯಾ ರೂಪಕೆ ಮರುಳಾದ ಶಂಕರನ 2 ಕೈಲಾಸಪುರಧೀಶ ವಾಸಾ ನೀನು ಸರ್ವರಮನಕೆ ಉಲ್ಲಾಸ ನೀನು ಸತಿಗೆ ತಾರಕ ಮಂಗಳ ಉಪದೇಶಾ ಸ್ಮಶಾನವನು ಕಾಯ್ದ ಹರಿದಾಸಾ || ಆಹಾ|| ನಂದಿವಾಹನನಾಗಿ ಆನಂದಾದಿ ಮೆರೆಯುವ ಸಿಂಧುಶಯನನ ಕಾಳಿಮರ್ಧನಕೃಷ್ಣನ ತಂದು ತೋರಿಸುವನ 3
--------------
ಕಳಸದ ಸುಂದರಮ್ಮ
ನೋಡಿದೇ ಶ್ರೀ ವಿಠಲನ ನೋಡಿದೆ ಪ ಕುಂಡಲ ಧರನ ಅ.ಪ. ದಾಸರಂದದಿ ಕಾವಿ ವಸನ | ಹೊದ್ದುಭಾಸೀಸುತಿಹ ಸಿರಿವರನ | ವಸನಮೀಸಲನವನು ತೆಗೆಯಲದನ | ಕಂಡೆಲೇಸಾದ ಶಾಲು ಹೊದ್ದವನ | ಆಹಕಾಶಮೀರದ ಶಾಲು | ಭಾಸುರ ಜರೆ ಖಚಿತಭೂಷಿತ ಹರಿ ಕುಳಿತು | ತೋಷಿಪ ಭಕುತರನ 1 ಸುತ್ತಿಹ ಪಾವಡೆ ಶಿರಕೇ | ಬಲುಸುತ್ತು ಸುತ್ತಿರುವುದು ಅದಕೆ | ಹರಿಮಸ್ತಕ ಛಂದ ಕಾಂಬುದಕೆ | ನೋಡಿಭಕ್ತ ಸಂದಣಿಯ ತೋಷಕ್ಕೆ | ಆಹಸುತ್ತಿಹುದನು ಬಿಚ್ಚೆ | ತುತ್ತಿಸುತಿರಲಾಗಕೃತ್ತಿವಾಸನ ತಾತ | ನೆತ್ತಿ ನೈಜವ ಕಂಡೆ 2 ಪೂಜಾರಿ ತೆಗೆಯಲು ಜರಿಯ | ಶಾಲುಮಾಜಾದೆ ವಿಠಲನ ಪರಿಯ | ಕಂಡೆನೈಜದ ಶ್ರೀವರನ ದ್ವಯ | ಹಸ್ತಯೋಚಿಸಿ ಕಟಿಲಿಹ ಪರಿಯ | ಆಹಸೋಜಿಗತನರೂಪ | ನೈಜದಿ ತೋರುತಪೂಜಾದಿ ಸ್ವೀಕಾರ | ವ್ಯಾಜಾವ ಕಂಡೆನು 3 ನಿರ್ಮಲಾಕೃತಿ ಪೊದ್ದ ಹಾರ | ತುಳಸಿಕಮ್ಮಲ ರ್ಸೂಸುವಧಾರಾ | ಕಾರಒಮ್ಮೇಲಿ ತೆಗೆದರಪಾರ | ದಯಸುಮ್ಮನ ಸರಿಗೀವ ಪೋರ | ಆಹಆಮ್ಮಹ ದೈವನ | ಇಮ್ಮಡಿ ಪ್ರಭೆ ಕಂಡನಿರ್ಮಾಲ್ಯ ತೆಗೆಯುವ | ಕರ್ಮಾಚರಿಸೂವಲ್ಲಿ 4 ಪಾದ | ಸ್ವೀಕರಿಸುವ ಭಕ್ತತೋಕನ ಬಿಂಬೋದ | ಶ್ರೀಕರ ದಳ ತುಳಸಿ 5 ನಾಕ್ಹತ್ತು ಭುವನಗಳ್ಜೋತಿ | ಮತ್ತನೇಕಾನೇಕಾಕಾರ ಜ್ಯೋತಿ | ಗಳೊಪ್ರಕಾಶ ಪ್ರದ ಪರಂಜ್ಯೋತಿ | ಮುಕ್ತಿಪ್ರಕಾರ ದೊಳಗಿವನೆ ಜ್ಯೋತಿ | ಆಹಏಕಮೇವ ಹರಿಗೆ | ಕಾಕಡಾರುತಿ ಮಾಳ್ಪಲೋಕರ ಪೂಜೆಯ | ಸ್ವೀಕರಿಪುದ ಕಂಡೆ 6 ಪಂಚ ಮೋಕ್ಷ ಪ್ರದ ಹರಿಗೆ | ಆಯ್ತುಪಂಚ ವಿಧಭಿಷೇಕ ಆವಗೆ | ಶೇಷಮಂಚಿಕೆ ಕ್ಷೀರಾಬ್ದಿಶಯಗೆ | ಮಧುಸಂಚನ ಮಧ್ವಿದ್ಯ ಹರಿಗೆ | ಆಹಪಂಚಾಮೃತಭಿಷೇಕ | ಸಂಚಿಂತಿಸುವನೀಗೆಸಂಚಿತ ಕರ್ಮವ | ಕೊಂಚವ ಮಾಡುವ 7 ಮಂಗಳ ಮಹಿಮಗ ಸ್ನಾನಾ | ಅವಗಂಗಾ ಪಿತನೆಂಬುದೆ ಮಾನ | ಹಾಗೂಅಂಗಜನಯ್ಯಗೆ ಸ್ನಾನಾ | ಆಯ್ತುಹಿಂಗದೆ ಲೋಕ ವಿಧಾನಾ | ಆಹಸಂಗೀತಲೋಲ ಸ | ತ್ಸಂಗವು ತುತಿಸಲುಸ್ವಾಂಗಾಯನಾಮ ಶು | ಭಾಂಗನು ಮೆರೆದನು 8 ಕಾಯ ವರೆಸಿ | ಬಹುಶಾಸ್ತ್ರೋಕ್ತಿ ಉಡಿಗೆಯ ಉಡಿಸಿ | ಮತ್ತೆರತ್ನಧ್ಯಾಭರಣವ ತೊಡಿಸಿ | ಚೆಲ್ವಕಸ್ತೂರಿ ತಿಲಕವನಿರಿಸಿ | ಆಹವಿಸ್ತøತೀಪರಿಯಲಿ | ಸತ್ಯ ಷೋಡಶ ಪೂಜೆಚತ್ತುರ ಮೊಗನಿಂದ | ಕೃತ್ಯಾನು ಸಂಧಾನ 9 ವೇದ ಘೋಷ ಪೂಜಾ ಮಂತ್ರ | ಬಹುನಾದ ವಿಠಲ ನಾಮ ಮಂತ್ರ | ತುಂಬಿಮೋದ ಪೂರೈಸಿತು ತಂತ್ರ | ಘಂಟೆನಾದದಿಂದಾರುತಿ ಕೃತ | ಆಹಆದರದಿಂದ ಪ್ರ | ಸಾದವು ಸ್ವೀಕೃತಮೋದದಿ ವಿಠಲನ | ಪಾದಾಲಿಂಗಾಂತ್ಯವ 10 ಉತ್ಕøಷ್ಟ ಸುಕೃತದ ಭೋಗ | ಹರಿಇತ್ತನು ಅನುಗ್ರಹ ಯೋಗ | ಸ್ವಂತಹಸ್ತದಿ ಪೂಜಾದಿ ಯೋಗ | ಮಾಳ್ಪಕೃತ್ಯ ಸಂಧಿಸಿದನು ಈಗ | ಆಹಚಿತ್ತಜ ಪಿತ ವಿಠಲ | ಭಕ್ತವತ್ಸಲ ದೇವನಿತ್ತಕಾರುಣ್ಯವ | ತುತ್ತಿಸಲೆನಗಳವೇ 11 ಪಿತೃ ಸೇವಕ ಪುಂಡಲೀಕ | ತನ್ನಕೃತ್ಯದೊಳಿರೆ ನಿರ್ವಲ್ಕೀಕ | ಹರಿವ್ಯಕ್ತ ತನ್ಭಕ್ತ ಪರೀಕ್ಷಕ | ನಾಗೆಭಕ್ತನು ಮನ ಸ್ಥೈರ್ಯಾಲೋಕ | ಆಹಇತ್ತ ಇಟ್ಟಿಗೆ ಪೀಠ | ಮೆಟ್ಟಿ ನಿಂತಿಹ ದೇವಕೃತ್ತಿ ವಾಸಾದ್ಯರಿಂ | ಸ್ತುತ್ಯ ಶ್ರೀ ವಿಠಲನ 12 ದಾಸೀಗೆ ಕಂಕಣವಿತ್ತು | ಹರಿದಾಸರ ರೂಪೀಲಿ ನಕ್ತ | ಕಳೆದಾಶು ದಾಸರ ಶಿಕ್ಷಕರ್ತ | ಮತ್ತೆದಾಸರ ನಿರ್ದೋಷ ವಾರ್ತ | ಆಹದಾಸನೋರ್ವಾ ವೇಶ | ಭೂಷಣ ಕೇಳುತ್ತವಾಸುಕಿ ಶಯನೊಲಿದ | ದಾಸ ಪುರಂದರಗೆ 13 ಮುಯ್ಯಕೆ ಮುಯ್ಯ ತೀರಿತು | ಜಗದಯ್ಯ ವಿಠಲನ್ನ ಕುರಿತು | ಪೇಳಿಕಯ್ಯನೆ ಮುಗಿದರು ತ್ವರಿತು | ದಾಸಮೈಯ್ಯ ಬಿಗಿದ ಕಂಬ ಒಳಿತು | ಆಹತ್ರಯ್ಯ ಲೋಕದಿ ದಾಸ | ಅಯ್ಯನ ಪೆಸರಾಯ್ತುತ್ರಯ್ಯ ಗೋಚರ ಹರಿ | ಪ್ರೀಯ್ಯನಿಗೊಲಿದಂಥಾ 14 ಅಂಡ ಬ್ರಹ್ಮಾಂಡಗಳೊಡೆಯ | ಭಕ್ತಪುಂಡಲೀಕನಿಗೊಲಿದ ಭಿಡೆಯ | ರಹಿತಚಂಡ ಕಿರಣಾನಂತ ಪ್ರಭೆಯ | ಹರಿಮಂಡಿತಿಂದು ಭಾಗ ತಡಿಯ | ಆಹಹಿಂಡು ದೈವರ ಗಂಡ | ಪುಂಡರೀಕ್ಷಾಕನೆಪಿಂಡಾಂಡದೊಳಗಿಹ | ಗಂಡನೆಂದೆನಿಸಿಹಗೆ 15 ಪುರಂದರ ವಿಜಯ ಭಾಗಣ್ಣ | ಮತ್ತೆವರ ಜಗನ್ನಾಥವರ್ಯ | ಬಹುಪರಿಠವಿಸಿತ್ತೆ ಮೃಷ್ಠಾನ್ನ | ದಾಸವರರ ಸೇವಕ ಸೇವಕನ್ನ | ಆಹಪುರಂದರದಾಸರ ದಿನ | ದರುಶನ ವಿತ್ತಿಹೆಅರಿದಾಯ್ತೆನ್ನಯ ಕುಲ | ಪರಮ ಧನ್ಯವೆಂದು 16 ಇಂದು ಭಾಗದಿ ವಾಸ ಜಯ | ಸಿರಿಇಂದಿರೆ ಲೋಲನೆ ಜಯ | ದಾಸಮಂದಗಭೀಷ್ಟದ ಜಯ | ಎನ್ನತಂದೆ ತಾಯಿ ಬಂದು ಜಯ | ಆಹ ಸುಂದರ ಗುರು ಗೋವಿಂದ ವಿಠಲ ಹೃ-ನ್ಮಂದಿರದೊಳು ತೋರಿ | ಬಂಧನ ಬಿಡಿಸುವ 17
--------------
ಗುರುಗೋವಿಂದವಿಠಲರು
ಪಂಕಜ ಲೋಚನೆ ಕಿಂಕರನನು ಪೊರೆಯೆ ಪ ಭವ ಭಂಗ ಹಿಂಗದೆನ್ನನು ರಂಗನ ಭಗಿನಿ 1 ನಂದ ಮೂರುತಿಯಾದಾನಂದ ಮಹಾಮಾಯೆ 2 ದಾಸರಿಷ್ಟಗಳೀವ ಈಶೆಯಾಗಿರುವೆ 3 ದಣಿದರ ಭವದೊಳುದ್ಧರಿಸುವೆ (ನೀನೆ) 4 ದಾಸನ ಪೊರೆ ಶ್ರೀನಿವಾಸಾನುಜಾತೇ 5
--------------
ಸದಾನಂದರು
ಪಂಕಜನಯನ ಪಾವನ್ನ ಸುಖ ಸಂಕೂಲ ಮೂರುತಿ ಲಾಲಿಸು ಚಿನ್ನಾ ವೆಂಕಟ ನಿಲಯಾ ಹಸೆಗೇಳು ಪ ಕಮಲ ಸಂಭವಗಿತ್ತ ಕಮನೀಯ ಕಾಯ ಸುಮನಸ ಜನತೆ ಸುಧೆಯನುಣಿಸಿ ಭೂಮಿ ಚೋರನ ಕೊಂದ ಮುನಿಗಳೊಡೆಯ ವಿಮಲ ಮೂರುತಿ ಹಸೆಗೇಳೋ 1 ನರಹರಿ ರೂಪದಿ ಬಂದು ದೈತ್ಯ ನುರವ ಬಗೆದು ವಟು ರೂಪದಿ ನಿಂದ್ಯೋ ದುರುಳ ರಾಯರನೆಲ್ಲ ಕೊಂದು ಲಂಕಾ ಪುರದಾಧಿಪತಿಯ ಸದೆದ ದಯಸಿಂಧೋ ಕರುಣಾಸಾಗರನೆ ಹಸೆಗೇಳೋ 2 ಯದುಜನೆನಿಸಿ ಎಲ್ಲಾ ಖಳರ ಜಯಿಸಿ ಸುದತೇರ ವ್ರತವ ಕೆಡಿಸಿದತಿ ಧೀರ ಕುದುರೆನೇರಿದ ಮಾಧಾರಾ ನಿನ್ನ ಅದುಭೂತ ಬಲ್ಲಿದಕ್ಕೆಣೆಗಾಣೆನುದಾರಾ ಉದಧಿ ಶಯನನೆ ಹಸೆಗೇಳು 3 ಅಪ್ರತಿಮಲ್ಲ ಅನಂತಾ ಸುಹಜ ನ ಪ್ರೀಯಾ ಸುರಪತಿ ಸಿರಿದೇವಿ ಕಾಂತಾ ಸ್ವ ಪ್ರಕಾಶಿತನೆ ಧೀಮಂತಾ ಅತಿ ಕ್ಷಿಪ್ರದಿ ಭಕ್ತರ ಪೊರೆವತಿ ಶಾಂತಾ ಸುಪ್ರದಾಯಕನೆ ಹಸೆಗೇಳೋ 4 ಪರಮ ಪುರುಷ ಪುಣ್ಯನಾಮಾ ಪರ ಪುರಷೋತ್ತಮ ಪರಿಪೂರ್ಣ ಕಾಮಾ ಶರಣರ ಭವವನ ಧೂಮಾ ಕೇತು ಕರಿಯ ಬಲ್ಲೆನೆ ಕಾಮಿತರ ಕಲ್ಪದ್ರುಮಾ ಕರಿರಾಜವರದಾ ಹಸೆಗೇಳೋ 5 ನಿತ್ಯ ಅತ್ಯಂತ ಮಹಿಮನೆ ಆಪ್ತ ಜನರ ಕ್ಲೇಶ ಕಳೆವ ಸುಕೀರ್ತೀ ಚಿತ್ತಜ ಜನಕ ಹಸೆಗೇಳೋ 6 ಕ್ಷೀರಾಬ್ಧಿವಾಸಾ ಚಿನ್ಮಯನೆ ನಿನ್ನ ಪಾರ ಮಹಿಮೆ ತಿಳಿವವನಿಹನೆ ಮೂರು ಗುಣ ರಹಿತನೆ ದೋಷ ದೂರ ವಿದೂರ ಶಿರಿದೇವಿಯೊಡನೆ ಬಾರಯ್ಯ ಹಸೆಯ ಜಗುಲಿಗೆ7 ವ್ಯಾಳಮರ್ದನನೆ ವಿಗಮನಾ ತ್ರಿ ಶೂಲ ಪಾಣಿಯ ಓಡಿಸಿದ ಖಳನಾ ಸೋಲಿಸಿದಪ್ರತಿಸುಗುಣ ಹೇಮ ಲಲಿತಾಂಗ ಹಸೆಗೇಳೋ 8 ಅಗಣಿತ ಜೌದಾರ್ಯ ಸಾರಾ ನಿನ್ನ ಪೊಗಳ ಬಲ್ಲೆನೆ ಪಾತಕದೂರಾ ನಗರಾಜನುತ ನಿರಾಧಾರ ಭವಾದಿಗಳಿಂದ ವಂದ್ಯನೆ ನವನೀತ ಚೋರ ಜಗನ್ನಾಥ ವಿಠಲ ಹಾಸೆಗೇಳೋ9
--------------
ಜಗನ್ನಾಥದಾಸರು
ಪಂಪಾತೀರದ ಲಿಂಗಾ ಭವಭಸಿತಾಂಗಾ ಸಂಪುಲ್ಲಾಕ್ಷನ ತೋರೋ ಭಕ್ತ ಕೃಪಾಂಗ ಪ ನೀನೆ ಗತಿಯೆಂದು ನಿದಾನದಿಂದ ಧ್ಯಾನವ ಮಾಡಲು ದೈನ್ಯದಲಿಂದ ಮಾನಾಭಿಮಾನದೊಡಿಯನೆ ಆನಂದ 1 ಗಜಚರ್ಮಾಂಬರ ಗಂಗಾಧರ ಪುರವೈರಿ ಭಜಿಸಿದೆನೊ ನಿನ್ನ ಭಕ್ತಿಯಲಿ ಸಾಕಿರೆ ಕುಜನರೊಳಿಡದೆ ಉತ್ತಮವಾದ ದಾರಿ ನಿಜವಾಗಿ ತೋರಯ್ಯ ದೀನರುಪಕಾರಿ2 ಹೇಮಗಿರಿಯ ವಾಸಾ ಈಶನಿರೀಶಾ ಸೋಮಶೇಖರನೆ ಪಾರ್ವತಿಯ ವಿಲಾಸಾ ರಾಮ ಶ್ರೀ ವಿಜಯವಿಠ್ಠಲನೆ ನಿರ್ದೋಷಾ ಸ್ವಾಮಿಯ ನೆನೆವಂತೆ ಕೊಡು ಎನಗೆ ಮನಸಾ3
--------------
ವಿಜಯದಾಸ
ಪರಮ ಮಂಗಳ ಮೂರುತಿ ದಿವ್ಯಕೀರುತಿ | ಧರೆಯೊಳಗಿದೆ ವಾರುಕಿ ಪ ಕರವ ಪಿಡಿದು ಎನ್ನ | ಕರವ ಮಸ್ತಕ ಬಾಗಿಪೆ 1 ಪಾದ ಲಾಘವ ಮರೆಯಲ್ಲಿ | ಶ್ಲಾಘನ ಮಾಡಿದ ಮಾಘಧರನ ಪ್ರಿಯ 2 ನಿರುತ ಮಂತ್ರಾಲಯ ಪುರವಾಸಾ ಅಘನಾಶಾ| ಸಿರಿ ವಿಜಯವಿಠ್ಠಲನ ಚರಣ ಭಜಿಪ ಗುರುವೆ 3
--------------
ವಿಜಯದಾಸ
ಪರಾಕು ಮಹಾಸ್ವಾಮಿ ಸಜ್ಜನಪ್ರೇಮಿಪ. ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯ ಚಾರು ಪದಾಬ್ಜದ್ವಯ ದನು- ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮ ದೂರನು ಲಾಲಿಸು ಚಿನ್ಮಯ ಜಯ1 ದುಷ್ಟ ನಿಶಾಚರರಟ್ಟುಳಿ ಘನ ಕಂಗೆಟ್ಟುದು ಸುರಮುನಿಗಣ ಆ ಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ- ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮ ಕಷ್ಟವು ಪದಕರ್ಪಣ ಪರಾಯಣ 2 ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲು ಧುರೀಣರ್ಸಂತಾಪಿಪರು ಮುರಾರಿ ನಮ್ಮ ಶೌರಿ ಜಗ- ದಂತ ವಿಹಾರಿ ನಿರಂತ ಪರಂತಪ3 ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮ ಸನ್ನುತ ಶುಭಾಂಗ ಸ- ತಿಮಿರ ಪತಂಗ ಸುಪ್ರ ವಿಹಂಗ ತುರಂಗ4 ಕಾಲನಿಯಾಮಕ ಪ್ರಾಣ ನಿ ನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣ ನತ ಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ- ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪರಿ ನೆಲಸಿದೀ ಏ ಸ್ವಾಮಿ ಪರಿ ನೆಲಸೀದಿ ಏಸುಪರಿ ನೆಲಸೀದಿ ದಾಸಜನ ಹೃದಯದಿ ಭೂಸ್ವರ್ಗ ಪಾತಾಳ ಬ್ಯಾಸರ ಮಾಡಿದಿ ಪ ಎಸೆವ ಚಂಚಲ ಶಿರಿಯು ತವರ್ಕಣ್ ಮಸಕು ಮಾಡಿದಳೇನೋ ಬಿಸಜಸಂಭವ ವೇದಪಠಣದಿ ಕುಶಲ ನುಡಿಯನೇನೋ ಅಸ್ವಧಿಪ ಪ್ರಾಣ ಸೊಸಿಯ ವಾಣಿಯು ಸ್ವಸುತೆ ಭಾರತೀ ಉಸುರಿಬಿಟ್ಟಳೇನೋ 1 ಮುಪ್ಪೊಳಲುರಿಗಾನು ಪೌತ್ರನು ವೊಪ್ಪುವ ಮೈಗಣ್ಣಾ ತಪ್ಪದೆ ಸೇವಿಸುವ ಸುಮನಸರಪ್ಪಣಿತ್ತರೇನೋ ತಪ್ಪದಾಸರನ ಮುಗಿಪ್ಪ ಗರುಡ ಶೇಷ- ರೊಪ್ಪಿಗಿಯಿಲ್ಲದೆ ತಪ್ಪಿಸ್ಯೋಡಿ ಬಂದ್ಯಾ 2 ಸುರಲೋಕವಾಸಾವು ಶ್ರೀಹರೆ ಪರಮಸೌಖ್ಯವಲ್ಲೆ ಸುರತರುಧೇನುಗಳು ನಿನಗೆ ತಾವ್ ಕೊರತೆ ಮಾಡಿದವೇನೋ ಸುರಮುನಿಗಂಧರ್ವರ ಗಾಯನ ಬಿಟ್ಟು ಸರಸವೇನು ಕಂಡಿ ನರಸಿಂಹವಿಠಲ3
--------------
ನರಸಿಂಹವಿಠಲರು
ಪಾದ | ಸೋಕಿದ ಕೊನೆಧೂಳಿ ಪ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಅ.ಪ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ 1 ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ 2 ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | ಬಿಂದು ಮಾತ್ರದಿ ನೆನೆಯೆ || ಮಂದ ಮತಿಯಾದರೂ ಅಜ್ಞಾನನಾಶವು | ಸುಂದೇಹÀವಿಲ್ಲವು ಅವಾವ ಕಾಲಕ್ಕೆ 3 ಜ ಎಂದು ಪೊಗಳಲು ಜಯಶೀಲನಾಗುವ | ಯ ಎನ್ನೆ ಯುಮರಾಯನಂಜುವನು || ತೀ ಎಂದು ಪೊಗಳಲು ತೀವ್ರ ಪದವಿ ಉಂಟು | ರ್ಥ ಎಂದು ಪೊಗಳಲು ತಾಪತ್ರಯುಪಶಮನ 4 ಯೋಗಿ ಅಕ್ಷೋಭ್ಯತೀರ್ಥರ ಕರಕಮಲಸಂಜಾತ | ಭಾಗವತರ ಸುಪ್ರೇಮ || ಕಾಗಿಣಿ ತೀರದ ಮಳಖೇಡ ನಿವಾಸಾ | ಶ್ರೀ ಗುರು ವಿಜಯವಿಠ್ಠಲ ಸೇವಕ ಭಕ್ತಾ 5
--------------
ವಿಜಯದಾಸ
ಪಾದ ಮುಖ್ಯ ಪ್ರಾಣಾ ನಂಬಿದೇ ನಿನ್ನಯ ಪಾದಾ ಡಂಬರ ತೊಲಗಿಸಿ ಡಿಂಬದೊಳಗೆ ಹರಿಯ ಬಿಂಬ ಪೊಳೆವಂತೆ ಮಾಡೊ ಪ ಇಪ್ಪತ್ತು ಒಂದು ಸಾವಿರ ಐದೊಂದು ನೂರು ಅಪ್ರತಿಹಂಸಮಂತ್ರ ತಪ್ಪದೆ ದಿನದಿನ ಒಪ್ಪದಿಂದಲಿ ಭಜಿಸಿ ತಪ್ಪಿಸೋ ಭವವಾ ಸ ಮೀಪದ ಜೀವ ಕೊ ಅಪ್ಪನಂದದಿ ಪುಣ್ಯ ವಪ್ಪಂತೆ ಕರುಣಿಸೊ ಕಪ್ಪುವರ್ಣನ ಕೂಡಪ್ಪಿಸಿ ಪಾಲಿಸೋ 1 ಹತ್ತೇಳು ಎರಡಾಯುತ ನಾಡಿಯೊಳು ಉತ್ತರÀ ಪಾಲಿಸೋ ಉತ್ಕ್ರಮಣದಲ್ಲಿ ನೆತ್ತಿಯದ್ವಾರದಿಂದ ಎತ್ತಮರಿಯಲೀ ಸದದೆ ತತ್ತುವರೊಳು ಜೀವೋ ತ್ತಮನೆ ಸತ್ ಚಿತ್ ಎನಗೆ ಕೊಡು ಉತ್ತರ ಧರಿಸೋ 2 ಅಂತರಂಗದಿ ಉಸುರಾ ಹೊರಗೆ ಬಿಟ್ಟು ಅಂತರಂಗಕ್ಕೆ ಸೇರುವ ಪಂಥದೊಳು ನೀನೆ ನಿಂತು ನಾನಾಬಗೆ ತಂತು ನಡಿಸುವ ಹೊಂತಕಾರಿ ಗುಣವಂತ ಬಲಾಢ್ಯ 3 ಪಂಚಪರಣ ರೂಪನೆ ಸತ್ವ ಕಾಯಾ ಪಂಚೇಂದ್ರಿಯಗಳ ಲೋಪನೆ ಪರಮೇಷ್ಟಿ ಸಂಚಿತಾಗಾಮಿ ಬಿಡಿಸಿ ಕೊಂಚ ಮಾಡೋ ಪ್ರಾರಬ್ಧ ವಂಚನೆ ನೆನೆದೊ ಅಂಚಗಂಚಿಗೆ ಪರಪಂಚವೆ ಓಡಿಸಿ ಪಂಚವಕ್ತ್ರ ಹರಿ ಮಂಚದ ಗುರುವೇ 4 ಯೋಗಾಸನದೊಳಿಪ್ಪ ಯಂತ್ರೋದ್ಧಾರಾ ಭಾಗವತರಪ್ಪಾ ಯೋಗಿಗಳೀಶಾ ವ್ಯಾಸಾ ಯೋಗಿಗೊಲಿದ ವ್ಯಾಸಾ ಶ್ರೀ ತುಂಗಭದ್ರಾ ವಾಸಾ ಬಾಗುವೆ ಕೊಡು ಲೇಸಾ ಜಾಗರ ಮೂರುತಿ5
--------------
ವಿಜಯದಾಸ
ಪಾಲಯ ದನುಜಾರೆ ನೃಹರೆ ಪ ಮಾಧವ ಮಧುರಾಪುರ ಪರಿಪಾಲಕ ಶೌರೀ 1 ನಂದ ಕಿಶೋರ ಗೋಪಾಲ ಮುಕುಂದ ಬೃಂದಾವನಾ ಸಾನಂದ ಗೋವಿಂದ 2 ಸನಕಸನಂದನ ವಿನಮಿತ ಚರಣಾ ವನಜನಯನ ಗೋಪೀಜನ ಕರುಣಾ 3 ಮಂಗಳಭಾಸಾ ಮುನಿಗಣತೋಷಾ ಮಾಂಗಿರಿವಾಸಾ ಮಣಿಗಣಭೂಷಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಲಯಮಾಂ ಶ್ರೀ ರಾಮಾ ಮೂಲ ಸುಗುಣ ಶೀಲನೆ ಪ ನೀಳ್ಗರೆವ ಹೃದಯನಿವಾಸಾ ಕಾಲಾಂತಕ ಕರ್ಮನಾಶಾ ಚಾಳಿಕ ಚಿನ್ಮಯ ಸುರೇಶ ಹರೀ ಲೋಲಗುಣಾತೀತನೆ 1 ಚಂಡಕಿರಣ ಕುಲಜರಾಘವಾ ಸುಂದರಶ್ರೀ ಸೀತಾಧವಾ ಛಂಧ ನಿಜಾನಂದ ವೀಯುವಾ ಬಂದಭಯನಿವಾರನೇ ನೀ 2 ದಶಮುಖರಾವಣ ನಿವಾರಣಾ ಅಸುರಾಸುರ ನಿಕ್ರಂದ ನಾ ಋಷಿಯಾಗವ ಕಾಯ್ದ ದೇವಾ 3 ಅಂಬುಜಾಕ್ಷಾನಂತರೂಪಾ ತುಂಬಿಹ ಸದ್ಗುರು ಸ್ವರೂಪಾ ನಂಬಿದ ಭಕ್ತರನೆ ಪಾಲಿಪಾ ಚಿದಂಬರ ಶಾಂತಿದಾಯಕಾ 4
--------------
ಶಾಂತಿಬಾಯಿ