ಒಟ್ಟು 87 ಕಡೆಗಳಲ್ಲಿ , 41 ದಾಸರು , 86 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೇಗೆ ಕಳೆಯಬೇಕೋ ಹೊತ್ತು ಹೇಗೆ ಕಳೆಯಬೇಕೋ ಪ ಹೇಗೆ ಕಳಿಲಿ ಭವಸಾಗರದಲಿ ಮನ ನೀಗದು ಚಂಚಲ ಸಾಗರನಿಲಯ ಅ.ಪ ಹುಟ್ಟಬಾರದಿತ್ತು ಇಹ್ಯದಿ ಹುಟ್ಟಿದ್ದೇ ತಪ್ಪಾಯಿತು ನಿಷ್ಠೆಲಿರಗೊಡದೆನ್ನ ದುಷ್ಟಮನಸು ಘಳಿ ಗಿಷ್ಟೆಲ್ಲ ಎಲ್ಲಿತ್ತು ಹುಟ್ಟದಿದ್ದರೆ ನಾನು 1 ಕ್ಷಣಕ್ಷಣಕೊಂದು ರೀತಿ ಮನಸಿನ ಗಣನೆಯಿಲ್ಲದ ಭ್ರಾಂತಿ ಜನಿಸಿದಂದಿನಿಂದ ಘನತರ ಕುಣಿಸ್ಯಾಡಿ ಜನರ ಸೇವೆಯೊಳು ದಣಿಸಿತು ಪಾಪಿ 2 ಅನುಗಾಲವು ಚಿಂತೆ ಜೀವಕೆ ಇನಿತು ಇಲ್ಲ ಸ್ವಸ್ಥ ತನುಮನಧನ ನಿನಗರ್ಪಿಸಿ ಬೇಡುವೆ ಘನ ಬೇಸತ್ತೆ ಪೊರೆ ಚಿನುಮಯ ಶ್ರೀರಾಮ 3
--------------
ರಾಮದಾಸರು
ಹೋಗಿ ಬರತೇವ ಸಾಗರನ ಮಗಳೆ ಹೋಗಿ ಬರತೇವ ಪ. ರುಕ್ಮಿಣಿದೇವಿ ನಿನ್ನ ದುರ್ಗೆರೂಪವ ಕಂಡು ಅಬ್ಬರಿಸುತಾರೆ ಜನರೆಲ್ಲ ಅಬ್ಬರಿಸುತಾರೆ ಜನರೆಲ್ಲ ಮುಯ್ಯಕ್ಕೆನಿರ್ಭಯದಿಂದ ಬರಬೇಕು ಸಖಿಯೆ 1 ಹಿಂಡು ಹಿಂಡು ಕರೆಸಿ ಕುಣಿಸುತ ಖ್ಯಾತಿಲೆ ಮುಯ್ಯ ತಿರುಗಿಸೆ ಸಖಿಯೆ2 ಹಿಂಡು ಕರೆಸವ್ವ ಸಖಿಯೆ 3 ರಂಭೆ ಸತ್ಯಭಾವೆ ಸಂಭ್ರಮದಿ ಬರುವಾಗ ಒಂಭತ್ತು ವಾದ್ಯ ನಿನಗೆಲ್ಲೆಒಂಭತ್ತು ವಾದ್ಯ ನಿನಗೆಲ್ಲೆ ಮುಯ್ಯಕ್ಕೆಡೊಂಬರ ಡೊಳ್ಳು ಹೊಯಿಸವ್ವ ಸಖಿಯೆ 4 ಹಿಂಡು ಬರಲೆವ್ವ ಸಖಿಯೆ 5 ಆವ್ವ ರುಕ್ಮಿಣಿ ನಿನಗೆ ದಿವ್ಯವಾಹನ ವೆಲ್ಲಿಸಿಂಹ ಶಾರ್ದೂಲ ಕರೆಸವ್ವಸಿಂಹ ಶಾರ್ದೂಲ ಕರೆಸಿ ಏರಿಕೊಂಡುಬಾವಾನ ಹಾಂಗೆ ಬಾರವ್ವ ಸಖಿಯೆ 6 ಕೋಗಿ¯ ಸ್ವರದಂತೆ ರಾಗದಿ ರಾಮೇಶನ ಪಾಡಿ ಕೊಂಡಾಡಿ ಅರಿತಿಲ್ಲಪಾಡಿ ಕೊಂಡಾಡಿ ಅರಿತಿಲ್ಲ ಒಡಗೂಡಿ ಕಾಗೆ ಕೂಗಾಡಿ ಬರಲೆವ್ವ ಸಖಿಯೆ7
--------------
ಗಲಗಲಿಅವ್ವನವರು
ಹ್ಯಾಂಗೆ ಕೊಟ್ಟನು ಹೆಣ್ಣ ಸಾಗರನು ಈ ವರಗೆ ಪ. ಶೃಂಗಾರಪುರುಷರು ಬಹುಮಂದಿಯಿರಲುಅ.ಪ. ಮುಟ್ಟಿನೋಡಿದರೆ ಮೈಯತಿ ಕಠಿಣವು ಸೊಟ್ಟ ಮೋರೆಯು ಇವಗೆ ಎಷ್ಟುದ್ದ ಹಲ್ಲುಗಳು ಇಷ್ಟು ಘೋರಮುಖದಳಿಯನೆಲ್ಲ್ಲಿ ದೊರಕಿದನೊ 1 ಬಡವನು ಭಿಕ್ಷುಕನು ಬಡಬನಂದದಿ ಕೋಪವು ನೋಡಿದರೆ ತಲೆ ಜಟಿಯು ಕಟ್ಟಿಹುದು ಜಾರ ಚೋರನಿಗೆ ನೋಡಿ ನೋಡಿ ಹೆಣ್ಣ ಹ್ಯಾಂಗೆ ಕೊಟ್ಟನು 2 ಭಂಡನಾಗಿರುವನು ಕಂಡವರೊಡನೆ ಕಾಳಗವ ಕೊಂಡುಬಹ ಬಲು ಉದ್ದಂಡನಿವನು ಅಂಡಜವಾಹನಗೆ ಯೋಗ್ಯವಾದ ಹೆಣ್ಣ ಕಂಡುಕಂಡೀ ಹಯವದನಗೆ ಕೊಟ್ಟನ್ಹ್ಯಾಗೆ 3
--------------
ವಾದಿರಾಜ
ಆತನ ಪಾಡುವೆನನವರತ |ಪ್ರೀತಿಯಿಂದಲಿ ತನ್ನ ಭಕುತರ ಸಲಹುವ ಪಆವಾತನ ಕೀರ್ತಿಯನುಪರೀಕ್ಷಿತ ಕೇಳೆ |ಪಾವನನಾದನು ಮೂಜಗವರಿಯೆ ||ಭಾವಶುದ್ಧಿಯಲಿ ಶುಕನಾರನು ಪೊಗಳುವ |ಆವಗಂ ಪ್ರಹ್ಲಾದನಾದವನ ನೆನೆವನಯ್ಯ 1ಶಿಲೆಯ ಬಾಲೆಯ ಮಾಡಿದ ಪಾದವಾರದು |ನಳಿನ ಸಂಭವನನು ಪೆತ್ತವನಾರು ||ಕಲಿಯುಗದ ಮನುಜರಿಗೆ ಆರನಾಮವುಗತಿ |ಇಳೆಯ ಭಾರವನಿಳುಹಿ ಸಲಹಿದರಾರಯ್ಯ 2ದ್ರುಪದನ ಸುತೆಯ ಮಾನರಕ್ಷಕನಾರು |ನೃಪಧರ್ಮನಿಗೆ ಸಂರಕ್ಷಕನಾರು |ಕೃಪೆಯಿಂದ ವಿದುರನ ಮನೆಯಲುಂಡವನಾರು |ಆಪತ್ಕಾಲದಿ ಗಜವ ಸಲಹಿದರಾರಯ್ಯ 3ಅತಿಶಯದಿಂದ ಅರ್ಜುನಗೆ ಸಾರಥಿಯಾಗಿ |ರಥವ ಪಿಡಿದು ನಡೆಸಿದವನಾರೊ ||ಪೃಥಿವಿಯೆಲ್ಲವಬಲಿ ಆರಿಗೊಪ್ಪಿಸಿದನು |ಮತಿವಂತ ಧ್ರುವನ ರಕ್ಷಕನಾರು ಪೇಳಯ್ಯ 4ಸಾಗರನ ಮಗಳಿಗೆ ಆರ ನಾಮವೆಗತಿ |ಯೋಗದಿ ನಾರದನಾರ ಭಜಿಪನಯ್ಯ ||ರಾಗರಹಿತ ಹನುಮಂತನೊಡೆಯನಾರು |ಭಾಗವತರ ಪ್ರಿಯ ಪುರಂದರವಿಠಲ 5
--------------
ಪುರಂದರದಾಸರು
ಕರುಣಾಸಾಗರನ ನೋಡಿರೈ ಪತರುಣಾಕರ್Àನಿಭ ಸುಪರಣವಾಹನಗುಣ-ವರಣನ ಮಾಡುವ ಕರ್ಣಹೀನಾಂಶನ ಅ.ಪನಾನಾವಿಧದ ಫಲ ದಾನಮಾಡುವ ಸುರ -ಧೇನುನಿನಗೆ ಸೋತು ಪೋಯಿತಯ್ಯಾಮಾನನಿಧಿಯೆ ಎನ್ನ ನೀನೆ ಕಾ -ನಾನಯ್ಯ ಇದಕೇನುಪಾಯಾದೀನ- ಜನ-ಮಂದಾರ- ಶಾಶ್ವತದಾನಿ ನಿನಪದಧ್ಯಾನ ಮಾಡಿಸೋ 1ಸೇವಕ - ಜನರನ್ನ ಕಾವೋನೀತನು ಎಂಬೊನೀನಿರಲುನಿತ್ಯಆವ ಭಯ ಎನಗೇನು ಇಲ್ಲಾಈ ವಿಧದಿ ಮಹಿಮವ ತೋರಿ ಮೆರೆವ 2ಪಾತಕವನಕುಲ - ವೀತಿಹೋತ್ರನು ಎನಿಸೀದಾತಗುರುಜಗನ್ನಾಥ ವಿಠಲಗತಿಜಾತರೂಪಸುಶಯ್ಯತನಯದೂತನಾದವಗೇನು ಭಯ ನಿ -ರ್ಭೀತನಾಗಿದ್ದೆಲ್ಲ ಕಾರ್ಯವ -ನೀತೆರದಿ ತಾ ಮಾಡುತಿರುವಾ 3
--------------
ಗುರುಜಗನ್ನಾಥದಾಸರು
ದೋಷ ಎಣಿಸದೆ ಕಾಯೊ ಜೀಯಾ ಪಕಂಡ ಕಂಡವರ ಭಜಿಸೀ -ಬೇಡಿತೋಂಡವತ್ಸಲ ಕರುಣೆ ಸಲಿಸೀಪಾದಪುಂಡರೀಕ್ಯನ್ನೊಳಗೆ ಇರಿಸಿಕಾಯೋ 1ಮಾqಬಾರದ ಕೃತ್ಯವಾ - ನಾ ಬಲುಮಾಡಿದೆಗೃಹಕೃತ್ಯವಾಬೇಡದಕಿ ಭೃತ್ಯತ್ವವಾ - ಈ ದೋಷನೋಡದಲೆ ಭಕ್ತತ್ವವಾ ನೀಡೊ 2ದೀನ ಜನಪಾಲ ನಿನ್ನಾ-ರೂಪಧ್ಯಾನ ಮಾಡಿದೆ ಬಿಡದೆ ಘನ್ನಾ-ಗತಿಎನು ಪೇಳಯ್ಯಾ ಎನಗೆ ಮುನ್ನಾ ಸ್ವಾಮಿ 3ಗುರುರಾಘವೇಂದ್ರರಾಯ - ಎನ್ನಶರಣು ಪೊಕ್ಕೆನೊ ನಿನಗೆ ನಾನಯ್ಯಾ ಕರುಣೀ 4ಮಾತ ಪಿತ ಭ್ರಾತ್ರÀ ಬಂಧೂ - ಎನಗೆದಾತನಿನ್ನ ದೂತನೆಂದೂ- ಬಂದ-ನಾಥನನು ನೀ ಕಾಯುವುದು ಪ್ರಭುವೇ 5ಕರುಣಸಾಗರನೆ ಈಗ - ತವರೂಪಶರಣು ಪೊಕ್ಕವನ ವೇಗಾ-ಭವ-ಅರಣ ದಾಟಿಸುವಂಥ ಯೋಗಾ ಪೇಳಿ 6ಹೋಗುತಿದೆ ಹೊತ್ತು ಪದುಮಾಕ್ಷ -ಹ್ಯಾಗೆಆಗುವದೊ ನಿನ್ನಅಪರೋಕ್ಷಜಾಗುಮಾಡದೆಸಲಿಸ್ಯನ್ನಪೇಕ್ಷಾ ಸ್ವಾಮಿ7ಪಾರದೋಷಗಳನ್ನೆ ತಾಳೋಘೋರಅಙ್ಞÕನ ಕೀಳೋ- ಪರಲೋಕಸೇರಿಸೆನ್ನನು ಕೃಪಾಳೋ ಸ್ವಾಮಿ 8ಎಷ್ಟು ಪೇಳಲಿ ಎನ್ನ ತಾತಾ - ಕೃಪಾ -ದೃಷ್ಟಿಯಲಿನೋಡುನಾನಿನ್ನ ಪೋತಾಧಿಟ್ಟ ನೀಗುರುಜಗನ್ನಾಥಾ- ವಿಠಲನನಿನ್ನೊಳಗೆ ತೋರೋದಾತಾಖ್ಯಾತಾ9
--------------
ಗುರುಜಗನ್ನಾಥದಾಸರು
ಬಾರೋ ಬಾರೋ ಭಯನಿವಾರಣ ಕೃಷ್ಣ |ಬಾರೋ ಬಾರೋ ದಯಸಾಗರನೇ ದೇವಾ ಪನಳಿನೋದರ ಮೋಹನ ಕಾಮಿತರೂಪ |ನಳಿನದಳಾಯತ ನಯನ ಗೋವಳರಾಯ 1ನಿತ್ಯಾನಂದ ನೀಲಾಂಗ ನಿರ್ಮಲಚಿತ್ತ |ಧಾತ್ರಿಜಾಂತಕವಾಸುದೇವದೇವಕಿ ಪುತ್ರ 2ನಂದಾನಂದ ಮುಕುಂದ ಸುಂದರಕಾಯ|ಇಂದಿರೆಯರಸಗೋವಿಂದದಾಸನ ಪ್ರೀಯ 3
--------------
ಗೋವಿಂದದಾಸ
ಬಿಡಲಾರೆ ಬಿಡಲಾರೆ ನಿನ್ನಡಿದಾವರೆಯ ನೀಕೊಡು ಕಂಡ್ಯ ಅಭಯವಿಡಿದೆಮ್ಮ್ಮಯ ತಂದೆ ಪ.ಕೂಗುವೆ ಕೂಗುವೆ ಕೃಪಾಸಾಗರನೆಂದ್ಹೇಳಿ ತಾಕೂಗಿದರೊದಗಿ ಕಾಯಿದೆ ನಾಗನ್ನಕೇಳಿತಂದೆ1ಬಡವ ನಾ ಬಡವನು ಕಾಣೊ ಬಾಡದೊನಮಾಲಿ ಕಡುಬಡವ ಸುದಾಮನ ಕೈಯವಿಡಿದ್ಯೆಂದುಕೇಳಿತಂದೆ2ಡೊಂಕುನಡೆದೆಡೊಂಕುನುಡಿದೆ ಶಂಕಿಲ್ಲದಲೆ ಮೂಡೊಂಕಿಯ ತಿದ್ದಿದ ಬಿರುದಾಂಕನಕೇಳಿತಂದೆ3ಬಲ್ಲೆನೊ ಬಲ್ಲೆನೊ ನೀನಿದ್ದಲ್ಲಿ ವ್ರಜದಲ್ಲಿ ಗೋಗೊಲ್ಲರು ಪುಲ್ಗಲ್ಲಿಗೆ ಕೈವಲ್ಯವುಕೇಳಿತಂದೆ4ಅವರೇವೆ ನಿನ್ನವರು ನಾನೇನವರ ಶಿಶುವಲ್ಲೆ ತನ್ನವರಹೊರೆವಪ್ರಸನ್ವೆÉಂಕಟ ತವರೂರಕೇಳಿತಂದೆ5
--------------
ಪ್ರಸನ್ನವೆಂಕಟದಾಸರು
ಭಾಗೀರಥಿ ದೇವಿ ನಮೋ ||ಭಾಗೀರಥಿ ದೇವಿ ಭಯ ನಿವಾರಣ ಗಂಗೆ |ಸಾಗರನರ್ಧಂಗೆ ಸುತರಂಗೆ ಪವಾಮನ ವಾಮ ಪಾದಾಂಗುಷ್ಟನಖಸೋಕಿ |ಆ ಮಹ ಬ್ರಹ್ಮಾಂಡ ಸೀಳಾಲೂ | ಭಾಗೀ..... ||ತಾಮರಸಜ ಲೋಕಕ್ಕಿಳಿದು ಮಜ್ಜನವಾಗಿ |ಸ್ವಾಮಿ ಪಾದೋದಕಳೆನಿಸಿದೆ || ಭಾಗೀ... 1ಹರಿಪಾದ ಜಲ ದೊರಕುವದು ದುರ್ಲಭವೆಂದು |ಹರ ಪ್ರಾರ್ಥಿಸಲು ಜಡೆಯೊಳು ನಿಂದೆ | ಭಾಗೀ.... ||ಮೊರೆಯಿಡೆ ದೇವತೆಗಳಿಗೆ ವೊಲಿದು ಬಂದು |ಸುರನದಿಯೆಂದು ಕರೆಸಿಕೊಂಡೇ | ಭಾಗೀ..... 2ಚನ್ನಾಗಿ ಸ್ವರ್ಗದೊಳಗೆ ನಿಂತ ಕಾರಣ |ಸ್ವರ್ನದಿಯೆಂದು ಕರೆಸಿದೆವ್ವ | ಭಾಗೀ.... ||ಉನ್ನತಧೃವಮಂಡಲಕ್ಕೆ ಪೋಗಿ ಮುಟ್ಟಿದೆ |ನಿನ್ನಾಕಾಶ ಗಂಗೆ ಎಂಬೋರೆ | ಭಾಗೀ..... 3ಭಗೀರಥ ಬಹುಕಾಲ ಪ್ರಾರ್ಥಿಸೆ ಕರುಣದಿಂ |ಜಿಗಳಿ ಹೇಮಾದ್ರಿಗೆ ನಡೆತಂದೆ | ಭಾಗೀ.... ||ಸೊಗಸಿಲಿಂ ತ್ರಿಪಥಾಗಿ ದಕ್ಷಿಣದಲಿ ಬಂದು |ಸಗರರಾಯನ ಉದ್ಧರಿಸಿದೇ | ಭಾಗೀ..... 4ತವಕದಿಂದಲ್ಲಿ ಜಹ್ನು ಋಷಿಯಲ್ಲಿ ಜನಿಸಿ ಜಾ |ಹ್ನವಿಯೆಂದು ಸ್ತುತಿಸೋರೆ ಸುರರೆಲ್ಲ | ಭಾಗೀ.... ||ಭುವನದೊಳೆಲ್ಲರು ಪುನೀತರಾಗೋದು ಸಿದ್ಧ |ತವಪಾದಸ್ಮøತಿಮಾತ್ರದಿಂದಲೀ | ಭಾಗೀ...... 5ನಂದಿನಿ ನಳಿನಿ ಸೀತಾ ಮಾಲತೀ ಮಲಹ |ಮಂದರಧರ ಪದಿ ಶ್ರೀಗಂಗೆ | ಭಾಗೀ...... ||ಸುಂದರ ತ್ರಿಪಥ ಭಾಗೀರಥಿ ಭೋಗವತಿ |ವಂದೆಜಾಹ್ನವಿತ್ರಿದಶೇಶ್ವರಿ | ಭಾಗೀ.... 6ವಸುಗಳ ಮಾತು ಲಾಲಿಸಿ ರಾಯನಲಿ ಬಂದು |ಬಸುರಿಂದ ಪಡೆದು ಉದ್ಧರಿಸಿದೆ | ಭಾಗೀ.... |ಅಸಹ್ಯ ಕರ್ಮವ್ಯಾಕೆಂದೆನಲು ಕುಮಾರನ |ಕೊಸರುತ ನಿಜರೂಪವೈದಿದೇ | ಭಾಗೀ.... 7ನಮೊ ನಮೊ ಶುಭಗಾತ್ರೆ ನಮೊ ನಮೋ ಸುಚರಿತ್ರೆ |ನಮೊ ನಮೊ ಶಂತನುವಿನ ಮಿತ್ರೆ | ಭಾಗೀ..... ||ಶಮದಮಾದಿಗಳಿತ್ತುಪೊರೆಅನುದಿನದಲ್ಲಿ |ಅಮರವಿನುತಪಾದಪಂಕಜೆ | ಭಾಗೀ.....8ಕಾಣಲು ಪಾಪಹರವು ಮುಕ್ತಿ ಅಹುದು |ಸ್ನಾನದ ಫಲವು ಬಲ್ಲವರಿಲ್ಲ | ಭಾಗೀ...... ||ಕ್ಷೋಣಿಯ ಮ್ಯಾಲುಳ್ಳ ಸರಿದ್ವರಳೆನಿಸುವೆ |ಪ್ರಾಣೇಶ ವಿಠಲನ್ನ ದಯದಿಂದ | ಭಾಗೀ..... 9
--------------
ಪ್ರಾಣೇಶದಾಸರು
ಭಾಗೀರಥೀದೇವಿ ಭಯನಿವಾರಣೆ ಗಂಗೆ |ಸಾಗರನ ನಿಜರಾಣಿ ಸಕಲಕಲ್ಯಾಣಿ ಪಒಮ್ಮೆ ಶ್ರೀಹರಿ ಪಾದಕಮಲದಿಂದುದುಭವಿಸಿ |ಬ್ರಹ್ಮಕರ ಪಾತ್ರೆಯಲಿನಿಂದುಬಂದೆ ||ಶ್ರೀ ಮನ್ನಾರಾಯಣನ ಪಾದತೀರ್ಥವಾಗಿ |ಬೊಮ್ಮಾಂಡವನು ಪಾವನಮಾಡ ಬಂದೆ 1ದೇವಿ ನೀ ವಿಷ್ಣುಪಾದೋದಕವೆಂದೆನಿಸಿ |ದೇವತೆಗಳಿಗೆಲ್ಲ ಅಧಿಕವಾದೆ ||ದೇವರೆಲ್ಲರು ನೆರೆದು ತಲೆಬಾಗಿದರು ಮಹಾ-|ದೇವನ ಶಿರದಿಂದ ಧರೆಗಿಳಿದು ಬಂದೆ 2ಜಹ್ನವಿನುದರದಿ ಪೂಕ್ಕ ಕಾರಣದಿಂದ |ಜಾಹ್ನವಿಯೆಂದು ನೀನೆನಿನೆಕೊಂಡೆ ||ಮುನ್ನ ನರಕಕ್ಕಿಳಿದ ಸಗರರಾಯನ ವಂಶ- |ವನ್ನು ಪಾವನಮಾಡಿ ಪೊರೆಯಲು ಬಂದೆ 3ನಿಟ್ಟಿಸಲು ಮುನ್ನಾರು ಜನ್ನಪಾತಕಹರಣ |ದಿಟ್ಟಿಸಲು ಮೂರುಜನ್ಮದಿ ಮುಕುತಿಯು ||ಮುಟ್ಟಿ ಮಾಡಿದರೊಂದು ಸ್ನಾನಮಾತ್ರದಲಿ |ಸುಟ್ಟು ಹೋಹುದು ಸಾಸಿರಜನ್ಮ ಪಾಪ 4ಹಲವು ಪರಿಯಲಿ ಹರಿಯ ಸ್ಮರಣೆಯಿಲ್ಲದೆ ಭವ-|ದೊಳಗೆ ಸಿಲುಕಿ ಕಡುನೊಂದೆ ನಾನು ||ಹಲವು ಮಾತೇಕೆ ಶ್ರೀ ಪುರಂದರವಿಠಲನ |ಚೆಲುವಪದದಿಂದಿಳಿದು ಒಲಿದು ದಯೆ ಮಾಡೆ 5
--------------
ಪುರಂದರದಾಸರು
ಮುಟ್ಟು ಚಟ್ಟೆಂದು ನಗುವಯ್ಯನಿನ್ನ ತಿಳಿಯಯ್ಯಮುಟ್ಟು ಚಟ್ಟೆಂಬುದು ನಗುವಯ್ಯಮುಟ್ಟಿದು ಆದುದು ನಿನ್ನಿಂದಲೆಮುಟ್ಟಿಗೆ ಸಾಕ್ಷಿಯು ನೀಪರವಸ್ತುಪತಿಂಗಳು ತಿಂಗಳು ರಕ್ತಕಲಕು ಘಟ್ಟಾಗಿ ಬಲಿತುಇಂಗಾ ಇಂಗಡದ ವಯವ ಜಿಗಿತುಅಂಗಾಯಿತು ತೆರದಅಂಗವ ಮುಟ್ಟಿರಿ ಮುಟ್ಟಿರಿ ಎಂದುಮಂಗನ ತೆರದಲಿ ಕುಣಿವುದು ಮುಟ್ಟು1ಮೃಗಜಲದಂತೆಮಾಯೆಮುಟ್ಟುಆದುದು ಯಥೇಷ್ಟಬಗೆಬಗೆ ರೂಪಳವಟ್ಟುತೋರಿದವದುರಿಟ್ಟುನಗಸಾಗರನದಿ ನರಸುರ ಕ್ರಿಮಿಪಶುನಗಧರಹರವಿಧಿ ಲೋಕವೆ ಮುಟ್ಟು2ಮುಟ್ಟು ಭಟ್ಟರು ಹೇಳುವಂತಿಲ್ಲಬೆಳಗಿದುದು ಎಲ್ಲಅಷ್ಟಾಗಿ ಕಳೆಥಳಿಥಳಿಪುದೆಲ್ಲತನ್ನರಿದವ ಬಲ್ಲಶಿಷ್ಟ ಚಿದಾನಂದ ನೀನೆಂದು ಕಾಣಲುಮುಟ್ಟಿಗೆ ಜಾಗವಿಲ್ಲ ನೀಚರ ವಸ್ತು ನಿಜ ಬ್ರಹ್ಮ3
--------------
ಚಿದಾನಂದ ಅವಧೂತರು