ಒಟ್ಟು 229 ಕಡೆಗಳಲ್ಲಿ , 55 ದಾಸರು , 213 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನಗೇನೊ ಭಕುತರ ಚಿಂತೀ ಘನಮಹಿಮ ಮಹÀದಾದಿ ಸುರವಂದ್ಯ ತಿಮ್ಮಾ ಪ ಪರಮೇಷ್ಟಿ ನಿನಪುತ್ರ ಕಿರಿಯ ಮಗನು ಜಗತ್ಪ್ರಾಣದೇವಾ ಹಿರಿಯ ಸೊಸೆಯು ವಾಣಿ ಕಿರಿಯು ಭಾರತೀ ದೇವಿ ಸುರರು ಪರಿವಾರ 1 ಸಕಲಲೋಕಕೆ ಅರಸು ಲಕುಮಿಕಾಂತನು ಎಂದು ನಿಖಿಳವೇದ ಸ್ಮøತಿಯು ಸಾರುತಿಹದೋ ಅಖಿಳವ್ಯಾಪಕನಾಗಿ ಸಕಲಸುರನರರಿಂದ ಭಕುತಿಪೂರ್ವಕÀ ಓಲಗವಕೈಕೊಂಬ ಸಮಯದಲಿ 2 ಸುರನಾಥ ನೀನಲ್ಲದಿತರ ದೇವತೆಯುಂಟೆ ಸರವೋತ್ತಮಾನೆಂಬನಾವನವನೋ ಸರಸಗುಣನಿಧಿಯೆ ಶ್ರೀ ಗುರುಜಗನ್ನಾಥವಿಠಲ ವರಭಾಗ್ಯ ಮಬ್ಬಿನಲಿ ಇರುವೊ ಸಮಯದಲಿ 3
--------------
ಗುರುಜಗನ್ನಾಥದಾಸರು
ನಿರ್ಮಲ ಹೃದಯ ಮಂಟಪದೊಳಗೆ ನಿಶ್ಚಲ ಮಣಿಯಿಟ್ಟುಧರ್ಮ ಪಟ್ಟಾವಳಿಯ ಹಸೆ ಹಾಸಿಧರ್ಮ ಪಟ್ಟಾವಳಿಯ ಹಸೆ ಹಾಸಿ ಮುಕ್ತಿಯನುಕರ್ಮ ಹರೆಯರು ಕರೆದರು 1 ಪರಮ ಪುರುಷ ಬಂದು ಪರಿಣಾಮದಿ ಕುಳಿತು ಇಹನುಪರಮ ಪಾವನೆ ಹಸೆಗೇಳುಪರಮ ಪಾವನೆ ಹಸೆಗೆ ಏಳೆಂದು ಮುಕ್ತಿಯನುಪರಮ ಶಾಂತಿಯರು ಕರೆದರು 2 ನಿತ್ಯತೃಪ್ತನು ಬಂದು ನಿಜದಲ್ಲಿ ಕುಳಿತಿಹನುನಿತ್ಯ ಆನಂದೆ ಹಸೆಗೆ ಏಳುನಿತ್ಯ ಆನಂದೆ ಹಸೆಗೆ ಏಳೆಂದು ಮುಕ್ತಿಯನುನಿತ್ಯ ಸತ್ಯೆಯರು ಕರೆದರು 3 ಮಂಗಳ ಮೂರುತಿ ಬಂದು ಮಂಗಳವಾಗಿ ಕುಳಿತಿಹನುಮಂಗಳ ಮುಖಿಯೇ ಹಸೆಗೇಳುಮಂಗಳ ಮುಖಿಯೇ ಹಸೆಗೇಳು ಎಂದು ಮುಕ್ತಿಯನುಮಂಗಳ ಮುಖಿಯರು ಕರೆದರು 4 ರೂಪ ರಹಿತನು ಬಂದು ರೂಪವಾಗಿ ಕುಳಿತಹನುರೂಪ ಮಹಾ ರೂಪೇ ಹಸೆಗೇಳುರೂಪ ಮಹಾ ರೂಪೇ ಹಸೆಗೇಳು ಎಂದು ಮುಕ್ತಿಯನುರೂಪವತಿಯರು ಕರೆದರು 5 ಅಚ್ಯುತನೆ ತಾ ಬಂದು ಅಚ್ಚಾರಿಯಲಿ ಕುಳಿತಿಹನುಅಚ್ಯುತ ರೂಪಳೆ ಹಸೆಗೇಳುಅಚ್ಯುತ ರೂಪಳೆ ಹಸೆಗೇಳೆಂದು ಮುಕ್ತಿಯನುನಿಶ್ಚಿತ ಮತಿಯರು ಕರೆದರು 6 ಸಾಕ್ಷಿರೂಪನೆ ಬಂದು ಸಾಕ್ಷಾತ್ತು ಕುಳಿತಿಹನುಸಾಕ್ಷಿಭೂತಳೆ ನೀನು ಹಸೆಗೇಳು ಸಾಕ್ಷಿಭೂತಳೆ ನೀನು ಹಸೆಗೇಳೆಂದು ಮುಕ್ತಿಯನುಸೂಕ್ಷ್ಮಮತಿಯರು ಕರೆದರು7 ವೇದಾತೀತನೆ ವೇದ್ಯವಾಗಿ ಕುಳಿತಿಹನುವೇದಮಾತೆಯೆ ನೀನು ಹಸೆಗೇಳುವೇದಮಾತೆಯೆ ನೀನು ಹಸೆಗೆ ಏಳೆಂದು ಮುಕ್ತಿಯನುವೇದಸ್ಮøತಿಯರು ಕರೆದರು8 ಜ್ಯೋತಿ ಚಿದಾನಂದನೆ ಬಂದು ಜೋಕೆಯಲಿ ಕುಳಿತಿಹನುಜ್ಯೋತಿ ಪ್ರದೀಪೆಯೇ ಹಸೆಗೇಳುಜ್ಯೋತಿ ಪ್ರದೀಪೆಯೇ ಹಸೆಗೇಳು ಏಳೆಂದು ಮುಕ್ತಿಯನುಜ್ಯೋತಿರ್ಮತಿಯರು ಕರೆದರು 9
--------------
ಚಿದಾನಂದ ಅವಧೂತರು
ಪದ್ಮಾಪತಿ ವಿಠಲ ನೀನಿವಳ ಸಲಹ ಬೇಕೋ ಪ ಪದ್ಮ ಸಂಭವ ಜನಕ ಪದ್ಮದಳ ನೇತೃ ಹೃತ್ಪದ್ಮ ದೋಷಗಳ ತಿದ್ದಿ ಕಾಪಾಡೊ ಹರಿಯೇ ಅ.ಪ. ಜನ್ಮಜನ್ಮಾಂತರದ ಪುಣ್ಯ ಸಂಚಯದಿ ಶ್ರೀಮನ್ಮಧ್ವಮತದಲಿ ಜನ್ಮ ತಾಳಿಹಳೋ |ಕರ್ಮನಾಮನೆ ಅನಾದ್ವವಿದ್ಯಾಕಾಮಕರ್ಮಗಳನೆ ಕಳೆವ ಸನ್ಮಾರ್ಗವನೆ ತೋರೊ 1 ತಾರತಮ್ಯ ಜ್ಞಾನ ಮೂರೆರಡು ಭೇದಗಳಸಾರವನೆ ತಿಳಿಸಿ ಸಂಸಾರನಿಧಿ ದಾಟಿಸೋಕಾರುಣ್ಯ ನಿಧಿ ಮೂಲ ಕಾರಣನು ನೀನೆಂದುಸಾರಿಬೇಡುವೆ ನಿನ್ನ ಪಾರು ಮಾಡಿವಳಾ 2 ಪತಿಸುತರು ಹಿತರಲ್ಲಿ | ಮತಿಮತಾಂವರಲ್ಲಿಕೃತಿಪತಿಯ ವ್ಯಾಪ್ತಿ ಸನ್ಮತಿಯನೇ ಕೊಡುತಹಿತದಿ ಸೇವೆಯಗೈಸು ಕೃತಕಾರ್ಯಳೆಂದೆನಿಸುಗತಿ ವಿಹೀನರಿಗೆಲ್ಲ ಗತಿಪ್ರದನೆ ಸ್ವಾಮೀ 3 ನಿನ್ನ ಸ್ಮøತಿಗಿಂದಧಿಕ ಅನ್ಯಸಾಧನ ಕಾಣೆಘನ್ನ ಈ ಕಲಿಯುಗದಿ ಪ್ರಾಣಾಂತರಾತ್ಮ |ಪುಣ್ಯ ಫಲದಾತ ಪ್ರಪನ್ನ ಪರಿಪಾಲಕನೆನಿನ್ನ ಸಂಕೀರ್ತನವ ಸರ್ವದಾ ಕೊಡು ಹರಿಯೇ 4 ಭಾರ ನಿನ್ನದೊಸ್ವಾಮಿಮಧ್ವಾಂತರಾತ್ಮ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪಂಪಾಪತಿಯೆ ಶಂಭೋ - ಪಾಲಿಯ ಪ ಶಂಫಲಿ ಪುರಗ ವಿರಂಚಿ ಪಿತ ಪದನೋಂಪಿಗೈವ ಮನ | ಇಂಪಾಗಿ ಕೊಡು ಹರ ಅ.ಪ. ಪಂಚ ಬಾಣಾರಿ ಮಹದೇವಾ | ತ್ವರ್ಯಸಂಚುಗೊಳಿಸೊ ಹರಿ ಭಾವಾ |ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಸಂಚಿತಾಗಾಮಿ ಕಳೆ | ವಾಂಛಿತಾರ್ಥವ ಶಿವ 1 ಸಯ5ೂ ಮನಕಭಿಮಾನಿಯೆ 5sÁವಿಶಯ್ಯ ಹರಿಗೆ ಎಂಬೊ ರೂಪಿಯೇ ||ಸ್ಥೈರ್ಯ ವನದಿ ಹರಿ | ಪ್ರೀಯ ಪಾಲಿಸಿನ್ನುಕೈಯ್ಯ ಪಿಡಿದು ಕಾಯೊ | ಅಯ್ಯ ನಿನಗೆ ಶರಣು 2 ದಿವಿಜ ಪ್ರಿಯಸರ್ವಾರ್ಪಣೆಂಬ ಮನ | ಭಾವವ ಪಾಲಿಸು 3 ಮಾಧವ ಪ್ರಿಯಚಂದ್ರಾರ್ಕಾನಲ ಚಕ್ಷು | ತಂದೆ ಕಾಯೋ ಹರ4 ಪರಿ ಪರಿ ಪಾಲಕಾ ಗುರು |ಗೋವಿಂದ ವಿಠಲನ ಅರ್ಚಕಾ ||ತೀವರದಲಿ ಮನ | ಮಾವಾರಿ ಪದ ಸ್ಮøತಿಭಾವದಲಿಡು ಶಿವ | ಆವ ದನ್ಯವನೊಲ್ಲೆ 5
--------------
ಗುರುಗೋವಿಂದವಿಠಲರು
ಪಶುಪತಿ ಶಂಭೋ |ಅಸುಪತಿಯನೆ ತೋರೋ || ಕರುಣವ ನೀ ಬೀರೋ ಪ ಮನಸೀನ ಒಡೆಯನೆ | ಕನಸು ಮನಸಿನಲಿಅನಘ ಹರಿಯ ಪದ | ನೆನೆವ ಮತಿಯನಿತ್ತುಎಣಿಸು ಭಕ್ತನೆಂದು || ಬೇಡುವೆ ಇನಿತೆಂದು ಅ.ಪ. ಮಾಹಿತಾಂಘ್ರಿಯ | ವಾಹಕನ ಸಮಮೋಹಶಾಸ್ತ್ರ ಪ್ರ | ವಾಹ ರಚಿಸುತ ||ದ್ರೋಹಿಗಳ ಬಲು | ಮೋಹ ಪಡಿಸುತಶ್ರೀ ಹರಿಯ ಸಖ | ಪಾಹಿ ಸುಖಪ್ರದ1 ಕಟಿ ಸೂತ್ರ | ಒಪ್ಪೊತವ ಸುತ ||ಸರ್ಪಾರಿ ಸಮಪದ | ಕಪ್ಪೊಗೊರಳ ಹರತಪ್ಪೊಗಳನು ಎಲ್ಲ | ಒಪ್ಪಿಕೊಳ್ಳಯ್ಯ 2 ಕರ್ಪರ | ಮೈಲಿ ಭಸ್ಮವು |ಶೂಲ ಪಾಣಿಯೆ | ಶೈಲಜಾಪತೆ ||ಕಾಲಕಾಲಕೆ | ಕಾಲನಾಮನಶೀಲ ಸ್ಮøತಿಯನು | ಪಾಲಿಪುದು ಹರ 3 ವಾಸ ಮಶಣವು | ಕೇಶ ವ್ಯೋಮವುಹೇ ಸದಾಶಿವ | ನೀ ಸಲಹೊ ಎನ್ನ ||ಮೀಸಲದ ಮನ | ಕಾಶಿಸುವೆ ಹರಹೇ ಸದಾಗತಿ ಕೂಸು ನೀ ನಲ್ಲೆ 4 ದೇವ ವರ ಶಿವ | ಮಾವ ವೈರಿಯಹಾವ ಭಾವಕೆ | ಓದಿ ಮೋಹಿಸುತ ||ಧಾವಿಸಲು ಹರಿ | ತೀವ್ರ ಕಾಯ್ದನುಗೋವಳನು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪಾಂಡು ರಂಗ ವಿಠಲ | ಪೊರೆಯ ಬೇಕಿವಳ ಪ ಕುಂಡಲಿಯ ಶಯ್ಯ ಬ್ರ | ಹ್ಮಾಂಡದೊಡಿಯಾ ಅ.ಪ. ಹಸುಳೆ ತನ ಸ್ವಾಪದಲಿ | ಎಸೆವ ನಂಜುಡೇಶದರ್ಶನಾಕಾಂಕ್ಷಿಸುತ | ನುಸುಳಿ ಗುಡಿ ಪೊಗಲೂಅಸಮ ಗುರು ಸುಧೀಂದ್ರ | ಶಿಷ್ಯರನು ತಾ ತೋರಿಎಸೆವ ಸದ್ಗತಿಗೆ ಗುರು | ದರ್ಶನವೆ ಪಥವೆಂದೇ 1 ಲೀಲೆಯೊಳ್ ತೈಜಸನು | ಮಾಲೆಧರ ದಂಪತಿಯಶೀಲ ರೂಪವ ತಾಳಿ | ಬಾಲಕಿಯ ಬಯ್ದೂ |ಏಳಲನ ಮಾಡದಲೆ | ಶೀಲ ಗುರು ಬಳಿ ಪೋಗಿಬಾಲಕಿಯು ಪರಮಾನ್ನ | ಮೆಲುವಂತೆ ಮಾಡ್ಡಾ 2 ಗುರು ಹಿರಿಯರಾ ಸೇವೆ | ಹರಿಯಲ್ಲಿ ಸದ್ಭಕುತಿವರಜ್ಞಾನ ಪಾಲಿಸುತ | ಮೆರೆಸೊ ಈ ಶಿಶುವವರ ಪ್ರದಯಕನಾಗಿ | ಸರುವ ಸದ್ಧಭಿಲಾಷೆಗರೆನು ಹರ್ಷವನೀಯೋ | ಮರುತಾಂತರಾತ್ಮಾ 3 ಕಲಿಹೆಚ್ಚದಾ ಯುಗವು | ಸತಿಮಂತ್ರ ತಂತ್ರಗಳುಫಲಿಸಲಾರವು ಹರಿಯೆ | ಜಲಜನಾಭಾಚೆಲುವ ತವನಾಮ ಸ್ಮøತಿ | ಘಳಿಗೆ ಬಿಡದಲೆ ಕೊಟ್ಟುಒಲಿಯೊ ಕಾರುಣ್ಯನಿಧಿ | ಬಾಲ ಗೋಪಾಲ4 ಪಾವನದ ಅಂಕಿತವ | ಓದಿ ಸೂಚಿಸಿದಂತೆತಾವಕಳಿಗಿತ್ತಿಹೆನು | ಶ್ರೀ ವರನೆ ಹರಿಯೇ |ದೇವ ದೇವೇಶಗುರು | ಗೋವಿಂದ ವಿಠ್ಠಲನೆನೀ ವೊಲಿದು ದಾಸತ್ವ | ಭಾವ ಸಿದ್ಧಿಪುದೋ 5
--------------
ಗುರುಗೋವಿಂದವಿಠಲರು
ಪಾರ್ವತೀ - ಶರ್ವನ ಜಾಯೆ - ಪಾರ್ವತೀ ಪ ದಿವಿಜ ಧ್ವಂಸ | ಶರ್ವಾದಿ ದಿವಿಜೇಡ್ಯಸಾರ್ವಭೌಮನ ಸ್ಮøತಿ | ಸಾರ್ವಕಾಲದಲೀಯೆ ಅ.ಪ. ಪತಿ ಮಾರ ಜನನಿ ತಾಯೇ 1 ಸುರಪ ಗಣಪರ ಮಾತೆ ಶರ್ವೇ | ನಿನ್ನವರ್ಣಿಸಿ ಪೊಗಳಲೆನ್ನಳವೇ | ನೀನೆಕರುಣದಿ ಪೇಳಿಸೆ ಬರೆವೇ | ಎನ್ನಉರುತರ ಅಜ್ಞಾನವ ಬಲ್ಲೆ | ಆಹಕರಣಗಳೊಳು ನಿಂತು | ನಿರುತ ಪ್ರೇರಕಳಾಗಿಹರಿಗುಣ ದ್ಯೋತಕ | ಸ್ಮರಣೆ ಸುಖವ ನೀಯೆ 2 ಮೃಡನಂತರಂಗಳೆ ತಾಯೇ | ಎನ್ನಕಡು ಕರುಣದಿಂದಲಿ ಕಾಯೇ | ಇನ್ನುಧೃಡ ಹರಿ ಭಕುತಿಯ ನೀಯೆ | ಅನ್ಯಬೇಡೆನು ನಾ ಪಾರ್ವತೀಯೇ | ಆಹಮೃಡವಂದ್ಯ ಗುರು ಗೋ | ವಿಂದ ವಿಠ್ಠಲನನಡು ಹೃದಯದಿ ನೋಳ್ಪ | ಧೃಡಮತಿಯನು ಕೊಡೆ 3
--------------
ಗುರುಗೋವಿಂದವಿಠಲರು
ಪಾಲಿಸಗಸ್ತ್ಯ ಪುರವಾಸಾ ಸಂತತ ಲೇಸಾ ಲಾಲಿಸೋ ಭಾರತೀಶಾ ಪ ಪದ್ಯ ನಿತ್ಯ ನಿರ್ಧೂತಮಾಯಾ ಕವಿಜನ ವರಗೇಯಾ, ಕಾಮಿತಾರ್ಥಾಭಿಧೀಯಾ ದಿವಿಭುವಿ ನಿಜಗೇಯಾ, ನೀತ ಸದ್ಭಕ್ತ ಪ್ರೀಯಾ ತ್ರಿವಿಧಜನ್ವ ಸುಕಾಯಾ ನಿಲಯ ವಾಙ್ಮನೋ ಪ್ರೀಯಾ ನಿಗಮ ವಂದಿತ ಮುಖ್ಯಗುಣಧಾಮಾ ಸ್ವಾಶ್ರಿತಪ್ರೇಮಾತೋಷಿತ ಶ್ರೀರಾಮಾ ಜಗಕೆ ಜೀವನÀನಾದ ಹನುಮಾ ಕಾಮದ ಭೀಮಾ ಮೋಕ್ಷದ ಮಧ್ವನಾಮಾ ಮುಗಿವೆ ಕರದ್ವಯ ನಿಮಗಯ್ಯಾ ನಮೋ ನತಜೀಯಾ ಸಂತತ ಪಿಡಿ ಕೈಯಾ 1 ಪದ್ಯ ಜಲರುಹಭವಪೋತಾ ಭೂತನಾಥೈಕತಾತಾ ಸುಲಲಿತಜನದಾತಾ ಶುದ್ಧಸತ್ತಾ ್ವಧಿನಾಥಾ ಕಲಿಮಲ ಪ್ರವೀಫಾತಾ ವಿಶ್ವಕೋಶವ್ಯತೀತಾ ವಿಲುಲಿತ ದಿತಿಜಾತಾ ಧೂತ ಸರ್ವತ್ರಾಭೀತಾ ಪದ ಏಕವಿಂಶತಿ ಸಹಸ್ರ ಷಟ್‍ಶತಾ ಜಪಮಾಡುತಾ ತ್ರಿವಿಧರೊಳಿರುತ ಎಕೋ ನಾರಾಯಣನುತ್ತಮಾ ಸರ್ವ ಸುರೋತ್ತಮ ಜೀವಗಣವೆಂಬೋದು ಅಥವಾ ಎಕೋ ಭಾವಭಕ್ತಿವಿಜ್ಞಾನಾ ಭವದೊಳು ಜ್ಞಾನಾ ಕಲ್ಪಿಸಿ ಅಜ್ಞಾನಾ ಏಕವಾಗಿತ್ತು ಸತ್ವರಾ ಭವದಿಂದ ಮುಕ್ತರಾ ಮಾಡುವಿ ಸತ್ವರಾ 2 ಪದ್ಯ ಶ್ರುತಿತತಿಸ್ಮøತಿವೇದ್ಯಾ ಸೂತ್ರನಾಮಾಮರಾದ್ಯಾ ವಿತತವಿಮಲಗಾತ್ರಾ, ವೀಶಶೇಷತ್ರಿನೇತ್ರಾ ಶತಮಖ ಮುಖಧ್ಯಾತಾ, ಧೀತವೇದಾಂತಜಾತಾ ಪದ ವಿಶ್ವೇಶ ವಿಶ್ವಾಂತರಾತುಮಾ ಚಿÉಚ್ಛುಕಾತುಮಾ ಸರ್ವಜೀವರುತ್ತಮಾ ವಿಶ್ವಾಸದಿಂದಲಿ ತವಪಾದಾ ಮೋದ ದಾಯಕ ಮುಕ್ತಿಫಲದಾ ವಿಶ್ವನಾಟಕ ವಿಷ್ಣುಪದ ಭಕ್ತಾ ಸಜ್ಜನಸಕ್ತ ಪಾಲಿಸು ನಿನ ಭಕ್ತಾ ವಿಶ್ವೇಶÀ ಗುರುಜಗನ್ನಾಥ ಮೋದ 3
--------------
ಗುರುಜಗನ್ನಾಥದಾಸರು
ಪಾಲಿಸಯ್ಯ ವರವ ಹರಿಹರಿ ಪಾಲಿಸಯ್ಯ ವರವ ಪ ಪಾಲಿಸಯ್ಯ ವರ ಬಾಲಗೆ ಬೇಗನೆ ಕಾಲಕಾಲದಿ ನಿನ್ನ ಲೀಲಾನಂದವ ಅ.ಪ ಸತತದಿ ತವಭಜನೆ ಅಗಲಿಸ ದತಿ ಗುಪ್ತ ತತ್ವವನು ಯತಿತತಿ ಪೊಗಳುವ ಸ್ಮøತಿಶಾಸ್ತ್ರರ್ಥವನಿತ್ತು ಸುತಗೆ ಮಹಗತಿಯ ಪಥಕೆ ಹಚ್ಚು 1 ಮತಿ ಮಾನ್ಯರು ಸದಾ ಪೊಗಳುವ- ಪಾದ ಸತತ ನುತಿಪ ಅತಿಹಿತ ಮತಿಯಿತ್ತು ಪತಿತ ಪಾವನ ಮಾಡು ರತಿಪತಿಪಿತನೆ 2 ಜಡ ಬಡತನ ಕಡಿದು ಗಡನೆ ನ್ನೊಡಲಾಶೆಯ ತೊಡೆದು ನುಡಿನುಡಿಗಡಿಗಡಿಗೆಡಬಡದಲೆ ನಿ ನ್ನಡಿಧ್ಯಾನ ಕೊಡು ಎನ್ನೊಡೆಯ ಶ್ರೀರಾಮ 3
--------------
ರಾಮದಾಸರು
ಪಾಲಿಸೊ ಮನ್ಮಾನಸಾ | ಮಂದಿರಶ್ರೀಲೋಲ ಭಕ್ತ ಪೋಷ ಪ ಭಂಜನ ರಾಮ | ಗಾಳಿ ಸುತಗೆ ಪ್ರೇಮ ಅ.ಪ. ದೈತ್ಯ ಜನರು ಬಹಳಾ | ಎನ್ನ ತಮ್ಮಭೃತ್ಯನ ಮಾಡಿ ಜಗಳಾ ||ನಿತ್ಯವಾಡುತಲೆನ್ನ | ಕೃತ್ಯಾಗಳಿಗೆ ದೋಷಎತ್ತಿಸುತಿಹರಯ್ಯ ದೈತ್ಯ ನಿಷೂದನ 1 ಸಂಚೀತಾಗಾಮಿ ನಾಶಾ | ಗೈ ಭವವಂಚೀತನಿಹೆ ಶ್ರೀಶಾ ||ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಕೊಂಚ ಮತಿಯ ಕಳೆ | ವಾಂಛಿತಾರ್ಥದ ಹರಿ 2 ಜನ್ಮಾಜನ್ಮವು ಬರಲೀ | ತವಸ್ಮøತಿಕರ್ಮಾಕರ್ಮದೊಳಿರಲೀ ||ಭರ್ಮ ಗರ್ಭನಯ್ಯ | ಸುಮ್ಮನಸರ ಪ್ರೀಯನಿರ್ಮಲ ಭಕ್ತಿಯಿತ್ತು | ಹಮ್ರ್ಯದೊಳಗೆ ತೋರೊ 3 ಸುರರು ಭೋಕ್ತ ಭಂಜನ ಭವ 4 ಭವ ಭವ | ಕಾರುಣ್ಯಾತ್ಮಕ ದೇವ 5
--------------
ಗುರುಗೋವಿಂದವಿಠಲರು
ಪಾಹಿ ಪಾಹಿ ಮೋಹನ್ನರೆ | ಲೋಹಲೊಷ್ಟ ಸಮೇಕ್ಷಣ ಪ ಪಾದ ಸೇವೆ | ವಿಹಿತದಿ ನೀಡೆನಗೆ ಅ.ಪ. ಪಾದ | ಬಂಡುಣಿಯಂದದಲೀಮಾಂಡವ್ಯರಾಗಿರುವಾಗ | ಚಂಡತಪ ಮಾಡಿದಿರಿ 1 ಗಾಣಿಗನುದರದೀ | ಜನಿಸುತ ಪೂರ್ವದೀಧನ ಬಹುಗಳಿಸುತ | ಜನುಮವ ನೂಕಿದಿರಿ2 ಗಳಿಸಿದ ಧನವನೂ | ಲಲನೆಗೂ ಪೇಳದೇಮಲಿನ ದೇಹವನೀಗಿ | ಕಳೆದಿರಿ ಪ್ರಾರಬ್ಧವ 3 ಸತಿಸುತ ಬಂಧು ಜನ | ಗತಿತಪ್ಪಿ ಭ್ರಾಂತರಾಗೀಅತಿ ಅತಿ ವ್ಯಥೆಯಿಂದ | ಪಾಥೇಯವ ಕಾಣಲಿಲ್ಲ 4 ಚಿನಿವಾರ ನೂದರದೀ | ಪುನರಪಿ ಜನಿಸಲೂಜನನಿಯು ಅನುವನು | ಕಾಣದಲೆ ಚಿಂತಿಸಿದಳ್ 5 ಆರ್ತಳಾಗುತ ಚಕ್ರ | ತೀರ್ಥವ ಪೊಗಲೂ ಬರೇಪಾರ್ಥ ಸಖನ ಭಕ್ತ | ಆರ್ತೆಯನು ತಡೆದರು 6 ಆಕೆಯ ಶಿಶು ಸಹಾ | ಸಾಕುವೆನೆನುತಲೀಶ್ರೀಕರ ವಾಕ್ಯವಿತ್ತು | ಭೀಕರವ ತಪ್ಪಿಸಿದ 7 ವಿಜಯರಾಯರು ಬಂದೂ | ನಿಜಸತಿ ಮಡುವಿನೊಳ್‍ತೇಜಸ್ಸಿನಿಂ ಮೆರೆವಂಥ | ದ್ವಿಜಸುತನರ್ಪಿಸಿದರ್ 8 ಮೋಹನ ಬಾಲನಿಗೆ | ಮೋಹನ ವಿಠಲನಾಮೋಹದಂಕಿತವಿತ್ತು | ಮಾಹಿತಾಂಘ್ರಿ ನೆನೆಸಿದರ್ 9 ಮುಂಜಿ ಮದುವೆ ಮಾಡೀ | ಹಂಜರದಿ ನಿಲಿಸುತಾಕಂಜಾಕ್ಷನಂಘ್ರಿಯನು | ಅಂಜಾದಲೆ ಭಜಿಸೆಂದರ್10 ಚಿನಿವಾರತನದಿಂದ | ಧನವನು ಗಳಿಸಿದಾಜನುಮ ಪೂರ್ವದಸ್ಮøತಿ | ಮನದೊಳು ನೆನೆದೆಯೋ11 ಗಾನವ ಮಾಡುತಲೀ | ಗಾಣಿಗತನಯರನೂಕಾಣುತಲೀ ಪೇಳಿದೆಯೊ | ಧನವಿಟ್ಟ ಸ್ಥಳವನು 12 ಗುರುಗಳ ಕರುಣಿಯಿಂ | ಹರಿದೆಯೊ ಅಪಮೃತೀನೆರೆದಿದ್ದ ಜನರುಗಳ್ | ಅರೀಯರು ಸೋಜಿಗವ 13 ಮೋದ ತೀರ್ಥರ ಮತ | ಸಾಧಿಸಿದೆ ಜಗದೊಳು14 ಪವನಾಂತರಾತ್ಮ ಗುರು | ಗೊವಿಂದ ವಿಠಲನಾಪಾವನಾ ಸ್ಮರಣೆಯಿಂ | ಭವವನು ಕಳೆದೆಯೋ 15
--------------
ಗುರುಗೋವಿಂದವಿಠಲರು
ಪ್ರಾಣದೇವನೆ ನಿನ್ನ ಧ್ಯಾನಿಸದೆ ಮನದಿ ಬಲು ಹೀನನಾದೆನೊ ಲೋಕದಿ ಪ ಪಾದ ಧ್ಯಾನಮಾಡುವ ಮುಖ್ಯ- ಪ್ರಾಣನೀನೆಂದು ಮನಸಾರ ಪೂಜಿಸದೆ ಶ್ರೀ ಅ.ಪ ಶರಧಿ ಬಂಧಿಸಿ ದಶಶಿರನಳಿದ ಪಾದ ಸ್ಮರಣೆ ಮಾಡುತಲಿ ನಿತ್ಯ ಧರಣಿಸುತೆಯಳ ತಂದು ಪರಮ ಸಂಭ್ರಮದಿಂದ ಮೆರೆವದೇವನ ಸ್ಮರಿಸುತ ನರರೂಪದಿಂದ ದಶರಥನ ಪುರದಲಿ ನಿಂತ ಪರಮಾತ್ಮನಿಗೆ ನಮಿಸುತ ಸುರರು ಸ್ತುತಿಸಲು ಪರಮಹರುಷದಿಂದಾಲಿಸುತ ಹರಿಯ ಮೆಚ್ಚಿಪ ನಮ್ಮ ಗುರುಪವಮಾನ ಶ್ರೀ 1 ಅಂದು ಆ ಬಕನ ಭಯದಿಂದ ಸಜ್ಜನರೆಲ್ಲ ಕುಂದಿರಲು ಭಯವ ಹರಿಸಿ ಅಂಧಕನ ಸುತನ ಬಂಧಿಸುತ ರಣದೊಳಗೆ ಯದು- ನಂದನಗೆ ಪ್ರೀತಿ ಪಡಿಸಿ ಕೊಂದು ಬಿಸುಡಲು ಜರಾಸಂಧನನು ವಸುದೇವ ಕಂದ ನೋಡುತಲಿ ಸುಖಿಸಿ ಇಂದಿರಾರಮಣ ಮುಕುಂದನನು ಪೂಜಿಸುವ ಸುಂದರ ಭೀಮ ನಿಸ್ಸೀಮನಹುದೆಂದು ಶ್ರೀ2 ಪತಿತ ಸಂಕರದಿಂದ ಮತವೆಲ್ಲ ಕೆಡಲು ಶ್ರೀ- ಪತಿಯ ಧ್ಯಾನವು ಮಾಡುತ ಯತಿ ಶಿರೋಮಣಿಯಾಗಿ ಶ್ರುತಿ ಸ್ಮøತಿಗಳಣಿ ಮಾಡಿ ಹಿತವ ಜನರಿಗೆ ತೋರುತ ಎಸೆವ ಘನಗಿರಿಯಲ್ಲಿ ಅಸದಳ ಹನುಮರೆಂ- ದೆಸೆದು ಮಿಗೆ ಶೋಭಿಸುತಲಿ ವಾರಿ ದಡದಲಿ ಕಮಲನಾಭ ವಿಠ್ಠಲನ ಸ್ಮರಿಸಿ ಧೀರ ಹನುಮಂತನಪಾರ ಮಹಿಮನೆಂದು ವನಗಿರಿಯ ಗುಹೆಗಳಲಿ ಹನುಮಂತನೆಂದೆನುತ ಎಣಿಸಲಳವಲ್ಲವೋ ಘನಪರಾಕ್ರಮಿ ಮುಖ್ಯ 3
--------------
ನಿಡಗುರುಕಿ ಜೀವೂಬಾಯಿ
ಪ್ರಾಣನಾಥನೆ ನಿನ್ನ ತುತಿಯ ಮಾಡಲು ಇನ್ನು ತ್ರಾಣ ಎನಗುಂಟೆ ಗುರುವೆ ಪ ದಾನಿ ಸಿರಪತಿಯ ಭಕುತರ ಶಿಖಾಮಣಿಯೆ ಗುಣಶ್ರೇಣಿ ಎಣೆಗಾಣೆ ಶ್ರುತಿಧಿ ಸ್ಮøತಿಧಿ ಅ.ಪ ನಿಖಿಳ ಜೀವರಿಗೆ ಮಾನಿ ಪುರುಷ ನೀ ಸಕಲ ಮಹದಾಭಿಮಾನೀ ಸುಖರೂಪ ಪುರುಷನಿಗೆ ವಾಯು ಅಗ್ನಿ ಆದಿತ್ಯ ತ್ವಕುರೂಪ ಪುತ್ರನಾದೀ ಮೋದಿ 1 ಕಮಠರೂಪದಿ ಲೋಕಕಾಧಾರ ಸಮನೋ ಆಖಣಾಶ್ಮನೆ ಸುಮನಸರನ್ನ ಪೊರೆವೆ ಬೆರೆವೆ 2 ವಾಸುದೇವವಿಠಲನ್ನ ಸಂತತವು ಶ್ವಾಸಮಂತ್ರದಿ ಸೇವನ ಲೇಸಾಗಿ ಮಾಡುವ ಜೀವರೊಳು ನೀನೇವೆ ದಾಸನ್ನ ಪೊರೆಯೊ ಧೀರ ವೀರ 3
--------------
ವ್ಯಾಸತತ್ವಜ್ಞದಾಸರು
ಪ್ರಾಣಮತ ನರಸಿಂಹ | ವಿಠಲ ಪೊರೆ ಇವಳಾ ಪ ಜ್ಞಾನಗಮ್ಯನೆ ದೇವ | ಅನ್ನಂತ ಮಹಿಮಾ ಅ.ಪ. ಹಿಂದಿನದ ಸತ್ಸುಕೃತ | ದಿಂದ ವೈಷ್ಣವಪತಿಯಪೊಂದಿಹಳೊ ದೇವೇಶ | ಮಂದರೋದ್ಧಾರಿ |ಚೆಂದುಳ್ಳ ಮಧ್ವಮತ | ಸಂಧಾನ ತಿಳಿಯಲ್ಕೆ |ಇಂದೀವರಾಕ್ಷ ಹರಿ | ಚೋದಿಸೋ ಇವಳಾ 1 ಬೋಧ ಬೋಧ ದೊರಕಿಸುದೇವಆದಿ ಮೂರುತಿ ಹರಿಯೆ | ಬಾದರಾಯಣನೆ2 ಪತಿಸುತರು ಹತರಲ್ಲಿ | ವ್ಯಾಪ್ತನಾಗಿಹ ನಿನ್ನಸ್ಥಿತಿಗತಿಯನೇ ತಿಳಿದು | ಚಿಂತಿಸುವ ಪರಿಯಾಹಿತದಿಂದ ತಿಳಿಸುತ್ತ | ಸಾಧನ ಸುಸತ್ಪಥದಿರತಿಯನೆ ಕೊಟ್ಟಿವಳ | ಉದ್ದರಿಸೋ ದೇವಾ 3 ತೊಡರು ಬರಲಿ | ಅಡವಿಯಲಿ ತಾನಿರಲಿಮೃಡನುತನೆ ನಿನ್ನ ಸ್ಮøತಿ | ಬಿಡದಲೇ ಕೊಟ್ಟುಕಡು ಗುಂಭ ಸಂಸ್ಕøತಿಯ | ಮಡುವಿನಿಂದಡಬಾಕಿಬಿಡದಿವಳ ಪೊರೆಯುವುದು | ಕಡುದಯಾ ಪೂರ್ಣ4 ಗುರುಭಕ್ತಿ ಹರಿಭಕ್ತಿ | ವೈರಾಗ್ಯ ಭಾಗ್ಯದಲಿಪರಮರತಿಯನೆ ಕೊಟ್ಟು | ಹರಿ ಸ್ಮರಣೆಯೆಂಬಾವರವಜ್ರ ಕವಚವನೆ | ತೊಡಿಸೆಂದು ಪ್ರಾರ್ಥಿಸುವೆಮರುತಾಂತರಾತ್ಮಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪ್ರಾಣಸನ್ನುತ ನರಸಿಂಹ | ವಿಠಲ ಪೊರೆ ಇವಳಾ ಪ ಕಾಣೆನಾನನ್ಯರನು | ಕಾರುಣ್ಯ ಮೂರ್ತೇ ಅ.ಪ. ವಾಸುದೇವ ಹರೀ |ಕೇಶವನೆ ಪೂಜಿಸೀ | ವೇಷದಲಿ ಸೂಚ್ಯ ಪರಿಆಶಿಷವನಿತ್ತು ಉಪ | ದೇಶ ಮಾಡಿಹೆನೋ 1 ಕಾಮಾರಿ ಸಖಕೃಷ್ಣ | ಕಾಮಿತವನೇ ಇತ್ತುಭಾಮಿನಿಯ ಸಲಹೆಂದು | ನೇಮದಲಿ ಬೇಡ್ವೇಶ್ರೀ ಮನೋಹರ ಹರಿಯೆ | ದುರಿತಾಳಿ ಪರಿಹರಿಸಿನಾಮಸ್ಮøತಿ ಸುಖ ಕೊಟ್ಟು | ಭವವನುತ್ತರಿಸೋ 2 ಪಾದ ಮಾನಿಯ ಪ್ರೀಯಪಾವನ್ನ ತವನಾಮ | ನಾಲಿಗ್ಯೆ ಒದಗೀಜೀವನದಿ ಸಂತೋಷ | ಒದಗಲೀ ಎನುತ ಹರಿದೇವ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು