ಒಟ್ಟು 93 ಕಡೆಗಳಲ್ಲಿ , 15 ದಾಸರು , 89 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಷ್ಣುವೆಂಬುದು ಕೊಂಡಾಡಿ ಧ್ರುವ ಜಿಹ್ವೆಗೊಂಡಿತು ಸುಸ್ವಾದ ದಿವ್ಯನಾಮ ಸುರಸ್ವಾದ ಭವನಾಶಗೈಸಿತು ಗುರುಬೋಧ ಸವಿದೋರಿತು ಗುರುಪ್ರಸಾದ 1 ಸ್ವಾನುಭವದ ಸವಿಸುಖ ಏನೆಂದ್ಹೇಳಲಿ ಕೌತುಕ ಮನಕಾಯಿತು ಹರುಷ ಅನೇಕ ಧನ್ಯ ಧನ್ಯಗೈಯಿತು ಜಿಹ್ವೆಮುಖ 2 ಸುಸ್ಮರಣಿಯ ಮಾಡಿ ನಿತ್ಯ ಮಾಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶಿವರಗಳೆ ಉದಯದಲೆದ್ದು ಸದಾಶಿವ ಎನ್ನಿ |ಅದರಿಂದಲಿ ಸದ್ಗತಿಗಿರುವದು ಒಂದೇ ಹಾದಿ |ನಾನಾ ಗ್ರಂಥಗಳ್ಯಾತಕ ಓದೀ |ಓದಿದರೋದಲಿ ಬೇಕಧ್ಯಾತ್ಮಾ ||ಸಾಧಿಸಿ ಬರುವನು ಶಿವ ಸರ್ವೋತ್ತಮಾಸರ್ವೋತ್ತಮ ತಿಳಿದರೆ ಸಾಕು |ಅನೇಕ ಶಾಸ್ತ್ರಗಳೇತಕೆ ಬೇಕು |ಬೇಕೆಂಬೋದೇ ಬಿಡುವದೆ ಪರಮಾರ್ಥಲೋಕದ ಪರಿಯಲ್ಲಿರುವದೆ ಸ್ವಾರ್ಥ |ಸ್ವಾರ್ಥಕೆ ಪರಮಾರ್ಥಕೆ ಬಹು ದೂರಾ |ಎರಡೂ ಸಮನಿಸಿದವನೇ ಧೀರಾ ||ಧೀರ ಉದಾರಗೆ ಆರ ಹಂಗಿಲ್ಲಾ |ಸೂರೆಗೊಂಡನು ಮೂಜಗವೆಲ್ಲಾ |ಎಲ್ಲರಿಗೆ ತಾ ಬಲು ಕಿರಿದಾಗಿ |ಬಲ್ಲತನದ ಬಡಿವಾರವ3ೀಗಿನೀಗಿ ನಿಶ್ಚಿಂತ್ಯಾದರ ತ್ಯಾಗಿ ||ತ್ಯಾಗವು ಬಲಿತರೆ ಅವನೇ ಯೋಗಿಯೋಗಿಗೆ ಮೂಲಾ ಐಕ್ಯದ ಮಾಟಾ |ಬೇಗನೆ ತಿಳಿಯದು ಜೀವ ಶಿವ ಕೂಟಾ |ಕೂಟವ ತಿಳಿಯದೆ ಯಾತರ ಜ್ಞಾನಿ |ಚಾಟಕನಾದರೆ ಜ್ಞಾನಕೆ ಹಾನಿಹಾನಿಗೆ ಹಾನಿ ತಂದವ ಜಾಣಾಸ್ವಾನುಭವದಲಿದ್ದವ ಪ್ರತಿಗಾಣಾ |ಪ್ರತಿಗಾಣನು ಶಿವರತಿಯುಳ್ಳವನು |ಗತಿ ಬಯಸುವನು ಗುರು ಚರಣವನು |ಚರಣಗಳಲ್ಲಿ ವರಗಳು ಉಂಟು |ಗುರುಹಿರಿಯರಿಗೆ ಶರಣು ಹೋಗಿರಿ |ಪರಿಣಾಮದ ಘೋರಿಗೆ ಪರಿಪರಿ ಸ್ತುತಿಗಳು |ಪರಿ ಪರಿಸ್ತುತಿಗೆ ಪರಿಪರಿ ಪೂಜೀ |ಪರಿಪರಿ ಪೂಜಿಗೆ ಪರಿಪರಿ ವಾಜೀ ||ವಾಜಿ ಒಂದಾದರೆ ಸಹಜವೆ ತಾನು |ಮೂಜಗದೊಳಗಿದು ಸೋಜಿಗವೇನು |ಸೋಜಿಗವೆಂಬದು ಶ್ರಮದಲಿ ಮಾಯಾ ಕಂಟಕ ಕಾಕು ಭಂಗ ಬ್ರಹ್ಮಜ್ಞಾನ ಯೋಗಿ ಬ್ರಹ್ಮಜ್ಞಾನ ಬ್ರಹ್ಮಜ್ಞಾನ |ಸಿದ್ಧಗುರು ತ್ರಿಪುರಾಂತಕ ಧ್ಯಾನ |ಪ್ರಕಾಶ ಮುಖದಲಿ ಹೇಳಿದ ರಗಳಿ |ಶಿವ ಸಾಯೋಜ್ಯವೆ ಬೈಲನೆ ಹೊಗಳಿ ||
--------------
ನರಸಿಂಹ
ಶ್ರೀ ಗೌರೀವರೇಂದ್ರನೇ ನಮೋ ನಮೋ ನಮೋ ಯೋಗಮಯನೆ ಭೋಗದಯನೆ ನಾಗಾಭರಣನೆ ಭೋಗೀ ಭೂಷಣ ವ್ಯಾಘ್ರವಸನನೆ ಪ ವಾಸುದೇವ ಪ್ರಿಯನೇ ಸದಾ ಶಿವಾ ಶಿವಾ ಶಶಾಂಕಧರನೇ ಕ್ಲೇಷಹಾರನೇ ದೋಷನಾಶನೇ ಭಾಸುರ ಪ್ರಕಾಶಾ ತೋಷದಾತನೇ 1 ಪಂಚ ಪ್ರಾಣಧಾರನೇ ಪರಾತ್ಪರಾವರಾ ಸಂಚಿತ ಅಘದೋಷಹರಣ ಸರ್ವಸುಖಕರಾ ಪಂಚವದನಾ ಪಂಚಶರಹರಾ 2 ಜ್ಞಾನಮಯ ಸುಚೇತನಾ ಕೃತಾಘನಾವನಾ ಸ್ವಾನುಭವ ಸ್ವಶಾಂತಿದಾತ ಧ್ಯಾನಿಪಾಜನಾ ದೀನೋದ್ಧಾರಕಾ ವಿಜ್ಞಾನಮಯನೇ 3
--------------
ಶಾಂತಿಬಾಯಿ
ಸಾವಧಾನವಾಗಿ ನೋಡೋ ಸ್ವಾಮಿ ಸದ್ಗುರು ಶ್ರೀಪಾದ ಬೋಧ ಧ್ರುವ ತಿರುಗಿ ನೋಡೋ ನಿನ್ನ ನೀನು ಅರಿತು ಸ್ವಾನುಭವದಿಂದ ಕರಗಿ ಮನ ನೋಡಿ ನಿಜದೋರುತದೆ ಬ್ರಹ್ಮಾನಂದ ಸೆರಗವಿಡಿದು ಸೇರು ಬ್ಯಾಗೆ ಗುರುಕರುಣ ಕೃಪೆಯಿಂದ ಪರಮ ಸುಪಥವಿದೆ ವರಮುನಿಗಳಾನಂದ 1 ಹಚ್ಚಿ ನಿಜಧ್ಯಾಸವಂದು ಕಚ್ಚಿಕೊಂಡಿರೋ ಸುಹಾಸ ಮುಚ್ಚಿಕೊಂಡು ಮುಕ್ತಿ ಮಾರ್ಗ ನೆಚ್ಚಿರೋ ನಿಜಪ್ರಕಾಶ ಹುಚ್ಚುಗೊಂಡು ಹರಿಯ ರೂಪ ಅಚ್ಚರಿಸೋ ನಿರಾಶ ಎಚ್ಚತ್ತು ನಿನ್ನೊಳಗೆ ಬೆರೆಯೋ ಘನಸಮರಸ 2 ಸಾವಧಾನವೆಂದು ಶ್ರುತಿ ಸಾರುತದೆ ತಾ ಪೂರ್ಣ ಸುವಿದ್ಯ ಸುಖವಿದು ಸಾಧಿಸು ಅನುದಿನ ಪಾವನ್ನಗೈಸುದಿದೆ ಮಹಿಪತಿ ಜೀವಪ್ರಾಣ ಭಾವ ಬಲಿದು ನೋಡಲಿಕೆ ದೋರುತದೊ ನಿಧಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿಕ್ಕಲು ನೋಡೇ ಸತ್ಸಂಗ | ಯನ | ಗಕ್ಕಿತು ಸ್ವಾನುಭವದಂಗ | ಮಿಕ್ಕಿನವಿಷಯದಿ ಹಂಗಿಲ್ಲಾ | ಒಳ | ವಕ್ಕಲವಾದನು ಶ್ರೀನಲ್ಲಾ ಪ ಜ್ಞಾನಾಂಜನವನು ತಂದಿಡಲಿ | ಅ | ಪರಿ ಬಿಡಲಿ | ಪರಿ ಭಾಸುವ ಕೋಶದಲೀ | ತಾನೇ ದೋರುವ ಜಗದೀಶಾ 1 ಭವ ಬಂಧವ ತಿಳಿಯಲು ನೆಲೆಯಾ | ತಾ | ಅವನಿಲಿ ಶುಕನಳಿ ಕನ್ಯಾಯಾ | ವಿವರಿಸಿಯನ್ನೊಳಗೆಚ್ಚರಿಸಿತೆ | ನಾ | ತವಕದಿ ಚಿದ್ಘನದೊಳು ಬೆರೆತೇ 2 ಏನೆಂದ್ಹೇಳಲಿ ಅಮ್ಮಮ್ಮಾ | ಯನ್ನಾನಂದದ ಸುಖ | ಸಂಭ್ರಮಾ | ಶ್ರೀನಿಧಿಗುರು ಮಹಿಪತಿ ಬೋಧಾ | ಸಲೆ | ತಾ ನಳಿಯಿತು ಕಲ್ಪನೆ ಬಾಧಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಮ್ಮನಹುದು ನೋಡಿ ಸ್ವಾತ್ಮ ಸುಖದನುಭವ ಹಮ್ಮಳಿದು ತನ್ನೊಳು ತಾ ತಿಳಿಯದನಕ ಧ್ರುವ ಏನು ಕೇಳಿದರೇನು ಏನು ಹೇಳಿದರೇನು ಖೂನದೋರದು ತಾನು ಸ್ವಾನುಭವದ ನಾನೆಂಬುದೆನಲಿಕ್ಕೆ ಏನು ಮಾಡಿದರೇನು ಜ್ಞಾನ ಗಮ್ಯವಸ್ತು ತಾನೊಲಿಯದನಕ 1 ಕನಸು ಮನಸಿನ ಕಲಿಯು ಕಲಿತು ಕೆಟ್ಟಿರಲಿಕ್ಕೆ ಅನುಮಾನಗಳಿಯದಪಭ್ರಂಶಗಳಿಗೆ ಅನುದಿನದಲಾಶ್ರಯಿಸಿ ಘನಗುರು ಶ್ರೀಪಾದವನು ನೆನೆನೆನೆದು ಸುಖವು ನೆಲೆಗೊಳ್ಳದನಕ 2 ಮಹಾ ಮಹಿಮೆಯುಳ್ಳ ಗುರುದಯ ಪಡಕೊಂಡು ಮನೋಜಯಸುದಲ್ಲದೆ ಘನಮಯ ಹೊಳೆಯದು ಮಹಿಪತಿಯ ಸ್ವಾಮಿ ಸದ್ಗುರು ಭಾನುಕೋಟಿ ತೇಜ ಬಾಹ್ಯಾಂತ್ರ ಪರಿಪೂರ್ಣ ತಾನಾಗದನಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಲಭ ಸೇವೆ ನೋಡಿ ಶ್ರೀ ಹರಿಯ ಖುಲ್ಲಮನುಜ ತಾ ನಿಜನೆಲಿನರಿಯ ಧ್ರುವ ಗುಹ್ಯ ಸೇರಲಿಲ್ಲ ಗುಹ್ಯ ಗುಪ್ತವ 1 ನೀರಮುಣಗಲಿಕ್ಕಿಲ ನಾರಿಯ ಬಿಡಲಿಲ್ಲ ದಾರಿ ತಿಳಿದದ ಬಲ್ಲ ಹರಿಭಕ್ತಿಯ 2 ಶೀಲ ಕೈಗೊಳ್ಳಾಲಕಿಲ್ಲ ಹಲವು ವ್ರತ ಹಿಡಿಯಲಿಲ್ಲ ಮೂಲ ತಿಳಿದವ ಬಲ್ಲ ನೆಲೆನಿಭವ 3 ಮನವುನ್ಮನವಮಾಡಿ ಘನಸುಖದೊಳು ಕೂಡಿ ಜ್ಞಾನವಂದಭ್ಯಾಸಮಾಡಿ ಅನುದಿನದಲಿ 4 ಏನೆಂದರಿಯದ ಮಹಿಪತಿಗೆ ತಾನೆ ತಾನೊಂದು ಜ್ಞಾನ ಭೋಧಿಸಿದ ಗುರು ಸ್ವಾನುಭವದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಹಿತ ಸುಪಥ ಸಾಧನ ಪಡೆದು ಸ್ವಸುಖಗೂಡಿರೊ ವಿಹಿತ ಮರೆದು ವಿಭ್ರಮಾಚರಿಸಬ್ಯಾಡಿರೋ ಧ್ರುವ ದಾರು ತಿಳಿದು ನೋಡಿರೊ ಜ್ಞಾನ ಹೀನರಾಗಿ ಗರ್ವ ಹಿಡಿಯಬ್ಯಾಡಿರೊ ಸ್ವಾನುಭವಾಮೃತವನ್ನುಂಡು ಸವಿ ಸೂರ್ಯಾಡಿರೊ ನಾನು ನೀನು ಎಂಬ ಬಿನಗುಭ್ರಮ ಈಡ್ಯಾಡಿರೊ 1 ಮನದ ಕೊನಿಯಲಿದ್ದ ಘನದಾಶ್ರಯವು ಮಾಡಿರೊ ತನುವು ಲಂಪಟ್ಹಿಡಿದು ತನ್ನ ಮರಿಯಬ್ಯಾಡಿರೊ ಜನುಮ ಸಫಲವಾಗುವ ಸುಜಾಗ್ರತಿಯ ಪಡೆಯಿರೊ ನೆನವು ನೆಲೆಯಗೊಂಡು ನಿಜದಾಶ್ರಯದಲಿ ನಡೆಯಿರೊ2 ಮರ್ತು ಮೈಯ ವ್ಯರ್ಥ ದಿನವಗಳಿಯಬ್ಯಾಡಿರೊ ನಿರ್ತದಿಂದ ಅರ್ತ ಭಾವದರ್ಥಿ ನೋಡಿರೊ ಕರ್ತು ಭಾನುಕೋಟಿತೇಜನ ಗುರ್ತು ಮಾಡಿರೊ ಅರ್ತು ಮಹಿಪತಿ ಸ್ವಾಮಿಪಾದ ಬೆರ್ತುಕೂಡಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನಂದದ ಘನಸುಖ ಏನೆಂದ್ಹೇಳಲಿ ಕೌತುಕ ಧ್ರುವ ಬಲಗೊಂಡದೆ ಬ್ರಹ್ಮಭಾವ ನೆಲಗೊಂಡದೆ ಸರ್ವದ ಬಲುದೋರುತದೆ ಸುಸ್ವಾದ ಸುಲಭ ಸದ್ಗುರು ಪ್ರಸಾದ 1 ತಾನಾಗ್ಯದೆ ತಾರ್ಕಣ್ಯಸ್ವಾನುಭವದ ಸುಪುಣ್ಯ ಮುನಿಜನರೆ ಧನ್ಯಧನ್ಯ ಅಣುರೇಣುಕ ತಾ ಮಾನ್ಯ 2 ಮನೋನ್ಮನದಾಶ್ರಯ ಭಾನುಕೋಟಿ ಉದಯ ದೀನ ಮಹಿಪತಿಗಿದೆ ಸಾಹ್ಯ ಅನುದಿನಿದೇ ಉಚ್ಛ್ರಾಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನುಭವದ ಸುಖ ಸಾಧಿಸಿ ನೋಡಿ ತಾನಾಗದೇ ನಿಜಗೂಡಿ ಸ್ವಾನುಭವ ಧ್ರುವ ಮನದ ಕೊನಿಯಲ್ಯದ ಘನಸುಖದಾಟ ಅನುಭವಕಿದು ಬಲು ನೀಟ ಖೂನದೋರುವ ಘನ ಗುರುದಯ ನೋಟ ಮುನಿಜನಕಾಗುವ ಪ್ರಗಟ 1 ಸುರಿಯುತಲ್ಯದ ಸುಖ ಸಂತ್ರಾಧಾರಿ ಇರುಳ ಹಗಲದೀ ಪರಿ ಅನುದಿನ ನಿಜಸಾರಿ ತೋರುತಲ್ಯದ ಘನ ಬೀರಿ 2 ಸ್ವಹಿತ ಸಾಧನಕಿದು ಸವಿಸಾರ ಮಹಾನುಭವದಾಗರÀ ಮಹಿಪತಿಗಿದು ಮಾಡುವ ಮನೋಹರ ಇಹಪರ ಘನ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆಯಿಂದ ಅನುಭವಿಸಲು ಬ್ರಹ್ಮಾನಂದ ಧ್ರುವ ಶಿಖಾಮಧ್ಯದಲಿ ಪೂರ್ಣ ಸುಖಗರವುತಲ್ಯದೆ ಸಂತ್ರಾಧಾರಿ ಸಕಲವೆಲ್ಲಕೆ ಸನ್ಮತವಾಗಿ ತೋರುವದೊಂದೇ ಪರಿ ಶುಕಾದಿ ಮುನಿಗಳು ಪ್ರಕಟಿಸಿ ಹೇಳಿಹರು ಖೂನದೋರಿ ಬೇಕಾದರೆ ಇದು ನೋಡಬೇಕು ಷಡುಚಕ್ರವೇರಿ 1 ಸಾಮಾನ್ಯವಲ್ಲವಿದು ಸಹಸ್ರ ಕೋಟಿಗೊಬ್ಬ ಬಲ್ಲ ಖೂನ ಕಾಮಾಂಧದೊಳಗಿದ್ದ ಮನುಜ ಪ್ರಾಣಿಗಳು ಬಲ್ಲವೇನ ತಾಮಸಿಗಳಿಗಿದು ತಾರ್ಕಣ್ಯವಾಗುವದಲ್ಲ ಗಮ್ಯಸ್ಥಾನ ಸ್ವಾಮಿ ಸದ್ಗುರು ದಯಮಾಡಿದರಹುದು ಸಮ್ಯಗಜ್ಞಾನ 2 ಶಿರೋರತ್ನವಾಗಿ ವಂದಿಸಿಕೊಂಬುವದಿದೆಲ್ಲಕೆ ಪೂಜ್ಯ ಹರುಷಗೈಸುವ ಪುಣ್ಯ ಪರಮ ಭಕ್ತರಿಗಿದೆವೆ ಸಾಯೋಜ್ಯ ತರಳ ಮಹಿಪತಿಗಿದೆ ಸ್ವ ಸುಖದೋರುವ ಸುಸಾಮ್ರಾಜ್ಯ ಶಿರದಲಿ ಕರವಿಟ್ಟು ತೋರಿದ ಗುರು ಭಾನುಕೋಟಿತೇಜ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಿಡಿ ಮನವೇ ಸಂತರ ಸಂಗ ಪ ಹಿಡಿಮನವೇ ಸಂತರ ಸಂಗಾ | ಭವ ಭಯ ಭಂಗಾ | ಅಡಿಗಳಗೆರಗುತ ಸಾಷ್ಟಾಂಗಾ | ಪಡಕೋ ಚಿತ್ಸುಖದಂಗಾ 1 ಸಿಕ್ಕಿದು ಭಾಗವತರಣ | ಶರಣಾ | ಸಿಕ್ಕಲು ದಕ್ಕಿಸಿಕೋ ಕರುಣಾ | ಉಕ್ಕಲು ಜ್ಞಾನದಾ ನಿಜ ಸ್ಪರಣಾ | 2 ಗುಕ್ಕದವನೇ ತಾ ಹರಿಶರಣಾ | ಶರಣೆಂಬುದು ಸು¯ಭವಲ್ಲಾ | ಹರಿಮಯ ಕಾಂಬನು ಜಗವೆಲ್ಲಾ | ನೆರೆ ಹಮ್ಮ ಮಾತುಗಳುಳದಿಲ್ಳಾ | ಸರಿ ಸ್ತುತಿ ನಿಂದೆಗೆ ಬಗಿಬಲ್ಲಾ 3 ಎಲ್ಲರ ಮನದಂತಾನಾಗಿ | ನಿಲ್ಲುವ ಜನದೊಳು ನಿಜಯೋಗಿ | ಫುಲ್ಲನಾಭನ ಭಕುತಿಲಿ ಮುಣುಗಿ | ಬಲ್ಲವಿಕೆಯ ದೋರನು ಬಾಗೇ 4 ಏನೋ ಜ್ಞಾನಿಗಳಾನಂದಾ | ತಾನೇ ಬಲ್ಲನು ಶ್ರೀ ಗೋವಿಂದಾ | ಖೂನಕ ಸಾರಿದ ನುಡಿವಂದಾ | ಸ್ವಾನುಭವದೀ ಮಹಿಪತಿ ಕಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಡಗುವದುಘನಅಡಗುವದುತೋರದಡಗದು ದೃಷ್ಟಿಯಲ್ಲಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಮಡದಿ ಮಕ್ಕಳು ಮನೆಯ ಬಲ್ಲಿತೊಡಕಿದೆ ಮನ್ಮಥನ ಬಲೆಯಲ್ಲಿ1ನಾನೀನೆಂಬಭಿಮಾನದಲಿಸ್ವಾನುಭವದ ಸುಖ ವ್ಯರ್ಥವೇ ಅಲ್ಲಿ2ದೀಪಕ ಶಂಕರನ ಪ್ರಭೆಯಲ್ಲಿದೀಪ ಕೀಟಕ.................3
--------------
ಜಕ್ಕಪ್ಪಯ್ಯನವರು
ಮಡಿಯಾಗಿ ತಂಗಿ ಮಹಾಲಿಂಗ ಪೂಜೆ ಮಾಡೆಮುಕ್ತಿ ಸದನಕೇರುವೆ ನೋಡೇಪದೇಹವೆಂಬ ಮನೆಯ ಸಾರಿಸೆಮೋಹವೆಂಬ ತಂಗಳ ಮಡಕೆ ಹೊರಗಿರಿಸೆಸೋಹಂ ಎಂಬ ರಂಗವಲ್ಲಿಯನಿಡೆಜ್ಯೋತಿಯನು ಬೆಳಗಿಸೆ ನೀನು1ನಾನಾವಾಸನೆಯ ಮೈಲಿಗೆಯನು ಬಿಡೆಮನಮೈಲಿಗೆಯನು ತೊಳೆಸ್ವಾನುಭವದ ಪೀತಾಂಬರವನುಡೆನಾನು ಎಂಬ ಕಸವನು ಗುಡಿಸೆನಾದದ ಸುಖವನು ಅನುಭವಿಸೆ ನೀನು2ಧ್ಯಾನ ಮನನೆನಪಿಲ್ಲದಾಗಿಸ್ವಸ್ಥಾನದಲ್ಲಿ ಭಾನುವೀಗ ಬೆಳಗಿದಂತಾಗಿ ನೀನುನಾನು ಎಂಬುದು ಅಳಿದು ನೀನೆಚಿದಾನಂದನಾಗಿ ಪೂಜಿಸು3
--------------
ಚಿದಾನಂದ ಅವಧೂತರು