ಒಟ್ಟು 1726 ಕಡೆಗಳಲ್ಲಿ , 94 ದಾಸರು , 1321 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯೆತ್ತುವೆ ಆತ್ಮೇಶ್ವರಗೆ ಪ ಮಾರ ಕೋಟಿ ಲಾವಣ್ಯ ಮತ್ಪ್ರಿಯ ಸ್ವಾಮಿಗೆ ಅ.ಪ ಮನಕೊಡೆಯನೆನ್ನಿಸಿ ಮಮತೆಯ ವಿಸ್ತರಿಸಿ ಅನುದಿನ ಬೇಡಿದಿಷ್ಟಾರ್ಥವನೀವಗೆ 1 ಶುಭದಾಯಕನಾಗಿ ಶೋಭಿಸುತಿರ್ಪಗೆ2 ಗುರುರಾಮವಿಠ್ಠಲ ಕರುಣಾನಿಧಿಗೇ 3
--------------
ಗುರುರಾಮವಿಠಲ
ಆರಿಗ್ಯಾತಕೆ ಮೊರೆಯಿಡಲಿ ಸಾರಿದವರನ ಪೊರೆವ ಶ್ರೀರಮಣ ನೀನಿರಲು ಪ ಬೆಳಸಿಗೊಬ್ಬನ ಕೇಳೆ ಮಳೆಗೆ ಮತ್ತೊಬ್ಬನೆ ಅಳತಿಗೆ ಇನ್ನೊಬ್ಬನೆ ಹಾಗೆವೆ ವಳತಿಗೊಬ್ಬರು ದೊರೆಗಳೆ ಮ್ಯಾಲೆನ್ನ ಪ್ರಳಯಕೆ ಮತ್ತೊಬ್ಬನೆ ಪರಿಪರಿ ಖಳರ ಮಾತುಗಳೇ ಸ್ವಾಮಿ 1 ಆಕಾಲ ನೀನೆವೆ ಈ ಕಾಲದಲಿ ನೀನೆ ಸಾಕುವನು ಇನ್ನೊಬ್ಬನೆ ಸ್ಥಿರವಾಗಿ ತಾಕು ತಗಲಿಲ್ಲದೆಲೆ ಬೊಮ್ಮಾದಿ ಲೋಕಪತಿಗಳ ಒಡಿಯನೇ ಈ ವ್ಯಾಳ್ಯ ಲೋಕರನ ಕಾಯಬೇಕೊ ಸ್ವಾಮಿ 2 ಕಾಸು ಒಬ್ಬರಿಗಿಲ್ಲ ಲೇಸು ತೋರದಲೇವೆ ದೇಶಕೊಬ್ಬರು ಪೋದರೋ ಪೊಟ್ಟಿಗೆ ಕೂಸುಗಳ ಮಾರುಂಡರೋ ಈ ಜನರ ಕ್ಲೇಶಬಡಸದಲೆ ಪೊರಿಯೊ ಕರುಣದಲಿ ವಾಸುದೇವವಿಠಲ ಸ್ವಾಮಿ 3
--------------
ವ್ಯಾಸತತ್ವಜ್ಞದಾಸರು
ಆರು ನಿನ್ನಂಘ್ರಿ ಭಜಿಸುವರೈಯ್ಯಾ ಸಾರಹೃದಯರ ಪ್ರೀಯ ಸುರಮುನಿಜನ ಧ್ಯೇಯಾ ಪ ಕಮಲಭವಶಿವ ಇಂದ್ರ ನೀನಾಗೇನು ರಮೆ ಧರಾದೇವಿ ರಮಣಾದರೇನು ಯಮದೂತರೊಳಗಾದ ಆಜಮಿಳ ಪೆಸೆ ರ್ಗೊಳೆ ಸುಮನಿಸುರ ನಯ್ಯವನ ಕಾಯದಿದ್ದೊಡೆ 1 ಜಗದುತ್ಪತ್ತಿ ಸ್ಥಿತಿಲಯ ಕರ್ತನಾಗೇನು ಮಗುಳಿ ಸೂತ್ರಧಾರಿಯಾದರೇನು ಸುಗುಣ ಪ್ರಲ್ಹಾದಂಬರೀಷ ಕರಿವರ ಧ್ರುವಾದಿಗಳನುದ್ದರಿಸಿ ತಾರಿಸದಿದ್ದಡೆ 2 ಎಂದೆಂದು ಅರ್ತಜನ ಬಂದು ದೀನಾನಾಥ ತಂದೆ ಮಹಿಪತಿ ಸ್ವಾಮಿಯಂದಡೇನು ಮಂದಮತಿ ಕುಂದಘನವಂದು ನೋಡದ್ದೆ ಇಂದು ನಂದನಗೆ ಸೇವೆ ಪದಲಿಡದಿದ್ದರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರುಸರಿ ಮಾರುತಿಯೆ ನಿನಗೆ ಆರುಯೆಂಟು ಭುವನದೊಳಗೆ ಪ ಎತ್ತಿ ತೂಗಿದಿ ಶಿವನಪುರಿ ಕಿತ್ತು ತಂದಿ ಸಂಜೀವನ ಗಿರಿ ಮತ್ತೆರಕ್ಕಸಬಲವ ತೂರಿ ಮುತ್ತಿ ತರಿದೋ ಹಾರಿ ಹಾರಿ1 ಲಂಘಿಸಿ ಬಲವಂತ ಭರದಿ ಲಿಂಗ ತಂದು ಸಮರ್ಪಿಸಿದಿ ಮಂಗಳಾತ್ಮನಿಂದ ಪಡೆದಿ ಲಿಂಗಕೋಟಿ ರೋಮರೋಮದಿ 2 ನಾಮಬಲವ ಗಳಿಸಿದಿ ಈ ಮಹಭವಸಾಗರ ತುಳಿದಿ ಭೂಮಿಗಧಿಕ ಸ್ವಾಮಿ ಶ್ರೀ ರಾಮನೊಲಿಸಿ ಧನ್ಯನಾದಿ 3
--------------
ರಾಮದಾಸರು
ಆರೋಗÀಣೆಯ ನೀ ಮಾಡಯ್ಯಾ ಯದುಕುಲ ವಾರಿಧಿ ಚಂದ್ರಮನೆ ಪ ಸಾರಸನಯನ ಅಪಾರಮಹಿಮ ಕರು ಣಾರಸ ಪರಿಪೂರ್ಣಸಾರ ಭೋಕ್ತನೆ ಸ್ವಾಮಿ ಅ.ಪ. ಬಡವನು ನಾ ನಿನಗೆ ಕೊಡಲರಿಯೆನೊ ಸ್ವಾಮಿ ಪೊಡವಿಗೊಡೆಯ ನಿನ್ನ ಅಡಿಭಕ್ತ ನಾನಯ್ಯ ಕಡಲಶಯನ ಒಂದು ಕುಡಿತೆ ಪಾಲನು ನಿನಗೆ ಕೊಡುವೆನು ನಿತ್ಯತೃಪ್ತ ಒಡನೆ ಸ್ವೀಕರಿಸಯ್ಯಾ ಮೃಡವಂದಿತ ಪದಜಡಜಯುಗಳದಲಿ ದೃಢಭಕ್ತಿಯ ನೀ ಕೊಡು ಕೈ ಬಿಡದಲೆ ನುಡಿಗೆ ನುಡಿಗೆ ನಿನ್ನ ನಾಮವ ನುಡಿಸಯ್ಯ ಬಡವರ ಬಂಧುವೆ ಕರಿಗಿರೀಶನೆ 1
--------------
ವರಾವಾಣಿರಾಮರಾಯದಾಸರು
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆವ ಕಾರಣ ಮೊಗವ ತಿರುಗಿಹಿದ್ಯೊ ಪೇಳು ಭೂವರಹ ಸ್ವಾಮಿ ಪುಷ್ಕರಣಿ ತೀರಗನೆ ಪ ರಥ ಸಮೂಹಗಳೇರಿ ನೀ ಪ್ರಕಾಶಿಪ ಬಗೆಯೇ ಸತಿಯ ಲಾವಣ್ಯಾತಿಶಯವ ನೋಡುವ ಬಗೆಯೋ ಮಿತಿಯಿಲ್ಲದಸುರರ ಉಪೇಕ್ಷೆ ಮಾಡುವ ಬಗೆಯೋ ಪತಿತ ಪಾವನ ಪೂರ್ಣಕಾಮ ನಿನಗೆ ನುತಿಸಿ ಬಿನ್ನೈಸುವೆನು ಪೇಳೋ ಗುಣಧಾಮಾ 1 ಭಜಕರೆನ್ನನು ಬಿಡರೆಂಬ ಮನಸಿನಾ ಬಗೆಯೇ ಅಜಭವಾದಿಗಳ ಸಂಸ್ತುತಿಗಳಾಲಿಪ ಬಗೆಯೋ ರಜನೀಚರರ ಸದೆಯ ನಾಟ್ಯವಾಡುವ ಬಗೆಯೇ ಭುಜಗ ಭೂಷಣ ಪೂಜ್ಯ ಚರಣ ತ್ರಿಜಗದ್ವಿ ಲಕ್ಷಣ ಸುರೂಪಾ ನಿರ್ಲೇಪ 2 ಅನುಗರೊಶ ನೀನಾದಡೆಮ್ಮನ ಮರೆವರೆಂದು ವನತಿಗಾರರಿಯದಂತುಪದೇಶಿಸು ಬಗೆಯೋ ಘನಲಕ್ಷಣ ಮುಖಾಬ್ಜವನು ಚುಂಬಿಸುವ ಬಗೆಯೋ ವನಜ ಸಂಭವನ ನಾಸಜನೆ ಜಗ ಜ್ಜನಕ ಜಗನ್ನಾಥವಿಠ್ಠಲ ಕೃಪಾಸಾಂದ್ರಾ 3
--------------
ಜಗನ್ನಾಥದಾಸರು
ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ ವಿಧವುರವೆಯಷ್ಟು ತೋರದಲ್ಲ ಪ ದೇವ ದೇವೇಶ ನೀನೆಂದು ನಂಬಿರಲು ಕೃ-ಪಾವಲೋಕನದಿ ಸಲಹೊ ದೇವಅ ಫಣಿರಾಜನಾಸನದಿ ಕುಳಿತಿಹಗೆ ಅರಿವೆಯಾಸನವ ನಾನೆಂತ್ಹಾಸಲಿಘನವಾದ ಗಂಗೆಯನು ಪಡೆದವಗೆ ಕಲಶ ನೀರನದೆಂತು ಮೈಗೆರೆಯಲಿತನುವಿನ ಪರಿಮಳವು ಘಮಘಮಿಪನಿಗೆ ಸುಚಂದನವದೆಂತು ನಾ ಪೂಸಲಿಅನವರತ ನಾಭಿಯೊಳು ಶತಪತ್ರವಿಹಗೆ ಮಿಕ್ಕಿನ ಪೂವ ಮುಡಿಸಲೆಂತೈ ದೇವ 1 ಸುರುಚಿರೋಜ್ವಲ ಪೀತವಾಸನಿಗೆ ಉಡುಗೊರೆಯಅರಿವೆಯೇನನು ಪೊದಿಸಲಿವರ ಕೌಸ್ತುಭವು ಕೊರಳೊಳಗೆ ಇಪ್ಪವಗೆ ಆ-ಭರಣವಾವುದ ತೊಡಿಸಲಿತರಣಿ ಶತಕೋಟಿತೇಜನ ಮುಂದೆ ಹ್ಯಾಗೆ ನಾ-ಪೆರತೊಂದು ದೀಪವಿಡಲಿನೆರಹಿದ ಫಣಿಪತಿಯ ಸ್ತೋತ್ರದೂರನ ನಾನುಸ್ಮರಿಪೆನೆಂತಯ್ಯ ದೇವ ದೇವ 2 ವನಜಜಾಂಡ ಕೋಟಿಯುದರಂಗೆ ಆವುದನುಉಣಿಸಿ ತೃಪ್ತಿಯ ಮಾಡಲಿಅನಿಮಿಷರಿಗಮೃತವನ್ನೆರೆದವನ ತೃಷೆಯ ನೀ-ರಿನೊಳೆಂತು ಸಂತವಿಡಲಿವಿನತೆಯಾತ್ಮಜ ಪಕ್ಷದನಿಲನಿರೆ ಬೇರೆ ಬೀ-ಸಣಿಗೆಯನ್ನೇಂ ಬೀಸಲಿಅಣುರೇಣು ಪರಿಪೂರ್ಣ ಮೂರುತಿಗೆ ನಾ ಪ್ರದ-ಕ್ಷಿಣೆಯೆಂತು ಸುತ್ತಿಬರಲಿ ದೇವ 3 ಮಿಗೆ ಫಣಿಯ ಫಣದಾತಪತ್ರವಿರುವಂಗೆ ನೆರ-ಳಿಗೆ ಕೊಡೆಯನೇಂ ಪಿಡಿಯಲಿಪಗಲಿರುಳು ಸಾಮಗಾನ ಪ್ರಿಯನ ಮುಂದೆ ಗೀ-ತಗಳ ನಾನೇಂ ಪಾಡಲಿಜಗವರಿಯೆ ಲಕ್ಷ್ಮೀದೇವಿಪತಿಗೆ ಎಷ್ಟು ಹೊ-ನ್ನುಗಳ ದಕ್ಷಿಣೆಯ ಕೊಡಲಿನಿಗಮತತಿ ಕಾಣದಿಹ ಮಹಿಮನಿಗೆ ನಮಿಸುವಬಗೆಯ ನಾನರಿವೆನೆಂತೈ ದೇವ 4 ಒಲಿಸುವುದನರಿಯೆ ಮೆಚ್ಚಿಸುವ ಬಗೆಯರಿಯೆ ಹೊ-ಗಳುವ ಹೊಲಬ ನಾನರಿಯೆನುತಿಳಿದುದಿಲ್ಲವು ಷೋಡಶೋಪಚಾರದ ಪೂಜೆ-ಗಳಲೊಂದು ಪರಿಯಾದರೂನೆಲೆಯ ಕಾಣೆನು ನಿಗಮಶಾಸ್ತ್ರ ನವವಿಧ ಭಕ್ತಿ-ಯೊಳಗೊಂದು ಬಗೆಯಾದರೂಅಳಿಲಸೇವೆಯನೊಪ್ಪಿಸಿಕೊಂಡು ಶರಣನ ಸಲಹೊನೆಲೆಯಾದಿ ಕೇಶವನೆ ಸ್ವಾಮಿ - ಪ್ರೇಮಿ5
--------------
ಕನಕದಾಸ
ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕೀರಮಣ ಪೇಳು ರಘುಪತಿಯೆ ಪ ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ 1 ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆಮೃಢ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆದೃಢವಾಗಿ ಹೇಳೆನಗೆ ದೇವಕೀ ಸುತನೆ2 ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ 3 ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆಹನುಮ ನಿನ್ನ ಬಂಟನಾದನೆಂಬ ಸಿರಿಯೆಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆಅನುಮಾನ ಮಾಡದೆ ಪೇಳೊ ನರಹರಿಯೆ 4 ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿಪಂಥವೇ ನಿನಗಿಚಿದು ಆವ ನಡತೆಕಂತುಪಿತ ಕಾಗಿನೆಲೆಯಾದಿಕೇಶವ ರಂಗಚಿಂತೆಯನು ಬಿಡಿಸಿ ಸಂತೋಷವನು ಪಡಿಸೊ5ಚಿ
--------------
ಕನಕದಾಸ
ಆವಧನ್ಯರೋ ಸುಖಿಸುವರು ಗೋಕುಲದವರು | ಗೋವಿಂದನೊಳು ಕ್ರೀಡಿಸುವರು ಗೋಗೋವಳರು ಧ್ರುವ ಭಾವಿಸೆ ಮಖದಲ್ಲಿದಾವ ಸಾರಾಯ ಕೊಂಬಾ | ದೇವಗೋಪಾಲಕರ ಕರಿಸಿ | ಬುತ್ತಿಯ ತರಿಸಿ | ಸವಿಸವಿದುಂಬುವರ ವೆರಸಿ | ಕೈಯೊಳಿರಿಸಿ | ಅವರತನ್ನಂಜಲೆಂಬ ದೂರಿಸಿ ನಲುವಾದರಿಸಿ 1 ಸಿರಿರಮಣಿಯ ಕೂಡ ಸರಸದಿ ಕುಚವಿಡಿದಾ | ಕರದಿನವೀನ ತೃಣವಾ ಕಡಿದು ಕವಳವಿಡಿದು | ಕರೆದು ಆವಿನ ಪೆಸರಾ ನುಡಿದು ಕುಡವಾವಿ ನಡೆದು | ಕರುಣದಿ ಚಪ್ಪರಿಸುವಾ ಜಡಿದು ಮೈಯನಡದು 2 ಅನಂದಿನ ಧ್ಯಾಯಿಸುವಾ ಮುನಿಮನದಲ್ಲಿ ಹೊಳೆಯಾ | ಚಿನುಮಯ ಗೋಪಿಯರಾವಳಿಯಾ ಯೋದ್ಧುಳಿಯಾ | ಅನುವಾಗಿದೋವರ್ತನಕಳಿಯಾ ವರ ಬಳಿಯಾ | ಘನಮಹಿಪತಿ ಸ್ವಾಮಿ ನೆಲಿಯಾ ಬೊಮ್ಮತಾ ತಿಳಿಯಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆವರೀತಿಲಿ ಎನ್ನ ಕಾವದೇವರು ನೀನಿ ನ್ನಾವ ದೈವದ ಬಲವು ನಾನೊಲ್ಲೆ ಸ್ವಾಮಿ ಪ ಆವರೀತಿಲಿ ಬಿಡದೆ ನೀ ಎನ್ನ ಕಾಯೊ ಭಕ್ತರ ಜೀವದರಸನೆ ಭಾವಜಪಿತ ನಿನ್ನ ಬಿಟ್ಟ ನ್ನ್ಯಾವ ದೇವರು ಇಲ್ಲ ಎನಗೆ ಅ.ಪ ಕುಸುಮಾಕ್ಷ ತವಧ್ಯಾನ ನಿಶಿದಿವದೊಳು ಬಿಡದೆ ಹಸನಾಗಿ ಭಜಿಪಂಥ ಕುಶಲಮತಿ ನೀಡಿ ಪುಸಿಯ ಸಂಸಾರದ್ವೆಸನವಳುಕಿಸಿ ಅಸಮ ಸಂತಸಸುಖವ ಕರುಣಿಸಿ ಅಸುವುಪೋದರು ಪುಸಿಯನಾಡದ ಸುಶೀಲ ಮನವಿತ್ತು ಪೋಷಿಸಭವ 1 ಬಿಡದೆಕಾಡುವ ಎನ್ನ ಕಡು ಜಡಮತಿಯನ್ನು ಕಡಿದೊಡನೆ ನುಡಿಯಂತೆ ನಡೆಯನೆನ್ನೊಡಲಿಗೆ ಗಡನೆ ಸ್ಥಿರಮಾಡಿ ಎಡರು ತೊಡರಿನ ಜಡರಿನೊಳಗಿಂದ ಕಡೆಗೆ ನಿಲ್ಲಿಸಿ ಒಡೆಯ ನಿನ್ನ ಅಡಿದೃಢವನಿತ್ತು ಪಿಡಿದು ನೀ ಎನ್ನ ಬಿಡದೆ ಸಲಹೊ 2 ರತಿಪತಿಪಿತ ನೀನೆ ಗತಿಯೆಂಬ ಸಿದ್ಧಾಂತ ನುತಿಯ ಮಂತ್ರವನೆನಗೆ ಹಿತದಿಂ ಪಾಲಿಸು ಸತತ ನಿನ್ನನು ಸ್ತುತಿಪ ಭಕ್ತರ ಹಿತದ ದರುಶನ ಪ್ರಥಮವಿತ್ತೆನ್ನ ಗತಿಸದಂಥ ನಿಜಸ್ಥಿತಿಯ ಸಂಪದ ವಿತ್ತು ರಕ್ಷಿಸೋ ಶ್ರೀರಾಮ ಪ್ರಭುವೆ 3
--------------
ರಾಮದಾಸರು
ಆವರೋಗವೆ ಯೆನಗೆ ದೇವ ಧನ್ವಂತ್ರೀ ಪ ಸಾವಧಾನದಿಯೆನ್ನ ಕೈಪಿಡಿದು ನೋಡೋ ಅ ಪ ಹರಿಮೂರ್ತಿ ಕಾಣಿಸದು ಎನ್ನ ಕಂಗಳಿಗೆ ಹರಿಕೀರ್ತನೆ ಕೇಳದೆನ್ನ ಕಿವಿಗಳಿಗೆ ಹರಿಯ ಶ್ರೀಗಂಧವಾಘ್ರಾಣಿಸದೆನ್ನ ನಾಸಿಕವು ಹರಿಯಪ್ರಸಾದ ಜಿಹ್ವೆಗೆ ಸವಿಯಾಗದು 1 ಹರಿಪಾದ ಪೂಜಿಸೆ ಹಸ್ತಗಳು ಚರಿಸದು ಹರಿಗುರುಗಳಂಘ್ರಿಗೆ ಶಿರ ಬಾಗದು ಹರಿಯ ಸೇವೆಗೆ ಯೆನ್ನ ಅಂಗಗಳು ಚಲಿಸದು ಹರಿಯಾತ್ರೆಗೆನ್ನ ಕಾಲುಗಳೇಳದೋ 2 ಅನಾಥಬಂಧು ಶ್ರೀವಿಜಯವಿಠ್ಠಲರೇಯ ಯೆನ್ನ ಭಾಗ್ಯದ ಸ್ವಾಮಿಯಾಗಿ ನೀನೊ ಅನಾದಿಕಾಲದ ಘನರೋಗವನೆ ಬಿಡಿಸು ನಿನ್ನ ಉಪಕಾರವ ನಾನೆಂದಿಗೂ ಮರೆಯೇ 3
--------------
ವಿಜಯದಾಸ
ಆಸ್ಥಾನ ಮಾಡೋಣ ಆತ್ಮ ವಿಚಾರ ದಾಸ್ತಾನ ಮಾಡೋಣ ಪ ಸ್ವಸ್ತಿ ಆಯುಷ್ಕೀರ್ತಿ ಧರ್ಮಯಶೋಕಾಮ ಹಸ್ತಿವರದನಾಧೀನವೆಂದು ನಾವೆಲ್ಲಅ.ಪ ಶಮದಮಶ್ಯಾಂತಿ ವಿರಕ್ತ್ಯುಪರತಿಯಂಬೋ ಕ್ರಮಮಂತ್ರಿಗಳು ವಿಜ್ಞಾನಿ ಪ್ರಧಾನಿಯು ಸಮಾಧಿಕ ಶೂನ್ಯವೆಂಬುವ ರಾಜನು ವಿಷಯ ಭ್ರಮೆ ಎಂಬೊ ಕಟ್ಟು ವಿಚಾರಣೆಯಾಗುವ 1 ಸತ್ಕರ್ಮವೆಂಬೊ ಭೂಮಿಯನು ಸಾಧುಗಳೆಂಬ ವಕ್ಕಲುಗಳಿಗಿತ್ತು ಸಿದ್ಧಾಯವ ತೆಗೆದು ಭಕ್ತಿ ಜ್ಞಾನ ವೈರಾಗ್ಯ ಬಂಡಿಗಳಲಿ ತುಂಬಿ ಭಗವಂತನೆಂಬ ರಾಜಗೆ ಒಪ್ಪಿಸುವಂಥ 2 ಸ್ವಾಮಿ ಭೃತ್ಯನ್ಯಾಯ ಎಂಬೋ ಡಂಗುರವನು ಹೊಯಿಸಿ ತಾಮಸರಿಗೆ ನಿತ್ಯದಂಡನೆಯನು ವಿಧಿಸಿ ಕಾಮಕ್ರೋಧಗಳೆಂಬೋ ಖಳರ ಶಿಕ್ಷಿಸಿ ಗುರು- ರಾಮವಿಠಲನ ಕರುಣವೆಂಬೋ ಸಂಬಳ ಪಡೆದು 3
--------------
ಗುರುರಾಮವಿಠಲ
ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆಹಾನೆ ಅಖಂಡ ಗುರುತಾನೆ ಬೇಕಯೆಂದವರಿಗೆ ಪೂರ್ಣ ಸಿಕ್ಕುತಾನೆ ಧ್ರುವ ಅರವ್ಹಿನ ಮುಂಧಾನೆ ಮರವ್ಹಿನ ಹಿಂಧಾನೆ ಕುರಹು ತಿಳಿದರೆ ತಾನೆ ಸ್ಥಿರವಾಗ್ಯಾನೆ 1 ಗುರುತ ಕಂಡವಘಾನೆ ಗುರುಸ್ವರೂಪಧ್ಯಾನೆ ಗುರುಕೃಪ್ಯಾದವಘಾನೆ ಗುರುತಾನೆ 2 ಅಣುರೇಣುದೊಳಘಾನೆ ಜನವನ ತುಂಬ್ಯಾನೆ ಅನುಭವಕ ತಾನೆ ಖೂನಾಘ್ಯಾನೆ 3 ಮನದ ಕೊನಿಲಿಹಾನೆ ಘನವೆ ಘನವಾಘ್ಯಾನೆ ದೀನ ಮಹಿಪತಿ ಸ್ವಾಮಿ ತಾನೆ ತಾನೆ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು