ಒಟ್ಟು 1685 ಕಡೆಗಳಲ್ಲಿ , 106 ದಾಸರು , 1252 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸ ಕರುಣದಿ ಕಾಯೊ ಶ್ರೀನಿಧೆ ದಯದಿ ಬಾನು ಪ್ರಕಾಶ ಶ್ರೀಹರಿಯೆ ಪ. ಈ ನರಜನ್ಮದಲಿ ಬಂದು ಬೇನೆ ಬಿಟ್ಟು ಸಂಸಾರದಿ ಕಾನನದಿ ಕಣ್ಣು ಮುಚ್ಚಿ ನೀನೆ ಎನ್ನ ಬಳಲಿಸುವರೆ ಅ.ಪ. ಎಷ್ಟು ವಿಧದಿ ಕರೆದರೂ ನಿನಗೆ | ಈಗಿನ್ನು ದಯ ಪುಟ್ಟದ್ಹೋಹಿತಲ್ಲೊ ದೇವನೆ ಬೆಟ್ಟದೊಡೆಯ ನಿನ್ನ ನಂಬಿ ಕಷ್ಟ ಬಿಡಿಸು ಎಂದು ಬಾಯಿ ಬಿಟ್ಟು ಕೂಗಿದರೂ ಕರುಣ ಪುಟ್ಟಲಿಲ್ಲೊ ಸೃಷ್ಟಿಗೊಡೆಯ 1 ಯಾಕೆ ಎನ್ನ ಈ ಪರಿಯಿಂದ | ಜರೆದು ತೊರೆಯುತ್ತ ನೂಕುವುದು ನ್ಯಾಯವೇ ಶ್ರೀಶ ವಾಕುಲಾಲಿಸೆನ್ನನೀಗ ಸಾಕಿದರೆ ನಿನ್ನ ಭಕ್ತರೊಡನೆ ಬೇಕೆಂದು ನಿನ್ನ ಪದ ಸ್ಮರಣೆಯ ಏಕಮನದಿ ಧ್ಯಾನಿಸುವೆನೊ 2 ನಡೆನುಡಿಗಳ ತಪ್ಪನೆಣಿಸಿದರೆ | ಶ್ರೀನಿಧಿಯೆ ಎನ್ನ ಪೊಡವಿಯೊಳಗೆ ಪೊರೆವರಿನ್ಯಾರೊ ಬಿಡು ಬಿಡು ಈ ಬಿಂಕವೆಲ್ಲ ಕೊಡು ನಿನ್ನ ಪದ ಸರ್ವಕಾಲ ದೃಢ ಭಕ್ತಿ ವೈರಾಗ್ಯ ಎನಗೆ ಕೊಡು ಗೋಪಾಲಕೃಷ್ಣವಿಠ್ಠಲ 3
--------------
ಅಂಬಾಬಾಯಿ
ಶ್ರೀನಿವಾಸ ನಿನಗೆ ನಾ ಮಣಿದು ಫಲವೇನೊ ಕಾಣಿಸದೊ ನಿನಗೆನ್ನ ಕಷ್ಟ ಪ. ಜಾಣತನವಿದನೆಲ್ಲಿ ಮಾನನಿಧಿ ಕಲಿತೆಯೊ ಗಾನವಿಲೋಲ ಸ್ವಾಮಿ ಪ್ರೇಮಿ ಅ.ಪ. ಎಷ್ಟು ಕೂಗಲು ದಯವು ಪುಟ್ಟಲಿಲ್ಲವೊ ನಿನಗೆ ಕೃಷ್ಣಮೂರುತಿಯೆ ಕೇಳೊ ಕಷ್ಟಪಡಿಸುವುದೀಗ ದಿಟ್ಟತನವೇ ನಿನಗೆ ಶ್ರೇಷ್ಠ ನೀನೆನಿಸಿಕೊಂಡು ಪಟ್ಟವ್ಯಾತಕೆ ನಿನಗೆ ಮೂರು ಲೋಕದ ರಾಜ್ಯ ಬಿಟ್ಟು ಬಿಡು ನೀನೀಗಲೆ ದೃಷ್ಟಿಯಿಂದಲಿ ನೋಡಿ ನಿನ್ನ ತೋರೆಂದೆನಲು ಸೊಟ್ಟ ತಿರುಹಿರುವೆ ಮುಖವ ದೇವ 1 ತೋರೊ ಮೋರೆಯನೆನಲು ನೀರ ಪೋಗುವೆ ಬೆನ್ನು ಭಾರ ಪೊತ್ತು ಕೋರೆ ತೆರೆವೆ ಘೋರ ರೂಪವ ತೋರಿ ಈ ರೀತಿ ಬೆದರಿಸುವೆ ದಾರಿ ಎನಗಿನ್ನಾವುದೊ ನಾರಿಯನೆ ಪೆತ್ತು ನೀ ನಾರಿಯನೆ ಕೊಂದು ನಿನ್ನ ನಾರಿ ಚೋರನ ವಧಿಸಿದೆ ನಾರೆರೋಸ್ತ್ರವ ಕದ್ದು ನಾರಿಯರ ವ್ರತ ಕೆಡಿಸಿ ಏರಿ ಓಡಿದೆ ಕುದುರೆಯ ಜೀಯಾ 2 ಈ ಪರಿಗೈದರೆ ಕಾಪಾಡುವವರ್ಯಾರೊ ಭೂಪರೈವರ ಪೊರೆದನೆ ತಾಪಪಡುವುದು ನಿನಗೆ ತೋರ್ಪುದಿಲ್ಲವೆ ದೇವ ಪಾಪಿ ಎಂದೆನಬೇಡವೊ ನೀ ಪಾರುಗೊಳಿಸಬೇಕೀಪರಿಯ ಬವಣೆಗಳ ಶ್ರೀಪತಿಯೆ ಶ್ರೀನಿವಾಸ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದೆಕಾಪಾಡುವವರನರಿಯೆ ದೊರೆಯೆ 3
--------------
ಅಂಬಾಬಾಯಿ
ಶ್ರೀನಿವಾಸ ಸಲಹೋ ನಮ್ಮ ಶ್ರೀನಿಧಾನ ಚರಣನೆ ಪ ಧ್ಯಾನ ನಿರತ ಮೌನಿ ಜನರ ಮಾನಸಾಬ್ಜಹಂಸನೆ ಅ.ಪ ನಕ್ರಮುಖದಿ ಸಿಕ್ಕಿದಿಭನನಕ್ಕಿರಿಂದ ಪೊರೆದನೆ ಚಕ್ರಧರ ತ್ರಿವಿಕ್ರಮಾದಿ ಚಕ್ರಭೋಗಿ ಶಯನನೆ 1 ಬಿಟ್ಟು ನಿನ್ನ ಭ್ರಷ್ಟನಾಗಿ ಕೆಟ್ಟ ಜನ್ಮ ಜನ್ಮದೆ ಹುಟ್ಟಿ ಹುಟ್ಟಿ ಕಷ್ಟಪಟ್ಟಿ ಕೃಷ್ಣ ನಿನ್ನ ನಂಬಿದೆ 2 ಶರಣಜನರ ಪೊರೆವನೆಂಬ ಬಿರುದು ಧರಿಪನಲ್ಲೆಲಾ ಹರಿಣ ಹರಣಧರದೊಳಿರುವ ಕರುಣಿ ವರದ ವಿಠಲ 3
--------------
ವೆಂಕಟವರದಾರ್ಯರು
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ
ಶ್ರೀಮತೇ ಶ್ರೀ ಭಾಷ್ಯಕರಾಯನೇ [ಮಾಮವ] ದೇವಾ ಕರುಣಿಸು ಮಹರಾಯನೇ ಪ ಮಂತ್ರ ರಹಸ್ಯದಿ ಜ್ಞಾನ ತ್ರಯಂಗಳ ನಿಂತು ನೀ ಕೃಪೆ ಮಾಡಿದೇ ಅ.ಪ [ವರ]ತತ್ವದುಯ್ಯಾಲನಾಡಿದೆ ಭರಗೈದು ಬಂದಿಲ್ಲಿ ಪರತತ್ವವನು ಗೂಡಿದೇ 1 ಸಿರಿಮಾತೇ [ಮೂಲಕ] ಹರಿಯಾಜ್ಞೆಯನುಗೊಂಡು ಪರಮಭಕ್ತರಿಗೆಲ್ಲಾ ಪ್ರತ್ಯಕ್ಷವಾದಂಥಾ ಪರಮಪದವಿ ಮಾಡಿದೇ 2 ಯದುಶೈಲವಾಸದೊಳಧಮರಾದವರಿಗೆ ಸುಧೆಯ ಸುರಿದು ತೋರಿದೆ ಸದುಪಾಯದಿಂ ಬಂದು ಸರ್ವಸ್ವತಂತ್ರದೊ ಳಿದು ನೋಡೆನುತ ಸಾರಿದೆ 3 ಪರಕಾಲಗುರು ಸರ್ವತಿರುಮಳಿಶಯ್ಯಾಳ್ವಾರೆಂ ಬೆರುಮಾನರಡಿಯಾದೆನೈ ಗುರುಕುಲದೊಳಗೆನ್ನ ಕರೆದಿತ್ತ ಹರಿನಾಮ ನುಡಿಯದೆ ನಾ ಹೋದೆನೈ 4 ಅದ್ವೈತ ಕುಲವನ್ನು ಪರಿಶೋಧಿಸಿ ಬಿಟ್ಟು ಶ್ರೀ ಮದ್ರಾಮಾನುಜಾಚಾರ್ಯನೇ ಮದ್ಗುರುವಾದ ಶ್ರೀತುಲಶೀರಾಮದಾಸ [ರೈ ದಾಸಕುಲತೂರ್ಯರೈ] 4
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀರಂಗ ಬಾರನೆ ಪ. ಕರೆದರಿಲ್ಲಿ ಬಾರನೆ ಕಾಂತೆ ಮುಖವ ತೋರನೆ ಮಧುರ ಪುರದ ಅರಸನೆ ಕೂಡಿ ಎನ್ನ ರಮಿಸನೆ ಅ.ಪ . ಮುನಿಸು ಮನದಲ್ಲಿಟ್ಟನೆ ಮೋಹವನ್ನು ಬಿಟ್ಟನೆಮನದಿ ಛಲವತೊಟ್ಟನೆ ಮನೆಗೆ ಬಾರದೆ ಬಿಟ್ಟನೆ 1 ಎಂತು ನಂಬಿ ಇದ್ದನೆ ಎಂತು ಗುರುತು ಮರೆತನೆಪಂಥವ್ಯಾತಕೆ ಕಲಿತನೆ ಕಾಂತೇರÀ ಕೂಡಿ ಮೆರೆದನೆ 2 ಸೋಳಸಾಸಿರ ಗೋಪಿಸಹಿತ ಜಲದಲಾಡಿ ಪೋದನೆಸೆಳೆದು ಒಬ್ಬಳ ಒಯ್ದನೆ ಚೆಲುವ ಹಯವದನನೆ 3
--------------
ವಾದಿರಾಜ
ಶ್ರೀರಾಮ ಜಯರಾಮ ಜಯ ಜಯತು ರಾಮ ಶ್ರೀರಾಮ ಜಯರಾಮ ಜಯ ಜಯತು ರಾಮ ಪ ನಮೋ ರಾಮಚಂದ್ರ ಸದಾಪೂರ್ಣಾನಂದ ನಮೋ ಸುಗುಣ ಸಾಂದ್ರ ಕೌಸಲ್ಯಕಂದ ನಮೋ ರಾಘವೇಂದ್ರ ಸೀತಾ ಕುಮುದ ಚಂದ್ರ ನಮೋ ಅಜಭವೇಂದ್ರಾದ್ಯಖಿಲ ಸುರವಂದ್ಯ 1 ನಿನ್ನ ಉದಯದಿರವಿಯು ಉನ್ನತಿಯನೈದಿಹನು ಘನ್ನತೆಯ ಪೊಂದಿಹರು ಕೌಸಲ್ಯದಶರಥರು ನಿನ್ನ ಅನುಜರು ಜಗದಿ ಪರಮ ಪಾವನ್ನರು ನಿನ್ನರಸಿ ಶ್ರೀಸೀತೆ ತ್ರೈಲೋಕ್ಯ ಮಾತೆ 2 ನಿನ್ನ ಕರುಣದಿ ಹನುಮ ಬ್ರಹ್ಮತ್ವ ವೈದಿದನು ನಿನ್ನ ನಾಮದಿ ವ್ಯಾಧ ವಾಲ್ಮೀಕನಾದ ನಿನ್ನ ಪದರಜ ಸೋಂಕಿ ಶಿಲೆಯಬಲೆಯಾದುದು ನಿನ್ನ ಪ್ರೇರಣೆಯಿಂದ ಪ್ರಣವೆ ಜ್ವಾಲಾಯಿತು 3 ನಿನ್ನ ಪ್ರೇಮದಿ ಶಬರಿ ಮುನ್ನ ಸವಿನೋಡಿ ಫಲ ನಿನ್ನ ಪದಕರ್ಪಿಸಲು ಘನಪದವಿಯಿತ್ತೆ ನಿನ್ನ ಸಖ್ಯವನೆ ಬೆರಸಿದವ ಸುಗ್ರೀವನು ಧನ್ಯವಾಗಿರುತಿಪ್ಪ ನಿಹಪರಂಗಳಲಿ 4 ನಿನ್ನ ದಾಸ್ಯವನೈದಿ ಅನಂತ ಕಪಿವರರು ಉನ್ನತೋನ್ನತ ಯೋಗ್ಯತೆಗಳ ಪಡೆದಿಹರು ನಿನ್ನ ದ್ವೇಷದಿ ರಾವಣಾದಿಗಳು ಮಡಿದರು ನಿನ್ನ ಪೊಂದಿದ ವಿಭೀಷಣ ರಾಜ್ಯಪಡೆದ 5 ಸುರರು ಕೃತ ಪುಟಾಂಜಲಿಯಲ್ಲಿ ಸ್ಥಿತರಾಗಿ ಇರುತಿಹರು ನಿನ್ನಾಜ್ಞದಿ ಇತರ ಮನುಜರ ತೆರದಿ ಪಿತನಾಜ್ಞೆ ಪಾಲಿಸಲು ವ್ರತವನೇ ಕೈಕೊಂಡು ವನಕೈದಿದೆ 6 ಜಾನಕಿಯು ಅವಿಯೋಗಿ ನಿನ್ನ ಬಳಿಯಿರುತಿರಲು ವಾನರರ ಭಲ್ಲೂಕಗಳ ಸೇನೆನೆರಹಿ ಕಾನನವ ಸಂಚರಿಸಿ ಖಳರನ್ನು ಮೋಹಿಸಿದೆ ಶ್ರೀನಿಧಿಯೆ ತವ ಲೀಲೆ ಬಹು ಚೋದ್ಯವು 7 ತಾಮಸರ ಸಂಹರಿಸಿ ಭೂಮಿ ಭಾರವನಿಳಿಸಿ ನೇಮದಿಂ ಕೈಕೊಂಡು ರಾಜ್ಯವನ್ನು ಪ್ರೇಮದಿಂ ಪಾಲಿಸಿದೆ ಪ್ರಜೆಗಳನು ವಿಧವಿಧದಿ ತಾಮರಸಜನ ಪ್ರಾರ್ಥನೆಯ ಮನ್ನಿಸಿ 8 ನಿನ್ನ ರಾಜ್ಯವೆ ಸಕಲ ಸುಖದ ಸಾಮ್ರಾಜ್ಯವು ನಿನ್ನ ಯಾಙ್ಞವೆ ವೇದವಾಣಿಯಿಂದಧಿಕವು ನಿನ್ನನಂತವತಾರಗಳ ಚರಿತೆ ಸೋಜಿಗವು ನಿನ್ನಯವತಾರಕ್ಕು ಮೂಲಕ್ಕಭೇದವು 9 ನಿನ್ನ ಮಹಿಮಾ ಜಲಧಿಯೊಳು ರಮೆಯು ಮುಳುಗಿಹಳು ನಿನ್ನ ಸ್ತುತಿಗೈವ ನಾಲ್ಮೊಗನು ನಾಲ್ಮೊಗದಿಂ ನಿನ್ನ ಧ್ಯಾನದಿ ಸದಾ ಮೋದಿಪನು ಮಾರುತನು ನಿನ್ನನೇ ಪಾಡುವರು ಅಜಪವನ ಪತ್ನಿಯರು 10 ನಿನ್ನ ನಾಮವ ಸವಿದು ಭವನು ನಲಿನಲಿಯುತಿಹ ಖಗರಾಜ ರತಿ ವರ್ಣಿಸುವರು ಚನ್ನೆ ಪಾರ್ವತಿಯು ವಾರುಣಿಯು ಸೌಪರ್ಣಿಯು ಚನ್ನಾಗಿ ಪಾಡುವರು ನಿನ್ನ ಗುಣಗಳನು 11 ಸುರರು ನಾರದಾದಿ ಋಷಿವರರು ವಂದಿಸುತ ಭಕ್ತಿಯಲಿ ನಿನ್ನ ಪದಗಳಿಗೆ ಅಂದದಲಿ ವೀಣಾ ಸುಗಾನ ಸಂಗೀತದಲಿ ಒಂದೊಂದೇ ಮಹಿಮೆಗಳ ಪೊಗಳಿ ಕುಣಿಯುವರು 12 ಸುಖತೀರ್ಥಮುನಿರಾಜ ಗುರುರಾಘವೇಂದ್ರಾರ್ಯ ಅಕಳಂಕ ವgದೇಂದ್ರ ಯತಿಸಾರ್ವಭೌಮರು ಮುಕುತಿದಾಯಕ ನಿನ್ನ ಪದಕಮಲ ಪೂಜಿಸುತ ಪ್ರಖರ ಕಿರಣದಿ ಜಗವ ಬೆಳಗುತ್ತಲಿಹರು 13 ತಾಳತಂಬೂರಿ ಸಮ್ಯಾಳದಿಂದಲಿ ಕೂಡಿ ಕಾಲುಗೆಜ್ಜೆಯ ಕಟ್ಟಿ ಮೇಲು ಸ್ವರದಿಂದ ಮೇಲಾದ ಭಕ್ತಿಯಲಿ ವಾಲ್ಗೈಸುತಿಹರು 14 ನಿನ್ನ ಲೀಲೆಯ ಕಥೆಯು ಮುಕ್ತಿಗೆ ಸತ್ಪಥವು ನಿನ್ನ ನಾಮದ ಮಹಿಮೆ ನಿಗಮಗಮ್ಯ ನಿನ್ನ ಚರಣೋದಕವು ತ್ರಿಜಗಪಾವನ್ನವು ನಿನ್ನ ನೇಮವೇ ಸೃಷ್ಟಿ ಸ್ಥಿತಿಲಯಕೆ ಕಾರಣವು 15 ನಿನ್ನ ನಾಮದಿ ಭರದಿ ಶುಕನು ಕುಣಿದಾಡುತಿಹ ನಿನ್ನ ಧ್ಯಾನದಿ ಯೋಗಿವೃಂದ ಸಂದಿಪು (ದು) ನಿನ್ನ ರೋಷದಿ ಅಜಭವಾದ್ಯರು ತೃಣರು 16 ಮೂರ್ತಿ ಕಣ್ಣಿಗಲ್ಹಾದಕರ ನಿನ್ನಂಘ್ರಿ ಸೇವೆ ಸಾಮ್ರಾಜ್ಯಗಿಂ ಪರತರವು ನಿನ್ನ ನಾಮದ ರುಚಿಯು ಅಮೃತಕಿಂತಧಿಕ 17 ನಿನ್ನ ಧ್ಯಾನವೆ ಸಕಲ ಸಾಧನದ ಸಾರವು ನಿನ್ನ ಗುಣಗಾನವೆ ಶಾಸ್ತ್ರಗಳ ಭೂಷಣವು ನಿನ್ನ ಮಹಿಮಾರಹಿತ ಕಾವ್ಯವಗ್ರಾಹ್ಯವು ನಿನ್ನ ಲೀಲಾ ರಹಿತ ಶಾಸ್ತ್ರವೆ ಕುಶಾಸ್ತ್ರ 18 ನಿನ್ನ ನಾಮಧ್ಯಾನವೇ ದೇಹ ಸಾರ್ಥಕವು ನಿನ್ನ ನಾಮವೆ ವಿವಿಧ ರೋಗನಿರ್ಮೂಲಕವು ನಿನ್ನ ನಾಮವೆ ದುರಿತರಾಶಿಗೆ ಪಾವಕವು ನಿನ್ನ ನಾಮವೆ ಸಕಲಭವಬಂಧ ಮೋಚಕವು 19 ರೇಣು ತೃಣ ಕಾಷ್ಟದಲಿ ನಿನ್ನ ದಯಪರಮೇಷ್ಠಿಯಿಂದಿರುವೆಗಳಲಿ ನಿನ್ನ ಪ್ರೇಮದಿ ನಲಿದ ಮಂದಮತಿ ವಂದ್ಯನು ನಿನ್ನಲ್ಲಿ ಮಮತೆಯಿಲ್ಲದವದೂಷಿತನು 20 ಅಜಭವಗಿರೀಶಾ ಭಜಕÀಜನ ದಾಸಾ ಸುಜನಮನತೋಷಾ ಕುಜನ ಮನಕ್ಲೇಶ ದ್ವಿಜತತಿಯ ಪೋಷ, ರಜನಿಚರನಾಶ ರಜತಪುರಧೀಶ, ಭುಜಗÀಗಿರಿ ವಾಸ 21 ತಂದೆ ತಾಯಿಯು ನೀನೆ, ಬಂಧು ಬಳಗವು ನೀನೆ ಹಿಂದು ಮುಂದು ನೀನೆ, ಎಂದೆಂದು ನೀನೆ ಬಂದಭಯ ಪರಿಹರಿಸಿ ಕುಂದದಲೆ ಕಾಯ್ವಸಂ - ಬಂಧಿಗನÀು ಆಪ್ತ ಗೋವಿಂದ ನೀನೆ 22 ಸೃಜಿಸಿದವನು ನೀನೆ ಪೋಷಿಸಿದವನು ನೀನೆ ನಿಜಗತಿಯ ಜೀವರಿಗೆ ನೀಡುವವÀನು ನೀನೆ ಅಜಪಿತನೆ ನಿನ್ನ ಪದ ಭಜನೆ ಮಾಳ್ಪವರನ್ನು ನಿಜವಾಗಿ ಕಾಪಾಡಿ ಪೊರೆವ ಪ್ರಭುನೀನೆ 23 ಕೊಡುವವನು ನೀನೆ ಕೋಳುವವನು ನೀನೆ ಅಡಿಗಡಿಗೆ ಸುಖದುಃಖ ನೀಡುವವ ನೀನೆ ಕೊಡುವದಾತನು ನೀನೆ ಕೊಟ್ಟದ್ದು ಕೊಂಡರೆ ಹೊಡಕೊಂಡು ಅಳುವದ್ಯಾತಕೆ ಮೂಢಪ್ರಾಣಿ 24 ಈ ಪೊಡವಿಯೊಳು ಮೊದಲು ನಾನು ಬಹು ಕಾಲದಿ ಕೌಪೀನ ಸಹ ಯನ್ನ ಸಂಗಡಿರಲಿಲ್ಲ ಈ ಪೊಡುವಿಯನು ಬಿಟ್ಟು ನಾ ಪೋಪಕಾಲಕ್ಕು ಈ ಪರಿಯೆ ಪೋಪೆನೆಂಬುದು ಸಟಿಯು ಅಲ್ಲ 25 ಗಾಡಿ ವಾಜಿಯು ಮತ್ತೆ ಬೆಡಗಿನ ವಸನಗಳು ಕೇಡುಯಿಲ್ಲದವಾ ಭರಣ ವಸ್ತುಗಳು ನಾಡಿನೊಳು ಬಹುಮನ್ನಣೆಯು ಯೆಂಬರೆಲ್ಲೆನ್ನ ಕೂಡಬರಬಹುದಾದುದೊಂದುಯಿಲ್ಲ 26 ಎಷ್ಟುಗಳಿಸಿದರೆನ್ನ ಹೊಟ್ಟೆಗೊಂದೇ ರೊಟ್ಟಿ ಸೃಷ್ಟಿಪತಿ ನಿನ್ನಂಘ್ರಿ ನಿಷ್ಠೆ ತೊರೆದು ಕಷ್ಟ ನಷ್ಟಗಳನ್ನು ಸಹಿಸಿ ನಿಷ್ಠ್ಠುರನಾಗಿ ದುಷ್ಟತನದಿಂದ ನಾನಿಷ್ಟುಪರಿಗಳಿಸಿ 27 ದಾನಧರ್ಮಗಳಿಲ್ಲ ವÀ್ರತನೇಮಗಳುಯಿಲ್ಲ ಆನಮಿಸಿಕೊಡಲಿಲ್ಲ ಮಾನಿ ವಿಪ್ರರಿಗೆ ಧೇನುಪಾಲನೆ ನಿನ್ನಧ್ಯಾನವನ್ನೇ ಮರೆದು ಶ್ವಾನನÀಂದದಿ ಕಾದು ಕೊಂಡು ಕುಳಿತಿಪ್ಪೆ 28 ವಾರನಾರಿಯರಲ್ಲಿ ವೇಷಧಾರಿಗಳಲ್ಲಿ ಸೊರೆಮಾಡಿದೆ ಕರ್ಣನೆನಿಸ ಬೇಕೆಂದು ಶ್ರೀರಮಾಪತಿ ನಿನ್ನ ಚರಣ ಕಮಲಗಳನ್ನು ಆರಾಧಿಪರಿಗೆ ನಾರುವ್ವಿ ಕೊಡಲಿಲ್ಲ 29 ಸತಿಸುತರು ಹಿತÀದವರು ಹಿತವ ಮೇಲ್ತೋರಿದು - ರ್ಗತಿಗೆನ್ನ ಗುರಿಮಾಡುತಿಪ್ಪರಲ್ಲದಲೇ ಪರ - ಗತಿಗೆ ಸಾಧನ ತೋರ್ಪರಾರು ಯನಗಿಲ್ಲ 30 ಈ ಮಹಾಜ್ವರದಿಂದ ನೊಂದು ನಿನ್ನನು ನೆನೆವೆÉ ನಾಮಹಾಭಕ್ತಿಯಲಿ ನಂಬಿದವನಲ್ಲ ನಾ ಮಾಡಿದ ಪಾಪರಾಶಿಗಳ ಪರಿಹರಿಸಿ ಪ್ರೇಮದಿಂದಲಿ ಪೊರೆಯೋ ಪರಮಕರುಣಿ 31 ರೋಗವನೆ ಹೆಚ್ಚಿಸು ನಿರೋಗಿಯನು ಮಾಡು ಭವ ರೋಗದಿಂದಗತೀ ಕಡೆದಾಂಟಿಸು ಯೋಗಿವರ ನಿನ್ನಿಚ್ಛೆ ಹೇಗೆÀಮಾಡಿದರುಸರಿ ಆಗದೆಳ್ಳಿನಿತು ಸಂಕೋಚವೆನಗೆ 32 ನೀಕೋಟ್ಟಕವಚವಿದು ನೀ ತೆಗೆದು ಹಾಕಲ್ಕೆ ನಾಕೆಟ್ಟುದುದುಯೇನು ಕರುಣಾಳುವೆ ಈ ಕವಚ ಕೆಲಕಾಲ ಬಿಟ್ಟಮಾತ್ರಕೆ ಮುಂದೆ ನೂಕಬೇಡೆನ್ನ ಮನ ಪಾಪಗಳ ಕಡೆಗೆ 33 ತನುಮನವು ನಿನ್ನದು ಧನಧಾನ್ಯ ನಿನ್ನದು ವನಿತೆ ನಿನ್ನವಳು ಮನೆ ಮಾರು ನಿನ್ನದು ದೇವ ಎನಗಾಪ್ತರೆಂಬುವರು ನಿನ್ನದಾಸರು ರಾಮ ಎನದೆಂಬ ವಸ್ತುವೆಲ್ಲವು ನಿನ್ನದು 34 ನಿನ್ನ ನಂಬಿದಯನೆಗೆ ಪಾಪದಂಜಿಕೆಯಿಲ್ಲ ಪುಣ್ಯದಾಶೆಯು ಇಲ್ಲ ಪರಮಪುರುಷ ನಿನ್ನ ಪ್ರೇರಣೆಯಿಂದ ಯನಿ
--------------
ವರದೇಶವಿಠಲ
ಶ್ರೀಹರಿ ಕೀರ್ತನೆ ಅಗಲದಿರೋ ಮನ ಮಂದೀರದಿಂದ ಲೆನ್ನ ಎಂದೆಂದಿಗೂ ಕೃಷ್ಣ ಪ ಅಗಲದಿರೋ ಬ್ರಹ್ಮಾದಿ ವಂದಿತ ಪರಿ ಪೂರ್ಣ ಏಕನೆ ವಿಶ್ವ ಸಗುಣ ನಿರ್ಗುಣ ನಿರಜ ನಿಸ್ಸೀಮ ಅ.ಪ. ಕಷ್ಟವಿಲ್ಲದೆ ಸಕಲ- ಚೇಷ್ಟೆಯ ನಡಿಸುವೆ ಕೊಟ್ಟು ದೇಹಾದಿಗಳ- ಬಿಟ್ಟೇ ಜೀವರ ಭವದಿ ಗಿಟ್ಟೀಸೆ ತಮ್ಮ ತಮ್ಮ- ಪಟ್ಟಾ ಮುಕ್ತಿಯ ಬೇಗ ಒಟ್ಟಿನಿಂದಲಿ ಜೀವ ಜಗವಂದಿಷ್ಟು ಚಲಿಸದು ಬಿಟ್ಟು ನಿನ್ನನು ಗುಟ್ಟು ತಿಳಿಯದೆ ಭವದಿ ಕಂ- ಗೆಟ್ಟು ಬಳಲಿದೆ ಭಕ್ತಬಾಂಧವ ನಷ್ಟಕಷ್ಟಗಳಿಲ್ಲದಾ ಸಂತುಷಷ್ಟ ನೀಡುವ ಪ್ರಭುವೆ ಕರುಣಾ- ದೃಷ್ಟಿ ಬೀರುತ ಭಕ್ತಿ ಭಾಗ್ಯವ ಪುಷ್ಟಿಗೈಸುತಲೆನಗೆ ಸಂತತ 1 ಶ್ರೀಶಾನೊಬ್ಬನೆ ಸರ್ವ ತಂತ್ರ ಸ್ವತಂತ್ರನು ನಾಶರಹಿತನಿಗೆಲ್ಲಾ ದಾಸರೆ ಸರಿಸತತಾ ವಾಸುದೇವನು ಜೀವ ಜಗದಿಂ ವಿಲಕ್ಷಣನು ಈಸುಜ್ಞಾನವನೀಯೋ ಜನ್ಮಜನ್ಮಾಂತರಕು ದೋಷದೂರ ವಿಶೇಷ ಮಹಿಮ ಪೂರ್ಣ ವಿಶ್ವಗ ಶಶ್ವದೇಕ ವಿ- ಲಾಸ ಮಿಷಣಾಭರಣ ಭೂಷಿತ ಸಾಮಸರ್ವಾಧಾರ ನಿರುಪಮ ಓಸು ಶಬ್ದಗಳಿಂದ ವಾಚ್ಯನೆ- ನಾಶಗೈಸುತ ಕರ್ಮತ್ರಯಗಳ ಹೃದಯಗುಹೆಯಲಿ 2 ನಿತ್ಯನಿಗಮಾತೀತ-ನೀನೆ ಸತ್ಯರ ಸತ್ಯ ನಿತ್ಯತೃಪ್ತನು ಸ್ವರತ-ಮುಕ್ತೇಶ ಚಿನ್ಮಯನೂ ನಿತ್ಯಜೀವಗೆ ನೀನಿರ್ನಿಮಿತ್ತ ಬಂಧು ಸತತ ನಿತ್ಯಸ್ತೋತ್ರವನು ನುಡಿಸು-ಮೃತ್ಯೋಮೃತ್ಯುವೆ ದೇವಾ ಧಾಮ ವಿಶ್ವೋ ತ್ಪತ್ತಿ ಸ್ಥಿತಿಲಯ ಕರ್ತ ಪರಿಪರಿ ಜೀವ ಸತ್ತಾದಿ ಭಾಸಕ ನಾಥ ಮುಕ್ತಾಮುಕ್ತ ವಂದಿತ - ಭೂತಿ ಭೂರಿದನಾಂತಾತ್ಮ ಖ್ಯಾತ ಸರ್ವೋತ್ತಮ ಪರತ:ಪರಾಕ್ಷರ ವಿಷ್ಣುಸರ್ವಜ್ಞ 3 ಅಂಬುಜಾಕ್ಷನು ನೀನೇ-ಉಂಬುವೆ ಸರ್ವಸಾರ ತುಂಬಿರುವೆ ಒಳಹೊರಗೆ-ಬೆಂಬಲನು ಜಗಕೆಲ್ಲ ಬಿಂಬ ನೀ ಚಲಿಸೆ ಪ್ರತಿ ಬಿಂಬಾ ನಾ ಚಲಿಸುವೆ ನಂಬಿದೆ ಸಲಹಯ್ಯ-ಕಂಬುಚಕ್ರಾಂಕಿತನೆ ಕುಂಭಿಣೀಪತಿ ಕೃಷ್ಣಕೈಬಿಡೆ ಗೊಂಬೆ ಸರಿನಾಲ್ಲವೇನೈ ಡಿಂಬದೊಳಗಿನ ವೈರಿವೃಂದವು ಹಂಬಲಿಸಲೆಡೆಗೊಡವುಭವ ದೊಂಬಿ ಅಡಗಿಸು ದಕ್ಷಣಾಕ್ಷಿಗ-ಸ್ಥಂಭರೂಪಿಯೆ ಶರಣುಶರಣು ಎನಿಸೈ ನೀಡಿ ವಿಜ್ಞಾನ 4 ಮಂದರೋದ್ಧರ ಗೋವಿಂದ ನಿನ್ನಯ ಮಹಿಮೆ ಇಂದಿರೆಗಾಗದು ಸಾಕಲ್ಯ ತಿಳಿಯೆಸಿದ್ಧವಿದೂ ಛಂದಾ ಛ್ಚಾದಿತ ಗಾತ್ರ-ಬಂಧ ಮೋಕ್ಷಪ್ರದನೆ ಎಂದು ಕಾಂಬೆನೋ ನಿನ್ನ-ಮಂದನಾನಿಹೆ ಜಗದೀ ಸದ್ಮ ಪೂರ್ಣಾನಂದ ನಿನ್ನಯ ನಾಮ ವೃಂದದಿ ಬಂಧಿಸಿಹೆ ಜಗವೆಲ್ಲ ವಿಷ್ಣುವೆ-ಛಂದಬೃಹತೀಪತಿಯೆ ನೀನೈ ನಾಡಿ ಮೆರೆಯುವ ಇಂದಿರಾಪತಿ ಕೃಷ್ಣವಿಠಲನೆ-ನಿಂದು ತೋರುತ ನಿನ್ನ ರೂಪವ 5
--------------
ಕೃಷ್ಣವಿಠಲದಾಸರು
ಶ್ರೀಹರಿ ಸಂಕೀರ್ತನೆ ಪತಿತ ಪಾವನ ಗೋವಿಂದ ನಮ್ಮ ಪದುಮದಳಾಕ್ಷ ಸದಾನಂದ ಪ ಸತಿಪತಿ ನುತ ಸಾರ್ವಭೌಮ ಸು ವೃತಾ ಚರಣ ಘನ ರಾಜಿತ ಸುಂದರ ಅ.ಪ ಧೀರನಮೋ ಸುವಿಚಾರ ನಮೋ ಯದುವೀರ ನಮೋ ರಜದೂರ ನಮೊ ಮಾರನಮೋ ಗಂಭೀರ ನಮೊ ಭವಹಾರ ನಮೋ ದಧಿ ಚೋರ ನಮೊ 1 ಜನನ ಮರಣ ಜರ ರಹಿತ ನಮೋ ಪಾವನ ಪದ ಪಂಕೇರುಹ ನಯನ ನಮೋ ಮನ ವಚನಕೆ ಸಿಗದ ನಿಮಿಷ ಪತಿ ನಿನ್ನನೆ ಬೇಡುವೆ ಪೊರೆಯೆನುತ ಕರಮುಗಿದು 2 ಶೌರಿ ಶುಭ ನಾಮ ಭಕ್ತ ಜನ ಹಿತಕಾರಿ ಸುತ್ರಾಮ ಅನುಜ ನಿ ಸ್ಸೀಮ ಮಹಿಮ ಶಿರಿಧಾಮ ಅನಘ ನಮೊ 3 ಅನ್ಯನೆ ನಾ ನಿನ್ನಗೆ ದೇವ ಸಾಮಾನ್ಯನೆ ಅಭಿಮನ್ಯುನ ಮಾವಾ ಇನ್ನೆನೆನ್ನದೆ ನಿನ್ನಿಂ ಲಭಿಸಿದ ನುಣ್ಣುವ ಯನ್ನನು ಮನ್ನಿಸದಿರುವರೆ 4 ಹಿರಿಯರ ದಯವಿರುವುದು ಸರೆ ನೀ ಪೊರೆವಿ ಬಿಡದೆ ಯಂಬೋದು ಖರೆ ಸ್ವರಸ್ವರ ಘಸಿದಾಲ್ಪರಿದ ಮೇಲೆ ಸುಧೆ ಗರಿವರ ತೆರ ಚರಿಪುದು ಧರವೆ 5 ದಾಸರ ಪೊರೆಯಲು ದಾಶರಥೇ ಅಮಿತ ಮತೆ ಶ್ರೀಶಾನಿಮಿತ್ಯ ಬಂಧುಯೆನಿಸಿ ಉದಾಸಿಸೆ ಆಗಮ ರಾಶಿಗೆ ಶೋಭವೆ 6 ಘಾಸಿಗೊಳಿಸುವರೆ ಸೈಸೈಸೈ ನೀ ನೀಶನಾದದಕೆ ಫಲವೇನೈ ಪೋಷಕ ನೀನೆಂದಾಸಿಸಿದವರನು ನೀ ಸಲಹದೆ ಬರೆ ಸೋಸಿಲಿ ಮೆರೆವರೆ 7 ಧೃವನ ಪೊರೆದ ಬಲುವೇನಾಯ್ತೈ ಉದ್ಧವಗೆ ವಲಿದ ದಯ ಏಲ್ಹೊಯತೈ ಬವರದೊಳಗೆ ಪಾಂಡವರ ಕಾಯ್ದ ಮತಿ ಸವಿಯುತೆ ಪವನಪಸವಿದ ಸತತ ಸುಖ 8 ಘನ್ನ ಕರುಣಿ ನೀ ನಹುದೇನೊ ಆಪನ್ನ ರಾಪ್ತ ನೀ ನಿಜವೇನೋ ಸೊನ್ನೊಡಲಾಂಡಗ ನೀನಾದರೆ ಗತ ಮನ್ಯುನಾಗಿ ಜವ ನಿನ್ನನೆ ತೋರಿಸು 9 ತಂದಿನ ಪಾಲಿಸಿ ಮಗನನ್ನು ಬೇಕೆಂದು ಕೊಂದ ಕೃಷ್ಣನೆ ನೀನು ತಂದು ತೋರೊತವ ಸುಂದರ ಪದಯುಗ10 ಕಂದುಗೊರಳನುತ ಪೊರೆಯೆಂದು ಬಲು ವಂದಿಸಿದರು ತ್ವರ ನೀ ಬಂದು ಕಂದನ ಕರದ್ಯಾಕೆಂದು ಕೇಳ್ದದಕೆ ನೊಂದು ಬಿಡಿ ನುಡಿ ಗಳೆಂದೆನು ಕ್ಷಮಿಸೈ 11 ಬಲು ಮಂದಿನ ಸಲಹಿದಿ ನೀನು ಅವರೊಳಗೆ ಓರ್ವನಾನಲ್ಲೇನೊ ನೆಲೆಗಾಣದೆ ತವ ಜಲಜ ಪಾದ ಹಂಬಲಿಸುವರರ್ಥವ ಸಲಿಸದೆ ಬಿಡುವರೆ 12 ಬೇಡಿಕೊಂಬುವದೊಂದೆ ಬಲ್ಲೆ ಅದುಕೂಡಾ ತಿಳಿದು ನೋಡಲು ಸುಳ್ಳೆ ಬೇಡಿ ಬೇಡಿಸುವಿ ಮಾಡಿ ಮಾಡಿಸುವಿ ರೂಢಿಪತಿ ನೀನಾಡಿದ ನಾಡುವೆ 13 ನಾಗಶಯನ ನೀ ಬದುಕಿರಲು ಎನಗಾಗ ಬೇಕೆ ಕಲಬಾಧೆಗಳು ಸಾಗರಾಂಬರಪ ಸುತನಿಗೆ ಪುರ ಜನ ಬಾಗದೆ ಅಣಕಿಸಿಧಾಂಗಲ್ಲವೆ ಇದು 14 ಕರೆದರೆ ಬರುವೆನು ನಿನ್ನಡಿಗೆ ಧಿ ಕ್ಕರಿಸಲು ಮರುಗುವೆ ಮನದಾಗೆ ನಿರ್ವಿಣ್ಯನು ಪರತಂತ್ರನು ನಾನಿ ನ್ನೆರಳಲ್ಲವೆ ಮದ್ಗುರುವರ ವರದಾ 15 ಕಲ್ಲಿನ ರೂಪದಿ ಪೂಜಿಯನು ಗೊಳ್ಳುವ ಬಗೆ ನಾನೊಲ್ಲೆ ನಿನ್ನ ಶಿರಿ ನಲ್ಲೆ ಸಹಿತ ಬಂದು ನಿಲ್ಲೊ ಅರ್ಚಿಸುವೆ 16 ಕಣ್ಣಲಿ ತವದರ್ಶನ ಅಮೃತ ಭವ ತ್ರಾತಾ ಘನ ಕರುಣಿ ಬಾರೆನೆ ಬರುವೆನು ಎಂದೆನ್ನುವ ಬುಧ ನುಡಿ ನನ್ನಿಯೆನ್ನುವೆನು 17 ಭಿಡೆಯ ಬಾರದೆ ಬಲು ಘನ್ನಾ ನಾನುಡಿಯು ವಡ್ಡಿ ಬೇಡಿದರನ್ನ ಕೊಡಗೈಯವನಿಗೆ ಲೋಭವು ಎಲ್ಲಂದಡರಿತು ನುಡಿ ನುಡಿ ಕಡಲಜಳೊಡೆಯನೆ18 ನ್ಯಾಯಕೆ ಅಧಿಪ ನೀನೆ ಜೀಯಾ ಅನ್ಯಾಯಕೆ ಪೇಳುವರಾರೈಯ್ಯ ಮಾಯವೆಂಬೊ ಘನ ಘಾಯವುಎನ್ನನು ನೋಯಿಸುತಿದೆ ಜವಮಾಯಿ ಸುಭೀಷಿಜನೆ 19 ವರುಣಗೆ ವಾರಿಯು ನೀನಯ್ಯ ದಿನ ಕರನಿಗೆ ಮಿತ್ರನು ನೀನಯ್ಯ ಸುರಪಗೆ ಇಂದ್ರನು ಉರಗಕೆ ಶೇಷನು ಸರ್ವವು ನೀನೆಂದರಿತೆನು ಕರುಣಿಸು 20 ಹನುಮಗೆ ಪ್ರಾಣ ಮೂರೊಂದು ಆನನನಿಗೆ ವೇಧನು ನೀನಂದು ಮನಸಿಗೆ ನೀ ಮನ ಜೀವಕೆ ಜೀವನ ಎನುತ ಅರಿದು ನಮೊ ಎನ್ನುವೆ ಕರಮುಗಿದು 21 ಮೂಗಣ್ಣಗೆ ರುದ್ರನು ನೀನೆಧರೆ ಆಗಸ ಸಾಗರ ಧಾರಕನೆ ಶ್ರೀ ಗುರು ರಘುಪತಿ ರಾಗ ಪಾತ್ರ ಭವ ನೀಗದೆ ಬಿಡುವರೆ 22 ಪದುಮನಾಭ ನಿನ್ನನು ಕುರಿತು ನಾ ನೊದರುವ ನುಡಿಗಳು ಚಿತ್ರವತು ವಿಧಿಪತ್ರವನಾಂತು ನಿನ್ನ ಪಾದ ವದಗಿಸದಲೆ ಬರೆ ಪದವೆನಿಸಿದವೆ 23 ಸ್ತವನಕೆ ವಲಿಯದೆ ಇರೆ ನಮನ ಗೈಯುವೆ ಇಕೊ ನೋಡೆ ದಾಸ್ಯತನಾ ಅವನಿಪ ಸರ್ವಕೆ ವಲಿಯದೆ ಇರೆ ಬೈಯುವೆ ಬಡಿಯುವೆ ಸಿಕ್ಕರೆ ಸೆರೆ ಪಿಡಿಯುವೆ 24 ಚೋರನೆ ನೀ ನಡಗಿದೆಯಾಕೆ ಸ್ಮøತಿ ದೂರನೆ ಎನ್ನನು ಮರಿವದೇಕೆ ಆರು ನಿನಗೆ ವೈಯಾರವು ಈ ಪರಿ ಕಾರುಣ್ಯದಿ ಕಲಿಸಿದರೋ ಕರಿವರದಾ 25 ಮರೆದಿಯ ನೀ ಕನಿಕರ ಬಡುವ ಸ್ಥಿತಿ ನೀ ಜರದರೆ ನಮಗಿನ್ನೇನು ಗತಿ ಪರಿಪರಿ ವರಲು ವರಲಿ ದಯಮಾಡದೆ ಇರವದು ನಿನ್ನಗೆ ಮರಿಯಾದಿಯೆ ಹರಿ 26 ರೂಪ ತೋರಲೆನ್ನುವಿಯಾ ಆಹದೆ ಪೇಳಲೊ ಹೇ ವಿಗತಾಗಭಯ ಪಾಪಬಾರದೆ ಈ ಪರಿಯನ್ನನು ನೀ ಪಿಡಿಸೆ ಗತತಾಪ ಶ್ರೀಪ ಹರಿ 27 ಸುರತನು ಸಾಕದೆ ಬಿಟ್ಟವಗೆ ತನ್ನ ಸತಿಯಳ ಖತಿಯೊಳಗಿಟ್ಟವಗೆ ಕ್ಷಿತಿಯರು ಏನೆನ್ನುವರು ಮನದೊಳಗೆ ಪತಿ ಯೋಚಿಸಿ ಹಿತಗೈಯನ್ನೊಳು 28 ಶಿರಿಗೋವಿಂದ ವಿಠಲ ಪಾಹಿ ಗುರುವರ ರಘುಪತಿನುತ ಪದ ಪಾಹಿ ಬರೆ ಮಾತಲ್ಲವೊ ತ್ವರ ತವ ಪಾದ ಸಿರಿ ಸುರರಾಣೆ 29
--------------
ಅಸ್ಕಿಹಾಳ ಗೋವಿಂದ
ಶ್ರೀಹರಿಸ್ತುತಿ ಅಕ್ಕಾ ನೋಡೆ ಚಿಕ್ಕ ಕೃಷ್ಣನೂ ಪೊಕ್ಕಿಹ ರಿಂದಾವನಕೀಗ ಬಾ ಪ. ಸಿಕ್ಕನೆ ಪೋಗದಿರೆ ಲಕ್ಕುಮಿಯರಸ ದಕ್ಕಿಸಿಕೊಳ್ಳೆವೆ ಸಿಕ್ಕದೆ ಬಿಟ್ಟಾರೆ ಅ.ಪ. ಸದ್ದು ಮಾಡದೆ ಬನ್ನಿ ಇಲ್ಲಿದ್ದವರೆಲ್ಲ ಮುದ್ದು ಶ್ರೀ ಕೃಷ್ಣನ ಬಳಸುವ ಬಾರೆ ವಾಹನ ಎದ್ದು ಅಭಯನೀವ ಶುದ್ಧ ಕೋಲಾಟಕೆ ಸಿದ್ಧನಾಗುವನೆ 1 ನವನೀತ ಚೋರನ ರವಿಶತಕೋಟಿ ಕಿರೀಟ ಪ್ರಕಾಶ ಜವದಿ ಪೊಳೆವ ಗೋವಲಯಪಾಲನ ಅವನೀಧವನೊಲಿಸಲು ಪೋಗುವ ಬಾ 2 ಆರಿಗೂ ಸಿಗನೆ ನಾರದ ವಂದ್ಯನೆ ತಾರಕೆಗಳ ಮಧ್ಯ ಚಂದ್ರನಂತಿಹನೆ ನಾರಾಯಣ ಶ್ರೀ ಶ್ರೀನಿವಾಸನ ಸೇರಿ ಸುಖವ ಸುರಿಸಲು ತವಕದಿ 3
--------------
ಸರಸ್ವತಿ ಬಾಯಿ
ಶ್ರೀಹರಿಸ್ತುತಿ ಅಪ್ಪವೆಂಕೋಬನ ನೇತ್ರದಲಿ ನೋಡಿ ಪವಿತ್ರಳಾದೆನೋ ಇಂದಿಗೆ ತಪ್ಪುಗಳೆಲ್ಲ ನಿನಗರ್ಪಿಸುವೆ ನಾನೀಗ ಒಪ್ಪಿಕೋಬೇಕೋ ತಿಮ್ಮಪ್ಪ ಕರುಣಾನಿಧಿಯೆ ಹೆದÀರದೆ ಭೃಗುಋಷಿಯು ಒದೆಯೆ ಪಾದಗಳಿಂದ ಎದೆಯ ಮೇಲಿರುವ ಲಕ್ಷ್ಮಿ ಕದನಮಾಡುತವೆ ಕೊಲ್ಲಾಪುರಕೆ ನಡೆತರಲು ಒದಗಿ ವೈಕುಂಠ ಬಿಟ್ಟು ಯದುನಾಥ ಯಾರಿಲ್ಲದಂತೆ ಗುಡ್ಡವ ಸೇರೆ ಇದು ನಿನಗೆ ಸದನಾಯಿತೊ ದೇವ 1 ಹುತ್ತಿನೊಳಗಡಗಿ ನೀ ಗುಪ್ತದಿಂದಿರುತಿರಲು ಉತ್ತಮ ಗೋವು ಬಂದು ನಿತ್ಯದಲ್ಲಿ ಕ್ಷೀರವನು ಕರೆಯೆ ಗೋವಳನಿಂದೆ ನೆತ್ತಿಯನೊಡೆದುಕೊಂಡು ಸಿಟ್ಟಿನಿಂದಲಿ ಚೋಳರಾಯಗೆ ಶಾಪವನು ಕೊಟ್ಟು ಕಿರೀಟವನು ಇಟ್ಟು ಮೆರೆಯುವ ದೇವ 2 ಮಾಯಾರಮಣನೆ ನಿನ್ನ ಗಾಯದೌಷಧಕ್ಹೋಗಿ ಭೂರಮಣನ್ವರಾಹನಿಂದ ನೂರುಪಾದ ಭೂಮಿಕೊಟ್ಟರೆ ಸಾಕೆಂದು- ಪಾಯದಿಂದದನ್ವ್ಯಾಪಿಸಿ ತಾಯಿ ಬಕುಳಾದೇವಿಯಿಂದ ಪೂ ಜೆಯಗೊಂಬೊ ಶ್ರೀಯರಸು ನಿನಗೆ ಸರಿಯೆ ದೇವ 3 ನಾಟಕಧಾರಿ ಕಿರಾತರೂಪವ ಧರಿಸಿ ಬೇಟೆಗೆನುತಲಿ ಪೋಗಲು ತೋಟದಲಿ ಚೆಲ್ವೆ ಪದ್ಮಾವತಿಯ ಕಡೆಗಣ್ಣ ನೋಟದಲಿ ಮನಸೋಲಿಸಿ ಬೂಟಕತನದಿ ಜಗಳಾಟವನ್ನೆ ಮಾಡಿ ಪಾಟುಬಟ್ಟು ಕಲ್ಲಲೇಟುತಿಂದೆಯೋ ದೇವ 4 ಗದಗದನೆ ನಡುಗುತಲಿ ಕುದುರೆಯನು ಕಳಕೊಂಡು ಪದ್ಮಾವತಿ ವಾರ್ತೆಯನ್ನು ಬಳಿಯ ಲಿದ್ದ ಬಕುಳಮಾಲಿಕೆಗೆ ಬೋಧಿಸಿ ಕಳಿ ಸಿದಾಕಾಶನಲ್ಲಿ ಚದುರಮಾತಿನ ಚಪಲ ಕೊರವಂಜಿ ನೀನಾಗಿ ಕಣಿಯ ಹೇಳಲು ಎಲ್ಲಿ ಕಲಿತೆಯೊ ಮಹದೇವ5 ಬಂಧುಬಳಗವ ಕೂಡಿ ಭಾರಿ ಸಾಲವ ಮಾಡಿ ಕರ ವೀರದಿಂದೆ ಅಂಡಲೆದು ಕರೆಸಿ ಕಾಣುತಲಿ ಲಕ್ಷ್ಮಿಯನಪ್ಪಿ ಕೊಂಡು ಪರಮ್ಹರುಷದಿಂದ ಮಂದಗಮನೆಯೆ ನಿನ್ನ ಮಾತುಲಾಲಿಸಿ ಮಾಡಿ ಕೊಂಡೆ ಪದ್ಮಾವತಿಯ ಅಂದೆಯೊ ಎಲೆ ದೇವ 6 ಆಕಾಶರಾಜ ಅನೇಕ ಹರುಷದಿ ಮಾಡೆ ತಾ ಕನ್ಯಾದಾನವನ್ನು ಹಾಕಿದ ರತ್ನಮಾಣಿಕ್ಯದ ಕಿರೀಟವನು ಬೇಕಾದಾಭರಣ ಭಾಗ್ಯ ಸಾಕಾಗದೇನೊ ಬಡವರ ಕಾಡಿ ಬೇಡುವುದು ಶ್ರೀಕಾಂತ ನಿನಗೆ ಸರಿಯೆ ದೇವ 7 ಹೇಮಗೋಪುರದಿ ವಿಮಾನ ಶ್ರೀನಿವಾಸ ದೇವರನು ನೋಡಿ ನಮಿಸಿ ಕಾಮಿಸಿ ಕಂಡೆ ಹೊನ್ನ್ಹೊಸ್ತಿಲು ಗರುಡ ಗಂಬದ ಸುತ್ತ ಪ್ರಾಕಾರವೊ ಸ್ವಾಮಿಪುಷ್ಕರಣಿಯಲಿ ಸ್ನಾನ ಪಾನವ ಮಾಡಿ ನೋಡಿದೆನು ನಿನ್ನ ಭಕುತರ ದೇವ 8 ಪÀನ್ನಗಾದ್ರಿ ವೆಂಕಟನ್ನ ರಥ ಶೃಂಗಾರ ವರ್ಣಿಸಲಳವೆ ನಮಗೆ ಕಣ್ಣಾರೆಕಂಡೆ ಗರುಡೋತ್ಸವದಲಂಕಾರ ಇನ್ನೆಲ್ಲು ಕಾಣೆ ಜಗದಿ ಎನ್ನ ಕಿವಿಗಾನಂದವೊ ದೇವ 9 ಪಾದದಲ್ಲೊಪ್ಪೋ ಪಾಗಡ ರುಳಿ ಕಿರುಗೆಜ್ಜೆ ಮೇಲಲೆವೊ ಪೀತಾಂಬರ ಮಾಲೆ ಶ್ರೀವತ್ಸದ್ಹಾರ ಮೇಲಾದ ಸರಿಗೆ ಸರ ಪದಕವೊ ಕಮಲ- ದಳಾಯತಾಕ್ಷನ ನೋಡಿದೆ ದೇವ 10 ಕರಗಳಲ್ಲಿಟ್ಟು ಕಂಕಣ ಕಡಗ ಭುಜಕೀರ್ತಿ ವರ ಶಂಖ ಚಕ್ರಧಾರಿ ಗಿರಿಯ ಭೂವೈಕುಂಠವೆಂದು ತೋರುತ ನಿಂತ ಶಿರದಿ ಕಿರೀಟ ಧರಿಸಿ ಬಿಳಿಯ ತ್ರಿನಾಮ ಭೀಮೇಶಕೃಷ್ಣನ ಮುಖದಿ ಹೊಳೆವ ಮೂರ್ತಿಯ ನೋಡಿ ಹೇ ದೇವ11
--------------
ಹರಪನಹಳ್ಳಿಭೀಮವ್ವ
ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸಖಿ ಕೇಳೇ ಇನ್ನು ಹರುಷದ ಮಾತಾ| ಸಕಲ ಜನರಿಗೆ ಆನಂದ ವೀವಾ| ಪ ಇಂತೆಂದು ಹರಿಯು ನಾನಾಪರಿ ವಿರಹದ| ಸಂತಾಪ ಮಾತವ ನುಡಿಯಲು ಕೇಳಿ| ಅಂತರಂಗದ ಕೋಪವಬಿಟ್ಟು ಎದ್ದು|ಅ| ನಂತನ ಬಿಗಿದಪ್ಪಿದಳು ಅಂಬುಜಾಕ್ಷಿ 1 ಲಲಿತಾಂಗಿ ಆಲಿಂಗನವ ನೀಯೇ ಹರಿಗಾಗಾ| ಒಲಿದು ಉಕ್ಕೇರಿತು ಆನಂದ ಉದಧಿ| ಸತಿ ಮಾತಾಡುವ ದೇವ ಶ್ರೀ| ಲಲನೇಯಾ ಸದ್ಬುವನೆಯಾ ಪೂರಿಸಿದನು 2 ಈ ಪರಿಯಾಡಿದ ಶ್ರೀ ಹರಿ ಚರಿತೆಯಾ| ನಾ ಪೇಳಿದುದು ಭಾವ ಭಕುತಿಯಲಿಂದಾ| ಆ ಪದಿಂದಲಿ ಕೊಂಡಾಡುವ ಮನುಜನ| ತಾ ಪಾಲಿಸುವಾ ಮಹಿಪತಿ ಸುತ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂಗಸುಖವ ಬಯಸಿ ಬದುಕಿರೋ ರಂಗವಲಿದ ಭಾಗವತರ ಪ ಸಂಗಸುಖವ ಬಯಸಿ ಬದುಕಿ ಭಂಗಪಡಿಪ ಭವವ ನೂಕಿ ಹಿಂಗದೇ ನರಸಿಂಗನನ್ನು ಕಂಗಳಿಂದ ಕಾಣುತಿಹರ ಅ.ಪ. ಪುಟ್ಟಿದಾರಭ್ಯ ಪರಮ ವೈಷ್ಣವಾಧ್ಯಕ್ಷರೆನಿಸಿ ನಿತ್ಯ ಮುದ್ದು ಕೃಷ್ಣ ಕೀರ್ತನೆಯನು ಪಾಡುತ ಕಾವ್ಯಕರ್ಮ ಬಿಟ್ಟು ಭಕ್ತಿಯನೆ ಮಾಡುತ ಮಧ್ವಮತವ ಪುಷ್ಟಿಗೈಸಿ ಖಳರ ಕಾಡುತ ಬಂದ ಲಾಭ ನಷ್ಟ ತುಷ್ಟಿಗಳಿಗೆ ಒಡಂಬಟ್ಟ ಬಗೆಯ ಪೇಳಲೆಷ್ಟು 1 ಭೂತದಯಾಶೀಲರಾದ ನೀತ ಗುರು ಜಗ- ನ್ನಾಥ ವಿಠಲಾಂಕಿತವನು ಪಡೆದು ಸಂಗೀತ ವೃತ್ತ ಪದ ಸುಳಾದಿಯ ಪೇಳಿ ಪ್ರೇ- ಮಾತಿಶಯದಿ ಒಲಿಸಿಕೊಂಡು ಮಧುವಿರೋಧಿಯ ಒಲಿಸಿಕೊಂಡ ಜಾತರಾಗಿ ಜವನಬಾಧೆಯ ಬಯಲು ಮಾಡಿ ಖ್ಯಾತರಾಗಿಹರು ಪುಸಿಯ ಮಾತಿದಲ್ಲ ಮರೆಯಸಲ್ಲ 2 ಮೇದಿನಿಯೊಳಗುಳ್ಳ ಗಂಗಾದಿತೀರ್ಥ ಸತಿಗಳಿವರ ಕಾದುಕೊಂಡಿಹರು ಬಿಡದೆ ಸ್ವಾದಿರಾಜೇಂದ್ರರ ಪ್ರ- ಸಾದದಿಂದ ಹರಿಕಾಥಾಮೃತ ಸಾರತತ್ವ ಸಾಧುಜನರಿಗಾಗಿ ಪ್ರಾಕೃತ ಪದ್ಧತಿಯಲಿ ಸಾದರದಲಿ ಪೇಳಿ ದುಷ್ಕøತ ದೂರಮಾಡಿ ಮೋದಿಸುವರಿಗೆಣೆಗಾಣೆ ಶ್ರೀದವಿಠಲನಾಣೆ 3
--------------
ಶ್ರೀದವಿಠಲರು
ಸಣ್ಣವನ ಬಿನ್ನಪವ ಸಲಿಸಬಹುದಯ್ಯ ಬಣ್ಣಿಸಲೊಶವಲ್ಲ ದಯವುಳ್ಳ ದೊರೆಯೆ ಪ ನಿನ್ನ ಗುಣ ಸುರ ತರುವು ವನದಿ ಶುಕಾದಿಗ ಳುನ್ನತವಾಗಿಹವು ಉಚಿತವೇ ಸರಿಯು ಎನ್ನ ಮನ ಕೋಡಗವು ಅಡವಿಯನು ಬಿದ್ದದೆ ಇ ದನ್ನ ಅದರೊಳಗೆ ಇಡಬಹುದಯ್ಯ ಹರಿಯೆ 1 ಕಮಲಭವ ವಾಣಿ ಮುಖ ನಯನಗಳು ಎಂಬ ಮಹ ಕಮಲೋತ್ಪಲಗಳಿಂದ ಶೋಭಿಸುತಿಹ ವಿಮಲ ಲಾವಣ್ಯ ಸುಧಾಂಬುಧಿಯೊಳಿಡಿಸಯ್ಯ ಮಮ ನೇತ್ರ ಮೀನಗಳ ವಿಷಯ ಪಂಕದಿ ತೆಗಿಸು 2 ನಿಮ್ಮ ನಾಮಾಮೃತದ ಸೂರೆಯನು ಬಿಟ್ಟು ಶ್ರೀ ಭವ ಮುಖರ ಕೆರೆ ಕೋಡೇರಿಸುವಿ ತುತಿ ಚೂರ್ಣ ತೆಗೆದು ತೊಳೆದು ತುಂಬೊ ನಮ್ಮ ವದನ ಕರಡಗೆಯ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು