ಒಟ್ಟು 1294 ಕಡೆಗಳಲ್ಲಿ , 104 ದಾಸರು , 1007 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಟ್ಟು ನೆಂಟರ ಸೇರುವುದು ಬಹಳ ಕಷ್ಟಹುಟ್ಟೇಳು ಜನ್ಮಕ್ಕೆ ಇದು ಬೇಡ ಹರಿಯೆ ಪ.ಹರಿಯನಪ್ಪಲುಬಹುದು ಉರಿಯ ಮುಕ್ಕಲುಬಹುದುಉರುವ ಮಾರಿಗೆ ಗ್ರಾಸವಾಗಬಹುದುಸುರಿವ ಕೆಂಡದ ಮನೆಗೆ ಬರಿಮೈಯೊಳಿರಬಹುದುಧರೆಯೊಳಗೆ ದಾರಿದ್ರವಾರಿಗೂ ಬೇಡವೋ 1ವಿಷಯ ಕುಡಿಯಲುಬಹುದು ಇರಿದುಕೊಳ್ಳಲುಬಹುದುಹಸಿದ ಹುಲಿಬಾಯಿ ತುತ್ತಾಗಬಹುದುಹಸೆಗೆಟ್ಟು ಹೋದ ನಂಟಿರಲಿ ತಾ ಬಾಯನ್ನುಕಿಸಿಯಲಾಗದು ಕೊರಳ ಹಿಸುಕಿಕೊಳಬಹುದು 2ಕುಡುಗೋಲು ಪಿಡಿದು ಕೂಟಿಯಮಾಡಿ ಉಣಬಹುದುಒಡಲಾಸೆಗೊಲ್ಬುರಾಳಾಗಬಹುದುಒಡೆಯ ಶ್ರೀ ಪುರಂದರವಿಠ¯ ಸ್ಮರಣೆಯಲಿಬಡವನಾಗಿಯೇ ಬೇಡಿ ಉಣ್ಣಬಹುದು 3
--------------
ಪುರಂದರದಾಸರು
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು
ಕೋಲುಹಾಡುಕೋಲು ಕಾಮನ ಗೆದ್ದ ಕೋಲು ಮಾಯ್ಗಳನೊದ್ದಕೋಲು ಆನಂದಮುನಿ ಪಿಡಿದಿಹ ಕೋಲೆ ಪ.ತಮನೆಂಬುವನ ಕೊಂದು ಕಮಲಜನಿಗೆ ವೇದಕ್ರಮದಿಂದ ಕೊಟ್ಟು ಜಗವನು ಕೋಲೆಕ್ರಮದಿಂದ ಕೊಟ್ಟು ಜಗವನು ರಕ್ಷಿಸಿದವಿಮಲ ಶ್ರೀಮತ್ಸ್ಯಮನೆದೈವ ಕೋಲೆ1ಸುರಪನ ವಿಭವೆಲ್ಲ ಶರಧೀಲಿ ಮುಳುಗಿರೆಗಿರಿಗಹಿ ಸುತ್ತಿ ಕಡೆಯಲು ಕೋಲೆಗಿರಿಗಹಿ ಸುತ್ತಿ ಕಡೆಯಲುನಗಜಾರೆಧರಿಸಿದ ಶ್ರೀಕೂರ್ಮಮನೆದೈವ ಕೋಲೆ2ಹೊಂಗಣ್ಣಿನವನು ಭೂವೆಂಗಳನೆಳೆದೊಯ್ಯೆಮಂಗಳಮಹಿಮ ದಯದಿಂದ ಕೋಲೆಮಂಗಳ ಮಹಿಮ ದಯದಿಂದ ನೆಗಹಿದ್ಯಜ್ಞಾಂಗ ಶ್ರೀವರಾಹ ಮನೆದೈವ ಕೋಲೆ 3ಒಂದೆ ಮನದೊಳಂದು ಕಂದ ನೆನೆಯಲಾಗಬಂದವನಯ್ಯನ್ನೊದೆದನು ಕೋಲೆಬಂದವನಯ್ಯನ್ನೊದೆದನು ಅನಿಮಿತ್ತಬಂಧು ನರಹರಿಯು ಮನೆದೈವ ಕೋಲೆ 4ಎದುರಿಲ್ಲವೆನಗೆಂದು ಮದವೇರಿದವನ ತ್ರಿಪದ ಭೂಮಿ ಬೇಡಿ ಗೆಲಿದನು ಕೋಲೆಪದ ಭೂಮಿ ಬೇಡಿ ಗೆಲಿದಾ ತ್ರಿವಿಕ್ರಮಮುದದ ವಾಮನ ಮನೆದೈವ ಕೋಲೆ 5ಕುಜನರಳಿದು ಭಾಗ್ಯ ಸುಜನರಿಗೊಲಿದಿತ್ತನಿಜ ತಾತನಾಜÕ ಸಲಹಿದ ಕೋಲೆನಿಜ ತಾತನಾಜÕ ಸಲಹಿದ ಶುಭಗುಣದ್ವಿಜರಾಮ ನಮ್ಮ ಮನೆದೈವ ಕೋಲೆ 6ಕೌಸಲ್ಯೆ ಗರ್ಭದಿ ಜನಿಸಿದ ಕೃಪೆಯಲ್ಲಿಕೌಶಿಕಕ್ರತುವ ಕಾಯ್ದನು ಕೋಲೆಕೌಶಿಕಕ್ರತುವ ಕಾಯ್ದ ರಾವಣಾಂತಕಶ್ರೀ ಸೀತಾರಾಮ ಮನೆದೈವ ಕೋಲೆ 7ಗೋಕುಲದಲಿ ಬೆಳೆದುಪೋಕದನುಜರ ಅನೇಕ ಪರಿಯಲಿ ಸದೆದನು ಕೋಲೆ ಅನೇಕ ಪರಿಯಲಿ ಸದೆದ ಪಾಂಡವಪಾಲಶ್ರೀಕೃಷ್ಣ ನಮ್ಮ ಮನೆದೈವ ಕೋಲೆ 8ಮಿಥ್ಯಾವಾದಿಗಳಿಗೆ ಮಿಥ್ಯವನೆ ಕಲಿಸಿಸತ್ಯವಾದಿಗಳ ಪೊರೆದನು ಕೋಲೆಸತ್ಯವಾದಿಗಳ ಪೊರೆದನು ಅಜವಂದ್ಯಕರ್ತಬೌದ್ಧನು ಮನೆದೈವ ಕೋಲೆ9ಸ್ವಾಹಾ ಸ್ವಧಾಕಾರವು ಮಹಿಯೊಳಿಲ್ಲದಾಗೆಸುಹಯವೇರಿ ಕಲಿಯನು ಕೋಲೆಸುಹಯವೇರಿ ಕಲಿಯನೆಳೆದು ಕೊಂದಮಹಾಕಲ್ಕಿ ನಮ್ಮ ಮನೆದೈವ ಕೋಲೆ 10ಹತ್ತವತಾರದಿ ಭಕ್ತಜನರ ಹೊರೆದಮತ್ತಾವಕಾಲದಿ ರಕ್ಷಿಪ ಕೋಲೆಮತ್ತಾವ ಕಾಲದಿ ರಕ್ಷಿಪ ಪ್ರಸನ್ವೆಂಕಟಕರ್ತನ ನಂಬಿ ಸುಖಿಯಾದೆ ಕೋಲೆ 11
--------------
ಪ್ರಸನ್ನವೆಂಕಟದಾಸರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗಂಗಾಧರ ದೇವ ಜಯಗೀಷ ವ್ಯಾನಂಗಾರಿ ಗಿರಿಜಾಧವ |ಮಂಗಳ ಪ್ರದನೆ ಅಮಂಗಳ ಶೀಲ | ಭುಜಂಗ ರೂಪದಿ ಪಾಂಡು |ರಂಗ ಘಾಸಿಗೆಯಾದ ಪವೈಕಾರಿಕಾಹಂಕಾರ ತತ್ವದೊಡೆಯ, ನಾಕುಮೊಗನ ಕುಮಾರ |ಶ್ರೀಕಂಠ, ಸ್ಥಾಣು, ವಿಶ್ಖೋಜನಕ, ಚಂದ್ರಶೇಖರ, ಈಶಪಿನಾಕಿಭಕ್ತವತ್ಸಲ |ಶೋಕನಾಶಕ ಶಂಭು, ಪಶುಪತಿ, ಹೇ ಕರುಣಿ, ಸದ್ಗುಣ ಸುಖಾರ್ಣವ |ಪಾಕಶಾಸನ ಪ್ರಮುಖ ವಂದ್ಯ, ವಿಶೋಕ, ಎನ್ನಭಿಲಾಷೆ ಪೂರ್ತಿಸು1ಪ್ರಾಣನಂದನ ತೈಜಸಾಹಂಕಾರಾಭಿಮಾನಿ ಶ್ರೀಶುಕದೂರ್ವಾಸ|ಕ್ಷೋಣಿಸಂಧೃತ ಧನ್ವಿ, ದಾನವಾಂತಕ, ಶೂಲಪಾಣಿ, ಪ್ರಮಥಾಧಿಪ ಬಾಣವರದಯನ್ನ |ಮಾನನಿನ್ನದು ಚಕ್ರಿ ಪದಕಂಜರೇಣುತೋರಿಸು ತವಕದಿಂದಲಿ |ದ್ರೌಣಿ, ಶಿವ, ಪ್ರಣತ ಜನ ಸುಮನಸಧೇನು, ತವ ಪದ ಸಾರ್ವೆ ಸತತ 2ತಾಮಸಾಹಂಕಾರೇಶ ಸಂಕರ್ಷಣನಾ ಮಗನೇ ಕೊಡು ಲೇಸ ರಾಮನಾಮ ಮಂತ್ರ |ಪ್ರೇಮದಿ ಜಪಿಸುವ ಸ್ವಾಮಿ, ಅನಲ,ವಹ್ನಿಸೋಮಲೋಚನ ಹರ |ವಾಮದೇವ, ಕಪರ್ದಿ,ಭವಭಯ ಭೀಮ ಶ್ರೀ ಪ್ರಾಣೇಶ ವಿಠಲನ |ಪ್ರೇಮ ಪುಟ್ಟಿಸೋ ರೌಪ್ಯ ಪರ್ವತಧಾಮ ಶ್ರೀ ವಿರೂಪಾಕ್ಷ ಗುರುವೇ 3
--------------
ಪ್ರಾಣೇಶದಾಸರು
ಗಂಗಾಪಿತ ರಾಘವ ನಂಬಿದೆ ಶ್ಯಾಮ-ಲಾಂಗ ನಿನ್ನಯ ಪಾದವ ||ಮಂಗಳೆ ರಮಣ ಭುಜಂಗಧರಾರ್ಚಿತಾ |ನಂಗಜ ಜನಕ ಪಾಲಿಸಿಂಗಡಲೊಡೆಯನೆ ಪಶಫರ, ಕಮಠ,ಕೋಲನೃಹರಿ ಬಾಲ |ನೃಪಕುಲ ಪವನ ವ್ಯಾಲ ||ವಿಪಿನಸಂಚರಾ ಕೃಷ್ಣ ವಿಪುಳಾಬುದ್ಧಕಲ್ಕಿ |ವಪುಧರ ಅನಿರುದ್ಧಕೃಪಣವತ್ಸಲ ಸ್ವರ್ಪಾ- ||ದಪನೆಹರಿಕಾಶ್ಯಪಿಯೊಳಗೆ ಸುರ ರಿಪುಹ | ಶಿವನ ಕ |ರಿಪನ ನರಪತಿ ದ್ರುಪದ ನಂದನೆಯ ಪೊರೆದೀಶ್ವರ |ಕಪಟನಾಟಕ ಕಪಿಲ ರೂಪಿ 1ಕುರು ಕುಲೋತ್ತಮನಾಗಾರದೊಳಗೆಕ್ಷೀರ|ಸುರಿದೆ ಗೋಕುಲ ವಿಹಾರ ||ವರವಿಪ್ರಜರ ತಂದೆ ಹರಚಾಪಹನನಈ |ಶರೀರವೇ ನಿನ್ನದು ಸರಿಬಂದದನು ಮಾಡೋ ||ಕರೆಕರೆಯ ಭವಶರಧಿಯೊಳು ಬಾ- |ಯ್ದೆರೆವೆ ರಕ್ಷಿಸುವರನು ಕಾಣೆನೊಬ್ಬರ ನಿನ್ನುಳಿ- ||ದುರಗ ಶಯನನೇ ಧರಿಜವಲ್ಲಭಕರುಣಿ ಕೇಶವ2ಜನನ ಮರಣ ದೂರ ಇಂದ್ರಾನುಜ |ಮುನಿ ಗೇಯಾ ಚಲಧರ ||ವನರುಹಭವಸಂಕ್ರಂದನವಂದ್ಯ ವೀತ ಆ |ವನಿ ಮುಖ ತನ್ಮಾತ್ರಾಗುಣ ಪ್ರಾಣೇಶ ವಿಠಲ ||ಪ್ರನಮಿತಾಘ ಕಕ್ಷಾನಲ ಕಂದರ್ಪನ ಪಿತನೆ |ನಿನ್ನನುಗರೊಳಗಿಡೋ ಮಣಿಯೇ ಅನ್ಯರಿ ||ಗನಘ ಪಾಲಿಪುದನವರತ ಯನ್ನನು ಬಿಡದಲೆ 3
--------------
ಪ್ರಾಣೇಶದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಗುರುವಿನ ಮರೆಯಾದಿರಮ್ಮ ಪಅಂಕಿತವನೆ ಇತ್ತಸಿರಿ ಗುರುವಿನ ನೀನುಮನದೊಳು ನೆನೆಯಬÉೀಕಮ್ಮ ತಂಗಿ ಅ.ಪಗುರುವಿನ ಮರೆತರೆ ನಿನಗೆ ಥರಥರ ನರಕಥರಥರನರಕವ ಅನುಭವಿಸಬೇಕಮ್ಮ ತಂಗೀ 1ಜ್ಞಾನಾನಂದಾತ್ಮಕನಾದ ಶ್ರೀಹರಿಯನ್ನುಗುರುವಿನದ್ವಾರಾ ನೀ ತಿಳಿ ಮಂಗಳಾಂಗಿ 2ಗುರುವೆ ತಂದೆಯು ಬಂಧು ಬಳಗಾವೆಂದು ಅಕ್ಕರೆಯಿಂದ ನೀ ನೆನೆಯಬೇಕಮ್ಮಾ 3ಗುರುವಿನ ಸೇವೆಯ ಮಾಡುತ್ತ ಗುರುಗಳಕೃಪೆಗೆ ಪಾತ್ರರಾಗಿ ಬಾಳಬೇಕಮ್ಮಾ 4ಮಂಗಳ ಮಹಿಮ ಶ್ರೀ ತಂದೆಮುದ್ದುಮೋಹನ್ನವಿಠಲ ದಾಸರೆನಿನಗೆ ಸದ್ಗುರು ಎಂದು ತಿಳಿಯಮ್ಮ ತಂಗಿಈ ಮಾತು ಪುಸಿಯಲ್ಲ ಮರೆಯಬೇಡಮ್ಮ ತಂಗೀ 5
--------------
ತಂದೆ ಮುದ್ದುಮೋಹನ ವಿಠಲರು
ಗುರುವೇ ಶ್ರೀ ವಸುಧೇಂದ್ರ ಕರಜಾತ ಸದ್ಗುಣಸಾಂದ್ರ |ವರದೇಂದ್ರರಾಯ ಜಿತೇಂದ್ರ | ಮರುತ ಮತಾಬ್ಧಿ ಚಂದ್ರ ||ಶರಣು ನಿನ್ನಯ ಪದಸರಸಿಜಯುಗಗಳಿಗೆ |ಎರವುಮಾಡದೆ ಕಾಯೊಪರಮದಯಾಳು ಪದಾತಾಧರಿತ್ರೀ ಸುತೀನಾಥ ಶ್ರೀರಘುಪತಿ |ದೂತ ಭುವನದೋಳ್ ಖ್ಯಾತಿಯೋ ತವ ಸತ್ಕೀರುತಿ ||ಭೂತ ಭಯ ರೋಗವಾ ತಂದಟ್ಟುವಾ |ನಾಥ ರಕ್ಷಕ ಜಲಜಾತಾಂಬಕನೇ 1ದೋಷರಹಿತ ಯನ್ನಕ್ಲೇಶಹಿಂಗಿಸೊ ಸಂ |ನ್ಯಾಸಶಿರೋಮಣಿಯೆ ಮುನ್ನಾ ಆಶೆ ಬಿಡಿಸಿ ನಿನ್ನ ||ದಾಸನೆನಿಸಿಕೋ ಉದಾಸಿಸದಲೆ ಬಹು |ಘಾಸಿಮಾಡದೆ ರವಿಭಾಸ ಗುಣಾಢ್ಯ 2ಏನಾದರೇನು ಕೀಳು ಮಾನವರಾಶ್ರಯ ಧರೆಯೊಳು |ನಾನಿಚ್ಛಿಸೆನೊ ಕೃಪಾಳುಮಾನನಿನ್ನದು ಕೇಳು ||ನೀನೆವೆ ಗತಿಯೆಂದು ಧ್ಯಾನ ಮಾಡುವರಿಗೆ |ಪ್ರಾಣೇಶ ವಿಠಲನ ಕಾಣಿಸಿಕೊಡುವಿ 3
--------------
ಪ್ರಾಣೇಶದಾಸರು
ಚಂಚಲಾಕ್ಷಿ ಕೇಳ್ ಪಂಚಬಾಣನ |ಮಿಂಚಿನಂಥ ಶರ ತಾಳಲಾರೆ ನಾನು |ಕಂಚುಕಿಯನು ನಿನಗೊಂಚಿಸದೀವೆನು |ಕೊಂಚ ಮುಖ ತೋರಿನ್ನು ಚಂಚಲಾಕ್ಷಿ 1ಜಾಣೆ ನಿನ್ನನು ಕಾಣೆದೆನ್ನಯ |ಪ್ರಾಣನಿಲ್ಲದೇನೇ ||ತ್ರಾಣಗುಂದಿತು ಪ್ರಾಣನಾಯಕಿ |ಕಾಣೆ ನಿನ್ನ ಗಂಡನಾಣೆ || 2ಪಟ್ಟೆ ಸೀರೆಯನ್ನುಟ್ಟುಕೊಳ್ಳೆ ನಿನ್ನ |ತೊಟ್ಟಿಕೊಳ್ವೆ ಬಾರೆ ||ಗಟ್ಟಿಗೆ ನಿನ್ನಯ ಗುಟ್ಟನರಿತೆನು |ಗಟ್ಟಿ ಬಳೆಯ ಕೊಡುವೆ ನೀರೆ 3ಮಂದಗಾಮಿನಿ ಸುಂದರಾಂಗಿಯೆ |ಬಂದು ಎನ್ನ ಕೂಡೆ ||ಚಂದದಿಂದ ಗೋವಿಂದನೊಡನೇ ಬೇ |ಗೊಂದು ಮಾತನಾಡೇ ||ಹ|| 4
--------------
ಗೋವಿಂದದಾಸ
ಜಯ ಜಯವೆಂದರುಸುರರುಇಂಥ ವೈಭವದಾಟ ಕಾಣುತಲೆಅಮರರುಪ.ಗಂಧದ ಓಕುಳಿಯನ್ನೇಕಲೆಸಿತಂದು ಮಂದಗಮನೆಯರೆಲ್ಲ ಜೀಕುಳಿತುಂಬಿಇಂದಿರೇಶನ ಮ್ಯಾಲೆ ಸುರಿಸಿಆನಂದ ದಿಂದಲೆ ಕೈ ಹೊಡೆದು ಚಪ್ಪಳಿಸಿ 1ಕೇಶರ ದೋಕುಳಿಯತುಂಬಿಸರ್ವೇಶನೀ ಚಿಮ್ಮುವ ಕುಚಗಳ ಅಪ್ಪಿಕೊಂಬೆಈ ಸುಖ ನೀ ಎಲ್ಲೆ ಕಾಂಬೆಆಭಾಸ ಮಾಡಲುಅದು ನೀ ಒಪ್ಪಿಕೊಂಬೆ 2ಬತ್ತಲೆ ಜಲವ ಪೊಕ್ಕಿಹರುಸೀರೆ ಎತ್ತಿಕೊಂಡ್ಹೋಗಿ ಪುಗಡೆನ್ಹಾಕುವರುಎತ್ತಿಕರವಜೋಡಿಸುವರುಮರವಸುತ್ತಿ ಚಪ್ಪಾಳೆಯನಿಕ್ಕಿ ಸಿದಿಯಲ್ಲೊ ನೀನು 3ಚಂದದ ಸೀರೆಯನುಟ್ಟುಗಂಧ ಕಸ್ತೂರಿ ಕುಂಕುಮ ಕೇದಗೆಯನಿಟ್ಟುಆನಂದವ ಬಟ್ಟರು ಅಷ್ಟುಗೋವಿಂದನಂಘ್ರಿ ಕಮಲದಿ ಮನಸಿಟ್ಟು 4ಅವರಒಲ್ಲಭರೆಲ್ಲ ಸೊಲ್ಲುಗಳೆತ್ತದ್ಹಾಂಗೆಚಲ್ವನ ಪ್ರಾರ್ಥಿಸಿದರೆಲ್ಲಹೀಂಗೆರಮಿನಲ್ಲನ ದಯದಿಂದ ಇದ್ದರು ಮೊದಲಿನ್ಹಾಂಗೆ 5
--------------
ಗಲಗಲಿಅವ್ವನವರು
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ಜ್ಞಾನಿಯಾಗಬೇಕು ಅಜ್ಞಾನ ನೀಗಬೇಕು ತತ್ವಜ್ಞಾನದಿಂದಿರಬೇಕು ಮುಕ್ತಿ ತಾನೆ ಆವಾಗಕ್ಕು ಪ.ಅಬ್ಜಾನನನ್ನ ಪಾದಾಬ್ಜ ನಂಬಿರಿನ್ನು ಕುಶಬ್ದಗುಂದಿರಣ್ಣಭವಾಬ್ಧಿದಾಟಿರಣ್ಣ1ಮಾಡಿ ಸಾಧುಸಂಗ ಬಿಡಿ ಖಳರಹಂಗನೀವುನೋಡಿ ಅಂತರಂಗ ಕೈ ನೀಡುವನು ರಂಗ 2ತ್ಯಾಗಭೋಗಸರ್ವ ಶ್ರೀಹರಿಗೆ ಒಪ್ಪಿಸಿರುವ ಆಯೋಗಿಯನ್ನು ಕರೆವ ಶ್ರೀ ನಾಗಶಯನಹೊರೆವ3ತಿದ್ದಿನೋಡಿವರ್ಮಅಸಾಧ್ಯ ಶರ್ಮನರ್ಮ ಬೇಗೆದ್ದು ಬಿಡಿ ಅಧರ್ಮ ನಿನ್ನದು ಶುಭಕರ್ಮ 4ದಾಸರ ಜೀವನ ಭಕ್ತಪೋಷಕ ಪಾವನ ಶ್ರೀಪ್ರಸನ್ನ ವೆಂಕಟ ಪ್ರಸನ್ನ ಅಭಿಲಾಷೆ ಸಂಜÕನೆ ಧನ್ಯ 5
--------------
ಪ್ರಸನ್ನವೆಂಕಟದಾಸರು
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು