ಒಟ್ಟು 3517 ಕಡೆಗಳಲ್ಲಿ , 124 ದಾಸರು , 2540 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೆ ನಾನಿನ್ನ ನಾರಾಯಣ ವಿಶ್ವಂಭರ ಮೂರುತಿಯೇ ಕಂಬುಧರ ಕಮಲಾಂಬಕ ಶ್ರೀಹರಿ ಪಾರ್ಥನ ಸಾರಥಿಯೇ ಪ ವಾರಿಜನಾಭನೆ ಪಾರುಗಾಣಿಸೊ ಸಂ- ಮಾರಮಣನೆ ಮೊರೆಹೊಕ್ಕೆ ಲಾಲಿಸೊ ಮುರಹರ ಗೋವಿಂದ 1 ಪುಣ್ಯುಪುರುಷ ಲಾವಣ್ಯ ನಿಧಿಯೆ ಕಾ- ವನಜಾಪ್ತವಂಶ ಚಂದ್ರ 2 ಕಾಮ ಜನಕ ಸುತ್ರಾಮವಿನುತ ಶುಭ- ನಾಮಸುಜನಪ್ರೇಮಿ ತಾಮಸದೂರ ಸುಧಾಮವರದ ಗುರು- ರಾಮವಿಠಲಸ್ವಾಮಿ 3
--------------
ಗುರುರಾಮವಿಠಲ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ- ರಂಭಸೂತ್ರಳೆ ಇಂಬುದೋರಿನ್ನು ಪ. ಅಂಬುಜಾಂಬಕಿ ಶುಂಭಮರ್ದಿನಿ ಕಂಬುಗ್ರೀವೆ ಹೇರಂಬ ಜನನಿ ಶೋ- ಣಾಂಬರಾವೃತೆ ಶಂಭುಪ್ರಿಯೆ ದಯಾ- ಲಂಬೆ ಸುರನಿಕುರುಂಬಸನ್ನುತೆ ಅ.ಪ. ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ- ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ- ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ- ಗಾರೆ ರಿಪುಸಂಹಾರೆ ತುಂಬುರು ನಾರದಾದಿಮುನೀಂದ್ರ ನುತಚರ- ಸೂರಿಜನ ಸುಮನೋರಥಪ್ರದೆ 1 ವಿಶಾಲಸುಗುಣಯುತೆ ಮುನಿಜನ- ಲೋಲತರುಣಮರಾಳೆ ಸಚ್ಚರಿತೆ ನವಮಣಿ ಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ- ಬಾಲೆ ನೀಲತಮಾಲವರ್ಣೆ ಕ- ರಾಳಸುರಗಿ ಕಪಾಲಧರೆ ಸುಜ- ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ2 ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ- ಪರಾಕು ಶರಣಜನೈಕಹಿತದಾತೆ ಸುರನರ- ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ- ವಾಕುಕಾಯದಿಂದ ಗೈದಾ ನೇಕ ದುರಿತವ ದೂರಗೈದು ರ- ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3 ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ- ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ- ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ- ಲ್ಲಾಸೆ ಯೋಗೀಶಾಶಯಸ್ಥಿತೆ ವಾಸವಾರ್ಚಿತೆ ಶ್ರೀಸರಸ್ವತಿ ದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ4 ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ- ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ- ವಾಮಭಾಗ ಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯ ಶ್ರೀಮಹಾಲಕ್ಷ್ಮಿ ನಾರಾಯಣಿ ರಾಮನಾಮಾಸಕ್ತೆ ಕವಿಜನ- ಸೋಮಶೇಖರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಮಃ ಓನ್ನಮಃ ಮಮದೇಶಿಕ ತಿರುವಡಿಗಳೆ ಶರಣಂ ಪ ಶ್ರೀ ಪರಾತ್ಪರನೆ ಭಾಪದನಿಸರಿ ಕೋಪವ್ಯಾತಕೆ ಸಲಹೊ ಮುನಿಕುಲ ದೀಪ ನೀನಹುದಯ್ಯ ಅಡಿಯೇನ್ನಮಃ 1 ಸಾನಿಧಾಪ ಮದಾಪದದಿ ಸರಿ ಶ್ರೀನಿವಾಸ ದಯಾಳೊ ಅಡಿಯೇನ್ ನಮಃ 2 ವಾಸವಾರ್ಚಿತ ಶ್ರೀಗುರು ಹರಿ ದೋಷಗಳೆದೀಗೆನ್ನ ಆ ನಿಜ ಶೇಷಭೂತನ ಮಾಡೊ ಅಡಿಯೇನ್ ನಮಃ 3
--------------
ಚನ್ನಪಟ್ಟಣದ ಅಹೋಬಲದಾಸರು
ನಮಾಮಿ ತಂದೆಯೇ | ಮುದ್ದುಮೋಹನಾನತೋಸ್ಮಿ ಸಿದ್ಧರೇ | ತ್ವತ್ವದಾಂಬುಜಂ ಪ ಸುಕೃತ ವೆಂಥದೋಗುರುಗಳ್ ನಿಮ್ಮಯಾ | ಕರುಣದೊರಕಿತು 1 ವಿಲಸಿತಾಮಲಾ ನಿ | ಷ್ಕಲ್ಮುಷ ಹೃದಯರೇಆಲವಾ ಬೋಧರಾ | ಒಲವ ಪಡೆದರೇ 2 ಹಲವು ಜನುಮದೀ | ಬಳಲಿ ಬಂದುದಾತಿಳಿದು ನೀವೆನ್ನಾ | ಪಾಲಿಸೀದಿರಿ3 ಕ | ಳಂಕ ವಿಹಿತವೂ 4 ಎಂದು ಕರುಣೆಯಿಂ | ತಂದೆ ವೆಂಕಟನಾಹೊಂದಿ ಭಜಿಪರಾ | ಅಂದು ಪ್ರೇರಿಸೀ5 ಕರೆದು ಎನ್ನನೂ | ತೆರಳು ಎನುತಲೀಒರೆದು ಮತಿಯನೂ | ದಾರಿ ತೊರ್ದಿರೀ 6 ಸೋಮ ಶೇಖರಾ | ಸಮ ಪದಸ್ಥನೇಸಾಮಾಜಾದ್ರಿಲೀ | ಪ್ರಮಾಥಿವತ್ಸರಾ 7 ವದ್ಯ ಫಾಲ್ಗುಣಾ | ಪ್ರತಿಪದಾದಿನಾಆದಿವಾರದೀ | ವಿದಿತ ಮಾರ್ಗದೀ 8 ಗುರು ಗೋವಿಂದನಾ | ನಾಮ ತಾರಕಾಅರುಹೀ ಪ್ರೀತಿಲೀ | ದಾರಿ ತೋರ್ದಿರೀ 9 ಕೋಮಲಾಂಗನೇ | ನಿಮ್ಮ ಮಹಿಮೆಯಾಪಾಮರಾನು ನಾ | ಗಮಿಸಲಾಪನೇ 10 ಗತಿಯೆ ನೀವೆಂದೂ | ಸತತ ತುತಿಸುವೆಅತುಳ ಮಹಿಮರೇ | ಹಿತವ ಮಾಡಿರಿ 11 ತವ ಪದಾರ್ಚನೇ ತ್ರಿ | ಸವನ ಸಂಧ್ಯವೂಹವನ ಹೋಮವೂ | ಭವದ ಶೋಷವೂ 12 ನೀವೆ ಬಂಧುವೂ | ನೀವೆ ಬಳಗವೂನೀವೆ ತಾಯಿಯೂ | ನೀವೆ ತಂದೆಯೂ 13 ನಿಂತು ನೀವೆನ್ನಾ | ಅಂತರಂಗದೀಮಂತವ್ಯ ರಂಗನಾ ಚಿಂತೆ ಪಾಲಿಸೀ 14 ಗುರು ಗೋವಿಂದ ವಿಠಲನಾ | ಸುರಚಿರಾಮಲಾಚರಣ ಪುಷ್ಕರ | ಸ್ಮರಿಪ ಗುರುವರಾ 15|
--------------
ಗುರುಗೋವಿಂದವಿಠಲರು
ನಮಿಪ ಸುಜನರಿಗೆ ಅಪಾರ ಮಹಿಮ ಪ ಕಮಲ ಸಂಭವ ಸುಮನಸೇಂದ್ರ ಪ್ರಮುಖ ನಮಿತ ಸುಮಹಿಮ ಗಜರಿಪು ಗಮನ ಗುಣ ನಿಧಿ ಮಲೆಯಳ ಮುಖ ಕುಮುದ ಹಿಮಕರ ಅ.ಪ ಜಾತರಹಿತ ಜಗದೀಶ ದನು ಜಾತ ವ್ರಾತಾರಸ್ಯ ಜಾತವೇದನ ಶೀತಾಂಶು ಭಾನು ಸಂಕಾಶ ಭೂನಾಥ ಭೂತೇಶ ಹೃತ್ವಾದೋದಕ ವಾಸ ಶಾತಕುಂಭ ಕಶ್ಯಪನ ಗರ್ವಜೀ ಮೂತವೃಂದಕೆ ವಾತನೆನಿಸುತ ಪೋತ ಪ್ರಹ್ಲಾದನಿಗೆ ಒಲಿದು ಸು ಪ್ರೀತಿಯಲಿ ವೊರೆದಾತ ದಾತನೆ 1 ಗೀತ ಸಂಪ್ರೀತ ಶ್ರೀ ರುಕ್ಮಿಣಿ ಲೋಲ ಧಾತಾಂಡೋದರ ವನಮಾಲಾಧೃತ ಪೂತನ ಬಕ ಶಕಟಾರಿ ಹೃತ್ ಶೂರ ಪಾತರೌದ್ರಿ ಶತಧಾರ ಶುಭಕರ ಶ್ವೇತ ದ್ವೀಪಾನಂತ ಪೀಠ ಪು ನೀತ ವರವೈಕುಂಠ ಘನ ಸು ಭವ ಭಯಹರ 2 ಮಾರ ಜನಕ ಶುಭಕಾಯ ಕೃಷ್ಣಾ ತೀರ ಸುಶೋಭಿತ ಕಾರ್ಪರ ನಿಲಯ ದೂರ ನೋಡದೆ ಪಿಡಿ ಕೈಯ್ಯ ಶ್ರೀಸ ಸನ್ನುತ ಶಾಮಸುಂದರರೇಯ ವಾರಿಚರ ಗಿರಿ ಭಾರಧರ ಭೂ- ಚೋರ ಹರ ಗಂಭೀರ ವಟು ಕು ಠಾರಕರ ರಘುವೀರ ನಂದ ಕುಮಾರ ವಸನವಿದೂರ ಹಯಧ್ವಜ 3
--------------
ಶಾಮಸುಂದರ ವಿಠಲ
ನಮಿಸುವೆ ಪಾಲಿಸೊ ಪ್ರಾಣಪತೆ ಪ್ರೇಮವಾರುಧಿ | ವಾನರನಾಥಾ ಪೊಂದಿದೆ ಚರಣಾ ಪ ತಂದೆಯೆ ಪಿಡಿನೀ ಬಂದು ಕರವ ಕುಂದಗಳೆಣಿಸದೆ ನೀ ಬೇಗನೆ 1 ಕರಿವರ ಭೀಮಾ ಗುರು ಸುಖತೀರ್ಥಮರಿಯದೆ ಗರಿಯೊ ನರಹರಿ ಧ್ಯಾನಾ | ಕೊರವಿ ನಿಲಯನೆ ಪ್ರಾರ್ಥಿಪೆ 2 ಶ್ರೀವರ ಶಾಮಸುಂದರ ವಿಠಲನ ಸೇವಕನಾದ ಭಾವಿ ಧಾತ ಪಾವನನೇ ಪವಿಗಾತ್ರ ಸದಾ 3
--------------
ಶಾಮಸುಂದರ ವಿಠಲ
ನಮಿಸುವೇಂ ಜಗದಂಬೆ ನಿನ್ನಂ ಮುದದಿಂ ದೃಢದಿಂ ಮನವಾರೆ ನಾಂ ಪ ಉದಯಾದ್ರಿಯೊಳುದಿಸಿದ ನಾರೈ ಮನಿದೆ ಬಂದೇಂ ಬಳಿಸಂದೇಂ ಪದುಳದಿ ನಿಂದೇಂ ಅ.ಪ ಮೂಡಿದ ಕತ್ತಲೆಯೋಡಿÉಸಿ ಭರದಿಂ ನೋಡೆಚಿರಂ, ನಾಡೆಜಗಂ ಬೆಳಗಲಿ ಬೆಳಕಿಂ 1 ಭಾಮಿನಿಯರು ಸದ್ಭಾವನೆಯಿಂದಲಿ ದೇವಿಯ ಸಂಸೇವಿಸಿವೊಲ್ ತಾ ವರವಂ2 ಶೇಷಗಿರೀಶನ ದಾಸರು ನಾವೆನೆ ಭಾಷಾನಿಧಿಯಂ ಬಲಗೊಂಡಾಂ ಬೇಡುತ ನಲವಿಂ3
--------------
ನಂಜನಗೂಡು ತಿರುಮಲಾಂಬಾ
ನಮೋ ನಮಸ್ತೇ ಉಮಾತನಯ ಕುಮಾರಾಗ್ರಜ ಪ. ಅಮೋಘ ಶಮದಮಾದಿಗುಣ ಸಮೂಹ ಗತವಿಮೋಹ ಸದಾ ಅ.ಪ. ಭಾರತವ ಬಾದರಾಯಣನು ಪೇಳಿದಂತೆ ಬರೆದೆ ಭಾರತವ ಮಾರಜ ಭ್ರಮೆಯ ದೂರಗೈದ ಸುವಿ- ಚಾರಧೀರ ಸುರವಾರವಿನುತ ಪದ 1 ವೃಂದಾರಕೇಂದ್ರ ತವಚರಣಕೆ ವಂದಿಸುವೆ ವೃಂದಾರ ಮಂದಾರ ಚಂದನಚರ್ಚಿತ ಚಂದ್ರಚೂಡ ಮನೋನಂದ ಮೂರುತಿಯೆ 2 ಸುಜನ ಮುಮುಕ್ಷುಜನಪ್ರಿಯ ಸುಕ್ಷೇಮದ ಲಕ್ಷ್ಮೀನಾರಾಯಣ ಲಕ್ಷಿತಾತ್ಮನೆ ವಿ- ಪಕ್ಷರಕ್ಷೋಗಣಶಿಕ್ಷ ಸೂಕ್ಷ್ಮ ಮತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನಮೋ ನಮೋ ಸುಶೀಲೇಂದ್ರ | ಗುರುವರಿಯ ವೈಷ್ಣವ ಸುಮತವಾರಿಧಿ ಚಂದ್ರ | ಸಕುವಿ ಸಂಸ್ತುತ | ಅಮಿತ ಸದ್ಗುಣ ಸಾಂದ್ರ || ಸುಮತಾಹಿವೀಂದ್ರ ಪ ನಮಿಪ ಜನರಿಗೆ ಅಮರ ಭೂರುಹ ಸಮಸುಖಪ್ರದ ವಿಮಲ ಚರಿತನೆ ಯಮಿವರ್ಯ ಸುವೃತೀಂದ್ರ ಮಾನಸ ಕಮಲರವಿ ಮಹಿ ಸುಮನಸಾಗ್ರಣಿ ಅ.ಪ ಅಸಮ ಮಹಿಮೋದರ | ತವಸುಪ್ರಭಾವವ ಸುಜನ ವಂದಿತ ಸ್ವಶನ ಸುಮತೋದ್ಧಾರ || ದಯ ಪಾರವಾರ || ವಸುಧೆಯೊಳು ಮೊರೆಹೊಕ್ಕ ಜನರಿಗೆ ಕುಶಲಪ್ರದ ನೀನೆಂದು ಬುಧ ಜನ ಉಸುರುವದು ನಾ ಕೇಳಿ ನಿನ್ನ ಪದ ಬಿಸಜ ನಂಬಿದೆ ಪೋಷಿಸನುದಿನ 1 ದೀನಜನ ಸುಖದಾತ | ಸುಕೃತೀಂದ್ರ ಕೋಮಲ ಬಾಣಲೋಕ ವಿಖ್ಯಾತÀ || ದ್ವಿಜಕುಲಕೆ ನಾಥ || ಕ್ಷೋಣಿಯೊಳು ನೀ ಒಲಿದ ಮಾತ್ರದಿ ಮೌನಿವರ್ಯ ಶ್ರೀ ರಾಘವೇಂದ್ರರು ಸಾನುರಾಗದಿ ಸಲಹುವರು ಪವ ಮಾನ ಶಾಸ್ತ್ರ ಪ್ರವೀಣ ಜಾಣ 2 ಪಿಂಗಲೇಂದ್ರ ಪ್ರಕಾಶ | ಸುಪವಿತ್ರ ವರದತ ರಂಗಿಣಿ ತಟವಾಸ | ಸದ್ಧರ್ಮ ಸ್ಥಾಪಕ ಮಂಗಳಾಂಗ ಯತೀಶ | ಪಾಪೌಘನಾಶ || ತುಂಗವಿಕ್ರಮ ಶಾಮಸುಂದರನಂಘ್ರಿ ಕಮಲಕೆ ಭೃಂಗ ಭವಗಜಸಿಂಗ ಕರುಣಾ ಪಾಂಗದೀಕ್ಷಿಸೆ ಇಂಗಿತಜ್ಞರ ಸಂಗಪಾಲಿಸು 3
--------------
ಶಾಮಸುಂದರ ವಿಠಲ
ನಮೋಸ್ತುತೇ ಕಮಲಾಪತೇ ಪ ನಮೋಸ್ತುತೇ ಶತಧೃತಿ ಶಂಕರ ಮುಖ ವಿಮಾನಚರಗಣ ವಂದಿತ ಚರಣ ಅ.ಪ ವಾರಣಭೀತಿನಿವಾರಣ ಭವಜಲ ತಾರಣ ದೈತ್ಯವಿದಾರಣ ಶುಭಗುಣ 1 ಪಂಕಜಲೋಚನ ಪಂಕವಿಮೋಚನ ಪಂಕಜಾಲಯಾಲಂಕೃತಗಾತ್ರ 2 ಶರಣಾಗತಜನ ಭರಣಾಧೃತರಥ ಚರಣಾ ಫಣಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಮ್ಮವ್ವ ಈಕಿ ನಮ್ಮವ್ವ ಒಮ್ಮನ ಕೂಲ್ಯಕಿ ನಮ್ಮವ್ವ ಪ ಇಮ್ಮನ ಸಜ್ಜಿಗೆ ಒಮ್ಮೆಗೆ ತಿಂದು ಸುಮ್ಮನೆ ಕೂತಳ ಗುಮ್ಮವ್ವ ಅ.ಪ ಆರುಮೂರುಮರ ರೊಟ್ಟಿಗಳು ಒಂದೆ ಸಾರಿಗೆ ಮುದ್ದೆ ಮಾಡಿ ನುಂಗಿದಳು ದಾರಿಗೆ ತೋರದಂತೆ ಎಂಟು ಭಾಂಡೆ ಅನ್ನ ವಾರೆಲಿ ಕೂತು ಸೂರೆ ಮಾಡಿದಳು 1 ಎತ್ತಿ ತುಪ್ಪದ ಮೂರು ಡಬ್ಬಿಗಳು ಕುತ್ತಿಗ್ಗೆ ಬೀಳಹಾಗೆ ಕುಡಿದಳು ಹತ್ತ್ಹೆಡಿಗ್ಹೋಳಿಗೆ ಪತ್ತೆಯಿಲ್ಲದೆ ತಿಂದು ಮೆತ್ತಗೆ ಸುತ್ತಿಕೊಂಡು ಮಲಗಿದಳು 2 ಒಡಲನಿಲ್ಲದೆ ಕಾಯುವಳು ಇವಳು ಇಡೀ ಬ್ರಹ್ಮಾಂಡವ ನುಂಗಿದಳು ಪಿಡಿದೊಕ್ಕುಡಿತೆಲಿ ಕಡಲೇಳನು ಕುಡಿದೊಡೆಯ ಶ್ರೀರಾಮನ ಕೂಡಿದಳು 3
--------------
ರಾಮದಾಸರು
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು
ನರಸಿಂಹನ್ಯನ ಮನೆಯ ಹರಿಕಥೆ ಸಂದರ್ಭದಲ್ಲಿಆನಂದಮಾನಂದವಾನಂದವಾುತು ಸಾನಂದವಾದ ನಾರಸಿಂಹಯ್ಯಮಂದಿರದಲ್ಲಿ ಪರಾಮಮಹೋತ್ಸವ ಪ್ರೇಮದಿಮಾಡಲುಸ್ವಾ'ುೀಲಕ್ಷ್ಮಣಸೀತ ಸಮೇತರಾಗಿಬರಲು 1ಭಾರತ ರಾಮಾಯಣ ಭಾಗವತಾದಿ ಗ್ರಂಥಪಾರಾಯಣಂಗಳು ಭೂಸುರಾಧಿಪರು ಮಾಡಲು 2ಭಕ್ತಾಜನರು ಹರಿಭಜನೆ ಮಾಡಲು ರಾಗರಕ್ತೀಭಕ್ತೀ ಯುಕ್ತಶಕ್ತೀ ಪರರಾಗಿನಿರಲು 3ಪರಿಪರಿ ತೆರದಿ ವಾದ್ಯಪಂಕ್ತೀ ಮಂಟಪದಲ್ಲಿತಿರುವಾರಾಧನೆ ತೀರ್ಥಪ್ರಸಾದ 'ನಿಯೋಗ 4ಪರಮಭಾಗವತರು ಪಂಡಿತ ನಿಪುಣರುತರುಣೀಮಣಿಯರೆಲ್ಲ ತತ್ಸೇವೆಮಾಡಲು 5ಸಿರಿಶುಕ್ಲವರ್ಷ ಚೈತ್ರಶುದ್ಧ ಬಿದಿಗೆ ಭರಣಿಗುರುತುಲಸೀರಾಮಜನನ ಚಾರಿತ್ರೆನುಡಿಯಲು 6ಶ್ರೀಲಕ್ಷ್ಮೀದೇವಮ್ಮ ಸುಖಪ್ರಸು'ಸಿದಳುತುಲಸೀರಾಮಾಖ್ಯನನ್ನ ತತ್ಕಾಲ ಲಗ್ನದಲ್ಲಿ 7ಶ್ರೀಶಾ ತುಲಸೀರಾಮಸ್ವಾ'ುೀ ಪದಾರ'ಂದಆಶ್ರೀತರಂಗಸ್ವಾ'ುೀದಾಸಾನು ಸೇ'ಸಲು 8
--------------
ಮಳಿಗೆ ರಂಗಸ್ವಾಮಿದಾಸರು