ಒಟ್ಟು 1238 ಕಡೆಗಳಲ್ಲಿ , 95 ದಾಸರು , 1040 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ
ಗುರುಪದವ ನಂಬಿ ಹರಿಪದವ ಕಾಂಬೆಮರುತ ಸಂತತಿಗೆ ನಮಿಸುವೆ ನಮಿಸುವೆ ಪ.ಹರಿಪದಕೆ ಅಚ್ಛಿನ್ನ ಭಕುತಿ ಪರಿಪೂರ್ಣ ಶ್ರೀಹರಿಕಾರ್ಯದಲಿ ಧುರಂಧರನೆನಿಸುವಹರಿಭೃತ್ಯಜನಕೆ ಹಿತಕಾರಿ ಔದಾರಿ ಜಗದ್ಗುರು ಪರಮಹಂಸ ಮಧ್ವತ್ರಿರೂಪಿಯ 1ತತ್ವಸಾಗರ ತಿಮಿಂಗಿಲ ಪದ್ಮನಾಭಮುನಿಕರ್ತಮೂಲರಾಮ ಮೆಚ್ಚಿದ ನರಹರಿಯಮತ್ರ್ಯ ಮಾಯಿಜನ ತುಹಿನರವಿಭಮಾಧವಾಭಿಜÕ ಅಕ್ಷೋಭ್ಯತೀರ್ಥೆನಿಪ ಮಲ್ಲರ 2ಸುಖತೀರ್ಥಗಂಭೀರ ವಾಕ್ಯವಾರಿಧಿಚಂದ್ರಅಕಳಂಕ ಜಯವರ್ಯ ಯತಿಸಮೂಹಮಕುಟಮಣಿ ವಿದ್ಯಾಧಿರಾಜ ನಿರ್ಮಲಕಾಯಸುಕವೀಂದ್ರ ವಾಕ್ಸಿದ್ಧ ವಾಗೀಶರ 3ಗುರುಭಕುತಿ ನಿಸ್ಸೀಮ ರಾಮಚಂದ್ರಾಖ್ಯಯತಿಗುರುಆಜ್ಞಾಪಾಲ ವಿದ್ಯಾನಿಧಿಗಳದುರುವಾದಿಗಜಮೃಗಪ ರಘುನಾಥ ತೀರ್ಥಶ್ರುತಿಪರಮಾರ್ಥ ಪರಿಚರ್ಯ ರಘುವರ್ಯರ 4ವೈರಾಗ್ಯ ವೈಭವಾನ್ವಿತ ರಘೋತ್ತಮ ಮುನಿಪವೈಷ್ಣವ ತತ್ವಜÕ ವೇದವ್ಯಾಸರಕೈವಲ್ಯಮಾರ್ಗಜÕ ವಿದ್ಯಾಪತಿಯು ಹೊನ್ನಮೈಯ ಮರುತಂಶ ವಿದ್ಯಾಧೀಶರ 5ವೇದಾಮೃತಾಬ್ಧಿಯೊಳು ಮಗ್ನ ವೇದನಿಧಿಗಳಸಾಧುನಿಕರಲಲಾಮ ಸತ್ಯವ್ರತರಬಾದರಾಯಣರಾಮಪಾದರತ ಸತ್ಯನಿಧಿಮೇದಿನಿಗೆ ಕಲ್ಪತರು ಸತ್ಯನಾಥರ 6ಶ್ರೀ ಸತ್ಯನಾಥರತ್ನಾಕರಕರೋದ್ಭವಕುಮುದಅಶೇಷಯಾಚಕ ಸುಖದ ಸುಗುಣಶ್ರೀ ಸತ್ಯಾಭಿನವ ಮುನಿ ಭಾಗವತೇಢ್ಯಜÕಶಾಶ್ವತ ಪರೋಕ್ಷ ಗುರುಪದನಿಷ್ಠರ 7ದುಷ್ಟ ಪರವಾದಿ ನರಕುಲಿಶ ಜಿತಕಾಮ ತಪೋನಿಷ್ಠ ವಿದ್ಯೋನ್ನತ ವಿಚಾರಶೀಲಶಿಷ್ಟ ಜನಪಾಲಶ್ರುತಿಜಲಾಭ್ಧಿ ಕಲ್ಲೋಲಇಷ್ಟಾರ್ಥದಾತ ಸತ್ಯಾಧೀಶರ 8ಕೃಷ್ಣ ಪಾದಾಸಕ್ತ ಗುರುಕೃಪಾಸಂಯುಕ್ತಇಷ್ಟಾರ್ಥದಾತ ಸತ್ಯಾಧಿರಾಜರಸೃಷ್ಠೇಶ ಪ್ರಸನ್ನವೆಂಕಟಪತಿಯಅನವರತತುಷ್ಟೀಕರಿಸುವ ವಾಯುಮತ ಮಹಿಮರ 9
--------------
ಪ್ರಸನ್ನವೆಂಕಟದಾಸರು
ಗುರುರಾಯಾ ಗುರುರಾಯಾ |ತರಣಿಪ್ರಕಾಶ ಯತಿಪ ವರದೇಂದ್ರ ಪಬೆಂದೆನೋ ಭವದೊಳು | ತಂದೆ ನೀ ಬಹು ತ್ವರೆ ||ಯಿಂದ ಕರಪಿಡಿಯೋ |ಮಂದದಯಾಳೋ 1ಆರೆನು ಮನುಜರು | ದೂರುವ ಮಾತನು ||ಆರಿಗುಸಿರಲಿ ನಿ | ವಾರಿಸೋ ಸ್ವಾಮಿ2ನೀನೊಲಿಯಲು ಭಯ | ಕಾಣಿಸಿಕೊಂಬುದೆ ||ಹೀನ ಮತಾಟವಿ ಕೃ | ಶಾನು ಮಹಾತ್ಮ 3ಮೇದಿನಿಪರು ಬೆರ | ಗಾದರು ದಾನಕೆ ||ಮೋದಮುನಿಮತ ಮ | ಹೋದಧಿ ಚಂದ್ರ 4ಕಾಷಾಯ ವಸನಿ |ದೇಶಿಕವರಪ್ರಾ ||ಣೇಶ ವಿಠಲನವ | ರಾ ಸಲಹುವದೋ 5
--------------
ಪ್ರಾಣೇಶದಾಸರು
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ಚತುರ್ದಶಿಯ ದಿನ(ಹನುಮಂತನನ್ನು ಕುರಿತು)ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆ ಪ.ಇವನ್ಯಾರೆ ಮಹಾಶಿವನಂದದಿ ಮಾ-ಧವನ ಪೆಗಲೊಳಾಂತು ತವಕದಿ ಬರುವವ 1ದಾಡೆದಂತಮಸಗೀಡಿರುವದು ಮಹಾಕೋಡಗದಂತೆ ಸಗಾಢದಿ ಬರುವವ 2ಕಡಲೊಡೆಯನು ಮೃದುವಡಿಯಡರಿಸಿ ಬಿಡದಡಿಗಡಿಗಾಶ್ರೀತರೊಡಗೂಡಿ ಬರುವವ 3ಊರ್ವಶಿ : ನಾರಿ ಕೇಳೆಲೆಗೆ ವೈಯಾರಿ ನೀ ಮುದದಿನಾರಾಯಣನಿಗೀತ ಬಂಟನಾದಾದರಿದಿವೀರ ರಾಮವತಾರದಿ ಹಿಂದೆ ಹರಿಯಚಾರಕನಾಗಿ ಸೇವೆಯ ಗೈದ ಪರಿಯಕ್ರೂರ ದಶಾಸ್ಯನ ಗಾರುಗೆಡಿಸಿನೃಪವೀರನ ಪೆಗಲಿನೊಳೇರಿಸಿ ದೈತ್ಯರಭೂರಿವಧೆಗೆ ತಾ ಸಾರಥಿಯಾದವಕಾರುಣೀಕ ಮಹಾವೀರ್ಹನುಮಂತ 1ಆಮೇಲೆ ವೀರಾವೇಶದಿ ವಾರಿಧಿಯನುರಾಮನಪ್ಪಣೆಯಿಂದ ದಾಟಿದನಿವನುಭೂಮಿಜೆಗುಂಗುರ ಕೊಟ್ಟ ನಂತರದಿಕಾಮುಕರನು ಸದೆಬಡಿದನಾ ಕ್ಷಣದಿಹೇಮಖಚಿತ ಲಂಕಾಮಹಾನಗರವಹೋಮವ ಗೈದು ಸುತ್ರಾಮಾರಿಗಳ ನಿ-ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ-ಡಾಮಣಿ ತಂದ ಮಹಾಮಹಿಮನು ಇವ 2ವಾರಿಮುಖಿ ನೀ ಕೇಳಿದರಿಂದ ಬಂದವೀರ ಹನುಮಂತನನೇರಿ ಗೋವಿಂದಸ್ವಾರಿಗೆ ಪೊರಟ ಚಾತುರ್ದಶಿ ದಿವಸಆರತಿಯನು ಕೈಕೊಳ್ಳುವ ಶ್ರೀನಿವಾಸಭೇರಿಮೃದಂಗ ಮಹಾರವದಿಂದ ಸ-ರೋರುಹನಾಭ ಮುರಾರಿ ಶರಣರುದ್ಧಾರಣಗೈಯುವ ಕಾರಣದಿಂದ ಪಾ-ದಾರವಿಂದಗಳ ತೋರಿಸಿ ಕೊಡುವ 3ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿನಲವಿಂದ ವೇದಘೋಷವ ಕೇಳ್ವಶೌರಿಜಲಜಭವಾದಿ ನಿರ್ಜರರಿಗಸಾಧ್ಯಸುಲಭನಾದನು ಭಕ್ತಜನಕಿದುಚೋದ್ಯಸುಲಲಿತ ಮಂಟಪದೊಳೊ ನೆಲಸುತ ನಿ-ಶ್ಚಲಿತಾನಂದ ಮಂಗಲದ ಮಹೋತ್ಸವಗಳನೆಲ್ಲವ ಕೈಕೊಳುತಲಿ ಭಕ್ತರಸಲಹುವ ನಿರುತದಿ ಮಲಯಜಗಂಧಿನಿ 4ಶ್ರೀಕಾಂತ ಬಳಿಕ ಭಕ್ತರ ಒಡಗೂಡಿಏಕಾಂತ ಸೇವೆಯಗೊಂಡ ಕೃಪೆಮಾಡಿಸಾಕಾರವಾಗಿ ತೋರುವ ಕಾಣೆ ನಮಗೆಬೇಕಾದ ಇಷ್ಟವ ಕೊಡುವ ಭಕ್ತರಿಗೆಶ್ರೀಕರ ನಾರಾಯಣ ಶ್ರೀನಿವಾಸ ಕೃ-ಪಾಕರ ವಿಬುಧಾನೇಕಾರ್ಚಿತ ರ-ತ್ನಾಕರಶಯನ ಸುಖಾಕರ ಕೋಟಿ ವಿ-ಚಾರಕ ಭಾಸತ್ರಿಲೋಕಾಧಿಪನಿವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯತು ಜಗದಾಧಾರ ಜಯತು ದೋಷ ವಿದೂರಕುಂದಕುಟ್ಮಲದಂತೆವದನಮಂದಹಾಸಇಂದಿರಾಲಯವಕ್ಷ ತುಲಸಿಮಾಲೆಸಿರಿಸ್ತಂಭ ಉರುಟುಕದಳಿಊರು ಜಾನುಜಂಘೆಶ್ರೀಪತಿ ಅನೇಕರೂಪನಾಗಿನಿಂದುಇಂದೀವರಾಕ್ಷಿಯರ ಮನದ ಹದನವನರಿತುಕೊಳ್ಳಲುಬಳಿಯಲೊಬ್ಬಳನೆ ನಿಲಿಸಿ ಹೆಗಲಲ್ಲಿಕರವಹಾಕಿಕುಳದಲ್ಲಿ (?) ಕೃಷ್ಣನ ಸ್ಥಳದಲ್ಲಿ ಹೆಜ್ಜೆಯೊಳುಘಲಕು ಘಲಕು ತಾಳಗತಿಗಳಿಂದಲಿ ಸುತ್ತಿದುಂದುಭಿವಾದ್ಯ ತಮ್ಮಿಂದ ತಾಂ ಬಾರಿಪವುಒಂದೊಂದು ದೋಷದಿಂದಿನ್ನು ಅಜಭವಸುರರುಶರಣು ಕರುಣಾನಿಧಿಯೆ ಶರಣು ಗುಣವಾರಿಧಿಯೆರಾಸಕ್ರೀಡೆಯಲಿ ತೋರಿಸಿದ ಗೋಪಿಯರ ಅಭಿ-
--------------
ಗೋಪಾಲದಾಸರು
ಜಯತು ಜಗನ್ಮಾತೆ ಪಾಲಿಸು ಜಯತು ಜಗದ್ಭರಿತೆಜಯತು ಜನಾರ್ದನ ಸ್ವಾಮಿಯ ಪ್ರೀತೆಜಯತು ಜನಾರ್ದನ ಮೋಹಿನಿ ಖ್ಯಾತೆ1ಪಂಕಜದಳ ನೇತ್ರೆ ಜಯಜಯಕಿಂಕರನುತಿ ಪಾತ್ರೆಕಂಕಣಕರಭವಬಿಂಕವಿಹಾರಿಣಿಕುಂಕುಮಗಂಧಿ ಶಶಾಂಕ ಪ್ರಕಾಶಿತೆ2ಲೋಕೋದ್ಧಾರಿಣಿಯೇಭವಭಯಶೋಕನಿವಾರಿಣಿಯೆಮೂಕಾಸುರನನು ಮರ್ದಿಸಿ ಲೋಕದಮೂಕಾಂಬಿಕೆಯೆಂಬ ನಾಮವ ಧರಿಸಿದ3ಸುಂದರಿಶುಭಸದನೇ ಸದ್ಗುಣಮಾದರಿ ಇಭಗಮನೆಕುಂದರದನೆಅಘವೃಂದ ನಿವಾರಿಣಿವಂದಿಸುವೆನುಪೊರೆಗೋವಿಂದದಾಸನ ಜಯತು4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಜಯತು ಜಯತು ಶ್ರೀ ಗಂಗಾದೇವಿಯೆಜಯತುಪಂಕಜಗಂಧಿಯೇಬಹು ಜಯತು ಶ್ವೇತಾಂಗ ರೂಪೆಯೆಜಯತು ವಕ್ರ ಸವಾರಿಯೆ ಜಯತು ಜಯತೂ 1ಪಾಹಿಶ್ರೀಹರಿ ಪಾದನಂದನೆಪಾಹಿಶಿವ ಶಿರವಾಸಿನಿಪಾಹಿಶ್ರೀಜಹ್ನುಮುನಿ ಹೃದಯ ಶೋಭಿತೆಪಾಹಿಧಾರುಣಿ ಪಾಲಿತೆಪಾಹಿಪಾಹಿ 2ಶರಣು ಭಗೀರಥ ಕುಲ ಉದ್ಧಾರಳೆಶರಣು ವರುಣನಮಾನಿನಿಶರಣು ಗೋವಿಂದನ ದಾಸನೊಡ
--------------
ಗೋವಿಂದದಾಸ
ಜೋ ಜೋ ಜಾನಕಿ ಜೊ ಚಂದಿರ ಮುಖಿಮಾಂಗಲ್ಯದಾಯಕಿ ಮಾಡೇ ನಿದ್ರೆ ಜೋ ಜೋ 1ಆದಿಮಾಯಳೆ ವೇದವೇದ್ಯಳೆಆದಿತೇಯನುತೆ ಭೂಮಿಜಾತೆ 2ಮೃಗಮದಗಂಧಿನಿ ಮಾಧುರ್ಯಭಾಷಿಣಿಮಗಳೆ ಜಾನಕಿಯೆ ಕಂಬುಕಂಧರಿಯೇ 3ಕಂಜಲೋಚನಿ ಕಂಜಭವಜನನಿಕುಂಜರಗಮನಿ ಸಂಜೀವನಿ 4ವಾರಿಜನೇತ್ರೆ ವಾಸುವಸ್ತೋತ್ರೆಮಾರಜನನಿ ಲಕ್ಷ್ಮೀನಾರಾಯಣಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಂದೆ ಪುರಂದರದಾಸರ ಸ್ಮರಿಸುವೆ ಎನ್ನಮಂದಮತಿಗಳೆದು ಹರಿಭಟನೆನಿಸುವೆ ಪ.ಗುರುವ್ಯಾಸರಾಜರ ಚರಣಾಬ್ಜ ಷಟ್ಚರಣನವಿರತಿಭಕುತಿ ಜ್ಞಾನದಾರ್ಣವನವರಉಪನಿಷದ್ವಾರಿನಿಧಿಗೆ ತಿಮಿಂಗಿಲನಹನಧರೆಯ ಕವಿಕುಲ ಶಿಖಾಮಣಿಯೆನಿಪನ 1ದಿನ ದಿನ ಯದೃಚ್ಛಾರ್ಥಲಾಭದಲಿ ತುಷ್ಟನಕನಕಲೋಷ್ಠ ಸಮಾನದೀಕ್ಷಿಸುವನಘನಸಿದ್ಧಿಗಳು ತಾವೆ ಬರಲೊಡಂಬಡದನಹರಿಗುಣಕೀರ್ತನೆಯಲ್ಲಿ ಪರವಶದಿಹನ2ಭವಜಲಧಿ ಗೋಷ್ಪದಕೆ ಸರಿದಾಟಿ ಕಾಮ ಕ್ರೋಧವಮೆಟ್ಟಿ ಭಕ್ತಿಸುಧೆಯುಂಡು ತೇಗಿಭುವಿಯಲ್ಲಿ ನಿಜಕೀರ್ತಿಯನು ಹರಹಿ ಪವನಮತದವರೆನಿಪ ದಾಸರಿಗೆ ತವರೂಪ ತೋರಿದನ 3ಕವನೋಕ್ತಿ ಮಳೆಗರೆದು ಹರಿದಾಸ ಪೈರ್ಗಳಿಗೆಅವಿರಳಾನಂದವಿತ್ತಥಿರ್üಸುವನನವಭಕುತಿ ಮನಗಂಡು ಸವೆಯದಾನಂದಪುರ ಪಥವನು ತೋರಿಸಿದಂಥ ಬಹುಕೃಪಾಕರನ 4ಗೀತ ಠಾಯಿ ಸುಳಾದ್ಯುಗಾಭೋಗ ಪದ್ಯಪದವ್ರಾತಪ್ರಬಂಧ ರಚಿಸಿ ವಿಠಲನಪ್ರೀತಿ ಬಡಿಸಿ ಕಂಡು ನಲಿವ ವೈಷ್ಣವಾಗ್ರನಾಥ ಪ್ರಸನ್ವೆಂಕಟ ಕೃಷ್ಣಪ್ರಿಯನ 5
--------------
ಪ್ರಸನ್ನವೆಂಕಟದಾಸರು
ತಪ್ಪು ನೋಡದೆ ಬಂದೆಯಾ ನನ್ನ ತಂದೆಯೆಅಪ್ಪ ತಿರುವೆಂಗಳೇಶನೆ ನಿರ್ದೋಷನೆ ಪ.ಆಪಾದಮೌಳಿ ಎನ್ನೊಳುಅಘಬಹಳಶ್ರೀಪತಿ ಕ್ಷಮಿಸಿ ಕಾಯಿದೆಯ ಉದಧಿಶಯ್ಯಾ 1ಜಗದಘಹರನೆಂಬುದು ನಿನ್ನ ಬಿರುದುತ್ರಿಗುಣಾತೀತನೆ ರಾಮನೆ ಗುಣಧಾಮನೆ 2ಇನ್ನೆನ್ನ ಕಲುಷವಾರಿಸೊ ಭವತಾರಿಸೊ ಪ್ರಸನ್ನ ವೆಂಕಟರಮಣ ಭಯಶಮನ 3
--------------
ಪ್ರಸನ್ನವೆಂಕಟದಾಸರು
ತಾತ್ತ್ವಿಕತೆ245ಆರಿಗಾದರು ಪೂರ್ವಕರ್ಮ ಬಿಡದುವಾರಿಜೋದ್ಭವಅಜಭವಾದಿಗಳ ಕಾಡುತಿಹುದುಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ವೀರಭೈರವನಂತೆ ತಾನು ಬತ್ತಲೆಯಂತೆಮಾರಿಮಸಣಿಗಳಂತೆ ತಿರಿದು ತಿಂಬರಂತೆಸೂರ್ಯ ಚಂದ್ರಮರಂತೆ ರಾಹುವಟ್ಟುಳಿಯಂತೆಮೂರೆರಡು ತಲೆ ಹರಗೆ ಕೈಲಿ ಕಪ್ಪರವಂತೆ1ಶಿಷ್ಟ ಹರಿಶ್ಚಂದ್ರನಿಗೆ ಮಸಣದಡಿಗೆಯಂತೆಸೃಷ್ಟಿಸುವ ಬೊಮ್ಮನಿಗೆ ಶಿರ ಹೋಯಿತಂತೆಅಷ್ಟದಿಕಾಲ್ಪಕರು ಸೆರೆಯಾಗಿರುವರಂತೆಕಟ್ಟುಗ್ರದಿಂದ್ರನಿಗೆ ಮೈಯೆಲ್ಲ ಕಣ್ಣಂತೆ2ಹನ್ನೊಂದಕ್ಷೋಹಿಣಿ ಬಲವುಳ್ಳ ಕೌರವನುರಣದೊಳಗೆ ತೊಡೆಮುರಿದು ಬಿದ್ದನಂತೆವನಜಾಕ್ಷ ಸಿರಿಯರಸ ಬಲಿಯ ಬೇಡಿದನಂತೆವನಿತೆ ಧರ್ಮಜನ ತಾಯ್ತಿರಿದುಂಡಳಂತೆ3ಧರೆಗೆ ಧರ್ಮಜನಂತೆ ಕಂಕಭಟ್ಟನಂತೆಶೂರ ಭೀಮನು ಬಾಣಸಿಗನಾದನಂತೆವೀರ ಫಲುಗುಣನಂತೆ ಕೈಯೊಳಗೆ ಬಳೆಯಂತೆಕಿರಿಯ ನಕುಲ ಸಹದೇವರು ತುರುಗಾಯ್ದರಂತೆ4ಹರನ ವಾಹನವಂತೆ ಹುಲ್ಲು ತಿಂಬುವುದಂತೆವಿರಿಂಚಿವಾಹನವಂತೆಕಮಲಭಕ್ಷಿಪನಂತೆಹರಿಯ ಹೊತ್ತಿಹನಂತೆ ಹಾವು ಭಕ್ಷಿಪನಂತೆಸಿರಿಯಾದಿಕೇಶವನು ತಾ ಬೆಣ್ಣೆಗಳ್ಳನಂತೆ5
--------------
ಕನಕದಾಸ