ಒಟ್ಟು 1731 ಕಡೆಗಳಲ್ಲಿ , 50 ದಾಸರು , 1416 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಧವ ಮಧುಸೂದನ ಹರಿ ಜೋ ಜೋ ಯಾದವ ರಾಯ ಶ್ರೀರಂಗನೆ ಜೋ ಜೋ ಪ ವಸುದೇವ ದೇವಕಿ ಸುತನಾಗುದಿಸಿ ವಸುಧÉಯ ಭಾರವನಿಳುಹಿದೆ ಜೋ ಜೋ1 ಶುಕಶೌನಕ ನಾರದಮುನಿ ವಂದ್ಯ ಅಕಳಂಕ ಚರಿತ ಅಚ್ಚುತಾನಂತ ಜೋ ಜೋ2 ಶಿಶುರೂಪನೆತ್ತುತ ಮುದ್ದಿಸುತಿಹ ಅಸುರೆ ಪೂತಣಿ ಅಸುಹೀರಿದೆ ಜೋ ಜೋ 3 ಬಂಡಿಯ ರೂಪದಿ ಬಂದಸುರನ ಸಿರ ಚಂಡಾಡುತ ನಲಿದಾಡಿದೆ ಜೋ ಜೋ 4 ಪೊಂಗೊಳಲೂದುತ ಗಂಗೆಯೊಳಿಹ ಕಾ- ಳಿಂಗನ ಪೆಡೆ ತುಳಿದಾಡಿದೆ ಜೋ ಜೋ 5 ಗೋಪಾಲಕರೊಡನಾಡುತ ನಲಿಯುತ ಪಾಪಿ ಖಳನ ತರಿದಾಡಿದೆ ಜೋ ಜೋ 6 ಸಾಧಾರಣ ವತ್ಸರದಲಿ ಸಲಹುವ ಶ್ರೀದ ಕಮಲನಾಭ ವಿಠ್ಠಲ ಸುಜನರ 7
--------------
ನಿಡಗುರುಕಿ ಜೀವೂಬಾಯಿ
ಮಾಧವನ ಚರಣಾರವಿಂದೆ ಪಾದೆ ಪ ಎದ್ದೋಡಿ ತಿರುಗಿ ನೋಡದೆ ಹೋಹವು ಸದ್ಬಕ್ತಿಯಿಂದ ನಿನ್ನನು ನೋಡಬೇಕೆನುತ ಉದ್ಯುಕ್ತವಾಗೆ ಬ್ರಹ್ಮಹತ್ಯ ಪರಿಹಾರವೊ 1 ಬಂದು ಹರುಷದಲಿ ಕಣ್ಣಲಿ ಕಂಡು ಶಿರವಾಗಿ ವಂದನೆಯ ಮಾಡಿ ಸಾಷ್ಟಾಂಗೆರಗಲೂ ದುರಿತ ರಾಸಿಗಳೆಲ್ಲ ಒಂದು ಉಳಿಯದಂತೆ ಬೆಂದು ಹೋಹವು 2 ಅತಿವೇಗದಿಂದ ಬಂದು ಸ್ನಾನವನು ಮಾಡಲು ಮತಿವಂತರನ ಮಾಡಿ ದುರ್ಮಾರ್ಗ ಬಿಡಿಸಿ ಸಿರಿ ವಿಜಯವಿಠ್ಠಲನ್ನ ಸ್ತುತಿಸಿ ಗತಿ ಪಡೆವಂತೆ ಧನ್ಯರನು ಮಾಡುವ ತಾಯಿ3
--------------
ವಿಜಯದಾಸ
ಮಾಧವನ ನೋಡಿ ಸಂಪಾದಿಸಿದೆ ಭಕುತಿಯನು | ಆದರಪೂರ್ವಕದಿಂದಲಿ ಮಾಧುರ್ಯವಾದ ಮನ | ಮತವಿಡಿದು ಪ ಕರಿ ಮೊರೆ ಇಡಲು ಕೇಳುತ ನಕ್ರನ | ಕಡಿದು ಕರುಣದಿಂದಲಿ ತಡಿಯದಲೆ ಜಡುಮತಿಯ | ಕಡು ಮೆಚ್ಚಿ ಬಂದವನ 1 ಮರಣಕಾಲದಿ ಭಯಂಕರವಾದ ಯಮನ ದೂ | ತರನ ನೋಡಿ ಕರಿಯಲು | ಶರಧಿ ಮಧ್ಯದಲ್ಲಿ | ಮೆರೆವ ಮಧುಸೂದನನ 2 ಜ್ಞಾನ ಪಾಪಿಯ ಸ್ನಾನ ಆನಂದದಲಿ ಮಾಡಿ | ಹೀನ ದೋಷಗಳ ಕಳೆದು | ಜ್ಞಾನವಧಿಕವಾದ ಗುರುಗಳ ಕೃಪೆಯಿಂದ | ಶ್ರೀ ವಿಜಯವಿಠ್ಠಲ ಸೇತುವಾಸನಾ 3
--------------
ವಿಜಯದಾಸ
ಮಾನ ನಿನ್ನದು ಅಭಿಮಾನ ನಿನ್ನದು | ದಾನವಾಂತಕ ರಂಗ ದಯಮಾಡಿ ಸಲಹೊಪ ಒಡೆಯಳು ಕುಳಿತಿರಲು ತೊತ್ತಿನ ಮುಂದಲಿಯ | ಪಿಡಿದೆÀಳೆದೊಯ್ದು ಘಾಸಿಯನು ಮಾಡಿ || ಅಡಿಗಡಿಗೆ ಅಪಮಾನಗೊಳಿಸಿ ಕೊಲೆ ಮಾಡಿದರೆ | ಒಡತಿಗಲ್ಲದೆ ಕೊರತೆ ಅವಳಿಗೇನಯ್ಯಾ1 ಸದನದೊಳು ಪುರುಷನು ಇರುತಿರಲು ಹೆಂಡತಿಯ | ಎದೆಯ ಮೇಲಿನ ಸೆರಗು ಸೆಳೆದುಕೊಂಡು|| ಒದೆದು ಕೈ-ಕಾಲಿಂದ ಮಾನಹಾನಿ ಮಾಡಿದರೆ | ಅದು ಪುರುಷಗಲ್ಲದೆ ವಧುವಿಗೇನಯ್ಯಾ 2 ಪಿತನ ಬಳಿಯಲಿ ಮಗನು ಕುಳಿತಿರಲು ವರ ಮನುಜ | ಖರೆಯಿಂದ ಕೆಡಹಿ ಪಾಶದಲಿ ಕಟ್ಟಿ ಬಿಗಿಯಾಗಿ || ಮತಿಗೆಡಿಸಿ ನಾನಾ ಪ್ರಕಾರ ಭಂಗವ ಮಾಡೆ | ಕ್ಷತಿ ತಂದೆಗಲ್ಲದೆ ಕುವರಗೇನಯ್ಯಾ3 ಆಳುವ ದೊರೆಯ ಸಮ್ಮುಖದಲಿ ಬಂಟನಿರೆ | ಖೂಳರು ಬಂದು ಶಸ್ತ್ರವನು ತೆಗೆದು || ಕೀಳು ಮಾಡಿ ಬಂಟನ ಅಭಿಮಾನ ಕೊಂಡರೆ ಏಳಲವು ಅರಸಗಲ್ಲದೆ ಬಂಟನಿಗೇನು 4 ಸತ್ಯ ಸಂಕಲ್ಪ ಸರ್ಮೋತ್ತಮ ಸುರಪಾಲ | ಅತ್ಯಂತ ಪಾಲಸಾಗರ-ಸದನನೆ || ಭೃತ್ಯರಪಮಾನ ಅಭಿಮಾನ ನಿನ್ನದು ಸದಾ | ಸಿರಿ ವಿಜಯವಿಠ್ಠಲರೇಯಾ 5
--------------
ವಿಜಯದಾಸ
ಮಾನವ ಸಿಂಗನಾದನು ಪ ರಂಗಮಾನವ ಸಿಂಗನಾಗಲು ಭಂಗಾರ ಗಿರಿಯ ಶೃಂಗಗಳಲ್ಲಾಡೆ ಹಿಂಗದೆ ಎಂಟು ಮಾತಂಗ ಸಪುತ ದ್ವೀ- ಪಂಗಳು ಕಂಪಿಸೆ ವಿಗಡದಿ ಅ.ಪ. ವನಜ ಭವನಂದನರಾನಂದದಿ ವನಧಿಯೊಳಿದ್ದ ವನಜನಾಭನ ವನಜಾಂಘ್ರಿ ದರುಶನಕ್ಕೋಸುಗದಿ ಘನ ವೈಕುಂಠ ಪಟ್ಟಣ ಸಾರೆ ವಿನಯರಲ್ಲದ ಜಯನು ವಿಜಯನವ- ರನು ತಡೆಯಲು ಮುನಿದೀರ್ವರಿಗೆ ದನುಜಾಂಗದಿಂದ ಜನಿಸಿರೋ ಎಂದು ಮುನಿಗಳು ಶಾಪವನ್ನು ಈಯೆ 1 ದಿಕ್ಕು ಎಂಟರೊಳು ಕಕ್ಕಸರೆನಿಸಿ ದಿಕ್ಕು ಪಾಲಕರ ಲೆಕ್ಕಿಸದಲೇವೆ ಸೊಕ್ಕಿ ತಿರುಗುವ ರಕ್ಕಸರಾಗಲು ಮುಕ್ಕಣ್ಣ ಬಲದಿಂದಕ್ಕೆ ಜದಿ ನಕ್ಕು ಪರಿಹಾಸ್ಯಕಿಕ್ಕಿ ಸರ್ವರನು ಮುಕ್ಕಿ ಮುಣಿಗಿ ಧರ್ಮಕೆ ವಿರೋಧಿಸಿ ಸಿಕ್ಕದಂತಲ್ಲಲ್ಲಿ ತುಕ್ಕುತಿರೆ 2 ಇತ್ತ ಶಾಪದಿಂದಲಿತ್ತಲೀರ್ವರಿಗಾ ಪೊತ್ತ ಸುರಾಂಗದಲಿತ್ತಲೋರ್ವವನಿಯು ಕಿತ್ತು ಒಯ್ಯಲು ಬೆಂಬುತ್ತಿ ಹರಿಯು ಕೊಲ್ಲೆ ಇತ್ತ ಹಿರಣ್ಯನುನ್ಮತ್ತದಿಂದ ಸುತ್ತುತಿರುವಾಗ ಪುತ್ರನು ಭಾಗವ ತ್ತೋತ್ತಮನಾಗಿ ಸರ್ವೋತ್ತಮ ಬ್ರಹ್ಮನ ಕರವ ಲೋ- ಕತ್ರಯವರಿವಂತೆ ಬಿತ್ತಿದನು3 ಸೊಲ್ಲು ಕೇಳುತಲಿ ಎಲ್ಲೆಲೊ ನಿನ್ನ ದೈ- ವೆಲ್ಲೊ ಮತ್ತಾವಲ್ಲೆಲ್ಲಿಹನೆನುತಲಿ ನಿಲ್ಲದರ್ಭಕನ್ನ ಕಲ್ಲು ಕೊಳ್ಳಿ ಮುಳ್ಳು ಕರವಾಳ ಬಿಲ್ಲು ನಾನಾ ಎಲ್ಲ ಬಾಧೆಯನ್ನು ನಿಲ್ಲದೆ ಬಡಿಸೆ ಎಳ್ಳನಿತಂಜದೆ ಎಲ್ಲೆಲ್ಲಿಪ್ಪನೆಂದು ಸೊಲ್ಲನು ಬೇಗದಿ ಸಲ್ಲಿಸೆನೆ 4 ಏನು ಕರುಣಾಳೊ ಏನು ದಯಾಬ್ಧಿಯೊ ಏನು ಭಕ್ತರಾಧೀನನೊ ಏನೇನು ನಾನಾ ಮಹಿಮನೊ ಏನೇನೊ ಏನೊ-ಈ- ತನ ಲೀಲೆ ಕಡೆಗಾಣರಾರೊ ದಾನವಾಭಾಸನ ಮಾನಹಾನಿ ಗೈಯೆ ಸ್ಥಾಣು ಮೊದಲಾದ ಸ್ಥಾನದಲ್ಲಿ ಸರ್ವ ದೀನರಿಗೆ ದತ್ತ ಪ್ರಾಣನಾಗ 5 ತುಟಿಯು ನಡುಗೆ ಕಟ ಕಟ ಪಲ್ಲು ಕಟನೆ ಕಡಿದು ನೇಟನೆ ಚಾಚುತ ಪುಟಪುಟ ನಾಸಪುಟದ ರಭಸ ಕಠಿನ ಹೂಂಕಾರ ಘಟುಕಾರ ನಿಟಿಲನಯನ ಸ್ಫುಟಿತ ಕಿಗ್ಗಿಡಿ ಮಿಟಿಯೆ ಹುಬ್ಬಿನ ನಿಟಿಲ ರೋಷದಿ ಮಿಟಿಯೆ ಚಂಚು ಪುಟದಂತೆ ರೋಮ ಚಟುಲ ವಿಕ್ರಮುದ್ಧಟ ದೈವ 6 ನಡುಕಂಭದಿಂದ ಒಡೆದು ಮೂಡಿದ ಕಡು ದೈವವು ಸಂಗಡಲೆ ಚೀರಲು ಬಡ ಜೀವಿಗಳು ನಡುಗಿ ಭಯವ ಪಡುತಲಿ ಬಾಯ ಬಿಡುತಿರೆ ಕಡೆಯೆಲ್ಲೊ ಹೆಸರಿಡಬಲ್ಲವರಾರೊ ತುಡುಗಿ ದುಷ್ಟನ ಪಡೆದ ವರವ ಪಿಡಿದು ಅವನ ಕೆಡಿಸಿ ಹೊಸ್ತಿಲೊ- ಳಡಗೆಡಹಿದನು ಪವಾಡದಲಿ 7 ವೈರಿಯ ಪಿಡಿದು ಊರುಗಳಲ್ಲಿಟ್ಟು ಘೋರ ನಖದಿಂದ ಕೊರೆದು ಉದರವ ದಾರುಣ ಕರುಳಹಾರ ಕೊರಳಲ್ಲಿ ಚಾರುವಾಗಿರಲು ಮಾರಮಣ ಸಾರಿಗೆ ಭಕ್ತಗೆ ಕಾರುಣ್ಯಮಾಡಿ ಶ್ರೀ ನಾರೀಶನಾನಂದದಿ ತೋರುತಿರೆ ಸುರ- ವರರ್ನೆರೆದು ಅಪಾರ ತುತಿಸಿ ಪೂ- ಧಾರೆ ವರುಷ ವಿಸ್ತಾರೆರೆಯೆ 8 ನೃಕೇಸರಿಯಾಗೆ ಭಕುತಗೆ ಬಂದ ದುಃಖವ ಕಳೆದು ಸುಖವನೀವುತ್ತ ಅಕಳಂಕದೇವ ಲಕುಮಿಪತಿ ತಾ- ರಕ ಮಂತ್ರಾಧೀಶ ಸುಕುಮಾರ ಅಖಿಳ ಲೋಕಪಾಲಕ ಪ್ರಹ್ಲಾದಗೆ ಸಖನಾಗಿ ಇಪ್ಪ ಸಕಲ ಕಾಲದಿ ಭಂಜನ ವಿಜಯವಿಠ್ಠಲ ಮುಕುತಿ ಈವ ಭಜಕರಿಗೆ9
--------------
ವಿಜಯದಾಸ
ಮಾನವನೆ ನೀ ಮರುಗದಿರೈ ಪ ನಾನು ನನ್ನದೆಂಬಭಿಮಾನದಲಿ ಅ.ಪ ಹೊಟ್ಟೆಗೋಸುಗ ಪರರಿಷ್ಟಾನು ಸಾರದಿ ಕೆಟ್ಟ ನುಡಿಗಳನು ನುಡಿಯುತಲಿ 1 ಸಾವುತಪ್ಪದೆ ಮುಂದೆ ಭಾವಿಸಿ ನೋಡದೆ ಜೀವನಕ್ಕಿಲ್ಲದೆ ನಿರ್ಜೀವಿ ನಾನೆಂದು 2 ಓಲಗ ನಷ್ಟವಾಗೋದಲ್ಲದೆ ಲಾಭವುಂಟೇನೋ3 ದುರುಳರ ಬೇಡುವರೆ ಕರೆಕರೆ ಯಾಕೆ 4 ಹಿರಿಯರು ಪೇಳಿದ ಪರಮಬೋಧೆಯಿಂದಾ ಗುರುರಾಮವಿಠ್ಠಲನ ಚರಣವ ನಂಬಿದೆ 5
--------------
ಗುರುರಾಮವಿಠಲ
ಮಾನಸ ಪೂಜೆಯನು ಮಾಡು | ಧ್ಯಾನ ಪೂರ್ವದಿಂದ ಕುಳಿತು ಪ ಜ್ಞಾನ ಭಕುತಿಯ ವಿಡಿದು ಲಕುಮಿ | ಪ್ರಾಣನಾಥನ ಪ್ರೇರಣೆಯಿಂದ ಅ.ಪ ಕಾಮ ಕ್ರೋಧವ ಹಳಿದು ವಿಷಾದವೆಂಬೋ | ಸ್ತೋಮಗಳನು ತೊರೆದು ರಜೋ ಮೊದಲಾದ || ತಾಮಸದ ಬುದ್ಧಿ ಬಿಟ್ಟು ನೇಮನಿತ್ಯ ತೀರಿಸಿಕೊಂಡು | ಈ ಮನಸ್ಸು ಇಟ್ಟು 1 ಹೃದಯ ಪದುಮದೊಳಗೆ ಹರಿಯ ಪದುಮ ಪದಗಳಿಟ್ಟು | ದೇಹ ಕದಲದಂತೆ ಇದ್ದು ಜ್ಞಾನ ಉದಿತವಾದ ದೃಷ್ಟಿಯ || ಹದುಳದಿಂದ ತಿಳಿದು ಅಂತರವೆಲ್ಲವನು ನೋಡಿ | ಕದವ ತೆರೆದು ಕೊಟ್ಟ ಮುದದಿ ದೃಢವ ಸಂಪಾದಿಸಿ2 ನೀಲ ರತುನದಂತೆ ಹೊಳೆವ ಪಾಲಸಾಗರತನುಜೆ | ಮೇಲು ಮಂಗಳರಮಣನಾದ ಮೇಲುಗಿರಿಯ ತಿಮ್ಮನ || ತವಕ ಬೀಳದಲೆ ಪೂಜೆ ವಿಧಾ | ಸಾಲುಗಳನು ತಿಳಿದು ವಿಶಾಲ ಬುದ್ಧಿ ಯುಕುತಿಯಿಂದ 3 ವೇದ ಮಂತ್ರಗಳನು ಪೇಳಿ ಆದಿಯಲ್ಲಿ ಪೀಠಪೂಜೆ- | ಯಾದ ತರುವಾಯ ವಿನೋದದಿಂದಲಾವರಣ || ಆದರಣೆಯಿಂದ ಬಳಿಕ ಮಾಧÀವರಿಗೆ ಸಕಲ ಭೂಷ- | ಣಾದಿಗಳನು ರಚಿಸಿ ಪುಣ್ಯಹಾದಿಯನು ತಪ್ಪದೆ 4 ದೋಷರಾಶಿಗೆ ದ್ವೇಷನಾಗಿ ಈ ಶರೀರವÀ ಘಾಸಿಮಾಡದೆ | ಪಾದ || ಲೇಸಿನಿಂದ ಭಜನೆಗೈದು ವಾಸವಾಗು ಪದದಲ್ಲಿ | ಶ್ರೀಶ ವಿಜಯವಿಠ್ಠಲರನ್ನ ದಾಸ-ದಾಸರ ದಾಸನೆಂದು5
--------------
ವಿಜಯದಾಸ
ಮಾನಿನಿ ಆ ಮಹಾಭಕುತಿಗಭಿಮಾನಿ ಪ ಸುತ್ರಾಮ ಕಾಮ ರವಿ ಸೋಮವಿನುತೆ ಮದಸಾಮಜ ಗಮನೆ ನೀಲಕುಂತಳೆ ಮೋಹನ್ನೇ-ಸುವಾಣಿ ಚನ್ನೆ ಬಾಲಾರ್ಕ ತಿಲಕರನ್ನೆ ಫಾಲೆ ವಿಶಾಲೆ ಗುಣರನ್ನೆ -ಕುಂದರದನ್ನೆ ಮೂರ್ಲೋಕದೊಳು ಪಾವನ್ನೆ ಕಾಳವ್ಯಾಳ ವೇಣಿ ಮ್ಯಾಲೆ ರ್ಯಾಗಟೆ ಪೊ ನ್ನೊಲೆ ಚವುರಿಗೊಂಡ್ಯ ಹೆರಳು ಭಂಗಾರ ಕು- ನಾಸಿಕ ನೀಲೋ ತ್ಪಲೆ ನೇತ್ರಳೆ ಪಾಂಚಾಲಿ ಕಾಳಿ ನಮೋ 1 ಪೊಳಿವೊ ಕೆಂದುಟಿ ನಸುನಗೆ ಪತ್ತು ದಿಕ್ಕಿಗೆ ಬೆಳಕು ತುಂಬಿರಲು ಮಿಗೆ ಥಳಕು ವೈಯಾರದ ಬಗೆ ಮೂಗುತಿಸರಿಗೆ ಸಲೆ ಭುಜಕೀರ್ತಿ ಪೆಟ್ಟಿಗೆ ಥಳಥಳಿಸುವ ಕೊರಳೊಳು ತ್ರಿವಳಿ ನ್ಯಾ ವಳಿ ತಾಯಿತು ಸರಪಳಿಯ ಪದಕ ಪ್ರ ವಳ ಮುತ್ತಿನ ಸರಪಳಿಗಳು ತೊಗಲು ಎಳೆ ಅರುಣನ ಪೋಲುವ ಕರತಳವ 2 ಕಡಗ ಕಂಕಣ ಮಣಿದೋರೆ-ದೋಷ ವಿದೂರೆ ಝಡಿತದುಂಗುರ ಶೃಂಗಾರೆ ಮುಡಿದ ಮಲ್ಲಿಗೆ ವಿಸ್ತಾರೆ-ಕಂಚುಕಧರೆ ಉಡಿಗೆ ಶ್ವೇತಾಂಬರ ನೀರೆ ಬಡ ನಡು ಕಿಂಕಿಣಿ ನಿಡುತೋಳ್ಕದಳಿಯ ಪೊಡವಿಗೊಡೆಯ ನಮ್ಮ ವಿಜಯವಿಠ್ಠಲನ್ನ ಅಡಿಗಳರ್ಚಿಪುದಕೆ ದೃಢಮನ ಕೊಡುವಳ 3
--------------
ವಿಜಯದಾಸ
ಮಾನಿಸರಿಗೊಶವಲ್ಲ ಪೊಗಳಿ ಪೇಳುವುದು ಪ ಮೇಧಾದಿ ಮುನಿ ತನ್ನ ತಪೋಸಿದ್ಧಿಗೆ ಸರ್ವ | ಮೇದಿನಿ ತಿರುಗಿ ಬರುತಲಿ ಇತ್ತಲು | ಸಾಧನಕೆ ಸೌಮ್ಯವಾದ ಭೂಮಿಯನು ನೋಡಿ ಇವ | ಮಣಿ ಮುಕ್ತಿ ತೀರದಲಿ1 ನೆಸಗಿದ ತಪಕೆ ಮೆಚ್ಚಿ ಹರಿ ಒಲಿದ ತೀವ್ರದಲಿ | ಬಿಸಿಜದಳ ಲೋಚನೆ ಲಕುಮಿಯಿಲ್ಲೀ || ಎಸೆವ ಮಂಜರಿ ವೃಕ್ಷದಲಿ ವಾಸವಾಗಿ | ವಸುಧಿಯೊಳು ವಾಸವಾಗಿ ಅಗ್ರದಲಿ ಮೆರೆದನು 2 ಪರಮೇಷ್ಠಿ ಬಂದು ಈ ಕ್ಷೇತ್ರದಲಿ ನಿಂದು ಚ ಪರಮ ಗತಿ ಕೊಡು ಎಂದು ಸ್ತುತಿಸಿದನು ಹರಿಯ3 ಇಲ್ಲಿಗೆ ಬಂದು ಸತ್ಕರ್ಮವನು ಮಾಡಿದಡೆ | ಎಲ್ಲ ಕ್ಷೇತ್ರದಲಿ ಮಾಡಿದ ಫಲಕಿಂತ | ಎಳ್ಳಿನಿತು ಮಿಗಿಲೆನಿಸಿ ಪುಣ್ಯ ತಂ | ದುಣಿಸುವುದು | ಎಲ್ಲೆಲ್ಲಿ ಇದ್ದರು ಸ್ಮರಣೆ ಮಾಡಿರೊ ಜನರು 4 ಸುಗಂಧ ಪರ್ವತವಾಸ ಪುರುಷೋತ್ತಮ | ನಿಗಮಾದಿಗಳಿಗೆ ಅತಿದೂರತರನೋ | ಸುಗುಣನಿಧಿ ವಿಜಯವಿಠ್ಠಲರೇಯ ಸರ್ವದ | ಗಗನದಲಿ ಪೊಳೆವನು ಬ್ರಹ್ಮಾದಿಗಳ ಸಹಿತಾ 5
--------------
ವಿಜಯದಾಸ
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ
ಮಾಯಾದೊಳಗೆ ಶಿಲ್ಕಿ ಮಗ್ನನಾಗಿ ಮರವೆಗೆ ಒಳಗಾದೆ ಕಾಯಬೇಕಯ್ಯ ನಿನ್ನ ಕರುಣ ರಸವನ್ನು ಕಾಣದೆ ನಾ ಬರಿದೆ ಪ ದೀನದಯಾಪರ ದನುಜಾಂತಕ ನಿಧಾನ ಸುಜನವಂದ್ಯಾ ಮಾನವಾದಿ------ಜನಕ ಸನ್ಮಾನಿತ ಮುಚುಕುಂದ ನಿತ್ಯ ಶ್ರೀ ರಂಗಾ 1 ಇತರ ಜ್ಞಾನತೊರೆದು ಮನಬಣ್ಣ ಮರೆದು ಪಾದ ಸೌಖ್ಯವ ಕಾಣದಿನ್ನೂ ಪಿಡಿವರು ಇನ್ನೂ 2 ಏಸೋ ಬಾರಿ ನಾ ಹುಟ್ಟಿದರೇನು ಇನ್ನು ನಿನ್ನ ಕಾಣದೆ ಮನವು ನಿನ್ನಲ್ಲಿಲ್ಲದೆ ಘಾಸಿಗೆ ಬಿದ್ದೆನು ಕರುಣಿಸೊ ಬೇಗನೆ ಘನ್ನ `ಹೆನ್ನ ವಿಠ್ಠಲನೆ ' ವಾಸುದೇವ ಎನ್ನ ವೈನದಿ ರಕ್ಷಿಸೋ ವಸುಧೆಯ ಪಾಲಕ 3
--------------
ಹೆನ್ನೆರಂಗದಾಸರು
ಮಾಯಾವ್ಯಾತಕೋ ಮಾಧವನೆ ಮಾಯಾವ್ಯಾತಕೋ ಪ ಮಾಯವ್ಯಾತಕೆ ಎನ್ನ | ಪ್ರೀಯ ಸಖನೆ ಲೋಕನಾಯಕ ನೀನಿರೆ ಕಾಯೆ ಕಂಡವರಾ ಅ.ಪ. ಆರು ವರ್ಗಗಳೆಂಬ ಕ್ರೂರರಿಗೊಪ್ಪಿಸಿದೂರಾ ನೋಡುವದು ಉದಾರ ಉಚಿತವೆ 1 ಇಂದಿರೆಯರಸ ಗೋವಿಂದ ನಿನ್ನಯ ಪಾದದ್ವಂದ್ವ ನಂಬಿದವನ ಕುಂದೆಣಿಸುವರೇ 2 ಸುಪರ್ಣ ವಾಹನ ಮೋಹನ್ನ ವಿಠ್ಠಲನೇ 3
--------------
ಮೋಹನದಾಸರು
ಮಾರಜನಕ ಮುರಾರಿ ಕಾಣಮ್ಮ ಪ ಅರುಣ ಚರಣ ಕಳದಿರವು ಅಂಕುಶಧ್ವಜ ಅರವಿಂದ ರೇಖಾಂಕ ಪುರುಷನಾರಮ್ಮ ಉರಗಶಯನ ಕರಸರೋಜ ಮಧ್ಯದೊಳಿಟ್ಟು ಸುರರಿಂದರ್ಚನೆಗೊಂಬ ಹರಿಯು ಕಾಣಮ್ಮ 1 ಪೊಳೆವ ಉದಯ ಶಶಿ ಬೆಳಗು ಸೋಲಿಪ ನಾಖಾ ವಳಿಯಿಂದ ಒಪ್ಪುವ ಚಲುವನಾರಮ್ಮಾ ಕುಲಿಶ ಪಾಣಿಗೆ ಒಲಿದಿಳೆಯೊಳು ಬಂದು ಖಂ ಜಲಧಿ ಕಾಣಮ್ಮ 2 ಅಂದುಗೆ ಗೆಜ್ಜೆ ಕಡಗ ಪೊನ್ನೂಪುರ ತೊಡಂದ ಬರುತಿಹ ಪ್ರೌಢನಾರಮ್ಮ ದೃಢ ಭಕ್ತರೆಡೆಯಲಿ ಬಿಡದೆ ನಲಿಯುತಲಿಪ್ಪ ಮೃಡಸುರಪಾದ್ಯರ ಪತಿಯು ಕಾಣಮ್ಮ 3 ಕರಿಗಲ್ಲಿನಂತೆ ಸುಂದರ ಜಂಘೆ ಜಾನುಗ ಳೆರಡು ತರಣಿಯಂತೆ ಇವನಾರಮ್ಮಾ ಪರಮೇಷ್ಠಿ ಪ್ರಳಯದಿ ಸಿರಿಯಿಂದ ನುತಿಗೊಂಬ ಪರಮ ಪುರುಷ ನರಹರಿಯು ಕಾಣಮ್ಮ 4 ಇಭವರಕರದಂತೆ ಉಭಯ ಊರು ಕಟಿ ಪ್ರಭ ವಸನವನುಟ್ಟ ಸುಭಗನಾರಮ್ಮಾ ರಭಸದಿಂದಲಿ ಕಂಭ ಬಿಗಿದು ಪ್ರಹ್ಲಾದಗೆ ಅಭಯವಿತ್ತ ಸುರಪ್ರಭುವು ಕಾಣಮ್ಮ 5 ವಲಿವಿೂಕ ಬಿಲದಂತೆ ಸುಳಿನಾಭಿ ಜಠರತ್ರಿ ವಳಿಗಳಿಂದಲಿ ಬಲು ಪೊಳೆವನಾರಮ್ಮಾ ನಳಿನೋದ್ಭವನ ಪುತ್ರಾಖಿಳ ಲೋಕ ತಾಳಿದಾ ಹಾಲಾಹಲಕಂಠನ ಗೆಳೆಯ ಕಾಣಮ್ಮಾ 6 ಕೌಸ್ತುಭ ವೈಜಯಂತೀ ಸರ ಸಿರಿಯಿಂದಲೊಪ್ಪೋ ನಿರಯನಾರಮ್ಮ ವರಭೃಗುಮುನಿಪನ ಸ್ಪರುಶವನು ತಾಳ್ದ ಕರುಣ ಸಾಗರ ಸಿರಿಧರನು ಕಾಣಮ್ಮ 7 ಅರಿ ಶಂಖ ಸತತ ಪಿಡಿದಿಹ ಚತುರನಾರಮ್ಮ ದಿತಿಜರ ಸದೆದು ದೇವತೆಗಳ ಸಲಹಿದ ಚತುರಾಸ್ಯ ಕೃತಿದೇವಿ ಪತಿಯು ಕಾಣಮ್ಮ 8 ಧರದಿಂದೊಪ್ಪುತಲಿಹ ಪಿರಿಯ ನಾರಮ್ಮಾ ಸಿರಿಯೊಡನೆ ಕ್ಷೀರಶರಧಿ ಯೊಳೊರಗಿಪ್ಪ ವಜ್ರ ಪಂಜರವನು ಕಾಣಮ್ಮ 9 ಸುರಕಪೋಲ ನಾಸ ಸರಸಿಜನಯನ ಪು ಕುಂಡಲಿ ಯುಗಧರನು ಆರಮ್ಮಾ ಶರಧಿ ಮಥನದಲ್ಲಿ ತರುಣಿಯಾಗಿ ಅಸು ರರ ಮೋಹಿಸಿದ ಅಜರನು ಕಾಣಮ್ಮ10 ಬಾಲಶಶಿಯಂತೆ ಫಾಲಕಸ್ತೂರಿನಾಮ ಮೌಳಿ ಸುಳಿಕೇಶ ಬಾಲನಾರಮ್ಮಾ ಮೂಲೇಶನಾದ ಜಗನ್ನಾಥ ವಿಠ್ಠಲ ಮೂರ್ಲೋಕಾಧಿಪ ಶ್ರೀ ಗೋಪಾಲ ಕಾಣಮ್ಮ11
--------------
ಜಗನ್ನಾಥದಾಸರು
ಮಾವಿನುತ ಹರಿ ವಿಠಲ ಸಲಹ ಬೇಕಿವನ ಪ ನೀ ವೊಲಿಯದಿರಲ್ಯಾರುಗತಿ | ಜೀವಿಗಳಿಗಿರುತಿಹರೊ ದೇವ ಅ.ಪ. ದುರುಳ ಕಶ್ಯಪು ತನ್ನ | ತರಳನನು ಪರಿಪರಿಯಉರುತರದಿ ಭಾದಿಸಲು | ಪೊರೆದ ತೆರದಂತೇಶರಣಜನ ವತ್ಸಲಗೆ | ನರಹರಿಯೆ ಕುಲದೈವಕರುಣದಿಂದಲಿ ನೀನೆ | ಪೊರೆಯ ಬೇಕಿವನ 1 ಸೇವ್ಯ ಕಮಲ ಭವ ಮುಖ್ಯ | ಸಕಲ ಜಗಕರ್ತಾ 2 ಕರ ಪಿಡಿದಿವನಮೃತ್ಯುಂಜಯಾರಾಧ್ಯ | ಉತ್ತಮೋತ್ತಮನೆ 3 ಮಾರ ಪಿತ ಹರಿಯೇತೋರುತವರೂಪ ಹೃ | ದ್ವಾರಿಜದಲೆಂದೆನುತಮಾರಾರಿ ಬಿಂಬನಿಗೆ | ಪ್ರಾರ್ಥಿಸುವೆ ಹರಿಯೆ 4 ಪ್ರಿಯತಮನು ನೀನೆಂಬ ಸಥೆಯಿಂದ ಬೇಡುವೆನೊವಯನ ಗಮ್ಯನೆ ಹರಿಯೆ | ವಾಯ್ವಂತರಾತ್ಮಾಹಯಮೊಗಾಭಿಧ ಗುರು ಗೋವಿಂದ ವಿಠ್ಠಲನೆದಯಬೀರಿ ಶರಣನ್ನ ಉದ್ಧರಿಸೊ ದೇವಾ5
--------------
ಗುರುಗೋವಿಂದವಿಠಲರು
ಮುಕುತಿ ತಮಸು ಎರಡಿಲ್ಲೆ ಕಂಡ್ಯಾ ಮುಕುತಿ ಬೇರೆ ತಮಸು ಬೇರಿಲ್ಲ ಕಂಡ್ಯಾ ಪ ಗುರುಪಾದ ಒಡಗೊಂಡು ಮರುತ ಶಾಸ್ತ್ರವ ನೋಡಿ ಹರಿಯ ಗುಣಂಗಳ ಕೊಂಡಾಡುತ ಪರಮ ಉತ್ತಮರು ಬರಲು ಬನ್ನಿ ಬನ್ನೆಂದು ಎರಗಿ ತಕ್ಕೈಸಿ ಕೊಂಡುಂಬುವದೆ ಮುಕ್ತಿ 1 ನಾನು ನೀನು ಎಂದು ಜ್ಞಾನವನೆ ತಿಳಿಕೊಂಡು ತಾ ನಿಲ್ಲದಿಲ್ಲೆಂದು ಪೇಳಿಕೊಂಬಾ ಈ ನಾಡಿನೊಳಗಿವ ಹೀನವನು ಎಂಬರ್ಥ ಈ ನುಡಿ ಎನಿಸಿಕೊಂಬುದೆ ತಮಸು 2 ಒಂದರೊಳಾನಂತ ಅನಂತದಲಿ ಒಂದು ಒಂದೊಂದು ಅನಂತ ಹರಿಪ್ರೇರಕ ಎಂದು ಗ್ರಹಿಸಿ ಹರಿಗುರು ಹರಿದ್ವೇಷಿಗಳನ್ನ ನಿಂದಕವಾಗಿ ಬಾಳುವದೆ ಮುಕ್ತಿ 3 ಅನ್ನದಾ ಸಮಯ ಇಲ್ಲದೆ ಕಂಡಲ್ಲಿ ತಿನ್ನಲೋಡಿ ಸಮಯವೆನ್ನದೆ ಅನ್ಯರ ಬದುಕ ಪಹರಿಸುವ ಖಲು ಗನ್ನ ಫಾತಕನೆನಿಸಿಕೊಂಬುವದೆ ತಮಸು 4 ಮೀಸಲಾ ಮನದಲ್ಲಿ ವಾಸುದೇವನ ನಿಜ ವಾಸರದಲ್ಲಿ ಜಾಗರಾ ಮಾಡುವಾ ಆಶೆಬಡಕನಲ್ಲ ದೇಶದೊಳಗೆ ಹರಿ ದಾಸನೆಂದು ಪೇಳುವುದೆ ಮುಕ್ತಿ 5 ವ್ರತವಿಲ್ಲ ವಾವಿಲ್ಲ ಮತಿ ಮೊದಲು ಇಲ್ಲಾ ಕಥಾಶ್ರವಣ ಒಂದು ಕೇಳಲಿಲ್ಲ ಪಿತ ಮಾತರನ್ನ ಬೊಗಳುವ ನಾಯಿ ಕು ತ್ಸಿತನು ಎಂದೆನಿಸುವದೆ ತಮಸು 6 ಗುಣ ಒಳ್ಳೇದು ನೀತಿ ಮನ ಒಳ್ಳೇದು ಅಜ ತೃಣ ಜೀವಾದಿಯ ಭೇದಬಲ್ಲನಿವ ಗಣನೆಮಾಡ ವಿಜಯವಿಠ್ಠಲನಲ್ಲದೆ ಕ್ಷಣ ಹೀಗೆ ಎಂದೆನಿಸುವದೆ ಮುಕ್ತಿ 7
--------------
ವಿಜಯದಾಸ