ಒಟ್ಟು 29424 ಕಡೆಗಳಲ್ಲಿ , 137 ದಾಸರು , 9577 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟೇಶ ಶ್ರೀ ವೆಂಕಟೇಶ ಪಾಲಿಸುಕಿಂಕರನ ವೆಂಕಟೇಶ ಪ.ಸುವರ್ಣಮುಖರಿಲಿ ಶಿವನುತಪಾದಾಬ್ಜಸುವರ್ಣಗಿರಿ ವೆಂಕಟೇಶನವ್ಯಚಂದನ ಮೃಗನಾಭಿ ಚರ್ಚಿತಗಾತ್ರಅವ್ಯಾಕೃತನೆ ವೆಂಕಟೇಶ 1ಹಲವಪರಾಧಿ ನಾ ಭೂರಿದಯಾಳು ನೀನೆಲೆಗೆ ನಿಲ್ಲಿಸು ವೆಂಕಟೇಶಬಲು ತಮ ತುಂಬಿದ ಭವದಿ ಕರುಣಶಶಿಬೆಳಗು ಬೆಳಗು ವೆಂಕಟೇಶ 2ತಂದೆ ತಾಯಿ ನೀನೆಸಖಸಹೋದರ ನೀನೆಹಿಂದೆ ಮುಂದೆ ನೀ ವೆಂಕಟೇಶಹೊಂದಿದ ಬಂಟನ ಕಂದಾಯ ನಡೆಸಯ್ಯಕುಂದನಾಡದೆ ವೆಂಕಟೇಶ 3ಸಾಕು ನೀ ಸಾಕದಿದ್ದರೆ ಬಿಡು ನಾ ಬಿಡೆಜೋಕೆ ಬಿರುದು ವೆಂಕಟೇಶನೀ ಕೈಯ ಜರಿದರೆಕಾಕುಮಾಡುವರೆನ್ನಪೋಕವೃತ್ತರು ವೆಂಕಟೇಶ4ನಂಬಿದೆ ನಂಬಿದೆ ನಂಬಿದೆ ನಿನ್ನಪಾದದಿಂಬಿನೊಳಿಡು ವೆಂಕಟೇಶಬಿಂಬ ಮೂರುತಿ ಪ್ರಸನ್ವೆಂಕಟೇಶಪ್ರತಿಬಿಂಬಕ್ಕರುಹು ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ವೆಂಕಟೇಶನ ಮಹಿಮೆಯ ಹೊಗಳುವಕಿಂಕರಧನ್ಯನಯ್ಯಪ.ಇಳೆಯ ಭಕ್ತರ ನೋಡಿದ ವೈಕುಂಠದಿಂದಿಳಿದು ಶ್ರೀಸಹಿತ ಬಂದಸಲೆ ಸುವರ್ಣಮುಖರಿಯ ತೀರವಒಲಿದು ನಿಂತನು ತಿಮ್ಮ್ಮಯ್ಯ 1ಭೂವರಾಹ ಸ್ವಾಮಿಯ ಸನ್ನಿದಶ್ರೀವತ್ಸಲಾಂಛನಿಹಶ್ರೀವಿಮಾನಸಹಿತ ದೇವಾಧಿದೇವ ತಾನಿಲ್ಲಿ ನಿಂತ 2ಸ್ವಾಮಿ ಪುಷ್ಕರಿಣಿಯೆಂಬ ತೀರ್ಥದನಾಮದ ಮಹಿಮೇನೆಂಬೆಆ ಮಹಾ ದುಷ್ಕøತವು ಸ್ನಾನದನೇಮದಲ್ಲೋಡುವುದು 3ರಾಜಾಧಿರಾಜನಿತ್ಯಉಪಚಾರಪೂಜೆ ಲೋಕಾರ್ಥದೊಳು ತಾಮೂಜಗಕಾನಂದವವರಕರುಣಾಜಲಧಿ ಕೊಡುವ 4ನಿತ್ಯಸ್ವಾರಿಗೈದುವಸುರಋಷಿಮೊತ್ತದಿ ಚರಿಪದೇವಮತ್ತೆ ಆ ಲಕ್ಷ್ಮಿಯ ಕೂಡ ಮುನಿವದೊಂದರ್ತಿಯ ಬುಧರು ನೋಡಿ 5ನುಡಿವ ಸಾವಿರ ಪೇರ್ಗಂಟೆ ಉಬ್ಬುಬ್ಬಿಹೊಡೆವರ್ಯೊಡೆ ಜಾಗಟೆಬಡಿವ ಕರಡೆ ಭೇರಿಯು ಮುಂದೆ ಉಗ್ಗಡಿಪ ಸಾಮಗಾನವು 6ಚಿತ್ರವರ್ಣದ ಸತ್ತಿಗೆ ಸಾಲ್ಗಳುಸುತ್ತಲು ಕೈ ದೀವಿಗೆಉತ್ತಮ ವಾಹನವೇರಿ ವಿಶ್ವದಕರ್ತಬಂದನು ಉದಾರಿ7ಉದಯ ತೋಮಾಲೆ ಸೇವೆ ಪುಳುಕಾಪುಮೊದಲಾದ ದಿವ್ಯಸೇವೆಒದಗಿದವಸರಂಗಳು ನೈವೇದ್ಯಮೃದುಭಕ್ಷ್ಯವರಪೊಂಗಲು8ಅತಿರಸ ಮನೋಹರವುದಧ್ಯನ್ನಅತಿರುಚಿ ಅನ್ನವಾಲವುಕ್ಷಿತಿಯ ಮೇಲಿಹ ಭಕ್ತರು ಶ್ರೀಲಕ್ಷ್ಮೀಪತಿಗೆ ಅರ್ಪಿಸುತಿಹರು 9ಹೂವಿನಂಗಿಯ ತೊಡುವಮೃಗಮದಲಾವಣ್ಯ ತಿಲಕಿಡುವಕಾವನಂತರ ತೇಜವ ಗೆಲ್ಲುವಸಾವಿರ ಹೆಸರ ದೇವ 10ತಪ್ಪದೆ ನುಡಿವಂದನು ಮುಡಿಪಿನಕಪ್ಪವೆಣಿಸಿ ಕೊಂಬನುಚಪ್ಪನ್ನ ದೇಶಸ್ತರು ಬಂದು ಸಮರ್ಪಣೆ ಮಾಡುವರು 11ಕೊಟ್ಟ ವಾಕ್ಯಕೆ ತಪ್ಪನು ವರಭಯವಿಟ್ಟು ಸಾಕುತಲಿಪ್ಪನುಇಷ್ಟಾರ್ಥದಾತನಯ್ಯ ವಿಶ್ವದಶಿಷ್ಟರೊಡೆಯ ತಿಮ್ಮಯ್ಯ 12ಕಿರೀಟ ಕುಂಡಲವಿಟ್ಟನು ತಿಮ್ಮಯ್ಯಕರುಣ ನೋಟದ ಚೆಲ್ವನುಅರಿಶಂಖವನು ಧರಿಸಿದ ಹಾರಕೇಯೂರ ಕೌಸ್ತುಭದಲೊಪ್ಪಿದ 13ತೋಳಬಂದಿಯು ಕಂಕಣಮುದ್ರಿಕೆಕೀಲುಕಡಗಒಡ್ಯಾಣನೀಲಮಾಣಿಕ ಪಚ್ಚದ ಮುತ್ತಿನಮಾಲೆಗಳಿಂದೊಪ್ಪಿದ 14ಮಣಿಮಯ ಕವಚ ತೊಟ್ಟ ಗಳದಲಿಮಿನುಗುವಾಭರಣವಿಟ್ಟಕನಕಪೀತಾಂಬರವು ಕಟಿಯಲ್ಲಿಅಣುಗಂಟೆಗಳೆಸೆದವು 15ರನ್ನದಂದುಗೆಯನಿಟ್ಟಿಹ ಪಾದಕೆಪೊನ್ನಹಾವುಗೆಮೆಟ್ಟಿಹಘನ್ನ ದೈತ್ಯರ ಸೋಲಿಪ ಬಿರುದಿನಉನ್ನತ ತೊಡರಿನಪ್ಪ 16ದಿನಕೆ ಸಾವಿರ ಪವಾಡ ತೋರುವಜನಕೆ ಪ್ರತ್ಯಕ್ಷ ನೋಡಘನಶಾಮ ತಿರುವೆಂಗಳ ಮೂರ್ತಿಯಮನದಣಿಯೆ ಹೊಗಳಿರೆಲ್ಲ 17ಭೂವೈಕುಂಠವಿದೆಂದು ಸಾರಿದಭಾವಿಕ ಭಕ್ತ ಬಂಧುಶ್ರೀ ವಾಯುಜಾತ ವಂದ್ಯ ಶ್ರೀನಿವಾಸಗೋವಿಂದ ನಿತ್ಯಾನಂದ 18ಸೇವಕಜನರಪ್ರಿಯಅರುಣರಾಜೀವಲೋಚನ ತಿಮ್ಮಯ್ಯದೇವಶಿಖಾಮಣಿಯು ಬ್ರಹ್ಮಾದಿದೇವರಿಗೆ ದೊರೆಯು 19ಕಶ್ಚಿಜ್ಜೀವನೆನ್ನದೆ ನನ್ನನುನಿಶ್ಚಯದಲಿ ಹೊರೆವನುಆಶ್ಚರ್ಯಚರಿತ ನೋಡಿ ಶರಣರವತ್ಸಲನ ಕೊಂಡಾಡಿ 20ಆರಾಶ್ರಯಿಲ್ಲೆನಗೆ ದ್ರಾವಿಡವೀರನೆ ಗತಿಯೆನಗೆಭೂರಿಪ್ರಸನ್ವೆಂಕಟಪತಿ ಸುಖತೀರಥವರದ ನಮೊ 21
--------------
ಪ್ರಸನ್ನವೆಂಕಟದಾಸರು
ವೇಗದಿ ಪಿಡಿ ಎನ್ನ ಕೈಯ್ಯಾ ಪಆಗಾಮಿಸಂಚಿತಭೊಗಗಳುಳ್ಳಭವ-ಸಾಗರದಲ್ಲಿ ಬಿದ್ದೆ ವೇಗದಿ ನೀ ಬಂದು ಅ.ಪಭಾವದ್ರವ್ಯ ಕ್ರಿಯಾದ್ವೈತ ಇದರನು-ದೇವರೆಂದನುದಿನ ಭಾವಿಸಿದೆನ್ನನು 1ಅಶನವಸನಕಾಗಿ ನಾಪರಅಸಮ ನಿನ್ನಯಪಾದಬಿಸಜಭಜಿಸದೆವಸುಮತಿಯೊಳು ಬಲು ಹಸನಗೆಟ್ಟೆನ್ನನು 2ಸರಿಯನೀಸೀಪರಿ ಧೆರೆಯೊಳು ಪಾಲಿಸು 3
--------------
ಗುರುಜಗನ್ನಾಥದಾಸರು
ವೈದ್ಯ ಬಂದ ನೋಡಿ - ವೆಂಕಟನೆಂಬ |ವೈದ್ಯ ಬಂದ ನೋಡಿ ಪ.ವೈದ್ಯ ಬಂದನು ವೇದವೇದ್ಯ ನೋಡೀಗಲೇಶ್ರೀದೇವಿರಮಣನು ಶ್ರೀನಿವಾಸನೆಂಬ ಅಪಎಷ್ಟು ದಿನದ ರೋಗಗಳೆಂಬುದ ಬಲ್ಲ |ಗಟ್ಟಿಯಾಗಿ ಧಾತುರಸಗಳನು ಬಲ್ಲ ||ಕಷ್ಟ ಬಡಿಸದಲೆನ್ನ ಭವರೋಗ ಬಿಡಿಸುವ |ಶಿಷ್ಟವಾದ ದೇಹ ಕೊಟ್ಟು ಕಾಯುವನಿವ 1ಹೊನ್ನು - ಹಣಂಗಳ ಅನ್ನವ ಅನುಸರಿಸಿ |ತನ್ನ ದಾಸನೆಂಬ ನಿಜವ ನೋಡಿ ||ಚೆನ್ನಾಗಿ ಜಿಹ್ವೆಗೆ ಸ್ವಾದವಾಗಿರುವಂಥ |ತನ್ನ ನಾಮಾಮೃತ ದಿವ್ಯ ಔಷಧವೀವ 2ಈತ ದಿಟ್ಟಿಸಿ ನೋಡೆ ಎಳ್ಳಷ್ಟು ರೋಗವಿಲ್ಲ |ಈ ತನುವಿಗೆಂದೆಂದು ರೋಗಬರಲರಿಯದು ||ಈತ ಅನಂತರೂಪದಿ ಜೀವರಿಗೆ ಮುನ್ನ |ಪ್ರೀತಿಯಿಂದಲಿ ಭವರೋಗ ಬಿಡಿಸುವ 3ಧರ್ಮವೈದ್ಯನಿವ ಜಗಕ್ಕೆಲ್ಲ ಒಬ್ಬನೆ |ಮರ್ಮಬಲ್ಲ ರೋಗಜೀವಂಗಳ ||ನಿರ್ಮಲವಾಗಿಹ ತನ್ನ ನಾಮಸ್ಮರಣೆ |ಒಮ್ಮೆ ಮಾಡಲು ಭವರೋಗ ಬಿಡಿಸುವ 4ಅನ್ಯ ವೈದ್ಯನೇಕೆ ಅನ್ಯ ಔಷಧವೇಕೆ ? |ಅನ್ನ ಮಂತ್ರ - ತಂತ್ರ - ಜಪವೇತಕೆ ? ||ಚೆನ್ನ ಪುರಂದರವಿಠಲನ್ನ ನೆನೆದರೆ |ಮನ್ನಿಸಿ ಸಲಹುವ ವೈದ್ಯ ಶಿರೋಮಣಿ 5
--------------
ಪುರಂದರದಾಸರು
ವೈರಾಗ್ಯದಾವಾಗ್ನಿ ಉರಿಯು ಛಟಿಛಟಿಸಿತುಸರ್ವಪ್ರಪಂಚವೆಲ್ಲವ ಅಟ್ಟಟ್ಟಿ ಸುಟ್ಟಿತುಪಸತಿಸುತರು ಎಂಬ ಹೆಮ್ಮರವೀಗ ಸುಟ್ಟವುಪಿತೃ ಮಾತೃವೆಂಬ ಪಲ್ಲವ ಕರಿಕಿಟ್ಟಿತುಹಿತವೆಂಬ ಬಳ್ಳಿಗಳು ಅನಿಲ ಪುಟ್ಟವಿಟ್ಟವುಅತಿಭಾಗ್ಯವೆಂದೆಂಬ ಸಿಂಗಾರ ಹೊಗೆಯಿಟ್ಟವು1ಏಸೋ ಬಂಧುಗಳೆಂಬ ಧ್ರುಮವು ಶಿಖಿಸೋಂಕಿದವುಕ್ಲೇಶವೆಂದೆಂಬ ಕರಡವು ಭುಗಿ ಭುಗಿ ಲೆಂದವುವಾಸಗಳೆಂದೆಂಬಕುಡಿಕಿಡಿಯಾಗಿ ಉದುರಿದವುಆಸೆ ಎಂಬ ಫಲ ವಹ್ನಿಗಾಹಾರವಾದವು2ಘನಭ್ರಾಂತಿ ಎಂಬ ಪಕ್ಷಿಗಳು ಹಾರಿಹೋದವುಮನೆಯೆಂಬ ಗೂಡುಗಳು ನಿಗಿನಿಗಿಯಾದವುಬಿನುಗುಚಿಂತೆ ಎಂಬ ಹರಿಣ ಮುಗ್ಗರಿಸಿದವುಮನಸಿಜನ ಕ್ರೋಧವೆಂಬ ಕಳ್ಳರು ಸತ್ತಿಹರು3ಅಷ್ಟಮದದಾನೆ ಎಂಬುವು ಅಡವಿಯ ಹಿಡಿದವುತುಚ್ಛವಿಷಯಗಳೆಂಬ ನರಿಗಳೋಡಿದವುದುಷ್ಟಗುಣವೆಂದೆಂಬ ದುರ್ಜನ ಮೃಗವು ಚಲ್ಲಿದವುಕಷ್ಟ ತಾಪತ್ರಯದ ಕತ್ತಲು ಹರಿಯಿತು4ಇಂತು ಪ್ರಪಂಚವೆಂಬೀ ವೈರಾಗ್ಯದಾವಾಗ್ನಿಯಂತೆ ಧಗಧಗನೆ ಝಗಝಗನೆ ಸುಡುತಲಿಚಿಂತಯಕ ಚಿದಾನಂದ ಉರಿಯು ಅಖಂಡವಾಗಿಶಾಂತರೆಂಬರ ಮುಕ್ತರುಗಳ ಮಾಡಿತ್ತು5
--------------
ಚಿದಾನಂದ ಅವಧೂತರು
ವ್ಯರ್ಥ ಆಯು ಕಳೆಯಬ್ಯಾಡಿರೊ ಶ್ರೀಹರಿಯ ಸಂಕೀರ್ತನೆಯ ಮರೆಯಬ್ಯಾಡಿರೊಮೃತ್ಯು ಬಾರದಿರದು ಮುನ್ನೆ ಮನೋನೂರುವರ್ಷಕೆ ಪ.ಹಿಂಡುಹೀನ ಯೋನಿಮುಖದಲಿ ತಾಬಂದು ಬಂದು ಕುಕರ್ಮ ಸವೆಯದಾಯಿತುಕಂಡ ಕುಹಕರ ಕೂಡ ಕೊಂಡಮಾತನಾಡಿ ಯಮದಂಡ ತೆರಬ್ಯಾಡಿ ಕೋದಂಡಕರನ ಹೊಗಳಿರೊ 1ಬಾಲತ್ವವು ಆಟಕಾಯಿತು ಈ ಯೌವನವುಬಾಲೆಯರ ಬ್ಯಾಟಕಾಯಿತುಮ್ಯಾಲೆವಾರ್ಧಕ್ಯಕಂಗಬೀಳೆ ಸೊಪ್ಪಾಗಿ ಹೊಲಸಲದೀಗ ಎಚ್ಚರಿಕೆಯಲ್ಲಿ ಹರಿಯ ನೆನೆಯಿರೊ 2ಹಗಲು ಹಸಿವೆ ತೃಷೆಗೆ ಪೋಯಿತು ಯಾಮಿನಿಯುಮಿಗಲು ಮೀರಿ ಮಧು ಮುಸುಕಿತುಸುಗುಣನಾಗಿ ಭವದ ನಂಬಿಕೆಯನೀಗಿಪ್ರಸನ್ವೆಂಕಟನಗಪತಿಯ ಪಾದಪದ್ಮಯುಗಳವನೆÀ ಕೊಂಡಾಡಿರೊ 3
--------------
ಪ್ರಸನ್ನವೆಂಕಟದಾಸರು
ವ್ಯರ್ಥ ಕೆಟ್ಟೆಯೋ ಸಂಸಾರವನು ನಂಬಿಕಾಣೆನೋ ಜನರನು ಯಡ್ಡೆಸಾರ್ಥಕವಾಗುವಮಾರ್ಗಕಾಣಲಿಲ್ಲನರಜನ್ಮಕೆ ಬಂದು ಗೊಡ್ಡೆಪಹಿರಿಯರನಂಜಿಯೋ ಹೆಂಡತಿ ಕಿವಿಯೊಳುಲೊಟಕೆಯ ಹಾಕುವ ಮಂದಿದುರುಳಯಮದೂತರು ತಾವೀಗ ಬಂದರೆಹಾಕುವವರು ನಿನಗೆ ಭಂಗಿ1ದಾನಕೆ ಇಲ್ಲವು ಧರ್ಮಕೆ ಇಲ್ಲವುಹೆಂಡತಿಯಾದರೆ ಬಡವಿಏನು ಎಂಬೆಯೋ ಯಮದೂತರವರಿಗೆಹೇಳಲೋ ನೀನೀಗ ಬಡವಿ2ಹೆಂಡತಿ ಮರುಕಕೆ ಬಗ್ಗಿ ಬಗ್ಗಿಯೇ ನೋಡ್ವೆಮೋರೆಯ ಬಣ್ಣಕೆ ಮೆಚ್ಚಿಭಂಟರು ಯಮದೂರತು ಬರಲು ಏನಹೇಳುವೆಯಲೆ ಹುಚ್ಚಿ3ಹೆಂಡತಿ ಮಕ್ಕಳು ಬುದ್ಧಿಯ ಹೇಳುವರುವಳ್ಳಿತಾಗಿ ನೀನೀಗ ಕೇಳೋಕೆಂಡವನುಗುಳುತ ಯಮದೂತರೊಯಿದರೆಬಿಡಿಸಿಕೊಳ್ಳಹೇಳೋ4ಹೆಂಡಿರು ಮಕ್ಕಳು ಹಿತರೆಂದು ನಂಬಲುಕೆಡುವೆ ನೀನೀಗ ಕಂಡ್ಯಾಚೆನ್ನ ಚಿದಾನಂದ ಸದ್ಗುರುವನು ನಂಬುಕಡೆಹಾಯಿದು ಹೋಗುವಿ ಕಂಡ್ಯಾ5
--------------
ಚಿದಾನಂದ ಅವಧೂತರು
ವ್ಯಾಪಾರವೆನಗಾಯಿತುಶ್ರೀಪತಿಯ ಪಾದಾರವಿಂದ ಸೇವೆಯೆಂಬ ಪಹರಿಕರುಣವೆಂಬಂಗಿಗುರುಕರುಣಮುಂಡಾಸುಹರಿದಾಸರ ದಯವೆಂಬ ಒಲ್ಲಿ ||ಪರಮಪಾಪಗಳೆಂಬ ಪಾಪೋಸವನೆ ಮೆಟ್ಟಿದುರುಳಾತ್ಮರಾದವರ ಎದೆ ಮೇಲೆ ನಡೆವಂಥ 1ಬಿಳಿಯ ಕಾಗದ ಹೃದಯ ಬಾಯಿ ಕಲಮದಾನಿನಾಲಗೆಯೆಂಬ ಲೆಕ್ಕಣಿಕೆ ||ಶ್ರೀಲೋಲನ ದಿವ್ಯನಾಮವೆಂಬುವ ಲೆಕ್ಕಶೀಲದಿ ಬರೆದು ಶ್ರೀಹರಿಗೆ ಒಪ್ಪಿಸುವಂಥ 2ನುಡಿನುಡಿಗಾನಂದ ಬಾಷ್ಪ ರೋಮಾಂಚನಮುಡುಪಿನೊಳಗೆ ಇಟ್ಟ ಕೈಜೀತವು ||ಕಡಿಮೆ ಸಂಬಳಕೆಲ್ಲ ಮುಕ್ತಿಸಾಧನವನ್ನುಕೊಡುವ ತೆರನಂತೆ ಚೀಟಿ ಬರೆಸಿಕೊಟ್ಟ 3ಹಿಂದಿನ ಸಂಸಾರ ಆಗಮನದ ಭಯಎಂದೆಂದಿಗದರ ಚಿಂತೆಯು ಬಿಟ್ಟಿತು ||ಮುಂದಿನ ಸಂಸಾರ ಸ್ಥಾನ ಭಾರಕೆಲ್ಲಸಂದಾಯವನು ಮಾಡಿ ಕತಬಿ ಹರಿಸಿಕೊಟ್ಟ 4ಕಂಡಕಂಡವರ ಕಾಲುಗಳಿಗೆರಗಿ ನನ್ನಮಂಡೆದಡ್ಡುಗಟ್ಟಿ ಬಳಲಿದೆನೊ ||ಪುಂಡರೀಕಾಕ್ಷಶ್ರೀಪುರಂದರವಿಠಲನುಕಂಡು ವೀಳೆಯ ಕೊಟ್ಟು ತನ್ನ ಸೇವೆಗೆ ಇಟ್ಟ 5
--------------
ಪುರಂದರದಾಸರು
ವ್ಯಾಸರಾಯಾ ಅಸ್ಮದ್ಗುರೋ ವ್ಯಾಸರಾಯಾ ಪವಿಶೇಷ ಙ್ಞÕನ ಭಕ್ತಿ ಲೇಸಾಗಿ ಸಲಿಸಯ್ಯಾ ಅ.ಪದಾಸನಾಮಕದ್ವಿಜದೇಶಮುಖನ ಮನಿ-ಕೂಸಾಗಿ ಜನಿಸಿದೆ ಭೂಸ್ಪರ್ಶವಿಲ್ಲದೆ 1ಶ್ರೀಪಾದರಾಯರು ಈಪರಿನಿನ್ನನುಕಾಪಾಡಿ ನವವರ್ಷ ಭೂಪತಿ ಮಾಡಿದರೋ 2ವಸುದೇವ ಸುತನನ್ನು ಸುಸಮಾಧಿಯಲಿ ಪಡೆದೆ 3ಕಲೆಯಂತೆ ದಿನದಿನದಲಿ ವೃದ್ಧನಾದೆ ನೀ 4ಚಂಪಕತರುಮುಖ್ಯ ಕಂಪಿತ ನದಿಯುತಪಂಪಾಕ್ಷೇತ್ರದಿ ಮಹಾ ಸಂಪತ್ತಿನಿಂದಿದ್ದೆ 5ತರ್ಕಿಸಿ ಯಂತ್ರಸ್ಥ ಚಕ್ರದಿ ಬಂಧಿಸಿದೆ 6ಮಧ್ವರಾಯರ ತಂದು ಸಿದ್ಧಮಾಡಿ ಇಟ್ಟೆ 7ಮಂದಜನಕೆÀ ಸುಧಾ ಛಂದಾಗಿ ಇದರರ್ಥಪೊಂದದೆಂದು ನೀನು ಚಂದ್ರಿಕೆ ರಚಿಸಿದೆ 8ಇನಿತೆ ಮಹಾಮಹಿಮೆ ಘನವಾಗಿ ಜನರಿUಅನುಭವ ಮಾಡಿಸಿದೆ ಅನುಪಮ ಚರಿತನೆ 9ಶುಭಮಯ ಸ್ಥಳದಲ್ಲಿ ಅಭಯನಾಗಿ ನಿಂತೆ ನೀ 10ಛಂದದ ನವಶುಭವೃಂದಾವನದೊಳಿದ್ದೆ 11ಇಂದುನಿಮ್ಮಯಪಾದಪೊಂದಿ ಎನ್ನಯವೃಜಿನ-ವೃಂದ ಪೋದವು ಅರ್ಕನಿಂದ ತಿಮಿರದಂತೆ 12ವಂದಿಸಿ ಬೇಡುವೆ ನಂದದಿ ಸಲಹಯ್ಯ 13ಇಂದುರಕ್ಷಕರಿಲ್ಲವೆಂದು ನಿನ್ನನು ಸಾರ್ದೆ14ಯಿಂದ ಕರೆದು ಕಾಯೋ ನಂದಾದಾಯಕ ನೀನೆ 15ದೃಷ್ಟಿ ಪಾಲಿಸೊ ಸರ್ವೋತ್ಕøಷ್ಟ ಮಹಿಮ ನೀನೆ 16ಮಾತು ಲಾಲಿಸೊ ನಿಜತಾತ ನೀನೆ ಸೀತಾ -ನಾಥ ಗುರುಜಗನ್ನಾಥವಿಠಲನಾಣೆ 17
--------------
ಗುರುಜಗನ್ನಾಥದಾಸರು
ವ್ಯಾಸೋಕ್ತಿಯನುಸರಿಸಿ ಹತ್ತು ಅವತಾರವನುಶ್ರೀಶ ಮಾಡಿದ ದಿನದ ಕ್ಲಪ್ತಿಯಂ ಬರೆವೆ ಸಂ- |ತೋಷದಿಂ ಕೇಳ್ಪುದೆಲ್ಲರು ಪೊರೆವ ಹರಿಯು ಅಭಿ-ಲಾಷೆ ಪೂರೈಸಿ ಬಿಡದೇ ಪಕೃತಯುಗಪ್ರಭವಮಧು ಶುದ್ಧ ಪ್ರತಿಪದಜಲಧಿಸುತವಾರ ರೇವತೀ ವಿಷ್ಕಂಭ ಹಗಲು ಸಂ-ಯುತ ಹನ್ನೆರಡು ಘಳಿಗೆಗವತರಿಸಿಶ್ರೀ ಮತ್ಸ್ಯ ಹತಮಾಡಿ ತಮನೆಂಬನಾ ||ಚತುರಾಸ್ಯವೈವಸ್ವತರಿಗೊಲಿದು ಮೆರೆದ ನೀಕ್ಷಿತಿಯೊಳಗೆ ಮತ್ತಾಯುಗದಿಕೂರ್ಮರೂಪದಿಂಚ್ಯುತರಹಿತನವತಾರ ಮಾಡಿ ಮಾಡಿದ ಕಾರ್ಯ ಮತಿವಂತರಿಗೆ ಪೇಳೂವೆ 1ವಿಭವಾಬ್ದ ಜ್ಯೇಷ್ಠ ಶುಕ್ಲದ್ವಿತೀಯಬುಧವಾರಶುಭದ ರೋಹಿಣಿ ಋಕ್ಷ ಧೃತಿ ಯೋಗ ದಿವದಲ್ಲಿತ್ರಿಭುವನೇಶ್ವರ ನಾಲ್ಕು ಘಳಿಗೆಗುದಿಸಿಯಮೃತಕೃತುಭುಜರಿಗುಣಿಸಿ ಕರುಣದಿಂ ||ಅಭಯವಿತ್ತನ್ಯರನು ದಣಿಸಿ ಧರಿಸಿದನು ಜಲ-ಜಭವಾಂಡ ಮಂದರಾದ್ರಿಯ ಬೆನ್ನಮ್ಯಾಲಿಂದಸುಭುಜಾಹ್ವಯನ ಚರಿತೆ ಸ್ಮರಿಸೆ ಕ್ಲೇಶಹ ಮತ್ತೆ ನಭಗವಹನಾ ಯುಗದಲಿ 2ಶುಕ್ಲ ಸಂವತ್ಸರದಶುಭಮಾಘ ಮಾಸದಲಿಶುಕ್ಲ ಪಕ್ಷದ ಸಪ್ತಮೀ ಭಾನುವಾರದಲಿಅಕ್ಲೇಶಪ್ರದ ಅಶ್ವಿನೀ ಸಾಧ್ಯಯೋಗದಲಿ ಶುಕ್ಲಶೋಣಿತ ವಿದೂರ ||ಶುಕ್ಲಾಂಬರಧರ ಕಿಟಿರೂಪದಿಂದವತರಿಸಿಹಕ್ಲಾಸುರ ಹಿರಣ್ಯಶನ ತರಿದುತ್ವರತನ್ನಒಕ್ಲಾದವರ ಪೊರೆದ ಹಗಲೆಂಟು ಘಳಿಗೆಯೊಳು ಶುಕ್ಲಾಂಗಆ ಯುಗದಲಿ 3ಆಂಗಿರಸವೆಂಬ ಸಂವತ್ಸರದ ವೈಶಾಖತಿಂಗಳದಿಸಿತಪಕ್ಷಚತುರ್ದಶೀ ಶನಿವಾರತುಂಗಸ್ವಾತಿಪರಿಘದಿವಾಷ್ಟ ವಿಂಶತಿ ಘಳಿಗೆಗಾಂಗೇಯಗರ್ಭನೊರವು ||ಸಂಘಟನೆವಾಗಲಾ ಸಮಯದೊಳು ಸ್ತಂಭದಿಂಸಂಗರಹಿತಹರಿಘುಡಿಘುಡಿಸುತಲಿ ಉದಿಸಿನರಸಿಂಗಾಹ್ವಯದಿಹೇಮಕಶ್ಯಪನ ತರಿದು ತರಳಂಗೆ ಸನ್ಮುದವಿತ್ತನೂ4ತ್ರೇತಾಯುಗದಲದಿತಿ ದೇವಿ ಭಕುತಿಗೆ ಮೆಚ್ಚಿಧಾತಾಬ್ದ ಭಾದ್ರಪದಸಿತಪಕ್ಷದ್ವಾದಶೀಖ್ಯಾತಿ ವಿಷ್ಣುಭ ಶುಕ್ರ ಧೃತಿ ಹತ್ತೈದು ಘಟಗೆಪೋತಭಾವದಿ ದಿವವಲಿ ||ತಾಂ ತಾಳಿ ಅವತಾರವಂ ತ್ರಿವಿಕ್ರಮನಾಗಿಭೂತಲಾಗಸವಳೆದು ವೈರೋಚಿನಿಯ ತುಳಿದುಪ್ರೀತಿಪಡಿಸುತ ಶಕ್ರನಂ ಸ್ವರ್ನದಿಯ ಪಡೆದ ಈತಗೆಣೆಯಾರೊ ಜಗದಿ 5ಅದೆ ಯುಗದಲಿ ಪ್ರಮಾಥಿಯೆಂಬ ಸಂವತ್ಸ-ರದಲಿ ವೈಶಾಖ ಶುದ್ಧ ತೃತೀಯೆ ಸುಕರ್ಮ ಯೋ-ಗದಲಿ ರೋಹಿಣಿಮಂದಹನ್ನೊಂದು ಘಟರಾತ್ರಿಯೊದಗುತಿರೆಭೂಪತಿಗಳಾ ||ವಧೆಗೆ ವಿಪ್ರರ ವೃಂದವನು ಪೋಷಣೆಯ ಮಾಡು-ವದಕೆ, ಜಮದಗ್ನಿಯಿಂದವತರಿಸಿ ರಾಮ ನಾ-ಮದಲಿ ಪರಶುವ ಧರಿಸಿ ಈ ಧಾತ್ರಿಯೊಳು ಬಹು ಮೆರೆದಮತ್ತು ಆ ಯುಗದಲಿ 6ತಾರಣೆಂಬಬ್ಧ ಮಧುಮಾಸ ಶುಕ್ಲ ನವಮಿಯಆರನೇ ತಾಸು ದಿವದಲಿ ಪುನರ್ವಸು ಚಂದ್ರವಾರ ಶೂಲೆಂಬ ಯೋಗದಲಿ ದಶರಥನೃಪತಿಹಾರೈಸಿದುದಕೆ ಒಲಿದು ||ಶ್ರೀರಾಮನಾಮದಿಂದವತರಿಸಿ ದೈತ್ಯ ಪರಿವಾ-ರ ರಾವಣನ ಸಂಹರಿಸಿ ವಿಭೀಷಣಗೊಲಿದುವಾರಿಜೋದ್ಭವಮುಖ ದಿವೌಕಸರಿಗಾನಂದ ತೋರಿಸಿದ ಸೀತಾಪತಿ 7ಮೂರನೇ ಯುಗ ವಿರೋಧೀ ಶ್ರಾವಣವದಿ ಅ-ರ್ಧರಾತ್ರಿಯೊಳಷ್ಟಮೀ ರೋಹಿಣೀವಜ್ರಬುಧವಾರದಲಿ ಅಜನ ಬಿನ್ನಹಕೊಪ್ಪಿ ಕೃಷ್ಣಾವತಾರವನು ತಾಳಿ ಧರೆಗೆ ||ಭಾರವಾಗಿದ್ದ ಕಂಸಾದಿ ಖಲವೃಂದ ಸಂ-ಹಾರಮಂ ಗೈದು ಪಾಂಡವರ ಪೋಷಿಸಿವಿಪ್ರಗೋ ರಕ್ಷಣೆಯ ಮಾಡಿ ಧರ್ಮವಂ ಸ್ಥಾಪಿಸಿದ ಶ್ರೀರಮಣ ಮಧ್ವಸದನ 8ಕಲಿಖರಾಬ್ಧಾಷಾಢ ಶುದ್ಧ ದಶಮಿ ವಿಶಾಖನಳಿನಸಖವಾರ ಶುಕ್ಲಾಹ ಯೋಗ ದಿವಾಷ್ಟಘಳಿಗೆಯೊಳು ಜನನೆಂಬ ದೈತ್ಯನಲ್ಲವತರಿಸಿ ಬಲುದುರ್ಮತಿಯ ಪ್ರೇರಿಸಿ ||ಕಳೆಗೆಡಿಸಿ ಬುದ್ಧಾವತಾರವೆಂದೆನಿಸಿ ಶಿವ-ಗೊಲಿದು ತ್ರಿಪುರವ ಕೆಡಿಸಿ ಸಜ್ಜನರ ಸಂಶಯವಕಳದು, ಕರುಣಾಂಬುಧಿಯ ಮಹಿಮೆಯಂತಿಳಿಯಲಸದಳಮಾವಿಧಿಗೆ ಎಂದಿಗೂ 9ದನುಜಪತಿ ಯುಗ ದುರ್ಮುಖಾ ಮಾರ್ಗಶಿರ ಶುದ್ಧಶನಿವಾರ ದ್ವಿತೀಯೆ ಪೂರ್ವಾಷಾಢ ವೃದ್ಧಿ ಮೂ-ರನೆ ಘಳಿಗೆ ದಿವದ ಕಲ್ಕ್ಯವತಾರದಿಂಮ್ಲೇಂಛರನು ಸದೆದು ಭೂ ದಿವಿಜರಾ ||ಘನಮೋದ ಪಡಿಸಿ ವಾಜಿಯನೇರಿ ಮೆರೆದಾಡಿಅನಿಮಿಷರ ಕೈಯ್ಯ ಪೂ ಮಳೆಯಂಗರಿಸಿಕೊಂ-ಡನಘ ಬಲ್ಲವರಿಗಲ್ಲಲ್ಲೆ ಇರುತಿಹನುಪ್ರಣತಜನಕಾಮಧೇನೂ 10ಈ ಪರಿಯಲಚ್ಯುತನ ಅವತಾರ ಚರಿತೆ ಸಂ-ಕ್ಷೇಪದಿಂ ವಿರಚಿಸಿದೆ ಸದ್ಭಕ್ತಿಯಿಂದಿದನುಪಾಪಿಗಳಿಘೇಳದಲೆ ಕಾಲತ್ರಯದಿ ಪಠಸೆ ತಾಪತ್ರಗಳ ಕಳೆದು ||ಈ ಪೊಡವಿಯೊಳಗೆ ಬಹುಮಾನ ಮಾಡಿಸಿ, ತಂದೆ-ಯೋಪಾದಿ ಕ್ಷಣ ಬಿಡದೆ ಸಲಹಿ ಪ್ರಾಂತಕೆ ತನ್ನಆ ಪರಂಧಾಮ ವೈದಿಸುವನತಿ ಕರುಣಾಳು ಶ್ರೀಪ ಪ್ರಾಣೇಶ ವಿಠಲಾ 11
--------------
ಪ್ರಾಣೇಶದಾಸರು
ಶಂಕರಾಚಾರ್ಯರ ಸ್ತುತಿಸ್ವಾಮಿ ಶಂಕರನೆ ಆಚಾರ್ಯನಮಾಮಿಪಂಕಜಚರಣಕ್ಕೆ ಗುರುವರ್ಯಪ.ಸುರ ಮುನಿಗಳ ಮೊರೆಯಾಕೇಳಿಧರಣಿಯೊಳುದಿಸಿದ ಗಿರಿಜೆಯ ಪ್ರೀಯಾವರಅದ್ವೈತಪದ್ಧತಿಯಾಯೋಗಿವರನೆ ಬೋಧಿಸಿ ಮೋಕ್ಷ ಬೀಜ ಬಿತ್ತಿದೆಯಾ 1ನಿರ್ಮಲ ಜ್ಞಾನ ಸುದೀಪ ಸೋಹಂಬ್ರಹ್ಮಾನೇ ಎಂಬ ಸುಜ್ಞಾನವ ತೋರ್ಪಬ್ರಹ್ಮಾನಂದನಿಷ್ಟಾಪಗುರುಲಕ್ಷ್ಮೀನಾರಾಯಣ ರೂಡ ನಿರ್ಲೇಪ 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಕ್ತನಾದರೆ ನಂಟರೆಲ್ಲ ಹಿತರು - ಅಶಕ್ತನಾದರೆ ಆಪ್ತರವರೆ ವೈರಿಗಳು ಪ.ಕಮಲಾರ್ಕರಿಗೆ ನಿರುತ ಕಡುನಂಟುತನವಿರಲುಕಮಲ ತಾ ಜಲದೊಳಗೆ ಆಡುತಿಹುದುಕ್ರಮತಪ್ಪಿ ನೀರಿನಿಂದ ತಡಿಗೆ ಬೀಳಲು ರವಿಯಅಮಿತ ಕಿರಣಗಳಿಂದ ಕಂದಿ ಪೋಗುವುದು 1ವನದೊಳುರಿ ಸುಡುತಿರಲು ವಾಯು ತಾ ಸೋಂಕಲ್ಕೆಘನ ಪ್ರಜ್ವಲಸುತಿಹುದು ಗಗನಕಡರಿಮನೆಯೊಳಿರ್ದಾ ದೀಪ ಮಾರುತನು ಸೋಂಕಿದರೆಘನಶಕ್ತಿ ತಪ್ಪಿ ತಾ ನಂದಿ ಹೋಗುವುದು 2ವರದ ಶ್ರೀ ಪುರಂದರವಿಠಲನ ದಯವಿರಲುಸರುವ ಜನರೆಲ್ಲ ಮೂಜಗದಿ ಹಿತರುಕರಿಯ ಸಲುಹಿದ ಹರಿಯ ಕರುಣ ತಪ್ಪಿದ ಮೇಲೆಮೊರೆಹೊಕ್ಕರೂ ಕಾಯ್ವ ಮಹಿಮರುಂಟೇ ದೇವ 3
--------------
ಪುರಂದರದಾಸರು
ಶರಣನಾದೆ ನಾನು ನಿನಗೆ | ಕರುಣ ದೇವನೇ |ತರಳನನ್ನು ಕಾಯೋ ದಯದಿ | ಪರಮಪುರುಷನೇಪಸ್ನಾನ ದಾನ ಮೌನ ಮಂತ್ರ | ನಾನು ಅರಿಯೆನೆ |ಧ್ಯಾನ ದಾನ ತಿಳಿಯೆ ಸಲಹೊ | ಶ್ರೀನಿವಾಸನೆ1ತರಳಧ್ರುವನ ತೆರದಿ ನಿನ್ನ | ಸ್ಮರಿಸಲರಿಯೆನೇ |ಗರುಡನಂತೆ ಹೊತ್ತು ಧರೆಂiÀi | ಚರಿಸಲಾರೆನೆ2ಚಂದ್ರಧರನ ಸಖನೆ ಕಾಯೋ ಇಂದಿರೇಶನೇ |ಸುಂದರ ಗೋವಿಂದ ದಂiÀುದಿ |ಕರವಮುಗಿವೆನೆ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶರಣಾಗತನಾದೆನು ಶಂಕರ ನಿನ್ನಚರಣವ ಮರೆಹೊಕ್ಕೆನು ಪ.ಕರುಣಿಸೈ ಕರಿವದನಜನಕಾ-ವರಕದಂಬಪೂಜ್ಯ ಗಿರಿವರ-ಶರಸದಾನಂದೈಕವಿಗ್ರಹದುರಿತಧ್ವಾಂತವಿದೂರದಿನಕರಅ.ಪ.ಹಸ್ತಿವಾಹನವಂದಿತ ವಿಧುಮಂಡಲ-ಮಸ್ತಕಗುಣನಂದಿತಸ್ವಸ್ತಿದಾಯಕ ಸಾವiಗಾನಪ್ರ-ಶಸ್ತ ಪಾವನಚರಿತ ಮುನಿಹೃದ-ಯಸ್ಥಧನಪತಿಮಿತ್ರ ಪರತರ-ವಸ್ತು ಗುರುವರ ಶಾಸ್ತಾವೇಶ್ವರ 1ಮಂದಾಕಿನೀಮಕುಟಶಿವ ಶಿವ ನಿತ್ಯಾ-ನಂದಮ್ನಾಯ ಕೂಟಚಂದ್ರಸೂರ್ಯಾಗ್ನಿತ್ರಿಲೋಚನಸಿಂಧುರಾಸುರಮಥನ ಸ್ಥಿರಚರ-ವಂದಿತಾಂಘ್ರಿಸರೋಜ ಉದಿತಾ-ರ್ಕೇಂದುಶತನಿಭ ನಂದಿವಾಹನ 2ನೀಲಕಂಧರ ಸುಂದರ ಸದ್ಗುಣವರು-ಣಾಲಯ ಪರಮೇಶ್ವರಕಾಲಕಾಲಕಪಾಲಧರ ಮುನಿ-ಪಾಲ ಪದ್ಮಜವಂದಿತಾಮಲ-ಲೀಲ ಡಮರು ತ್ರಿಶೂಲಪಾಣಿ ವಿ-ಶಾಲಮತಿವರ ಭಾಳಲೋಚನ 3ಮಾರಸುಂದರ ಸಂಕರ ಶ್ರೀಲಕ್ಷ್ಮೀ-ನಾರಾಯಣಕಿಂಕರಮಾರಹರ ಮಹನೀಯ ಶ್ರುತಿಸ್ಮøತಿ-ಸಾರವಿಗತಾಮಯ ಮಹೋನ್ನತವೀರ ರಾವಣಮದನಿಭಂಜನಚಾರುತರವರಭಾರಪುರಹರ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶರಣು ಆತ್ಮಕ ಸರ್ವತೋಮುಖ ಶರಣು ಸರ್ವಲೀಲಾತ್ಮಕಶರಣುಗುರುಚಿದಾನಂದ ವಿಗ್ರಹ ಶರಣು ಸುರಮುನಿ ಪಾಲಕಪರೂಪು ಹರ ನಿರ್ಲೇಪಘನಚಿದ್ರೂಪರೂಪವಿರೂಪಕತಾಪನಾಶಕ ಪೋಷ ಭಕ್ತಕೃತಪರಾಧಿ ಪವಿತ್ರಕದೀಪ ಹೃದಯ ಸಭಾಸ ಉನ್ಮನ ದೀಪ್ಯಮಾನ ಮಹಾತ್ಮಕಭೂಪ ಸುರಮುನಿ ಸಿದ್ಧರಕ್ಷಕ ಭುವನದಧಿಪತಿ ರಕ್ಷಕ1ಪ್ರಣವಪುರುಷ ಪರೇಶಪಾವನ ಪ್ರಣತಸುಜನಪರಾವರ ಮರಣರಹಿತ ನಿಜ ನಿಶ್ಚಲಾತ್ಮಕ ಗುಪ್ತ ಮೂರುತಿ ಗುರುವರಎಣಿಸಬಾರದನಂತ ಲೋಕಕೆ ಏಕನಾಥದಿವಾಕರಅಣಿಮ ಮಹಿಮಾಷ್ಟಾಂಗ ಯೋಗಗಳಳವಿಗೊಡದ ಪ್ರಭಾಕರ2ಎರಡು ಮೂರಾರೆಂಬವೆಲ್ಲವ ಎಣಿಸೆ ಏಳೈದೆಂಬವಪರಿವಿಡಿಯ ನಾಲ್ಕೆಂಟು ನವದಶ ಪರಿಪರಿಯ ವಿಕಾರವಹರಿಹರ ಬ್ರಹ್ಮಮರೇಂದ್ರರು ಹರಿವರಿಯದ ಸ್ವಭಾವವಬೆರಸದಿಹ ಚಿದಾನಂದ ಮೂರ್ತಿಯ ಭೇದವಿರಹಿತ ಚಿತ್ಪ್ರಭಾ3
--------------
ಚಿದಾನಂದ ಅವಧೂತರು