ಒಟ್ಟು 37131 ಕಡೆಗಳಲ್ಲಿ , 139 ದಾಸರು , 11109 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೋಗುಣು ನಡಿ ಸಾಧುರ ನೋಡುವಾ ಬೇಗ ಪ್ರಾಣನಾಥನ ಕೂಡುವಾ ಪ ವ್ಯರ್ಥ ಆಯುಷ್ಯ ವೆಚ್ಚ ಮಾಡಬೇಡಿ ಹಿತಾಹಿತ ವಿವರಿಸಿ ನೋಡಿ |ನೀತಿ ಮಾರ್ಗದಲಿ ನಡೆದಾಡಿಭೀತಿ ಭ್ರಮೆ ಮೂಲದಿ ಹೋಗಾಡಿ 1 ಮನಸಿನ ಕಲ್ಪನೆಯ ಬಿಟ್ಟುಗುಣತ್ರಯದ ವೃತ್ತಿ ಕಡೆಗಿಟ್ಟು |ಪೂರ್ಣ ಜ್ಞಾನ ವೈರಾಗ್ಯ ಒತ್ತಿಟ್ಟುಘನ ಹರುಷ ತಮ್ಮೊಳಗಿಂಬಿಟ್ಟು 2 ನಾನಾ ತೀರ್ಥ ಉಂಟು ಸಾಧುರಲ್ಲಿನಾನೇನೆಂದು ಆ ಸುಖ ಹೇಳಲಿ |ಜ್ಞಾನಾಂಬುಧಿ ಸಾಧುರೇ ನೋಡಲಿಜ್ಞಾನಬೋಧ ಸಾರಿದ ಭಕ್ತೀಲಿ 3
--------------
ಜ್ಞಾನಬೋದಕರು
ಹೋಗುತಾದೋ ಹೊತ್ತು ಹೋಗುತಾದೋ ಸಾಗಿ ಮುಂಚೆ ಮತ್ತೆ ತಿರುಗಿ ಬಾರದಂತೆ ಪ ಹಿಂದಿನ ಸುಕೃತದಿಂದ ಒದಗಿದಂಥ ಸುಂದರಮಾದ್ಹೊತ್ತು ಎಂದೆಂದು ಸಿಗದಂತೆ 1 ಅರ್ತುಕೊಂಡವರಿಗೆ ಸಾರ್ಥಕಗೊಳಿಸುತ್ತ ಮರ್ತಕರಿಗೆ ಮತ್ತೆ ಗುರ್ತು ತೋರದಂತೆ 2 ಎಷ್ಟೆಷ್ಟೋ ಯೋನಿಯೊಳ್ಹುಟ್ಟ್ಹುಟ್ಟಿ ಬಲಗೋ ಳಿಟ್ಟು ಪಡೆದ ಹೊತ್ತು ನಷ್ಟವಾಗುತ ವ್ಯರ್ಥ 3 ಅಘನಾಶಗೊಳಿಸಿ ಬಹು ಮಿಗಿಲಾದ ಪದವೀನ ಸಿಗದಂಥ ವಸ್ತಿದು ಅಗಲಿ ತಾ ಸುಮ್ಮನೆ 4 ನೇಮವಲ್ಲೆಲೋ ಮತ್ತೆ ಆ ಮಹ ಸಮಯವು ಪಡಿ 5
--------------
ರಾಮದಾಸರು
ಹೋಗುತಿದೆ ಹೊತ್ತು ಬರಿದೆ ವ್ಯರ್ಥವಾಗಿಹರಿಗುರುಗಳ ನೆನೆಯದೆ ಪ. ನರರ ನೂರಮೂವತ್ತೆರಡುಕೋಟಿವರುಷ ದಿವಸವೊಂದೆ ಬೊಮ್ಮಗೆಪರೀಕ್ಷಿಸಲು ಬ್ರಹ್ಮಕಲ್ಪಸಾಸಿರ ಕೋಟಿನರಕದೊಳಗೆ ಬಿದ್ದು ಮರಳಿ ಭವದಿ ಬಂದು1 ಒಂದೊಂದಕೆ ಇಪ್ಪತ್ತೊಂದುಲಕ್ಷ ಯೋನಿಎಂದೆನಿಸುವ ಸ್ವೇದಜ ಉದ್ಬಿಜಬಂದು ಜರಾಯುಜಾಂಡಜ ಕುಲದಿ ಪುಟ್ಟಿನೊಂದೆ ಎಂಬತ್ತುನಾಲ್ಕುಲಕ್ಷ ಯೋನಿಯಲಿ 2 ಮಾಸ ಒಂಭತ್ತು ಮತಿಗೆಟ್ಟು ಗರ್ಭದಿಹೇಸದೆಬಂದು ಜೀವಿಸಿ ಬಳಲಿಮೋಸವನರಿಯದೆ ಮುನ್ನಿನ ಕರ್ಮದಿಘಾಸಿಯಾದೆನೊ ಯೌವನಮದದಿ ಸೊಕ್ಕಿ 3 ಕೆಲಹೊತ್ತು ಚದುರಂಗÀ ಪಗಡೆ ಆಟಗಳಿಂದಕೆಲಹೊತ್ತು ಹಸಿವೆ ನಿದ್ರೆಗಳಿಂದಲಿಕೆಲಹೊತ್ತು ಕಾಕಪೋಕರ ಕತೆಗಳಿಂದಕೆಲಹೊತ್ತು ಪರನಿಂದೆ ಪರವಾರ್ತೆಗಳಿಂದ 4 ಕಾಲವು ಕಡೆಯಾಗಿ ಹರಿ ನಿಮ್ಮನರ್ಚಿಸೆವೇಳೆಯಿಲ್ಲದೆ ಹೋಯ್ತು ಬಂಜೆಯಾಗಿಜಾಲಿಸಿಹೋಗುತಿದೆ ಈ ವಿಧದಿ ಹೊತ್ತು ಬೇಗನೆಪಾಲಿಸಿ ದಯಮಾಡೊ ಸಿರಿಹಯವದನ 5
--------------
ವಾದಿರಾಜ
ಹೋತಾರ ಪರುವಾಸ ಶ್ರೀ ಲಕ್ಷ್ಮೀಶಾ ಪ ಶ್ರವಣ ಮನನ ನಿದಿಧ್ಯಾಸನಗಳಿಂದ ಭವ ಪರಿಹಾರ ನಿಮ್ಮ ನಾಮ ಗೋವಿಂದ 1 ಭಕ್ತ ----------------------- ----------------ಭಜಿಸುವನೇಕ 2 ಪನ್ನಗಶಯನ ಸುಪನ್ನಗ ವಾಹನ ಹೆನ್ನೆವಿಠಲರಾಯ ಮೋಹನ 3
--------------
ಹೆನ್ನೆರಂಗದಾಸರು
ಹೋದುದಿನ್ಯಾರಿಗೆ ಹೇಳೋಣ ಹೊಲಮೆದ್ದರಾರಿಗೆ ಹೇಳೋಣ ಪ ಎದ್ದನು ದುರ್ಜನ ಬಿದ್ದಬಿನುಗು ಪ್ರಜೆ ಉದ್ದ ಗುದ್ದಗಳೆಲ್ಲ ಸಮನಾಯಿತು ಇದ್ದ ಹೆಣ್ಮಕ್ಕಳ ಮೈಮೇಲಕೆ ಒಂದು ಉದ್ದಿನ ಕಾಳಷ್ಟು ಚಿನ್ನಗಳಿಲ್ಲ 1 ಕಂಚು ತಾಮ್ರವು ಮಾರಿಹೋಯಿತು ಕೊಂಚ ತಣ್ಣೀರ ಕೊಳ್ಳಲಿಕ್ಕಿಲ್ಲ ಸಂಚ ಕಾರವು ಪ್ರಾಣಕಾಯಿತು ನಾವಿನ್ನು ಪಂಚತ್ವವ ನ್ನೈದಿದರೊಳ್ಳಿತು ಎಂಬರು 2 ಭೂರಿ ಹೇಮರಜತಗಳ ಮಾರಿಯಾಯಿತು ಭಾರಿ ತೆರಿಗೆ ಶ್ರಮಸೀಮೆ ಪ್ರಜೆಗಳಿಗಾಯ್ತು ಭೀಮನ ಕೋಣೆ ಲಕ್ಷ್ಮೀರಮಣನ ನಂಬಿ ಭಿಕ್ಷೆಗೆ ಮನವ ತಾಳಿರಣ್ಣ 3
--------------
ಕವಿ ಪರಮದೇವದಾಸರು
ಹೋದ್ರೆ ಹೀಗೆ ಹೋಗಬೇಕು ಗೂಡಿನಿಂದ ಜೀವನ ಸಾಧನೆಯನ್ನು ಮಾಡಿದಾತ ಲಾಗವನ್ನು ಹಾಕಿದಂತೆ ಪ ಬೇನೆ ಮೈಯೊಳೇನು ಇಲ್ಲದೆ ಜ್ಞಾನವಿದ್ದು ಎಚ್ಚರಿದ್ದು ಕಾನ ಕಪಿಯ ಮೇಲï ಮನಸು ಹೀನವೃತ್ತಿಗೆ ಹೊಗದಂತೆ 1 ಹುಚ್ಚುಗೊಳದೆ ಭಂಗಿಯನ್ನು ಹಚ್ಚದಾತ ಕುಣಿಯುವಂತೆ ಸ್ವಚ್ಛವಾಗಿ ಕಾಯದೊಳಗೆ ತುಚ್ಛಮನವು ಇಲ್ಲದಂತೆ 2 ಅತ್ತಲಿತ್ತ ಹೊಡೆಕಣಿಲ್ಲದೆ ಸುತ್ತ ಮುತ್ತ ಕಾದುಕೊಂಡ ಪುತ್ರಮಿತ್ರ ಕಳತ್ರದಲ್ಲಿ ಮತ್ತೆ ಮಮತೆಯಿಲ್ಲದಂತೆ 3 ನಾಭ ಹರಿಯೆ ಎನ್ನ ಸಲಹೋ ಬಿಡದೆ ಎನ್ನುತ 4 ವಾಂತಿ ಬ್ರಾಂತಿಯೆರಡು ಇಲ್ಲದೆ ಉತ್ಕ್ರಾಂತಿ ಕಾಲದಲ್ಲಿ ಲಕ್ಷ್ಮೀ ಜಿಹ್ವೆ ನಿರಂತರದಲ್ಲಿ ನುಡಿಯುತಿರ್ದ 5
--------------
ಕವಿ ಪರಮದೇವದಾಸರು
ಹೋಯಿತು ಪರಶುರಾಮನ ದಂಡಿಲಿ ನಷ್ಟ ವಾಯಿತು ಜನರೆಲ್ಲ ಹೊಡೆತ ಕಡಿತದಿ ಪ ಮೇಧಿನಿಯೊಳಗಣ ಜನರಿಂಗೆ ದಂಡಿಂದ ಮಣಿ ಮುತ್ತು ತೀರ್ದುದು ಕಂಚು ತಾಮ್ರಗಳು ಬಹುಕಾಲ ಸಾಧಿಸಿದೊಡವೆ ಸಾಧನ ಸಂಪತ್ತುಗಳೆಲ್ಲ 1 ಉಡುವ ತೊಡುವ ಜವಳಿ ಅಡಕೆ ಮೆಣಸು ಭತ್ತ ಕಡಿತ ಕಂಠಗಳಾಬ್ರ ಮುಡಿ ಉಪ್ಪುಗುಢಕಲ್ಲು ಗಡಿಗೆ ಮಡಕೆ ಎಣ್ಣೆ ಕೊಡವು ಕಬ್ಬಿಣದ ಕತ್ತಿ ಅಡಿಯಿಟ್ಟ ಚಿಟ್ಟು ಪಾಟ್ಟಿಗಳೊಂದುಳಿಯದಂತೆ 2 ಕೊಟ್ಟದೊಳಗೆ ಇಟ್ಟವಸ್ತು ವಡವೆಯೆಲ್ಲ ನಷ್ಟವಾಯಿತು ಹಾರೆ ಕೊಡಲಿ ಗುದ್ದಲಿ ಕುಳ ಬಟ್ಟಲು ಹಂಡೆ ಕೊಪ್ಪರಿಗೆ ಇಕ್ಕುವ ಗುಂಡಿ ಮಣಿ ಮರಿಗೆ ಸರ್ವಸ್ವವು 3 ನಗ ಯೊತ್ತು ಉಂಗುರ ಜಪಮಣಿ ಮಾಲೆ ಹವಳ ಯಾ ರೆತ್ತುವ ನಗನಾಣ್ಯವೆಲ್ಲ ಸುಲಿಗೆಯಿಂದ 4 ಅಂಧಕಾರಕೆ ನೆರವಾದಂತೆ ದುರ್ಭಿಕ್ಷ ಬಂದಿತು ಸಂಗಡ ತಂಡುಲ ಗದ್ಯಾಣವೊಂದಕೈದಾಗಿ ಮುಗಿತು ಹರಿನಂದನ ಕೋಣೆ ಲಕ್ಷ್ಮೀಶನೊಬ್ಬನೆ ಬಲ್ಲ 5
--------------
ಕವಿ ಪರಮದೇವದಾಸರು
ಹೌರನೆ ಮತಿಯಿತ್ತು ಸಲಬೇಕೆನ್ನ ಪ ಗೌರವ ಗಾತುರ ತೌರ ಮನೆಯ ಹರ ಕೌರವಾಂತಕನೊಳು ಶೌರಿಯ ತೋರಿಸೋ ಅ.ಪ. ಮೃಗಲಾಂಛನ ಸನ್ಮೌಳಿ ಶಿವ ಮಹಾದೇವ ತ್ರಿಗುಣಾತುವ ಗಾತುರ ಭಕ್ತ ಸಂಜೀವ ನಿಗಮತುರಗ ಪಾವ ವನಮಾಲ ಪಾವಾ ಮೃಗಪಾಣಿ ಮೃತ್ಯುಂಜಯ ಸುಪ್ರಭಾವ ನಗೆಪಗೆ ಮಗನನು ಮೃಗನೆವನದಿ ಕಾ ಅಗಣಿತ ಗುಣಮಣಿ ವಾಲಗ ನಿನ್ನವರೊಳು ಮಗಳೆ ಮಗುಳೆ ಕೊಡು ಗಗನೇಶ ಜನಕ 1 ಅವನಿಯೋಳ್ ಕೈಲಾಸ ವಾಸ ಅಪ್ರತಿ ನವ ವಿಧ ಭಕುತಿ ಕೊಡು ಶಂಭು ಪಶುಪತಿ ದಿವಸ ದಿವಸ ವೈಶ್ರವಣ ಬಾಂಧವ ದೇ ಹವೆ ನಿನಗೊಪ್ಪಿತು ಅವನಿಯೊಳುತ್ತಮ ಶ್ರವಣದೊಳಗೆ ರಾಘವನ ಕಥಾಮೃತ ಸವಿದೋರುವುದೋ ಭುವನ ಪವಿತ್ರ 2 ಅಜಭೃಕುಟ ಸಂಭೂತ ಭೂತಗಣೇಶ ಕುಂಡಲ ವಿಭೂತಿ ಭೂಪ ನಿಜ ಮಹಾ ಸ್ಮಶಾನವಾಸ ಉಗ್ರೇಶ ತ್ರಿಜಗಪಾವನ ಗಂಗಾಧರ ವಿಶ್ವೇಶ ಸುಜನರ ಹೃದಯ ಪಂಕಜದೊಳ್ ಮಿನುಗುವ ಗಜ ಪಾಲಕ ರಂಗ ವಿಜಯವಿಠ್ಠಲನಂಘ್ರಿ ಭಜನೆಯ ಕೊಡು ಭೂಭುಜ ದೇವೋತ್ತಮ ಗಜ ಅಜಿನಾಂಬರ 3
--------------
ವಿಜಯದಾಸ
ಹ್ಯಾಗಾಗುವುದೊ ತಿಳಿಯದು ಈಶನಜ್ಞೆ ಪ ಭಾಗವರತ ಸೇವೆಯಲ್ಲಿ ಬಹು ಪ್ರವೀಣವೆನೆಪುದೊ ರಾಗಲೋಭದಲ್ಲಿ ಮುಳುಗಿಸಿ ರಚ್ಚೆಗಿಕ್ಕಿ ಬಿಡುವುದೊ ಅ.ಪ ಕೋರಿಕೆಗಳ ಬಿಡಿಸಿ ಸದಾ ಗುಣವಂತನೆನಿಸುವುದೊ ನಾರಿ ಮಕ್ಕಳಾಸೆಯಲಿಯನಾಥವ ಮಾಡಿಸುವುದೊ 1 ದ್ವಂದ್ವಗಳಲಿಲೇಪವಿಲ್ಲದಾನಂದವ ಪೊಂದಿಸುವುದೊ ಮಂದಮತಿಯನಿಸುವುದೊ 2 ಶ್ರವಣಮನನ ಸಾಧನೆಗಳ ಸದಾ ಮಾಡಿಸುವುದೊ ಭವಭವದಲಿ ಮೂಢನೆನಿಸಿ ಪಾಪರತನ ಮಾಳ್ವದೊ 3 ಸರ್ವರಲ್ಲಿ ಗುಣವೆ ಕಾಣಿಸಿ ಸಂತೋಷಪಡಿಸುವುದೊ ದುರ್ವಿನೀತನೆನಸಿ ಸದಾ ದುಷ್ಕಾರ್ಯ ಮಾಡಿಸುವುದೊ 4 ಪಂಚಭೇದ ಜ್ಞಾನ ತತ್ವ ತಿಳಿಸಿ ಸುಖಿಪುದೊ ದುರಹಂಕಾರರಲ್ಲಿ ಮೆರೆಸಿ ನರಕದಿ ಬೀಳಿಸುವುದೊ 5 ದಾನಧರ್ಮ ಪರೋಪಕಾರ ದಯಾವಂತನೆನಿಪುದೊ ಹೀನನೆನಸಿ ಸಕಲರಿಂದ ಹೀಯ್ಯಾಳಿಸಿಬಿಡುವುದೊ 6 ಭಾರ ಅವರವರಧಿಕಾರದಂತೆ ಎಲ್ಲರಿಗೂ ನಡಿಸುವಾ 7
--------------
ಗುರುರಾಮವಿಠಲ
ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ಪ ಭಾಗವತರ ಸಂಗ ಬೇಗದಿಂದಲಿ ಇತ್ತು ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ ಬಾಲೇರ ಸಲುವಾಗಿ ಕೀಳು ಜನರಲ್ಲಿ ಶೀಲ ಜರಿದು ಯಾಚಿಸಿ ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1 ಅಂಗಜನಾಟಕೆ ಹಗಲಿರುಳೆನ್ನದೆ ಪರ ಅಂಗನೆರ ಕೂಡಿ ಮಂಗಳಮಹಿಮ ತುರಂಗ ವದನ ದೇವ ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2 ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ ಕಾರುಣ್ಯದಲಿ ಭಕ್ತನ ಅರಿಷಟ್ಕರನೆ ಕೊಂದು ಕರಿವರದನೆ ಘೋರ ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3
--------------
ಪ್ರದ್ಯುಮ್ನತೀರ್ಥರು
ಹ್ಯಾಗಾದರು ನಾ ಬಿಡೆ ಕರೆದೊಯ್ಯೊ ರಾಧಾ ಶ್ರೀ- ರಂಗನೆ ನೀನ್ಹ್ಯಾಗಾದರು ಪ ಹವಣಿಸಿ ನೋಡೆ ಬಂದೆನೆಂದೊ ತವ ವದನಾಂಬುಜ ಭೃಂಗನಾ 1 ಪ್ರಕಟಿತ ಕರುಣಾಸಾಗರಾ 2
--------------
ಶ್ರೀದವಿಠಲರು
ಹ್ಯಾಗಾದರು ಮಾಡು ನಿನ್ನ ಸಂಕಲ್ಪ ಪ ಸೋತಿಹುದು ಕೈಕಾಲು ಬಾಯಾರಿಕೆ ಶೀತೇಶನುತ್ಸವವು ಬಹುಸಮೀಪಕೆ ಬಂತು ನಾಥನೈಯ್ಯ ನೀನು ಅನಾಥನು ನಾನು 1 ಬಹಳ ಹಿರಿಯರು ನಿನ್ನ ಕೊಂಡಾಡುತಿಹರು 2 ಹಿತವಾಗಬೇಕೆಂದು ನುತಿಸುವನು ನಾನಲ್ಲ ಪತಿತ ಪಾವನನೆ ಭಾರವು ನಿನ್ನದು ಸಟೆ ಮಾಳ್ಪುದುಚಿತವೆ 3
--------------
ಗುರುರಾಮವಿಠಲ
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
ಹ್ಯಾಗಿದ್ದರೂ ಸುಖವೇ ಜ್ಞಾನಿಯಾದವಗೆ ಪ ನಳಿನ ನಂಬಿರುವಗೆ ಅ.ಪ ಹಿಂದುಮುಂದಿಲ್ಲದೆ ತಾನೊಬ್ಬನಾದರು 1 ಹೊನ್ನು ಹೆಣ್ಣು ಮಣ್ಣು ಹೊಂದಿಕೊಂಡಿದ್ದರು ಅನ್ನಕಿಲ್ಲದೆ ತಾ ನರಳುವಂತಾದರು 2 ಬೇಡಿದರೊ ಹೊಟ್ಟೆ ತುಂಬ ದೊರಕದಿದ್ದರು 3 ಯೋಗ್ಯನೆನ್ನುತ ಜನರು ಶ್ಲಾಘ್ಯವ ಮಾಡಿದರು ಭಾಗ್ಯಹೀನನಿವನೆಂದು ಬೈಯ್ಯತಲಿದ್ದರು 4 ಕೊಟ್ಟಷ್ಟರಲ್ಲೆ ತೃಪ್ತಿಪಟ್ಟು ಶ್ರೀ ಗುರುರಾಮ- ವಿಠ್ಠಲನ ಮನಮುಟ್ಟ ಭಜಿಸುವಗೆ5
--------------
ಗುರುರಾಮವಿಠಲ
ಹ್ಯಾಂಗೆ ಉದ್ದರಿಸುವಿ ಎನ್ನ ಕೃಷ್ಣ ಕರುಣ ಸಂಪನ್ನ ಪ ಹೋಗಿ ಹೊಗಿ ವಿಷಯ ಕೂಪದಲ್ಬೀಳ್ವವನಾಅ.ಪ. ದಾಸನು ಎಂದೆನಿಸಿ ಮೆರೆವೆ ಮನದೀ ಲೇಶಾ ಭಕುತಿಯನಾನೊಂದರಿಯೇ ವೇಷಹಾಕಿದೆ ಧನಕೆ ಬರಿದೇ ಆಶೆ ಇಟ್ಟು ಭವದಿ ವಂಚಕನೆನಿಸಿದವನಾ1 ಮಂದಿ ಜನರ ಮುಂದೆ ವೈರಾಗ್ಯನಟನೆ ಮಂದಿರದೊಳು ಬಹು ಕಾಮದ ಭಜನೆ ಬಂಧು ಬಳಗ ಕೂಡೆ ಬಹಳ ಭಕ್ತಿ ಇಂದಿರೇಶನ ಧ್ಯಾನ ದೋಳ್ವಿರಕ್ತಿ2 ಗುರುಹಿರಿಯರ ಜರಿವೊದೆ ಜಪವು ದುರುಳರ ಸಂಗ ದೋಳ್ಮೆರೆವೋದೆ ವ್ರತವು ಪರಿಸರನ ಶಾಸ್ತ್ರದೋಳ್ಮೌನ ನರನಾರಿ ಸ್ತವ ದೋಳ್ಧ್ಯಾನ 3 ವೇದ ಓದಿದೆ ನಾನು ಆದರೇನು ಮೋದತೀರ್ಥರ ಮರ್ಮ ಸಿಗಲಿಲ್ಲವು ಇನ್ನು ವಾದಕ್ಕನುಕೂಲ ವಾಯ್ತದು ಅಷ್ಟೆ ಖೇದ ತೊಲಗದೆ ಮನದಿ ಬಹುಕಷ್ಟಪಟ್ಟೇ 4 ಭುಕ್ತಿ ಪಡೆಯೆ ಕಾಲಕಳೆದೆನಲ್ಲಾ ಯುಕ್ತಿಯಿಂದಲಿ ನೀನು ಒಲಿವೋನು ಅಲ್ಲಾ ಭಕ್ತ ಜನರ ಸಂಗ ನಾ ಪಿಡಿಯಲಿಲ್ಲ ಮುಕ್ತಿಗಾಗುವ ಭಾಗ್ಯ ಎನ್ನಲಿಲ್ಲವಲ್ಲಾ 5 ಸ್ವೋತ್ತುಮರ ನೋಡೆ ಮಾತ್ಯರ್ಯ ಎನಗೇ ವಾತ್ಯಲ್ಯ ತೋರೆನು ಸ್ಧಾವರ ಜನಕೇ ಕುತ್ಸಿತ ಪಾವಡ ಬೀರುವೆ ಜಗಕೆ ತಾತ್ಸಾರ ತೋರುವೆ ಭಕ್ತರ ಗುಣದೀ6 ಈಷಣ ತ್ರಯಗಳ ಬಿಡಲಿಲ್ಲ ಲೇಶಾ ಭಾಷಣದಿ ತೋರ್ಪೆಜ್ಞಾನ ಪ್ರಕಾಶ ಈಶ ನೀನೊಬ್ಬನೆ ಸರಿಯೆಂಬೆ ಹರಿಯೆ ದಾಸನಾಗಿ ಬಾಳ್ವೆ ಬಹು ನೀಚ ಜನಕೆ 7 ನಾನು ನಾನೆಂಬುದು ತುಂಬಿದೆ ಮನದಿ ನೀನು ನಿನ್ನಾಧೀನ ವೆಂತ್ಹೇಳಿ ದೃಢದಿ ಜ್ಞಾನವಿದ್ದರು ಇಲ್ಲ ಎನಚರ್ಯೆ ನೋಡೆ ಮಾನಿನಿಯರ ಬೊಂಬೆ ಗುಣಗಣನೆ ಮಾಡೆ 8 ಮೂರೊಂದು ಹರಿತ್ಯಾಗ ತೊರೆಯಲಿಲ್ಲ ವೈರಿ ಆರರ ಬೇರು ನಾಕೀಳಲಿಲ್ಲ ವೀರ ವೈಷ್ಣವನಾಗಿ ಬಾಳಲಿಲ್ಲಾವಲ್ಲ ಗಾರು ಮನ್ನಿಸದಿರೆ ಗತಿಯೊಬ್ಬರಿಲ್ಲಾ 9 ವ್ರತನೇಮ ಉಪವಾಸ ಸಾಧನೆಯಿಲ್ಲ ರತಿಯಿಂದ ಸಲಹೆಂದು ನಾಕೂಗಲಿಲ್ಲ ಮತಿ ಮತದಿ ಪುಟ್ಟಿದರು ಫಲವಾಗಲಿಲ್ಲ ಗತಿ ನೀನೆ ಕೈ ಪಿಡಿಯೊ ಕೇಳುತ ಸೊಲ್ಲ 10 ಡಂಭಕ ತನದಿಂದ ಬಹುಕಾಲ ಕಳೆದೇ ತುಂಬಿ ಭಕ್ತಿಯ ಬೇಗ ನೀ ಕಾಯೋಮುಂದೆ ಜಂಭಾರಿ ಜಯತೀರ್ಥ ವಾಯ್ವಾಂತರ್ಗತನಾದ ಕಂಬುಕಂಧರಧಾರಿ “ಶ್ರೀ ಕೃಷ್ಣವಿಠಲ” 11
--------------
ಕೃಷ್ಣವಿಠಲದಾಸರು