ಒಟ್ಟು 7252 ಕಡೆಗಳಲ್ಲಿ , 131 ದಾಸರು , 4420 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಕಾಯೋ | ಗುರುವರ್ಯ | ಕಾಯೊ ಕಾಯೋ ಪ ಕಾಯೊ ಕಾಯೊ ಗುರುವರ್ಯ ಪರಮ ಪ್ರಿಯಜೀಯ ನಿನ್ನಯ ಪಾದಕೆರಗುವೆನಯ್ಯಾ ಅ.ಪ. ಒಂದರಿತವನಲ್ಲ | ಕಂದನು ಎಣಿಸದೆಬಂದು ಸಲಹೊ | ತಂದೆ ಮುದ್ದು ಮೋಹನ್ನ 1 ಹಿಂದಿನ ಸುಕೃತದಿ | ಬಂದು ಜನಿಸಿದೆನಂದ ಮುನಿಯ ಮತ | ಸಿಂಧುವಿನಲ್ಲಿ 2 ಇಂದಾದರು ತವ | ದ್ವಂದ್ವಪದವ ಮನಮಂದಿರದಲಿ ತೋರಿ | ದಂದುಗ ಬಿಡಿಸೋ 3 ಎಂದಾಗುದೊ ತಂದೆ | ಇಂದಿರೇಶ ಪದದ್ವಂದ್ವ ಸಂದರ್ಶನ | ಸಂಧಿಸೊ ಬೇಗನೆ 4 ತಂದೆ ನಿನ್ನಲಿ ಗುರುಗೋ | ವಿಂದ ವಿಠಲನಅಂದ ಮೂರುತಿಯನು | ಛಂದದಿ ತೋರೊ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಯೊ ಸುಖಸಾರ ಮಾಯಾವಿದೂರ ಭಾವಜನಯ್ಯ ಭಕುತರ ಪ್ರಿಯಕರ ಪ ಕಾಯಕಾಂತಾರದೊಳು ನೋಯುತ ವಿಧ ವಿಧ ಬಾಯ ಬಿಡುವೆನಯ್ಯ ತೋಯಜಾಕ್ಷನೆ ನೋಡೊ 1 ಸಂಸಾರತೆರೆಯೊಳು ಹಿಂಸೆ ಪಡುತ ಮತಿ ಕಂಸಾರಿ ಕರುಣಿಸೊ 2 ಜಡಭವತೊಡರನು ಕಡೆಹಾಯ್ಸಿ ಕೊಡುಮುಕ್ತಿ ಕಡುದಯಾನಿಧೆ ಎನ್ನೊಡೆಯ ಶ್ರೀರಾಮನೆ 3
--------------
ರಾಮದಾಸರು
ಕಾಯೋ - ಕಾಯೋ ಪ ಕಾಯೋ ಕಾಯೋ ಗುರು - ರಾಯನೆ ತವ ಪದ ತೋಯಜ ಯುಗ ಎನ್ನ ಕಾಯದಲಿಟ್ಟು ಅ.ಪ ಕ್ಷುಲ್ಲಕ ಮನುಜರ - ಸೊಲ್ಲನೆ ನೀಗಿಸಿ ಹಲ್ಲನೆ ಮುರಿಯುವ - ಬಲ್ಲಿದ ನೀನೇ 1 ಭದ್ರ ಭಕುತಿಯ - ಉದ್ರೇಕವಿತ್ತು 2 ತ್ವತ್ಸೇವಾ ಜನರಲಿ - ಮತ್ಸರ ಮಾಡುವ ಕುತ್ಸಿತ ಜನತÀÀತಿ - ವಿಚ್ಛೇದ ಮಾಡುವ 3 ನಿನ್ನಯ ಜನರನ - ಮನ್ನಣೆ ಮಾಡದೆ ಬನ್ನವ ಬಡಿಪರ - ಖಿನ್ನರ ಮಾಡೀ 4 ದೂತರ ನಿಚಯಕೆ - ಈ ತೆರ ಚಿಂತೆಯು ಯಾತಕೆ ಗುರು ಜಗನ್ನಾಥ ವಿಠಲ ದೂತಾ 5
--------------
ಗುರುಜಗನ್ನಾಥದಾಸರು
ಕಾಯೋ ಕಾಯೋ ಪ ಕಾಯೋ ಕಾಯೋ ಕಮಲಯತಾಕ್ಷ ಭವ ತೋಯಧಿಯೊಳು ಬಿದ್ದು ಬಾಯ ಬಿಡುವನ ಅ ಅದ್ವೈತ ತ್ರಯದಧ್ವ ಪ್ರವರ್ತಕ ಸದ್ವೈಷ್ಣವರ ಪದದ್ವಯತೋರಿ 1 ಸಂಜೆಯ ತೋರಿ ಧನಂಜಯನುಳುಹಿದ ನಿರಂಜನ ಮೂರ್ತೆ 2 ಸತ್ಯಕಾಮ ತವ ಭೃತ್ಯೆಗೆ ಬಂದಪ ಮೃತ್ಯು ಕಳೆದು ಸಂಪತ್ತು ಪಾಲಿಸಿದೆ 3 ಕುಕ್ಷಿಯೊಳಂದು ಪರೀಕ್ಷಿದ್ರಾಜನ ರಕ್ಷಿಸಿದಂತೆ ಪ್ರತಿಕ್ಷಣದಲಿ 4 ಎಲ್ಲರೊಳಿಹ ಕೈವಲ್ಯದರಸು ನೀ ಬಲ್ಲಿದನೆಂಬುದ ಬಲ್ಲೆ ಬಹು ಬಗೆ 5 ನೀ ದಯ ಮಾಡದಿರೀ ದಿವಿಜರು ಒಲಿ ದಾದರಿಸುವರೆ ವೃಕೋದರ ವಂದ್ಯ 6 ಅಧಮ ನಾನಹುದುದಧಿ ಮಥನ ಸ ನ್ಮುದ ಮುನಿಮತ ಪೊಂದಿದವರಣುಗನು 7 ಕ್ಷುದ್ರ ಭೂಮಿಪರುಪದ್ರವ ಕಳೆದು ಸು ಭದ್ರವೀಯೋ ಕ್ಷುದ್ರುಮದಂತೆ 8 ವೀತಭಯ ಜಗನ್ನಾಥ ವಿಠಲ ಸುಖೇತರ ಕಳೆದು ಮಹಾತಿಶಯದಲಿ 9
--------------
ಜಗನ್ನಾಥದಾಸರು
ಕಾಯೋ ಜಿತಾಮಿತ್ರ | ಯಮಿಕುಲ ನಾಯಕ ಸುಚರಿತ್ರ ಪ ಕಾಯೊ ಕಾಯೊ ಜಿತಕಾಯಜಾತ ಶಿತ ಕಾಯೊ ನಿನ್ನ ಪದ ತೋಯಜಕೆರಗುವೆ ಅ.ಪ ಅಭಯದಾತನೆಂದು ತ್ವತ್ಪದ | ಕಭಿನಮಿಸುವೆ ಬಂದು ಶುಭ ಗುಣನಿಧಿ ಗುರು | ವಿಭುದೇಂದ್ರಕರ ಅಬುಜ ಸಂಭೂತ 1 ಮೌನಿ ಕುಲಾಧೀಶ | ಪ್ರಾರ್ಥಿಪೆ ಭಾನಪ್ರಕಾಶ ದೀನಜ ನಾಮಕರ ಧೇನು ಪುರಾತನ ಗೋನದ ತರು ನಿಜ ತಾಣಗೈದ ಗುರು 2 ತುಂಗಮಹಿಮ ಭರತ | ಕುಮತ ದ್ವಿಜಂಗಮ ದ್ವಿಜನಾಥ ಮಂಗಳ ಕೃಷ್ಣ ತರಂಗಿಣಿ ಭೀಮಾ ಸಂಗಮದಲಿ ಸಲೆ | ಕಂಗೊಳಿಸುವ ಗುರು 3 ಶರಧಿ ದುರಿತ ಕದಳಿದ್ವಿರದಿ ದಿವಿಜ ಪರಿವಾರ ನಮಿತ ನಿಜ ಕರುಣಿ ನಂಬಿದೆನು ಮರಿಯದೆ ನಿರುತ4 ವಿನುತ | ಶಾಮಸುಂದರಾಂಘ್ರಿ ದೂತ ಪೊಂದಿದ ಜನರಘ ವೃಂದ ಕಳಿವ ರಘು ನಂದನ ಮುನಿಮನ ಮಂದಿರವಾಸ 5
--------------
ಶಾಮಸುಂದರ ವಿಠಲ
ಕಾಯೋ ತೋಯಜ ನೇತ್ರ ಪ ಸುಮಿತ್ರ ಪವಿತ್ರ ಚರಿತ್ರ ಅ.ಪ. ಮಾನವ ಜನುಮದಿ ನೀ ತಂದೆಯೊಎನ್ನ ಗ್ಲಾನಿಯ ಕಳೆದು ಸುಜ್ಞಾನವನಿತ್ತು 1 ಕಠಿಣ ಸಂಸಾರದ ಕಟು ಅನುಭವವ ಸೈಸೆಸಟಿಯಲ್ಲೋ ಇದ ಸಂಕಟವ ಪರಿಹರಿಸಿ 2 ಹೃದಯದಿ ನೆಲಿಸಿ ನೀ ಸದಾವಕಾಲದೊಳುಗದುಗಿನೊಳ್ಮೆರೆಯುವ ವೀರನಾರಾಯಣ 3
--------------
ವೀರನಾರಾಯಣ
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ಬಾರೋ ಹರಿ ಈಯ್ಯೋ ವರ ಥೋರೀ ಜಾರಚೋರಖರ ಅರಿನಾಶಕಾರಿ ಪ ವಾಯುದೇವಪಿತ ತೋಯಜಾಕ್ಷಿ ಸೀತಾ ಪ್ರಿಯ ನೀನು ತ್ರಾತ ರಾಯ ಜಗನ್ನಾಥ 1 ಕಾಮನಯ್ಯ ನೀನು ಮಾಮನೋಹರನು ವಾಮನಾದಿ ನೀನು ರಾಮನಾಮಕನು 2 ಕರಿರಾಜನನ್ನು ತ್ವರಿತಾದಿ ಕಾಯ್ದಿ ಶ್ರೀವತ್ಸಾಂಕಿತ ಹರಿ ವೆಂಕಟೇಶ3
--------------
ಸಿರಿವತ್ಸಾಂಕಿತರು
ಕಾಯೌ ಶ್ರೀ ರಮಾದೇವಿಯೆ ಸದಾ ತೋಯಜಾಂಬಕಿಯೇ ಭಯವ ಬಿಡಿಸಿ ಭರದಿಂದ 1 ಕ್ಷೀರಾಂಬೋನಿಧಿ ತನಯೇ ತಾಯೇ ಮಾರನಯ್ಯನರಸಿ ಕರುಣಾವೆರಸಿ ನಲವಿಂದ 2 ಶಿ ್ರೀ ಶೇಷಾದ್ರೀಶ ಮನೋಲ್ಲಸಿತೆ ಕಾಂತೇ ವಾಸವಾದಿ ವಿನುತೇ ಮಹಿತೇ ವರದಾತೇ ತಾಯೆ 3
--------------
ನಂಜನಗೂಡು ತಿರುಮಲಾಂಬಾ
ಕಾರಣನೇ ಇವನು ಎಲ್ಲಕ್ಕೂ ಕಾರಣನೇ ಇವನು ಪ ಕಾರಣನಿವನು ಸಾಧಾರಣನಲ್ಲನು ಮಾರಮಣನು ಕರುಣಾರಸಮಯನು ಅ.ಪ ಇಚ್ಛೆಯಿಂದಲಿ ತಾನು ಅಖಿಲ ಜಗ ತ್ಸøಷ್ಟಿಯ ಮಾಡುವನು ಸ್ವಚ್ಛನಾದರು ತನ್ನ ಮೆಚ್ಚಿಗೆಯಿಂದಲಿ ತುಚ್ಛನೆಂಬೊ ಶಬ್ದ ವಾಚ್ಯನಾಗಿರುವನು 1 ಎಲ್ಲವ ಬಲ್ಲವನು ಈಶನು ಇಲ್ಲದ ಸ್ಥಳವಿಲ್ಲ ಚಿಲ್ಲರೆ ದೈವಗಳೆಲ್ಲರು ಈತನ ಚೆಲ್ಲಾಟಗಳಿಗೆ ಉಲ್ಲಾಸಿಸುವರು 2 ಭಿನ್ನರೂಪಗಳಿಂದ ಜಗದೊಳು ತನ್ನ ಲೀಲೆಯ ತೋರ್ಪ ಸನ್ನುತ ಭಕುತಗೆ ಮನ್ನಣೆಯಿಂದ ಪ್ರ ಸನ್ನನಾಗಿ ಉನ್ನತ ಪದವೀಯಲು 3
--------------
ವಿದ್ಯಾಪ್ರಸನ್ನತೀರ್ಥರು
ಕಾರು ಯಾರಮನೆಗುಂಟು ಖೋಡಿ ಚೋರತ್ವದಪಹಾರ ಮಾಡಿ ತಿಂದದ್ದೆಲ್ಲ ಪ ಕಾಯಜನಯ್ಯನ ದಿವ್ಯ ಚರಿತಗಳನ್ನು ಬಾಯಿಂದ ಪೊಗಳುತ ಕೈಯಿಂದ ಬರೆದು ಮಾಯಾಮೋಹವ ಬಿಡದೆ ನ್ಯಾಯಮಾರ್ಗವತಪ್ಪ ನ್ಯಾಯದಿಂ ಪರರೊಡವೆ ಬಾಯ್ಬಡಿದು ತಿಂದದ್ದು 1 ನಳಿನನಾಭನ ವಿಮಲ ಸುಲಲಿತ ಮಹಿಮೆಗಳ ತಿಳಿದು ಆನಂದದಿಂ ನಲಿನಲಿದು ಹಿಗ್ಗದೆ ಇಳೆಯ ವಾಸನೆಯಿಂದ ಅಳಿವ ಸುಖದಾಸೆಗೆ ಇಳೆಜನರ ಗಳಿಕೆಯನು ಕಳವಿನಿಂ ತಿಂದದ್ದು 2 ಭೂಮಿಯೊಳಧಿಕ ಶ್ರೀರಾಮನ ದಾತೃತ್ವ ಹೇ ಮನವೆ ನೀ ತಿಳಿದು ಪಾಮರತ್ವ ಬಿಡದೆ ಕಾಮಿತದೊಳು ಬಿದ್ದು ಭೂಮಿ ಜನರೆದುರಿಗೆ ಸ್ವಾಮಿಭಕ್ತಿಯ ತೋರಿ ಕಾಮಿಸಿ ತಿಂದದ್ದು 3
--------------
ರಾಮದಾಸರು
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲ ಬಂದಿತೋ ಬಂದ ಭವದೊಳು ಚಿಂತೆಯೊಳಗೆ ದಿನ ಸಂದಿತು ಪ ತುಪ್ಪ ಪಣಕೆ ಸೇರು ಉಪ್ಪೆಂಟು ಸಿದ್ದೆಯು ಮುಪ್ಪಾಗ ಕೊಂದೆ ಕೊಳಗಬತ್ತ ಸೊಪ್ಪ ಪಣಕೆ ಮಾರುವುದು ಅಚ್ಚೇರು 1 ವ್ಯಾಪಾರ ಸಾಪಾರ ತುಟ್ಟಿಸಿದರು ಕೊಳ್ಳ ಲಾಪರೆ ಫಣವೊಂದೆ ಕಟ್ಟಿಲ್ಲ ರೂಪಾಯಿ ಕೊಡೆ ಪುಲಿಚರಮ ಪಾಪವು ಸುಲತಾಗಿ ಪಣವ ಕೊಡೆಂಬರು 2 ದುಡ್ಡು ಕೊಡಲು ಬೇಡ ಬೈಯುತ ಆನೆ ಗೂಡಿನ (ಆನೆಗೊಂದಿ) ದುಡ್ಡತಾರೆಂಬರು ದೊಡ್ಡ ಮೊಳೆ ಪಣವಿದು ಸಣ್ಣ ಮೊಳೆಯಿಂಗಿ ? ಹೆಡ್ಡ ಹೋಗೆಂದದ್ದ ಬಿಸುಟರು ಫಣವ 3 ತಪ್ಪಿ ಹೇಳುವೆನೆ ನಮ್ಮಪ್ಪ ದುರ್ಭಿಕ್ಷವು ಎಪ್ಪತ್ತು ವರುಷ ಕೊದಗಿ ಬಂತು ಇಪ್ಪತ್ತು ವರುಷಕೀಕಾಲ ಬಂದಿದ್ದರೆ ಕನಿಷ್ಟಕ್ಕೆ ಗಣಿಸಿ ಸುಕ್ಷಾಮವ ಮರೆವೆನು 4 ಧಾರಣೆ ಪಾರಣೆ ಶಿವರಾತ್ರಿ ಹರಿದಿನ ಓರಂತೆ ಬಡವಗೆ ನೆಲೆಯಾಯಿತು ಕ್ಷೀರಾಬ್ದಿ ಶಯನ ಲಕ್ಷ್ಮೀನಾರಾಯಣನು ತನ್ನ ಸೇರಿದ ಜನರ ಕಣ್ಣಲಿ ನೋಡುತೊಲಿದ 5
--------------
ಕವಿ ಪರಮದೇವದಾಸರು
ಕಾಲಬೆರಳು ಬಾಯೊಳೇತಕೊ ರಂಗಯ್ಯ ನಿನ್ನ ಪ ಸಾಲದಾಯ್ತೆ ಭಕ್ತರಿತ್ತ ಕಾಲೋಚಿತ ಶಾಲ್ಯನ್ನವುಹಾಲೋಗರ ಭಕ್ಷ್ಯಗಳು ಅ.ಪ. ಆಲದೆಲೆಯ ಮೇಲೆ ಮಲಗಿರೆ ಚೆಲುವ ನಿನ್ನಕಾಲುಚಾಚಲನುವೆ ಇಲ್ಲವೆಬಾಲನಿನ್ನ ನಾಭಿಕಮಲ ಕಾಲಿವಾಲಿದಲ್ಲಿ ಗಂಗೆಜಲವ ಬಿಡುತಲಿರುವೆಯೇನು 1 ಹಸಿವೆ ಬಹಳವಾಗಿರುವದೆ ನಿನ್ನಮ್ಮ ಆಯಶೋದೆ ನಿನಗೆ ಮೊಲೆಯನುಣಿಸಳೆನಿಶಾಚರಿ ಪೂತನಿಯ ಮೊಲೆಯವಿಷವನುಂಡ ಕಾರಣದಲಿ ನೀರಡಿಸುತಲಿರುವೆಯೇನು 2 ಪದದಿಂದಲಿ ಬರುವ ಗಂಗೆಯ ಉದಕದಿಂದಉದರದೊಳಿಹ ಜೀವರಾಶಿಯಮುದದಿಂದುದ್ಧರಿಸಲೆಂದುಪದುಮಾಕ್ಷನೆ ಜುರುಜುರು ನೀ ಚೀಪಲಿರುವೆಯೇನು ಹೇಳು 3 ಹಸುಳ ನಿನ್ನ ಪದದೊಳಿಡುತಿಹ ಭಕ್ತರ ಭಕ್ತಿರಸವ ಸವಿದು ನೋಡುತಿರುವೆಯಾಪೆಸರನೆತ್ತ ಗದುಗಿನ ಶ್ರೀ ವೀರನಾರಾಯಣನೆದಯವ ತೋರಿ ಹೇಳು ಬೇಡುತಿಹೆನು 4
--------------
ವೀರನಾರಾಯಣ