ಒಟ್ಟು 7945 ಕಡೆಗಳಲ್ಲಿ , 134 ದಾಸರು , 4583 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೀರ್ತಿಸಿ ಜನರೆಲ್ಲ ಹರಿಯ ಗುಣ ಪ ಕೀರ್ತಿಸಿ ಜನರು ಕೃತಾರ್ಥರಾಗಿರೊ ಅ.ಪ ಆವನು ವನದೊಳಗೆ ನಿತ್ಯದಿಬಾಹ ಜನರ ಬಡಿದುಜೀವನ ಮಾಳ್ಪ ಕಿರಾತನು ಕೀರ್ತಿಸೆತಾ ಒಲಿದಾತನ ಕೋವಿದನೆನಿಸಿದ 1 ಆವನ ಪಾದರಜ ಸೋಕಲುಆ ವನಿತೆಯ ಜಡಭಾವವ ತೊಲಗಿಸಿ ಆ ವನಿತೆಯನುಪಾವನ ಮಾಡಿದ ದೇವಾಧಿದೇವನ 2 ಅಂದು ಶಬರಿ ತಾನು ಪ್ರೇಮದಿತಿಂದ ಫಲವ ಕೊಡಲುಕುಂದು ನೋಡದೆ ಆನಂದದೆ ಗ್ರಹಿಸಿಕುಂದದ ಪದವಿಯನಂದು ಕೊಟ್ಟವನ3 ದÀುಷ್ಟ ರಾವಣ ತಾನು ಸುರರಿಗೆಕಷ್ಟಬಡಿಸುತಿರಲುಪುಟ್ಟಿ ಭವನದೊಳು ಕುಟ್ಟಿ ಖಳರ ಸುರ-ರಿಷ್ಟವ ಸಲಿಸಿದ ಸೃಷ್ಟಿಗೊಡೆಯನ 4 ತನ್ನ ನಂಬಿದ ಜನರ ಮತ್ತೆ ತಾ-ನನ್ಯರಿಗೊಪ್ಪಿಸದೆಮುನ್ನಿನಘವ ಕಳೆದಿನ್ನು ಕಾಪಾಡುವಘನ್ನ ಮಹಿಮ ಶ್ರೀರಂಗವಿಠಲನ 5
--------------
ಶ್ರೀಪಾದರಾಜರು
ಕುಟಿಲವನು ಕಳಿಯೋ ನಿಟಿಲ ನಯನಾ ಪ ದುರ್ವಿಷಯ ಲಂಪಟದಿ ಮುಳಿಗಿ ಘನ ಸಂಕಟಕೆ ಒಳಗಾದೆನೊ ಪ್ರಭುವೇ ಅ.ಪ. ಪಂಚಭೇದ ಜ್ಞಾನವನು ಪಂಚವಿಧ ತೋರೆಂದು ಬಿನ್ನೈಪೆ ಮಂಚಪದಯೋಗ್ಯಾ ವೈರಾಗ್ಯ 1 ಕಾಮಿನಿಯಳಾ ಇಟಕೊಂಡು ಅನ್ಯಳ ಕಾಮಿಸುವುದುಚಿತವೇ ರಾಯಾ ಕಾಮರೂಪದಿಂದೆನ್ನ ಕಡೆಗೆತ್ತಿ ಕಾಯದಿರೆ ಕಾಮಹರನೆಂಬ ಬಿರುದ್ಯಾತಕೊಕಾಮಪಿತನೇ ಕೇಳು ಕಾಲಕಾಲಕೆ ನಿನ್ನ ಕಾಲಿಗೆರಗುವಂತೆ ಮಾಡಿ 2 ಬಿಲ್ವಭಜಕನೆ ಕೇಳು ಮತ್ತೊಂದು ನಾನೊಲ್ಲೆಶಪಥ ಪೂರ್ವಕ ಪೇಳ್ವೆ ಮಿಥ್ಯಮತವೊಲ್ಲೆನೊಒಲ್ಲದ ಸುರನಿಗೆ ಚೆಲ್ವಿಯಾಗಿತ್ತು ಕಂಗೆಡಿಸಿ ಉಳಿಸಿದೆ ಬಿಲ್ಲುಗಾರನೆ ಮಗನ ಕಾಳಗದಿ ಕೆಡಹಿ ತಂದೆ-ವರದಗೋಪಾಲವಿಠಲನ ನೋಡಿ ತೋರಿದೇ 3
--------------
ತಂದೆವರದಗೋಪಾಲವಿಠಲರು
ಕುಂಟೆ ಹೊಡೆಯೊ ಜಾಣ ಅದನೋಡಿ ಕುಂಟೆ ಹರಗೋ ಜಾಣ ಪ ಕುಂಟೆ ಹೊಡ್ಸೋನಾಗಿ ಕಂಟಿಕಡಿದು ನೀ ಎಂಟೆತ್ತುಗಳ ಹೂಡಿ ಮಂಟಪದ್ಹೊಲವನ್ನುಅ.ಪ ಅರಿವೆಮಡಿಕೆಹೊಡೆಯೊ ಮರವ್ಯೆಂಬ ಕರಿಕಿದಡ್ಡನಳಿಯೊ ಶರಣೆಂಬಗುದ್ದಲ್ಹಿಡಿಯೊ ಗರುವೆಂಬ ದುರಿತಕರುಣಗಳಗಿಯೊ ತೆರಪಿಲ್ಲದ್ಹೇಳುತ ಜರಾಮರಣೆಂಬ ಕಸ ಕರುಣೆಂಬ ಮಾಗಿ ಮಡಿ ಮಾಡಿ ಭರದಿ ಹಸನಮಾಡು 1 ಧ್ಯಾನ ದಾಸರಸೇವೆಯೆಂದೆಂಬುವ ಖೂನ ಮಾಡೆಲೊ ಬದುವ ದಾನಧರ್ಮಯೆಂಬುವ ಸತತದಿ ಹನಿಸು ಗೊಬ್ಬರವ ಜ್ಞಾನಿಸಂಗವೆಂಬ ಜಾಣಬೆದೆಗಾಲದಿ ಜ್ಞಾನಕೂರಿಗೆಯಿಂದ ಧ್ಯಾನಬೀಜವ ಬಿತ್ತು 2 ಮನನೆಂಬಬೆಳೆ ಕಾಯೋ ನಿಜವಾದ ನೆನೆವೆಂಬರ ಕವಣ್ಹಿಡಿಯೊ ಮನಚಂಚಲ್ಹಕ್ಕ್ಹೊಡೆಯೊ ಶಾಂತಿಸದ್ಗುಣವೆಂಬ ಫಲ ಪಡೆಯೊ ಘನತರ ದೃಢವೆಂಬ ಧಾನ್ಯರಾಸಿಮಾಡಿ ವನಜಾಕ್ಷ ಶ್ರೀರಾಮನೊನರುಹಕರ್ಪಿಸು 3
--------------
ರಾಮದಾಸರು
ಕುಡಿಸೆನಗೆ ಹರಿ ನಿನ್ನ ನಾಮರಸವ ಪ ಕೊಡಬೇಡ ಅನ್ಯರಸ ಹಸಿದಿದ್ದರೂ ಇರುವೆ ಅ.ಪ ಜನರ ಮನ್ನಣೆ ದೃಷ್ಟಿ ಕನಸಿನಲಾದರೂ ಬೇಡ ಮನವು ನಿನ್ನಲಿ ಸತತ ನೆಲಸಿರಲಿ ಸ್ವಾಮಿ ತೃಣವನು ಘನ ಮಾಳ್ಪ ಅನಿಲಮಂದಿರವಾಸ ಪ್ರಣತಪಾಲಕ ನಿನ್ನ ಮೊರೆಹೊಕ್ಕೆನಯ್ಯ 1 ನಿಜ ಭಕ್ತ ಪದವೀಯೊ ಋಜುವರ್ಗ ಸಂಪೂಜ್ಯ ಅಜ ಜನಕ ಜಗದೀಶ ಗೋಪಾಲ ಬಾಲ ವೃಜಿನವ ದೂರ ಮಾಡಿ ಮಾಯಸೆರೆಯನು ಬಿಡಿಸಿ ಕುಜನರ ಸಂಗ ಎನ್ನ ಹತ್ರ ಸುಳಿಯದಂತೆ ಮಾಡೊ 2 ಕೇಳಿಸು ನಿನ್ನ ಕಥೆ ನೋಡಿಸು ತವ ಮೂರ್ತಿ ಬಾಳಿಸು ಮನ ನಿನ್ನ ಧ್ಯಾನದಲ್ಲಿ ಫಾಲಕ್ಷ ಸಖ ಪೂರ್ಣ ಜಯೇಶವಿಠಲ ಕಾಲಿಗೆ ಬಿದ್ದವನ ಕೈಹಿಡಿದು ಉದ್ಧರಿಸು 3
--------------
ಜಯೇಶವಿಠಲ
ಕುಣಿ ಕುಣಿಯಲೋ ಬಾಲಗೋಪಾಲ ಪ ಗೋಪಾಲ ನೀರದ ನೀರ ಅ.ಪ ಯಮುನಾ ತೀರದಿ ಹಿಮಕಿರಣನು ತಾ ಮಮತೆಯ ತೋರಲು ಬೆಳಗುತಿಹ ಘಮಘಮಿಸುವ ಈ ಸುಮಗಳು ಸೂಸಿರೆ ಪ್ರಮದೆಯರೆಲ್ಲರ ಪ್ರೇಮಾಂಗಣದಲಿ 1 ಗಂಧವ ಮಾರುತ ಬೀರುತಲಿರುವನು ಇಂದಿರೆ ಕೊಳಲಿನ ರೂಪದಲಿ ಚಂದದಿ ನಾದವ ತುಂಬಲು ಪರಮಾ ನಂದವು ಮಾನಸ ಮಂದಿರದಲಿ ನೀ 2 ಕಾಯವು ರೋಮಾಂಚಿತವಾಯ್ತೊ ಮಾಯಾವಾದವೊ ಮೋಹಗಳು ತಾಯಿ ಮಡಿಲು ಸೇರಿದ ಶಿಶುವಂದದಿ ಹಾಯವೆನಿಸಿತೊ ಜೀವನ ಯಾತ್ರೆಯು 3 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಬಿಡಿಸೊ ಸ್ವಾಮಿ ನಿನ್ನಯ ಪಾದಯುಗಳವೆ ಕ್ಷೇಮವೆನ್ನಿಸೊ ಸಾರಾಸಾರ ವಿವೇಕದಿ ಮೋಕ್ಷದ ಕೋರಿಕೆ ಪುಟ್ಟಿಸೊ ಭವ ಪಾರ ಸೇರಿಸೋ 4 ಸಾರದ ಕರುಣಕೆ ಕಾರಣ ಬಿಂಬದ ಮೂರುತಿ ದರುಶನವು ಭಾರತಿ ರಮಣನ ಮಂಗಳಶಾಸ್ತ್ರ ವಿಚಾರವೆ ಕಾರಣವು ಭಕುತ ಜನ ಪ್ರಸನ್ನ ಲಕುಮಿರಮಣ ಎನ್ನು ತಕಿಟ ತಕಿಟ ಎಂದು 5
--------------
ವಿದ್ಯಾಪ್ರಸನ್ನತೀರ್ಥರು
ಕುಣಿದಾಡೊ ರಂಗ ನಲಿದಾಡೊ ಪ. ಕುಣಿದಾಡೊ ಕುಂದಣದ ಸರಳೆನಲಿದಾಡೊ ಮಾಣಿಕದ ಹರಳೆ ಅ.ಪ. ಪತಿಶಾಪದಿ ಶಿಲೆಯಾದ ಗೌತಮಸತಿಯ ಮೆಟ್ಟಿ ಪೆಣ್ಣಮಾಡಿಅತಿದಿವ್ಯ ಶ್ರೀಚರಣಾರವಿಂದಗತಿಯಿಂದಲಿ ಧಿಂಧಿಮಿಕೆನ್ನುತ 1 ಗಕ್ಕಸದಿಂ ಶಕಟಾಸುರನಸೊಕ್ಕ ಮುರಿದು ಬಂಡಿಯನೊದೆದುಚೊಕ್ಕ ಶ್ರೀಚರಣಾರವಿಂದಧಿಕ್ಕಿಟ ಧಿಮಿಕಿಟ ಝಂಕಿಟವೆನ್ನುತ 2 ಬಲಿಯ ಮೆಟ್ಟಿ ಕಾಳಿಂಗನ ಹೆಡೆಯತುಳಿದು ನಾಟ್ಯವನಾಡಿಚೆಲುವ ಶ್ರೀಹಯವದನ ನಿಮ್ಮಘಲುಘಲು ಗೆಜ್ಜೆ ಘಿಲುಘಿಲುಕೆನ್ನುತ 3
--------------
ವಾದಿರಾಜ
ಕುಲವ್ಯಾವುದಯ್ಯ ಕಪಿಕುಲನೆ ನಿನಗೆ ಒಲಿದಿಹನು ಹರಿ ನಿನಗೆ ಎಂದು ಜನ ನುತಿಸುವರು ಪ. ಮರ ಹಾರುವಂಥ ಮರ್ಕಟಕುಲದಲವತರಿಸಿ ಶರಧಿ ಲಂಘಿಸುತ ದ್ವೀಪಾಂತರವಾಸಿ ದುರುಳರನು ಸಂಹರಿಸಿ ದೊರೆ ಸುತರ ಸೇವಿಸಿ ಕರದಿ ಎಂಜಲು ಕೊಂಡು ಮರವನೇರಿದನೆ 1 ಪ್ರಥಮ ಕುಲವನೆ ಬಿಟ್ಟು ದ್ವಿತೀಯ ಕುಲದೊಳಗುದಿಸಿ ಹಿತವೆ ರಕ್ಕಸಿ ಸಂಗ ಪಥದಿ ನಿನಗೆ ದಿತಿಜನಾಹುತಿ ಅನ್ನ ಗತಿಯಿಲ್ಲದಲೆ ತಿಂದು ಚತುರ ಕುಲಜನ ನೀ ನುತಿಸಿ ಹಿಗ್ಗಿದನೆ 2 ತುಳುವಂಶಜನೆ ನೀ ಲಲನೆ ಸಂಗವ ತೊರೆದು ಅಲೆದೆ ಯತಿಯಾಗಿ ಈ ಇಳೆ ಎಲ್ಲವ ಕುಲನ್ಯೂನ ಗೋಪಾಲಕೃಷ್ಣವಿಠ್ಠಲನ ಪದವ ಒಲಿಸಲೋಡಿದೆ ಆರು ಬರದಂಥ ಗಿರಿಗೆ 3
--------------
ಅಂಬಾಬಾಯಿ
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೂಗಿದರು ಧ್ವನಿ ಕೇಳದೆ ಶಿರ | ಬಾಗಿದರು ದಯ ಬಾರದೆ ಪ ಭೋಗಿಶಯನ ಭುವನಾಧಿಪತೇ ನಿನ್ನ | ಆಗಮನವೆಂದಿಗೆ ಆಗುವುದು ಪ್ರಭೊಅ.ಪ ಖರೆ ಎ| ನ್ನತ್ತ ನೋಡುವುದು ದೊರೆ || ಪರಾಕು ಮಹಾಪ್ರಭು | ಎತ್ತಣ ರಥವನು ಎತ್ತಿ ಬಾ ನೀಡು ದೊರೆ1 ಸಿರಿ | ಮಂದಿರ ಭಕ್ತ ಕುಟುಂಬಧರ || ಸುಂದರ ಮೂರುತಿ ಒಂದಿನ ಸ್ವಪ್ನದಿ | ಬಂದು ಪದದ್ವಯ ಚಂದದಿ ತೋರಿಸೊ2 ಕರುಣಾ ಶರಧಿಯು ನೀನಲ್ಲವೇ ಕೃಷ್ಣ | ಶರಣಾಗತರಿಗೆ ದೊರೆಯಲ್ಲವೆ || ಮೊರೆಹೊಕ್ಕವರಿಗೆ ಮರೆಯಾಗುವರೆ | ಸರಿಯೆ ಜಗದೊಳು ವಿಜಯವಿಠ್ಠಲರೇಯಾ 3
--------------
ವಿಜಯದಾಸ
ಕೃತ್ತಿಕೋತ್ಸವ ಗೀತೆ ಕೃತ್ತಿಕೋತ್ಸವ ನೋಡುವ ಬಾರೆ ನ ಮ್ಮಾರ್ತಿಯ ಪರಿಹರಿಪನು ನೀರೆ ಪ. ಬಹುಚಂದದಿ [ನಿಂದ]1 ಚಂದಂದಾಭರಣ ತೊಟ್ಟನೆ ಅರ್ತಿಯಿಂದಲೆ ತಾ ಪೊರಟಾನೆ 2 ಮಹಾಧ್ಯಾನದ ಮೇಲಿರಿಸಿ ಭಕ್ತವತ್ಸಲನಾಲಯಕೆಲ್ಲ 3 ಯಾರದಿಂದಲೆ ಶ್ರೀರಂಗನೇರಿ ಚಕ್ರಮೂರುತಿಯಮಂಟಪದಲ್ಲಿ 4 ಪಂದ (?)ವನಿತ್ತಾನೆ ಮುದದಿ ಲಕ್ಷ್ಮಿಗೆ ಸೇವೆ ಕೊಟ್ಟಾನೆ 5 ಆಳುಗಳ ಕೈಲಿತ್ತು ಪೊರೆದಾನೆ ಭಕ್ತರ ಹಸ್ತದಲಿ ಚಿತ್ತೈಸಿದನೆ 6 ಇಂದಿರೆರಮಣ ಗೋವಿಂದನೆ ಭವಬಂಧನಂಗಳನೆಲ್ಲ ಕಳೆವನೆ 7 ಅರ್ತಿಯಿಂದಲೆ ನೋಡಿದವರಿಗೆ ಮುಕ್ತಿಯ ಕೊಡುವನು ಸತ್ಯವಿದು 8
--------------
ಯದುಗಿರಿಯಮ್ಮ
ಕೃತ್ತಿವಾಸ ಪೂಜ್ಯ ಚರಣೇ | ಮಹತತ್ವಮಾನಿ ಸತಿಯೆ ಸುಗುಣೆ ||ಅ|| ನಿತ್ಯ ನೀಡೆ ಹರಿಯ ಸ್ಮರಣೆ ಅ.ಪ. ವಿಧ್ಯುದ್ವಾಕ್ ದಿಙËಮಾನಿಯೆ | ಹೇದ್ಯುಪೃಥಿವಿ ಭಾರತೀಯೇಪ್ರದ್ಯುಮ್ನ ಕೃತಿಗೆ ಕುಮಾರಿಯೆ | ಬುಧ್ಯಾಭಿಮಾನಿಯೇ ಕಾಯೆವಿದ್ಯುತಿಸ್ಥಿತಿ | ಬುಧ್ಯಾಬ್ದಿಯೆ | ವಿಧ್ಯೇತರ | ಅವಿಧ್ಯೆಯ ಕಳೆಸದ್ಯೋಜನ | ಶ್ರದ್ದಾಂಬಾ | ಮದ್ದೇಹದಿ | ಸಿದ್ಧಿಸು ಹರಿ 1 ಮಂದ ಪತಿ | ಸುಂದರ ಪದ | ಸಂಧಿಸು ಮನ | ಮಂದಿರದಲಿ 2 ಭಿಕ್ಷೆ ನೀಡೆ ತಾಯೇ | ಯುಕುತಿ ಶಾಸ್ತ್ರ ಒಂದನರಿಯೇಸೌಖ್ಯ ತೀರ್ಥ ಮತವನ್ವೊರೆಯೇ ಮುಕುತಿ ಮಾರ್ಗ ತೋರಿ ಪೊರೆಯೇ ||ತೋಕನು ಎನೆ | ಸ್ವೀಕರಿಸುತ | ಲೋಕರುಗಳ | ವಾಕನು ದೂ-ರೀಕರಿಸು ಪ | ರಾಕೆನ್ನುವೆ | ಭೀಕರಭವ | ನೀ ಕರಗಿಸು 3 ಕಡಗ ಕಂಕಣ ದ್ವಾರ ಧಾರೆ | ಜಡಿತ ದುಂಗುರ ದೋಷ ದೂರೆಮುಡಿದ ಮಲ್ಲಿಗೆ ಕುಂಚುಕಧಾರೆ | ಉಡುಗೆ ಬಿಳುಪಿನಂಬರೆ ನೀರೇ || ಒಡ ನಡುವು | ನಿಡಿತೋಳೂ | ತೊಡೆಕದಳೀ | ಬಡುವು ಪರೀ |ಅಡಿಗೆರಗುವೆ | ಪೊಡ ವೀಶನ | ಧೃಡ ಭಕುತಿ | ತಡೆಯದೆ ಕೊಡು4 ಶರಣು ಮುಂದಣ ವಾಣಿ ಕರುಣ | ಗುರು ಗೋವಿಂದ ವಿಠಲ ಚರಣಾ |ಭರಣವೆನಿಪ ಸುಗುಣ ಗಣಾ | ಒರೆದು ಕಳೆಯೆ ಭವದ ಬಂಧನ |ಮಾರಯ್ಯನ | ಆರಾಧನೆ | ಚಾರೀಸದೆ | ಧಾರಾಣಿಗೆಭಾರಾದೆನು | ಕಾರುಣ್ಯವ | ತೋರೂವುದು ಭಾರತಿಯೇ 5
--------------
ಗುರುಗೋವಿಂದವಿಠಲರು
ಕೃಪಣ ಶಿಷ್ಯನಿಗೇಅಪವರ್ಗಪ್ರದ ಹರಿಯೆ | ಅಪವಾದ ಕಳೆಯೋ ಅ.ಪ. ದಾಸನಾದವನು ನಿ | ರ್ದೋಷಿ ಎನುವುದು ನಿಜದಾಸನೆನೆ ಹನುಮಂಗೆ | ಲೇಸು ಸಲ್ಲುವುದೋ |ದಾಸರನುಯಾಯಿ ನರ | ದೂಷಣೆಗೆ ಒಳಗಾಗಿಕ್ಲೇಶ ಪಡುವುದು ಉಚಿತೆ | ಶ್ರೀಶ ಸರ್ವೇಶಾ 1 ಫಲವು ತುಸು ಕೆಟ್ಟಿರಲು | ಆ ಉಪಭಾಗವ ಬಿಸುಟುಮೆಲುವುದಿಲ್ಲವೆ ಫಲವ | ಹಲವು ಜನರೂಕಲಿಮಲಘ್ನನೆ ಹರಿಯೆ | ಕಲುಮಷವನೆ ಕಳೆಯುತ್ತಕಲುಷ ದೂರನ ಗೈಯ್ಯೋ | ಬಲು ದಯಾ ಪೂರ್ಣಾ 2 ಶಿರಿಮಾಧವಾ ಭಿನ್ನ | ಗುರು ಗೋವಿಂದ ವಿಠಲಕರುಣಾಪಯೋನಿಧಿಯೆ | ಸರ್ವಾಂತರಾತ್ಮತರಳಗೊದಗಿಹ ವಿಪದ | ಪರಿಹರವ ಗೈಯ್ಯುತ್ತಕರುಣಿಸೆನೆ ಮನಶಾಂತಿ | ಹರಿಯೆ ಭಿನ್ನವಿಪೇ 3
--------------
ಗುರುಗೋವಿಂದವಿಠಲರು
ಕೃಪಿಗಳೊಳು ನಿನಗುಪಮೆ ಕಾಣೆನೊ ಸದಾ ಕೃಪಣವತ್ಸಲ ರಾಘವೇಂದ್ರಾ ಅಪರಿಮಿತ ಪಾಪೌಘ ಸÀಪದಿ ಪೋಗಾಡಿಸಿ ನೀ ಕೃಪಣ ಕಾಮಿತ ದಾತಾ - ಮನ್ನಾಥಾ ಪ ಮೋದತೀರ್ಥ ಮತೋದಧಿ ಸಂಜಾತಾ - ಮೋದ ಸಂಯುಕ್ತ ಸುಧಾ ಭೋಧಿಸಿ ಚಂದ್ರಿಕ ಭುಧಜನ ವೃಂದಕೆ ಉದಧಿನಂದನನಂತಿರುವೇ - ನಂದಕರ ಗುರುವೆ 1 ಕ್ಷಿತಿ ತಳದೊಳು ವರ ಯತಿಯ ರೂಪವ ಧರಿಸಿ ಪತಿತ ಪಾವನನೆನಿಸೀ ಸತತ ಸುಜನರ ಅತಿಹಿತದಲಿ ಪೊರೆವೊ ಮತಿವಂತ ಮನದಲೀಗ ಭಜಿಪೆ ತ್ವಚ್ಚರಣ2 ಧಿಟ ಗುರು ಜಗನ್ನಾಥ ವಿಠಲಪಾದ ಹೃತ್ಸಂ - ಪುಟದಿ ಭಜಿಸುತಲೀ ಶಿಷ್ಟಜನರ ಮನದಿಷ್ಟಾರ್ಥ ಸಲಿಸುವ ವÀಂ - ದ್ಯೇಷ್ಟದಾನದಿ ದಕ್ಷಾ - ಕಾಮಿತ ಕಲ್ಪವೃಕ್ಷಾ 3
--------------
ಗುರುಜಗನ್ನಾಥದಾಸರು
ಕೃಪೆ ನಿಮ್ಮದಾಗಬೇಕು ಸ್ವಾಮಿ ನಿಮ್ಮರಿಯಲಿಕ್ಕೆ ಅಪಾರ ಮಹಿಮೆ ನಿಮ್ಮ ಸುಂಪಾದ ತಿಳಿಯಲಿಕ್ಕೆ ಧ್ರುವ ಭ್ರಾಂತಗೆಲ್ಲಿಹುದಯ್ಯ ಪೂರ್ಣನಿಂತ ನಿಲಕಡೆಙÁ್ಞನ | ಎಂತುಹೇಳಿದರ ಖೂನ ಶಾಂತಹೊಂದದಯ್ಯಮನ | ಪಂಥ ಪರಮ ಗುಹ್ಯಸ್ಥಾನ ತಂತುವಿಡಿಯಲು ನಿರ್ಗುಣ | ಅಂತು ಇಂತು ಎಂಬುಂದೆ ನಾನಂತ ಗುನ ನಿಧಾನ 1 ಖೂನ ತಿಳಿಯಲಿಕ್ಯಗಾಧಗುರು ನಿಮ್ಮಶ್ರೀಪಾದ | ಬೋಧ ನೀಡಬೇಕು ಸುಪ್ರಸಾದ | ನೀನೆವೆ ನಿತ್ಯವಾದ ವಸ್ತು ಪರಿಪೂರ್ಣ ಸದಾ | ದೀನ ಬಂಧು ದಯದಿಂದ ಖೂನದೋರೊ ಆಶ್ರಯದ 2 ಮಂದ ಮತಿ ನಾನು ಭಕ್ತಿ ಮಾಡಲರಿಯೆನು ಒಡಿಯನಹುದಯ್ಯ ನೀನುಮಹಿಪತಿಯ ಕಾಮಧೇನು ಕೊಡಲಿಕ್ಕೆ ಪೂರ್ಣ ನೀನು ಸ್ವಾಮಿ ಕಾವ ಕರುಣನು ಪಿಡಿದಿಹ್ಯ ನಿಮ್ಮ ನಾನು ದಿವ್ಯ ಪಾದಪದ್ಮವನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಪೆ ಮಾಡೋ ಕೃಷ್ಣ ಕೃಪೆಮಾಡೋ ತಪ್ಪದೆ ಪ್ರಾತಃ ಸಂಜೆ ನಿನ್ನ ಸ್ತುತಿ ಮಾಡುವಂತೆ ಪ ಚಂದ್ರಹಾಸನಂತೆ ವ್ರತ ಮಾಡಲರಿಯೆ ಅಂದಿನ ಧ್ರುವನಂತೆ ತಪಗೈಯಲಾರೆ ಕಂದ ಪ್ರಹ್ಲಾದನಂತೆ ಬಿಡದೆ ನುತಿಸಲಾರೆ ಸಂದ ನಚಿಕೇತನಂತೆ ಮೃತ್ಯುಗೆಲ್ಲಲರಿಯೆ 1 ಕರಿರಾಜನಂತೆ ಕೂಗಲರಿಯೆನೋ ಗರುಡನಂತೆ ಸದಾ ಹೊತ್ತು ತಿರುಗಲಾರೆ ಮರುತಜನಂತೆ ಭಂಟನಾಗಲರಿಯೆ ಉರಗರಾಜನಂತೆ ಶಯನಕಾಗಲಾರೆ 2 ದ್ರೌಪದಿಯಂತೆ ಅತ್ತು ಮೊರೆಯಿಡಲಾರೆ ರೂಪೆ ಭಾಮೆಯಂತೆ ಬಲು ಮೋಹಿಸಲಾರೆ ಆಪಾಟಿ ಸಖನಾಗರಿಯೆನು ಮಕರಂದನೊಲು ವಿಪ್ರನಾರಾಯಣನಂತೆ ಭಕ್ತಿಯರಿಯೆನೊ ಹರಿಯೆ 3 ಜಾಜಿಪುರೀಶ ನಿನ್ನ ಚರಣ ಸೇವೆಯ ಕೊಡೊ ಸಾಜದಿ ಮಾಡುವೆ ತಿಳಿದಂತೆ ಪಾಮರನು 4
--------------
ನಾರಾಯಣಶರ್ಮರು