ಒಟ್ಟು 10607 ಕಡೆಗಳಲ್ಲಿ , 130 ದಾಸರು , 5708 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ಕಂಡೆನು ಸ್ವಾಮಿಯ ಸುಪ್ರೇಮಿಯಾ ಪ ಕಂಡೆ ಕಂಡೆನು ಕೃಷ್ಣರಾಯನ ಪುಂಡರೀಕ ದಳಾಯತಾಕ್ಷನ ಪಾಂಡವಪ್ರಿಯ ಪಾರ್ಥಸಖನ ಉ ದ್ದಂಡ ಮಹಿಮ ಸುರೇಂದ್ರವಂದ್ಯನ ಅ.ಪ. ಕನಕ ನವಮಣಿ ಖಚಿತ | ವಾಗಿಹ ಸಿಂಹಾ ಸನದೊಳು ಸಲೆ ಶೋಭಿತ | ಸುರುಚಿರ ದಿವ್ಯ ಘನನೀಲನಿಭರಂಜಿತ | ನಿರ್ಮಲಗಾತ್ರ ಕುಂಡಲ ಮಣಿ ಗಣದ ಹಾರಾದಿ ಬಹು ಭೂ ಷಣಗಳನುಪಮ ಕಾಂತಿಯಿಂದಲಿ ಮಿನುಗುವತಿ ಲಾವಣ್ಯ ಮೂರ್ತಿಯ 1 ಕೋಟಿ ಮನ್ಮಥರೂಪನ | ಶ್ರೀಕೃಷ್ಣನ ಹಾಟಕಾಂಬರಧಾರನ | ಕರುಣಾಮಯ ಕಂಬು ಕಂಠನ ಆಟಮಾತ್ರದಿ ಪ್ರಬಲ ದೈತ್ಯ ಮ ಹಾಟವಿಯ ನಿರ್ಧೂಮಗೈದನ ಖೇಟವಾಹನನೆನಿಪ ತ್ರಿಜಗದಿ ಸಾಟಿಯಿಲ್ಲದ ದೇವದೇವನ 2 ಮೆರೆವ ದ್ವಾರಕಾಧೀಶನ | ದ್ರೌಪದಿದೇವಿ ಮೊರೆ ಕೇಳಿ ಸಲಹಿದನ | ಭಜಿಪರ ಅವ ಸರಕೊದಗುವ ದೇವನ | ಶ್ರೀ ಕೃಷ್ಣನ ತರಳತನದಲಿ ಗೋಕುಲದಿ ತಾ ಪರಿಪರಿಯ ಲೀಲೆಗಳ ತೋರಿದ ಪರಮ ಪುರುಷನ ಕರಿಗಿರೀಶನ ಸರಿಯಧಕರಿಲ್ಲದ ಸುರೇಶನ 3
--------------
ವರಾವಾಣಿರಾಮರಾಯದಾಸರು
ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕಂಡೆ ಕನಸಿನಲಿ ಕಾರುಣ್ಯ ಮೂರುತಿ ಹರಿಯ ಪ ಪುಂಡರೀಕಾಕ್ಷ ಪುರುಷೋತ್ತಮನ ಸಿರಿಯ ಅ.ಪ ಚಂಡು ರನ್ನದ ತಾಯ್ತಿ ಮಲುಕು ಅರಳೆಲೆ ಹೊನ್ನಗೊಂಡೆಗಳ ಬಿಗಿದ ಶಿಖಿ ದಾರದೆಡೆಯದುಂಡು ಮಲ್ಲಿಗೆಯ ಪರಿಮಳವು ಘಮಘಮಿಪ ಅಳಿ-ವಿಂಡುಗಳ ಜರಿವಂಥ ಸುಳಿಗುರುಳಿನಿರವ1 ಸಿರಿ ನಾಮ ಕಸ್ತೂರಿ ತಿಲಕದಎಸೆವ ಕುಡಿ ಹುಬ್ಬುಗಳ ಕುಂಡಲದ ಕಾಂತಿಗಳದÉಸೆದೆಸೆಗೆ ಬೆಳಗುತಿಹ ವರದೀಪ್ತಿಗಳನು 2 ಕೆತ್ತನೆಯ ಪದಕೆ ಕೆಲಬಲಕೆ ಒಲಿದಾಡುತಿಹಮುತ್ತು ಮಾಣಿಕದ ಹುಲಿಯುಗುರು ಸರದ ಮಣಿ ಒತ್ತಿನಲಿ ಶಿರಿವತ್ಸ ವೈಯಾರದಿರವ 3 ತÉೂೀಳ ಬಳೆ ತಾಯ್ತಿ ಕಡಗ್ಹವಳ ಕಂಕಣವಾಕು ನೀಲ ಮಾಣಿಕ್ಯದ ಬೆರಳುಂಗುರಗಳ ಸಾಲು ಗಂಟೆಗಳ ರಂಜಿಸುವ ಕಾಂತಿಗಳ ಈ- ರೇಳು ಭುವನಗಳ ಧರಿಸಿದ ಉದರವನು 4 ಬಟ್ಟದೊಡೆಗಳಿಗೆ ಬಿಗಿದುಟ್ಟ ಚಲ್ಲಣ ಮೈಯ ತೊಟ್ಟ ಜರತಾರದಂಗಿಯ ಚರಣದಿ ಕಾಲ ಕಡಗಗಳ ದಟ್ಟಡಿಯನಿಡುತ ಬಹ ಪುಟ್ಟ ಗೋಪಾಲಕನ 5 ಬಾಲಕನು ಕರೆಯೆ ಬಹು ಕಂಬದಲಿ ಬಂದೊಡೆದು ಬಾಲಕನ ತರಿದು ಸಾಂದೀಪಗಿತ್ತ ಬಾಲೆ ಚೀರಿದರೆ ಅಕ್ಷಯವಿತ್ತ ದೇವಕಿಯ ಬಾಲಕನ ಬಹು ಬಗೆಯ ಲೀಲೆಗಳನೆಲ್ಲ 6 ಪೊಗಳಲೆನ್ನಳವಲ್ಲ ಪೊಸಬಗೆಯ ಮಹಿಮೆಗಳ ಅಘಹರನ ಅಗಣಿತದ ಗುಣ ಗಣಗಳ ನಿಗಮ ನಿಕರಕೆ ಮೈಯಗೊಡದ ಉಡುಪಿನ ಕೃಷ್ಣ ನೊಗುಮಿಗೆಯ ಉನ್ನತದ ವೈಯಾರಗಳನು 7
--------------
ವ್ಯಾಸರಾಯರು
ಕಂಡೆ ಕನಸಿನಲಿ ನಾ ಪಾಂಡುರಂಗನ ಮಂಡೆ ಇಡುತಲಿ ಪುಂಡಲೀಕ ಚರಣದಲೀ ಪ. ಪಂಡರೀಕ್ಷೇತ್ರದಲಿ ವಿಠ್ಠಲನ ದರ್ಶನಕೆ ದಂಡೆ ಹಾರ ಕೊಂಡು ಪೋಗುತಿರಲೂ ಹಿಂಡು ಜನ ಊಟಕೆಡೆ ಅಣಿಮಾಡುತಿರಲಲ್ಲಿ ಕಂಡು ಸಾಗುತ ಮುಂದೆ ದ್ವಾರದೆಡೆ ಬಂದು 1 ನಂತರದಿ ದ್ವಾರಗಳು ಮುಚ್ಚಿರಲು ಕಂಡು ಬಹು ಚಿಂತಿಸಲು ಅಲ್ಲೊಬ್ಬ ಬರಲು ಅವಗೇ ಅಂತರಂಗವನುಸುರೆ ಕದ ತೆರೆದು ನೋಡೆನಲು ಸಂತೋಷದಿಂದೆರಡು ದ್ವಾರಗಳ ತೆರೆದೇ 2 ರತಿಪತಿಯ ಬಿಂಬ ಶ್ರೀ ಪ್ರದ್ಯುಮ್ನವಿಠ್ಠಲನ ಮೂರ್ತಿಯನೆ ಕಂಡು ಹಾರವನ್ಹಾಕಿ ನಮಿಸಿ ಅತಿ ಪ್ರೀತಿ ಭಕ್ತಿಯಲಿ ಅಪ್ಪಿ ನಾ ಮೈ ಮರತೆ ಸ್ತುತಿಸುತಲಿ ಗೋಪಾಲಕೃಷ್ಣವಿಠ್ಠಲನನಾ 3
--------------
ಅಂಬಾಬಾಯಿ
ಕಂಡೆ ಕೇಶವನನ್ನು ದೂರ್ವಾಪುರದ ಪುಂಡರೀಕಾಕ್ಷನನ್ನು ಪ ಶಂಖವ ಚಕ್ರವ ಗದೆಯ ಪದ್ಮವ ನಿತ್ಯ ಶಂಕೆಯಿಲ್ಲದೆ ನಾಲ್ಕು ಕರದೊಳು ಪಿಡಿದಾ ಪಂಕಜ ಲೋಚನ ಪರಮ ಪಾವನನನ್ನು ವೈರಿ ಮಾಧವನನ್ನು 1 ಕಾಲಿಗುಂದುಗೆ ಗೆಜ್ಜೆ ಮೇಲಾದ ಭಾಪುರಿ ನೀಲ ಮೇಘಶ್ಯಾಮ ತ್ರಿಗುಣ ರಹಿತನ ತೊಳೆವ ರತ್ನಾಭರಣದಿಂದ ಪದ್ಮ ದಂಡ ಚಲುವಿನಿಂದಲೆ ಊರಿ ನಿತ್ತ ಸ್ವಾಮಿಯನು 2 ಭಜಕರ ಸಲಹುವ ಭಕ್ತವತ್ಸಲನ ಸುಜನರ ಪೊರೆಯುವ ಶ್ರೀಧರನ ಅಜನನ್ನು ಪಡೆದಿಂಹ ಮುರಲೀಧರನ ಭಜಕರ ಮಧ್ಯದಿ ಮೆರೆವ ಕೇಶವನ 3
--------------
ಕರ್ಕಿ ಕೇಶವದಾಸ
ಕಂಡೆ ಕೇಶವರಾಯನ ನಂಮಾ ಪುಂಡರೀಕಾಕ್ಷನನ್ನಾ ಪ ನೀರಜಾಸನ ಪಿತನಾ ನಂಮಾ ಶ್ರೀ ರಂಗ ಶ್ರೀಹರಿಯಾ ಮಾರನ ಪಡೆದವನಾ ನಂಮಾ ಶೂರ ವಿಶ್ವಂಭರನಾ 1 ಕಾಮಿತ ಫಲದಾತನಾ ಭಕ್ತರ ಪ್ರೇಮದಿ ಪೊರೆವವನಾ ಭೀಮ ಪರಾಕ್ರಮನಾ ತುಲಸೀ ಧಾಮ ವಿಭೂಷಣನಾ 2 ಶರಣರ ಸಲಹುವನಾ ದಾಸರ ಮರುಸವತರಿವವನಾ ಗಿರಿಪುರ ಮಾಧವನಾ ದೂರ್ವಾ ಪುರದ ಶ್ರೀ ಕೇಶವನಾ 3
--------------
ಕರ್ಕಿ ಕೇಶವದಾಸ
ಕಂಡೆ ಗುರುರಾಯನಾ ಸುರಮನೋಪ್ರಿಯನಾ ಪ ತೊಂಡವತ್ಸಲ ಧರ - ದಂಡ ಕಮಂಡಲ ಪಂಡಿತಾಗ್ರಣಿಗಳೊಳು - ದ್ದಂಡ ಮಹಿಮನ ಅ.ಪ ಮಣಿ ವಿಭವಾ ವ್ರತತಿಜೋಪಮ ಯುಗನಯನ ಸಂಪಿಗಿನಾಸವಾ ಕಪೋಲ ಯುಗ ಭಾಸವಾ ವದನಾಬ್ಜದೊಳೊಪ್ಪುವ ಕಿರಿಹಾಸವಾ ಹಾ-ಹಾ- ಹಾ 1 ಕುಂದ - ಕುಟ್ಮಿಲ - ದಂತ ಪಂಕ್ತಿಯಾ ಅರುಣ ಪೊಂದಿ ಪೊಳೆವೊದದರ ಛವಿಯಾ ಸುಂದರ ದರೋಪಮ ಕಂಧರಾಂಕಿತ ಬಾಹುದಂಡವಾ ಭುಜದಳೊಪ್ಪುವ ಮುದ್ರನಾಮವ ಹೃದಯ - ಮಂಡಲ ಮುದ್ರನಾಮವ ಹಾ-ಹಾ-ಹಾ 2 ಚಲುವ ಸುಳಿನಾಭೀ ಪುಳಿನ ಪೋಲುವೊ ನಿತಂಬವಾ ಕದಳಿ ಸ್ತಂಭವಾ ಮಾಡುವ ಚರ್ಯ ವಿಡಂಬವಾ ಹಾ - ಹಾ - ಹಾ 3 ಕರಿರದೋಪಮ ಜಂಘೆಗಳಾ - ಗುಲ್ಫ ವರರತ್ನ ಪಾದಾಂಗುಲಿ ಸಂಫÀಗಳ ಸ್ಮರಿಸುವೊ ಜನರಿಗೆ ಸುರವರತರು ಪೋಲುವಾ ದುರಿತ ನಿರುತ ನೀಡುವೋ ನಭೀಷ್ಟವಾ ಭಕುತರೊಳಗೆ ತಾನಾಡುವಾ ಹಾ - ಹಾ - ಹಾ 4 ನೀತ ಗುರುಜಗನ್ನಾಥಾ ವಿಠಲಪಾದ ಪ್ರೀತಿಪೂರ್ವಕ ಭಜಿಸುತ ಭೂತ ಪ್ರೇತದ ಭಾಧೆUಳನೆಲ್ಲ ಕಳೆಯುವಾ ಸಕಲ ಸೌಖ್ಯನೀಡುವಾ ನಂಬಿದರೀತ ಪೊರೆಯುವಾ ತೋರಿಪನಾಗಯ್ಯ ಮಹಿಮವಾ ಹಾ - ಹಾ - ಹಾ 5
--------------
ಗುರುಜಗನ್ನಾಥದಾಸರು
ಕಂಡೆ ನನ್ನನು ಕಾಯ್ವನೆಂಬುದ ಕಂಡೆ ಪಾವನನಾದುದಪುಂಡರೀಕದಳಾಯತಾಕ್ಷನೆ ಗಂಡುಮಾಡುವ ಗೂಢವ ಕಂಡೆಕಂಡೆ ಪ.ಮಲಿನವೆಂಬುದು ಮನಕೆ ತೋರಲು ಮಲಿನ ಹೇತುವು ಮೂಡಲುಮಲಿನಕಳುಕುತಲಿದ್ದ ಸಮಯಕೆ ಬಲುಹಿನರಿಕೆಯ ಬೀರಲುಮಲಿನವೇ ಹುಸಿಯೆಂಬ ನಿಶ್ಚಯ ಬಲಿದು ಬಲು ಹುರಿಯಾಗಲುಕಲಕಿ ಸಂಶಯ ಕಡೆಗೆ ಜಾರಲು ನಿಲುಕಿ ನೀನಿದಿರಾಗಲು 1ಶುದ್ಧವೆಂಬುದಶುದ್ಧವೆಂಬುದು ಬುದ್ಧಿಕಲ್ಪಿತಮಾತ್ರವುಇದ್ದು ಸುತ್ತಲು ಈಶನಂತಿರೆ ಹೊದ್ದುವನ್ಯವದಾವದುಶುದ್ಧ ಶ್ರೀಹರಿ ಪೂರ್ಣ ಮಿಕ್ಕಿನ ಬದ್ಧನೆಂಬುದೆ ಭ್ರಾಂತಿಯುಅದ್ವಯಾನಂದಾಬ್ಧಿ ಯೆಂಬೀ ನಿರ್ಧರವ ನೆರೆ ತೋರಲು 2ಅಳುಕದಿರು ನಾ ವಿಶ್ವವಾಗಿಯೆ ಹೊಳೆದು ತೋರಿದೆನೊಬ್ಬನೇಬಳಸಬೇಡತಿಭೀತಿಯೆಂಬುದ ತಿಳಿದು ನೋಡೆಂದರುಹಿದೆಹುಳುಕು ತಾನದು ಹೊಂದದೆಂದಿಗು ಸುಳಿದು ಶುದ್ಧನ ಮಾಡಿದೆಒಳಗೆ ನೀನಿಹೆ ನಲಿದು ತಿರುಪತಿ ನಿಳಯ ವೆಂಕಟನಾಥನೆ 3ಕಂ||ಇಂತೀ ಭಾವನೆಗೈಯುವುದೆಂತೊದಗಿದುದೆನಲು ಸದ್ಗುರುವ ಕರುಣವು ತಾಬಂತೆನಗೆ ತಿರುಪತೀಶನೆಸಂತೋಷದಿ ವಾಸುದೇವ ಯತಿಯಾರ್ಗೀಯಲ್‍ಓಂ ದಯಾನಿಧಯೇ ನಮಃ
--------------
ತಿಮ್ಮಪ್ಪದಾಸರು
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಂಡೆ ನಾಕಂಡೆ ನಾಕಂಡೆ ಕಾಳಿಂಗನ ಮಂಡೆಯಮೇಲೆ ಕುಣಿವ ಕೃಷ್ಣನ್ನ ಪ ತಕ ತಕ ಧಿಮಿ ಧಿಮ್ಮಿ ಧಿಮ್ಮಿ ಧಿ- ಮ್ಮಿಕೆಂದು ಕುಣಿವ ಕೃಷ್ಣನ್ನ ನಾಕಂಡೆ ಅ.ಪ ಹೆಡೆಯ ಮೇಲೆ ತಾ ಎಡಗಾಲಿರಿಸಿ ಎಡಗೈಯಲಿ ಬಾಲ ಹಿಡಿದವನ ಬಿಡದೆ ಅಭಯಹಸ್ತವ ತೋರೊ ಒಡೆಯ ಕೃಷ್ಣಮೂರುತಿಯ ನಾಕಂಡೆ ಸ್ವಪ್ನದಲಿ ನಾಕಂಡೆ ಕಂಡೇನೊ ಸಂಪನ್ನಮೂರ್ತಿಯ ಕಂಡೇನೊ 1 ಗೋವಲರ ಮನೆಯ ಪಾಲುಂಡವನ ಗೋವುಗಳ ಕಾಯ್ದ ಗೋಪಾಲನ್ನ ಗೋವಿಂದನೆಂಬ ದೇವರದೇವನ್ನ ಓವಂತೆ ನಾನು ಕಂಡೇನು ಕಂಡೇನು ಕುಣಿಯುತ ಬಂದ ಕೃಷ್ಣನ್ನ ತಣಿಯುವ ಹಾಗೆ ನೋಡಿದೆನು 2 ಗೋವಿಂದನಾಗಿ ತಲೆಕಾಯ್ವವನ ಗೋವರ್ಧನವನೆ ಕೊಡೆಯಾದವನ ಗೋವನಿತೆಯರ ಮಾಮಾಯನನ್ನ ಅವ್ವಯ್ಯ ಚೆನ್ನಾಗಿ ಕಣ್ತುಂಬ ಕಂಡೆ ಆ ಮುದ್ದು ಬಾಲಕೃಷ್ಣನ್ನ ಕಂಡೆ ಸಾಮುದ್ರಿಕಾ ಸಿರಿಯನ್ನಕಂಡೆ 3 ಅಸುರ ಕಂಸನ ಅಸುವನ್ನು ನೀಗಿದನ ಬೆಸೆದ ಕುಬ್ಜೆಯ ಡೊಂಕ ತಿದ್ದಿದವನ ಅಸುತೆಗೆಯ ಬಂದವಳ ಅಸುವನೆ ಹೀರಿದನ ಮಿಸುಕದಂತೆ ಕಂಡೆ ನಾಕಂಡೆ ನಾಕಂಡೆ ಜಾಜಿಪುರೀಶನ ಕಂಡು ಧನ್ಯನಾದೆ ಸಾಜದಿ ದಾಸಾನುದಾಸನಾದೆ 4 ಪಾಪಿನಾ ಕರುಣೆಯ ತೋರಿ ಸಲಹೊ ಭಾಪುರೆ ಗಟ್ಟಿಸುವ ಪುಟ್ಟಪಾದವಿಟ್ಟು ಮೋಪಾಗಿ ಮೆರೆವ ದುಷ್ಟರ ಮೆಟ್ಟೊ ಪುಂಡರ ಪುಂಡರಿಗೆ ಪುಂಡನಾದವನೆ ಪುಂಡರೀಕಾಕ್ಷ ಚನ್ನಕೇಶವನೆ 5
--------------
ನಾರಾಯಣಶರ್ಮರು
ಕಂಡೆ ನಾನೊಂದು ಕೌತುಕವ ಧ್ರುವ ಭೂಮಿಯ ವೇದನೋದುದ ಕಂಡೆ ರಾಗಭೆÉೀದ ಮಾಡುದಕಂಡೆ ಪಾಡುದು ನಾಕಂಡೆ 1 ಆಕಾಶ ಮಾತುಕೇಳುದು ಕಂಡೆ ಪುರಾಣ ದೃಷ್ಟಿಸುವದು ಕಂಡೆ ಶಬ್ದ ಭೇದಗ್ರಹಿಸುದು ಕಂಡೆ ಪುಣ್ಯ ಶ್ರವಣವು ಕೇಳುದುಕಂಡೆ 2 ಖಣಿಯವಾದುದು ಕಂಡೆ ನಿರ್ಮಿತವಾಗಿಹ ರೂಪವ ಕಂಡೆ 3 ಅಗ್ನಿ ದೃಷ್ಟಿಸುವದು ಕಂಡೆ ಸೃಷ್ಟಿನೆಲ್ಲ ನೋಡುವದು ಕಂಡೆ ದೈವದ್ಯಾವರ ನೋಡುದು ಕಂಡೆ 4 ಗಾಳಿ ಘ್ರಾಣಿಸುವದು ಕಂಡೆ ಪರಿಪರಿವಾಸನೆ ಕೊಂಬುದುಕಂಡೆ ಬೀಜಾಕ್ಷರವು ನುಡಿವದು ಕಂಡೆ 5 ಎರಗಿತು ಪುಣ್ಯಶ್ರೀ ಚರಣದಲಿ ತ್ರಾಹಿಯೆಂದು ಪೊಡವಿಯಲಿ 6 ಬೆರಗಾದನು ಗುರುಕರುಣದಲಿ ಬೆಡಗವ ಕಂಡಿನ್ನು ಬೆರದಾದೆನಯ್ಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆÀನೀಗ ರಂಗನಾಥನ ಕಾರುಣ್ಯನಿಧಿಯ ಪ. ಮಂಡಲದೊಳುದ್ದಂಡ ಮೂರುತಿ ಹಿಂಡು ದೈತ್ಯರ ತಂಡ ತಂಡದಿ ತುಂಡು ತುಂಡು ಮಾಡಿದ ಸ್ವಾಮಿಯ ಅ.ಪ. ಕೌಸ್ತುಭ ನಾಮವ ನೇಮದಿಂದ ಧರಿಸಿದಾತನ ಹೇಮ ಮಂಟಪದೊಳಗೆ ಕುಳಿತು ಕಾಮಿಸಿದ ಭಕ್ತರಿಗೆ ಕಾಮಿತಾರ್ಥ ಕೊಡುವ ಸ್ವಾಮಿಯ 1 ಗರುಡವಾಹನವೇರಿ ಗಗನದಿ ಚರಿಸುತ್ತ ಬಂದು ಸರಸಿಯೊಳು ಕರಿಯ ಸಲಹಿದೆ ಪರಮಭಕ್ತರ ಕಾವದೇವ ಕರುಣವಾರಿಧಿ ಕಮಲನಯನ ಉರಗಶಯನ ಉದ್ಧಾರಿ ನಿನ್ನ ಮರೆಯಹೊಕ್ಕೆ ಕಾಯೊ ಎನ್ನ2 ಇಂದುಧರನ ಸಖನೆ ಕೇಳಯ್ಯ ಬಂದಂಥ ದುರಿತ ಹಿಂದು ಮಾಡಿ ಮುಂದೆ ಸಲಹಯ್ಯ ಇಂದು ಹೆಳವನಕಟ್ಟೆ ರಂಗ ಆ-ನಂದ ಪಡಿಸೊ ರಾಮಲಿಂಗ ಹೊಂದಿದೆನು ನಿನ್ನ ಚರಣ3
--------------
ಹೆಳವನಕಟ್ಟೆ ಗಿರಿಯಮ್ಮ
ಕಡೆಗಣ್ಣಲಿ ನೀ ನೋಡದಿರೆನ್ನಯ್ಯ ಬಿಡಬೇಡವೊ ಕೈಯ್ಯ ಬಡವರ ಬಂಧು ಬಹುಕೃಪಾಸಿಂಧು ಒಡೆಯ ನೀನಲ್ಲದೆ ಎನಗೆ ಬ್ಯಾರಿಲ್ಲವೊ ಪ. ಶತ ಅಪರಾಧವ ಮಾಡಿದೆನಯ್ಯ ಸೇರಿದೆ ನಾ ನಿನ್ನ ಬೆನ್ನ ಅತಿಪಾತಕಿ ಅಜಾಮಿಳನ ಉದ್ಧರಿಸಿದೆ ಪೃಥಿವಿಯೊಳಗೆ ಬಿರುದಾಂತ ಶ್ರೀಕಾಂತ 1 ನೆಲೆಗಾಣದೆ ನಾನಾಪರಿ ಚಿಂತೆಗೆ ಒಳಗಾದೆನೊ ನಾಹೀಗೆ ಬಳಲಿಸಬ್ಯಾಡವೊ ಭಕ್ತಕುಟುಂಬಿ ನಳಿನದಳಾಂಬಕ ನೀ ಸಲಹೆನ್ನನು 2 ಹೇರೊಪ್ಪಿಸಿದ ಮೇಲ್ಯಾತರ ಸುಂಕವು ಕಾರುಣ್ಯನಿಧಿ ಹೆಳವನಕಟ್ಟೆ ರಂಗಯ್ಯ 3
--------------
ಹೆಳವನಕಟ್ಟೆ ಗಿರಿಯಮ್ಮ
ಕಂಡೆನದ್ಭುತ ಮೂರ್ತಿಯನೂ ಹಿಂಡು ದೈವದಗಂಡ ವೇಲಾಪುರಾಧೀಶನನು ಪ ಪರಮಪದನಾಥ ಜಯ ಪರಮಪುರುಷನೆ ಜಯ ಮರಮೇಷ್ಠಿಜನಕಜಯ ಪರಮಪಾವನನೆ ಜಯ ಪರಮ ಸುಖವಾರ್ಧಿಜಯ ಪರಮಸುಜ್ಞಾನಿ ಜಯ ಪರಮ ಶುಭಗಾತ್ರಜಯ ಪರಮಸಂತೋಷಿ ಜಯತು 1 ಪರಮಸ್ವತಂತ್ರಜಯ ಪರಮ ಕಾರಣನೆಜಯ ಪರಮತ್ರಿಗುಣಾತ್ಮಜಯ ಪರಮಪಂಡಿತನೆ ಜಯ ಪರಮಗುರುವರ್ಯಜಯ ಪರಮಮುನಿವಂದ್ಯಜಯ ಭಾಗವತ ಪ್ರಿಯ ಜಯಜಯತು2 ಸರ್ವೋತ್ತಮನೆ ಜಯಜಯತು ಸ್ವಾಮಿ ಕರಿರಾಜವರದ ಜಯಜಯತು ಹರಿಯೇ ಅರವಿಂದನಾಭ ಜಯಜಯತು ಅಸುರ ಶರಧಿ ಬಡಬಾನಲನೆ ಜಯಜಯತು 3 ತರಳನ ಕಾಯ್ದವನೆ ಜಯಜಯತು ಶಿಶುವು ಕರೆಯೆ ಬಂದವನೆ ಜಯಜಯತು ತಪವ ಚರಿಸಿದನ ಕಾಯ್ದವನೆ ಜಯತು ನಿಜ ಶರಣರಿಗೆ ಪದವನಿತ್ತವನೆ ಜಯಜಯತು 4
--------------
ಬೇಲೂರು ವೈಕುಂಠದಾಸರು
ಕಂಡೆನಮ್ಮಾ ಕೌತುಕದಾ ಗಾರುಡಿಗನಾ | ಕೊಂಡಾಡಲಳವಲ್ಲ ಹೇಳಲೇ ನಾ ಪ ಬೋಧದನಾಗರ ನೂದುವನಾ 1 ಭಕ್ತರುದ್ದೇಶಕ ಬಂದ ಜವದಿ 2 ಸಕಲ ತೇಜದ ಬಬ್ಬುಳಿಯೋ ರೂಪ ನೆಲಿಯಾ | ಪ್ರಕಟ ತಿಳಿಯದು ನಿಜ ಕಳಿಯನಾ 3 ಅರಿಶಿಕ್ಷಾ ಭಕುತರ ಪಕ್ಷಾವೆಂಬ ನಾನಾ | ಬಿರುದು ಕಟ್ಟಿಹ ಮಹಿಮನಾ 4 ಕಾಳ ಸರ್ಪದ ನಿಜ ಮುಖ ಬಂಧವನ ಮಾಡಿ | ಜಾಳಿಸಿದನು ಭಯ ಈಡ್ಯಾಡಿ 5 ಹಮ್ಮಿನ ಗಾವ ಗುಂಡ ಗಜದಂತ ಶರಣರಿಗೆ | ವಮ್ಮಿಲೆ ಕಲೆಗಳ ದೋರುದೀಗನಾ 6 ತಂದೆ ಮಹಿಪತಿ ಸುತ ಸ್ವಾಂಮಿ ದುರ್ಲಭದಾ | ನಂದವ ತೋರಿದಾ ದಯದಿಂದಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು