ಒಟ್ಟು 2554 ಕಡೆಗಳಲ್ಲಿ , 109 ದಾಸರು , 1860 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರನ್ಯಾತಕ ಯದು ವೀರಾ|ಪದಾಂಬು ಜವದೋರಾ| ದಯರಸವಾಬೀರಾ| ಸಾರಿದವರಿಗಿನ್ನುದರಾವಾಗಿರಾ ಧೀರಾ ಪ ಮಂದ ಮುಗುದೆಯು ನಾನೆಂದು ಅರಿತು ಮೊದಲಿಂದು| ಕೈಯ್ಯ ಪಿಡಿದು ಬಂದು| ಕುಂದಾಲಿಸುವ ದಯಸಿಂಧು|ಉಚಿತ ವೇನಿಂದು 1 ಎನ್ನ ಬಿನ್ನಹ ಹೇಳಲೇ ಜಾಣೇ| ತಾಪಕೌಷಧಕಾಣೆ| ಕ್ಷಣಯುಗವ ನಿನ್ನಾಣೆ| ಮನ್ನಿಸಿ ತಂದು ತೋರಿನ್ನೆನೆ ಬಾರೇ ಪ್ರವೀಣೇ 2 ಶರಣ ಹೊಕ್ಕವರೆಂದು ಮರೆಯಾ|ನೆಂಬ ಮಾತಿದು ಖರೆಯಾ ಬಂದು ಕೂಡಿದ ತ್ವರಿಯಾ| ಗುರು ಮಹಿಪತಿ ಸ್ವಾಮಿಚರಿಯಾ ಬೊಮ್ಮತಾನರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ ಕರುಣಾನಂದದ ಸುಖ ಬೀರುತ ಬಾರೈ ಆತ್ಮಾನುಭವಕೆ ಧ್ರುವ ಕಣ್ಣು ಹಾರುತಿದೆÀ ಬಲದೆನ್ನ ಖೂನದೋರವ್ಹಾಂಗಿಂದು ಚೆನ್ನಾಗ್ಹೊಳಿಯುತಿ ಸುಚಿಹ್ನ ನೀನೊಲಿಯವ್ಹಾಂಗೆ ಬಂದು ಎನ್ನೋಳೀವ್ಹಾಂಗ ಸನಾತನ ಪಾಲಿಸಿದೆನಗೊಂದು ಧನ್ಯಗೈಸುವ ದಯಾಳು ನೀನಹುದೊ ಕೃಪಾಸಿಂಧು 1 ಏನೊಂದರಿಯೆ ಒಂದು ಸಾಧನ ಧ್ಯಾನಮೌನ ಹ್ಯಾಗೆಂದು ಖೂನಬಲ್ಲೆನೊ ನಿಮ್ಮ ಬಿರುದಿನ ದೀನನಾಥ ನೀ ಎಂದು ನ್ಯೂನಾರಿಸದೆನ್ನೊಳಗಿನ ನೀನೆ ಅನಾಥಬಂಧು ಎನಗುಳ್ಳ ಸ್ವಾಮಿ ಸದೋದಿತ ನೀನಹುದೊ ಎಂದೆಂದು 2 ತಾಯಿ ಶಿಶುಸ್ತನಪಾನಕೆ ಬಾಯಿಯೊಳಗಿಡುವ್ಹಾಂಗ ಸಾಯಾಸವಿಲ್ಲದೀಪರಿ ದಯಮಾಡುವದೆನಗೆ ಶ್ರೇಯಸುಖದಾಯಕೊಬ್ಬನು ನೀನೆ ಭಾನುಕೋಟಿ ಎನಗೆ ಅನುದಿನ ದೀನಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರಯ್ಯ ಭಕ್ತವತ್ಸಲ ಬಾರೋ ಶ್ರೀ ಹರಿ ಗೋಪಾಲ ಸಿರಿಸುಖಲೋಲ ಧ್ರುವ ಸಾಮಗಾಯನ ಪ್ರಿಯ ಸಮಸ್ತಲೋಕದ ಶ್ರೇಯ ನೇಮಿಸಿ ಬೀರೊ ದಯ ಸ್ವಾಮಿ ನಮ್ಮಯ್ಯ 1 ಅನಾಥರನುಕೂಲ ಮುನಿಜನ ಪ್ರತಿಪಾಲ ಘನಸುಖದ ಕಲ್ಲೋಳ ದೀನದಯಾಳ 2 ದೀನಮಹಿಪತಿಗಾಳು ಘನವಾಗಿ ಕೇಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ಶ್ರೀ ಚನ್ನಕೇಶವ ದೊರಿಯೇ ತೋರಯ್ಯ ನೀಡು ಭಕ್ತಿಯನು ಶ್ರೀ ಹರಿಯೇ ಪ ಸುಜನರ ಪೊರೆವಂಥ ಭಕ್ತಾಭಿಮಾನಿ ಕುಜನರ ತರಿವಂಥ ಸುಗುಣನಿಧಾನೀ 1 ದಶರೂಪ ತಳೆದಂಥ ಸ್ವಾಮಿ ಮುರಾರೀ ದಶರಥ ನಂದನ ದುರ್ಜನರ ವೈರೀ 2 ವರ ದೂರ್ವಾಪುರದಲ್ಲಿ ನಿರುತನಾಗಿರುವೀ ತರಳ ಬಾಲಕರಿಗೆ ನಿತ್ಯದಿ ಸಿಗುವೀ 3
--------------
ಕರ್ಕಿ ಕೇಶವದಾಸ
ಬಾರಯ್ಯ ಸ್ವಾಮಿ ಬಾರಯ್ಯ ಪ ಬಾರಯ್ಯ ಮುಖವನ್ನು ತೋರಯ್ಯ ತವಪಾದ ವಾರಿಜನಂಬಿದೆ ಮಾರಜನಕ ಬೇಗ ಅ.ಪ ಎಷ್ಟಂತ ಬಳಲಲಿ ನಾನು ಸಂಸಾರ ಕಷ್ಟದ ಕಾಡಿನೊಳಿನ್ನು ಧ್ವಂಸಾಗಿ ಭ್ರಷ್ಟತನದಿ ಬಾಳುವೆನು ಕಂಸಾರಿ ಇಷ್ಟುದಯವು ಬರದೇನು ಆಹ ಶಿಷ್ಟಜನುಮವೆಂದು ಅಟ್ಟಿ ಎನ್ನನು ಇಂಥ ಕೆಟ್ಟ ಬವಣೆಗೆ ಬಲಿಗೊಟ್ಟು ಬಿಡುವರೆ ಈಶ 1 ಜನನಿಜಠರದಲಿ ಎನ್ನ ಏನೆಂ ದೆನುತ ನೂಕಿದಿ ಪೇಳು ಮುನ್ನ ಸಾನಂದನುಪಮನು ತವಚರಣ ಆನಂದನುಕೂಲವಾದಂದಿಲ್ಲೇನ ಆಹ ಅನುಚಿತ್ತವೇನಯ್ಯ ದಿನವು ಪೋಯಿತು ಅರ್ಧ ಮನಕೆತರದಲಿಹಿ ಜನಕನೆ ಕರುಣದಿ 2 ಭಕ್ತವತ್ಸಲನೆಂಬ ಬಿರುದು ಮಾಜ ದ್ಹೊತ್ತು ನಿಖಿಲ ನೀನೆ ಬೆರೆದು ತ್ರಿಜ ಗೆತ್ತಿ ಆಳುವಿ ಮನವರಿದು ನೈಜ ದಿತ್ತು ಪೊರೆವಿ ಭಯತರಿದು ಆಹ ಕರ್ತನೆ ತವಪಾದ ಮರ್ತಿರಲಾರಿನ್ನು ತುರ್ತು ದಯವಾಗೆನ್ನೊಳರ್ತಿಯಿಂ ಶ್ರೀರಾಮ 3
--------------
ರಾಮದಾಸರು
ಬಾರೆನ್ನ ಸಖಿಯೇ ಕರೆದು ತೋರಿಸೇ ಪ ಕರೆದು ತೋರಿಸೇ ಕಂಜನಯ್ಯಾನಾ| ಕರಿವರ ದಾಯಕ ಕರುಣಾ ಸಾಗರನಾ 1 ಸರಸಿಜ ಲೋಚನ ಮುಕುಟ ಕುಂಡಲನಾ| ಕೌಸ್ತುಭ ಕೇಯೂರ ಧರನಾ 2 ಮದನ ಶರಕ ಗುರು ಮಾಡುವರೇನೇ| ಮಧುಹರ ಮುನಿವದು ಉಚಿತ ವೇನೇ 3 ಒಂದರಗಳಿಗೆಯ ಮರೆದಿರ ಲಾರೆ| ಇಂದು ನೀ ಧನ್ಯಳ ಮಾಡಲೆ ನೀರೆ4 ಬೆರೆದು ಬಿಡುವನಲ್ಲಾ ಸಕಲಂತರ್ಯಾಮಿ| ನೆರೆದನು ಗುರು ಮಹಿಪತಿ ಸುತಸ್ವಾಮಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೈ ಬೇಗ ಶ್ರೀರಾಮ ನಮೊ ಭಾನುಕುಲಾಂಬುಧಿ ಸೋಮ ನಮೊತೊರಿಸು ತವಪದಕಮಲ ನಮೊ ನೀರದಶ್ಯಾಮಲವದನ ನಮೊ ಪ ಅಜಹರಪ್ರಾರ್ಥಿತಮೋದ ನಮೊ ಅಯೋಧ್ಯನಗರವತಾರ ನಮೊಸುಜನಪಾಲ ಕುಜನಾರಿ ನಮೊ ಸನ್ಮುನಿಯಾಶ್ರಮ'ಹರ ನಮೊ1 ಸರಯೂತೀರ ಸಂಚಾರ ನಮೊ ಸತ್ಯಪರಾಕ್ರಮ ಸ್ವಾ'ು ನಮೊಪರಮಪುರುಷ ಪದ್ಮಾಕ್ಷ ನಮೊ ಪತಿತೋದ್ಧರ ಪರಮಾತ್ಮ ನಮೊ 2ಕ್ರೂರತಾಟಕಧ್ವಂಸ ನಮೊ ಮಾರೀಚಾದಿ 'ಚ್ಛೇದ ನಮೊಕಾರ್ಮುಕ'ದ್ಯಧುರೀಣ ನಮೊ ಕೌಶಿಕಮಖಸಂರಕ್ಷ ನಮೊ 3ಗೌತಮಸತಿಯಘಭಂಗ ನಮೊ ಕಾಂತಯಹಲ್ಯಾಸ್ತೌತ್ಯ ನಮೊ ಮಾತಾಪಿತಗುರುವೇ ನಮೊ ಮಮುದ್ಧರಿಸು ಮಹಾತ್ಮ ನಮೊ 4ಕ್ರೂರನು ಕುಟಿಲನು ಕುಮತಿ ನಮೊ ಕಲುಷಾರ್ಚಿತ ದುಷ್ಕರ್ಮಿ ನಮಸಾರರ'ತ ಸಂಸಾರಿ ನಮೊ ಸರ್ವ ದೋಷಪರಿಹಾರ ನಮೊ 5ಕೌಸಲೇಯಕನಕಾಂಬ್ರ ನಮೊ ದಾಶರಥೆ ದನುಜಾರಿ ನಮೊಶ್ರೀಶಚನ್ನಪುರಿಧಾಮ ನಮೊ ದಾಸವೈಷ್ಣವಕುಲಪ್ರೇಮ ನಮೊ 6ರಾಮರಾಮಜಯರಾಮ ನಮೊ ರಾಮತುಲಸಿದಳಧಾಮ ನಮೊರಾಮತುಲಸಿಗುರಸ್ವಾ'ು ನಮೊ ರಂಗಸ್ವಾ'ುದಾಸೇಶ ನಮೊ 7
--------------
ಮಳಿಗೆ ರಂಗಸ್ವಾಮಿದಾಸರು
ಬಾರೈಯ್ಯಾ ಗೋವಿಂದಾ | ಕೀರ್ತನೆಗೆ ಮುಕುಂದಾ | ಬೀರುತ ನಿಮ್ಮ ಮಹಿಮೆ ಸ್ವಾನಂದ ಪುರದಿಂದಾ ಪ ಕೋಂಡಾಡುವಂತೆ ಕೀರ್ತಿ ನೀಡಬೇಕು ನಿಜಸ್ಪೂರ್ತಿ | ಮಂಡೀಸಿ ಭಕ್ತರಂಗಾ ಹೇಳುವೆ ನಿಮ್ಮ ವಾರ್ತೆ 1 ವೈಕುಂಠ ಯೋಗಿವರಿಯಾ ಸ್ಥಳಸುರ ಮುನಿರಾಯಾ | ನೀ ಕರಿಸಿ ಪಾಡುವಲ್ಲಿ ಇಹನೆಂದೆ ನಿಶ್ಚಯಾ 2 ಕಂದನ ತೊದಲು ಮಾತಾ ಕೇಳಿ ಹಿಗ್ಗುವಂತೆ ಮಾತಾ | ತಂದೆ ಮಹಿಪತಿ - ಸ್ವಾಮಿ ಬಲವಾಗೋ ಶ್ರೀ ಕಾಂತಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೊ ನಂದನಂದನ ಅರವಿಂದಲೋಚನ ಪ ಅರವಿಂದಲೋಚನ ಭವಬಂಧ ಮೋಚನ ಅ.ಪ ದುರುಳ ದುರ್ಯೋಧನನ ಅನುಜ ಕರದಿ ಎನ್ನ ಸೀರೆ ಪಿಡಿದು ಭರದಿ ಎಳೆಯುವ 1 ಅರಿಯದಂತೆ ಇರುವರೆಲ್ಲ ಕಿರಿಯ ಜನಗಳು ಹರಿಯೆ ಕರುಣಾನಿಧಿಯೇ ಎನ್ನ ಮೊರೆಯ ಕೇಳಲೊ 2 ಕಾಮ ಜನಕ ನಾಮಗಿರಿ ಶ್ರೀ ಸ್ವಾಮಿ ನರಹರೆ ಹೇಮಕಶಿಪು ತನುಜನಂತೆ ಪ್ರೇಮದಿ ಸಲಹೆಲೊ 3
--------------
ವಿದ್ಯಾರತ್ನಾಕರತೀರ್ಥರು
ಬಾರೋ ಕ್ಷೀರೋದಧಿಶಯನ ಹರೆ ನಿನ್ನ ಕರುಣವ ಎನ್ನೊಳು ತೋರೊ ಪ ನಂದನಂದನ ಹೃನ್ಮಂದಿರಕೆ ನೀ ಬೇಗ ಬಾರೊ ಅ.ಪ ಶೌರೇ ನಿಂಗೆ ಸೇರಿದಾವನಾಗಿ ಇನ್ಯಾರಿಗೆ ಬೇಡಲೊ ಮುರಾರೆ ಕರುಣಿಸಿ ಬಾರೊ 1 ಕೃಷ್ಣಾಮೂರ್ತೆ ಸೃಷ್ಟಿಪಾಲನಾಗಿ ಪರಮೇಷ್ಠಿ ಜನಕ ನಿಂಗಿಷ್ಟೂಪೇಕ್ಷೆ ಯಾಕೋ 2 ಇಂದಿರೇಶ ಚಂದಿರವದನ ಮುಚುಕುಂದವರದ ಗೋವಿಂದ ಕರುಣಿಸಿ ಬಾರೊ 3 ಮಂಗಳಾಂಗ ಅಂಗಜ ಜನಕ ಯದುಪುಂಗವ ಕೈಬಿಡದಾಂಗೆ ಪಾಲಿಸು 4 ನಾಮಗಿರಿಸ್ವಾಮಿ ನಾರಸಿಂಹ ಬಲರಾಮ ಸೋದರ ಪ್ರಣಾಮ ಮಾಡುವೆ ಬಾರೊ 5
--------------
ವಿದ್ಯಾರತ್ನಾಕರತೀರ್ಥರು
ಬಾರೋ ನನ್ಮ ಸ್ವಾಮಿ ಗುರು ಅಂತರ್ಯಾಮಿ ಕರುಣಸಾರ ಬೀರುತಿಹ್ಯ ಶರಣಜನಪ್ರೇಮಿ 1 ಬೇಡಿ ನಿನ್ನ ಕೊಂಬೆ ನಿನ್ನ ನೋಡಿ ಬಲಗೊಂಬೆ ಕಡಿಯುಗಾಣಿಸುವ ನೀನೆ ಒಡಿಯ ನನಗೆಂಬೆ 2 ಪಾದಪೂಜೆ ಮಾಡೆ ಸಾಧಿಸಿನ್ನು ನೋಡೆ ಭೆದಿಸನುದಿನ ನಿಜಬೋಧ ಬೆರದಾಡೆ 3 ಕಾಣಲಿಕ್ಕೆ ಉಬ್ಬೆ ನೆನದು ನಿಮ್ಮ ಕೊಬ್ಬ್ಯ ನಾನು ನೀನೆಂಬಹಂಭಾವ ಇದೆ ಧಬೆ 4 ನಿತ್ಯ ಪ್ರತಿಗೆ ದೀನ ಮಹಿಪತಿಗೆ ಭಾನುಕೋಟಿತೇಜ ನೀನೆ ಬೇಕು ಸುಭಗುತಿಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ನಮ್ಮನಿಯೊಳಗೆ ಭಾರತಿಪತಿ ಪ ಬಾರೋ ನಮ್ಮನಿಗೀಗ ನೀರಜಾಕ್ಷನು ನಿನ್ನಸೇರಿದ ಜನರೊಳು ಭಾಳ ಬಹಳೇ ಪ್ರೀತಿಯ ಮಾಳ್ಪ ಅ.ಪ. ಹರಿಯ ಮಂಟಪದೊಳು ಸರಸಿಜಾಕ್ಷನ ಮುಂದೆಇರಿಸಿ ನಿನ್ನನು ನಿತ್ಯಾ ಸ್ಮರಿಸಿ ಪೂಜಿಪೆ ಸ್ವಾಮಿ 1 ನಿನ್ನ ಸೇರಿದ ಕಪಿಯನ್ನು ಪೊರೆದ ಹರಿನಿನ್ನ ಸೇರದ ವಾಲಿಯನ್ನು ಘಾತಿಸಿದಾ 2 ನಂತ ತೀರ್ಥರೆ ದಯದಿಂದ ನಮ್ಮೊಳು ಭವ-ಬಂಧನ ಬಿಡಿಸೆಂದು ಇಂದಿರೇಶಗೆ ಪೇಳು 3
--------------
ಇಂದಿರೇಶರು
ಬಾರೋ ಬಾರೋ ಗುರುರಾಯನೆ ಧ್ರುವ ಹೊಳೆಯನೀಸಿ ಇಳದಿ ಬಾರೊ ಇಳಿಯ ಪೊತ್ತು ಬಳಿದಿ ಬಾರೊ ಇಳಿಯಗೆಲಿದು ಸೀಳಿ ಕಂಭದೊಳು ಹೊಳದಿ ಬಾರೊ ನೀನು 1 ಅಳೆದು ಭೂಮಿ ಬಳದಿ ಬಾರೊ ಇಳಹಿ ತಳಿಯ ತಿಳದಿ ಬಾರೊ ಅಳಿದು ದೈತ್ಯಬಲವ ಮುರಿದು ಕೊಳಲನೂದಿ ಬಳಲಿ ಬಾರೊ 2 ಸುಳ್ಳ ವ್ರತನಳಿದಿ ಬಾರೊ ಸುಳುಹಿ ತೇಜ ಹೊಳಿದಿ ಬಾರೊ ಹೊರೆದು ಸಲಹುವ ಸ್ವಾಮಿ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ಬಾರೋ ಬಾರಯ್ಯ ಬಾರೊ ಸದ್ಗುರುಸ್ವಾಮಿ ಬಾರಯ್ಯ ಬಾರೊ ಮದ್ಗುರು ಸ್ವಾಮಿ ಬಾರಯ್ಯ ಬಾರೊ ಧ್ರುವ ಸ್ವರೂಪಸುಖ ನಿಜವನ್ನು ತೋರೊ ಹರುಷಾನಂದದನುಭವ ಬೀರೊ ಗುರುತವಾಗ್ಯೆನ್ನೊಳು ನಿತ್ಯವಿರೊ ತರಣೋಪಾಯದ ನಿಜಬೋಧ ನೀ ಸಾರೊ 1 ಕಣ್ಣುಕೆಂಗೆಂಡುತಾವೆ ಕಾಣದೆ ನಿಮ್ಮ ಪುಣ್ಯಚರಣ ತೋರೊ ಘನ ಪರಬ್ರಹ್ಮ ಚಿಣ್ಣಕಿಂಕರ ಅತಿದೀನ ನಾ ನಿಮ್ಮ ಧನ್ಯ ಧನ್ಯಗೈಸುವದೆನ್ನ ಜನುಮ 2 ಚಾಲ್ವರುತಾವೆ ಮನೋರಥಗಳು ಆಲೇಶ್ಯ ಮಾಡದಿರು ನೀ ಕೃಪಾಳು ಮೇರೆದಪ್ಪಿ ಹೋಗುತಿದೆ ದಿನಗಳು ಬಲು ಭಾಗ್ಯೊದಗಿಬಾಹುದು ನೀ ದಯಾಳು 3 ಹಾದಿ ನೋಡುತಿದೆ ಹೃದಯ ಕಮಲ ಸಾಧಿಸಿಬಾಹುದು ಮುನಿಜನ ಪಾಲ ಸಾಧುಹೃದಯ ನೀನಹುದೊ ಸಿರಿಲೋಲ ಛೇದಿಸೊ ನೀ ಬಂದು ಭವಭಯಮೂಲ 4 ಬಾರದಿದ್ದರೆ ಪ್ರಾಣ ನಿಲ್ಲದೊ ಎನ್ನ ಕರುಣಿಸಿಬಾಹುದು ಜಗನ್ಮೋಹನ ತರಳ ಮಹಿಪತಿಗೆ ನೀ ಜೀವಜೀವನ ಕರೆದು ಕರುಣ ಮಳೆಗೈಸು ಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು