ಒಟ್ಟು 2161 ಕಡೆಗಳಲ್ಲಿ , 110 ದಾಸರು , 1442 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿದ್ಯಾಮರವೇ ಉದ್ಯೋಗದ ಮರವೇ ಪ ಅಂಜನಾ ದೇವಿಯ ನೀ ಜಠರದಿ ಜನಿಸಿ ಕಂಜರಾಕ್ಷ ಶ್ರೀರಾಮಭದ್ರನ ಭೃತ್ಯನೆನಿಸಿ ಸಂಜೀವಿನಿಯ ತಂದೆ ಅಂಜದಾರ್ಣವ ದಾಂಟಿ ತಂದೆ ರಂಜಿಪ ಮುದ್ರಿಕೆಯ ಅವನಿಜಾತಳಿಗಿತ್ತು ಬಂದೆ1 ಹೆಸರಾದ ಕೌರವ ಬಲವ ಸವುರಿ ನೀ ಉಸುರಿಲ್ಲದವರನು ನೆಗಹಿ ನೀ ಮಿಸುಕದೆ ಅಸುರರ ಅಸುವ ಪೀಡಿಸಿದೆ ಅಸುನಾಥ ಹರಿಸಿ ನೀನತುಳ ತೋಷವನಿತ್ತೆ 2 ಧರೆಯೊಳು ನೀ ವರ ಕಾಪ್ಯಪುರದಿ ಜನಿಸಿ ಹರಿಮತವ ಹರಹಿ ಹರಿಸಿ ರೂಹುಗೊಳಿಸಿ ಹರಿಪರಬ್ರಹ್ಮನೆಂದರಿಯೆ ಜಗಕ್ಕೆ ಕೋರಿ ನರಸಿಂಹವಿಠಲನನುಗಾಲ ತೋರುವನು ದಾರಿ 3
--------------
ನರಸಿಂಹವಿಠಲರು
ವಿಧಿ ನಿಷೇಧವು ನಿನ್ನ ಸ್ಮರಣೆ ವಿಸ್ಮರಣೆಯ- ಲ್ಲದಲರಿಯರೇನೊಂದು ಹರಿಭಕ್ತರು ಪ ಮಿಂದದ್ದೆ ಗಂಗಾದಿ ತೀರ್ಥಗಳು ಸಾಧುಗಳು ಬಂದದ್ದೆ ಪುಣ್ಯ ಕಾಲವುಗಳು ಅವರು ನಿಂದದ್ದೆ ಗಯ ವಾರಣಾಸಿ ಕುರುಕ್ಷೇತ್ರಗಳು ಬಂದು ಪೋಗಲು ಅದುವೆ ರಾಜಬೀದಿ 1 ಕಂಡು ಕಂಡದ್ದೆಲ್ಲ ಕಮಲನಾಭನ ಮೂರ್ತಿ ಮಂಡಿಸಿದ ಶಯನ ದಂಡಪ್ರಣಾಮ ತಂಡತಂಡದ ಕ್ರಿಯೆಗಳೆಲ್ಲ ಹರಿ ಪೂಜೆಗಳು ಮಂಡೆ ಬಾಗಿಸಿ ಸಮಿಪ ಶರಣ ಜನಕೆ 2 ನಡೆವ ನಡೆಯೆಲ್ಲ ಲಕ್ಷ ಪ್ರದಕ್ಷಿಣೆ ಮತ್ತೆ ನುಡಿವ ನುಡಿಯೆಲ್ಲ ಗಾಯಿತ್ರಿ ಮಂತ್ರ ಒಡೆಯ ಶ್ರೀಕಾಂತನ್ನ ಅಡಿಗಡಿಗೆ ಸ್ಮರಿಸುತಿಹ ದೃಢ ಪ್ರಜ್ಞರೇಂಗೈಯ್ಯಲದುವೆ ಮರ್ಯಾದೆ 3
--------------
ಲಕ್ಷ್ಮೀನಾರಯಣರಾಯರು
ವಿಧಿ ಭವ ಸುರಾರ್ಚಿತಪಂಕಜಾಂಘ್ರಿ ಸುಪೋಷಾ | ಲಕ್ಷ್ಮೀ ನಿವಾಸಾ ಪ ಶಂಖ ಚಕ್ರ ವರಾಭಯಕರ ಶ | ಶಾಂಕ ವದನ ಕಳಂಕ ರಹಿತನೆಕಿಂಕರನ ಅವಗುಣಗಳೆಣಿಸದೆ | ಪಂಕಜಜ ಪರಿಪಾಲಕನೆ ಶ್ರೀ ಅ.ಪ. ಶುಭ ಭಾರ ಕಾರುಣಿಕ ಪರಿ | ವಾರ ಮಾಮನೊಹಾರ ಮೂರುತಿ1 ಭವ ಕೈಟಭಾರಿ ಮಹಾಮಹಿಮ ಗುಣ ||ಕೂಟದಿಂದಲಿ ಜಗವ ನಿರ್ಮಿಸಿ | ಹಾಟಕೋದರ ಹರ ಪ್ರಮುಖ್ಯರನೀಟು ಸೂತ್ರದಿ ಈಟದಿಂದದಿ | ಚೂಟದಲಿ ಚೆಲ್ಲಾಟವಾಡಿದ 2 ಪರ ಕಲುಷ ಕಾ | ನನವ ಖಂಡಿಸೊ ವ್ಯಾಸ ವಿಠ್ಠಲಮನ ವಚನ ಕಾಯದಲಿ ನಮಿಸುವೆ | ಘನ ಮಹಿಮ ಗಜವರದ ಸುಂದರ 3
--------------
ವ್ಯಾಸವಿಠ್ಠಲರು
ವಿವೇಕದಿಂದಾ ಮತಿಯುಕ್ತನಾಗಿ ಕುವಿದ್ಯದಾದಾ ಗುಣವೆಲ್ಲ ನೀಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದದಾಮೋದರ ಮಾಧವೇತಿ 1 ತ್ರಿವಿಧ ತಾಪದೊಳು ಮಗ್ನನಾಗಿ ನೀವ್ಯರ್ಥದಿನಗಳಿಯದೆ ಹೋಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 2 ಈ ವಿಷಯದಾಸುಖ ನಿತ್ಯವಲ್ಲಾ ನೀವಾತು ಕೇಳಿಗುರುವೀನ ಸೊಲ್ಲಾ ಭಾವಾರ್ಥದಿಂದ ಸ್ಮರಿಸೂದು ನೀತಿ ಗೋವಿಂದ ದಾಮೋದರ ಮಾಧವೇತಿ 3 ಆವದು ತನ್ನ ಹಿತವನು ನೋಡಿ ಸಾವಧನಾಗೀ ಶ್ರವಣ ಮಾಡಿ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 4 ಅವಾವ ಯೋನಿಯಲಿ ಬಂದಹಿಂದಾ ಅವದುಗತಿಯಂದು ನೋಡಿವಂದಾ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 5 ತಾವಂದೇ ಆಶ್ರೈಸದೆ ಕಾಮಧೇನು ಸಾವಿರ ಸಾಧನಕ ಬೀಳುದೇನು ಬಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 6 ಜೀವಾತ್ಮರಾಗಿ ಸಚ ರಾಚ ರಾವ ಬಾವರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೊದರ ಮಾಧವೇತಿ 7 ಗೋವಿಂದ ಅಷ್ಟಕವ ದಾವಪ್ರಾಣೀ ಸೇವಿಸುವನು ಕಾವನು ಚಕ್ರಪ್ರಾಣೀ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಶ್ವ ಜ್ಞಾನರೂಪವಿಶ್ವದೊಳ ಹೊರಗು ನೀನಲ್ಲದೆ ಬೇರೆವಿಶ್ವನಾಟಕ ಸೂತ್ರಧಾರರುಂಟೆ ಹರಿಯೆ ಪ ಮುಕುಟ ಮಂಡೆಯಲಿ ಧ್ರುವಲೋಕ ಭುವನಾವಳಿಯುನಿಖಿಲ ಶ್ರುತಿ ನವರತುನ ನಿಟಿಲದಲ್ಲಿಮುಖದಲಿಂದ್ರರು ಅಗ್ನಿ ಸಪ್ತ ಋಷಿಗಳು ದ್ವಿಜರುಮುಖದ್ವಾರದುಸುರಿನಲಿ ಶ್ರುತಿ ಮರುತರುದೃಕುಯುಗದಿ ರವಿ ಶಶಿಯು ಎವೆಯಲ್ಲಿ ನಕ್ಷತ್ರಪ್ರಕಟ ಜಿಹ್ವೆಯ ವಾಣಿ ಕರ್ಣದ್ವಯದಿವಿಕಟ ಕಿವಿಯಲಿ ಅಶ್ವಿನಿದೇವತೆಗಳೆಲ್ಲಸಕಲ ಧರ್ಮವ ಪಡೆದೆಯೆಲೊ ಹರಿಯೆ 1 ಸ್ಕಂಧದಲಿ ಅತಿಥಿಗಳು ವಿದ್ಯಾತತಿಗಳು ಮಹಾಚಂದದರಸುಗಳು ಭುಜ ತೋಳಿನಲ್ಲಿಮುಂದುರದಿ ವಿಷ್ಣು ಹರ ಬ್ರಹ್ಮ ಸಹಿತುದರದಲಿಹಿಂದಿನ ಮಗ್ಗುಲಲಿ ಮನುಮುನಿಗಳುಮುಂದಿನ ಮಗ್ಗುಲಲಿ ಗಿರಿನಿಚಯಂಗಳುಸಂಧಿಯಲಿ ಮಕರಂದ ದೇವತೆಗಳುಮುಂದೊರೆದಿಹ ರೋಮಕೂಪದಗ್ರದಳತೆಯುವೃಂದಗಳ ಶೋಭಿಪ ರೀತಿಯ ಪಡೆದೆಯೆಲೊ ಹರಿಯೆ2 ಬೆನ್ನಿನಲಿ ವಸುನಿಕರ ಸ್ಮರನು ಲಿಂಗದಲಿ ಈ ಭು-ವನವೆಲ್ಲವು ಚೆಲುವ ನಾಭಿಯಲ್ಲಿಮುನ್ನ ಕೈಯಲಿ ವಿಶ್ವದೇವತೆಗಳು ವೈಶ್ಯಉನ್ನತ ಜಾನುವಿನ ಸಕ್ತಿಯಲಿಭಿನ್ನ ನದಿಗಳು ಸನ್ಮೋಹನ ಶಕ್ತಿ ಪ್ರ-ಸನ್ನ ಪಾದಾಬ್ಜದಿಂ ಶೂದ್ರರುನಿನ್ನ ಅವಯವದಲ್ಲಿ ಸಕಲವಂ ಪಡೆದ ಪ್ರ-ಸನ್ನ ಕಾಗಿನೆಲೆಯಾದಿಕೇಶವರಾಯ 3
--------------
ಕನಕದಾಸ
ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ವಿಷ್ಣು ತೀರ್ಥರಪಾದ | ನಿಷ್ಠೆಯಿಂದಲಿ ಭಜಿಸೆಇಷ್ಟಾರ್ಥ ಸಲಿಸೂವರ್ | ಕೃಷ್ಣಪೂಜಕರೂ ಪ ಜಿಷ್ಣುಸಖ ಶ್ರೀ | ಕೃಷ್ಣ ಭಕುತರುಶ್ರೇಷ್ಠ ದಂಪತಿ | ಗರ್ಭಜಾತರುಸುಷ್ಠಜಯಮುನಿ | ಸೇವೆಯಿಂದಲಿಇಷ್ಟವರದಿಂ | ದುದಯರಾದರು 1 ಬಾಲ್ಯದಲ್ಲು ಪನೀತ | ಆರ್ಯರಿಂದು ಪದಿಷ್ಟಆರ್ಯ ಐಜೀವರ್ಯ | ಗುರುಕುಲವಸಿತ |ಕ್ರೌರ್ಯ ಹರಿಜಪ | ದೈರ್ಯದಿಂದಲಿವೀರ್ಯವತ್ತರ | ಜಪಿಸಿ ಗುರುಸುತವರ್ಯನಪಮೃತಿ | ಕಳೆದು ಗುರುವಿಂಮಾನ್ಯವಂತನು | ಎನಿಸಿ ಮೆರೆದ 2 ಮಲದ ಅಪಹಾರಿಯ | ಜಲಪ್ರವಾಹದಿ ನಿಂದುಘಳಿಗೆ ಇರಲು ಉದಯ | ವಲಿಸಿ ಮಧ್ವವಿಜಯಒಲಿಮೆಯಿಂದಲಿ | ಸೂರ್ಯನಘ್ರ್ಯವಕಾಲಮೀರದೆ | ತಾನು ಕೊಡುತಲಿಮೂಲಗ್ರಂಥವ | ತಿಳಿಯ ಬೋಧವಇಳೆಯ ಸುರರಿಗೆ | ಪೇಳ್ದ ಮಹಿಮಾ 3 ಅವಧೂತ ಚರ್ಯದಿ | ಅವನಿಯೊಳ್ಚರಿಸುತ್ತಭುವನ ಪಾವನ ಸುಧೆ | ದಿವಿಜರಿ ಗುಣಿಸೀ |ಶ್ರವಣ ಗೈಸುತ | ಸುಧೆಯ ಗ್ರಂಥವಅವನಿಯೊಳು | ತತ್ವಾರ್ಥಬೋಧಿಸಿಪ್ರವರ ಭೂಸುರ | ಮುಕ್ತಿಮಾರ್ಗದಹವಣೆ ಗೈದಿಹ | ಭುವಿಯದಿವಿಜ 4 ವನವನಚರಿಸುತ್ತ | ಮುನಿವಳ್ಳಿಯಲಿಮುನಿಯೋಗ್ಯವೆನಿಸುವ | ವಾನಪ್ರಸ್ಥಾಶ್ರಮದಿ |ಘನಸುವ್ರತವನೆ | ಅಸಿಯಪತ್ರದಿಮನವನಿರಿಸುತ | ಗಣ್ಯನಾದೆಯೊಅನಘ ಹರಿಕಾ | ರುಣ್ಯ ನಿನ್ನಲಿಗಣನೆಗೈಯ್ಯಲು | ಮನುಜಗಸದಳ 5 ಯತಿ ಸತ್ಯವರರಿಂದ | ಯತಿ ಆಶ್ರಮವ ಪೊಂದಿಕ್ಷಿತಿಯ ಸಂಚರಿಸುತ್ತ | ಅನ್ನಾಳಿಗಾಗಮೀಸೀ |ಹಿತನು ದೇಶಾದಿ | ಪತಿಯ ರೋಗವಹತಗೈದು ಅನ್ನವ | ಜೊತೆಲುಂಬುವಯತನ ಸಾಧಿತ | ಪ್ರಾಪ್ತಕ್ಷಾಮವಹತವ ಗೈಸಿದೆ | ರಮೆಯನೊಲಿಸೀ 6 ಬೋಧ | ಗ್ರಂಥಗಳ್ರಚಿಸೀ |ಮೋದದಿಂ ವೃಂದಾವನಸ್ಥರುಸಾದು ಸೇವೆಗೆ ಅಭಯನೀಡುತನಾದಗುರು ಗೋವಿಂದ ವಿಠಲನಮೋದ ಧ್ಯಾನಾಸಕ್ತರಾಗಿಹ7
--------------
ಗುರುಗೋವಿಂದವಿಠಲರು
ವೀಣೆ ಧರಿಸಿದ ಕಾರಣೇನೊ ಹನುಮಾ ಜಾಣತನವಿದು ಏನು ಪೇಳೊ ಬಲಭೀಮ ಪ. ತ್ರೇತೆಯಲಿ ಶ್ರೀ ರಾಮದಾಸತ್ವ ಚರಿಸಿದುದು ಖ್ಯಾತಿ ಬರಲಿಲ್ಲೆಂದು ಮನದಿ ತಿಳಿದೂ ಪ್ರೀತಿಯಿಂದಲಿ ಕೃಷ್ಣನಂಘ್ರಿ ಗುಪ್ತದಿ ಭಜಿಸಿ ನೀ ತಪೋನಿಧಿ ಎನಿಸಿ ಮುನಿಯಾದ ಮಹಿಮಾ 1 ಮೂರು ಅವತಾರದಲಿ ತೋರದಂತ್ಹರಿ ದಾಸ್ಯ ಆರಾಧಿಸುತ ಮೀಸಲಾಗಿ ಚಲಿಸೇ ಧೀರಭಕ್ತರು ಬಯಲಿಗೆಳೆದು ಖ್ಯಾತಿಯ ಪಡೆಯೆ ತೋರದಂತಾಗೆ ಬೇಗನೆ ದಾಸ್ಯ ವಹಿಸೀ 2 ದಾಸರನುಭವಿಪ ಆನಂದ ನೋಡುತ ಭಾರ ತೀಶ ನೀ ಮೊದಲು ದಾಸನು ಎನಿಸಲು ವಾಸುಕೀಶಯನ ಗೋಪಾಲಕೃಷ್ಣವಿಠ್ಠಲಗೆ ದಾಸನಾಗುತ ವೀಣೆ ಪುಸ್ತಕವ ಪಿಡಿದಿಯಾ 3
--------------
ಅಂಬಾಬಾಯಿ
ವೃಂದಾವನ ನೋಡಿದೆ | ಸತ್ಯ ಪ್ರೀಯರವೃಂದಾವನವ ನೋಡಿದೇ ಪ ಸತ್ಯ ಪೂರ್ಣ ಕರಜರೆನಿಸಿ | ಸುತ್ತಿಕ್ಷೇತ್ರಗಳನೆಲ್ಲಮತ್ತೆ ಬರಲು ಶ್ರೀರಂಗಕ್ಕೆ | ಫತ್ತೇಸಿಂಗ ಭೇಟಿಯಾದ 1 ಶತೃಗಳ ಗೆದ್ದು ಬಂದು | ಸತ್ಯಪ್ರಿಯರಿಗೆರಗಿ ಅವನೂ ಇತ್ತು ಊರುಗಳನೆರಡು | ನೆತ್ತಿ ಚಾಚಿ ನಮಿಸೀದ 2 ಮಾನಮಧುರಿ ಊರಿನಲ್ಲಿ | ಪ್ರಾಣೋತ್ಕ್ರಮಣ ಸಮಯದಲ್ಲಿಜ್ಞಾನಿ ರಾಮಾಚಾರ್ಯರಿಗೆ | ದಾನ ಮಾಡ್ದ ತುರ್ಯಾಶ್ರಮ 3 ಮಾಧವನ ದಯದಿಂದೆ | ಸಾಧಿಸುತ ಬದರಿ ಯಾತ್ರೆವೇದವತಿ ತೀರದಲ್ಲಿ | ಸಾಧುಗಳ ವೃಂದಾವನ 4 ವೇದ ವೇದ್ಯನಾದ ಗುರು | ಗುರುಗೋವಿಂದ ವಿಠಲನಮೋದದಿಂದ ಭಜಿಸುತ್ತ | ಆದರದಿ ಧ್ಯಾನಾಸಕ್ತ 5
--------------
ಗುರುಗೋವಿಂದವಿಠಲರು
ವೃಂದಾವನದ ಸೇವೆಯ ಪ. ವೃಂದಾವನದ ಸೇವೆಮಾಡಿದವರಿಗೆ ಭೂ-ಬಂಧನ ಬಿಡುಗಡೆಯಾಗುವುದು ಅ.ಪ. ಕರವ ಮುಗಿದು ಬೇಗೀ-ರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆಏಳು ಪರದಕ್ಷಿಣೆಯನು ಮಾಡಿದವರಿಗೆಏಳು ಜನಮದ ಪಾಪ ಹಿಂಗುವುದು1 ಸಾರಿಸಿ ರಂಗವಲ್ಲಿಯನಿಟ್ಟು ಮೇಲೆ ಪ-ನ್ನೀರನೆರೆದು ಪ್ರತಿದಿವಸದಲ್ಲಿಸಾರಿ ಸೇವೆಯ ಮಾಡಿದವರಿಗೊಲಿದು ಮುನ್ನಸೇರಿಸುವಳು ತನ್ನ ಪದವಿಯನು 2 ಒಡೆಯನ ಮನೆಗೆ ನೀರುತರುತಲೊಬ್ಬಳುಎಡಹಿ ಬಿದ್ದಳು ತನ್ನ ಕೊಡನೊಡೆಯೆಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನಕೊಡಳೆ ಅವಳಿಗೆ ಮೋಕ್ಷಪದವಿಯನು 3 ಕೇಶವ ಎಂಬ ಭೂಸುರಗೆ ಶುಕಯೋಗಿ ಉಪ-ದೇಶಿಸಿದನು ತನ್ನ ಭಾಗವತದಲ್ಲಿಕಾಸುವೀಸ ಹೊನ್ನು ಹಣ ಸವೆಯದಾಮುನ್ನ ನಿ-ರಾಶೆಯಿಂದಲಿ ಮುಕ್ತಿ ದೊರಕುವುದು 4 ಪೊಡವಿಗಧಿಕವಾದ ಸೋದೆ ಪುರದ ತ್ರಿವಿಕ್ರಮಎಡಭಾಗದಲಿ ಲಕ್ಷ್ಮಿದೇವಿಯ ಸಹಿತಸಡಗರದಿಂದಲಿ ಹಯವದನನ ಪಾದಬಿಡದೆ ಪೂಜಿಸಿ ಭಕ್ತಿ ಪಡೆಯಿರಯ್ಯ 5
--------------
ವಾದಿರಾಜ
ವೃಂದಾವನವ ನೋಡಿರೊ - ನೀವೆಲ್ಲಾನಂದವನ್ನೇ ಪೊಂದಿರೊ ಪ ರಾಮಾಚಾರ್ಯರ ಪುತ್ರರೊ - ಅವರುಮಾಮನೋಹರ ನೃಹರಿ ದಾತರೋ |ಜನ್ಮ ಅಷ್ಟಕೆ ಬ್ರಹ್ಮಚರ್ಯ - ಪೊಂದಿಬ್ರಹ್ಮ ವಿದ್ಯೆಯ ಪಡೆದರೋ |ಧೃತ - ಪ್ರೇಮದಿಂದಲಿ ಬಂದು ತಾವ್ ಪುರುಷೋತ್ಮ ತೀರ್ಥರ ಸಾರ್ದರಾ 1 ಕಾಯಜ ಪಿತನ ತಾನ್ವಲಿಸೀ - ದೇಶಂಗಳಪ್ರೀಯದಿಂದಲಿ ಸಂಚರಿಸೀ |ಮಾಯಾರಮಣನು ಜೀವನೂ - ಒಂದೆಂಬಮಾಯಾವಾದೀಗಳ ತರಿದೂ |ಧೃತ - ವಾಯುಮತ ಪ್ರೀತಿಯಲಿ ಅರುಹುತಪ್ರೀಯ ಅಬ್ಬೂರಲ್ಲಿ ನೆಲೆಸಿದ 2 ವಿಠಲ ನೃಹರಿ ಪೂಜೆಗೇ - ನೇಮಿಸಿತಮ್ಮಪಟ್ಟ ಶಿಷ್ಯರು ವ್ಯಾಸತೀರ್ಥರ |ಅಟ್ಟ ಹಾಸದಿ ಸರ್ವಜಿತೂ - ಸಂವತ್ಸರಕೃಷ್ಣೈಕಾದಶಿ ವೈಶಾಖ |ದಿಟ್ಟ ಗುರುಗೋವಿಂದ ವಿಠಲನದೃಷ್ಟಿಸೀ ತನು ಬಿಟ್ಟು ಪೊರಟನ 3
--------------
ಗುರುಗೋವಿಂದವಿಠಲರು
ವೆಂಕಟೇಶ ನೀನೆ ಧೊರೀ ಧೊರೀ ಪ ಸಂಕಟವೆಲ್ಲವ ಪರಿಹರಿಸುವಂಥ ಅ.ಪ. ಎತ್ತಿನ ಪೆಸರುಳ್ಳ ಮತ್ತ ರಕ್ಕಸನ್ನ ಕುತ್ತಿಗೆ ಕೊಡಲುತ್ತಮ ಪದವಿತ್ತೆ 1 ಅಂಜನೆಯೆಂಬೊ ಮಂಜುಕಿಸಾಲಿಯ [?] ಅಂಜದೆ ತಪಿಸಲು ಸಂಜೀವನವಿತ್ತೆ2 ಸಾಸಿರ ಮುಖವುಳ್ಳ ಶೇಷನಹಂಕಾರ ಸ್ವಸನನ ಕೈಯಿಂದ ನಾಶಮಾಡಿಸಿದಂಥ3 ಮಾಧವ ಮಾದಿಗ ಹಾದಿಯ ಮೆಟ್ಟಲು ಮಾಧವ ಅವನನ್ನು 4 ಶ್ರೀದವಿಠಲ ನಿನ್ನ ಪಾದಾಶ್ರಿತರ ಮೋದದಿ ಸಲಹೊ ಆದರಿಸೆನ್ನನು 5
--------------
ಶ್ರೀದವಿಠಲರು
ವೆಂಕಟೇಶನ ನಂಬಿರೊ ನೀವೆಲ್ಲರೂ | ವೆಂಕಟೇಶನ ನಂಬಿರೋ || ವೆಂಕಟೇಶನ ನಂಬಿ | ಮಂಕುಜನರೆ ನಿಮ್ಮ | ಸಂಕಟ ಪರಿಹರಿಸಿ ತ | ನ್ನಂಕಿತವ ನೀವ ಪ ಗುಣ ಒಂದು ನೋಡಿದಿಯಾ ಅಜಮಿಳ | ಗುಣವೇನು ಮಾಡಿದನು | ಗುಣ ಶಿರೋಮಣಿ ಮ | ರಣ ಬಂದಾಗ ಸ್ಮ | ರಣೆ ಇತ್ತು ಅವನ ನಿ | ರ್ವಾಣಕ್ಕೆ ಕರಿಸಿದಾ 1 ಕುಲದಲ್ಯಾತರವನು | ಕುಲಶಿಖಾಮಣಿ | ನಿಳಗೆ ಪೋಗಿ ಕುಡತಿ ಪಾಲಿಗೆ ಅವನಿಗೊಲಿದು ನಿ | ಶ್ಚಲ ಭಾಗ್ಯವನಿತ್ತ 2 ಗುಣ ಒಂದು ನೋಡಿದಿಯಾ | ವಾಲ್ಮೀಕಿ | ಗಣದ ಕೂಟದವನೆ | ಕ | ರುಣ ಮಾಡಿ ಅವಗೆ ಚ | ರಣವನ್ನು ತೋರಿ ಆ | ಕ್ಷಣದಲ್ಲಿ ಸಾಕೀದ 3 ಪತಿವ್ರತರ ನೋಡಿದಿಯಾ | ಗೋಪಿಯರು ಪತಿ ಧರ್ಮದಲ್ಲಿ ಇದ್ದರೇ | ಪತಿತಪಾವನ ಸಂಗತಿಯಲ್ಲಿ ಆ ನಾರಿಯರಿಗೆ | ಅತಿಶಯವಾದ ಸದ್ಗತಿಯ ಕರುಣಿಸಿದ4 ಗುಣಿ ಕುಲ ಗಣ ಮಿಕ್ಕಾದ ವ್ರತಂಗಳು | ದಣಿದು ಮಾಡಲಿಬೇಡಿರೊ | ಬಣಗುದೈವದ ಗಂಡ ವಿಜಯವಿಠ್ಠಲನ್ನ | ಮನದೊಳು ನೆನೆದರೆ ನೆನೆಸಿದ ಫಲನೀವಾ 5
--------------
ವಿಜಯದಾಸ
ವೆಂಕಟೇಶನೆ ಬಲ್ಲ ಪರಮ ಪಾತಕೀಯಾ | ಕಿನ್ನೇಶ ಮುನಿದು ಬಂದೇನು ಮಾಡುವನು ಪ ಚಿತ್ತದೊಲ್ಲಭನ ಸಮ್ಮತದಲ್ಲಿ ನಾರಿಯು | ಅತ್ತವಿತ್ತ ಊರು ಸುತ್ತುತಿರಲು | ಸುತ್ತಯಿದ್ದ ಬಂಧು ಬಳಗದವರು ಕೂಡಿ | ಮುತ್ತಿಕೊಂಡು ಅವಳನೇನು ಮಾಡುವರು 1 ಕದ್ದು ತಂದಾ ಒಡವೆ ರಾಜ್ಯವಾಳುವನಿಗೆ | ತಿದ್ದುವಾ ಸರಿಪಾಲು ಲಂಚಕೊಟ್ಟು | ಇದ್ದವನು ಹಗಲಿರಳು ಕದ್ದರೆ ಆ ಊರು | ಎದ್ದು ಹಿಡಿದವರೆಲ್ಲ ಏನು ಮಾಡುವರು2 ತೊತ್ತಿನ ಮೇಲೆ ಒಡೆಯನ ದಯವಿರೆ | ತೊತ್ತು ಗರ್ತಿಗೆ ಅಂಜಿ ನಡಕೊಂಬಳೆ | ಕರ್ತು ಶ್ರೀ ವಿಜಯವಿಠ್ಠಲ ವೆಂಕಟೇಶನ | ಚಿತ್ತದಿ ನೀನಿರೆಯನೆವುಂಟೆ3
--------------
ವಿಜಯದಾಸ
ವೆಂಕಟೇಶಾಯ ನಮೊ ವಿಜಯವಿಠ್ಠಲನೆ ನಮೊ | ಪಶುಪತಿ ಗುರು ನಮಿತ ಪಾದಾ | ಪಂಕಜವ ಪೊಗುಳವೆನು ಪರಿಪಾಲಿಸೆನ್ನ | ಕಿಂಕರನ ಕಿಂಕರರಿಗೆ ಕಿಂಕರನೆಂದೆನಿಸೊ ಪ ಕಾರ್ಯವಾಕಾರ್ಯವನು ತಿಳಿಯಲೊಲ್ಲದ ಕಾಮಾ | ತೂರ್ಯದಲಿ ಪಾಪಗಳೆ ರಚಿಸಿ | ಬೆಂಬಿಡದದೆ ಬಲು | ಧೈರ್ಯವಂತನು ನೀನಾಗಿ | ಧೈರ್ಯವಾಗಿದ್ದಾಗ ಜಡಜೀವ ಜಂತುಗಳು | ವೀರ್ಯದಲಿ ಪೊಕ್ಕು ದುಃಖಾತಿಶಯದಲಿ | ದುರ್ಯೋನಿ ಮುಖದಿಂದ ಜನನ ಜನಿತನಾದೆ | ಮರ್ಯಾದೆಗಳು ಇಲ್ಲದೆ ಹರಿಯೇ 1 ಕ್ಷಿತಿಯೊಳಗೆ ಬಂದು ಕಾಮ ಕ್ರೋಧ ಸಂಮೋಹ ಶ್ರುತಿ ವಿಭ್ರಮ ಬುಧ್ಧಿನಾಶ ರಾಗದ್ವೇಷ | ಪಥದಲಿ ವಿಷಯೇಂದ್ರಿಗಳು ಆತ್ಮವಶವಾಗಿ ಹಿತದ ಪ್ರಸಾದದಿಂದ | ಗತಿ ಅದರಿಂದ ಈ ಸಂಖ್ಯೆಯಿಂದಲಿ | ಹತವಾಗಿ ಪೋಗಿ ಮರಳೆ ದೇಹವನು | ತೆತ್ತು ಗತಿ ಪುಣ್ಯವಂತನೈದೆ 2 ಇಂದಿಗಾ ಇವನ ಮನೆ ತಂದೆ ತಾಯಿಯ ದಿವಸ | ಇಂದಿಗಾ ಇವನ ಮನೆ ಹತ್ತ ಹತ್ತನೆ ದಿವಸ | ಹವ್ಯ ಕವ್ಯ ಜಾವಳ | ಇಂದಿಗಾ ಮದುವೆ ಮುಂಜಿ | ಇಂದು ನಿಮ್ಮನೆ ಪ್ರಸ್ತವೆಂದು ಕೇಳುತಾ ಪೋಗಿ | ಬಂದವರನನ್ನುಸರಿಸೆ ಬಾಗಿಲಾ ಮುಂದೆ ಕುಳಿತು | ನೊಂದೆ | ಬಂದೆನೊ ಕೊನೆಯಲಿ 3 ಆರಾದರೂ ಬಂದು ಕಾಸು ಕೊಡದಿದ್ದರೆ | ದೂರುವೆನೊ ನೂರಾರು ಕೇರಿ ಕೇರಿಯ ತಿರಗಿ | ಸಾರೆ ಅವರಲ್ಲಿದ್ದ ಅವಗುಣಂಗಳ ಎತ್ತೆ | ಬೀರುವೆನು ಬೀದಿಯೊಳಗೆ | ವಾರಣದಿಂದಲಿ ಕರೆದು ಆವನಾದರು ಬಂದು | ಶಾರೆ ಭತ್ತವ ಕೊಡಲು ಕೊಂಡಾಡುವೆ ಕುಲ ಉ | ಪೋರ ಬುದ್ಧಿಗಳ ಬಿಡದೆ4 ಪರವಣಿ ಪುಣ್ಯಕಾಲಾ ದಿವಸ ಬಂದರೆ ತಿಳಿದು | ಪರಮಾರ್ಥವೆಂದರಿದು ಉತ್ತಮರ ಬಾ ಎಂದು | ಕರೆದು ತುತ್ತನ್ನ ಮೇಲೊಂದು ದಕ್ಷಿಣೆ ಕಾಸು | ಹರುಷದಿಂದಲಿ ಕೊಡದಲೆ ಪರರ ಹಳಿಯುತ್ತ ಏನೇನು | ಇಟ್ಟುಕೊಂಡು ಮನಿಗೆ ಬಂದು | ಪರರರಿಯದಂತೆ ಮಂಚದ ಕೆಳಗೆ ಹೂಳಿ ಈ | ಪರಿಯಿಂದ ದಿನ ಹಾಕಿದೆ5 ತೊತ್ತು ಓರ್ವೆಯಲ್ಲಿ ಈ ಹೊತ್ತು ಪೋಗಾಡಿಸಿದೆ | ಉತ್ತಮರ ಬಳಿಯಲಿ ಕುಳಿತು ಸತ್ಕಥೆಗೆ ಕಿವಿ ಇತ್ತು ಕೇಳದಲೆ ಕೆಲಸಾರೆ ಬೇಸರಿಕೆಯಲಿ | ಅತ್ತಲಿತ್ತಲು ವ್ಯರ್ಥ ಸುತ್ತಿ ಸುಮ್ಮನೆ ಸುದ್ದಿ ಬರಿಗಂಟುಸಟೆ | ಮಾತು ಎತ್ತುವನೊ ಅನ್ನಿಗರನ ನ | ಎಣಿಕೆ ಮಾಡದಲೆ | ಉನ್ಮತ್ತದಲಿ ಕೆಟ್ಟೆನಯ್ಯಾ6 ಪರಿಯಂತ | ವೇದೆನೆ ಬಟ್ಟೆನೊ ದುಷ್ಟ ಹಾದಿಯಲಿ ಸಿಗಬಿದ್ದು | ಈ ದುರಾಚಾರಗಳ ಗಣನೆ ಮಾಡದೆ ಇನ್ನು | ಕಾದುಕೊ ಕಮಲನಾಭಾ | ಹೋದಪರಾಧಗಳ ನೋಡದಲೆ ದಯದಿಂದ | ಆದರಿಸಿ ನಿನ್ನ ದಾಸರ ಸಂಗತಿಯನಿತ್ತು | ಪಾದವನು ಕಾಣಿಸಯ್ಯಾ7
--------------
ವಿಜಯದಾಸ