ಒಟ್ಟು 2199 ಕಡೆಗಳಲ್ಲಿ , 106 ದಾಸರು , 1663 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಾಂಬಕೀ ವರಲಕ್ಷ್ಮೀ ಮಂಗಳಂ ಜಯ ಪ ಅಂಗಜಾದಿ ಪ್ರೇಮಜನನಿ ಭೃಂಗವೇಣಿಯೆ ಜಯ ಅ.ಪ. ಬಿಂಬರದನವಸನ ಭೂಷ್ಯೆ ಅಂಬುಜಾಂಬಕಿ ಅಂಬ ಪಾಹಿಮಾಂ ಜಯ 1 ಕುಂಕುಮಾಕ್ತ ಫಾಲಶೋಭೆ ಕಿಂಕಿಣೀರವೆ ಪಂಕಜಾತ ಶೋಭಮಾನ ಹಸ್ತಪಲ್ಲವೆ ಜಯ 2 ರತ್ನನಿಚಯ ಭಾಸಮಾನ ರತ್ನಕಿಂಕಿಣೀ ರತ್ನರಾಜಪುತ್ರಿ ಕಮಲೆ ಭಕ್ತವತ್ಸಲೆ ಜಯ 3 ನಿತ್ಯ ನಿನ್ನನು ಯತ್ನದಿಂದ ಧೇನುನಗರ ವಾಸೆ ಪಾಲಿಸು 4
--------------
ಬೇಟೆರಾಯ ದೀಕ್ಷಿತರು
ಮಂಗಳಾರತಿ ಎತ್ತಿರೀತಗೆ ಮಾನಿನೀಯರು ಹರಿಗೆ ಪ ಕೃಷ್ಣಗೆ ಮಾನಿನೀಯರು ಕಂಗಳಿಂದಲೆ ನೋಡಿಸುಖಿಸಿ ಕಮಲಮುಖಿಯರು ಅ.ಪ. ಕುಂಡಲ ಹಾರ ಪದಕ ಧರಿಸಿ ಕುಳಿತಿಹಾಪದಕ ಧರಿಸಿ ಕುಳಿತಿಹಾಸರಸಿಜಾಕ್ಷನೋಳ್ಪಜನನೆ ಹರುಷ ಕೊಡುತಿಹಾ 1 ಕಡಗ ಕಂಕಣ ವಂಕಿ ನಾಗಮುರಿಗೆ ಪೊಳೆವುದುನಾಗಮುರಿಗೆ ಪೊಳೆವುದುಜರದಗೊಂಡೆ ತಾಯತ ಮುತ್ತು ಸಿರಿಯು ತೂಗೊದು 2 ಕಾಲಕಡಗ ರುಳಿಯು ಗೆಜ್ಜೆ ಸಾಲು ಚರಣದಿಗೆಜ್ಜೆ ಸಾಲು ಚರಣದಿಭಾಳ ದನಿಯ ಮಾಡುತಿಹುದು ಕೇಳಿ ಕರ್ಣದಿ 3 ಕನಕ ವಸನ ಹೀರ ಕಾಂಚಿ ಕಟಿಯ ತಟದಲಿಕಾಂಚಿ ಕಟಿಯ ತಟದಲಿಮಿಂಚಿನಂತೆ ಮಿನುಗುತಿಹದೊ ನೋಡಿ ಸುಖದಲಿ 4 ಬೊಟ್ಟು ಹಿಡಿದು ಬಾಲನಿಂದ ಚರಿಸಿದಂದದಿಹಿಡಿದು ಬರಿಸಿದಂದದಿಕೃಷ್ಣ ವಿಷ್ಣು ಜಯದ ಸಿರಿಯು ಕೃಷ್ಣ ಜನ್ಯದೀ 5 ಕರವ ಪಿಡಿದು ಹಯದ ಷಣಶ ತಿರುಗುವಾ 6 ಹರಣ ಹರಣ ಮಾಡಿದಧುರದಿ ಪಾರ್ಥನ ಹೆಸರು ಮಾಡಿ ಹರಿಯ ನಡೆಸಿದಾ7 ಹರಿಯು ಮುಖವ ನೋಡಿ ರಾಜರು ಹರುಷಬಟ್ಟರುರಾಜರು ಹರುಷಬಟ್ಟರುಮುಖವ ದಯದಿ ಮೋಕ್ಷದ ಸಿರಿಯನುಂಡೆಯೋ 8 ನಿತ್ಯ ತಂದು ಸುಖಿಸುವೆ 9
--------------
ಇಂದಿರೇಶರು
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲಮಂಗಳಾರತಿ ಎತ್ತಿರೆಲ್ಲಸಂಗಾತೀತ ಚಿದಾನಂದಾವಧೂತಾಂಗ ಶ್ರೀಬಗಳಾಮುಖಿ ದೇವಿಗೆ ಪ ಕರದೊಳು ಚೂಡೆ ಕಂಕಣವಿಟ್ಟುಕೊರಳೊಳು ಸರಿಗೆಯ ಧರಿಸಿಶಿರದಿ ರತ್ನದ ಕಿರೀಟವಿಟ್ಟು ಸರ್ವಾಭರಣವಧರಿಸಿ ದುರುಳರ ದುಷ್ಟರ ಛೇಧಿಸಿ ಭ-ಕ್ತರ ಪಾಲಿಪ ಬಗಳಾಮುಖಿಗೆ 1 ನಿತ್ಯ ನಿರ್ಗುಣ ನಿರಾಮಯಗೆ ನಿಂದಕವಿದಾರಣೆಗೆಭಕ್ತ ವತ್ಸಲೆ ಭುವನೇಶ್ವರಿ ಮಾತೆಗೆಭಕ್ತಾಧಾರೆಗೆ ಪ್ರತ್ಯಗಾತ್ಮೆಗೆ ಪರಬ್ರಹ್ಮ ರೂಪಿಣಿಭಕ್ತ ಪ್ರಾಣಿಗೆ ಬಗಳಾಮುಖಿಗೆ 2 ಅದ್ವಯ ಆಗಮಗೋಚರಗೆ ಅಚಲಾನಂದಳಿಗೆ ಶುದ್ಧಸಂವಿಜ್ಯೋತಿರ್ಮಯಳಿಗೆಸರ್ವಸಾಕ್ಷಿಗೆ ಸದ್ಗುರು ಚಿದಾನಂದಾವಧೂತಗೆ ಸಿದ್ಧಪರ್ವತವಾಸಿ ಬಗಳಾಮುಖಿಗೆ 3
--------------
ಚಿದಾನಂದ ಅವಧೂತರು
ಮಂಗಳಾರತಿ ಮಾಡಿ ಭಾವದಿಂದ ಮಂಗಳ ಮಹಿಮನಾದ ದೇವಾದಿ ಶ್ರೀದೇವಗೆ ಧ್ರುವ ನೋಡಿರೋ ಬ್ರಹ್ಮಾನಂದ 1 ಕಂಗಳದೆರೆದು ನೋಡಿ ಮಂಗಳಾರತಿ ಪಾಡಿ 2 ಆರ್ತ ಭಾವದಾರತಿ ಅರ್ತು ಮಾಡಿ ನಿತ್ಯಪ್ರತಿ 3 ಸೇವೆ ಇದೆ ಬಲು ಸುಖ ಪಾವನೆಗೈಸುವ ಕೌತುಕ 4 ದೀನ ಮಹಿಪತಿ ಸ್ವಾಮಿ ಭಾನುಕೋಟಿ ತೇಜಗಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಂಗಳಾರತಿಯೆತ್ತಿ ಪಾಡಿರೆ ರಂಗನಾಥನ ನೋಡಿರೇ ಪ. ಅಂಗನಾಮಣಿಯನ್ನು ಸಲಹಿದ ಪಾಂಡುರಂಗನ ಭಜಿಸಿರೆ ಅ.ಪ. ನೆರೆದಸಭೆಯೊಳು ಸೆರಗನೆಳೆಯಲು ತರಳೆಭೀತಿಯ ತಾಳಲು ದುರುಳನೆರಿಗೆಯ ಸೆಳೆಯಲು ಶರಣು ನೀನೇ ವರದನೆನ್ನಲು ವರವನಿತ್ತಗೆ ಭರದೊಳು ಕರಣವಾರ್ಧಿಗೆ ಮುದದೊಳು 1 ಅಕ್ಷಯಾತ್ಮಕ ರಕ್ಷಿಸೈ ಶ್ರೀವತ್ಸ ದೀನಳ ಮಾನಮಂ ಕಮ ಲಾಕ್ಷ ಬೇಡುವೆ ದೈನ್ಯದಿಂ ರಕ್ಷನೀನೆನೆ ಚಪಲಾಕ್ಷಿ ಆಕ್ಷಣಂ ರಕ್ಷಿಸಿದೈ ಕರುಣದಿಂ ಅಕ್ಷಯಪ್ರದಾನದಿಂ 2 ನಿತ್ಯನಿರ್ಮಲ ನಿರ್ವಿಕಲ್ಪ ನಿತ್ಯತೃಪ್ತನ ಭಜಿಸಿರೆ ಭಕ್ತ್ಯಧೀನನ ಬೇಡಿರೆ ಸತ್ಯವಿಕ್ರಮ ಶೇಷಶೈಲ ನಿಕೇತಗೆ ಜಯವೆನ್ನಿರೇ ಚಿತ್ತಶುದ್ಧಿಯ ಪಡೆಯಿರೇ 3
--------------
ನಂಜನಗೂಡು ತಿರುಮಲಾಂಬಾ
ಮಗಳೆ ಜಾನಕಿ ನಿನ್ನ ಸುಗುಣಸನ್ಮೋಹನ್ನ ಖಗಕುಲರನ್ನ ಮನೋರಮಣ ಮನೋರಮಣ ಕಾಂತ ಶ್ರೀರಾಮನ ಅಗಲದಿರು ಕಾಣೆ ಮರಿಯಾನೆ ಶೋಭಾನೆ 1 ಪತಿಯೇಳ್ವ ಮೊದಲು ಜಾಗ್ರತೆಯಾಗಿ ಯೆದ್ದು ಗೃಹ- ಕೃತ್ಯಕೆಲ್ಲಕ್ಕನುಸರಿಸಿ ಅನುಸರಿಸಿ ನಡೆ ನೀ ಮಗಳೆ ಹಿತವಾಗಿ ಬಾಳು ಪತಿಯೊಳು ಶೋಭಾನೆ 2 ಗಂಡನ ಮಾತಿಗೆ ದುರ್ಚಂಡಿಸದಿರು ಮಗಳೆ ಗಂಡನುಣ್ಣದ ಮೊದಲು ನೀ ಮೊದಲು ನೀನುಣ್ಣದಿರು ಪುಂಡರೀಕಾಕ್ಷಿ ಪುಣ್ಯರಾಶಿ ಶೋಭಾನೆ 3 ಮುಗುಳು ನಗೆಯ ಬೀರು ಜಗಳವ ಮಾಡದಿರು ಜಗದೊಳು ಕೀರ್ತಿಯುತಳಾಗು ಯುತಳಾಗು ಬಂಧುಗಳಲಿ ನೀ ಹಗೆಯ ಮಾಡದಿರು ಕೃಪೆದೋರು ಶೋಭಾನೆ 4 ಪಾದ ಹೊದ್ದಿ ಸೇವೆಯ ಮಾಡು ಸುದ್ಧ ಭಾವದೊಳು ನಡೆ ಮಗಳೆ ನಡೆ ಮಗಳೆ ನಿತ್ಯಸುಮಂಗಲೆ ಮುದ್ದಾಗು ಬಂಧು ಬಳಗಕ್ಕೆ ಶೋಭಾನೆ 5 ಅತ್ತೆಯ ಮಾತಿಗೆ ಪ್ರತ್ಯುತ್ತರ ಕೊಡದಿರು ಪ್ರತ್ಯೊಬ್ಬಳೆ ಸ್ಥಳದಿ ನಿಲದಿರು ನಿಲದಿರು ನೀರಜಗಂಧಿ ಸತ್ಯ ವಚನವನೆ ಸವಿಮಾಡು ಶೋಭಾನೆ 6 ಮೈದುನರನ್ನು ತನ್ನ ಮಕ್ಕಳೆಂಬಂತೆ ನೋಡು ಸಾಧುಭಾವದದಲಿ ನಡೆ ಮಗಳೆ ನಡೆ ಮಗಳೆ ಪಂಕ್ತಿಯಲಿ ಭೇದ ಮಾಡದಿರು ಕೃಪೆದೋರು ಶೋಭಾನೆ 7 ಕಂಡರೆ ಶಿಷ್ಟರ ದಂಡ ನಮಸ್ಕರಿಸು ಹಿಂಡು ದಾಸಿಯರ ದಣಿಸದಿರು ದಣಿಸದಿರು ಉತ್ತಮಳೆಂದು ಭೂ- ಮಂಡಲದಿ ಕೀರ್ತಿಪಡು ಪೂರ್ತಿ ಶೋಭಾನೆ8 ಚಂಡಿತನವ ನಿನ್ನ ಗಂಡನೊಳ್ಮಾಡದಿರು ಗಂಡಸರ ಮುಂದೆ ಸುಳಿಯದಿರು ಸುಳಿಯದಿರು ಸಂತತ ಸೌಖ್ಯ- ಗೊಂಡು ಬಾಳಮ್ಮ ಸೀತಾಭಾಮಾ ಶೋಭಾನೆ 9 ಕ್ಷಮೆಯಲ್ಲಿ ಧಾತ್ರಿಯುಂಬ ಕ್ರಮದಲ್ಲಿ ಮಾತೆ ಸುರತ ಸಮಯದಿ ವೇಶ್ಯಾ ತರುಣಿಯಳ ತರುಣಿಯಳ ತೆರದಿ ರಾಮನ ಸತಿಯಂ- ತೆ ಮಾಡವ್ವ ಸುಖಂ ಜೀವಾ ಶೋಭಾನೆ 10 ಲಕ್ಷ್ಮೀನಾರಾಯಣರಂತೆ ಸೀತಾರಾಮರು ನೀವು ಕುಕ್ಷಿ ಈರೇಳು ಜಗವನ್ನು ಜಗವನ್ನು ನಮ್ಮನ್ನು ಸರ್ವರ ರಕ್ಷಣ್ಯ ಮಾಡಿ ಸುಖಿಯಾಗಿ ಶೋಭಾನೆ 11
--------------
ತುಪಾಕಿ ವೆಂಕಟರಮಣಾಚಾರ್ಯ
ಮಗುವ ತಡೆಯಬಾರದೆ ಮಾನಿನಿಯರುಸುಗುಣ ಚೆನ್ನಿಗನೆಂಬ ಸೊಬಗುಳ್ಳ ಮಗುವ ಪ ನೀರೊಳಗೆ ಪೊಕ್ಕು ತಾ ಬೀರುತಿದೆ ಮಾತುಗಳಧರಣಿಧರ ತಳಕಿಳಿದು ಬಾರದಿದೆಕೊಘೋರ ಪಾತಕವೆಂಬ ಬೇರ ಮೆಲ್ಲುತಲಿದೆಕೊಬಾರಯ್ಯ ಎನೆ ಕೋಪವೇರುತಿಹ ಮಗುವ 1 ಬೇಡುತಿದೆ ದಾನವನು ನೀಡುತಿದೆ ಪಾದವನುರೂಢಿಪಾಲರ ಕಂಡು ಕೊಲ್ಲುತಿದೆಕೊಓಡುತಿದೆ ಮೃಗದೊಡನೆ ಆಡುತಿದೆ ಕಪಿಗಳೊಳುನೋಡಲ್ಕರಿನಾಗರ ಹಾವ ತುಳಿಯುತಿದೆಕೊ 2 ಇತ್ತ ಬಾರೆಂದೆನಲು ಬತ್ತಲೆ ನಿಲ್ಲುತಿದೆಕೊಮತ್ತೆ ತೇಜಿಯನೇರಿ ನಲಿಯುತಿದೆಕೊಹತ್ತೆ ಬಂದವರಿಗೆ ಅರ್ತಿಯನು ನೀಡುತಿಹನಿತ್ಯ ವೈಕುಂಠದಲಿ ನಲಿವ ಮಗುವ 3
--------------
ಕನಕದಾಸ
ಮಂಜುಳಾ ಪಾಶಾಂಕುಶದ ರಂಜಿತವರ ಬಾಹುದಂಡಮಂಜುಳಹಾರ ಕೇಯೂರಾದಿಭೂಷಮೌಂಜಿ ಕೃಷ್ಣಾಜಿನಧರನಿತ್ಯತೋಷಕಂಜ ಬಾಂಧವ ಶತರೂಪಿಸಂಕಾಶಕುಂಜರವದನಾ ಹಸೆಗೇಳು 1 ಪಾದ ಪಯೋಜರಾವಣಾಸುರಗರ್ವಹರ ಗಾನಲೋಲಪಾವನತರಸುರಕಾರ್ಯಾನುಕೂಲಗ್ರಾವತನೂಜೆಯ ಪ್ರೇಮದ ಬಾಲಶ್ರೀ ವಿಘ್ನರಾಜ ಹಸೆಗೇಳು 2 ಸೂರ್ಯ ಸು-ತ್ರಾಮಾಚ್ಯುತ ಚಂದ್ರ ವಂದ್ಯಹೇಮಾದ್ರಿಸನ್ನಿಭ ಕೋಮಲಗಾತ್ರರಾಮಣೀಯಕ ಕಾಂಚನಯಜ್ಞ ಸೂತ್ರಸೋಮಶೇಖರನ ಸಮ್ಮೋಹದ ಪುತ್ರಶ್ರೀಮದ್ಗಣೇಶ ಹಸೆಗೇಳು 3 ಕಾಮಕರ್ಮಾತೀತ ಸನ್ಮುನಿಜಾಲ ಮಾನಸರಾಜಹಂಸಬಾಲಾರ್ಕಶತರೂಪಿಕಾಂತಿ ಶರೀರಸ್ಥೂಲಕಂಧರ ದುಃಖದುರಿತವಿದೂರಫಾಲಲೋಚನ ಚಂದ್ರಗರ್ವಾಪಹಾರಬಾಲವಟುರೂಪ ಹಸೇಗೇಳು4 ಸಂತತ ಬಹುವಿಧಲೀಲಾಸಂತತ ಮುದಿತಾದ್ರಿಬಾಲಾಅಂತರಹಿತ ಶುಭಗುಣಗಣಸಾಂದ್ರದಂತದೀಧಿತಿನಿರ್ಜಿತಶರಶ್ಚಂದ್ರಕಾಂತವಿಗ್ರಹವಿಪದದ್ರಿಮಹೇಂದ್ರಚಿಂತಿತಾರ್ಥಪ್ರದನೇ ಹಸೆಗೇಳು 5
--------------
ಕೆಳದಿ ವೆಂಕಣ್ಣ ಕವಿ
ಮಟ್ಟುದೊರಿತು-ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ವೊಂದಿಷ್ಟುಕೊರತೆ ಕೃಷ್ಣನೆಂಬ 1 ಹೇಯ ಗುಣವಿಲ್ಲ ಮುನಿ-ಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ ||ಮಟ್ಟು|| 2 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ದತ್ಯಧಿಕ-ಕೊರತೆಯೆಂಬ ||ಮಟ್ಟು|| 3 ಜ್ಞಾನವಂತನೆಂದು ಬಹುಮಾನವಂತನಾದರೂ ಅ ಜ್ಞಾನ ಶೂನ್ಯನೆಂಬ ದೊಡ್ಡ ಹಾನಿಯೊಂದಿರುವದೆಂಬ4 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ5 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳ ನಪಹರಿಪ ದೀಪನಾ ಬಿಡದು ಎಂಬ ||ಮಟ್ಟು||6 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರುವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ ||ಮಟ್ಟು||7 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ ||ಮಟ್ಟು||8 ನಿತ್ಯ ತೃಪ್ತನಾದರೂ ನಿಜ-ಭೃತ್ಯರನ್ನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನು ನೀನಲ್ಲವೆಂಬ 9 ಕಷ್ಟಪಡಬೇಡವೆನ್ನೊ-ಳೆಷ್ಟು ದುರ್ಗುಣಂಗಳಿಹ ವಷ್ಟನು ವೊಪ್ಪಿಸಿ ನಿನಗಿಷ್ಟನಾಗಬೇಕೆಂಬ ||ಮಟ್ಟು|| 10 ಕ್ಷೀರದಧಿನವನೀತ-ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ ||ಮಟ್ಟು||11 ಕೊರತೆಯೆಂಬಾಜನರಿಗೆಲ್ಲ-ವರವನಿತ್ತು ಪೊರೆವೆನೆಂಬ ವರದವಿಠಲನೆಂಬ ||ಮಟ್ಟು|| 12
--------------
ಸರಗೂರು ವೆಂಕಟವರದಾರ್ಯರು
ಮಡಿಲು ತುಂಬಿದರಮ್ಮ ಮುತ್ತೈದೆಯರೆಲ್ಲ ಕಡಲಕುಮಾರಿಗೆ ಸಡಗರದಿಂದ ಪ ಅರಿಶಿನ ಕುಂಕುಮ ಸುಗಂಧಸೇವಂತಿಗೆ ಪರಿಮಳ ಪಾದರಿ ಮಲ್ಲಿಗೆ ಮುಡಿಸಿ 1 ರಸಬಾಳೆ ಖರ್ಜೂರ ಖರ್ಬೂಜ ದಾಳಿಂಬೆಯ ಕಸಿಮಾವು ಸೇವು ಅಂಜೂರ ದ್ರಾಕ್ಷಿ 2 ಕೊಡಗಿನ ಕಿತ್ತಳೆ ದೃಢತರ ಸಿಹಿನಿಂಬೆ ಕಡುಸವಿ ಗಂಗಪಾಣಿ ಕಪಿತ್ಥಗಳನು 3 ಅಡಿಕೆ ಬೆಳ್ಳೆಲೆ ದ್ರಾಕ್ಷಿ ಗೋಡಂಬಿ ಸಕ್ಕರೆ ಒಡನೆ ಕೊಬರಿ ನಾರಿಕೇಳ ಬೆಲ್ಲದಚ್ಚು 4 ಮುತ್ತುರತ್ನ ಮಾಣಿಕ್ಯ ಅಪರಂಜಿಯ ಸ್ವರ್ಣ ವಿತ್ತ ಮುದ್ರೆಯ ಹಣ ಬಾದಾಮಿಬೆರಸಿ 5 ಬೆಳ್ಳಿ ತಟ್ಟೇಲಿ ಪಂಚವಾಳ ಪನ್ನೀರುದಾನಿ ಒಳ್ಳೆ ಗಂಧವು ಮಂಗಳ ದ್ರವ್ಯವಿಟ್ಟು6 ಜರತಾರಿ ಸೀರೆ ಕಾಪುಕುಪ್ಪಸ ಕೊಟ್ಟು ಹರುಷದಿ ಹರಸುತ್ತ ಅಕ್ಷತೆ ಸೂಸಿ 7 ಜಾಜಿಕೇಶವ ಸಹ ಮೂಜಗವಾಳೆ ರಾಜಿಪ ಮಕ್ಕಳೊಡೆ ನಿತ್ಯಸುಖಿಯಾಗು 8
--------------
ಶಾಮಶರ್ಮರು
ಮಂಡೆ ಬೋಳಾದರೇನು ಮನಶುದ್ಧಿಯಿಲ್ಲವು ಪ. ಕಂಡು ಹಯವದನನ್ನ ಒಲಿಸಿಕೊಂಡವ ಧನ್ಯ ಅ.ಪ. ನಾರದÀರವತಾರವೆಂದು ಜಗಕೆ ತೋರಿ ಸಿರಿಪುರಂದರದಾಸರ ಮನೆಯಲ್ಲಿಪರಿಪರಿ ಲೀಲೆಯ ಮಾಡಿ ಬಿಡದೆ ನಿತ್ಯಅರಿತು ಅವರ ಸಾಧನಕೆ ಸಾರಥಿಯಾದಿ 1 ಗುರುವ್ಯಾಸಮುನಿ ನಿಮ್ಮ ನೋಡುವೆನೆಂತೆಂದೊಡೆಮರೆಮಾಡಿ ಮೂರುರೂಪ ಜನುಮವೆಂದಿಹರÀÀುಷದಿ ಕನಸಿನೊಳಗೆ ಬಂದುಭಯರಿಗೆಅರುಪಿಸಿ ಸ್ವರೂಪ ಅರಿಯದಂತಿದ್ಯೊ ದೇವ 2 ಅವರ ಮೇಲಿದ್ದ ದಯ ಎನ್ನ ಮೇಲೆಂದಿಗೋ ದೇವಯಾವುದು ಭರವಸೆದೋರದಯ್ಯಕವಿದೆಮ್ಮಭಿಮಾನ ಬಿಟ್ಟರೆ ಬಿಡದಯ್ಯಆವಕಾಲಕ್ಕೆ ನಿನ್ನ ದಾಸನೆಂಬಂತೆ ಮಾಡೊ 3 ನಮ್ಮ ಗುರುಗಳ ಸಮ್ಮತದಿಂದುಡುಪಿಯಲಿಗಮ್ಮನೆ ಪೇಳಿದೆನು ಸಟೆಯಲ್ಲವುಸುಮ್ಮನೆ ತಿಳಿಯದೆ ಅಲ್ಲವೆಂದವÀರ್ಗಿನ್ನುಗಮ್ಮನೆ ತಮಸಿನೊಳಿಹುದು ಸತ್ಯವು 4 ಓದಿದಾಕ್ಷಣದಿಂದ ಧನ್ಯನೆಂದೆನು ನಾನುಸಾಧಿಸಲಾಪೆನೆ ನಿನ್ನ ಸೇವೆಯನುಆದಿಮೂರುತಿ ಸಿರಿಹಯವದನರೇಯಮೋದದಿಂದ ನಿನ್ನ ದಾಸರ ಸಂಗದಲ್ಲಿಡು ಕಂಡ್ಯ 5
--------------
ವಾದಿರಾಜ
ಮದನ ಗೋಪಾಲಗೊ ಸುದತಿ ಯಶೋದೆ ನಂದ ಕಂದನಿಗೊ ಪ ಶ್ರೀಶ ಶ್ರೀ ಕೇಶವ ನಾರಾಯಣನಿಗೊ ಮಾಧವ ಗೋವಿಂದ ಹರಿಗೊ ಸಾಸಿರ ನಾಮದ ವಿಷ್ಣು ಮಧುಸೂದನಗೊ ಭೂಸುರ ಪಾಲ ತ್ರಿವಿಕ್ರಮ ವಾಮ£ಗೊ 1 ಮುದ್ದು ಮೂರುತಿ ಶ್ರೀಧರ ಹೃಷಿಕೇಶಗೊ ಪದ್ಮನಾಭ ದಾಮೋದರಗೊ ಶುದ್ಧಮನದಿ ಸಂಕರ್ಷಣ ವಾಸುದೇವಗೊ ಅನಿರುದ್ಧ ಮೂರುತಿಗೊ 2 ಹರುಷದಿ ನಾರಸಿಂಹ ಅಚ್ಚುತಗೊ ಸರಸಿಜನಯನ ಜನಾರ್ದನುಪೇಂದ್ರಗೊ ಸಿರಿ ಹರಿ ಕೃಷ್ಣಗೊ 3 ಶಂಖು ಚಕ್ರ ಗದಾ ಪದ್ಮವು ಧರಿಸಿದ ವೆಂಕಟರಮಣಗೊ ಶ್ರೀಹರಿಗೊ ಪಂಕಜನಯನ ಶ್ರೀರಂಗನಾಥನಿಗೊ ಬಿಂಕದಿ ಪಾಂಡುರಂಗ ವಿಠ್ಠಲಗೊ 4 ಘನಮಹಿಮ ಮನು ಕಂಚಿ ವರದರಾಜನಿಗೊ ಇನಕುಲ ತಿಲಕ ಶ್ರೀರಾಮಚಂದ್ರನಿಗೊ ವನಿತೆಯರೊಡಗೂಡಿ ಮೆರೆವ ಕೃಷ್ಣನಿಗೊ ವನಜಾಕ್ಷ ಪಶ್ಚಿಮ ರಂಗಧಾಮನಿಗೊ 5 ಬಗೆ ಬಗೆ ನಾಮಗಳಿಂದ ಪೂಜೆಯಗೊಂಬ ಅಗಣಿತ ಮಹಿಮಗೊ ಆಶ್ಚರ್ಯಗೊ ಖಗವಾಹನ ಕರಿರಾಜ ವರದಗೊ ನಿತ್ಯ ತೃಪ್ತನಿಗೊ 6 ಶ್ರದ್ಧೆಯಿಂದಲಿ ತನ್ನ ಭಜಿಪ ಭಕ್ತರ ಕಾಯ್ವ ರೌದ್ರಿನಾಮ ಸಂವತ್ಸರದಿ ಮುದ್ದು ಮೂರುತಿ ಕಮಲನಾಭ ವಿಠ್ಠಲನಿಗೆಪದ್ಮಾಕ್ಷಿ ವನಮಾಲೆ ಹಾಕಿದೆಯಾ 7
--------------
ನಿಡಗುರುಕಿ ಜೀವೂಬಾಯಿ
ಮದನ ಜನಕ ಮುದ್ದುರಂಗ ನಿತ್ಯ ಹೃದಯದೊಳಗೆ ಭಜಿಸುವರಂತರಂಗ ಪ ಅಜ ಭವನ ಮಿತ್ರ ಸರ್ವೇಶ ನಿನ್ನ ಕ್ಲೇಶ ನಾಶ ಮಜಡ ನೆನಗೆ ನೀ ನುಡಿಸ ಕೊಡು ಸುಜನ ಸೇವಿತ ನರಹರಿ ಲಕ್ಷ್ಮೀಶ 1 ದಯವ ನೀ ಎನ್ನೊಳುಬೀರೋ ನಿನ್ನ ಸ್ವಯಂ ಮೂಲ ನಿಜದ ಮೂರ್ತಿಯನೀಗ ತೊರೋ ಭಯಗಳನೆಲ್ಲವ ತೋರೋ ಚೆಲ್ವ ನಯವಿದ ಸರ್ವ ಸದ್ಗುಣ ನಿಧಿ ಬಾರೋ 2 ಪರಮ ಪಾವನಮೂರ್ತಿ ನಿನ್ನ ಸಿರಿ ಚರಣ ಕೆರಗುವೆ ನಾ ಮುನ್ನ ಕರುಣದಿ ಸಲಹೋ ನೀ ಎನ್ನ ನಿತ್ಯ ಪೊರೆವ ಚಿಪ್ಪಳಿ ಗೋಪೀವರ ಸುಪ್ರಸನ್ನ 3
--------------
ಕವಿ ಪರಮದೇವದಾಸರು
ಮದನನಗೇಹ ಸುಖ ಮರಣ ಸುಖಮದನನ ತೊತ್ತಿನ ಮಕ್ಕಳಾಗ ಬೇಡಿರೋ ಪ ಸ್ತ್ರೀಯರೂಪವ ಕಂಡು ಸೈರಿಸದೆ ಕಳಕಳಿಸಿಸುಯ್ಗರೆದು ಶರೀರವು ಬೆವರೇರುತಕೈಕಾಲ್ಗಳಿಗೆ ನಡುಕ ಹುಟ್ಟಿ ಕಾಮ ಶರಕೆ ಮೈಯನಿತ್ತುಕೊಯಿಸಿಕೊಳ್ಳುವ ಕೊರಳ ನಿತ್ಯದಿ ಕಷ್ಟದಿ ಸುಖವು 1 ಮುಖ ಕಾಂತಿಯ ನೋಡಿ ಮೋಹದಲಿ ಮುಳುಗಾಡಿಸುಖವೆಂದು ಬಗೆಯುತ ಸಂಗಯೋಗದಕಕುಲಾತಿಪಡುತಲಿ ಕೆಡೆದುತಾಪದಿ ಹೊರಳಿಬಕಧ್ಯಾನದಲಿ ತನ್ನ ನಿಜಸುಖವ ಮರೆವ 2 ಪತಿ ಚಿದಾನಂದ ಕಾಣದ ಸುಖವು3
--------------
ಚಿದಾನಂದ ಅವಧೂತರು
ಮಂದಾಸಲ ರಗಳೆ ರಾಮ ಪದಾಂಬುಜ ಭೃಂಗಗೆ ಜಯ ಜಯ ತಾಮಸ ಕುರುಕುಲ ಧ್ವಂಸಕ ಜಯ ಜಯ ಶ್ರೀ ಮತ್ಪೂರ್ಣ ಪ್ರಜ್ಞಗೆ ಜಯ ಜಯ 1 ವಾಸುದೇವ ಸುನಾಮಕ ಜಯ ಜಯ ದೋಷ ಜ್ಞಾನ ವಿನಾಶಕ ಜಯ ಜಯ ಸೂರ್ಯ ವ್ಯಾಸ ಸುಭೋಧೆಯ ದರ್ಪಣ ಜಯ ಜಯ 2 ಶುಭಗುಣಲಕ್ಷಣ ಶೋಭಿತ ಜಯ ಜಯ ಭವ ಮೋಚಕ ಜಯ ಜಯ ಇಭವರದಾಜ್ಞಾಧಾರಕ ಜಯ ಜಯ ವಿಭುಧ ಸುಖಾಂಬುಧಿ ಸೋಮನೆ ಜಯ ಜಯ3 ನಿತ್ಯ ಸದಾಗಮ ಕೋಶಗೆ ಜಯ ಜಯ ಸತ್ಯವತೀಸುತ ಪ್ರೀಯಗೆ ಜಯ ಜಯ ಸತ್ಯಾಖ್ಯಾತ ಸುಮಿತ್ರಗೆ ಜಯ ಜಯ ಸುರತರು ಜಯ ಜಯ 4 ಅಚ್ಚುತ ಪ್ರೇಕ್ಷರ ಶಿಷ್ಯಗೆ ಜಯ ಜಯ ಸ್ವಚ್ಚಗುಣಾರ್ಣವ ಋಜುಪತಿ ಜಯ ಜಯ ಕೆಚ್ಚೆದೆ ವೀರಾಗ್ರೇಸಗೆ ಜಯ ಜಯ ಪಾವಕ ಜಯ ಜಯ 5 ಶೃತಿತತಿ ವಿಮಲ ಸುಭೋದಕ ಜಯ ಜಯ ರತಿಪತಿ ಪಿತವರ ದೂತಗೆ ಜಯ ಜಯ ಕ್ಷಿತಿಧರ ದ್ವಿಜಶಿವವಂದಿತ ಜಯ ಜಯ 6 “ಶ್ರೀ ಕೃಷ್ಣವಿಠಲ” ಸದಾರತ ಜಯ ಜಯ ಲೋಕ ಹಿತಪ್ರದ ನಿಜಗುಣ ಜಯ ಜಯ ಶ್ರೀಕರ ಶುಭಕರ ಜಯಕರ ಜಯ ಜಯ ಆಕಮಲಾಸುತ ರಯೀಪತಿ ಜಯ ಜಯ 7
--------------
ಕೃಷ್ಣವಿಠಲದಾಸರು