ಒಟ್ಟು 1875 ಕಡೆಗಳಲ್ಲಿ , 111 ದಾಸರು , 1413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣಾಗತರಕ್ಷಕ ಬೇಗದಿ ಬಂದು ಮನಮಂದಿರದಿ ನಿಲ್ಲೋ ಪ ಈ ಕರೆಕರೆ ಸಂಸಾರಶರಧಿಯೊಳು ನಿಂದೆ ಹರಿಯೆ ನಿಲ್ಲೊಂದರಘಳಿಗೆಯಾದರೂ ಮನದಿಅ.ಪ ತೋಯಜಾಂಬಕ ನಿನ್ನ ನಾನೆಂದಿಗೆ ಕಾಯದೊಳು ಕಾಂಬೆನೊ ಮಾಯಾರಮಣನೆ ನೀ ಮಾಯವ ಹರಿಸಯ್ಯ ಆಯಾಸಗೊಳಿಸದೆ ಕಾಯುವುದೀಗಲೆ 1 ನಾನಾಯೋನಿಗಳಲ್ಲಿ ನಾ ಬರಲಂಜೆನೋ ಶ್ವಾನಸೂಕರ ಜನ್ಮದಿ ನೀನಿಟ್ಟರಾದರು ಶ್ರೀನಿಧಿಯೆ ನಿನ್ನಯ ಸ್ಮ- ರಣೆ ಒಂದಿದ್ದರೆ ನಾ ಧನ್ಯ ಧನ್ಯನೋ2 ಲೋಕಾಲೋಕೋದ್ಧಾರನೆ ನಿನ್ನಾಜ್ಞೆಯಿಂ ನಾಕೇಶ ಮೊದಲಾದ ಪಿ- ನಾಕಿ ಪ್ರಮುಖರು ಅನೇಕ ಕಾರ್ಯವೆಸಗಿ ಶೋಕಪಡಿಸುವರಯ್ಯ 3 ದುರ್ಗಾಶ್ರೀರಮಣ ಎನ್ನ ಸಂಸೃತಿಯೆಲ್ಲ ದುರ್ಗಮವಾಗಿಹುದೊ ಸ್ವರ್ಗ ಅಪ- ವರ್ಗಪ್ರದನೆ ಎನ್ನಯ ಭವ- ದುರ್ಗಕಡಿದು ಸನ್ಮಾರ್ಗ ಕರುಣಿಸೊ 4 ಸ್ವಾಮಿತೀರ್ಥದಿವಾಸ ಶ್ರೀಜಗದೀಶ ಸ್ವಾಮಿ ಶ್ರೀ ವೆಂಕಟೇಶ ಪಾಮರನಾದೆನ್ನ ತಾಮಸ ಹರಿಸಿ ಹೃತ್ಕಮಲದಲಿ ನಿಲ್ಲೊ ಕಮಲಾಪತಿಯೆ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶರಣು ದೇವರ ದೇವ ಶರಣು ಸುರವರ ಮಾನ್ಯ ಶರಣು ಶತಕೋಟಿ ಲಾವಣ್ಯ | ಲಾವಣ್ಯ ಮೂರುತಿಯೆ ಶರಣೆಂಬೆ ಸ್ವಾಮಿ ಕರುಣೀಸೊ 1 ಆದಿನಾರಾಯಣನು ಭೂದೇವಿ ಮೊರೆ ಕೇಳಿ ಯಾದವರ ಕುಲದಲ್ಲಿ ಜನಿಸೀದ | ಜನಿಸೀದ ಕೃಷ್ಣ ಪಾದಕ್ಕೆ ಶರಣೆಂಬೆ ದಯವಾಗೊ 2 ನಿನ್ನ ವಿಸ್ಮøತಿ ದೋಷ ಜನ್ಮ ಜನ್ಮಕ್ಕೆ ಕೊಡದಿರು ಎನ್ನ ಕುಲ ಬಂಧು ಎಂದೆಂದು |ಎಂದೆಂದು ನಿನಗಾನು ಬಿನ್ನೈಪೆ ಬಿಡದೆ ಸಲಹಯ್ಯ 3 ವಸುದೇವನಂದನನ ಹಸುಗೂಸು ಎನಬೇಡಿ ಶಿಶುವಾಗಿ ಕೊಂದ ಶಕಟನ್ನ | ಶಕಟನ್ನ ವತ್ಸಾಸುರನ ಅಸುವಳಿದು ಪೊರೆದ ಜಗವನ್ನ 4 ವಾತರೂಪಿಲಿ ಬಂದ ಆ ತೃಣಾವರ್ತನ್ನ ಮಡುಹಿ ಮೊಲೆಯುಣಿಸಿದಾ ಪೂತನಿಯ ಕೊಂದ ಪುರುಷೇಶ 5 ನಿನ್ನ ಸ್ಮøತಿಗಿಂತಧಿಕ ಪುಣ್ಯ ಕರ್ಮಗಳಿಲ್ಲ ನಿನ್ನ ವಿಸ್ಮøತಿಗಿಂತ | ಅಧಿಕವಾದ ಮಹಪಾಪಗಳು ಇನ್ನಿಲ್ಲ ಲೋಕತ್ರಯದೊಳು 6 ಅಂಬುಜಾಂಬಕಿಗೊಲಿದ ಜಂಭಾರಿಪುರದಿಂದ ಕೆಂಬಣ್ಣದ ಮರ ತೆಗೆದಂಥ | ತೆಗೆದಂಥ ಕೃಷ್ಣನ ಕ ರಾಂಬುಜವೆ ನಮ್ಮ ಸಲಹಲಿ 7 ದೇವಕೀಸುತನಾಗಿ ಗೋವುಗಳ ಕಾದದೆ ನಲಿವೋನೆ ಮೂರ್ಲೋಕ ಓವ ದೇವೇಂದ್ರ ತುತಿಪೋನೆ 8 ಜಗದುದರ ನೀನಾಗಿ ಜಗದೊಳಗೆ ನೀನಿಪ್ಪೆ ಜಗದಿ ಜೀವರನ ಸೃಜಿಸುವಿ | ಸೃಜಿಸಿ ಜೀವರೊಳಿದ್ದು ಜಗದನ್ಯನೆಂದು ಕರೆಸುವಿ 9 ಕರಣನೀಯಾಮಕನೆ ಕರುಣಾಳು ನೀನೆಂದು ಮೊರೆಹೊಕ್ಕೆ ನಾನಾ ಪರಿಯಲ್ಲಿ | ಪರಿಯಲ್ಲಿ ಮಧ್ವೇಶ ಮರುಳು ಮಾಡುವರೆ ನೀಯೆನ್ನ 10 ಕುವಲಯಾಪೀಡನನು ಲವಮಾತ್ರದಿ ಕೊಂದು ಶಿವನ ಚಾಪವನು ಮುರಿದಿಟ್ಟಿ | ಮುರಿದಿಟ್ಟಿ ಮುಷ್ಟಿಕನ ಬವರದಲಿ ಕೆಡಹಿ ಬಲಿಗೈದೆ 11 ಗಂಧವಿತ್ತಬಲೆಯೊಳ ಕುಂದನೆಣಿಸದೆ ಪರಮ ಸುಂದರಿಯ ಮಾಡಿ ವಶವಾದಿ | ವಶವಾದಿ ನಮ್ಮ ಗೋ ವಿಂದ ನೀನೆಂಥ ಕರುಣಾಳು 12 ವಂಚಿಸಿದ ಹರಿಯೆಂದು ಪರಚಿಂತೆಯಲಿ ಕಂಸ ಮಂಚದ ಮ್ಯಾಲೆ ಕುಳಿತಿದ್ದ | ಕುಳಿತಿದ್ದ ಮದಕರಿಗೆ ಪಂಚಾಸ್ಯನಂತೆ ಎರಗೀದೆ 13 ದುರ್ಧರ್ಷ ಕಂಸನ್ನ ಮಧ್ಯರಂಗದಿ ಕೆಡಹಿ ಜನನೋಡೆ ದುರ್ಮತಿಯ ಮರ್ದಿಸಿದ ಕೃಷ್ಣ ಸಲಹೆಮ್ಮ 14
--------------
ಜಗನ್ನಾಥದಾಸರು
ಶರಣು ವಾಯು ತನುಜ ಶರಣು ಭಾಸ್ಕರÀ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ ಪ ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ 1 ಇದೆ ಭಾಗ್ಯ ನಾನಾವದೂ ಒಲ್ಲೆ | ಆ ನಾಮದ ಸೊಲ್ಲೆ ಮೇಣು ಪಾಲಿಪುದು ಮುಖ್ಯ | ಪ್ರಾಣಪಾವನ ಲೀಲ | ದಾನವರ ಕುಲಕಾಲ | ಏನೇನು ಮಾಳ್ಪಾಧಿಷ್ಠಾನದಲಿ | ನೀನೇ ನಾನೆಲ್ಲಿ ಎಣೆಗಾಣೆ2 ವಂದಿಸುವೆ ಜಗದ್ಗುರುವೆ | ಎಂದು ನಿನ್ನನು ಕರೆವೆ | ಮುಂದೆ ಈ ಜನ್ಮವು | ಹಿಂದೆ ಮಾಡಿ ನೇಮವು | ಪೊಂದಿಸು ಮೇಲುಗತಿ | ತಂದೆ ತಾಯಿ ಮಿಕ್ಕ | ನಿತ್ಯ | ವೆಂದೆ ಬಂದೆ ಸತ್ಯ ಕುಂದದೆ ಉದ್ಧರಿಸು 3 ದಾತ | ರೋಮ ರೋಮ ಕೋಟಿ ಕಾಮ ಸಂಹಾರನೇ | ಭೂಮಂಡಲಧರನೆ ಭೀಮಶೈನ | ಭೀಮ ರಿಪು ಗಂಟಲಗಾಣ | ತಾಮಸ ಜ್ಞಾನವಳಿ | ಸುಳಿ | ಶ್ರೀ ಮದಾನಂದತೀರ್ಥ4 ಶ್ರೀ ಸಪುತ ಕುಜನರ | ಭಾಷ್ಯ ಮುರಿದ ಧೀರ | ಭಾಸುರ ಕೀರ್ತಿ ಹಾರಾ | ದೋಷರಾಶಿ ದೂರ | ಹ್ರಾಸವಿಲ್ಲದ ಮಹಿಮ | ಶ್ರೀಶ ವಿಜಯವಿಠ್ಠಲನ್ನ | ದಾಸರೊಳಧಿಕ ನಿನ್ನ ಲೇಶವಾದರು ಬಿಡೆ | ನಾ ಸರ್ವಥಾ ಕರೆ | ತೋಷದಲಿಡುವುದೆನ್ನ 5
--------------
ವಿಜಯದಾಸ
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಾರದೆ ವಾಣೀ ಸರಸಿ ಜಾಸನ ರಾಣಿ ಶರಣು ವಿದ್ಯಾಂಬುಧಿಯೆ ಸರ್ವಗುಣಗಣನಿಧಿಯೇ ಶರಣು ಧೀನೋದ್ಫರಣಿ ಶುಭ್ರಾಂಬರಾವರಣಿ ಭವ ತಾರಣೀ ಶರಣಿ ಶೃತಿ ವಿಖ್ಯಾತೆ ಸಲೆ ಜಗತ್ರಯ ಮಾತೆ ಶರಣು ಶ್ರೀ ಧವಳಾಂಗೆ ಸುರವರಾರ್ಜಿತ ತುಂಗೆ ಶರಣು ಮಹಿಪತಿ ಕಂದ ನಾಸ್ಯದಿ ನೆಲಿಸಿಛಂದ ಸಲಹಮ್ಮ ಕರುಣದಿಂದ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಸಹಜಭಾವ ಸಿರಿಯರ ಜೀವ ಶರಣು ಶರಣು ದೇವ ದೇವ ಪ ಶರಣು ನಿನ್ನ ಚರಣಸೇವೆ ಕರುಣಿಸೆನಗೆ ನಿರುತದಭವ ಪರಮಪಾವನ ನಿಮ್ಮ ಚರಿತ ಕರುಣಿಸೆನ್ಹøದಯಕ್ಕೆ ಸತತ ಪೊರೆಯೊ ಪ್ರೇಮದಿ ದುರಿತಪರ್ವತ ತರಿದು ತೊರೆಸಿ ಜಗದ ಮಮತೆ ಅ.ಪ ಸಾರ ಸುರಸಮೂಹಸೇವಿತ ಮಾರಾರಿವಿನುತ ಕ್ಷೀರವಾರಿಧಿ ಸುತೆಯ ಪ್ರಿಯನಾಥ ಸನಕಾದಿನಮಿತ ಸೇರಿ ಭಕ್ತರಗಣದಲಿ ಗುಪ್ತ ನಲಿಯುವಿ ಮಮತೆ ತೋರಿ ಎನ್ನನು ಮಾಡು ಪಾವನ ಮೀರದ ಸಂಸಾರಬಂಧನವಾರಿಯ ದಾಂಟಿಸುಯೀಕ್ಷಣ ಸೇರಿಸದೆ ಎನ್ನ ಮಾಯಾಜಾಲದಿಂ ಸೇರಿಸು ನಿಜಜ್ಞಾನ ದಯದಿ 1 ವೇದವೇದಂಗಳಿಗೆ ಅಗೋಚರ ವೇದಂಗಳಾಧಾರ ವೇದವೇದ್ಯಮಳೈರ್ಕ ಪರತರ ವೇದಗಳ್ಹಿತಕರ ವೇದವೇದಾಂಗ ಶ್ಯಾಮಸುಂದರ ವೇದಾದಿ ಮನೋಹರ ವೇದವಿದ್ಯೆ ಬೋಧಿಸಯ್ಯ ವೇದಸಾಧನ ತೋರಿಸಯ್ಯ ವೇದಮಂತ್ರ ಸಿದ್ಧಿಸಯ್ಯ ವೇದವೇದಾಂತದೊಳು ಗೌಪ್ಯವಾದ ತತ್ವದ ಮೂಲ ತಿಳಹಿ ವಾದಬುದ್ದಿಯ ನೀಗಿಸಿ ನಿಮ್ಮ ಪಾದಭಕ್ತಿಯ ಕರುಣಿಸಭವ 2 ಭುವನತ್ರಯದ ಪರಮ ಸುಸೂತ್ರ ವಾರಿಜನೇತ್ರ ಭುವನತ್ರಯದ ಪಾವನ ಸ್ತೋತ್ರ ಪರಮಪವಿತ್ರ ಭುವನಜಾತೆಯ ಮೋಹದ ಮಿತ್ರ ವನರುಹ ಗಾತ್ರ ಭುವನದ್ಹತ್ತವತಾರ ದೇವ ಭುವನವೀರೇಳು ಹೊತ್ತು ಆಳುವ ಜಯವ ಪೊಂದಿಸಿ ನಿಮ್ಮಯ ಕರುಣದೊರಕಿಸಿ ದಯದಿ ಮುಕ್ತಿಯ ಕೊಡು ಶ್ರೀರಾಮ 3
--------------
ರಾಮದಾಸರು
ಶರಣು ಹೊಕ್ಕೆನು ಶಿವನ ತೋರಯ್ಯಾ ಸದ್ಗುರುರಾಯಾ ಪ ಅಂಗದ ಮೇಲೆಯು ಲಿಂಗದಂತಿಹುದೆಂದು ಮಂಗಲಾತ್ಮನ ತಿಳಿಯುವದೀನ್ಯಾಯಾ ಸದ್ಗುರುರಾಯಾ 1 ದುನಿಯಾಕೇ ಬೀಚಮೊತುಮ್ ಬಡೇ ಸಾಬ ಮನಮೊರೆ ಸಾಬ ತುಮ್‍ಆಯಾ ಸದ್ಗುರುರಾಯಾ 2 ಜಮ ನಮೋ ಸ್ಥಲಮೋ ಎಕದಿಸತಹೈ ರಮತಠಡೇ ಮೋರಾ ಪೀಯಾ ಸದ್ಗುರುರಾಯಾ 3 ಪರಮಾತ್ಮಾ ಪಿವಳಾ ಕೀಂ ಧವಳಾ ಮೀ ನೇಣೇ ಗುರುನಾಥಾ ಪಡೇನ ತುಝ್ಯಾ ಪಾಯಾಂ ಸದ್ಗುರುರಾಯಾ 4 ವರ ಸಚ್ಚಿದಾನಂದ ಬ್ರಹ್ಮದಿಂದೆಸೆವ ಗುರುವಿಮಲಾನಂದಾ ಪ್ರಿಯಾ ಸದ್ಗುರುರಾಯಾ 5
--------------
ಭಟಕಳ ಅಪ್ಪಯ್ಯ
ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು
ಶರಣೆಂಬೆ ಗುರುರಾಯಾ ಶರಣ ಜನರಾಶ್ರಯಾ ಶರಣು ಸಮೀರ ಕುಮಾರ ಉದಾರನೆ ಶರಣು ಪಾವನ ಕಾಯಾ ಪ ಹರಿ ಪೂರ್ಣಾಂಶದಿ ಜನಿಸಿ ಹರಿ ಕುಲೋದ್ಬವ ನೆನಿಸಿ ಹರಿಯತುಡಕಿ ಬಂದು ಹರಿತೇಜದಿ ನಿಂದು ಹರಿಸೆ ಧನುಜ ಮೃಗವಾ ಹರಿರೂಪದಲಿ ನಿಂದೆಹರಿಮಂದಿರದಲಿನಲಿದೆ ಹರಿಬರಲು ನಮಿಸಿ ಹರಿದಶ್ವಜ ಗೊಲಿಸಿ ಹರಿಹಯಜಗ ಮುನಿದೇ 1 ಗೋಪೆಂದ್ರ ನಾಜÉ್ಞಯಲಿ ಗೋಪದಾಂಬುಧಿ ಪರಿಲಿ ಗೋಪನಲಂಘಿಸಿ ಗೋಪುತ್ರಿಯ ಕಂಡು ಗೋಪೀಡಕರ ಮುರಿದೇ ಗೋಪಾಲಗಿದಿರಾಗಿ ಗೋಪಾಸ್ತ್ರವಶವಾಗಿ ಗೋಪುರವ ನುರುಹಿ ಗೋಪಾನ್ವಯ ಗುರುಹಿ ಗೋಪದವಿಯ ಪಡೆದೆ 2 ಮಹಿದರಾನೇಕವತಂದು ಮಹೋದಧಿಯನೆ ಜಿಗಿದು ಅಹಿ ಮಹಿರಾವಣಾನ್ವಯ ಮಹಿರುಹದಲಿ ತರಿದೇ ಮಹಿಯೋಳು ಮೂರವತಾರಿ ಮಹಿಮಾನೆಕವಬೀರಿ ಮಹಿಪತಿ ಸುತಪ್ರಭು ಮಹಿಜಳ ಕೂಡಿಸಿ ಮಹದಾ ಗ್ರಣಿಯಾದೆ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೆಂಬೆನೋ ಪರಮಾತ್ಮನೆ ನೀ ಕರುಣಿಸೆನ್ನನು ಪ ಶರಣಾಶ್ರಯ ಹಿತಾಯ ಸತ್ಯ ಸುಗುಣಿಯನಿನ್ನು ಅ.ಪ ಪರಮಾನಿನಿಯರ ಸಂಗದೊಳಗೆ ಯಿರಿಪುವುದೂ ಮನ ನರಸಿಂಹನಾಮ ಖಡ್ಗವೀಯೊ ಬೇಡ್ವೆ ನಾನದನಾ 1 ಸಕಲಾರ್ಥಮೆನಗೆ ಅರುಹಿ ಕಾಯೊ ಸರ್ವಾರ್ಥ ಫಲಪ್ರದಂ ಸುಕೃತಾರ್ಯ ಸೇವೆಯೊಳಿರಿಸಿ ಸಲಹೊಸರ್ವಸ್ಯಾತ್ಪರಂ2
--------------
ಚನ್ನಪಟ್ಟಣದ ಅಹೋಬಲದಾಸರು
ಶರ್ವೇಡ್ಯ ಮೋಹನ ವಿಠಲ ಪೊರೆ ಇವನ ಪ ಸರ್ವತ್ರ ಸರ್ವದಾ | ಸರ್ವ ಮಂಗಳನೇ ಅ.ಪ. ಸುಕೃತ | ರಾಶಿ ಫಲಿಸಿತೋ ಇವಗೆದಾಸ ದೀಕ್ಷೆಯಲಿ ಮನ | ಲೇಸುಗೈದಿಹನೋ |ವಾಸವಾದೀ ವಂದ್ಯ | ಭಾಸುರಾಂಗನೆ ದೇವದೋಷಾಗಳನಳಿದು ಸಂ | ತೋಷವನೆ ಪಡಿಸೋ1 ಹರಿದಾಸ ರೊಲಿದಿವಗೆ | ದರುಶನವನಿತ್ತಿಹರುಗುರು ರಘೋತ್ತಮರಂತೆ | ಬೃಂದಾವನಸ್ಥಾನರಹರಿಯು ಸ್ವಪ್ನದಲಿ | ಹರಿಹಯಾಸ್ಯವ ತೆರದಿದರುಶನಕೆ ಕಾರಣವು | ಪರಮ ಪ್ರಿಯರ್ದಯವೂ 2 ಅದ್ವೈತ ತ್ರಯಜ್ಞಾನ | ಸಿದ್ಧಿಸುತ ಸಂಸಾರಅಬ್ಧಿಯನೆ ಉತ್ತರಿಸೊ | ಮಧ್ವಾಂತರಾತ್ಮಾ 3 ಕಿಂಕಿಣಿಯ ಶೋಭಿತನೆ | ಶಂಕರೇಡ್ಯನೆ ನಿನ್ನಅಂಕಿತವ ನಿತ್ತಿಹೆನೊ | ಲೆಂಕತನದವಗೇವೆಂಕಟ ಕೃಷ್ಣ ಹೃತ್ | ಪಂಕಜದಿ ತವರೂಪಕಿಂಕರಗೆ ತೋರೆಂದು | ಶಂಕಿಸದೆ ಬೇಡ್ವೇ 4 ಸರ್ವಜ್ಞ ಸರ್ವೇಶ | ದುರ್ವಿಭಾವ್ಯನೆ ಹರಿಯೆದರ್ವಿಜೀವನ ಕಾವ | ಹವಣೆ ನಿನದಲ್ಲೇ |ಪರ್ವ ಪರ್ವದಿ ಇವಗೆ | ನಿರ್ವಿಘ್ನ ನೀಡಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶಾಂತಿಯ ಬಲಿಯಣ್ಣಾ | ಮನದಲಿ ಪ ಕೋಪ ತಾಪದ ತಾಮಸ ಗುಣದ ಮನಿ | ತಾಪತ್ರಯ ಮೂಲಾನಳ ಶಮನಿ 1 ವಾರಿಧಿ ಉಕ್ಕೇರುವದು ಜ್ಞಾನ ನಿಧಾನವು ಕೈ ಸೇರುವದು 2 ಪ್ರಪಂಚ ಪರಮಾರ್ಥದ ಹಿತಕಾರಿ | ಕೃಪೆಯಲಿ ಸರಿಸಮ ಬಗೆ ಮುರಾರಿ 3 ಸಾಧು ಸಂತರು ಸಂಧಿಪ ಘನವು | ಸಾಧಿಸಿ ಕೊಡುವದು ತಾ ಚಿದ್ಘನವು 4 ಗುರು ಮಹಿಪತಿ ಸಾರಿದ ಬೋಧಾ | ಭವ ಬಾಧಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶಿಖಾಮಣಿ | ದುರ್ಗುಣಿ ಪ ಶ್ರೀ ಕಳತ್ರನೆ ಜಗದೇಕ ನಾಯಕನೆಂದರಿಯದೆ ಅ.ಪ ಬನ್ನ ಬಿಡಿಸುವರೇನೊ ಮಾನವ ಕಡು ಮೂರ್ಖನೆ 1 ನಾನಾ ಪ್ರಯತ್ನಗಳ ಕಾಣುವುದಿಲ್ಲವೇಕೊ ಪ್ರಾಣಿಮಾತ್ರನು ನೀ ನಿಜವಿದು 2 ವರಿಗೆ ಬಿಡದೆ ಸರ್ವರೊಳಗೆ ನಿಂತಿಹ ಗುರುರಾಮ ವಿಠಲನೆಂದರಿಯದೆ 3
--------------
ಗುರುರಾಮವಿಠಲ