ಒಟ್ಟು 2245 ಕಡೆಗಳಲ್ಲಿ , 115 ದಾಸರು , 1462 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾದಿರಾಜರು ವಾದಿರಾಜ ಗುರುರಾಜರ ಕೊಂಡಾಡಿ ಜನಿಪ ಸುಖವನು ಬೇಡ ಪ ಸೋದೆ ಸ್ಥಳದಲಿ ನಿಂತು ಮೆರೆವನಯ್ಯಹಯವದನನ ಪ್ರಿಯ ಅ.ಪ. ಮೋದತೀರ್ಥ ಮತವಾರಿಧಿ ಪೂರ್ಣಚಂದ್ರ ಸದ್ಗುಣ ಸಾಂದ್ರಾಮೇದಿನಿಯೊಳಗಿಹ ತೀರ್ಥ ಕ್ಷೇತ್ರವ ಚರಿಸಿ ಸಂತರನುದ್ಧರಿಸಿಸಾದರದಲಿ ಹರಿಮಹಿಮೆಯ ಕೊಂಡಾಡಿ ಪ್ರಬಂಧವನು ಮಾಡಿವಾದಿಗಳೆಂಬುವ ಗಜಕುಲ ಹರ್ಯಕ್ಷನಾಗಿಹ ಹರಿದೀಕ್ಷಾ 1 ಎರಡೀರರುವತ್ತು ವಿದ್ಯಾಪೂರ್ಣನೆನಿಸೀ ದೂಷಕರನು ಜಯಿಸಿಬಿರುದುಗಳನಪಹರಿಸಿದ ಯತಿವರ್ಯ ಹರಕಾರ್ಯ ಧುರ್ಯವರಭೈಷ್ಮಿಶನ ವಿಜಯದ ಕಾವ್ಯವನು ಬಹುಪರಿ ಮಹಿಮೆಯನುವಿರಚಿಸಿ ಕವಿಕುಲ ಮಾನ್ಯನೆನಿಸಿಕೊಂಡ ಹರಿದಾಸ ಪ್ರಚಂಡಾ 2 ಅನುದಿನ ಸೇವಕರುಭೂತಳದ ಜನರು ಬೇಡಿದ ಇಷ್ಟಾರ್ಥ ಕೊಡುವಂಥ ಸಮರ್ಥಧಾರುಣಿಪತಿ ಗೋಪತಿವಿಠಲ ನಿನ್ನೊಶನಾಗಿಹನಲ್ಲ 3
--------------
ಗೋಪತಿವಿಠಲರು
ವಾದಿರಾಜರು ಸಾಗಿಬಾರಯ್ಯ ಗುರುವೆ ವಾದಿರಾಜೇಂದ್ರಾರ್ಯ ಬಾಗುವೆ ನಾ ನಿನಗೆ ಶಿರವಾ ಪ. ಭಾಗವತರ ದುರಿತಾಘಂಗಳನೆ ಕಳೆದು ಬಂದಾ ದುರ್ವಾದಿಗಳನೆ ಮರೆದು ಸುರರೆಲ್ಲ ಇವರೆ ಮೇಲ್ ಪೂ ಮಳೆಯಗರೆದು ತುಂಬುರರು ನರದರು ಗಾನಗಳಿಂದ ಮೆರೆದು ಘಲುಘಲು ಘಲುರೆಂದು, ಅಪ್ಸರರು ನಾಟ್ಯಗಳ ಕುಣಿದು ಅ.ಪ. ಹೊದ್ದ ಕಾವೆ ಶಾಟಯಲೊಪ್ಪುವಾ ಶ್ರೀ ಮುದ್ರಿ ಗಂಧಾಕ್ಷತೆಯಿಂದಾ ಗಳದಲ್ಲಿ ಶ್ರೀ ತುಳಸಿ ಪುಷ್ಪಮಾಲೆಗಳಿಂದಾ ಝಗಝಗನೆ ಮುಖಕಮಲಳ್ಹೋಳವೋದು ಯೆಂದಾ ಋಜುಗಣದವರಹುದೆಂದು ಪೇಳುವಾನರನಿಂದಾ ಮಾಡುವವರಿಗೆ ಕ್ರಿಮಿಕೀಟಗಳು ದುರುವುವುದೇಹದಿಂದಾ ಬಂದ ಜನರಿಗ್ಹರುಷ ಬಡಿಸುವದರಿಂದಾ ಮುದದಿಂದಾ 1 ಏನುಪೇಳಲಿ ಗುರುವೆ ನಿನ್ನ ಮಹಿಮೆಯು ನೋಡಲಾಶ್ಚರ್ಯವೋ ಭೂತರಾಜರಿಂದ ಪೂಜೆಗೊಂಬುವ ಛಂದವೋ ಧಿಂ ಧಿಮಿ ಧಿಮಿಕೆಂದು ಕುಣಿದಾಡುವಾನಂದವೊ ಯಡಬಲದಿ ದ್ವಾರ ಪಾಲಕರಿರುವಾನಂದವೋ ಮುಕ್ತಿಯನೆ ಕೊಡುವಾ 2 ನಿನ್ನಂಥಾ ಕರುಣಿ ಗುರು ಇನ್ನಿಲ್ಲ ಧರೆಯೊಳು ಮನ್ನೀಸಿ ಸಲಹಯ್ಯ ಮಹರಾಯ ಘನ್ನ ಸಂಸಾರದೊಳು ಬನ್ನಪಟ್ಟು ಬಹಳ ನೊಂದೇನೀ ಕೈಪಿಡಿದು ಎಂದು ನಿಂದೀನೀ ಉದ್ಧಾರ ಮಾಡಬೇಕೆಂದು ಬಂದೀನಿ ಮಂದ ಭಾಗ್ಯ ಜೀವನ ಕುಂದುಗಳೆಣಿಸಿದಾಗೊದೊ ಇಂದು ಅಡಿಗಡಿಗೆ ನಮೋ ಬೇಡುವೆನೋ ಬಂಧೊ 3 ರುಕ್ಮಿಣಿ ಕಳುಹಿದಾ ವಾಲೆಯು ತಾನು ಶ್ರಿ ಕೃಷ್ಣಗರ್ಪಿಸಿದನು ದ್ವಿಜನು ಸಾಮಾನ್ಯವಲ್ಲವೋ ಈತ ಗುರುರಾಜನೆಂದೆನಿಸೀದಾ ದುರ್ವಾದಿಗಳು ಜಯಸೀದಾ ಪವಮಾನರಾಯನೆಂದೆನಿಸಿದಾ ಸುರರಿಗಮೃತವನುಣಿಸೀದಾ ವೃಂದಾವನ ಚಾರ್ಯರಿಂದ ಸೇವೆ ಸ್ವೀಕರಿಸೀದಾ ಸುಖವಸುರಿಸೀದಾ 4 ಸ್ವಾದೀಯಪುರದಲ್ಲಿ ಇರುವರೋ ಗುರುರಾಜರು ಅಮೃತ ಪಾನ ಬಂದ ಸೇವಕರಿಗಭೀಷ್ಟವ ಕರೆದು ತಾ ಕೊಡುವ ದ್ರಷ್ಟ ಜನರಾ ಫಲ್ಗಳ ಮುರಿವಾ ಸರ್ವೇಶನಲ್ಲದೆಂಬೋರ ಅಳಿವಾ ಮಧ್ವಮತವನ್ನುದ್ದಾರ ಮಾಡುವ ಕಾಳೀಮರ್ಧನಕೃಷ್ಣನೊಲಿವಾ 5
--------------
ಕಳಸದ ಸುಂದರಮ್ಮ
ವಾದೀಗಳಾಗೆದ್ದು ಸಿದ್ಧಾಂತ ಸ್ಥಾಪಿಸಿ ಮುದ್ದು ಕೃಷನ ತಂದ ವೇದ ವ್ಯಾಸರ ಪ್ರಿಯ ಮಧ್ವರಾಯ ಮಧ್ವರಾಯ ಪ ಬಿದ್ದೆ ನಿಮ್ಮಯ ಚಲುವ ಪಾದಪದ್ಮಂಗಳಿಗೆ ವೇದ ಮಧ್ವರಾಯ ಮಧ್ವರಾಯ ಅ.ಪ ತಂದು ಚೂಡಾಮಣಿ ನಿಂದೆ ರಾಮನ ಮುಂದೆ ಮಧ್ವರಾಯ ಮಧ್ವರಾಯ ಕಂದನು ಎಂತೆಂದು ಮುಂದೆ ಪಾಲಿಸ ಬೇಕು ಮಧ್ವರಾಯ ಮಧ್ವರಾಯ 1 ದ್ವಾಪರ ಯುಗದಲ್ಲಿ ದ್ರೌಪದಿ ಗಂಡನೆನಿಸಿ ಪಾಪಿಗಳಾಕೊಂದು ಪತಿ ಸೇವೆ ಮಾಡ್ದೆ ಮಧ್ವರಾಯ ಮಧ್ವರಾಯ ಕೋಪವು ಮಾಡದೆ ತಾಪಗಳೋಡಿಸಿ ಗೋಪಾಲ ಕೃಷ್ಣನ ಕೃಪೆಯ ಕೊಡಿಸೈಯ ಮಧ್ವರಾಯ ಮಧ್ವರಾಯ 2 ದುರುಳ ಮಾಯಿಗಳೆಲ್ಲ ಹರಿಯ ದೂರುತ್ತಿರಲು ಸುರರ ಮಧ್ವರಾಯ ಮಧ್ವರಾಯ ಭವ ಬಿಡಿಸಿ ವೀರ ವೈಷ್ಣವ ನೆನಿಸಿ ಸಾರಿ ಸಾರಿಸ ಬೇಕು ಹರಿಯ ನಾಮವನ್ನು ಮಧ್ವರಾಯ ಮಧ್ವರಾಯ 3 ಲೋಕದಿ ಸಜ್ಜನರ ಸಾಕಬೇಕು ಎಂದು ಬೇಕೆಂದು ಯತಿಯಾದೆ ಶ್ರೀಕಾಂತ ಪಟ್ಟಪುತ್ರ ಮಧ್ವರಾಯ ಮಧ್ವರಾಯ ನೂಕೋದುರಿತ ರಾಶಿ ಲೋಕಕ್ಕೆಲ್ಲಾ ಗುರು ಮಧ್ವರಾಯ ಮಧ್ವರಾಯ 4 ಸುರರೆಲ್ಲ ಪರಿವಾರ ತಾರತಮ್ಯವ ತೋರ್ದೆ ಮಧ್ವರಾಯ ಮಧ್ವರಾಯ ಸೂರಿಗಳೊಡೆಯನೆ ಭಾರತಿ ಪ್ರಾಣಕಾಂತ ಮಧ್ವರಾಯ ಮಧ್ವರಾಯ5 ಮತ್ತೆ ಹರಿಯಮತದಂತೆ ಬರೆದೆಯೊ ಹೊಸ ಭಾಷ್ಯ ಮಧ್ವರಾಯ ಮಧ್ವರಾಯ ಪೊರೆದೆ ಹರಿಯಪ್ರಧಮಾಂಗ ವೀರ ಮಾರುತಿ ದೇವ ಮಧ್ವರಾಯ ಮಧ್ವರಾಯ 6 ಬೃಹತೀಗೆ ನೀ ಪ್ರತಿಮ ಬಹುರೂಪ ಧಾರಕ ವಹಿಸೊ ಎಮ್ಮೆಯ ಅಹಿ ಭೂಷಣ ಪ್ರಿಯ ಮಧ್ವರಾಯ ಮಧ್ವರಾಯ ದಹಿಸೋ ಸೋಹಂ ಜ್ಞಾನ ಮಹಿಯೊಳು ಅಪ್ರತಿಮ ಮಧ್ವರಾಯ ಮಧ್ವರಾಯ 7 ಜಪ ಬೇರೆ ಬೇರೆ ಮಾಡಿ ಮೂರು ಗತಿಯ ತೋರ್ಪೆ ಮಧ್ವರಾಯ ಮಧ್ವರಾಯ ಭಾರೀಶಕ್ತನು ನೀನು ಆರು ಸರಿಯು ನಿನಗೆ ಮಧ್ವರಾಯ ಮಧ್ವರಾಯ 8 ಆನಂದ ಶಾಸ್ತ್ರವ ಸಾನುರಾಗದಿ ಪೇಳ್ದೆ ಮಧ್ವರಾಯ ಮಧ್ವರಾಯ ಮಾನವ ಜ್ಞಾನಾದಿಗಳ ಕೊಟ್ಟು ಕಾಯ ಬೇಕೋ ಮಧ್ವರಾಯ ಮಧ್ವರಾಯ 9 ಜಗ ಭಾರವ ವಹಿಸಿದೆ ಮೇರೆ ಗಾಣದ ಸತ್ವ ಮಧ್ವರಾಯ ಮಧ್ವರಾಯ ಹರಿಯ ಅರಿವ ಮರ್ಮ ಕರುಣದಿ ಅರುಹೈಯ್ಯ ಮಧ್ವರಾಯ ಮಧ್ವರಾಯ 10 ಅಮರ ವೃಂದಕ್ಕೆಲ್ಲ ಹರಿಯ ತೋರಿಸಿ ಕೊಟ್ಟೆ ಮಧ್ವರಾಯ ಮಧ್ವರಾಯ ಬೊಮ್ಮದೇವಗು ಬಲವ ಕೊಟ್ಟನ್ನ ಕೊಳ್ಳುವೆ ಮಧ್ವರಾಯ ಮಧ್ವರಾಯ 11 ಬಂದು ಮೂವತ್ತೇಳು ಸುಂದರ ಗ್ರಂಥ ಮಾಡ್ದೆ ಮಧ್ವರಾಯ ಮಧ್ವರಾಯ ಶುದ್ದ ಸತ್ವಮೂರ್ತಿ ಬದ್ಧನು ನೀನಲ್ಲ ವದ್ದು ಅವಿದ್ಯೆಯ ತಿದ್ದೊ ಎಮ್ಮೆಯ ಮನ ಮಧ್ವರಾಯ ಮಧ್ವರಾಯ 12 ಅಖಿಳಾಗಮಾವೇತ್ತ ಸುಖದ ಪ್ರಾರಬ್ಧವೋ ಮಧ್ವರಾಯ ಮಧ್ವರಾಯ ಸಕಲ ಲಕ್ಷಣವಂತ ಸಕಲ ತತ್ವರಪತಿ ಮಧ್ವರಾಯ ಮಧ್ವರಾಯ 13 ತತ್ವೇಶ ರೊಳಗೆಲ್ಲ ನಿನ್ನವ್ಯಾಪಾರವು ಉತ್ತಮ ನಿನ್ನಲ್ಲಿ ಹರಿಯ ವ್ಯಾಪಾರವು ಮಧ್ವರಾಯ ಮಧ್ವರಾಯ ನಿತ್ಯ ಕೃಷ್ಣನಕಾಂಬ ಸೂತ್ರನಾಮಕದೊರೆ ಮಧ್ವರಾಯ 14 ಉತ್ತುಮೋತ್ತುಮ ವಿಷ್ಣು ನಿನ್ನ ದ್ವಾರವೆ ವಲಿವ ಮಧ್ವರಾಯ ಮಧ್ವರಾಯ ನಿತ್ಯ ತೃಪ್ತನಿಗೀವೆ ನಿಷ್ಕಾಮ ಭಕ್ತಿ ನಿಧಿ ಮಧ್ವರಾಯ ಮಧ್ವರಾಯ15 ದಿವಿಜಾನಾಯಕ ನೀನು ಪಾದ್ಯ ಹೌದಯ್ಯಮಧ್ವರಾಯ ಮಧ್ವರಾಯ ಸೇವಕರೆನಿಸುವ ಭಾಗ್ಯವಿತ್ತು ಕಾಯೋ ಮಧ್ವರಾಯ ಮಧ್ವರಾಯ 16 ನಾಗಾರಿಶಿವ ಗುರುವೆ ಭವ ಬಿಡಿಸು ಮಧ್ವರಾಯ ಮಧ್ವರಾಯ ನೀಗಿಸು ಇವರ ಬಾಧೆ ಪಂಚ ಕೋಶಗ ಪ್ರಾಣ ಮಧ್ವರಾಯ ಮಧ್ವರಾಯ17 ಶ್ರೀ ಪತಿದಯದಿಂದ ತಾಳ ಹಾಕುವ ಶಕ್ತ ಮಧ್ವರಾಯ ಮಧ್ವರಾಯ ನೀಪಾಲಿಸಿದ ರುಂಟು ಏನೆಂಬೆ ನಿಮ್ಮ ಮಹಿಮೆ ಮಧ್ವರಾಯ ಮಧ್ವರಾಯ18 ಭಾನುಸ್ಥ ಪ್ರಭು ನೀನು ಆಧ್ಯಾತ್ಮಗತನಾಗಿ | ಸಾನುರಾಗದಿ ಜಗ ಜೇಷ್ಟೆಯ ನಡಿಸುವೆ ಮಧ್ವರಾಯ ಮಧ್ವರಾಯ ಶ್ರೀನಿವಾಸನ ಪೂರ್ಣ ಕೃಪೆಗೆ ನೀ ಪಾತ್ರನು | ಪೂರ್ಣ ಭೋದ ಗುರುವೆ ದೀನರೆಮ್ಮನು ಪಿಡಿ ಮಧ್ವರಾಯ ಮಧ್ವರಾಯ19 ಅಣವು ಮಹದ್ ಘನ ಪೂರ್ಣ ಪ್ರಜ್ಞನು ನೀನು | ಅನ್ನಜೀವರು ನಿನಗೆ ಅನ್ನ ಶ್ರೀಶಗೆ ನೀನು ಮಧ್ವರಾಯ ಮಧ್ವರಾಯ ನಿನ್ನ ರೂಪಗಳಲ್ಲಿ ನ್ಯೂನವಿಲ್ಲವು ಗುಣದಿ | ಮಣಿಸದೆ ಚಿತ್ತದಲ್ಲಿ ಉಣಿಸೋ ಹರಿ ಕೀರ್ತನೆ ಮಧ್ವರಾಯ ಮಧ್ವರಾಯ 20 ಭೇದಬೊಧೆಯ ನಿತ್ತು ಉದ್ದಾರ ಮಾಡಿದೆ | ವಾದಿ ಭೀಕರಯತಿ ಶ್ರೆದ್ಧೆ ಮನೋಹರ ಮಧ್ವರಾಯ ಮಧ್ವರಾಯ ಮುದ್ದು ಕೃಷ್ಣನ ತಂದು ತಿದ್ದಿ ಪದ್ದತಿಗಳ | ಶುದ್ಧವೈಷ್ಣವರಿಗೆಲ್ಲ ವೃದ್ಧಿ ಮಾಡಿದೆ ಭಕ್ತಿ ಮಧ್ವರಾಯ ಮಧ್ವರಾಯ 21 ಗುರು ಪ್ರಾಣ ನಾಥನೆ ಹರಿಯ ಮನದಂತೆ | ಪರಿಪರಿಲೀಲೆಯ ನಿರುತ ತೋರುತಲಿಪ್ಪೆ ಮಧ್ವರಾಯ ಮಧ್ವರಾಯ ಭರತ ಪ್ರಭುವೆ ನಿನ್ನ ಚರಣವ ಸಾರಿದೆ | ಗಾರು ಸಂಸಾರದಿ ದಾರಿ ತೋರಲಿ ಬೇಕು ಮಧ್ವರಾಯ ಮಧ್ವರಾಯ 22 ಜಯ ಜಯ ಜಯ ಹನುಮ ಜಯ ಜಯ ಜಯ ಭಿಮ ಮುಖ್ಯಪ್ರಾಣ ಮರಾಮರಾ ಜಯ ಜಯತೀರ್ಥ ವ್ಯಂದ್ಯನೆ ಜಯ ಕೃಷ್ಣವಿಠಲನ ಮಧ್ವರಾಯ ಮಧ್ವರಾಯ 23
--------------
ಕೃಷ್ಣವಿಠಲದಾಸರು
ವಾಯುದೇವರ ಸ್ತೋತ್ರ ಕೇಳಿರೀತನ ಗಾಥ ಚರಿತೆಯ ಚಲ್ವ ಜಾಲಿಕಾಪುರದಿದ್ದ ಧೊರೆಯಾ ಪ ಕಾಳಾಹಿ ವೇಣಿಯಳು ದ್ರುಪದಜೆಶಾಲೆ ಸೆಳಿಯುತ ಖೂಳ ಸಭೆಯೊಳುಗೋಳಿಸಿದ ದುರ್ಯೋಧನನ ಕುಲಹಾಳು ಮಾಡಿದ ಬಹಳ ಬಗೆಯಲಿಅ.ಪ ಕಟಕೆಲ್ಲ ಕುರುಕ್ಷೇತ್ರದಲ್ಲೀ ಬಹುಳ-ದ್ಧಟಿತವಾಗಿ ನೆರದಿತಲ್ಲೀಕುಟಿಲ ದುಶ್ಶಾಸಿದ್ದನಲ್ಲೀ ಭೀಮಾ-ರ್ಭಟಿಸುತಲವನ ಕಾಣುತಲಿಕಟಕಟನೆ ಪಲ್ಗಡಿದು ಅಸುರನ ಪಟಪಟನೆ ಕರುಳನ್ನು ಹರಿಯುತಪುಟಿ ಪುಟಿದ ಹಾರುತಲಿ ರಣದೊಳು ಛಟ ಛಟಾ ಛಟಿಲೆಂದು ಸೀಳಿದ 1 ಗಡಬಡಿಸುತ ಭೀಮನಾಗೇ ಎದ್ದು ನಡೆದನು ತುಡುಗರ ಬಳಿಗೇ ತಡ ಮಾಡದಲೆ ಬಹು ಬ್ಯಾಗೆ ದೊಡ್ಡಗಿಡ ಕಿತ್ತಿ ಪಿಡಿದ ಕೈಯೊಳಗೇಘುಡು ಘುಡಿಸಿ ರೋಷದಲಿ ಅಸುರರಬಡಿ ಬಡಿದು ಮಕುಟವನೆ ಕಿತ್ತುತ ಕಡಿ ಕಡಿದು ರಥಗಳನೆ ತರಿವುತಧಡ ಧಡಾ ಧಡಲೆಂದು ಕೆಡಹಿ 2 ಪೂಶರ ಜನಕ ತಾನೊಲಿದು ಉಪ-ದೇಶ ಕೊಟ್ಟನು ಭೀಮಗೊಂದುದ್ವೇಷಿ ದುರ್ಯೋಧನನ ಹಿಡಿದು ತೊಡೆ ನಾಶ ಮಾಡಲೊ ಎಂದು ನುಡಿದುರೋಷದಲಿ ಬೊಬ್ಬಿರಿದು ಅವನಾ-ಕಾಶಕೊಗೆಯುತ ಭಾಪುರೇ ಗದೆಬೀಸಿ ಬಡಿಯುತ ಕಡಿದೆ ತೊಡೆಗಳಕೇಶವ ವಿಠಲೇಶನಾಜ್ಞದಿ 3
--------------
ಕೇಶವವಿಠ್ಠಲರು
ವಾಯುದೇವರು - ಹನುಮಂತ ಎಂಥ ವೈರಾಗ್ಯ ಹನುಮಂತ ಎಂಥ ಸೌಭಾಗ್ಯ ಗುಣವಂತ ಪ ಸಂತತ ರಾಘವನಂಘ್ರಿ ಕಮಲದಲಿ ಅಂತರಂಗ ಭಕುತಿಯ ಬೇಡಿದೆಯೊ ಅ.ಪ ಆವರಿಹರು ನಿನ್ಹೊರತು ರಾಘವರ ಭಾವವರಿತು ಪ್ರತಿ ಕ್ಷಣಗಳಲಿ ಸೇವೆ ಸಲಿಸಿ ದಯ ಪಡೆಯಲು ಭೋಗವ ದಾವದನುಭವಿಸೆ ದುರ್ಲಭವು ಜೀವೋತ್ತಮನದ ಬಯಸದೆ ಏಕೋ ಭಾವದಿ ಪದಸೇವೆಯ ಕೇಳಿದ ವೀರ 1 ಜ್ಞಾನಪರಾಕ್ರಮ ಧ್ಯೆರ್ಯವೀರ್ಯಕಧಿ ಷ್ಠಾನ ಪವನಸುತ ಜಗತ್ರಾಣ ನೀನಲ್ಲದೆ ಖಗಮೃಗ ಸುರನರರುಗ ಳೇನು ಚಲಿಸಬಲ್ಲರೊ ಹನುಮ ಪ್ರಾಣಭಾವಿ ಚತುರಾನನ ಭುವಿಯೊಳ ಗೇನು ರುಚಿಯೊ ಕಲ್ಯಾಣಚರಿತ ನಿನಗೆ 2 ಕಪಿ ರೂಪದಿ ದಶಕಂಧರನ ಮಹಾ ಅಪರಾಧಕ್ಕೆ ಶಿಕ್ಷೆಯನಿತ್ತೆ ನೃಪರೂಪದಿ ದುರ್ಯೋಧನನಸುವನು ಅಪಹರಿಸಿದೆಯೋ ಬಲ ಭೀಮ ವಿಪುಲ ಪ್ರಮತಿ ವರವೈಷ್ಣವ ತತ್ವಗ ಳುಪದೇಶಿಸಿದ ಪ್ರಸನ್ನ ಯತಿವರೇಣ್ಯ3
--------------
ವಿದ್ಯಾಪ್ರಸನ್ನತೀರ್ಥರು
ವಾಸವನಾಮಕ ದಾಸರ ನೆರೆನಂಬೂ | ಜ್ಞಾನ ಭಕುತಿ ತುಂಬೂಕಾಸುಗಳಿಸಿ ಕೋಟಿಶ್ವರ ನೆನಿಸಿದನಾ | ಸರ್ವವು ಚಲ್ಲಿದನಾ ಅ.ಪ. ಆಶೆಯೆಂದೆನಿಸುವ | ಪೈಶಾಚವ ಕಳೆಯೇ | ದ್ವಿಜಸೋಗಿನಲ್ಹರಿಯೇಕೂಸಿಗೆ ಬ್ರಹ್ಮಚಾರಿ | ಆಶ್ರಮಕೇ ಬೇಡೇ | ಮತ್ತೆ ಕೊಂಡಾಡೇಭೂಸುರ ಬಹುಪರಿ | ಕ್ಲೇಶನಟಿಸಿ ಪೇಳೇ | ಮತ್ತು ಅವನಕೇಳೇಲೇಸುಕಾಸು ಕೊಡ | ದಾಶ್ಮ ಹೃದಯ ವಿವರಾ | ತೆರಳಿದ ದ್ವಿಜವರ 1 ಅತ್ತಿತ್ತಲು ತಿರುಗುತ | ಮತ್ತೆ ಮನೆಗೆ ಬಂದಾ ತಾನಲ್ಲೆ ನಿಂದಹಿತ್ತಲ ಬಾಗಿಲೊಳ್ | ನಿಂತ ಸತಿಯನಾಸಾ ನೋಡಿದ ತಾ ಶ್ರೀಶಾಚಿತ್ತವ ಪ್ರೇರಿಸಿ | ಮತ್ತೆ ಬೇಡಿತಂದಾ | ಮೂಗುತಿ ಬಲು ಛಂದಾವಿತ್ತತಾರೆನುತವ | ನ್ಹತ್ತಿರಿತ್ತು ಪೋದಾ | ಮತ್ತೆ ಬರಧೋದಾ 2 ಸತಿ ಗರ | ಬಟ್ಟಲ ಕುದಿಪೋಗೇ | ಮೂಗುತಿ ಬಿತ್ತಾಗೇ 3 ಸುಂಡಿಪೋಗೆ ತನ | ದಿಂಡು ವ್ಯಸನಕಾಗೀ | ತನಪಾಪಕೆ ಮರುಗೀಕಂಡು ಈಸೋಜಿಗ | ಕೊಂಡಾಡಿದ ಸತಿಯ | ಆದನು ಹೊಸಪರಿಯ ಭಂಡತನದ ಭಂಡಿ | ಭಂಡಿ ದ್ರವ್ಯವೆಲ್ಲ | ದಾನ ಮಾಡ್ದನಲ್ಲಿ ಗಂಡುಗಲಿಯು ಆಗಿ | ಪುಂಡರಿಕಾಕ್ಷಪದಾ | ಬಂಡುಣಿ ತಾನಾದಾ 4 ಪಾದ ಸಿರಿ ಪಾದ ಭಜಿಸೇ | ಇಂದ್ರ ದಾಸನೆನಿಸೇ ಸಂಗ ರಹಿತರಿಗೆ | ಮಂಗಳ ಸಂದೇಶ | ಇತ್ತು ತಾನುಪದೇಶಾ ಅಂಗಜ ಪಿತ ಗುರು | ಗೋವಿಂದ ವಿಠ್ಠಲನಾ ಚರಿತೆಗಳ್ ಬಿತ್ತಿದನಾ 5
--------------
ಗುರುಗೋವಿಂದವಿಠಲರು
ವಾಸಿಷ್ಠ ಕೃಷ್ಣ ವಿಠಲ | ನೀ ಸಲಹೊ ಇವನಾ ಪ ಮೇಶ ಮಧ್ವೇಶ ನಿನ್ನಡಿಯ | ದಾಸ್ಯವನುಆಶಿಸುವ ಭಕ್ತಗೆ ಪ | ರಾಶರಾತ್ಮಜ ಒಲಿದೂ ಅ.ಪ. ವೇದವ್ಯಾಸನೆ ನಿನ್ನ ಆದರದಿ ಧಾನಿಸುತಮೋದದಲಿ ಶ್ರುತತತ್ವ | ಪಾದಾರ್ಪಣೆನ್ನೇ |ನೀದಯದಿ ಮರೆಯಾಗಿ | ತೋರ್ದೆ ಗುರು ಬಿಂಬವನುವೇದಾಂತ ವೇದ್ಯ ಹರಿ | ಹೃದಯ ಗಹ್ವರದೀ 1 ಕ್ಲೇಶಗಳ ದಹಿಸಿ ಸ | ರ್ವೇಶ ಸದ್ಭೋದಗಳಲೇಸಾಗಿ ಅರುಹುತಲಿ | ಶ್ರೀತ ಕೈ ಪಿಡಿಯೋ |ತೋಷ ಕ್ಲೇಶಂಗಳು ರ | ಮೇಶ ನಿನ್ನಿಂದೆಂಬಭಾಸುರದ ಜ್ಞಾನ ಪ್ರ | ಕಾಶ ಕೊಡು ಇವಗೆ 2 ಮೋದ ಅದ್ವೈತ ಪಾದ ನಂಬಿಹನೋ 3 ಪರಿ ಲೀಲೆಗಳ ತೋರಿ ಇವನಲ್ಲೀಪರಿಹರಿಸೊ ಭವಬಂಧ | ಮರುತಾಂತರಾತ್ಮಕನೆಎರಗಿ ತವ ಪದದಲ್ಲಿ | ಮೊರೆಯ ಬಿದ್ದವಗೇ 4 ಸಾವಧಾನದಿ ಧ್ಯಾನ | ಭಾವ ವೃದ್ಧಿಯಗೈಸಿದೇವ ತವ ರೂಪವನು | ಆವ ಹೃದ್ಗುಹಡೀಓವಿ ಕಾಂಬುವ ಹದನ | ನೀವೊಲಿದು ಪಾಲಿಪುದುಗೋವುಗಳ ಪಾಲ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಸುದೇವ ತವÀ ದಾಸೋಹಂ ಕೇಶವ ಎನ್ನಾ ದೋಷಗಳೆಣಿಸದೆ ಪೋಷಿಸು ಹರಿ ತವ ದಾಸೋಹಂ ಪ ಕರಿ ಸಕಲ ಲೋಕಕರುಹಿದ ವಾರ್ತೆ ಯುಕುತಿಗಳಿಂದಾ ಸ್ತುತಿಸಿ ದ್ರೌಪದಿ ಪ್ರಕಟಿಸಿದಳು ಹರಿ ತವ ಕೀರ್ತಿ 1 ಸಕಲರಲ್ಲಿ ವ್ಯಾಪಕನೆಂಬುದು ಬಾಲಕ ಪ್ರಲ್ಹಾದ ಪ್ರಕಟಿಸಿದಾ ಭಕುತನಾದ ಮಧ್ವಮುನಿ ಹರಿ ಸರ್ವೋತ್ತಮ ಹೌದುಹೌದೆನಿಸಿದಾ 2 ಭಕುತರಿಗಾಗಿ ಜಗವ ಸೃಷ್ಟಿಸಿದಿ ಭಕುತರಿಗಾಗವತರಿಸಿದಿ ಭಕುತರು ನಿನ್ನಾ ಭಜಿಸದಿದ್ದರೆ ಸಕಲರರಿವರೆಂತೊ ಜಗದಿ 3 ಅವರಂದದಿ ನಾನಲ್ಲವೋ ಶ್ರೀಹರಿ ಅವರ ದಾಸರ ದಾಸನೋ ನಾ ಪಾದದಿ ಕೊಡು ಭಕುತಿಯನಾ 4 ಮೆಟ್ಟುವ ಹಾವಿಗೆ ಮಾಡಿ ಎನ್ನನು ಇಟ್ಟುಕೋ ತವ ಪದಗಳಲಿ ಥಟ್ಟನೆ ಮನದಿಷ್ಟ ಪೂದ್ವೆಸೊ ಹನುಮೇಶ ವಿಠಲ ತ್ವರ ಕರುಣದಲಿ 5
--------------
ಹನುಮೇಶವಿಠಲ
ವಾಸುದೇವ ಸಾಮಾನ್ಯ ನೀನಲ್ಲವೊ ಪ ನವನೀತ ಇಷ್ಟು ತಿನ್ನುವಿ ಭೂತಗಳಿರುವುವೇನೊ ಉದರದೊಳು 1 ಕುದಿಯುವ ಪಾಲನು ಮುದದಿಂದ ಕುಡಿಯುವೆ ಉದಕದ ರಾಶಿ ಜಿಹ್ವೆಯೊಳಿಹುದೇನೊ 2 ರಾತ್ರಿ ವೇಳೆಯಲಿ ನೀ ಸುತ್ತುವಿ ಮನೆ ಮನೆ ನೇತ್ರದೊಳ್ ಸೂರ್ಯಚಂದ್ರರು ಇಹರೇನೊ 3 ಶಿಕ್ಷೆಮಾಡಲು ಬೆನ್ನು ಪಾಶ್ರ್ವದಲ್ಲಿಹ ನಮ್ಮ ಈಕ್ಷಿಸುವುದಕೆ ವಿಶ್ವತ ಚಕ್ಷುವೇನೊ 4 ನಿನ್ನ ಚರಿತೆ ಎಮಗೆ ಚೆನ್ನಾಗಿ ತಿಳಿಸಿ ಪ್ರ ಸನ್ನನಾಗದಿರೆ ಮನ್ನಿಸೆವೋ ನಿನ್ನ 5
--------------
ವಿದ್ಯಾಪ್ರಸನ್ನತೀರ್ಥರು
ವಾಸುದೇವನನಾ ಶ್ರೈಸದಿಹ ಉಪಾಸನ್ಯಾತಕೆ ಧ್ಯಾಸ ಬಲಿಯದಿಹ ಮಿಗಿಲಭ್ಯಾಸವ್ಯಾತಕೆ ಧ್ರುವ ಹೃದಯ ಶುದ್ಧವಾಗದೆ ಉದಯಸ್ನಾನವ್ಯಾತಕೆ ಬದಿಯಲೀಹ್ಯ ವಸ್ತುಗಾಣದ ಜ್ಞಾನವ್ಯಾತಕೆ ಉದರ ಕುದಿಯು ಶಾಂತ ಹೊಂದದ ಸಾಧನ್ಯಾತಕೆ ಬುಧರ ಸೇವೆಗೊದಗದೀಹ ಸ್ವಧನವ್ಯಾತಕೆ 1 ಭಾವ ನೆಲಿಯುಗೊಳ್ಳ ದೀಹ್ಯ ಭಕುತಿದ್ಯಾತಕೆ ಕಾವನಯ್ಯನ ಕಾಣದೀಹ್ಯ ಯುಕತದ್ಯಾತಕೆ ದೇವದೇವನ ಸೇವೆಗಲ್ಲದ ಶಕುತ್ಯದ್ಯಾತಕೆ ಹ್ಯಾವ ಹೆಮ್ಮೆ ಅಳಿಯದೀಹ್ಯ ವಿರುಕಿತ್ಯಾತಕೆ 2 ತತ್ವ ತಿಳಿಯದಿಹದೀ ವಿದ್ವತ್ವವ್ಯಾತಕೆ ಸತ್ವಗುಣದ ಲಾಚರಿಸದಿಹ್ಯ ಕವಿತ್ಯವ್ಯಾತಕೆ ಚಿತ್ತಶುದ್ಧವಾಗದಿಹ ಮಹತ್ವವ್ಯಾತಕೆ ವಿತ್ತ ಆಶೆಯು ಅಳಿಯದಿಹ ಸಿದ್ಧತ್ವವ್ಯಾತಕೆ 3 ನೀತಿಮಾರ್ಗವರಿಯದೀ ಹ ರೀತ್ಯದ್ಯಾತಕೆ ಮಾತುಮಿತಿಗಳಿಲ್ಲದವನು ಧಾತುವ್ಯಾತಕೆ ಅಮೃತ ಊಟವ್ಯಾತಕೆ ಜ್ಯೋತಿ ತನ್ನೊಳರಿಯದಲೆ ಉತ್ತಮದ್ಯಾತಕೆ 4 ನಿತ್ಯ ಶ್ರವಣವ್ಯಾತಕೆ ನೆನವು ನೆಲೆಯಾಗೊಳ್ಳದಿಹ ಮನನವ್ಯಾತಕೆ ತನುವಿನಲ್ಲಿ ಘನವು ಕಾಣದನುಭವ್ಯಾತಕೆ ದೀನಮಹಿಪತಿಸ್ವಾಮಿಗಾಣದ ಜನಮವ್ಯಾತಕೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಿಘ್ನೇಶ - ವಿಘ್ನೇಶ ಪ ಭಗ್ನ ಗೈಸಿ ದು | ರ್ವಿಘ್ನಗಳನು ಹರಿಯಜ್ಞನಲ್ಲಿ ಮನ | ಲಗ್ನವ ಗೈವುದು ಅ.ಪ. ನಭಕಭಿಮಾನಿಯೆ | ಪ್ರಭುಹರಿ ಭಜನೆಗೆಶುಭ ಅವಕಾಶದ | ವೈಭವ ಪ್ರದನೇ 1 ಆದಿದೇವ ನಿನ | ಗಾದಿ ಪೂಜೆಯನುಮೋದದಿ ವಿಧಿಸುತ | ಸಾಧು ಜನೋದ್ಧಾರ 2 ಕಂತು ಹರನ ಸುತ 3 ಸಂತತ ಸಂಗವ | ಸಂತತ ಕೊಡುತಲಿಪಂಥಾಬಿಧ ಹರಿ | ಚಿಂತೆಯಲಿರಿಸೋ 4 ವಿಶ್ವಂಭರ ಗುರು | ಗೋವಿಂದ ವಿಠಲನವಿಶ್ವರೂಪ ಬಹು | ವಿಶ್ವಾಸಾರ್ಚಕ 5
--------------
ಗುರುಗೋವಿಂದವಿಠಲರು
ವಿಠಲನ ನಾಮ ಮರೆತು ಪೋದೆನಲ್ಲ ಲಟಪಟ ನಾ ಸಟೆಯಾಡುವೆನಲ್ಲಪ ಶೇಷಗಿರಿಯ ಮೇಲೆ ಸವುತೆಯ ಬಿತ್ತಿದೇವಗಿರಿಯ ಮೇಲೆ ಅವತಾರವಿಕ್ಕಿಹಾಳೂರಿನೊಳಗೊಬ್ಬ ಕುಂಬಾರ ಸತ್ತಗೋಕರ್ಣದೊಳಗೊಬ್ಬ ಪರದೇಶಿ ಅತ್ತ 1 ಆ ಸಮಯದಿ ಮೂರು ರಾಯರ ಕಂಡೆಕುಪ್ಪುಸ ತೊಟ್ಟ ಕೋಳಿಯ ಕಂಡೆಬೆಳ್ಳಕ್ಕಿ ಬೆರಣಿಯ ಮಾಳ್ಪುದ ಕಂಡೆನರೆಸೂಳೆ ಗೆಯ್ವುದ ಕಣ್ಣಾರೆ ಕಂಡೆ 2 ನುಸಿಯೊಂದು ರೊಟ್ಟಿಯ ಸುಡುವುದ ಕಂಡೆಆಡೊಂದು ಮದ್ದಳೆ ಬಡಿವುದ ಕಂಡೆಕಪ್ಪೆ ತತ್ಥೈ ಎಂದು ಕುಣಿವುದ ಕಂಡೆಬಾಡದಾದಿಕೇಶವನ ಕಣ್ಣಾರೆ ಕಂಡೆ3
--------------
ಕನಕದಾಸ
ವಿಧಿ ಪ ಪುರಾರಿನುತ ಚರಣಾ ನಾರಾಯಣಾ ಅ.ಪ ಸರಸಿಜಾಪ್ತ ಕುಲಚಂದ್ರಮ ರಾಮ | ಮ- ಹಾರಾಜ ರಾಜಲಲಾಮ ನಿಸ್ಸೀಮ 1 ಎನ್ನಪರಾಧಗಳೇನಿದ್ದರು ಸರಿ ಮನ್ನಿಸುವರು ನೀನಲ್ಲದಾರು 2 ಅಜಿತಾದ್ಯನಂತರೂಪಾಪ್ರಮೇಯಭಜಕ ಪೋಷ ಗುರುರಾಮ ವಿಠ್ಠಲ ರಾಯಾ 3
--------------
ಗುರುರಾಮವಿಠಲ
ವಿಶೇಷ ಸಂದರ್ಭದ ಹಾಡುಗಳು 250 * ಅಡಗಿದೇತಕೊ ರಜತ ಕವಚದೊಳಗೆ ಅಡಿ ಭಕ್ತರಾಡುವೋ ಬಿಡಿ ನುಡಿಗೆ ಪ. ಗೇಣು ಪ್ರಮಾಣದಾ ಪ್ರಾಣರಾಯನೆ ಛಿದ್ರ ಕಾಣುತಿರೆ ಶಿಲೆರೂಪದಲ್ಲಿ ನಲಿದು ಆನಂದದಿಂ ನುಡಿದ ಆನತರ ವಚನಕ್ಕೆ ನೀ ನಾಚಿ ಜಗಕಿನ್ನು ಕಾಣಬಾರದು ಎಂದು 1 ದುರುಳ ಸೀತೆಯ ಕದ್ದು ತೆರಳುತಿರೆ ನಿಮ್ಮ ಕಂ ಡರವಿಂದನಯನೆ ಆಭರಣ ಕಟ್ಟೊಗೆಯೇ ಸಿರಿಚರಣ ಸ್ಪರ್ಶವೆನಗಿರಲೆಂದು ಪೈಜಣವ ಮುರಿಸಿ ಕವಚವ ಮಾಡಿ ಮೆರೆವ ವೈಖರಿಯೇ 2 ರಜತಗಿರಿ ವಾಸ ರಣದಲ್ಲಿ ಬ್ರಹ್ಮಾಸ್ತ್ರವನು ಭುಜಬಲದಿ ಬಿಡಲು ಲೆಕ್ಕಿಸದೆ ಮೂದಲಿಸೀ ನಿಜವಾಸ ಸ್ಥಳವಿಲ್ಲದಲೆಯಲೆಂದೆನ್ನುತಲಿ ರಜತಗಿರಿ ಕವಚ ಮಾಡಿರುವ ವೈಭವವೋ 3 ಕುನ್ನಿ ಮತಗಳ ಮುರಿದು ಘನ್ನ ಶಾಸ್ತ್ರವನೊರೆದು ಚನ್ನಕೃಷ್ಣನ ರಜತ ಪೀಠದಲಿ ನಿಲಿಸೀ ಎನ್ನೊಡೆಯನಾಸನವು ಎನಗೆ ಭೂಷಣವೆಂದು ಚನ್ನಾಗಿ ಮೈಗೆ ಸುತ್ತಿರುವ ವಿಸ್ಮøತಿಯೋ 4 ನಿನ್ನಲ್ಲಿ ವಡಕಿರಲು ಪೂಜಿಸುವ ಜ್ಞಾನಿಗಳಿ ಗಿನ್ನೊಂದು ನುಡಿ ಅಜ್ಞರಿಂ ಬೇಡವೆಂದೂ ಚನ್ನಾಗಿ ಹಿಂದೆ ಮುಂದೆಡಬಲದಿ ಮೇಲ್ ಕೆಳಗೆ ಇನ್ನು ತೋರದ ತೆರದಿ ಮರೆಮಾಡಿಕೊಂಡೂ5 ವಡೆಯ ಈರೇಳು ಲೋಕದಿ ವ್ಯಾಪ್ತನಾಗಿ ನೀ ನುಡಿದು ಶ್ರೀಮಂತ್ರ ಜೀವರ ಕಾಯೊ ಎನಲೂ ವಡೆಯಗುತ್ತರ ಪೇಳಲಾರದಲೆ ಬ್ಯಾಸತ್ತು ಪರಿ ಏನೋ 6 ಕಂಡವರು ಬಿಡುವರೇ ಆಡದಲೆ ನಿನ ಚರಿತೆ ಚಂಡ ವಿಕ್ರಮನಹುದೊ ಮುನಿಯದಲೆ ಸಲಹೋ ಕರ ಪೂಜ್ಯ 7
--------------
ಅಂಬಾಬಾಯಿ
ವಿಶ್ವ ಜ್ಞಾನರೂಪವಿಶ್ವದೊಳ ಹೊರಗು ನೀನಲ್ಲದೆ ಬೇರೆವಿಶ್ವನಾಟಕ ಸೂತ್ರಧಾರರುಂಟೆ ಹರಿಯೆ ಪ ಮುಕುಟ ಮಂಡೆಯಲಿ ಧ್ರುವಲೋಕ ಭುವನಾವಳಿಯುನಿಖಿಲ ಶ್ರುತಿ ನವರತುನ ನಿಟಿಲದಲ್ಲಿಮುಖದಲಿಂದ್ರರು ಅಗ್ನಿ ಸಪ್ತ ಋಷಿಗಳು ದ್ವಿಜರುಮುಖದ್ವಾರದುಸುರಿನಲಿ ಶ್ರುತಿ ಮರುತರುದೃಕುಯುಗದಿ ರವಿ ಶಶಿಯು ಎವೆಯಲ್ಲಿ ನಕ್ಷತ್ರಪ್ರಕಟ ಜಿಹ್ವೆಯ ವಾಣಿ ಕರ್ಣದ್ವಯದಿವಿಕಟ ಕಿವಿಯಲಿ ಅಶ್ವಿನಿದೇವತೆಗಳೆಲ್ಲಸಕಲ ಧರ್ಮವ ಪಡೆದೆಯೆಲೊ ಹರಿಯೆ 1 ಸ್ಕಂಧದಲಿ ಅತಿಥಿಗಳು ವಿದ್ಯಾತತಿಗಳು ಮಹಾಚಂದದರಸುಗಳು ಭುಜ ತೋಳಿನಲ್ಲಿಮುಂದುರದಿ ವಿಷ್ಣು ಹರ ಬ್ರಹ್ಮ ಸಹಿತುದರದಲಿಹಿಂದಿನ ಮಗ್ಗುಲಲಿ ಮನುಮುನಿಗಳುಮುಂದಿನ ಮಗ್ಗುಲಲಿ ಗಿರಿನಿಚಯಂಗಳುಸಂಧಿಯಲಿ ಮಕರಂದ ದೇವತೆಗಳುಮುಂದೊರೆದಿಹ ರೋಮಕೂಪದಗ್ರದಳತೆಯುವೃಂದಗಳ ಶೋಭಿಪ ರೀತಿಯ ಪಡೆದೆಯೆಲೊ ಹರಿಯೆ2 ಬೆನ್ನಿನಲಿ ವಸುನಿಕರ ಸ್ಮರನು ಲಿಂಗದಲಿ ಈ ಭು-ವನವೆಲ್ಲವು ಚೆಲುವ ನಾಭಿಯಲ್ಲಿಮುನ್ನ ಕೈಯಲಿ ವಿಶ್ವದೇವತೆಗಳು ವೈಶ್ಯಉನ್ನತ ಜಾನುವಿನ ಸಕ್ತಿಯಲಿಭಿನ್ನ ನದಿಗಳು ಸನ್ಮೋಹನ ಶಕ್ತಿ ಪ್ರ-ಸನ್ನ ಪಾದಾಬ್ಜದಿಂ ಶೂದ್ರರುನಿನ್ನ ಅವಯವದಲ್ಲಿ ಸಕಲವಂ ಪಡೆದ ಪ್ರ-ಸನ್ನ ಕಾಗಿನೆಲೆಯಾದಿಕೇಶವರಾಯ 3
--------------
ಕನಕದಾಸ