ಒಟ್ಟು 6613 ಕಡೆಗಳಲ್ಲಿ , 119 ದಾಸರು , 3317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋ ಸಚ್ಚಿದಾನಂದನೆ ಜೋ ಜೋ ದೇವಕಿಕಂದನೆ ಜೋಜೋ ಬ್ರಹ್ಮಾದಿವಂದ್ಯನೆ ಧ್ರುವ ಹುಟ್ಟಿ ಬಂದು ನಿಜದೋರಿದೆ ಖೂನ ಮುಟ್ಟಿ ಬೀರುವ ಸುಚಿನ್ನಸಾಧನ ಇಟ್ಟ ಕಾವಲಿ ಹಾಕಿದೆ ಮೌನ ಮೆಟ್ಟಿಮರ್ದಿಸಿ ಬಂದೆ ಮಾವನ 1 ಮಾಡಬಂದೆ ನೀ ಧರ್ಮಸ್ಥಾಪನಿಯ ನೋಡಬಂದೆನಿಷ್ಟ ಜನರಾರ್ಚನಿಯ ಆಡಬಂದೆ ನಂದಯಶೋದೆ ಮನಿಯ ನೀಡಬಂದೆ ನಿಜಸುಖಸಾಧನಿಯ 2 ಶಿಷ್ಟಜನರಿಗಾಗಿ ಸಹಾಕಾರಿ ಸೃಷ್ಟಿಯೊಳು ತೋರಬಂದೆ ಶ್ರೀಹರಿ ದುಷ್ಟ ಜನರ ಮರ್ದಿಸುವಾವತಾರಿ ಕಂಸಾರಿ 3 ದೇವಾದಿಗಳ ಮಗುಟಮಣಿಯೆ ಭಾವಿಸಲಳವಲ್ಲ ಸದ್ಗುಣಿಯೆ ಕಾವ ದೈವ ನೀನೆ ಕೃಷ್ಣ ಕರುಣೆಯೆ ದೇವಕಿ ಗರ್ಭನಿಧಾನದ ಖಣಿಯೆ 4 ಬಲವಾಗಿ ಎನಗಬಂದೆ ಸರ್ವೇಶ ಒಲಿದು ಭಾನುಕೋಟಿತೇಜಪ್ರಕಾಶ ಫಲವ ನೀಡಿ ತೋರಬಂದೆ ಸಂತೋಷ ಸಲಹಬಂದೆ ಮಹಿಪತಿ ಪ್ರಾಣೇಶ 5 ಮನೋಹರ ಮಾಡುವ ನೀನೆ ಸಹಕಾರಿ ಅನುದಿನ ಲೆವಕಲ ನೀನೆ ಮುರಾರಿ 6 ಅನೆ ಕಾಯಲಿಪರಿ ನೀನೆ ಉದಾರಿ ಅನಾಥರಿಗೊಲುವ ನೀನೆ ಶ್ರೀಹರಿ 7 ಪತಿತ ಪಾವನ ಪೂರ್ಣ ನೀನೆ ನಿಶ್ಚಯ ಹಿತದಾಯಕ ನೀನಹುದೊ ಮಹಿಪತಿಯ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜೋಕೆ ಎನ್ನ ವಿಚಾರ ನಾಕು ಜನರಂತಲ್ಲ ಸ್ವೀಕರಿಸಬೇಕು ಕ್ಷಣದಿ ಪ ನಾಕಾರು ವಿಧಗಳಲಿ ನೀಪೇಳಿದುದನೆಲ್ಲ ಏಕಮನದಲಿ ಮಾಡಿದೆ ಕೃಷ್ಣ ಅ.ಪ ಬಾಲತನದಲಿ ಬಹಳ ಲೋಲನಾಗಿರು ಎಂದು ಪೇಳಲಿಲ್ಲವೆ ಯೋಚಿಸು ಕೀಳುಜೀವನದಲ್ಲಿ ಕಾಲವನು ಕಳೆ ಎಂದು ಪೇಳಿದುದ ನೀ ಮರೆತೆಯಾ ಶ್ರೀ ಲಕುಮಿಪತಿ ನಿನ್ನ ಕೀಲುಗೊಂಬೆಯ ತೆರದಿ ಪೇಳಿದುದ ಮಾಡಿರುವೆನೊ 1 ಶ್ರೀಪತಿಯೆ ನಿನ್ನ ಪ್ರೇರಣೆಯಲ್ಲವೆ ಸರ್ವ ಪಾಪ ಪುಣ್ಯಕೆ ಕಾರಣ ಈ ಪರಿಯ ನಿನ್ನ ಸಂಕಲ್ಪವನು ಮೀರಲು ತಾಪಸೋತ್ತಮರಿಗಳವೆ ಆಪತ್ತು ಸಂಪತ್ತು ನಿನ್ನಧೀನಗಳೆಂದು ತಾಪತ್ರಯವ ಸಹಿಸಿದೆ 2 ಇಂದಿರಾಪತಿ ನಿನ್ನ ಒಂದೊಂದು ದಿನದಲಾ ನಂದ ಪೂಜೆಗೈಯಲು ಹಿಂದಿನಾ ಲೆಕ್ಕವು ಸಂದಿಲ್ಲವೆಂದು ನೀ ಇಂದು ಮಾಡುವರ್ಯಾರು ಸಂದೇಹವಿಲ್ಲವೆನಗೆ 3 ಇಂತಹುದು ಬೇಕೆಂಬ ಚಿಂತೆಯಿಲ್ಲದೆ ಬಹಳ ಸಂತಸದಿ ಮುಳುಗಿರುವೆನೊ ಕಂತುಜನಕ ಎನಗೆ ಭ್ರಾಂತಿ ನೀಡದೆ ಮನಕೆ ಶಾಂತಿಯನು ದಯಮಾಡೆಲೊ ಸಂತತ ನೀನು ಎನ್ನಂತರಂಗದಲಿರಲು ಕಂತೆಯಂದದಿ ಕಾಂಬೆನೊ ಜಗವ 4 ಧೋರಣೆಯ ನುಡಿಗಳಿಗೆ ಕಾರಣನು ನೀನಿರಲು ಯಾರ ಭಯವೆನಗಿಲ್ಲವೊ ನೀರಜಾಕ್ಷನೆÉ ನಿನ್ನ ಪ್ರೇರಣೆಯನೆಳ್ಳಷ್ಟು ಮೀರಿ ನಡೆಯುವುದಿಲ್ಲವೊ ಸಾರಗುಣ ಸಂಪನ್ನ ಧೀರಭಕ್ತ ಪ್ರಸನ್ನ ಯಾರಿರುವರೊ ಜಗದಲಿ ನಿನ್ಹೊರತು 5
--------------
ವಿದ್ಯಾಪ್ರಸನ್ನತೀರ್ಥರು
ಜೋಜೋ ಕಂದÀರ್ಪಕೋಟಿ ಲಾವಣ್ಯಜೋಜೋ ವೃಂದಾರಕ ಶಿರೋರನ್ನ ಪ . ಜೋಜೋ ನಂದನ ಸುಕೃತದ ಫಲವೆಜೋಜೋ ಮುನಿಮನಮಧುಪ ಕಮಲವೆಅ.ಪ. ಪೊನ್ನ ತೊಟ್ಟಿಲ ಮೇಲೆ ಮಣಿಮಯವಾದ ವಿತಾನ್ನವ ಕಟ್ಟ್ಟಿ ಪಟ್ಟೆಯ ಮೇಲ್ವಾಸಿನಲಿಚಿನ್ನ ಶ್ರೀಕೃಷ್ಣನ ಮಲಗಿಸಿ ಗೋಕುಲದಕನ್ನೆಯರೆಲ್ಲ ತೂಗುತ ಪಾಡಿದರೆ 1 ಶಶಿಯ ಚೆಲುವ ಪೋಲ್ವ ಮೊಗದ ಚೆನ್ನಿಗನೆಎಸೆವ ಕಿರುಡೊಳ್ಳಿನ ಸೊಬಗ ಬಾಲಕನೆಪೊಸಕೆಂದಾವರೆಯಂದದಿ ಮೃದುಪದನೆಬಿಸರುಹನಯನ ಬಿಡದಿರೆಮ್ಮ ಕಂದ 2 ಪೂತನಿ ಅಸುವನೀಂಟಿದ ಪೋತ ಶಿಶುವೆವಾತದೈತ್ಯನ ಗೆಲಿದದುಭುತ ಬಾಲಭೂತಗಳನಂಜಿಸುವರ್ಭಕನೆಓತೆಮ್ಮ ಶಿಶುಗಳ ಸಲಹೊ ಶ್ರೀಹರಿಯೆ 3 ಅಮೃತವನೂಡಿ ಸುರರ ಬೆಳೆಸಿದನೆಭ್ರಮಿತನಾದ ಕರಿವರನ ಕಾಯ್ದವನೆಸುಮುಖತನದಿ ಪರೀಕ್ಷಿತನ ಪೊರೆದನೆಮಮತೆಯಿಂದೆಮ್ಮ ಶಿಶುಗಳ ನೀ ಸಲಹೊ 4 ಪೊಳೆÀವ ಮೂಲರೂಪದಿ ತೋರಿದೆ ನೀ-ನುಳಿದ ಶಿಶುಗಳಂತೆ ಶಿಶುವೆನ್ನಬಹುದೆಲಲನೆ ಬೇಡಿಕೊಳ್ಳೆ ತನ್ನ ತಾನೆ ಶಿಶು-ಗಳ ಭಾವವಿಡಿದೆಯೆಂದೆಂಬರು ನಿನ್ನ5 ಈ ಮಹಿಯೊಳು ಹರಿ ಶಿಶುವಾಗೆ ತನ್ನ ಮ-ಹಿಮೆಯ ತುತಿಸುವ ಶ್ರುತಿವನಿತೆಯರುವ್ಯಾಮೋಹದಿ ಬಂದು ಲಲನೆಯರಾದರುಆ ಮುಗ್ಧೆಯರು ಪಾಡುತ ತೂಗಿದರೆ 6 ನೀ. ಶಿಶುವಾದರೆ ನಿನ್ನುದರದೊಳಿರ್ದ ಶ್ರುತಿಮುಕ್ತರು ಶಿಶುಗಳೆಂತಾಹರೊವೇಷಧರನಾಗಿ ಶಿಶುಗಳ ವಾಸಿನೊಲಿದೆವಾಸುದೇವ ನಮ್ಮ ಬಿಡದಿರು ಶ್ರೀ ಕೃಷ್ಣ 7 ಆವಳಿಸಲು ನಿನ್ನ ಗರ್ಭದೊಳಗೆ ಭುವ-ನಾವಳಿ ಗೋಪಗೋಪಿಯರನ್ನು ತೋರಿದೆಶ್ರೀವರ ನೀನೆಲ್ಲರ ತಂದೆಯಲ್ಲದೆಭಾವಜ್ಞರ ಮತದಿ ಶಿಶುವೆಂತಪ್ಪೆ 8 ಹಯವದನನಾಗಿ ವೇದವÀ ತಂದುಪ್ರಿಯಸುತ ಚತುರಮುಖಗೆ ಪೇಳಿದಖಿಳ ವಿ-ದ್ಯೆಯ ಖನಿ ನೀನೀಗಳೇನೆಂದು ನುಡಿಯಲ-ರಿಯದ ಬಾಲಕನಾದ ಬಗೆ ಪೊಸತಯ್ಯ
--------------
ವಾದಿರಾಜ
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಜ್ಞಾನ ಪ್ರದಾಯಕ ಪ್ರಾಣದೇವ ಪ ಕಾಣೆ ನಿನಗೆ ಸಮಸತ್ಪ್ರಭಾವ ಅ.ಪ ಈ ಶರೀರದೊಳು ವಿಭೀಷಣನ ತೋರೊ 1 ಕೋಪ ಕುಜನತ್ವ ದುರ್ ವ್ಯಾಪಾರಾದಿಗಳನ್ನೆಲ್ಲ ರೂಪಡಗಿಸಿದೆ ನೀನೇ ಭೂಪನೈಯ್ಯ 2 ಇಪ್ಪತ್ತೊಂದು ವಿಧದ ತಪ್ಪುಗಳ ತಿದ್ದಿದೆ ತಿ- ಮ್ಮಪ್ಪ ವೇದ ವ್ಯಾಸರ ಶಿಷ್ಯಾವರ್ಯಾ 3 ಕಲಿಮಾರ್ಗದಲಿ ಪೋಪ ಹೊರೆ ಬುದ್ಧಿನಾಶಗೈಸಿ ಒಳಗೆ ನೀ ಪೊಳೆವುದು ಜಲಜಾಪ್ತ ಪ್ರಿಯ4 ರಂಜೀತವಾದ ಕಣ್ಣ್ಣಿಗೆ ಮಂಜು ಮುಚ್ಚಿಹುದು ದಿ- ವ್ಯಾಂಜನ ಹಚ್ಚೈ ವೀರಾಂಜನೇಯಾ5 ಯೇಳಾರೊಳಗೆ ಹದಿನೇಳಾನೆಯವರನು ಪಾಲಿಪ ದೊರೆ ನೀನು ಜಾಲವೇನು?6 ಸಿರಿಗುರುರಾಮ ವಿಠಲನ ಶರಣಾರಾಭರಣ ನೀನೆ ಕರುಣೀಸದಿದ್ದರೆಮ್ಮನು ಕಾವರಾರೈ 7
--------------
ಗುರುರಾಮವಿಠಲ
ಜ್ಞಾನಪ್ರದ ನರಸಿಂಹ ವಿಠಲ ನೀ ಸಲಹೊ ಪ ಧೇನು ವತ್ಸದ ಧ್ವನಿಗೆ ತಾನೇವೆ ಬರುವಂತೆ ಅ.ಪ. ಕರ್ಮ ಪೂರ್ವಾರ್ಜಿತವ ನಿರ್ಮಲವ ಗೊಳಿಸುತ್ತಭರ್ಮ ಗರ್ಭನ ಜನಕ ಪೇರ್ಮೆಯಲಿ ಇವನಧರ್ಮ ಮಾರ್ಗದಿ ನಡೆಸು ಸುಜ್ಞಾನ ಮತಿಯಿತ್ತುಕರ್ಮನಾಮಕ ಹರಿಯೆ ಶರಣಜನ ಧೊರೆಯೆ 1 ಹರಿಯು ಸರ್ವೋತ್ತಮನು ಶಿರಿಯು ಆತನರಾಣಿಗುರು ವಾಯು ಸುರರೆಲ್ಲ ಹರಿಭೃತ್ಯರೆಂಬವರಮತಿಯನಿತ್ತವಗೆ ಸಂಸ್ಕøತಿಯ ಕ್ಲೇಶಗಳಪರಿಹರಿಸಿ ಪಾಲಿಪುದು ಪರಮ ಕರುಣಿಕಾ 2 ಪತಿ ಇರುವೆ ಮೂಕ ಪುರುಷರ ನೀನು ವಾಕ್ಪತಿಯ ಮಾಳ್ಪೆನಾಕೇಳ್ಪುದರಿದೇನೊ ಪಂಚ ಮುಖ ಭವವಂದ್ಯತೋಕನಿವ ಶರಣಗಿಹ ವ್ಯಾಕುಲವ ಕಳೆಯೋ 3 ಮಗುವಿನೊಚನವ ಕೇಳಿ ಜಿಗಿವೆ ಕಂಬದಲಿಂದನಗೆ ಮೊಗನೆ ತರಳೆಯಾ ಹಗರಣವ ಕಳೆದೇಖಗವರಧ್ವಜ ನಿನ್ನ ಬಗೆಬಗೆಯ ಲೀಲೆಗಳಮಿಗಿಲಾಗಿ ತೋರಿವಗೆ ನಗಧರನೆ ಹರಿಯೇ 4 ನಿತ್ಯತವ ಸ್ಮøತಿಯಿತ್ತು ಭೃತ್ಯನತಿ ಕಷ್ಟಗಳಕಿತ್ತೊಗೆದು ಮಧ್ವಮತ ತತ್ವ ತಿಳಿಸುತ್ತಾಗುಪ್ತ ಮಹಿಮನೆ ಗುರುಗೋವಿಂದ ವಿಠ್ಠಲನೆಭಕ್ತನುದ್ಧರಿಸೆಂದು ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು
ಜ್ಞಾನವೆಂಬುದಕೇನು ಕ್ಷಣ ನಡಿಯು ಕಠಿಣ ಅನುಭವದ ನಿಜಖೂನ ಅಗಮ್ಯ ಸ್ನಾನ ಧ್ರುವ ಅಹಂ ಬ್ರಹ್ಮಾಸ್ಮಿ ಎಂಬ ಸೋಹ್ಯ ತಿಳುವದೆ ಗುಂಭ ಬಾಹ್ಯ ರಂಜನದೆ ಡಂಭ ದೇಹದಾರಂಭ ಸೋಹ್ಯ ತಿಳಿದುಕೊಂಬ ಗುಹ್ಯಗುರುತದ ಇಂಬ ಮಹಾಮಹಿಮೆಲೆ ಉಂಬ ಸಹಸ್ರಕೊಬ್ಬ 1 ಮೂರ್ತಿ ಶ್ರೀಪಾದ ಬೋಧ ಆದಿತತ್ವದ ಭೇದಿಸದಲ್ಲದ ಭೇದ ಮದಮತ್ಸರದ ಕ್ರೋಧ ಹಾದಿ ತಿಳಿಯದು ವಸ್ತುದ ಉದಯಸ್ತಿಲ್ಲದ 2 ಜ್ಞಾನಕ ಜ್ಞಾನೊಡಮೂಡಿ ಖೂನಕ ಬಾವ್ಹಾಂಗ ಮಾಡಿ ನಾ ನೀನೆಂಬುದು ಈಡಾಡಿ ಅನುಭವ ನೋಡಿ ಮನೋನ್ಮದ ನಡಿ ಅನುದಿನವೆ ಕೊಂಡಾಡಿಘನಕ ಮಹಿಪತಿ ನೀ ಕೂಡಿ ನೆನಿಯೊ ಬೆರೆದಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜ್ಞಾನಸುಧೆಯ ಪಾನಮಾಡಿ ಸ್ವಾನುಭವದಿ ಲೀನನಾದೆ ಹೀನ ಭವದ ತಾಪವೆನಗೆ ಬಾಧಿಸುತಿರೆ ಗುರು ನೀಡಿದ ಪ ಜೀವನ ಸುಖದುಃಖದಾ ಭಾವ ಜೋಲಿಗಳನು ಮರೆದು ದೇವ ನಾನೆ ಎಂದು ತಿಳಿದು ಪಾವನಾತ್ಮನೊಳಗೆ ಬೆರೆದು 1 ನಾನು ನೀನು ಎಂಬ ಭೇದ ಏನು ಮೋಜು ಮಾಯವಾಯ್ತು ಕಾಣದಾಯ್ತು ಜೀವಭಾವ ಜ್ಞಾನಬೋಧದಾ ಪ್ರಭಾವ2 ಭಾನ ಮರೆದು ದೇಹಮನದ ಜ್ಞಾನಗೀತೆಗಳನು ಪಾಡಿ ತಾನೆ ತಾನಾಗಿರುವ ಜ್ಞಾನಿ ಗುರುವಿನೊಳಗೆ ಕೂಡಿ 3 ಕಲ್ಪನಾವಿಲಾಸ ಪೋಗಿ ಅಲ್ಪನೆಂಬ ಮತಿಯ ನೀಗಿ ಅಲ್ಪನಾತೀತನಾದನಲ್ಪನಾದ ಶಂಕರನಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಜ್ಞಾನಾನಂದ ಸ್ವರೂಪ ಭಾನುಕೋಟಿ ಪ್ರದೀಪ ನಾನಾದೋಷ ನೀರ್ಲೇಪ ಮೀನ ರೂಪ ಪ ಏನು ಅರಿಯದ ದೀನ ಭಕುತನಿಗೆ ಸಾನುರಾಗದಿ ಜ್ಞಾನವನೀಯೋ ಅ.ಪ ನಿಗಮಗಳೆಲ್ಲವು ಬಗೆ ಬಗೆಯಿಂದ ನಿನ್ನ ಅಗಣಿತ ಗುಣಗಳ ಪೊಗಳುತಲಿದ್ದರು ಸಿಗದ ನಿನ್ನ ನಾನು ಪೊಗಳಲಳವೆ ಪೇಳೊ ಸಿರಿಯರಸನೆ ನಿನ್ನ ಚರಣಕಮಲದಲಿ ಪರತರ ಭಕುತಿಯ ದೊರಕಿಸೆಲೊ ಸರಸಿಜ ಜನಕನೆ ಮರೆತಪರಾಧವ ಕರುಣದಿಂದಲಿ ಎನ್ನ ಕರಗಳ ಪಿಡಿಯೋ 1 ಒಂದು ದಿನವು ಸುಖ ಗಂಧವನರಿಯದೆ ಭವ ಸಿಂಧುವದನನೆ ತೊಂದರೆ ಪಡುತಿಹೆ ಸುಂದರ ವದನನೆ ತಂದೆ ಎನಗೆ ನೀನೆ ಬಂಧುವೆನಗೆ ನೀನೆ ಮಂದ ಬುದ್ಧಿಯಲಿ ನಿಂದ್ಯನಾದೆನಗೆ ಕುಂದು ಸಹಸ್ರವು ಸಂಧಿಸಿತು ಇಂದು ಮನಕೆ ಆದ ತಂದುಕೊಳ್ಳದೆಲೆ ಮಂದಹಾಸದಲಿ ಬಂದೆನ್ನ ಪೊರೆಯೋ 2 ಹಿತವೆಂದು ಭವವನು ಅತಿ ಮೋಸಹೋದೆನು ಮತಿಗೆಟ್ಟು ನಿನ್ನನು ಸ್ತುತಿಸಲಿಲ್ಲವೊ ನಾನು ಮಿತಿಮೀರುತಿರಲೆನ್ನ ಸ್ಥಿತಿಯ ನೀನರಿಯುತ ಮತಿ ಬೇರೆ ಮಾಡಿ ಮರೆತೆಯೇನೊ ಶ್ರೀಪತೆ ಕ್ಷಿತಿಯೊಳೆನಗೆ ಗತಿ ಇತರರ ಕಾಣೆನÉೂೀ ಪತಿ ನೀನಿರೆ ವಸುಮತಿಯೊಳಗೆ ಪತಿತಪಾವನನೆ ಪ್ರಸನ್ನನಾಗಿ ದಿವ್ಯ ಸತತ ಸುಖಕೆನಗೆ ಪಥವನು ತೋರೊ 3
--------------
ವಿದ್ಯಾಪ್ರಸನ್ನತೀರ್ಥರು
ಜ್ಞಾನಾಮೃತ ಭುಜಿಸು ಜೀವ ಮಾನವಜನುಮದ ಗುರಿಯಿದು ಪ ಶುದ್ಧಮನದ ಪಾತ್ರೆಯಲ್ಲಿ ಸದ್ಗುರುವಿನ ಬೋಧದನ್ನ ಶುದ್ಧ ಚೈತನ್ಯಾತ್ಮ ನೀನೆ ಬದ್ಧಜೀವನಲ್ಲವೆಂಬ 1 ಶಿವರೂಪನು ಸಚ್ಚಿದಾತ್ಮ ಭವಬಂಧನವೆನ್ನೊಳಿಲ್ಲ ಆವಿನಾಶಿಯೆ ನಾನು ಎಂಬ ಸುವಿಚಾರದ ಬಾಯಿಯಿಂದ 2 ಸದ್ ರೂಪದ ಆರೋಗ್ಯ ಚಿದ್ ರೂಪದ ಪರಮ ಭಾಗ್ಯ ಆನಂದದ ನಿಧಿಯಾಗುವಿ ಬೋಧ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಜ್ಞಾನಿಗಳು ತಪ್ಪುವರೆ ಕೊಟ್ಟ ವಚನ ಪ್ರಾಣಹೋದರೂ ಭಾಷೆ ಕೊನೆಗಾಣೋತನಕ ಪ ಖ್ಯಾತಿವಂತ ನಳರಾಜ ಸೋತ ರಾಜ್ಯಾಕೆಂದು ಮಾತಿಗಾಗಿಯೆ ತಾಂ ಪೋದ ವನವಾಸ ಮಾತುಳುಹಿಕೊಳ್ಳಲ್ಕೆ ಸತ್ಯವಂತ್ಹರಿಶ್ಚಂದ್ರ ನೀತಿಯಿಂ ತಾ ಕಾಯ್ದ ಸುಡುಗಾಡವ 1 ವಾಮನಮೂರುತಿಗೆ ಭೂಮಿ ಮೂರಡಿಯಂ ಭೂಮಿಪ ಬಲಿಚಕ್ರಿ ಪ್ರೇಮದಿಂದಿತ್ತಿರಲು ಸ್ವಾಮಿ ತಾಂ ಪರಿಕಿಸಲಿ ಭೂಮಿ ಈರಡಿಗೈಯೆ ಸ್ವಾಮಿ ಮಿಕ್ಕಾದಡಿಗೆ ಪ್ರೇಮದಿತ್ತ ಶಿರವ 2 ನಾರಿಗೆ ಪಿತನ್ವೊಚನ ಮೀರಲಾಗದುಯೆನುತ ನಾರಿಅನುಜರಿಂದ್ವಿಪಿನ ಸೇರಿದೆಯೊ ಶ್ರೀರಾಮ ಆರುಳಿಯ ಬಲ್ಲರೈ ಮೀರಿ ನಿಮ್ಮಾಜ್ಞೆಯನು ಭೂರಿ ಕರುಣದಿ ನೀನೆ ಪಾರುಮಾಡೆನ್ನ 3
--------------
ರಾಮದಾಸರು
ಟೀಕಾಚಾರ್ಯರ ಸ್ತೋತ್ರ ದಯದಿ ಪಾಲಿಸೋ ಜಯತೀರಥ ರಾಯಾ | ಅಕ್ಷೋಭ್ಯರ ತನಯಾ ಪ ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ |ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ |ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ | ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ 1 ದೇಶಪಾಂಡೆರಾ ಕೂಸಾಗಿ ಜನಿಸೀ | ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ | ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ | ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ2 ಹಿಂಡು ಜನ ಅಂಡಲಿಯುತ ಬದೂ | ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ | ಧೋಂಡೋ ರಘುನಾಥನಹೆಂಡತಿ ಗಂಡನ ಕೂಡಿಸಬೇಕೆಂದೂ | ಸುಮ್ಮನೆ ಕರೆತಂದೂ - ಪ್ರಚಡ ಸರ್ಪನಾ ರೂಪವ ತಾಳ್ದಂದೂ ಭಯವ ಪಟ್ಟರಂದೂ 3 ಮಧ್ವ ಶಾಸ್ತ್ರಗಳನುದ್ಧರಿಸುತಲದನಾ | ಟೀಕೆಯನೇ ಮಾಡೀವಿದ್ವಜ್ಜನರಿಗೆ ತಿದ್ದಿಯೆ ಪೇಳುತಲೀ |ನಾನಾ ಬಗೆಯಿಂದಲಿಪದ್ಧತಿ ತಿಳಿಸಿದ ಗುರುರಾಯರು ನೀವು | ಯತಿವರ ಸುರಧೇನುಅದ್ವೈತರ ಗುರು ವಿದ್ಯಾರಣ್ಯರ | ಗೆದ್ದ ಸಿಂಹ ನೀನೂ 4 ಆಷಾಢ ಬಹುಳ ಪಂಚಮಿಯೂ ಬರುತಾ ಕಳೆಬರವನೆ ಬಿಡುತಾವ್ಯಾಸ ವಿಠ್ಠಲನ ಪಾದದಲೇ ನಿರುತಾ | ಮಳಖೇಡದೊಳುವಾಸಿಪನೆಂಬೋ ಬಲು ಪ್ರಖ್ಯಾತಾ |ನಿಜಗುಣ ಗಣನೀತಾಬ್ಯಾಸರದಲೆ ಕೊಂಡಾಡಿದರೆ ನಿತ್ಯಾ | ಇಷ್ಟಾರ್ಥವನಿತ್ತಾ 5
--------------
ವ್ಯಾಸವಿಠ್ಠಲರು
ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ | ಓಡಿ ಓಡಿ ಬಂದು ತಲಿಗೆ ನೀ ಡೀ ಡೀ ಡೀ ಎಂದು ಪ ವಜ್ರ | ಹರಳು ತೆತ್ತಿಸಿದ ದ್ಯುಮಣಿ || ಸರಿ ಸರಿ ಸರಿ ಸರಿ ಹಾಯಿದು 1 ಚಂದ್ರಶೇಖರ ಹಂಸವಾಹನ| ಇಂದ್ರಾದ್ಯರಾಕಾಶದಲಿ ಧುಂ ಧುಂ || ಧುಂ ಧುಂ ದುಂದುಭಿ ನುಡಿಸೆ | ಬಂದೆ ಇಕ್ಕೋ ಬಂದೆ ಬಂದೆನುತ 2 ಪಿಂತಿರುಗಿ ಪೋಗಿ ನೀನು | ಅಂತರಿಸಿ ದೂರದಿಂದ || ನಿಂತು ವಿಜಯವಿಠ್ಠಲರೇಯಾ |ಇತ್ತಿಂ ತ್ತಿಂ ತ್ತಿಂ ತ್ತಿಂ ತ್ತಿಂ ತ್ತೆನುತಲಿ 3
--------------
ವಿಜಯದಾಸ
ತತ್ವ ಚಿಂತನೆ ಮಾಡು ಮನುಜಾ ವ್ಯರ್ಥಕಾಲವು ಕಳೆಯದೆ ಪ ಮೂರುಬಾರಿಗೆ ಸಾರಿದೆ ಅ.ಪ ಮನೆಯು ಉರಿಯುವಾಗ ಭಾವಿ- ಯನು ತೆಗೆವ ನರನಂದದಿ ಕೊನೆಗೆ ಯಮನವರೆಳೆವ ಕಾಲದಿ ಕೋರಿದರೆ ಸುಖ ಬಾರದು 1 ಈಷಣತ್ರಯದಾಸೆಯಿಂದಲಿ ಮೋಸಹೋಗದೆ ಸಂತತ ರೋಷದೋಷಕೆ ಕಾರಣವು ಸಂ- ತೋಷದಿಂದರು ನಲಿಯುತ 2 ಎಲ್ಲಿ ನೋಡಿದರಲ್ಲಿ ಹರಿಯನು ಸೊಲ್ಲು ಸೊಲ್ಲಿಗೆ ತುತಿಸುತ ವೆಲ್ಲ ಕಳೆ ದೃಢವಾಗುತ 3 ನಾನು ನನ್ನದು ಎಂಬುವ ದುರಭಿ- ಮಾನ ನಿನಗೆ ಬೇಡೆಲೊ ಸ್ವಾನುಭವಕಿದು ಹಾನಿ ತರುವದು ನೀನೆ ನಿನ್ನೊಳು ನೋಡೆಲೊ4 ನೇಮಗಳನು ಪರಿಸುತ 5
--------------
ಗುರುರಾಮವಿಠಲ
ತತ್ವಚಿಂತನೆ ಪೇಳಬಹುದೊಬ್ಬರಿಗೆ ವ್ಯಾಸನೆ ಪೇಳಲು ನಿಮಗೆ ಮಾಡಲಶಕ್ಯವಲ್ಲ ಪ ಶ್ರವಣ ಕ್ಷಣಬಿಡದೆ ಮಾಡು ನೀಯೆಂಬಿ ಶ್ರವಣ ಬವಣೆಯು ಬಲ್ಲರೇ ಬಲ್ಲರೊ ಶ್ರವಣ ಮತಿಯೆಂದು ವಾಕ್ಯದಿಂದಲಿ ನಿಮಗಿ ಲ್ಲವರ ಗುರುವಾದಿ ವಾಯು ವಿರಂಚಿಗೆ 1 ಮನನ ಮಾಡೆಂದು ಮಂದಿಗೆ ನೀ ಬೋಧಿಸುವೆ ಮನನ ನಿಮಗೆ ಎಂದಿಗೆ ಇಲ್ಲವೊ ಮನನ ಶಾಸ್ತ್ರಗಳ ಮಾಡಿ ಹ್ಯಾಗ ತಿಳಿಯದೊ ಮನವೆ ಬಲ್ಲುದು ನಿನ್ನ ಮಹಿಮೆ ಎಲ್ಲ 2 ಧ್ಯಾನ ಮಾಡೆಂಬಿ ತಾ ಒಂದೆರೆಡು ವಿಷಯಗಳ ಜ್ಞಾನ ಬಿಡಲಾರೆನೊ ಬಹಳ ಬಿಡುವೆ ನೀನು ಒಂದನ್ನ ಒಮ್ಮೆನ್ನ ಬಿಡಲಾರಿಯೊ ಏನೊ ನೀ ಮಾಡುವುದು ಮಾತ್ರ 3 ನಿನ್ನ ಖಳಗುಣಗಳ ಪರೋಕ್ಷ ನಿಗಮನುದಿನ ಅನ್ಯ ಸಾಧನಗಳಿಂದಲ್ಲದಾಗಿ ನಿತ್ಯ ಮುಕುತಿ ಪೂರ್ಣ ತಾ ಅನ್ಯ ಜನರಿಗೆ ಬಂದ ದಣುವು ತಿಳಿಯೊ 4 ಏಸು ತಾನಂದರು ಖರಿಯ ಪುಸಿವೊಂದಿಲ್ಲ ಲೇಸು ಕೊಡುವವನೊಬ್ಬನಿಲ್ಲ ವಾಸುದೇವವಿಟ್ಠಲ ಒಲಿದು ಸಜ್ಜನರಿಂದ ಈಸು ಸಾಧನೆಗಳಿಂದ ನೀ ಮಾಡಿಸೊ 5
--------------
ವ್ಯಾಸತತ್ವಜ್ಞದಾಸರು