ಒಟ್ಟು 9343 ಕಡೆಗಳಲ್ಲಿ , 135 ದಾಸರು , 4870 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣದಿ ಒಲಿಯೆನಗೆ ಹೇ ಜನನಿ ನಿರಭಿಮಾನದ ದೇವಿಯೇ ಕರುಣಿಸು ಪ ಎನ್ನ ಬಂಧುಗಳೆಲ್ಲ ಕಣ್ಣೆತ್ತಿ ನೋಡದಿರಲಿ ಪನ್ನಂಗಶಯನನ ನೆನೆವೊಂದೆ ಎನಗಿರಲಿ 1 ಅವನಿಪರೆನ್ನನು ದಯೆದಪ್ಪಿ ನೋಡಲಿ ಭವಹರನಂಘ್ರಿಯ ಭಜನೆಸವಿಯೊಂದಿರಲಿ 2 ಭೂಷಣವಾಗಲಿ ದೂಷಣವಾಗಲಿ ಶ್ರೀಶ ಶ್ರೀರಾಮನೆನ್ನ ಧ್ಯಾನದೊಳೊಂದಿರಲಿ 3
--------------
ರಾಮದಾಸರು
ಕರುಣದಿ ಕಾಯೊ ಕರುಣದಿ ಕಾಯೊ ಕಮಲನಯನ ಎನ್ನ ಪ ಪರಮಪುರುಷ ಹರೆ ಸರಸಿಜನಾಭನೆ ಅ.ಪ ನೀನೆ ತಂದೆಯು ಎಂದು ಜ್ಞಾನದಿಂದಲಿ ಬಂದು ಧ್ಯಾನಿಸುವೆನು ಈಗ 1 ತಾಯಿ ನೀನೇಯೆಂದು ಬಾಯಿಗೆ ಬಂದಂತೆ ಜೀಯ ನಿನ್ನನು ನೆನೆವೆ 2 ಜಗದೊಳಗೆಲ್ಲ ನೀನೆ ಸುಗುಣ ಶೀಲನು ಎಂದು ಮುಗಿಲು ಮುಟ್ಟುತಲಿದೆ3 ಸಂಗತಶ್ರಮವನು ಭಂಗವಗೈದ ಭು- ಜಂಗ ಗಿರಿಯ ವಾಸ 4 ಲೀಲೆಯಿಂದಲಿ ವ್ಯಾಘ್ರಶೈಲದಲಿರುವ ಶ್ರೀ ಲೋಲ ವರದವಿಠಲ 5
--------------
ವೆಂಕಟವರದಾರ್ಯರು
ಕರುಣದಿ ಕಾಯೋ ಗೋವಿಂದಾ ಯಂವ ದುರಿತಗಳಿಂದ ನೀನೀಗೊ ಮುಕುಂದ ಪ ಹರಿಸೇವೆ ಮಾಡುತ್ತ ಬಂದೆ ಮುಂದೆ ಚಿರ ಸಾಯುಜ್ಯವನ್ನು ನೀಡೋ ಶರಣಂದೆ ಅ.ಪ. ಲಕ್ಷಯೆಂಬತನಾಲ್ಕು ಜನ್ಮಯೆತ್ತಿ ಭಕ್ಷಿಸಿ ಬಂದೆನು ಕೋಟಿ ದುಃಖಗಳಾ 1 ಸಾಕ್ಷಿಯಾಗಿರುವಂಥ ಜೀವಾತ್ಮನನು ಲಕ್ಷಕೆ ತಂದೆ ಮನುಜ ಜನ್ಮದಲೀ 2 ಪಾಪ ಪುಣ್ಯಕೆ ಕರ್ತೃವಾಗಿ ಭವದಿ ಕೂಪದಿ ನಿಂದೆನು ಬೋಕ್ತøವು ಆಗೀ 3 ಪಾಪವ ಕ್ಷಮಿಸೋ ಸರ್ವಾತ್ಮಯಂನ ತಾಪವ ನೀಗುತ್ತ ಜನ್ಮ ಪರಿಪರಿಸೋ4 ಜನ್ಮ ತಾಳಲಾರೆ ಹರಿಯೇ ತಾಳಿ ಜನ್ಮದಿ ಹರಿಪಾದ ನಾ ಬಿಡಲಾರೆ 5 ಸನ್ನುತವರ ದೂರ್ವಾಪುರದ ನಂಮ ಚನ್ನಕೇಶವನೇ ಭಕ್ತಿಯನು ನೀ ಕೊಡೆಲೋ6
--------------
ಕರ್ಕಿ ಕೇಶವದಾಸ
ಕರುಣದಿ ಬಂದು ನಿನ್ನ ಚರಣ ಕಮಲವೆನ್ನ ಶಿರದ ಮೇಲಿಟ್ಟು ನೀ ಪೊರಿಯೊ ಕೃಪಾರಸ ಸುರಿಯೋ ಗರುಡಧ್ವಜ ನೀನು ಸ್ಮರಮಣ ನಿನ್ನ ಭಕುತರ ಸುರಧೇನೆಂದು ಕರೆವರು ನಿನ್ನನು ಪ ಸರಸಿಯೊಳ್ಕರಿರಾಜ ಭರದಿಂದ ತನ್ನವುದ್ಧರಿಸೆಂದು ಮೊರೆಯಿಡೆ ಪೊರೆದೆಯಲ್ಲೊ ಶಿರಿಯೊಳುನುಡಿಯದೋ ಶರಣಾಗತರನ್ನು ಪೊರೆವೆನೆಂಬ ನಿಜ ಬಿರಿದನು ಮೆರಿಸಿದಿ1 ಆಗಮವಂದಿತ ನಾಗಭೂಷಣ ತಾತ ಮೇಘವಾಹನ ಸುತನ ಬ್ಯಾಗ ರಕ್ಷಿಸಿದಿ ಜಾಗುಮಾಡದೆ ಎನ್ನ- ದಾಗಲು ರಕ್ಷಿಸೆಂದು ಬಾಗಿ ಬೇಡುವೆನು 2 ಕಾವನು ನೀನಲ್ಲದೆ ಯಾವ ದೇವರನು ನಾ ಆವಲ್ಯು ಕಾಣೆನು ಭಾವಜಜನಕನೆ ಶ್ರೀವಾಸುದೇವನ ಗೋವೃಂದ ರಕ್ಷಕನೆ ಪತಿ ಶ್ರೀವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಕರುಣದಿ ರಕ್ಷಿಸು ಎನ್ನನು ಪುಲಿ ಗಿರಿಲೋಲ ನಂಬಿದೆ ನಿನ್ನನು ಪ ಕರುಣದಿ ರಕ್ಷಿಸು ಚರಣಸೇವಕಭಯ ಚರಣಯುಗಳದಿ ಶರಣು ಹೊಕ್ಕೆನು ಅ.ಪ ಗತಿ ತಾಳ ಲಯ ಬಂಧ ತಿಳಿಯದ ಶ್ರುತಿಗಳ ಮಹಿಮೆಯ ಕೇಳದ ಶ್ರುತಿಗೋಚರ ನಿಮ್ಮ ಸ್ತುತಿಯ ಅನುಭವವಿತ್ತು ಪತಿತಪಾವನ ಪುಲಿಗಿರೀಶನೆ ಪತಿತನುದ್ಧರಿಪಂತೆ ಗತಿವಿಹೀನಗೆ ಪಥವ ತೋರಿಸಿ ಸದ್ಗತಿಯ ಪಾಲಿಸುವಂತೆ ಪತಿತನೆನ್ನನು ಭವಜಲಧಿ ಮಧ್ಯದಿ 1 ಗುರುದ್ರೋಣ ಕೃಪರ ಮುಂದಡೆಯಲ್ಲಿ ದುರುಳ ದುಶ್ಯಾಸನನ ಕೈಯಲ್ಲಿ ಪರಮಾತ್ಮ ಪರಿಪೂರ್ಣ ಕರುಣಾಳು ನಿನ್ನನೇ ಮರೆಹೊಕ್ಕೆ ಪೊರೆಯೆಂದು ಮೊರೆಯಿಡಲಾಕ್ಷಣ ಶರಣಜನ ಸಂಸಾರ ಶ್ರೀಹರಿ 2 ನರಳಿ ಸಾವಿರವರುಷ ಜಲದೊಳು ಸ್ಮರಣೆ ಮಾಡುತ ದೃಢಮನದೊಳು ಕರಿ ಮೊರೆಯಿಡಲಾ ಕರುಣದಿಂ ಮೊರೆ ಕೇಳಿ ಗರುಡನ ಪೆಗಲೇರಿ ಸಾರಿ ಕರಿಯಪೊರೆದಾ ವರದವಿಠಲ 3
--------------
ವೆಂಕಟವರದಾರ್ಯರು
ಕರುಣದಿ ರಕ್ಷಿಸುಯನ್ನನು-ಪುಲಿಗಿರಿ ಲೋಲ ನಂಬಿದೆ ನಿನ್ನನು ಕರುಣದಿ ರಕ್ಷಿಸು ಚರಣಸೇವಕ ಭಯಹರಣ ಸೌಖ್ಯವಿತರಣ ನಿನ್ನಯಚರಣ ಯುಗಳದಿ ಶರಣು ಹೊಕ್ಕೆನುಪ ಯತಿಗಣ ನೇಮವನರಿಯದ-ಸ್ವರ-ಗತಿತಾಳ- ಲಯಬಂಧ ತಿಳಿಯದ ಮಹಿಮೆಯ ಕೇಳದ ಶೃತಿಗೋಚರ ನಿಮ್ಮಸ್ತುತಿಯು ಅನುಭವವಿತ್ತು ಪತಿತ ಪಾವನ ಪುಲಿಗಿರೀಶನೆ ಪತಿತನುದ್ಧರಿಪಂತೆ ಗತಿಮತಿಗಳೇನೇನು ಅರಿಯದಪತಿತನೆನ್ನನು ಭವಜಲಧಿ ಮಧ್ಯದಿ 1 ಕೃಪರಮುಂದೆಡೆಯಲ್ಲಿ ದುರುಳದುಶ್ಯಾಸನನ ಕೈಯಲ್ಲಿ ಪಡಿಸಲೆಂದೆನುತಲುಜ್ಜುಗಿಸಲು ಪೊರೆಯೆಂದು ಮೊರೆಯಿಡಲಾಕ್ಷಣ ಸಂಸಾರ ಶ್ರೀಹರಿ ||ಕರು|| 2 ವರುಷ ಜಲದೊಳು ಪರಾತ್ಮರ ಪುಲಿಗಿರಿ ಕರಿ ಮೊರೆಯಿಡಲಾಗಬೇಗ ಕರುಣದಿಂ ಮೊರೆಕೇಳಿ ಗರುಡನ ಪೆಗಲೇರಿಸಾರಿ ಕರದ ಚಕ್ರದಿ ಸೀಳಿ ನಕ್ರನ ಕರಿಯ ಪೊರೆದಾ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ಕರುಣದಿಂದ ಕಾಯೊ ಎನ್ನನು ಉರಗಾದ್ರಿವಾಸ ವಿಠ್ಠಲ ದೇವ ಪ ತಂದೆ ವೆಂಕಟೇಶ ವಿಠ್ಠಲ ಬಂದು ಎನ್ನ ಹೃದಯದಲ್ಲಿ ನಿಂದು ನಾಮ ನುಡಿಸಿ ಪೇಳ್ವ ಚಂದ ಮನಕೆ ತಂದು ಕೊಡುತ 1 ವಾಸುದೇವ ನಿನ್ನ ಮಹಿಮೆ ತೋಷದಿಂದ ಭಜಿಸುವುದಕೆ ದೋಷಗುಣಗಳನ್ನೆ ಕಳೆದು- ಲ್ಲಾಸ ಮನಕೆ ಒದಗುವಂತೆ 2 ಮಂದಮತಿಗಳಾದ ಜನಕೆ ಮುಂದೆ ಗತಿಯ ಪಥವ ತೋರಿ ಬಂಧನಂಗಳನ್ನೆ ತರಿದು ತಂದೆ ಕಾಯೊ ಇಂದಿರೇಶ 3 ಬೊಕ್ಕಸದ ದ್ರವ್ಯ ಜನರು ವೆಚ್ಚಮಾಡುತಿರುಹ ತೆರದಿ ಮೆಚ್ಚಿ ಬಂದ ಜನರ ಮನದ ಇಚ್ಛೆ ಪೂರ್ತಿಗೊಳಿಸಿ ಪೊರೆದೆ 4 ಅಂತರಂಗದೊಳಗೆ ನಿನ್ನ ಚಿಂತೆ ಮರೆಯದಂತೆ ಕೊಟ್ಟು ಅಂತರಾತ್ಮ ಕಮಲನಾಭ ಸಂತೈಸಿ ಕಾಯೊ5 ಟ ಟ ಅಸ್ವತಂತ್ರ ಜೀವಾಂತರ್ಗತ ಶ್ರಿ ಭಾರತೀರಮಣ ಮುಖ್ಯ ಪ್ರಾಣಾಂತರ್ಗತ ಶ್ರೀ ಉರಗಾದ್ರಿವಾಸ ವಿಠ್ಠಲಾಭಿನ್ನ ಶ್ರಿ ಗುರುವಾಸುದೇವ ವಿಠ್ಠಲಾ ಭಿನ್ನ ಶ್ರೀ ತಂದೆ ವೆಂಕಟೇಶ ವಿಠ್ಠಲಾತ್ಮಕ ಶ್ರೀ ಕಮಲನಾಭ ವಿಠ್ಠಲಾಯ:ನಮ: ಟ ಶ್ರೀ ಕಮಲನಾಭ ವಿಠ್ಠಲ ದಾಸರಾದ ಜೀವೂಬಾಯಿ ಅವರು ರಚಿಸಿದ ಮೊತ್ತ ಮೊದಲ ಹಾಡು.
--------------
ನಿಡಗುರುಕಿ ಜೀವೂಬಾಯಿ
ಕರುಣದಿಂದಲಿ ಪ್ರಕಾಶ ದೇವನ ಪ ಹೇಮ ಮುಕುಟ- ಮಾಣಿಕ್ಯಯುಕ್ತವಾಗಿರೆ ಇರುವ ಶಂಖಚಕ್ರವು ಮುತ್ತಿನಹಾರ ಮೋಹನನೆ ಮತ್ತೆ ಅಂದಿಗೆ ಗೆಜ್ಜೆಯುಕ್ತದಿ ವಸ್ತುಗಳು ಅಕೋ ಭೂಷಣವು ಪ್ರತಿರೂಪ-----ಭಾವನಾ 1 ದಿವಿಜ ಪೋಷಕನಾದ ಶ್ರೀಹರಿ ಜ್ಞಾನಿಗಳ ಬಿಡದಿನ್ನು ಸಲಹುವಾ---- ನ ವಾಧಿಪನೊಳಾದನು ? ಗಾನಲೋಲನಾಗಿ ಕನಸು ಮನಸಿನಲ್ಲಿ ಕರುಣರಸದಲ್ಲಿ ಸಾನುರಾಗದಿ ನಾಟ್ಯವಾಡುತ ಸಾರಿ ಸಾರಿಗೆ ಬಂದ ಕೃಷ್ಣನ 2 ಕಟಿ ಸುದರ್ಶನ----ಡುವಣಿ ಬಂದು ಎನ್ನ ಹೃದಯ ಪರಿ ಪರಿಯಿಂದ ತೋರುವ ನಿರುತ ದೃಷ್ಟಿಯಿಂದ ನಾನು 3
--------------
ಹೆನ್ನೆರಂಗದಾಸರು
ಕರುಣಲೆನ್ನ ನೋಡೋ ಬ್ರಹ್ಮಾನಂದಸುಖದೊಳಗಿಡೋ 1 ತಾಳಿದೆ ಕ್ರಿಮಿಕುಲ ನೀ ದಯಾಳ 2 ಜನ್ಮದಿ ನೊಂದು ಬಂದೆ ಇನ್ನಾದರೆ ತಂದೆ 3 ದುರಾಚಾರಿಯು ನಾ ಪರಮ ನೀ ಘನಮಹಿಮ 4 ಹೊರಿಯೋ ಸರ್ವೇಶ ಭವಭಯನಾಶ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣವ ತೋರೋ ಕರುಣಗುಣಾಂಬುಧಿ ಕರುಣವ ತೋರೋ ರಂಗಯ್ಯ ಪ ಕರುಣದಿ ಬಾರೋ ಬಾರೋ ಕರುಣ ತೋರಿ ಎನ್ನ ಕರುಣದಪ್ಪಿ ಪೊರಿ ಕರುಣವ ತೋರೋ ಅ.ಪ ಪರತರಮಹಿಮ ಹರಸುರಬ್ರಹ್ಮರ ಮೊರೆಯ ಕೇಳಿದ ಕರುಣವ ತೋರೋ ರಂಗಯ್ಯ ಧರೆಗೆ ಇಳಿದು ಶೇಷಗಿರಿಯಲಿ ನಿಂತು ನರಸುರರಿಗೆ ವರವಿತ್ತ ಕರುಣವ ತೋರೋ ರಂಗಯ್ಯ ಪುರದಿ ಬಂದು ನಿಂತ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಚರಣವಿಟ್ಟು ನಾರಿಕುಲವನು ದ್ಧರಿಸಿದಿ ಕರುಣವ ತೋರೋ 1 ಅಂಬುಜನಯನ ಕಂಬದಿ ಬಂದು ಭಕ್ತ ಗಿಂಬುಕೊಟ್ಟು ಕಾಯ್ದ ಕರುಣವ ತೋರೋ ರಂಗಯ್ಯ ನಂಬಿಕೊಟ್ಟ ಕಮಲಾಂಬಕಿಯೆಂಜಲ ಸಂಭ್ರಮದಿಂ ಮೆದ್ದ ಕರುಣವ ತೋರೋ ರಂಗಯ್ಯ ನಂಬಿದ ಅಸುರಗೆ ಬೆಂಬಲಗೊಟ್ಟು ಸ್ಥಿರ ಕುಂಭಿನಿಪಟ್ಟವಿತ್ತ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಅಂಬರೀಷನ ಮೊರೆ ಕೇಳಿ ಶೀಘ್ರದಿಂದ ಕರುಣವ ತೋರೋ 2 ನಿರುತ ನಂಬಿ ನಿನ್ನ ಮರೆಹೊಕ್ಕ ಬಾಲಗೆ ಸ್ಥಿರಪದವಿಯನಿತ್ತ ಕರುಣವ ತೋರೋ ರಂಗಯ್ಯ ಗರುಡನೇರಿ ಬಂದು ಕರಿಯ ವಿಪತ್ತನು ಪರಿಹರಿಸಿದ ಮಹಕರುಣವ ತೋರೋ ರಂಗಯ್ಯ ಹರಿಹರಿ ಎಂದೊದರಿದ ತರಣಿಭಕ್ತಿಗೆ ಮೆಚ್ಚಿ ನಿರುತ ಮೈಗಾವಲಾದ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಪರಮ ನಿರ್ಜರರಿಗೆ ಅಮೃತವುಣಿಸಿದ ಕರುಣವ ತೋರೋ3 ದುರುಳಕೋಟಿಯಾಚರಿಸಿದ ದುರುಳಗೆ ಪರಮ ಕೈವಲ್ಯವಿತ್ತ ಕರುಣವ ತೋರೋ ರಂಗಯ್ಯ ಕಿರಿಕುಲದವನ ಕರದಿಂ ಪರಮಾ ದರದಿ ಉಂಡ ಮಹಕರುಣವ ತೋರೋ ರಂಗಯ್ಯ ನೀರು ಕೊಟ್ಟ ನಿಜಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಚರಣದಾಸ ವರ ಕನಕನಿಗೊಲಿದ ಕರುಣವ ತೋರೋ 4 ಹಿಡಿ ಅವಲಕ್ಕಿಯ ಕೊಡಲು ಒಪ್ಪಿ ನೀ ಕಡು ಸಂಪದವಿತ್ತ ಕರುಣವ ತೋರೋ ರಂಗಯ್ಯ ಮಡಿದ ಬಾಲಕನಂ ಕಡುದಯದೆಬ್ಬಿಸಿ ಪಿಡಿದು ಕಾಪಾಡಿದ ಕರುಣವ ತೋರೋ ರಂಗಯ್ಯ ದೃಢಕರ ಬೆಂಬಲ ಬಿಡದೆಯಿರುವ ನಿನ್ನ ಕಡುದಿವ್ಯ ಮೂರ್ತಿಯ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ರಂಗ ಒಡೆಯ ಶ್ರೀರಾಮ ಎ ನ್ನೊಡಲಗಲದೆ ನಿಂತು ಕರುಣವ ತೋರೋ 5
--------------
ರಾಮದಾಸರು
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣಸಾಗರನಹುದೊ ಶರಣ ಜನರ ಪ್ರಿಯ ಧ್ರುವ ಕರಿರಾಜ ಮೊರೆ ಇಡಲು ಭರದಿಂದೊದಗಿ ಬಂದ್ಯೊ ದುರಿತ ಬಂದಡರಿದಾವಸರದೊಳು ನೀ ಪರಿಹರಿಸಿದ್ಯೊ ಶ್ರಮ ಪರಮ ದಯಾಳು 1 ದುರಿತ ನಿರ್ಮಿಸಿದವನ ಬೆರಳಲಿ ಸೀಳಿದ್ಯೊ ಪೂರ್ಣ ಹರಿಯಂದಾ ಮಾತಿಗೆ ಕರುಣದಿಂದೊದಗಿ ನೀ ಪರಪರಗಾಯಿದ್ಯೊ ತರಳ ಪ್ರಹ್ಲಾದನ 2 ಧರ್ಮಪತ್ನಿಯ ಸೆರಗೆ ಭರದಿಂದೆಳೆಯುವ ಸಮಯ ಸ್ಮರಣಿ ಒದಗಿ ಬಂದೊ ಪರಿಪರಿ ವಸ್ತುವ ಪೂರಿಸಿದ್ಯೊ ಶ್ರೀ ಹರಿ ಕೃಷ್ಣ ಕೃಪಾಳು 3 ಅರಗಿನ ಮನೆಯೊಳು ಮರೆ ಮೋಸ ಮಾಡಿರಲು ಶರಣಾಗತವತ್ಸಲ ಪಾಂಡವಪ್ರಿಯ 4 ಹಲವು ಪರಿಯಲೆನ್ನ ಸಲಹುವ ಸದ್ಗುರುಪೂರ್ಣ ಬಾಲಕ ಮಹಿಪತಿಯ ಪಾಲಕ ನೀನಹುದೊ ಮೂಲೋಕದೊಡೆಯ ಶ್ರೀ ಹರಿ ದಯಾಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಾ ತೋರದದೇನೊ ನರಹರಿಯೆ ನಿನ್ನ ಕರುಣೆ ತೋರದೆ ಇರುವ ಪರಿಯೆನ್ಹರಿಯೇ ನಿನ್ನಯ ಕಮಲ ಸ್ಮರಣೆಯ ಇಹಪರಕೆ ಗತಿಯಂ ದಿರುವ ಮನಜರಿಗ್ಹರುಷದಿಂದಲಿ ಪ ಸುಸಾಮಗಾನಪ್ರಿಯ ನರಸಿಂಗ ದೈತ್ಯಾರಿ ಭಕ್ತಾಧೀನ ಗರುಡತುಂಗ ಕರುಣಾಂತರಂಗ ಶೌರಿ ಪುರಾಣಪುರುಷ ದಾನವಾಂತಕ ಶ್ರೀನಿವಾಸನೆ ಶರಪಾಣೆ ವಿಷ್ಟಕ್ಸೇನವರ ಗೀರ್ವಾಣವಂದಿತ ಜಾನಕೀಧರ ನೀನೇ ಸಲಹೆನೇ 1 ಸಂಯಮಿ ವೃಂದನುತ ಮುಚ- ಪಾಲನ ಕೃಪಾಸಿಂಧು ಶ್ರೀ ಗೋವಿಂದ ಇಂದಿರಾನಂದ ನಂದ ಗೋಪಿಯಾನಂದ ನಾಚ್ಯುತ ಮಂದರಧರ ಮಾಪತೆ ಕಂಬುಕಂಧರ ಇಂದು ಮುಖ ಶ್ರೀ ಸುಂದರಾಂಗನೆ ರೂಪದಿ ಬಂದು ಸ್ತಂಭದಿ ರಕ್ಷಿಸೆಂದೆನಲು ಹರಿ 2 ತ್ರಿಜಗದ್ಭರಿತ ಕೌಸ್ತುಭಹಾರ ನರಮೃಗಾಕಾರ ಮಂಗಳಕರ ಮಹಿಮಾ ಶರಣು ಭಾಸುರ ಕಿರೀಟನೆ ನಿರತದಲಿ `ಹೆನ್ನೆಪುರ ನಿಲಯ' ಸಿರಿಯರಸ ನಿನ್ನಯ ಮೊರೆಯ ಹೊಕ್ಕರೆ ತ್ವರದಲಿ ನೀ 3
--------------
ಹೆನ್ನೆರಂಗದಾಸರು
ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಕರುಣಾಕರ ಕೃಷ್ಣ ಪ ಮರೆಯದೆ ಕಾಯೊ ಮೊರೆಯಿಡುವೆ ದೇವ ಅ.ಪ. ಸರಸಿಜಾಕ್ಷಸ್ವಾಮಿ ಮೆರೆದ ಸಭೆಯೊಳು ಕರುಣದಿ ಕಾಯ್ದೆಯೊ 1 ಅನಿಮಿತ್ತ ಬಂಧುವೆ ಹರೆ ಅನುದಿನ ಎನ್ನ ಮಾನ ನಿನ್ನಾಧೀನ 2 ಕರಿಗಿರೀಶÀ ಶ್ರೀಶ ದುರುಳನ ಬಾಧೆಯ ಪರಿಹರಿಸೋ ದೇವ 3
--------------
ವರಾವಾಣಿರಾಮರಾಯದಾಸರು