ಒಟ್ಟು 2793 ಕಡೆಗಳಲ್ಲಿ , 104 ದಾಸರು , 1426 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಸುಕೀಶಯನ ವಿಠಲ ನೀನಿವಳ ಕಾಪಾಡಬೇಕೋ ಹರಿಯೇ ಪ ಭಾಸುರಾಂಗನೆ ದೇವ ಸರ್ವೇಶ ಸರ್ವವಿಧದಲಿ ಕಾಯೊ ಹರಿಯೇ ಅ.ಪ. ಜಗದೀಶ ಜಗಜನ್ಮಾದಿಕಾರಣನೆ ಶ್ರೀಹರಿಯೆಹಗರಣಗಳಾ ಕಳೆದು ಮಿಗೆ ಭಕುತಿ ಸುಜ್ಞಾನವಿತ್ತು |ಬಗೆಬಗೆಯ ಮಹಿಮೆಗಳ ನೀತೋರಿ ನಿನವ್ಯಾಪ್ತಿಮಿಗಿಲಾಗಿ ತಿಳಿಸುತ್ತ ಸಲಹ ಬೇಕಿವಳಾ 1 ಮಧ್ವಮತ ದೀಕ್ಷೆಯನು ಉದ್ಧರಿಸಿ ಇವಳಲ್ಲಿಸದ್ಧರ್ಮ ಪದ್ಧತಿಯ ಶ್ರದ್ಧೆಗಳ ನಿತ್ತೂ |ಮಧ್ವೇಶ ಶ್ರೀಹರಿಯೆ | ಸರ್ವೋತ್ತುಮನೆಂಬಶುದ್ದ ಬುದ್ಧಿಯನಿತ್ತು ಸಲಹ ಬೇಕಿವಳಾ 2 ಚಾರು ಮೂರುತಿಯ |ಬಾರಿಬಾರಿಗೆ ಹೃದಯ ವಾರಿಜದಿ ಕಾಂಬಂಥಚಾರು ಮಾರ್ಗವ ತೋರಿ ಕಾಪಾಡೊ ಹರಿಯೇ 3 ಲೌಕೀಕ ಮಾರ್ಗಗಳು ವೈದೀಕ ವಾಗ್ವಪರಿನೀ ಕರುಣಿಸಿ ಕಾಯೊ ಕಮಲಾಯ ತಾಕ್ಷ |ನೀ ಕಾಯದಿರಲಿನ್ನು ಕಾಯ್ವರ್ಯಾರಿಹರಯ್ಯಮಾಕಾಂತ ಸಲಹಯ್ಯ ಗೋಕುಲಾನಂದ 4 ಕಂದರ್ಪ ಜನಕ ಮನ ಮಂದಿರದಿ ನೀತೋರಿನಂದವನೇ ನೀನಿತ್ತು ಇಂದಿರೇಶನೆ ಕಾಯೊತಂದೆ ಎನ ಬಿನ್ನಪವ ಛಂದದಲಿ ಮನ್ನೀಪುದುನಂದ ನಂದನ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಸುದೇವ ಎನ್ನ ಘಾಸಿಗೊಳಿಸದೆ ನೀ ಸಲಹಲಿ ಬೇಕೊ ಪ. ಈ ಶರೀರದೊಳು ಮಾಯಾಸಹಿತ- ದಿ ಶ್ವಾಸನಾಡಿಯೊಳು ವಾಸವಾಗಿಹ ಅ.ಪ. ಅನಿರುದ್ಧ ನಾಮದಿ ಅನುದಿನ ಸಲಹುತಲಿ ದನುಜನಾದ ಪಾಪಾತ್ಮನ ನಾಭಿಯೊಳ್ ಅನಿಲನಿಂದಲಿ ಶೋಷಿಸುವೆ ಪ್ರದ್ಯುಮ್ನ 1 ಹೃದಯದಿ ರಕ್ತವರ್ಣದಲಿ ನೀನಿರುತಲಿ ಸಂಕರ್ಷಣನೆನಿಸಿ ಪದೋಪದಿಗೆ ಪಾಪಾತ್ಮಕನನು ಸುಟ್ಟು ಸದಮಲ ಹೃದಯವ ಶುದ್ಧಿಗೈಯ್ಯುವ 2 ಮಧ್ಯದಿ ನಾಡಿಯ ಮಧ್ಯದ ಹೃದಯ ಪದ್ಮ ಮಧ್ಯ ಎಂಟು ದಳದಿ ವಿದ್ಯಮಾನನಾಗಿ ಬಿಂಬನೆನಿಸಿ ನಿನ್ನ ಪೊದ್ದಿಹ ಜೀವರ ಭಾವನೆಯಂತೆ ಕಾಂಬೆ 3 ಕೊಳಲನೂದುವ ನಿನ್ನ ಚಲುವರೂಪದ ಕಾಂತಿ ಪೊಳಲೆಲ್ಲ ತುಂಬುವುದೊ ನಳಿನಾಕ್ಷಿಯರ ಕೂಡಿ ಥಳಥಳಪ ನಿನ್ನ ಬಲು ಸಂಭ್ರಮದೊಳು ಸುರರೆಲ್ಲ ಸ್ತುತಿಪರೊ 4 ಸಿರಿ ಸಹಿತದಿ ಇರುವೆ ವರನಾಡಿ ಮಾರ್ಗದಿ ಅರಿತು ಭಜಿಸೆ ಮುಕ್ತಿ ಪೊರೆಯುವ ಬಿರುದುಳ್ಳ ಗೋಪಾಲಕೃಷ್ಣವಿಠ್ಠಲ5
--------------
ಅಂಬಾಬಾಯಿ
ವಾಸುದೇವ ನಿನ್ನ ಮರ್ಮಕರ್ಮಂಗಳದೇಶದೇಶದಲ್ಲಿ ಪ್ರಕಟಿಸಲೊ ಪ ಬೇಸರದೆ ಎನ್ನ ಹೃದಯಕಮಲದಲ್ಲಿ ವಾಸವಾಗಿ ಸುಮ್ಮನಿದ್ದೀಯೊ ಅ.ಪ. ತರಳತನದಲಿದ್ದು ದುರುಳನಾಗಿ ಬಂದುಒರಳಿಗೆ ಕಟ್ಟಿಸಿಕೊಂಡುದನುತುರುವ ಕಾಯಲಿ ಹೋಗಿ ಕಲ್ಲಿಯೋಗರವನುಗೊಲ್ಲರ ಕೂಡೆ ನೀ ಉಂಡುದನುನೆರೆಮನೆ ಹೊರಮನೆಗಳ ಪೊಕ್ಕು ಬೆಣ್ಣೆಯಅರಿಯದಂತೆ ಕದ್ದು ಮೆದ್ದುದನುಕೇಳಿಸಿದೆಯಾದರೆ ಒದರುವೆ ಎಲೊ ನರ -ಹರಿ ಎನ್ನ ಬಾಯಿಗೆ ಬಂದುದನು 1 ಕಟ್ಟಿ ಕರೆವ ಏಳುದಿನದ ಮಳೆಗೆ ಪೋಗಿಬೆಟ್ಟವ ಪೊತ್ತದ್ದು ಹೇಳಲೊಅಟ್ಟಿಸಿಕೊಳ್ಳುತ ಯಾಗಶಾಲೆಗೆ ಪೋಗಿಹೊಟ್ಟೆಯ ಹೊರೆದದ್ದು ಹೇಳಲೊದುಷ್ಟ ಹಾವಿನ ಹೆಡೆಯನು ತುಳಿದಾಡಿದದುಷ್ಟತನವನು ಹೇಳಲೊನೆಟ್ಟುನೆ ಅಂಬರಕೆತ್ತಿದನ ಹೊಯ್ದುಹಿಟ್ಟುಕಟ್ಟಿಟ್ಟುದ ಹೇಳಲೊ 2 ಪಿಡಿಯವಲಿಗೆ ಮೆಚ್ಚಿ ಸಂಪದವನು ಕೊಟ್ಟಬೆಡಗತನವನಿಲ್ಲಿ ಹೇಳಲೊಹಿಡಿಯ ಬಂದ ಕಾಲಯವನಿಗಂಜಿ ಕಲ್ಲಪಡೆಯ ಹೊದ್ದುದ ಹೇಳಲೊಮಡಿದ ಮಗನ ಗುರುವಿಗೆ ಕೊಡಬೇಕೆಂಬಸಡಗರತನವಿಲ್ಲಿ ಹೇಳೆಲೊಮಡದಿ ಮಾತಿಗೆ ಪೋಗಿ ನೀ ಪಾರಿಜಾತವತಡೆಯದೆ ತಂದದ್ದು ಹೇಳಲೊ 3 ಮೌನಗೌರಿಯ ನೋಡ ಬಂದ ಹೆಂಗಳನ್ನೆಲ್ಲಮಾನವ ಕೊಂಡದ್ದು ಹೇಳಲೊತಾನಾಗಿ ಮೊಲೆಯನೂಡಿಸ ಬಂದವಳನ್ನುಪ್ರಾಣವ ಕೊಂಡದ್ದು ಹೇಳಲೊಕಾನನದೊಳು ತುರುವಿಂಡುಗಳನು ಕಾಯ್ದಹೀನತನವನಿಲ್ಲಿ ಹೇಳಲೊಮಾನಿನಿಯರ ಮನೆಗಳ ಪೊಕ್ಕು ಬೆಣ್ಣೆಯಹಾನಿಯ ಮಾಡಿದ್ದು ಹೇಳಲೊ 4 ಧರಣಿಮಗನ ಕೊಂದು ತರುಣಿಯರನುದುರುಳತನವನಿಲ್ಲಿ ಹೇಳಲೊಜರೆಯ ಮಗನಿಗಂಜಿ ಪುರವ ಬಿಟ್ಟು ಹೋಗಿಶರಧಿಯ ಪೊಕ್ಕದ್ದು ಹೇಳಲೊಧರೆಯೊಳಧಿಕ ಶ್ರೀರಂಗಪಟ್ಟಣದಲ್ಲಿಸ್ಥಿರವಾಗಿ ನಿಂತದ್ದು ಹೇಳಲೊಶರಣಾಗತರ ಕಾವ ರಂಗವಿಠಲನ್ನಪರಮ ದಯಾಳೆಂದು ಹೇಳಲೊ 5
--------------
ಶ್ರೀಪಾದರಾಜರು
ವಾಸುದೇವನ ಪುರಕೆ ತೆರಳಿದಾರು |ಶ್ರೀಶನಾ ಪ್ರಿಯ ಗುರು ಪ್ರಾಣೇಶ ದಾಸಾರ್ಯ ಪ ಮೂರ್ತಿ ಧ್ಯಾನಮಾಡೀ ತತ್ವ |ಮಾನಿಗಳೊಳೊಂಮ್ಮಿಂದೊಮ್ಮೆ ಆನಂದದಿಂದಲೀ 1 ಹರಿಯೆ ಸರ್ವೋತ್ತಮಾ ತದ್ರಾಣಿ ಶಿರಿಬೊಮ್ಮ |ಮರುತ ದೇವರೆ ಗುರುವು, ತಾರತಮ್ಯ ||ವರಪಂಚಭೇದ ಜ್ಞಾನವನರಿತು ಮನದಿ ಹರಿ |ಪುರದೊಳಿಹ ಪರಮ ಭಕ್ತರ ಕಾಣಬೇಕೆನುತ 2 ಮೋಕ್ಷರೌದ್ರೀ ಅಬ್ಧಮಾಘದರ್ಶಾ ಪೂರ್ವಭಾದ್ಧರಾ |ನಕ್ಷತ್ರ ಸೋಮವಾರದಿದ್ದವ ದ್ವಿತಿಯ ಯಾಮದೀ |ಲಕ್ಷಿ ಇಟ್ಟೂ ಲಯದ ಚಿಂತನೆಯ ಗೈಯುತಲಿ |ಪಕ್ಷಿವಾಹನ ಶ್ರೀಶಪ್ರಾಣೇಶ ವಿಠಲೆನುತ 3
--------------
ಶ್ರೀಶಪ್ರಾಣೇಶವಿಠಲರು
ವಾಸುದೇವನ ಭಜಿಸೊ ಪ ವೇಷಹಾಕಿದರೇನು ವೇದಾರ್ಥ ತಿಳಿದೀತೆ ಅ.ಪ ಉದರಂಭರಣಕ್ಕಾಗಿ ಪದ ಪದ್ಯಗಳ ಹೇಳಿ ತುದಿಮೊದಲಿಲ್ಲದ ದೋಷಕೆ ಗುರಿಯಾಗಿ ಸದಮಲನೆಂದರೆ ಸರ್ವರು ನಗರೇನೊ 1 ದುರಿತ ಪರಿಹರವೆಂದು ಆಡುತಲಿದೆ ಶೃತಿಯು ಕರಣತ್ರಯವು ಶುದ್ಧಿಯಿರ ಬೇಕದಕೆ ಮುಖ್ಯ ಕಾರಣ ಬಾಯಿಂದ ನುಡಿದರೇನಾಯಿತು2 ಪಂಚಸದ್ವರ್ಣಾವು ಪರಮಾತ್ಮನ ನಾಮ ವಂಚನೆ ಇದರೊಳಿಲ್ಲಾ ಸರ್ವರು ನುಡಿವರು ಗರ್ವವೇತಕೆ ನಿನಗೆ 3 ಕಾಲಕಾಲಕೆ ಹರಿಯೋಲಗವ ಮಾಡಿ ವೇಳೆಗೆ ದೊರೆತದ್ದು ಭುಂಜಿಸುತಲಿ ಲಕ್ಷ್ಮೀ- ಲೋಲನ ಕಂಡ ಕಂಡಲಿ ಸ್ಮರಣೆಗೈದೂ 4 ಹೊರಗೆ ಡಂಭವ ಬಿಡು ಒಳಗೆ ನಿಶ್ಚಲನಾಗು ಪರರಿಗೆ ಹಿತವ ತೋರು ಗುರುರಾಮವಿಠಲನು ಕರುಣದಿ ಕೈಪಿಡಿದು ಪರಮಸೌಖ್ಯವನೀವ ನಿಜಭಕ್ತನಾದರೆ 5
--------------
ಗುರುರಾಮವಿಠಲ
ವಾಹನ ನರಜನ ಪ್ರೇಮಾ | ಹರಿ ಸಾರ್ವಭೌಮ ಪ ಯೋಗಿ ಮಧ್ವಮತದಾಗಮ ವಂದಿತಭಾಗವತಾಗ್ರಣಿ ಶ್ರೀಗುರುಗಳ ಕೈ ಅ.ಪ. ಪ್ರಳಯ ಕಾಲದಲಿ ಹರಿ ನೀನಂದು | ಶ್ರೀ ಭೂ ದುರ್ಗಾತ್ಮಕಜಲದಾಲದೆಲೆಯಲಿ ತೊಟ್ಟಿಲಲಂದೂ | ಕತ್ತಲೆಯೊಳಗಂದೂಎಲ್ಲಾ ಜೀವರ ಪೊಕ್ಕಳ ಎಡಬಲ ತಂದೂ | ದೀನ ಜನರ ಬಂಧೂ ||ಥಳಥಳ ಪೊಳೆಯುವ ಮಣಿಯ ತೊಟ್ಟಿಲೊಳುಲಲನೆ ಸಹಿತ ಎಡಬಲ ವೈಭೋಗದಿ 1 ಗೋಕುಲದೊಳೊ ಗೋಪಿಯರಿಂದ ತೂಗಿಸಿಕೊಂಡುಸಾಕಾಗಲಿಲ್ಲೇ ಎಲೊ ಮುಕುಂದ | ಕೌಸಲ್ಯಾದೇವಿಯುಬೇಕೆಂದು ಮುದ್ದಿಸಿ ಮೋಹದಲಿಂದಾ | ಆದ ಕಾರಣದಿಂದಾ ||ಏಕ ಮನಸಿನಲಿ ಈ ಪರಮುನಿಪಗೆಬೇಕೆಂದೊಲಿದು ಪರಾಕನು ಕೊಳ್ಳುತ 2 ಮೋದ | ಸತ್ಯಬೋಧಾರ್ಯರ ||ಮತಿಗೆ ನೀ ಮರುಳಾದೆ ಮಧುಸೂದನನೆ ಪತಿತ ಪಾವನನೆ ವ್ಯಾಸ ವಿಠಲ ನೀನೇ 3
--------------
ವ್ಯಾಸವಿಠ್ಠಲರು
ವಿಘ್ನೇಶ ಪ್ರಿಯ ವಿಠಲ | ಸದ್ಗುಣಾರ್ಣವನೇ ಪ ದುರಿತ | ಉದ್ಧರಿಸೊ ಇವನಾ ಅ.ಪ. ಮೂಲ ಕಾರಣ ಜಗಕೆ | ಪಾಲಾಬ್ಧಿಶಯ ನಿನ್ನ ಲೀಲೆಗಳ ತೋರುತ್ತ | ಸಲಹೊ ಇವನಾಕೀಲಾಲ ಜಾಸನುತ | ಮಾಲೋಲ ಶ್ರೀ ಹರಿಯೆವ್ಯಾಳ್ಯ ವ್ಯಾಳ್ಯಕೆ ಪಾಪ | ಜಾಲಗಳ ಹರಿಸೋ 1 ಆಪ್ತ ಸತಿಸುತರಲ್ಲಿ | ವ್ಯಾಪ್ತ ನಿಹ ಹರಿಯೆಂದುಸೂಕ್ತೋಪಚಾರಗಳ | ಪ್ರಾಪ್ತಿಗೈಸುತಲೀ |ಮೌಕ್ತಿಕೋ | ಪಾಯವೇ | ದೋಕ್ತಸಮನಿಸುತಕೀರ್ತಿಕೊಡಿಸಿವಗೆ ಶ್ರೀ | ಕಾಂತ ಮೂರುತಿಯೇ2 ಪಾಂಚ ಭೌತಿಕ ದೇಹ | ಪಂಚತ್ವ ಪಡೆವುದನೆಸಂಚಿಂತನೆಯ ಕೊಟ್ಟು | ಪಂಚ ಪಂಚಾತ್ಮಾಮುಂಚೆ ತಿಳಿಸಿವಗೆ ಸ | ತ್ಪಂಚ ಭೇದ ಜ್ಞಾನವಾಂಛಿತಾರ್ಥದನಾಗೊ | ಅಂಚೆವಹಪಿತನೇ 3 ನಂದ ಮುನಿ ಮತದ ಮಕ | ರಂದ ಉಣಿಸುತ ಇವಗೆಸಂದೇಹ ಕಳೆದು ಆ | ನಂದಗಳ ನೀಯೋಇಂದಿರಾರಾಧ್ಯ ಪದ | ಮಂದಾಕಿನೀ ಜನಕಕಂದನನು ಕಾಪಾಡು | ಯೆಂದು ಪ್ರಾರ್ಥಿಸುವೇ 4 ಕಾಲ | ಯಾವ ಸಮಯದಲಿರಲಿದೇವತವ ಸಂಸ್ಮರಣೆ | ಭಾವದಲಿ ಮಾಳ್ವಾಭಾವ ಪಾಲಿಸುತಿವಗೆ | ನೀವೊಲಿಯ ಬೇಕೆಂದುದೇವ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವಿಠಲಾ ನಿನ್ನ ನಂಬಿದೆ ಎನ್ನ ಕಾಯೋ | ಪುಟ್ಟುವದು ಬಿಡಿಸೊ ಎನ್ನವರೊಳಗಿರಿಸೊ ಪ ಬಲುಕಾಲ ಮಲ-ಮೂತ್ರ ಡೊಳ್ಳಿನೊಳು ಬಿದ್ದು | ಹಲುಬಿದೆ ಒಂದಿಷ್ಟು ನೆಲೆಗಾಣದೆ ನಾನು || ಹಲವು ಮಾತೇನು ಎನಗೆ ಬಿಡದು | ಸಲಹಬೇಕಯ್ಯಾ ಸಮುದ್ರ ಶಯ್ಯಾ 1 ಕರ ಪಿಡಿದು ಎತ್ತುವ ಬಿರುದು ಪರಾಕ್ರಮ | ಮರಳಿ ಮಿಗಿಲೊಂದು ದೇವರಿಗೆ ಉಂಟೆ || ಮರೆವು ಮಾಡದೆ ಮಹಾದುರಿತವ ಪರಿ_ | ಹರಿಸು ಸ್ಮರಣೆಯನ್ನು ಇತ್ತು ಕೀರ್ತನೆ ಪೇಳಿಸೋ2 ಬಿನ್ನಹ ಲಾಲಿಸು ಚೆನ್ನ ಲಕುಮಿಪತಿ | ನಿತ್ಯ ಪ್ರಾಣನಾಥಾ ಅಭಯ ಹಸ್ತಾ || ಸಿರಿ ವಿಜಯವಿಠ್ಠಲರೇಯಾ | ಸನ್ನಿಧಿಯಲ್ಲಿ ಎನ್ನ ಸಂತೋಷಪಡಿಸೊ 3
--------------
ವಿಜಯದಾಸ
ವಿದ್ಯಾಕಾಂತಯತಿಗಳ ಕೀರ್ತನೆ ಕಾಪಾಡಬೇಕೆಂದು ಗೋಪಾಲ ಕೃಷ್ಣಗೆ ನೀ ಪೇಳಬಾರದೆ ರುಕುಮಿಣಿ ನೀ ಪೇಳಬಾರದೆ ಸತ್ಯಭಾಮ ಪ ಪಾಪ ಮಾಡುವನೆಂದು ಕೋಪ ಮಾಡಿದಿರೆಂದು ನಾ ಪಾದಪದುಮಕ್ಕೆ ಶರಣೆಂಬೆ ತಾಯೆ 1 ನಿಮ್ಮ ನುಡಿಗಳಿಂದ ಸಮ್ಮತಿಸುವ ದೇವ ಸುಮ್ಮನೆ ತಿಳಿಸೆನ್ನ ಹಡದಮ್ಮ ತಾಯೆ 2 ಏನೊ ಪೇಳಿದನೆಂದು ನೀನೂಪೇಕ್ಷಿಸದಲೆ ಜಾನಕಿದೇವಿ ಪೇಳೆ ರಘೂಪತಿಗೆ ತಾಯೆ3 ಪಾದ ನಂಬಿದವರಿಗೆ ಮೋದವ ಕೊಡುವಂಥ ವೇದವ್ಯಾಸಗೆ ರಮೆ ತಿಳಿ ಹೇಳೆ ತಾಯೆ 4 ವಿದ್ಯಾಕಾಂತನ ಮನವಿದ್ದಂತೆ ಒಲಿಯುವ ಸದ್ದಯಾನಿಧಿ ನಮ್ಮ ನರಸಿಂಹ ತಾಯೆ 5 (ವಿದ್ಯಾಕಾಂತತೀರ್ಥರು (1824) ವ್ಯಾಸರಾಜ ಮಠದ 16 ನೇ ಯತಿಗಳು)
--------------
ವ್ಯಾಸತತ್ವಜ್ಞದಾಸರು
ವಿನುತ ಸಿರಿ | ರಾಮ ವಿಠಲ ಕಾಯೋ ಪ ಈ ಸತೀ ಮಣಿಯ ನೀ | ಸಲಹಬೇಕೆಂದುಶೇಷ ಸಂಜ್ಞಿತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಅಮೃತ ಕೂರ್ಮ | ರೂಪದಿಂದರುಹೀಉಪದೇಶ ನೀಡ್ವಗುರು | ರೂಪವನೆ ತೋರಿಸುತಅಪರಿಮಿತ ಕಾರುಣ್ಯ | ರೂಪನಾಗಿರುವೆ 1 ಪರಮ ಗುರು ನಿಜ ರೂಪ | ಎರಡು ಬಾರಿಯು ತೋರಿಸರಸನಾಬ್ಯಾದಿ ಹರುಷ | ಬೀರ್ದೆ ಭಯಹಾರೀಕರುಣವೆಂತುಟೊ ನಿನಗೆ | ಸುರಸಿದ್ಧ ಸಂಸೇವ್ಯಶಿರಿ ರಮಣ ಶ್ರೀರಾಮ | ಪರಮ ಪುರುಷನೆ 2 ಈ ಸತೀಮಣಿ ಬಯಕೆ | ನೀ ಸಲಿಸಿ ಲೌಕಿಕದಿಲೇಸು ಹೊಲ್ಲೆಗಳೆಂಬ | ಪಾಶಗಳ ಬಿಡಿಸೀದೋಷ ದೂರನೆ ಹರಿಯೆ | ನೀ ಸಲಹೆ ಪ್ರಾರ್ಥಿಸುವೆದಾಶರಥೆ ಪೊರೆ ಇವಳ | ಮೇಶ ಮಧ್ವೇಶಾ 3 ಮಧ್ವಮಾರ್ಗದಿ ಇಹಳು | ಶುದ್ಧ ಭಕ್ತಿಜ್ಞಾನಸಿದ್ಧಿಸುತ ಇವಳಲ್ಲಿ | ಉದ್ಧರಿಸೊ ಹರಿಯೇ |ಕೃದ್ಧ ಖಳ ಸಂಹಾರಿ | ಸದ್ಧರ್ಮ ಪಥತೋರಿಅಧ್ವಯನೆ ತವ ನಾಮ | ಶುದ್ಧ ಸುಧೆ ಉಣಿಸೋ 4 ಸರ್ವವ್ಯಾಪ್ತನೆ ದೇವ | ಪವನಾಂತರಾತ್ಮಕನೆದರ್ವಿ ಜೀವಿಯ ಕಾಯೊ | ಶರ್ವವಂದ್ಯಾ |ಸರ್ವ ಸುಂದರ ಗುರು | ಗೋವಿಂದ ವಿಠ್ಠಲನೆಈ ವಿಧದ ಬಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ವಿಬುಧ ಪ್ರಿಯ ವಿಠಲ | ಶುಭದ ಪೊರೆ ಇವನಾ ಪ ಅಬುಜ ಜಾಂಡೋದರನೆ | ಕುಬುಜೆ ಸದ್ ವರದಾ ಅ.ಪ. ದಾಸನಾಗಲು ಇವಗೆ | ಆಶೆ ಪ್ರೇರಕನಾಗಿವಾಸು ದೇವಾಖ್ಯ ತೈ | ಜಸನೆ ಕಾರ್ಯರೂಪಿಸೂಸಿತವ ರೂಪವನು | ಲೇಸಾಗಿ ತೋರಿಸೆಹೆಕೇಶವನೆ ಅದನೆ ಉಪ | ದೇಶಿಸಿಹೆ ಹರಿಯೆ 1 ಪ್ರೀಯ ಅಪ್ರೀಯ ಉ | ಭಾಯಾನು ಭವದಲ್ಲಿಆಯುತನು ನೀನಾಗಿ | ಉದ್ವೇಗ ಕೊಡದೇನಿಯುತಕರ್ಮದಿ ರತನ | ದಯದಿಂದ ನೀಮಾಡಿಹಯಮೊಗಾಖ್ಯ ಹರಿಯೆ | ಕೈಯಪಿಡಿ ಇವನಾ 2 ಲೋಕವಾಕ್ಯದಿ ವಿರಸ | ಲೋಕೈಕನಾಥನುವಾಕ್ಯದೊಳು ರತಿಯನ್ನೆ | ನೀ ಕೊಟ್ಟಿ ಕಾಯೋ |ಮಾಕಳತ್ರನದಾಸ | ಸಂಕುಲದಿ ಸದ್‍ಭಕ್ತಿಶ್ರೀಕರನೆ ನೀನಿತ್ತು | ಸಾಕ ಬೇಕಿವನಾ 3 ಮಧ್ವಮತದಲಿ ದೀಕ್ಷೆ | ಶುದ್ಧ ಹರಿ ಗುರುಭಕ್ತಿಅದ್ವೈತ ಕ್ರಯವರಿಯೆ | ವಿದ್ಯೆ ಸಂಘಟಿಸೀಕೃದ್ಧಖಳ ನಿವಹಗಳ | ಪ್ರಧ್ವಂಸಗೈಯುತಲೀಉದ್ದರಿಸೋ ಇವನನ್ನು | ಮಧ್ವಾಂತರಾತ್ಮ 4 ವೇದ ಕದ್ದೊಯ್ದವನ | ಬಾಧೆ ನೀ ಪರಿಹರಿಸಿಸಾದುಗಳ ಪೊರೆದಂತೆ | ಆದರಿಸಲಿವನಾಮೋದಿ ಗುರು ಗೋವಿಂದ | ವಿಠಲನೆ ಬಿನ್ನವಿಪೆಮೈದೊರಿ ಸಲಹುವುದು | ಸಾಧುವಂದಿತನೇ 5
--------------
ಗುರುಗೋವಿಂದವಿಠಲರು
ವಿಶೇಷ ಆ ಹಣ್ಣು ಈ ಹಣ್ಣು ನೆನಸಿ ಫಲವೇನೆ ಈ ಹುಣಸೇಹಣ್ಣಿಗೆ ಸಮಬಾಹೋದೇನೆ ಪ ಹಡಗಿಂದ ಬಂದಿತು ಉತ್ತತ್ತಿ ಹಣ್ಣು ಬಡವರಿಗೆ ಬೇಕಾದ ಬಾಳೆಯ ಹಣ್ಣು ಕೂತರೆ ಏಳದು ಕುಂಬಳದ್ದಲ್ಲ ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 1 ಮಕ್ಕಳು ಬಯಸುವ ಚಕ್ಕೋತ ಹಣ್ಣು ಸಕ್ಕರೆ ಸವಿಯಾದ ಅನಾಸಿನ ಹಣ್ಣು ರುಚಿ ಹಲಸಿನ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 2 ದಾಹವಡಗಿಸುವದು ದ್ರಾಕ್ಷಿಯ ಹಣ್ಣು ದೊರೆಗಳು ತಿನ್ನುವ ದಾಳಿಂಬೆ ಹಣ್ಣು ಫರಂಗಿಯರು ತಿನ್ನುವ ಪನ್ನೇರಳೆ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 3 ಅತಿಮಧುರವಾದ ಕಿತ್ತಲೆ ಹಣ್ಣು ಯತಿಗಳಿಗಾನಂದ ಸೀತಾಫಲದ್ಹಣ್ಣು ಅತಿರುಚಿಯಾದ ಅಂಜೂರದ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 4 ಮಾನವಂತರು ತಿನ್ನುವ ಮಾವಿನ ಹಣ್ಣು ಜ್ಞಾನಿಗಳಿಗೆ ರಾಮನಾಮದ ಹಣ್ಣು ದೀನಜನರು ತಿಂಬ ಮೂಸುಂಬೆ ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 5 ಅಪರೂಪದಲಿ ಬೆಳೆದ ಮಾದಳದ್ಹಣ್ಣು ಕಪಿಗಳು ತಿನ್ನುವ ಸೀಬೆಯ ಹಣ್ಣು ತಪಸ್ವಿಗಳಾಹಾರ ಜಂಬುನೇರಳೆಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 6 ಪರಿ ಔಪಧಕೆ ಹೆರಳೆಯ ಹಣ್ಣು ಮರ್ಯಾದೆಗೆ ಕೊಡುವ ನಿಂಬೆಯ ಹಣ್ಣು ಪರಮ ರೂಪಿಯಾದ ಕರಬೂಜದ್ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 7 ಬಡವರಿಗೂ ಈ ಹುಣಸೇ ಹಣ್ಣಿರಬೇಕು ಬಲ್ಲಿದರಿಗೂ ಹುಣಸೇ ಹಣ್ಣಿರಬೇಕು ರುಚಿ ಎಲ್ಲ ಜನರುಗಳು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 8 ಹುಣಸೇಹಣ್ಣಿಲ್ಲದೆ ಭಾಂಡ ಶುದ್ಧಿಗಳಿಲ್ಲ ಹುಣಸೇ ಇಲ್ಲದೆ ಸ್ವಯಂಪಾಕ ರುಚಿಯು ಇಲ್ಲ ಹುಣಸೇ ಮರಕ್ಕಿಂತ ಗಟ್ಟಿ ಮರಗಳಿಲ್ಲ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 9 ಹುಣಸೇಕಾಯಿಯ ಕುಟ್ಟಿ ರಸವ ಮಾಡುವರು ಹುಣಸೇಹಣ್ಣನು ಕುಟ್ಟಿ ಅಣಿಮಾಡಿಡುವರು ಹುಣಸೇಹಣ್ಣಿನ ಬೆಲೆ ಮುಗಿಲಿಗೇರಿರಲು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 10 ಹರಿಯ ಅಪ್ಪಣೆಯಂತೆ ಹುಣಸೆಯ ಮರಹುಟ್ಟಿ ಪರರಿಗೆ ಉಪಕÀರಿಸುವದಿದು ಹರಿಯಾಜ್ಞೆ ವರದ ಶ್ರೀ ಹರಿ ಕಮಲನಾಭ ವಿಠ್ಠಲನಿಚ್ಛೆ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 11
--------------
ನಿಡಗುರುಕಿ ಜೀವೂಬಾಯಿ
ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ