ಒಟ್ಟು 7308 ಕಡೆಗಳಲ್ಲಿ , 133 ದಾಸರು , 4284 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣ ಪಾಲಿಸು ಪರಮ ಕೃಪಾಲಯ ಪ. ಪಾಲಿಸು ನಿನ್ನಯ ಬಾಲನು ಬೇಡುವ ಬಯಕೆಯ ಲಕ್ಷ್ಮೀ- ಲೊಲ ನೀ ಕರದು ತಾರಾಕೆಯ ಅ.ಪ. ತುರುವು ಮೊಲೆಯನುಂಬ ಕರುವಿನ ಬೆನ್ನನು ತುರಿಸುತ ತಿರುಗುವ ತೆರದಲಿ ನೀ- ನಿರುವಿಯೆಂದರಿದೆನು ಮನದಲಿ ಚರಣ ಪಂಕಜಗಳ ಶರಣ ಹೊಕ್ಕೆನ್ನನು- ದ್ಧರಿಸು ಶ್ರೀಕಾಂತ ಗುಣದಲಿ ಸ್ವೀ- ಕರಿಸುತ ನನ್ನ ನಿನ್ನ ಕೆಲದಲ್ಲಿ 1 ಖಗರಾಜ ಭೂಧರವರ ನಾಗಭೂಷಣ ಶಕ್ರ ಪೂಜಿತ ನಿನ್ನಾ- ವಾಗ ಕಾಂಬೆನು ಗೃಹರಾಜಿತ ಮೂಗಭಾವದ ತಪ್ಪ ಮನಕೆ ತರುವರೆ ಮ- ಹಾ ಗಣಪತಿ ಶಬ್ದ ವಾಚ್ಯನೆ ಎನ್ನ ಬೇಗ ಕರೆಸು ಸರ್ವಾಧ್ಯಕ್ಷನೆ 2 ಎಲ್ಲವು ನಿನಗೊಪ್ಪಿಸುವೆ ಎಂಬುದ ನೀ ಬಲ್ಲಿ ಶ್ರೀಭೂರಮೆನಲ್ಲನೆ ಎನ- ಗಿಲ್ಲ ಭಾರವು ಜಗಮಲ್ಲನೆ ತಲ್ಲಣ ಬಿಡಿಸಿ ಪಾಲಿಸು ಶಿರದಲಿ ಪದ ಪಲ್ಲವನನು ವೆಂಕಟೇಶನೆ ಸರಿ- ಯಲ್ಲ ನಿನಗೆ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಷ್ಣತಾತ ಮ'ಪತಿರಾಯರ ಭಜಿಸೊಅಭಿಮಾನವ ತ್ಯಜಿಸೊ ಅನುಮಾನವ ತ್ಯಜಿಸೊ ಪರಾಜವೈಭವದ ಭೋಗಗಳನುಭ'ಸಿ ಶ್ರೀ ಹರಿಯ ಸ್ಮರಿಸಿಭೋಗದೊಳಗೆ ತ್ಯಾಗದ ಪಾಠವ ಕಲಿಸಿ ಕೊಡುಗೈದೊರೆಯೆನಿಸಿಯೋಗಬಂದತಕ್ಷಣ ವೈಭವ ತ್ಯಜಿಸಿ ಯೋಗಿಯನಾಶ್ರೈಸಿಯೋಗಾಭ್ಯಾಸದಿ ಬೇಗ ಹರಿಯ ಒಲಿಸಿ ಅವನೊಳು ಮನಬೆರೆಸಿ 1ಹರಿಯಧ್ಯಾನಕನುಕೂಲವಾದ ಮೆಟ್ಟಾ ಹುಡಕುತುತಾಹೊರಟಾವರಕಾಖಂಡಿಕಿ ಕ್ಷೇತ್ರದಿ ಕಾಲಿಟ್ಟಾ 'ಶ್ರಾಂತಿಗೆ ಕುಳಿತಾಅರೆನಿ'ುಷದಿ ಹರಿಧ್ಯಾನದಿ ಮೈಮರೆತಾ ಸಮಾಧಿ ಇಳಿಯುತಾವರೃಮುನಿಗಳು ತಪವಗೈದಮೆಟ್ಟಾ ಎನುತಲಿಯೆ ನಿಂತಾ 2ಹಗಲು ಇರಳು ಹರಿಧ್ಯಾನದಿ ತಾ ಮುಳುಗಿ ಅಲ್ಲಿರುತಿರಲಾಗಿ ನಗೆ ಮುಖದಲಿ ಝಗಝಗ ಕಾಂತಿಯು ಬೆಳಗಿ ಸುತ್ತಲು ಬೆಳಕಾಗಿಜಗದಜನಕೆ ಅದು ಅತಿ ಅಚ್ಚರಿಯಾಗಿ ಯೋಗಿಗೆ ಶಿರಬಾಗಿಬಗೆ ಬಗೆ ಭಕುತರು ಬಂದರು ತಾವಾಗಿ ಮ'ಪತಿಮಹಾಯೋಗಿ 3ಅಷ್ಟಸಿದ್ಧಿಗಳು ನೆಲೆಸಿದವಾಗಲ್ಲಿ ಆಶ್ರಮ ಬಾಗಿಲಲಿಎಷ್ಟು ಭಕುತಿಜನ ಬಂದರು ಸ'ತಲ್ಲಿ ಇಷ್ಟಾರ್ಥ ಕರದಲಿಮೃಷ್ಟಾನ್ನ ಭೋಜನ ಪ್ರತಿದಿನದಲ್ಲಿ ನಡೆುತು ಸಮತೆಯಲಿಇಷ್ಟವಾದ ಆಧ್ಯಾತ್ಮಿಕ ಮಾರ್ಗದಲಿ ಉಪದೇಶ ಪಡೆಯುತಲಿ 4
--------------
ಭೂಪತಿ ವಿಠಲರು
ಕೃಷ್ಣನ ಮೂರ್ತಿಯ ಮನದಿ ನೆನೆವುದುತೃಷ್ಣೆಯ ಬಿಡಿಸುವುದು ಎನ್ನ ಘನ್ನ ತೃಷ್ಣೆಯ ಪ. ಕುಂಡಲ ತತಿಯ ಈ ಚೆಲ್ವಿನಸದ್ರತ್ನತಿಲಕದ ಸೊಬಗನ ಕಂಡೆರಗದವನಾವ ಸುಖಿ ಗೋಕುಲದೊಳಗಿದ್ದ ಮಾನವನೆ ಸುಖಿ ಅಮ್ಮ ನಮ್ಮ 1 ಬೊಮ್ಮ ನೋಡು ನೋಡು2 ವರ್ತುಳೋರು ಜಾನು ಜಂಘಗಳ ಸಂ-ಪತ್ತ ನೋಡು ಕರಿಕರದರತ್ನದರ್ಪಣದ ಕಾಮನ ಬೆನ್ನಿಲೊಪ್ಪುವಬತ್ತಳಿಕೆಯ ಚೆಲುವ ಪೋಲುವ ಬೆರ-ಳರ್ಥಿಯಿಂದಲಿ ಪೊಳೆವ ಚಿತ್ರ ಚಾರಿತ್ರಚಿತ್ತಜನಯ್ಯನ ಚರಣಕಮಲವೆನ್ನಚಿತ್ತದಿ ನೆಲೆಸಿಪ್ಪುದು ಅದರಿಂದ ಸ-ರ್ವತ್ರ ಸುಖವು ತಪ್ಪದು ಹಯವದನ್ನ3
--------------
ವಾದಿರಾಜ
ಕೃಷ್ಣಮೂರುತಿ ಎನ್ನ ರಕ್ಷಿಸೈ ಕಾರುಣ್ಯನಿಧೆ ಸಿರಿ ಕೃಷ್ಣಮೂರುತಿ ಎನ್ನ ರಕ್ಷಿಸೈ ಪ ನಾಗೇಂದ್ರಶಯನನೆ ನಾಗೇಂದ್ರ ಮರ್ದನನೆ ನಾಗೇಂದ್ರಗೊಲಿದವನ್ಹಾಗೆ ನಾನಲ್ಲವೇನೊ 1 ತಾಪಸಸತಿ ಶಿಲಾರೂಪವ ಪೊಂದಿರಲು ಶಾಪ ಬಿಡಿಸಿ ಅವಳ ಕಾಪಾಡಲಿಲ್ಲವೇನೊ 2 ಆ ನೀಚನಿಂದ ಯಜ್ಞಸೇನೆಗೆ ಬಂದ ಮಾನ ಹಾನಿ ತಪ್ಪಿಸಿ ಅಭಿಮಾನಿಸಿ ರಕ್ಷಿಸಿದ 3 ಇಂದಿರೆಯರಸನೆ ವಂದಿಸಿ ಬೇಡುವೆನೊ ಎಂದಿಗು ಎನ್ನ ಹೃದಯಮಂದಿರ ಬಿಡದಿರೊ 4 ವರನಾಮಗಿರಿ ಸಿರಿನರಹರಿಮೂರುತಿಯ ಚರಣಸೇವಕನೆಂದು ಕರುಣ ಎನ್ನೊಳಗಿಟ್ಟು 5
--------------
ವಿದ್ಯಾರತ್ನಾಕರತೀರ್ಥರು
ಕೃಷ್ಣಾ - ಶ್ರೀಕೃಷ್ಣಾ ಪ ಕೃಷ್ಣ ಕೃಷ್ಣ ಹರಿವೃಷ್ಟಿ ಕುಲೋದ್ಭವಸೃಷ್ಟಿ ಕರ್ತ ಹೃತ್ಪುಷ್ಕರ ನಿಲಯ ಅ.ಪ. ವಲಲ ಸಂರಕ್ಷಕ | ಅಲವ ಭೋದನುತಕಲಿಮಲ ಕಲುಷಹ | ನಳಿನೇಕ್ಷಣಪಾಹಿ 1 ನಂದನ ಕಂದ ಮು | ಕುಂದನೆ ಮಾಧವಸಿಂಧು ಶಯನ ಕೃಷ್ಣ | ಮಂದರೋದ್ಧಾರಿ 2 ಕರ | ಪರಿಗ್ರಹಿಸಿದನೇ 3 ಚಿತ್ತಜಾರಿ ಸಖ | ವಿತ್ತವನೊಲ್ಲೆನೊಭೃತ್ಯನ ಗೈ ಸ | ರ್ವೋತ್ತಮ ದೇವ 4 ಪಾಪಿಯು ಎನೆ ನಾ | ಶ್ರೀಪತಿ ನಿನ್ನನುನಾಪೊಂದಲು ಆ | ಪಾಪೆಲ್ಲಿ ಹುದೋ 5 ಕಾಮಪಿತನೆ ಸ | ದ್ಭೂಮ ಗುಣಾರ್ಣವಪಾಮರ ಮನುಜನ | ಪ್ರೇಮದಿ ಸಲಹೋ6 ಶಿರಿ ಸಹ ಗುರು ಗೋ | ವಿಂದ ವಿಠಲ ಹೃತ್‍ಸರಸಿಜ ಪೀಠದಿ | ದರುಶನ ವೀಯೋ7
--------------
ಗುರುಗೋವಿಂದವಿಠಲರು
ಕೃಷ್ಣಾತೀರದಿ ಕುಳಿತಿಷ್ಟವ ಸಲಿಸುವನ್ಯಾರೇ ಪೇಳಮ್ಮಯ್ಯ ಪ ಕಷ್ಟರಹಿತ ಸಂತುಷ್ಟರೆನಿಪ ಸತ್ಯೇಷ್ಟತೀರ್ಥ ಕರಜಪರಾಕ್ರಮರೇ ಅ.ಪ. ಬೋಧ ಮುನಿಯು ಮತ ಶುಭವಾರಿಧಿ ತಾರಕೆ ತಾರೆನೆನಿಪ ಜೀವತಾರ ಶಶಿಕಾಣಮ್ಮ 1 ಶುಭ ತಿಲುಕಾಂಕಿತದಿಂದೊಪ್ಪುವನ್ಯಾರೆ ಪೇಳಮ್ಮಯ್ಯಚಂದ್ರಕಂಠಮಾಲೆ ಕರದಿ ದಂಡವ ಧರಿಸಿಹನ್ಯಾರೆ ಪೇಳಮ್ಮಯ್ಯ ಚಂದ್ರಚರಣ ನಖಶಿಖ ಪರಿಪೂರ್ಣದಿಂದೊಪ್ಪುವ ಗುರುವರ್ಯ ಕಾಣಮ್ಮ 2 ವೃಂದಾವನವರ ಮಂದಿರ ಮಧ್ಯದಿ ರಾಜೀವನ್ಯಾರೇ ಪೇಳಮ್ಮಯ್ಯ ವೃಂದಾರಕ ವರವೃಂದ ವಿನುತನ್ಯಾರೆ ಪೇಳಮ್ಮಯ್ಯ ವೃಂದಾವನ ಸುಂದರ ಗುಣಗಳಿಂಧೊಳೆ ಯುವನ್ಯಾರೆ ಪೇಳಮ್ಮಯ್ಯ ವೃಂದಾವನದೊಳಗಾಶ್ರಿತ ತಂದೆವರದಗೋಪಾಲವಿಠಲನಸೇವಿಪರೇ 3
--------------
ತಂದೆವರದಗೋಪಾಲವಿಠಲರು
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೆಟ್ಟ ಕೇಡನೇನ ಹೇಳಲಿ ಎನ್ನ-ದೃಷ್ಟದಿ ಪಡೆದಿದ್ದ ಫಲವಷ್ಟೇ ಅಮ್ಮ ಪ ಸತಿಯ ಸಂಗ ಕೆಟ್ಟೆ ಸಕಲ ವರ್ತನೆಗೆಟ್ಟೆಸುತರು ಬೇಕೆಂಬ ಸಂತಸಗೆಟ್ಟೆಮತಿಯ ವಿಚಾರಗೆಟ್ಟೆ ಮನದ ವಾಸನೆಗೆಟ್ಟೆಖತಿಯು ಎಂಬುದ ಕೆಟ್ಟೆ ಕಾಮಗೆ ಮೊದಲು ಕೆಟ್ಟೆ 1 ಮನೆವಾರ ನೇಮಗೆಟ್ಟೆ ಮನೆ ತಾಪತ್ರಯ ಕೆಟ್ಟೆಘನಭೋಗ್ಯ ಭಾಗ್ಯ ಕೆಟ್ಟೆ ಸರ್ವವ ಕೆಟ್ಟೆತನು ತಾನೆಂಬುದು ಕೆಟ್ಟೆ ತಳ್ಳಿ ತಗಾದೆ ಕೆಟ್ಟೆಜನರ ಕೂಡಿ ಕೆಟ್ಟೆ ಜಡ ಜೀವ ಕೆಟ್ಟೆ2 ವಿಧಿ ನಿಷೇಧ ಕೆಟ್ಟೆಫಲದ ತೋರಿಕೆಗೆಟ್ಟೆ ಪರರ ನಿಂದ್ಯ ಕೆಟ್ಟೆ3 ಭಂಗ ಕೆಟ್ಟೆಅಹಿತತ್ವವನು ಕೆಟ್ಟೆ ಅಂಗಡಿಯನು ಕೆಟ್ಟೆಮಹಿಮೆ ಎಂಬುದ ಕೆಟ್ಟೆ ಮಹಾ ಸುಖ ದುಃಖ ಕೆಟ್ಟೆ 4 ನಿತ್ಯ ಪ್ರಧಾನ ಕೆಟ್ಟೆಜೀಯ ಚಿದಾನಂದನಾಗಿ ಜನ್ಮಗೆಟ್ಟೆ 5
--------------
ಚಿದಾನಂದ ಅವಧೂತರು
ಕೆಡದಿರು ಮೂಢ ಮನುಜ ಪ ಚೈತನ್ಯ ಸಾಲದು ಕಾಯಕಂ ಮುಸುಕಲು ಚೆನ್ನಾಗಿ ಮಾಡುಲದುಸಾಫಲ್ಯವು 1 ಶ್ವಾನ ಸೂಕರನಂತೆ ಸಂಚರಿಸುತ ಇಲ್ಲದೆ ಕಾಲವನು ಕಳೆವರ 2 ಸದ್ಗುರುಗಳ ಕಟಾಕ್ಷದಿಂದ ಭಜಿಸಲಪ್ಪುದು ಮೋಕ್ಷಪದವಿ 3
--------------
ಕವಿ ಪರಮದೇವದಾಸರು
ಕೆಡಬೇಡವೋ ಎಲೆ ಕರ್ಮಿ ಮನುಜ ನೀಕೆಡದಿಹ ಪಥವ ಕೇಳಿನ್ನು ಪ ಹಿಂಡು ಹಿಂಡು ಸಂದಳಿಯ ಬಿಡು ಇನ್ನು 1 ಬಹುಗೃಹ ಕಟ್ಟಿದೆ ದಿಕ್ಕಿಲ್ಲವೆಂಬೆ ಬಹು ಗೃಹವನು ಸುಡಲೆನ್ನುಇಹುದಿದು ದ್ರವ್ಯವು ಇದಕೇನೆಂಬೆಯ ಇಹುದನು ಧರ್ಮವ ಮಾಡಿನ್ನುದಾಹದಿ ಗಳಿಸಿದೆ ಆಸ್ತಿಯನೆಂಬೆಯ ಸಜ್ಜನರಿಗೆ ಕೊಳ್ಳೆನ್ನುಇಹೆ ನಾಲಕು ದಿನ ಎಂಬ ಭ್ರಮೆಯನು ಇಡು ಪಾದರಕ್ಷೆಯೊಳಿನ್ನು 2 ಮತಿವಂತರು ಆರಿಲ್ಲವೆಂಬೆಯ ಮತಿಗೆ ಶಿವ ತಾನಿಹೆನೆನ್ನುಗತಿಯೇನಿನ್ನು ಈ ಕುಟುಂಬಕೆಂಬೆಯ ಗತಿಯಿದ್ದಾಗುವುದೆನ್ನುಅತಿ ಋಣ ಭಾರವು ಆಗಿಹುದೆಂಬೆಯ ಆರಿಗೆ ಋಣ ಎಂದೆನ್ನುಸುತರಿಲ್ಲ ತನಗೆ ಗತಿಯಿಲ್ಲವೆಂಬೆಯ ಸುತರಿಂದ ಗತಿಯು ಸಾಕಿನ್ನು 3 ಪರ ಬ್ರಹ್ಮವ ನೋಡುತ ಸುಖದಲಿ ಆನಂದದಿ ಮಲಗಿನ್ನು4 ನಿರಂಜನ ನಿರವಯ ನಿತ್ಯನು ಬೇರಿಲ್ಲೆನ್ನುಪ್ರತ್ಯಗಾತ್ಮ ಪರಾತ್ಪರ ಪರತರ ಪ್ರತ್ಯಗೆ ತಾನಹುದೆನ್ನುಚಿತ್ತಿನ ಪ್ರಭೆಯದು ಢಾಳಿಸುತಿರುತಿರೆ ಚಿತ್ತವಲಯ ಮಾಡಿನ್ನುಪ್ರತ್ಯಗಾತ್ಮ ಚಿದಾನಂದನ ನೆನೆಯುತ ಪ್ರಾಣವ ಕಳೆಯಿನ್ನು 5
--------------
ಚಿದಾನಂದ ಅವಧೂತರು
ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದುನೆಂಪು ಬಲ್ಲವರು ಪೇಳಿ ಪ ಹಂಪೆಯ ವಿರೂಪಾಕ್ಷ ಲಿಂಗನಲ್ಲಿಝಂಪೆಯನಾಡುತಿಹುದು ಅ ಆರು ತಲೆ ಹದಿನಾರು ಕಣ್ಣುಗಳುಂಟುಮೂರು ಮೂರು ನಾಲಗೆಬೇರೆ ಹನ್ನೆರಡು ಕಣ್ಣು ಕಿವಿಗಳುಂಟುಸೇರಿತು ತೆಂಕಲಾಗೆ 1 ಬಲೆಯ ಬೀಸಿದರು ಸಿಕ್ಕದಾ ಮೃಗಜಲದೊಳು ತಾ ನಿಲ್ಲದುನೆಲನ ಮೇಲಿರುವುದು ನಿಂತರೆ ಸಾವುದು ಕುಲದೊಳಗಾಡುತಿಹುದು 2 ಸಕಲ ಕಲೆಯು ಬಲ್ಲ ಸೀತಳ ಮಲ್ಲಿಗೆಬೇರೆ ಬೇರೆನಬಹುದುಚೆನ್ನ ಕೇಶವನಲ್ಲಿ ಕೃಪೆಯುಂಟಾದರೆಅಲ್ಲುಂಟು ಇಲ್ಲಿಲ್ಲವೆ 3
--------------
ಕನಕದಾಸ
ಕೆರೆಯನು ದಾಟಲು ಅರಿಯದ ಜನ ಭವ ಶರಧಿಯ ದಾಟುವರೇ ಶ್ರೀ ನರಹರೆ ಪ ಕರವ ಪಿಡಿಯದಿರೆ ತೊರೆಯ ಸೇರಲಳವೆ ಈ ಧರೆಯೊಳು ಅ.ಪ ಹಲವು ಜನ್ಮಗಳಲಿ ಗಳಿಸಿದ ಅಘಗಳ ಅಲೆಗಳೊಳಗೆ ಸಿಲುಕಿ ಸಂತತ ಮುಳುಗಿ ಮುಳುಗುತ ಕಟುಜಲಗಳ ಕುಡಿಯುತ ನಳಿನನಾಭ ನಿನ್ನೊಲಮೆಯಿಂದಲ್ಲದೆ1 ಕಾಮ ಕ್ರೋಧ ಮದ ಲೋಭ ಮೋಹ ಮತ್ಸರಗಳೆಂಬ ವಿವಿಧ ಜಲಚರ ನಕ್ರ ತಿಮಿಂಗಿಲವಿರಲಾಗಿ ಕಾಮಜನಕ ನಿನ್ನ ಪ್ರೇಮವÀ ಪೊಂದದೆ 2 ಚೂರ್ಣಗಳಾದುವು ವಿವಿಧ ನಾವೆಗಳೀ ಅರ್ಣವದಲಿ ಸಿಲುಕಿ ಸುಲಭದಿ ಪೂರ್ಣ ಪ್ರಮತಿಗಳ ಮತವನರಿತು ಇನ್ನ ಪೂರ್ಣ ಪ್ರಸನ್ನತೆ ನಾವೆಯಿಂದಲ್ಲವೆ 3
--------------
ವಿದ್ಯಾಪ್ರಸನ್ನತೀರ್ಥರು
ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ ಕೊಳಲನೂದುವ ಬಗೆಯ ನಳಿನಜಾಂಡವು ತಾನೆ ತಲೆದೂಗುತಲಿದೆ ಕುಳಿತಿರೆ ವಶವಲ್ಲವೆ ಪ ಸರಸಿಜ ನಯನಾಳೆ ಧರೆಯ ಭಾಗ್ಯವ ನೋಡೆ ತರುಗುಲ್ಮಾಲತೆ ನೆವದಿ ಭರದಿ ಪುಲಕಿತಳಾಗೆ ಪರಿಪರಿ ಸುಮದಿಂದ ನೆರೆ ನಸುನಗುತಿಪ್ಪ ಮರುಳೆ ಕಣ್ಣಿಲಿ ನೋಡೆ ವರ ವಿಮಾನಗಳು ಸಂ- ಚರಿಸಿ ಮೆರೆವ ವೈಭವ ಧರೆಯೆಲ್ಲಾ ತಿಳಿಯದು ಲೋಲ್ಯಾಡದೆ ಬಿಡರು 1 ವಾಮಾಲೋಚನೆ ಸುರರ ಧಾಮಾವೆಂಬಿಯಾ ಇದು ಕಾಮತನಯ ಕಾಮದೇವ ಸೋಮಶೇಖರ ತಾನು ತಾಮರಸಾಸನ ಪ್ರೇಮಾದಿ ನಲಿಯುವ ಆ ಮಹರಾದಿ ಲೋಕವೆ ಸಾಮಜಗಮನೆ ಕೇಳೆ ನೀ ಮರುಳಾಗ ಬ್ಯಾಡಾ ಆ ಮುಕುತಿ ಸ್ಥಾನವೆ ಸೇವೆ ಮಾಡುವರು 2 ದೂರ ಜನರಿಗೆ ಸಾಲೋಕ್ಯ ಊರಲಿಪ್ಪರಿಗೆ ಸಾಮೀಪ್ಯ ಗೋರಕ್ಷಕರಿಗೆ ಸಾರೂಪ್ಯ ಸೇರಿದ ಯುವತಿಗೆ ಭರದಿ ಸಾಯುಜ್ಯವೆ ಮೀರಿದೆ ಮುಕುತಿಗಿದು ಭಾರಿ ಭಾರಿಗೆ ಸಾಮಾ ಪೂರೈಸಿ ಮುಕುತರು ತೋರುವರಿಲ್ಲಿ ಆನಂದ ಈ ರಭಸದಿ ವೇಣು ಪೂರೈಸಿ ಸುಖವೀವ ಧೀರ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಕೇಶವ ಕೇಶವನೆಂದು ನುಡಿಯಲು ಕ್ಲೇಶ ತೊಲಗುವುದು ಮಾಧವ ಮಾಧವನೆಂದು ನುಡಿಯಲು ಮಾದರಿಯಲ್ಲಿದ ಮೋದವ ಪೊಂದುವಿ 1 ಗೋವಿಂದ ಗೋವಿಂದನೆಂದು ನುಡಿಯಲು ಎಂದಿಗೂ ತೋರದ ನಂದವ ಪೊಂದುವಿ ವಾಮನ ವಾಮನನೆಂದು ಪೊಗಳಲು ತಾಮಸವಿಲ್ಲದೆ ಕಾಮಿತ ಪೊಂದುವಿ 2 ಶ್ರೀಧರ ಶ್ರೀಧರನೆಂದು ನುಡಿಯಲು ಈ ಧರೆಯೊಳು ನಿನಗೆ ಖೇದವೆಲ್ಲಿಯದು ಅಚ್ಚುತ ಅಚ್ಚುತನೆಂದು ಪೊಗಳಲು ಉಚ್ಚ ಕುಲದಿ ನೀ ಮೆಚ್ಚಿಗೆ ಪೊಂದುವೆ 3 ನರಹರಿ ನರಹರಿಯೆಂದು ನುಡಿಯಲು ಪರತರ ಸುಖವನು ನಿರುತವು ಪೊಂದುವಿ ಶ್ರೀ ಕೃಷ್ಣನೆಂದು ಪೊಗಳಲು ಕಷ್ಟವಿಲ್ಲದೆ ನೀ ಇಷ್ಟವ ಪೊಂದುವಿ 4 ರಾಘವ ರಾಘವನೆಂದು ಪೊಗಳಲು ನೀಗುವೆ ಸುಲಭದಿ ಅಘಗಳೆಲ್ಲವನು ಭಾರ್ಗವನೆನಲು ಪ್ರಸನ್ನನಾಗಿ ಹರಿ ದುರ್ಗಮ ಮೋಕ್ಷಕೆ ಮಾರ್ಗವ ತೋರುವ 5
--------------
ವಿದ್ಯಾಪ್ರಸನ್ನತೀರ್ಥರು
ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ ವಾಸವಾದಿಗಳ ವಂದ್ಯ ಸೀತಾಪತೆ 1 ನಾರಾಯಣ ಸಕಲವೇದಪಾರಾಯಣ ಕೃಷ್ಣ ನಾರದಾದಿಗಳ ವಂದ್ಯ ಸೀತಾಪತೆ 2 ಮಾಧವ ಮಂಗಳಗಾತ್ರ ವೇದವನ್ನೆ ಕದ್ದು ಒಯ್ದ ಆ ಖಳನ ಕೊಂದೆ ಸೀತಾಪತೆ 3 ಗೋವಿಂದ ಗೋಕುಲಬಾಲ ಗೋಪಿಯರ ಮನೋಹರ ಆದಿ ಕೂರ್ಮಾವತಾರ ಸೀತಾಪತೆ 4 ವಿಷ್ಣುವೆ ಯತಿಗಳ ವಂದ್ಯ ಅಷ್ಟಲಕ್ಷ್ಮಿಯರ ನಾಥ ದಿಟ್ಟ ವÀರಾಹರೂಪನಾದ ಸೀತಾಪತೆ 5 ವೈರಿ ಯದುಕುಲಕ್ಕೆ ತಿಲಕನಾದ ಚೆಲುವನಾದ ಹರಿ ನೀನೆ ಸೀತಾಪತೆ 6 ತ್ರಿವಿಕ್ರಮರೂಪನಾಗಿ ತ್ರಿಜಗವನ್ನೆ ಪಾಲಿಸಿದ ವಾಮನರೂಪಿ ನೀನೆ ಸೀತಾಪತೆ7 ವಾಮನರೂಪವ ತಾಳಿ ಆ ಮಹಾಬಲಿಯನ್ನೆ ತುಳಿದು ನೇಮದಿ ಕ್ಷತ್ರೇರ ಕೊಂದ ಸೀತಾಪತೆ 8 ಶ್ರೀಧರ ನೀನೆಂದೆನಿಸಿ ಶೋಷಿಸಿ ಖಳg Àನೆಲ್ಲ ಜಾನಕಿಯ ತÀಂದ ರಾಮ ಸೀತಾಪತೆ 9 ಹೃಷೀಕೇಶ ನೀನೆಂದು ಋಷಿಗಳು ಸ್ತುತಿಯ ಮಾಡಿ ವಸುದೇವಸುತ ಕೃಷ್ಣ ಸೀತಾಪತೆ 10 ಬುದ್ಧಾವತಾರ ಕೃಷ್ಣ ಸೀತಾಪತೆ 11 ದಾಮೋದರನೆಂದು ನಿಮ್ಮ ದೇವತೆಗಳೆಲ್ಲ ಕರೆಯೆ ಆ ಮಹಾ ಕಲ್ಕ್ಯ್ಕನಾದ ಸೀತಾಪತೆ 12 ಸಂಕರುಷಣ ದೇವ ನಿಮ್ಮ ಕಿಂಕರರು ನಾವೆಲ್ಲರಯ್ಯ ಪಂಕಜಾಸನವಂದ್ಯ ರಾಮ ಸೀತಾಪತೆ 1 3 ವಾಸುದೇವ ನಿಮ್ಮ ಪಾದಕ್ಕೆ ವಂದನೆಯ ಮಾಡುವೆನಯ್ಯ ದೋಷರಾಶಿ ನಾಶಮಾಡು ಸೀತಾಪತೆ 1 4 ಸುರರು ಎದ್ದು ನಿನ್ನೆ ಪೊಗಳುತ್ತಿರೆ ಉದ್ಧಾರ ಮಾಡಿದ ದೇವ ಸೀತಾಪತೆ 15 ಅನುದಿನ ನಿನ್ನ ಕರೆಯೆ ಅನಿಮಿತ್ತಬಂಧು ಕೃಷ್ಣ ಸೀತಾಪತೆ 16 ಮನೋಹರುಷ ನೀಡಿದ ರಾಮ ಸೀತಾಪತೆ 17 ಅಧೋಕ್ಷಜ ಲೋಕಗಳಿಗೆ ಆಧಾರಭೂತನಾ ಗಿರುವೆ ವೇದವೇದ್ಯರಾಮ ಸೀತಾಪತೆ 18 ಬೋಧನೆಯನ್ನು ಮಾಡಿದ ಸೀತಾಪತೆ 19 ಅಚ್ಯುತ ವಿಶ್ವಾಮಿತ್ರ ಅತಿಶಯ ಯಾಗವ ಕಾಯ್ದ ಭಕ್ತವತ್ಸಲ ರಾಮ ಸೀತಾಪತೆ 20 ಜನಾರ್ದನರೂಪನಾಗಿ ಜಾನಕಿಯ ತಂದ ಜಾಹ್ನವೀಜನಕ ರಾಮ ಸೀತಾಪತೆ 21 ಉಪೇಂದ್ರನೆ ಉದ್ಧÀವಗೆ ಉಪದೇಶವನೆ ಮಾಡಿ ಅಪರಿಮಿತಪದವಿ ಕೊಟ್ಟ ಸೀತಾಪತೆ 22 ಕಾಲ ತಪವ ಮಾಡಿ ಚರಿಸುವರಿಗೆ ಮೋಕ್ಷವಿತ್ತೆ ಸೀತಾಪತೆ 2 3 ರÀಕ್ಷಿಸಯ್ಯ ಕೃಷ್ಣ ರಾಮ ರಕ್ಷಿಸಯ್ಯ ಹಯವದನ ಪಕ್ಷಿವಾಹನ ರಾಮ ಸೀತಾಪತೆ 24
--------------
ವಾದಿರಾಜ