ಒಟ್ಟು 4668 ಕಡೆಗಳಲ್ಲಿ , 127 ದಾಸರು , 3353 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರಹರಿಯೇ ಪಾಲಿಸೋ ಪ ಪರಮ ಪುರಷ ಪ್ರಹ್ಲಾದ ವರದ ಅ.ಪ ಕನಲಿ ಕಂಬದಿಂದವತರಿಸಿದ 1 ನಖದಿ ಉದರವನು ಸೀಳುತಲಿ ಹಿರ- ಣ್ಯಕನ ಕೊಂದು ಕರುಳನು ಧರಿಸಿದ 2 ಗುರುರಾಮ ವಿಠಲ ಕಾಮಿತವರಗಳ ಶರಣಗೆ ನೀಡುತ ಆದರಿಸಿದ 3
--------------
ಗುರುರಾಮವಿಠಲ
ನಲಿನಲಿದರು ದ್ವಾರಕಾಪುರದಿ ನಳಿನನಾಭ ಶ್ರೀ ರುಕ್ಮಿಣಿ ಕಲ್ಯಾಣದಿ ಪ. ಜಲರುಹಲೋಚನೆ ಚೆಲುವೆ ಶ್ರೀ ರುಕ್ಮಿಣಿ ಸಲಲಿತಾಂಗನ ನೋಡಿ ವಲುವಿನಲಿ ಕುಳಿತಿರೆ ಅ.ಪ. ಅಂಬರದಲಿ ಭೇರಿ ವಾದ್ಯಗಳೆಸಗೆ ತುಂಬುರು ನಾರದರು ಗಾನವ ಪಾಡೆ ಸಂಭ್ರಮದೊಳು ಮಾಂಗಲ್ಯ ಬಂಧನ ಮಾಡೆ ಅಂಬುಜೋದ್ಭವ ರುಕ್ಮಿಣಿ ಕಂಠದೊಳು 1 ವಿಪ್ರರು ವೇದ ಮಂತ್ರವ ಪಠಿಸೆ ಸ್ವ ಪ್ರಕಾಶ ರುಕ್ಮಿಣಿ ಕರಪಿಡಿಯೆ ಕೃಷ್ಣಾ ಅಪ್ರಮೇಯನೆಂದು ಸ್ತುತಿ ಪಾಠಕರು ಪೊಗಳೆ ಕ್ಷಿಪ್ರದಿ ವಿಪ್ರರಿಗೆ ದಕ್ಷಿಣೆ ತಾಂಬೂಲವೀಯೆ 2 ದೇವಕಿ ವಸುದೇವನಿಗ್ಹರುಷವನಿತ್ತು ದೇವ ಶ್ರೀ ಶ್ರೀನಿವಾಸ ಭಕ್ತ ಜನಾಶ್ರಿತ ಕಾವ ಸಕಲ ಜೀವರ ಹೃದಯನಿವಾಸ ದೇವ ಯಶೋದೆ ನಂದ ಕಂದನ ನೋಡಿ 3
--------------
ಸರಸ್ವತಿ ಬಾಯಿ
ನಲಿವ ಬೆಣ್ಣೆಯನು ಮೆಲುವ ಕೃಷ್ಣ ನಮ-ಗೊಲಿವ ಖಳರನ್ನೆ ಕೊಲುವಪ. ನಗವ ಕರದಿಂದ ನೆಗೆವ ಅದರೊಳಗೆಪೋಗುವ ನರರ ಕಂಡು ನಗುವ1 ಕಡೆವ ಕೋಲನ್ನು ಪಿಡಿದ ಭೂಷಣವತೊಡುವ ಪಟ್ಟೆಗಳನುಡುವ 2 ಬಡವರಭೀಷ್ಟಗಳ ಕೊಡುವ ದುರಿತಗಳಜಡಿವ ದೈತ್ಯರನು ಬಡಿವ 3 ಶರಣನಾಯಕನ ಚರಣದ್ವಯಕೆಪುರಹರನ ಮಸ್ತಕಾಭರಣ4 ಶರಣಜನರ ಹಿತಕರಣ ಹಯವದನಸ್ಮರಣ ಭವಕೆ ಸಂಹರಣ 5
--------------
ವಾದಿರಾಜ
ನವಖಂಡದ ಸ್ವಾಮಿ ಒಂದು ನಮ್ಮಗೆಲಿಸಲಿಶುಕಬುದ್ಧಿ ಬಾಲೆಯರ ಕುಂದುಗೈಸಲಿ ಪ. ಚನ್ನನಚಾರಿವಾಸ ಮನ್ನಾರಿ ಕೃಷ್ಣನ ಸಹಮುನ್ನ ಪ್ರಯಾಗಿ ಮಾಧವನ ಬಲಗೊಂಬೆವು1 ಇಳಾ ವರ್ತಾ ಭದ್ರಶಾಮ ಈತನ ಬಲಗೊಂಬೆವುನಾವು ಈತನ ಬಲಗೊಂಬೆವು ಅವರು ನಮ್ಮ ಪಂಥ ಗೆಲಿಸೆಂಬೆವು2 ಹರಿ ವರುಷ ಕಿಂಪುರುಷ ಭರತ ಖಂಡದಲ್ಲಿದ್ದಭರತ ಖಂಡದಲ್ಲಿದ್ದ ನರಹರಿಯ ಬಲಗೊಂಬೆ ಪಂಥಗೆಲಿಸುವ ಶುದ್ಧ 3 ಕೇತು ಮೂಲ ಖಂಡದ ಹರಿಯ ಪ್ರೀತಿಲೆ ಬಲಗೊಂಬೆವುಮಾತು ಸೋಲಿಸಿ ಅವರ ನಮ್ಮ ಮಾತುUಲಿಸೆಂಬೆವು 4 ರಮ್ಯಕ್ಕೆ ಹಿರಣ್ಮಯ ಈ ಕುರುಖಂಡವೆಂಬೊಕುರುಖಂಡದಲಿ ರಮಿಸಿ ಅಲ್ಲಿರುವ ರಾಮೇಶನ ಬಲಗೊಂಬೆವು5
--------------
ಗಲಗಲಿಅವ್ವನವರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾಕಾಧಿಪ ಮುನಿಜನವರದಾಮೆಯಾ ಪ ಲೋಕೇಶನುತ ಕಂಜಲೋಚನಾಮೆಯಾ ಸಾಕಾರ ಭೋಗೀಶ್ವರ ಮಂಜುಳಚರಣಾ ಅ.ಪ ಉದಿತ ಭಾಸ್ಕರಹಿತನಾಥನಾಧಾರೇ 1 ವರವೇಲಾಪುರವಾಸ ವೈಕುಂಠ ಸರ್ವೇಶಾ2
--------------
ಬೇಲೂರು ವೈಕುಂಠದಾಸರು
ನಾಗವೇಣಿಯೆ ಕರೆದು ತಾರೆ ನಾಗಶಯನನಾ ಪ ನಗಧರ ಪ್ರಿಯನೆನಿಪ ನಾಗವರದನಾ ಅ.ಪ ಜಲವಪೊಕ್ಕು ತಮ ನಲಿದ ಜಲರುಹಾಕ್ಷನಾ ಜಲಧಿ ಮಥನವನ್ನು ಗೈದ ಚೆಲುವರರಸನಾ 1 ಧರಣಿಪೊಯ್ದ ಖಳನ ಸೀಳ್ದ ನಳಿನನಾಭನಾ ಭರದಿ ಹೊಳೆವ ಕಂಬದಲ್ಲಿ ತರಳಗೊಲಿದನಾ 2 ಧರಣಿ ಈರಡಿಯ ಮಾಡಿ ಸುರರ ಪೊರೆದನಾ ಧರಣಿಪಾಲಕುಲವ ತರಿದ ಪರಶುರಾಮನಾ 3 ಧರಣಿಸುತೆಯನೊಯ್ದ ಖಳನ ಶಿರವನರಿದನಾ ತರಳತನದಿ ವೊರಳನೆಳೆದ ತರಳ ಕೃಷ್ಣನಾ 4 ತರುಣಿಯರ ವ್ರತವನಳಿದು ಪುರವಗೆಲಿದನಾ ಹರುಷದಿಂದ ತುರಗವೇರಿ ನಲಿವ ಸುಗುಣನಾ 5 ಸುರಪುರದಿ ನಲಿವಿನಿಂದ ನೆರೆದು ನಿಂದನಾ ಶರಣರಕ್ಷ ಲಕ್ಷ್ಮಿಯರಸ ಪರಮಪುರುಷನಾ 6
--------------
ಕವಿ ಲಕ್ಷ್ಮೀಶ
ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾಟಕವಿದು ಹಳೆ ನಾಟಕ ನೋಟಕೆ ಇದು ಬಲು ನೂತನ ಪ ನಾಟಕ ಮಂದಿರ ಜಗವೆಲ್ಲ ಕಂಡಿರ ನೋಟವು ಯಾರದೊ ಆಟವು ಯಾರದೊ ಅ.ಪ ಇರುಳೊಳು ರಾಜಾಧಿರಾಜನಿವ ಹಗಲಲಿ ಭಿಕ್ಷಕೆ ಹಾಜರಿವ ಮುಗಿವುದು ಎನ್ನಯ ಪಾತ್ರವೆನ್ನುವುದೆ ಹಗಲಿನತನಕವು ಕಾಣನಿವ 1 ಯುದ್ಧವು ದಿನವೊ ಈ ನಾಟಕದಿ ಗೆದ್ದವರೊಬ್ಬರ ತೋರಿಸಿ ಯುದ್ಧದಗೋಚಿಗೆ ಹೋಗದೆ ಶಾಂತಿಯೊ ಳಿದ್ದ ಜನರೆ ಗೆದ್ದವರಿಲ್ಲಿ 2 ಕಲಿಪುರುಷನ ದೊಡ್ಡ ಸಭೆಯಲ್ಲಿ ಕುಳಿತು ಮಾತಾಡುವರಾರು ಜನ ಕಳುಹಿಸಲೊಬ್ಬನು ಇಳೆಯೊಳಗೊಬ್ಬರ ಉಳಿಸದೆ ಗೆಲುವೆನು ನೋಡು ಪ್ರಭು 3 ಶೌರ್ಯ ಸಾಹಸ ಕಾಪಟ್ಯಗಳಾ ಶ್ಚರ್ಯವು ಒಂದೊಂದು ದೃಶ್ಯದಲೂ ಯಾರ್ಯರೆಂಬುದ ಕಾಣದೆ ವೇಷದ ಮರ್ಯಾದೆಯು ವರ್ಣಿಪುದೆಂತು 4 ಕುಣಿವರು ಒಂದೆಡೆ ದಣಿವರು ಒಂದೆಡೆ ಕೊನೆ ಮೊದಲಿಲ್ಲವೀ ನಾಟಕಕೆ ಪ್ರಣಯಹನನ ದೃಶ್ಯಗಳನು ಒಂದೇ ಕ್ಷಣದಲಿ ತೋರುವ ಅಸದೃಶ್ಯದ 5 ಹೊಸ ಹೊಸ ದೃಶ್ಯವು ಹೊಸ ಹೊಸ ಪಾತ್ರವು ಪುಸಿಯಲ್ಲವು ಈ ನಾಟಕವು ಶಶಿಕುಲದರಸ ಪ್ರಸನ್ನನಾಗಿ ತಾ ಮುಸಿ ಮುಸಿ ನಗುತಲಿ ನೋಡುತಿಹ 6
--------------
ವಿದ್ಯಾಪ್ರಸನ್ನತೀರ್ಥರು
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನಾದದಿ ಬೆರೆತಿರು ಮುಕ್ತಾ ನಿತ್ಯವಿರಕ್ತಾವಾದದಿ ಬೆರೆತಿರುಮುಕ್ತಾ ನಾದದಿ ತಾನಾಗಿ ನಿನ್ನ ವಿಚಾರಿಸುನಾದಂ ಧಿಂಧಿಂಧಿಮಿಕೆ ಎಂಬ ಪ ಸರ್ವರೂಪಕವಿದೆ ನಾದ ಸಕಲ ವಿನೋದಪರ್ವಿಕೊಂಡಿರುತಿಹ ನಾದ ಬಹುಲೋಕ ಮೋದದುರ್ವಿಕಾರದ ಮನವ ಎಲ್ಲೆಡೆ ಹರಿಯಿಸುವ ವೀಣಾನಾದ 1 ಆನಂದಕಾಶ್ರಯನಾದ ಆಗಿದೆ ಭೇದಸ್ವಾನಂದ ತಾನೆಯದೆ ನಾದ ಹೇಳಲಿಕೆ ಭೇದಜ್ಞಾನ ಶುದ್ಧನು ಸುಭಕ್ತಿ ವಿರಕ್ತಿಯುತಾನಹುದಹುದೆಂದು ಭೇರಿಯ ನುಡಿಸುವ2 ಹರಣ ಯೋಗಿಗಳ ಭರಣಪಾಪ ಪುರುಷನ ಸಂಹರಣ ತಾನಿಹುದು ಸದ್ಗುಣಭಾಪು ಚಿದಾನಂದ ಗುರುವನು ಕೂಡಲುಈ ಪಥವಲ್ಲದೆ ಇನ್ನೊಂದು ತಾನಿಲ್ಲ3
--------------
ಚಿದಾನಂದ ಅವಧೂತರು
ನಾದನಾದ ಸುನಾದವ ತಿಳಿದವ ನಾದ ಮೂರುತಿ ನಿಜನಾದ ಪ ಆರು ಅರಿಗಳು ಅವರನು ಗೆಲುವೊಡೆ ಆಶ್ರಯ ತಾನಿದೆ ನಾದಧೀರತನದಲಿಹ ನಾಲ್ವರ ಸಾಧಿಸೆ ದಿಟವು ತಾನಿದೆ ನಾದ 1 ಅಷ್ಟಮದಂಗಳನೆಲ್ಲವ ತಿಳಿವೊಡೆ ಆದಿಯಹುದು ಈ ನಾದದುಷ್ಟರು ಐವರ ದೃಢವನು ಕೆಡಿಸಲು ದೃಷ್ಟಿಗೆ ತಾನಿದೆ ನಾದ 2 ಮೂರು ಮೂರು ಮೂರೆನಿಸುವ ತ್ರಿಪುಟಿಯ ಮೂಲನಾಶವಿದೆ ನಾದಚೋರರು ಸಪ್ತಾ ಸಪ್ತರು ಎಂಬರ ಭೇದಿಸೆ ತಾನಿದೆ ನಾದ3 ಎರಡರ ಭೇದವನೆಲ್ಲವನಳಿವೊಡೆ ಎಡೆದೆರಪಿಲ್ಲದ ನಾದಭರಿತವನಂದಾನಂದವ ತುಳುಕುವ ಭಾಗ್ಯವು ತಾನಿದೆ ನಾದ 4 ನಾದದಿ ನಿತ್ಯವು ಬೆರೆತಿಹ ಪುರುಷನೆ ನಾದ ಚತುರ್ಮಖನಾದವಾದರಹಿತ ಚಿದಾನಂದ ಗುರುವಿನ ಪಾದದೊಳಗೆ ಅವನಾದ 5
--------------
ಚಿದಾನಂದ ಅವಧೂತರು
ನಾದಾನಂದದಿ ಮುಳುಗಾಡೋ ಪ ಇಲ್ಲವೆಂಬುದು ಸಲ್ಲ ಗುರುಎಲ್ಲಾ ಪೂರಿತನಹುದಲ್ಲ ಇದ ಬಲ್ಲವರು ಬಲ್ಲರೆಲ್ಲತಾನೆಲ್ಲ ತಿಳಿಯೆ ನೀ ಸಾಕ್ಷಿಕನಹುದಲ್ಲ 1 ಮತಿಯಿಂದ ತಿಳುಕೋ ವಿಚಾರ ಈಗತಿಯಲ್ಲಿ ಆತ್ಮನು ಪೂರಗತಿಗೆ ಕೇಡಿಲ್ಲ ಇದು ಸ್ಥಿರ ಮಹದತಿ ಸೌಖ್ಯ ಪದಕೆ ರಾಜ ನೀನೆ ಉದಾರ 2 ಭೇದ ಭೇದವು ನಿನಗೇತಕೆ ನೀವಾದ ದೂರನು ಪರಕೆ ಈವಾದ ಸಂವಾದಗಳ್ಯಾತಕೆ ಮಹದಾದಿ ಪುರುಷನು ನೀನಹುದು ಬಿಡು ಜೋಕೆ 3 ಸತ್ಯ ಸಂವಿದ್ರೂಪ ಆತ್ಮ ನೋಡೆಪ್ರತ್ಯಾಗಾತ್ಮ ಪರಕತೀತ ಆರಿಂದಲಾದುದುಖ್ಯಾತ ಸುನಾದವರಿದನೇ ನಿರ್ಭೀತ ಮಹಾನಾದ ಚಿದಾನಂದನ ಕೂಡಿದನಾತ4
--------------
ಚಿದಾನಂದ ಅವಧೂತರು
ನಾನು ಸಜ್ಜನನಾದೊಡೆಹೀನವಿಷಯಂಗಳಿಗೆ ಎರಗುವೆನೇನಯ್ಯ ಪ. ಚಿತ್ತವÀ ಪುರುಷೋತ್ತಮನಲ್ಲಿಡದೆಉತ್ತಮರಾದವರೊಡನಾಡದೆತತ್ವವಿಚಾರವೊಂದರಿಯದೆ ನಾನು-ನ್ಮತ್ತರಸಂಗವ ಮಾಡುವೆನೇನಯ್ಯ1 ನಿರುತವು ಪರನಿಂದೆಗಳ ಮಾಡುತಲಿಗುರುಹಿರಿಯರನು ವಿಚಾರಿಸದೆಗುರುವೆ ದೈವವೆಂದರಿಯದೆ ನಾನುಪರರ ಒಡವೆಯನು ಬಯಸುವೆನೇನಯ್ಯ 2 ಹೇಯಶರೀರವ ಪೋಷಿಸುವೆನೆಂದು-ಪಾಯವನು ಮಾಡಿ ನಾ ಬಳಲುತಿಹೆರಾಯರು ಮಾಡಿದ ಶರಣರ ಹೊರೆವಹಯವದನ ನಿನ್ನ ನಾ ಮರೆತಿಹೆನೇನಯ್ಯ 3
--------------
ವಾದಿರಾಜ
ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ. ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1 ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2 ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
--------------
ಶ್ರೀಪಾದರಾಜರು